Tag: HD Deve Gowder

  • ಪ್ರಣಬ್ ಮುಖರ್ಜಿಯ ತೀಕ್ಷ್ಣವಾದ ಬುದ್ಧಿಶಕ್ತಿ, ಕಠಿಣ ಶ್ರಮವನ್ನು ಸದಾ ಮೆಚ್ಚಿದ್ದೆ: ಹೆಚ್‍ಡಿಡಿ

    ಪ್ರಣಬ್ ಮುಖರ್ಜಿಯ ತೀಕ್ಷ್ಣವಾದ ಬುದ್ಧಿಶಕ್ತಿ, ಕಠಿಣ ಶ್ರಮವನ್ನು ಸದಾ ಮೆಚ್ಚಿದ್ದೆ: ಹೆಚ್‍ಡಿಡಿ

    ಬೆಂಗಳೂರು: ಮಾಜಿ ಪ್ರಧಾನಿ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಕಂಬನಿ ಮಿಡಿದಿದ್ದಾರೆ.

    ಭಾರತದ 13ನೇ ರಾಷ್ಟ್ರಪತಿ ಮತ್ತು ದೇಶಕಂಡ ಒಳ್ಳೆಯ ರಾಜಕಾರಣಿ ಪ್ರಣಬ್ ಮುಖರ್ಜಿಯವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಅವರು, ದೆಹಲಿಯ ಆರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಹೆಚ್‍ಡಿಡಿ, ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನದ ಸುದ್ದಿ ತಿಳಿದು ನನಗೆ ಬೇಸರವಾಗಿದೆ. ನಾವು ದಶಕಗಳಿಂದ ಸುದೀರ್ಘ ಸಂಪರ್ಕವನ್ನು ಹೊಂದಿದ್ದವು. ಅವರ ತೀಕ್ಷ್ಣವಾದ ಬುದ್ಧಿಶಕ್ತಿ, ಕಠಿಣ ಶ್ರಮವನ್ನು ನಾನು ಮೆಚ್ಚಿಕೊಂಡಿದ್ದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೇಳಿಕೊಂಡಿದ್ದಾರೆ.

  • ಹೆಚ್‍ಡಿಡಿ ಕುಟುಂಬದ ಕಣ್ಣೀರಿಗೆ ಸಾರಾ ಮಹೇಶ್ ಕಾರಣ: ಎಚ್. ವಿಶ್ವನಾಥ್

    ಹೆಚ್‍ಡಿಡಿ ಕುಟುಂಬದ ಕಣ್ಣೀರಿಗೆ ಸಾರಾ ಮಹೇಶ್ ಕಾರಣ: ಎಚ್. ವಿಶ್ವನಾಥ್

    ಮೈಸೂರು: ಹೆಚ್. ಡಿ ದೇವೇಗೌಡರ ಕುಟುಂಬದ ಕಣ್ಣೀರಿಗೆ ಮಾಜಿ ಸಚಿವ ಸಾರಾ ಮಹೇಶ್ ಕಾರಣ ಎಂದು ಅನರ್ಹ ಜೆಡಿಎಸ್ ಶಾಸಕ ಎಚ್ ವಿಶ್ವನಾಥ್ ಹೇಳಿದ್ದಾರೆ.

    ಇಂದು ಕೆ.ಆರ್. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ದೇವೇಗೌಡರ ಮನೆಯವರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದರೆ ಎಂದರೆ ಅದಕ್ಕೆ ಸಾರಾ ಮಹೇಶ್ ಮತ್ತು ಆತನ ಕೆಲ ಸ್ನೇಹಿತರು ಕಾರಣ. ದೇವೇಗೌಡರ ಮನೆಗೆ ಇವತ್ತು ಅನ್ಯಾಯವಾಗಿದ್ದರೆ ಅದಕ್ಕೂ ಸಾರಾ ಮಹೇಶ್ ಕಾರಣ. ದೇವೇಗೌಡರ ಕಣ್ಣೀರಿಗೂ ಅವರೇ ಕಾರಣ ಎಂದು ಕಿಡಿಕಾರಿದರು.

    ಸಾರಾ ಮಹೇಶ್ ದುರಹಂಕಾರದಿಂದ ಒಕ್ಕಲಿಗ ಶಾಸಕರೇ ಜೆಡಿಎಸ್‍ನಿಂದ ದೂರವಾದರು. ಇವತ್ತಿನ ದೇವೇಗೌಡರ ಈ ಸ್ಥಿತಿಗೆ ನಾವಲ್ಲ ಕಾರಣ ನೀವು. ಮಹೇಶ್ ಕ್ಷೇತ್ರದಲ್ಲಿ ಕೆಲವರಿಗೆ 500 ರೂಪಾಯಿ, 1 ಸಾವಿರ ರೂಪಾಯಿ ಕೊಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಆದರೆ ನನ್ನದ್ದು ಅಭಿವೃದ್ಧಿ ರಾಜಕಾರಣ. ಮೊದಲು ಸುಳ್ಳು ಹೇಳುವುದನ್ನು ನಿಲ್ಲಿಸಿ. ಕೆ.ಆರ್. ನಗರದ ಅಭಿವೃದ್ಧಿಗೆ ನಾನು ಮಾಡಿದಷ್ಟು ಕೆಲಸ ನೀವು ಮಾಡಿಲ್ಲ ಎಂದು ವಾಗ್ದಾಳಿ ಮಾಡಿದರು.

    ಈ ವೇಳೆ ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಗ್ಗೆ ಮಾತನಾಡಿದ ವಿಶ್ವನಾಥ್, ಕಾನೂನುಗಿಂತ ಯಾರು ದೊಡ್ಡವರಲ್ಲ. ಡಿಕೆಶಿ ಇದೆಲ್ಲದರಿಂದ ಬಹು ಬೇಗ ಮುಕ್ತವಾಗಿ ಹೊರ ಬರಲಿ. ಹೊರ ಬಂದು ರಾಜಕಾರಣ ಮಾಡಬೇಕು ಎಂದು ಹಾರೈಸಿದರು.