Tag: HD Revanna

  • ಬಂಡಾಯ ಶಾಸಕರ ಸಿಟ್ಟು ಶಮನಗೊಳಿಸಲು ಮುಂದಾದ್ರು ಎಚ್‍ಡಿಕೆ, ರೇವಣ್ಣ

    ಬಂಡಾಯ ಶಾಸಕರ ಸಿಟ್ಟು ಶಮನಗೊಳಿಸಲು ಮುಂದಾದ್ರು ಎಚ್‍ಡಿಕೆ, ರೇವಣ್ಣ

    ಬೆಂಗಳೂರು: ಸರ್ಕಾರಕ್ಕೆ ಕಂಟಕವಾಗಿರುವ ಕಾಂಗ್ರೆಸ್ ಬಂಡಾಯ ಶಾಸಕರ ಸಿಟ್ಟು ಶಮನಕ್ಕೆ ಬ್ರದರ್ಸ್ ಮುಂದಾಗಿದ್ದಾರೆ. ಅಣ್ಣ ರೇವಣ್ಣ ಒತ್ತಾಯ ಹಿನ್ನೆಲೆಯಲ್ಲಿ ತಡೆ ಹಿಡಿದಿದ್ದ ನಿಗಮ ಮಂಡಳಿಗಳ ನೇಮಕಾತಿಗೆ ಒಪ್ಪಿಗೆ ಸೂಚಿಸಲು ಸಿಎಂ ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ.

    ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯಗೆ ರಾಜ್ಯ ರಸ್ತೆ ಅಭಿವೃದ್ಧಿ ಪ್ರಾಧಿಕಾರ, ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್ ಮತ್ತು ರಾಯಚೂರು ಗ್ರಾಮೀಣ ಶಾಸಕ ಬಸವರಾಜ್ ದದ್ದಲ್‍ಗೂ ನಿಗಮ ಮಂಡಳಿ ಸ್ಥಾನ ಒಲಿಯಲಿದೆ.

    ಹಾಸನ ಮೂಲದ ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿಗೆ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಲು ಓಕೆ ಅಂದಿದ್ದಾರೆ. ಗೋಪಾಲಸ್ವಾಮಿ ನೇಮಕಕ್ಕೆ ರೇವಣ್ಣ ತಡೆ ತಂದಿದ್ದರು. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್‍ಗೆ ಹಂಚಿಕೆ ಆಗಿತ್ತು. ಆದ್ರೆ ಕಾನೂನು ತೊಡಕಾಗಿರುವ ಹಿನ್ನೆಲೆಯಲ್ಲಿ ಕಾನೂನು ಸಲಹೆ ಪಡೆದು ನೇಮಕ ಮಾಡುವ ಬಗ್ಗೆ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಇತ್ತ ಕುಮಾರಸ್ವಾಮಿ ನೇತೃತ್ವದ ನಮ್ಮ ಸರ್ಕಾರ ಬಿದ್ದರೂ ನೀವೇ ಹೊಣೆ. ಸರ್ಕಾರ ಉಳಿದರೂ ನಿಮಗೆ ಶ್ರೇಯಸ್ಸು. ಏನ್ ಮಾಡ್ತೀರಿ ಗೊತ್ತಿಲ್ಲ ನಮ್ಮ ದೋಸ್ತಿ ಸರ್ಕಾರ ಬೀಳಲೇಬಾರದು. ದೋಸ್ತಿ ಸರ್ಕಾರವನ್ನು ಉಳಿಸುವ ಸಂಪೂರ್ಣ ಹೊಣೆ ನಿಮ್ಮದೇ ಆಗಿರುತ್ತದೆ ಎಂದು ಸಿದ್ದರಾಮಯ್ಯಗೆ ದೆಹಲಿಯಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಫರ್ಮಾನು ಹೊರಡಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಬುಧವಾರ ನಡೆದ ಅಧಿವೇಶನದ ಮೊದಲ ದಿನವೇ 11 ಮಂದಿ ಶಾಸಕರು ಗೈರಾಗಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನ ಉಳಿಸಲು ಸರ್ವ ಪ್ರಯತ್ನಗಳನ್ನ ಮಾಡುವಂತೆ ಸಿದ್ದರಾಮಯ್ಯಗೆ ರಾಹುಲ್ ಸೂಚಿಸಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಚ್‍ಡಿ ರೇವಣ್ಣ ಸಿಎಂ ಆಗ್ತಾರೆ – ಶ್ರೀ ಶರಣಬಸಪ್ಪ ಅಪ್ಪಾರಿಂದ ಆಶೀರ್ವಾದ

    ಎಚ್‍ಡಿ ರೇವಣ್ಣ ಸಿಎಂ ಆಗ್ತಾರೆ – ಶ್ರೀ ಶರಣಬಸಪ್ಪ ಅಪ್ಪಾರಿಂದ ಆಶೀರ್ವಾದ

    ಕಲಬುರಗಿ: ಭವಿಷ್ಯದಲ್ಲಿ ಲೋಕೋಪಯೋಗಿ ಸಚಿವ ರೇವಣ್ಣ ಕೂಡ ಸಿಎಂ ಆಗಲಿ ಎಂದು ಕಲಬುರಗಿಯ ಐತಿಹಾಸಿಕ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಅವರು ಆಶೀರ್ವಾದ ಮಾಡಿದ್ದಾರೆ.

    ಸಮ್ಮಿಶ್ರ ಸರ್ಕಾರ ರಚನೆ ಆದ ಬಳಿಕ ಮೊದಲ ಬಾರಿಗೆ ರೇವಣ್ಣ ಅವರು ಕಲಬುರಗಿಗೆ ಭೇಟಿ ನೀಡಿದ್ದರು. ಈ ವೇಳೆ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು.

    ಶ್ರೀಗಳ ಆಶೀರ್ವಾದ ಪಡೆಯುವ ಸಂದರ್ಭದಲ್ಲಿ ರೇವಣ್ಣ ಅವರನ್ನು ಸಿಎಂ ಆಗುವಂತೆ ಆಶೀರ್ವಾದ ಮಾಡಿ ಎಂದು ಪಕ್ಕದಲ್ಲಿದ್ದವರು ಶ್ರೀಗಳಿಗೆ ಕೇಳಿದರು. ಆ ವೇಳೆ ಶ್ರೀಗಳು ಆಯ್ತು ನೀನು ಮುಖ್ಯಮಂತ್ರಿ ಆಗುತ್ತಿಯಾ ಆಶೀರ್ವಾದಿಸಿದರು.

    ಶ್ರೀಗಳ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ ಅವರು, ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರಿದ್ದಾರೆ ಹೀಗಿರುವಾಗ ಲೋಕಸಭಾ ಚುನಾವಣೆಯಲ್ಲಿ ಆ ಕ್ಷೇತ್ರ ಹೇಗೆ ಬಿಟ್ಟುಕೊಡುವುದು ಎಂದು ಪ್ರಶ್ನೆ ಮಾಡಿದರು. ಈ ಮೂಲಕ ಮಂಡ್ಯ ಕ್ಷೇತ್ರದ ಮೇಲೆ ಕಣ್ಣಿಟ್ಟಿದ ‘ಕೈ’ ನಾಯಕರಿಗೆ ಪರೋಕ್ಷವಾಗಿ ರೇವಣ್ಣ ಟಾಂಗ್ ನೀಡಿದರು.

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರ ನನಗೆ ಮಾಹಿತಿ ಇಲ್ಲ. ಸದ್ಯ ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ರಾಜ್ಯದ ಹಿತಕ್ಕಿಂತ ಅಧಿಕಾರ ಮುಖ್ಯವಾಗಿದೆ. ಮಹಾರಾಷ್ಟ್ರದಲ್ಲಿ ಬರದ ಕಾಮಗಾರಿ ನಡೆಸಲು ಕೇಂದ್ರ ಸರ್ಕಾರ ನಾಲ್ಕೂವರೆ ಸಾವಿರ ಕೋಟಿ ರೂ. ಕೊಟ್ಟಿದೆ. ಆದರೆ ರಾಜ್ಯಕ್ಕೆ 932 ಕೋಟಿ ರೂ. ಮಾತ್ರ ನೀಡಿದೆ. ಇದರಿಂದ ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು. ಈ ವೇಳೆ ಸಚಿವರಿಗೆ ಮಾಜಿ ಸಚಿವ ರೇವುನಾಯಕ್ ಬೆಳಮಗಿ ಸಾಥ್ ನೀಡಿದರು.

    ಇದೇ ವೇಳೆ ತಮ್ಮ ಭೇಟಿ ಕುರಿತು ಮಾಹಿತಿ ನೀಡಿದ ಸಚಿವರು, ಲೋಕೋಪಯೋಗಿ ಇಲಾಖೆಯ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಲು ಆಗಮಿಸಿದ್ದೇನೆ. ಒಂದೂವರೆ ಸಾವಿರ ಕೋಟಿ ರೂ. ವೆಚ್ಚದಲ್ಲಿ ಹೈ-ಕ ವ್ಯಾಪ್ತಿಯ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಮಾಡಲಿದ್ದೇವೆ ಎಂದರು. ಅಲ್ಲದೇ ರಾಜ್ಯದಲ್ಲಿ ಒಂದು ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆ ತಗೆಯಬೇಕೆಂದು ನಾನು ಒತ್ತಾಯಿಸುತ್ತೇನೆ. ಬಡವರ ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಓದಬೇಕೆಂಬುದು ನಮ್ಮ ನಿಲುವು ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಮ್ಮಿಶ್ರ ಸರ್ಕಾರದಲ್ಲಿ ಲೋಕೋಪಯೋಗಿ ಇಲಾಖೆಗೇ ಅತೀ ಹೆಚ್ಚು ಅನುದಾನ..!

    ಸಮ್ಮಿಶ್ರ ಸರ್ಕಾರದಲ್ಲಿ ಲೋಕೋಪಯೋಗಿ ಇಲಾಖೆಗೇ ಅತೀ ಹೆಚ್ಚು ಅನುದಾನ..!

    ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಿಎಂ ಕುಮಾರಸ್ವಾಮಿಗಿಂತ ರೇವಣ್ಣ ಸಾಹೇಬ್ರೇ ಪವರ್ ಫುಲ್. ಅವರ ಇಲಾಖೆಯೇ ಫೇಮಸ್ ಎಂದು ಹೇಳೋದಕ್ಕೂ ಕಾರಣ ಇದೆ. ಸಮ್ಮಿಶ್ರ ಸರ್ಕಾರದಲ್ಲಿ ಲೋಕೋಪಯೋಗಿ ಇಲಾಖೆಗೆ ಅತಿ ಹೆಚ್ಚು ಅನುದಾನ ಸಿಕ್ಕಿದೆ.

    ಪ್ರತಿ ಕ್ಯಾಬಿನೆಟ್ ಸಭೆಯಲ್ಲೂ ರೇವಣ್ಣ ಇಲಾಖೆ ಅಥವಾ ರೇವಣ್ಣ ತವರು ಹಾಸನ ಜಿಲ್ಲೆಯ ಟಾಪಿಕ್ ಇದ್ದೇ ಇರುತ್ತದೆ. ಸಿಎಂ ಪ್ರತಿ ಕ್ಯಾಬಿನೆಟ್ ಸಭೆಯಲ್ಲೂ ರೇವಣ್ಣ ಇಲಾಖೆ ಅಥವಾ ರೇವಣ್ಣ ತವರು ಹಾಸನ ಜಿಲ್ಲೆಯ ಟಾಪಿಕ್ ಇದ್ದೇ ಇರುತ್ತದೆ. ಸಿಎಂ ಕುಮಾರಸ್ವಾಮಿ ಕೂಡ ರೇವಣ್ಣರ ಯಾವ ಕೆಲಸಕ್ಕೂ ಇಲ್ಲ ಅನ್ನೋದೇ ಇಲ್ಲ. ಪ್ರತಿ ಸಮಯದಲ್ಲೂ ಯಾವ ಫೈಲ್‍ಗಾದ್ರೂ ಕಣ್ಮುಚ್ಚಿ ಸೈನ್ ಹಾಕ್ತಾರಂತೆ ಮುಖ್ಯಮಂತ್ರಿ ಕುಮಾರಸ್ವಾಮಿ.

    ಹಾಗಾದ್ರೆ ರೇವಣ್ಣ ಮತ್ತು ಅವರ ಇಲಾಖೆ ಪವರ್ ಹೇಗಿದೆ ಅಂತಾ ನೋಡೋದಾದ್ರೆ..
    – ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್‍ನಲ್ಲಿ 9271 ಕೋಟಿ ಅನುದಾನ
    – ಎಚ್‍ಡಿಕೆ ಮಂಡಿಸಿದ ಬಜೆಟ್‍ನಲ್ಲಿ ಹೆಚ್ಚುವರಿ 929 ಕೋಟಿ ರೂ.
    – ಪೂರಕ ಬಜೆಟ್‍ನಲ್ಲಿ ರೇವಣ್ಣ ಇಲಾಖೆಗೆ 1700 ಕೋಟಿ ಅನುದಾನ

    ವರ್ಗಾವಣೆ ಪವರ್.!
    ಎಕ್ಸಿಕ್ಯುಟಿವ್ ಎಂಜಿನಿಯರ್ 15, 200 ಕ್ಕೂ ಹೆಚ್ಚು ಎಇಇಗಳು, 500ಕ್ಕೂ ಹೆಚ್ಚು ಎಇ-ಜೆಇಳು, ಹಾಗೂ 100ಕ್ಕೂ ಹೆಚ್ಚು ಬಿ ದರ್ಜೆ ನೌಕರರ ವರ್ಗ. ಹೀಗೆ 7 ತಿಂಗಳಲ್ಲಿ 1 ಸಾವಿರಕ್ಕೂ ಹೆಚ್ಚು ವರ್ಗಾವಣೆ ಮಾಡಲಾಗಿದೆ.

    ಕ್ಯಾಬಿನೆಟ್ ಪವರ್..!
    ಒಟ್ಟು 16 ಕ್ಯಾಬಿನೆಟ್ ಸಭೆಗಳು ನಡೆದಿದ್ದು, ಪ್ರತಿ ಸಭೆಯಲ್ಲೂ ಲೋಕೋಪಯೋಗಿ ಇಲಾಖೆಯ 2-3 ವಿಷಯ ಅಪ್ರೂವ್ ಆಗುತ್ತಿದೆ. ಕ್ಯಾಬಿನೆಟ್‍ನಲ್ಲಿ ಒಟ್ಟು 20ಕ್ಕೂ ಹೆಚ್ಚು ವಿಷಯಗಳು ಅಪ್ರೂವ್ ಆಗಿವೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕಳೆದ 10 ವರ್ಷದಿಂದ ಹಾಸನ ಅಭಿವೃದ್ಧಿ ಕಾಣಲಿಲ್ಲ-ಸಿದ್ದರಾಮಯ್ಯ ವಿರುದ್ಧ ರೇವಣ್ಣ ಆಕ್ರೋಶ

    ಕಳೆದ 10 ವರ್ಷದಿಂದ ಹಾಸನ ಅಭಿವೃದ್ಧಿ ಕಾಣಲಿಲ್ಲ-ಸಿದ್ದರಾಮಯ್ಯ ವಿರುದ್ಧ ರೇವಣ್ಣ ಆಕ್ರೋಶ

    ಹಾಸನ: ನಗರದಲ್ಲಿ ದೋಸ್ತಿ ಸರ್ಕಾರದ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ನಿರ್ವಹಣಾ ಸಂಪುಟ ಸಮಿತಿ ಸಭೆ ಇದಕ್ಕೆ ಸಾಕ್ಷಿಯಾಗಿದೆ.

    ಸಚಿವ ಎಚ್.ಡಿ. ರೇವಣ್ಣ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಮಧ್ಯೆ ವಾಕ್ಸಮರ ಏರ್ಪಟ್ಟಿತ್ತು. ಕಳೆದ ಹತ್ತು ವರ್ಷದಿಂದ ಹಾಸನ ಅಭಿವೃದ್ಧಿ ಕಾಣಲಿಲ್ಲ ಎನ್ನುವ ರೇವಣ್ಣ ಮಾತಿಗೆ ಕೆರಳಿದ ಗೋಪಾಲಸ್ವಾಮಿ, ನಮ್ಮ ಸಿದ್ದರಾಮಯ್ಯ ಸರ್ಕಾರದಲ್ಲಿ ಹಾಗಾದ್ರೆ ಏನೂ ಆಗಲಿಲ್ಲವೇ ಎಂದು ಗರಂ ಆದ್ರು. ರೀ ಗೋಪಾಲ್, ಸುಮ್ನೆ ಕೂತ್ಕಳ್ರಿ ಏನಾಗಿದೆ ಅಂತ ನನಗೆ ಗೊತ್ತಿದೆ ಎಂದು ಏರು ಧ್ವನಿಯಲ್ಲಿಯೇ ರೇವಣ್ಣ ಪ್ರತ್ಯುತ್ತರ ನೀಡಿದ್ರು. ಇವರಿಬ್ಬರ ಈ ಮಾತಿನ ಸಮರ ಸಭೆಯಲ್ಲಿ ಕೆಲಕಾಲ ಗೊಂದಲಕ್ಕೆ ಕಾರಣವಾಯಿತು.

    ಸಂಪುಟ ಉಪ ಸಮಿತಿ ಅಧ್ಯಕ್ಷ ಕೃಷ್ಣಬೈರೇಗೌಡ ನೇತೃತ್ವದ ಸಚಿವರ ತಂಡ ಹಾಸನ ಜಿಲ್ಲೆಯ ಬರಪೀಡಿತ ಪ್ರದೇಶಕ್ಕೆ ಶುಕ್ರವಾರ ಭೇಟಿ ಮಾಡಿತ್ತು, ನಂತರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಸಭೆಯಲ್ಲಿ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಸೇರಿದಂತೆ ಸಚಿವರುಗಳಾದ ಕೃಷ್ಣಬೈರೇಗೌಡ, ಸಿ.ಎಸ್. ಪುಟ್ಟರಾಜು, ಯು.ಟಿ ಖಾದರ್, ಜಯಮಾಲಾ ಭಾಗವಹಿಸಿದ್ದರು. ಇವರ ಜತೆಗೆ ಜಿಲ್ಲೆಯ ಎಲ್ಲಾ ಶಾಸಕರೂ ಕೂಡಾ ಭಾಗವಹಿಸಿದ್ದರು.

    ಸಭೆಯ ಮಧ್ಯೆ ಹಾಸನ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂಗೌಡ ಎದ್ದು, ಕ್ಷೇತ್ರಕ್ಕೆ ಸಂಬಂಧಿಸಿದ ಬೇಡಿಕೆಯನ್ನು ಇಡುತ್ತಿದ್ದರು. ಪ್ರೀತಂ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಎಚ್.ಡಿ ರೇವಣ್ಣ ನೋಡಿ ಅಣ್ಣಾ, ನನಗೆ ನಮ್ಮ ಜಿಲ್ಲೆಯ ಅಭಿವೃದ್ಧಿ ಮಾತ್ರ ಮುಖ್ಯ. ಕಳೆದ ಹತ್ತು ವರ್ಷಗಳಿಂದ ನಮ್ಮ ಜಿಲ್ಲೆ ಅಭಿವೃದ್ಧಿ ಕಂಡಿರಲಿಲ್ಲ. ಈಗ ಅಭಿವೃದ್ಧಿಯಾಗಬೇಕಷ್ಟೇ ಎಂದ್ರು.

    ರೇವಣ್ಣರ ಈ ಮಾತಿಗೆ ಕೆರಳಿದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ, ರೇವಣ್ಣ ಅವರೇ, ನಮ್ಮ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿಯೂ ಕೆಲಸ ಆಗಿದೆ. ನೀವು ಹಾಗೆ ಹೇಳಬೇಡಿ. ಇದು ಸಮ್ಮಿಶ್ರ ಸರ್ಕಾರ ಎಂದು ಗರಂ ಆದ್ರು. ಇದರಿಂದ ಸಿಟ್ಟಾದ ರೇವಣ್ಣ ಏನು ಕೆಲಸ ಆಗಿದೆ ಹೇಳ್ರಿ ಎಂದು ಏರು ಧ್ವನಿಯಲ್ಲಿಯೇ ಉತ್ತರ ಕೊಟ್ರು.

    ತಮ್ಮ ಮಾತನ್ನು ಮುಂದುವರಿಸಿದ ಗೋಪಾಲಸ್ವಾಮಿ, ಹಾಸನದಲ್ಲಿ ಬೇಕಾದಷ್ಟು ಆಗಿದೆ ಎಂದು ಪ್ರತ್ಯುತ್ತರ ನೀಡಿದ್ರು. ಬರೀ ಎಂಜಿನಿಯರಿಂಗ್ ಕಾಲೇಜ್ ನ ಡೋರ್ ರಿಪೇರಿ ಮಾಡಲೂ ನಿಮ್ಮಿಂದ ಸಾಧ್ಯವಾಗಲಿಲ್ಲ, ಈಗ ಕಾಲೇಜು ಮುಚ್ಚೋ ಹಂತಕ್ಕೆ ಬಂದಿದೆ. ನನಗೆ ಗೊತ್ತು ಸುಮ್ನೆ ಕೂತ್ಕೋಳ್ರೀ ಎಂದು ಗೋಪಾಲಸ್ವಾಮಿ ಅವರಿಗೆ ರೇವಣ್ಣ ಗದರಿದರು. ಹೀಗೆ ಇಬ್ಬರ ನಡುವೆಯೂ ವಾಗ್ವಾದ ನಡೆಯಿತು. ಈ ವೇಳೆ ಮಧ್ಯೆ ಪ್ರವೇಶಿದ ಸಚಿವ ಕೃಷ್ಣಬೈರೇಗೌಡ ಅವರು, ರೇವಣ್ಣ ಅವರಿಗೆ ಇನ್ನೂ ಹೆಚ್ಚಿನ ಕೆಲಸ ಆಗಬೇಕಿತ್ತು ಅನ್ನೋ ಆಸೆ ಇದೆ ಅನ್ನಿಸುತ್ತದೆ ಎನ್ನುವ ಮೂಲಕ ಇಬ್ಬರ ಜಗಳಕ್ಕೆ ತೇಪೆ ಹಚ್ಚಿದ್ರು. ಜಗಳ ತಣ್ಣಗಾದ ಮೇಲೆ ರೀ ಪ್ರೀತಂ ನೀನು ಬೆಂಕಿ ಹಚ್ಚಿ ತಮಾಷೆ ನೋಡ್ತಿಯಾ ಕಣಪ್ಪಾ ಅಂತಾ ಕೃಷ್ಣಬೈರೇಗೌಡ್ರು ಪ್ರೀತಂಗೆ ಟಾಂಗ್ ನೀಡಿದ್ರು.

    ಒಟ್ಟಿನಲ್ಲಿ ಇಬ್ಬರ ಜಗಳವನ್ನು ನೋಡ್ತಾ ಇದ್ದ ಕಾಂಗ್ರೆಸ್ ನ ಸಚಿವರುಗಳು ಅವರಿಗೂ ಹೇಳಲಾಗದೇ, ಇವರಿಗೂ ಹೇಳಲಾಗದೇ ಸುಮ್ನೆ ಜಗಳ ನೋಡ್ತಾ ಕೂತಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಇಬ್ಬರ ನಡುವೆ ಹೊಂದಾಣಿಕೆಯೇ ಇಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದ್ದು, ಈ ಇಬ್ಬರ ಮಧ್ಯೆ ಅಧಿಕಾರಿಗಳು ಮಾತ್ರ ಬೆಸತ್ತು ಹೋಗಿರೋದಂತೂ ಸುಳ್ಳಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕಾಂಗ್ರೆಸ್ ನಾಯಕರಿಗೆ ಕಡಿವಾಣ ಹಾಕಲು ಬಿಜೆಪಿ ಅಸ್ತ್ರ ಪ್ರಯೋಗಿಸ್ತಾ ಜೆಡಿಎಸ್?

    ಕಾಂಗ್ರೆಸ್ ನಾಯಕರಿಗೆ ಕಡಿವಾಣ ಹಾಕಲು ಬಿಜೆಪಿ ಅಸ್ತ್ರ ಪ್ರಯೋಗಿಸ್ತಾ ಜೆಡಿಎಸ್?

    ಬೆಂಗಳೂರು: ಮೈತ್ರಿ ಸರ್ಕಾರ ಐದು ವರ್ಷ ಆಡಳಿತ ನಡೆಸಲಿದೆ ಎಂದು ಸಿಎಂ ಸೇರಿದಂತೆ ಎಲ್ಲ ದಳ-ಕೈ ನಾಯಕರು ಹೇಳಿಕೊಂಡು ಬರುತ್ತಿದ್ದಾರೆ. ಮೇಲ್ನೋಟಕ್ಕೆ ಎಲ್ಲವು ಸರಿಯಾಗಿ ನಡೆಯುತ್ತಿದೆ ಎಂದು ತೋರಿಸಲು ಸಂಪುಟದ ಸಚಿವರು ಪ್ರಯತ್ನ ಮಾಡುತ್ತಿದ್ದಾರೆ. ಎರಡು ಪಕ್ಷದೊಳಗಿನ ಆಂತರಿಕ ಕಲಹ ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ. ಮೈತ್ರಿ ಪಕ್ಷಗಳ ಶಾಸಕರು ಪರೋಕ್ಷವಾಗಿ ಒಬ್ಬರನ್ನೊಬ್ರನ್ನು ಟೀಕಿಸುತ್ತಾ ಬರುತ್ತಿದ್ದಾರೆ. ಇದೀಗ ಕಾಂಗ್ರೆಸ್ ನಾಯಕರಿಗೆ ಕಡಿವಾಣ ಹಾಕಲು ಸಚಿವ ಹೆಚ್.ಡಿ.ರೇವಣ್ಣ ಬಿಜೆಪಿಯ ಅಸ್ತ್ರವನ್ನು ಪ್ರಯೋಗಿಸದಂತೆ ಕಾಣುತ್ತಿದೆ.

    ಕಾಂಗ್ರೆಸ್ ನಾಯಕರು ಸಾರ್ವಜನಿಕ ಸಮಾರಂಭಗಳಲ್ಲಿ ಜೆಡಿಎಸ್ ನಾಯಕರನ್ನು ಟೀಕಿಸುತ್ತಾ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೇಸತ್ತ ಸಚಿವ ಹೆಚ್.ಡಿ.ರೇವಣ್ಣ ಹೊಸ ಅಸ್ತ್ರವನ್ನು ಪ್ರಯೋಗಿಸಿದ್ದಾರೆ. ಮಂಗಳವಾರ ಸಂಜೆ ರೇವಣ್ಣ ಬಿಜೆಪಿ ನಾಯಕರನ್ನು ಭೇಟಿಯಾಗಿ ಒಂದು ಗಂಟೆ ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ವೇಳೆ ಕಾಂಗ್ರೆಸ್ ನಾಯಕರು ಮಾನಸಿಕವಾಗಿ ನೀಡುತ್ತಿರುವ ಕಿರುಕುಳವನ್ನು ಹಂಚಿಕೊಂಡಿದ್ದಾರೆ. ಈ ರಹಸ್ಯ ಮಾತುಕತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇದ್ದರು ಎಂದು ಹೇಳಲಾಗುತ್ತಿದೆ.

    ಮಂಗಳವಾರ ಯಡಿಯೂರಪ್ಪನವರು ವಿಶ್ರಾಂತಿಯಲ್ಲಿದ್ದರು. ಹಾಗಾಗಿ ಅವರು ಯಾರನ್ನು ಭೇಟಿಯಾಗಿಲ್ಲ ಎಂದು ಬಿಜೆಪಿ ಹೇಳುತ್ತಿದೆ. ಕಾಂಗ್ರೆಸ್ ನಾಯಕರ ಹೇಳಿಕೆಗೆ ಬೇಸತ್ತು ರೇವಣ್ಣವರೇ ಈ ರೀತಿಯ ಸುದ್ದಿಯೊಂದನ್ನು ರಾಜಕೀಯ ಅಂಗಳದಲ್ಲಿ ಹರಿಬಿಟ್ಟರಾ ಎಂಬುವುದು ಗೊತ್ತಿಲ್ಲ. ಒಟ್ಟಿನಲ್ಲಿ ರೇವಣ್ಣ ಮಂಗಳವಾರ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ ಎಂಬ ಗುಸು ಗುಸು ಚರ್ಚೆ ಆರಂಭವಾಗಿರೋದಂತು ಸತ್ಯ.

    ಒಂದು ವೇಳೆ ಭೇಟಿ ನಿಜವಾದಲ್ಲಿ ಕಾಂಗ್ರೆಸ್‍ಗೆ ರೇವಣ್ಣರ ನಡೆ ನುಂಗಲಾರದ ತುತ್ತಾಗಲಿದೆ. ಲೋಕಸಭಾ ಚುನಾವಣೆ ತಯಾರಿಯಲ್ಲಿರುವ ಕಾಂಗ್ರೆಸ್‍ಗೆ ದೊಡ್ಡ ಹೊಡೆತವೇ ಬಿದ್ದಂತಾಗುತ್ತದೆ. ಜೆಡಿಎಸ್ ತಮ್ಮ ಬೆಂಬಲವನ್ನು ಬಿಜೆಪಿ ನೀಡಿದರೆ ಆಪರೇಷನ್ ಕಮಲ ನಡೆಸುವ ಅವಶ್ಯಕತೆ ಕಮಲ ನಾಯಕರಿಗಿರಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • `ಯಾರದೋ ಟ್ಯಾಕ್ಸ್ ದುಡ್ಡು, ದೇವೇಗೌಡ್ರ ಮೊಮ್ಮಕ್ಕಳ ಮೋಜು’

    `ಯಾರದೋ ಟ್ಯಾಕ್ಸ್ ದುಡ್ಡು, ದೇವೇಗೌಡ್ರ ಮೊಮ್ಮಕ್ಕಳ ಮೋಜು’

    – ಸರ್ಕಾರಿ ಕಾರು ಬಳಸಿದ ಪ್ರಜ್ವಲ್ ರೇವಣ್ಣ ವಿರುದ್ಧ ಬಿಜೆಪಿ ಟ್ವೀಟ್
    – ಪ್ರಜ್ವಲ್ ವಿರುದ್ಧ ಸಾರ್ವಜನಿಕರ ಆಕ್ರೋಶ

    ಹಾಸನ: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರು ಇಂದು ಜಿಲ್ಲೆಯ ವಿವಿಧ ವಾರ್ಡ ಗಳಿಗೆ ಸರ್ಕಾರಿ ಕಾರಿನಲ್ಲಿ ಸುತ್ತಾಡಿದ್ದು, ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಪ್ರಜ್ವಲ್ ರೇವಣ್ಣ ಕಾರಿನಲ್ಲಿ ಸುತ್ತಾಡುತ್ತಿರುವ ವಿಡಿಯೋವನ್ನು ಕರ್ನಾಟಕ ಬಿಜೆಪಿ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿ, ಯಾರದೋ ಟ್ಯಾಕ್ಸ್ ದುಡ್ಡು, ದೇವೆಗೌಡ್ರ ಮೊಮ್ಮಕ್ಕಳ ಮೋಜು ಎಂದು ಬರೆದು ಟೀಕಿಸಿದೆ.

    ವೈಯಕ್ತಿಕ ಜೀವನಕ್ಕೆ ಸರ್ಕಾರಿ ಕಾರನ್ನು ಹೇಗೆ ಬಳಕೆ ಮಾಡುತ್ತಿದ್ದಾರೆ ಎನ್ನುವುದನ್ನು ಇದೊಂದು ಉತ್ತಮ ಉದಾಹರಣೆ. ವಂಶಪಾರಂಪರ್ಯ ರಾಜಕಾರಣಕ್ಕೆ ಇದೊಂದು ಅತ್ಯುತ್ತಮ ಉದಾಹರಣೆ. ಸಾರ್ವಜನಿಕರ ತೆರಿಗೆ ಹಣಕ್ಕೆ ದೇವೇಗೌಡರ ಕುಟುಂಬದವರಿಂದ ಅವಮಾನ ಎಂದು ಬಿಜೆಪಿ ತನ್ನ ಖಾತೆಯಲ್ಲಿ ಬರೆದುಕೊಂಡಿದೆ.

    ಏನಿದು ಘಟನೆ?
    ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬೆನ್ನಲ್ಲೇ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಇಂದು ಸರ್ಕಾರಿ ಇನ್ನೋವಾ ಕಾರಿನಲ್ಲಿ ವಿವಿಧ ವಾರ್ಡ್‍ಗಳಿಗೆ ಸುತ್ತಾಡಿದ್ದಾರೆ. ಅಲ್ಲದೇ ಸರ್ಕಾರಿ ಕಾರಿನಲ್ಲಿಯೇ ಪಕ್ಷದ ಕಾರ್ಯಕರ್ತರ ಸಭೆಗೆ ಬಂದಿದ್ದಾರೆ. ಹೀಗಾಗಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಸರ್ಕಾರಿ ಕಾರು ದುರ್ಬಳಕೆ ಮಾಡಿದ್ದಕ್ಕೆ ಭಾರೀ ಟೀಕೆ ಕೇಳಿಬಂದಿದೆ.

    ಕೆಎ 01 ಜಿಎ 8009 ನಂಬರಿನ ಸರ್ಕಾರಿ ಇನ್ನೋವಾ ಕಾರ್ ಬಳಸಿದ ಪ್ರಜ್ವಲ್ ರೇವಣ್ಣ, ತಮ್ಮ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಜೊತೆ ನಗರದಾದ್ಯಂತ ಸಂಚಾರ ಮಾಡಿದ್ದಾರೆ. ಇದೀಗ ಪ್ರಜ್ವಲ್ ಸರ್ಕಾರಿ ಹುದ್ದೆಯಲ್ಲಿ ಇಲ್ಲ. ಹೀಗಿದ್ದರೂ ಹೇಗೆ ಸರ್ಕಾರಿ ಕಾರ್ ಬಳಸಿದ್ರು ಅನ್ನೋದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

    https://www.youtube.com/watch?v=Pkpa8R4wRqQ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ರಾಜ್ಯ ರಾಜಕಾರಣದ ರಿಯಲ್ ಮಹಾಭಾರತ !

    ರಾಜ್ಯ ರಾಜಕಾರಣದ ರಿಯಲ್ ಮಹಾಭಾರತ !

    -ಚಕ್ರವ್ಯೂಹ ಭೇದಿಸಲು ಹೊರಟ ಅಭಿಮನ್ಯುವಿನ ಉತ್ಸಾಹಕ್ಕೆ ಬ್ರೇಕ್

    ಬೆಂಗಳೂರು: ಇದು ರಾಜ್ಯ ರಾಜಕಾರಣದ ದೊಡ್ಡ ಮನೆಯ ಮಹಾಭಾರತದ ಕಥೆ. ಲೋಕಸಭೆ ಚಕ್ರವ್ಯೂಹ ಭೇದಿಲು ಮುಂದಾಗಿದ್ದ ಆಧುನಿಕ ಅಭಿಮನ್ಯು ನಿಖಿಲ್ ಕುಮಾರಸ್ವಾಮಿ ಉತ್ಸಾಹಕ್ಕೆ ದೊಡ್ಡ ಗೌಡರು ಅಂದ್ರೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಮಂಡ್ಯ ಕ್ಷೇತ್ರದಿಂದ ಚುನಾವಣೆಗೆ ನಿಲ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಸಂಬಂಧ ನಿಖಿಲ್ ಸಹ ಪದೇ ಪದೇ ಮಂಡ್ಯಕ್ಕೆ ಭೇಟಿ ನೀಡಿದ್ದರು. ಮಂಡ್ಯ ಕ್ಷೇತ್ರದ ಪರಿಸರ ತುಂಬಾ ವಿಭಿನ್ನವಾಗಿದ್ದು, ದೋಸ್ತಿ ಪಕ್ಷಗಳೆರೆಡು ಪ್ರಬಲವಾಗಿವೆ. ಈ ಹಿನ್ನೆಲೆಯಲ್ಲಿ ನಿಖಿಲ್ ಮಂಡ್ಯಕ್ಕೆ ಕ್ಷೇತ್ರಕ್ಕೆ ಭೇಟಿ ನೀಡೋದನ್ನು ಕಡಿಮೆ ಮಾಡಬೇಕು ಎಂಬ ಸಂದೇಶವನ್ನು ದೇವೇಗೌಡರು ಮೊಮ್ಮಗನಿಗೆ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

    ಮಂಡ್ಯ ಕ್ಷೇತ್ರದಿಂದ ಯಾರು ಸ್ಪರ್ಧಿಸಬೇಕೆಂಬ ಸೂಕ್ಷ್ಮ ಗೊಂದಲಗಳು ಮೈತ್ರಿಯಲ್ಲಿದೆ. ಜೆಡಿಎಸ್ ನಲ್ಲಿಯೇ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಸದ್ಯದ ಸಂಸದ ಶಿವರಾಮೇಗೌಡರು ಮತ್ತು ಲಕ್ಷ್ಮಿ ಅಶ್ವಿನ್ ಗೌಡ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇತ್ತ ಕಾಂಗ್ರೆಸ್‍ನಲ್ಲಿ ದಿ.ಅಂಬರೀಶ್ ಅವರ ಪತ್ನಿ ಅಥವಾ ಪುತ್ರನನ್ನು ಚುನಾವಣೆ ಕಣಕ್ಕೆ ಇಳಿಸಬೇಕೆಂಬ ಮಾತುಗಳು ಕೇಳಿ ಬರುತ್ತಿವೆ. ಮಾಜಿ ಸಂಸದೆ ರಮ್ಯಾ ಸಹ ಮಂಡ್ಯ ಕ್ಷೇತ್ರದ ಮೇಲೆ ಒಂದು ಕಣ್ಣೀಟ್ಟಿದ್ದಾರೆ ಎನ್ನಲಾಗುತ್ತಿದೆ.

    ದಾಯಾದಿ ಕಲಹಕ್ಕೆ ವೇದಿಕೆಯಾಗುತ್ತಾ ಮಂಡ್ಯ?
    ಈ ಹಿಂದೆ ಜೆಡಿಎಸ್ ನಲ್ಲಿ ಅನಿತಾ ಕುಮಾರಸ್ವಾಮಿ ಅವರಿಗೆ ವಿಧಾನಸಭಾ ಕ್ಷೇತ್ರಕ್ಕೆ ನೀಡುವ ವಿಚಾರ ಪ್ರಸ್ತಾಪವಾದಾಗ ಸಚಿವ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅಸಮಾಧಾನ ಹೊರಹಾಕಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ಹೆಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಹಾಸನ ಕ್ಷೇತ್ರದಿಂದ ಚುನಾವಣಾ ಕಣಕ್ಕೀಳಿಯುವುದು ಬಹುತೇಕ ಖಚಿತವಾಗಿದೆ. ಒರ್ವ ಮೊಮ್ಮಗನಿಗೆ ಟಿಕೆಟ್ ಕೊಟ್ಟು ಮತ್ತೋರ್ವನಿಗೆ ಕೊಡದೇ ಇದ್ರೆ ಕುಟುಂಬದಲ್ಲಿಯೇ ಭಿನ್ನಮತ ಸ್ಫೋಟವಾಗುತ್ತಾ? ಅಥವಾ ದೊಡ್ಡ ಗೌಡರ ಆದೇಶವನ್ನು ಒಪ್ಪಿಕೊಳ್ತಾರಾ ಎಂಬುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

    ದೇವೇಗೌಡರ ಈ ಸೂಚನೆಯಿಂದಾಗಿ ರಣೋತ್ಸಾಹದಲ್ಲಿದ್ದ ನಿಖಿಲ್ ಕುಮಾರ್ ಅವರಿಗೆ ಬೇಸರ ತಂದಿರೋದು ಸತ್ಯ. ಮಂಡ್ಯದಲ್ಲಿ ಬೇರೆ ಬೇರೆ ರೀತಿಯ ರಾಜಕೀಯ ಧೃವೀಕರಣದ ಬೆಳವಣಿಗೆಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಗೌಡರು ಕಾದು ನೋಡುವ ತಂತ್ರಕ್ಕೆ ಮುಂದಾದಂತೆ ಕಾಣುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವೇದಿಕೆಯಲ್ಲೇ ಸಚಿವ ರೇವಣ್ಣ, ಪ್ರೀತಂಗೌಡ ವಾಕ್ಸಮರ..!

    ವೇದಿಕೆಯಲ್ಲೇ ಸಚಿವ ರೇವಣ್ಣ, ಪ್ರೀತಂಗೌಡ ವಾಕ್ಸಮರ..!

    ಹಾಸನ: 70ನೇ ಗಣರಾಜ್ಯೋತ್ಸವ ಸಮಾರಂಭದ ವೇದಿಕೆಯಲ್ಲೇ ಲೋಕೋಪಯೋಗಿ ಸಚಿವ ರೇವಣ್ಣ ಹಾಗೂ ಶಾಸಕ ಪ್ರೀತಂಗೌಡ ಮಧ್ಯೆ ವಾಗ್ವಾದ ನಡೆದಿದೆ.

    ಹಾಸನ ಬಿ.ಎಂ. ರಸ್ತೆಯ ಅಗಲೀಕರಣ ವಿಚಾರದಲ್ಲಿ ಕಿತ್ತಾಟ ನಡೆದಿದೆ. ನನ್ನ ಗಮನಕ್ಕೆ ಬಾರದೆ ರಸ್ತೆ ಕಾಮಗಾರಿ ಮಾಡಿದ್ದೀರಾ ಎಂದು ಶಾಸಕ ಪ್ರೀತಂಗೌಡ ಅವರು ವೇದಿಕೆಯಲ್ಲೇ ಸಚಿವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಸಚಿವರು ನಂಗೇನೂ ಗೊತ್ತಿಲ್ಲ ಎಲ್ಲ ಡಿಸಿ ಮೇಡಂ ಮಾಡಿರೋದು. ಹೋಗಿ ಅವರನ್ನೇ ಕೇಳು ಎಂದು ಹೇಳಿದ್ದಾರೆ.

    ಇದರಿಂದ ಸಿಡಿಮಿಡಿಗೊಂಡ ಶಾಸಕರು, ನಿಮ್ಮ ಮೇಲೆ ಹಕ್ಕು ಚ್ಯುತಿ ಮಂಡನೆ ಮಾಡುತ್ತೇನೆ ಅಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರೇವಣ್ಣ ಅವರು, ಹಕ್ಕುಚ್ಯುತಿ ಆದ್ರೆ ಏನು ಅಂತಾ ಮೊದಲು ತಿಳಿದುಕೊಂಡು ಬಾ ಎಂದು ಶಾಸಕರಿಗೆ ತಿರುಗೇಟು ನೀಡಿದ್ದಾರೆ.

    https://www.youtube.com/watch?v=O_eS2ctIFOE

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತುರ್ತು ಕಾಮಗಾರಿ ನಿಯಮದಡಿ ಪರಂಗಾಗಿ ರೇವಣ್ಣ ಲಕ್ಷ ಲಕ್ಷ ಖರ್ಚು..!

    ತುರ್ತು ಕಾಮಗಾರಿ ನಿಯಮದಡಿ ಪರಂಗಾಗಿ ರೇವಣ್ಣ ಲಕ್ಷ ಲಕ್ಷ ಖರ್ಚು..!

    ಬೆಂಗಳೂರು: ರಾಜ್ಯದಲ್ಲಿ ಬರಗಾಲವಿದ್ರೂ ಸಮ್ಮಿಶ್ರ ಸರ್ಕಾರದಲ್ಲಿ ಖರ್ಚಿಗೆ ಕಮ್ಮಿಯೇನಿಲ್ಲ. ವಿಧಾನಸೌಧದಲ್ಲಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಕೊಠಡಿಯ ನವೀಕರಣಕ್ಕೆ 70 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ.

    ಪರಮೇಶ್ವರ್‍ಗೆ ಗೃಹ ಖಾತೆ ಹೋದಾಗ ದಲಿತರಿಗೆ ಅನ್ಯಾಯ ಎಂದು ರೇವಣ್ಣ ಹೇಳಿದ್ದರು. ಈಗ ಪರಮೇಶ್ವರ್ ಮೇಲಿನ ಪ್ರೀತಿಗೆ ರೇವಣ್ಣ ಅವರು ಇಲಾಖೆ ನಿಯಮವೇ ಬ್ರೇಕ್ ಮಾಡಿದ್ದಾರೆ. ಕಾಂಗ್ರೆಸ್‍ನಲ್ಲಿ ಯಾರ ಕೆಲಸ ಆಗಿಲ್ಲ ಅಂದರೂ ಪರಮೇಶ್ವರ್ ಅವರ ಕೆಲಸ ಮಾತ್ರ ಮಿಸ್ ಆಗಲ್ಲ. ಹೀಗಾಗಿ ಪರಮೇಶ್ವರ್ ಕೊಠಡಿ ನವೀಕರಣಕ್ಕೆ ಸೂಪರ್ ಸಿಎಂ ಕೇಳಿದ್ದಷ್ಟು ಹಣ ಕೊಟ್ಟಿದ್ದಾರೆ.

    ಹೌದು. ಬರಗಾಲದಲ್ಲೂ ಕೊಠಡಿ ನವೀಕರಣಕ್ಕೆ ಲಕ್ಷ ಲಕ್ಷ ಖರ್ಚು ಮಾಡಲಾಗಿದೆ. 70 ಜನ ರೈತರ ಸಾಲಮನ್ನಾ ಮಾಡಬಹುದಾದ ಹಣದಲ್ಲಿ ಒಂದೇ ರೂಂ ನವೀಕರಣ ಮಾಡಲಾಗಿದೆ. ಟೆಂಡರ್ ಕರೆಯದೇ ಬರೋಬ್ಬರಿ 70 ಲಕ್ಷದಲ್ಲಿ ಡಿಸಿಎಂ ಪರಮೇಶ್ವರ್ ಕೊಠಡಿಯನ್ನು ನವೀಕರಿಸಲಾಗಿದೆ. 4ಜಿ ಅಡಿಯಲ್ಲಿ ಲೋಕೋಪಯೋಗಿ ಇಲಾಖೆ ಈ ಕಾಮಗಾರಿ ನಡೆಸಿದೆ.

    4 ಜಿ ಕಾಯಿದೆಯ ಮೂಲಕ ಯಾವುದೇ ಟೆಂಡರ್ ಕರೆಯದೆ ಕೆಲಸ ಮಾಡಬಹುದು. 1, 2 ಲಕ್ಷ ಅಥವಾ 1 ಕೋಟಿಯದ್ದೇ ಆಗಿರಬಹುದು. ಒಟ್ಟಿನಲ್ಲಿ ತುರ್ತು ಸಮಯದಲ್ಲಿ ಮಾತ್ರ 4ಜಿ ಅನ್ವಯ ಕೆಲಸ ಮಾಡಬಹುದು. ಆದ್ರೆ ಇಲ್ಲಿ ಯಾವುದೇ ತುರ್ತು ಇಲ್ಲದೆ ಹೋದ್ರೂ 70 ಲಕ್ಷದಲ್ಲಿ ಡಿಸಿಎಂ ರೂಂ ನವೀಕರಣ ಮಾಡಲಾಗಿದೆ. ಇದೀಗ ನಿಯಮ ಬ್ರೇಕ್ ಮಾಡಿ ಕೆಲಸ ಮಾಡಿದ ದಾಖಲೆ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಒಟ್ಟಿನಲ್ಲಿ ಇಲ್ಲಿ ಕೇವಲ ಇವರ ರಾಜಕೀಯ ಹಿತಾಸಕ್ತಿಗಳನ್ನು ತುಂಬಿಸಿಕೊಳ್ಳಲು ಈ ಕೆಲಸ ಆಗಿದೆ. ಆದ್ರೆ ಇಲ್ಲಿ ಒಂದೊಂದು ಲಕ್ಷ ಅಂದ್ರೂ ಸುಮಾರು 70 ಮಂದಿ ರೈತರ ಸಾಲಮನ್ನಾ ಮಾಡಬಹುದಾಗಿತ್ತು. ಪರಮೇಶ್ವರ್ ಬಂದ ಬಳಿಕ ಅದಕ್ಕೆ 70 ಲಕ್ಷ ರೂ ಖರ್ಚಿ ಮಾಡಿ ನವೀಕರಣ ಮಾಡಲಾಗಿದೆ. ಸೂಪರ್ ಸಿಎಂ ಎಂದೇ ಬಿಂಬಿತರಾಗಿರೋ ಎಚ್ ಡಿ ರೇವಣ್ಣ ಅವರು ಇಂತಹ ಸಂದರ್ಭಗಳಲ್ಲಿ ತಮಗೆ ಬೇಕಾದಂತೆ ನಿಯಮಗಳನ್ನು ಅವರು ಪರಮೇಶ್ವರ್ ಅವರ ಪ್ರೀತಿಗೆ ಈ ದುಂದುವೆಚ್ಚ ಮಾಡಿದ್ದಾರೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಮ್ಮಿಶ್ರ ಸರ್ಕಾರದ ಭವಿಷ್ಯ ನುಡಿದ ಸಚಿವ ರೇವಣ್ಣ

    ಸಮ್ಮಿಶ್ರ ಸರ್ಕಾರದ ಭವಿಷ್ಯ ನುಡಿದ ಸಚಿವ ರೇವಣ್ಣ

    ಹಾಸನ: ಸಚಿವ ಸಂಪುಟ ಪುನಾರಚನೆಯ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆ ಕಾಣುತ್ತಿದೆ. ಇದಕ್ಕೆ ಪೂರಕ ಎಂಬಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳದಲ್ಲಿದ್ದು, ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸಚಿವ ಹೆಚ್.ಡಿ.ರೇವಣ್ಣ, ಸಮ್ಮಿಶ್ರ ಸರ್ಕಾರಕ್ಕೆ ಏನೂ ಆಗಲ್ಲ. ಎಲ್ಲ ಗೊಂದಲಗಳು ಕೆಲವೇ ದಿನಗಳಲ್ಲಿ ಅಂತ್ಯವಾಗಲಿವೆ ಎಂದು ಭವಿಷ್ಯ ನುಡಿದಿದ್ದಾರೆ.

    ಜನವರಿ 3 ರಿಂದ 13ರೊಳಗೆ ಎಲ್ಲವೂ ಸರಿ ಹೋಗಲಿದೆ ಅಂತಾ ನಾನೇ ಜೋತಿಷ್ಯ ನುಡಿಯುತ್ತಿದ್ದೇನೆ. ರಮೇಶ್ ಜಾರಕಿಹೊಳಿ ಅವರಿಗೆ ಸಣ್ಣ ಪ್ರಮಾಣದಲ್ಲಿ ಅಸಮಾಧಾನವಿದೆ. ಎಲ್ಲಾ ಸಚಿವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ. ರಮೇಶಣ್ಣ ನನ್ನ ಅತ್ಮೀಯ ಗೆಳೆಯರು ಆಗಿದ್ದಾರೆ. ರಮೇಶಣ್ಣ, ನಾಗೇಂದ್ರ ಸೇರಿದಂತೆ ಎಲ್ಲರನ್ನೂ ಜೊತೆಗಿಟ್ಟುಕೊಳ್ಳುತ್ತೇವೆ. ಈ ತಿಂಗಳ 3 ರಿಂದ 13 ರಿಂದ ಎಲ್ಲಾ ಸರಿ ಹೋಗುತ್ತದೆ, ಸಮ್ಮಿಶ್ರ ಸರ್ಕಾರ ಐದು ವರ್ಷವನ್ನು ಪೂರ್ಣಗೊಳಿಸುತ್ತದೆ ಎಂದು ರೇವಣ್ಣವರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ರು.

    ಹಾಸನ ಜಿಲ್ಲೆಯ ಶಾಲಾ-ಕಾಲೇಜು ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ತೆರೆಯಬೇಕು. ಇದರಿಂದ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಆರಂಭಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಇಲ್ಲವಾದಲ್ಲಿ ಎಲ್ಲಾ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ರದ್ದು ಮಾಡಿ, ಕನ್ನಡ ಭಾಷೆಯಲ್ಲಿ ವಿದ್ಯಾಭ್ಯಾಸ ನೀಡಲಿ. ಇದು ನನ್ನ ಸ್ವಂತ ಅಭಿಪ್ರಾಯ ಇದರಲ್ಲಿ ರಾಜಿಯೇ ಇಲ್ಲ ಎಂದು ಹೇಳಿದರು.

    ಖಾಸಗಿ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವುದಿಲ್ಲ. ಶ್ರೀಮಂತರ ಮಕ್ಕಳಂತೆ ಬಡ ಮಕ್ಕಳಿಗೂ ಉನ್ನತ ಶಿಕ್ಷಣ ಸಿಗಬೇಕು ಎಂಬುವುದು ನಮ್ಮ ಆಶಯ. ಈ ಬಗ್ಗೆ ಧ್ವನಿ ಎತ್ತಲು ಬುದ್ದಿ ಜೀವಿಗಳಿಗೂ ಮನವಿ ಮಾಡುತ್ತೇನೆ. ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ತಡೆಗಟ್ಟಲು ಸಾಧ್ಯವಿಲ್ಲ. ಕಾರಣ ಹಣವಂತರು ಶಾಲೆಗಳನ್ನು ನಡೆಸುತ್ತಿದ್ದಾರೆ. ಇಂಗ್ಲಿಷ್ ಭಾಷೆಯ ಶಿಕ್ಷಕರನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಅಂತಾ ಅಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv