ಬೆಂಗಳೂರು: ಮಹಿಳೆಯ ಅಪಹರಣ (Woman Kidnape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋದರು. ಇಂದು ವಾದ- ಪ್ರತಿವಾದ ಆಲಿಸಿದ ಕೋರ್ಟ್ ಜಾಮೀನು ಅರ್ಜಿ ನಿರಾಕರಿಸಿತು. ಈ ಮೂಲಕ ರೇವಣ್ಣ ಅವರಿಗೆ ರಿಲೀಫ್ ಸಿಕ್ಕಿಲ್ಲ.
ಇತ್ತ ಅರ್ಜಿ ವಜಾ ಆಗುತ್ತಿದ್ದಂತೆಯೇ ಎಸ್ಐಟಿ ಅಧಿಕಾರಿಗಳು ಹೆಚ್.ಡಿ ದೇವೇಗೌಡರ ಮನೆಗೆ ದೌಡಾಯಿಸಿದರು. ಅರ್ಧ ಗಂಟೆಯ ಬಳಿಕ ಮನೆಯಿಂದ ರೇವಣ್ಣ ಅವರು ಹೊರಗಡೆ ಬಂದರು. ಈ ವೇಳೆ ಅಧಿಕಾರಿಗಳು ಮಾಜಿ ಸಚಿವರನ್ನು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ. ನಂತರ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಸಿಐಡಿ ಕಚೇರಿಯಲ್ಲಿ ತನಿಖೆ ನಡೆಸಲಾಗುತ್ತದೆ.
ಪ್ರಕರಣ: ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ರೇವಣ್ಣ ವಿರುದ್ಧ ಸಂತ್ರಸ್ತೆ ಮಗ ದೂರು ದಾಖಲಿಸಿದ್ದರು. ಸಂತ್ರಸ್ತೆ ಪುತ್ರ ರೇವಣ್ಣ ಹಾಗೂ ಸತೀಶ್ ಬಾಬಣ್ಣ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿದ್ದರು. ದೂರಿನಲ್ಲಿ ಭವಾನಿ ಅಕ್ಕ ಕರೆಯುತ್ತಿದ್ದಾರೆ ಅಂತ ಬಾಬಣ್ಣ ಎಂಬಾತ ಮನೆಗೆ ಬಂದು ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ನನ್ನ ತಾಯಿ ನಾಪತ್ತೆಯಾಗಿದ್ದಾರೆ. ಪೊಲೀಸರು ಕೇಳಿದರೆ ನಮಗೇನು ಗೊತ್ತಿಲ್ಲ ಎಂದು ಹೇಳಿದ್ರು. ಬಳಿಕ ಪೊಲೀಸರ ಮೇಲೆಯೂ ಒತ್ತಡ ಹಾಕಿದ್ರು ಅಂತ ದೂರಿನಲ್ಲಿ ತಿಳಿಸಿದ್ದರು.
ಪ್ರಕರಣ ಸಂಬಂಧ ಈಗಾಗಲೇ ಎ2 ಆರೋಪಿ ಸತೀಶ್ ಬಾಬಣ್ಣನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇತ್ತ ಎ1 ಆರೋಪಿ ಹೆಚ್.ಡಿ ರೇವಣ್ಣ ಕೋರ್ಟ್ ಮೊರೆ ಹೋಗಿದ್ದು, ಇಂದು ಜನಪ್ರತಿನಿಧಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಅರ್ಜಿ ವಜಾಗೊಂಡಿತ್ತು.
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಸುಮಾರು 2 ಗಂಟೆಗಳ ವಿಚಾರಣೆ ನಡೆಸಿದ ಕೋರ್ಟ್ ಕೆಲ ಕಾಲ ತೀರ್ಪು ಕಾಯ್ದಿರಿಸಿತು. ಬಳಿಕ ಸಂಜೆ 6.25ರ ಸುಮಾರಿಗೆ ಆದೇಶ ಪ್ರಕಟಿಸಿತು. ಜೊತೆಗೆ ಮೇ 6 ಕ್ಕೆ ವಿಚಾರಣೆ ಮುಂದೂಡಿದೆ. ಈ ಮೂಲಕ ರೇವಣ್ಣ ಅವರಿಗೆ ರಿಲೀಫ್ ಸಿಕ್ಕಿಲ್ಲ.
ರೇವಣ್ಣ ಪರ ವಕೀಲರು ಹೇಳಿದ್ದೇನು..?: ಪ್ರಕರಣ ಗಂಭೀರತೆ ವಿಚಾರವನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಹೀಗಾಗಿ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆಗೆ ಎಸ್ ಪಿ ಪಿ ಜಗದೀಶ್ ಮನವಿ ಮಾಡಿದರು. ಇದಕ್ಕೆ ರೇವಣ್ಣ ಪರ ವಕೀಲ ಮೂರ್ತಿ ನಾಯ್ಕ್ ಆಕ್ಷೇಪಣೆ ವ್ಯಕ್ತಪಡಿಸಿದರು. ನಿರ್ದಿಷ್ಟ ಪ್ರಕರಣಗಳಿಗೆ ಮಾತ್ರ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸುವುದಾಗಿದೆ ಆದರೆ ಇಲ್ಲಿ ಅಂತಹ ದೊಡ್ಡ ಪ್ರಕರಣ ಏನಿಲ್ಲ ಎಂದು ತಿಳಿಸಿದರು.
ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ ಇದ್ದಾರೆ ಎಂದು ಆರೋಪಿಸಿ ವಾದ ಮುಂದುವರಿಸಿದ ರೇವಣ್ಣ ಪರ ವಕೀಲರು, FIR ಅಲ್ಲಿ ಇರುವ ಸಾರಾಂಶದ ಬಗ್ಗೆ ವಿವರಣೆ ನೀಡಿದ್ದಾರೆ. ಪ್ರಕರಣವನ್ನು ಅನಗತ್ಯವಾಗಿ ವಿಜೃಂಭಿಸಲು SIT ಪ್ರಯತ್ನ ಮಾಡುತ್ತಿದೆ. ಈ ಪ್ರಕರಣದಲ್ಲಿ ನಾವು ಏನನ್ನೂ ಮುಚ್ಚಿಡುವ ಅಗತ್ಯವಿಲ್ಲ. ಸತೀಶ್ ಹೇಳಿಕೆ ಮತ್ತು ಎಫ್ ಐ ಆರ್ ಅಲ್ಲಿ ಇರುವ ಅಂಶಗಳಿಗು ವ್ಯತ್ಯಾಸ ಇದೆ. ನಿನ್ನೆ ಎಫ್ ಐ ಆರ್ ಮಾಡ್ತಾರೆ. ಇಂದು ವಿಚಾರಣೆಗೆ ಬನ್ನಿ ಅಂತಾರೆ ಅದರಿಂದಲೇ ಎಸ್ ಐಟಿ ಉದ್ದೇಶ ಏನು ಅಂತ ಗೊತ್ತಾಗ್ತಾ ಇದೆ. ಇವತ್ತು ಶನಿವಾರ ಬೇರೆ ವಿಚಾರಣೆಗೆ ಕರೆಸಿ ಬಲವಂತದ ಕ್ರಮ ಮಾಡಿದ್ರೆ ಎಂಬುದೇ ಆತಂಕವಾಗಿದೆ. ದೂರುದಾರನ ಹೇಳಿಕೆ ಬಿಟ್ಟರೆ ಬೇರೆ ಏನೂ ಇಲ್ಲ. ತಡರಾತ್ರಿ ತರಾತುರಿಯಲ್ಲಿ ಎಫ್ಐಆರ್ ದಾಖಲಾಗಿದೆ. ನಾನ್ ಬೇಲೆಬಲ್ ಸೆಕ್ಷನ್ ಹಾಕಿ ಎಫ್ಐಆರ್ ದಾಖಲು ಮಾಡಿದ್ದಾರೆ. ಅಲ್ಲದೇ ತಕ್ಷಣ ಮತ್ತೆ 41 A ಯಲ್ಲಿ ನೊಟೀಸ್ ನೀಡಿದ್ದಾರೆ. ನಿನ್ನೆ ನಾನ್ ಬೇಲೆಬಲ್ ಸೆಕ್ಷನ್ ಹಾಕಿಲ್ಲ ಅಂದಿದ್ರು. ಆದರೆ ರಾತ್ರಿ ಇನ್ನೊಂದು ನಾನ್ ಬೇಲೆಬಲ್ ಸೆಕ್ಷನ್ FIR ಹಾಕಿದ್ದಾರೆ. ಅಲ್ಲದೇ ಇವತ್ತು ಶನಿವಾರ ಅಂತಾ ನೋಡಿಕೊಂಡು ನೊಟೀಸ್ ನೀಡಿದ್ದಾರೆ ಎಂದು ರೇವಣ್ಣ ಪರ ವಕೀಲ ಕೆಲ ನ್ಯಾಯಾಲಯದ ಆದೇಶಗಳನ್ನು ವಿವರಿಸಿದರು.
ಕಿಡ್ನಾಪ್ ಪ್ರಕರಣ ಆಗಬೇಕಾದರೆ ಹಲ್ಲೆ, ಹಣಕ್ಕೆ ಬೇಡಿಕೆ ಇರಬೇಕು. ಈ ಪ್ರಕರಣದಲ್ಲಿ ಈ ರೀತಿಯಲ್ಲಿ ನಡೆದೇ ಇಲ್ಲ. ಹೀಗಾಗಿ ಕಿಡ್ನಾಪ್ ಸೆಕ್ಷನ್ ಅಪ್ಲೈ ಆಗುವುದೇ ಇಲ್ಲ. 365 ಕೂಡ 7 ವರ್ಷ ಶಿಕ್ಷೆ & ದಂಡದ ಬಗ್ಗೆ ಹೇಳತ್ತೆ.. ಇದು ಬೇಲೆಬಲ್. ಆದರೆ ಇಲ್ಲಿ 364A ಹಾಕಲಾಗಿದೆ. ಈ ಸೆಕ್ಷನ್ ಡೆತ್ ಸೆಂಟೆನ್ಸ್ ವರೆಗೂ ಶಿಕ್ಷೆ ಆಗಿರುತ್ತದೆ. ಆದರೆ ಇಲ್ಲಿ ರೇವಣ್ಣ ವಿರುದ್ಧ ಅಂತ ಗಂಭೀರ ಆರೋಪಗಳು ಇಲ್ಲ. ಬೇರೆ ಆರೋಪಿ ಹೇಳಿದ್ದಾರೆ ಅನ್ನೋ ಅಂಶಕ್ಕೆ ಈ ರೀತಿ ಹಾಕಲಾಗಿದೆ. ರೇವಣ್ಣ ವಿರುದ್ಧ ಕಿಡ್ನಾಪ್ ಆರೋಪಕ್ಕೆ ಯಾವುದೆ ಸಾಕ್ಷಿ ಇಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿಕೊಂಡರು. ಇದನ್ನೂ ಓದಿ: ಪ್ರಜ್ವಲ್ ಅಂತಹ ಸ್ವಭಾವದ ಹುಡುಗ ಅಲ್ಲ: ಜಿ.ಎಸ್ ಬಸವರಾಜ್
ಆರೋಪಿ ಪ್ರಭಾವಿಯಾಗಿದ್ದು, ಯಾವುದೇ ಹಂತಕ್ಕೂ ಹೋಗಿ ತಿರುಚಬಹುದು ಅಂತಾ ಬರೆಯಲಾಗಿದೆ. ಲೀಗಲ್ ಸಿಸ್ಟಮ್ ನೇ ಅವರ ತಿರುಚಬಹುದೆಂದು ಉಲ್ಲೇಖಿಸಿದ್ದಾರೆ. ಮತ್ತೊಬ್ಬ ಆರೋಪಿ ಅನೇಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಇವರು ರೇವಣ್ಣನ ಬಗ್ಗೆ ಆಕ್ಷೇಪಣೆ ಸಲ್ಲಿಸಿದ್ದಾರೋ, ಅವರ ಪುತ್ರನ ಬಗ್ಗೆಯೋ.? ಎಂದು ಎಸ್ಐಟಿ ಆಕ್ಷೇಪಣೆಗೆ ರೇವಣ್ಣ ಪರ ವಕೀಲರು ಪ್ರತಿವಾದ ಮಂಡಿಸಿದರು. ಇವರು ಆಕ್ಷೇಪಣೆ ರೇವಣ್ಣನ ಬಗ್ಗೆ ಸಲ್ಲಿಸಬೇಕಿತ್ತು. ಆದರೆ ಇಲ್ಲಿ ಪ್ರಜ್ವಲ್ ರೇವಣ್ಣ ಬಗ್ಗೆ ಉಲ್ಲೇಖಿಸಿದ್ದಾರೆ. ಅಲ್ಲದೇ ಆ ಪ್ರಕರಣಕ್ಕೂ ಇದಕ್ಕೂ ಲಿಂಕ್ ಇದೆ ಎಂದಿದ್ದಾರೆ. ಇಲ್ಲಿ ಇದು ಹೇಗೆ ಅಪ್ಲೇ ಆಗತ್ತೆ ಎಂದು ರೇವಣ್ಣ ಪರ ವಕೀಲರು ವಾದಿಸಿದರು.
ಪೊಲೀಸ್ರು ಸರ್ಕಾರದ ಏಜೆಂಟ್ ಗಳಲ್ಲ. ಅದನ್ನ ಬಳಸಿ ಆರೋಪಿಗೆ ಕಿರುಕುಳ, ಟಾರ್ಚರ್ ಮಾಡುವಂತಿಲ್ಲ. ಈ ಅಂಶಗಳ ಆಧಾರದ ಮೇಲೆ ಆಗ ನಿರೀಕ್ಷಣಾ ಜಾಮೀನನ್ನ ನೀಡಿತ್ತು. ಸುಪ್ರೀಂ ಕೋರ್ಟ್ ನ ಆದೇಶದ ಅಂಶಗಳ ಉಲ್ಲೇಖ ಮಾಡಿ, ಈ ಪ್ರಕರಣದಲ್ಲಿ ಹೀಗೆ ಆಗುತ್ತಾ ಇಲ್ಲ ಎಂದು ಹೇಳಿದರು. ಇದೇ ವೇಳೆ ಬಂಧನದ ರಕ್ಷಣೆ ಕೋರಿದ ರೇವಣ್ಣ ಪರ ವಕೀಲರು, ಜಾಮೀನು ನೀಡಿದ್ರೆ ಒಂದು ಒಂದು ಕ್ಷಣ ಹೆಚ್ಚೂ, ಕಡಿಮೆ ಆಗದಂತೆ 5:30ಕ್ಕೆ ಎಸ್ ಐಟಿ ಮುಂದೆ ಇರ್ತಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಪ್ರಕರಣ ಇದೆ ಸರಿ. ಆದರೆ ಕಿಡ್ನ್ಯಾಫ್ ಪ್ರಕರಣದಲ್ಲಿ ಪ್ರಜ್ವಲ್ ಆರೋಪಿ ಅಲ್ಲ. ಎಲ್ಲರ ಗಮನ ಪ್ರಜ್ವಲ್ ರೇವಣ್ಣ ಮೇಲಿದೆ. ರೇವಣ್ಣಗೆ ಜಾಮೀನು ನೀಡಿ ಎಂದು ಕೋರ್ಟ್ಗೆ ರೇವಣ್ಣ ಪರ ವಕೀಲ ಮೂರ್ತಿ ಡಿ ನಾಯ್ಕ್ ಮನವಿ ಮಾಡಿಕೊಂಡರು.
ಎಸ್ಐಟಿ ಪರ ವಕೀಲರ ವಾದವೇನು..?: ಬಳಿಕ ಎಸ್ ಪಿ ಪಿ ಜಗದೀಶ್ ವಾದ ಮಂಡಿಸಿ, ಎಸ್ ಐಟಿ ಯ ಮೊದಲ ಆದ್ಯತೆ ಇರುವುದು ಸಂತ್ರಸ್ತೆಯನ್ನು ಹುಡುಕಾಟ ಮಾಡೋದಾಗಿದೆ. ಸಂತ್ರಸ್ತೆಯ ಸುರಕ್ಷತೆ ಮೊದಲು ಆಗಬೇಕಿದೆ. ಆಕೆ ಎಲ್ಲಿದ್ದಾಳೆ ಅನ್ನೋದು ಗೊತ್ತಾಗ್ತಾ ಇಲ್ಲ. ಸಂತ್ರಸ್ತೆಯ ಮಗ ತುಂಬಾ ಆತಂಕ ವ್ಯಕ್ತಪಡಿಸ್ತಾ ಇದ್ದಾನೆ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಆ ಬಡ ಮಹಿಳೆ ಎಲ್ಲಿದ್ದಾರೆ ಅನ್ನೋದನ್ನ ಪತ್ತೆ ಹಚ್ಚಬೇಕಿದೆ. ದುರದೃಷ್ಟಕರ ಎಂದರೆ ಈಗ ನಾಪತ್ತೆ ಆಗಿರುವ ಮಹಿಳೆಯ ಫೋಟೋ ವಿಡಿಯೋ ಬಹಿರಂಗ ಆಗಿದೆ. ಆಕೆಗೆ ಏನಾಗಿದೆ ಅನ್ನೋದು ನಮ್ಮ ಆತಂಕವಾಗಿದೆ. 2ಸಾವಿರಕ್ಕೂ ಹೆಚ್ಚು ವೀಡಿಯೋಗಳು ಎಂದು ಹೇಳಲಾಗುತ್ತಿದೆ. ಅವುಗಳಲ್ಲಿ ಒಬ್ಬರು ಈ ಅಪಹರಣಕ್ಕೆ ಒಳಗಾಗಿರುವ ಮಹಿಳೆಯಾಗಿದ್ದಾರೆ ಎಂದು ತಿಳಿಸಿದರು.
ಸಂತ್ರಸ್ತೆಯ ಮಗ ನನ್ನ ತಾಯಿ ರೇವಣ್ಣ ಅವರು ಕಿಡ್ನಾಪ್ ಮಾಡಿಸಿದ್ದಾರೆ ಅಂತ ಹೇಳಿದ್ದಾರೆ. ಪೊಲೀಸರ ಮುಂದೆ ಹೇಳಿಕೆ ನೀಡಬಾರದು, ಯಾವುದೇ ದೂರನ್ನು ಕೊಡಬಾರದು ಅಂತ ಈ ಮೊದಲೇ ಬೆದರಿಕೆ ಹಾಕಿದ್ದಾರೆ. ಪ್ರಕರಣ ದಾಖಲಾಗುವ ಮುನ್ನವೇ ಬೆದರಿಕೆ ಹಾಕಲಾಗಿದೆ. ಆ ಮಹಿಳೆ ಜೀವಂತವಾಗಿ ಇದ್ದಾಳೆ ಎಂದು ನಾವು ನಂಬಿದ್ದೇವೆ. ನಾವು ಹೆಚ್ಚಾಗಿ ಹೇಳಿದ್ರೆ ಆಕೆಗೆ ನಾವು ಮಾಡಿದ ಅವಮಾನ ಆಗುತ್ತೆ. ಹೀಗಾಗಿ ನಾನು ಆಕೆಯ ಬಗ್ಗೆ ನಾನು ಹೆಚ್ಚು ಹೇಳಿ ವಾದಿಸುವುದಿಲ್ಲ ಎಂದು ಹೇಳಿದರು.
ಒಟ್ಟಿನಲ್ಲಿ ಹೆಚ್.ಡಿ.ರೇವಣ್ಣ ಅಥವಾ ಪ್ರಜ್ವಲ್ ವಿರುದ್ಧ ಯಾವುದೇ ಮಹಿಳೆ ದೂರು ಅಥವಾ ಹೇಳಿಕೆ ನೀಡಿದ್ರೆ ಇದೇ ರೀತಿ ಆಗುತ್ತದೆ ಎಂಬ ಸಂದೇಶ ರವಾನಿಸಲು ಈ ಕಿಡ್ನಾಪ್ ಮಾಡಿಸಲಾಗಿದೆ. ಆರೋಪಿ ರಾಜಕೀಯವಾಗಿ ಹಣಕಾಸಿನಲ್ಲಿ ಬಲಾಡ್ಯ ವ್ಯಕ್ತಿ. ಸಾಕ್ಷಿಗಳ ಮೇಲೆ ಅಲ್ಲ, ದೂರುದಾರ ಮೇಲೂ ಪ್ರಭಾವ ಬೀರಲಿದ್ದಾರೆ. ಇನ್ನೂ ಪ್ರಕರಣ ಪ್ರಾಥಮಿಕ ಹಂತದಲ್ಲಿ ಇದೆ ಈ ಸಂದರ್ಭದಲ್ಲಿಯೇ ಜಾಮೀನು ನೀಡೋದು ಸೂಕ್ತ ಅಲ್ಲ. ಯುಪಿ, ಬಿಹಾರದಲ್ಲಿ ನಡೆಯುವ ರೀತಿ ಜನರನ್ನ ಎದರಿಸಲು ಈ ಹಂತಕ್ಕೆ ಆರೋಪಿಗಳು ಹೋಗಿದ್ದಾರೆ. ಜನರನ್ನ/ಸಂತ್ರಸ್ತೆಯರನ್ನ ರಕ್ಷಿಸುವುದು ಸರ್ಕಾರ/ಎಸ್ಐಟಿ ಕರ್ತವ್ಯ. ಈ ಪ್ರಕರಣಲ್ಲಿ ನಿರೀಕ್ಷಣಾ ಜಾಮೀನು ನೀಡಲು ಯೋಗ್ಯವಲ್ಲ. ಹೀಗಾಗಿ ಮಧ್ಯಂತರ ನಿರೀಕ್ಷಣಾ ಜಾಮೀನು ಕೂಡ ಮಂಜೂರು ಮಾಡಬಾರದು ಎಂದು ತಿಳಿಸಿದರು. ಬಳಿಕ ಮತ್ತೆ ರೇವಣ ಪರ ವಕೀಲರು ವಾದ ಮುಂದುವರಿಸಿದರು. ನಿರಂತರ 1 ಗಂಟೆ 40 ನಿಮಿಷಗಳ ವಾದ – ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆದೇಶವನ್ನು ಕೆಲಕಾಲ ಕಾಯ್ದಿರಿಸಿದರು.
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಕಿಡ್ನಾಪ್ ಮಾಡಿದ್ದಾರೆ ಎನ್ನಲಾದ ಮೈಸೂರಿನ ಕೆ.ಆರ್ ನಗರದ ಸಂತ್ರಸ್ತೆಯನ್ನು (K.R Nagar Victim Woman) ಇದೀಗ ರಕ್ಷಿಸಲಾಗಿದೆ.
ಮೈಸೂರು ಜಿಲ್ಲೆ ಹುಣಸೂರು ಬಳಿಯ ರೇವಣ್ಣ ಆಪ್ತನ ಕಾಳೇನಹಳ್ಳಿ ತೋಟದ ಮನೆಯಿಂದ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಎಸ್ಪಿ ಸೀಮಾ ಲಾಠ್ಕರ್ ತಂಡದಿಂದ ಮಹಿಳೆಯನ್ನು ರಕ್ಷಿಸಲಾಗಿದ್ದು, ಸದ್ಯ ಎಸ್ಐಟಿ ತಂಡ ಬೆಂಗಳೂರಿಗೆ ಕರೆತರುತ್ತಿದೆ.
ಪ್ರಕರಣ ಸಂಬಂಧ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡುವೆಯೇ ಕೆ.ಆರ್.ನಗರದ ಮಹಿಳೆಯ ಹುಡುಕಾಟ ಚುರುಕಾಗಿತ್ತು. ಮಹಿಳೆಯನ್ನು ಅಪಹರಿಸಿ ಎಲ್ಲಿ ಇಟ್ಟಿರಬಹುದು ಎಂಬ ವಿಚಾರದಲ್ಲಿ ತನಿಖೆ ಚುರುಕುಗೊಂಡಿತ್ತು. ಇದೀಗ ಸಂತ್ರಸ್ತೆ ಹಲ್ಲೆಗೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿವರೆಗೂ ಶಿರಾದಲ್ಲಿದ್ದು, ಅಲ್ಲಿಂದ ಹಣಸೂರಿಗೆ ಶಿಫ್ಟ್ ಮಾಡಲಾಗಿದೆ. ಇಂದು ಎಸ್ಐಟಿ ಅಧಿಕಾರಿಗಳು ತೋಟದ ಮನೆಗೆ ದಾಳಿ ಮಾಡುತ್ತಿದ್ದಂತೆಯೇ ಆರೋಪಿಗಳು ಎಸ್ಕೇಪ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ರೇವಣ್ಣ ಪರ ವಾದ ಮಂಡಿಸಿದ ವಕೀಲರು, ಬಲವಂತದ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದರು.
ಎಸ್ಐಟಿ ಪರವಾಗಿ ಎಸ್ಪಿಪಿ ಜಗದೀಶ್ ವಾದ ಮಂಡಿಸಿ, ಸೆಕ್ಷನ್ 376 ಸೇರ್ಪಡೆ ಮಾಡಿಲ್ಲ. 376 ಅಲ್ಲದೆ ಬೇರೆ ಯಾವುದು ನಾನ್ ಬೇಲೆಬಲ್ ಸೆಕ್ಷನ್ ಹಾಕಲ್ಲ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದರು.
ಮೈಸೂರು: ಮಗನ ಪೆನ್ಡ್ರೈವ್ ಪ್ರಕರಣದಿಂದ ಆರಂಭವಾಗಿ ಇದೀಗ ಅಪ್ಪನಿಗೂ ಸಂಕಷ್ಟ ಎದುರಾಗಿದೆ. ಪೆನ್ಡ್ರೈವ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D Revanna) ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ.
ಸಂತ್ರಸ್ತೆ ಪುತ್ರ ರೇವಣ್ಣ ಹಾಗೂ ಸತೀಶ್ ಬಾಬಣ್ಣ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಭವಾನಿ ಅಕ್ಕ ಕರೆಯುತ್ತಿದ್ದಾರೆ ಅಂತ ಬಾಬಣ್ಣ ಎಂಬಾತ ಮನೆಗೆ ಬಂದು ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ನನ್ನ ತಾಯಿ ನಾಪತ್ತೆಯಾಗಿದ್ದಾರೆ . ಪೊಲೀಸರು ಕೇಳಿದರೆ ನಮಗೇನು ಗೊತ್ತಿಲ್ಲ ಎಂದು ಹೇಳಿದ್ರು. ಬಳಿಕ ಪೊಲೀಸರ ಮೇಲೆಯೂ ಒತ್ತಡ ಹಾಕಿದ್ರು ಅಂತ ದೂರಿನಲ್ಲಿ ತಿಳಿಸಿದ್ದಾರೆ.
ಈಗಾಗಲೇ ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಬೆಳಗ್ಗೆ 11:30ಕ್ಕೆ ಈ ಅರ್ಜಿಯ ವಿಚಾರಣೆ ನಡೆಸಲಿದೆ. ಇತ್ತ ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಅರ್ಜಿಯನ್ನು ಎಸ್ಐಟಿ ಸಲ್ಲಿಕೆ ಮಾಡಿದೆ. ಒಟ್ಟಿನಲ್ಲಿ ಇಂದು ರೇವಣ್ಣಗೆ ನಿರೀಕ್ಷಣಾ ಜಾಮೀನು ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಹಾಸನ: ತಂದೆಯ ಮೇಲೆ ಸಾವಿರ ಕೇಸ್ ಹಾಕಲಿ, ಏನು ಸಾಬೀತಾಗಬೇಕೋ ಅದು ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ (Suraj Revanna) ಹೇಳಿದ್ದಾರೆ.
ತಂದೆ ರೇವಣ್ಣ (HD Revanna) ಅವರ ಮೇಲೂ ಕೇಸ್ ದಾಖಲಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಹೊಳೆನರಸೀಪುರ ಪಟ್ಟಣದಲ್ಲಿ ಮಾತನಾಡಿದ ಅವರು, ರೇವಣ್ಣ ಅವರು ಏನೆಂದು ನಮ್ಮ ಜಿಲ್ಲೆಯ ಜನರಿಗೆ ಗೊತ್ತಿದೆ. ತಾಲೂಕಿನ ಜನರಿಗೆ ಗೊತ್ತಿದೆ. ಅಂತಹ ವಿಚಾರಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎನ್ನುವ ಮೂಲಕ ತಮ್ಮ ಕುಟುಂಬದ ವಿರುದ್ಧದ ಆರೋಪಗಳ ಬಗ್ಗೆ ಕಿಡಿ ಕಾರಿದರು.
ರಾಜಕೀಯ ದುರುದ್ದೇಶದಿಂದ ಯಾರು ಏನು ಬೇಕಾದರೂ ಮಾಡುತ್ತಾರೆ. ಜಿಲ್ಲೆಯ ರಾಜಕಾರಣದಲ್ಲಿ ರೇವಣ್ಣ ಅವರಿಗೆ ಪ್ರತಿರೋಧ ಅಥವಾ ಪ್ರತಿಸ್ಪರ್ಧಿ ಇಲ್ಲ. ಅವರ ರೀತಿ ರಾಜಕಾರಣ ಮಾಡಿದವರು ಇಲ್ಲ. ಅವರನ್ನು ಸಿಲುಕಿಸಬೇಕು, ದುರ್ಬಲ ಮಾಡಬೇಕು ಎಂದು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಹೇಳಿ ತಂದೆ ಪರ ಬ್ಯಾಟಿಂಗ್ ಮಾಡಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರನ್ನು ಕಳೆದ ಜನವರಿಯಲ್ಲಿ ಅನುದಾನದ ವಿಚಾರದ ಬಗ್ಗೆ ಭೇಟಿ ಮಾಡಿದ್ದೆ. ನಾನು ಈ ಜಿಲ್ಲೆಯ ಜನಪ್ರತಿನಿಧಿಯಾಗಿದ್ದೇನೆ. ನಾನು ಭೇಟಿಯಾಗಿದ್ದನ್ನು ನೀವೇ ಚಿತ್ರಿಕರಿಸಿದ್ದೀರಿ. ಒಂದೂವರೆ ತಿಂಗಳಿನಿಂದ ಚುನಾವಣೆ ಹಿನ್ನೆಲೆಯಲ್ಲಿ ಬ್ಯುಸಿ ಇದ್ದೆ. ಇವತ್ತಿನವರೆಗೂ ಬೆಂಗಳೂರಿಗೆ ಹೋಗಿಲ್ಲ. ಹಾಗಿದ್ದಾಗ ಡಿ.ಕೆ.ಶಿವಕುಮಾರ್ ಅವರನ್ನಾಗಲೀ, ಯಾವುದೇ ರಾಜಕಾರಣಿಯನ್ನು ಭೇಟಿ ಮಾಡುವ ಸಂದರ್ಭ ಹೇಗೆ ಬರಲಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಯಾವುದೇ ಲಸಿಕೆಯ ಮೊದಲ ಆದ್ಯತೆ ಸುರಕ್ಷತೆ: ಕೋವ್ಯಾಕ್ಸಿನ್ ಅಭಿವೃದ್ಧಿಪಡಿಸಿದ ಭಾರತ್ ಬಯೋಟೆಕ್ ಹೇಳಿಕೆ
– ಹೊಂದಾಣಿಕೆ ಅಷ್ಟೇ ಸಮರ್ಥನೆಯಿಲ್ಲ, ಸಹಾಯವೂ ಇಲ್ಲ ಎಂದಿತಾ ಹೈಕಮಾಂಡ್?
– ಮಹಿಳೆಯರಿಗೆ ಅನ್ಯಾಯ ಆಗೋದನ್ನು ಬಿಜೆಪಿ ಸಹಿಸಲ್ಲ: ಅಮಿತ್ ಶಾ
ಬೆಂಗಳೂರು: ಸದ್ಯ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ (Prajwal Pendrive Case) ದೇಶವ್ಯಾಪಿಯಾಗಿ ಸದ್ದು ಮಾಡುತ್ತಿದೆ. ಈ ನಡುವೆ ಕಾನೂನು ಮೀರದಂತೆ ಬಿಜೆಪಿ ಹೈಕಮಾಂಡ್ನಿಂದ (BJP Highcommand) ಖಡಕ್ ಸಂದೇಶ ರವಾನೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹೌದು. ಎಸ್ಐಟಿ ವಿಚಾರಣೆ (SIT Investigation) ಎದುರಿಸಿ, ಕಾನೂನು ಹೋರಾಟ ಮಾಡಿಕೊಳ್ಳಿ, ಮೊದಲು ವಿದೇಶದಿಂದ ಪ್ರಜ್ವಲ್ರನ್ನ ವಾಪಸ್ ಕರೆಸಿಕೊಳ್ಳಿ ಎಂದು ಜೆಡಿಎಸ್ ವರಿಷ್ಠರಿಗೆ (JDS Leaders) ಸಂದೇಶ ನೀಡಲಾಗಿದೆ. ರಾಜಕೀಯ ಹೊಂದಾಣಿಕೆ ಅಷ್ಟೇ.. ಸಮರ್ಥನೆಯೂ ಇಲ್ಲ.. ಸಹಾಯವೂ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಕಟ್ಟುನಿಟ್ಟಿನ ವಾರ್ನಿಂಗ್ ನೀಡಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಪ್ರಜ್ವಲ್ ಪೆನ್ಡ್ರೈವ್ ಕೇಸ್- SIT ಮುಂದೆ ಸಂತ್ರಸ್ತೆಯರು ಕಣ್ಣೀರು
ಬಿಜೆಪಿ ಹೈಕಮಾಂಡ್ ಸಂದೇಶದ ಬೆನ್ನಲ್ಲೇ ಕಾನೂನು ಹೋರಾಟಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಜ್ಜಾಗುತ್ತಿದ್ದಾರೆ, ಕಾನೂನು ಹೋರಾಟದ ಬಗ್ಗೆ ದೇವೇಗೌಡರ ಜೊತೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲೇ ವಿದೇಶದಿಂದ ಪುತ್ರನ ಕರೆಸಿಕೊಳ್ಳಲು ನಿರ್ಧಾರ ಮಾಡಿರುವ ರೇವಣ್ಣ, ವಕೀಲರ ತಂಡದೊಂದಿಗೂ ಚರ್ಚೆ ಮಾಡಿದ್ದಾರೆ. ಎಸ್ಐಟಿ ವಿಚಾರಣೆಗೆ ಹಾಜರಾಗುವ ಮುನ್ನ ಕೋರ್ಟ್ ಮೊರೆ ಹೋಗುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ – ಹಾಸ್ಯನಟ ಶ್ಯಾಮ್ ರಂಗೀಲಾ
ಅಮಿತ್ ಶಾ ಹೇಳಿದ್ದೇನು?
ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾವು ಚುನಾವಣೆಗಾಗಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಆದರೆ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮಹಿಳೆಗೂ ಅನ್ಯಾಯವಾಗಲು ಬಿಜೆಪಿ ಬಿಡುವುದಿಲ್ಲ. ಸರ್ಕಾರ ನಿಮ್ಮದು, ಕ್ರಮ ತಗೆದುಕೊಳ್ಳಬೇಕಾದವರು ನೀವು. ಒಕ್ಕಲಿಗರ ಪ್ರದೇಶ ಮತದಾನ ಆಗುವವರೆಗೂ ಸುಮ್ಮನೆಯಿದ್ದು, ಎಲ್ಲವೂ ಗೊತ್ತಿದ್ದು, ಯಾವುದೇ ಕ್ರಮಕ್ಕೂ ಮುಂದಾಗದೇ, ರಾಜಕೀಯ ಉದ್ದೇಶಕ್ಕಾಗಿ ಸುಮ್ಮನಿದ್ದು, ಅವರಿಗೆ ಓಡಲು ಅವಕಾಶ ಮಾಡಿಕೊಟ್ಟವರು ನೀವು. ನಿಮಗೆ ಧೈರ್ಯವಿದ್ದರೆ ಜನರಿಗೆ ತಿಳಿಸಿ. ನಿಮ್ಮ ತಪ್ಪಿನಿಂದಾಗಿ ಮಹಾ ಅಪರಾಧವಾಗಿದೆ. ನಮ್ಮ ನಿಲುವು ಸ್ಪಷ್ಟವಾಗಿದೆ. ಈ ರೀತಿಯ ಅಪರಾಧ ಮಾಡಿದವರಿಗೆ ಕಠಿಣಾಧಿಕಠಿಣ ಶಿಕ್ಷೆ ನೀಡಬೇಕು. ನಮ್ಮ ಮೇಲೆ ನೀವು ಆರೋಪ ಮಾಡುತ್ತೀರಾ ಎಂದು ಸಿಎಂ ಹಾಗೂ ಡಿಸಿಎಂ ವಿರುದ್ಧ ಹರಿಹಾಯ್ದಿದ್ದರು.
ಹಾಸನ: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಎ1 ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರು ಸದ್ಯ ಸಂಕಷ್ಟದಿಂದ ಪಾರಾಗಲು ದೇವರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ತಮ್ಮ ಮನೆಯಲ್ಲಿ ಅಗ್ನಿಕುಂಡ ನಿರ್ಮಿಸಿ ಮನೆದೇವರಿಗೆ ವಿಶೇಷ ಪೂಜೆ (Speical Pooja) ಸಲ್ಲಿಸಿದ್ದಾರೆ.
ಬೆಳ್ಳಂಬೆಳಗ್ಗೆಯೇ ದೇವಸ್ಥಾನಕ್ಕೆ (Hassan Temple) ಭೇಟಿ ನೀಡಿದ್ದ ಮಾಜಿ ಸಚಿವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಎಲ್ಲ ಸಂಕಷ್ಟಗಳು ದೂರವಾಗಲೆಂದು ಮೆನಯಲ್ಲೇ ಅಗ್ನಿಕುಂಡ ನಿರ್ಮಿಸಿ ಹೋಮ ನೆರವೇರಿಸಿದ್ದಾರೆ. ನಂತರ ಬೆಂಗಳೂರಿಗೆ ತೆರಳಿದ್ದಾರೆ. ಇದನ್ನೂ ಓದಿ: ತಕ್ಷಣವೇ ವಿಚಾರಣೆಗೆ ಹಾಜರಾಗಿ- ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಎಸ್ಐಟಿ ನೋಟಿಸ್
ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ಮತ್ತು ಹೆಚ್ಡಿ ರೇವಣ್ಣ ಇಬ್ಬರ ವಿರುದ್ಧವೂ ದೂರು ದಾಖಲಾಗಿದೆ. ದೂರಿನ ಆಧಾರದಲ್ಲಿ ಎಫ್ಐಆರ್ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿದೆ. 2015 ರಲ್ಲಿ ಹೆಚ್.ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದಾರೆ. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಈ ಹಿನ್ನೆಲ್ಲಿ ಪ್ರಕರಣದ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡ ಇಬ್ಬರಿಗೂ ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ ಈಗಾಗಲೇ 32 ಮತ್ತು 8 ಜಿಬಿಯ ಎರಡು ಪೆನ್ಡ್ರೈವ್ಗಳನ್ನು ವಶಪಡಿಸಿಕೊಂಡಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಬೆಂಗಳೂರು: ದೇಶಾದ್ಯಂತ ಹಲ್ಚಲ್ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್ಐಟಿ ಅಂಗಳದಲ್ಲಿದೆ.
ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ಶಾಕ್ ಕೊಟ್ಟಿದ್ದಾರೆ. ಅಪ್ಪ- ಮಗನಿಗೆ ನೋಟಿಸ್ ಕೊಟ್ಟಿರುವ ಅಧಿಕಾರಿಗಳು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ.
ನೋಟಿಸ್ ಸಿಕ್ಕ ತಕ್ಷಣ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು. ಇಲ್ಲದೇ ಹೋದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್ನಲ್ಲಿಯೇ ಕಾನೂನು ಕ್ರಮದ ಎಚ್ಚರಿಕೆ ಉಲ್ಲೇಖ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರೇವಣ್ಣ ಹಾಗೂ ಪ್ರಜ್ವಲ್ ಇಂದು ವಿಚಾರಣೆಗೆ ಹಾಜರಾಗ್ತಾರಾ ಎಂಬ ಕುತೂಹಲ ಹುಟ್ಟಿದೆ. ಯಾಕೆಂದರೆ ಪ್ರಜ್ವಲ್ ಈಗಾಗಲೇ ಜರ್ಮನಿಯಲ್ಲಿದ್ದಾರೆ. ಇತ್ತ ರೇವಣ್ಣ ಕೂಡ ವಿಚಾರಣೆಗೆ ಗೈರಾಗುವ ಸಾಧ್ಯತೆಗಳೀವೆ ಎಂಬುದಾಗಿ ಮುಳಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ದೇವರಾಜೇಗೌಡಗೆ ಬಿಟ್ರೆ ʼಕೈʼ ಮುಖಂಡರಿಗೆ ನಾನು ವೀಡಿಯೋ ಕೊಟ್ಟಿಲ್ಲ: ಪ್ರಜ್ವಲ್ ಮಾಜಿ ಡ್ರೈವರ್
ಈ ನಡುವೆ ಪ್ರಕರಣಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (karnataka State Child Rights Protection Commission) ಎಂಟ್ರಿ ಕೊಟ್ಟಿದೆ. ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿಜಯ್ ಕುಮಾರ್ ಸಿಂಗ್ಗೆ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಪತ್ರ ಬರೆದಿದ್ದಾರೆ.
ಸಂತ್ರಸ್ತೆ ಒಬ್ಬರು ತನ್ನ ಮಗಳ ಜೊತೆ ಕೂಡ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದಾರೆ. ಪ್ರಕರಣದಲ್ಲಿ ಆರೋಪಿ ಅಪ್ರಾಪ್ತ ಹೆಣ್ಣು ಮಕ್ಕಳನ್ನ ಬಳಸಿಕೊಂಡಿರುವ ಬಗ್ಗೆ ಮೇಲ್ನೋಟಕ್ಕೆ ಅನುಮಾನ ಇದೆ. ಹಾಗಾಗಿ ಪ್ರಕರಣದಲ್ಲಿ ಆರೋಪಿಯಿಂದ ಅಪ್ರಾಪ್ತ ಹೆಣ್ಣು ಮಕ್ಕಳ ಬಳಕೆ ಪತ್ತೆಯಾದಲ್ಲಿ ಈ ಬಗ್ಗೆ ವರದಿ ನೀಡುವಂತೆ ಎಸ್ಐಟಿಗೆ ಪತ್ರ ಬರೆದಿದ್ದಾರೆ.
ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ (Prajwal Revanna Pendrive case) ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ (H.D Kumaraswamy) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ಡ್ರೈವ್ ಕೇಸ್ ಹಿಂದೆ ಮಹಾನಾಯಕ ಇದ್ದಾರೆ. ಆ ಮಹಾ ನಾಯಕನನ್ನು ಭೇಟಿ ಮಾಡಿದ್ಯಾರು? ಈ ಪ್ರಕರಣದ ವಿರುದ್ಧ ಕಾಂಗ್ರೆಸ್ ಮಹಾನಾಯಕರು ಪ್ರತಿಭಟನೆ ಮಾಡಿಸಿದ್ರು, ಇದನ್ನು ಇಷ್ಟಕ್ಕೆ ಬಿಡುವುದಿಲ್ಲ ಎಂದು ಅವರು ಕೆಂಡಾಮಂಡಲರಾಗಿದ್ದಾರೆ.
ನಾವು ಯಾರನ್ನೂ ರಕ್ಷಿಸುವ ಕೆಲಸ ಮಾಡುವುದಿಲ್ಲ. ಈ ವಿಚಾರವಾಗಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ಮಾತನ್ನು ಚಿಕ್ಕಪ್ಪನಾಗಿ ಹೇಳುತ್ತಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ಹೇಳುತ್ತಿದ್ದೇನೆ. ಇದು ನಾಚಿಕೆಗೇಡಿನ ವಿಷಯ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಅವರು ಕಿಡಿಕಾರಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ, ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್ ನೇತೃತ್ವದಲ್ಲಿ, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ. ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ಸಂಬಂಧ ಎಸ್ಐಟಿ ತನಿಖೆ ನಡೆಸುತ್ತಿದೆ.