Tag: HD Reveanna

  • ಆಪರೇಷನ್ ಕಮಲ ಯಶಸ್ವಿಯಾಗಲು ದೋಸ್ತಿ ಸರ್ಕಾರ ಮಾಡಿದ ತಪ್ಪುಗಳು ಪಟ್ಟಿ ಇಲ್ಲಿದೆ

    ಆಪರೇಷನ್ ಕಮಲ ಯಶಸ್ವಿಯಾಗಲು ದೋಸ್ತಿ ಸರ್ಕಾರ ಮಾಡಿದ ತಪ್ಪುಗಳು ಪಟ್ಟಿ ಇಲ್ಲಿದೆ

    ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಸರ್ಕಾರ ರಚಿಸಲು ಬಿಜೆಪಿ ಆಪರೇಷನ್ ಕಮಲ ತಂತ್ರವನ್ನು ಪ್ರಯೋಗಿಸಲು ಮುಂದಾಗಿದೆ. ಇದರ ಪರಿಣಾಮ ಪಕ್ಷೇತರರ ಶಾಸಕರಾದ ಹೆಚ್.ನಾಗೇಶ್ ಮತ್ತು ಆರ್.ಶಂಕರ್ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ವಾಪಸ್ ಪಡೆದುಕೊಂಡರು. ಸರ್ಕಾರ ರಚನೆಯಾದ ಬಳಿಕ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದುವು. ಆದರೆ ಎಲ್ಲಿಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲ ನಾಯಕರು ನಾವು ಯಾರನ್ನು ಸಂಪರ್ಕ ಮಾಡಿಲ್ಲ. ಅವರಾಗಿಯೇ ಬಂದರೆ ಸ್ವಾಗತ ಅಂತಾನೇ ಹೇಳುತ್ತಿದ್ದರು.

    ಇಬ್ಬರು ಪಕ್ಷೇತರರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ತೆಗೆದುಕೊಳ್ಳುವಂತೆ ಮಾಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಎಲ್ಲಿಯೂ ಬಿಜೆಪಿ ನಾಯಕರು ನಾವೇ ಅವರನ್ನು ಬರಮಾಡಿಕೊಂಡಿದ್ದೇವೆ ಅಂತಾ ಹೇಳಿಲ್ಲ. ಆದ್ರೆ ಯಡಿಯೂರಪ್ಪ ಮೊಗದಲ್ಲಿ ಮಂದಹಾಸ ಮೂಡಿರುವುದು ಮಾತ್ರ ಸತ್ಯ. ಸರ್ಕಾರ ರಚನೆಯ ಬಳಿಕ ಸಿಎಂ ಸೇರಿದಂತೆ ಕಾಂಗ್ರೆಸ್ ಕೆಲ ನಾಯಕರು ಗೊತ್ತೋ, ಗೊತ್ತಿಲ್ಲದ ತಪ್ಪುಗಳು ಬಿಜೆಪಿಗೆ ವರವಾಯ್ತಾ ಎಂಬ ವಿಮರ್ಶೆಗಳು ಆರಂಭವಾಗಿವೆ. ಹಾಗಾದ್ರೆ ದೋಸ್ತಿ ಸರ್ಕಾರದ ತಪ್ಪುಗಳೇನು? ಇಲ್ಲಿದೆ ಮಾಹಿತಿ. ಇದನ್ನೂ ಓದಿ: ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು ಯಾಕೆ: ಕಾರಣ ಕೊಟ್ಟ ಪಕ್ಷೇತರರು

