Tag: HD Revanna

  • ವಿಡಿಯೋ: ಬಿಸ್ಕೆಟ್ ಎಸೆದ ರೇವಣ್ಣ ನಡೆಗೆ ಜೆಡಿಎಸ್ ಮುಖಂಡ ಬೇಸರ!

    ವಿಡಿಯೋ: ಬಿಸ್ಕೆಟ್ ಎಸೆದ ರೇವಣ್ಣ ನಡೆಗೆ ಜೆಡಿಎಸ್ ಮುಖಂಡ ಬೇಸರ!

    ಬೆಂಗಳೂರು: ಸಚಿವ ರೇವಣ್ಣ ಅವರು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ಬಿಸ್ಕೆಟ್ ಎಸೆದ ವರ್ತನೆಗೆ ತನ್ನದೇ ಪಕ್ಷದ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ.

    ನೆಲಮಂಗಲದ ಅಡಕಿಮಾರನಹಳ್ಳಿ ಜೆಡಿಎಸ್ ಮುಖಂಡ ಗೋಪಾಲ್ ಬೇಸರ ವ್ಯಕ್ತಪಡಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನೀವು ಜೀವನ ನಡೆಸುತಿದ್ದೀರಾ? ಜನರನ್ನ ಮರೆತರೆ ಜನರು ರೊಚ್ಚಿಗೆದ್ರೆ ಉಳಿಯಲ್ಲ. ಜನರಿಂದ ಜನರಿಗಾಗಿ ನೀವು ಇರೋದು. ಮಾಜಿ ಪ್ರಧಾನಿ ದೇವೆಗೌಡರ ಮಕ್ಕಳಾಗಿ ನಿಮಗೆ ಶೋಭೆಯಲ್ಲ. ಅದೊಂದೇ ವಿಚಾರ ಅಲ್ಲ ಯಾವುದೇ ವಿಚಾರದಲ್ಲಿ ಜನರಿಗೆ ರೇವಣ್ಣ ಸ್ಪಂದಿಸಲ್ಲ ಅಂತ ಸಚಿವ ರೇವಣ್ಣರಿಗೆ ತನ್ನದೇ ಪಕ್ಷದ ಮುಖಂಡರ ನೀತಿ ಪಾಠ ಮಾಡಿದ್ದಾರೆ.

    ಸದ್ಯ ಮುಖಂಡರ ನೀತಿ ಪಾಠ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಕ್ಷಕ್ಕೆ ಮುಜುಗರ ಉಂಟಾಗುವ ಸಾಧ್ಯತೆಗಳಿವೆ. ಇದನ್ನೂ ಓದಿ: ಜನತೆ ಕ್ಷಮೆ ಕೇಳಬೇಕು ಅಂದ್ರೆ ಕೇಳ್ತೀನಿ- ಸಚಿವ ರೇವಣ್ಣ

    ಏನಿದು ಘಟನೆ?:
    ಮಳೆಯ ಆರ್ಭಟದಿಂದ ಕೊಡಗು ಜನರ ಜೀವನ ಸಂಕಷ್ಟಕ್ಕೆ ಸಿಲುಕಿಗೊಂಡಿತ್ತು. ಹೀಗಾಗಿ ಸೂಪರ್ ಸಿಎಂ ಎಂದೇ ಬಿಂಬತರಾಗಿರೀ ಸಚಿವ ರೇವಣ್ಣ ಅವರು ಆಗಸ್ಟ್ 20ರಂದು ಸಂತ್ರಸ್ತರನ್ನು ಭೇಟಿ ಮಾಡಿ ಕಷ್ಟ ಆಲಿಸಲೆಂದು ತೆರಳಿದ್ದರು. ಶನಿವಾರ ರೇವಣ್ಣ ಮತ್ತು ಎ.ಟಿ. ರಾಮಸ್ವಾಮಿ ಅವರು ಹಾಸನ ಜಿಲ್ಲೆಯ ರಾಮನಾಥಪುರದ ಸಂತ್ರಸ್ತರ ಶಿಬಿರಕ್ಕೆ ಭೇಟಿ ನೀಡಿದ್ದರು. ಆದರೆ ಅಲ್ಲಿ ಪ್ರವಾಹ ಸಂತ್ರಸ್ತರಿಗೆ ಸಚಿವ ರೇವಣ್ಣ ಆಹಾರವನ್ನು ಪ್ರಾಣಿಗಳಿಗೆ ಎಸೆಯೋ ರೀತಿ ಬಿಸ್ಕೆಟ್ ಎಸೆದಿದ್ದರು. ರೇವಣ್ಣ ಅವರು ಬಂದಿದ್ದು, ನಮ್ಮ ಕಷ್ಟವನ್ನು ಆಲಿಸುತ್ತಾರೆ ಅಂತಾ ನಿರಾಶ್ರಿತರು ಸಚಿವರನ್ನು ಮುತ್ತಿಕೊಂಡಿದ್ದರು. ಈ ವೇಳೆ ರೇವಣ್ಣ ಸಂತ್ರಸ್ತರಿಗೆ ಕೊಡಲು ಒಂದು ಬಾಕ್ಸ್ ಬಿಸ್ಕೆಟ್ ತಂದಿದ್ದರು. ಅದನ್ನು ಅಮಾನವೀಯತೆಯಿಂದ ಎಸೆದಿದ್ದಾರೆ. ರೇವಣ್ಣ ಅವರು ಬಿಸ್ಕೆಟ್ ಎಸೆಯುತ್ತಿದ್ದರೆ ಪಕ್ಕದಲ್ಲೇ ನಿಂತಿದ್ದ ಎ.ಟಿ ರಾಮಸ್ವಾಮಿ ಮೂಕಪ್ರೇಕ್ಷಕರಂತೆ ನೋಡುತ್ತಾ ನಿಂತಿದ್ದರು. ಈ ವಿಚಾರ ಭಾರೀ ಸುದ್ದಿಯಾಗಿತ್ತು. ಇದನ್ನೂ ಓದಿ: ರೇವಣ್ಣ ಬಿಸ್ಕೆಟ್ ಎಸೆದ ವಿಚಾರ ಸಮರ್ಥಿಸಿಕೊಂಡ್ರು ಆರ್.ವಿ.ದೇಶಪಾಂಡೆ

    ಶಿಬಿರದಲ್ಲಿ ಸುಮಾರು 100 ಜನರು ಇದ್ದರು ಅಷ್ಟೇ. ಎಲ್ಲರಿಗೂ ಜಿಲ್ಲಾಧಿಕಾರಿ ಮತ್ತು ತಾಲೂಕು ಸದ್ಯರೆಲ್ಲರೂ ಆಶ್ರಯ ನೀಡಿದ್ದರು. ನಮ್ಮ ಕ್ಷೇತ್ರ ಏನೋ ಬರುಬೇಕು ಎಂದು ಪ್ರಚಾರಕ್ಕಾಗಿ ಮತ್ತು ಕಾಟಚಾರಕ್ಕಾಗಿ ಬಂದು ಬಿಸ್ಕೆಟ್ ಎಸೆದು ಹೋಗಿದ್ದಾರೆ. ಅಲ್ಲೇ ಪಕ್ಕದಲ್ಲಿದ್ದ ರಾಮಸ್ವಾಮಿ ಅವರು ಸುಮ್ಮನೆ ನೋಡುತ್ತಾ ನಿಂತಿದ್ದರು. ರೇವಣ್ಣ ಅವರು ನಡೆ ನಿಜಕ್ಕೂ ಬೇಸರವಾಯಿತು ಎಂದು ಸ್ಥಳೀಯ ಗಣೇಶ್ ಪಬ್ಲಿಕ್ ಟಿವಿಗೆ ತಿಳಿಸಿದ್ದರು. ಇದನ್ನೂ ಓದಿ:  ಹಾಸನದಿಂದ 30 ಸಾವಿರ ಲೀಟರ್ ಹಾಲು, 5 ಸಾವಿರ ಪ್ಯಾಕ್ ಬಿಸ್ಕೆಟ್ ರವಾನೆ

  • ಉತ್ತರ ಕರ್ನಾಟಕದ ಅನ್ಯಾಯದ ಬಗ್ಗೆ ಮತ್ತೆ ಧ್ವನಿ ಎತ್ತಿದ ಬಿ ಶ್ರೀರಾಮುಲು

    ಉತ್ತರ ಕರ್ನಾಟಕದ ಅನ್ಯಾಯದ ಬಗ್ಗೆ ಮತ್ತೆ ಧ್ವನಿ ಎತ್ತಿದ ಬಿ ಶ್ರೀರಾಮುಲು

    ಗದಗ: ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಬಂದಿದೆ. ಮುಂದೆಯೂ ಅನ್ಯಾಯ ಆಗಲಿದೆ. ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಮತ್ತೊಮ್ಮೆ ಆರೋಪಿಸಿದ್ದಾರೆ.

    ಕೊಡಗು ನೆರೆ ಹಾವಳಿ ಪ್ರಕರಣ ಹಿನ್ನಲೆ ಕುರಿತು ಮಾತನಾಡಿದ ಅವರು ಸರ್ಕಾರ ಮುಂಜಾಗ್ರತ ಕ್ರಮವನ್ನು ಕೈಗೊಳ್ಳಲಿಲ್ಲ. ಸರ್ಕಾರ ಎಚ್ಚೆತ್ತುಕೊಂಡಿದ್ದರೆ ಜನರ ಪ್ರಾಣಹಾನಿಯನ್ನು ತಡೆಯಬಹುದಿತ್ತು. ಆದರೆ ಸರ್ಕಾರದ ನಿರ್ಲಕ್ಷ್ಯ ದಿಂದ ಪ್ರಾಣ ಹಾನಿ, ಪ್ರಾಣಿಗಳ ಹಾನಿ, ಆಸ್ತಿ-ಪಾಸ್ತಿ ಹಾನಿ ಸಂಭವಿಸಿದೆ. ಇಷ್ಟೆಲ್ಲಾ ಘಟನೆ ನಡೆದರೂ ಸಿಎಂ ತಡವಾಗಿ ಭೇಟಿ ನೀಡಿರುವುದು ದುರದೃಷ್ಟಕರ ಎಂದು ವಾಗ್ದಾಳಿ ನಡೆಸಿದರು.

    ಸಚಿವ ಎಚ್.ಡಿ ರೇವಣ್ಣ ಬಿಸ್ಕೆಟ್ ಎಸೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಾಜಿ ಪ್ರಧಾನಿ ಮಕ್ಕಳಾದ ರೇವಣ್ಣಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಇರಬೇಕಿತ್ತು. ಸರ್ಕಾರ ಮತ್ತು ಸಚಿವ ಸ್ಥಾನ ಅಹಂಕಾರ ಅವರಲ್ಲಿ ತುಂಬಿಕೊಂಡಿದೆ. ಇದು ಅಧಿಕಾರ ಅಹಂ ಬಹಳ ದಿನ ಉಳಿಯುವುದಿಲ್ಲ. ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಸೂಕ್ತ ಅನುದಾನ ಸಿಗಲಿದ್ದು, ಪ್ರಧಾನಿಗಳು ಕೇರಳ ಹಾಗೂ ಕರ್ನಾಟಕಕ್ಕೆ ಸೂಕ್ತ ಪರಿಹಾರ ನೀಡುತ್ತಾರೆ ಎಂದರು.

    ಸರ್ಕಾರ ಮನಸ್ಸು ಮಾಡಿದರೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬಹುದು. ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲಮನ್ನಾ ಬಗ್ಗೆ ಕುಮಾರಸ್ವಾಮಿ ಅಧಿಕೃತ ಆದೇಶ ಹೊರಡಿಸಲಿ. ರೈತರ ಸಾಲಮನ್ನಾ ವಿಷಯದಲ್ಲಿ ನಾನು ರಾಜಕೀಯ ಮಾಡುವುದಿಲ್ಲ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಾಸನದಿಂದ 30 ಸಾವಿರ ಲೀಟರ್ ಹಾಲು, 5 ಸಾವಿರ ಪ್ಯಾಕ್ ಬಿಸ್ಕೆಟ್ ರವಾನೆ

    ಹಾಸನದಿಂದ 30 ಸಾವಿರ ಲೀಟರ್ ಹಾಲು, 5 ಸಾವಿರ ಪ್ಯಾಕ್ ಬಿಸ್ಕೆಟ್ ರವಾನೆ

    ಹಾಸನ: ಪ್ರವಾಹದಲ್ಲಿ ಸಿಲುಕಿರುವ ಕೊಡಗಿಗೆ ಹಾಸನದ ಹಾಲು ಡೈರಿ ಒಕ್ಕೂಟದಿಂದ 30 ಸಾವಿರ ಲೀಟರ್ ಹಾಲು ಮತ್ತು 5 ಸಾವಿರ ಪ್ಯಾಕ್ ಬಿಸ್ಕೆಟ್ ರವಾನೆಯಾಗಿದೆ.

    ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಅವರು ಹಾಲು ರವಾನೆ ಮಾಡಲು ಹಸಿರು ನಿಶಾನೆ ತೋರಿದರು. ಮೂರು ವಾಹನಗಳಲ್ಲಿ ಹಾಲು ಮತ್ತು ಬಿಸ್ಕೆಟ್ ನೀಡಲಾಗಿದೆ. ಇಂದು ಮಧ್ಯಾಹ್ನ ಕಾವೇರಿ ನೀರಿನ ಪ್ರವಾಹದಿಂದ ಸಂತೃಸ್ತರಾಗಿರುವ ಹಾಸನ ರಾಮನಾಥಪುರ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ್ದ ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಗಂಜಿಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಜನರ ಯೋಗಕ್ಷೇಮ ವಿಚಾರಿಸಿದರು.

    ಈ ವೇಳೆ ಮಾತನಾಡಿ ಸಚಿವರು, ಒಟ್ಟು ನಷ್ಟದ ಕುರಿತು ಅಧಿಕಾರಿಗಳು ವರದಿ ನೀಡಬೇಕು. ಬಳಿಕ ಪರಿಹಾರ ಕಾರ್ಯದ ಬಗ್ಗೆ ಸ್ಪಷ್ಟವಾಗಿ ಹೇಳುತ್ತೇನೆ. ಪ್ರವಾಹದಿಂದ ಸಂತ್ರಸ್ತರಾಗಿರುವ ಜನರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈ ಕುರಿತು ಅಧಿಕಾರಿ ಮತ್ತು ಸ್ಥಳೀಯರನ್ನು ಕರೆದು ಮಾಹಿತಿ ಪಡೆದು ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದರು.

    ಇದೇ ವೇಳೆ ರಾಮನಾಥಪುರ ಕ್ಷೇತ್ರ ಪುಣ್ಯ ಕ್ಷೇತ್ರವಾಗಿದ್ದು ನದಿಗೆ ಶಾಶ್ವತ ತಡೆಗೋಡೆಯ ಕುರಿತು ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸುತ್ತೇನೆ. ಕ್ಷೇತ್ರದ ಅಭಿವೃದ್ದಿ ಬೇಕಾದ ಕ್ರಮಕೈಗೊಳ್ಳುತ್ತೇನೆ. ಇಲ್ಲಿಯ ದೇವಸ್ಥಾನವನ್ನು ಶೃಂಗೇರಿ ಗುರುಗಳ ಸುಪರ್ದಿಗೆ ನೀಡುವ ಕುರಿತು ಚಿಂತನೆ ನಡೆದಿದೆ. ಇನ್ನು ಪ್ರವಾಹದಿಂದ ಹಾನಿಯಾಗಿರುವ ರಸ್ತೆಗಳ ಮತ್ತು ಇತರೆ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೊಬೈಲ್‍ನಲ್ಲಿ ಟೈಂ ಚೆಕ್ ಮಾಡಿ, ವಾಸ್ತುಪ್ರಕಾರ ರೇವಣ್ಣ ಧ್ವಜಾರೋಹಣ!

    ಮೊಬೈಲ್‍ನಲ್ಲಿ ಟೈಂ ಚೆಕ್ ಮಾಡಿ, ವಾಸ್ತುಪ್ರಕಾರ ರೇವಣ್ಣ ಧ್ವಜಾರೋಹಣ!

    ಹಾಸನ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ರೇವಣ್ಣ ಎಂದಿನಂತೆ ತಮ್ಮ ವಾಸ್ತು ವಿಶೇಷತೆಯಿಂದ ಗಮನ ಸೆಳೆದಿದ್ದಾರೆ. ಖುದ್ದು ಎಸ್ಪಿಯವರ ಮೊಬೈಲ್‍ನಲ್ಲಿ ಟೈಂ ಚೆಕ್ ಮಾಡಿ, ಚಪ್ಪಲಿ ಬಿಟ್ಟು ಧ್ವಜಾರೋಹಣ ನಡೆಸಿದರು.

    ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ದಶಕದ ನಂತರ ಹಾಸನ ಜಿಲ್ಲೆಯಲ್ಲಿ ಧ್ಜಜಾರೋಹಣ ನೇರವೇರಿಸಿದರು. ಈ ಮೊದಲು 2007 ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಧ್ವಜಾರೋಹಣ ಮಾಡಿದ್ದರು. ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯ ನಿಗದಿಪಡಿಸಲಾಗಿತ್ತು.

    ಸಮಯಕ್ಕೆ ಮೊದಲೇ ಬಂದಿದ್ದ ರೇವಣ್ಣ ನಿರ್ದಿಷ್ಟ ಸಮಯಕ್ಕೆ ಕಾದು, ಒಂದು ಸೆಕೆಂಡ್ ಕೂಡ ಹೆಚ್ಚು ಕಡಿಮೆ ಆಗದಂತೆ ನಿಗಾವಹಿಸಿದ್ದರು. ಅಲ್ಲದೇ ಪಕ್ಕದಲ್ಲಿ ನಿಂತಿದ್ದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಬಳಿ ಸಮಯ ಸರಿಯಾಗಿದ್ದನ್ನು ಸ್ಪಷ್ಟಪಡಿಸಿಕೊಂಡು ಬಳಿಕ, ಚಪ್ಪಲಿ ಬಿಟ್ಟು ಧ್ವಜಾರೋಹಣ ಮಾಡಿದರು. ಸಾಮಾನ್ಯವಾಗಿ ಪಂಚೆ ಧರಿಸುವ ರೇವಣ್ಣನವರು ಇಂದು ಪ್ಯಾಂಟ್ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

    ಕಾರ್ಯಕ್ರಮದ ನಂತರ ಸುದ್ದಿಗೋಷ್ಠಿಯಲ್ಲಿ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂಬ ಬಿಜೆಪಿ ನಾಯಕ ಈಶ್ವರಪ್ಪ ಆರೋಪಕ್ಕೆ ತಿರುಗೇಟು ನೀಡಿ, ಈಶ್ವರಪ್ಪನವರು ಹೇಳಿದ್ದ ಅಧಿಕಾರಿಗಳನ್ನೂ ಸಹ ನಾನು ವರ್ಗ ಮಾಡಿಕೊಟ್ಟಿದ್ದೇನೆ. ಆ ಅಧಿಕಾರಿಗಳೇನಾದರೂ ನನಗೆ ಹಣ ಕೊಟ್ಟಿದ್ದಾರೆಯೇ ಎಂಬುದನ್ನು ಬಹಿರಂಗ ಪಡಿಸಲಿ. ಅವರೊಬ್ಬ ಪ್ರತಿಪಕ್ಷ ನಾಯಕರು, ಏನೇ ಮಾತನಾಡಿದರು ದಾಖಲೆ ಇಟ್ಟುಕೊಂಡು ಮಾತನಾಡಬೇಕು. ಇಲ್ಲವಾದರೆ ಅವರ ಹೇಳಿಕೆಗಳು ಪೊಳ್ಳಾಗಿ ಹೋಗುತ್ತದೆ ಎಂದು ಲೇವಡಿ ಮಾಡಿದರು.

    ಈ ವೇಳೆ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರುಗಳು ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್‍ನ ಒಂದು ನಿಯೋಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ದೂರು ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಪರಮೇಶ್ವರ್ ಅವರೇ ಈ ಬಗ್ಗೆ ಖುದ್ದು ಪರಿಶೀಲಿಸಲಿ. ನಾನು ಯಾವುದೇ ದುರುದ್ದೇಶದಿಂದ ಯಾರ ಮೇಲೆಯೂ ಕೇಸು ದಾಖಲಿಸಿಲ್ಲ. ಅಲ್ಲದೇ ಯಾರನ್ನೂ ಸಹ ಜೈಲಿಗೆ ಕಳಿಸಿಲ್ಲ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿಎಂಗೆ ಯಾರು ಶತ್ರುಗಳಿಲ್ಲ- ಎಚ್‍ಡಿಕೆ ಪರ ಜಮೀರ್ ಬ್ಯಾಟಿಂಗ್

    ಸಿಎಂಗೆ ಯಾರು ಶತ್ರುಗಳಿಲ್ಲ- ಎಚ್‍ಡಿಕೆ ಪರ ಜಮೀರ್ ಬ್ಯಾಟಿಂಗ್

    ದಾವಣಗೆರೆ: ಸಿಎಂ ಕುಮಾರಸ್ವಾಮಿ ಅವರು ಹೆಚ್ಚು ದೇವಾಲಯಕ್ಕೆ ಭೇಟಿ ನೀಡುತ್ತಿರುವುದು ಶತ್ರುಗಳಿಂದ ಅಲ್ಲ ಎಂದು ಆಹಾರ ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

    ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿರೋಧಿ ಪಕ್ಷದವರು ಸಿಎಂ ಏನು ಮಾಡಿದರು ಟೀಕೆ ಮಾಡುತ್ತಾರೆ. ಟೀಕೆ ಮಾಡುವುದು ಅವರ ಕೆಲಸವಾಗಿದೆ. ಆದರೆ ನಮ್ಮ ಸರ್ಕಾರ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ತನ್ನ ಕಾರ್ಯಗಳನ್ನು ಮುಂದುವರಿಸುತ್ತದೆ ಎಂದರು.

    ಕುಮಾರಸ್ವಾಮಿ ಅವರು ಸದ್ಯ ಉತ್ತರ ಕರ್ನಾಟಕಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿನ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಅವರಿಗೆ ಯಾವುದೇ ಶತ್ರುಗಳ ಸಮಸ್ಯೆ ಇಲ್ಲ. ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೆ ಜನರು ಟೀಕೆ ಮಾಡುವುದು ಸಾಮಾನ್ಯ. ಕುಮಾರಸ್ವಾಮಿ ಅವರು ಭತ್ತದ ನಾಟಿ ಮಾಡಿದರೂ ಟೀಕೆ ಮಾಡಿದ್ದಾರೆ. ಅದ್ದರಿಂದ ಈ ಕುರಿತು ಹೆಚ್ಚಿನ ಪ್ರಮುಖ್ಯತೆ ನೀಡುವುದು ಅಗತ್ಯವಿಲ್ಲ ಎಂದು ಹೇಳಿದರು.

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು. ಈ ವೇಳೆ ಗುಂಡ್ಯ ಮೂಲಕ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದ್ದರಿಂದ ಪುತ್ತೂರಿನ ಮಾರ್ಗವಾಗಿ ಬೆಳ್ಳಾರೆ ಮೂಲಕ ಸುತ್ತು ಬಳಸಿ ಕುಮಾರಸ್ವಾಮಿ ಅವರು ಸುಬ್ರಹ್ಮಣ್ಯಕ್ಕೆ ತೆರಳಿದ್ದರು. ಅಲ್ಲದೇ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೆಟ್ಟ ದೃಷ್ಟಿ ಮತ್ತು ದೋಷ ನಿವಾರಣೆಗಾಗಿ ನಾಗಪೂಜೆ ಪೂಜೆಯಲ್ಲಿ ಭಾಗಿಯಾಗಿದ್ದರು.

    ಸಿಎಂ ಸೋಮವಾರ ಹೊಳೆನರಸೀಪುರದ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಈ ವೇಳೆ ಕುಮಾರಸ್ವಾಮಿ ಅವರು ಕುಟುಂಬ ಸಮೇತ ಪೂಜೆ ಸಲ್ಲಿಸಿತ್ತು. ಅರ್ಚಕರು ಸಿಎಂ ಕುಮಾರಸ್ವಾಮಿ ದಂಪತಿಗೆ ಹೇಳಿದ್ದ ಪ್ರದಕ್ಷಿಣೆ ದಿಕ್ಕನ್ನು ಸಚಿವ ರೇವಣ್ಣ ವಾಸ್ತು ಪ್ರಕಾರ ಬದಲಾಗಬೇಕು ಎಂದು ಹೇಳಿದ್ದರು. ಬಳಿಕ ರೇವಣ್ಣ ಹೇಳಿದಂತೆಯೇ ಕುಮಾರಸ್ವಾಮಿ ದಂಪತಿ ಪ್ರದಕ್ಷಿಣೆ ಹಾಕಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೆಶಿಪ್ ಎತ್ತಂಗಡಿಗೆ ಉತ್ತರ ಕರ್ನಾಟಕದಲ್ಲಿ ಭಾರೀ ವಿರೋಧ- ಸೂಪರ್ ಸಿಎಂ ವಿರುದ್ಧ ಖಂಡನೆ

    ಕೆಶಿಪ್ ಎತ್ತಂಗಡಿಗೆ ಉತ್ತರ ಕರ್ನಾಟಕದಲ್ಲಿ ಭಾರೀ ವಿರೋಧ- ಸೂಪರ್ ಸಿಎಂ ವಿರುದ್ಧ ಖಂಡನೆ

    ಬೆಳಗಾವಿ: ಜಿಲ್ಲೆಯಿಂದ ಕೆಶಿಪ್ ಕಚೇರಿಯನ್ನ ಹಾಸನಕ್ಕೆ ಸ್ಥಳಾಂತರ ಮಾಡಿರುವುದಕ್ಕೆ ಉತ್ತರ ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕರ್ನಾಟಕ ,ರಾಜ್ಯ ಹೆದ್ದಾರಿ ಯೋಜನೆಯನ್ನ ಬೆಳಗಾವಿಯಂದ ಸ್ಥಳಾಂತರ ಮಾಡಿರುವುದಕ್ಕೆ ಸೂಪರ್ ಸಿಎಂ ರೇವಣ್ಣ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ.

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಿಂದ ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದವರೆಗೂ 107 ಕಿ.ಮೀ ಅಂತರದ ರಸ್ತೆಯನ್ನ ವಿಶ್ವಬ್ಯಾಂಕ್ ಸಹಯೋಗದಲ್ಲಿ 317 ಕೋಟಿ ರೂ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಅಧೀನದ ಕೆಶಿಪ್ ವತಿಯಿಂದ ಕಾಮಗಾರಿಯನ್ನ ಕೈಗೆತ್ತಿಕೊಳ್ಳಲಾಗಿತ್ತು. 2014 ಡಿಸೆಂಬರ್ ನಲ್ಲಿ ಆರಂಭವಾದ ಕಾಮಗಾರಿ 2016 ಡಿಸೆಂಬರ್ ನಲ್ಲಿ ಪೂರ್ಣಗೊಳಿಸಬೇಕಿತ್ತು. ಆದರೆ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದರೂ ತಡೆಗೋಡೆ, ಬೀದಿ ದೀಪ ಅಳವಡಿಕೆ ಸೇರಿದಂತೆ ಸಾಕಷ್ಟು ಪ್ರಮಾಣದ ಕಾಮಗಾರಿಗಳು ಇನ್ನೂ ಪೂರ್ಣಗೊಳ್ಳಬೇಕಿದೆ. ಕಾಮಗಾರಿಗಳು ಇನ್ನೂ ನಡೆಯುತ್ತಿದ್ದರೂ ಕೆಶಿಪ್ ಕಚೇರಿಯನ್ನ ಬೆಳಗಾವಿಯಿಂದ ಹಾಸನಕ್ಕೆ ಸ್ಥಳಾಂತರಿಸಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

    ಬೆಳಗಾವಿಯಲ್ಲಿರುವ ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ(ಕೆಶಿಪ್)ಯ ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರ ಮಾಡಲು ರಾಜ್ಯ ಸರ್ಕಾರ ಜುಲೈ 27, 2018ರಂದು ಆದೇಶ ಹೊರಡಿಸಿತ್ತು. ಬೆಳಗಾವಿ ನಗರದಲ್ಲಿರುವ ಕೆಶಿಪ್ ವಿಭಾಗದ ಮಟ್ಟದ ಕಚೇರಿಯನ್ನು ಹಾಸನಕ್ಕೆ ಹಾಗೂ ಉಪ ವಿಭಾಗೀಯ ಕಚೇರಿಯನ್ನು ಬೆಳಗಾವಿಯಿಂದ ಮಡಿಕೇರಿಗೆ ಸ್ಥಳಾಂತರಕ್ಕೆ ಸೂಚಿಸಲಾಗಿತ್ತು. ಸಕಲೇಶಪುರದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ ಕಚೇರಿಯನ್ನು ಹೊಳೆನರಸೀಪುರಕ್ಕೆ ಶಿಫ್ಟ್ ಮಾಡಲು ಹಾಗೂ ಬಸವನಬಾಗೇವಾಡಿಯ ಕೆಶಿಪ್ ಉಪವಿಭಾಗ ಕಚೇರಿಯನ್ನು ಬೇಲೂರಿಗೆ ಸ್ಥಳಾಂತರಿಸಲು ಆದೇಶಿಸಲಾಗಿತ್ತು. ಅಲ್ಲದೆ ಶಿವಮೊಗ್ಗ ಲೋಕೋಪಯೋಗಿ ವಿಶೇಷ ಉಪ ವಿಭಾಗೀಯ ಕಚೇರಿಯನ್ನು ಅರಸೀಕೆರೆಗೆ ಶಿಫ್ಟ್ ಮಾಡಲು ಸೂಚಿಸಲಾಗಿತ್ತು.

    ಸಮ್ಮಿಶ್ರ ಸರ್ಕಾರದ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಪ್ರಭಾವದಿಂದಲೇ ಹುದ್ದೆಗಳ ಸಮೇತವಾಗಿ ಈ ಎಲ್ಲಾ ಕಚೇರಿಗಳ ಸ್ಥಳಾಂತರಕ್ಕೆ ಆದೇಶ ಹೊರ ಬಿದ್ದಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇದು ಉತ್ತರ ಕರ್ನಾಟಕದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ವರ್ಗಾವಣೆ ವಿಚಾರದಲ್ಲಿ ಅವ್ಯವಹಾರ ಆಗಿದ್ರೆ ಪರಿಶೀಲಿಸಲಿ: ಸಚಿವ ಎಚ್‍ಡಿ ರೇವಣ್ಣ

    ವರ್ಗಾವಣೆ ವಿಚಾರದಲ್ಲಿ ಅವ್ಯವಹಾರ ಆಗಿದ್ರೆ ಪರಿಶೀಲಿಸಲಿ: ಸಚಿವ ಎಚ್‍ಡಿ ರೇವಣ್ಣ

    ಹಾಸನ: ವರ್ಗಾವಣೆ ವಿಚಾರಗಳಲ್ಲಿ ಅವ್ಯವಹಾರ ಆಗಿದ್ದರೆ ಖುದ್ದು ಪರಿಶೀಲಿಸಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಯಡಿಯೂರಪ್ಪನವರಿಗೆ ತಿರುಗೇಟು ನೀಡಿದ್ದಾರೆ.

    ಬಿಎಸ್‍ವೈ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವರ್ಗಾವಣೆ ವಿಚಾರದಲ್ಲಿ ಅವ್ಯವಹಾರವಾಗಿದ್ದರೆ ಖುದ್ದು ಪರಿಶೀಲನೆ ನಡೆಸಲಿ, ಯಡಿಯೂರಪ್ಪನವರಿಗೆ ಬೇಕಾದರೆ ದಾಖಲೆಗಳನ್ನು ತೋರಿಸಲು ಸಿದ್ಧ. ನಾನು ಯಾವ ಇಲಾಖೆಗಳ ವರ್ಗಾವಣೆಯ ವಿಷಯದಲ್ಲಿ ಕೈ ಹಾಕಿಲ್ಲ. ನನ್ನ ಇಲಾಖೆ ಹೊರತುಪಡಿಸಿ ಬೇರೆ ಇಲಾಖೆಗಳ ವಿಚಾರಕ್ಕೆ ಕೈ ಹಾಕಿಲ್ಲವೆಂದು ತಿರುಗೇಟು ನೀಡಿದ್ದಾರೆ.

    ನನ್ನ ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗಾಗಿ ನಾನು ಕಳೆದ 6 ತಿಂಗಳಿನಿಂದಲೂ ಪ್ರಯತ್ನಿಸುತ್ತಿದ್ದೇನೆ. ನನಗೆ ಬೇರೆ ಇಲಾಖೆಯಿಂದ ಯಾವುದೇ ಕೆಲಸವನ್ನು ಮಾಡಿಸಿಕೊಳ್ಳಲು ಅಗತ್ಯವಿಲ್ಲ. ಈ ಕುರಿತು ಉಪಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಲಿ ಎಂದ ಅವರು ಇದೇ ವೇಳೆ, ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆಯ ವಿಚಾರದಲ್ಲಿ ದೇವೇಗೌಡರ ತೀರ್ಮಾನವೇ ಅಂತಿಮ ಅಂದ್ರು.

    ಬಿಎಸ್‍ವೈ ಹೇಳಿದ್ದೇನು?
    ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣನವರು, ತಮ್ಮ ಇಲಾಖೆಯಲ್ಲದೇ ಇತರೆ ಇಲಾಖೆಗಳಲ್ಲೂ ಅಧಿಕಾರ ಚಲಾಯಿಸುತ್ತಿದ್ದಾರೆ. ವರ್ಗಾವಣೆಯಲ್ಲಿ ಅಪಾರ ಪ್ರಮಾಣದ ಅವ್ಯವಹಾರ ನಡೆದಿದೆ. ಅಲ್ಲದೇ ವರ್ಗಾವಣೆಗೆ ಸಹ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಪ್ರಜ್ವಲ್ ಸ್ಪರ್ಧೆ ಕುರಿತು ಹಿರಿಯರು ತೀರ್ಮಾನಿಸ್ತಾರೆ: ಎಚ್.ಡಿ. ರೇವಣ್ಣ

    ಪ್ರಜ್ವಲ್ ಸ್ಪರ್ಧೆ ಕುರಿತು ಹಿರಿಯರು ತೀರ್ಮಾನಿಸ್ತಾರೆ: ಎಚ್.ಡಿ. ರೇವಣ್ಣ

    ಹಾಸನ: ಪ್ರಜ್ವಲ್ ರೇವಣ್ಣ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಹಿರಿಯರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

    ಹೊಳೆನರಸೀಪುರದ ಕಾರ್ಯಕ್ರಮದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಜ್ವಲ್‍ಗೆ ಇನ್ನೂ ವಯಸ್ಸಿದೆ. ರಾಜಕೀಯದಲ್ಲಿ ಪಕ್ಷ ಈಗಾಗಲೇ ಅವರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನೀಡಿದ್ದು, ಬಡವರಿಗೆ ಸಂಬಂಧಿಸಿದ ಕೆಲಸವನ್ನು ಮಾಡಲಿ, ಅವರ ಸ್ಪರ್ಧೆ ಕುರಿತು ಹಿರಿಯರು ತೀರ್ಮಾನಿಸುತ್ತಾರೆ. ನಾನು ಶಾಸಕನಾಗಿದ್ದು 32ನೇ ವಯಸ್ಸಿನಲ್ಲಿ. ಜನರ ಆಶೀರ್ವಾದ, ಸಾರ್ವಜನಿಕರ ಆಶೀರ್ವಾದ ನನಗಿದೆ. ಇಲ್ಲಿಯವರೆಗೂ ರಾಜಕೀಯದಲ್ಲಿಯೇ ನಾನೂ ಇಲ್ಲವೇ ಎಂದು ಪ್ರಶ್ನಿಸಿದರು.

    ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ, ಈ ಕುರಿತು ಮುಖ್ಯಮಂತ್ರಿ ಕುಮಾರಣ್ಣ ಮತ್ತು ದೇವೇಗೌಡರು ತೀರ್ಮಾನವೇ ಅಂತಿಮ ಎಂದು ಉತ್ತರ ನೀಡಿ ಜಾರಿಕೊಂಡರು. ಹೆಚ್. ವಿಶ್ವನಾಥ್ ಜೆಡಿಎಸ್ ಪಕ್ಷದ ರಾಜ್ಯಧ್ಯಕ್ಷರಾದರೆ ಸಂತೋಷದ ವಿಚಾರ ಎಂದು ರೇವಣ್ಣ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಅಣ್ಣ ಬಂಡೀಪುರದಲ್ಲಿ ಫ್ಲೈಓವರ್ ಬಗ್ಗೆ ಮಾತನಾಡಿದ್ರೆ, ತಮ್ಮ ಇಲ್ಲ ಅಂದ್ರು!

    ಅಣ್ಣ ಬಂಡೀಪುರದಲ್ಲಿ ಫ್ಲೈಓವರ್ ಬಗ್ಗೆ ಮಾತನಾಡಿದ್ರೆ, ತಮ್ಮ ಇಲ್ಲ ಅಂದ್ರು!

    ಬೆಂಗಳೂರು: ಬಂಡೀಪುರದಲ್ಲಿ ಫ್ಲೈ ಓವರ್ ರಸ್ತೆ ನಿರ್ಮಾಣದ ಕುರಿತು ಚಿಂತನೆ ನಡೆದಿದೆ ಎಂದು ಸಚಿವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅದು ಸುಳ್ಳು, ಸುಮ್ಮನೆ ಈ ಕುರಿತು ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.

    ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಬಂಡೀಪುರದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಆದರೂ ಏಕೆ ಫ್ಲೈ ಓವರ್ ರಸ್ತೆ ನಿರ್ಮಾಣದ ಕುರಿತು ಸುಮ್ಮನೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ರಾತ್ರಿ ವೇಳೆ ರಸ್ತೆ ಸಂಚಾರ ಪುನರಾರಂಭಕ್ಕೆ ಅವಕಾಶ ನೀಡುವುದು ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಫ್ಲೈ ಓವರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ ಎನ್ನುವುದು ಸುಳ್ಳು ಮಾಹಿತಿ ಎಂದು ಹೇಳಿದರು.

    ರೇವಣ್ಣ ಹೇಳಿದ್ದು ಏನು?
    ಬಂಡೀಪುರ ರಕ್ಷಿತಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಗುರುವಾರ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದ ಸಚಿವ ರೇವಣ್ಣ, ಈ ಕುರಿತು ಕೇರಳ ಸರ್ಕಾರ ಸುಪ್ರೀಂಗೆ ಹೋಗಿದೆ. ಅದನ್ನು ಗಮನದಲ್ಲಿಟ್ಟು ಇದರ ಕುರಿತು ಸೂಕ್ತವಾಗಿ ಕ್ರಮ ಕೈಗೊಳ್ಳುತ್ತೇವೆ. ಬಂಡೀಪುರ ಅರಣ್ಯದಲ್ಲಿಯೂ ಕೆಲವೆಡೆಗಳಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಕಾಡು ಪ್ರಾಣಿಗಳ ಮತ್ತು ಪರಿಸರಕ್ಕೆ ಹಾನಿಯಾಗದಂತೆ ಕಾಮಗಾರಿ ಮಾಡುವ ಕುರಿತು ಚರ್ಚಿಸಲಾಗುವುದು. ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ಬಗ್ಗೆ ಇನ್ನು ನಿರ್ಧಾರವಾಗಿಲ್ಲ. ಮುಖ್ಯ ಕಾರ್ಯದರ್ಶಿ ಜೊತೆ ಈ ಕುರಿತು ಸಭೆಯ ನಂತರ ಓಡಾಟದ ಬಗ್ಗೆ ತೀರ್ಮಾನ ಮಾಡಲಾಗುವುದು ಅಂತ ಅವರು ತಿಳಿಸಿದ್ದರು. ಇದನ್ನು ಓದಿ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುಮತಿ- ಕೇರಳದ ಲಾಬಿಗೆ ಮಣಿದ್ರಾ ಸಿಎಂ? ಏನಿದು ವಿವಾದ?

    ಬಂಡೀಪುರದಲ್ಲಿ ರಾತ್ರಿ 9 ಗಂಟೆಗೆ 6 ವಾಹನ ಸಂಚಾರ ನಿಷೇಧಿಸಲಾಗಿದ್ದು, ಜುಲೈ 18ರಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ನಡೆದ ಸಭೆಯ ವೇಳೆ ಸಿಎಂ ಹಾಗೂ ಸಚಿವ ರೇವಣ್ಣ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಮತ್ತು ಸಾರಿಗೆ ಕಾರ್ಯದರ್ಶಿ ವೈ.ಎಸ್ ಮಲ್ಲಿಕ್ ಜು.21 ರಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರಕರಣ ಈಗ ಸುಪ್ರೀಂಕೋರ್ಟ್‍ನಲ್ಲಿದ್ದರೂ ಅನುಮತಿ ನೀಡಿರುವುದು ಎಷ್ಟು ಸರಿ ಎಂದು ವನ್ಯಜೀವಿ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

  • ಪ್ರತಿದಿನ ನಮ್ಮ ಹೆಸರು ಹಾಕ್ತೀರಲ್ಲ ನಿಮಗೆ ಧನ್ಯವಾದ: ಮಾಧ್ಯಮಗಳಿಗೆ ಎಚ್ ಡಿ ರೇವಣ್ಣ

    ಪ್ರತಿದಿನ ನಮ್ಮ ಹೆಸರು ಹಾಕ್ತೀರಲ್ಲ ನಿಮಗೆ ಧನ್ಯವಾದ: ಮಾಧ್ಯಮಗಳಿಗೆ ಎಚ್ ಡಿ ರೇವಣ್ಣ

    ಹಾಸನ: ಒಳ್ಳೆಯದ್ದೋ ಕೆಟ್ಟದ್ದೊ ಪ್ರತಿ ದಿನ ನಮ್ಮ ಹೆಸರು ಹಾಕ್ತೀರಲ್ಲ. ನಿಮಗೆ ಧನ್ಯವಾದಗಳೆಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

    ಶ್ರವಣಬೆಳಗೊಳದಲ್ಲಿ ಏರ್ಪಟ್ಟಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಳ್ಳೆಯದ್ದೋ ಕೆಟ್ಟದ್ದೊ ದಿನಾ ಮಾಧ್ಯಮದಲ್ಲಿ ನಮ್ಮ ಹೆಸರು ಹಾಕ್ತೀರಲ್ಲಾ ನಿಮಗೆಲ್ಲಾ ಧನ್ಯವಾದಗಳು. ಇದರಿಂದಾಗಿ ಜನರು ನಿತ್ಯ ನಮ್ಮ ಬಗ್ಗೆ ಮಾತನಾಡುವಂತೆ ಮಾಡುತ್ತಿದ್ದೀರಿ ಎಂದು ಮಾಧ್ಯಮಗಳಿಗೆ ಕಿಚಾಯಿಸಿದರು.

    ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಆರೋಪಗಳಿಗೂ ಕಾಲ ಬಂದಾಗ ಉತ್ತರ ಕೊಡುತ್ತೇನೆ. ನಾನು ವಾಸ್ತು ಪ್ರಕಾರ ಮನೆ ಮಾಡಿಸಿಕೊಂಡ ವಿಚಾರವನ್ನು ತೋರಿಸುತ್ತೀರಿ. ಕೆಲವು ಕೆಲಸಗಳು ಆಗಬೇಕಿತ್ತು ಅದನ್ನು ನಾವು ಮಾಡಿಸಿಕೊಂಡ್ರೆ ತಪ್ಪಾ? ಹಾಗೆ ನಾವು ರಾಜ್ಯದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಸಹ ತೋರಿಸಿ ಎಂದು ಮಾಧ್ಯಮಗಳ ವಿರುದ್ಧ ಹರಿಹಾಯ್ದರು.

    ಪ್ರತ್ಯೇಕ ರಾಜ್ಯ ಕುರಿತು ಪ್ರತಿಕ್ರಿಯಿಸಿ, ನಮಗೆ ಅಖಂಡ ಕರ್ನಾಟಕ ಒಂದಾಗಿ ಇರಬೇಕು. ಇದರ ಕುರಿತು ನೇರ ಚರ್ಚೆಗೆ ನನ್ನ ಮುಂದೆ ಬನ್ನಿ ಎಂದು ಬಿಜೆಪಿ ನಾಯಕರುಗಳಿಗೆ ಸವಾಲು ಹಾಕಿದ ಅವರು ಯಡಿಯೂರಪ್ಪ ಉತ್ತರ ಕರ್ನಾಟಕಕ್ಕೆ ಏನು ಮಾಡಿದ್ದಾರೆ? ಅವರು ಅಧಿಕಾರದಲ್ಲಿದ್ದಾಗ ನಾವೇನು ಹಿಡ್ಕೊಂಡಿದ್ದೀವಾ ಎಂದು ಪ್ರಶ್ನಿಸಿದರು.

    ರಾಜ್ಯದಲ್ಲಿ ನೀರಾವರಿ ಕಾಮಗಾರಿಗಳಿಗೆ ದೇವೇಗೌಡರ ಕೊಡುಗೆ ಸಾಕಷ್ಟಿದೆ. ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಏನೇನು ಕೆಲಸಗಳಾಗಿವೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ದಿನ ಬೆಳಿಗ್ಗೆ ಮಾಧ್ಯಮಗಳನ್ನು ಇಟ್ಟುಕೊಂಡು ಎಷ್ಟು ದಿನ ಈ ರೀತಿ ಮಾಡುತ್ತೀರಿ ಎಂದು ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದರು.

    ಉಮೇಶ್ ಕತ್ತಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ತಮ್ಮ ತಮ್ಮ ಅಧ್ಯಕ್ಷರಾಗಿದ್ದಾಗ ಬೆಳಗಾವಿಯ ಡಿ.ಸಿ.ಸಿ. ಬ್ಯಾಂಕಿನಲ್ಲಿ ಎಷ್ಟು ಸಾಲಮನ್ನಾ ಆಗಿದೆ. ಆ ಸಾಲ ಯಾರಿಗೆ ಕೊಟ್ಟಿದ್ದರು. ಅಲ್ಲದೇ ರಾಜಕಾರಣ ಯಾವತ್ತು ಸುಳ್ಳಿನಿಂದ ಆಗಲ್ಲ. ಓಟಿಗಾಗಿ ಬಡವರನ್ನು ಯಾಕೆ ಹಾಳು ಮಾಡುತ್ತೀರಿ. ನಿಮಗೆ ನಾಚಿಕೆಯೇ ಇಲ್ಲ. ಮಹದಾಯಿ ವಿಚಾರವನ್ನು ಇಷ್ಟು ದಿನಗಳಿಂದ ಯಾಕೆ ಪರಿಹರಿಸಿಲ್ಲ ಎಂದು ಹರಿಹಾಯ್ದರು.

    ರಾಜ್ಯದ ಬಹುತೇಕ ತಾಲೂಕುಗಳಲ್ಲಿ ಪ್ರಥಮ ದರ್ಜೆ ಕಾಲೇಜುಗಳಿರಲಿಲ್ಲ. ಅದನ್ನ ಮಾಡೋದಕ್ಕೆ ಕುಮಾರಸ್ವಾಮಿಯವರೇ ಬರಬೇಕಿತ್ತಾ? ಇದರಲ್ಲಿ ಯಾರ ಮಕ್ಕಳು ಓದುತ್ತಾರೆ? ಇದರಲ್ಲಿ ಓದೋದು ಬಡವರ ಮಕ್ಕಳಲ್ಲವೇ? ಕುಮಾರಣ್ಣ 24 ಗಂಟೆಯೂ ಕೆಲಸ ಮಾಡುತ್ತಿದ್ದಾರೆ. ಯಾರ್ರಿ ದಿನದ 20 ಗಂಟೆ ಕೆಲ್ಸ ಮಾಡೊದು ಈ ದೇಶದಲ್ಲಿ. ಕುಮಾರಸ್ವಾಮಿ 49 ಸಾವಿರಕೋಟಿ ಸಾಲಾಮನ್ನಾ ಮಾಡಿದ್ದಾರೆ. ಕೇಂದ್ರ ಸರ್ಕಾರವೂ 50 ಸಾವಿರಕೋಟಿ ಸಾಲಮನ್ನಾ ಮಾಡಿಸಲಿ ಎಂದು ಬಿಜೆಪಿ ಹಾಗು ಯಡಿಯೂರಪ್ಪನವರಿಗೆ ಸವಾಲು ಹಾಕಿದರು.