Tag: Harsh

  • ಷರಿಯತ್ ಪ್ರಕಾರ ಶಿಕ್ಷೆ ನೀಡಿದರೆ, ಹಿಜಬ್ ಧರಿಸಲು ಅವಕಾಶ ಕೊಡಬಹುದು: ರಘುಪತಿ ಭಟ್

    ಷರಿಯತ್ ಪ್ರಕಾರ ಶಿಕ್ಷೆ ನೀಡಿದರೆ, ಹಿಜಬ್ ಧರಿಸಲು ಅವಕಾಶ ಕೊಡಬಹುದು: ರಘುಪತಿ ಭಟ್

    ಉಡುಪಿ: ಷರಿಯತ್ ಪ್ರಕಾರ ಶಿಕ್ಷೆ ನೀಡಿದರೆ ಹಿಜಬ್ ಧರಿಸಲು ಅವಕಾಶ ಕೊಡಬಹುದು ಎಂದು ಶಾಸಕ ರಘುಪತಿ ಭಟ್ ಕಿಡಿಕಾರಿದರು.

    ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲಾ ಬಿಜೆಪಿಯಿಂದ ಕೊಲೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈ ವೇಳೆ ನಾನು ಸಹ ಉಗ್ರ ಭಾಷಣ ಮಾಡಿದ್ದೇನೆ. ಕಠೋರ ಮುಸ್ಲಿಮರು ಷರಿಯತ್ ಕಾನೂನು ಪಾಲಿಸಲು ತಯಾರು ಇರಲಿ. ಹರ್ಷನನ್ನು ಕೊಂದವರನ್ನು ಸಾರ್ವಜನಿಕವಾಗಿ ಕಲ್ಲು ಹೊಡೆದು ಸಾಯಿಸಲು ಅವಕಾಶ ಕೊಡಬೇಕು. ಕೊಲೆಗಡುಕರಿಗೆ ಷರಿಯತ್ ಕಾನೂನು ಪ್ರಕಾರ ಶಿಕ್ಷೆ ನೀಡುತ್ತೀರಾ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ:  ಮಾಲೀಕ ಯುದ್ಧಕ್ಕೆ ಹೋಗಿದ್ದಾರೆ, ಅವರ ಮಕ್ಕಳನ್ನು ಬಿಟ್ಟು ನಾನು ಬರಲ್ಲ ಎಂದ ವಿದ್ಯಾರ್ಥಿನಿ!

    ಷರಿಯತ್ ಪ್ರಕಾರ ಶಿಕ್ಷೆ ನೀಡಿದರೆ ಹಿಜಬ್ ಧರಿಸಲು ಅವಕಾಶ ಕೊಡಬಹುದು. ಕಠಿಣ ಶಿಕ್ಷೆ ಬೇಡ ತರಗತಿಯಲ್ಲಿ ಹಿಜಬ್ ಬೇಕು ಎಂದರೆ ಅದು ಆಗೂದಿಲ್ಲ. ಭಾರತ ದೇಶದ ಗಾಳಿ ನೀರು ಅನ್ನ ತಿನ್ನುತ್ತಿದ್ದೀರಿ. ಕಾಂಗ್ರೆಸ್ ಪಕ್ಷ ಪಲಾಯನ ಮಾಡಬೇಡಿ, ನಿಮ್ಮ ನಿಲುವು ಸ್ಪಷ್ಟಪಡಿಸಿ. ಹಿಜಬ್ ವಿಚಾರದ ನಿಲುವೇನು? ಹರ್ಷ ಕೊಲೆಯಲ್ಲಿ ನಿಲುವೇನು? ಎಂದು ಪ್ರಶ್ನೆ ಕೇಳಿದರು.

    ದುಬೈ ಸೌದಿಗಳಲ್ಲಿ ಷರಿಯತ್ ಕಾನೂನು ಇದ್ದರೂ ಆಧುನಿಕತೆಯನ್ನು ಒಪ್ಪಿಕೊಳ್ಳಲಾಗುತ್ತಿದೆ. ಹಿಂದೂಗಳ ಕೆಲ ಪದ್ಧತಿ ಕಾಲ-ಕಾಲಕ್ಕೆ ಬದಲಾವಣೆಯಾಗಿದೆ. ನಮ್ಮ ವಿದ್ವಾಂಸರು ಸತಿ ಸಹಗಮನ, ಬಾಲ್ಯವಿವಾಹ, ಅಸ್ಪೃಶ್ಯತೆ ಅಸಮಾನತೆಯನ್ನು ತೊಡೆದುಹಾಕಿದ್ದಾರೆ. ಷರಿಯತ್ ಕಾನೂನು ಒಪ್ಪುವುದಾದರೆ ಎಲ್ಲವನ್ನೂ ಮುಸ್ಲೀಮರಿಗೆ ಕಡ್ಡಾಯ ಮಾಡಿ ಎಂದು ಮನವಿ ಮಾಡಿದರು.

    ನಾವು ಭಾರತದ ಸಂವಿಧಾನ ಒಪ್ಪುವವರು. ಸಾಕಷ್ಟು ಒಳ್ಳೆಯ ಮುಸ್ಲಿಮರು ಸಂವಿಧಾನ ಒಪ್ಪುತ್ತಾರೆ. ಕ್ಲಾಸ್ ರೂಂನಲ್ಲಿ ಹಿಜಬ್ ಬೇಕು ಎನ್ನುವವರಿಗೆ ಷರಿಯತ್ ಕಾನೂನು ಜಾರಿಗೆ ತನ್ನಿ. ಕೊಲೆ, ಅತ್ಯಾಚಾರ, ಭಯೋತ್ಪಾದನೆ ಮಾಡಿದಾಗ ಶರಿಯತ್ ಬೇಡ್ವಾ? ಕಠೋರ ಮುಸ್ಲಿಮರು ಈಗಲೇ ಹೇಳಿಕೆಯನ್ನು ನೀಡಬೇಕು. ಅಪರಾಧ ಮಾಡಿದಾಗ ಭಾರತದ ಸಂವಿಧಾನ ಸುಪ್ರೀಂ ಕೋರ್ಟ್ ನೆನಪಾಗುತ್ತದೆ. ಕಾಲೇಜಿನ, ತರಗತಿಯ ಶಿಸ್ತು ಪಾಲಿಸುವ ಮುಸಲ್ಮಾನರಿಗೆ ನಾನು ಈ ಮಾತನ್ನು ಹೇಳುತ್ತಿಲ್ಲ ಎಂದು ಸಿಡಿದರು. ಇದನ್ನೂ ಓದಿ: ಹರ್ಷನ ಕೊಲೆಗೆ ಹಂತಕರು ಸ್ವತಃ ಕುಳಿತು ಮಚ್ಚು ರೆಡಿ ಮಾಡಿಸಿದ್ರು!

  • ಡ್ರಗ್ಸ್ ಪತ್ತೆ- ಭಾರತಿ ಸಿಂಗ್, ಪತಿ ಹರ್ಷ್ ಎನ್‍ಸಿಬಿ ವಶಕ್ಕೆ

    ಡ್ರಗ್ಸ್ ಪತ್ತೆ- ಭಾರತಿ ಸಿಂಗ್, ಪತಿ ಹರ್ಷ್ ಎನ್‍ಸಿಬಿ ವಶಕ್ಕೆ

    ಮುಂಬೈ: ಇಂದು ಬೆಳಗ್ಗೆ ಹಾಸ್ಯ ಕಲಾವಿದೆ ಭಾರತಿ ಸಿಂಗ್ ನಿವಾಸದ ಮೇಲೆ ಎನ್‍ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ಅಧಿಕಾರಿಗಳು ನಡೆಸಿತ್ತು. ಹೆಚ್ಚಿನ ವಿಚಾರಣೆ ಹಿನ್ನೆಲೆ ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಲಿಂಬಾಚಿಯಾನನ್ನು ವಶಕ್ಕೆ ಪಡೆದು ಎನ್‍ಸಿಬಿ ಕಚೇರಿಗೆ ಕರೆತರಲಾಗಿದೆ.

    ದಾಳಿ ವೇಳೆ ಭಾರತಿ ನಿವಾಸದಲ್ಲಿ ಕಡಿಮೆ ಪ್ರಮಾಣದಲ್ಲಿ ಗಾಂಜಾ ಸಿಕ್ಕಿದೆ ಎನ್ನಲಾಗಿದೆ. ಎನ್‍ಸಿಬಿ ಅಧಿಕಾರಿಗಳು ಹರ್ಷನನ್ನು ತಮ್ಮ ವಾಹನದಲ್ಲಿ ಕರೆ ತಂದ್ರೆ, ಹಿಂದೆ ತಮ್ಮ ಕಾರಿನಲ್ಲಿ ಭಾರತಿ ಎನ್‍ಸಿಬಿ ಕಚೇರಿಗೆ ಆಗಮಿಸಿದರು. ಕಚೇರಿ ಪ್ರವೇಶಿಸುವ ವೇಳೆ ತಮ್ಮನ್ನು ಕೇವಲ ವಿಚಾರಣೆಗಾಗಿ ಕರೆ ತರಲಾಗಿದೆ ಎಂಬ ಸಂದೇಶವನ್ನು ಸನ್ನೆ ಮೂಲಕ ಮಾಧ್ಯಮಗಳಿಗೆ ರವಾನಿಸಿದರು.

    ಎನ್‍ಸಿಬಿ ವಿಚಾರಣೆ ಹಿನ್ನೆಲೆ ಭಾರತಿ ಮತ್ತು ಅವರ ಪತಿಯನ್ನ ಕಚೇರಿಗೆ ಕರೆ ತರಲಾಗಿದೆ ಎಂದು ಎನ್‍ಸಿಬಿ ಜೋನಲ್ ಡೈರೆಕ್ಟರ್ ಸಮೀರ್ ವಾಂಖೇಡ್ ಹೇಳಿದ್ದಾರೆ. ಡ್ರಗ್ ಪೆಡ್ಲರ್ ವಿಚಾರಣೆ ವೇಳೆ ಭಾರತಿ ಸಿಂಗ್ ಹೆಸರು ಹೇಳಿದ್ದರಿಂದ ದಾಳಿ ನಡೆದಿದೆ ಎನ್ನಲಾಗಿದೆ.

  • ಸೀತಾರಾಮ ಕಲ್ಯಾಣ: ಹರ್ಷ ಎಂಟನೇ ಹಾದಿ ತುಂಬಾ ಸ್ಪೆಷಲ್!

    ಸೀತಾರಾಮ ಕಲ್ಯಾಣ: ಹರ್ಷ ಎಂಟನೇ ಹಾದಿ ತುಂಬಾ ಸ್ಪೆಷಲ್!

    ಬೆಂಗಳೂರು: ನೃತ್ಯ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದವರು ಎ ಹರ್ಷ. ನೃತ್ಯ ನಿರ್ದೇಶಕರಾಗಿ ಬಹು ಬೇಡಿಕೆಯಲ್ಲಿರುವಾಗಲೇ ನಿರ್ದೇಶನಕ್ಕಿಳಿದಿದ್ದ ಹರ್ಷ ಅವರದ್ದು ನಿಜಕ್ಕೂ ಕಲರ್ ಫುಲ್ ಜರ್ನಿ. ಯುವ ಆವೇಗದ ಕಥಾ ಹಂದರದಿಂದಲೇ ಗೆಲ್ಲುತ್ತಾ ಬಂದಿರೋ ಹರ್ಷ ಪಾಲಿಗೆ ನಿರ್ದೇಶಕರಾಗಿ ಸೀತಾರಾಮ ಕಲ್ಯಾಣ ಎಂಟನೇ ಸಿನಿಮಾ.

