Tag: Haryana Violence

  • ಹರಿಯಾಣದಲ್ಲಿ ಕೋಮು ಸಂಘರ್ಷ: ಸಾವಿನ ಸಂಖ್ಯೆ 5ಕ್ಕೆ ಏರಿಕೆ, 70 ಮಂದಿಗೆ ಗಾಯ, ಅಂಗಡಿ-ಮುಂಗಟ್ಟುಗಳಿಗೆ ಬೆಂಕಿ

    ಹರಿಯಾಣದಲ್ಲಿ ಕೋಮು ಸಂಘರ್ಷ: ಸಾವಿನ ಸಂಖ್ಯೆ 5ಕ್ಕೆ ಏರಿಕೆ, 70 ಮಂದಿಗೆ ಗಾಯ, ಅಂಗಡಿ-ಮುಂಗಟ್ಟುಗಳಿಗೆ ಬೆಂಕಿ

    – 70ಕ್ಕೂ ಹೆಚ್ಚು ಮಂದಿಗೆ ಗಾಯ

    ಚಂಡೀಗಢ: ಕೋಮು ಸಂಘರ್ಷಕ್ಕೆ ಹರಿಯಾಣ (Communal Clashes In Haryana) ತತ್ತರಿಸಿದೆ. ನಿನ್ನೆಯಿಂದ ನೂಹ್ ಮತ್ತು ಗುರುಗ್ರಾಮ್ (Gurugram) ಜಿಲ್ಲೆಗಳು ಹೊತ್ತಿ ಉರಿಯುತ್ತಿವೆ. ಕರ್ಫ್ಯೂ ಲೆಕ್ಕಿಸದೇ ಜನ ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ. ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡ್ತಿದ್ದಾರೆ. ಮಂಗಳವಾರ 200 ಮಂದಿಯನ್ನೊಳಗೊಂಡ ಶಸ್ತ್ರಸಜ್ಜಿತ ಗುಂಪೊಂದು ಏಕಾಏಕಿ ದಾಳಿ ನಡೆಸಿದ್ದು, ಬಹಳಷ್ಟು ಹಾನಿಯುಂಟು ಮಾಡಿದೆ.

    ಗುರುಗ್ರಾಮದಲ್ಲಿ ಮಂಗಳವಾರವೂ ಆಕ್ಷೇಪಾರ್ಹ ಘೋಷಣೆಗಳನ್ನ ಕೂಗುತ್ತಾ ರೆಸ್ಟೋರೆಂಟ್, ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ನಿನ್ನೆ ರಾತ್ರಿಯಿಂದಲೂ ನಡೆಯುತ್ತಿರುವ ಘರ್ಷಣೆಯಲ್ಲಿ ಈವರೆಗೆ ಐವರು ಬಲಿಯಾಗಿದ್ದಾರೆ. ಇದನ್ನೂ ಓದಿ: ಹರಿಯಾಣದಲ್ಲಿ ನಿಲ್ಲದ ಕೋಮು ಘರ್ಷಣೆ – ನಾಲ್ವರು ಸಾವು; 30 ಕ್ಕೂ ಹೆಚ್ಚು ಮಂದಿಗೆ ಗಾಯ

    ಸೋಮವಾರ ಸಂಜೆ ಮೆವಾತ್‌ನಲ್ಲಿ ವಿಹೆಚ್‌ಪಿ- ಬಜರಂಗದಳದ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟದಿಂದಾಗಿ ನಡೆದ ಘರ್ಷಣೆಯಲ್ಲಿ ಇಬ್ಬರು ಹೋಂಗಾರ್ಡ್ಗಳು ಸಾವನ್ನಪ್ಪಿದ್ರು. ರಾತ್ರಿ ಮತ್ತೆ ನಡೆದ ಘರ್ಷಣೆಯಲ್ಲಿ ಇನ್ನಿಬ್ಬರು ಬಲಿಯಾಗಿದ್ದಾರೆ. 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದಾರೆ.

