Tag: Head Bush

  • ಒಂದ್ ಬೆಣ್ಣೆ, ಒಂದು ಖಾಲಿ ದೋಸೆ ತಿಂದ ರಮ್ಯಾ: ಮತ್ತೊಂದು ತಿನ್ನಲು ಡಯಟ್ ಅಡ್ಡಿ

    ಒಂದ್ ಬೆಣ್ಣೆ, ಒಂದು ಖಾಲಿ ದೋಸೆ ತಿಂದ ರಮ್ಯಾ: ಮತ್ತೊಂದು ತಿನ್ನಲು ಡಯಟ್ ಅಡ್ಡಿ

    ಸ್ಯಾಂಡಲ್ ವುಡ್ ಕ್ವೀನ್ ಎಂದೇ ಖ್ಯಾತಿಯ ನೂರಾರು ಸಿನಿಮಾಗಳಲ್ಲಿ ಮಿಂಚಿ ಸಿನಿಮಾ ರಂಗದಿಂದ ಅಂತರ ಕಾಯ್ದುಕೊಂಡಿದ್ದ ನಟಿ ರಮ್ಯಾ (Ramya) ದಿಢೀರ್ ದಾವಣಗೆರೆಯಲ್ಲಿ ಕಾಣಿಸಿಕೊಂಡರು. ‘ಹೆಡ್ ಬುಷ್’ ಸಿನಿಮಾ ಪ್ರಿ ರಿಲೀಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸ್ಯಾಂಡಲ್ ವುಡ್ ನ ಮೊಹಕ ತಾರೆ ರಮ್ಯಾ ದಾವಣಗೆರೆಗೆ ಭೇಟಿ ನೀಡಿ ಬೆಣ್ಣೆ ದೋಸೆ ಸವಿದರು.

    ದಾವಣಗೆರೆಯಲ್ಲಿ (Davangere) ಮೋಹಕತಾರೆ ರಮ್ಯಾ ದಿಢೀರ್ ಕಾಣಿಸಿಕೊಂಡರು, ವಿವಿಧ ಸಿನಿಮಾಗಳಲ್ಲಿ ನಟಿಸಿ ಪಡ್ಡೆಯುವಕರ ನಿದ್ದೆಗೆಡಿಸಿದ್ದ ನಟಿ ರಮ್ಯಾ ದಾವಣಗೆರೆಯ ಪ್ರಸಿದ್ದ ಗುರು ಕೊಟ್ಟೂರೇಶ್ವರ ಬೆಣ್ಣೆದೋಸೆ (Butter Dosa) ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದರು.  ಕಳೆದ ದಿನ ದಾವಣಗೆರೆಯಲ್ಲಿ ನಡೆದ ನಟ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ (Head Bush)ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ನೆರೆದಿದ್ದ ಅಭಿಮಾನಿಗಳ ಕಣ್ಣಿಗೆ ಕುಕ್ಕುವಂತೆ ಕಾಣಿಸಿಕೊಂಡರು. ಇನ್ನು ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ದಾವಣಗೆರೆಯ ಖಾಸಗಿ ಹೋಟೆಲ್ ನಲ್ಲಿ ಉಳಿದುಕೊಂಡು ಬಳಿಕ ಬೆಳಗಿನ ಉಪಹಾರ ಸೇವಿಯಲು ಅಭಿಮಾನಿಗಳ ಸಲಹೆಯಂತೆ ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ಗೆ ಭೇಟಿ ನೀಡಿ ಗರಿಗರಿ ಬೆಣ್ಣೆ ದೋಸೆ ಸವಿದರು. ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ

    ರಮ್ಯಾ ಬಂದಿದ್ದಾರೆ ಎಂಬ ಸುದ್ದಿ ಹಬ್ಬಿದಂತೆ ಅಭಿಮಾನಿಗಳು ಹಾಗೂ ಪಡ್ಡೆ ಯುವಕರು ಕಿಕ್ಕಿರಿದು ಸೇರಿದ್ದರು. ಇನ್ನು ಕೆಲ ಚಿರ ಯುವಕರು, ಹಾಗು ಕ್ಯೂಟ್ ಹುಡುಗಿಯರು ಸೆಲ್ಫಿಗೆ ಫೋಸ್ ನೀಡಿದರು. ಕೆಲವು ಅಭಿಮಾನಿಗಳು ಗುಂಪು ಗುಂಪಾಗಿ ಸೆಲ್ಫಿಗಾಗಿ ಮುಗಿ ಬಿದ್ದ ದೃಶ್ಯಗಳು ಕಂಡುಬಂದವು.  ಕೆಲವರು ಹರಸಾಹಸ ಪಟ್ಟು ಸೆಲ್ಫಿಗೆ ಪ್ರಯತ್ನಿಸಿ ಸೆಲ್ಫಿ ಸಿಗದೆ ನಿರಾಸೆಯಾದ್ರು,

     

    ದಾವಣಗೆರೆಯ ಬೆಣ್ಣೆ ದೋಸೆ ಸವಿದ ಸ್ಯಾಂಡಲ್ ವುಡ್  ಕ್ವೀನ್ ರಮ್ಯಾ ಸಂತಸ ವ್ಯಕ್ತಪಡಿಸಿದರು. ದಾವಣಗೆರೆ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಗುರು ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ನಲ್ಲಿ ಬೆಣ್ಣೆ ದೋಸೆ ಸವಿದ ಬಳಿಕ ಮಾತನಾಡಿದ ಅವರು ನಿನ್ನೆ ಹೆಡ್ ಬುಷ್ ಸಿನಿಮ ಪ್ರೀ ರೀಲಿಸ್ ವೇದಿಕೆಯಲ್ಲಿ ಹೇಳಿದ್ದ. ವೇದಿಕೆಯಲ್ಲು ಜನ ಗುರು ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ನಲ್ಲಿ ಬೆಣ್ಣೆ ದೋಸೆ ಸವಿಯಿರಿ ಎಂದಿದ್ದರು. ಅದರಂತೆ ಬೆಣ್ಣೆ ದೋಸೆ ಸವಿದಿದ್ದೇನೆ. ಬೆಣ್ಣೆದೋಸೆ ತುಂಬಾ ಟೇಸ್ಟಿಯಾಗಿದೆ. ಇಲ್ಲಿ ಬಳಕೆ ಮಾಡುವ ಬೆಣ್ಣೆ‌ ಹಳ್ಳಿ ಬೆಣ್ಣೆ ಬಳಕೆ ಮಾಡ್ತಾರೆ. ಇನ್ನು ಬೆಣ್ಣೆ ದೋಸೆಯನ್ನು ಪಾರ್ಸಲ್ ತಿಂದ್ರೆ ಅಷ್ಟು ಚೆನ್ನಾಗಿರೋಲ್ಲ, ಸೋ ಅದಕ್ಕೆ ಹೋಟೆಲ್ ಗೆ ಬಂದು ಒಂದು ಬೆಣ್ಣೆ ಒಂದು ಖಾಲಿ ಎರಡು ದೋಸೆ ತಿಂದೆ, ತುಂಬಾ ರುಚಿಯಾಗಿದೆ  ಎಂದು ನಟಿ ರಮ್ಯಾ ದಾವಣಗೆರೆ ಜನತೆಗೆ ಧನ್ಯವಾದಗಳು ತಿಳಿಸಿದರು.

    ಗುರು ಕೊಟ್ಟೂರೇಶ್ವರ ಬೆಣ್ಣೆದೋಸೆ ಹೋಟೆಲ್ ಗೆ ನಟಿ ರಮ್ಯಾ ಬಂದಿದ್ದಾರೆ ಎಂಬ ಸುದ್ದಿ ತಿಳಿದ ಅಭಿಮಾನಿಗಳು ಹೊಟೇಲ್ ಮುಂದೆ ಜಮಾಯಿಸಿದ್ದರಿಂದ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು.‌ ಇದರಿಂದ ವಾಹನ ಸವಾರರಿಗೆ ಟ್ರಾಫಿಕ್‌ ಕಿರಿಕಿರಿ ಅನುಭವಿಸುವಂತಾಯಿತು. ಇನ್ನು ಟ್ರಾಫಿಕ್ ಜಾಮ್‌ ಕ್ಲಿಯರ್ ಮಾಡಲು ಸಂಚಾರಿ ಪೋಲಿಸರು ಹರಸಾಹಸ ಪಡುವಂತಾಯಿತು. ಇನ್ನು ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ಭಾಗಿಯಾಗಿ ಅಪ್ಪು ಅಪ್ಪು ಎಂದು ಘೋಷಣೆ ಹಾಕಿದರು.

    Live Tv
    [brid partner=56869869 player=32851 video=960834 autoplay=true]

  • ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ (Ramya) ನಿನ್ನೆ ದಾವಣಗೆರೆಯಲ್ಲಿ ನಡೆದ ಹೆಡ್ ಬುಷ್ (Head Bush) ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅತಿಥಿಯಾಗಿ ಭಾಗಿಯಾಗಿದ್ದ ರಮ್ಯಾ ವೇದಿಕೆಯ ಮೇಲೆ ‘ನಾನು ದಾವಣಗೆರೆಗೆ ಬಂದಿದ್ದೇನೆ. ಇಲ್ಲಿನ ಫೇಮಸ್ ದೋಸೆಯನ್ನು ತಿಂದೇ ಹೋಗುತ್ತೇನೆ’ ಎಂದು ಅಭಿಮಾನಿಗಳಿಗೆ ಮಾತು ಕೊಟ್ಟಿದ್ದರು. ಮಾತು ಕೊಟ್ಟಂತೆ ನಡೆದುಕೊಂಡಿದ್ದಾರೆ ರಮ್ಯಾ. ಇಂದು ದಾವಣಗೆರೆಯಲ್ಲಿ ಬೆಣ್ಣೆ ದೋಸೆ (Butter Dose) ಸವಿದಿದ್ದಾರೆ.

    ದಾವಣಗೆರೆಯ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಗುರು ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ಗೆ ಆಗಮಿಸಿದ ರಮ್ಯಾ, ಡಬಲ್ ಬೆಣ್ಣೆದೋಸೆಗೆ ಆರ್ಡರ್ ಮಾಡಿದ್ದಾರೆ. ರಮ್ಯಾ ಕಂಡು ಖುಷಿಗೊಂಡ ಹೋಟೆಲ್ ಮಾಲೀಕರು ರಮ್ಯಾಗೆ ಸ್ಪೆಷಲ್ ಎನ್ನುವಂತೆ ದೋಸೆ ಮಾಡಿಕೊಟ್ಟಿದ್ದಾರೆ. ರಮ್ಯಾ ಜೊತೆ ನಿರ್ಮಾಪಕ ಕಾರ್ತಿಕ್ ಗೌಡ (Karthik Gowda) ಕೂಡ ಆಗಮಿಸಿದ್ದರು. ಇಬ್ಬರೂ ಹೊಟ್ಟೆ ತುಂಬುವಷ್ಟು ಬೆಣ್ಣೆ ದೋಸೆ ಸವಿದಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ರಮ್ಯಾ ಸಿನಿಮಾ ಸಂಬಂಧಿ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅದರಲ್ಲೂ ಕೆ.ಆರ್.ಜಿ ಸಂಸ್ಥೆಯ ಜೊತೆ ಹಲವು ಪ್ರಾಜೆಕ್ಟ್ ಗಳನ್ನು ಕೈಗೆತ್ತಿಕೊಳ್ಳಲು ಚಿಂತನೆ ನಡೆಸಿದ್ದಾರೆ. ಹೀಗಾಗಿಯೇ ಕೆ.ಆರ್.ಜಿ ಪ್ರೊಡಕ್ಷನ್ ನಲ್ಲಿ ಮೂಡಿ ಬರುತ್ತಿರುವ ಸಿನಿಮಾಗಳ ಚಿತ್ರೀಕರಣ ಸ್ಥಳಕ್ಕೂ ರಮ್ಯಾ ಹೋಗುತ್ತಿದ್ದಾರೆ. ಹೊಯ್ಸಳ ಸಿನಿಮಾ ಕೆ.ಆರ್.ಜಿ ಪ್ರೊಡಕ್ಷನ್ ಲಾಂಛನದಲ್ಲಿ ಮೂಡಿ ಬರುತ್ತಿದೆ. ಇದರ ಹೀರೋ ಧನಂಜಯ್. ಇದನ್ನೂ ಓದಿ:ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ

    ಡಾಲಿ ಧನಂಜಯ್ (Dhananjay) ನಿರ್ಮಾಣ ಮತ್ತು ನಾಯಕನಾಗಿ ನಟಿಸುತ್ತಿರುವ ಹೆಡ್ ಬುಷ್ ಸಿನಿಮಾಗೂ ರಮ್ಯಾ ಅನೇಕ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅದರ ಭಾಗವಾಗಿ ದಾವಣಗೆರೆಯ (Davangere) ಪ್ರಿ ಇವೆಂಟ್ ರಿಲೀಸ್ ಕಾರ್ಯಕ್ರಮಕ್ಕೂ ಅವರು ಹಾಜರಾಗಿದ್ದಾರೆ. ನಿನ್ನೆ ಕಾರ್ಯಕ್ರಮ ಮುಗಿಸಿ, ಇವತ್ತು ದೋಸೆ ತಿಂದು ಬೆಂಗಳೂರಿನತ್ತ ಪ್ರವಾಸ ಬೆಳೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಧನಂಜಯ್ ನಟನೆಯ ಮತ್ತೊಂದು ಸಿನಿಮಾ ರಿಲೀಸ್ ಘೋಷಣೆ : ವರ್ಷದ ಅತೀ ಹೆಚ್ಚು ಸಿನಿಮಾ ರಿಲೀಸ್ ಆದ ನಟ ಡಾಲಿ

    ಧನಂಜಯ್ ನಟನೆಯ ಮತ್ತೊಂದು ಸಿನಿಮಾ ರಿಲೀಸ್ ಘೋಷಣೆ : ವರ್ಷದ ಅತೀ ಹೆಚ್ಚು ಸಿನಿಮಾ ರಿಲೀಸ್ ಆದ ನಟ ಡಾಲಿ

    ವರ್ಷದಲ್ಲಿ ಅತೀ ಹೆಚ್ಚು ಸಿನಿಮಾಗಳು ರಿಲೀಸ್ ಆದ ನಟನಾಗಿ ಧನಂಜಯ್ ಹೊರ ಹೊಮ್ಮಿದ್ದಾರೆ. ಈವರೆಗೂ ಸಿಕ್ಕ ಮಾಹಿತಿಯಂತೆ ಧನಂಜಯ್ ಅವರ ಸಿನಿಮಾಗಳು ಅಂದಾಜು ಎರಡು ತಿಂಗಳಿಗೆ ಒಂದರಂತೆ ರಿಲೀಸ್ ಆಗಲಿವೆ. ಈಗಾಗಲೇ ವರ್ಷದ ಫಸ್ಟ್ ಆಫ್ ಮುಗಿದಿದ್ದು, ಸೆಕೆಂಡ್ ಆಫ್ ನಲ್ಲಿ ಧನಂಜಯ್ ನಟನೆಯ ಸಾಲು ಸಾಲು ಚಿತ್ರಗಳು ತೆರೆ ಕಾಣುತ್ತಿವೆ. ಹೀಗಾಗಿ ಈ ವರ್ಷದಲ್ಲಿ ಅತೀ ಹೆಚ್ಚು ಇವರ ನಟನೆಯ ಚಿತ್ರಗಳೇ ಬಿಡುಗಡೆ ಆಗುತ್ತಿರುವುದು ವಿಶೇಷ.

    ನಿನ್ನೆಯಷ್ಟೇ ಧನಂಜಯ್ ನಟನೆಯ ಹೊಸ ಸಿನಿಮಾದ ರಿಲೀಸ್ ದಿನಾಂಕ ಘೋಷಣೆಯಾಗಿದೆ. ಅವರೇ ನಿರ್ಮಾಣ ಮಾಡಿ, ನಟಿಸಿರುವ ಹೆಡ್ ಬುಷ್ ಸಿನಿಮಾ ಅಕ್ಟೋಬರ್ 21 ರಂದು ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ಧನಂಜಯ್, ಬೆಂಗಳೂರಿನ ಭೂಗತ ದೊರೆ ಜಯರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಮತ್ತೊಂದು ವಿಶೇಷವೆಂದರೆ ರವಿಚಂದ್ರನ್, ವಸಿಷ್ಠ ಸಿಂಹ, ಶ್ರುತಿ ಹರಿಹರನ್ ಸೇರಿದಂತೆ ಹೆಸರಾಂತ ತಾರಾ ಬಳಗವೇ ಈ ಸಿನಿಮಾದಲ್ಲಿದೆ. ಇದನ್ನೂ ಓದಿ: ಹಿಂದಿ ವೆಬ್ ಸಿರೀಸ್‌ನಲ್ಲಿ `ರಂಗಿತರಂಗ’ ನಟಿ ರಾಧಿಕಾ ನಾರಾಯಣ್

    ಮುಂದಿನ ದಿನಗಳಲ್ಲಿ ಡಾಲಿ ಸಿನಿಮಾ ಫೆಸ್ಟಿವೆಲ್ ಶುರುವಾಗಲಿದೆ. ಜುಲೈನಲ್ಲಿ ಶಿವರಾ‍ಜ್ ಕುಮಾರ್ ಜೊತೆಗಿನ ಭೈರಾಗಿ ಚಿತ್ರ ರಿಲೀಸ್ ಆದರೆ, ಆಗಸ್ಟ್ ನಲ್ಲಿ ಮನ್ಸೂನ್ ರಾಗ, ಸೆಪ್ಟಂಬರ್ ನಲ್ಲಿ ಒನ್ಸ್ಪಾನ್ ಟೈಮ್ ಇನ್ ಜಮಾಲಿಗುಡ್ಡ, ಅಕ್ಟೋಬರ್ ನಲ್ಲಿ ಹೆಡ್ ಬುಷ್, ನವೆಂಬರ್ ನಲ್ಲಿ ಹೊಯ್ಸಳ, ಅಲ್ಲದೇ ಈ ನಡುವೆ ಯಾವ ತಿಂಗಳಲ್ಲಾದರೂ, ಜಗ್ಗೇಶ್ ಜೊತೆಗಿನ ತೋತಾಪುರಿ ಸಿನಿಮಾ ಕೂಡ ರಿಲೀಸ್ ಆಗಬಹುದು. ಹಾಗಾಗಿ ತಿಂಗಳಿಗೊಂದು ಡಾಲಿ ಸಿನಿಮಾ ವೀಕ್ಷಿಸಬಹುದಾಗಿದೆ.

    ಇವುಗಳಲ್ಲದೇ ಇನ್ನೂ ಹಲವಾರು ಚಿತ್ರಗಳಲ್ಲಿ ಧನಂಜಯ್ ನಟಿಸುತ್ತಿದ್ದಾರೆ. ತಮಿಳು ಪುಷ್ಪಾ 2 ದಲ್ಲೂ ನಟಿಸಲಿದ್ದಾರೆ ಎನ್ನುವ ಮಾಹಿತಿ ಇದೆ. ಅಲ್ಲಿಗೆ ಡಾಲಿ ವರ್ಷಪೂರ್ತಿ  ಬ್ಯುಸಿಯಾಗಿದ್ದಾರೆ. ಜೊತೆಗೆ ಡಾ.ರಾಜ್ ಕ್ರಿಕೆಟ್ ಪಂದ್ಯಗಳಲ್ಲೂ ಅವರು ಭಾಗಿಯಾಗಿದ್ದಾರೆ.

  • ಮತ್ತೆ ಸಾಲು ಸಾಲು ಸಿನಿಮಾಗಳಲ್ಲಿ `ರಾಟೆ’ ನಟಿ ಶೃತಿ ಹರಿಹರನ್ ಬ್ಯುಸಿ

    ಮತ್ತೆ ಸಾಲು ಸಾಲು ಸಿನಿಮಾಗಳಲ್ಲಿ `ರಾಟೆ’ ನಟಿ ಶೃತಿ ಹರಿಹರನ್ ಬ್ಯುಸಿ

    ಸ್ಯಾಂಡಲ್‌ವುಡ್ ನಟಿ ಶೃತಿ ಹರಿಹರನ್ ಚಿತ್ರರಂಗಕ್ಕೆ ಮತ್ತೆ ಕಮ್‌ಬ್ಯಾಕ್ ಆಗಿದ್ದಾರೆ. ಸಾಲು ಸಾಲು ಸಿನಿಮಾಗಳಿಗೆ ಗ್ರೀನ್ ಸಿಗ್ನಲ್ ಕೊಡುವ ಮೂಲಕ ಶ್ರುತಿ ಮತ್ತೆ ಸುದ್ದಿಯಲ್ಲಿದ್ದಾರೆ.

    `ಲೂಸಿಯಾ’ ಚಿತ್ರದಲ್ಲಿ ಸತೀಶ್ ನೀನಾಸಂಗೆ ನಾಯಕಿಯಾಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಿತರಾದ ನಟಿ ಶೃತಿ ಹರಿಹರನ್, ಕನ್ನಡ ಮತ್ತು ಪರಭಾಷಾ ಚಿತ್ರಗಳಲ್ಲೂ ಬಿಗ್ ಸ್ಟಾರ್‌ಗಳ ಜೊತೆ ತೆರೆಹಂಚಿಕೊಂಡಿರೋ ಪ್ರತಿಭಾವಂತ ನಾಯಕಿ ಶೃತಿ ಮತ್ತೆ ಚಿತ್ರರಂಗದಲ್ಲಿ ಹೊಸ ಚಿತ್ರಗಳ ಮೂಲಕ ಸದ್ದು ಮಾಡ್ತಿದ್ದಾರೆ. ಇದನ್ನೂ ಓದಿ: ತಮ್ಮದೇ ಹೆಸರಿನ ಚಿತ್ರದಲ್ಲಿ ತೆಲುಗಿನ ಸ್ಟಾರ್ ನಟ ಬಾಲಕೃಷ್ಣ

    ಜೀವನದಲ್ಲಿ ಸಾಕಷ್ಟು ಸವಾಲುಗಳನ್ನ ಎದುರಿಸಿದ ಬಳಿಕ ಮದುವೆ, ಸಂಸಾರ ಅಂತಾ ಬ್ಯುಸಿಯಿದ್ದ `ರಾಟೆ’ ನಟಿ ಶೃತಿ ಪವರ್‌ಫುಲ್ ಪಾತ್ರಗಳ ಮೂಲಕ ಕಮಾಲ್ ಮಾಡಲು ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

    ಇನ್ನು ಶೃತಿ ಬತ್ತಳಿಕೆಯಲ್ಲಿ ಇದೀಗ ಅಧಿಕೃತವಾಗಿ ನಾಲ್ಕು ಸಿನಿಮಾಗಳಿವೆ. `ಸಾಲುಗಾರ’, `ಸ್ಟ್ರಾಬೆರಿ’, ಡಾಲಿ ಜೊತೆ `ಹೆಡ್‌ಬುಷ್’, `ಏಜೆಂಜ್ ಕನ್ನಾಯಿರಾಮ್’, ಜತೆಗೆ ಶಂಕರ್ ಎನ್. ಸೊಂಡೂರ್ ನಿರ್ದೇಶನದ ಹೆಸರಿಡದ ಚಿತ್ರದಲ್ಲಿ ಶೃತಿ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಈ ವರ್ಷದ ಕೊನೆಯಿಂದ ಶೃತಿ ಮೇನಿಯಾ ಶುರುವಾಗೋದು ಗ್ಯಾರೆಂಟಿ.

  • ನಟ ಧನಂಜಯ್ ಗೆ ‘ಅಗ್ನಿ’ ಪರೀಕ್ಷೆ: ಕಾನೂನು ಹೋರಾಟ ಮಾಡ್ತೀನಿ ಅಂತಾರೆ ಜಯರಾಜ್ ಪುತ್ರ

    ನಟ ಧನಂಜಯ್ ಗೆ ‘ಅಗ್ನಿ’ ಪರೀಕ್ಷೆ: ಕಾನೂನು ಹೋರಾಟ ಮಾಡ್ತೀನಿ ಅಂತಾರೆ ಜಯರಾಜ್ ಪುತ್ರ

    ಕೋಟಿ ಕೋಟಿ ಬಂಡವಾಳ ಸುರಿದು ‘ಹೆಡ್ ಬುಷ್’ ಸಿನಿಮಾ ಮಾಡಿದ್ದಾರೆ ಡಾಲಿ ಧನಂಜಯ್. ಅವರೇ ಮುಖ್ಯ ಪಾತ್ರದಲ್ಲಿ ನಟಿಸಿ, ಹೆಸರಾಂತ ತಾರಾ ಬಳಗವನ್ನೇ ಹಾಕಿಕೊಂಡು ಹೊಸ ರೀತಿಯ ಚಿತ್ರ ಮಾಡಲಾಗಿದೆ. ಆದರೆ, ಏಕಾಏಕಿ ಸಿನಿಮಾದ ಕುರಿತು ಅಪಸ್ವರ ಎದ್ದಿದ್ದು, ಸಿನಿಮಾದ ಶೂಟಿಂಗ್ ಮುಗಿದ ಹೊತ್ತಿನಲ್ಲಿ ಈ ವಿವಾದ ಶುರುವಾಗಿದ್ದರಿಂದ ಧನಂಜಯ್ ಅವರಿಗೆ ಇದೊಂದು ರೀತಿಯಲ್ಲಿ ಅಗ್ನಿ ಪರೀಕ್ಷೆಯೇ ಆಗಿದೆ. ಇದನ್ನೂ ಓದಿ : ಪ್ರಶಾಂತ್ ನೀಲ್ -ಜ್ಯೂ.ಎನ್‌ಟಿಆರ್ ವಿವಾಹ ವಾರ್ಷಿಕೋತ್ಸವ ಸಂಭ್ರಮ ಹೇಗಿತ್ತು ಗೊತ್ತಾ?

    ಸಿನಿಮಾ ತಂಡವೇ ಘೋಷಿಸಿಕೊಂಡಂತೆ ಅಗ್ನಿ ಶ್ರೀಧರ್ ಅವರ ಪುಸ್ತಕವನ್ನು ಆಧರಿಸಿದ ಚಿತ್ರವಿದು. ಈ ಸಿನಿಮಾದಲ್ಲಿ ಧನಂಜಯ್ ಬೆಂಗಳೂರು ಭೂಗತ ಜಗತ್ತಿನ ಡಾನ್ ಎಂದೇ ಖ್ಯಾತರಾಗಿದ್ದ ಜಯರಾಜ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ವಿಷಯವನ್ನು ಸಿನಿಮಾ ತಂಡವೇ ಈ ಹಿಂದೆ ಹೇಳಿಕೊಂಡಿದೆ. ಹಾಗಾಗಿ ಜಯರಾಜ್ ಪುತ್ರ ಅಜಿತ್ ಈ ಸಿನಿಮಾದ ಬಗ್ಗೆ ಅಪಸ್ವರ ತಗೆದಿದ್ದಾರೆ. ಇದನ್ನೂ ಓದಿ : ಯಶ್ ಮುಂದಿನ ಚಿತ್ರ ಯಾರ ಜೊತೆ? ಹೊರಬಿತ್ತು ಬಿಗ್ ನ್ಯೂಸ್

    ನನ್ನ ತಂದೆಯ ಕುರಿತು ಸಿನಿಮಾ ಮಾಡುತ್ತಿದ್ದಾರೆ ಎಂದು ಗೊತ್ತಾದಾಗ ಸಿನಿಮಾ ತಂಡವನ್ನು ಸಂಪರ್ಕಿಸಿದೆ. ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಗಲಿಲ್ಲ. ನನ್ನ ತಂದೆಯ ಕುರಿತಾಗಿ ಯಾರೂ ಸಿನಿಮಾ ಮಾಡಬಾರದು. ಮಾಡಿರುವ ಸಿನಿಮಾವನ್ನು ರಿಲೀಸ್ ಮಾಡಕೂಡದು ಎಂದು ಅಜಿತ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ನೀಡಿದ್ದಾರೆ. ಅಲ್ಲದೇ, ಈ ಕುರಿತಾಗಿ ಕಾನೂನು ಹೋರಾಟವನ್ನೂ ಮಾಡುವುದಾಗಿ ಎಚ್ಚರಿಸಿದ್ದಾರೆ. ಇದನ್ನೂ ಓದಿ : ಹಾಲಿವುಡ್‌ಗೆ ಹಾರಲಿದ್ದಾರೆ ಬಾಲಿವುಡ್ ರಾಧೆ ಆಲಿಯಾ ಭಟ್

    ಅಸಲಿ ವಿಷಯ ಹೇಳುವುದಾದರೆ, ಧನಂಜಯ್ ಮತ್ತು ಅಜಿತ್ ಇಬ್ಬರೂ ಆತ್ಮೀಯರು. ಒಟ್ಟೊಟ್ಟಿಗೆ ಅನೇಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರೆ. ಧನಂಜಯ್ ಅವರು ಸ್ವತಃ ಅಜಿತ್ ಮದುವೆಗೂ ಹೋಗಿದ್ದರು. ಹೆಡ್ ಬುಷ್ ಸಿನಿಮಾ ಆಗುವ ಸಂದರ್ಭದಲ್ಲಿ ಅಜಿತ್ ಚಿತ್ರಕ್ಕೆ ಶುಭ ಹಾರೈಸಿದ್ದರು. ಇದೀಗ ಏಕಾಏಕಿ ಉಲ್ಟಾ ಹೊಡೆದಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಧನಂಜಯ್, ‘ಕೋಟಿ ಕೋಟಿ ಸುರಿದು ಸಿನಿಮಾ ಮಾಡಿದ್ದೇವೆ. ರಿಲೀಸ್ ಹೊತ್ತಿನಲ್ಲಿ ತೊಂದರೆ ಮಾಡುವುದು ಸರಿಯಲ್ಲ. ಅವರ ತಂದೆಯವರನ್ನು ನಾನು ಕೆಟ್ಟದಾಗಿ ಬಿಂಬಿಸಿಲ್ಲ. ಸಿನಿಮಾ ನೋಡಿದ ನಂತರ ಅವರು ಮಾತನಾಡಿದರೆ ಅದಕ್ಕೊಂದು ಅರ್ಥವಿರುತ್ತದೆ. ಅಗ್ನಿ ಶ್ರೀಧರ್ ಅವರು ಬರೆದ ಪುಸ್ತಕದ ಹಕ್ಕನ್ನು ಪಡೆದು ಸಿನಿಮಾ ಮಾಡಲಾಗಿದೆ’ ಎನ್ನುತ್ತಾರೆ. ಹೆಡ್ ಬುಷ್ ಸಿನಿಮಾ ಮಾಡುವಾಗಲೇ ಕಥೆ, ಪಾತ್ರದ ಬಗ್ಗೆ ಸಿನಿಮಾ ತಂಡ ಹೇಳಿಕೊಂಡಿದೆ. ಪಾತ್ರಗಳ ಪರಿಚಯದ ಪೋಸ್ಟರ್ ರಿಲೀಸ್ ಮಾಡುವಾಗಲೇ ಪಾತ್ರದ ಬಗ್ಗೆ ಪರಿಚಯಿಸಿದೆ. ಇದೀಗ ಸಿನಿಮಾ ಮುಗಿದ ಮೇಲೆ ಏಕಾಏಕಿ ಸಿನಿಮಾ ನಿಲ್ಲಿಸಬೇಕು ಎನ್ನುವುದು ಎಷ್ಟು ಸರಿ ಎನ್ನುತ್ತಿದೆ ಹೆಡ್ ಬುಷ್ ತಂಡ.

  • ಡಾಲಿ ಧನಂಜಯ್ ತುಳಿಯಲು ಸಜ್ಜಾಗಿವೆಯಾ ಕಾಣದ ಕೈಗಳು?

    ಡಾಲಿ ಧನಂಜಯ್ ತುಳಿಯಲು ಸಜ್ಜಾಗಿವೆಯಾ ಕಾಣದ ಕೈಗಳು?

    ಡವ ರಾಸ್ಕಲ್ ಯಶಸ್ವಿ ಅಲೆಯಲ್ಲಿ ತೇಲುತ್ತಿರುವ ಡಾಲಿ ಧನಂಜಯ್ ಅವರನ್ನು ತುಳಿಯಲು ಸ್ಯಾಂಡಲ್ ವುಡ್ ನಲ್ಲಿ ಕಾಣದ ಕೈಗಳು ಕೆಲಸ ಮಾಡುತ್ತಿವೆಯಾ? ಹಾಗಂತ ಸ್ವತಃ ಧನಂಜಯ್ ಅವರೇ ಮಾಧ್ಯಮವೊಂದಕ್ಕೆ ನೀಡಿದ ಆಡಿಯೋ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ‘ಹೆಡ್ ಬುಷ್’ ಸಿನಿಮಾಗೆ ಸಂಬಂಧಿಸಿದ ವಿವಾದವೊಂದರ ಕುರಿತು ಮಾತನಾಡಿರುವ ಅವರು ಕಾಣದ ಕೈಗಳು ಯಾಕೆ ಈ ರೀತಿ ಕೆಲಸ ಮಾಡುತ್ತಿವೆ ಎನ್ನುವುದು ನನಗೂ ಅರ್ಥವಾಗುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ : ಕೇಂದ್ರ ಸಚಿವ ಅನುರಾಗ್ ಠಾಕೂರ್ ಜತೆ ಸಿನಿರಂಗದ ಸಮಸ್ಯೆ ಚರ್ಚೆ

    ಡಾಲಿ ಧನಂಜಯ್ ‘ಹೆಡ್ ಬುಷ್’ ಚಿತ್ರಕ್ಕಾಗಿ ಹಣ ಮತ್ತು ಶ್ರಮ ಎರಡನ್ನೂ ಹೂಡಿದ್ದಾರೆ. ಈಗಾಗಲೇ ಸಿನಿಮಾದ ಬಹುತೇಕ ಶೂಟಿಂಗ್ ಕೂಡ ಮುಗಿದಿದೆ. ಅಗ್ನಿ ಶ್ರೀಧರ್ ಅವರ ಪುಸ್ತಕವೊಂದನ್ನು ಆಧರಿಸಿ ಈ ಸಿನಿಮಾ ಬರುತ್ತಿದ್ದು, ಅದರಲ್ಲಿ ಬೆಂಗಳೂರಿನ ಅಂಡರ್ ವರ್ಲ್ಡ್ ಡಾನ್ ಎಂದೇ ಖ್ಯಾತರಾಗಿದ್ದ ಜಯರಾಜ್ ಅವರ ಪಾತ್ರವೂ ಇದೆ. ಈ ಪಾತ್ರದ ಕುರಿತಾಗಿ ಜಯರಾಜ್ ಪುತ್ರ ಅಜಿತ್ ಆಕ್ಷೇಪವನ್ನು ವ್ಯಕ್ಯ ಪಡಿಸಿದ್ದಾರೆ. ತಮ್ಮ ಅನುಮತಿ ಇಲ್ಲದೇ ತಮ್ಮ ತಂದೆಯ ಕುರಿತಾಗಿ ಸಿನಿಮಾ ಮಾಡುತ್ತಿದ್ದಾರೆ ಎಂದು ವಿರೋಧಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಈ ಸಿನಿಮಾ ರಿಲೀಸ್ ಮಾಡದಂತೆ ಕೋರ್ಟ್ ಗೂ ಹೋಗುವುದಾಗಿ ಅವರು ಹೇಳಿದ್ದಾರೆ. ಇದನ್ನೂ ಓದಿ : ಹಿರಿಯ ರಂಗಕರ್ಮಿ, ಏಣಗಿ ಬಾಳಪ್ಪನವರ ಪತ್ನಿ ಲಕ್ಷ್ಮೀಬಾಯಿ ನಿಧನ

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಧನಂಜಯ್, ‘ನನಗೂ ಫಿಲ್ಮ್ ಚೇಂಬರ್ ನಿಂದ ಕರೆ ಬಂದಿತ್ತು. ನಾನು ಆಸ್ಪತ್ರೆಯಲ್ಲಿ ಇರುವ ಕಾರಣಕ್ಕಾಗಿ ಮೇ.13ರ ನಂತರ ಚೇಂಬರ್ ಗೆ ಬರುವುದಾಗಿ ತಿಳಿಸಿದ್ದೇನೆ. ಅಷ್ಟಕ್ಕೂ ನಾವು ಸಿನಿಮಾ ಮಾಡುವ ವಿಚಾರ ಅಜಿತ್ ಅವರಿಗೆ ಗೊತ್ತಿದೆ. ಅವರು ನನ್ನ ಒಳ್ಳೆಯ ಫ್ರೆಂಡ್. ಈ ಸಿನಿಮಾ ಮಾಡುವಾಗ ವಿಶ್ ಮಾಡಿದ್ದರು. ತಮ್ಮ ತಂದೆಯ ಪಾತ್ರವು ಹೇಗೆ ಬರುತ್ತಿದೆ ಎಂದು ಕೇಳುತ್ತಿದ್ದರು. ಆದರೆ, ದಿಢೀರ್ ಅಂತ ಹೀಗೆ ಕಂಪ್ಲೆಂಟ್ ಮಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ. ಅವರು ಹೀಗೆ ಮಾಡಿದ್ದಾರೆ ಅಂದರೆ, ಅದರ ಹಿಂದೆ ಕಾಣದ ಕೈಗಳು ಇವೆ ಅನಿಸುತ್ತದೆ’ ಎಂದಿದ್ದಾರೆ ಡಾಲಿ ಧನಂಜನ್. ಇದನ್ನೂ ಓದಿ : ಶಿವಣ್ಣನ ಹುಲಿ ಅವತಾರ: ಬೈರಾಗಿ ಹಾಡಿಗೆ ಭೀಮನ ಬಲ

    ಅವರು ಕೋರ್ಟ್, ಕಾನೂನು ಅಂತ ಹೋಗುವುದಾದರೆ ಅಥವಾ ಈ ಕುರಿತು ಏನೇ ಮಾತುಕತೆ ಇದ್ದರೆ ಅದನ್ನು ಅಗ್ನಿ ಶ್ರೀಧರ್ ಅವರ ಜತೆ ಮಾಡಬೇಕು. ನಾವು ಅವರ ಕೃತಿಯ ಹಕ್ಕು ಪಡೆದುಕೊಂಡೇ ಸಿನಿಮಾ ಮಾಡಿದ್ದೇವೆ. ಶ್ರೀಧರ್ ಅವರೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ನಮ್ಮ ಸಿನಿಮಾಗೂ, ಅಜಿತ್ ಅವರ ಆರೋಪಕ್ಕೂ ಸಂಬಂಧ ಇರದು. ಅವರು ಅಗ್ನಿ ಶ್ರೀಧರ್ ಅವರ ಜತೆಯೇ ಮಾತುಕತೆ ಆಡಬೇಕು ಎಂದಿದ್ದಾರೆ ಧನಂಜಯ್.

  • ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಚಿತ್ರಕ್ಕೆ ಕಂಟಕ

    ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಚಿತ್ರಕ್ಕೆ ಕಂಟಕ

    ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರಕ್ಕೆ ಕಂಟಕವೊಂದು ಎದುರಾಗಿದೆ. ಈ ಸಿನಿಮಾವನ್ನು ರಿಲೀಸ್ ಮಾಡದಂತೆ ಬೆಂಗಳೂರು ಭೂಗತ ಲೋಕದ ಮೊದಲ ಡಾನ್ ಎಂದು ಕರೆಯಲ್ಪಡುವ ಜಯರಾಜ್ ಪುತ್ರ ಅಜಿತ್ ಜಯರಾಜ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ : ಕೇಂದ್ರ ಸಚಿವ ಅನುರಾಗ್ ಠಾಕೂರ್ ಜತೆ ಸಿನಿರಂಗದ ಸಮಸ್ಯೆ ಚರ್ಚೆ

    ಹೆಡ್ ಬುಷ್ ಸಿನಿಮಾ ಡಾನ್ ಜಯರಾಜ್ ಜೀವನವನ್ನು ಆಧರಿಸಿದ ಸಿನಿಮಾ ಎಂದು ಹೇಳಲಾಗಿತ್ತು. ಈ ಸಿನಿಮಾದ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಬರೆದಿದ್ದಾರೆ. ಅವರೇ ಈ ಹಿಂದೆ ಹೇಳಿದಂತೆ 1970ರ ಕಾಲದಲ್ಲಿ ಬೆಂಗಳೂರಿನಲ್ಲಿ ನಡೆದ ಭೂಗತ ಲೋಕದ ಕಥೆಯಿದೆ ಮತ್ತು ಅಲ್ಲಿ ಜಯರಾಜ್ ಇದ್ದಾರೆ ಎಂದು ಹೇಳಲಾಗಿತ್ತು. ಹಾಗಾಗಿ ತಮ್ಮ ತಂದೆಯ ಸಿನಿಮಾವನ್ನು ಯಾರೂ ಮಾಡದಂತೆ ಫಿಲ್ಮ್ ಚೇಂಬರ್ ಗೆ ಅಜಿತ್ ಜಯರಾಜ್ ಪತ್ರವೊಂದನ್ನು ಕೊಟ್ಟಿದ್ದಾರೆ. ಇದನ್ನೂ ಓದಿ : ಹಿರಿಯ ರಂಗಕರ್ಮಿ, ಏಣಗಿ ಬಾಳಪ್ಪನವರ ಪತ್ನಿ ಲಕ್ಷ್ಮೀಬಾಯಿ ನಿಧನ

    ಫಿಲ್ಮ್ ಚೇಂಬರ್ ಗೆ ಕೊಟ್ಟ ಪತ್ರದಲ್ಲಿ ‘ನನ್ನ ತಂದೆ ಜಯರಾಜ್ ಕುರಿತಾಗಿ ಸಿನಿಮಾ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೇ, ನಟ ಡಾಲಿ ಧನಂಜಯ್ ಅವರು ನನ್ನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಹಾಗಾಗಿ ನನ್ನ ತಂದೆಯ ಕುರಿತಾಗಿ ಯಾರೂ ಸಿನಿಮಾ ಮಾಡಬಾರದು. ಒಂದು ವೇಳೆ ಮಾಡಿದರೆ, ಕಾನೂನು ರೀತಿಯಲ್ಲಿ ಕ್ರಮ ತಗೆದುಕೊಳ್ಳುವುದಾಗಿ’ ಅವರು ಬರೆದಿದ್ದಾರೆ. ಇದನ್ನೂ ಓದಿ : ಶಿವಣ್ಣನ ಹುಲಿ ಅವತಾರ: ಬೈರಾಗಿ ಹಾಡಿಗೆ ಭೀಮನ ಬಲ

    ಇತ್ತೀಚೆಗಷ್ಟೇ ಹೆಡ್ ಬುಷ್ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿರುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಧನಂಜಯ್ ನಾಯಕನಾದರೆ, ಪಾಯಲ್ ರಜಪೂತ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಹಿರಿಯ ನಟ ಕ್ರೇಜಿಸ್ಟಾರ್ ರವಿಚಂದ್ರನ್, ಶ್ರುತ ಹರಿಹರನ್, ಲೂಸ್ ಮಾದ ಯೋಗಿ, ವಸಿಷ್ಠ ಸಿಂಹ ಸೇರಿದಂತೆ ಹೆಸರಾಂತ ಕಲಾವಿದೇ ಈ ಸಿನಿಮಾದಲ್ಲಿ ಇದ್ದಾರೆ.

  • ಹೆಡ್ ಬುಷ್ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿದ ಡಾಲಿ ಧನಂಜಯ್

    ಹೆಡ್ ಬುಷ್ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿದ ಡಾಲಿ ಧನಂಜಯ್

    ಬೆಂಗಳೂರು ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ “ಹೆಡ್ ಬುಷ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರದ ಚಿತ್ರೀಕರಣ ನಡೆದಿದೆ. ಡಾಲಿ ಧನಂಜಯ ಜಯರಾಜ್ ಅವರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ : ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್ ನಲ್ಲೂ ರಶ್ಮಿಕಾ ಹವಾ

    1970 ರ ಬೆಂಗಳೂರಿನ ಭೂಗತ ಜಗತ್ತನ್ನು ಶೂನ್ಯ ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ಆ ಕಾಲಕ್ಕೆ ಸರಿಹೊಂದುವ ಅನೇಕ ಸೆಟ್ ಗಳನ್ನು ಹಾಕಲಾಗಿದೆ. ಫಿಲಂ ಮೇಕಿಂಗ್ ನಲ್ಲಿ ಎಂ ಎಸ್ ಸಿ ಪದವಿ ಪಡೆದಿರುವ ಶೂನ್ಯ, ರಕ್ಷಿತ್ ಶೆಟ್ಟಿ ಅವರ ಬಳಿ ಅಸೋಸಿಯೇಟ್ ಆಗಿ ಕಾರ್ಯ ನಿರ್ವಹಿಸಿ ಅನುಭವ ಪಡೆದಿದ್ದಾರೆ.  ಅಷ್ಟೇ ಅಲ್ಲದೇ, ಶೂನ್ಯ  ಫಿಲಂ ಮೇಕಿಂಗ್ ಕುರಿತು ಸಂಶೋಧನೆ ಕೂಡ ನಡೆಸಿದ್ದಾರೆ. ಇದನ್ನೂ ಓದಿ : ಬಾಲಿವುಡ್ ಎಂದರೆ ಭಾರತೀಯ ಸಿನಿಮಾರಂಗವಲ್ಲ: ಮೆಗಾಸ್ಟಾರ್ ಚಿರಂಜೀವಿಗೂ ಆಗಿತ್ತು ಅವಮಾನ

    ಡಾಲಿ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರನ್, ಲೂಸ್ ಮಾದ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ

    ಅದ್ಭುತ ಹಾಡುಗಳಿಗೆ ಚರಣ್ ರಾಜ್ ಸಂಗೀತ ನಿರ್ದೇಶನವಿದೆ. ಸುನೊಜ್ ವೇಲಾಯಧನ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ಕಲಾ ನಿರ್ದೇಶಕರು ಬಾದಲ್ ನಂಜುಂಡಸ್ವಾಮಿ.

  • `ಹೆಡ್‌ ಬುಷ್’ ಚಿತ್ರದ ಕುರಿತು ಪಾಯಲ್ ರಜಪೂತ್ ಹೇಳಿದ್ದೇನು ಗೊತ್ತಾ? ವೈರಲ್‌ ಆಯ್ತು ನಟಿಯ ಪೋಸ್ಟ್‌

    `ಹೆಡ್‌ ಬುಷ್’ ಚಿತ್ರದ ಕುರಿತು ಪಾಯಲ್ ರಜಪೂತ್ ಹೇಳಿದ್ದೇನು ಗೊತ್ತಾ? ವೈರಲ್‌ ಆಯ್ತು ನಟಿಯ ಪೋಸ್ಟ್‌

    ಸೌತ್ ಬ್ಯೂಟಿ ಪಾಯಲ್ ರಜಪೂತ್ ಕನ್ನಡ ಚಿತ್ರರಂಗಕ್ಕೆ `ಹೆಡ್ ಬುಷ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟಿದ್ದಾರೆ. `ಬಡವ ರಾಸ್ಕಲ್’ ಸೂಪರ್ ಸಕ್ಸಸ್ ನಂತರ ಡಾಲಿ ಧನಂಜಯ್ `ಹೆಡ್ ಬುಷ್’ ಚಿತ್ರ ಕೈಗೆತ್ತಿಕೊಂಡಿದ್ದು, ನಟರಾಕ್ಷಸ ಡಾಲಿಗೆ ನಾಯಕಿಯಾಗಿ ಪಾಯಲ್ ರಜಪೂತ್ ನಟಿಸಿದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ `ಹೆಡ್‌ಬುಷ್’ ಕುರಿತು ನಟಿ ಪಾಯಲ್ ಹಾಕಿರೋ ಪೋಸ್ಟ್ ವೈರಲ್ ಆಗುತ್ತಿದೆ.

    ಪಾಯಲ್ ರಜಪೂತ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚ್ತಿರೋ ಕಲಾವಿದೆ. ಈಗ `ಹೆಡ್‌ ಬುಷ್’ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಇನ್‌ಸ್ಟಾಗ್ರಾಮ್‌ನಲ್ಲಿ ಪಾಯಲ್ ಹಾಕಿರೋ ಪೋಸ್ಟ್ ವೈರಲ್ ಆಗಿದೆ. ಅಭಿಮಾನಿಯೊಬ್ಬರು ನೀವು ಯಾವಾಗ ಕನ್ನಡ ಚಿತ್ರದಲ್ಲಿ ನಟಿಸುತ್ತೀರಾ ಅಂತಾ ಕೇಳಿದ್ದಾರೆ. ಅದಕ್ಕೆ ನಟಿ ಖುಷಿಯಿಂದಲೇ ಧನಂಜಯ್ ಜೊತೆಯಿರೋ ಫೋಟೋ ಶೇರ್ ಮಾಡಿ ಉತ್ತರ ನೀಡಿದ್ದಾರೆ.

