ಹಾಸನ: ಟಿವಿ ಮಾಧ್ಯಮಗಳು ಕೊನೆ ಶೋ ಎಂದು ಮೋದಿ ನೋಡಿ ಅಂತಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿ ನೋಡಿಯೇ ಬರಗಾಲ ಬಂತು. ಅವರು ಹೋದ ಮೇಲೆಯೇ ಬರಗಾಲ ಹೋಗುತ್ತೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ನಗರದಲ್ಲಿ ಪುತ್ರ, ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ನಡೆಸಿದ ಪ್ರಚಾರದ ವೇಳೆ ಮಾತನಾಡಿದ ಸಚಿವರು, ಈ ಹಿಂದೆ ಮಾಧ್ಯಮಗಳು ಬೆಳಗ್ಗೆ ಮೈಸೂರು ಮಹಾರಾಜರನ್ನು ನೋಡಿ, ಅರಮನೆ ನೋಡಿ ಎಂದು ತೋರಿಸುತ್ತಿದ್ದರು. ಆದರೆ ಈಗ ಬೆಳಗ್ಗೆ ಎದ್ದರೆ ಮಂಡ್ಯ, ಹಾಸನ, ರಾಮನಗರ ಹಾಗೂ ಪ್ರಜ್ವಲ್ ಅವರನ್ನು ನೋಡಿ ಎಂದು ತೋರಿಸುತ್ತಿದ್ದಾರೆ. ಹಣ ಇಲ್ಲದೆ ನಮಗೆ ಪ್ರಚಾರ ಕೊಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ ಆರು ಸಾವಿರ ಕೊಡುತ್ತೇವೆ ಎಂದು ಹೇಳಿದರು. ಆದರೆ ಆ ಹಣ ಇನ್ನೂ ದೆಹಲಿಯನ್ನೇ ಬಿಟ್ಟಿಲ್ಲ. ಬೇರೆ ಯಾವ ಪ್ರಧಾನಿಯೂ ದೇಶವನ್ನು ಉಳಿಸಿಲ್ವಾ? ಮೋದಿ ಒಬ್ಬರೇ ಉಳಿಸಿದ್ರಾ? ಅವರು ಗಂಟೆಗೊಂದು ಬಟ್ಟೆ ಬದಲಾಯಿಸುತ್ತಾರೆ. ಪ್ರಧಾನಿ ಮೋದಿ ಅವರ ಬಟ್ಟೆಯ ರೇಟ್ ಎಷ್ಟು ಗೊತ್ತಾ? ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಟ್ಟೆ ರೇಟು ಗೊತ್ತಾ? ಲಂಡನ್ನಲ್ಲಿ ಬಟ್ಟೆ ಹೊಲಿಸುವವರು ಬೇಕಾ ಎಂದು ಸಭೆಯಲ್ಲಿ ಸೇರಿದ್ದ ಜನರನ್ನು ಪ್ರಶ್ನಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಮಿಳುನಾಡಿನವರು ನೀರು ಬೇಡ ಅಂತ ಹೇಳಿದರು ಎಂದ ಸಚಿವರು, ಇದು ಪ್ರಜ್ವಲ್ ಚುನಾವಣೆಯಲ್ಲ. ಈ ದೇಶ ಉಳಿಸಲು ಎಲ್ಲರೂ ಶ್ರಮಿಸಬೇಕಿದೆ ಎಂದರು.
ಬೆಂಗಳೂರು: ಹಲವು ಗೊಂದಲಗಳ ನಡುವೆಯೂ ಇಂದು ಸಿಎಂ ಕುಮಾರಸ್ವಾಮಿ ಬಜೆಟ್ ಮಂಡಿಸಿದರು. ಸಿಎಂ ಬಜೆಟ್ ಮಂಡನೆ ಮಾಡಲು ಆರಂಭಿಸುತ್ತಿದ್ದಂತೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಘೋಷಣೆ ಕೂಗಲಾರಂಭಿಸಿ, ಕೊನೆಗೆ ಸಭಾತ್ಯಾಗ ಮಾಡಿ ಹೊರ ನಡೆದರು. ಬಜೆಟ್ ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ತವರು ಜಿಲ್ಲೆ ಹಾಸನ ಮತ್ತು ಸಮ್ಮಿಶ್ರ ಸರ್ಕಾರದ ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಅವರ ಇಲಾಖೆ ಮತ್ತು ಜಿಲ್ಲೆಗೂ ಭರಪೂರ ಅನುದಾನವನ್ನು ಸಿಎಂ ಬಜೆಟ್ ನಲ್ಲಿ ನೀಡಿದ್ದಾರೆ.
ಹಾಸನಕ್ಕೆ ಸಿಕ್ಕಿದ್ದೇನು..?
* ಬೆಳಗಾವಿ ವಿಟಿಯು ಮರುವಿಂಗಡಣೆ ಮಾಡಿ ಹಾಸನದಲ್ಲಿ ಹೊಸ ತಾಂತ್ರಿಕ ವಿದ್ಯಾಲಯ.
* ಬಾಲಕಿಯರಿಗೆ ಪ್ರತ್ಯೇಕ ಕ್ರೀಡಾ ವಸತಿ ನಿಲಯ, ಹಾಸನ ಜಿಲ್ಲಾ ಕ್ರೀಡಾಂಗಣ ಸೌಲಭ್ಯ ಮೇಲ್ದರ್ಜೆಗೆ ಏರಿಕೆ.
* ಕೆಐಎಡಿಬಿಯಿಂದ ಹಾಸನ ಜಿಲ್ಲೆಯ ಅರಸೀಕೆರೆ ಕೈಗಾರಿಕಾ ಪ್ರದೇಶ ಅಭಿವೃದ್ಧಿ.
* ಅರಸೀಕೆರೆಯಲ್ಲಿ 200 ಬಂಧಿ ಸಾಮರ್ಥ್ಯದ ಉಪ ಕಾರಾಗೃಹ ನಿರ್ಮಾಣ.
* ಚನ್ನರಾಯಪಟ್ಟಣ, ಅರಸೀಕೆರೆ ತಾಲೂಕುಗಳ ಹಳ್ಳಿಗಳಿಗೆ ಕಾಚೇನಹಳ್ಳಿ 3ನೇ ಹಂತದ ಏತ ನೀರಾವರಿ ಯೋಜನೆಗೆ 100 ಕೋಟಿ ರೂ.
* ಒಂಟಿಗುಡ್ಡ ಏತ ನೀರಾವರಿ ಯೋಜನೆಯ ನಾಲೆ ನಿರ್ಮಾಣಕ್ಕೆ 54 ಕೋಟಿ ರೂ.
* ಹೇಮಾವತಿ ನದಿಯಿಂದ ಹೊಳೆನರಸೀಪುರ ತಾ. ಚಾಕೇನಹಳ್ಳಿ ಕಟ್ಟೆಗೆ ಕೆರೆ ತುಂಬಿಸುವ ಯೋಜನೆ.
* ಹೇಮಾವತಿ ನದಿಯಿಂದ ಕುಡಿಯುವ ನೀರಿನ ಯೋಜನೆಗೆ 120 ಕೋಟಿ ರೂ.
* ಅರಕಲಗೂಡು ತಾಲೂಕಿನ 150 ಕೆರೆ ಹಾಗೂ 50 ಕಟ್ಟೆ ತುಂಬಿಸುವ ಯೋಜನೆ.
* ಯಗಚಿ ನದಿಯ ರಣಘಟ್ಟ ಪಿಕಪ್ನಿಂದ ನೀರು ಪಡೆದು ಬೇಲೂರು ಹೋಬಳಿಯ ದ್ವಾರಸಮುದ್ರ ಕೆರೆ, ಕರಿಕಟ್ಟೆಹಳ್ಳಿ ಕೆರೆ ಮತ್ತು ಇತರೆ ಕೆರೆಗಳನ್ನು ತುಂಬಿಸುವ ಯೋಜನೆಗೆ 100 ಕೋಟಿ ರೂ.
* ಎತ್ತಿನ ಹೊಳೆ ಕುಡಿಯುವ ನೀರಿನ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅರಸೀಕೆರೆ ತಾಲೂಕಿನ ಕೆರೆಗಳ ಅಭಿವೃದ್ಧಿ ಕಾಮಗಾರಿಗೆ 15 ಕೋಟಿ ರೂ.
* ಎತ್ತಿನಹೊಳೆ ಯೋಜನೆ ವ್ಯಾಪ್ತಿಯ ಹಾಸನ ಜಿಲ್ಲೆಯ ಆಲೂರು, ಸಕಲೇಶಪುರ, ಬೇಲೂರು, ಅರಸೀಕೆರೆ ತಾಲೂಕುಗಳ ರಸ್ತೆಗಳ ಅಭಿವೃದ್ಧಿಗೆ 60 ಕೋಟಿ ರೂ.
* ಎತ್ತಿನಹೊಳೆ ಯೋಜನೆಯಡಿ ಸಕಲೇಶಪುರ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ 12 ಕೋಟಿ ರೂ.
* ಹಾಸನ ವಿಮಾನ ನಿಲ್ದಾಣದ ಅಭಿವೃದ್ಧಿ
ಡಿಕೆ ಶಿವಕುಮಾರ್ ಅವರ ಇಲಾಖೆ ಹಾಗೂ ಜಿಲ್ಲೆಯೂ ಹೆಚ್ಚಿನ ಅನುದಾನ ಸಿಕ್ಕಿದೆ.
* ಜಲಸಂಪನ್ಮೂಲ ಇಲಾಖೆಗೆ 2019-20 ರಲ್ಲಿ ಒಟ್ಟು 17,212 ಕೋಟಿ ರೂ. ಅನುದಾನ.
* ಏತ ನೀರಾವರಿ ಯೋಜನೆಗಳಿಗೆ 1,563 ಕೋಟಿ ರೂ.
* ಕೆರೆ ತುಂಬಿಸುವ ಯೋಜನೆಗಳಿಗೆ 1,680 ಕೋಟಿ ರೂ.
* ಕೆರೆಗಳ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ 445 ಕೋಟಿ ರೂ.
* ನೀರಾವರಿ ಯೋಜನೆಗಳಿಗೆ 477 ಕೋಟಿ ರೂ.
* ಕಾಲುವೆ ಆಧುನೀಕರಣ-ಅಭಿವೃದ್ಧಿ ಕಾಮಗಾರಿಗಳಿಗೆ 860 ಕೋಟಿ ರೂ.
* ಬ್ರಿಡ್ಜ್ ಮತ್ತು ಬ್ಯಾರೇಜ್ ನಿರ್ಮಾಣ ಕಾಮಗಾರಿಗಳಿಗೆ 160 ಕೋಟಿ ರೂ.
* 506 ಕೋಟಿ ರೂ. ಹಾಗೂ ಮಂಚನಬೆಲೆ ಜಲಾಶಯ ಕೆಳಭಾಗದ ಉದ್ಯಾನವನ ಅಭಿವೃದ್ಧಿ
* ಪ್ರವಾಸೋದ್ಯಮ ಚಟುವಟಿಕೆ ಅಭಿವೃದ್ಧಿಗೆ 125 ಕೋಟಿ ರೂ.
* ಹಾರಂಗಿ ಜಲಾನಯನ ಪ್ರದೇಶ ಹಾಗೂ ನದಿ ಪಾತ್ರದ ಪುನಶ್ಚೇತನ ಕಾಮಗಾರಿಗಳಿಗೆ 75 ಕೋಟಿ ರೂ. ಅನುದಾನ ನಿಗದಿ.
* ರಾಮನಗರದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಮಾವು ಉತ್ಪನ್ನಗಳ ಸಂಸ್ಕರಣ ಘಟಕ
* ರಾಮನಗರದಲ್ಲಿ ರೇಷ್ಮೆ ಮಾರುಕಟ್ಟೆಯ ಆಧುನೀಕರಣ ಮತ್ತು ಬಲವರ್ಧನೆ- 5 ಕೋಟಿ
* ಚನ್ನಪಟ್ಟಣದ ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್ನ ಫಿಲೇಚರ್ ಜಾದಲ್ಲಿ ರೇಷ್ಮೆ ವಲಯದ ಸಾಧನೆಗಳ ಪ್ರದರ್ಶನ, ರೇಷ್ಮೆ ಉತ್ಪನ್ನಗಳ ಮಾರಾಟ-10 ಕೋಟಿ
* ಹಾರೋಹಳ್ಳಿ ತಾಲೂಕಾಗಿ ಘೋಷಣೆ
ಹಾಸನ: ಶುಕ್ರವಾರ ಸಂಭವಿಸಲಿರುವ ಚಂದ್ರ ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾಗಲಿದ್ದು, ಎಚ್.ಡಿ.ರೇವಣ್ಣನವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಅರ್ಥವಿರುವ ಭವಿಷ್ಯವನ್ನು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದಾರೆ.
ತಾಳೆಗರಿ ನೋಡಿ ಭವಿಷ್ಯ ಹೇಳುವ ಶ್ರೀಗಳು `ಅರಸನ ಆಯಸ್ಸು ಉಸಿರಲ್ಲಿ ನಿಂತೀತು, ಪರಸಕ್ಕೆ ಭಂಗ ಪ್ರಸಂಗಕ್ಕೆ ಹಾನಿ, ಭಾತೃ ಬೆಂಕಿ ಹಿಡಿದಾನು’ ಎಂದು ಒಗಟಾಗಿ ತಿಳಿಸಿದ್ದಾರೆ. ಅಂದರೆ `ಸಹೋದರ ಬೆಂಕಿ ಹಿಡಿದಾನು ಎಂದರೆ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಸಹೋದರ ಎಚ್.ಡಿ.ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಈ ಭವಿಷ್ಯ ಅರ್ಥ ಮೂಡಿಸುತ್ತದೆ.
ಪ್ರಾಕೃತಿಕ ಸಂಪನ್ಮೂಲಗಳು ನಾಶವಾಗಲಿದ್ದು, ಮುಂದಿನ ದಿನಗಳಲ್ಲಿ ಭೂಕಂಪನವಾಗಲಿದೆ. ಇನ್ನೂ ಹೆಚ್ಚು ಮಳೆಯಾಗಲಿದ್ದು, ಬರುವ ವಿಶೇಷ ದಿನಗಳು ಕಷ್ಟಕರವಾಗಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದ್ದಾರೆ.
ವಿಧಾನಸಭಾ ಚುನಾವಣೆಗೂ ಮುನ್ನ “ಬಿತ್ತಿದ ಬೆಳಸು ಪೈರು ಕುಯ್ದಾರು, ಬಿತ್ತಿದ ಬೀಜ ಒಂದು ಬೆಳೆದ ಪೈರೋಂದು” ಎಂದು ಭವಿಷ್ಯ ನುಡಿದಿದ್ದರು. ಅಂದರೆ ಮುಂದಿನ ಚುನಾವಣೆ ಫಲಿತಾಂಶದಲ್ಲಿ ಅನಿರೀಕ್ಷಿತ ಬದಲಾವಣೆಗಳಾಗುವ ಸಾಧ್ಯತೆ ಇದೆ. ಯಾರೋ ಹಾಕಿದ ಶ್ರಮದ ಫಲವನ್ನ ಇನ್ನೊಬರು ಅನುಭವಿಸಲಿದ್ದಾರೆ. ಹಾಗೇ ಅನಿರೀಕ್ಷಿತ ಅಧಿಕಾರ ಚುಕ್ಕಾಣಿ ಹಿಡಿಯುವ ಸನ್ನಿವೇಶಗಳಿವೆ ಅನ್ನೊದನ್ನ ಹೇಳಿದ್ದಾರೆ.
ಬೆಂಗಳೂರು: ನನ್ನ ಇಲಾಖೆಯಲ್ಲಿ ಯಾವುದೇ ಲಂಚ ಕೊಡುಕೊಳ್ಳುವಿಕೆ ನಡೆಯುದಿಲ್ಲ. ಯಾವುದಾದರು ಅಂತಹ ಪ್ರಕರಣ ಇದ್ದರೆ ಹೇಳಿ, ಅವರಿಗೆ ಬಲಿ ಹಾಕುತ್ತೇನೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಹೇಮಾವತಿ ಮತ್ತು ಯಗಚಿ ನೀರಾವರಿ ಯೋಜನೆಯ ಸಭೆ ಬಳಿಕ ಮಾತನಾಡಿದ ಸಚಿವರು, ಲೋಕೋಪಯೋಗಿ ಇಲಾಖೆಯಲ್ಲಿ ವರ್ಗಾವಣೆಗೆ ಯಾವುದೇ ಲಂಚ ಪ್ರಕ್ರಿಯೆ ನಡೆದಿಲ್ಲ. ಒಂದು ವೇಳೆ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪಾಂಡವಪುರ, ಕೆ.ಆರ್.ಪೇಟೆ ನಾಗಮಂಗಲ ನಾಲೆಗಳಿಗೆ ನೀರು ಬಿಡಲು ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಜುಲೈ 30 ರೊಳಗೆ ನೀರು ಬಿಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಆದೇಶಿಸಲಾಗಿದೆ ಎಂದರು.
