Tag: health department

  • ವಿಚಿತ್ರ ಜ್ವರ, ಮೊದಲ ಬಲಿ- ಗ್ರಾಮದಲ್ಲಿ ಭಯದ ವಾತಾವರಣ

    ವಿಚಿತ್ರ ಜ್ವರ, ಮೊದಲ ಬಲಿ- ಗ್ರಾಮದಲ್ಲಿ ಭಯದ ವಾತಾವರಣ

    ಚಾಮರಾಜನಗರ: ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಸಿಂಗನಲ್ಲೂರು ಗ್ರಾಮದ ಜನರು ವಿಚಿತ್ರ ಜ್ವರದಿಂದ ಬಳಲುತ್ತಿದ್ದು, ಡೆಂಗ್ಯೂ ಶಂಕೆ ವ್ಯಕ್ತವಾಗಿದೆ. ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಾಗರ್ ಎಂಬ ಯುವಕ ಸಾವನ್ನಪ್ಪಿದ್ದಾನೆ.

    ಗ್ರಾಮದ ಜನತೆ ವಿಚಿತ್ರ ಜ್ವರದಿಂದ ಬಳಲುತ್ತಿದ್ದಾರೆ. ಸುಮಾರು 150 ರಿಂದ 200 ಜನ ವಿಚಿತ್ರ ಜ್ವರಕ್ಕೆ ಒಳಗಾಗಿದ್ದು, ಸೂಕ್ತ ಚಿಕಿತ್ಸೆ ದೊರಕದೆ ನರಳುತ್ತಿದ್ದಾರೆ. ಇಡೀ ಗ್ರಾಮವೇ ಜ್ವರದಿಂದ ಬಳಲುತ್ತಿದ್ದರೂ ಸಹ ಆರೋಗ್ಯಾಧಿಕಾರಿಗಳಾಗಲಿ, ಸ್ಥಳೀಯ ಜನಪ್ರತಿನಿಧಿಗಳಾಗಲಿ ತಲೆ ಕೆಡಿಸಿಕೊಳ್ಳುತ್ತಿಲ್ಲ. ರೋಗಿಗಳ ಕಷ್ಟಕ್ಕೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

    ಕೂಡಲೇ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡದಿದ್ರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ತೀವ್ರ ಜ್ವರದಿಂದ ಬಳಲುತ್ತಿರುವ ರೋಗಿಗಳನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ರೋಗಿಗಳು ಊರಿನಲ್ಲೆ ಇದ್ದು ಸೂಕ್ತ ಚಿಕಿತ್ಸೆಗೆ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ.

    ವಿಚಿತ್ರ ಜ್ವರಕ್ಕೆ ಮೊದಲ ಬಲಿಯಾಗಿದ್ದು, ಕಳೆದ ನಾಲ್ಕು ದಿನಗಳಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಾಗರ್ ಎಂಬ ಯುವಕ ಜ್ವರದಿಂದ ಚಿಕಿತ್ಸೆ ಫಲಕಾರಿಯಾಗೆ ಸಾವನ್ನಪ್ಪಿದ್ದಾನೆ. ಗ್ರಾಮದಲ್ಲಿ ಇದೀಗ ಭಯದ ವಾತಾವರಣ ನಿರ್ಮಾಣವಾಗಿದ್ದು, ಆರೋಗ್ಯ ಇಲಾಖೆ ಇನ್ನಾದ್ರೂ ಎಚ್ಚೆತ್ತು ಸೂಕ್ತ ಚಿಕಿತ್ಸೆಗೆ ಮುಂದಾಗಬೇಕಿದೆ.

  • ಗ್ರಾಮದಲ್ಲಿ ಸಾಮೂಹಿಕ ಜ್ವರ -ಯುವತಿ ಸಾವು

    ಗ್ರಾಮದಲ್ಲಿ ಸಾಮೂಹಿಕ ಜ್ವರ -ಯುವತಿ ಸಾವು

    ಚಾಮರಾಜನಗರ: ಗ್ರಾಮದಲ್ಲಿ ಸಾಮೂಹಿಕ ಜ್ವರದಿಂದ ಗ್ರಾಮಸ್ಥರು ಬಳುತ್ತಿದ್ದು, ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಉಯಿಲನತ್ತ ಗ್ರಾಮದಲ್ಲಿ ನಡೆದಿದೆ.

    ಜ್ವರಕ್ಕೆ ತುತ್ತಾಗಿ ಸಾವನ್ನಪ್ಪಿದ ಯುವತಿಯನ್ನು 20 ವರ್ಷದ ಗೀತಾ ಎಂದು ಗುರುತಿಸಲಾಗಿದೆ. ಹನೂರು ತಾಲೂಕು ಉಯಿಲನತ್ತ ಗ್ರಾಮದಲ್ಲಿ 80ಕ್ಕೂ ಹೆಚ್ಚು ಕುಟುಂಬಗಳಿದ್ದು ಪ್ರತಿ ಕುಟುಂಬದಲ್ಲೂ ಒಬ್ಬರಲ್ಲ ಒಬ್ಬರು ಜ್ವರ, ಮೈ-ಕೈನೋವು, ಮೂಳೆ ನೋವು, ಸಂಧಿನೋವಿನಿಂದ ಬಳಲುತ್ತಿದ್ದಾರೆ. ಇವರಿಗೆ ಕೇವಲ ಮಾತ್ರೆ ನೀಡಿ ಮತ್ತೆ ಯಾವುದೇ ಚಿಕಿತ್ಸೆ ನೀಡದೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ.

    ತೀವ್ರ ಜ್ವರ ಹಾಗು ಸಂಧಿನೋವಿನಿಂದ ಬಳಲುತ್ತಿರುವುದರಿಂದ ಪಕ್ಕದ ಊರುಗಳಿಗೆ ತೆರಳಿ ಚಿಕಿತ್ಸೆ ಪಡೆಯುಲು ಸಾಧ್ಯವಾಗದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಆದರೆ ನಾಮಕಾವಾಸ್ತೆಗೆ ಮಾತ್ರೆ ಕೊಟ್ಟು ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಇಲಾಖೆಯಿಂದ ಗ್ರಾಮದಲ್ಲೇ ಒಂದು ಕ್ಯಾಂಪ್ ಮಾಡಿ ಸಮರ್ಪಕ ಚಿಕಿತ್ಸೆ ನೀಡಬೇಕು ಇಲ್ಲವೇ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

  • ಸರ್ಕಾರ ಪತನದ ಮುನ್ಸೂಚನೆ ನೀಡಿದ್ರಾ ಶ್ರೀರಾಮುಲು

    ಸರ್ಕಾರ ಪತನದ ಮುನ್ಸೂಚನೆ ನೀಡಿದ್ರಾ ಶ್ರೀರಾಮುಲು

    ಗದಗ: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ಅವಧಿ ಇನ್ನು ಕೇವಲ ಮೂರು ತಿಂಗಳು ಮಾತ್ರನಾ ಅನ್ನೋ ಪ್ರಶ್ನೆ ರಾಜ್ಯದ ಜನತೆಯಲ್ಲಿ ಕಾಡುತ್ತಿದೆ.

    ಯಾಕಂದರೆ ಗದಗದಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು ಅವರು ನಾಳೆ ಏನಾದರು ಆದ್ರೆ ನಾನು ಆರೋಗ್ಯ ಮಂತ್ರಿಯಾಗಿರಲ್ಲ, 3 ತಿಂಗಳಲ್ಲಿ ಸರ್ಕಾರದ ಅನುದಾನ ಎಷ್ಟಿದೆಯೋ ಅಷ್ಟನ್ನೂ ಬಳಸಿ ಅಂತಾ ಅಧಿಕಾರಿಗಳಿಗೆ ಆದೇಶ ಹೊರಡಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ನನ್ನ ರಾಜಕೀಯದಲ್ಲೂ ಕೂಡ ಸುಧಾರಣೆ ಆಗುತ್ತಿಲ್ಲ. ಎಲ್ಲೋ ಒಂದು ಕಡೆ ವ್ಯವಸ್ಥೆ ಕೆಟ್ಟುಹೋಗಿದೆ ಅಂತಾ ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಸ್ವತಃ ರಾಮುಲು ಅವರೇ 3 ತಿಂಗಳ ಬಳಿಕ ಸರ್ಕಾರ ಪತನದ ಮುನ್ಸೂಚನೆ ನೀಡಿದ್ದಾರಾ ಅನ್ನೋ ಪ್ರಶ್ನೆ ಎಲ್ಲರ ತಲೆಕೆಡಿಸಿದೆ. ಈ ಹೇಳಿಕೆ ರಾಜಕೀಯ ಪಾಳಯದಲ್ಲಿ ತಲ್ಲಣ ಮೂಡಿಸಿದೆ.

    ನಾವು ಯಾವುದೇ ಕೆಲಸ ಮಾಡಲಿ ಭಗವಂತ ನೋಡುವ ಕೆಲಸ ಮಾಡಬೇಕು. ಮನುಷ್ಯರು ನೋಡೋದು ಬೇಕಾಗಿಲ್ಲ. ಇಲ್ಲಿ ಯಾರೂ ಶಾಶ್ವತ ಅಲ್ಲ. ರಾಜ್ಯದಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞರು ಹಾಗೂ ವೈದ್ಯರ ಕೊರತೆಯಿದೆ. ಆ ಕೊರತೆಯನ್ನು ನೀಗಿಸುವಂತೆ ನಾನು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸರ್ಕಾರಿ ಆಸ್ಪತ್ರೆಗಳ ಅನುದಾನದಲ್ಲಿ 20 ಕೋಟಿ ರೂ. ಉಳಿದಿದೆ. ಇದನ್ನು ಮೂರು ತಿಂಗಳೊಳಗೆ ಖರ್ಚು ಮಾಡಿ. ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 2 ಸಾವಿರ ಕೋಟಿ ಅನುದಾನವನ್ನು ಕೊಡುತ್ತಾರೆ ಎಂದಾದರೆ ಅಧಿಕಾರಿಗಳು ಅದನ್ನು ಎನ್‌ಆರ್‌ಎಚ್‌ಎಂನಲ್ಲಿ ಖರ್ಚು ಮಾಡಿದರೆ ಮಾತ್ರ ಪೂರ್ಣ ಅನುದಾನವನ್ನು ಕೇಳಲು ಸಾಧ್ಯವಾಗುತ್ತೆ ಎಂದು ಶ್ರೀರಾಮುಲು ತಿಳಿಸಿದರು.

    ಹಾಗೆಯೇ ಒಂದು ಜಿಲ್ಲೆಯಲ್ಲಿ 20 ಕೋಟಿವರೆಗೆ ಹಣ ಹಾಗೆಯೇ ಉಳಿದಿದೆ ಎಂದರೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಎಷ್ಟೆಷ್ಟು ಉಳಿದಿರಬಹುದು? ಮೂರು ತಿಂಗಳೊಳಗೆ ಈ ಹಣವನ್ನು ಖರ್ಚು ಮಾಡಿ. ಆಸ್ಪತ್ರೆಗಳಿಗೆ ಆಧುನಿಕ ತಂತ್ರಜ್ಞಾನ ಹೊಂದಿರುವ ಯಂತ್ರಗಳನ್ನು ತೆಗೆದುಕೊಂಡು ಬನ್ನಿ, ಅಭಿವೃದ್ಧಿ ಮಾಡಿ ನಾವೇನು ಬೇಡ ಅನ್ನೋದಿಲ್ಲ. ನಿಮಗೆ ಪೂರ್ಣ ಸ್ವತಂತ್ರ್ಯ ನೀಡುತ್ತೇನೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಎಲ್ಲರೂ ಎಲ್ಲಾ ರೀತಿಯಲ್ಲೂ ಸುಧಾರಣೆ ಆಗಬೇಕು. ನಾನೂ ಕೂಡ ಸುಧಾರಣೆ ಆಗಬೇಕು, ಆದರೆ ರಾಜಕೀಯ ಒತ್ತಡ ಇರುವುದರಿಂದ ನಾನು ಸುಧಾರಣೆ ಆಗಲು ಆಗುತ್ತಿಲ್ಲ. ಒಂದು ಕಡೆ ವ್ಯವಸ್ಥೆ ಕೆಟ್ಟುಹೋಗಿದೆ ಅದನ್ನು ಸರಿಪಡಿಸಬೇಕಾದರೆ, ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕಿದೆ ಎಂದು ಬೇಸರ ವ್ಯಕ್ತಪಡಿಸಿದರು.

  • ರೇವಣ್ಣ ಆರೋಗ್ಯ ಇಲಾಖೆಗೂ ಕೈ ಹಾಕಿದ್ರು – ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್

    ರೇವಣ್ಣ ಆರೋಗ್ಯ ಇಲಾಖೆಗೂ ಕೈ ಹಾಕಿದ್ರು – ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್

    ವಿಜಯಪುರ: ಹೆಚ್.ಡಿ. ರೇವಣ್ಣನಿಂದ ಮೈತ್ರಿ ಸರ್ಕಾರಕ್ಕೆ ಪತನ ಆಗಿದೆ ಎಂದು ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.

    ಇಂದು ನಗರದಲ್ಲಿ ಮಾತನಾಡಿದ ಅವರು ಹೆಚ್.ಡಿ ರೇವಣ್ಣ ಎಲ್ಲ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ಅವರು ಆರೋಗ್ಯ ಇಲಾಖೆಯಲ್ಲೂ ಕೈ ಹಾಕಿದ್ದರು. ಅವರ ವಿರುದ್ಧ ನಮಗೂ ಸಾಕಷ್ಟು ಅಸಮಾಧಾನವಿದೆ. ಅಸಮಾಧಾನ ಇದೆ ಎನ್ನುವ ಕಾರಣಕ್ಕೆ ಸರ್ಕಾರವನ್ನು ಬೀಳಿಸಬೇಕೇ ಎಂದು ಪ್ರಶ್ನೆ ಮಾಡಿದರು.

    ಈ ವೇಳೆ ಕೆಎಂಎಫ್ ಅಧ್ಯಕ್ಷರನ್ನು ರೇವಣ್ಣ ಕಿಡ್ನಾಪ್ ಮಾಡಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹೆಚ್.ಡಿ. ರೇವಣ್ಣ ಈ ವಿಷಯದಲ್ಲಿ ಕೈ ಹಾಕಿದ್ದು ತಪ್ಪು. ಅ ಸ್ಥಾನವನ್ನು ಕಾಂಗ್ರೆಸ್ ಶಾಸಕ ಭೀಮಾನಾಯಕ್ ಅವರಿಗೆ ನೀಡಲು ಮೊದಲೇ ತೀರ್ಮಾನ ಆಗಿತ್ತು ಎಂದು ತಿಳಿಸಿದರು.

  • ರಾಜ್ಯದಲ್ಲಿಗ ಮಾರಣಾಂತಿಕ ಕಾಗೆ ಜ್ವರದ ಆತಂಕ! – ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

    ರಾಜ್ಯದಲ್ಲಿಗ ಮಾರಣಾಂತಿಕ ಕಾಗೆ ಜ್ವರದ ಆತಂಕ! – ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

    ಬೆಂಗಳೂರು: ಕೇರಳದಲ್ಲಿ ಪಕ್ಷಿಗಳಿಂದ ಮನುಷ್ಯನಿಗೆ ಹರಡುವ ‘ವೆಸ್ಟ್ ನೈಲ್ ಫೀವರ್’ ಮಾದರಿಯ ಜ್ವರ ಕಾಣಿಸಿಕೊಂಡಿರುವ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಕೇರಳ ಗಡಿಯಲ್ಲಿನ ರಾಜ್ಯದ ನಾಲ್ಕು ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.

    ವೆಸ್ಟ್ ನೈಲ್ ಫೀವರ್ ಕಾಗೆ ಸೇರಿದಂತೆ ಇತರೆ ಚಿಕ್ಕ ಪಕ್ಷಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸೋಂಕು ಪಕ್ಷಿಯಿಂದ ಮತ್ತೊಂದು ಪಕ್ಷಿಗೆ ಅಥವಾ ಮನುಷ್ಯನಿಗೆ ಸೊಳ್ಳೆ ಹಾಗೂ ಸೋಂಕಿತ ಪಕ್ಷಿಯ ಕಡಿತದಿಂದ ಹರಡುತ್ತದೆ. ಕೇರಳ ಗಡಿಯಲ್ಲಿರುವ ಮೈಸೂರು, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡದಲ್ಲಿ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸ್ಥಳೀಯ ಜಿಲ್ಲಾಸ್ಪತ್ರೆಗಳಿಗೆ ಸೂಚನೆ ನೀಡಿದೆ.

    ವೆಸ್ಟ್ ನೈಲ್ ಫೀವರ್ ಲಕ್ಷಣ:
    ಈ ಸೋಂಕು ತಗುಲಿದವರಿಗೆ ಜ್ವರ, ತಲೆನೋವು, ತುರಿಕೆ, ಮೈ-ಕೈ ನೋವು, ವಾಂತಿ ಶುರುವಾಗುತ್ತದೆ. ಅಲ್ಲದೆ ಈ ಕಾಯಿಲೆಗೆ ಔಷಧವಿಲ್ಲ, ಆದ್ರೆ ಆಯಾಯ ಗುಣಲಕ್ಷಣಗಳನ್ನು ಆಧಾರಿಸಿ ಚಿಕಿತ್ಸೆ ನೀಡಲಾಗುತ್ತದೆ.

    ಸದ್ಯ ಕರ್ನಾಟಕದಲ್ಲಿ ಈ ರೋಗ ಪತ್ತೆಯಾಗಿಲ್ಲ. ಆದ್ರೂ ಆರೋಗ್ಯ ಇಲಾಖೆ ಈ ರೋಗವನ್ನು ತಡೆಗಟ್ಟುವ ಬಗ್ಗೆ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

  • ಹಾಸನದಲ್ಲೂ ಮಂಗನ ಕಾಯಿಲೆ ವೈರಸ್ ಪತ್ತೆ

    ಹಾಸನದಲ್ಲೂ ಮಂಗನ ಕಾಯಿಲೆ ವೈರಸ್ ಪತ್ತೆ

    ಹಾನಸ: ಮಲೆನಾಡಿಗರ ನಿದ್ದೆ ಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ಹಾಸನ ಜಿಲ್ಲೆಯಲ್ಲಿಯೂ ಮಾರಕ ರೋಗದ ವೈರಸ್ ಪತ್ತೆಯಾಗಿದೆ.

    ಹಾಸನ ಜಿಲ್ಲೆಯ ಎರಡು ಗ್ರಾಮಗಳಲ್ಲಿ ದನ ಕರುಗಳ ಉಣ್ಣೆಯಲ್ಲಿ ವೈರಸ್ ಕಂಡು ಬಂದಿದೆ. ಹಾಸನ ತಾಲೂಕಿನ ಚಿಕ್ಕ ಬಸವನಹಳ್ಳಿ ಗ್ರಾಮ ಹಾಗೂ ಸಕಲೇಶಪುರ ಬಸವನಗುಡಿ ಗ್ರಾಮದಲ್ಲಿ ಮಂಗನ ಕಾಯಿಲೆ ವೈರಸ್ ಪತ್ತೆಯಾಗಿದೆ.

    ವೈರಸ್ ಪತ್ತೆಯಾದ ಹಳ್ಳಿಗಳಿಗೆ ಜಿಲ್ಲಾ ಪಂಚಾಯತ್ ಸಿಇಓ ವಿಜಯ್ ಹಾಗೂ ಡಿಎಚ್‍ಓ ಸತೀಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಸ್ಥರಿಗೆ ಈ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

    ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ತಂಡ ಮನೆ ಮನೆಗೆ ಔಷಧ ನೀಡಿ, ಬಿತ್ತಿ ಪತ್ರ ಹಂಚಿ ಜಾಗೃತಿ ಮೂಡಿಸಲು ಗ್ರಾಮದಲ್ಲೇ ಬಿಡು ಬಿಟ್ಟಿದ್ದಾರೆ. ಈಗಾಗಲೇ ಜಿಲ್ಲೆಯ 625 ದನ-ಕರುಗಳು, ಕುರಿ, ಮೇಕೆಯ ರಕ್ತದ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಎರಡು ಸ್ಯಾಂಪಲ್ ಗಳಲ್ಲಿ ಮಂಗನ ಕಾಯಿಲೆ ವೈರಸ್ ಪಾಸಿಟಿವ್ ಆಗಿ ಬಂದಿದೆ.

    ಈಗಾಗಲೇ ಮಲೆನಾಡಿನ ಭಾಗದಲ್ಲಿ ಮಂಗನ ಕಾಯಿಲೆಯಿಂದ ಅನೇಕರು ಮೃತಪಟ್ಟಿದ್ದಾರೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಆರೋಗ್ಯ ಇಲಾಖೆ, ಜನರಿಗೆ ಒಂದು ಔಷಧಿ (Oil)ಯನ್ನು ಕೊಡುತ್ತಿದ್ದಾರೆ. ಅದನ್ನು ಪ್ರಾಣಿಗಳನ್ನು ಕಾಡಿನಲ್ಲಿ ಮೇಯಿಸಲು ಹೋದಾಗ ಅದನ್ನು ತಮ್ಮ ದೇಹಕ್ಕೆ ಹಂಚಿಕೊಂಡು ಹೋಗಬೇಕು ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕರಾವಳಿಯಲ್ಲೂ ಮಂಗನ ಕಾಯಿಲೆ ಭೀತಿ – ಮೃತ ಮಂಗಗಳ ಕಳೇಬರ ಪತ್ತೆ

    ಕರಾವಳಿಯಲ್ಲೂ ಮಂಗನ ಕಾಯಿಲೆ ಭೀತಿ – ಮೃತ ಮಂಗಗಳ ಕಳೇಬರ ಪತ್ತೆ

    ಉಡುಪಿ: ಶಿವಮೊಗ್ಗ ಜಿಲ್ಲೆಯಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಂಗನ ಕಾಯಿಲೆ ಈಗ ಕರಾವಳಿ ಭಾಗಕ್ಕೂ ಹಬ್ಬಿರುವ ಭೀತಿ ವ್ಯಕ್ತವಾಗಿದ್ದು, ಶಿವಮೊಗ್ಗ ಜಿಲ್ಲೆಗೆ ತಾಗಿಕೊಂಡಿರುವ ಗ್ರಾಮಗಳಲ್ಲಿ ಮೃತ ಮಂಗಗಳ ಶವ ಪತ್ತೆಯಾಗಿದೆ.

    ಜಿಲ್ಲೆಯ ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ. ಸಿದ್ದಾಪುರ ಕಾಡಲ್ಲಿ ಈವರೆಗೆ 9 ಮತ್ತು ಹಳ್ಳಿಹೊಳೆಯಲ್ಲಿ 2 ಮಂಗನ ಕಳೇಬರ ಪತ್ತೆಯಾಗಿದೆ. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿ ಆರೋಗ್ಯ ಅಧಿಕಾರಿಗಳು ಮೃತ ಕೋತಿಯ ದೇಹದ ಕೆಲವು ಭಾಗಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಟ್ಟಿದ್ದಾರೆ. ಇದನ್ನು ಓದಿ: ಸಾವಿನ ಜ್ವರಕ್ಕೆ ಬೆಚ್ಚಿಬಿದ್ದ ಮಲೆನಾಡು ಮಂದಿ- 7 ಜನರ ಸಾವಿನ ಬಳಿಕ ಎಚ್ಚೆತ್ತ ಸರ್ಕಾರ..!

    ಕಿವಿಯಲ್ಲಿ ರಕ್ತಸ್ರಾವವಾಗಿ ಮೃತಪಟ್ಟ ರೀತಿಯಲ್ಲಿ ಕೆಲ ಮಂಗಗಳ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ವರದಿ ಬಳಿಕ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ. ಅಲ್ಲದೇ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತ ಮಂಗಗಳನ್ನು ದಹಿಸಲಾಗಿದೆ.

    ಶಿವಮೊಗ್ಗದಲ್ಲಿ ಈಗಾಗಲೇ 7 ಜನರನ್ನು ಬಲಿ ಪಡೆದಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಹಾಗೂ ಆರೋಗ್ಯ ಅಧಿಕಾರಿಗಳು ಶ್ರಮವಹಿಸುತ್ತಿದ್ದಾರೆ. ಇತ್ತ ಕರಾವಳಿ ಭಾಗದಲ್ಲೂ ಮಂಗಗಳು ಅನುಮಾನಸ್ಪದವಾಗಿ ಮೃತ ಪಟ್ಟಿರುವುದು ಸ್ಥಳೀಯರ ಅಂತಕಕ್ಕೆ ಕಾರಣವಾಗಿದೆ.  ಇದನ್ನು ಓದಿ:ಏನಿದು ಮಂಗನ ಜ್ವರ? ಕಾಯಿಲೆ ಹೇಗೆ ಬರುತ್ತೆ? ರೋಗ ಲಕ್ಷಣ ಏನು? ಚಿಕಿತ್ಸೆ ಹೇಗೆ- ಇಲ್ಲಿದೆ ಸಂಪೂರ್ಣ ಮಾಹಿತಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾವಿನ ಜ್ವರಕ್ಕೆ ಬೆಚ್ಚಿಬಿದ್ದ ಮಲೆನಾಡು ಮಂದಿ- 7 ಜನರ ಸಾವಿನ ಬಳಿಕ ಎಚ್ಚೆತ್ತ ಸರ್ಕಾರ..!

    ಸಾವಿನ ಜ್ವರಕ್ಕೆ ಬೆಚ್ಚಿಬಿದ್ದ ಮಲೆನಾಡು ಮಂದಿ- 7 ಜನರ ಸಾವಿನ ಬಳಿಕ ಎಚ್ಚೆತ್ತ ಸರ್ಕಾರ..!

    ಶಿವಮೊಗ್ಗ: ಜಿಲ್ಲೆಗೆ ಮಹಾಮಾರಿಯಂತೆ ದಾಳಿ ಮಾಡಿರುವ ಮಂಗನ ಜ್ವರಕ್ಕೆ ಏಳು ಜನ ಬಲಿಯಾದ ಮೇಲೆ ಸರ್ಕಾರ ಎಚ್ಚೆತ್ತಿದೆ.

    ಮಲೆನಾಡಿನಲ್ಲಿ ಮಂಗನಜ್ವರ ಅಥವಾ ಕ್ಯಾಸನೂರು ಡಿಸೀಸ್ ಅಂತ ಕರೆಯಲಾಗುವ ಸಾವಿನ ಜ್ವರಕ್ಕೆ 7 ದಶಕಗಳ ನಂಟಿದೆ. 1957ರಲ್ಲಿ ಮೊಟ್ಟಮೊದಲು ಸೊರಬ ತಾಲೂಕಿನ ಕ್ಯಾಸನೂರಿನಲ್ಲಿ ಕಾಣಿಸಿಕೊಂಡಿತು. ಅಲ್ಲಿನ ಕಾಡಿನಲ್ಲಿ ಮಂಗಗಳು ಸತ್ತು ಬೀಳತೊಡಗಿದವು. ಅಂದಿನಿಂದ ಇಂದಿನವರೆಗೂ ಪ್ರತೀ ವರ್ಷ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಜ್ವರ ಕಾಣಿಸುತ್ತಲೇ ಇದೆ. ಈ ವರ್ಷ ನೂರಕ್ಕೂ ಹೆಚ್ಚು ಜನ ಜ್ವರದಿಂದ ಬಳಲುತ್ತಿದ್ದು, ಏಳು ಜನ ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಜನ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ಸೊರಬ ತಾಲೂಕಿನ ಕ್ಯಾಸನೂರು ಬಳಿಯ ಗುಡವಿ ಪಕ್ಷಿಧಾಮಕ್ಕೆ ರಷ್ಯಾದಿಂದ ಇಲ್ಲಿಗೆ ಪಕ್ಷಿಗಳು ವಲಸೆ ಬರುತ್ತವೆ. ಈ ಪಕ್ಷಿಗಳ ಮೂಲಕ ಜೈವಿಕ ಅಸ್ತ್ರವಾಗಿ ಭಾರತಕ್ಕೆ ಕಾಯಿಲೆಯನ್ನು ಕಳುಹಿಸಿಲಾಗಿದೆ ಅಂತ ಪಕ್ಷಿತಜ್ಞ ಸಲೀಂ ಅಲಿ ದಶಕಗಳ ಮುಂಚೆಯೇ ಹೇಳಿದ್ದರು. ಈ ಕುರಿತ ಸಂಶೋಧನೆಗಳು ಸರ್ಕಾರಗಳ ನಿರ್ಲಕ್ಷ್ಯದಿಂದ ಸ್ಥಗಿತಗೊಂಡಿವೆ. ಈಗ 7 ಮಂದಿ ಬಲಿಯಾಗಿದ್ದು, ಇದರಲ್ಲಿ ಸರ್ಕಾರದ ನಿರ್ಲಕ್ಷ್ಯ ಇರುವುದನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಬಗ್ಗೆ ತನಿಖೆಗೆ ಸಮಿತಿ ರಚಿಸಲಾಗುವುದು. ಮೃತ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.

    ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಈ ಜ್ವರಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಸರ್ಕಾರ ಸಂಪೂರ್ಣ ವಿಫಲಗೊಂಡಿದೆ. ಪ್ರತೀ ವರ್ಷ ಜನ ಸಾಯುತ್ತಲೇ ಇದ್ದಾರೆ. ಜನ ಸತ್ತಾಗ ಸಚಿವರು ಬಂದು ಸಾಂತ್ವನ ಹೇಳುತ್ತಿದ್ದಾರೆ. ಆದರೆ ಅಮಾಯಕರು ಮಾತ್ರ ನರಳುತ್ತಲೇ ಇದ್ದಾರೆ ಎಂದು ಸ್ಥಳೀಯ ಶಾಂತಮ್ಮ ತಿಳಿಸಿದ್ದಾರೆ.

    ಸಾಗರದ ಮಂಡವಳ್ಳಿಯ ಪಾರ್ಶ್ವನಾಥ ಜೈನ್, ವಾಟೆಮಕ್ಕಿಯ ಕೃಷ್ಣಪ್ಪ, ಕಂಚಿಕಾಯಿ ಮಂಜುನಾಥ್ ಮತ್ತು ತೀರ್ಥಹಳ್ಳಿಯ ಗಂಟೆ ಜಾನಗಲು ಗ್ರಾಮದ ಸುಂದರಿ, ಕಂಚಿಕಾಯಿ ರಾಮಕ್ಕ, ಅರಕಲಗೋಡು ಗ್ರಾಮದ ಶ್ವೇತ ಎಂಬವರು ಮಂಗನ ಜ್ವರಕ್ಕೆ ತುತ್ತಾದ ದುರ್ದೈವಿಗಳು. ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ, ಹೊಸನಗರ, ಸೊರಬ ತಾಲೂಕುಗಳಲ್ಲಿ ಪ್ರತೀ ವರ್ಷ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಂಗನ ಜ್ವರ ಈ ವರ್ಷ ಮೂರು ತಿಂಗಳು ಮೊದಲೇ ಕಾಣಿಸಿಕೊಂಡು ಏಳು ಜನರನ್ನು ಬಲಿ ತೆಗೆದುಕೊಂಡಿದೆ.

    ಸಾವಿನ ಕೂಪಕ್ಕೆ ತಳ್ಳವ ಮಂಗನ ಕಾಯಿಲೆಯಿಂದ ಸಾವು ಸಂಭವಿಸಿದ ವೇಳೆ ಸರ್ಕಾರ ಕೇವಲ ಭರವಸೆ ನೀಡಲು ಸೀಮಿತವಾಗದೇ ಶಾಶ್ವತ ಪರಿಹಾರ ಹುಡುಕಲು ಮುಂದಾಗಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೀಪಾವಳಿ ಪಟಾಕಿ ಪ್ರಿಯರಿಗೆ ಕಹಿ ಸುದ್ದಿ – 2 ಗಂಟೆ ಮಾತ್ರ ಹೊಡೆಯಬಹುದು- ಆದೇಶದಲ್ಲಿ ಏನಿದೆ?

    ದೀಪಾವಳಿ ಪಟಾಕಿ ಪ್ರಿಯರಿಗೆ ಕಹಿ ಸುದ್ದಿ – 2 ಗಂಟೆ ಮಾತ್ರ ಹೊಡೆಯಬಹುದು- ಆದೇಶದಲ್ಲಿ ಏನಿದೆ?

    ಬೆಂಗಳೂರು: ಹಲವರ ನೆಚ್ಚಿನ ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಲು ಸಿದ್ಧತೆ ನಡೆಸಿದ್ದ ಮಂದಿಗೆ ಕಹಿ ಸುದ್ದಿ ನೀಡಿದ್ದು, ಪಟಾಕಿ ಸಿಡಿಸಲು ರಾತ್ರಿ 8 ಗಂಟೆಯಿಂದ 10 ಗಂಟೆ ವರೆಗೆ ಮಾತ್ರ ಅವಕಾಶ ನೀಡಲಾಗಿದೆ.

    ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸುವ ನಿಯಮಗಳ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಚಿವಾಲಯ ಸುತ್ತೋಲೆ ನೀಡಿದೆ. ಈ ಕುರಿತು ಕೆಲ ನಿಯಮಗಳನ್ನು ಪ್ರಕಟಿಸಿದೆ. ಪ್ರಮುಖವಾಗಿ ಹೆಚ್ಚು ಸ್ಫೋಟಕ ಹೊಂದಿರುವ ಪಟಾಕಿ ಮಾರಾಟಕ್ಕೆ ಹಾಗೂ ಬಳಕೆಗೆ ನಿಷೇಧ ಹೇರಲಾಗಿದೆ. ದೀಪಾವಳಿ ಹಬ್ಬದ ಹಿಂದಿನ 7 ದಿನ ಹಾಗೂ ಹಬ್ಬ ಮುಗಿದ ಮೇಲೆ 7 ದಿನ ಕಟ್ಟೆಚ್ಚೆರ ವಹಿಸುವಂತೆ ಹಾಗೂ ಪೊಲೀಸ್ ಇಲಾಖೆಯ ನಿಗದಿತ ನಿಯಮ ಪಾಲನೆ ಬಗ್ಗೆ ಎಚ್ಚರ ವಹಿಸುವಂತೆ ಸೂಚನೆ ನೀಡಿದೆ.

    ಉಳಿದಂತೆ ಸ್ಥಳೀಯ ಪಾಲಿಕೆಯಿಂದ ಪಟಾಕಿ ಹೊಡೆಯುವ ಸಮಯ ಹಾಗೂ ಪಟಾಕಿ ವಿಧಾನದ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಅವಧಿ ಮೀರಿ ಪಟಾಕಿ ಸಿಡಿಸಿದರೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅವಕಾಶ ನೀಡಲಾಗಿದೆ. ಪಟಾಕಿ ಮಾರಾಟದ ಮೇಲೂ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಜೊತೆಗೆ ನಿರ್ಬಂಧಿತ ಸ್ಫೋಟಕ ಪಟಾಕಿಗಳ ಬಗ್ಗೆಯೂ ಎಚ್ಚರವಾಗಿರಬೇಕು ತಿಳಿಸಿದ್ದು, ಸಮೂಹಿಕವಾಗಿ ಪಟಾಕಿ ಸಿಡಿಸುವ ಸಾಧ್ಯತೆಗಳ ಕುರಿತು ಸ್ಥಳೀಯ ಸಂಸ್ಥೆಗಳು ಚಿಂತನೆ ನಡೆಸುವ ಕುರಿತು ಉಲ್ಲೇಖಿಸಿದೆ.

    ಒಂದೊಮ್ಮೆ ನಿಯಮ ಉಲ್ಲಂಘಿಸಿ ಪಟಾಕಿ ಸಿಡಿಸಿದರೆ ಆ ವ್ಯಾಪ್ತಿಯ ಪೊಲೀಸ್ ಠಾಣಾಧಿಕಾರಿಗಳೇ ಹೊಣೆ ಮಾಡಲಾಗಿದೆ. ನ್ಯಾಯಾಲಯದ ಆದೇಶ ಉಲ್ಲಂಘನೆಯ ತಪ್ಪಿತಸ್ಥರೆಂದು ಪೊಲೀಸರನ್ನು ಗುರಿ ಮಾಡಲಾಗುವುದು ಎನ್ನುವ ಆದೇಶದಲ್ಲಿ ಸೂಚನೆ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆರೋಗ್ಯ ಇಲಾಖೆಯ ದೊಡ್ಡ ಹಗರಣ-ಒಂದಲ್ಲ, ಎರಡಲ್ಲ ಬರೋಬ್ಬರು 150 ಕೋಟಿ ಹಗರಣ!

    ಆರೋಗ್ಯ ಇಲಾಖೆಯ ದೊಡ್ಡ ಹಗರಣ-ಒಂದಲ್ಲ, ಎರಡಲ್ಲ ಬರೋಬ್ಬರು 150 ಕೋಟಿ ಹಗರಣ!

    ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಹೇಗೆ ದುಡ್ಡು ಮಾಡೋದು ಹೇಗೆ ಅಂತ ತಿಳಿದುಕೊಳ್ಳಬೇಕಾ? ಹಾಗಾದ್ರೆ ಆರೋಗ್ಯ ಇಲಾಖೆ ಎಂಜಿನಿಯರ್ ಗಳನ್ನ ನೋಡಬೇಕು. ಆರೋಗ್ಯ ಕೇಂದ್ರದ ಹೆಸರಲ್ಲಿ ಕೋಟಿ ಕೋಟಿ ಹಣ ನುಂಗಿ ನೀರು ಕುಡಿದಿದ್ದಾರೆ.

    ನಮ್ಮ ಆರೋಗ್ಯ ಇಲಾಖೆಯ ಎಂಜಿನಿಯರ್ ಗಳು ಎಷ್ಟು ಬುದ್ದಿವಂತರು ಅನ್ನೋದಕ್ಕೆ ಈ ಸ್ಟೋರಿ ನೋಡಲೇಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಯಲ್ಲಿ ಕೋಟಿ ಕೋಟಿ ಹಣ ಮಾಡಿ ದುಡ್ಡು ಮಾಡೋರಿಗೆ ಮಾದರಿಯಾಗಿದ್ದಾರೆ. ಪ್ರತಿ ತಾಲೂಕಿನಲ್ಲಿ ನಿರ್ಮಾಣವಾಗಿರೋ ಆರೋಗ್ಯ ಕೇಂದ್ರದಲ್ಲೂ ಎಂಜಿನಿಯರ್ ಗಳು ದುಡ್ಡು ಮಾಡೋ ಅಂಶ ಆರ್ ಟಿಐನಲ್ಲಿ ಬಯಲಾಗಿದೆ. ಸ್ವತಃ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಆರೋಗ್ಯ ಕೇಂದ್ರ ಬೇಡ ಅಂತ ಪತ್ರ ಬರೆದಿದ್ದರು 1.20 ಕೋಟಿ ವೆಚ್ಚದಲ್ಲಿ ಆರೋಗ್ಯ ಕೇಂದ್ರ ಕಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ವಡ್ನಾಳ್ ಗ್ರಾಮದಲ್ಲಿ ಈ ರೀತಿಯ ಬಹು ದೊಡ್ಡ ಹಗರಣ ನಡೆದಿದೆ.

    ಇದು ಕೇವಲ ದಾವಣಗೆರೆ ಕಥೆ ಮಾತ್ರವಲ್ಲ. ಪ್ರತೀ ಜಿಲ್ಲೆಯಲ್ಲಿ 2-3 ಆರೋಗ್ಯ ಕೇಂದ್ರಗಳನ್ನ ಅನಾವಶ್ಯಕವಾಗಿ ಕಟ್ಟಿದ್ದಾರಂತೆ. 2017-18 ನೇ ಸಾಲಿನಲ್ಲಿ ನಿರ್ಮಾಣವಾಗಿರೋ 100-200 ಕೇಂದ್ರಗಳಲ್ಲಿ 50ಕ್ಕೂ ಹೆಚ್ಚು ಕೇಂದ್ರಗಳು ಬೋಗಸ್ ಆಗಿವೆಯಂತೆ. ಇದರಲ್ಲಿ ಸುಮಾರು 150 ಕೋಟಿ ಹಗರಣ ನಡೆದಿರುವ ಶಂಕೆ ಮೂಡಿದೆ. ಇನ್ನು ಆಶ್ಚರ್ಯ ಸಂಗತಿ ಅಂದ್ರೆ ಚುನಾವಣೆ ಸಮಯದಲ್ಲಿ ನೀತಿ ಸಂಹಿಂತೆ ಇದ್ದರು ಹಣ ಬಿಡುಗಡೆಯಾಗಿದೆ. ಅಲ್ಲದೆ 1.20 ಕೋಟಿಗೆ ಪ್ರಾರಂಭವಾಗುವ ಕಾಮಗಾರಿ ಮುಗಿಯೋಕೆ 1.60 ಕೋಟಿ ದಾಟುತ್ತಂತೆ. ವಿಚಿತ್ರ ಅಂದ್ರೆ ಕಾಮಗಾರಿ ಮುಗಿಯದೇ ಇದ್ರು ಟೆಂಡರ್‍ದಾರನಿಗೆ ಹಣ ಬಿಡುಗಡೆಯಾಗಿದೆಯಂತೆ.

    ಜನರಿಗೆ ಅನುಕೂಲವಾಗಲಿ ಅಂತ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಸರ್ಕಾರ ಮುಂದಾಗಿತ್ತು. ಆದರೆ ಅವಶ್ಯಕತೆಯೇ ಇಲ್ಲದೆ ಇರೋ ಕಡೆ ಆರೋಗ್ಯ ಕೇಂದ್ರ ಸ್ಥಾಪಿಸಿ ಇದರಲ್ಲೂ ಹಣ ಮಾಡಿದ್ದಾರೆ. ಇದು ಕೇವಲ ಒಂದು ಜಿಲ್ಲೆಯ ಸ್ಯಾಂಪಲ್. ಇಡೀ ರಾಜ್ಯದಲ್ಲಿ ಇಂತಹ ಎಷ್ಟು ಕೇಂದ್ರಗಳು ಸ್ಥಾಪನೆ ಆಗಿರಬೇಕು. ಈ ಬಗ್ಗೆ ಆರೋಗ್ಯ ಇಲಾಖೆ ಸಚಿವರು ಏನ್ ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಯಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv