Tag: Hartik Pandya

  • ವಿಶ್ವಕಪ್‍ಗಾಗಿ ‘ನೋ ರೆಸ್ಟ್’ ಎಂದ ಹಾರ್ದಿಕ್ ಪಾಂಡ್ಯ

    ವಿಶ್ವಕಪ್‍ಗಾಗಿ ‘ನೋ ರೆಸ್ಟ್’ ಎಂದ ಹಾರ್ದಿಕ್ ಪಾಂಡ್ಯ

    ಮುಂಬೈ: ದೇಶದ ಪರ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡಬೇಕೆಂಬುದು ಪ್ರತಿಯೊಬ್ಬ ಕ್ರಿಕೆಟ್ ಆಟಗಾರರನ ಜೀವನದ ಗುರಿಯಾಗಿರುತ್ತದೆ. ಸದ್ಯ ವಿಶ್ವಕಪ್ ಆಡುವ ಅವಕಾಶವನ್ನು ಪಡೆದಿರುವ ಟೀಂ ಇಂಡಿಯಾ ಆಲೌಂಡರ್ ಹಾರ್ದಿಕ್ ಪಾಂಡ್ಯ ಟೂರ್ನಿ ಇರುವುದರಿಂದ ವಿಶ್ರಾಂತಿ ಪಡೆಯುವುದಿಲ್ಲ ಎಂದಿದ್ದಾರೆ.

    ವಿಶ್ವಕಪ್ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಯ ಬಳಿಕ ಆಟಗಾರರಿಗೆ ಯಾವುದೇ ತರಬೇತಿಯನ್ನ ಆರಂಭಿಸದ ಬಿಸಿಸಿಐ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿತ್ತು. ಈ ಹಿನ್ನೆಲೆ ನಾಯಕ ವಿರಾಟ್ ಕೊಹ್ಲಿ, ಉಪ ನಾಯಕ ರೋಹಿತ್ ಶರ್ಮಾ ಕುಟುಂಬದೊಂದಿಗೆ ಸಮಯ ಪ್ರವಾಸವನ್ನ ಕೈಗೊಂಡಿದ್ದರು. ಆದರೆ ಹಾರ್ದಿಕ್ ಪಾಂಡ್ಯ ಮಾತ್ರ ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಾ ನೋ ರೆಸ್ಟ್ ಎಂದಿದ್ದಾರೆ.

    ತಾವು ವರ್ಕೌಟ್ ಮಾಡುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಹಾರ್ದಿಕ್ ವಿಶ್ರಾಂತಿ ಪಡೆಯುವುದಕ್ಕಿಂತ ಫಿಟ್ನೆಸ್ ಮುಖ್ಯ ಎಂದಿದ್ದಾರೆ. ಹಾರ್ದಿಕ್ ಪೋಸ್ಟ್‍ಗೆ ನೆಟ್ಟಿಗರು ಫಿದಾ ಆಗಿದ್ದು, ವಿಶ್ವಕಪ್‍ಗೆ ಶುಭಕೋರಿ ಪ್ರತಿಕ್ರಿಯೆ ನೀಡಿದ್ದಾರೆ.

    ಕಾಫಿ ವಿಥ್ ಕರಣ್ ಶೋ ವಿವಾದ ಬಳಿಕ ಹಾರ್ದಿಕ್ ವರ್ತನೆಯಲ್ಲಿ ಸಾಕಷ್ಟು ಬದಲಾವಣೆ ಬಂದಿದೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಹಾರ್ದಿಕ್ ಮತ್ತಷ್ಟು ಫಿಟ್ ಆಗಲು ಪ್ರಯತ್ನಿಸುತ್ತಿದ್ದಾರೆ. ಈ ಬಾರಿಯ ವಿಶ್ವಕಪ್ ಗೆಲ್ಲುವ ಫೆವರಿಟ್ ತಂಡವಾಗಿ ಕಣಕ್ಕೆ ಇಳಿಯುತ್ತಿರುವ ಟೀಂ ಇಂಡಿಯಾ ಮೇ 22 ರಂದು ಇಂಗ್ಲೆಂಡ್‍ಗೆ ಪ್ರಯಾಣಿಸುವ ಸಾಧ್ಯತೆ ಇದೆ.

  • ಬುಮ್ರಾ ಬುಲೆಟ್ ಸ್ಪೀಡ್ ರನೌಟ್, ಪಾಂಡ್ಯ ಹೆಲಿಕಾಪ್ಟರ್ ಶಾಟ್ – ವಿಡಿಯೋ

    ಬುಮ್ರಾ ಬುಲೆಟ್ ಸ್ಪೀಡ್ ರನೌಟ್, ಪಾಂಡ್ಯ ಹೆಲಿಕಾಪ್ಟರ್ ಶಾಟ್ – ವಿಡಿಯೋ

    ನವದೆಹಲಿ: ಮುಂಬೈ ಇಂಡಿಯನ್ಸ್ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ದೆಹಲಿ ವಿರುದ್ಧ ಪಂದ್ಯದಲ್ಲಿ ಬೌಲಿಂಗ್ ಮಾತ್ರವಲ್ಲದೇ ಅತ್ಯುತ್ತಮ ಫೀಲ್ಡಿಂಗ್ ಪ್ರದರ್ಶನ ನಡೆಸಿ ಗಮನ ಸೆಳೆದಿದ್ದಾರೆ.

    ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆಕರ್ಷಕ ರನೌಟ್ ಮಾಡಿದ್ದು, ಪಂದ್ಯದ 18 ಓವರಿನ ಮೊದಲ ಎಸೆತವನ್ನು ಅಕ್ಷರ್ ಡಿಫೆನ್ಸ್ ಮಾಡಿ ರನ್ ಕದಿಯುವ ಪ್ರಯತ್ನ ನಡೆಸಿದರು. ಇತ್ತ ಮತ್ತೊಂದು ತುದಿಯಲ್ಲಿ ಇದ್ದ ಕೀಮೋ ಪಾಲ್ ಅರ್ಧ ಕ್ರಿಸ್‍ಗೆ ತೆರಳಿದ್ದರು. ತಕ್ಷಣ ಎಚ್ಚೆತ್ತ ಬುಮ್ರಾ ಬುಲೆಟ್ ವೇಗದಲ್ಲಿ ಚೆಂಡನ್ನು ಎಸೆದು ರನೌಟ್ ಮಾಡಿದ್ದಾರೆ. ಈ ವಿಡಿಯೋವನ್ನು ಐಪಿಎಲ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ವಿಡಿಯೋ ನೋಡಿದ ಅಭಿಮಾನಿಗಳು ಬುಮ್ರಾ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಇದೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೂಡ ತಮ್ಮ ಉತ್ತಮ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಅಲ್ಲದೇ ಧೋನಿ ಶೈಲಿಯಲ್ಲಿ ಹೆಲಿಕಾಪ್ಟರ್ ಸಿಕ್ಸರ್ ಸಿಡಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್‍ನ ಅಂತಿಮ ಓವರಿನಲ್ಲಿ ಸಿಕ್ಸರ್ ಮೂಡಿ ಬಂದಿದ್ದು, ಮರು ಎಸೆತದಲ್ಲಿ ಪಾಂಡ್ಯ ವಿಕೆಟ್ ಒಪ್ಪಿಸಿದ್ದರು. ಪಂದ್ಯದಲ್ಲಿ ಪಾಂಡ್ಯ ಸಹೋದದರು ಉತ್ತಮ ಪ್ರದರ್ಶನ ನೀಡಿದ್ದು, ಹಾರ್ದಿಕ್ 15 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ಸಿಡಿಸಿ 32 ರನ್, ಕೃಣಾಲ್ ಪಾಂಡ್ಯ 26 ಎಸೆತಗಳಲ್ಲಿ 5 ಬೌಂಡರಿ ಸಿಡಿಸಿ 37 ರನ್ ಗಳಿಸಿದ್ದರು. ಪರಿಣಾಮ ಮುಂಬೈ 168 ರನ್ ಗಳಿಸಿತ್ತು. ಮುಂಬೈ ನೀಡಿದ ರನ್ ಗುರಿಯನ್ನ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 40 ರನ್ ಅಂತರದಲ್ಲಿ ಸೋಲು ಪಡೆಯಿತು.

    https://twitter.com/shubhangi23_/status/1118918007999406080

  • ಕೆಎಲ್ ರಾಹುಲ್‍ಗೆ ಜನ್ಮದಿನದ ಶುಭ ಕೋರಿದ ಪಾಂಡ್ಯ

    ಕೆಎಲ್ ರಾಹುಲ್‍ಗೆ ಜನ್ಮದಿನದ ಶುಭ ಕೋರಿದ ಪಾಂಡ್ಯ

    – ಐಪಿಎಲ್‍ನಲ್ಲಿ ರಾಹುಲ್ ವಿಶೇಷ ಸಾಧನೆ

    ಮೊಹಾಲಿ: ಟೀಂ ಇಂಡಿಯಾ ಯುವ ಆಟಗಾರ ಕೆಎಲ್ ರಾಹುಲ್ ಇಂದು ತಮ್ಮ 27ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಆಟಗಾರರು ರಾಹುಲ್‍ಗೆ ಶುಭಕೋರಿದ್ದಾರೆ.

    ಕಾಫಿ ವಿಥ್ ಕರಣ್ ಶೋ ಬಳಿಕ ಟೀಂ ಇಂಡಿಯಾಗೆ ಭರ್ಜರಿಯಾಗಿ ಕಮ್ ಬ್ಯಾಕ್ ಮಾಡಿದ್ದ ರಾಹುಲ್ ಹಾಗೂ ಪಾಂಡ್ಯ ವಿಶ್ವಕಪ್ ಆಯ್ಕೆ ಆಗಿರುವ ಸಂಭ್ರಮದಲ್ಲಿದ್ದು, ಹಾರ್ದಿಕ್ ಪಾಂಡ್ಯ, ಕೃಣಾಲ್, ಅಕ್ಷರ್ ಪಟೇಲ್ ಅವರೊಂದಿಗೆ ಸಂಭ್ರಮ ಆಚರಿಸಿಕೊಂಡಿದ್ದಾರೆ. ರಾಹುಲ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಶುಭ ಕೋರಿರುವ ಹಾರ್ದಿಕ್ ಪಾಂಡ್ಯ, ಇಡೀ ಜೀವನಕ್ಕೆ ನನಗೆ ಸಹೋದರನಿದ್ದಂತೆ ನಡೆದಿದ್ದನ್ನು ಹೊರತು ಪಡಿಸಿ ಈ ವರ್ಷವನ್ನು ಸ್ಮರಣೀಯವಾಗಿಸೋಣ ಎಂದು ಬರೆದುಕೊಂಡಿದ್ದಾರೆ.

    https://www.instagram.com/p/BwXevAylkLI/?utm_source=ig_embed

    ಇತ್ತ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಅರ್ಧ ಶತಕಗಳಿಸಿ ತಂಡದ ಗೆಲುವಿಗೆ ರಾಹುಲ್ ಕಾರಣರಾಗಿದ್ದರು. ಈ ಬಾರಿಯ ಐಪಿಎಲ್ ನಲ್ಲಿ ಮೊದಲ ಶತಕ ಸಿಡಿಸಿದ್ದ ರಾಹುಲ್, 23 ಪಂದ್ಯಗಳಿಂದ 1 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಐಪಿಎಲ್ ನಲ್ಲಿ 1 ಸಾವಿರ ರನ್ ಪೂರೈಸಿದ 8ನೇ ಆಟಗಾರರಾಗಿದ್ದಾರೆ.

  • ಆಸೀಸ್ ಸರಣಿಗೂ ಮುನ್ನವೇ ಟೀಂ ಇಂಡಿಯಾಗೆ ಆಘಾತ

    ಆಸೀಸ್ ಸರಣಿಗೂ ಮುನ್ನವೇ ಟೀಂ ಇಂಡಿಯಾಗೆ ಆಘಾತ

    ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಸಿಮೀತ ಓವರ್ ಗಳ ಸರಣಿ ಆರಂಭ ಆಗುವ ಮೊದಲೇ ಟೀಂ ಇಂಡಿಯಾ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಸರಣಿಯಿಂದ ಹೊರ ಬಿದ್ದಿದ್ದಾರೆ.

    ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಪರಿಣಾಮ ಬಿಸಿಸಿಐ ತಜ್ಞ ವೈದ್ಯಕೀಯ ತಂಡ ವಿಶ್ರಾಂತಿ ಪಡೆಯಲು ಸೂಚನೆ ನೀಡಿದೆ. ಪಾಂಡ್ಯ ಸ್ಥಾನದಲ್ಲಿ ರವೀಂದ್ರ ಜಡೇಜಾರನ್ನು ಆಯ್ಕೆ ಮಾಡಿದೆ. ಈ ಹಿಂದೆ ಏಷ್ಯಾ ಕಪ್ ವೇಳೆಯೂ ಪಾಂಡ್ಯ ಬೆನ್ನು ನೋವಿನ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದಿದ್ದರು.

    ಬೆಂಗಳೂರಿನ ಕ್ರಿಕೆಟ್ ಆಕಾಡೆಮಿಯಲ್ಲಿ ಟೀಂ ಇಂಡಿಯಾ ಆಟಗಾರರು ತರಬೇತಿ ಪಡೆಯುತ್ತಿದ್ದು, ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾಗೆ ಆಸೀಸ್ ಸರಣಿ ಮಹತ್ವದಾಗಿದೆ. ವಿಶ್ವಕಪ್ ಸರಣಿಗೆ ಟೀಂ ಇಂಡಿಯಾ 15 ಆಟಗಾರರನ್ನು ಆಯ್ಕೆ ಮಾಡಲು ಆಸೀಸ್ ಸರಣಿಯ ಪ್ರದರ್ಶನ ನೆರವಾಗಲಿದೆ.

    ಫೆ.24 ರಿಂದ ಆಸೀಸ್ ವಿರುದ್ಧದ ಸರಣಿ ಆರಂಭವಾಗಲಿದ್ದು, 2 ಟಿ20 ಪಂದ್ಯ ಸೇರಿದಂತೆ 5 ಏಕದಿನ ಕ್ರಿಕೆಟ್ ಪಂದ್ಯಗಳು ನಡೆಯಲಿದೆ. ಕಾಫಿ ವಿತ್ ಕರಣ್ ಶೋನಲ್ಲಿ ಅಸಭ್ಯ ಹೇಳಿಕೆ ನೀಡಿ ನಿಷೇಧಕ್ಕೆ ಒಳಗಾಗಿದ್ದ ಪಾಂಡ್ಯ ನ್ಯೂಜಿಲೆಂಡ್ ಸರಣಿಗೆ ಕಮ್ ಬ್ಯಾಕ್ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾರ್ದಿಕ್, ರಾಹುಲ್ ವಿರುದ್ಧ ಎಸ್‍ಸಿ, ಎಸ್‍ಟಿ ಕಾಯ್ದೆ ಅಡಿ ಕೇಸ್ ದಾಖಲು

    ಹಾರ್ದಿಕ್, ರಾಹುಲ್ ವಿರುದ್ಧ ಎಸ್‍ಸಿ, ಎಸ್‍ಟಿ ಕಾಯ್ದೆ ಅಡಿ ಕೇಸ್ ದಾಖಲು

    ಜೋಧಪುರ: ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಕೆ.ಎಲ್.ರಾಹುಲ್ ಮತ್ತು ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ವಿರುದ್ಧ ಜೋಧಪುರ ನಗರದ ಲೂಣಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

    ಕೆಲವು ದಿನಗಳ ಹಿಂದೆ ಕರಣ್ ಜೋಹರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಾರ್ದಿಕ್ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದರು. ಈ ಸಂಬಂಧ ದೇವರಾಮ್ ಮೇಘವಾಲ್ ಎಂಬವರು ಲೂಣಿ ಠಾಣೆಯಲ್ಲಿ ಅಶ್ಲೀಲ ಹೇಳಿಕೆ, ಎಸ್‍ಸಿ, ಎಸ್‍ಟಿ ಕಾಯ್ದೆ ಅಡಿ ದೂರು ದಾಖಲಿಸಿದ್ದಾರೆ.

    ಈ ಮೂವರು ಟಿವಿ ಕಾರ್ಯಕ್ರಮದಲ್ಲಿ ಮಹಿಳೆಯರ ಅವಹೇಳನಕಾರಿ ಹೇಳಿಕೆ ಮತ್ತು ದೇಶದ ಗಣ್ಯವ್ಯಕ್ತಿಗಳಿಗೆ ಅವಮಾನಿಸಿದ್ದಾರೆ. ಸಂವಿಧಾನ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಒಳಗೊಂಡಂತೆ ಹಿರಿಯ ನಾಯಕರನ್ನು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ದೂರಿನನ್ವಯ ತನಿಖೆ ನಡೆಸಿ, ಅವಶ್ಯವಿದ್ದರೆ ಹಾರ್ದಿಕ್, ರಾಹುಲ್ ಮತ್ತು ಕರಣ್ ಜೋಹರ್ ಅವರಿಗೆ ನೋಟಿಸ್ ನೀಡಲಾಗುತ್ತದೆ. ಎಂದು ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಬಂಶಿಲಾಲ್ ವೈಷ್ಣವ್ ತಿಳಿಸಿದ್ದಾರೆ.

    ಸ್ತ್ರೀಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ಮಂಡಳಿ ಇಬ್ಬರು ಆಟಗಾರರನ್ನು ಆಸ್ಟ್ರೇಲಿಯಾ ಪ್ರವಾಸದಿಂದ ಅಮಾನತು ಮಾಡಿತ್ತು. ನಿಷೇಧದ ಎರಡು ವಾರಗಳ ಬಳಿಕ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ವಿರುದ್ಧದ ಅಮಾನತು ಆದೇಶ ರದ್ದು ಮಾಡುವಂತೆ ಬಿಸಿಸಿಐ ಆಡಳಿತ ಸಮಿತಿ (ಸಿಓಎ) ಆದೇಶ ನೀಡಿತ್ತು. ಸುಪ್ರೀಂ ಕೋರ್ಟ್ ನೇಮಿಸಿದ್ದ ಬಿಸಿಸಿಐ ಆಡಳಿತ ಮಂಡಳಿಯಲ್ಲಿರುವ ತಟಸ್ಥ ಸಲಹೆಗಾರ (ಅಮಿಕಸ್ ಕ್ಯೂರಿ) ಪಿಎಸ್ ನರಸಿಂಹ ಅವರ ಜೊತೆ ಚರ್ಚೆ ನಡೆಸಿದ ಬಳಿಕ ಅಮಾನತು ಆದೇಶ ರದ್ದುಗೊಂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಎಲ್ ರಾಹುಲ್, ಪಾಂಡ್ಯರನ್ನು ಬಿಡಲೊಪ್ಪದ ಫ್ರಾಂಚೈಸಿಗಳು!

    ಕೆಎಲ್ ರಾಹುಲ್, ಪಾಂಡ್ಯರನ್ನು ಬಿಡಲೊಪ್ಪದ ಫ್ರಾಂಚೈಸಿಗಳು!

    ಮುಂಬೈ: ಬಿಸಿಸಿಐನಿಂದ ಅಮಾನತಿನಲ್ಲಿರುವ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರ ಮೇಲಿನ ಆರೋಪದ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಐಪಿಎಲ್ ಫ್ರಾಂಚೈಸಿಗಳು ಆಗ್ರಹಿಸಿವೆ.

    ಮಹಿಳೆಯರ ಕುರಿತು ಅಸಭ್ಯ ಹೇಳಿಕೆಗಳನ್ನು ನೀಡಿ ಆಸೀಸ್ ಏಕದಿನ ಟೂರ್ನಿಯಿಂದ ಹೊರಬಿದ್ದಿದ್ದ ಇಬ್ಬರು ಆಟಗಾರರು ಮುಂದಿನ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಸ್ಥಾನ ಪಡೆಯುವುದು ಅನುಮಾನ. ಹೀಗಾಗಿ ಮಾರ್ಚ್ ನಿಂದ ಆರಂಭವಾಗಲಿರುವ ಐಪಿಎಲ್ ಆವೃತ್ತಿಯ ಒಳಗೆ, ಇಬ್ಬರ ಮೇಲಿನ ವಿಚಾರಣೆಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಫ್ರಾಂಚೈಸಿಗಳು ಬಿಸಿಸಿಐ ಅನ್ನು ಒತ್ತಾಯಿಸಿವೆ.

    ಪಾಂಡ್ಯ ಹಾಗೂ ಕೆಎಲ್ ರಾಹುಲ್ ಮುಂಬೈ ಮತ್ತು ಪಂಜಾಬ್ ತಂಡಗಳ ಪ್ರಮುಖ ಆಟಗಾರರಾಗಿದ್ದು, ಒಂದೊಮ್ಮೆ ಕ್ರಮ ಕೈಗೊಳ್ಳುವುದಾದರೆ ಫೆಬ್ರವರಿ 2ನೇ ವಾರದ ಒಳಗೆ ತೀರ್ಮಾನ ಕೈಗೊಂಡರೆ ಉತ್ತಮ ಎಂದು ಫ್ರಾಂಚೈಸಿಯ ಹಿರಿಯ ವ್ಯಕ್ತಿಯೊಬ್ಬರು ಬಿಸಿಸಿಐಗೆ ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

    ಈಗಾಗಲೇ ಆಟಗಾರರ ಹೇಳಿಕೆಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿರುವ ಅವರು, ಟೂರ್ನಿಯ ಈ ಸಮಯದಲ್ಲಿ ಆಟಗಾರರನ್ನು ಹೊರ ಹಾಕಲು ಕಷ್ಟಸಾಧ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಅಲ್ಲದೇ ಈ ಕುರಿತು ತಂಡದಲ್ಲಿ ಚರ್ಚೆ ನಡೆಸಿದ್ದು, ಯಾವುದೇ ಭಾವನಾತ್ಮಕ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಆಟಗಾರರ ಮೇಲೆ ಕ್ರಮ ಕೈಗೊಳ್ಳಲು ನಿಷೇಧದ ಹೊರತಾಗಿಯೂ ಅವಕಾಶವಿದ್ದು, ಬಿಸಿಸಿಐ ಆಟಗಾರರೊಂದಿಗೆ ಮಾಡಿಕೊಂಡಿರುವ ಒಪ್ಪಂದಲ್ಲಿ ಹಿಂಬಡ್ತಿ ನೀಡಬಹುದು ಎಂದು ಸಲಹೆಯನ್ನು ನೀಡಿದ್ದಾರೆ. ಅಲ್ಲದೇ ಬಿಸಿಸಿಐ ಆಟಗಾರರ ಮೇಲಿನ ತೀರ್ಮಾನವನ್ನು ತ್ವರಿತವಾಗಿ ಕೈಗೊಳ್ಳಲಿದೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾಂಗ್ರಾ ನೃತ್ಯದ ಮೂಲಕ ದಿನೇಶ್ ಕಾರ್ತಿಕ್, ಹಾರ್ದಿಕ್ ಗೆ ಸ್ವಾಗತ – ವಿಡಿಯೋ ನೋಡಿ

    ಭಾಂಗ್ರಾ ನೃತ್ಯದ ಮೂಲಕ ದಿನೇಶ್ ಕಾರ್ತಿಕ್, ಹಾರ್ದಿಕ್ ಗೆ ಸ್ವಾಗತ – ವಿಡಿಯೋ ನೋಡಿ

    ಲಂಡನ್: ಎಸ್ಸೆಕ್ಸ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದ ಎರಡನೇ ದಿನದಾಟದ ಆರಂಭದ ವೇಳೆ ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಹಾಗೂ ಹಾರ್ದಿಕ್ ಪಾಂಡ್ಯ ಅವರಿಗೆ ಸಂಪ್ರಾದಾಯಿಕ ಭಾಂಗ್ರಾ ನೃತ್ಯದ ಮೂಲಕ ಸ್ವಾಗತ ಮಾಡಲಾಯಿತು.

    ಟೀಂ ಇಂಡಿಯಾ, ಎಸ್ಸೆಕ್ಸ್ ತಂಡದ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನು ಆಡುತ್ತಿದ್ದು, ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಮುರುಳಿ ವಿಜಯ್ (53 ರನ್), ನಾಯಕ ಕೊಹ್ಲಿ (68), ಕೆಲ್ ರಾಹುಲ್ (58) ಆಕರ್ಷಕ ಅರ್ಧಶತಕದ ಬ್ಯಾಟಿಂಗ್ ನೆರವಿನಿಂದ 395 ರನ್ ಗಳಿಗೆ ಆಲೌಟ್ ಆಗಿದೆ. ಇದಕ್ಕೂ ಮುನ್ನ ಪಂದ್ಯದ ಆರಂಭದ ವೇಳೆ ಸಂಪ್ರಾದಾಯಿಕ ಶೈಲಿಯ ವೇಷಭೂಷಣ ತೊಟ್ಟಿದ್ದ ಕಲಾವಿದರು ಆಟಗಾರನ್ನು ಸ್ವಾಗತ ಮಾಡಿದ್ದು, ಈ ವಿಡಿಯೋವನ್ನು ಬಿಸಿಸಿಐ ತನ್ನ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದೆ.

    ಎರಡನೇ ದಿನದಾಟ ಆರಂಭಿಸಿದ ದಿನೇಶ್ ಕಾರ್ತಿಕ್ (82 ರನ್) ಹಾಗೂ ಪಾಂಡ್ಯ (51 ರನ್) ಅರ್ಧಶತಕ ಸಿಡಿಸಿ ತಂಡದ ಮೊತ್ತ 300 ಗಡಿದಾಟಲು ನೆರವಾದರು. ಬಳಿಕ ಬಂದ ರಿಷಭ್ ಪಂತ್ ಬಿರುಸಿನ ಆಟವಾಡಿ 33 ರನ್ ಗಳಿಸಿದರು.

    ಟೀಂ ಇಂಡಿಯಾ ಗುರಿ ಬೆನ್ನತ್ತಿದ್ದ ಎಸ್ಸೆಕ್ಸ್ ತಂಡ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 235 ರನ್ ಗಳಿಸಿದೆ. ಟೀಂ ಇಂಡಿಯಾ ಪರ ಉಮೇಶ್ ಯಾದವ್ ಹಾಗೂ ಇಶಾಂತ್ ಶರ್ಮಾ ತಲಾ 2 ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ 1 ವಿಕೆಟ್ ಪಡೆದಿದ್ದಾರೆ. ಎಸ್ಸೆಕ್ಸ್ ವಿರುದ್ಧದ ಪಂದ್ಯದ ಆರಂಭಕ್ಕೂ ಮುನ್ನವೇ ಕ್ರೀಡಾಂಗಣ ಪಿಚ್ ಕುರಿತು ಟೀಂ ಇಂಡಿಯಾ ಆಕ್ಷೇಪ ವ್ಯಕ್ತಪಡಿಸಿತ್ತು, ಇದರಿಂದ 4 ದಿನಗಳ ಪಂದ್ಯವನ್ನು 3 ದಿನಗಳಿಗೆ ಕಡಿತಗೊಳಿಸಲಾಯಿತ್ತು.