Tag: Harshvardhan

  • ಬೈಕ್ ಮಾರಿ ಬಡವರಿಗಾಗಿ ಆಕ್ಸಿಜನ್ ಖರೀದಿಸುತ್ತಿದ್ದಾರೆ  ನಟ

    ಬೈಕ್ ಮಾರಿ ಬಡವರಿಗಾಗಿ ಆಕ್ಸಿಜನ್ ಖರೀದಿಸುತ್ತಿದ್ದಾರೆ ನಟ

    ಬೆಂಗಳೂರು: ಹಿಂದಿ, ತೆಲಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ಹರ್ಷವರ್ಧನ್ ರಾಣೆ ಅವರು ಬಡವರಿಗಾಗಿ ಆಕ್ಸಿಜನ್ ಸಿಲಿಂಡರ್ ಕೊಡಿಸಲು ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕಾಗಿ ತಮ್ಮ ನೆಚ್ಚಿನ ಬೈಕ್ ಮಾರಾಟ ಮಾಡುತ್ತಿದ್ದಾರೆ.

    ಕೊರೊನಾ ವೈರಸ್ 2ನೇ ಅಲೆಗೆ ಜನರು ಕಂಗಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ಬೆಸ್ ಸಿಗದಷ್ಟು ಪರಿಸ್ಥಿತಿ ಕೆಟ್ಟು ಹೋಗಿದೆ. ಸೆಲೆಬ್ರಿಟಿಗಳು ಜನರ ಕಷ್ಟಕ್ಕೆ ತಮ್ಮ ಕೈಲಾದಷ್ಟು ನೆರವಾಗುತ್ತಿದ್ದಾರೆ.   ಜನರಲ್ಲಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ.

    ನನ್ನ ಮೋಟರ್ ಸೈಕಲ್ ಮಾರುತ್ತಿದ್ದೇನೆ. ಅದರಿಂದ ಬಂದ ಹಣದಲ್ಲಿ ಆಕ್ಸಿಜನ್ ಖರೀದಿಸಿ ತುಂಬಾ ಅವಶ್ಯಕತೆ ಇರುವವರಿಗೆ ನೀಡುತ್ತಿದ್ದೇನೆ. ಹೈದರಾಬಾದ್‍ನಲ್ಲಿ ಉತ್ತಮ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸಲು ನನಗೆ ಸಹಾಯ ಮಾಡಿ ಎಂದು ಬರೆದುಕೊಂಡು ತನ್ನ ಬೈಕ್ ಫೋಟೋವನ್ನು ಹರ್ಷವರ್ಧನ್ ರಾಣೆ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Harshvardhan Rane (@harshvardhanrane)

    ಹರ್ಷವರ್ಧನ್ ರಾಣೆ ಮಾತ್ರವಲ್ಲದೇ ಇನ್ನು ಅನೇಕ ಸೆಲೆಬ್ರೆಟಿಗು ಇಂಥಹ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಸುನೀಲ್ ಶೆಟ್ಟಿ ಬೆಂಗಳೂರು, ಮುಂಬೈ ಸೋಂಕಿತರಿಗೆ ಆಕ್ಸಿಜನ್ ಸಿಲಿಂಡರ್ ದೊರಕಿಸಲು ಯತ್ನಿಸುತ್ತಿದ್ದಾರೆ. ನಟ ಜಗ್ಗೇಶ್ ಬೆಂಗಳೂರಿನಲ್ಲಿರುವ ಸೋಂಕಿತರಿಗೆ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಸ್ಯಾಂಡಲ್‍ವಡ್ ನಟ ಅರ್ಜುನ್ ಗೌಡ ಕಷ್ಟದ ಸಂದರ್ಭದಲ್ಲಿ ಅಂಬುಲೆನ್ಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಜನರ ಕಷ್ಟಕ್ಕೆ ಹೆಲ್ಪಲೈನ್‍ಗಳನ್ನು ಕೂಡ ಸೆಲೆಬ್ರಿಟಿಗಳು ಮಾಡಿಕೊಂಡು ಸಹಾಯ ಮಾಡುತ್ತಿದ್ದಾರೆ.

  • ಕೊರೊನಾ ಲಸಿಕೆಯಿಂದ ಸೈಡ್ ಎಫೆಕ್ಟ್ ಇದೆಯಾ? ಹರ್ಷವರ್ಧನ್ ಉತ್ತರ

    ಕೊರೊನಾ ಲಸಿಕೆಯಿಂದ ಸೈಡ್ ಎಫೆಕ್ಟ್ ಇದೆಯಾ? ಹರ್ಷವರ್ಧನ್ ಉತ್ತರ

    ನವದೆಹಲಿ: ಕೊರೊನಾ ತಡೆಗಾಗಿ ಲಸಿಕೆ ಅಭಿಯಾನ ಕಾರ್ಯಕ್ರಮ ಇಡೀ ದೇಶದಲ್ಲಿಯೇ ವೇಗವಾಗಿ ನಡೆಯುತ್ತಿದೆ. ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಸಿಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮಗಳಿವೆಯಾ ಪ್ರಶ್ನೆಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಸ್ಪಷ್ಟನೆ ನೀಡಿದ್ದಾರೆ.

    ಖಾಸಗಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಹರ್ಷವರ್ಧನ್ ಕೊರೊನಾ ಲಸಿಕೆ ಮತ್ತು ಅಭಿಯಾನದ ಕುರಿತಾಗಿ ತಿಳಿಸಿದರು. ದೇಶದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಿವೆ. ಇಷ್ಟು ದೊಡ್ಡ ಜನಸಂಖ್ಯೆ ಇರೋ ದೇಶದಲ್ಲಿ ಲಸಿಕೆ ಅಭಿಯಾನ ವ್ಯವಸ್ಥಿತವಾಗಿ ನಡೆಯುತ್ತಿದೆ. ಆ್ಯಪ್ ಮೂಲಕ ಲಸಿಕೆ ಪಡೆಯುವ ಸ್ಥಳವನ್ನ ನೀವೇ ಬುಕ್ ಮಾಡಿಕೊಳ್ಳಬಹುದು ಅಥವಾ ನೇರವಾಗಿ ಆಸ್ಪತ್ರೆಗೆ ತೆರಳಿ ನೋಂದಾಯಿಸಿಕೊಂಡು ಲಸಿಕೆ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

    ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆ ಉಚಿತವಾಗಿ ಸಿಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ಜನರಿಗೆ ಕೈಗೆಟುಕುವ ದರ ಅಂದ್ರೆ 250 ರೂ.ಯಲ್ಲಿ ಲಸಿಕೆ ಸಿಗುತ್ತಿದೆ. 250 ರೂ.ಯಲ್ಲಿ ಖಾಸಗಿ ಆಸ್ಪತ್ರೆಗಳು ಲಸಿಕೆಗೆ 150 ರೂಪಾಯಿ ಮತ್ತು ಸೇವೆಗೆ 100 ರೂ. ಶುಲ್ಕ ವಿಧಿಸುತ್ತಿವೆ.

    ಸೈಡ್ ಎಫೆಕ್ಟ್ ಇದೆಯಾ?: ನಾನು ನಿನ್ನೆ ದೆಹಲಿಯ ಸುಮಾರು 10 ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಜೊತೆ ಮಾತನಾಡಿದೆ. ಯಾರು ಲಸಿಕೆಯಿಂದ ಅಡ್ಡ ಪರಿಣಾಮದ ಬಗ್ಗೆ ಹೇಳಿಲ್ಲ ಎಂದು ಹೇಳಿದರು.

  • ಶ್ರೀನಿವಾಸ್ ಪ್ರಸಾದ್ ಅಳಿಯ ಕೂಡ ಸಚಿವ ಸ್ಥಾನದ ಆಕಾಂಕ್ಷಿ

    ಶ್ರೀನಿವಾಸ್ ಪ್ರಸಾದ್ ಅಳಿಯ ಕೂಡ ಸಚಿವ ಸ್ಥಾನದ ಆಕಾಂಕ್ಷಿ

    ಮೈಸೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ದಿನದಿನಕ್ಕೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಮೈಸೂರಿನ ನಂಜನಗೂಡಿನ ಬಿಜೆಪಿ ಶಾಸಕ ಹರ್ಷವರ್ಧನ್ ತಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಈ ಬಗ್ಗೆ ಸಿಎಂ ಅವರಿಗೂ ಖುದ್ದಾಗಿ ಹೇಳಿದ್ದೇನೆ ಎಂದು ಹೇಳುವ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಸಿದ್ದಾರೆ.

    ಹರ್ಷವರ್ಧನ್ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ. ಹೀಗಾಗಿ, ಇವರ ಹೇಳಿಕೆ ಗಂಭೀರತೆ ಪಡೆದು ಕೊಂಡಿದೆ. ಕೇಂದ್ರದಲ್ಲಿ ಇನ್ನೊಮ್ಮೆ ಮಂತ್ರಿ ಆಗಬೇಕು ಎಂಬ ಆಸೆ ಹೊಂದಿದ್ದ ಶ್ರೀನಿವಾಸ್ ಪ್ರಸಾದ್ ಅವರಿಗೆ ಅದು ಸಾಧ್ಯವಾಗಿಲ್ಲ. ಹೀಗಾಗಿ, ರಾಜ್ಯದಲ್ಲಿ ತಮ್ಮ ಅಳಿಯನ ಮಂತ್ರಿ ಮಾಡಲು ಲಾಬಿ ಆರಂಭಿಸಿದ್ದಾರಾ ಎಂಬ ಚರ್ಚೆ ಈಗ ಶುರುವಾಗಿದೆ.

    ತಮ್ಮ ಮನದ ಬಯಕೆ ಹೇಳಿಕೊಂಡ ಹರ್ಷವರ್ಧನ್, ಕೇಂದ್ರದಲ್ಲಿ ಮಾಜಿ ಮಂತ್ರಿ ವಿ.ಶ್ರೀನಿವಾಸ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಲಿಲ್ಲ. ಹಾಗಾಗಿ ರಾಜ್ಯದಲ್ಲಿ ಪ.ಜಾ. ಬಲಗೈ ಜನಾಂಗದಿಂದ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಚಾಮರಾಜನಗರ ಲೋಕಸಭಾ ವ್ಯಾಪ್ತಿಯಲ್ಲಿ ವಿ.ಶ್ರೀನಿವಾಸ್ ಪ್ರಸಾದ್ ರವರ ಪ್ರಭಾವ ಅಗಾಧವಾಗಿದೆ. ಚಾಮರಾಜನಗರ ಲೋಕಸಭಾ ಮತ್ತು ನಂಜನಗೂಡಿನ ವಿಧಾನಸಭಾ ಕ್ಷೇತ್ರದಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಪಕ್ಷದ ಬಾವುಟವನ್ನು ಹಾರಿಸಿದ್ದೇವೆ. ಹೀಗಾಗಿ ಈ ಲೋಕಸಭಾ ಕ್ಷೇತ್ರ ಮತ್ತು ವಿಧಾನಸಭಾ ಕ್ಷೇತ್ರ ಹೆಚ್ಚು ಹೆಚ್ಚು ಅಭಿವೃದ್ಧಿಯಾಗಬೇಕಾದರೆ ಸಚಿವ ಸ್ಥಾನ ಇರಲೇಬೇಕು. ಇದು ಕ್ಷೇತ್ರದ ಜನರ ಬಯಕೆ ಕೂಡ ಎಂದರು.

    ಸಮುದಾಯದ ಬಲಗೈ ಜನಾಂಗದ ಪರವಾಗಿ ನನಗೆ ಸಚಿವ ಸ್ಥಾನ ನೀಡಿದರೆ ಚಾಮರಾಜನಗರ ಲೋಕಸಭಾ ಕ್ಷೇತ್ರ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಇನ್ನಷ್ಟು ಪಕ್ಷವನ್ನು ಪ್ರಬಲ ಗೊಳಿಸಿ ಅಭಿವೃದ್ಧಿಕಾರ್ಯ ಮಾಡುತ್ತೇನೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ರವರಿಗೆ ನಮ್ಮ ಸಚಿವ ಸ್ಥಾನಗಳು ಬಯಕೆಯನ್ನು ತಿಳಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.