Tag: havana

  • ಕ್ಯೂಬಾದ ಹೆಸರಾಂತ ಹೋಟೆಲ್‌ನಲ್ಲಿ ಭೀಕರ ಸ್ಫೋಟ – 22 ಮಂದಿ ಸಾವು

    ಹವಾನಾ: ಕ್ಯೂಬಾದ ರಾಜಧಾನಿ ಹವಾನಾದ ಡೌನ್‌ಟೌನ್‌ನಲ್ಲಿರುವ ಪ್ರಸಿದ್ಧ ಹೋಟೆಲ್‌ನಲ್ಲಿ ಶುಕ್ರವಾರ ಭಾರೀ ಸ್ಫೋಟ ಸಂಭವಿಸಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ನಗರದ ಹೆಸರಾಂತ ಸರಟೋಗಾ ಹೋಟೆಲ್‌ನಲ್ಲಿ ಭಾರೀ ಸ್ಫೋಟಕ್ಕೆ ಅನಿಲ ಸೋರಿಕೆ ಕಾರಣ ಎಂದು ತಿಳಿದುಬಂದಿದೆ. ಸ್ಫೋಟದಿಂದಾಗಿ ಕಟ್ಟಡ ಭಾಗಶಃ ಧ್ವಂಸಗೊಂಡಿದೆ. ಸ್ಫೋಟದ ಬಳಿಕ ಕ್ಯೂಬಾ ಅಧ್ಯಕ್ಷ ಮಾಧ್ಯಮಗಳ ಮುಂದೆ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಂಗೊಳಿಸಲಿದೆ ಆರ್‌ಸಿಬಿ

    ಸ್ಫೋಟ ಸಂಭವಿಸಿದ ಹೋಟೆಲ್ ಬಳಿಯಲ್ಲಿ ಶಾಲೆಯೂ ಇದ್ದು, 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಫೋಟದ ವೇಳೆ ಹಾಜರಾಗಿದ್ದರು. ಘಟನೆಯಿಂದಾಗಿ 15 ಮಕ್ಕಳು ಗಾಯಗೊಂಡಿದ್ದು, ಒಂದು ಮಗು ಸಾವನ್ನಪ್ಪಿರುವುದಾಗಿ ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಸಾವಿರ ಟ್ವಿಟ್ಟರ್ ಉದ್ಯೋಗಿಗಳನ್ನು ವಜಾಗೊಳಿಸಲು ಮಸ್ಕ್ ಯೋಜನೆ

    ಸರಟೋಗಾ ಹೋಟೇಲ್ ಕಟ್ಟಡ ಶತಮಾನಕ್ಕೂ ಹಳೆಯದ್ದಾಗಿದ್ದು, ಸ್ಫೋಟದ ಸಮಯದಲ್ಲಿ ಮುಚ್ಚಲಾಗಿತ್ತು. ಕಾರ್ಮಿಕರು ಮಾತ್ರವೇ ಹೋಟೆಲ್ ಒಳಗಿದ್ದರು ಎಂದು ವರದಿಯಾಗಿದೆ.

  • ಹೊತ್ತಿ ಉರಿದ ವಿಮಾನಕ್ಕೆ 101 ಮಂದಿ ಬಲಿ

    ಹೊತ್ತಿ ಉರಿದ ವಿಮಾನಕ್ಕೆ 101 ಮಂದಿ ಬಲಿ

    ಹವಾನಾ: ಕ್ಯೂಬಾದ ರಾಜಧಾನಿ ಹವಾನಾದಲ್ಲಿ ವಿಮಾನ ಅಪಘಾತ ಸಂಭವಿಸಿ 100ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.

    ಹವಾನಾದ ಜೋಸ್ ಮರ್ತಿ ಅಂತಾರಾಷ್ಷ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಅದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ವಿಮಾನ ಅಪಘಾತಕ್ಕೀಡಾಗುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. 104 ಜನ ಪ್ರಯಾಣಿಕರಲ್ಲಿ ಬದುಕುಳಿದಿರುವುದು 3 ಜನ ಮಾತ್ರ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ಪರಿಸ್ಥಿತಿ ಚಿಂತಾಜನಕವಾಗಿದೆ.

    ಸುಮಾರು 39 ವರ್ಷ ಹಳೆಯ ಬೋಯಿಂಗ್ 737 ವಿಮಾನ ಇದಾಗಿತ್ತು. ಮೆಕ್ಸಿಕನ್ ಏರ್ ಲೈನ್ಸ್ ಗೆ ಸೇರಿದ ವಿಮಾನವಾಗಿದ್ದು ಕ್ಯೂಬಾನಾ ಏವಿಯೇಶನ್ ಗೆ ಲೀಸ್ ಕೊಡಲಾಗಿತ್ತು ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ.

    ಚಾರ್ಟ್‍ರ್ ವಿಮಾನವಾಗಿದ್ದು ವಿಮಾನ ನಿಲ್ದಾಣದಿಂದ 6 ಮೈಲಿಗಳ ದೂರದಲ್ಲಿ ಪತನಗೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ ಆದರೆ ಆ ವೇಳೆಗೆ ವಿಮಾನ ಸಂಪೂರ್ಣ ಸುಟ್ಟು ಹೋಗಿದೆ.

    ಹಲವು ಮಂದಿ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಬೆಂಕಿಯನ್ನು ನಂದಿಸಲಾಗಿದ್ದು ಪರಿಹಾರ ಕಾರ್ಯ ಬಿರುಸಿನಿಂದ ಸಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಕ್ಯೂಬಾ ಅಧ್ಯಕ್ಷ ಮಿಗ್ಯುಯೆಲ್ ಡಯಾಸ್ ಕ್ಯಾನೆಲ್ ಹೇಳಿದ್ದಾರೆ.

  • ಮೌಢ್ಯ ವಿರೋಧಿ ಸರ್ಕಾರದಿಂದ ಮೌಢ್ಯಾಚರಣೆ: ಮಳೆಗಾಗಿ ಪರ್ಜನ್ಯ ಹೋಮಕ್ಕೆ ಸಿದ್ಧತೆ

    ಮೌಢ್ಯ ವಿರೋಧಿ ಸರ್ಕಾರದಿಂದ ಮೌಢ್ಯಾಚರಣೆ: ಮಳೆಗಾಗಿ ಪರ್ಜನ್ಯ ಹೋಮಕ್ಕೆ ಸಿದ್ಧತೆ

    ಬೆಂಗಳೂರು: ರಾಜ್ಯದಲ್ಲಿ ರಣಭೀಕರ ಬರ ಇದ್ದರೂ ಸಮರ್ಪಕವಾಗಿ ನಿಭಾಯಿಸದ ಆಡಳಿತ-ವಿಪಕ್ಷ, ರಾಜ್ಯ-ಕೇಂದ್ರ ಅಂತ ಹೇಳಿ ಸರ್ಕಾರ-ಜನಪ್ರತಿನಿಧಿಗಳು ಕೆಸರೆರಚಾಟದಲ್ಲೇ ಕಾಲಕಳೆದ್ರು. ವಿಪಕ್ಷಗಳು ಮಳೆಗಾಲದ ಆರಂಭದಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಂಡು ನಗೆಪಾಟಲಿಗೀಡಾದ್ರೆ, ಈಗ ಸರ್ಕಾರ ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಪರ್ಜನ್ಯ ಹೋಮ ನಡೆಸಲು ಮುಂದಾಗಿದೆ.

    ಅದರಲ್ಲೂ ಮೌಢ್ಯ ವಿರೋಧಿ ಅಂತ ಹೇಳೋ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕೇರಳ ಪಂಡಿತರನ್ನ ಕರೆಸಿ ನೀರಾವರಿ ನಿಗಮ ಹೋಮ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

    ರಾಜ್ಯದ ಜೀವನದಿಗಳಾದ ಉತ್ತರದ ಕೃಷ್ಣಾನದಿ ಮೂಲದ ಮಹಾಬಲೇಶ್ವರದಲ್ಲಿ ಶುಕ್ರವಾರ, ದಕ್ಷಿಣದ ಕಾವೇರಿ ನದಿಮೂಲ ಭಾಗಮಂಡಲದಲ್ಲಿ ಶನಿವಾರ ಪರ್ಜನ್ಯ ಹೋಮ ನಡೆಸಲು ಸಿದ್ಧತೆ ನಡೆದಿದೆ. ಇದಕ್ಕಾಗಿ ಎರಡೂ ಕಡೆ 20 ಲಕ್ಷ ರೂ. ಖರ್ಚು ಮಾಡಲು ಸರ್ಕಾರ ಮುಂದಾಗಿದೆ.

    ಟಿಆರ್‍ಪಿಗಾಗಿ ಮಾಡ್ತಿದ್ದೀರಿ: ಪರ್ಜನ್ಯ ಹೋಮ ಮಾಡ್ತಿರೋದ್ರ ಬಗ್ಗೆ ಸಂಜೆ 5 ಗಂಟೆ ನ್ಯೂಸ್‍ನಲ್ಲಿ ಜಲಸಂಪನ್ಮೂಲ ಸಚಿವರಾದ ಎಂ.ಬಿ. ಪಾಟೀಲ್ ಅವರನ್ನು ಪಬ್ಲಿಕ್ ಟಿವಿ ಸಂಪರ್ಕಿಸಿತು. ಈ ವೇಳೆ ದೂರವಾಣಿಯಲ್ಲಿ ಮಾತನಾಡಿದ ಸಚಿವರು ಸರ್ಕಾರದ ನಡೆಯನ್ನ ಬಲವಾಗಿ ಸಮರ್ಥಿಸಿಕೊಂಡು, ಇದ್ದಕ್ಕಿದ್ದಂತೆ ಭಾವೋದ್ವೇಗಕ್ಕೆ ಒಳಗಾಗಿ, ಟಿಆರ್‍ಪಿಗಾಗಿ ನೀವಿದನ್ನು ವಿವಾದ ಮಾಡ್ತಿದ್ದೀರಾ ಅಂದ್ರು. ಅಷ್ಟೇ ಅಲ್ಲ, ಇಂಥದ್ದನ್ನ ಕಡಿವಾಣ ಹಾಕೋಕೆ ಸದನ ಸಮಿತಿ ಮಾಡ್ತಿದ್ದೀವಿ ಅಂತ ಹೇಳಿದರು.

    ಈ ಸಂಬಂಧ ಫೇಸ್‍ಬುಕ್‍ನಲ್ಲಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡ ಎಂಬಿ ಪಾಟೀಲ್, ನಗರೀಕರಣದ ಪರಿಣಾಮದಿಂದಾಗಿ ಕರ್ನಾಟಕ ಭೀಕರ ಬರವನ್ನು ಎದುರಿಸುತ್ತಿದೆ. ಹೀಗಾಗಿ ರೈತರ ಸಲಹೆಯ ಮೇರೆಗೆ ನಾವು ಪೂಜೆಯನ್ನು ನಡೆಸುತ್ತಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಪೂಜೆಗೆ ಆಗಮಿಸಬೇಕೆಂದು ಅವರು ಕೇಳೀಕೊಂಡಿದ್ದಾರೆ.

    ನಾವು ನಂಬಲ್ಲ: ಮಳೆಗಾಗಿ ಪರ್ಜನ್ಯ ಹೋಮದ ಮೂಲಕ ಮೌಢ್ಯ ಆಚರಣೆ ಮಾಡ್ತಿರೋ ಸಿಎಂ, ನಾವಿದನ್ನೆಲ್ಲಾ ನಂಬೋದಿಲ್ಲ ಅಂತ ಬೆಂಗಳೂರಿನಲ್ಲಿ ರಾಗ ಎಳೆದಿದ್ದಾರೆ. ವಿಕಾಸಸೌಧದಲ್ಲಿ ಮಕ್ಕಳ ಜೊತೆ ಮಕ್ಕಳ ರಕ್ಷಣೆ, ಆರೋಗ್ಯ, ಶಿಕ್ಷಣ, ಸಂಬಂಧಪಟ್ಟಂತೆ ಸಂವಾದ ನಡೆಸಿದ್ರು.

    ಈ ವೇಳೆ, ಸಿಎಂಗೆ ಮಕ್ಕಳು ಪ್ರಶ್ನೆಗಳ ಸುರಿಮಳೆ ಎದುರಾಯ್ತು. ಅದರಲ್ಲಿ ಗಮನ ಸೆಳೆದಿದ್ದು, ವಾಮಾಚಾರ, ಮೂಢನಂಬಿಕೆ ಹೆಸರಲ್ಲಿ ಮಕ್ಕಳ ಬಲಿ. ಇದರ ಬಗ್ಗೆ ಸರ್ಕಾರ ಯಾವ ಕ್ರಮಕೈಗೊಂಡಿದೆ ಅಂತ ರಾಮನಗರದ ವಿದ್ಯಾರ್ಥಿನಿ ಅಮೂಲ್ಯ ಪ್ರಶ್ನಿಸಿದ್ರು.

    ಉತ್ತರ ಕೊಟ್ಟ ಸಿಎಂ, ಸಮಾಜದಲ್ಲಿ ಮೂಢನಂಬಿಕೆ ಹೆಚ್ಚಿದೆ. ಮೌಢ್ಯದ ವಿರುದ್ಧ ಕಾನೂನಿಗೆ ಚಿಂತನೆ ನಡೆದಿದೆ ಅಂದ್ರು. ತಮ್ಮ ಕಾರಿನ ಮೇಲೆ ಕಾಗೆ ಕೂತದ್ದು, ಚಾಮರಾಜನಗರಕ್ಕೆ ಎಂಟ್ರಿ ಕೊಟ್ಟದ್ದು ಎಲ್ಲವನ್ನೂ ಉದಾಹರಣೆ ಸಹಿತ ವಿವರಿಸಿದ್ರು. ಇದೇ ವೇಳೆ, ನಾನು ಮೊದಲು ಸಿಗರೇಟ್ ಸೇದ್ತಿದೆ. ಸಮಸ್ಯೆ ಆದ ಕಾರಣ ಬಿಟ್ಟುಬಿಟ್ಟೆ ಅಂತ ಹೇಳಿದ್ರು. ಇನ್ನು, ತಂದೆ ಸಾಲತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿ ಕುಟುಂಬಕ್ಕೆ ದಿಕ್ಕಿಲ್ಲದಂತಾಗಿದೆ ಅಂತ ನೋವು ತೋಡಿಕೊಂಡ ರೈತನ ಮಗನಿಗೆ 5 ಲಕ್ಷ ಕೊಡುವಂತೆ ಸಿಎಂ ಸೂಚಿಸಿದ್ರು.

    ಪಬ್ಲಿಕ್ ಟಿವಿಗೆ ನೀರಾವರಿ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ ವಿಡಿಯೋ ಇಲ್ಲಿದೆ.

    https://www.youtube.com/watch?v=Uz2rsEJ-xKw