Tag: hd ranganath

  • ಹೇಮಾವತಿ ಕೆನಾಲ್ ಕದನ | ಮಂತ್ರಿ ಮಗನಿಗೆ ಬೆದರಿಕೆ ಹಾಕೋಕಾಗುತ್ತಾ? – ರಾಜಣ್ಣ ಪುತ್ರನಿಗೆ ಕುಣಿಗಲ್‌ ರಂಗನಾಥ್‌ ತಿರುಗೇಟು

    ಹೇಮಾವತಿ ಕೆನಾಲ್ ಕದನ | ಮಂತ್ರಿ ಮಗನಿಗೆ ಬೆದರಿಕೆ ಹಾಕೋಕಾಗುತ್ತಾ? – ರಾಜಣ್ಣ ಪುತ್ರನಿಗೆ ಕುಣಿಗಲ್‌ ರಂಗನಾಥ್‌ ತಿರುಗೇಟು

    – ಕುಣಿಗಲ್ ರೈತರಿಗೆ ಅನ್ಯಾಯ ಮಾಡಬೇಡಿ ಎಂದ ಶಾಸಕ
    – ವಿಪಕ್ಷದವರಿಗೆ ನಾವು ಆಹಾರ ಆಗಬಾರದು ಎಂದು ಕಿವಿಮಾತು

    ಬೆಂಗಳೂರು: ಕುಣಿಗಲ್‌ ನೀರಿನ ಸಮಸ್ಯೆ ಪರಿಹರಿಸಲು ಡಿಕೆ ಶಿವಕುಮಾರ್‌ (DK Shivakumar) ಅವರು ಕ್ಯಾಬಿನೆಟ್‌ನಲ್ಲಿ ನಮಗೆ ಸಹಾಯ ಮಾಡೋದಾಗಿ ಹೇಳಿದ್ದಾರೆ. ಇದಕ್ಕೆ ರಾಜೇಂದ್ರ ರಾಜಣ್ಣ ಅವರು ಯಾಕೆ ಮಾತಾಡ್ತಾರೆ. ನಾನು ಫೋನ್‌ ಮಾಡಿ ಬೆದರಿಕೆ ಹಾಕ್ತೀನಿ ಅಂತಾರೆ, ಒಬ್ಬ ಮಂತ್ರಿ ಮಗನಿಗೆ ಬೆದರಿಕೆ ಹಾಕೋಕೆ ಆಗುತ್ತಾ? ನಾನು ಸಾಮಾನ್ಯ ರೈತನ ಮಗ ಅಂತ ಕುಣಿಗಲ್‌ ಶಾಸಕ ರಂಗನಾಥ್‌ (HD Ranganath) ಅವರು ಸಚಿವ ರಾಜಣ್ಣ ಪುತ್ರನ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

    Rajendra DK Shivakumar

    ಹೇಮಾವತಿ ಕೆನಾಲ್‌ (Hemavathi canal) ವಿಚಾರದಲ್ಲಿ ಕುಣಿಗಲ್ ಶಾಸಕ ರಂಗನಾಥ್ ಬೆದರಿಕೆ ಹಾಕ್ತಿದ್ದಾರೆ ಎಂಬ ರಾಜಣ್ಣ ಪುತ್ರ ರಾಜೇಂದ್ರ (Rajendra Rajanna) ಹೇಳಿಕೆ ವಿಚಾರ ಕುರಿತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಇದನ್ನೂ ಓದಿ: ಹೇಮಾವತಿ ಕೆನಾಲ್ ಕದನ – ಡಿಕೆಶಿ ಸಂಬಂಧಿ ನಂಗೆ ಫೋನ್ ಮಾಡಿ ಧಮ್ಕಿ ಹಾಕಿದ್ದಾರೆ: ರಾಜೇಂದ್ರ ರಾಜಣ್ಣ

    ಫೋನ್‌ನಲ್ಲಿ ಮಾತಾಡಿದ್ರೆ ಅದು ಬೆದರಿಕೆ ಹೇಗೆ ಆಗಬೇಕು? ನಮ್ಮ ಸರ್ಕಾರ ಬಂದಿದೆ. ಜನರ ಪರ ನಾವು ಕೆಲಸ ಮಾಡೋಣ. ಶಿರಸಾವಹಿಸಿ ಕೆಲಸ ಮಾಡೋಣ. ಸಹಕಾರ ಸಂಘದಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರೇ ಅನೇಕ ವರ್ಷಗಳಿಂದ ಇದ್ದಾರೆ. ನಾನು ಕಾಂಗ್ರೆಸ್ ಬೆಂಬಲಿಗರನ್ನ ತರೋಕೆ ಪ್ರಯತ್ನ ಮಾಡ್ತಿದ್ದೇನೆ. ಹೀಗಾಗಿ ಸಹಕಾರಿ ಸಂಘದಿಂದ ಸಾಲ ಕೊಡಿ ಅಂತ ಸದನದಲ್ಲಿ ಕೇಳಿದ್ದೇನೆ. ರಾಜಣ್ಣ ಜೊತೆ ನನಗೆ ವೈಮನಸ್ಯ ಇಲ್ಲ. ಅವರ ಜೊತೆ ಸಲುಗೆಯಿಂದ ಬಂದಿದ್ದೇನೆ. ಯಾಕೆ ನನ್ನ ಮೇಲೆ ಭಿನ್ನಾಭಿಪ್ರಾಯ ಮಾಡ್ತಿದ್ದಾರೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

    ನಾನು ಯಾವ ಮಂತ್ರಿ ಮಗ ಅಲ್ಲ. ಬೆದರಿಕೆ ಹಾಕೋ ಗುಣ ಇಲ್ಲ. ಡಿಕೆ ಶಿವಕುಮಾರ್ ಅವರು ಶಾಸಕನಾಗಿ ಹೇಗೆ ನಡೆದುಕೊಳ್ಳಬೇಕು ಅಂತ ಹೇಳಿ ಕೊಟ್ಟಿದ್ದಾರೆ. ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡ್ತಿದ್ದೇನೆ. ನಾನು ಯಾರಿಗೂ ಬೆದರಿಕೆ ಹಾಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್

    ಕುಣಿಗಲ್‌ಗೆ ಕೊರಟಗೆರೆಯಿಂದ ನೀರು ತೆಗೆದುಕೊಂಡು ಹೋಗ್ತಿದ್ದಾರೆ, ಮಧುಗಿರಿಗೆ ಕೊಡ್ತಿಲ್ಲ ಅಂತ ರಾಜೇಂದ್ರ ರಾಜಣ್ಣ ಅರೋಪ ಮಾಡಿದ್ದಾರೆ. ನನ್ನನ್ನ ಜನ ಎರಡು ಬಾರಿ ಗೆಲ್ಲಿಸಿದ್ದಾರೆ ಅವರಿಗೆ ನೀರು ಕೊಡಬೇಕು. ಕುಣಿಗಲ್‌ಗೆ 90% ನೀರು ಹರಿದಿಲ್ಲ. ಕುಣಿಗಲ್‌ಗೆ ಹಾಸನದಿಂದ ನೀರು ಬೇಕು, ನೀರು ತರಲು ನಾನು ಹೋರಾಟ ಮಾಡ್ತೀನಿ ಅಂದಿದ್ದಾರೆ. ಇದನ್ನೂ ಓದಿ: ರಾಜಣ್ಣರನ್ನ `ಹನಿ’ ಬಲೆಗೆ ಬೀಳಿಸಲು ಲೇಡಿ ಸೇರಿ ಮೂರ್ನಾಲ್ಕು ಜನ ಪ್ರಯತ್ನಿಸಿದ್ದಾರೆ – ಪುತ್ರ ರಾಜೇಂದ್ರ

    ಅಲ್ಲದೇ ರಾಜಣ್ಣ ಬಗ್ಗೆ ನಾನೇನು ಹೇಳೊಲ್ಲ. ರಾಜಣ್ಣ ಹಿರಿಯರು. ಅವರ ಬಗ್ಗೆ ನಾನು ಹೇಳೊಲ್ಲ. ನನ್ನ ತಾಲೂಕಿನ ರೈತರಿಗೆ ಸಾಲ ಕೊಡಿಸೋದು ತಪ್ಪಾ? ಯಾಕೆ ರಾಜಣ್ಣ ಹೀಗೆ ಹೇಳಿಕೆ ಕೊಡ್ತಾರೆ ಗೊತ್ತಿಲ್ಲ. ಯಾರು ಎಷ್ಟೇ ಪ್ರವೋಕ್ ಮಾಡಿದ್ರು ನಾನು ಪ್ರವೋಕ್ ಆಗೊಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾಕೆ ಗೊಂದಲದ ಹೇಳಿಕೆ ಕೊಡ್ತೀರಾ? ಸಿಎಂ, ಡಿಸಿಎಂ ಅವರು ಉತ್ತಮ ಕೆಲಸ ಮಾಡ್ತಾರೆ ಅಂತ ಜನರು ನಿರೀಕ್ಷೆ ಇಟ್ಟಿದ್ದಾರೆ. ಜನರಿಗೆ ನಮ್ಮ ಸರ್ಕಾರದ ಬಗ್ಗೆ ನಿರೀಕ್ಷೆ ಇದೆ, ಅದನ್ನ ಮಾಡಬೇಕು. ಬೀದಿಯಲ್ಲಿ ಮಾತಾಡೋದಕ್ಕಿಂತ ಪಕ್ಷದ ವೇದಿಕೆಯಲ್ಲಿ ಮಾತಾಡಬೇಕು. ಮದುಗಿರಿಯವರಿಗೆ ನೀರು ತರೋಕೆ ನಾವು ಪ್ರಯತ್ನ ಮಾಡ್ತೀನಿ. ನಾನೇ ನಿಂತು ಮಧುಗಿರಿ ರೈತರಿಗೆ ನೀರು ಕೊಡ್ತೀನಿ. ಕುಣಿಗಲ್ ರೈತರಿಗೆ ಅನ್ಯಾಯ ಮಾಡಬೇಡಿ ಎಂದು ಹೇಳಿದ್ದಾರೆ.

    ಮುಂದುವರಿದು.. ವಿರೋಧ ಪಕ್ಷದವರಿಗೆ ನಾವು ಆಹಾರ ಆಗಬಾರದು. ನಮ್ಮಲ್ಲಿ ಶಿಸ್ತು ಬರಬೇಕು. ಇಲ್ಲದೇ ಹೋದ್ರೆ ಜನ ಆಡಿಕೊಳ್ತಾರೆ. ಜನರ ಪರ ನಾವು ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದ್ದಾರೆ.

  • ಪಬ್ಲಿಕ್ ಟಿವಿ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

    ಪಬ್ಲಿಕ್ ಟಿವಿ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

    ಬೆಂಗಳೂರು: ದೇಶದೆಲ್ಲೆಡೆ ಇಂದು 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಅಂತೆಯೇ ಇಂದು ಪಬ್ಲಿಕ್ ಟಿವಿ ಕಚೇರಿಯಲ್ಲಿಯೂ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.

    ಕಚೇರಿಯ ಮುಂಭಾಗದಲ್ಲಿ ಹೌಸ್ ಕೀಪಿಂಗ್ ವಿಭಾಗದ ಮುಖ್ಯಸ್ಥ ಕುಮಾರ್ ಹಾಗೂ ಲಕ್ಷ್ಮಮ್ಮ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯಸ್ಥ ಹೆಚ್. ಆರ್ ರಂಗನಾಥ್, ಸಿಇಓ ಅರುಣ್ ಕುಮಾರ್, ಸಿಓಓ ಹರೀಶ್ ಕುಮಾರ್ ಹಾಗೂ ಪಬ್ಲಿಕ್ ಟಿವಿಯ ಸಿಬ್ಬಂದಿ ಉಪಸ್ಥಿತರಿದ್ದರು.

    ಇದೇ ವೇಳೆ ಎಲ್ಲರಿಗೂ ಸ್ವಾತಂತ್ರ್ಯದಿನದ ಶುಭಾಶಯಗಳನ್ನು ಸಂಸ್ಥೆಯ ಮುಖ್ಯಸ್ಥರು ತಿಳಿಸಿದರು. ಇದನ್ನೂ ಓದಿ: ಕೇಂದ್ರ, ರಾಜ್ಯ ಸರ್ಕಾರ ಯಾವುದೇ ಆಡಳಿತವಾಗಲಿ ಕಾಲಕ್ಕೆ ತಕ್ಕಂತೆ ಕೆಲಸ ಮಾಡಬೇಕು: ಮೋದಿ

