Tag: headmaster

  • ಶಾಲೆಯ ಕೊಠಡಿಯಲ್ಲೇ ಮುಖ್ಯಶಿಕ್ಷಕ ನೇಣಿಗೆ ಶರಣು

    ಶಾಲೆಯ ಕೊಠಡಿಯಲ್ಲೇ ಮುಖ್ಯಶಿಕ್ಷಕ ನೇಣಿಗೆ ಶರಣು

    ಚಿಕ್ಕಬಳ್ಳಾಪುರ: ವಸತಿ ಶಾಲೆಯ ಕೊಠಡಿಯಲ್ಲೇ ಮುಖ್ಯಶಿಕ್ಷಕನೊರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ನಡೆದಿದೆ.

    ನಗರದ ಪರಿಶಿಷ್ಠ ಜಾತಿ ವಸತಿ ನಿಲಯದಲ್ಲಿ ಮುಖ್ಯಶಿಕ್ಷಕರಾಗಿದ್ದ ಗಂಗಣ್ಣ (55) ಮೃತ ಶಿಕ್ಷಕ. ಕೌಟುಂಬಿಕ ಕಲಹ ಹಾಗೂ ಸಾಲಭಾದೆ ಶಂಕೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

    ಬೆಳಿಗ್ಗೆ ಎಂದಿನಂತೆ ವಸತಿ ಶಾಲೆಗೆ ಬಂದಿದ್ದ ಗಂಗಣ್ಣ ವಸತಿ ಶಾಲೆಯ ಮೊದಲ ಮಹಡಿಯ ಕೊಠಡಿಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಸಮಾಜಕಲ್ಯಾಣ ಇಲಾಖಾಧಿಕಾರಿಗಳು ಹಾಗೂ ಗೌರಿಬಿದನೂರು ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ‘ನನ್ನ ಕೊನೆಯ ಉಸಿರಿರುವತನಕ ಹೋರಾಡ್ತೇನೆ’ -ವಿದ್ಯಾರ್ಥಿನಿ ಸಜೀವ ದಹನ

    ‘ನನ್ನ ಕೊನೆಯ ಉಸಿರಿರುವತನಕ ಹೋರಾಡ್ತೇನೆ’ -ವಿದ್ಯಾರ್ಥಿನಿ ಸಜೀವ ದಹನ

    -ಲೈಂಗಿಕ ದೌರ್ಜನ್ಯದ ದೂರು ಕೊಟ್ಟಿದ್ದೆ ತಪ್ಪಾಯ್ತು

    ಡಾಕಾ: ಲೈಂಗಿಕ ಕಿರುಕುಳದ ವಿರುದ್ಧ ಪೊಲೀಸರಿಗೆ ದೂರ ಸಲ್ಲಿಸಿದ್ದ 19 ವರ್ಷದ ವಿದ್ಯಾರ್ಥಿನಿಯನ್ನು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಸಜೀವವಾಗಿ ಸುಟ್ಟು ಕೊಲೆ ಮಾಡಿರುವ ಕ್ರೂರ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.

    ನುಸ್ರತ್ ಜಹಾನ್ ರಫಿ(19) ಮೃತ ವಿದ್ಯಾರ್ಥಿನಿ. ಈಕೆ ಮದರಸಾ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು. ಆದರೆ ಆ ದೂರನ್ನು ವಾಪಸ್ ಪಡೆಯುವಂತೆ ಬೆದರಿಕೆ ಹಾಕಲಾಗಿತ್ತು. ಇದಕ್ಕೆ ನಿರಾಕರಿಸಿದ ವಿದ್ಯಾರ್ಥಿನಿಯನ್ನು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ.

    ಏನಿದು ಪ್ರಕರಣ?
    ಮೃತ ನುಸ್ರತ್ ಳನ್ನು ಮಾರ್ಚ್ 27ರಂದು ಹೆಡ್‍ಮಾಸ್ಟರ್ ತನ್ನ ಕಚೇರಿಗೆ ಕರೆಸಿಕೊಂಡಿದ್ದಾನೆ. ಅಲ್ಲಿ ವಿದ್ಯಾರ್ಥಿನಿಯನ್ನು ಅಸಭ್ಯವಾಗಿ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದನ್ನು ಅರಿತ ನುಸ್ರತ್ ತಕ್ಷಣ ಆತನಿಂದ ತಪ್ಪಿಸಿಕೊಂಡು ಕಚೇರಿಯಿಂದ ಓಡಿಹೋಗಿದ್ದಾಳೆ. ನಂತರ ನುಸ್ರತ್ ನಡೆದ ಘಟನೆಯ ಬಗ್ಗೆ ಪೋಷಕರಿಗೆ ವಿವರಿಸಿದ್ದಾಳೆ. ನಂತರ ಪೋಷಕರನ್ನು ಕರೆದುಕೊಂಡು ಪೊಲೀಸ್ ಠಾಣೆಗೆ ಹೋಗಿ ಹೆಡ್‍ಮಾಸ್ಟರ್ ವಿರುದ್ಧ ದೂರು ನೀಡಿದ್ದಾಳೆ. ಆದರೆ ಪೊಲೀಸರು ವಿದ್ಯಾರ್ಥಿನಿಯ ದೂರನ್ನು ದಾಖಲಿಸಿಕೊಳ್ಳದೆ ಆಕೆಯ ಜೊತೆಯೇ ಅಸಭ್ಯವಾಗಿ ವರ್ತಿಸಿದ್ದಾರೆ.

    ಈ ವೇಳೆ ನುಸ್ರತ್ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾಳೆ. ಪೊಲೀಸ್ ಅಧಿಕಾರಿಯೊಬ್ಬ ಇದೇನು ದೊಡ್ಡ ವಿಷಯವಲ್ಲ ಎಂದು ನಿರ್ಲಕ್ಷ್ಮದಿಂದ ಹೇಳಿದ್ದಾರೆ. ಅಷ್ಟೇ ಅಲ್ಲದೇ ನುಸ್ರತ್ ತನ್ನ ಕೈಗಳಿಂದ ಮುಖವನ್ನು ಮುಚ್ಚಿಕೊಂಡಿದ್ದರೆ, ಮುಖದಿಂದ ಕೈಗಳನ್ನು ಸರಿಸು ಎಂದು ದೌರ್ಜನ್ಯ ನಡೆಸಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಹೆಡ್‍ಮಾಸ್ಟರ್ ನ ವಿರುದ್ಧ ದೂರು ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದರು. ಆದರೆ ಕೆಲವು ವಿದ್ಯಾರ್ಥಿಗಳು ಮತ್ತು ರಾಜಕಾರಣಿಗಳು ಪೊಲೀಸ್ ಠಾಣೆಯ ಮುಂದೆ ಬಂದು ಹೆಡ್‍ಮಾಸ್ಟರ್ ಅನ್ನು ಬಿಡುಗಡೆ ಮಾಡುವಂತೆ ಪ್ರತಿಭಟನೆಯನ್ನು ನಡೆಸಿದ್ದರು.

    ಶಾಲೆಗೆ ಮರಳಿದ ನುಸ್ರತ್:
    ಇತ್ತ ನುಸ್ರತ್ ಈ ಘಟನೆ ನಡೆದು 11 ದಿನಗಳ ನಂತರ ಅಂದರೆ ಏಪ್ರಿಲ್ 6 ರಂದು ಪರೀಕ್ಷೆಗೆಂದು ಶಾಲೆಗೆ ಹೋಗಿದ್ದಾಳೆ. ಆಗ ಕ್ಲಾಸ್‍ಮೇಟ್‍ಗೆ ಶಾಲೆಯ ಛಾವಣಿಯ ಮೇಲೆ ಹೊಡೆಯುತ್ತಿದ್ದಾರೆ ಎಂದು ಯಾರೋ ಹೇಳಿದ್ದಾರೆ. ತಕ್ಷಣ ನುಸ್ರತ್ ಮೇಲೆ ಹೋಗಿದ್ದಾಳೆ. ಅಲ್ಲಿ ಐವರು ಬುರ್ಖಾ ಧರಿಸಿ ಆಕೆಯನ್ನು ಸುತ್ತುವರಿದ್ದು, ಹೆಡ್‍ಮಾಸ್ಟರ್ ವಿರುದ್ಧ ನೀಡಿರುವ ದೂರನ್ನು ವಾಪಾಸ್ ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಇದಕ್ಕೆ ನುಸ್ರತ್ ನಿರಾಕರಿಸಿದ್ದಾಳೆ, ಆಗ ನುಸ್ರತ್ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.

    ಇದೇ ವೇಳೆ ಆಕೆ ತನ್ನ ಸಹೋದರನ ಮೊಬೈಲ್‍ನಲ್ಲಿ ತನ್ನ ಮೇಲೆ ದಾಳಿ ನಡೆಸಿದ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾಳೆ. ಜೊತೆಗೆ ದಾಳಿಗೂ ಮುನ್ನ ಕೆಲವರನ್ನು ಗುರುತಿಸಿದ್ದಾಳೆ. ವಿಡಿಯೋದಲ್ಲಿ ‘ಶಿಕ್ಷಕ ನನ್ನನ್ನು ಮುಟ್ಟಿದ. ನನ್ನ ಕೊನೆಯ ಉಸಿರು ಇರುವತನಕ ಈ ದೌರ್ಜನ್ಯದ ವಿರುದ್ಧ ಹೋರಾಡುತ್ತೇನೆ’ ಎಂದು ನುಸ್ರತ್ ಹೇಳಿದ್ದಾಳೆ.

    ಈ ಘಟನೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಮೂವರು ನುಸ್ರತ್ ಕ್ಲಾಸ್‍ಮೇಟ್ ಸೇರಿದಂತೆ ಐವರು ಆಕೆಗೆ ಬೆಂಕಿ ಹಚ್ಚುವ ಮೊದಲು ಸ್ಕಾರ್ಫ್ ನಿಂದ ಕೈ ಮತ್ತು ಕಾಲು ಕಟ್ಟಿದ್ದರು. ಬೆಂಕಿ ಹಚ್ಚಿದ ನಂತರ ಆ ಸ್ಕಾರ್ಫ್ ಸುಟ್ಟು ಹೋಗಿದೆ. ಇದರಿಂದ ಅವಳು ಛಾವಣಿಯಿಂದ ತಪ್ಪಿಸಿಕೊಂಡು ಕೆಳಗೆ ಬಂದಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲಿ ನುಸ್ರತ್ ದೇಹ 80% ಸುಟ್ಟು ಹೋಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಏಪ್ರಿಲ್ 10 ರಂದು ನುಸ್ರತ್ ಮೃತಪಟ್ಟಿದ್ದಾಳೆ. ಸದ್ಯಕ್ಕೆ ತನಿಖೆಯನ್ನು ಮುಂದುವರಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ಮೊಹಮ್ಮದ್ ಇಕ್ಬಾಲ್ ಹೇಳಿದ್ದಾರೆ.

  • ಮದುವೆಗಾಗಿ ಅಪ್ರಾಪ್ತೆಯ ಜನ್ಮ ದಿನಾಂಕ ತಿದ್ದಲು ಹೊರಟ ಪೋಷಕರು

    ಮದುವೆಗಾಗಿ ಅಪ್ರಾಪ್ತೆಯ ಜನ್ಮ ದಿನಾಂಕ ತಿದ್ದಲು ಹೊರಟ ಪೋಷಕರು

    – ನಿರಾಕರಿಸಿದ ಮುಖ್ಯೋಪಾಧ್ಯಾಯರ ಮೇಲೆ ಹಲ್ಲೆ

    ವಿಜಯಪುರ: ಅಪ್ರಾಪ್ತ ಬಾಲಕಿಯ ಜನ್ಮ ದಿನಾಂಕ ತಿದ್ದುಪಡಿಗೆ ನಿರಾಕರಿಸಿದ್ದಕ್ಕೆ ಶಾಲಾ ಮುಖ್ಯೋಪಾಧ್ಯಾಯರ ಮೇಲೆ ಬಾಲಕಿ ಪೋಷಕರು ಹಲ್ಲೆ ಮಾಡಿರುವ ಘಟನೆ ವಿಜಯಪುರದ ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದಲ್ಲಿ ನಡೆದಿದೆ.

    ರಾಜು ಮೇಲಿನಮನೆ ಎಂಬವರು ತಮ್ಮ ಮಗಳ ವಿವಾಹವನ್ನ ತಮ್ಮ ಗ್ರಾಮದಲ್ಲಿ ನಡೆಯುತ್ತಿದ್ದ ಸಾಮೂಹಿಕ ಮದುವೆ ಕಾರ್ಯಕ್ರಮದಲ್ಲಿ ಮಾಡಲು ಮುಂದಾಗಿದ್ದರು. ಆದ್ರೆ ಬಾಲಕಿ ಅಪ್ರಾಪ್ತ ವಯಸ್ಕಳಾಗಿರುವುದರಿಂದ ಹಚ್ಯಾಳ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಹುಸೇನಸಾಬ್‍ಗೆ ಆಕೆಯ ಜನ್ಮದಿನಾಂಕ ತಿದ್ದುಪಡಿ ಮಾಡಿಕೊಡಲು ಒತ್ತಾಯಿಸಿದ್ದಾರೆ. ಆಗ ಮುಖ್ಯೋಪಾಧ್ಯಾಯರು ಈ ಕೆಲಸ ಮಾಡಿಕೊಡಲು ನಿರಾಕರಿದ್ದರು.

    ಎಷ್ಟೇ ಒತ್ತಾಯಿಸಿದರು ಮುಖ್ಯೋಪಾಧ್ಯಾಯರು ಮಾತ್ರ ಜನ್ಮ ದಿನಾಂಕ ತಿದ್ದುಪಡಿ ಮಾಡಿಕೊಡಲ್ಲ ಎಂದು ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಬಾಲಕಿ ಪೋಷಕರು ಮುಖ್ಯೋಪಾಧ್ಯಾಯರ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಸದ್ಯ ಮುಖ್ಯೋಪಾಧ್ಯಾಯ ಹುಸೇನಸಾಬ್ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಘಟನೆ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಿನ್ಸಿಪಾಲ್ ವರ್ಗಾವಣೆ ಖಂಡಿಸಿ ಶಾಲಾ ಮಕ್ಕಳಿಂದ ಪ್ರತಿಭಟನೆ

    ಪ್ರಿನ್ಸಿಪಾಲ್ ವರ್ಗಾವಣೆ ಖಂಡಿಸಿ ಶಾಲಾ ಮಕ್ಕಳಿಂದ ಪ್ರತಿಭಟನೆ

    ಹಾವೇರಿ: ಮುಖ್ಯೋಪಾಧ್ಯಾಯರ ವರ್ಗಾವಣೆಗೆ ವಿರೋಧಿಸಿ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರು ಪ್ರತಿಭಟನೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಸರಕಾರಿ ಪ್ರೌಢಶಾಲೆ ಹೆಡ್ ಮಾಸ್ಟರ್ ಆಗಿ ಆರ್ ಮಂಜಪ್ಪ ಕಾರ್ಯನಿಹಿಸುತ್ತಿದ್ದರು. ಕಳೆದ ಆರು ವರ್ಷಗಳಿಂದ ಮಂಜಪ್ಪ ಶಾಲೆಯ ಅಭಿವೃದ್ಧಿಗಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಆದ್ರೆ ಇದೀಗ ಅವರು ಇಚ್ಚಂಗಿಯಿಂದ ಹಾವೇರಿಗೆ ವರ್ಗಾವಣೆಗೊಂಡಿದ್ದಾರೆ.

    ಈ ಹಿನ್ನೆಲೆಯಲ್ಲಿ ವರ್ಗಾವಣೆ ಖಂಡಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಪ್ರತಿಭಟನೆ ನಡೆಸಿದ್ದಾರೆ. ಹೆಡ್ ಮಾಸ್ಟರ್ ಮಂಜಪ್ಪರನ್ನು ಶಾಲೆಯಲ್ಲೇ ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.

    ಈ ಘಟನೆ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನು ಓದಿ: ಸರ್, ಪ್ಲೀಸ್ ನಮ್ಮನ್ನ ಬಿಟ್ಟು ಹೋಗ್ಬೇಡಿ- ಮಕ್ಕಳಿಂದ ಶಿಕ್ಷಕನಿಗೆ ಮುತ್ತಿಗೆ

  • ದೃಷ್ಟಿ ಕಳೆದುಕೊಂಡ ಬಾಲಕ ಪ್ರಕರಣ- ಸ್ಕೇಲ್ ನಿಂದ ಹೊಡೆದ ಮುಖ್ಯ ಶಿಕ್ಷಕ ಅಮಾನತು

    ದೃಷ್ಟಿ ಕಳೆದುಕೊಂಡ ಬಾಲಕ ಪ್ರಕರಣ- ಸ್ಕೇಲ್ ನಿಂದ ಹೊಡೆದ ಮುಖ್ಯ ಶಿಕ್ಷಕ ಅಮಾನತು

    ಚಾಮರಾಜನಗರ: ಮುಖ್ಯ ಶಿಕ್ಷಕ ವಿದ್ಯಾರ್ಥಿಗೆ ಸ್ಕೇಲ್‍ನಿಂದ ಹೊಡೆದ ಪರಿಣಾಮ ವಿದ್ಯಾರ್ಥಿ ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕನ್ನು ಅಮಾನತು ಮಾಡಿರುವ ಘಟನೆ ಚಾಮರಾಜನಗರದಲ್ಲಿ ಜರುಗಿದೆ.

    ಚಾಮರಾಜನಗರದ ರಾಮಸಮುದ್ರದ ಬಾಲರ ಪಟ್ಟಣ ಶಾಲೆಯ ಮುಖ್ಯ ಶಿಕ್ಷಕ ಯುಸೇಫ್, ಗಿರಿಮಲ್ಲೇಶ್ ಎಂಬ ವಿದ್ಯಾರ್ಥಿಗೆ ಸ್ಕೇಲ್‍ನಿಂದ ಹೊಡೆದಿರುವ ಪ್ರಕರಣ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಶಾಲೆಯ ಆಡಳಿತ ಮಂಡಳಿ ಮುಖ್ಯಶಿಕ್ಷಕನನ್ನು ಅಮಾನತು ಮಾಡಿದೆ. ಸ್ಕೇಲ್ ನಿಂದ ಹೊಡೆದ ಪರಿಣಾಮ ವಿದ್ಯಾರ್ಥಿ ಎಡಗಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ.

    ಏನಿದು ಘಟನೆ?;
    ಜನವರಿಯಲ್ಲಿ ಶಾಲೆಯ ಸಮಯದಲ್ಲಿ ಗಿರಿಮಲ್ಲೇಶ್ ಗಲಾಟೆ ಮಾಡುತ್ತಿದ್ದ ಎಂದು ಶಿಕ್ಷಕ ಸ್ಕೇಲ್ ಮೂಲಕ ಹೊಡೆದಿದ್ದಾನೆ. ಈ ವೇಳೆ ವಿದ್ಯಾರ್ಥಿ ಕಣ್ಣಿಗೆ ಸ್ಕೇಲ್ ಬಿದ್ದ ಕಾರಣ ವಿದ್ಯಾರ್ಥಿಯ ಕಣ್ಣಿಗೆ ಪೆಟ್ಟು ಬಿದ್ದಿದೆ. ಇದಾದ ನಂತರ ವಿದ್ಯಾರ್ಥಿ ತನಗೆ ಯಾವುದೇ ನೋವಾಗಿಲ್ಲ ಎಂದು ತಿಳಿದುಕೊಂಡಿದ್ದಾನೆ. ಇದೀಗ ವಿದ್ಯಾರ್ಥಿಗೆ ಕಣ್ಣಿನ ನೋವು ಕಾಡುತ್ತಿದ್ದ ಕಾರಣ ತಂದೆ ಸೋಮೇಶ್ ಮೈಸೂರಿನ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿದ್ದಾರೆ. ಈ ವೇಳೆ ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ. ಹೀಗಾಗಿ ಈತನ ದೃಷ್ಟಿ ಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ನಂತರ ಗಿರಿಮಲ್ಲೇಶ್‍ನನ್ನು ಪೋಷಕರು ವಿಚಾರಿಸಿದಾಗ ಐದು ತಿಂಗಳ ಹಿಂದೆ ಶಾಲೆಯಲ್ಲಿ ಹೀಗೆ ಆಗಿದೆ ಎಂದು ಹೇಳಿದ್ದಾನೆ. ಈ ಬಗ್ಗೆ ಗಿರಿಮಲ್ಲೇಶ್ ಪೋಷಕರು ಶಾಲೆಯ ಆಡಳಿತ ಮಂಡಳಿಯನ್ನು ಪ್ರಶ್ನಿಸಿದ್ದಾರೆ. ಇದ್ದನ್ನು ಒಪ್ಪಿಕೊಳ್ಳದ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕ ಯುಸೇಫ್‍ರನ್ನು 10 ದಿನಗಳ ರಜೆ ಮೇಲೆ ಕಳುಹಿಸಿತ್ತು. ಆದರೆ ಇದೀಗ ಪ್ರಕರಣ ವ್ಯಾಪಕ ಚರ್ಚೆ ಆದ ಕಾರಣ ಶಾಲೆಯ ಆಡಳಿತ ಮಂಡಳಿ ಯುಸೇಫ್ ನನ್ನು ಅಮಾನತುಗೊಳಿಸಿದೆ. ಸದ್ಯ ಗಿರಿಮಲ್ಲೇಶ್ ತಮಿಳುನಾಡಿನ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

  • ಕೆಲಸ ಹೇಳಿಕೊಡೋ ನೆಪದಲ್ಲಿ ಏಕಾಂತಕ್ಕೆ ಕರೆದು ಅಂಗಾಂಗಗಳ ವರ್ಣನೆ ಮಾಡಿದ ಹೆಡ್ ಮಾಸ್ಟರ್

    ಕೆಲಸ ಹೇಳಿಕೊಡೋ ನೆಪದಲ್ಲಿ ಏಕಾಂತಕ್ಕೆ ಕರೆದು ಅಂಗಾಂಗಗಳ ವರ್ಣನೆ ಮಾಡಿದ ಹೆಡ್ ಮಾಸ್ಟರ್

    ತುಮಕೂರು: ಕೊರಟಗೆರೆ, ಕುಣಿಗಲ್ ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಕೊಟ್ಟು ಶಿಕ್ಷಕಕರು ಅಮಾನತಾದ ಘಟನೆ ಮಾಸುವ ಮುನ್ನವೇ ತುಮಕೂರು ನಗರದಲ್ಲಿ ಇಂತಹದ್ದೆ ಘಟನೆ ನಡೆದಿದೆ.

     

    ಕ್ಯಾತಸಂದ್ರದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಿವಣ್ಣ ತನ್ನ ಕಚೇರಿಯ ಪ್ರಥಮ ದರ್ಜೆ ಸಹಾಯಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಅನುಕಂಪದ ಆಧಾರದ ಮೇಲೆ ಎಫ್‍ಡಿಎ ಆಗಿ ಕೆಲಸಕ್ಕೆ ಸೇರಿದ ಮಹಿಳಾ ಸಿಬ್ಬಂದಿಗೆ ಶಿಕ್ಷಕ ಶಿವಣ್ಣ ಪೋಲಿ ಮಾತುಗಳನ್ನಾಡಿ ಹಾಸಿಗೆಗೆ ಕರೆದಿದ್ದಾನೆ. ಕೆಲಸ ಹೇಳಿ ಕೊಡೋ ನೆಪದಲ್ಲಿ ಏಕಾಂತದಲ್ಲಿ ಮಹಿಳಾ ಸಿಬ್ಬಂದಿಯನ್ನು ಕಚೇರಿಗೆ ಕರೆಸಿಕೊಂಡು ಆಕೆಯ ಅಂಗಾಂಗಗಳ ವರ್ಣನೆ ಮಾಡುತ್ತಿದ್ದ. ನನ್ನ ಜೊತೆ ಸಹಕರಿಸು, ಎಲ್ಲ ಕೆಲಸವನ್ನೂ ನಿನಗೆ ಕಲಿಸಿ ಕೊಡುತ್ತೇನೆ ಎಂದು ಆಮೀಷ ಒಡ್ಡುತ್ತಿದ್ದ ಎಂದು ಆರೋಪಿಸಲಾಗಿದೆ.

    ಮುಖ್ಯ ಶಕ್ಷಕ ಶಿವಣ್ಣನ ಕಾಟ ಮಿತಿ ಮೀರಿದಾಗ ಸಂತ್ರಸ್ತೆ ಒಂದು ದಿನ ಕಪಾಳ ಮೋಕ್ಷ ಮಾಡಿದ್ದಾರೆ. ಆದ್ರೂ ಹೆಡ್ ಮಾಸ್ಟರ್ ತನ್ನ ಚೇಷ್ಟೆ ನಿಲ್ಲಿಸಲಿಲ್ಲ. ಇದರಿಂದ ಸಂತ್ರಸ್ತ ಮಹಿಳೆ ಡಿಡಿಪಿಐ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ. ಪರಿಣಾಮ ಈಗ ಮುಖ್ಯ ಶಿಕ್ಷಕ ಶಿವಣ್ಣ ಅಮಾನತುಗೊಂಡಿದ್ದಾನೆ.

  • ಮದ್ಯಕ್ಕಾಗಿ ಮಧ್ಯಾಹ್ನದ ಬಿಸಿಯೂಟದ ಅಕ್ಕಿಯನ್ನೇ ಮಾರಲು ಹೋದ ಮುಖ್ಯಶಿಕ್ಷಕ..!

    ಮದ್ಯಕ್ಕಾಗಿ ಮಧ್ಯಾಹ್ನದ ಬಿಸಿಯೂಟದ ಅಕ್ಕಿಯನ್ನೇ ಮಾರಲು ಹೋದ ಮುಖ್ಯಶಿಕ್ಷಕ..!

    ಮೈಸೂರು: ಇಲ್ಲಿನ ಶಾಲೆಯ ಮುಖ್ಯ ಶಿಕ್ಷಕನೊಬ್ಬ ಮದ್ಯಕ್ಕಾಗಿ ಮಕ್ಕಳ ಮಧ್ಯಾಹ್ನದ ಬಿಸಿಯೂಟದ ಅಕ್ಕಿಯನ್ನೇ ಮಾರಲು ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ರಾಜಶೆಟ್ಟಿ ಎಂಬಾತನೇ ಅಕ್ಕಿ ಮಾರಾಟ ಮಾಡಲು ಯತ್ನಿಸಿದ್ದು, ಈತ ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದನು. ಸದ್ಯ ಈತನನ್ನು ಗ್ರಾಮಸ್ಥರು ಅಕ್ಕಿಮೂಟೆ ಸಮೇತ ಹಿಡಿದಿದ್ದಾರೆ.

    ಶಿಕ್ಷಕ ಸಿಕ್ಕಿಬಿದ್ದಿದ್ದು ಹೇಗೆ?: ಶಾಲೆ ಸಮಯ ಮುಗಿದ ಮೇಲೆ ಮುಖ್ಯಶಿಕ್ಷಕ ಶಾಲೆಗೆ ಭೇಟಿ ನೀಡಿದ್ದಾನೆ. ಅಲ್ಲದೇ ಶಾಲೆಯಲ್ಲಿ ಅಕ್ಕಿಯಿದ್ದ ಕೊಠಡಿಯ ಬೀಗ ತೆಗೆದು ಅಲ್ಲಿಂದ ಸುಮಾರು 1 ಕ್ವಿಂಟಾಲ್ ಅಕ್ಕಿ ಮೂಟೆಯನ್ನು ಮಾರಾಟ ಮಾಡಲು ಯತ್ನಿದ್ದನು. ಈ ವೇಳೆ ಗ್ರಾಮಸ್ಥರು ಅಕ್ಕಿ ಸಮೇತ ಮುಖ್ಯಶಿಕ್ಷಕನನ್ನು ಹಿಡಿದಿದ್ದಾರೆ. ಈ ವೇಳೆ ಅಕ್ಕಿ ಖಾಲಿಯಾಗಿದ್ದ ಸಂದರ್ಭದಲ್ಲಿ ಸಾಲ ಮಾಡಿದ್ದೆ. ಹೀಗಾಗಿ ಆ ಅಕ್ಕಿಯನ್ನು ಇದೀಗ ವಾಪಸ್ ನೀಡಲು ಮುಂದಾಗಿದ್ದೇನೆ ಎಂದು ರಾಜೇಶ್ ಶೆಟ್ಟಿ ಸಬೂಬು ಹೇಳಿದ್ದನು.

    ಸದ್ಯ ಗ್ರಾಮಸ್ಥರು ಈ ಮುಖ್ಯ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಿಇಓ ಸುಂದರ್ ಮಾಹಿತಿ ಕಲೆ ಹಾಕಿದ್ದಾರೆ. ಗ್ರಾಮಸ್ಥರ ಆರೋಪದ ಮೇಲೆ ಮುಖ್ಯಶಿಕ್ಷಕ ರಾಜಶೆಟ್ಟಿಗೆ ನೋಟಿಸ್ ನೀಡಿದ್ದಾರೆ. ಅಲ್ಲದೇ ರಾಜಶೆಟ್ಟಿ ಮೇಲೆ ಇಲಾಖಾ ತನಿಖೆಗೂ ಬಿಇಓ ಸುಂದರ್ ಆದೇಶ ನೀಡಿದ್ದಾರೆ. ಮುಖ್ಯಶಿಕ್ಷಕನ ಮದ್ಯವ್ಯಸನದ ಬಗ್ಗೆಯೂ ಗ್ರಾಮಸ್ಥರು ಬಿಇಓಗೆ ದೂರು ನೀಡಿದ್ದಾರೆ.

  • 22 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಹೆಡ್‍ಮಾಸ್ಟರ್‍ಗೆ 55 ವರ್ಷ ಜೈಲು ಶಿಕ್ಷೆ

    22 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಹೆಡ್‍ಮಾಸ್ಟರ್‍ಗೆ 55 ವರ್ಷ ಜೈಲು ಶಿಕ್ಷೆ

    ಚೆನ್ನೈ: ಒಂದೇ ಶಾಲೆಯ 22 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕನಿಗೆ ತಮಿಳುನಾಡು ವಿಶೇಷ ನ್ಯಾಯಾಲಯ 55 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

    ಮಧುರೈ ಜಿಲ್ಲೆ ಪೊದಂಬು ಗ್ರಾಮದ ಪ್ರೌಢ ಶಾಲೆಯ ಹೆಡ್‍ಮಾಸ್ಟರ್ ಆಗಿದ್ದ ಆರೋಗ್ಯಸ್ವಾಮಿಗೆ ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ 3.4 ಲಕ್ಷ ರೂ. ದಂಡ ಹಾಗೂ 55 ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ಆರೋಗ್ಯ ಸ್ವಾಮಿ 7 ವರ್ಷದ ಹಿಂದೆ ಪಂಜು ಎಂಬವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ದಲಿತ ದೌರ್ಜನ್ಯದ ಅಡಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸಿದ ವೇಳೆ ಈತ 22 ವಿದ್ಯಾರ್ಥಿನಿಯರು ಮತ್ತು ಬಾಲಕರ ಮೇಲೂ ದೌರ್ಜನ್ಯ ಎಸಗಿದ್ದ ಎನ್ನುವ ವಿಚಾರ ಬಯಲಾಗಿತ್ತು.

    ಈತನ ಕೃತ್ಯಕ್ಕೆ ಸಾಕ್ಷಿಯಾಗಿದ್ದ ಸಿ ಅಮಲಿ ರೋಸ್, ಷಣ್ಮುಗ ಕುಮಾರಸ್ವಾಮಿ ಮತ್ತು ವಿಕ್ಟರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ಕೋರ್ಟ್ ಅವರನ್ನು ನಿರ್ದೋಷಿಗಳು ಎಂದು ತೀರ್ಪು ನೀಡಿದೆ. ದಂಡದ ಮೊತ್ತವಾದ 3.4 ಲಕ್ಷ ರೂ. ಹಣವನ್ನು ದೌರ್ಜನ್ಯಕ್ಕೆ ಒಳಗಾದ 22 ವಿದ್ಯಾರ್ಥಿನಿಯರಿಗೆ ಸಮಾನವಾಗಿ ಹಂಚಬೇಕು ಎಂದು ಆದೇಶಿಸಿದೆ.

    ಇದುವರೆಗೂ ಕೋರ್ಟ್ ಇತಿಹಾಸದಲ್ಲೇ ಅಪರಾಧಿಗೆ 50 ವರ್ಷಗೂ ಅಧಿಕ ಜೈಲು ಶಿಕ್ಷೆ ವಿಧಿಸಿದ ಪ್ರಕರಣಗಳಿಲ್ಲ. ಆದರೆ 55 ವರ್ಷ ಜೈಲು ಶಿಕ್ಷೆ ವಿಧಿಸಿರುವುದು ಭಾರತದ ನ್ಯಾಯಾಂಗದ ಇತಿಹಾಸದಲ್ಲೇ ಇದೇ ಮೊದಲು. ಆದರೆ ಈ ಸಂತಸವನ್ನು ಹಂಚಿಕೊಳ್ಳಲು ಪಂಜು ಅವರ ಮಗಳು ಬದುಕಿಲ್ಲ ಎಂದು ಸರ್ಕಾರಿ ವಕೀಲೆ ಪರಿಮಳದೇವಿ ಹೇಳಿದ್ದಾರೆ.

  • ಪುಸ್ತಕದಲ್ಲಿ ಹಾಜರ್, ಶಾಲೆಗೆ ಚಕ್ಕರ್- ಕುಡಿದು ಊರೆಲ್ಲಾ ತೂರಾಡೋ ಹೆಡ್ ಮಾಸ್ಟರ್

    ಪುಸ್ತಕದಲ್ಲಿ ಹಾಜರ್, ಶಾಲೆಗೆ ಚಕ್ಕರ್- ಕುಡಿದು ಊರೆಲ್ಲಾ ತೂರಾಡೋ ಹೆಡ್ ಮಾಸ್ಟರ್

    ರಾಯಚೂರು: ಸೆಪ್ಟಂಬರ್ ತಿಂಗಳು ಅಂದ್ರೆ ಅದು ಶಿಕ್ಷಕರಿಗೆ ಮೀಸಲು. ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸುವ ಉತ್ತಮ ಶಿಕ್ಷಕರನ್ನ ಗುರುತಿಸಿ ಇಡೀ ತಿಂಗಳು ಸನ್ಮಾನ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಆದರೆ ರಾಯಚೂರಿನ ಸಿಂಧನೂರು ತಾಲೂಕಿನಲ್ಲಿ ಶಿಕ್ಷಕ ಕಂ ಮುಖ್ಯೋಪಾಧ್ಯಾಯನೊಬ್ಬ ಶಾಲೆಗೆ ಬರದೇ ಕಂಠಪೂರ್ತಿ ಮದ್ಯ ಕುಡಿದು ಊರ ತುಂಬೆಲ್ಲಾ ತೂರಾಡುತ್ತಿರುತ್ತಾನೆ.

    ಸಿಂಧನೂರು ತಾಲೂಕಿನ ಮೀರಾಪುರ ಕ್ಯಾಂಪ್‍ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಾರುತಿ ರಾಠೋಡ್‍ನನ್ನ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ. ನಿತ್ಯ ಕುಡಿದು ಟೈಟಾಗಿ ಶಾಲೆ, ರಸ್ತೆ ಎಲ್ಲೆಂದರಲ್ಲಿ ಮಲಗಿರುತ್ತಾನೆ. ಮಕ್ಕಳಿಗೆ ಪಾಠ ಹೇಳಿ ಅವರ ಭವಿಷ್ಯ ನಿರ್ಮಿಸುವ ಜವಾಬ್ದಾರಿ ಹೊತ್ತಿರೋ ಶಿಕ್ಷಕ ಇವನು. ಶಾಲೆಯ ಮುಖ್ಯೋಪಾಧ್ಯಾಯ ಆಗಿರುವುದರಿಂದ ಮನಸ್ಸಿಗೆ ಬಂದಾಗ ಶಾಲೆಗೆ ಬಂದು ಹಾಜರಿ ಪುಸ್ತಕಕ್ಕೆ ಸಹಿ ಹಾಕಿ ಕುಡಿದು ಊರೆಲ್ಲಾ ತೂರಾಡಿಕೊಂಡಿರುತ್ತಾನೆ.

    ಮೇಷ್ಟ್ರು ಪಾಠ ಹೇಳ್ತಾರೆ ಅಂತ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ನಿತ್ಯವೂ ನಿರಾಸೆ. ಈ ಕುಡುಕ ಮೇಷ್ಟ್ರಿಗೆ ಟೈಮ್ ಟೇಬಲ್ ಇಲ್ಲ. ಹೀಗಾಗಿ ಶಾಲೆಯ ಎಲ್ಲಾ ಕೋಣೆಗಳಿಗೂ ಯಾವಾಗಲೂ ಬೀಗ ಜಡಿದಿರುತ್ತೆ. ಮಾರುತಿ ರಾಠೋಡ್ ಅವಾಂತರ ಇಷ್ಟಕ್ಕೆ ಮುಗಿದಿಲ್ಲ. ಇವನ ದುರ್ವರ್ತನೆಯಿಂದ ಸಂಬಳ ತಡೆ ಹಿಡಿದರೆ ಕುಡಿದ ಅಮಲಿನಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಬಂದು ಜಗಳ ಆಡುತ್ತಾನೆ.

    ಮುಖ್ಯೋಪಾಧ್ಯಾಯನ ವಿರುದ್ಧ ದೂರು ನೀಡಿ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ. ಈಗ ಕ್ರಮಕ್ಕೆ ಮುಂದಾಗಿರುವ ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಗೌಡ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಮೊದಲೇ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನ ಕಳುಹಿಸಲು ಪೋಷಕರು ಹಿಂಜರಿಯುತ್ತಿರುವ ಹೊತ್ತಲ್ಲಿ ಇಂತಹ ಶಿಕ್ಷಕರು ಇನ್ನಷ್ಟು ಬೇಸರ ಮೂಡಿಸುತ್ತಿದ್ದಾರೆ.

  • ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ- ಸಹಶಿಕ್ಷಕಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನ

    ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ- ಸಹಶಿಕ್ಷಕಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನ

    ಕೊಪ್ಪಳ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಅಂತ ಆರೋಪಿಸಿ ಸಹಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಗಂಗಾವತಿ ತಾಲೂಕಿನ ಜಂಗಮರ ಕಲ್ಗೂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ಮುದಿಗೌಡ ಸಹಶಿಕ್ಷಕಿ ಭಾಗ್ಯಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದ್ರಿಂದ ನೊಂದ ಶಿಕ್ಷಕಿ ಜುಲೈ 13 ರಂದು 14 ಪುಟದ ಡೆತ್ ನೋಟ್ ಬರೆದು ಫಿನಾಯಿಲ್ ಕುಡಿದು ಆತ್ಮಹತ್ಯೆ ಯತ್ನ ಮಾಡಿದ್ದಾರೆ. ಬಳಿಕ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಮುಖ್ಯ ಆರೋಪಿ ಮಂಜುನಾಥ ಸದ್ಯ ತಲೆಮರೆಸಿಕೊಂಡಿದ್ದಾನೆ. ಶಾಲೆಯ ಮೇಲ್ಗಡೆಯಿರೋ ಕೊಠಡಿಯೊಳಗೆ ಇರುವಾಗ ಮಂಜುನಾಥ ನನ್ನ ಮೈ ಮುಟ್ಟೋದು, ಅಸಭ್ಯವಾಗಿ ವರ್ತಿಸೋದು ಮಾಡಿದ್ದಾನೆ. ಈ ವಿಷಯವನ್ನ ನಿನ್ನ ಪತಿಗೆ ಯಾಕೆ ಹೇಳಿದ್ಯಾ ಅಂತ ಮಾನಸಿಕವಾಗಿ ಚಾಂದಪಾಷಾ, ಹಾಗೂ ಶಂಕರಪ್ಪ ಅನ್ನೋವ್ರು ತುಂಬಾ ತೊಂದ್ರೆ ಕೊಡ್ತಿದ್ರು ಅಂತ ನೊಂದ ಶಿಕ್ಷಕಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಆದ್ರೆ ಈ ಆರೋಪವನ್ನ ಆರೋಪಿತರು ತಳ್ಳಿ ಹಾಕ್ತಿದ್ದಾರೆ. ನಾವು ಆ ರೀತಿಯಾಗಿ ಸಹ ಶಿಕ್ಷಕಿಗೆ ಕಿರುಕುಳ ನೀಡಿಲ್ಲವೆಂದು ವಾದಿಸಿದ್ದಾರೆ.

    ಸದ್ಯ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಮುಖ್ಯ ಶಿಕ್ಷಕ ಮಂಜುನಾಥ, ಇನ್ನೊರ್ವ ಮುಖ್ಯ ಶಿಕ್ಷಕ ಚಾಂದಪಾಷಾ, ಇಸಿಒ ಶಂಕರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.