    ನಾನು ಈಗಾಗಲೇ ಹೆಡ್‌ ಬುಷ್ ಕನ್ನಡ ಚಿತ್ರದಲ್ಲಿ ನಟಿಸಿದ್ದೇನೆ. ಚಿತ್ರದಲ್ಲಿನ ನನ್ನ ಪಾತ್ರದ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ʻಹೆಡ್‌ ಬುಷ್ʼ ಚಿತ್ರ ತೆರೆಗೆ ಬರುವುದಾಗಿ ಅಭಿಮಾನಿಗಳಿಗೆ ಚಿತ್ರದ ಅಪ್‌ಡೇಟ್ ನೀಡಿದ್ದಾರೆ. ಇನ್ನು ನಟಿ ಪಾಯಲ್ ಟ್ಯಾಗ್ ಮಾಡಿರೋ ಪೋಸ್ಟ್‌ನ್ನು ಡಾಲಿ ಕೂಡ ತಮ್ಮ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ಶಾರುಖ್ ಖಾನ್- ರಾಜ್‌ಕುಮಾರ್ ಹಿರಾನಿ ಕಾಂಬಿನೇಷನ್‌ನ ಚಿತ್ರದ ಶೂಟಿಂಗ್ ಸ್ಟಾರ್ಟ್!

    ಸದ್ಯ ಹಲವಾರು ವಿಚಾರಗಳಿಂದ ಅಟ್ರ್ಯಾಕ್ಟ್‌ ಮಾಡ್ತಿರೋ ಚಿತ್ರ `ಹೆಡ್‌ ಬುಷ್’ನಲ್ಲಿ ನಟ ಧನಂಜಯ್ ಡಾನ್ ಪಾತ್ರದಲ್ಲಿ ಮಿಂಚಲಿದ್ದಾರೆ. ಚಿತ್ರದಲ್ಲಿ ರವಿಚಂದ್ರನ್, ಶೃತಿ ಹರಿಹರನ್, ರಘು ಮುಖರ್ಜಿ, ಲೂಸ್ ಮಾದ, ವಸಿಷ್ಠ ಸಿಂಹ, ಹುಲಿರಾಯ ಖ್ಯಾತಿಯ ಬಾಲು ನಾಗೇಂದ್ರ ಹೀಗೆ ಸ್ಟಾರ್ ಕಲಾವಿದರ ದಂಡೆ ಚಿತ್ರದಲ್ಲಿದೆ. ಮಲ್ಟಿಸ್ಟಾರ್‌ಗಳಿರೋ `ಹೆಡ್‌ ಬುಷ್’ ಚಿತ್ರ ಈಗಿಂದಲೇ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟು ಹಾಕಿದೆ. ಡಾಲಿಯ ನ್ಯೂ ವೆಂಚರ್ ನೋಡೋದಕ್ಕೆ ಫ್ಯಾನ್ಸ್ ಕಾಯ್ತಿದ್ದಾರೆ.

  • ಗೆಳೆಯನ ಸಿನಿಮಾದಲ್ಲಿ ಕೊತ್ವಾಲ್ ಆದ ವಸಿಷ್ಠ ಸಿಂಹ

    ಗೆಳೆಯನ ಸಿನಿಮಾದಲ್ಲಿ ಕೊತ್ವಾಲ್ ಆದ ವಸಿಷ್ಠ ಸಿಂಹ

    ನ್ನಡ ಸಿನಿ ರಂಗದ ಕುಚಿಕು ಗೆಳೆಯರೆಂದೇ ಖ್ಯಾತರಾಗಿರುವ ಡಾಲಿ ಧನಂಜಯ್ ಮತ್ತು ವಸಿಷ್ಠ ಸಿಂಹ ಇದೀಗ ಮತ್ತೊಂದು ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕೆಲ ತಿಂಗಳುಗಳ ಹಿಂದೆಯೇ ಮುಹೂರ್ತವಾಗಿರುವ ‘ಹೆಡ್ ಬುಷ್’ ಸಿನಿಮಾದಲ್ಲಿ ಇಬ್ಬರೂ ಜತೆಯಾಗಿ ತೆರೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ರಮ್ಯಾಗಾಗಿ ಕಾದ ದಿಲ್ ಕಾ ರಾಜಾ

    ಹೆಡ್ ಬುಷ್ ಭೂಗತ ಜಗತ್ತಿನ ಕುರಿತಾದ ಸಿನಿಮಾ. ಅಂಡರ್ ವರ್ಲ್ಡ್ ಡಾನ್ ಆಗಿದ್ದ ಜಯರಾಜ್ ಅವರ ಜೀವನ ಕುರಿತಾದ ಚಿತ್ರ ಎನ್ನಲಾಗುತ್ತಿದೆ. ಡಾಲಿ ಧನಂಜಯ್ ಜಯರಾಜ್ ಪಾತ್ರ ಮಾಡುತ್ತಿದ್ದು, ಗೆಳೆಯ ವಸಿಷ್ಠ ಸಿಂಹ ಅವರಿಗೆ ಕೊತ್ವಾಲ್ ಪಾತ್ರ ನೀಡಿದ್ದಾರೆ. ಈಗಾಗಲೇ ಮೊದಲ ಹಂತದ ಶೂಟಿಂಗ್ ಕೂಡ ಮುಗಿದಿದ್ದು, ಅಚ್ಚರಿ ಮೂಡಿಸುವಂತಹ ತಾರಾಗಣವನ್ನು ಈ ಸಿನಿಮಾ ಹೊಂದಿದೆ. ಇದನ್ನೂ ಓದಿ : ನನ್ನ ಕಣ್ಣಿಗೆ ಸೇಬು ಹಣ್ಣಿನಂತೆ ಕಾಣುವಿರಿ, ಚಿಯರ್ಸ್ ಪಪ್ಪಾ: ರವೀನಾ ಟಂಡನ್

    ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಕ್ರೇಜಿಸ್ಟಾರ್ ರವಿಚಂದ್ರನ್ ಕೂಡ ಈ ಚಿತ್ರದಲ್ಲಿದ್ದಾರೆ. ಅವರು ಕಾಲೇಜು ಉಪನ್ಯಾಸಕರಾಗಿ ಪಾತ್ರ ನಿರ್ವಹಿಸುತ್ತಿದ್ದಾರೆ. ಅದೊಂದು ಗಂಭೀರವಾಗಿರುವ ಪಾತ್ರ ಎಂದೂ ಅವರು ಈ ಹಿಂದೆ ಹೇಳಿಕೊಂಡಿದ್ದರು. ಅಲ್ಲದೇ, ಲೂಸ್ ಮಾದ ಯೋಗಿ, ಶ್ರುತಿ ಹರಿಹರನ್ ಸೇರಿದಂತೆ ಅನೇಕ ಅನುಭವಿ ಕಲಾವಿದರ ದಂಡೇ ಸಿನಿಮಾದಲ್ಲಿದೆ. ಇದನ್ನೂ ಓದಿ: ಜ್ಯೂ.ಎನ್‍ಟಿಆರ್ ಜೊತೆ ನಟಿಸಲು ಇಷ್ಟ ಎಂದ ಪದ್ಮಾವತಿ

    ಈ ಸಿನಿಮಾಗೆ ಕಥೆ ಬರೆದದ್ದು ಅಗ್ನಿ ಶ್ರೀಧರ್, ಶೂನ್ಯ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕರ ಚೊಚ್ಚಲು ಸಿನಿಮಾ ಕೂಡ ಇದಾಗಿದೆ.