ತಮ್ಮ ಮನೆ ನವೀಕರಣ ವಿಚಾರಕ್ಕೆ ಮತ್ತೆ ಪ್ರತಿಕ್ರಿಯೆ ನೀಡಿದ ಸಚಿವರು, ಯಾವುದೇ ವಾಸ್ತುವಿಗಾಗಿ ಮನೆ ನವೀಕರಣ ಮಾಡಿಲ್ಲ. ನಾನು ಹೊಲದಲ್ಲಿ ಮಲಗುವುದಕ್ಕೂ ಸಿದ್ಧ. ನಾವೇನು ಫೈಸ್ಟಾರ್ ಹೋಟೆಲ್ನಲ್ಲಿ ಇರಬೇಕು ಅಂತಾ ಇಲ್ಲ ಎಂದು ಹೇಳಿದರು.
ಹಾಸನ: ವಾಸ್ತು ಪ್ರಕಾರ ಪೂಜೆ ಮಾಡದ ಹಿನ್ನೆಲೆ ಅರ್ಚಕರಿಗೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಕ್ಲಾಸ್ ತಗೆದುಕೊಂಡಿದ್ದಾರೆ.
ಭಾನುವಾರ ನಗರದ ಜಿಲ್ಲಾಸ್ಪತ್ರೆ ಸಮೀಪದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಡ ಶಂಕು ಸ್ಥಾಪನೆಗೆ ಸಚಿವ ರೇವಣ್ಣ ಆಗಮಿಸಿದ್ದರು. ಈ ವೇಳೆ ಪ್ರಾರಂಭವಾಗಿದ್ದ ಪೂಜೆ ತಡೆದು, ದಿಕ್ಕು ಬದಲಿಸುವಂತೆ ಅರ್ಚಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಾಸ್ತು ಪ್ರಕಾರ ನೀವು ಪೂಜೆ ಮಾಡುತ್ತಿಲ್ಲ ಎಂದು, ತಾವೇ ಮುಂದೆ ನಿಂತು ಪೂಜೆ ಮಾಡಿಸಲು ಮುಂದಾದ ಸಚಿವರು, “ರೀ ನೀರು ಮೊದಲು ಹಾಕಿ, ನೀವು ನಮ್ಮ ತಲೆ ಬಿಸಿ ಮಾಡಬೇಡಿ” ಎಂದು ಅರ್ಚಕ ರವಿ ಅವರ ವಿರುದ್ಧ ರೇಗಾಡಿದ್ದಾರೆ.
ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಅರ್ಚಕ ರವಿ ಅವರು, ನಾವು ಮೊದಲು ಪೂಜೆ ಮಾಡುತ್ತಿದ್ದ ದಿಕ್ಕನ್ನು ಬದಲಾಯಿಸಿ, ವಾಸ್ತು ಪ್ರಕಾರ ಈಶಾನ್ಯ ದಿಕ್ಕಿಗೆ ಪೂಜೆ ಮಾಡಬೇಕು ಎಂದು ತಾಖೀತು ಮಾಡಿದರು. ಆದರೆ ನಾವು ಪೂಜೆ ಮಾಡುತ್ತಿರುವ ದಿಕ್ಕು ಸರಿಯಾಗಿದ್ದರು ಬದಲಾಯಿಸಬೇಕೆಂದು ಸಚಿವರು ಹೇಳಿದರು ಎಂದು ತಿಳಿಸಿದರು.