    ಸಿದ್ದರಾಮಯ್ಯ ಮಾಡಿದ ತಪ್ಪುಗಳು:
    ಸಮನ್ವಯ ಸಮಿತಿ ಸಭೆ ಮಾಡದೇ ಇರೋದು. ಬಹಿರಂಗವಾಗಿ ಸಿಎಂಗೆ ಪತ್ರ, ಟ್ವಿಟ್ ಮೂಲಕ ಪರೋಕ್ಷ ಟೀಕೆ. ಬಳ್ಳಾರಿ ಶಾಸಕರ ಬಂಡಾಯ ಶಮನ ಮಾಡದೇ ಇದ್ದಿದ್ದು. ತನ್ನದೇ ಶಿಷ್ಯರು ಬಂಡಾಯ ಎದ್ದಾಗಲು ಸುಮ್ಮನಿದ್ದಿದ್ದು, ರಾಜ್ಯದಲ್ಲಿ ಬಂಡಾಯ ಎದ್ದಾಗಲೆಲ್ಲಾ ದೂರ ವಿದೇಶ ಪ್ರವಾಸ ಕೈಗೊಂಡಿದ್ದು, ಮೈತ್ರಿ, ಲೋಕ ಚುನಾವಣೆವರೆಗೆ ಮಾತ್ರ ಅಂತ ಅರಂಭದಲ್ಲೆ ಶಾಂತಿವನದಲ್ಲಿ ಕೂತು ಹೇಳಿಕೆ ನೀಡಿದ್ದರು.ಗಂಭೀರವಾಗಿ ಆಪರೇಶನ್ ನಡೀತಾ ಇದ್ರು `ಡೋಂಟ್ ಕೇರ್’ ಸ್ವಭಾವ ಪ್ರದರ್ಶಿಸಿದ್ದು, ನಿಗಮ ಮಂಡಳಿ ನೇಮಕ ವಿಚಾರದಲ್ಲೂ ತನ್ನದೇ ಕೈ ಮೇಲಾಗುವಂತೆ ನೋಡಿಕೊಂಡು ಅತೃಪ್ತರ ಅಸಮಾಧಾನ ಹೆಚ್ಚಾಗುವಂತೆ ಮಾಡಿದ್ದು ಆಪರೇಷನ ಕಮಲಕ್ಕೆ ಮುಂದಾಗುವಂತೆ ಮಾಡಿತು. ಸಂಪುಟ ವಿಸ್ತರಣೆ ವೇಳೆ ತನ್ನವರಿಗೆ ಪ್ರಬಲ ಖಾತೆ ಕೊಡಿಸಿದ್ದು, ಕೊನೆ ಕ್ಷಣದವರೆಗೂ ತಮ್ಮ ಶಾಸಕರು ಕೈ ಕೊಡಲ್ಲ ಅಂತ ಅತಿಯಾದ ಆತ್ಮವಿಶ್ವಾಸ ತೋರಿಸಿದ್ದು ದೋಸ್ತಿಗೆ ಕಂಟಕವಾಗಿರುವ ಸಾಧ್ಯತೆಗಳಿವೆ. ಇದನ್ನೂ ಓದಿ: ಮೈತ್ರಿ ಸರ್ಕಾರದಲ್ಲಿನ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣವೇ?

    ಸಿಎಂ ಕುಮಾರಸ್ವಾಮಿ ಮಾಡಿದ ತಪ್ಪುಗಳು:
    ಎಲ್ಲಾ ಅಧಿಕಾರ ನನಗೆ ಮತ್ತು ನಮ್ಮ ಮನೆಯವರಿಗೆ ಎಂಬ ಪರಿಪಾಠ. ಸಚಿವ ರೇವಣ್ಣ ಎಷ್ಟೇ ತಪ್ಪು ಮಾಡಿದ್ರು ಸಹೋದರನ ಪರವಹಿಸಿದ್ದರು. ಆಪರೇಷನ್ ಕಮಲ ಆಗಲ್ಲ ಅನ್ನೋ ಅತಿಯಾದ ಕಾನ್ಫಿಡೆನ್ಸ್ ಹೊಂದಿದ್ದರು. ಶತ್ರುವಿನ ಸಾಮರ್ಥ್ಯವನ್ನ ಅರಿಯದೇ ನಿರ್ಲಕ್ಷ್ಯ ತೋರಿದ್ದರು. ಸಂಪುಟ ವಿಸ್ತರಣೆ ಮುಂದೂಡುತ್ತಲೇ ಬಂದಿದ್ದು ಮತ್ತು ದೋಸ್ತಿ ಪಕ್ಷದ ವಿರುದ್ಧದ ಕೆಲ ಹೇಳಿಕೆಗಳು ನೀಡಿದ್ದರು. ಹಲವು ಬಾರಿ ಬಹಿರಂಗವಾಗಿ ತಮ್ಮ ಅಸಹಾಯಕತೆ ಪ್ರದರ್ಶಿಸಿದ್ದರು. ಇದನ್ನೂ ಓದಿ: ದೋಸ್ತಿ ಸರ್ಕಾರ ಉರುಳುತ್ತಾ? ಬಿಜೆಪಿ ಅಧಿಕಾರಕ್ಕೆ ಏರಬೇಕಾದರೆ ಏನೆಲ್ಲ ‘ಮ್ಯಾಜಿಕ್’ ನಡೆಯಬೇಕು?

    ಹೆಚ್.ಡಿ. ರೇವಣ್ಣ ಮಾಡಿದ ತಪ್ಪುಗಳು: 
    ಎಲ್ಲಾ ನಮಗೇ ಬೇಕು ಅನ್ನೋ ರೀತಿಯ ಮನೋಭಾವ. ಎಲ್ಲಾ ವಿಚಾರ ಮತ್ತು ಖಾತೆಯಲ್ಲೂ ಹಸ್ತಕ್ಷೇಪ ಮಾಡಿದ ಆರೋಪಗಳ ಜೊತೆಗೆ ಸೂಪರ್ ಸಿಎಂ ರೀತಿಯ ವರ್ತನೆ. ಕಾಂಗ್ರೆಸ್ ಶಾಸಕರಿಗೆ, ಸಚಿವರಿಗೆ ಬೆಲೆಯೇ ಕೊಡದೆ ಇದ್ದಿದ್ದು ಮತ್ತು ನಮ್ ದಾರಿ ನಮಗೆ, ನಿಮ್ ದಾರಿ ನಿಮಗೆ ಹೇಳಿಕೆ ಕೊಟ್ಟಿದ್ದು ಬಿಜೆಪಿ ವರವಾಗಿದ್ದರು ಆಗಿರಬಬುದು.

    ಡಿಕೆ ಶಿವಕುಮಾರ್ ಮಾಡಿದ ತಪ್ಪುಗಳು:
    ಅವಶ್ಯಕತೆ ಇಲ್ಲದಿದ್ದರೂ ಬೆಳಗಾವಿ ಪಾಲಿಟಿಕ್ಸ್ ಗೆ ಮೂಗು ತೂರಿಸಿದ್ದರು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‍ಗೆ ಸಪೋರ್ಟ್ ಮಾಡಿ ಬೆಳಗಾವಿ ಬ್ರದರ್ಸ್ ಬಂಡಾಯಕ್ಕೆ ದಾರಿ ಮಾಡಿಕೊಟ್ಟಿದ್ದು. ಆಪರೇಷನ್ ಕಮಲವನ್ನ ಲಘುವಾಗಿ ತೆಗೆದುಕೊಂಡಿದ್ದು, ಎಂಥಾ ಪರಿಸ್ಥಿತಿ ಬಂದ್ರೂ ನಿಭಾಯಿಸುತ್ತೇನು ಅನ್ನೋ ಅತಿಯಾದ ಆತ್ಮವಿಶ್ವಾಸ ಹೊಂದಿದ್ದು ಆಪರೇಷನ್ ಕಮಲಕ್ಕೆ ದಾರಿ ಮಾಡಿಕೊಟ್ಟಂತೆ ಕಾಣುತ್ತಿದೆ. ಬಳ್ಳಾರಿ ಉಪಚುನಾವಣೆಗೆ ಸ್ಥಳೀಯ ಶಾಸಕರ ವಿರೋಧ ಕಟ್ಟಿಕೊಂಡು ಹೊರಗಿನ ವ್ಯಕ್ತಿಗೆ ಟಿಕೆಟ್ ಕೊಡಿಸಿ, ಶಾಸಕ ನಾಗೇಂದ್ರನ ಸಹೋದರನಿಗೆ ಕಳೆದ ಎಂಪಿ ಟಿಕೆಟ್ ತಪ್ಪಿಸಿದ್ದರು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹೇಗೆ ಬೇಕೋ ಹಾಗೆ ಸುದ್ದಿ ಹಾಕಿ – ಮಾಧ್ಯಮಗಳ ವಿರುದ್ಧ ಸಿಎಂ ಕೆಂಡಾಮಂಡಲ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಶಿಪ್ ಹಾಸನಕ್ಕೆ ಹೋಗಲು ಬಿಡಲ್ಲ- ಸೂಪರ್ ಸಿಎಂಗೆ ಸತೀಶ್ ಜಾರಕಿಹೋಳಿ ಸೆಡ್ಡು

    ಕೆಶಿಪ್ ಹಾಸನಕ್ಕೆ ಹೋಗಲು ಬಿಡಲ್ಲ- ಸೂಪರ್ ಸಿಎಂಗೆ ಸತೀಶ್ ಜಾರಕಿಹೋಳಿ ಸೆಡ್ಡು

    ಬೆಳಗಾವಿ: ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ(ಕೆಶಿಪ್) ಕಚೇರಿ ಹಾಸನಕ್ಕೆ ಹೋಗಲು ನಾನು ಬಿಡುವುದಿಲ್ಲ. ನಮ್ಮಲ್ಲೇ ಹಲವು ಕೆಲಸಗಳು ಬಾಕಿ ಉಳಿದುಕೊಂಡಿವೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಮೌಖಿಕವಾಗಿ ಎಲ್ಲ ವಿಚಾರಗಳನ್ನು ತಿಳಿಸುತ್ತೇನೆ ಎಂದು ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಸೂಪರ್ ಸಿಎಂ ಹೆಚ್.ಡಿ.ರೇವಣ್ಣರಿಗೆ ಸೆಡ್ಡು ಹೊಡೆದಿದ್ದಾರೆ.

    ಕೇವಲ ಕಚೇರಿ ಸ್ಥಳಾಂತರದಿಂದ ಉತ್ತರ ಕರ್ನಾಟಕಕ್ಕೆ ಏನು ಅನ್ಯಾಯ ಆಗೋದಿಲ್ಲ. ಸ್ಥಳೀಯ ಶಾಸಕನಿಗೆ ಯಾವುದೇ ಮಾಹಿತಿ ನೀಡದೇ ಕಚೇರಿ ಸ್ಥಳಾಂತರಿಸೋದು ತಪ್ಪು. ನಮ್ಮಲ್ಲಿ ಇನ್ನು ಕೆಲಸಗಳು ನಡೆಯುತ್ತಿದ್ದು, ಹಾಗಾಗಿ ಕಚೇರಿ ಸ್ಥಳಾಂತರಿಸಲು ಬಿಡಲ್ಲ. ಈ ಬಗ್ಗೆ ಸ್ಥಳೀಯ ಶಾಸಕರ ಅಭಿಪ್ರಾಯ ಯಾಕೆ ಕೇಳಿಲ್ಲ ಅಂತಾ ಸಿಎಂ ಹಾಗೂ ಮಂತ್ರಿಗಳಿಗೆ ಪ್ರಶ್ನೆ ಮಾಡುತ್ತೇನೆ ಎಂದು ತಿಳಿಸಿದರು.

    ಸ್ಥಳೀಯ ಚುನಾವಣೆಗಳಲ್ಲಿ ಮೈತ್ರಿ ಹೊಂದಾಣಿಕೆ ಅಸಾಧ್ಯ. ಮೈತ್ರಿ ಕೇವಲ ಲೋಕಸಭೆಗೆ ಚುನಾವಣೆಗೆ ಮಾತ್ರ ಸೀಮಿತವಾಗಿದೆ. ಲೋಕಸಭೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ಇಲ್ಲಿಂದ ಯಾರು ಸ್ಪರ್ಧೆ ಮಾಡಿದರೂ ನಾನು ಬೆಂಬಲ ನೀಡುತ್ತೇನೆ. ಆದ್ರೂ ನನ್ನ ಹೆಸರು ಕೇಳಿ ಬರುತ್ತಿದ್ದು, ಅಭ್ಯರ್ಥಿ ಯಾರೆಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಸ್ಪಷ್ಟಪಡಿಸಿದ್ರು.

     

    ಹಾಸನಕ್ಕೆ ಶಿಫ್ಟ್ ಆಗುವ ಕಚೇರಿಗಳು:
    ಬೆಳಗಾವಿಯಲ್ಲಿರುವ ಕೆಶಿಪ್ ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರ ಮಾಡಲು ರಾಜ್ಯ ಸರ್ಕಾರ ಜುಲೈ 27, 2018ರಂದು ಆದೇಶ ಹೊರಡಿಸಿತ್ತು. ಬೆಳಗಾವಿ ನಗರದಲ್ಲಿರುವ ಕೆಶಿಪ್ ವಿಭಾಗದ ಮಟ್ಟದ ಕಚೇರಿಯನ್ನು ಹಾಸನಕ್ಕೆ ಹಾಗೂ ಉಪ ವಿಭಾಗೀಯ ಕಚೇರಿಯನ್ನು ಬೆಳಗಾವಿಯಿಂದ ಮಡಿಕೇರಿಗೆ ಸ್ಥಳಾಂತರಕ್ಕೆ ಸೂಚಿಸಲಾಗಿತ್ತು. ಸಕಲೇಶಪುರದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ ಕಚೇರಿಯನ್ನು ಹೊಳೆನರಸೀಪುರಕ್ಕೆ ಶಿಫ್ಟ್ ಮಾಡಲು ಹಾಗೂ ಬಸವನಬಾಗೇವಾಡಿಯ ಕೆಶಿಪ್ ಉಪವಿಭಾಗ ಕಚೇರಿಯನ್ನು ಬೇಲೂರಿಗೆ ಸ್ಥಳಾಂತರಿಸಲು ಆದೇಶಿಸಲಾಗಿತ್ತು. ಅಲ್ಲದೆ ಶಿವಮೊಗ್ಗ ಲೋಕೋಪಯೋಗಿ ವಿಶೇಷ ಉಪ ವಿಭಾಗೀಯ ಕಚೇರಿಯನ್ನು ಅರಸೀಕೆರೆಗೆ ಶಿಫ್ಟ್ ಮಾಡಲು ಸೂಚಿಸಲಾಗಿತ್ತು.

    ಜಿಲ್ಲೆಯಿಂದ ಕೆಶಿಪ್ ಕಚೇರಿಯನ್ನ ಹಾಸನಕ್ಕೆ ಸ್ಥಳಾಂತರ ಮಾಡಿರುವುದಕ್ಕೆ ಉತ್ತರ ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕರ್ನಾಟಕ ,ರಾಜ್ಯ ಹೆದ್ದಾರಿ ಯೋಜನೆಯನ್ನ ಬೆಳಗಾವಿಯಂದ ಸ್ಥಳಾಂತರ ಮಾಡಿರುವುದಕ್ಕೆ ಸೂಪರ್ ಸಿಎಂ ರೇವಣ್ಣ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಸಮ್ಮಿಶ್ರ ಸರ್ಕಾರದ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಪ್ರಭಾವದಿಂದಲೇ ಹುದ್ದೆಗಳ ಸಮೇತವಾಗಿ ಈ ಎಲ್ಲಾ ಕಚೇರಿಗಳ ಸ್ಥಳಾಂತರಕ್ಕೆ ಆದೇಶ ಹೊರ ಬಿದ್ದಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇದು ಉತ್ತರ ಕರ್ನಾಟಕದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • `ಪಬ್ಲಿಕ್’ ಇಂಪ್ಯಾಕ್ಟ್: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವು ಇಲ್ಲ- ಎಚ್‍ಡಿಕೆ ಸ್ಪಷ್ಟನೆ

    `ಪಬ್ಲಿಕ್’ ಇಂಪ್ಯಾಕ್ಟ್: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವು ಇಲ್ಲ- ಎಚ್‍ಡಿಕೆ ಸ್ಪಷ್ಟನೆ

    ಬೆಂಗಳೂರು: ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಮತ್ತು ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡುವ ವಿಚಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ.

    ಈ ಬಗ್ಗೆ ನಿಮ್ಮ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ವರದಿಗೆ ಸ್ಪಂದಿಸಿದ ಕುಮಾರಸ್ವಾಮಿ, ಬಂಡಿಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರವನ್ನು ತೆರವು ಮಾಡಬೇಕೆಂಬ ಕೋರಿಕೆಯ ಬಗ್ಗೆ ನಾನು ಪರಾಮರ್ಶಿಸಿದ್ದೇನೆ. ರಾತ್ರಿ ಸಂಚಾರವನ್ನು ತೆರವು ಮಾಡುವುದಿಲ್ಲ. ಈಗಿರುವ ನಿರ್ಬಂಧ ಮುಂದುವರಿಯಲಿದೆ ಅಂತ ಸ್ಪಷ್ಟಪಡಿಸಿದ್ದಾರೆ.  ಇದಲ್ಲದೆ ಎಲಿವೆಟೆಡ್ ರಸ್ತೆ ನಿರ್ಮಾಣ ಕಾರ್ಯಸಾಧುವಲ್ಲ ಎಂದೂ ತೀರ್ಮಾನಿಸಿದ್ದೇನೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುಮತಿ- ಕೇರಳದ ಲಾಬಿಗೆ ಮಣಿದ್ರಾ ಸಿಎಂ? ಏನಿದು ವಿವಾದ?

    ಈ ಬಗ್ಗೆ ಶುಕ್ರವಾರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಸುದ್ದಿಗಾರರ ಪ್ರಶ್ನೆಗೆ ಗರಂ ಆಗಿ ಉತ್ತರಿಸಿದ್ದರು. ಬಂಡೀಪುರ ಅರಣ್ಯ ಪ್ರದೇಶದ ಕುರಿತಾಗಿ ಸರ್ಕಾರದ ನಿರ್ಧಾರ ಏನು ಎಂದು ಪ್ರಶ್ನಿಸಿದಕ್ಕೆ ಸಿಡಿಮಿಡಿಗೊಂಡ ಅವರು, ಸುಪ್ರೀಂ ಕೋರ್ಟ್ ನಿಂದ ಆದೇಶ ಹೊರ ಬರದೇ ನಾನು ವೈಯಕ್ತಿಕವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಮ್ಮ ಹಿಂದಿನ ಹೇಳಿಯನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದರು. ಇದನ್ನೂ ಓದಿ:  ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶವಿಲ್ಲ: ಸಚಿವ ಆರ್ ಶಂಕರ್

    ಸುಪ್ರೀಂ ಕೋರ್ಟ್, ಅರಣ್ಯ ಹಾಗೂ ಪರಿಸರ ಇಲಾಖೆ ಸೇರಿ ಒಪ್ಪಿಗೆ ನೀಡದೇ ನಾನು ಒಪ್ಪಿಕೊಂಡರೆ ಸಮಸ್ಯೆ ಇತ್ಯರ್ಥ ಆಗುವುದಿಲ್ಲ. ನಾನು ಹೀಗೆ ತೀರ್ಪು ನೀಡಿ ಅಂತಾ ಸುಪ್ರೀಂ ಕೋರ್ಟ್ ಗೆ ಹೇಳಲು ಬರುವುದಿಲ್ಲ. ರಸ್ತೆ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಕೊಟ್ಟರೆ ಬೇಡ ಅಂತಾ ಹೇಳುವುದಕ್ಕೆ ನಾನು ಯಾರು? ಆದರೆ ಪತ್ರದ ಬಗ್ಗೆ ನನಗೆ ಕೇಳಬೇಡಿ, ಮುಖ್ಯ ಕಾರ್ಯದರ್ಶಿಗಳನ್ನು ವಿಚಾರಿಸಿ ಎಂದು ಹೇಳಿದ್ದರು. ಇದನ್ನೂ ಓದಿ: ಅಣ್ಣ ಬಂಡೀಪುರದಲ್ಲಿ ಫ್ಲೈಓವರ್ ಬಗ್ಗೆ ಮಾತನಾಡಿದ್ರೆ, ತಮ್ಮ ಇಲ್ಲ ಅಂದ್ರು!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಏನೇ ವರದಿ ಬಿತ್ತರಿಸಿದ್ರೂ ನಾನು ಪ್ರತಿಕ್ರಿಯೆ ನೀಡಲ್ಲ: ಪಬ್ಲಿಕ್ ಟಿವಿ ವರದಿಗೆ ರೇವಣ್ಣ ಕೆಂಡಾಮಂಡಲ

    ಏನೇ ವರದಿ ಬಿತ್ತರಿಸಿದ್ರೂ ನಾನು ಪ್ರತಿಕ್ರಿಯೆ ನೀಡಲ್ಲ: ಪಬ್ಲಿಕ್ ಟಿವಿ ವರದಿಗೆ ರೇವಣ್ಣ ಕೆಂಡಾಮಂಡಲ

    ಬೆಂಗಳೂರು: ಇಂದು ಬೆಳಗ್ಗೆ ನಿಮ್ಮ ಪಬ್ಲಿಕ್ ಟಿವಿ ಬಿತ್ತರಿಸಿದ್ದ ವರದಿಗೆ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಕೋಪಗೊಂಡಿದ್ದಾರೆ.

    ವಾಸ್ತು ಪ್ರಕಾರದಲ್ಲಿ ಕುಮಾರಕೃಪಾ ಕಟ್ಟಡದ ನವೀಕರಣ ಕಾರ್ಯ ನಡೆಯುತ್ತಿದ್ದು, ಕಟ್ಟಡದ ಅನಗತ್ಯ ನೀರು ರಸ್ತೆಗೆ ಹರಿಯುವಂತೆ ಮಾಡಲಾಗಿದೆ. ಈ ವಿಚಾರವನ್ನು ಇಟ್ಟುಕೊಂಡು ವರದಿ ಮಾಡಿದ್ದಕ್ಕೆ ಅದನ್ನೆಲ್ಲಾ ಕೇಳೊಕೆ ನೀವ್ಯಾರೋ? ನಾನು ನಿಮಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ. ನನ್ನ ಮತ ನೀಡಿ ಬಂದ ಜನರಿಗೆ ಉತ್ತರ ನೀಡುತ್ತೇನೆ. ಕೆಲ ಪತ್ರಿಕೆ ನನ್ನ ಬಗ್ಗೆ ಬರೆದರೂ ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಪಬ್ಲಿಕ್ ಟಿವಿ ಏನೇ ವರದಿ ಬಿತ್ತರಿಸಿದ್ರೂ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದ್ದಾರೆ.

    ಮಳೆಯಾದರೆ ಕುಮಾರಕೃಪಾ ಮುಂದೆ ಮಳೆನೀರು ನಿಂತುಕೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮನೆಯ ಮುಂದಿನ ನೀರನ್ನು ರಸ್ತೆಗೆ ತಿರುಗಿಸಿದ್ದಾರೆ. ಮಳೆಯ ನೀರು ಮತ್ತು ಕಟ್ಟಡದ ಕೊಳಚೆ ನೇರವಾಗಿ ರಸ್ತೆಯ ಮೇಲೆ ಹರಿಯುವ ಸಾಧ್ಯತೆಗಳಿವೆ. ಇದರಿಂದ ಸಹಜವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಆಗಲಿದೆ.

    ಅತಿ ಹೆಚ್ಚಾಗಿ ಜೋತಿಷ್ಯ ನಂಬುವ ಸಚಿವರು ಸಾರ್ವಜನಿಕರ ಹಣದಲ್ಲಿ ಸರ್ಕಾರದ ಕಟ್ಟಡವನ್ನು ತಮಗೆ ಅನುಕೂಲವಾಗುವಂತೆ ಮಾಡಿಕೊಳ್ಳುತ್ತಿರೋದು ಇದೀಗ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಕೊಳಚೆ ನೀರನ್ನು ರಸ್ತೆಗೆ ಹರಿಸುವ ಮೂಲಕ ಕೇವಲ ತಮ್ಮ ಸುರಕ್ಷತೆ ನೋಡಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

    ಶಿವಾನಂದ ಸರ್ಕಲ್ ಬಳಿ ಇರುವ ಕುಮಾರಕೃಪಾ ಕಟ್ಟಡವನ್ನು ಹೆಚ್.ಡಿ.ರೇವಣ್ಣರಿಗೆ ನೀಡಲಾಗಿದೆ. ಸದ್ಯ ಆಷಾಢ ಮಾಸ ಆಗಿರೋದ್ರಿಂದ ಕಟ್ಟಡಕ್ಕೆ ಪ್ರವೇಶ ನೀಡಿಲ್ಲ. ಆಷಾಢ ಕಳೆಯುತ್ತಿದ್ದಂತೆ ಶ್ರಾವಣ ಮಾಸದ ಆರಂಭದಲ್ಲಿ ಸಚಿವರು ಕುಮಾರಕೃಪಾಕ್ಕೆ ಪ್ರವೇಶಿಸಲಿದ್ದಾರೆ.

    ಸಚಿವ ರೇವಣ್ಣರಿಗೆ ಪಬ್ಲಿಕ್ ಟಿವಿ ಪ್ರಶ್ನಾವಳಿ:
    1. ನೀವು ಸರ್ಕಾರಿ ದುಡ್ಡಲ್ಲಿ ವಾಸ್ತು ಪ್ರಕಾರ ಮನೆ ನವೀಕರಣ ಮಾಡುತ್ತಿಲ್ವಾ?
    2. ಚರಂಡಿ ನೀರು ರಸ್ತೆಗೆ ಬಿಟ್ಟು ಜನರಿಗೆ ಕಿರಿಕಿರಿ ಮಾಡುತ್ತಿಲ್ವಾ?
    3. ಪಬ್ಲಿಕ್ ಟಿವಿ ನಿಮ್ಮ ಮೇಲೆ ಸುಖಾಸುಮ್ಮನೆ ವರದಿ ಮಾಡಿಲ್ಲ. ದೃಶ್ಯ ಸಾಕ್ಷಿ ಸಮೇತ ನಿಮ್ಮ ಮುಂದಿಟ್ಟಿದ್ದು ಸುಳ್ಳಾ?
    4. ನೀವು ಸಚಿವರಾದ ಮಾತ್ರಕ್ಕೆ ಪ್ರಶ್ನಾತೀತರೇ?

  • ಮುಜರಾಯಿ ಇಲಾಖೆಗೆ ಇಬ್ಬಿಬ್ರು ಮಿನಿಸ್ಟರ್- ಇಲ್ಲಿ ಇವ್ರದ್ದೇ ಹವಾ!

    ಮುಜರಾಯಿ ಇಲಾಖೆಗೆ ಇಬ್ಬಿಬ್ರು ಮಿನಿಸ್ಟರ್- ಇಲ್ಲಿ ಇವ್ರದ್ದೇ ಹವಾ!

    ಬೆಂಗಳೂರು: ಮುಜರಾಯಿ ಇಲಾಖೆಯಲ್ಲಿ ಈಗ ಇಬ್ಬರು ಮಿನಿಸ್ಟರ್. ಕೆಲವೊಮ್ಮೆ ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿಗೆ ನಮ್ ಮಿನಿಸ್ಟರ್ ಯಾರಪ್ಪ ಅನ್ನೋ ಕನ್‍ಫ್ಯೂಶನ್ ಶುರುವಾಗಿದೆ ಎಂದು ಹೇಳಲಾಗುತ್ತಿದೆ.

    ಹೌದು. ಸಚಿವ ರಾಜಶೇಖರ್ ಪಾಟೀಲ್ ಅವರಿಗಿಂತ ಮುಜರಾಯಿ ಇಲಾಖೆಯ ಬಗ್ಗೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರಂತೆ. ಅಷ್ಟೇ ಅಲ್ಲದೇ ಎಚ್.ಡಿ.ರೇವಣ್ಣ ಮುಜರಾಯಿ ಸಚಿವರಗಿಂತ ಮೊದಲೇ ಅಧಿಕಾರಿಗಳ ಅನೌಪಚಾರಿಕ ಮೀಟಿಂಗ್ ಬೇರೆ ಮಾಡಿದ್ದಾರಂತೆ. ಎಲ್ಲಾ ದೇವಾಲಯದ ಆದಾಯದ ವಿವರ, ಅಲ್ಲಿನ ಅರ್ಚಕರಿಗೆ ಕೊಡುತ್ತಿರುವ ವೇತನದ ಬಗ್ಗೆ ಲಿಸ್ಟ್ ತರುವಂತೆ ಆದೇಶಿಸಿದ್ದಾರೆ ಎನ್ನಲಾಗಿದೆ.

    ಎಲ್ಲ ನಾಯಕರಿಗಿಂತ ಸ್ವಲ್ಪ ಹೆಚ್ಚು ದೈವ ಭಕ್ತರಾಗಿರುವ ರೇವಣ್ಣ, ಕೆಲ ಆಪ್ತ ಮುಜರಾಯಿ ಅರ್ಚಕರ ವೇತನ ಹೆಚ್ಚಿಸಲು ಜೊತೆಗೆ ಹಾಸನ ಕಡೆಯ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ಪಡೆಯೋಕೆ ಹೀಗೆಲ್ಲ ಕೆಲಸ ಮಾಡುತ್ತಿದ್ದಾರೆ ಅನ್ನೋ ಗುಸು ಗುಸು ಸುದ್ದಿಯೂ ಹರಿದಾಡುತ್ತಿದೆ. ಎಲ್ಲರ ಲಿಸ್ಟ್ ಹಿಡ್ಕೊಂಡು ಬನ್ನಿ ಮತ್ತೆ ಸಭೆ ಮಾಡ್ತೀನಿ ಅಂತಾ ಅಧಿಕಾರಿಗಳಿಗೆ ಎಚ್.ಡಿ.ರೇವಣ್ಣ ಸೂಚನೆ ನೀಡಿದ್ದಾರೆ ಅಂತ ಮುಜರಾಯಿ ಉನ್ನತ ಇಲಾಖೆಯ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

