Tag: haveri crime

  • ಪತ್ನಿಯ ಸಾವಿನ ಸುದ್ದಿ ತಿಳಿದು ನೇಣಿಗೆ ಶರಣಾದ ಪತಿ

    ಪತ್ನಿಯ ಸಾವಿನ ಸುದ್ದಿ ತಿಳಿದು ನೇಣಿಗೆ ಶರಣಾದ ಪತಿ

    ಹಾವೇರಿ: ಪತ್ನಿಯ ಸಾವಿನ ಸುದ್ದಿ ತಿಳಿದು ಪತಿ ನೇಣಿಗೆ ಶರಣಾಗಿರುವ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ.

    ವಾಣಿಶ್ರೀ ಅಗಡಿ (50) ಮತ್ತು ಶಂಕ್ರಪ್ಪ ಅಗಡಿ (56) ಮೃತ ದುರ್ದೈವಿಗಳು. ಕಳೆದೆರಡು ದಿನಗಳ ಹಿಂದೆ ವಾಣಿಶ್ರೀ ಮತ್ತು ಆಕೆಯ ಪುತ್ರಿ ಕೀರ್ತಿ (21) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪತ್ನಿ ಮೃತಪಟ್ಟಿದ್ದಾರೆ. ಪತ್ನಿಯ ಸಾವಿನ ಸುದ್ದಿ ತಿಳಿದು ತಮ್ಮ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಶಂಕ್ರಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಕೈ ನಾಯಕರು, ಕಾರ್ಯಕರ್ತರ ಪಾದವನ್ನು ಮುಟ್ಟಿ ಧನ್ಯವಾದ ತಿಳಿಸುತ್ತೇನೆ: ಹೆಬ್ಬಾಳ್ಕರ್ 

    ಸಾಲಬಾಧೆ ತಾಳಲಾರದೆ ಮೊನ್ನೆ ರಾತ್ರಿ ವಿಷ ಸೇವಿಸಿ ತಾಯಿ ಮತ್ತು ಮಗಳು ಆತ್ಮಹತ್ಯೆಗೆ ಯತ್ನಿಸಿದ್ದರು. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಗಳು ಕೀರ್ತಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

    ಎರಡು ವರ್ಷದ ಹಿಂದೆ ಶಂಕ್ರಪ್ಪ ಒಂದೂವರೆ ಎಕರೆ ಜಮೀನು ಮಾರಾಟ ಮಾಡಿದ್ದರು. ಈ ವರ್ಷ ಲಾವಣಿ ರೂಪದಲ್ಲಿ ಬೇರೆಯವರ 8 ಎಕರೆ ಜಮೀನು ನಡೆಸುತ್ತಿದ್ದು, ಮೂವತ್ತೈದು ಗುಂಟೆ ಮಾತ್ರ ಸ್ವಂತ ಜಮೀನು ಹೊಂದಿದ್ದರು. ಬ್ಯಾಂಕ್ ಮತ್ತು ಕೈಸಾಲ ಅಂತಾ ಆರೂವರೆ ಲಕ್ಷಕ್ಕೂ ಅಧಿಕ ಸಾಲ ಹೊಂದಿದ್ದು, ಲಾವಣಿ ರೂಪದಲ್ಲಿ ಪಡೆದಿದ್ದ ಜಮೀನಿನಲ್ಲಿ ಹತ್ತಿ ಮತ್ತು ಮೆಕ್ಕೆಜೋಳದ ಬೆಳೆ ಬೆಳೆದಿದ್ದರು. ಆದರೆ ಬೆಳೆ ಹಾಳಾಗಿದ್ದರಿಂದ ಈ ಕುಟುಂಬವು ಬೇಸತ್ತಿತ್ತು. ಇದನ್ನೂ ಓದಿ: ತಡರಾತ್ರಿಯಲ್ಲಿ ಡ್ರಾಪ್ ಕೇಳಿದ ಮಹಿಳೆಗೆ ಪೊಲೀಸರಿಂದ್ಲೇ ಕಿರುಕುಳ!

    ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಅಪರಾಧಿಗೆ 5 ವರ್ಷ ಕಠಿಣ ಸಜೆ

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಅಪರಾಧಿಗೆ 5 ವರ್ಷ ಕಠಿಣ ಸಜೆ

    ಹಾವೇರಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಐದು ವರ್ಷ ಕಠಿಣ ಸಜೆ ಹಾಗೂ 4,000 ರೂ. ದಂಡ ವಿಧಿಸಿ ಜಿಲ್ಲಾ ಸತ್ರ ಎಫ್‌ಟಿಎಸ್‌ಸಿ-1(ಪೋಕ್ಸೊ) ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

     

    ಭೀಮಪ್ಪ ಕೋಟೆಪ್ಪ ಹೊಳಲ ಎಂಬಾತ ಶಿಕ್ಷೆಗೆ ಗುರಿಯಾದವ. ನ್ಯಾಯಾಧೀಶರಾದ ಕೆ.ಎಸ್.ಜ್ಯೋತಿಶ್ರೀ ಅವರು ತೀರ್ಪು ಪ್ರಕಟಿಸಿದ್ದಾರೆ. ಇದನ್ನೂ ಓದಿ: ಡಿಸಿ ಕಚೇರಿ ಎದುರೇ 2 ಗುಂಪುಗಳ ನಡುವೆ ಮಾರಾಮಾರಿ- ಪೊಲೀಸರಿಗೂ ಡೋಂಟ್‌ ಕೇರ್!

    2020 ರ ಮಾರ್ಚ್‌ ತಿಂಗಳಲ್ಲಿ ಬೆಳವಿಗಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದ. ಆತನ ವಿರುದ್ಧ ಹಾವೇರಿ ಪೊಲೀಸ್ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಸದರಿ ಪ್ರಕರಣದ ತನಿಖೆ ನಡೆಸಿದ ಪೊಲೀಸ್ ವೃತ್ತ ನಿರೀಕ್ಷಕರು ನ್ಯಾಯಾಲಯಕ್ಕೆ ಆರೋಪಿತನ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: ಲಾಕ್‌ಡೌನ್ ಇಲ್ಲ, ಊಹಾಪೋಹಗಳಿಗೆ ಜನ ಕಿವಿ ಕೊಡಬಾರದು: ಸಿಎಂ

    jail

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿವಿಧ ಕಲಂಗಳಡಿ ಅಪರಾಧಿಗೆ ಐದು ವರ್ಷಗಳ ಕಠಿಣ ಶಿಕ್ಷೆ ಹಾಗೂ 4 ಸಾವಿರ ರೂ. ದಂಡ ವಿಧಿಸಿದ್ದು, ಭಾದಿತೆಗೆ 50 ಸಾವಿರ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಜಿಲ್ಲಾ ಸತ್ರ ಎಫ್‌ಟಿಎಸ್‌ಸಿ-1(ಪೋಕ್ಸೊ) ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವಿನಾಯಕ ಎಸ್.ಪಾಟೀಲ ವಾದ ಮಂಡಿಸಿದ್ದರು.