Tag: HD Revanna

  • JDS ಜೊತೆ ಹೊಂದಾಣಿಕೆ ಸಾಹಸಕ್ಕೆ ಕೈಹಾಕಿ, ನಿಮ್ಮ ಕುರ್ಚಿಗೆ ಕುತ್ತು ತಂದ್ಕೋಬೇಡಿ- ಸಿಎಂಗೆ ರೇವಣ್ಣ ಸಲಹೆ

    JDS ಜೊತೆ ಹೊಂದಾಣಿಕೆ ಸಾಹಸಕ್ಕೆ ಕೈಹಾಕಿ, ನಿಮ್ಮ ಕುರ್ಚಿಗೆ ಕುತ್ತು ತಂದ್ಕೋಬೇಡಿ- ಸಿಎಂಗೆ ರೇವಣ್ಣ ಸಲಹೆ

    ಹಾಸನ: ಮುಳುಗುವ ಹಡಗಿನ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು ನೀಡಿದ್ದಾರೆ.

    ಎರಡು ಮಹಾನಗರ ಪಾಲಿಕೆಗಳಲ್ಲಿ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ವಿಚಾರವಾಗಿ ಮಾತನಾಡಿದ ಅವರು, ಮುಳುಗುವ ಹಡಗಿನ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ಬೇಡ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನಟ ಅಕ್ಷಯ್​ ಕುಮಾರ್​ಗೆ ಮಾತೃವಿಯೋಗ

    ಜೆಡಿಎಸ್ ಮುಳುಗುವ ಹಡಗು ಎಂದು ಈಗಾಗಲೇ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಹೀಗಾಗಿ ಜೆಡಿಎಸ್ ಜೊತೆ ಹೊಂದಾಣಿಕೆಯಂತಹ ಸಾಹಸಕ್ಕೆ ಕೈಹಾಕಿ ಮುಖ್ಯಮಂತ್ರಿಗಳು ತಮ್ಮ ಕುರ್ಚಿಗೆ ಕುತ್ತು ತಂದುಕೊಳ್ಳಬೇಡಿ. ಮುಳುಗುವ ಹಡಗಿನ ಜೊತೆ ಹೊಂದಾಣಿಕೆ ಬೇಡ, ಇನ್ನೂ ಎರಡು ವರ್ಷ ನೀವೆ ಸಿಎಂ ಆಗಿ ಇರಬೇಕು. ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದು ಇಷ್ಟೇ, ನೀವು ಹೊಂದಾಣಿಕೆ ಮಾಡಿಕೊಳ್ಳಲು ಹೋಗಿ ತೊಂದರೆ ಮಾಡಿಕೊಳ್ಳಬೇಡಿ ಎಂದು ಸಿಎಂಗೆ ಕಿವಿಮಾತು ಹೇಳಿದ್ದಾರೆ.

  • ಜೆಡಿಎಸ್ ತೊರೆಯುವ ಬಗ್ಗೆ ನಾನೆಲ್ಲೂ ಹೇಳಿಲ್ಲ: ಎಸ್.ಆರ್.ಶ್ರೀನಿವಾಸ್

    ಜೆಡಿಎಸ್ ತೊರೆಯುವ ಬಗ್ಗೆ ನಾನೆಲ್ಲೂ ಹೇಳಿಲ್ಲ: ಎಸ್.ಆರ್.ಶ್ರೀನಿವಾಸ್

    ತುಮಕೂರು: ಜೆಡಿಎಸ್ ತೊರೆಯುವ ಬಗ್ಗೆ ನಾನೆಲ್ಲೂ ಹೇಳಿಲ್ಲ. ಒಂದು ವೇಳೆ ರೇವಣ್ಣ ಅವರೇ ಪಕ್ಷ ಬಿಡಬಹುದೇನೊ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದರು.

    ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಸಾಗಸಂದ್ರದಲ್ಲಿ ಲೋಕೋಪಯೋಗಿ ಇಲಾಖೆಯಿಂದ 4 ಕೋಟಿ ವೆಚ್ಚದಲ್ಲಿ ನಿಟ್ಟೂರು ಹೊಸಕೆರೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ತುರುವೇಕೆರೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕರು, ನಾನು ಪಕ್ಷ ಬಿಡುವುದಾಗಿ ಕುಮಾರಸ್ವಾಮಿ ಅವರಿಗೆ ಯಾರು ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮೋದಿ ಭೇಟಿಗಾಗಿ 900 ಕಿಮೀ ಕಾಲ್ನಡಿಗೆ ಹೋರಟ ಯುವಕ

    ವಿದ್ಯುತ್ ಕಾಯ್ದೆ ತಿದ್ದುಪಡಿ ಮಾಡಿ ರೈತರಿಗೆ ಮೀಟರ್ ಅಳವಡಿಸಿದರೆ ಬಿಜೆಪಿ ಅಂತ್ಯಕ್ಕೆ ನಾಂದಿಯಾಗಲಿದೆ. ಅಗತ್ಯ ವಸ್ತುಗಳ ಜೊತೆಗೆ ಅಡುಗೆ ಅನಿಲ ದರ ಮತ್ತೊಮ್ಮೆ ಏರಿಕೆಯಾಗಿದೆ. ಇಂಧನಗಳ ಬೆಲೆ ಗಗನಕ್ಕೇರಿದೆ. ಇದಕ್ಕೆ ಸಾರ್ವಜನಿಕರೆ ಉತ್ತರ ನೀಡಬೇಕಿದೆ ಎಂದರು. ಇದನ್ನೂ ಓದಿ: ವಿಶೇಷವಾದ ಬಂಧ, ಪ್ರೀತಿಯ ಶುದ್ಧ ರೂಪ: ರಾಧಿಕಾ ಪಂಡಿತ್

    ಚುನಾವಣೆ ಸಂದರ್ಭದಲ್ಲಿ ಜಾತಿಗೊಂದು ನಿಗಮ ಮಂಡಳಿ ರಚಿಸಿದ್ದ ಸರ್ಕಾರ ಅದನ್ನು ಅನುಷ್ಠಾನಕ್ಕೆ ತರಲೇ ಇಲ್ಲ. ಅಧ್ಯಕ್ಷರ ನೇಮಕ ಮಾಡಿಲ್ಲ. ಅನುದಾನ ಬಿಡುಗಡೆ ಮಾಡಿಲ್ಲ. ಮಾದಲೂರು ಕೆರೆಗೆ ನೀರು ಹರಿಯಲಿದೆ ಎಂದು ಯಡಿಯೂರಪ್ಪ ಅವರೇ ನಿಯಮ ಬಾಹಿರ ಹೇಳಿಕೆ ನೀಡಿದ್ದರು. ಆದರೆ ಸಚಿವ ಮಾಧುಸ್ವಾಮಿ ಅವರ ಹೇಳಿಕೆ ಕಾನೂನಾತ್ಮಕವಾಗಿದೆ ಎಂದರು.

    ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣಮ್ಮ, ಉಪಾಧ್ಯಕ್ಷ ಶಂಕರಪ್ಪ, ಸದಸ್ಯರಾದ ಎಂ.ಡಿ.ದೊಡ್ಡಕೆಂಪಯ್ಯ, ಓಂಕಾರಮೂರ್ತಿ, ಮುಖಂಡರಾದ ರವಿಕುಮಾರ್, ಸಿದ್ದರಾಮೇಶ್, ಮಂಜಣ್ಣ, ಪರಮೇಶ್, ಲೋಕೋಪಯೋಗಿ ಇಲಾಖೆ ಎಇಇ ವಿಜಯ್‍ಕುಮಾರ್ ಇದ್ದರು.

  • ಮನೆಗೆ ಬಂದ್ರೆ ಚೆನ್ನಾಗಿ ನೋಡಿಕೊಳ್ಳುತ್ತೇವೆ, ಬರದೆ ಇದ್ರೆ ನಮ್ಮಪ್ಪನ ಮನೆ ಗಂಟು ಏನೂ ಹೋಗಲ್ಲ: ರೇವಣ್ಣ

    ಮನೆಗೆ ಬಂದ್ರೆ ಚೆನ್ನಾಗಿ ನೋಡಿಕೊಳ್ಳುತ್ತೇವೆ, ಬರದೆ ಇದ್ರೆ ನಮ್ಮಪ್ಪನ ಮನೆ ಗಂಟು ಏನೂ ಹೋಗಲ್ಲ: ರೇವಣ್ಣ

    ಹಾಸನ : ಯಾವ ಮಂತ್ರಿಗಳನ್ನು ಮನೆಗೆ ಬನ್ನಿ ಎಂದು ಕರೆಯಲ್ಲ. ಬಂದರೆ ಚೆನ್ನಾಗಿ ನೋಡಿಕೊಳ್ಳುತ್ತೇವೆ. ಬರದೆ ಇದ್ದರೆ ನಮ್ಮಪ್ಪನ ಮನೆ ಗಂಟು ಏನೂ ಹೋಗಲ್ಲ ಎಂದು ಹೆಚ್‍ಡಿ.ರೇವಣ್ಣ ಹೇಳಿದ್ದಾರೆ.

    ಜೆಡಿಎಸ್ ನಾಯಕರ ಮನೆಗೆ ಯಾವ ನಾಯಕರು ಹೋಗಕೂಡದು ಎಂಬ ಶಾಸಕ ಪ್ರೀತಂಗೌಡ ಹೇಳಿಕೆಗೆ ಹೆಚ್‍ಡಿ.ರೇವಣ್ಣ ತಿರುಗೇಟು ನೀಡಿದ್ದಾರೆ. ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಒಂದು ಪಕ್ಷಕ್ಕೆ ಸೀಮಿತ ಆದವರಲ್ಲ. ಅವರು ಏನೆಂದು ಪ್ರಮಾಣವಚನ ಸ್ವೀಕಾರ ಮಾಡಿರ್ತಾರೆ. ದಯವಿಟ್ಟು ಯಾವ ಸಚಿವರು ವಿಪಕ್ಷ ನಾಯಕರ ಮನೆಗೆ ಹೋಗಬೇಡಿ. ನಾವು ನಮ್ಮ ಹಣ ಖರ್ಚು ಮಾಡಿ ಅವರಿಗೆ ಏಕೆ ಬೈಯ್ಯೋ ಹಾಗೆ ಮಾಡ್ಬೇಕು. ಬಂದ್ರೆ ಒಂದು ಊಟ ಹಾಕ್ತೀವಿ, ಬರದಿದ್ರೆ ಅದೆ ದುಡ್ಡು ಉಳಿತು ಬಿಡಿ ಅಂತೀವಿ ಎಂದು ಹೇಳುವ ಮೂಲಕ ಹೆಸರು ಹೇಳದೇ ಪ್ರೀತಂಗೌಡಗೆ ರೇವಣ್ಣ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:  ನೆರೆ ಪೀಡಿತ ಸಂತ್ರಸ್ತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ: ಉಮೇಶ್ ಕತ್ತಿ

    ಇದೇ ವೇಳೆ ಚುನಾವಣೆ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜಿ.ಪಂ, ತಾ.ಪಂ. ಚುನಾವಣೆ ನಡೆಯಬೇಕಿದೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಚುನಾವಣೆ ಬೇಕಿಲ್ಲ. ಚುನಾವಣೆ ಆಯೋಗ ಇದನ್ನು ಗಮನಿಸಬೇಕು. ಚುನಾಯಿತ ಪ್ರತಿನಿಧಿಗಳ ಆಳ್ವಿಕೆಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಈ ಚುನಾವಣೆ ನಗರದಲ್ಲಿ ನಡೆಯಲ್ಲ. ಬೇಕಿದ್ದರೆ ಮತಗಟ್ಟೆಗಳನ್ನು ಹೆಚ್ಚು ಮಾಡಿ. ಅಧಿಕಾರಿಗಳ ಕೈಗೆ ಅಧಿಕಾರ ಕೊಡಬೇಡಿ. ಯಾವುದೋ ನೆಪ ಮಾಡಿ ಚುನಾವಣೆ ಪಾವಿತ್ರ್ಯತೆ ಹಾಳು ಮಾಡಬೇಡಿ. ಗ್ರಾಮಾಂತರ ಭಾಗದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಬೆಳಗಾವಿ, ಹುಬ್ಬಳಿ, ಚಿಕ್ಕಬಳ್ಳಾಪುರದಲ್ಲಿ ಚುನಾವಣೆ ಮಾಡುತ್ತೀರ, ಇಲ್ಲಿ ಚುನಾವಣೆ ಮಾಡೋಕೆ ಏನಾಗಿದೆ ಎಂದು ರೇವಣ್ಣ ಪ್ರಶ್ನೆ ಮಾಡಿದ್ದಾರೆ.

  • ಚುನಾವಣೆ ಬಗ್ಗೆ ಭವಿಷ್ಯ ನುಡಿಯಲು ಕೊರವಂಜಿಗಳಿದ್ದಾರೆ: ರೇವಣ್ಣ ವ್ಯಂಗ್ಯ

    ಚುನಾವಣೆ ಬಗ್ಗೆ ಭವಿಷ್ಯ ನುಡಿಯಲು ಕೊರವಂಜಿಗಳಿದ್ದಾರೆ: ರೇವಣ್ಣ ವ್ಯಂಗ್ಯ

    ಹಾಸನ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲಿದೆ ಎಂಬ ಭವಿಷ್ಯ ನುಡಿಯಲು ನಮ್ಮಬಳಿ  ಕೊರವಂಜಿಗಳಿದ್ದಾರೆ ಎಂದು ಹಾಸನದಲ್ಲಿ ಮಾಜಿ ಸಚಿವ ಹೆಚ್‍ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: 1.25 ಲಕ್ಷಕ್ಕೆ ಮಾರಾಟವಾದ ಎರಡು ಬಂಡೂರು ಟಗರು

    ಹಾಸನದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಇದೇ ವೇಳೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬ ಡಿಕೆಶಿ ಹೇಳಿಕೆಗೆ ವ್ಯಂಗ್ಯವಾಡಿದ್ದಾರೆ. ಚುನಾವಣೆ ಕುರಿತಾಗಿ ಭವಿಷ್ಯ ಹೇಳಲು ನಮ್ಮಬಳಿ ಮೂವರು ಕೊರವಂಜಿಗಳಿದ್ದಾರೆ. ದೊಡ್ಡವರ ಕಥೆ ನಾನೇನು ಹೇಳಲ್ಲ ಎಂದಿದ್ದಾರೆ. ಇದನ್ನೂ ಓದಿ: ಇಂದ್ರಜಿತ್‍ಗೆ ಬೆದರಿಕೆ ಕರೆ – ದರ್ಶನ್ ಹಿಂಬಾಲಕರ ವಿರುದ್ಧ ದೂರು

    ಸರ್ಕಾರ ಕೂಡಲೇ ಕೊರೊನಾ ಮೂರನೇ ಅಲೆ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಹಾಸನ ಜಿಲ್ಲಾಧಿಕಾರಿ ಈಗಾಗಲೇ ಮೂರನೇ ಅಲೆಗೆ ಏನುಬೇಕು ಎಂಬ ಬಗ್ಗೆ ಸರ್ಕಾರಕ್ಕೆ ಮಾಹಿತಿ ಕಳುಹಿಸಿಕೊಟ್ಟಿದ್ದಾರೆ. ಆದರೆ ಸರ್ಕಾರ ಇದುವರೆಗೂ ಏನನ್ನೂ ಮಾಡಿಲ್ಲ. ಮೂರನೇ ಅಲೆ ವೇಗವಾಗಿ ಹಬ್ಬುತ್ತಿದ್ದು, ಸರ್ಕಾರ ಕೂಡಲೇ ಎಲ್ಲಾ ಆಸ್ಪತ್ರೆಗಳಲ್ಲೂ ಕನಿಷ್ಟ ನೂರು ಬೆಡ್ ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಕಳುಹಿಸಿಕೊಟ್ಟಿರುವ ಬೇಡಿಕೆ ಈಡೇರಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಲಿಂಗಾಯತರ ಧೀಮಂತ ನಾಯಕ ಬಿಎಸ್‍ವೈಯನ್ನು ಸಿಎಂ ಸ್ಥಾನದಿಂದ ಇಳಿಸಬೇಡಿ: ಎಂ.ಬಿ ಪಾಟೀಲ್

  • ಹಾಸನ ವಿಮಾನ ನಿಲ್ದಾಣ ರೇವಣ್ಣನವರ ಕುಟುಂಬದ ಒಕ್ಕಣೆ ಮಾಡುವ ಕಣವಲ್ಲ: ಪ್ರೀತಂ ಗೌಡ

    ಹಾಸನ ವಿಮಾನ ನಿಲ್ದಾಣ ರೇವಣ್ಣನವರ ಕುಟುಂಬದ ಒಕ್ಕಣೆ ಮಾಡುವ ಕಣವಲ್ಲ: ಪ್ರೀತಂ ಗೌಡ

    ಹಾಸನ: ಇಲ್ಲಿ ಕೇಳಿ ಸರ್. ಹಾಸನ ವಿಮಾನ ನಿಲ್ದಾಣ ರೇವಣ್ಣನವರದಲ್ಲ. ಅವರ ಕುಟುಂಬದ ಒಕ್ಕಣೆ ಮಾಡುವ ಕಣವೂ ಅಲ್ಲ. ಇದು ಹಾಸನದ ಆಸ್ತಿ. ವಿಮಾನ ನಿಲ್ದಾಣದ ವಿಚಾರದಲ್ಲಿ ತಜ್ಞರು ಏನು ಹೇಳುತ್ತಾರೆ ಅದನ್ನು ಮಾಡುತ್ತೇವೆ ಅಂತ ಮಾಜಿ ಸಚಿವ ಎಚ್.ಡಿ ರೇವಣ್ಣನವರ ವಿರುದ್ಧ ಶಾಸಕ ಪ್ರೀತಂ ಜೆ.ಗೌಡ ವಾಗ್ದಾಳಿ ನಡೆಸಿದರು.

    ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾದ ಹಿನ್ನೆಲೆಯಲ್ಲಿ ಇಂದು ಕೆಲವು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಾಸನದ ಏರ್‍ಪೋರ್ಟ್ ಅಂದರೆ ಅದು ಕೇವಲ ರೇವಣ್ಣನಿಗೆ ಮಾತ್ರ ಸೀಮಿತವಲ್ಲ. ಇನ್ನೂ ಅವರು ಒಕ್ಕಣೆ ಮಾಡುವ ಕಣವಲ್ಲ. ಇದು ಹಾಸನದ ಜನರ ಆಸ್ತಿ. ಹಿರಿಯರಾದ ದೇವೇಗೌಡರು ಸಿಎಂಗೆ ಮನವಿ ಮಾಡಿದ್ದರು. ಅವರ ನಿರ್ಧಾರದಂತೆ ಮುಖ್ಯಮಂತ್ರಿಗಳು ವಿಮಾನ ನಿಲ್ದಾಣ ಮಾಡಲು ಮುಂದಾಗಿದ್ದಾರೆ ಎಂದರು. ಇದನ್ನೂ ಓದಿ: ಲಿಂಗಾಯತರ ಧೀಮಂತ ನಾಯಕ ಬಿಎಸ್‍ವೈಯನ್ನು ಸಿಎಂ ಸ್ಥಾನದಿಂದ ಇಳಿಸಬೇಡಿ: ಎಂ.ಬಿ ಪಾಟೀಲ್

    ಒಂದು ಬಾರಿ ಪ್ರಧಾನಿ ಮೂರು ಬಾರಿ ಸಿಎಂ ಆದ ಕುಟುಂಬದವರು ಯಾಕೆ ಏರ್ ಪೋರ್ಟ್ ಮಾಡಲಿಲ್ಲ..? ಅಧಿಕಾರ ಇದ್ದಾಗ ಮಾಡಲಿಲ್ಲ ಈಗ ಆ ರೀತಿ ಮಾಡಬೇಕು ಈ ರೀತಿ ಮಾಡಬೇಕು ಎಂದರೆ ಹೇಗೆ..? ರೇವಣ್ಣನವರು ಮಾತನಾಡುವುದಾದರೆ 20 ಸಾವಿರ ಜನ ಸೇರಿಸಿ ಮಾತನಾಡಲಿ. ಆಮೇಲೆ ನಾನು ಮಾತನಾಡುತ್ತೇನೆ. ತಜ್ಞರು ಏನು ಹೇಳುತ್ತಾರೆ ಆ ರೀತಿ ಸರ್ಕಾರ ಮಾಡುತ್ತದೆ. ಸುಖಾಸುಮ್ಮನೆ ಎಲ್ಲಾ ವಿಚಾರಕ್ಕೂ ತಲೆ ತೂರಿಸುವುದು ಸರಿಯಲ್ಲ ಅಂತ ಶಾಸಕ ಪ್ರೀತಂ ಗೌಡ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದರು.

    ಈ ಹಿಂದೆ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ರೇವಣ್ಣ, ಬಿಜೆಪಿ ಸರ್ಕಾರ ಈ ಹಿಂದೆ ನಿಗದಿಯಾದಂತೆ ವಿಮಾನ ನಿಲ್ದಾಣ ಕಾಮಗಾರಿ ಮಾಡದಿದ್ದರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದರು.

  • ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಆಶ್ವಾಸನೆಯನ್ನು ಈಡೇರಿಸಬೇಕು: ಹೆಚ್‍.ಡಿ.ರೇವಣ್ಣ

    ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಆಶ್ವಾಸನೆಯನ್ನು ಈಡೇರಿಸಬೇಕು: ಹೆಚ್‍.ಡಿ.ರೇವಣ್ಣ

    ಹಾಸನ: ವಿಮಾನ ನಿಲ್ದಾಣ ಕಾಮಗಾರಿ ಮೂಲ ಯೋಜನೆಯಂತೆಯೇ ಆಗಬೇಕು. ಇಲ್ಲದಿದ್ದರೆ ಜೂ. 20 ರಿಂದ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯ ಆರು ಶಾಸಕರು ಕೂಡ ದೇವೇಗೌಡರ ನೇತೃತ್ವದಲ್ಲಿ ಮೂಲ ಯೋಜನೆಯಂತೆಯೇ ಕಾಮಗಾರಿ ಮಾಡಬೇಕೆಂದು ಮುಖ್ಯಮಂತ್ರಿ ಸೇರಿದಂತೆ ಸಚಿವರುಗಳಾದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ಮುಖ್ಯಮಂತ್ರಿಗಳು ಹಾಸನಕ್ಕೆ ಭೇಟಿ ನೀಡಿದಾಗ ದೇವೇಗೌಡರ ಮಾರ್ಗದರ್ಶನದಲ್ಲಿ ಕಾಮಗಾರಿ ಆರಂಭಿಸುತ್ತೇನೆ ಎಂದಿದ್ದರು. ಆದರೆ ಈಗ ಕಾಟಾಚಾರಕ್ಕೆ ಕಾಮಗಾರಿಯನ್ನು ಮಾಡಲು ಮುಂದಾಗಿದ್ದಾರೆ. ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಆಶ್ವಾಸನೆಯನ್ನು ಈಡೇರಿಸಬೇಕು ಅದನ್ನು ಬಿಟ್ಟು ಈ ರೀತಿ ದ್ರೋಹ ಬಗೆಯುವುದಿ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ:  ಬಿಜೆಪಿಯಲ್ಲಿ ನಾಯಕತ್ವ ಬಗ್ಗೆ ಭಿನ್ನಾಭಿಪ್ರಾಯವಿಲ್ಲ: ನಳೀನ್ ಕುಮಾರ್ ಕಟೀಲ್

    ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಡಿನೋಟಿಫಿಕೇಶನ್ ಮಾಡಬಾರದು ಸತತವಾಗಿ 13 ವರ್ಷಗಳಿಂದ ವಿಮಾನ ನಿಲ್ದಾಣ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಜೆಡಿಎಸ್ ಶಾಸಕರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂಬ ದ್ವೇಷದಿಂದ ಈ ರೀತಿ ಮಾಡುತ್ತಿದ್ದಾರೆ. ಹಾಗೇನಾದರೂ ಆದರೆ ದೇವೇಗೌಡರ ನೇತೃತ್ವದಲ್ಲಿ ಜಿಲ್ಲೆಯ ಆರು ಜನ ಜೆಡಿಎಸ್ ಶಾಸಕರು ಬೆಂಗಳೂರಿನಲ್ಲಿ ಅಥವಾ ಹಾಸನದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಒಳ್ಳೆಯ ಅಭಿವೃದ್ಧಿ ತಡೆಹಿಡಿದಿದ್ದಾರೆ ಎನ್ನುವವರು ಪಕ್ಷಾತೀತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಹುದು ಎಂದು ಕರೆಕೊಟ್ಟರು. ಇದನ್ನೂ ಓದಿ:  ಸಿನಿಮಾದಲ್ಲಿ ಸೋನು ಸೂದ್‍ಗೆ ಹೊಡೆದದ್ದಕ್ಕೆ ಮನೆ ಟಿವಿ ಕುಟ್ಟಿಪುಡಿ ಮಾಡಿದ ಪೋರ

    ವಿಮಾನ ನಿಲ್ದಾಣದ ಹೆಸರಲ್ಲಿ ನಾನು ರಾಜಕೀಯ ಮಾಡುತ್ತಾ ಇಲ್ಲ. ಕೊರೊನಾ ಕಾರಣದಿಂದ ಹಣಕಾಸಿನ ತೊಂದರೆ ಇದ್ದರೆ ನಿಲ್ಲಿಸಲಿ. ಅದನ್ನು ಬಿಟ್ಟು ಈ ರೀತಿ ರಾಜಕೀಯ ಮಾಡಬಾರದು ಎಂದು ಗುಡುಗಿದರು. ಇದನ್ನೂ ಓದಿ: ನಾಳೆಯಿಂದ ಪಿಯುಸಿ ಕಾಲೇಜುಗಳು ಪ್ರಾರಂಭ- ಆನ್‍ಲೈನ್ ಮೂಲಕ ಪಠ್ಯ ಬೋಧನೆ

  • ಸುಳ್ಳು ಹೇಳುವ ಮಂತ್ರಿ ಸುರೇಶ್ ಕುಮಾರ್: ರೇವಣ್ಣ ಕಿಡಿ

    ಸುಳ್ಳು ಹೇಳುವ ಮಂತ್ರಿ ಸುರೇಶ್ ಕುಮಾರ್: ರೇವಣ್ಣ ಕಿಡಿ

    ಹಾಸನ: ಈ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಬಡವರ ಮಕ್ಕಳಿಗೆ ಶಿಕ್ಷಣ ಕೊಡಲು ಆಗುತ್ತಿಲ್ಲ. ಪ್ರಾಥಮಿಕ ಶಿಕ್ಷಣ ಕುಸಿದು ಹೋಗುತ್ತಿದೆ. ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಬಂದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ವಿರುದ್ಧ ಮಾಜಿ ಸಚಿವ ಹೆಚ್‍ಡಿ ರೇವಣ್ಣ ಕಿಡಿಕಾರಿದ್ದಾರೆ.

    ಸುಳ್ಳು ಹೇಳುವ ಮಂತ್ರಿ ಸುರೇಶ್ ಕುಮಾರ್, ಬರಿ ಬೂರಿ ಬುಡ್ಕಂಡು ಇದ್ದಾರೆ. ನಾವು ಮೊಸಳೆ ಹೊಸಳ್ಳಿ ಶಾಲೆಯನ್ನು ದತ್ತು ಪಡೆಯುತ್ತೇನೆ. ಎಷ್ಟೇ ಖರ್ಚಾಗಲಿ, ಎಲ್ಲಾ ಮಕ್ಕಳಿಗೂ ಎರಡು ಜೊತೆ ಸಮವಸ್ತ್ರ, ಟ್ಯಾಬ್ ಕೊಡುತ್ತೇನೆ. ವಿದ್ಯೆ ದಾನವಾಗಿಲ್ಲ, ವಿದ್ಯೆ ಮಾರಾಟವಾಗಿದೆ ಎಂದು ಹೇಳಿದ್ದಾರೆ.

    ನೊಂದು ಹೇಳುತ್ತಿದ್ದೇನೆ ಇಂದು ವಿದ್ಯಾ ಸಂಸ್ಥೆಗಳು ಮಾರಾಟ ಕೇಂದ್ರವಾಗಿವೆ. ಯಡಿಯೂರಪ್ಪ ಅವರಿಗೆ ಕಣ್ಣು ಕಾಣಲ್ಲ. ಪಾಪ ಅವರ ಪರಿಸ್ಥಿತಿಯೇ ಬೇರೆ ಇದೆ. ಎರಡು ವರ್ಷ ಇರುತ್ತೇನೋ, ಎರಡೂವರೆ ವರ್ಷ ಇರುತ್ತೇನೋ ಅಷ್ಟರೊಳಗೆ ದುಡ್ಡು ಮಾಡ್ಕಂಡು ಹೋಗೋಣ ಎಂಬ ಚಿಂತೆಯಲ್ಲಿ ಯಡಿಯೂರಪ್ಪ ಇದ್ದಾರೆ ಎಂದು ರೇವಣ್ಣ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಆಡಿಯೋ, ವೀಡಿಯೋ, ಫೋನ್ ಟ್ಯಾಪಿಂಗ್ ಕುಮಾರಸ್ವಾಮಿಗೆ ಅಭ್ಯಾಸ ಆಗಿದೆ: ಸುಮಲತಾ

    ಭವಾನಿ ರೇವಣ್ಣ ಚುನಾವಣೆಗೆ ಸ್ಪರ್ಧಿಸುವ ವಿಚಾರವಾಗಿ ಮಾತನಾಡಿದ ಅವರು, ನಾನು ಚುನಾವಣೆಗೆ ಸ್ಪರ್ಧಿಸಲ್ಲ, ಬೇರೆಯವರಿಗೆ ಟಿಕೆಟ್ ಕೊಡಿ ಎಂದಿದ್ದಾರೆ ಭವಾನಿ ರೇವಣ್ಣ. ಪ್ರತಿ ತಾಲೂಕಿಗೆ ಹೋಗಿ ಕಾರ್ಯಕರ್ತರನ್ನು ಕೇಳುತ್ತೇನೆ. ಅವರು ಏನು ಹೇಳುತ್ತಾರೋ ಅವರಿಗೆ ಟಿಕೆಟ್ ಕೊಡುತ್ತೇವೆ. ಈ ಬಗ್ಗೆ ಪಕ್ಷದ ಮುಖಂಡರು ತೀರ್ಮಾನ ಮಾಡುತ್ತಾರೆ ಎಂದರು.

  • ಹತ್ತು ಲಕ್ಷ ಹಣದೊಂದಿಗೆ ಸುದ್ದಿಗೋಷ್ಠಿ ನಡೆಸಿದ ಹೆಚ್‍ಡಿ.ರೇವಣ್ಣ, ಶಿವಲಿಂಗೇಗೌಡ

    ಹತ್ತು ಲಕ್ಷ ಹಣದೊಂದಿಗೆ ಸುದ್ದಿಗೋಷ್ಠಿ ನಡೆಸಿದ ಹೆಚ್‍ಡಿ.ರೇವಣ್ಣ, ಶಿವಲಿಂಗೇಗೌಡ

    ಹಾಸನ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್, ಅರಸೀಕೆರೆ ನಗರಸಭೆಯ ಜೆಡಿಎಸ್ ಸದಸ್ಯರಿಗೆ 10 ಲಕ್ಷ ಹಣ ನೀಡಿ ಬಿಜೆಪಿಗೆ ಸೇರಲು ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ, ಹತ್ತು ಲಕ್ಷ ಹಣದ ಸಮೇತ ಮಾಜಿ ಸಚಿವ ಹೆಚ್‍ಡಿ.ರೇವಣ್ಣ ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

    ಹಾಸನದಲ್ಲಿ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೇವಣ್ಣ, ಈ ಬಗ್ಗೆ ಸಿಬಿಐ ತನಿಖೆ ಮಾಡಬೇಕು. ಪೊಲೀಸ್ ದೂರು ಕೊಡುತ್ತೇವೆ. ಸುಪ್ರೀಂ ಕೋರ್ಟ್ ಗೆ ಹೋಗುತ್ತೇನೆ. ನಾಲ್ಕೈದು ತಿಂಗಳಿನಿಂದ ನಮ್ಮ ಸದಸ್ಯರಿಗೆ ಧಮ್ಕಿ ಹಾಕುತ್ತಿದ್ದಾರೆ. ಬಿಜೆಪಿಗೆ ಸೇರದೇ ಹೋದರೆ ನಿಮ್ಮನ್ನು ಮುಗಿಸುತ್ತೇನೆ ಅಂತಿದ್ದಾರೆ. ರಾಜ್ಯದಲ್ಲಿ ಕಾನೂನು ಇಲ್ಲ, ಅಧಿಕಾರಕ್ಕೋಸ್ಕರ ಏನು ಬೇಕಾದರು ಮಾಡುತ್ತಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ:ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ: ರೇವಣ್ಣ

    ಬಿಜೆಪಿಗೆ ಸೇರಲು ಆಮಿಷ ಒಡ್ಡಿರುವ ಬಗ್ಗೆ ಸಮಗ್ರ ತನಿಖೆಯಾಗಬೇಕು. ಅವರ ಫೋನ್ ಕಾಲ್ ಗಳನ್ನು ಪರಿಶೀಲಿಸಬೇಕು. ಇದಕ್ಕೆ ಮುಖ್ಯಮಂತ್ರಿಯವರೇ ನೇರ ಹೊಣೆ. ಮುಖ್ಯಮಂತ್ರಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ರೇವಣ್ಣ ಆಗ್ರಹಿಸಿದರು.

    ಅರಸೀಕೆರೆ ನಗರಸಭೆಯಲ್ಲಿ ಜೆಡಿಎಸ್ ಬಹುಮತ ಹೊಂದಿದ್ದರೂ ಮೀಸಲಾತಿ ಆಧಾರದ ಮೇಲೆ ಬಿಜೆಪಿಯವರು ಅಧ್ಯಕ್ಷರಾಗಿದ್ದಾರೆ. ಇತ್ತೀಚೆಗೆ ಜೆಡಿಎಸ್‍ನ ಏಳು ಜನ ನಗರಸಭೆ ಸದಸ್ಯರು ಜೆಡಿಎಸ್‍ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬೆಂಬಲ ಸೂಚಿಸಿದ್ದರು. ಅವರಿಗೆಲ್ಲ ಹಣ ನೀಡಲಾಗಿದೆ ಎನ್ನುವುದು ರೇವಣ್ಣ ಮತ್ತು ಶಿವಲಿಂಗೇಗೌಡರ ಆರೋಪವಾಗಿದೆ.

  • ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ: ರೇವಣ್ಣ

    ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ: ರೇವಣ್ಣ

    ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ. ನಮ್ಮಲ್ಲಿ ಕಚ್ಚಾಟವಿಲ್ಲ, ಆರಾಮಾಗಿದ್ದೇವೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅಧಿಕಾರ ಕೊಟ್ಟರೆ ಒಳ್ಳೆಯ ಕೆಲಸ ಮಾಡುತ್ತೇವೆ, ಇಲ್ಲ ಸುಮ್ಮನ್ನಿರುತ್ತೇವೆ. ಈ ಹಿಂದೆ ಅಧಿಕಾರ ಕೊಟ್ಟಿದ್ದರು 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇವೆ. ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ನಾನು ಮುಖ್ಯಮಂತ್ರಿ ಎಂದು ಒಬ್ಬರಿಗೊಬ್ಬರು ಹೊಡೆದಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಆ ರೀತಿ ಇಲ್ಲ ಎಂದು ತಿಳಿಸಿದರು.

    ಕೋವಿಡ್ ಹೆಸರಿನಲ್ಲಿ ಗ್ರಾ.ಪಂ. ಅನುದಾನವನ್ನು ಕಡಿತ ಮಾಡಿದ್ದಾರೆ, ಎಂಎಲ್‍ಎ ಅನುದಾನವನ್ನು ಕೊಟ್ಟಿಲ್ಲ. ಗ್ರಾಮ ಪಂಚಾಯಿತಿಯ ಹಕ್ಕನ್ನು ಕಸಿದುಕೊಳ್ಳಬೇಡಿ. ಸರ್ಕಾರ ಇದನ್ನು ಸರಿಪಡಿಸದಿದ್ದರೆ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಒಳಗೊಂಡಂತೆ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿ, ನಂತರ ರಾಜ್ಯಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

    ಸರ್ಕಾರಕ್ಕೆ ನಾಚಿಕೆಯಾಗಬೇಕು, ಇದನ್ನು ಸರ್ಕಾರ ಎನ್ನುತ್ತಾರಾ? ಸರ್ಕಾರ ಲೂಟಿಕೋರರ ಕೈಸೇರಿದೆ, ಕೊರೊನಾ ಹೆಸರಿನಲ್ಲಿ ರಾಜ್ಯದಲ್ಲಿ ಲೂಟಿ ನಡೆಯುತ್ತಿದೆ. ಮೋದಿಯವರೇ ಸರ್ಕಾರವನ್ನು ಲೂಟಿಕೋರರ ಕೈಗೆ ಕೊಟ್ಟಿದ್ದೀರಾ, ಕೇಂದ್ರ ಸರ್ಕಾರ ನೀಡುವ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮುಕ್ತ ಮಾಡುತ್ತೇನೆ, ಅಚ್ಛೆ ದಿನ್ ಬರುತ್ತೆ ಎಂದು ಮೋದಿ ಹೇಳುತ್ತಾರೆ. ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ತರಿಸಿಕೊಳ್ಳಿ. ಇದು ದಪ್ಪ, ಎಮ್ಮೆ ಚರ್ಮದ ಸರ್ಕಾರ. ಸರ್ಕಾರಕ್ಕೂ ಕೊರೊನಾ ಇದೆಯೋ ಗೊತ್ತಿಲ್ಲ, ಅದನ್ನು ರಿಪೇರಿ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜೆಡಿಎಸ್ ಸದಸ್ಯರಿಂದ ಬಿಜೆಪಿಗೆ ಬೆಂಬಲ
    ಅರಸೀಕೆರೆ ನಗರಸಭೆಯ 7 ಜೆಡಿಎಸ್ ಸದಸ್ಯರು ಹಾಗೂ ಒಬ್ಬ ಪಕ್ಷೇತರ ಸದಸ್ಯ ಬಂಡಾಯ ಬಾವುಟ ಹಾರಿಸಿದ್ದಾರೆ. ತಮಗೆ ಪ್ರತ್ಯೇಕ ಆಸನ ನೀಡುವಂತೆ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. 31 ಸದಸ್ಯರನ್ನು ಒಳಗೊಂಡಿರುವ ಅರಸೀಕೆರೆ ನಗರಸಭೆಯಲ್ಲಿ 21 ಮಂದಿ ಜೆಡಿಎಸ್ ನಿಂದ ಗೆದ್ದುಬಂದಿದ್ದು, ಬಿಜೆಪಿಯಿಂದ 6 ಹಾಗೂ ಪಕ್ಷೇತರ 3 ಮತ್ತು ಕಾಂಗ್ರೆಸ್ ಒಬ್ಬರು ಆಯ್ಕೆಯಾಗಿದ್ದಾರೆ.

    ಜೆಡಿಎಸ್ ಶಾಸಕ ಶಿವಲಿಂಗೇಗೌಡರ ವಿರುದ್ಧ ಮುನಿಸಿಕೊಡಿರುವ ಜೆಡಿಎಸ್‍ನ ಏಳು ಸದಸ್ಯರು, ತಮಗೆ ಯಾವುದೇ ರೀತಿ ಸ್ಪಂದನೆಯನ್ನು ಈಗಿರೋ ನಾಯಕರು ನೀಡುತ್ತಿಲ್ಲ. ಮೀಸಲಾತಿಯನ್ವಯ ಈಗ ಬಿಜೆಪಿಯವರು ಅರಸೀಕೆರೆ ನಗರಸಭೆ ಅಧ್ಯಕ್ಷರಾಗಿದ್ದಾರೆ. ಅವರು ಉತ್ತಮವಾಗಿ ಕೆಲಸ ಮಾಡಬೇಕಾದರೆ ನಮ್ಮೆಲ್ಲರ ಸಹಕಾರ ಬೇಕಾಗಿರುತ್ತದೆ. ಇದರಿಂದ ನಾವೂ ಉತ್ತಮವಾಗಿ ಜನಸೇವೆ ಮಾಡಬಹುದು ಎಂಬ ಕಾರಣ ನೀಡಿ, ಬಿಜೆಪಿಗೆ ಬೆಂಬಲ ನೀಡುವುದಾಗಿ ತಿಳಿಸಿ, ಪ್ರತ್ಯೇಕ ಆಸನ ವ್ಯವಸ್ಥೆ ಮಾಡುವಂತೆ ಡಿಸಿಗೆ ಮನವಿ ಮಾಡಿದ್ದಾರೆ. ಜೊತೆಗೆ ಅರಸೀಕೆರೆ ನಗರಸಭೆಗೆ ಜೆಡಿಎಸ್‍ನಿಂದ 21 ಜನ ಆಯ್ಕೆಯಾಗಿದ್ದು, ಆ ಸಂಖ್ಯೆಯ ಮೂರನೇ ಒಂದು ಭಾಗವಾಗಿ ನಾವು ಏಳುಜನ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆಯನ್ನು ನೀಡಿದ್ದೇವೆ. ಹೀಗಾಗಿ ನಾವು ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದಂತೆ ಆಗುವುದಿಲ್ಲ ಎನ್ನುತ್ತಿದ್ದಾರೆ.

    ಶಿವಲಿಂಗೇಗೌಡ ಆಕ್ರೋಶ
    ಈ ಬೆಳವಣಿಗೆಯಿಂದ ಕೆರಳಿದ ಶಾಸಕ ಶಿವಲಿಂಗೇಗೌಡ, ಈ ರಾಜಕೀಯ ಕುಚೇಷ್ಟೆ ಹಿಂದೆ ನೇರವಾಗಿ ಬಿಜೆಪಿ ಇದೆ ಎಂದು ಆರೋಪ ಮಾಡಿದ್ದಾರೆ. ಜೊತೆಗೆ ಅರಸೀಕೆರೆಗೆ ರಾಜಕೀಯ ಆಸರೆ ಪಡೆಯಲು ಬಂದವರೊಬ್ಬರು ಇದನ್ನೆಲ್ಲ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಸಮ್ಮಿಶ್ರ ಸರ್ಕಾರವನ್ನೇ ಕೆಡವಿದವರಿಗೆ ಅರಸೀಕೆರೆ ನಗರಸಭೆ ಕೆಡವಲು ಆಗಲ್ವೇ ಎಂದು ಪರೋಕ್ಷವಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ರಾಜಕೀಯ ದಾಳದ ಬಗ್ಗೆ ತಿರುಗಿಬಿದ್ದಿದ್ದಾರೆ. ಈ ವಿಚಾರವಾಗಿ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಈ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಅರಸೀಕೆರೆಯಲ್ಲಿ ಜೆಡಿಎಸ್ ಸಂಖ್ಯಾ ಬಲ ಜಾಸ್ತಿ ಇದ್ದರೂ ಮೀಸಲಾತಿ ಆಧಾರದ ಮೇಲೆ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಅಲಂಕರಿಸಿದ್ದಾರೆ. ಆದರೆ ಜೆಡಿಎಸ್ ಭದ್ರ ಕೋಟೆಯಾಗಿರುವ ಅರಸೀಕೆರೆಯಲ್ಲಿ ಬಿಜೆಪಿ ಇಷ್ಟೆಲ್ಲಾ ಕಸರತ್ತು ಮಾಡುತ್ತಿದೆ ಎಂದರೆ ಅದರ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಇದ್ದಾರೆ ಅನ್ನೋ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಎನ್.ಆರ್.ಸಂತೋಷ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ, ಅರಸೀಕೆರೆಯಿಂದ ಸ್ಪರ್ಧೆಗೆ ಸಿದ್ಧ ಎಂದು ಈ ಹಿಂದೆ ಕೂಡ ಸ್ಪಷ್ಟವಾಗಿ ಹೇಳಿದ್ದರು. ಅಲ್ಲದೆ ನಿರಂತರವಾಗಿ ಅರಸೀಕೆರೆಯಲ್ಲಿ ಓಡಾಡುತ್ತಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್, ಈಗ ತೆರೆಮರೆಯಲ್ಲೇ ತಮ್ಮ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಇದೆಲ್ಲದರ ಮಧ್ಯೆ ಜೆಡಿಎಸ್ ನಾಯಕರು ತಮ್ಮ ಸದಸ್ಯರನ್ನು ಹೇಗೆ ಮನವೊಲಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

  • ಸಿದ್ದರಾಮಯ್ಯ ಬಿಟ್ಟರೆ ಕಾಂಗ್ರೆಸ್ ಝೀರೊ: ರೇವಣ್ಣ

    ಸಿದ್ದರಾಮಯ್ಯ ಬಿಟ್ಟರೆ ಕಾಂಗ್ರೆಸ್ ಝೀರೊ: ರೇವಣ್ಣ

    ಹಾಸನ: ಸಿದ್ದರಾಮಯ್ಯ ಇರೋದಕ್ಕೆ ಕಾಂಗ್ರೆಸ್‍ಗೆ 70 ಸೀಟ್ ಬಂದಿದೆ. ಸಿದ್ದರಾಮಯ್ಯನವರನ್ನು ಬಿಟ್ಟರೆ ಕಾಂಗ್ರೆಸ್ ಝೀರೊ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ಜೆಡಿಎಸ್ ಬಗ್ಗೆ ಮಾಡುವ ಟೀಕೆಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯರಿಂದ ಕಾಂಗ್ರೆಸ್ ಉಳಿದುಕೊಂಡಿದೆ. ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದೇ ಹೋಗೋದು. ದೇವೇಗೌಡರನ್ನು, ಕುಮಾರಣ್ಣನನ್ನು ಮುಗಿಸಿದ್ದು ಕಾಂಗ್ರೆಸ್. ದೇವೇಗೌಡರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿದ ಶಾಪದಿಂದಾಗಿ ಕಾಂಗ್ರೆಸ್ ಈ ಪರಿಸ್ಥಿತಿಗೆ ಬಂದಿದೆ ಎಂದು ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ನಿಷ್ಕ್ರಿಯ ರಾಜ್ಯ ಸರ್ಕಾರವನ್ನ ವಜಾಗೊಳಿಸಬೇಕು: ಸಿದ್ದರಾಮಯ್ಯ

    ಗೃಹ ಸಚಿವರನ್ನು ಭೇಟಿ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹೊಳೆನರಸೀಪುರದಲ್ಲಿ ಪೊಲೀಸ್ ಠಾಣೆ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಇದರ ಕೆಲಸ ಅರ್ಧಕ್ಕೆ ನಿಂತಿದೆ, ಹೀಗಾಗಿ ಸಚಿವರನ್ನು ಭೇಟಿ ಮಾಡಿದೆ. ಅವರ ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ. ರಾಜಕೀಯ ಚರ್ಚೆ ಮಾಡೋಕೆ ನಾನೇನು ರಾಷ್ಟ್ರೀಯ ನಾಯಕನಾ ಎಂದು ರೇವಣ್ಣ ಪ್ರಶ್ನಿಸಿದರು.