ಬೆಂಗಳೂರು: ಜೆಡಿಎಸ್ನ ಎಲ್ಲ ಸದಸ್ಯರು ಹೆಚ್.ಡಿ.ಕುಮಾರಸ್ವಾಮಿ ಅವರನ್ನು ನಮ್ಮ ಪಕ್ಷದ ಶಾಸಕಾಂಗ ಸಭೆಯ ನಾಯಕರನ್ನಾಗಿ ಆಯ್ಕೆ ಮಾಡಿದ್ದೇವೆ ಎಂದು ಹೆಚ್.ಡಿ ರೇವಣ್ಣ ಹೇಳಿದ್ದಾರೆ.
ಶಾಂಗ್ರಿಲಾ ಹೋಟೆಲ್ನಲ್ಲಿ ಜೆಡಿಎಸ್ ಶಾಸಕಾಂಗ ಸಭೆ ಬಳಿಕ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಎಚ್ಡಿ. ರೇವಣ್ಣ ಇಂದು “11.30ಕ್ಕೆ ಸರಿಯಾಗಿ” ಹೆಚ್ ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಅಂತ ಹೇಳಿದ್ರು. ಈ ವೇಳೆ ಅದ್ಯಾಕೆ 11.30ಕ್ಕೆ ಆಯ್ಕೆ ಮಾಡಿದ್ದು ಎಂದು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ರೇವಣ್ಣ, ಏಯ್.. ಅದೆಲ್ಲಾ ಗೊತ್ತಲ್ಲ ನಿಮಗೆ. ಈವಾಗ ಎಲ್ಲ ಟೈಂ ನೋಡಿಕೊಂಡು ಕುತ್ಕೊತ್ತಾರ ಎಂದು ಹಾಸ್ಯದ ಧಾಟಿಯಲ್ಲಿ ಉತ್ತರ ನೀಡಿದರು.
ಇದಕ್ಕೂ ಮುನ್ನ, ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡರ ನಿವಾಸಕ್ಕೆ ರೇವಣ್ಣ ಭೇಟಿ ನೀಡಿದ್ದರು. ಈ ವೇಳೆ ಅವರು, ಯಾವುದೇ ಹೈಜಾಕ್ ಆಗಲಿ ಏನೇ ಆಗಲಿ, ಹೆಚ್.ಡಿ.ಕುಮಾರಸ್ವಾಮಿ ಹೇಳಿದಂತೆ ಸರ್ಕಾರ ರಚನೆಯಾಗುತ್ತದೆ. ಅವರೇ ಸಿಎಂ ಆಗುವುದು ನಿಶ್ಚಿತ ಎಂದರು.
ಈ ಬಾರಿ ನಮ್ಮ ಪಕ್ಷದಿಂದ ಆಯ್ಕೆಯಾದ 38 ಶಾಸಕರು ಎಲ್ಲಿಯೂ ಹೋಗುವುದಿಲ್ಲ. ನಿಷ್ಠೆಯಿಂದ ಪಕ್ಷದ ಜೊತೆಗಿರುತ್ತಾರೆ. ಕುಮಾರಸ್ವಾಮಿ ಸಿಎಂ ಆಗೋದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೇವೇಗೌಡರು ಈಗಾಗಲೇ ಜೆಡಿಎಸ್ ಶಾಸಕರ ಜವಾಬ್ದಾರಿಯನ್ನು ಹೇಗೆ ನಿರ್ವಹಿಸಬೇಕು ಎಂದು ಶ್ರೀಕಂಠೇಗೌಡರಿಗೆ ನಿರ್ದೇಶನ ನೀಡಿದ್ದಾರೆ. ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕೇಳಿಬಂದಿದೆ.
ಮೇ 18ರಂದು ಎಚ್ಡಿ ದೇವೇಗೌಡ 85ನೇ ವರ್ಷದ ಹುಟ್ಟುಹಬ್ಬವನ್ನು ಆಚಿರಿಸಕೊಳ್ಳಲಿದ್ದಾರೆ. ಹೀಗಾಗಿ ಚುನಾವಣೆಗೂ ಮುನ್ನ ನಡೆದ ಪ್ರಚಾರ ಕಾರ್ಯಕ್ರಮಗಳಲ್ಲಿ ಮೇ 18 ಶುಕ್ರವಾರದಂದು ನಾನು ಪ್ರಮಾಣವಚನ ಸ್ವೀಕರಿಸುತ್ತೇನೆ. ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿದ್ದರು.