Tag: health check up

  • ಕಟ್ಟಡ ಕಾರ್ಮಿಕರ ಹೆಲ್ತ್ ಚೆಕಪ್‌ನಲ್ಲೂ 47.99 ಕೋಟಿ ಗೋಲ್ಮಾಲ್‌ – ಲೋಕಾಯುಕ್ತಕ್ಕೆ ಬಿಜೆಪಿ ದೂರು

    ಕಟ್ಟಡ ಕಾರ್ಮಿಕರ ಹೆಲ್ತ್ ಚೆಕಪ್‌ನಲ್ಲೂ 47.99 ಕೋಟಿ ಗೋಲ್ಮಾಲ್‌ – ಲೋಕಾಯುಕ್ತಕ್ಕೆ ಬಿಜೆಪಿ ದೂರು

    – ಸಚಿವ ಸಂತೋಷ್‌ ಲಾಡ್‌ ರಾಜೀನಾಮೆಗೆ ಆಗ್ರಹ

    ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ, ವಾಲ್ಮೀಕಿ ಹಗರಣ, ಕೋವಿಡ್‌ ಹಗರಣಗಳು ಸದ್ದು ಮಾಡುತ್ತಿರುವ ಹೊತ್ತಿನಲ್ಲಿ ಮತ್ತೊಂದು ಅಕ್ರಮ ಆರೋಪ ಕೇಳಿಬಂದಿದೆ. ಕಟ್ಟಡ ಕಾರ್ಮಿಕರ (Construction Workers) ಆರೋಗ್ಯ ತಪಾಸಣೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿ ನಿಯೋಗ ಲೋಕಾಯುಕ್ತಕ್ಕೆ ದೂರು ನೀಡಿದೆ.

    ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳ ಹೆಲ್ತ್ ಚೆಕಪ್‌ನಲ್ಲಿ (Health Check Up) ಭಾರೀ ಗೋಲ್ಮಾಲ್ ನಡೆದಿದೆ. 47.99 ಕೋಟಿ ರೂ.ಗಳನ್ನ ಗುಳುಂ ಮಾಡಲಾಗಿದೆ. ಯಾವುದೇ ಹೆಲ್ತ್ ಚೆಕಪ್ ನಡೆಸದೇ ಹಣ ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ನಿಯೋಗ ಆರೋಪಿಸಿದೆ. ಇದನ್ನೂ ಓದಿ: ಇನ್ಸ್ಟಾದಲ್ಲೇ 3 ವರ್ಷ ಲವ್; ಅಡ್ರೆಸ್ ಇಲ್ಲದ ಕಲ್ಯಾಣದ ಮಂಟಪದಲ್ಲಿ ಮದುವೆ ಫಿಕ್ಸ್ ಮಾಡಿ ವಧು ಎಸ್ಕೇಪ್!

    ಅಲ್ಲದೇ ಹೆಲ್ತ್ ಚೆಕಪ್ ಹೆಸರಲ್ಲಿ ಒಂದೊಂದಕ್ಕೆ ಒಂದೊಂದು ರೀತಿಯಲ್ಲಿ ಬಿಲ್ ಮಾಡಿದ್ದಾರೆ. ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್ ಕೊಟ್ಟು ಹಣ ಹೊಡೆದಿದ್ದಾರೆ. ಇದಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇರ ಹೊಣೆ ಹೊತ್ತು ರಾಜೀನಾಮೆ ನೀಡ್ಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎ.ನ್‌ ರವಿಕುಮಾರ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: AI ಬಳಸಿ ನನ್ನ ಖಾಸಗಿ ವೀಡಿಯೋ ಲೀಕ್ ಮಾಡಿದ್ದಾರೆ – ನಟಿ ಪ್ರಗ್ಯಾ ನಗ್ರಾ ಆರೋಪ

  • ದೆಹಲಿಯಲ್ಲಿಂದು ಅಭಿಗೆ ಆರೋಗ್ಯ ತಪಾಸಣೆ – ಬೇಹುಗಾರಿಕೆ ಕೋನದಲ್ಲೂ ಸೇನಾ ವಿಚಾರಣೆ

    ದೆಹಲಿಯಲ್ಲಿಂದು ಅಭಿಗೆ ಆರೋಗ್ಯ ತಪಾಸಣೆ – ಬೇಹುಗಾರಿಕೆ ಕೋನದಲ್ಲೂ ಸೇನಾ ವಿಚಾರಣೆ

    ನವದೆಹಲಿ: ಶುಕ್ರವಾರ ರಾತ್ರಿ ತಾಯ್ನಾಡು ಭಾರತಕ್ಕೆ ವಾಪಸ್ ಆಗಿರೋ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಇಂದು ದೆಹಲಿಯಲ್ಲಿ ಸಂಪೂರ್ಣ ವೈದ್ಯಕೀಯ ತಪಾಸಣೆ ನಡೆಯಲಿದೆ.

    ನಿನ್ನೆ ಅಟಾರಿ ಗಡಿಯಿಂದ ಅಮೃತಸರಕ್ಕೆ ತೆರಳಿದ ಧೀರಯೋಧ ಅಭಿನಂದನ್ ಅಲ್ಲಿಂದ ದೆಹಲಿ ತಲುಪಿದ್ದಾರೆ. ಹೀಗಾಗಿ ಇಂದು ಅಲ್ಲಿ ಅವರಿಗೆ ವೈದ್ಯಕೀಯ ತಪಾಸಣೆ ನಡೆಯಲಿದೆ. ಪ್ಯಾರಾಚೂಟ್‍ನಿಂದ ಜಿಗಿದಿದ್ದ ಕಾರಣ ವಾರದ ಕಾಲ ತಪಾಸಣೆ ಜೊತೆಗೆ ಭಾರತೀಯ ಸೇನೆ ವಿಚಾರಣೆಗೆ ಒಳಪಡಿಸಲಿದೆ ಎನ್ನಲಾಗಿದೆ.

    ಅಭಿನಂದನ್ ಎದುರಿಸಬಹುದಾದ ವಿಚಾರಣೆಗಳು..?
    ವಾಯುಸೇನೆ ಅಧಿಕಾರಿಗಳು ವಾಯುಸೇನೆಯ ಗುಪ್ತಚರ ಘಟಕಕ್ಕೆ ಕರೆದೊಯ್ಯುತ್ತಾರೆ. ಈ ವೇಳೆ ಫಿಟ್‍ನೆಸ್ ಸೇರಿ, ಸಾಕಷ್ಟು ವೈದ್ಯಕೀಯ ಪರೀಕ್ಷೆ ನಡೆಯುತ್ತದೆ. ದೇಹದಲ್ಲಿ ಯಾವುದಾದರೂ ಟ್ರ್ಯಾಕಿಂಗ್ ಡಿವೈಸ್ ಇದೆಯೇ ಅಂತ ಸ್ಕ್ಯಾನಿಂಗ್ ಮಾಡ್ತಾರೆ. ಶತ್ರುರಾಷ್ಟ್ರ ದೈಹಿಕವಾಗಿ ಅಲ್ಲದೆ ಮಾನಸಿಕವಾಗಿ ಕಿರುಕುಳ ನೀಡಿದ್ಯಾ ಅಂತ ತಪಾಸಣೆ ನಡೆಸಬಹುದು. ಹೆಚ್ಚಿನ ತನಿಖೆಗಾಗಿ ಗುಪ್ತಚರ ಇಲಾಖೆಗೆ ಅಥವಾ ರಾ ಸಂಸ್ಥೆಗೆ ಹಸ್ತಾಂತರಿಸಬಹುದು. ನಮ್ಮ ದೇಶದ ಗುಪ್ತ ವಿಚಾರವನ್ನು ವೈರಿರಾಷ್ಟ್ರಕ್ಕೆ ಬಿಟ್ಟುಕೊಟ್ಟಿದ್ದಾರೆಯೇ ಅಂತ ವಿಚಾರಣೆ ನಡೆಸಬಹುದು. ಹಾಗೂ ಶತ್ರುರಾಷ್ಟ್ರದ ರಹಸ್ಯವೇನಾದರೂ ತಿಳಿದಿದ್ದರೆ ನಮಗೆ ತಿಳಿಸಿ ಅಂತ ಕೇಳುವ ಸಾಧ್ಯತೆಗಳಿವೆ.

    ಪಾಕಿಸ್ತಾನದ ವಾಯುದಾಳಿಯನ್ನು ಹಿಮ್ಮೆಟ್ಟುವ ವೇಳೆ ಗಡಿ ದಾಟಿ ಪಾಕ್ ಸೈನ್ಯದ ವಶದಲ್ಲಿದ್ದ ಅಭಿನಂದನ್ ಶುಕ್ರವಾರ ಸಂಜೆ ವೇಳೆಗೆ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಮತ್ತೆ ತನ್ನ ಕುತಂತ್ರವನ್ನು ಪ್ರದರ್ಶಿಸಿತ್ತು. ನಿನ್ನೆ ಮುಂಜಾನೆಯಿಂದಲೇ ವಾಘಾ ಗಡಿಯಲ್ಲಿ ಕಾದು ಕುಳಿತಿದ್ದ ಭಾರತೀಯ ಅಭಿಮಾನಿಗಳ ಛಲ ರಾತ್ರಿಯಾದ್ರು ಕಡಿಮೆ ಆಗಲಿಲ್ಲ. ಸಂಜೆ ವೇಳೆಗೆ ಮಳೆ ಬಂದಿದ್ದರೂ ಕೂಡ ಲೆಕ್ಕಿಸದ ಭಾರತೀಯರು ಅಲ್ಲೇ ನಿಂತಿದ್ದರು. ಇವೆಲ್ಲದರ ನಡುವೆಯೇ ರಾತ್ರಿ 9.15 ಗಂಟೆ ವೇಳೆಗೆ ಅಭಿನಂದನ್ ಭಾರತದ ನೆಲವನ್ನು ಪ್ರವೇಶಿಸಿದ್ದರು.

    ಅಭಿನಂದನ್ ಅವರನ್ನು ಸ್ವಾಗತ ಮಾಡಲು ವಾಯುಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಥಾಮಸ್ ಕುರಿಯನ್ ಹಾಗೂ ಭಾರತ ಸರ್ಕಾರದ ಅಧಿಕಾರಿಗಳು ವಾಘಾ ಗಡಿಗೆ ಆಗಮಿಸಿದ್ದರು. ಅಲ್ಲದೇ ಅಭಿನಂದನ್ ಪೋಷಕರು ಕೂಡ ಸ್ಥಳದಲ್ಲಿ ಹಾಜರಿದ್ದರು. ವಾಘಾ ಗಡಿಯಿಂದ ನೇರ ಅವರನ್ನು ಅಮೃತಸರಕ್ಕೆ ಕರೆದ್ಯೊಯಲಾಯಿತು. ಆ ಬಳಿಕ ಅಲ್ಲಿಂದ ಸೇನಾಧಿಕಾರಿಗಳೊಂದಿಗೆ ದೆಹಲಿಗೆ ವಿಮಾನದಲ್ಲಿ ಕರೆತಂದಿದ್ದಾರೆ.

    https://www.youtube.com/watch?v=ArvRnqPs81s

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv