Tag: HD Revanna

  • ದೋಸ್ತಿ ಸರ್ಕಾರದಲ್ಲಿ ಮೇಲ್ನೋಟಕ್ಕೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು!

    ದೋಸ್ತಿ ಸರ್ಕಾರದಲ್ಲಿ ಮೇಲ್ನೋಟಕ್ಕೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು!

    -ನಮ್ಮ ಮಾತಿಗೆ ಬೆಲೆ ಇಲ್ವಾ? ಕಾಂಗ್ರೆಸ್ ಶಾಸಕರ ಅಸಮಾಧಾನ?

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಚಿವರು ಮತ್ತು ನಾಯಕರು ನಮ್ಮಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಮೇಲ್ನೋಟಕ್ಕೆ ಹೇಳುತ್ತಿದ್ದರೂ, ಶಾಸಕರು ಪಕ್ಷದ ಮುಖಂಡರ ಮುಂದೆ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಹೆಚ್.ಡಿ.ರೇವಣ್ಣ ಅವರ ರಾಜಕೀಯ ಲೆಕ್ಕಾಚಾರದ ವಿರುದ್ಧ ಕಾಂಗ್ರೆಸ್ ಶಾಸಕರು ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಎದುರು ದೂರಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭಿಸಿದೆ.

    ಯಾಕೆ ಈ ಮುನಿಸು?:
    ಐಎಎಸ್ ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ಕಾಂಗ್ರೆಸ್ ನ ಸಚಿವರು, ಶಾಸಕರು ಹಾಗೂ ಸಂಸದರು ಸಿದ್ದರಾಮಯ್ಯ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರಂತೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಾಲಯ್ಯರನ್ನ ವರ್ಗಾಯಿಸಿ ಅವರ ಸ್ಥಾನಕ್ಕೆ ಸಿಎಂ ಕುಮಾರಸ್ವಾಮಿ ಅವರ ಆಪ್ತ ಕರಿಗೌಡರನ್ನ ನೇಮಿಸಲಾಗಿದೆ. ಸಿಎಂ ತಮ್ಮ ಆಪ್ತ ಕರಿಗೌಡರಿಗೆ ಅವಕಾಶ ಕಲ್ಪಿಸಲು ಪಾಲಯ್ಯರನ್ನ ವರ್ಗಾವಣೆ ಮಾಡಲಾಗಿದೆ ಎಂದು ಸಂಸದ ವೀರಪ್ಪ ಮೊಯ್ಲಿ ಹಾಗೂ ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್ ಆಕ್ರೋಶ ಹೊರಹಾಕಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಇನ್ನೊಂದೆಡೆ ಕೆಎಎಸ್ ನಿಂದ ಐಎಎಸ್ ಗೆ ಇತ್ತೀಚೆಗಷ್ಟೆ ಪದೋನ್ನತಿ ಹೊಂದಿದ ಕರಿ ಗೌಡರನ್ನು ಅರ್ಹತೆ ಮೀರಿ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ನೇಮಿಸಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ. ಇತ್ತ ಕಾಂಗ್ರೆಸ್ ಸಚಿವರೊಬ್ಬರು ತಮ್ಮ ಇಲಾಖೆಗೆ ತಾವು ಹೇಳಿದ ಅಧಿಕಾರಿಯನ್ನು ನೇಮಿಸಿಲ್ಲ ಅಂತಾ ಸಿಟ್ಟು ಮಾಡಿಕೊಂಡಿದ್ದಾರಂತೆ. ಕೊಳಚೆ ನಿರ್ಮೂಲನಾ ಮಂಡಳಿ ಆಯುಕ್ತರನ್ನಾಗಿ ಸತೀಶ್ ಅವರನ್ನು ನೇಮಕ ಮಾಡಿದ್ದರಿಂದ ತಾವು ಹೇಳಿದವರನ್ನು ನೇಮಿಸಿಲ್ಲ ಎಂದು ಸಚಿವ ಯು.ಟಿ.ಖಾದರ್ ಕೂಡ ಅಸಮಧಾನ ಹೊರ ಹಾಕಿದ್ದಾರೆ ಎನ್ನಲಾಗುತ್ತಿದೆ.

    ಅಧಿಕಾರಿಗಳ ವರ್ಗಾವಣೆಯ ವಿಷಯದಲ್ಲಿ ಕಾಂಗ್ರೆಸ್ ಶಾಸಕರು ಮತ್ತು ಸಚಿವರ ಸಲಹೆ ಪಡೆಯದೇ ನಿರ್ಣಯ ತೆಗೆದುಕೊಳ್ಳಲಾಗುತ್ತಿದೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ. ಇದೇ ವಿಷಯ ದೋಸ್ತಿ ಸರ್ಕಾರದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ದೋಸ್ತಿ ಕುಸ್ತಿಗೆ ವೇದಿಕೆ ಸಿದ್ಧವಾಗುತ್ತಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

  • ಸೂಪರ್ ಸಿಎಂ ಹೊಡೆತಕ್ಕೆ ಡಿಸಿಎಂ ಶಾಕ್

    ಸೂಪರ್ ಸಿಎಂ ಹೊಡೆತಕ್ಕೆ ಡಿಸಿಎಂ ಶಾಕ್

    ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸೂಪರ್ ಸಿಎಂ ಅಂತಾ ಕರೆಸಿಕೊಳ್ಳವ ಎಚ್.ಡಿ.ರೇವಣ್ಣರ ರಾಜಕೀಯ ಲೆಕ್ಕಾಚಾರಕ್ಕೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರೇ ಶಾಕ್‍ಗೆ ಒಳಗಾಗಿದ್ದಾರಂತೆ. ಪರಮೇಶ್ವರ್ ಖಾತೆಯ ದೊಡ್ಡ ಯೋಜನೆಯೊಂದನ್ನು ಹೆಚ್.ಡಿ.ರೇವಣ್ಣ ಹೈಜಾಕ್ ಮಾಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

    ಬೆಂಗಳೂರು ಎಲಿವೇಟೆಡ್ ರಿಂಗ್ ರೋಡ್ ಎಂಬ ಮಹತ್ವದ ಯೋಜನೆಗೆ ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ 16 ಸಾವಿರ ಕೋಟಿ ಮೀಸಲಿಟ್ಟಿದ್ದರು. ಈ ಮಹತ್ವದ ಯೋಜನೆ ಡಿಸಿಎಂ ಪರಮೇಶ್ವರ್ ಹೊಂದಿರುವ ಬೆಂಗಳೂರು ನಗರಾಭಿವೃದ್ದಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯರೂಪಕ್ಕೆ ಬರಬೇಕಿದೆ. ಎಚ್.ಡಿ.ರೇವಣ್ಣ ಅವರು ತಮ್ಮ ಪ್ರಭಾವ ಬಳಸಿ ಬೆಂಗಳೂರು ನಗರಾಭಿವೃದ್ದಿ ಇಲಾಖೆ ವ್ಯಾಪ್ತಿಯ ಎಲಿವೇಟೆಡ್ ರಿಂಗ್ ರೋಡ್ ಲೋಕೋಪಯೋಗಿ ಇಲಾಖೆ ಅಧೀನಕ್ಕೆ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

    ಈ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ, ಪರಮೇಶ್ವರ್ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ನಡುವೆ ಮಾತಿನ ಚಕಮಕಿ ನಡೆದಿದೆ. ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ರೇವಣ್ಣರ ನಡೆಗೆ ಸಿಎಂ ಸಮ್ಮುಖದಲ್ಲೆ ಪರಮೇಶ್ವರ್ ಅಸಮಾಧಾನ ಹೊರಹಾಕಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಮೂಲಗಳಿಂದ ತಿಳಿದುಬಂದಿದೆ.

    ರೇವಣ್ಣರ ವಿರುದ್ಧ ಪರಮೇಶ್ವರ್ ಅಸಮಾಧಾನ ಹೊರ ಹಾಕಿದರೂ ಸಿಎಂ ಮಾತ್ರ ಸೈಲಂಟ್ ಆಗಿದ್ದಾರೆ ಎನ್ನಲಾಗುತ್ತಿದೆ.

  • ಡಿಸಿಗಳ ಸಭೆಯಲ್ಲೇ ರೇವಣ್ಣ, ಕೃಷ್ಣಭೈರೇಗೌಡ ನಡುವೆ ಮಾತಿನ ಜಟಾಪಟಿ

    ಡಿಸಿಗಳ ಸಭೆಯಲ್ಲೇ ರೇವಣ್ಣ, ಕೃಷ್ಣಭೈರೇಗೌಡ ನಡುವೆ ಮಾತಿನ ಜಟಾಪಟಿ

    ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವ ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಹಾಗೂ ಗ್ರಾಮೀಣಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ನಡುವೆ ಮಾತಿನ ಜಟಾಪಟಿ ನಡೆದಿದೆ.

    ನೀರಿಗಾಗಿ ತಮಿಳುನಾಡು- ಕರ್ನಾಟಕ ಮಾದರಿಯಲ್ಲೇ ಸಚಿವರ ನಡುವೆ ಮಾತಿನ ಜಟಾಪಟಿ ನಡೆದ ಪ್ರಸಂಗ ಜಿಲ್ಲಾಧಿಕಾರಿಗಳ ಸಭೆಯಲ್ಲಿ ನಡೆಯಿತು. ಸಭೆಯ ವೇಳೆ ಹಾಸನದಿಂದ ಬಯಲುಸೀಮೆಗೆ ನೀರು ಹರಿಸಿದ್ದನ್ನು ಪ್ರಸ್ತಾಪಿಸಿದ ಸಚಿವ ರೇವಣ್ಣ, ಅಕ್ಕಪಕ್ಕದ ಜಿಲ್ಲೆಗೆ ನೀರು ಕೊಟ್ಟು ನಾವು ಭಿಕ್ಷುಕರಾಗಿದ್ದೇವೆ ಎಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಕೃಷ್ಣಭೈರೇಗೌಡ, ಬೇರೆ ಜಿಲ್ಲೆಗೆ ನೀರು ಕೊಡುವವರು ನೀವು. ಅದು ಹೇಗೆ ಭಿಕ್ಷುಕರಾಗುತ್ತಿರಿ ಎಂದು ಪ್ರಶ್ನಿಸಿದ್ದರು.

    ಸಚಿವ ಕೃಷ್ಣಭೈರೇಗೌಡ ಅವರ ಮಾತಿಗೆ ತಿರುಗೇಟು ಕೊಟ್ಟ ರೇವಣ್ಣ, ನಮ್ಮಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಆ ಕಾರಣಕ್ಕಾಗಿ ಹೆಚ್ಚಿನ ಹಣ ನೀಡಿ ಎಂದು ಭಿಕ್ಷೆ ಬೇಡುತ್ತಿದ್ದೆವೆ ಎಂದು ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡು.

    ಸಿಎಂ ಗರಂ: ದೋಸ್ತಿ ಸರ್ಕಾರದ ಪ್ರತಿಯೊಂದು ವಿಚಾರದಲ್ಲಿ ಮೂಗು ತೂರಿಸ್ತಾರೆ ಎಂಬ ಟೀಕೆಗಳಿಗೆ ಸಚಿವ ರೇವಣ್ಣ ತಲೆ ಕೆಡಿಸಿಕೊಂಡಂತೆ ಕಾಣಿಸಲಿಲ್ಲ. ಇಂದಿನ ಡಿಸಿಗಳ ಸಭೆಯಲ್ಲಿಯೂ ಸಚಿವ ರೇವಣ್ಣ ಪ್ರತಿಯೊಂದು ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುತ್ತಿದ್ದರು. ರೇವಣ್ಣ ಅವರಿಗೆ ಸಚಿವ ಜಿಟಿ ದೇವೇಗೌಡ ಬೇರೆ ಸಾಥ್ ನೀಡಿದ್ದರು. ಇದರಿಂದ ಸ್ವಲ್ಪ ಗರಂ ಆದ ಸಿಎಂ ಕುಮಾರಸ್ವಾಮಿ, ಬರೀ ಸಚಿವರು, ಪ್ರಿನ್ಸಿಪಲ್ ಸೆಕ್ರೆಟರಿಗಳೇ ಮಾತಾಡುತ್ತಿದ್ದರೆ ಹೇಗೆ. ನಾವು ನಾವೇ ಮಾತಾಡಿ ಮುಗಿಸುವುದಾದರೆ ಜಿಲ್ಲಾಧಿಕಾರಿಗಳನ್ನು ಕರೆಸಿದ್ದು ಏಕೆ ಎಂದು ಸಚಿವರನ್ನು ಪ್ರಶ್ನೆ ಮಾಡಿದರು.

  • ಬಿಎಸ್‍ವೈ ಮೇಲೆ ನನಗೆ ಅನುಕಂಪ ಇದೆ, ಅವರಿಂದ ಸರಕಾರ ರಚಿಸಲು ಸಾಧ್ಯವಾಗಲಿಲ್ಲ: ರೇವಣ್ಣ

    ಬಿಎಸ್‍ವೈ ಮೇಲೆ ನನಗೆ ಅನುಕಂಪ ಇದೆ, ಅವರಿಂದ ಸರಕಾರ ರಚಿಸಲು ಸಾಧ್ಯವಾಗಲಿಲ್ಲ: ರೇವಣ್ಣ

    ಬೆಂಗಳೂರು: ಉತ್ತರ ಕರ್ನಾಟಕ ಕಡೆಗಣಿಸಲಾಗಿದೆ ಎನ್ನುವ ಯಡಿಯೂರಪ್ಪನವರ ಮೇಲೆ ನನಗೆ ಅನುಕಂಪವಿದೆ, ಅವರಿಂದ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ ಎಂದು ಸೂಪರ್ ಸಿಎಂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.

    ವಿಧಾನಸೌಧದಲ್ಲಿ ಉತ್ತರ ಕರ್ನಾಟಕ ಕಡೆಗಣಿಸಲಾಗಿ ಅನ್ನುವ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಕುರಿತು ನಾನು ಮಾತಾಡಲ್ಲ. ಯಡಿಯೂರಪ್ಪ ಬಗ್ಗೆ ಮಾತಾಡಿದರೆ ನಾನು ಪೊಳ್ಳಾಗುತ್ತೇನೆ. ಯಡಿಯೂರಪ್ಪನವರು ಹಿರಿಯರು ಅವರ ಮೇಲೆ ನನಗೆ ಅನುಕಂಪ ಇದೆ. ಅವರಿಂದ ಸರಕಾರ ರಚಿಸಲು ಸಾಧ್ಯವಾಗಲಿಲ್ಲ. ಇಂಥ ಸಂದರ್ಭದಲ್ಲಿ ಅವರ ಬಗ್ಗೆ ನಾನು ಮಾತಾಡಲ್ಲ ಎಂದು ಹೇಳಿ ಟಾಂಗ್ ನೀಡಿದರು.

    ಶಾಸಕ ಶ್ರೀರಾಮುಲು ಹೇಳಿಕೆ ಬಗ್ಗೆ ನಾನೇನು ಮಾತಾಡೊಲ್ಲ. ಶ್ರೀರಾಮುಲು ಬಗ್ಗೆ ಮಾತಾಡಿದರೆ ನನ್ನನ್ನು ನಾನೇ ಅಗೌರವ ಮಾಡಿಕೊಂಡಂತೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅವಧಿಗಳಲ್ಲಿ ಏನೇನಾಗಿದೆ ಅಂತ ಬಹಿರಂಗ ಚರ್ಚೆ ಆಗಲಿ. ಬಹಿರಂಗ ಚರ್ಚೆಗೆ ನಾವು ಸಿದ್ದ. ಮಠಾಧೀಶರು ಚರ್ಚೆಗೆ ಬರಲಿ ಎಂದು ಬಿಜೆಪಿ ನಾಯಕರು ಹಾಗೂ ಮಠಾಧೀಶರಿಗೆ ಸವಾಲು ಹಾಕಿ ಪ್ರತ್ಯೇಕ ರಾಜ್ಯ ರಚನೆಗಾಗಿ ಬಂದ್ ಮಾಡುತ್ತಿರೋರಿಗೆ ಸಚಿವ ರೇವಣ್ಣ ತಿರುಗೇಟು ನೀಡಿದರು.

    ಯಾರ ಅವಧಿಯಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಅಂತ ಚರ್ಚೆ ನಡೆಯಲಿ. ಮಠಾಧೀಶರ ಪ್ರತಿಭಟನೆ ಕುರಿತು ನಾನು ಮಾತಾಡಲ್ಲ. ಉತ್ತರ ಕರ್ನಾಟಕದವರಿಗೆ ಸಚಿವ ಸಂಪುಟದಲ್ಲಿ ಅನ್ಯಾಯವಾಗಿದೆ ಅನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತು ಸಿಎಂ ಕುಮಾರಸ್ವಾಮಿ ಜೊತೆ ಚರ್ಚೆ ನಡೆಸುತ್ತೇನೆ ಅಂತ ತಿಳಿಸಿದರು.

  • ಮೈತ್ರಿ ಸರ್ಕಾರದ ಸೂಪರ್ ಸಿಎಂ ಎಚ್.ಡಿ.ರೇವಣ್ಣ ಎಡವಟ್ಟು- ಹೀಗೆ ಮಾಡ್ಬಹುದಾ ಸಚಿವರೇ?

    ಮೈತ್ರಿ ಸರ್ಕಾರದ ಸೂಪರ್ ಸಿಎಂ ಎಚ್.ಡಿ.ರೇವಣ್ಣ ಎಡವಟ್ಟು- ಹೀಗೆ ಮಾಡ್ಬಹುದಾ ಸಚಿವರೇ?

    ಬೆಂಗಳೂರು: ಮೈತ್ರಿ ಸರ್ಕಾರದಲ್ಲಿಯೇ ಸೂಪರ್ ಸಿಎಂ ಅಂತಾನೆ ಕರೆಸಿಕೊಳ್ಳುವ ಎಚ್.ಡಿ.ರೇವಣ್ಣ ಎಡವಟ್ಟು ಮಾಡಿಕೊಂಡಿದ್ದಾರೆ. ಸರ್ಕಾರ ರಚನೆಯ ಬಳಿಕ ಎಲ್ಲ ಸಚಿವರಿಗೂ ಸರ್ಕಾರಿ ಬಂಗಲೆಯನ್ನು ನೀಡಲಾಗಿದೆ. ಆದ್ರೆ ಎಚ್.ಡಿ.ರೇವಣ್ಣ ತಮ್ಮ ಕಟ್ಟಡದ ಕೊಳಚೆ ನೀರನ್ನು ರಸ್ತೆಗೆ ತಿರುಗಿಸುವ ಕೆಲಸ ಮಾಡಿದ್ದಾರೆ.

    ಸದ್ಯ ಆಷಾಢ ಮಾಸ ಇರೋದರಿಂದ ಸರ್ಕಾರಿ ಬಂಗಲೆಗೆ ಸಚಿವರು ಪ್ರವೇಶ ಮಾಡಿಲ್ಲ. ಆಷಾಢ ಕಳೆದ ಮೇಲೆ ಶಿವಾನಂದ ಸರ್ಕಲ್ ಬಳಿ ಇರುವ ಕುಮಾರಕೃಪಾ ನಂಬರ್ 1 ನಿವಾಸಕ್ಕೆ ಎಚ್.ಡಿ.ರೇವಣ್ಣ ಪ್ರವೇಶ ಮಾಡಲಿದ್ದಾರೆ. ಆದರೆ ಪ್ರವೇಶಕ್ಕೂ ಮುನ್ನವೇ ವಾಸ್ತು ಪ್ರಕಾರ ಕಟ್ಟಡದ ನವೀಕರಣ ನಡೆಯುತ್ತಿದೆ. ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಹೆಚ್.ಸಿ.ಮಹಾದೇವಪ್ಪ ತಮ್ಮ ಪ್ರವೇಶದ ವೇಳೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಡದ ನವೀಕರಣಗೊಳಿಸಿದ್ದರು. ಈಗ ಮತ್ತೆ ಅದೇ ಕಟ್ಟಡದ ನವೀಕರಣ ನಡೆಯುತ್ತಿದೆ.

    ಮಳೆಯಾದರೆ ಕುಮಾರ ಕೃಪಾ ಮುಂದೆ ಮಳೆನೀರು ನಿಂತುಕೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮನೆಯ ಮುಂದಿನ ನೀರನ್ನು ರಸ್ತೆಗೆ ತಿರುಗಿಸಿದ್ದಾರೆ. ಮಳೆಯ ನೀರು ಮತ್ತು ಕಟ್ಟಡದ ಕೊಳಚೆ ನೇರವಾಗಿ ರಸ್ತೆಯ ಮೇಲೆ ಹರಿಯುವ ಸಾಧ್ಯತೆಗಳಿವೆ. ಇದರಿಂದ ಸಹಜವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಆಗಲಿದೆ.

    ಅತಿ ಹೆಚ್ಚಾಗಿ ಜೋತಿಷ್ಯ ನಂಬುವ ಸಚಿವರು ಸಾರ್ವಜನಿಕರ ಹಣದಲ್ಲಿ ಸರ್ಕಾರದ ಕಟ್ಟಡವನ್ನು ತಮಗೆ ಅನುಕೂಲವಾಗುವಂತೆ ಮಾಡಿಕೊಳ್ಳುತ್ತಿರೋದು ಇದೀಗ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಕೊಳಚೆ ನೀರನ್ನು ರಸ್ತೆಗೆ ಹರಿಸುವ ಮೂಲಕ ಕೇವಲ ತಮ್ಮ ಸುರಕ್ಷತೆ ನೋಡಿಕೊಂಡು ಸಾರ್ವಜನಿಕರಿಗೆ ತೊಂದರೆ ಮಾಡಿದಂತಾಗುತ್ತದೆ. ಸಚಿವರೇ ನೀವು ಹೇಗೆ ಮಾಡಬಹುದಾ ಎಂಬ ಪ್ರಶ್ನೆಯೊಂದು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

  • ಸಿಪಿಐ ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ- ಮಗ ತಪ್ಪು ಮಾಡಿದ್ರೆ ಶಿಕ್ಷೆ ನೀಡಿ ಅಂದ್ರು ರೇವಣ್ಣ

    ಸಿಪಿಐ ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ- ಮಗ ತಪ್ಪು ಮಾಡಿದ್ರೆ ಶಿಕ್ಷೆ ನೀಡಿ ಅಂದ್ರು ರೇವಣ್ಣ

    ಹಾಸನ: ಚನ್ನರಾಯಪಟ್ಟಣ ಗ್ರಾಮಾಂತರ ಸಿಪಿಐ ಹರೀಶ್ ಬಾಬು ವರ್ಗಾವಣೆ ವಿಚಾರದಲ್ಲಿ ನಾನು ಪ್ರಭಾವ ಬೀರಿಲ್ಲ ಅಂತ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ಖಡಕ್ ಆಗಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಗರಂ ಆದ ಅವರು, ನಾನು ಯಾರ ಮೇಲೂ ಪ್ರಭಾವ ಬೀರಲು ಹೋಗಿಲ್ಲ. ಚನ್ನರಾಯಪಟ್ಟಣ ಸಿಪಿಐ ವರ್ಗಾವಣೆ ಪ್ರಕರಣಕ್ಕೂ ನಮಗೂ ಸಂಬಂಧ ಇಲ್ಲ. ಆ ಬಗ್ಗೆ ಎಸ್ಪಿ ಹಾಗೂ ಆ ಇನ್ಸ್ ಪೆಕ್ಟರ್ ಅವರನ್ನೇ ಕೇಳಿ. ಈ ಬಗ್ಗೆ ಬೇಕಿದ್ದರೆ ತನಿಖೆ ನಡೆಸಲಿ. ತಪ್ಪು ಮಾಡಿದ್ರೆ ರೇವಣ್ಣ ಆದ್ರೇನು ಅವರ ಮಗನಾದ್ರೇನು ಎಂದು ಕಿಡಿಕಾರಿದ್ರು.

    ಆ ಇನ್ಸ್ ಪೆಕ್ಟರ್ ಜೆಡಿಎಸ್ ಕಾರ್ಯಕರ್ತರ ಮೇಲೆ ಕೇಸ್ ಹಾಕ್ತಾರೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ಹಾಕೋದಿಲ್ಲ. ನನ್ನ ಮಗ ಡಾ. ಸೂರಜ್ ಆ ಗಲಾಟೆಯಲ್ಲಿ ಇದ್ನಾ ಎಂದು ಪ್ರಶ್ನೆ ಮಾಡಿದ್ರು. ವಿನಾಕಾರಣ ಎಫ್.ಐ.ಆರ್ ಹಾಕಿದ್ದಾರೆ. ಆ ಇನ್ಸ್ ಪೆಕ್ಟರ್ ನ್ನು ಅಮಾನತು ಮಾಡಲು ಜಿಲ್ಲಾಧಿಕಾರಿ ಹೊರಟಿದ್ದರು. ಆವಾಗ ನಾನೇ ಬೇಡ ಎಂದಿದ್ದೆ. ನನ್ನ ಮಗ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ ಅಂದ್ರು. ಇದನ್ನೂ ಓದಿ: ರೇವಣ್ಣ ಪುತ್ರನ ವಿರುದ್ಧ ದೂರು ದಾಖಲಿಸಿದ್ದಕ್ಕೆ ಚನ್ನರಾಯಪಟ್ಟಣ ಇನ್ಸ್ ಪೆಕ್ಟರ್ ಗೆ ಕಿರುಕುಳ?

    ಹಾಸನ-ಬೇಲೂರು ರೈಲು ಮಾರ್ಗ ಸರ್ವೇ ಕಾರ್ಯ ಶೀಘ್ರ ಆರಂಭವಾಗಲಿದೆ. ರಾಜ್ಯದ ಶೇ.50 ರಷ್ಟು ಸಹಭಾಗಿತ್ವದಲ್ಲಿ ಯೋಜನೆ ಆರಂಭವಾಗಲಿದೆ. ಬೇಲೂರು-ಚಿಕ್ಕಮಗಳೂರು ನಡುವಿನ ಕಾಮಗಾರಿಗೆ ಭೂಸ್ವಾಧೀನ ಆಗಿಲ್ಲ. ಈ ಸಂಬಂಧ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಹಾಸನ ಮಾರ್ಗವಾಗಿ ಎಕ್ಸ್ ಪ್ರೆಸ್ ಸೇರಿ ಇನ್ನೂ ಹೆಚ್ಚಿನ ರೈಲು ಓಡಿಸಲು ಮನವಿ ಮಾಡಲಾಗಿದೆ. ಬಹು ನಿರೀಕ್ಷಿತ ರೈಲ್ವೆ ಮೇಲ್ಸೇತುವೆ ಯೋಜನೆ ಮುಂದಿನ ಸಂಪುಟದ ಮುಂದೆ ಬರಲಿದೆ. ಕಾಮಗಾರಿಗೆ ಶೀಘ್ರ ಅನುಮೋದನೆ ಸಿಗಲಿದೆ ಅಂತ ಅವರು ತಿಳಿಸಿದ್ರು.

    ಮಾಧ್ಯಮಕ್ಕೆ ಶಾಪ:
    ಇದೇ ವೇಳೆ ಮಾಧ್ಯಮದ ವಿರುದ್ಧ ಕಿಡಿಕಾರಿದ ರೇವಣ್ಣ, ವಾರ ಪತ್ರಿಕೆವೂಂದರಲ್ಲಿ ಐದು ಬಾರಿ ನನ್ನ ಬಗ್ಗೆ ಬರೆದಿದ್ದಾರೆ. ನಾನು ಐದು ಬಾರಿ ಶಾಸಕನಾದೆ. ಟಿವಿ ಮಾಧ್ಯಮಗಳು ನನ್ನ ಬಗ್ಗೆ ದಿನಾ ತೋರಿಸಲಿ. ನಮಗೆ ದೇವರ ಹಾಗು ಜನರ ಆಶೀರ್ವಾದ ಇದೆ. ನಿಮಗೆಲ್ಲಾ ದೇವರೇ ಶಿಕ್ಷೆಕೊಡ್ತಾನೆ ಎಂದು ಮಾಧ್ಯಮ ವಿರುದ್ಧ ಶಾಪ ಹಾಕಿದ್ರು.

     

  • ದೆಹಲಿಗೆ ಬಂದ್ರೂ ಸಿಎಂಗೆ ತಪ್ಪಲಿಲ್ಲ ‘ಸೂಪರ್ ಸಿಎಂ’ ಕಾಟ!

    ದೆಹಲಿಗೆ ಬಂದ್ರೂ ಸಿಎಂಗೆ ತಪ್ಪಲಿಲ್ಲ ‘ಸೂಪರ್ ಸಿಎಂ’ ಕಾಟ!

    ನವದೆಹಲಿ: ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಿದ್ದಂತೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣರು ಸಹ ಸಮ್ಮಿಶ್ರ ಸರ್ಕಾರದಲ್ಲಿ ಪ್ರಭಾವಿ ನಾಯಕರಾಗಿದ್ದಾರೆ. ಕುಮಾರಸ್ವಾಮಿಯವರು ಎಲ್ಲಿಗೆ ಹೋದರು, ಬಂದರೂ ಅಲ್ಲಿ ರೇವಣ್ಣ ಜೊತೆಯಾಗುತ್ತಿದ್ದಾರೆ.

    ಇಂದು ದೆಹಲಿ ಪ್ರವಾಸದಲ್ಲಿರುವ ಕುಮಾರಸ್ವಾಮಿ ಅವರ ಜೊತೆಗೆ ಸೂಪರ್ ಸಿಎಂ ರೇವಣ್ಣ ಅವರದ್ದೇ ಫುಲ್ ಹವಾ. ಸಿಎಂ ಕಾರ್ಯಕ್ರಮ, ಭೇಟಿ, ಸಭೆ ಎಲ್ಲದರಲ್ಲಿಯೂ ರೇವಣ್ಣ ಭಾಗವಹಿಸಿದ್ರು. ಮಂಗಳವಾರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಇಂದು ಕೃಷಿ ಸಚಿವ ರಾಧಮೋಹನ್ ಸಿಂಗ್, ರೈಲ್ವೆ ಸಚಿವ ಪಿಯೂಷ್ ಗೊಯೇಲ್ ಅವರನ್ನು ಕುಮಾರಸ್ವಾಮಿ ಭೇಟಿ ಮಾಡಿದ್ದರು. ಐದು ಜನ ಸಚಿವರ ಪೈಕಿ ಮೂವರನ್ನು ಭೇಟಿ ಮಾಡುವ ವೇಳೆ ಸಿಎಂಗೆ ರೇವಣ್ಣ ಸಾಥ್ ನೀಡಿದ್ದರು.

    ಕೃಷಿ ಸಚಿವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ರಾಜ್ಯದ ಕೃಷಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ಕೊಟ್ಟ ಮನವಿಗಳಿಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಹಲವು ಜಿಲ್ಲೆಗಳಲ್ಲಿ ಮೆಗಾ ಡೈರಿ ಆರಂಭಕ್ಕೆ 900 ಕೋಟಿ ರೂ. ನೆರವು ನೀಡಲು ಕೇಂದ್ರ ಒಪ್ಪಿಗೆ ನೀಡಿದೆ. ದೆಹಲಿ ಭೇಟಿ ಫಲ ಕೊಟ್ಟಿದೆ ಎಂಬ ತೃಪ್ತಿಯಿದೆ ಎಂದರು.

    ನವದೆಹಲಿಯ ಸೌತ್ ಬ್ಲಾಕ್ ನಲ್ಲಿರುವ ರಕ್ಷಣಾ ಕಚೇರಿಯಲ್ಲಿ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು, ರಕ್ಷಣಾ ಇಲಾಖೆಗೆ ಸೇರಿದ ಬೆಂಗಳೂರಿನ ಭೂಮಿಯನ್ನು ಮೆಟ್ರೋ ಕಾಮಗಾರಿಗೆ ಬಳಕೆ ಮಾಡಿಕೊಳ್ಳಲು ಅನುಮತಿ ಕೇಳಿದ್ದಾರೆ.

    ಐಫೋನ್ ಗಿಫ್ಟ್ ನೀಡಲು ಆರ್ಥಿಕ ಇಲಾಖೆಯಿಂದ ಹಣ ಬಿಡುಗಡೆ ಮಾಡಿಲ್ಲ. ನನ್ನ ಗಮನಕ್ಕೆ ಬಾರದೆ ಹಣ ಬಿಡುಗಡೆ ಆಗಲು ಸಾಧ್ಯವಿಲ್ಲ. ಅಷ್ಟೇ ಅಲ್ಲದೆ ಇದರಲ್ಲಿ ನನ್ನ ಪಾತ್ರವಿಲ್ಲ. ಐಫೋನ್ ಕೊಡುವ ಅವಶ್ಯಕತೆ ಇತ್ತೇ ಅಂತಾ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್‍ಗೆ ಕೇಳಿದ್ದೆ. ಅವರು ಕಳೆದ ವರ್ಷವೂ ಕೊಟ್ಟಿದ್ದೆ, ಅದಕ್ಕೆ ಈ ಬಾರಿಯೂ ಕೊಟ್ಟಿದ್ದೇನೆ. ಆದರೆ ಕಳೆದ ಬಾರಿ ಗಿಫ್ಟ್ ನೀಡಿದಾಗ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಹೀಗಾಗಿ ಕೊಟ್ಟಿರುವುದಾಗಿ ಅವರು ಹೇಳಿರುವರು ಎಂದು ಕುಮಾರಸ್ವಾಮಿ ತಿಳಿಸಿದರು.

  • ರೇವಣ್ಣ ಪುತ್ರನ ವಿರುದ್ಧ ದೂರು ದಾಖಲಿಸಿದ್ದಕ್ಕೆ ಚನ್ನರಾಯಪಟ್ಟಣ ಇನ್ಸ್ ಪೆಕ್ಟರ್ ಗೆ ಕಿರುಕುಳ?

    ರೇವಣ್ಣ ಪುತ್ರನ ವಿರುದ್ಧ ದೂರು ದಾಖಲಿಸಿದ್ದಕ್ಕೆ ಚನ್ನರಾಯಪಟ್ಟಣ ಇನ್ಸ್ ಪೆಕ್ಟರ್ ಗೆ ಕಿರುಕುಳ?

    ಬೆಂಗಳೂರು: ಚುನಾವಣಾ ಸಮಯದಲ್ಲಿ ಸಚಿವ ರೇವಣ್ಣ ಪುತ್ರನ ವಿರುದ್ಧ ದೂರು ದಾಖಲಿಸಿಕೊಂಡಿದ್ದಕ್ಕೆ ಪೊಲೀಸ್ ಇನ್ಸ್ ಪೆಕ್ಟರ್ ಗೆ ಕಿರುಕುಳ ನೀಡಿದಲ್ಲದೇ, ಠಾಣೆಗೆ ಬಾರದಂತೆ ಆದೇಶ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

    ಚುನಾವಣಾ ಸಮಯದಲ್ಲಿ ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ಧ ಕೇಸ್ ದಾಖಲಿಸಿದ್ದ ಚನ್ನರಾಯಪಟ್ಟಣ ಇನ್ಸ್ ಪೆಕ್ಟರ್ ಹರೀಶ್ ಬಾಬುರವರಿಗೆ ಕಿರುಕುಳ ನೀಡುತ್ತಿದ್ದಲ್ಲದೇ ಠಾಣೆಗೆ ಬಾರದಂತೆ ಮೌಖಿಕ ಆದೇಶ ನೀಡಿದ್ದಾರೆ ಎಂದು ದೂರುದಾರ ಶ್ರೇಯಸ್ ಆರೋಪಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ದೂರುದಾರ ಶ್ರೇಯಸ್, ಸಚಿವರು ಅಧಿಕಾರ ದುರಪಯೋಗಪಡಿಸಿಕೊಂಡು ಅಧಿಕಾರಿಯನ್ನು ವರ್ಗಾಯಿಸಿದ್ದಾರೆ. ಧಕ್ಷ ಅಧಿಕಾರಿಯನ್ನು ಎತ್ತಂಗಡಿ ಮಾಡಿಸುವಲ್ಲಿ ಸಚಿವರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಸಚಿವ ರೇವಣ್ಣರ ಒತ್ತಡಕ್ಕೆ ಮಣಿದ ಹಾಸನ ಎಸ್ಪಿ, ಲಿಖಿತ ಆದೇಶವಿಲ್ಲದೆ ಫೋನ್ ಮೂಲಕವೇ ಠಾಣೆಗೆ ಬಾರದಂತೆ ಇನ್ಸ್ ಪೆಕ್ಟರ್ ಹರೀಶ್ ಬಾಬುಗೆ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹರೀಶ್ ರವರು ಕಳೆದ 20 ದಿನಗಳಿಂದ ಠಾಣೆಗೆ ಬರುತ್ತಿಲ್ಲ ಎಂದು ಶ್ರೇಯಸ್ ಆರೋಪಿಸಿದರು.

    ಮಗನ ಮೇಲೆ ಕೇಸು ಹಾಕಿದ್ದಕ್ಕೆ ಪ್ರತೀಕಾರಕ್ಕಿಳಿದ ಸಚಿವ ರೇವಣ್ಣರವರು, ಹಾಸನ ಎಸ್ಪಿ ರಾಹುಲ್ ಕುಮಾರ್ ಮೇಲೆ ಒತ್ತಡ ಹೇರಿದ್ದಾರೆ. ಅಲ್ಲದೇ ಆ ಇನ್ಸ್ ಪೆಕ್ಟರ್ ನನ್ನ ಮಗನ ತಂಟೆಗೆ ಬಂದಿದ್ದಾನೆ. ಅವನು ಯಾವುದೇ ಕಾರಣಕ್ಕೂ ಚನ್ನರಾಯಪಟ್ಟಣ ಠಾಣೆಗೆ ಕಾಲಿಡುವಂತಿಲ್ಲ, ಅವನು ಎತ್ತಂಗಡಿ ಆಗೋವರೆಗೂ ಚನ್ನರಾಯಪಟ್ಟಣಕ್ಕೆ ಬರುವಂತಿಲ್ಲ ಎಂದು ಇನ್ಸ್ ಪೆಕ್ಟರ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನುವ ಮಾತು ಈಗ ಹಾಸನದಲ್ಲಿ ಹರಿದಾಡುತ್ತಿದೆ.

    ಏನಿದು ಪ್ರಕರಣ?
    2018ರ ಏಪ್ರಿಲ್ 29 ರಂದು ಸೂರಜ್ ರೇವಣ್ಣ ಚುನಾವಣಾ ಪ್ರಚಾರ ಸಂಬಂಧ ಜಿಲ್ಲಾ ಪಂಚಾಯತ್ ಸದಸ್ಯ ಶ್ರೇಯಸ್ ಎಂ ಪಾಟೀಲ್ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಶ್ರೇಯಸ್ ರವರು ಚನ್ನರಾಯಪಟ್ಟಣದಲ್ಲಿ ದೂರು ದಾಖಲಿಸಿದ್ದರು. ಹರೀಶ್ ರವರು ದೂರು ದಾಖಲಿಸಿ, ಸೂರಜ್ ರೇವಣ್ಣರನ್ನು ಆರೋಪಿ ಎ-1 ಒನ್ ಆಗಿ ಉಲ್ಲೇಖಿಸಿ ಪ್ರಕರಣ ದಾಖಲಿಸಿಕೊಂಡಿದ್ದರು.

     

    https://www.youtube.com/watch?v=WOBnwsWmA1Y

    https://www.youtube.com/watch?v=fH9Sveg85r8

  • ಸೂಪರ್ ಸಿಎಂನ ಸೂಪರ್ ಪವರ್: ಆಪ್ತರಿಗೆ ಎರಡೆರಡು ಜವಾಬ್ದಾರಿ ಹೊರಿಸಿದ ಎಚ್‍ಡಿ ರೇವಣ್ಣ!

    ಸೂಪರ್ ಸಿಎಂನ ಸೂಪರ್ ಪವರ್: ಆಪ್ತರಿಗೆ ಎರಡೆರಡು ಜವಾಬ್ದಾರಿ ಹೊರಿಸಿದ ಎಚ್‍ಡಿ ರೇವಣ್ಣ!

    ಬೆಂಗಳೂರು: ಸಚಿವರಾಗುತ್ತಿದ್ದಂತೆಯೇ ಎಚ್.ಡಿ ರೇವಣ್ಣ ಆಪ್ತರಿಗೆ ಹಬ್ಬವೋ ಹಬ್ಬವಾಗಿದ್ದು, ಇದೀಗ ಲೋಕೋಪಯೋಗಿ ಇಲಾಖೆಯಲ್ಲಿ ರೇವಣ್ಣ ಅವರು ಹೇಳಿದ್ದೆ ಫೈನಲ್ ಆಗಿದೆ.

    ಎಚ್.ಡಿ ರೇವಣ್ಣ ಅವರು ತಮ್ಮ ಆಪ್ತರಿಗೆ ಎರಡೆರಡು ಹುದ್ದೆ ದಯಪಾಲಿಸಿದ್ದಾರೆ. ಒಂದು ತಿಂಗಳ ಹಿಂದೆ ಪ್ರಮೋಷನ್ ಆದ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್‍ಗೆ ಎರೆಡೆರಡು ಜವಾಬ್ದಾರಿ ಹೊರಿಸಲಾಗಿದೆ ಎನ್ನುವ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

    ತಮ್ಮ ಆಪ್ತ ಸಹಾಯಕ ಎಂಜಿನಿಯರ್ ಎ.ಎಂ.ಮಾಲತೀಶ್‍ಗೆ ರೇವಣ್ಣ ಎರೆಡೆರಡು ಹುದ್ದೆ ನೀಡಿದ್ದಾರೆ. ಲೋಕೋಪಯೋಗಿ ನಿರ್ಮಾಣ ವಿಭಾಗದ ಜೊತೆ ವಿಧಾನಸೌಧ, ವಿಕಾಸಸೌಧ, ಶಾಸಕರ ಭವನದ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ. ಸಿವಿ ನಾಗೇಂದ್ರರಿಂದ ತೆರವಾದ ಜಾಗಕ್ಕೆ ಮಾಲತೇಶ್ ಅವರನ್ನು ರೇವಣ್ಣ ನೇಮಿಸಿದ್ದಾರೆ ಎನ್ನಲಾಗಿದೆ.

    ಕಳೆದ ತಿಂಗಳಷ್ಟೆ ಮಾಲತೀಶ್ ಗೆ ಪ್ರಮೋಷನ್ ಆಗಿತ್ತು. ಇದೀಗ ಅನುಭವ ಇಲ್ಲದೇ ಇದ್ರು ಮಾಲತೇಶ್ ಗೆ ಎರೆಡೆರಡು ಜವಾಬ್ದಾರಿ ನೀಡಿರುವುದು ಚರ್ಚೆಗೆ ಒಳಗಾಗಿದೆ.

  • ಕೈಗಾರಿಕೆಗಾಗಿ ಭೂಮಿ ಪಡೆದು ಬಹು ಅಂತಸ್ತಿನ ಶಾಲೆ ನಿರ್ಮಾಣ- ಸಚಿವ ಎಚ್‍ಡಿ ರೇವಣ್ಣ ಆಪ್ತನಿಂದ ದೋಖಾ

    ಕೈಗಾರಿಕೆಗಾಗಿ ಭೂಮಿ ಪಡೆದು ಬಹು ಅಂತಸ್ತಿನ ಶಾಲೆ ನಿರ್ಮಾಣ- ಸಚಿವ ಎಚ್‍ಡಿ ರೇವಣ್ಣ ಆಪ್ತನಿಂದ ದೋಖಾ

    ಬೆಂಗಳೂರು: ಸಚಿವ ಎಚ್ ಡಿ ರೇವಣ್ಣ ಆಪ್ತರೊಬ್ಬರು ಕೆಐಎಡಿಬಿ ಮೂಲಕ ಕೈಗಾರಿಕೆಗಾಗಿ ಭೂಮಿ ಪಡೆದು ಬಹು ಅಂತಸ್ತಿನ ಕಟ್ಟಡವನ್ನು ಕಟ್ಟಿರೋ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದೆ.

    ಹೌದು. ಸಚಿವರ ಆಪ್ತ ಮಂಜೇ ಗೌಡ ಎಂಬವರು ಸುಮಾರು ಎರಡು ಎಕರೆಯಷ್ಟು ಜಮೀನನ್ನ ಕೈಗಾರಿಕೆಗೆ ಅಂತ ಪಡೆದು ಬೃಹತ್ ಸ್ಕೂಲ್ ಕಟ್ಟಿ ಇದೀಗ ಪೇಚಿಗೆ ಸಿಲುಕಿದ್ದಾರೆ.

    ಏನಿದು ಪ್ರಕರಣ?:
    ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಿರುವ ವಿದ್ಯಾಸೌಧ ಪಬ್ಲಿಕ್ ಸ್ಕೂಲ್ ಜಾಗದಲ್ಲಿ ಕಾಂಕ್ರೀಕ್ ಪ್ರಾಡಕ್ಟ್‍ನ ಕೈಗಾರಿಕೆ ನಿರ್ಮಾಣವಾಗ ಬೇಕಿತ್ತು. ಯಾಕಂದ್ರೆ 1992 ರಲ್ಲಿ ಕೆಐಎಡಿಬಿ ಕೈಗಾರಿಕೆ ನಿರ್ಮಾಣಕ್ಕೆ ಅಂತ ರವಿಶಂಕರ್ ಗೌಡ ಅವರಿಗೆ ಜಮೀನು ಮಂಜೂರು ಮಾಡಿತ್ತು. ಆದ್ರೆ ರವಿಶಂಕರ್ ಗೌಡ ಯಾವುದೇ ಕೈಗಾರಿಕೆ ನಿರ್ಮಿಸದೇ 2004 ರಲ್ಲಿ ಇದೇ ಜಮೀನನ್ನ ರೇವಣ್ಣ ಆಪ್ತ ಮಂಜೇಗೌಡರಿಗೆ ರಿಜಿಸ್ಟರ್ ಮಾಡಿಕೊಟ್ಟಿದ್ದಾರೆ.

    ಮಂಜೇಗೌಡ ಕೂಡ ಕೈಗಾರಿಗೆ ನಡೆಸುವ ಬದಲು ಸ್ಕೂಲ್ ಕಟ್ಟಿದ್ರು. ಸುತ್ತಮುತ್ತ ಕೈಗಾರಿಕೆ ಪ್ರದೇಶವಾಗಿರೋದ್ರಿಂದ ಮಕ್ಕಳ ಜೀವಕ್ಕೆ ಅಪಾಯವಿದೆ. ಮಕ್ಕಳ ಹಕ್ಕನ್ನ ರಕ್ಷಿಸಿ ಎಂದು ಮಕ್ಕಳ ಆಯೋಗಕ್ಕೆ ಸಾಮಾಜಿಕ ಕಾರ್ಯಕರ್ತ ನರಸಿಂಹ ಮೂರ್ತಿ ದೂರು ನೀಡಿದ್ರು. ಬಳಿಕ ಮಾಲಿನ್ಯ ನಿಯಂತ್ರಣ ಮಂಡಳಿ ಕೂಡ ಸ್ಥಳ ಪರಿಶೀಲಿಸಿದಾಗ ಅಕ್ರಮ ಬಯಲಾಗಿದೆ. ಕೈಗಾರಿಕೆ ಮಾಡಬೇಕಾದ ಜಾಗದಲ್ಲಿ ಶಾಲೆ ಹೇಗೆ ಕಟ್ಟಿದ್ದೀರಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ.

    1,300 ಮಕ್ಕಳ ಜೀವದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಕ್ಕಳ ಹಕ್ಕು ಆಯೋಗ, ಇತ್ತ ಬಿಬಿಎಂಪಿ, ಬಿಡಿಎ, ಶಿಕ್ಷಣ ಇಲಾಖೆಗೆ ನೊಟೀಸ್ ನೀಡಿದೆ. ಈ ಶಾಲೆಯ ಮಾಲೀಕ ಡಾ. ಮಂಜೇಗೌಡ ಮೂಲತಃ ಹಾಸನದವರಾಗಿದ್ದಾರೆ. ಪಿಡಬ್ಲುಡಿ ಎಂಜಿನಿಯರ್ ಆಗಿರುವ ಇವರು ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಲಮಂಡಳಿ ಬೋರ್ಡ್ ಮೆಂಬರ್ ಕೂಡ ಆಗಿದ್ರು. ಇದೆಲ್ಲಾ ಪ್ರಭಾವ ಬಳಸಿಯೇ ಇಷ್ಟೆಲ್ಲಾ ಅಕ್ರಮ ನಡೆಸಿದ್ದಾರೆಂದು ಆರ್‍ಟಿಐ ಕಾರ್ಯಕರ್ತ ನರಸಿಂಹಮೂರ್ತಿ ಆರೋಪ ಮಾಡಿದ್ದಾರೆ.