Tag: HD Kuamaraswamy

  • ಗ್ಯಾರಂಟಿಗಳ ಹೆಸ್ರಲ್ಲಿ ಹಳ್ಳಿಯ ಮುಗ್ಧ ಹೆಣ್ಮಕ್ಳನ್ನು ದಾರಿ ತಪ್ಪಿಸ್ತಿದ್ದಾರೆ ಅಂದಿದ್ದೇನೆ: HDK ಸ್ಪಷ್ಟನೆ

    ಗ್ಯಾರಂಟಿಗಳ ಹೆಸ್ರಲ್ಲಿ ಹಳ್ಳಿಯ ಮುಗ್ಧ ಹೆಣ್ಮಕ್ಳನ್ನು ದಾರಿ ತಪ್ಪಿಸ್ತಿದ್ದಾರೆ ಅಂದಿದ್ದೇನೆ: HDK ಸ್ಪಷ್ಟನೆ

    ಬೆಂಗಳೂರು: ಮಹಿಳೆಯರಿಗೆ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಗ್ಯಾರಂಟಿಗಳ (Congress  Guarantee) ಬಗ್ಗೆ ಎಚ್ಚರದಿಂದಿರಿ ಅಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸ್ಪಷ್ಟನೆ ನೀಡಿದ್ದಾರೆ.

    ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಹಿಳೆಯರ ಬಗ್ಗೆ ಹೇಳಿಕೆಗೆ ಸ್ಪಷ್ಟನೆ ಕೊಟ್ಟ ಅವರು, ಕಾಂಗ್ರೆಸ್‍ನವರಿಗೆ ಇದು ಬಿಟ್ಟು ಚರ್ಚೆ ಮಾಡಲು ಅವರಲ್ಲಿ ಬೇರೆ ವಿಚಾರ ಇಲ್ಲ. ಗ್ಯಾರಂಟಿಗಳ ಹೆಸರಲ್ಲಿ ಹಳ್ಳಿಯ ಮುಗ್ಧ ಹೆಣ್ಣುಮಕ್ಕಳನ್ನ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದೇನೆ. ನಿಮಗೆ ಕೈ ಎತ್ತಿ ಕೊಡುವ ಶಕ್ತಿ ಕೊಡದೆ ಭಿಕ್ಷೆ ಬೇಡುವ ಪರಿಸ್ಥಿತಿಯಲ್ಲಿ ಇಟ್ಟಿದ್ದಾರೆ. ಇದರ ಬಗ್ಗೆ ಎಚ್ಚರದಿಂದ ದಾರಿತಪ್ಪದೆ ಗಮನಿಸಬೇಕೆಂದು ಹೇಳಿದ್ದೇನೆ ಎಂದು ಸ್ಪಷ್ಟನೆ ಕೊಟ್ಟರು.

    ದಾರಿ ತಪ್ಪಿದ್ದಾರೆ ಎಂದು ಮಹಿಳೆಯರನ್ನ ಅವಮಾನ ಮಾಡಿದ್ದೇನಾ ನಾನು?. ಮಹಿಳೆಯರ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಗ್ಯಾರಂಟಿಗಳ ಬಗ್ಗೆ ಎಚ್ಚರದಿಂದಿರಿ ಎಂದು ಹೇಳಿದ್ದೇನೆ. ನಾನು ಸಾರ್ವಜನಿಕ ಜೀವನಕ್ಕೆ ಬರುವುದಕ್ಕಿಂತ ಮುಂಚೆಯಿಂದಲೂ ಕಷ್ಟ ಎಂದು ಬರುವ ಜನರಿಗೆ ಆಸರೆಯಾಗಿದ್ದೇನೆ. ಕೋಟ್ಯಂತರ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದೇನೆ. ತಾಯಂದಿರು ಸಾರಾಯಿ ನಿಷೇಧ ಮಾಡುವಂತೆ ಮನವಿ ಮಾಡಿದಾಗ ಅವರಿಗೆ ಗೌರವ ಕೊಟ್ಟು ಸಾರಾಯಿ ನಿಷೇಧ ಮಾಡಿದ್ದೇನೆ. ಇದು ನಾನು ಮಹಿಳೆಯರಿಗೆ ಕೊಟ್ಟ ಗೌರವ ಎಂದರು. ಇದನ್ನೂ ಓದಿ: ಮೋದಿ ಸಮಾವೇಶಕ್ಕೆ ಬರಲ್ಲ: ಬಿಎಸ್‌ವೈ ಮನವಿ ನಿರಾಕರಿಸಿದ ಸಂಸದ ಶ್ರೀನಿವಾಸ್ ಪ್ರಸಾದ್

    ಕಾಂಗ್ರೆಸ್‍ನವರಿಂದ ನಾನು ಮಹಿಳೆಯರಿಗೆ ಗೌರವ ಕೊಡುವುದನ್ನ ಕಲಿಯಬೇಕಿಲ್ಲ. ಇವರಾರಿಗೂ ನಾನು ಉತ್ತರ ಕೊಡಬೇಕಿಲ್ಲ. ನಿನ್ನೆ ನಾನು ಮಹಿಳೆಯರಿಗೆ ಅಗೌರವವಾಗಿ ಮಾತನಾಡಿಲ್ಲ. ನನ್ನನ್ನ ರಾಜಕೀಯವಾಗಿ ಈ ಮಟ್ಟದಲ್ಲಿ ಶಕ್ತಿ ತುಂಬಿದ್ರೆ, ನಾಡಿನ ಸಾವಿರಾರು ಕುಟುಂಬದ ಹೆಣ್ಣುಮಕ್ಕಳು ನನಗೆ ಶಕ್ತಿ ತುಂಬಿದ್ದಾರೆ. ಕಾಂಗ್ರೆಸ್‍ನವರು ನನ್ನ ಮೇಲೆ ಯಾವುದಾದರೂ ರೀತಿಯಲ್ಲಿ ತಪ್ಪು ಹೊರಿಸಲು ಈ ರೀತಿ ಮಾತಾಡ್ತಿದ್ದಾರೆ. ಇದರಿಂದ ಅವರು ಸಫಲತೆ ಕಾಣಲ್ಲ. ಮೊನ್ನೆ ಆದಿಚುಂಚನಗಿರಿ ಕ್ಷೇತ್ರಕ್ಕೆ ಹೋದಾಗಲೂ ಇದೇ ರೀತಿ ಬಿಂಬಿಸಲು ಹೋಗಿದ್ರು. ಆದರೆ ಅದರಲ್ಲಿ ಅವರು ಸಫಲವಾಗಲ್ಲ ಎಂದಿದ್ದಾರೆ.

  • ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತ: ಚಂಪಾ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತ: ಚಂಪಾ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    ಬೆಂಗಳೂರು: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರು ಇಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಚಂಪಾ ಎಂದೇ ಖ್ಯಾತಿ ಪಡೆದಿರುವ ಚಂದ್ರಶೇಖರ್ ಪಾಟೀಲ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರಿಗೆ ರಾಜಕೀಯ ರಂಗದ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.

    ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ಧ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತರಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲ್ ನಿಧನದಿಂದ ದುಃಖಿತನಾಗಿದ್ದೇನೆ. ಇವರ ಕುಟುಂಬ ಹಾಗೂ ಅಭಿಮಾನಿಗಳ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಚಂಪಾ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

    ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ, ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರ್‌ಸ್ವಾಮಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಚಂಪಾ ನಿಧನ ನಾಡಿಗೆ ತುಂಬಲಾರದ ನಷ್ಟ: ನಾಡೋಜ ಡಾ. ಮಹೇಶ್‌ ಜೋಶಿ

    ಖ್ಯಾತ ಕವಿ, ಚಂಪಾ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ್‌ರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಸಂಘಟನಕಾರರಾಗಿ, ಹೋರಾಟಗಾರರಾಗಿ, ನಾಡಿನ ಸಾಮಾಜಿಕ, ಸಾಂಸ್ಕೃತಿಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದ ಚಂಪಾ ಅವರ ನಿಧನದಿಂದ ನಮ್ಮ ನಾಡು ಹಿರಿಯ ಚೇತನವೊಂದನ್ನು ಕಳೆದುಕೊಂಡಿದೆ. ಶ್ರೀಯುತರ ಆತ್ಮಕ್ಕೆ ಸದ್ಗತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮೂಲಕ ಸಂತಾಪವನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ಚಂಪಾ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ: ಸಿಎಂ ಸಂತಾಪ

    ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊ. ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ. ಚಂಪಾ ಎಂದೇ ಪ್ರಸಿದ್ಧರಾದ, ಚಂದ್ರಶೇಖರ್ ಪಾಟೀಲ್ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಸೇವೆ ಅನುಪಮವಾದುದು. ಗೋಕಾಕ್ ಚಳುವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ರೂಪಿಸಿದ್ದಲ್ಲದೆ ಅವುಗಳಲ್ಲಿ ಮುಂಚೂಣಿಯಾಗಿ ನಿಂತವರು, ಎಂದು ಸಚಿವರು, ಸ್ಮರಿಸಿದ್ದಾರೆ. ಮೃತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.

    ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು ಮಾತನಾಡಿ, ಚಂಪಾ ಅವರ ಅಕಾಲಿಕ ಅಗಲಿಕೆಯಿಂದ ಮನಸ್ಸಿಗೆ ತೀವ್ರ ದುಃಖವಾಗಿದೆ. ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

  • ಪ್ರಜಾಪ್ರಭುತ್ವ ಉಳಿಸಿ ಹೋರಾಟ ನಡೆಸ್ತಿರೋ ಕಾಂಗ್ರೆಸ್‍ಗೆ ನೈತಿಕತೆ ಇದೆಯಾ?- ಹೆಚ್‍ಡಿಕೆ

    ಪ್ರಜಾಪ್ರಭುತ್ವ ಉಳಿಸಿ ಹೋರಾಟ ನಡೆಸ್ತಿರೋ ಕಾಂಗ್ರೆಸ್‍ಗೆ ನೈತಿಕತೆ ಇದೆಯಾ?- ಹೆಚ್‍ಡಿಕೆ

    – ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ ‘ಅಪರಾಧಿಗಳೇ’?
    – ಕುದುರೆ ವ್ಯಾಪಾರ ಪದದ ಸೃಷ್ಟಕರ್ತರರು ಕಾಂಗ್ರೆಸ್

    ಬೆಂಗಳೂರು: ಬಿಜೆಪಿ ವಿರುದ್ಧ ಕಾಂಗ್ರೆಸ್ ನಡೆಸುತ್ತಿರೋ ‘ಪ್ರಜಾಪ್ರಭುತ್ವ ಉಳಿಸಿ’ ಹೋರಾಟವನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಸಾಲು ಸಾಲು ಟ್ವೀಟ್ ಮೂಲಕ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ “ಪ್ರಜಾಪ್ರಭುತ್ವ ಉಳಿಸಿ” ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ ಬಿಎಸ್‍ಪಿಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ? ಸರ್ಕಾರ ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಟ್ಟಾರು. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

    ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್ ಹಿಂದೆ ಜೆಡಿಎಸ್ ಅನ್ನು ಒಡೆದಿಲ್ಲವೇ? ಒಡೆಯಲು ಪ್ರಯತ್ನಗಳನ್ನು ಮಾಡಲಿಲ್ಲವೇ? ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂಟು ಮಂದಿಯನ್ನು ಕೇವಲ ರಾಜ್ಯಸಭೆ ಚುನಾವಣೆಗಾಗಿ ಖರೀದಿಸಲಿಲ್ಲವೇ? ಇದು ಪ್ರಜಾಸತ್ತಾತ್ಮಕವೇ? ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ ‘ಅಪರಾಧಿ’ಗಳೇ. ಎಸ್.ಎಂ ಕೃಷ್ಣ ಅವರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಮ್ಮ ಶಾಸಕರನ್ನು ಖರೀದಿ ಮಾಡಿರಲಿಲ್ಲವೇ? 2018ರ ವಿಧಾನಸಭೆ ಚುನಾವಣೆ ನಂತರ ನಮ್ಮ ಶಾಸಕರನ್ನು ಖರೀದಿಸಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಹೊಂಚು ಹಾಕಿರಲಿಲ್ಲವೇ? ಕಾಂಗ್ರೆಸ್ ಬಳಿ ಈ ಪ್ರಶ್ನೆಗಳಿಗೆ ಉತ್ತರಿಸಲು ನೈತಿಕತೆ ಇದೆಯೇ?

    2004ರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಾಹರದಲ್ಲಿ ಕಾಂಗ್ರೆಸ್ ನಿಪುಣ. ‘ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್ ನಿಂದ. ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ. ಆದ್ದರಿಂದಲೇ ಈ ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹಾಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ 2 ಅವಧಿಗೆ ಚುನಾವಣೆ ನಿರ್ಬಂಧಿಸುವ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ. ಇದರತ್ತ ಚರ್ಚೆಗಳಾದರೂ ನಡೆಯಲಿ. ಪ್ರಜಾಪ್ರಭುತ್ವ ಉಳಿಯಲಿ.

    ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೇಳುತ್ತಿದ್ದರು. ಸ್ವಾಮಿ, ಜೀವ ಅಮೂಲ್ಯ. ನೀವು ಪ್ರಾಣ ಕೊಡುವುದು ಬೇಡ. ಕಾಂಗ್ರೆಸ್ ನಡೆದು ಬಂದ ದಾರಿಯನ್ನು ಒಂದು ಬಾರಿ ನೆನಪಿಸಿಕೊಳ್ಳಿ. ನಂತರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ. ಪ್ರಜಾಪ್ರಭುತ್ವ ತಂತಾನೆ ಉಳಿಯುತ್ತದೆ.

  • ನಮಗೆ ಈ ಸಂಬಂಧ ಇಷ್ಟವಿಲ್ಲ ಅಂದ್ರಂತೆ ಅನಿತಾಕುಮಾರಸ್ವಾಮಿ!

    ನಮಗೆ ಈ ಸಂಬಂಧ ಇಷ್ಟವಿಲ್ಲ ಅಂದ್ರಂತೆ ಅನಿತಾಕುಮಾರಸ್ವಾಮಿ!

    ಬೆಂಗಳೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ತಮ್ಮ ಪುತ್ರ ನಿಖಿಲ್ ಗೆ ಆಂಧ್ರ ಮೂಲದ ಹುಡುಗಿಯೊಂದಿಗೆ ವಿವಾಹ ಮಾಡಲು ಮಾತುಕತೆ ನಡೆದಿದೆ ಎಂಬ ಸುದ್ದಿಗೆ ಇಂದು ಮತ್ತೊಂದು ಟ್ವಿಸ್ಟ್ ದೊರೆತಿದೆ.

    ಶುಕ್ರವಾರ ಕುಮಾರಸ್ವಾಮಿ ದಂಪತಿ ಆಂಧ್ರದ ಉದ್ಯಮಿ ಬೋಡಪುಡಿ ಶಿವ ಕೋಟೇಶ್ವರ್ ರಾವ್ ಮನೆಗೆ ಹೋಗಿದ್ದರು. ವಿಜಯವಾಡದಲ್ಲಿರುವ ಉದ್ಯಮಿಯ ಮನೆಗೆ ಹೋಗಿ ದಂಪತಿ ಮದ್ವೆ ಮಾತುಕತೆ ನಡೆಸಿದ್ದರು. ಆದ್ರೆ ಈ ಸಂಬಂಧ ಅನಿತಾ ಕುಮಾರಸ್ವಾಮಿಗೆ ಇಷ್ಟನೇ ಇರಲಿಲ್ಲ. ಆದ್ರೆ ಮನೆಗೆ ಬರ್ತಿವಿ ಅಂತ ಕುಮಾರಸ್ವಾಮಿ ಮೊದಲೇ ಹುಡುಗಿ ಮನೆಯವರಿಗೆ ಮಾತು ಕೊಟ್ಟಿದ್ದರು. ಕೊಟ್ಟ ಮಾತು ಉಳಿಸಿಕೊಳ್ಳಲು ಅನಿವಾರ್ಯವಾಗಿ ಕುಮಾರಸ್ವಾಮಿ ದಂಪತಿ ಹುಡುಗಿ ಮನೆಗೆ ಹೋಗಿದ್ದರು. ಮಾತುಕತೆ ವೇಳೆ ಅನಿತಾ ಕುಮಾರಸ್ವಾಮಿ ಅವರು `ನಮಗೆ ಈ ಸಂಬಂಧ ಇಷ್ಟ ಇಲ್ಲ’ ಅಂತ ಹುಡುಗಿ ಮನೆಯವರಿಗೆ ತಿಳಿಸಿದ್ದಾರೆ ಎಂಬುದಾಗಿ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಇತ್ತ ಮದ್ವೆ ಮಾತುಕತೆ ಸುದ್ದಿಯ ಬಗ್ಗೆ ಪುತ್ರ ನಿಖಿಲ್ ತಾಯಿ ಬಳಿ ವಿಚಾರಿಸಿದ್ದಾರೆ. ಈ ವೇಳೆ `ಕರ್ನಾಟಕ ಬಿಟ್ಟು ಬೇರೆ ಕಡೆಯಿಂದ ಹೆಣ್ಣು ತರಲ್ಲ, ತಲೆಕೆಡಿಸಿಕೊಳ್ಳಬೇಡ’ ಅಂತ ಅನಿತಾ ಅವರು ತಮ್ಮ ಪುತ್ರನಿಗೆ ಸಮಾಧಾನಪಡಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಆಂಧ್ರ ಅಲ್ಲ, ಕನ್ನಡದ ಹುಡುಗಿಯನ್ನೇ ವರಿಸಲಿದ್ದಾರೆ ನಿಖಿಲ್

    ನಿನ್ನೆ ನಿಖಿಲ್ ಅವರಿಗೆ ಹುಡುಗಿ ನೋಡುವುದಕ್ಕಾಗಿ ಸಿಎಂ ದಂಪತಿ ಆಂಧ್ರಕ್ಕೆ ತೆರಳಿದ್ದರು ಎಂಬ ಸುದ್ದಿಯ ಬೆನ್ನಲ್ಲೇ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ನಿಖಿಲ್ ಅವರ ಮ್ಯಾನೇಜರ್, ಈ ಕುರಿತು ಶೀಘ್ರವೇ ಅಧಿಕೃತವಾಗಿ ಕುಟುಂಬ ಸದಸ್ಯರು ಮಾಹಿತಿ ನೀಡಲಿದ್ದಾರೆ. ಆದರೆ ನಿಖಿಲ್ ಅವರು ಆಂಧ್ರ ಹುಡುಗಿಯನ್ನು ಮದುವೆಯಾಗಲಿದ್ದಾರೆ ಎನ್ನುವುದು ಸುಳ್ಳು. ಅವರು ಕನ್ನಡ ಹುಡುಗಿಯನ್ನೇ ಮದುವೆಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.

    ಈ ವೇಳೆ ಆಂಧ್ರ ಪ್ರದೇಶದ ಖ್ಯಾತ ಉದ್ಯಮಿ ಬೋಡೆಪುಡಿ ಶಿವ ಕೋಟೇಶ್ವರ ರಾವ್ ಕೂಡ ಪ್ರತಿಕ್ರಿಯೆ ನೀಡಿದ್ದು, ಸಿಎಂ ಕುಮಾರಸ್ವಾಮಿ ಅವರು ನಾವು ಸ್ನೇಹಿತರಾಗಿದ್ದು, ಸಹಜವಾಗಿ ಇಂದು ಮನೆಗೆ ಭೇಟಿ ನೀಡಿದ್ದಾರೆ. ನಿಖಿಲ್‍ರೊಂದಿಗೆ ಮದುವೆಯ ಸುದ್ದಿ ಬಗ್ಗೆ ಈ ವೇಳೆ ಚರ್ಚೆ ನಡೆದಿಲ್ಲ. ಸ್ನೇಹಿತರಾದ ಕಾರಣಕ್ಕೆ ಮಾತ್ರ ಭೇಟಿ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=yCWzT5DwKiM

    https://www.youtube.com/watch?v=gRdK_wrERMI