    ಹತ್ತಾರು ವಾಹನಗಳು ಧಗಧಗಿಸಿವೆ. ಸಿಕ್ಕ-ಸಿಕ್ಕ ಅಂಗಡಿಗಳಿಗೆ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಗುರುಗ್ರಾಮದ ಸೆಕ್ಟರ್ 57ರಲ್ಲಿ ಮಸೀಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಮಸೀದಿಯ ಇಮಾಮ್ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಈಗಲೂ ಪರಿಸ್ಥಿತಿ ಉದ್ವಿಗ್ನವಾಗಿಯೇ ಇದೆ. ನೂಹ್-ಗುರುಗ್ರಾಮ ಜಿಲ್ಲೆಗಳಲ್ಲಿ ಜಿಲ್ಲೆಯಲ್ಲಿ ಕರ್ಫ್ಯೂ ಹೇರಲಾಗಿದೆ. ಇದನ್ನೂ ಓದಿ: ಮತ್ತೊಂದು ಬಾರ್ಡರ್‌ ಲವ್‌ – ಭಾರತದ ಪ್ರೇಮಿಗಾಗಿ ಲಂಕಾದಿಂದ ಹಾರಿ ಬಂದ ಲಂಕಿಣಿ!

    ವದಂತಿಗಳನ್ನು ತಡೆಯೋ ಸಲುವಾಗಿ ಬುಧವಾರ ರಾತ್ರಿವರೆಗೂ ಇಂಟರ್ನೆಟ್ ಸೇವೆ ಬಂದ್ ಮಾಡಲಾಗಿದೆ. ಫೆಬ್ರವರಿ ಘಟಿಸಿದ ಜುನೈದ್, ನಸೀರ್ ಹತ್ಯೆಯ ಆರೋಪಿ ಮೋನು ಮನೆಸರ್ ಈ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದು ಹಿಂಸಾಚಾರಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಆದ್ರೆ, ನಾನು ಈ ರ‍್ಯಾಲಿಯಲ್ಲಿ ಪಾಲ್ಗೊಂಡಿರಲಿಲ್ಲ ಎಂದು ಮೋನು ಹೇಳ್ಕೊಂಡಿದ್ದಾನೆ. ಇನ್ನು, ಹಿಂಸಾಚಾರ ಸಂಬಂಧ ಪರಸ್ಪರ ಕೆಸರೆರಚಾಟಗಳು ನಡೀತಿವೆ. ಸಿಎಂ ಖಟ್ಟರ್ ತುರ್ತು ಸಭೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ – ಹರಿಯಾಣದಲ್ಲಿ ಹಿಂಸಾಚಾರ, ಇಬ್ಬರು ಸಾವು

    ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ – ಹರಿಯಾಣದಲ್ಲಿ ಹಿಂಸಾಚಾರ, ಇಬ್ಬರು ಸಾವು

    ಚಂಡೀಗಢ: ಹರಿಯಾಣದ (Haryana) ಮೇವತ್‌ ಪ್ರದೇಶದ ನಂದ್‌ಗ್ರಾಮ್‌ನಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆಯೋಜಿಸಲಾಗಿದ್ದ ಮೆರವಣಿಗೆ (Religious Procession) ಮೇಲೆ ಕಲ್ಲು ತೂರಾಟ ನಡೆದಿದ್ದು, ಗಲಭೆ ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆ ತಿರುಗಿದೆ.

    ಈ ವೇಳೆ ಕಲ್ಲು ಎಸೆದು ಕಾರುಗಳಿಗೆ ಬೆಂಕಿ ಹಚ್ಚಿದ ಗುಂಪೊಂದು ಗುಂಡು ಹಾರಿಸಿ ಇಬ್ಬರು ಹೋಮ್‌ ಗಾರ್ಡ್‌ಗಳನ್ನ ಹತ್ಯೆ ಮಾಡಿದ್ದಾರೆ. ಅಲ್ಲದೇ 7 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಕಿಡಿಗೇಡಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು (Police) ಅಶ್ರುವಾಯು ಪ್ರಯೋಗಿಸಿದ್ದಾರೆ. ಇದನ್ನೂ ಓದಿ: ಲೇಡಿ ಬೌನ್ಸರ್ ಆಗಿದ್ದ ಮುಸ್ಲಿಂ ಮಹಿಳೆ ಈಗ ಶ್ರೀಕೃಷ್ಣನ ಭಕ್ತಿಯಲ್ಲಿ ಲೀನ!

    ವಿಶ್ವ ಹಿಂದೂ ಪರಿಷತ್‌ (Vishwa Hindu Parishad) ಮತ್ತು ಭಜರಂಗದಳದ ಕಾರ್ಯಕರ್ತರು ಗುರುಗ್ರಾಮದಿಂದ ಶೋಭಾಯಾತ್ರೆಯನ್ನ ಆರಂಭಿಸಿದ್ದರು. ಮೆರವಣಿಗೆ ನಂದ್‌ಗ್ರಾಮ ಸಮೀಪಿಸುತ್ತಿದ್ದಂತೆ ಅನ್ಯಕೋಮಿನ ಕೆಲವರು ಯಾತ್ರೆಯನ್ನ ತಡೆದು ಕಲ್ಲು ತೂರಾಟ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಭಾರೀ ಹಿಂಸಾಚಾರ ಏರ್ಪಟ್ಟಿರುವುದರಿಂದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳು ಗುರುಗ್ರಾಮ್ ಬಳಿಯ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಇದನ್ನೂ ಓದಿ: ಉಡುಪಿ ಕೇಸಲ್ಲಿ ಸಂತ್ರಸ್ತೆ, ಆರೋಪಿಗಳ ವಿಚಾರಣೆ- ಪ್ರಕರಣಕ್ಕೆ ಕೇರಳ ಲಿಂಕ್ ಕೊಟ್ಟು ಬಿಜೆಪಿ ಪ್ರತಿಭಟನೆ

    ಭಿವಾನಿ ಹತ್ಯೆ ಪ್ರಕರಣದ ಆರೋಪಿ ಮೋನು ಮನೇಸರ್‌ ಎಂಬಾತ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿಯೇ ಸಮುದಾಯ ಆಕ್ರೋಶ ವ್ಯಕ್ತಪಡಿಸಿ, ಕಲ್ಲುತೂರಾಟಕ್ಕೆ ಮುಂದಾಗಿದೆ ಎನ್ನಲಾಗಿದೆ. ಮತ್ತೊಂದೆಡೆ ಬಜರಂಗದಳದ ಕಾರ್ಯಕರ್ತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವೀಡಿಯೋ ಪೋಸ್ಟ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ಗಲಭೆ ನಡೆದಿದೆ ಎಂದೂ ಹೇಳಲಾಗುತ್ತಿದೆ.

    ಇಂಟರ್ನೆಟ್‌ ಬಂದ್‌, 144 ನಿಷೇಧಾಜ್ಞೆ ಜಾರಿ:
    ಗಲಭೆಯ ವಿಡಿಯೊ ಜಾಲತಾಣಗಳಲ್ಲೂ ಹರಿದಾಡುತ್ತಿದ್ದು ಸಂಘರ್ಷ ಮತ್ತಷ್ಟು ವಿಕೋಪಕ್ಕೆ ಹೋಗುವುದನ್ನು ತಡೆಯಲು ಆಗಸ್ಟ್‌ 2ರವರೆಗೆ ಹರ್ಯಾಣದ ನಹ್‌ ಜಿಲ್ಲೆಯಲ್ಲಿ ಅಂಜರ್ತಾಲ ಸೇವೆ ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಷನ್‌ 144 ನಿಷೇಧಾಜ್ಞೆ ಜಾರಿಗೊಳಿಸಿದ್ದು, ಸಾರ್ವಜನಿಕರು ಪೊಲೀಸರು ಘಟನೆ ಹತ್ತಿಕ್ಕಲು ಶತಪ್ರಯತ್ನ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]