Tag: HD Revanna

  • 2023ಕ್ಕೆ ನಾವು ಏನು ಅಂತ ತೋರಿಸ್ತೇವೆ: ರೇವಣ್ಣ

    2023ಕ್ಕೆ ನಾವು ಏನು ಅಂತ ತೋರಿಸ್ತೇವೆ: ರೇವಣ್ಣ

    – ಅರವಿಂದ್ ಲಿಂಬಾವಳಿ ಥರ್ಡ್ ಕ್ಲಾಸ್

    ಹಾಸನ: ಬಿಜೆಪಿ ಉಪಾಧ್ಯಕ್ಷ ಇದಾನಲ್ಲ ಅವನು ಥರ್ಡ್ ಕ್ಲಾಸ್. ಆತ ಬಿಜೆಪಿ ಉಪಾಧ್ಯಕ್ಷ ಆಗಲಿಕ್ಕೆ ಅನ್ ಫಿಟ್ ಎಂದು ಅರವಿಂದಲಿಂಬಾವಳಿ ವಿರುದ್ಧ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಜೆಡಿಎಸ್ ಮತ್ತು ಬಿಜೆಪಿ ವಿಲೀನ ಆಗುವ ಪ್ರಶ್ನೆಯೇ ಇಲ್ಲ. ದೇವೇಗೌಡರು ಬದುಕಿರುವವರೆಗೆ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ. ರಾಷ್ಟ್ರೀಯ ಪಕ್ಷಕ್ಕೆ ಹೀಗೆ ಹೇಳಿಕೆ ಶೋಭೆ ತರುವಂತಹದ್ದಲ್ಲ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿವೆ ಹೊರತು ಬೇರೆ ಇನ್ಯಾವುದಕ್ಕೂ ಅಲ್ಲ. ಇಂತಹ ಹೇಳಿಕೆಗಳಿಂದ ಜೆಡಿಎಸ್ ಹೆದರುವುದಿಲ್ಲ ಎಂದರು.

    ಜನವರಿಯ ನಂತರ ಪಕ್ಷ ಎಂದರೇನು ಎಂದು ತೋರಿಸುತ್ತೇವೆ. ಕುಮಾರಸ್ವಾಮಿ ಮತ್ತು ದೇವೇಗೌಡರ ಜೊತೆ ಮಾತನಾಡಿದ್ದೇನೆ. ಯಾವುದೇ ಸರ್ಕಾರ ಬಂದರೂ ದೇವೇಗೌಡರ ಕುಟುಂಬಕ್ಕೆ ಕಿರುಕುಳ ನೀಡೋದು ಹೊಸತೇನಲ್ಲ. ಆದರೆ ನಾವು ಸರ್ಕಾರಕ್ಕೆ ತೊಂದರೆ ಯಾಕೆ ಕೊಡಬೇಕೆಂದು ಸುಮ್ಮನಾಗಿದ್ದೆವು ಅಷ್ಟೆ. 2023ಕ್ಕೆ ನಾವು ಏನು ಅಂತ ತೋರಿಸುತ್ತೇವೆ. ಹೆದರಿಕೊಂಡು ಎಲ್ಲಿಗೂ ಹೋಗುವುದಿಲ್ಲ. ನಮ್ಮ ಕಾರ್ಯಕರ್ತರು ಇನ್ನೂ ರಾಜ್ಯದಲ್ಲಿದ್ದಾರೆ. ದ್ವೇಷದ ರಾಜಕಾರಣದಿಂದ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಜನ ಪಾಠ ಕಲಿಸಲಿದ್ದಾರೆ ಎಂದರು.

  • ನಿಂಬೆಹಣ್ಣು ಇಟ್ಕೊಳ್ಳೋ ಪ್ರಶ್ನೆಗೆ ರೇವಣ್ಣ ಖಡಕ್ ಉತ್ತರ

    ನಿಂಬೆಹಣ್ಣು ಇಟ್ಕೊಳ್ಳೋ ಪ್ರಶ್ನೆಗೆ ರೇವಣ್ಣ ಖಡಕ್ ಉತ್ತರ

    – ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ

    ಹಾಸನ: ನಿಂಬೆಹಣ್ಣು ಇಟ್ಟುಕೊಳ್ಳುವುದು ಯಾಕೆ ಎಂಬ ಪ್ರಶ್ನೆಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಉತ್ತರಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರೇವಣ್ಣ ಯಾವಾಗಲೂ ಕೈಯಲ್ಲಿ ನಿಂಬೆಹಣ್ಣು ಇಟ್ಟುಕೊಳ್ತಾರೆ ಎಂಬ ಸಚಿವ ಸೋಮಶೇಖರ್ ಆರೋಪಕ್ಕೆ ಪ್ರತಿಕ್ರಿಯಿಸಿದರು. ದುಷ್ಟ ಶಕ್ತಿಗಳನ್ನ ಎದುರಿಸಲು ನಿಂಬೆಹಣ್ಣು ಇಟ್ಟುಕೊಳ್ಳಬೇಕು, ಅದಕ್ಕೆ ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ. ಶತ್ರು ವೈರಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ. ಮಾಟ-ಮಂತ್ರ ಮಾಡ್ತಾರಲ್ಲಾ ಅವನ್ನ ಎದುರಿಸಲು ನಿಂಬೆಹಣ್ಣು ಇಟ್ಟುಕೊಳ್ಳಬೇಕಲ್ವಾ. ಇನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರೇ ನಿಂಬೆಹಣ್ಣು ಇಟ್ಟುಕೊಂಡಿದ್ದಾರೆ. ಇನ್ನು ನಾನು ನಿಂಬೆಹಣ್ಣು ಇಟ್ಟುಕೊಳ್ಳೋದ್ರಲ್ಲಾ ತಪ್ಪೇನಿದೆ ಎಂದು ರೇವಣ್ಣ ಇದೇ ವೇಳೆ ಪ್ರಶ್ನಿಸಿದರು.

    ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾ.ಪಂ ಚುನಾವಣೆ ನಡೆಯುತ್ತಿದೆ. ನ್ಯಾಯಾಲಯ ನಿರ್ದೇಶನ ನೀಡಿದ ಬಳಿಕ ಈಗ ಸರ್ಕಾರ ಗ್ರಾಪಂ ಚುನಾವಣೆ ನಡೆಸುತ್ತಿದೆ. ಚುನಾವಣೆ ನ್ಯಾಯಯುತವಾಗಿ ನಡೆಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ ಎಂದರು.

    ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿಯ ಅಭ್ಯರ್ಥಿಗಳಿಗೆ ಪಿಡಿಓ ಹಾಗೂ ಕಾರ್ಯದರ್ಶಿಗಳು 10 ರಿಂದ 20 ಸಾವಿರ ಹಣ ನೀಡುವಂತೆ ದೊಡ್ಡಮಟ್ಟದ ಬಿಜೆಪಿ ನಾಯಕರು ಸೂಚಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಗ್ರಾಪಂ, ಪಿಡಿಓ ಮತ್ತು ವಂತಿಕೆ ನೀಡಬೇಕು ಎಂದು ಬಿಜೆಪಿ ನಾಯಕರು ಸೂಚಿಸಿದ್ದಾರೆ. ಹಣ ಕೊಡುವಂತೆ ಸೂಚಿಸಿದ್ದಾರೆ ಎಂದು ಅಧಿಕಾರಿಗಳೇ ಬಂದು ನಮಗೆ ಹೇಳಿದ್ದಾರೆ ಎಂದು ಸರ್ಕಾರದ ವಿರುದ್ಧ ರೇವಣ್ಣ ಹೊಸ ಬಾಂಬ್ ಸಿಡಿಸಿದರು.

    ಗ್ರಾಮ ಪಂಚಾಯ್ತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ತಿದ್ದೀವಿ. ವೆಂಕಟರಮಣಸ್ವಾಮಿ ಗೋವಿಂದಾ, ಗೋವಿಂದಾ ಅಂತ ಜನಗಳ ಪಾದಕ್ಕೆ ಕೈಮುಗಿತೀವಿ ಅಂತ ರೇವಣ್ಣ ತಿಳಿಸಿದ್ದಾರೆ.

    ಹಾಸನದ ವಿಮಾನ ನಿಲ್ದಾಣವನ್ನು ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಮಾಡಿದ ಅವರು, ಬಿಜೆಪಿಯವರು ಯಾವ ನೈತಿಕತೆ ಇಟ್ಟುಕೊಂಡು ಮತ ಕೇಳ್ತಾರೆ ಎಂದು ಟೀಕೆ ಮಾಡಿದರು. ವ್ಯಾಪಾರ ಮಾಡುವಂತಹ ಗ್ರಾಮ ಸ್ವರಾಜ್ ಸಮಾವೇಶ ಮಾಡುತ್ತಿದ್ದಾರೆಂದು ರೇವಣ್ಣ ಆಕ್ರೋಶ ಹೊರಹಾಕಿದರು.

    ಹಾಸನ ಬೇಲೂರು ರಸ್ತೆಗೆ 800 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ನಾವು ಅನುಮೋದನೆ ಮಾಡಿದ್ದೆವು. ಬಿಳಿಕೆರೆಯಿಂದ ಯಡೇಗೌಡನಹಳ್ಳಿ ಮತ್ತು ಹಾಸನದಿಂದ ಬೇಲೂರಿಗೆ ರಾಷ್ಟ್ರೀಯ ಹೆದ್ದಾರಿಯನ್ನ ನಾವು ಅನುಮೋದನೆ ಮಾಡಿದ್ದೆವು. ಬಿಳಿಕೆರೆಯಿಂದ ಬೇಲೂರಿಗೆ ರಾಷ್ಟ್ರೀಯ ಹೆದ್ದಾರಿಯನ್ನ ಸರ್ಕಾರದ ರದ್ದು ಮಾಡಿದೆ. ಬಿಜೆಪಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ಎರಡು ರಾಷ್ಟ್ರೀಯ ಪಕ್ಷಗಳು ಸೇರಿ ಮಂಡ್ಯದಲ್ಲಿ ಕುಮಾರಸ್ವಾಮಿ ಮಗನನ್ನು ಸೋಲಿಸಿದರು. ನಾವು ಯಾವಾಗಲೂ ರಾಷ್ಟ್ರೀಯ ಪಕ್ಷಗಳಿಂದ ದೂರ ಇದ್ದೇವೆ. 2023ಕ್ಕೆ ಇನ್ನೊಂದು ಟವಲ್ ಹಾಕ್ತೀವಿ, 2021 ಕ್ಕೂ ಅಥವಾ 2022ಕ್ಕೋ ನೋಡೋಣ. ಕಾಂಗ್ರೆಸ್ ಮತ್ತು ಬಿಜೆಪಿ ಬಿಡೋರೇ ಹೆಚ್ಚಾಗಿದ್ದಾರೆ. ರಾಜ್ಯ ಮತ್ತು ರಾಷ್ಟ್ರದ ಚುನಾವಣಾ ಆಯೋಗ ಏನು ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

  • ನನ್ನನ್ನ ಜೈಲಿಗೆ ಹಾಕಲಿ, ಅಲ್ಲಿ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ: ರೇವಣ್ಣ

    ನನ್ನನ್ನ ಜೈಲಿಗೆ ಹಾಕಲಿ, ಅಲ್ಲಿ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ: ರೇವಣ್ಣ

    ಹಾಸನ: ನನ್ನನ್ನು ಜೈಲಿಗೆ ಹಾಕಲಿ, ನಾನು ಹೋರಾಟ ಮಾಡುತ್ತೇನೆ. ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪಚುನಾವಣೆ ಕಳೆದ ಬಳಿಕ ಕೆಇಬಿ ಬಿಲ್ ಹೆಚ್ಚು ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಮಂಗಳೂರು ವಿಮಾನ ನಿಲ್ದಾಣವನ್ನು ಅಂಬಾನಿ ಕಂಪನಿಗೆ ಕೊಡಲಾಗಿದೆ. ಇನ್ನೂ ಈ ಕೆಇಬಿಯನ್ನ ಯಾವ ಕಂಪನಿಗೆ ಮಾರಾಟ ಮಾಡ್ತಾರೋ ಗೊತ್ತಿಲ್ಲಾ ಎಂದು ರೇವಣ್ಣ ಅವರು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.

    ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ. ಪ್ರತೀ ಯೂನಿಟ್‍ಗೆ 40 ಪೈಸೆ ಅಂದರೆ ಎಷ್ಟು ಹಣವಾಗುತ್ತೆ ಹೇಳಿ. ರಾಜ್ಯದಲ್ಲಿ ರಾಜಕೀಯ ದ್ವೇಷ ಹೆಚ್ಚಾಗಿದೆ ರಾಜಕೀಯ ದುರುದ್ದೇಶ ಹೆಚ್ಚಾಗಿದೆ. ಇದು ಬಿಜೆಪಿಗೇ ತಿರುಗುಬಾಣವಾಗಲಿದೆ. ವಿಪಕ್ಷಗಳನ್ನ ಹತ್ತಿಕ್ಕಲು ದುರುದ್ದೇಶದಿಂದ ನಾಲ್ಕು ವರ್ಷದ ಹಿಂದಿನ ಕೇಸ್ ನ್ನು ಮತ್ತೆ ರೀಓಪನ್ ಮಾಡಿದ್ದಾರೆ. ತನಿಖಾ ಸಂಸ್ಥೆಗಳನ್ನ ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ನೀರಾವರಿ ಕಚೇರಿ ಮುಂದೆ ಪ್ರತಿಭಟನೆ ಮಾಡ್ಬೇಕಾಗುತ್ತದೆ. ನನ್ನನ್ನ ಜೈಲಿಗೆ ಹಾಕಲಿ ನಾನು ಹೋರಾಟ ಮಾಡುತ್ತೇನೆ ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ ಎಂದರು.

    ರಾಜ್ಯದ ಐದು ಕೆಇಬಿ ಕಂಪನಿಗಳಿಂದ 7996 ಕೋಟಿ ನಷ್ಟವಿದೆ ಎಂದು ಕೆಆರ್ ಸಿ ಕಂಪನಿಗಳು ಅರ್ಜಿ ಹಾಕಿದ್ದಾರೆ. ಈ ಕಂಪನಿಗಳು ಈ ಹಣ ಭರಿಸುವಂತೆ ಸರ್ಕಾರಕ್ಕೆ ಅರ್ಜಿ ಹಾಕಿದ್ದಾರೆ. ಈ ನಷ್ಟ ಸರಿದೂಗಿಸಲು ನಮ್ಮ ರೈತರನ್ನ ಸಂಕಷ್ಟಕ್ಕೆ ತಂದೊಡ್ಡಿದೆ. ಪ್ರತೀ ಯೂನಿಟ್ ಗೆ 40 ಪೈಸೆ ಹೆಚ್ಚು ಮಾಡಿದ್ದಾರೆ. ರಾಜ್ಯದ ಇಂಧನ ಇಲಾಖೆಯಲ್ಲಿ ಇದೊಂದು ದುರದೃಷ್ಟಕರ. ಜನ ಸಾಮಾನ್ಯರ ಮೇಲೆ ಹೊರೆ ಬೀಳುತ್ತಿದೆ ಎಂದು ಕಿಡಿಕಾರಿದರು.

    ನಾನು ಇಂಧನ ಸಚಿವನಾಗಿದ್ದಾಗ ಬೆಸ್ಕಾಂನಲ್ಲಿ 600 ಕೋಟಿ ಹಣ ಎಫ್ ಡಿ ಇಟ್ಟಿದ್ದೆ. ರೈತರಿಗೆ ಒಂದೊಂದು ವಿದ್ಯುತ್ ಟಿಸಿ ಹಾಕಲು 18 ಸಾವಿರ ಜೊತೆಗೆ ಲಂಚ ಸೇರಿ 40 ಸಾವಿರ ಹಣ ತಗೊಳ್ತಿದ್ದಾರೆ. ಕೆಇಬಿ ಕಂಟ್ರಾಕ್ಟರ್ ಗಳ ಬಾಕಿ ಬಿಲ್ ಎರಡರಿಂದ ಮೂರು ಸಾವಿರ ಬಾಕಿ ಇದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

    48 ಸಾವಿರ ಕುಟುಂಬಕ್ಕೆ ವೃದ್ಧಾಪ್ಯ ವೇತನ ಬಂದಿಲ್ಲ. ಈ ಸರ್ಕಾರ ಲೂಟಿಕೋರರ ಸರ್ಕಾರ. ಕೆಲ ಗುತ್ತಿಗೆದಾರರು ಅವರ ಹೆಂಡತಿಯ ತಾಳಿ ಮಾರಾಟ ಮಾಡ್ತಿದ್ದಾರೆ. ಪ್ರಧಾನಿ ಮೋದಿಯವರೇ ನಮ್ಮದು 10 ಪರ್ಸೆಂಟ್ ಸರ್ಕಾರ ಅಂತ ಹೇಳ್ತಿದ್ರೀ. ಈಗ ರಾಜ್ಯದಲ್ಲಿರುವ ನಿಮ್ಮದು ಯಾವ ಸರ್ಕಾರ ಹೇಳಿ ಎಂದು ಪ್ರಧಾನಿ ವಿರುದ್ಧ ಟೀಕೆ ಮಾಡಿದರು. ಇದೇ ವೇಳೆ ಹಾಸನಾಂಬ ದೇವಿ ರಾಜ್ಯದಲ್ಲಿನ ಭ್ರಷ್ಟಾಚಾರ ತೊಲಗಿಸಲಿ, ರಾಜ್ಯದ ಜನ್ರಿಗೆ ಒಳ್ಳೆಯದು ಮಾಡಲಿ ಎಂದು ಮಾಜಿ ಸಚಿವರು ಆಶಿಸಿದರು.

  • ಅಧಿಕಾರಿಗಳ ಬಗ್ಗೆ ರೇವಣ್ಣ ಹೇಳಿಕೆಗೆ ಪ್ರೀತಂ ಗೌಡ ತಿರುಗೇಟು

    ಅಧಿಕಾರಿಗಳ ಬಗ್ಗೆ ರೇವಣ್ಣ ಹೇಳಿಕೆಗೆ ಪ್ರೀತಂ ಗೌಡ ತಿರುಗೇಟು

    – ಪಾಳೇಗಾರಿಕೆ ಸಂಸ್ಕೃತಿ ನಡೆಯಲ್ಲ

    ಹಾಸನ: ಮಾಜಿ ಸಚಿವ ರೇವಣ್ಣ ಅವರು ಮಾಡಿದ್ರೆ ರಾಜಕಾರಣ, ಬೇರೆಯವರು ಮಾಡಿದ್ರೆ ಕಾನೂನು ಬಾಹಿರ ಅನ್ನೋದಾದ್ರೆ ನಾವು ಕೂಡ ರಾಜಕಾರಣಾನೆ ಮಾಡುತ್ತೀವಿ. ಹಾಸನದಲ್ಲಿ ಪಾಳೇಗಾರಿಕೆ ಸಂಸ್ಕೃತಿ ನಡೆಯಲ್ಲ ಎಂದು ಮಾಜಿ ಸಚಿವ ರೇವಣ್ಣಗೆ ಶಾಸಕ ಪ್ರೀತಂಗೌಡ ತಿರುಗೇಟು ನೀಡಿದ್ದಾರೆ.

    ಅಧಿಕಾರಿಗಳು ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರೇವಣ್ಣ ಆರೋಪ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ, ಮುಂಚೆ ಇವರು ಹೇಳಿದ್ದೇ ಶಾಸನ ಎಂಬಂತೆ ಇತ್ತು. ಆ ಶಾಸನ, ಪಾಳೇಗಾರಿಕೆ ಸಂಸ್ಕೃತಿ ಈಗ ನಡೆಯಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಜನ ಏನು ಅಪೇಕ್ಷೆ ಪಡುತ್ತಾರೋ ಆ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ರೇವಣ್ಣ ಅವರು ಅಧಿಕಾರಿಗಳ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದು ಕಿವಿಮಾತು ಹೇಳಿದ್ದಾರೆ. ಇದನ್ನೂ ಓದಿ: ಮಂಡ್ಯ, ತುಮಕೂರಲ್ಲಿ ಜೆಡಿಎಸ್ ಸೋಲಲು ಕಾಂಗ್ರೆಸ್, ಬಿಜೆಪಿ ಹೊಂದಾಣಿಕೆಯೇ ಕಾರಣ: ರೇವಣ್ಣ

    ಹಾಸನ ನಗರಸಭೆ ಅಧ್ಯಕ್ಷಗಾದಿ ಎಸ್‍ಟಿ ಪಂಗಡಕ್ಕೆ ಮೀಸಲಾಗಿರುವುದರ ಬಗ್ಗೆ ಅಸಮಾಧಾನ ಹೊರಹಾಕಿದ್ದ ರೇವಣ್ಣ ಇದು ಕಾನೂನು ಬಾಹಿರ ಎಂದು ಹೇಳಿದ್ರು. ಮಾಜಿ ಸಚಿವ ರೇವಣ್ಣ ಆರೋಪಕ್ಕೆ ಶಾಸಕ ಪ್ರೀತಂಗೌಡ ಖಡಕ್ಕಾಗೇ ಪ್ರತಿಕ್ರಿಯಿಸಿದ್ದು, ಸರ್ಕಾರ ಕಾನೂನಿನಂತೆ ಮೀಸಲಾತಿ ನಿಗದಿ ಮಾಡಿದೆ. ಈ ಹಿಂದೆ ಹಾಸನ ನಗರಸಭೆಯ 35 ವಾರ್ಡಿನ ಮೀಸಲಾತಿಯನ್ನ ಕಾಂಗ್ರೆಸ್ ಸರ್ಕಾರ ಇದ್ದಾಗ ಪ್ರಕಟಿಸಿತ್ತು. ಇವರು ಅಧಿಕಾರಕ್ಕೆ ಬಂದ ನಂತರ ಮೀಸಲಾತಿ ಯಾಕೆ ಬದಲಾಯಿಸಿದ್ರು ನೆನಪಿಸಿಕೊಳ್ಳಬೇಕು. ಆಗ ಕಾನೂನು ಎಲ್ಲಿ ಹೋಗಿತ್ತು. ಅವರು ಮಾಡಿದ್ರೆ ರಾಜಕಾರಣ, ಬೇರೆಯವರು ಮಾಡಿದ್ರೆ ಕಾನೂನು ಬಾಹಿರ ಅನ್ನೋದಾದ್ರೆ ನಾವು ರಾಜಕಾರಣಾನೇ ಮಾಡ್ತೀವಿ ಎಂದರು.

    4 ನೇ ವಾರ್ಡಿನಲ್ಲಿ ಅತೀ ಹೆಚ್ಚು ಪರಿಶಿಷ್ಟಜಾತಿ ಜನಾಂಗದವರಿದ್ರು. ಆದರೆ ಅದನ್ನು ಜನರಲ್ ಮಾಡಿ ಯಾವ ಕಾನೂನು ಪಾಲನೆ ಮಾಡಿದ್ರು. ರಾಜಕಾರಣದಲ್ಲಿ ಹಾಕುವ ಪಟ್ಟನ್ನ ರೇವಣ್ಣನವರೂ ಮಾಡಿದ್ರು. ನಾನು ಮಾಡ್ತೀನಿ. ಅದಕ್ಕೆ ಹತಾಶರಾಗದೆ ರೇವಣ್ಣ, ರಾಜಕಾರಣವನ್ನು ಒಪ್ಪಿಕೊಳ್ಳಬೇಕು. ಹಾಸನ ನಗರಸಭೆಯಲ್ಲಿ ಯಾರಿಗೂ ಬಹುಮತವಿಲ್ಲ. ಹಾಸನ ವಿಧಾನಸಭೆ ಜನ ಅವರ ಪರವಾಗಿಲ್ಲ ಎಂಬುದನ್ನು ರೇವಣ್ಣ ಅರ್ಥ ಮಾಡಿಕೊಳ್ಳಬೇಕು. ಹಾಸನ ಜನ ಅಭಿವೃದ್ಧಿ ಪರ, ಬಿಜೆಪಿ ಪರ ಇದ್ದಾರೆ. ಹೀಗಾಗಿ ರೇವಣ್ಣ ಅವರು ನಮಗೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

  • ಮಂಡ್ಯ, ತುಮಕೂರಲ್ಲಿ ಜೆಡಿಎಸ್ ಸೋಲಲು ಕಾಂಗ್ರೆಸ್, ಬಿಜೆಪಿ ಹೊಂದಾಣಿಕೆಯೇ ಕಾರಣ: ರೇವಣ್ಣ

    ಮಂಡ್ಯ, ತುಮಕೂರಲ್ಲಿ ಜೆಡಿಎಸ್ ಸೋಲಲು ಕಾಂಗ್ರೆಸ್, ಬಿಜೆಪಿ ಹೊಂದಾಣಿಕೆಯೇ ಕಾರಣ: ರೇವಣ್ಣ

    ಹಾಸನ: ಕಳೆದ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಮಂಡ್ಯ ಹಾಗೂ ತುಮಕೂರಿನಲ್ಲಿ ಜೆಡಿಎಸ್ ಸೋಲಲು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಹೊಂದಾಣಿಕೆಯೇ ಕಾರಣ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿಸಿದ್ದಾರೆ.

    ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 150 ವರ್ಷಗಳ ಇತಿಹಾಸ ಹೊಂದಿರುವ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಕೋಮುವಾದಿ ಬಿಜೆಪಿ ಪಕ್ಷಯೊಂದಿಗೆ ಕೈ ಜೋಡಿಸಿದೆ. ಇದರಿಂದಾಗಿಯೇ ಮಂಡ್ಯ ಹಾಗೂ ತುಮಕೂರಿನಲ್ಲಿ ಜೆಡಿಎಸ್ ಸೋಲನುಭವಿಸಬೇಕಾಯಿತು ಎಂದು ಕಿಡಿಕಾರಿದ್ದಾರೆ.

    ಜಿಲ್ಲಾ ಮಟ್ಟದ ಅಧಿಕಾರಿಗಳು ಒಂದು ಪಕ್ಷದ ಮುಖಂಡರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾನೂನು ಮೀರಿ ಕೆಲಸ ಮಾಡುತ್ತಿದ್ದಾರೆ. ಎಲ್ಲ ಸರ್ಕಾರಿ ಕಚೇರಿಗಳು ಬೆಳಗ್ಗೆ 10 ರಿಂದ ಸಂಜೆ 4.30 ರವರೆಗೆ ಮಾತ್ರ ಕಾರ್ಯನಿರ್ವಹಿಸುತ್ತಿದ್ದರೆ ಹಾಸನದ ಜಿಲ್ಲಾಧಿಕಾರಿ ಕಚೇರಿ ಮಧ್ಯರಾತ್ರಿವರೆಗೂ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಚುನಾವಣೆಯನ್ನು ತರಾತುರಿಯಲ್ಲಿ ಮಾಡಲಾಗುತ್ತಿದೆ ಹಾಸನದಲ್ಲಿ ಕಾನೂನು ಮೀರಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಒಂದು ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಮೀಸಲಾತಿಗೆ ಸಂಬಂಧಿಸಿದಂತೆ ಎರಡನೇ ಶನಿವಾರವೂ ಅಧಿಕಾರಿಗಳು ಕಾರ್ಯನಿರ್ವಹಿಸಿ ಇದಕ್ಕೆ ಸಂಬಂಧಿಸಿದ ಕಡತ ವಿಲೇವಾರಿ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಮೀಸಲಾತಿ ಪಟ್ಟಿ ರೋಸ್ಟರ್ ಪದ್ಧತಿಯಲ್ಲಿ ಹಂಚಿಕೆಯಾಗುತ್ತದೆ. ಆದರೆ 42ನೇ ಪಟ್ಟಿಯಲ್ಲಿರುವ ಅರಸೀಕೆರೆ 52ನೇ ಪಟ್ಟಿಯಲ್ಲಿರುವ ಹಾಸನಕ್ಕೆ ಎಸ್‍ಟಿ ಮೀಸಲಾತಿಯನ್ನು ನೀಡಲಾಗಿದೆ. ಇದು ಕಾನೂನು ಬಾಹಿರ ನಿರ್ಣಯವಾಗಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ರೇವಣ್ಣ ತಿಳಿಸಿದರು.

    ರಾಜ್ಯದಲ್ಲಿ ಉಪಚುನಾವಣೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರ ಚುನಾವಣೆಗಳು ನಡೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರ ಚುನಾವಣೆ ನಡೆಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಈ ಎಲ್ಲ ಬೆಳವಣಿಗೆಗಳು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕಾನೂನು ಸಚಿವರು ಗಮನಕ್ಕೆ ಬಾರದೆ ಹೇಗೆ ನಡೆಯುತ್ತಿದೆ ಗೊತ್ತಾಗುತ್ತಿಲ್ಲ ಎಂದರು.

  • 150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಕೋಮುವಾದಿ ಬಿಜೆಪಿ ಜೊತೆ ಸೇರಿದೆ: ರೇವಣ್ಣ

    150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಕೋಮುವಾದಿ ಬಿಜೆಪಿ ಜೊತೆ ಸೇರಿದೆ: ರೇವಣ್ಣ

    – ಜಿಲ್ಲೆಯಲ್ಲಿ ಬಾಲಮುರುಕ ಅಧಿಕಾರಿಗಳಿದ್ದಾರೆ

    ಹಾಸನ: 150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಸೇರಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಮತ್ತು ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಮಗನಿಗೆ ಮಂಡ್ಯದಲ್ಲಿ ಜೆಡಿಎಸ್ ಮತಗಳು ಸರಿಯಾಗಿ ಬಂದಿದೆ. 150 ವರ್ಷ ಇತಿಹಾಸ ಇರುವ ಪಕ್ಷ ಕಾಂಗ್ರೆಸ್ ಪಕ್ಷ ಕೋಮುವಾದಿಗಳ ಜೊತೆ ಸೇರಿದೆ ಎಂದು ಹೇಳಿದರು.

    ರಾಜ್ಯದ ಎಲ್ಲೆಡೆ ಬೆಳಗ್ಗೆಯಿಂದ ಸಂಜೆವರೆಗೆ ಮಾತ್ರ ಸರ್ಕಾರಿ ಕಚೇರಿ ತೆರೆದಿರುತ್ತದೆ. ಹಾಸನದ ಜಿಲ್ಲಾಧಿಕಾರಿ ಕಚೇರಿ ಮಧ್ಯರಾತ್ರಿವರೆಗೂ ತೆರೆದಿರುತ್ತದೆ. 24*7 ಮಾದರಿಯಲ್ಲಿ ಹಾಸನ ಜಿಲ್ಲಾಧಿಕಾರಿ ಕಚೇರಿ ತೆರೆದಿರುತ್ತದೆ. ಬಿಜೆಪಿ ಪಕ್ಷದ ಮುಖಂಡರ ಅಧೀನದಲ್ಲಿ ಜಿಲ್ಲೆಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆಂದು ಆರೋಪ ಮಾಡಿದರು.

    ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನ ತರಾತುರಿಯಲ್ಲಿ ಮಾಡಲಾಗುತ್ತಿದೆ. ಹಾಸನದಲ್ಲಿ ಕಾನೂನು ನಿಯಮ ಗಾಳಿಗೆ ತೂರಿ ಕೆಲಸ ನಡೆಯುತ್ತಿದೆ. ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ 18ನೇ ಸ್ಥಾನದಲ್ಲಿತ್ತು. 52ನೇ ಸ್ಥಾನದಲ್ಲಿದ್ದ ಹಾಸನ ಜಿಲ್ಲೆಗೆ ಕಾನೂನು ಬಾಹಿರವಾಗಿ ನಿಗದಿ ಮಾಡಿದ್ದಾರೆ ಎಂದು ಆರೋಪಿಸಿದರು.

    ಹಾಸನ ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಒಂದು ಪಕ್ಷದ ಏಜೆಂಟ್ ನಂತೆ ಕೆಲಸ ಮಾಡುತ್ತಿದ್ದಾರೆ. ಹಾಸನ ಜಿಲ್ಲೆಯ ಅಧಿಕಾರಿಗಳು ಬಿಜೆಪಿ ಮುಖಂಡರ ಅಧೀನದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸಿಎಂ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಅಡ್ವೋಕೇಟ್ ಜನರಲ್ ರವರು ಹಾಸನ ನಗರಸಭೆ ಸಾಮಾನ್ಯ ವರ್ಗಕ್ಕೆ ನಿಗದಿಯಾಗುತ್ತೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಆ ಅಡ್ವೋಕೋಟ್ ಜನರಲ್ ಕೊರೊನಾ ಬಂತು ಅಂತ ಮನೆಗೆ ಹೋದ್ರು. ಈಗ ಹಾಸನ ಮತ್ತು ಅರಸೀಕೆರೆ ನಗರಸಭೆಗೆ ಎಸ್ ಟಿ ಮೀಸಲಾತಿ ನಿಗದಿ ಮಾಡಿದ್ದಾರೆಂದು ಆರೋಪ ಮಾಡಿದರು.

    ಈ ಮೀಸಲಾತಿ ನಿಗದಿ ಮಾಡಿರುವುದು ಕಾನೂನು ಬಾಹಿರ. ನಾವು ಮೀಸಲಾತಿ ವಿರೋಧಿಸಿ ನ್ಯಾಯಾಲಯದ ಮೊರೆ ಹೋಗುತ್ತೇವೆ. ಸರ್ಕಾರಿ ಅಧಿಕಾರಿಗಳು ಬಿಜೆಪಿ ಕೈಗೊಂಬೆಯಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಬಾಲಮುರುಕ ಅಧಿಕಾರಿಗಳಿದ್ದಾರೆ ಎಂದು ರೇವಣ್ಣ ಕಿಡಿಕಾರಿದರು.

  • ದೇವೇಗೌಡ್ರು ದೇಶಕ್ಕೆ ಈ ರೀತಿ ಸಮಸ್ಯೆ ಬಂತಲ್ಲ ಅಂತ ಕಣ್ಣೀರಿಡ್ತಿದ್ದಾರೆ: ರೇವಣ್ಣ

    ದೇವೇಗೌಡ್ರು ದೇಶಕ್ಕೆ ಈ ರೀತಿ ಸಮಸ್ಯೆ ಬಂತಲ್ಲ ಅಂತ ಕಣ್ಣೀರಿಡ್ತಿದ್ದಾರೆ: ರೇವಣ್ಣ

    – ಸಿಬಿಐ ದಾಳಿಗೆ ಪ್ರತಿಕ್ರಿಯಿಸಲ್ಲ
    – ಬಿಜೆಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ

    ಹಾಸನ: ನಮ್ಮ ಜೆಡಿಎಸ್‍ಗೆ ಬಡವರ ಬಗ್ಗೆ ಭಾರೀ ಕಾಳಜಿ ಇದೆ. ದೇವೇಗೌಡರು ಈ ದೇಶಕ್ಕೆ ಈ ರೀತಿ ಸಮಸ್ಯೆ ಬಂತಲ್ಲ ಅಂತ ಕಣ್ಣೀರಿಡುತ್ತಿದ್ದಾರೆ ಎಂದು ಮಾಜಿ ಸಚಿಚ ಹೆಚ್‍ಡಿ ರೇವಣ್ಣ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಚುನಾವಣೆ ಸಮಯದಲ್ಲಿ ನಮ್ಮ ಬೆಂಬಲಿಗರ ಮನೆ ಮೇಲೂ ದಾಳಿ ಮಾಡಿದ್ದಾರೆ. ಒಂದು ಪಕ್ಷವನ್ನ ಗುರಿಯಾಗಿಟ್ಟುಕೊಂಡು ದಾಳಿ ಮಾಡುತ್ತಿದ್ದಾರೆ. ಅದು ಅವರ ಕರ್ತವ್ಯ ಅವರು ಮಾಡಿಕೊಳ್ತಾರೆ ನಾನ್ಯಾಕೆ ರಿಯಾಕ್ಟ್ ಮಾಡಬೇಕು. ಹೀಗಾಗಿ ನಾನು ಅದರ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದರು.

    ಕಳೆದ ಬಾರಿ ಮಂಡ್ಯ ಹಾಸನ ಮತ್ತು ತುಮಕೂರಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಮತ್ತು ಬೆಂಬಲಿಗರ ಮನೆ ಮೇಲೆ ದಾಳಿ ಮಾಡಿದ್ದರು. ನಾವೇನು ಮೈತ್ರಿ ಮಾಡಿಕೊಳ್ತೀವಿ ಬನ್ನಿ ಅಂತ ಹೇಳಿದ್ವಾ ಅವರೇ ಬಂದಿದ್ದರು. ಐದು ವರ್ಷ ನೀವೇ ಅಧಿಕಾರ ಮಾಡಿ ಬನ್ನಿ ಅಂತ ಕರೆದವರು ಯಾರು ಅಂತ ಕೇಳಿ ಎಂದರು. ದ್ವೇಷದ ರಾಜಕಾರಣ ಮಾಡಿದರೆ ಅನುಭವಿಸೋದು ಏನ್ ಮಾಡೋದು ಎಂದು ಕಿಡಿಕಾರಿದರು.

    ಮೈಸೂರು ಐಜಿಪಿಗೆ ನಮ್ ಶಾಸಕರು ಶಿವಲಿಂಗೇಗೌಡ ಫೋನ್ ಮಾಡಿದ್ರು. ಸರ್ಕಾರ ಹೇಳಿದಂಗೆ ನಾವು ಮಾಡ್ತೀವಿ ಅಂತ ಹೇಳಿದ್ರಂತೆ ಐಜಿಪಿ. ಅದೇನೋ ಜೆಡಿಎಸ್ ಅಂದ್ರೆ ಏನೋ ಎರಡು ರಾಷ್ಟ್ರೀಯ ಪಕ್ಷಗಳಿಗೆ. ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಮುಗಿಸಬೇಕು ಅಂತ ಇದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬಗ್ಗೆ ಮತ್ತು ದೇವೇಗೌಡರ ಬಗ್ಗೆ ಪ್ರತಿನಿತ್ಯ ಮಾತಾಡ್ತಾರೆ. ತಬ್ಬಿಕೊಳ್ಳಿ ನಮ್ಮನ್ನ ಅಂತ ನಾವು ಹೇಳಿದ್ವಾ ಅವರೇ ಬಂದು ನಮ್ಮನ್ನ ತಬ್ಬಿಕೊಂಡರು ಎಂದು ಈ ಹಿಂದೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದನ್ನ ಪರೋಕ್ಷವಾಗಿ ಹೇಳಿದರು.

    ಕೆಲ ಶಾಲೆಗಳನ್ನ ಮುಚ್ಚುತ್ತಿದ್ದಾರೆ. ಶಾಲೆಗಳನ್ನ ಬದಲು ಅಲ್ಲಿ ಶಿಕ್ಷಕರಿದ್ದಾರೋ ವಿದ್ಯಾರ್ಥಿಗಳಿದ್ದಾರೋ ಎಂಬುದನ್ನು ಮೊದಲು ನೋಡಬೇಕು. ಅಧಿಕಾರಿಗಳಿಂದ ಎರಡು ಲಕ್ಷ, ಮೂರು ಲಕ್ಷ ಹಣ ತೆಗೆದುಕೊಳ್ಳುತ್ತಿದ್ದಾರೆ. ಈ ಸರ್ಕಾರದಲ್ಲಿ ಪೊಲೀಸರಿಂದಲೂ ದುಡ್ಡು ಇಸ್ಕೊಳ್ತಿದ್ದಾರೆ. ಯಾವ ಅಧಿಕಾರಿಗಳು ಬಂದರೂ ಕೆಲಸ ಮಾಡಿಸಿಕೊಳ್ಳೋದು ನನಗೆ ಗೊತ್ತಿದೆ. ನಮ್ಮ ಕೆಲಸ ಮಾಡಿದರೆ ಮಾಡಿ ಇಲ್ಲಾ ಅಂದರೆ ಬಿಡಿ. ಅದೇನ್ ಎರಡು ವರ್ಷ ನಮ್ಮ ಫೈಲ್ ಬಿದ್ದಿರುತ್ತಾ ಬಿದ್ದಿರಲಿ. ದ್ವೇಷದ ರಾಜಕಾರಣ ಹೆಚ್ಚು ದಿನ ನಿಲ್ಲೋದಿಲ್ಲಾ. ಹಾಸನ ನಗರಪಾಲಿಕೆಗೆ ಪ್ರಪೋಸಲ್ ಕಳಿಸಿದ್ದು ನಮ್ಮ ಸರ್ಕಾರದಲ್ಲಿ ಯಾರು ಕಳಿಸಿದ್ದರು ಅಂತ ಹೇಳಲಿ. ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿಗೆ 508 ಕೋಟಿಯ ಕಾಮಗಾರಿಯನ್ನ ಬಿಜೆಪಿ ಸರ್ಕಾರ ವಜಾ ಮಾಡಿದೆ. ಕುಡಿಯುವ ನೀರಿನ ಕಾಮಗಾರಿಯನ್ನೂ ಬಿಜೆಪಿ ಸರ್ಕಾರ ವಜಾ ಮಾಡಿದೆ. ಏನೇನ್ ನಡೀತಿದೆ ಹೂಡಾದಲ್ಲಿ ನನಗೆ ಗೊತ್ತಿದೆ ಆ ಕಮಿಷನರ್ ನ್ನು ಬಲಿ ಹಾಕುತ್ತೇನೆ. ಈಗ ಹಾಸನದ ಉಪವಿಭಾಗಾಧಿಕಾರಿಯನ್ನ ಈಗ ವರ್ಗಾವಣೆ ಮಾಡಿದ್ದಾರೆ. ಇನ್ನೂ ಮುಂದಕ್ಕೆ ದುಡ್ಡು ಮಾಡೋ ಅಧಿಕಾರಿಗಳನ್ನ ತಂದು ಹಾಕ್ತಾರೆ. ಹಾಸನಕ್ಕೆ ಡ್ಯಾಮೇಜ್ ಆಗಿರೋ ಸರ್ಕಾರಕ್ಕೆ ದುಡ್ಡು ಕಲೆಕ್ಷನ್ ಮಾಡಲು ಎಕ್ಸ್ ಪರ್ಟ್ ಆಗಿರೋ ಅಧಿಕಾರಿಗಳನ್ನ ಇಲ್ಲಿಗೆ ಹಾಕ್ತಾರೆ. ಎಕ್ಸ್ ಪೈರ್ ಆಗಿರೋ ಎಂಜಿನ್ ಗಳನ್ನ ತಂದು ಇಲ್ಲಿಗೆ ಹಾಕ್ತಾರೆ ಎಂದು ವ್ಯಂಗ್ಯವಾಡಿದರು.

    ಕಾಂಗ್ರೆಸ್ಸಿಗೆ ಯಾವ ಪರಿಸ್ಥಿತಿ ಬಂದಿದೆ ನೋಡಿ. ಯಾರೋ ನೊಣವಿನಕೆರೆ ಅಜ್ಜಯ್ಯ ಹೇಳಿದರಂತೆ ಅದಕ್ಕೆ ಆ ಹುಡುಗಿಯನ್ನು ಆರ್‍ಆರ್ ನಗರಕ್ಕೆ ಅಭ್ಯರ್ಥಿ ಮಾಡಿದ್ದಾರೆ. ಆ ಹುಡುಗಿಯನ್ನ ಏನು ಮಾಡ್ತಾರೆ ಏನೋ, ಒಂದೇ ದಿನದಲ್ಲಿ ಪಕ್ಷಕ್ಕೆ ಸೇರಿಸಿಕೊಂಡು ಅಭ್ಯರ್ಥಿ ಮಾಡಿದ್ದಾರೆ ಎಂದು ಹೇಳಿದರು.

  • ಠಾಣೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್‌ಗೆ ಪುಷ್ಪಾಭಿಷೇಕ- ಮಾಜಿ ಸಚಿವ ರೇವಣ್ಣ ಆಕ್ರೋಶ

    ಠಾಣೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್‌ಗೆ ಪುಷ್ಪಾಭಿಷೇಕ- ಮಾಜಿ ಸಚಿವ ರೇವಣ್ಣ ಆಕ್ರೋಶ

    ಹಾಸನ: ಹೊಸದಾಗಿ ಹಾಸನ ಗ್ರಾಮಾಂತರಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆಯಾಗಿ ಬಂದ ಪೊಲೀಸ್ ಅಧಿಕಾರಿಗೆ ಠಾಣೆಯೊಳಗೆ ಪುಷ್ಪಾಭಿಷೇಕ ಮಾಡಲಾಗಿದ್ದು, ಈ ಬಗ್ಗೆ ಮಾಜಿ ಸಚಿವ ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ.

    ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ಹೆಸರು ಈ ಹಿಂದೆ ವರ್ಗಾವಣೆ ದಂಧೆಗೆ ಸಂಬಂಧಿಸಿದ ಆಡಿಯೋ ಒಂದರಲ್ಲಿ ಕೇಳಿಬಂದಿತ್ತು. ಅಂತಹ ರೌಡಿ ವ್ಯಕ್ತಿ ಓರ್ವನನ್ನು 25 ಲಕ್ಷ ರೂ. ಹಾಸನದಲ್ಲಿ ಮತ್ತೆ ಪೊಲೀಸ್ ಅಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ. ಇಲ್ಲಿಗೆ ಬಂದ ಕೂಡಲೇ ರೌಡಿಗಳಿಂದಲೇ ಹೂವಿನ ಹಾರ ಹಾಕಿಸಿಕೊಂಡು, ಗೊಮ್ಮಟೇಶ್ವರನಿಗೆ ಅಭಿಷೇಕ ಮಾಡು ಹಾಗೆ ಹೂವಿನ ಅಭಿಷೇಕ ಮಾಡಿಸಿಕೊಂಡಿದ್ದಾರೆ. ಈತ ಓರ್ವ ಜಿಲ್ಲೆಯ ವರ್ಗಾವಣೆ ದಂಧೆಯ ಕಿಂಗ್ ಪಿನ್ ಎಂದು ರೇವಣ್ಣ ವ್ಯಂಗ್ಯವಾಡಿದರು.

    ದಂಧೆಯ ಹಿಂದೆ ಯಾರಿದ್ದಾರೆ ಎಂಬುದನ್ನು ಗೃಹ ಇಲಾಖೆ ಹೇಳಬೇಕು? ಬಸವರಾಜ್ ಬೊಮ್ಮಾಯಿ ಮತ್ತು ಮುಖ್ಯಮಂತ್ರಿಗಳ ಬಗ್ಗೆ ನನಗೆ ಗೌರವವಿದೆ. ಒಂದು ಸ್ಥಳಕ್ಕೆ ವರ್ಗಾವಣೆ ಮಾಡಿ ಕಳುಹಿಸುವ ಮೊದಲು ಗೃಹ ಇಲಾಖೆಯವರು ಆತನ ಹಿನ್ನೆಲೆಯನ್ನು ನೋಡಬೇಕು. ಯಾವುದನ್ನು ಮಾಡದೇ ಏಕಾಏಕಿ ವರ್ಗಾವಣೆ ಮಾಡಲಾಗಿದೆ ಎಂದು ರೇವಣ್ಣ ಅಸಮಧಾನ ವ್ಯಕ್ತಪಡಿಸಿದರು.

    ಪಿಎಸ್‍ಐ ಕಿರಣ್ ಆತ್ಮಹತ್ಯೆ ಬಗ್ಗೆಯೂ ಮುಂದೆ ವಿಡಿಯೋ ಬಹಿರಂಗ ಪಡಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು. ಹಾಸನ ಜಿಲ್ಲೆಯಲ್ಲಿ ಏನಾದರೂ ದುರ್ಘಟನೆ ನಡೆದರೆ ಅದಕ್ಕೆ ಮೈಸೂರು ಐಜಿಪಿಯವರೇ ಕಾರಣವಾಗಿ ಮಾಡಬೇಕಾಗುತ್ತದೆ. ಐಜಿಪಿ ವಿಪುಲ್ ಕುಮಾರ್ ರಬ್ಬರ್ ಸ್ಟ್ಯಾಂಪ್ ಇದ್ದಂಗೆ. ಜಾತಿಯತೆಯನ್ನು ಗುರಿಯಾಗಿಟ್ಟುಕೊಂಡು ವರ್ಗಾವಣೆ ಮಾಡಲಾಗಿದ್ದು, ದುಡ್ಡು ಒಂದಿದ್ರೆ ಸಾಕು. ಭ್ರಷ್ಟರನ್ನು ಕೂಡಾ ಓಲೈಸುತ್ತಾರೆ. ಸುರೇಶ್ ಒರ್ವ ರೌಡಿಯಂತಿರುವ ಪೊಲೀಸ್ ಅಧಿಕಾರಿ ಎಂದು ರೇವಣ್ಣ ಕಿಡಿಕಾರಿದ್ದಾರೆ.

  • ಹೆಚ್‍ಡಿಡಿ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ

    ಹೆಚ್‍ಡಿಡಿ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ

    ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ.

    ಎಚ್.ಡಿ.ರೇವಣ್ಣ ಹಿರಿಯ ಪುತ್ರ ಡಾ.ಸೂರಜ್ ರೇವಣ್ಣ ಹಾಸನದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಇದೀಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಾ.ಸೂರಜ್ ರೇವಣ್ಣ ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಅವರ ವಿರುದ್ಧ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರಿಂದ ಸೂರಜ್ ರೇವಣ್ಣ ಹೆಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

    ಡಿಸಿಸಿ ಬ್ಯಾಂಕ್ ನಿರ್ದೇಶಕರಾಗುವ ಮೂಲಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ನೇರವಾಗಿ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದೆ. ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ರೇವಣ್ಣ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

  • ರೇವಣ್ಣ ಸರ್ವಾಧಿಕಾರಿ ಮನೋಭಾವ ಬಿಡಲೇಬೇಕು – ಜೆಡಿಎಸ್ ಶಾಸಕ ಎಟಿ.ರಾಮಸ್ವಾಮಿ

    ರೇವಣ್ಣ ಸರ್ವಾಧಿಕಾರಿ ಮನೋಭಾವ ಬಿಡಲೇಬೇಕು – ಜೆಡಿಎಸ್ ಶಾಸಕ ಎಟಿ.ರಾಮಸ್ವಾಮಿ

    ಹಾಸನ: ಮಾಜಿ ಸಚಿವ ಹೆಚ್‍ಡಿ ರೇವಣ್ಣ ಸರ್ವಾಧಿಕಾರಿ ಮನೋಭಾವವನ್ನು ಬಿಡಲೇಬೇಕು ಎಂದು ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಎಟಿ.ರಾಮಸ್ವಾಮಿ ಅವರು ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

    ಇಂದು ಅರಕಲಗೂಡಿನಲ್ಲಿ ಮಾತನಾಡಿದ ಅವರು, ರೇವಣ್ಣ ಅವರ ಸರ್ವಾಧಿಕಾರಿ ಧೋರಣೆ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇತ್ತೀಚಿನ ಕೆಲವು ವಿದ್ಯಮಾನಗಳು ನನ್ನನ್ನು ಘಾಸಿಗೊಳಿಸಿವೆ. ಹೀಗಾದರೆ ಪಕ್ಷ ಸಂಘಟನೆ ಕಾರ್ಯ ಸಾಧ್ಯವಿಲ್ಲ ಎಂದು ತಮ್ಮ ಪಕ್ಷದ ಶಾಸಕರ ಮೇಲೆಯೇ ಎಟಿ.ರಾಮಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

    ಹಾಸನ ಹಾಲು ಒಕ್ಕೂಟಕ್ಕೆ ಹೊನ್ನವಳ್ಳಿ ಸತೀಶ್ ಎಂಬುವವರನ್ನು ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನೇ ಬೆಂಬಲಿಸಿದ್ದು ಬಹಳ ಆಘಾತಕಾರಿ ವಿಷಯ. ಅವರು ಎಲ್ಲ ಚುನಾವಣೆಯಲ್ಲೂ ಪಕ್ಷಕ್ಕೆ ವಿರೋಧವಾಗಿ ಕೆಲಸ ಮಾಡಿದ್ದಾರೆ. ಸತೀಶ್ ಹಣ ಇದ್ದವರ ಜೊತೆ ಹೋಗಿ ಬೆಂಬಲ ನೀಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ಬೆಂಬಲಿಸಿದರೆ ತಾಯಿಯೇ ಮಗುವಿಗೆ ವಿಷ ಕೊಟ್ಟಂತೆ ಆಗುತ್ತೆ. ಆಗ ಮಗು ಹೇಗೆ ಬದುಕುತ್ತೆ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.

    ಪಕ್ಷದ ವರಿಷ್ಠರಾದ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಹೆಚ್‍ಡಿ.ರೇವಣ್ಣ ಅವರ ಬಳಿ ಈ ಹಿಂದಯೇ ಈ ವಿಚಾರವಾಗಿ ಮಾತನಾಡಿದ್ದೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಪರಿಗಣಿಸಬೇಡಿ ಎಂದರೂ ಅವರನ್ನೇ ಪರಿಗಣಿಸಿದ್ದಾರೆ. ಶಾಸಕನಾಗಿ ನನ್ನ ಅಭಿಪ್ರಾಯ ಕೇಳಿಲ್ಲ. ಇದು ರೇವಣ್ಣ ಅವರ ಸರ್ವಾಧಿಕಾರಿ ಮನೋಭಾವ ತೋರಿಸುತ್ತದೆ. ರೇವಣ್ಣ ಸರ್ವಾಧಿಕಾರಿ ಮನೋಭಾವ ಬಿಡಲೇಬೇಕು. ಮುಂದಿನ ಸಂಘಟನೆ ಜವಾಬ್ದಾರಿ ವರಿಷ್ಠರಿಗೆ ಬಿಡುತ್ತೇನೆ ಎಂದಿದ್ದಾರೆ.