    ಇದುವರೆಗೂ ಮಾಸ್ ಶೈಲಿಯ ಸಿನಿಮಾಗಳನ್ನೇ ನಿರ್ದೇಶನ ಮಾಡಿರುವವರು ಹರ್ಷ. ಅವರು ಸೀತಾರಾಮ ಕಲ್ಯಾಣ ಸಿನಿಮಾ ಮೂಲಕ ಮೊದಲ ಬಾರಿಗೆ ಫ್ಯಾಮಿಲಿ ಕಥಾನಕವೊಂದನ್ನ ಹೇಳ ಹೊರಟಿದ್ದಾರೆ. ಈ ಮೂಲಕವೇ ಅವರ ಪಾಲಿಗೆ ತಮ್ಮ ಎಂಟನೇ ಚಿತ್ರ ಬಲು ಮಹತ್ವದ್ದು.

    ಸೀತಾರಾಮ ಕಲ್ಯಾಣ ಮಾಸ್ ಮತ್ತು ಫ್ಯಾಮಿಲಿ ಎಂಟರ್‍ಟೈನರ್ ಚಿತ್ರ. ಇದೇ ಮೊದಲ ಸಲ ಹರ್ಷ ಎಮೋಷನಲ್ ಸನ್ನಿವೇಶಗಳ ಮೂಲಕ ಹೊಸಾ ಬಗೆಯ ಪಾತ್ರಗಳನ್ನು ಕಟ್ಟಿದ್ದಾರಂತೆ. ಹೆಸರೇ ಸೀತಾರಾಮ ಕಲ್ಯಾಣ ಅಂತಿರೋದರಿಂದ ಇದು ಲವ್, ಮದುವೆ ಸುತ್ತಮುತ್ತ ನಡೆಯೋ ಕಥೆ ಅಂತ ಬಹುತೇಕರು ಅಂದುಕೊಂಡಿದ್ದರೂ ಅಚ್ಚರಿಯೇನಿಲ್ಲ. ಆದರೆ ಸೀತಾರಾಮನ ಕಥೆ ಕಲ್ಯಾಣದಾಚೆಗೂ ಹಬ್ಬಿಕೊಂಡಿದೆ.

    ಮೊದಲ ಸಿನಿಮಾ ಜಾಗ್ವಾರ್ ನಲ್ಲಿ ನಿಖಿಲ್ ಸಕಲ ತಯಾರಿ ಮಾಡಿಕೊಂಡು ಅಖಾಡಕ್ಕಿಳಿದಿದ್ದರು. ಸೀತಾರಾಮ ಕಲ್ಯಾಣದ ಪಾತ್ರದ ಮೂಲಕ ಅವರು ತಾನೋರ್ವ ಅದ್ಭುತ ಪರ್ಫಾರ್ಮರ್ ಅನ್ನೋದನ್ನೂ ಸಾಬೀತು ಪಡಿಸಿದ್ದಾರಂತೆ. ಫ್ಯಾಮಿಲಿ, ಮಾಸ್ ಮತ್ತು ಎಮೋಷನಲ್ ಸನ್ನಿವೇಶಗಳಿಗೆಲ್ಲ ನಿಖಿಲ್ ಬೆರಗಾಗುವಂತೆ ಜೀವ ತುಂಬಿದ್ದಾರಂತೆ. ಇನ್ನು ಈವರೆಗೆ ಒಂದು ವೆರೈಟಿ ಪಾತ್ರಗಳಿಗೆ ಹೆಸರಾಗಿದ್ದ ನಟ ನಟಿಯರನೇಕರು ಭಿನ್ನವಾದ ಪಾತ್ರಗಳಲ್ಲಿ ನಟಿಸಿದ್ದಾರೆ.

    ಇಂಥಾ ನಾನಾ ವಿಶೇಷತೆಗಳೊಂದಿಗೆ ಮೂಡಿ ಬಂದಿರೋ ಸೀತಾರಾಮ ಪ್ರೇಕ್ಷಕರಿಗೆ ಕ್ಷಣ ಕ್ಷಣವೂ ಸರ್‍ಪ್ರೈಸ್ ಕೊಡೋವಂತೆ ಮೂಡಿ ಬಂದಿದೆ ಅನ್ನೋದು ಹರ್ಷ ಭರವಸೆ.

    https://www.youtube.com/watch?v=IgY3WB1V1wM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv