Tag: Haryana elections

  • Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ (Haryana Elections) ಬಿಜೆಪಿಯು 21 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

    90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಬಿಜೆಪಿ ಈವರೆಗೆ 87 ಅಭ್ಯರ್ಥಿಗಳನ್ನು (BJP Candidates) ಘೋಷಣೆ ಮಾಡಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್‌ ಸೇರ್ಪಡೆಯಾದ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ವಿರುದ್ಧ ಜುಲಾನಾ ಕ್ಷೇತ್ರದಿಂದ ಕ್ಯಾಪ್ಟನ್‌ ಯೋಗೇಶ್‌ ಬೈರಾಗಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಇದನ್ನೂ ಓದಿ: Hit-and-Run Case | ಬಾರ್‌ನಿಂದ ಬಂದು ಹಲವು ಕಾರುಗಳಿಗೆ ಡಿಕ್ಕಿ – ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷನ ಪುತ್ರ ಪರಾರಿ

    67 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ, ಪಕ್ಷವು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರನ್ನು ಕರ್ನಾಲ್‌ನಿಂದ ಲಾಡ್ವಾ ಸ್ಥಾನಕ್ಕೆ ಕಣಕ್ಕಿಳಿಸಿದೆ. ಸೈನಿ ಅವರು 2019ರಿಂದ 2024ರ ಅವಧಿಯಲ್ಲಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಓಂ ಪ್ರಕಾಶ್ ಧನಕರ್ ಅವರನ್ನು ಬದ್ಲಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಜೊತೆಗೆ ಮಾಜಿ ರಾಜ್ಯ ಸಚಿವ ಅನಿಲ್ ವಿಜ್ ಅವರು ತಮ್ಮ ಸಾಂಪ್ರದಾಯಿಕ ಭದ್ರಕೋಟೆಯಾದ ಅಂಬಾಲಾ ಕ್ಯಾಂಟ್‌ನಿಂದ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ವಯನಾಡು ದುರಂತದ ಬಳಿಕ ಸರ್ಕಾರ ಅಲರ್ಟ್- ಕಾಫಿನಾಡಲ್ಲಿ 40 ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ನೋಟಿಸ್

    ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್‌ ನೀಡಿದೆ. ಈ ಹಿಂದೆ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ)ಯಲ್ಲಿದ್ದ ದೇವೆಂದರ್ ಸಿಂಗ್ ಸದ್ಯ ಬಿಜೆಪಿಯಿಂದ ಬಬ್ಲಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹರಿಯಾಣದ ಮಾಜಿ ಸಿಎಂ ಬನ್ಸಿ ಲಾಲ್ ಅವರ ಮೊಮ್ಮಗಳು ಶ್ರುತಿ ಚೌಧರಿ ತೋಷಮ್‌ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸತತ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸದಲ್ಲಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್‌

    ಮುಂದಿನ ಅಕ್ಟೋಬರ್ 5 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ರದ್ದು ಮಾಡಿ- ಸಿಎಂಗೆ ಕುರುಬೂರು ಶಾಂತಕುಮಾರ್ ಮನವಿ 

  • ಹರಿಯಾಣದಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಗೆ ಬ್ರೇಕ್‌? – 20 ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

    ಹರಿಯಾಣದಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಗೆ ಬ್ರೇಕ್‌? – 20 ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

    ಚಂಡೀಗಢ: ಆಮ್‌ ಆದ್ಮಿ ಪಕ್ಷ (AAP) ಸೋಮವಾರ ಹರಿಯಾಣ ವಿಧಾನಸಭಾ ಚುನಾವಣೆಗೆ (Haryana Assembly Elections) 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಈ ಕುರಿತು ಮಾತನಾಡಿರುವ ಎಎಪಿ ಹರಿಯಾಣ ಘಟಕದ ಮುಖ್ಯಸ್ಥ ಸುಶೀಲ್ ಗುಪ್ತಾ (Sushil Gupta), ಕಾಂಗ್ರೆಸ್‌ ಸೀಟು ಹಂಚಿಕೆಯನ್ನು ಅಂತಿಮಗೊಳಿಸದೇ ಇದ್ದರೆ, ಎಲ್ಲಾ 90 ಕ್ಷೇತ್ರಗಳಿಗೆ ಎಎಪಿ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಹೇಳಿದ್ದಾರೆ.

    ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಎಎಪಿ ಮೈತ್ರಿ (AAP-Congress Alliance) ಕುರಿತು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗುಪ್ತಾ, ಆಮ್ ಆದ್ಮಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಿದ್ದರಾಗಿದ್ದಾರೆ. ಕಾಂಗ್ರೆಸ್‌ ಸೀಟು ಹಂಚಿಕೆಯನ್ನು ಅಂತಿಮಗೊಳಿಸದೇ ಇದ್ದರೆ ಎಲ್ಲಾ 90 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

    ಉಭಯ ಪಕ್ಷಗಳ ನಡುವೆ ಮಾತುಕತೆ ಸ್ಥಗಿತಗೊಂಡಿದೆ. ಎಎಪಿ 10 ಕ್ಷೇತ್ರಗಳಿಗೆ ಬೇಡಿಕೆ ಇಟ್ಟರೆ, ಕಾಂಗ್ರೆಸ್ 5 ಕ್ಷೇತ್ರಗಳನ್ನು ಬಿಟ್ಟು ಕೊಡುವುದಾಗಿ ಹೇಳಿದೆ. ಈ ಕುರಿತು ಕಾಂಗ್ರೆಸ್ ಅಂತಿಮ ಪ್ರತಿಕ್ರಿಯೆಗಾಗಿ ಆಪ್ ಕಾಯುತ್ತಿದೆ. ಚುನಾವಣೆಗೆ ಬಹಳ ಕಡಿಮೆ ಸಮಯವಿದೆ. ಪ್ರತಿ ವಿಧಾನಸಭೆಯಲ್ಲೂ ಆಪ್‌ ಸಂಘಟನೆ ಬಲಿಷ್ಠವಾಗಿದ್ದು, ಪ್ರಾಮಾಣಿಕ ಮೈತ್ರಿಗಾಗಿ ತಾಳ್ಮೆಯಿಂದ ಕಾದಿದ್ದೇವೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.

    90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನವಾಗಿದೆ. ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

  • ಮತಗಟ್ಟೆ ಸಮೀಕ್ಷೆಗಳಲ್ಲೂ ಬಿಜೆಪಿಗೆ ಬಹುಮತ – ಮಹಾರಾಷ್ಟ್ರ, ಹರ್ಯಾಣದಲ್ಲಿ ಮತ್ತೆ ಗದ್ದುಗೆ

    ಮತಗಟ್ಟೆ ಸಮೀಕ್ಷೆಗಳಲ್ಲೂ ಬಿಜೆಪಿಗೆ ಬಹುಮತ – ಮಹಾರಾಷ್ಟ್ರ, ಹರ್ಯಾಣದಲ್ಲಿ ಮತ್ತೆ ಗದ್ದುಗೆ

    ನವದೆಹಲಿ: ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಅಂತ್ಯವಾಗಿದ್ದು, ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ ಗುಟ್ಟು ಇವಿಯಂ ಯಂತ್ರದಲ್ಲಿ ಲಾಕ್ ಆಗಿದೆ. ಅಕ್ಟೋಬರ್ 24ರಂದು ಎರಡು ರಾಜ್ಯಗಳ ಚುಣಾವಣೆ ಫಲಿತಾಂಶ ಹೊರ ಬೀಳಲಿದೆ. ಚುನಾವಣೋತ್ತರ ಸಮೀಕ್ಷೆಗಳು ಹೊರ ಬಂದಿದ್ದು, ಎರಡು ರಾಜ್ಯಗಳಲ್ಲಿ ಮತ್ತೊಮ್ಮೆ ಕೇಸರಿ ರಣ ಕಹಳೆ ಮೊಳಗಲಿದೆ ಎಂದು ಸಮೀಕ್ಷೆಗಳು ಸ್ಪಷ್ಟವಾಗಿ ಹೇಳುತ್ತಿವೆ.

    ಲೋಕಸಭಾ ಚುನಾವಣೆ ಬಳಿಕ ಮೊದಲ ವಿಧಾನಸಭಾ ಚುನಾವಣೆ ಇದಾಗಿದ್ದು, ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪ್ರತಿಷ್ಠೆಯ ಕಣವಾಗಿತ್ತು. ಇತ್ತ ಕಾಂಗ್ರೆಸ್ ಗೆ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪ್ರಶ್ನೆ ಎದುರಾಗಿತ್ತು. ಎರಡು ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮತದಾರರನ್ನು ಸೆಳೆಯುವ ಪ್ರಯತ್ನವನ್ನು ಮಾಡಿದ್ದವು. ಸಮೀಕ್ಷೆಗಳು ಮಾತ್ರ ಮತ್ತೊಮ್ಮೆ ಮೋದಿ- ಅಮಿತಾ ಶಾ ಜೋಡಿಯೇ ಮೇಲುಗೈ ಸಾಧಿಸಲಿವೆ ವಿಚಾರವನ್ನು ಸಮೀಕ್ಷೆಗಳ ಅಂಕಿಗಳು ಸ್ಪಷ್ಟಪಡಿಸುತ್ತಿವೆ.

    ಇಂಡಿಯಾ ಟುಡೇ:
    ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಅಧಿಕಾರ ಹಿಡಿಯಲಿದೆ. ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ 109-124, ಶಿವಸೇನೆ 57-40, ಕಾಂಗ್ರೆಸ್ 32-40, ಎನ್‍ಸಿಪಿ 40-50, ವಿಬಿಎ 0-2 ಮತ್ತು ಇತರರು 22-32 ಕ್ಷೇತ್ರಗಳಲ್ಲಿ ಗೆಲುವನ್ನು ದಾಖಲಿಸಬಹುದು ಇಂಡಿಯಾ ಟುಡೇ ಸಮೀಕ್ಷೆ ಹೇಳಿದೆ. ಇಂಡಿಯಾ ಟುಡೇ ಪ್ರಕಾರ ಹರ್ಯಾಣದಲ್ಲಿ ಬಿಜೆಪಿ 77, ಕಾಂಗ್ರೆಸ್ 11 ಮತ್ತು ಇತರರು 1 ಕ್ಷೇತ್ರದಲ್ಲಿ ಗೆಲುವು ದಾಖಲಿಸುವ ಸಾಧ್ಯತೆಗಳಿವೆ.

    2014ರಲ್ಲಿ ನಡೆದ ಚುನಾವಣೆ ವೇಳೆ ಬಿಜೆಪಿ ಮತ್ತು ಶಿವಸೇನೆ 185 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿ ಸರ್ಕಾರ ರಚನೆ ಮಾಡಿದ್ದವು. ಕಾಂಗ್ರೆಸ್ 83 ಮತ್ತು ಪಕ್ಷೇತರ ಅಭ್ಯರ್ಥಿಗಳು 20 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದರು. ಹರ್ಯಾಣದಲ್ಲಿ ನಡೆದ 2014ರ ಚುನಾವಣೆಯಲ್ಲಿ ಬಿಜೆಪಿ 47, ಕಾಂಗ್ರೆಸ್ 15 ಮತ್ತು ಇತರರು 28 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು.

    ಇಂದು ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.55.31 ಮತ್ತು ಹರ್ಯಾಣದಲ್ಲಿ ಶೇ.61.62ರಷ್ಟು ಮತದಾನವಾಗಿದೆ. ಮಹಾರಾಷ್ಟ್ರದ 288, ಹರ್ಯಾಣದ 90 ಮತ್ತು ವಿವಿಧ ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಬಹುತೇಕ ಎಲ್ಲ ಕಡೆಯೂ ಶಾಂತಿಯುತ ಮತದಾನವಾಗಿದೆ ಎಂದು ವರದಿಯಾಗಿದೆ.

    ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆದಿದೆ. ಸಂಜೆ ಆರು ಗಂಟೆಗೆ ಒಟ್ಟು ಶೇ.55.31 ರಷ್ಟು ಮತದಾನವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಮೈತ್ರಿ ಮತ್ತು ಕಾಂಗ್ರೆಸ್,ಎನ್‍ಸಿಪಿ ಮೈತ್ರಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಎಲ್ಲ ಅಭ್ಯರ್ಥಿಗಳ ಭವಿಷ್ಯ ಇವಿಎಂ ಯಂತ್ರದಲ್ಲಿ ಭದ್ರವಾಗಿದೆ.

    ದೇಶದ ವಿವಿಧ ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಇಂದು ಉಪ ಚುನಾವಣೆ ನಡೆದಿದೆ. ಗುಜರಾತ-6, ಅಸ್ಸಾಂ-4, ಹಿಮಾಚಲ ಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ ಎರಡು, ಉತ್ತರ ಪ್ರದೇಶದ 11 ಕ್ಷೇತ್ರಗಳಲ್ಲಿ ಇಂದು ಉಪ ಚುನಾವಣೆ ನಡೆದಿದೆ. ಪಂಜಾಬ್-4, ಕೇರಳ-5, ಸಿಕ್ಕಿಂ-3, ರಾಜಸ್ಥಾನ-2, ಮಧ್ಯ ಪ್ರದೇಶ, ಓಡಿಸ್ಸಾ, ಛತ್ತೀಸಗಢ, ಪುದುಚೇರಿ, ಮೇಘಾಲಯ ಮತ್ತು ತೆಲಂಗಾಣದಲ್ಲಿ ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿದೆ.

    ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೂ ಇಂದು ಚುನಾವಣೆ ನಡೆದಿದ್ದು, ಸಂಜೆ 6ಗಂಟೆವರೆಗೆ ಶೇ.61.62ರಷ್ಟು ಮತದಾನವಾಗಿದೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಇಂಡಿಯನ್ ನ್ಯಾಶನಲ್ ಲೋಕ್ ದಳದಿಂದ ಬೇರೆಯಾಗಿರುವ ಜೆಜೆಪಿ ಅಭ್ಯರ್ಥಿಗಳು ಕೆಲವು ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿ ನೀಡಲಿದ್ದಾರೆ. ಒಂದು ಹರ್ಯಾಣದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

  • ಮಹಾರಾಷ್ಟ್ರದಲ್ಲಿ ಶೇ.60.05, ಹರ್ಯಾಣ ಶೇ.65ರಷ್ಟು ಮತದಾನ

    ಮಹಾರಾಷ್ಟ್ರದಲ್ಲಿ ಶೇ.60.05, ಹರ್ಯಾಣ ಶೇ.65ರಷ್ಟು ಮತದಾನ

    ನವದೆಹಲಿ: ಇಂದು ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.60.05 ಮತ್ತು ಹರ್ಯಾಣದಲ್ಲಿ ಶೇ.65 ರಷ್ಟು ಮತದಾನವಾಗಿದೆ. ಮಹಾರಾಷ್ಟ್ರದ 288, ಹರ್ಯಾಣದ 90 ಮತ್ತು ವಿವಿಧ ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಬಹುತೇಕ ಎಲ್ಲ ಕಡೆಯೂ ಶಾಂತಿಯುತ ಮತದಾನವಾಗಿದೆ ಎಂದು ವರದಿಯಾಗಿದೆ.

    ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆದಿದೆ. ಸಂಜೆ ಆರು ಗಂಟೆಗೆ ಒಟ್ಟು ಶೇ.60.05 ರಷ್ಟು ಮತದಾನವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಮೈತ್ರಿ ಮತ್ತು ಕಾಂಗ್ರೆಸ್,ಎನ್‍ಸಿಪಿ ಮೈತ್ರಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಎಲ್ಲ ಅಭ್ಯರ್ಥಿಗಳ ಭವಿಷ್ಯ ಇವಿಎಂ ಯಂತ್ರದಲ್ಲಿ ಭದ್ರವಾಗಿದೆ.

    ದೇಶದ ವಿವಿಧ ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಇಂದು ಉಪ ಚುನಾವಣೆ ನಡೆದಿದೆ. ಗುಜರಾತ-6, ಅಸ್ಸಾಂ-4, ಹಿಮಾಚಲ ಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ ಎರಡು, ಉತ್ತರ ಪ್ರದೇಶದ 11 ಕ್ಷೇತ್ರಗಳಲ್ಲಿ ಇಂದು ಉಪ ಚುನಾವಣೆ ನಡೆದಿದೆ. ಪಂಜಾಬ್-4, ಕೇರಳ-5, ಸಿಕ್ಕಿಂ-3, ರಾಜಸ್ಥಾನ-2, ಮಧ್ಯ ಪ್ರದೇಶ, ಓಡಿಸ್ಸಾ, ಛತ್ತೀಸಗಢ, ಪುದುಚೇರಿ, ಮೇಘಾಲಯ ಮತ್ತು ತೆಲಂಗಾಣದಲ್ಲಿ ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿದೆ.

    ಪುಣೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮತದಾನದ ಹಕ್ಕನ್ನು ಚಲಾಯಿಸಿದರು. ಮುಂಬೈನಲ್ಲಿ ಬಾಲಿವುಡ್ ಸ್ಟಾರ್ ಗಳಾದ ಸಲ್ಮಾನ್ ಖಾನ್, ಶಾರೂಖ್ ಖಾನ್, ಅಮೀರ್ ಖಾನ್, ದೀಪಿಕಾ ಪಡುಕೋಣೆ, ಅಭಿಷೇಕ್ ಬಚ್ಚಬ್, ಅಮಿತಾಬ್ ಬಚ್ಚನ್, ಐಶ್ವರ್ಯ ರೈ ಸೇರಿದಂತೆ ಬಹುತೇಕ ಗಣ್ಯರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾದರು.

    ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೂ ಇಂದು ಚುನಾವಣೆ ನಡೆದಿದ್ದು, ಸಂಜೆ 6ಗಂಟೆವರೆಗೆ ಶೇ.65ರಷ್ಟು ಮತದಾನವಾಗಿದೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಇಂಡಿಯನ್ ನ್ಯಾಶನಲ್ ಲೋಕ್ ದಳದಿಂದ ಬೇರೆಯಾಗಿರುವ ಜೆಜೆಪಿ ಅಭ್ಯರ್ಥಿಗಳು ಕೆಲವು ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿ ನೀಡಲಿದ್ದಾರೆ. ಒಂದು ಹರ್ಯಾಣದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.