  • ಸರ್ಕಾರಿ ಬಂಗಲೆಗಳಲ್ಲಿ ಇರಲೇಬೇಡಿ- ಮಕ್ಕಳಿಬ್ಬರಿಗೆ ದೇವೇಗೌಡರ ಸಲಹೆ

    ಸರ್ಕಾರಿ ಬಂಗಲೆಗಳಲ್ಲಿ ಇರಲೇಬೇಡಿ- ಮಕ್ಕಳಿಬ್ಬರಿಗೆ ದೇವೇಗೌಡರ ಸಲಹೆ

    ಬೆಂಗಳೂರು: ಯಾವುದೇ ಕಾರಣಕ್ಕೂ ಸರ್ಕಾರಿ ಬಂಗಲೆಗಳು ಬೇಡವೇ ಬೇಡ. ಸರ್ಕಾರಿ ಬಂಗಲೆಗಳ ವಾಸ್ತು ಸರಿ ಇಲ್ಲ, ಅಲ್ಲಿ ವಾಸ್ತವ್ಯ ಮಾಡೋದು ಬೇಡ ಅಂತಾ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಕ್ಕಳಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಹೆಚ್.ಡಿ.ರೇವಣ್ಣ ಅವರಿಗೆ ಸಲಹೆ ನೀಡಿದಾರಂತೆ.

    ನಮ್ಮ ಮನೆಗಳಲ್ಲಿ ವಾಸ್ತು ಚೆನ್ನಾಗಿದೆ ಅಲ್ಲೇ ಇರಿ ಅಂತಾ ಮಕ್ಕಳಿಗೆ ಗೌಡರು ಸಲಹೆ ನೀಡಿದ್ದು, ಆದರೆ ಹಾಲಿ ಇರುವ ಖಾಸಗಿ ನಿವಾಸಗಳಲ್ಲಿ ಜನರು, ಕಾರ್ಯಕರ್ತರನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮತ್ತು ರೇವಣ್ಣ ವಾಸ್ತು ಸರಿ ಇರುವಂತಹ ದೊಡ್ಡ ಬಂಗಲೆಗಳನ್ನು ಹುಡುಕುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಈ ಹಿಂದೆ ದೇವೇಗೌಡರು ಸಿಎಂ ಆಗಿದ್ದಾಗ ಸರ್ಕಾರಿ ಬಂಗಲೆ ಅನುಗ್ರಹದಲ್ಲಿದ್ದರು. ಬಳಿಕ ಅದೇ ಅನುಗ್ರಹ ನಿವಾಸದಲ್ಲಿ ವಸತಿ ಸಚಿವರಾಗಿದ್ದಾಗ ರೇವಣ್ಣ ಸಹ ವಾಸವಿದ್ದರು. ಇನ್ನು 2006ರಲ್ಲಿ ಸಿಎಂ ಆದಾಗ ಹೆಚ್.ಡಿ.ಕುಮಾರಸ್ವಾಮಿ ಕೂಡ ಅನುಗ್ರಹದಲ್ಲಿ ನಿವಾಸದಲ್ಲಿಯೇ ವಾಸವಾಗಿದ್ದರು. ಇದನ್ನೂ ಓದಿ: ಅದೃಷ್ಟದ ಮನೆ ತೊರೆಯಲು ಮುಂದಾದ ಸಿದ್ದರಾಮಯ್ಯ!

    ಸರ್ಕಾರಿ ಬಂಗಲೆಗೆ ಬೇಡಿಕೆ : ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ವಾಸ್ತವ್ಯಕ್ಕೆ ರೇಸ್‍ಕೋರ್ಸ್ ರಸ್ತೆಯಲ್ಲಿರುವ ‘ರೇಸ್ ವ್ಯೂ ಕಾಟೇಜ್’ ಹಂಚಿಕೆ ಮಾಡುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಅವರಿಗೆ ಪತ್ರ ಬರೆದಿದ್ದಾರೆ. ಈ ಹಿಂದೆ ಮಾಜಿ ಸಚಿವ ರಮಾನಾಥ್ ರೈ ಇದೇ ನಿವಾಸದಲ್ಲಿ ವಾಸವಾಗಿದ್ದರು. ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಮಾನಾಥ ರೈ ಸೋತಿರುವ ಕಾರಣ ಆರು ತಿಂಗಳಲ್ಲಿ ರೇಸ್ ವ್ಯೂ ಕಾಟೇಜ್ ಖಾಲಿ ಮಾಡಬೇಕಿದೆ.

    2004ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾಗ ಯಡಿಯೂರಪ್ಪ ಇದೇ ನಿವಾಸದಲ್ಲಿ ವಾಸವಾಗಿದ್ದರು. ನಂತರ ಇದೇ ಮನೆಯಲ್ಲಿಯೇ ಇದ್ದಾಗ ಉಪ ಮುಖ್ಯಮಂತ್ರಿ ಮತ್ತು ಸಿಎಂ ಸ್ಥಾನಕ್ಕೆ ಏರಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪರಿಗೆ ‘ರೇಸ್ ವ್ಯೂ ಕಾಟೇಜ್’ ಅದೃಷ್ಟ ಮನೆ ಎಂದು ಹೇಳಲಾಗುತ್ತಿದೆ.