    Live Tv

  • ಪಬ್ಲಿಕ್ ಟಿವಿಯ ಚಾಲೆಂಜ್ ಸ್ವೀಕರಿಸಿದ ಯಾದಗಿರಿ ವೈದ್ಯ, ಯುವಕ

    ಪಬ್ಲಿಕ್ ಟಿವಿಯ ಚಾಲೆಂಜ್ ಸ್ವೀಕರಿಸಿದ ಯಾದಗಿರಿ ವೈದ್ಯ, ಯುವಕ

    – ಒಂದು ತಿಂಗಳು 200 ನಿರ್ಗತಿಕರಿಗೆ ಉಚಿತ ಊಟ

    ಯಾದಗಿರಿ: ಕೊರೊನಾ ವೈರಸ್ ಭೀತಿ ಹಿನ್ನೆಲೆ ದೇಶಾದ್ಯಂತ ಕರ್ಫ್ಯೂ ಹೇರಲಾಗಿದೆ. ಈ ಸಮಯದಲ್ಲಿ ನಿರ್ಗತಿಕರಿಗೆ ಮತ್ತು ಬಡ ಕೂಲಿ ಕಾರ್ಮಿಕರಿಗೆ ಒಂದು ಹೊತ್ತು ಊಟ ಸಹ ಸಿಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಸ್ಥಿತಿವಂತರು ತಮ್ಮ ಕೈಲಾದ ಸಹಾಯವನ್ನು ಮಾಡುವಂತೆ ಮತ್ತು ಈ ಕೆಲಸವನ್ನು ಚಾಲೆಂಜ್ ಆಗಿ ಸ್ವೀಕರಿಸುವಂತೆ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್ ರಂಗನಾಥ್ ರಾಜ್ಯದ ಜನತೆಯಲ್ಲಿ ಮನವಿಯನ್ನು ಮಾಡಿದ್ದರು.

    ಪಬ್ಲಿಕ್ ಟಿವಿಯ ಮನವಿಗೆ ಸ್ಪಂದಿಸಿದ ಯಾದಗಿರಿ ವೈದ್ಯ ಮತ್ತು ಯುವಕನೋರ್ವ ಚಾಲೆಂಜ್ ಸ್ವೀಕರಿಸಿ, ಭಾರತ್ ಲಾಕ್ ಡೌನ್ ಇರುವಷ್ಟು ದಿನ 200 ಮಂದಿಗೆ ಒಂದು ಹೊತ್ತು ಊಟ ನೀಡಲು ಮುಂದಾಗಿದ್ದಾರೆ. ಯಾದಗಿರಿ ಖಾಸಗಿ ವೈದ್ಯ ವಿರೇಶ್ ಜಾಕಾ ಮತ್ತು ಸ್ನೇಹಿತ ಅನಿಲ್ ಜೊತೆಗೂಡಿ ನಗರದ ಕುಷ್ಠರೋಗಳ ಕಾಲೋನಿಯ ನಿರ್ಗತಿಕರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ- ಹೆಚ್.ಆರ್ ರಂಗನಾಥ್ ಚಾಲೆಂಜ್ ಸ್ವೀಕರಿಸಿದ ಶಾಸಕ ರಘುಪತಿ ಭಟ್

    ಒಂದು ತಿಂಗಳು 200 ಜನಕ್ಕೆ ಒಂದು ಹೊತ್ತು ಆಹಾರ ಪೂರೈಕೆ ಮಾಡಲು ಈ ಇಬ್ಬರು ನಿರ್ಧರಿಸಿದ್ದಾರೆ. ದಿನಕ್ಕೆ 50 ಕೆ.ಜಿ ಊಟ ತಯಾರಿಸಿ ಗುಡಿಸಲುಗಳಿಗೆ ಪ್ಯಾಕೆಟ್ ಮೂಲಕ ಆಹಾರ ಹಂಚಿಕೆ ಕಾರ್ಯ ನಡೆಯುತ್ತಿದೆ. ಮುಂಜಾಗ್ರತೆಯಾಗಿ ಅಧಿಕಾರಿಗಳ ನೇತೃತ್ವದಲ್ಲಿ ಈ ಆಹಾರ ತಯಾರಿಸಲಾಗುತ್ತದೆ. ಬಳಿಕ ಅಧಿಕಾರಿಗಳ ನೇತೃತ್ವದಲ್ಲಿ ನಿರ್ಗತಿಕರ ಬಳಿಗೆ ತೆರಳಿ ಆಹಾರ ಪೂರೈಕೆ ಮಾಡಲಾಗುತ್ತಿದೆ. ವೈದ್ಯ ವಿರೇಶ್ ಮತ್ತು ಅನಿಲ್ ರ ಕಾರ್ಯಕ್ಕೆ ಪಬ್ಲಿಕ್ ಟಿವಿ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.

    ನಿನ್ನೆಯಷ್ಟೇ ಉಡುಪಿ ಶಾಸಕ ರಘುಪತಿ ಭಟ್, ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಅವರು ಚಾಲೆಂಜ್ ಸ್ವೀಕರಿಸಿ ನಿರ್ಗತಿಕರಿಗೆ ಅನ್ನದಾನ ಮಾಡುತ್ತಿದ್ದಾರೆ.