Tag: health department

  • ಹೆಣ್ಣು ಭ್ರೂಣ ಹತ್ಯೆ ಪ್ರಕರಣ – ಸಿಐಡಿಯಿಂದ ಆರೋಗ್ಯ ಇಲಾಖೆಗೆ ವರದಿ ಕೊಡಲು ಸಿದ್ಧತೆ

    ಹೆಣ್ಣು ಭ್ರೂಣ ಹತ್ಯೆ ಪ್ರಕರಣ – ಸಿಐಡಿಯಿಂದ ಆರೋಗ್ಯ ಇಲಾಖೆಗೆ ವರದಿ ಕೊಡಲು ಸಿದ್ಧತೆ

    ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ (Foeticide) ಪ್ರಕರಣದಲ್ಲಿ ಸಿಐಡಿ (CID) ಬಹುತೇಕ ತನಿಖೆ ಮುಗಿಸಿದೆ. ಭ್ರೂಣ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರಗಳ ಮೂಲ ಸಿಐಡಿ ತನಿಖೆಯಲ್ಲೂ ಕೂಡ ಪತ್ತೆಯಾಗಿಲ್ಲ. ಹೀಗಾಗಿ ಸರ್ಕಾರದಿಂದ ಅನುಮತಿ ಪಡೆದು ಆರೋಗ್ಯ ಇಲಾಖೆಗೆ (Health Department) ವರದಿ ಕೊಡಲು ಸಿದ್ಧತೆ ಮಾಡಿಕೊಂಡಿದೆ.

    ಸ್ಕ್ಯಾನಿಂಗ್ ಯಂತ್ರಗಳ ಮಾರಾಟ ಹಾಗೂ ಬಳಕೆ ಅಕ್ರಮವಾಗಿದ್ದು, ಆದರೆ ಭ್ರೂಣ ಪತ್ತೆಗೆ ಬಳಸುತ್ತಿದ್ದ ಯಂತ್ರಗಳು ತಂದಿದ್ದು ಎಲ್ಲಿಂದ ಎಂಬುದೇ ನಿಗೂಢವಾಗಿದೆ. ಬೈಯಪ್ಪನಹಳ್ಳಿ ಪೊಲೀಸರು ಚೆನ್ನೈ ಮೂಲದ ವೈದ್ಯ ತುಳಸಿರಾಮ್, ಮೈಸೂರಿನ ಖಾಸಗಿ ಆಸ್ಪತ್ರೆಯೊಂದರ ವೈದ್ಯ ಡಾ. ಚಂದನ್ ಬಲ್ಲಾಳ್, ಆತನ ಪತ್ನಿ ಮೀನಾ, ಮೈಸೂರಿನ ಖಾಸಗಿ ಆಸ್ಪತ್ರೆಯ ರಿಸೆಪ್ಶನಿಸ್ಟ್ ರಿಜ್ಮಾ, ಲ್ಯಾಬ್ ಟೆಕ್ನಿಶಿಯನ್ ನಿಸ್ಸಾರ್ ಎಂಬಾತನ ಬಂಧನ ಮಾಡಿದ್ದಾರೆ. ಇದನ್ನೂ ಓದಿ: ಉದ್ಯೋಗ ಕೊಡಿಸುವ ನೆಪದಲ್ಲಿ 20 ಮಹಿಳೆಯರ ಮೇಲೆ ಗ್ಯಾಂಗ್‌ರೇಪ್ – ಇಬ್ಬರ ವಿರುದ್ಧ ದೂರು ದಾಖಲು

    ಆರೋಪಿಗಳು ಮಂಡ್ಯದ ಆಲೆಮನೆಯಲ್ಲಿ ಸ್ಕ್ಯಾನಿಂಗ್ ಯಂತ್ರಗಳನ್ನಿಟ್ಟು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡಲಾಗುತ್ತಿತ್ತು. ಕೇವಲ ಮೂರೇ ತಿಂಗಳಲ್ಲಿ 245 ಭ್ರೂಣ ಹತ್ಯೆ ಮಾಡಿದ್ದು ಬೆಳಕಿಗೆ ಬಂದಿತ್ತು. ಒಂದೊಂದು ಭ್ರೂಣ ಹತ್ಯೆಗೆ ಪ್ಯಾಕೇಜ್ ರೀತಿ 60,000 ಫಿಕ್ಸ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಎರಡು ತಿಂಗಳ ಹಿಂದೆ ಸಿಐಡಿಗೆ ವರ್ಗಾವಣೆ ಮಾಡಿದ್ದು, ಇದೀಗ ತನಿಖೆ ಬಹುತೇಕ ಮುಕ್ತಾಯಗೊಂಡಿದೆ. ಇದನ್ನೂ ಓದಿ: ಪ್ರೀತಿಸಲು ಒಪ್ಪದ ಬಾಲಕಿ ಕೊಂದಿದ್ದವನಿಂದ ಆತ್ಮಹತ್ಯೆ ಯತ್ನ- ಸಾಯಲು ಬಿಡಿ ಎಂದು ಡ್ರಾಮಾ

  • ರಾಜ್ಯದಲ್ಲಿ 35 ಜೆಎನ್.1 ಪಾಸಿಟಿವ್, ಬೆಂಗಳೂರಲ್ಲೇ ಹೆಚ್ಚು: ದಿನೇಶ್ ಗುಂಡೂರಾವ್

    ರಾಜ್ಯದಲ್ಲಿ 35 ಜೆಎನ್.1 ಪಾಸಿಟಿವ್, ಬೆಂಗಳೂರಲ್ಲೇ ಹೆಚ್ಚು: ದಿನೇಶ್ ಗುಂಡೂರಾವ್

    – ಹೊಸ ವರ್ಷಾಚರಣೆಗೆ ಯಾವುದೇ ಹೊಸ ರೂಲ್ಸ್ ಇಲ್ಲ

    ಬೆಂಗಳೂರು: ರಾಜ್ಯದಲ್ಲಿ 35 ಜೆಎನ್.1 (JN.1) ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ (Bengaluru) ಹೆಚ್ಚು ಸಂಖ್ಯೆ ಇದ್ದ ಹಾಗೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

    ಕೊರೊನಾ ಹೊಸ ರೂಪಾಂತರಿಯಾದ ಜೆಎನ್.1 ವೈರಸ್ ದಿನೇ ದಿನೇ ಹೆಚ್ಚುತ್ತಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಾಳೆ ಜಿಲ್ಲಾವಾರು ಮಾಹಿತಿ ನೀಡಲಾಗುತ್ತದೆ. ನಾಳೆ ಸಬ್ ಕಮಿಟಿ ಸಭೆ ಇದೆ. ಅದರಲ್ಲಿ ಈ ಕುರಿತು ಚರ್ಚೆ ಮಾಡಲಾಗುತ್ತದೆ. ತಜ್ಞರ ಜೊತೆ ಉಪ ಸಮಿತಿ ಸಭೆ ಮಾಡಲಾಗುತ್ತದೆ. ಜೆಎನ್.1 ಬಂದ ಬಗ್ಗೆ ಮಾಹಿತಿ ಇತ್ತು. ಅಧಿಕೃತವಾಗಿ ತಿಳಿಯಲು ಮಾತ್ರ ಸ್ಯಾಂಪಲ್ ಕಳುಹಿಸಲಾಗಿತ್ತು. ಸದ್ಯ ಯಾವುದೇ ಮಾರ್ಗಸೂಚಿ ಬರಲ್ಲ. ಇಡೀ ದೇಶದಲ್ಲಿ ಮಾರ್ಗಸೂಚಿ ಜಾರಿ ಇಲ್ಲ. ಜನ ಗುಂಪಾಗಿ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಇರಲ್ಲ. ಪಾಸಿಟಿವ್ ಬಂದವರು ಸದ್ಯ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ ಎಂದರು. ಇದನ್ನೂ ಓದಿ: ದೇವರ ಪ್ರಸಾದ ತಿಂದು ನೂರಾರು ಜನ ಅಸ್ವಸ್ಥ – ಓರ್ವ ಮಹಿಳೆ ಸಾವು

    ಜೆಎನ್.1 ಬಂದಿದೆ ಅನ್ನೋ ಮಾಹಿತಿ ಇತ್ತು. ಸಿಎಂ ಹೇಳಿದ್ರು, ನಾನು ಹೇಳಿದ್ದೆ, WHO ಕೂಡ ಹೇಳಿತ್ತು. ಹೊಸದಾಗಿ ಗಾಬರಿ ಆಗುವಂತಹದ್ದು ಏನಿಲ್ಲ. ಎಚ್ಚರಿಕೆಯಿಂದ ಇರಿ ಎಂದು WHO ಕೂಡ ಹೇಳಿದೆ. ಸಾವಿನ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಅವರಿಗೆ ಬೇರೆ ಬೇರೆ ರೋಗದ ಜೊತೆ ಸೋಂಕು ಕೂಡ ಇತ್ತು. ಜೆಎನ್.1 ಸೋಂಕಿನ ಬಗ್ಗೆ ಆಶ್ಚರ್ಯ ಪಡುವ ಅವಶ್ಯಕತೆ ಇಲ್ಲ. ಜನರು ಸೋಂಕಿನ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಸತ್ತವರಲ್ಲಿ ಜೆಎನ್.1 ಪತ್ತೆಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದ 8 ಮಂದಿಯಲ್ಲಿ JN.1 ವೈರಸ್‌ ಪತ್ತೆ

    ರಾಜ್ಯದಲ್ಲಿ 35 ಜೆಎನ್.1 ವೈರಸ್ ಇರುವ ಮಾಹಿತಿ ಇದೆ. ಬಹುತೇಕ ಕೇಸ್‌ಗಳು ಬೆಂಗಳೂರಲ್ಲೇ ಇರುವ ಸಾಧ್ಯತೆಯಿದೆ. ನಾಳೆ ಸಂಪೂರ್ಣ ಮಾಹಿತಿ ತಿಳಿಸುತ್ತೇವೆ. ನಾಳೆ ಮಧ್ಯಾಹ್ನ 12 ಗಂಟೆಗೆ ಸಭೆ ಇದೆ. ಸಭೆಯಲ್ಲಿ ಎಲ್ಲಾ ಮಾಹಿತಿ ನೀಡುತ್ತೇವೆ. ಜಿನೋಮಿಕ್ ಸೀಕ್ವೆನ್ಸ್‌ಗೆ ಸ್ಯಾಂಪಲ್ ಕಳುಹಿಸಲಾಗಿತ್ತು. ಜೆಎನ್.1 ಕೇಸ್ ಇದೆ ಅನ್ನೋದು ಮೊದಲೇ ಗೊತ್ತಿತ್ತು. ಹೊಸ ವರ್ಷಕ್ಕೆ (New Year) ಎಲ್ಲೂ ಹೊಸ ಮಾರ್ಗಸೂಚಿ ಇಲ್ಲ. ಯಾವುದೇ ರೀತಿ ಗೈಡ್‌ಲೈನ್ಸ್ ಸದ್ಯ ಬಿಟ್ಟಿಲ್ಲ. ನಾಳೆ ಮಧ್ಯಾಹ್ನದ ನಂತರ ಆ ಬಗ್ಗೆ ತಿಳಿಸುತ್ತೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಯತ್ನಾಳ್

    ಸಭೆಯ ಬಳಿಕ ಮುಂದಿನ ರೂಲ್ಸ್ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಸದ್ಯ ಆತಂಕಗೊಳ್ಳುವ ಅಗತ್ಯವಿಲ್ಲ. ಜೆಎನ್.1ರಿಂದಲೇ ಕೊರೊನಾ ಸಂಖ್ಯೆ ಏರಿಕೆಯಾಗುತ್ತಿದೆ. ಹೊಸ ವರ್ಷದ ಆಚರಣೆಗೆ ನಾಳೆಯ ಸಭೆಯ ಬಳಿಕ ತಿಳಿಸುತ್ತೇವೆ. ಸದ್ಯಕ್ಕೆ ಯಾವುದೇ ರೂಲ್ಸ್ ಇಲ್ಲ ಎಂದರು. ಇದನ್ನೂ ಓದಿ: ಡ್ರಗ್ಸ್ ತೆಗೆದುಕೊಳ್ತಿದ್ದಿದ್ದಕ್ಕೆ ರಿಲೇಷನ್‍ಶಿಪ್ ಬೇಡ ಎಂದಿದ್ದೇನೆ: ಕಾರಿಯಪ್ಪ

  • ಭ್ರೂಣ ಹತ್ಯೆ ಪ್ರಕರಣ – ನಾಗಮಂಗಲದ ಎರಡು ಸ್ಕ್ಯಾನಿಂಗ್ ಸೆಂಟರ್ ಸೀಜ್

    ಭ್ರೂಣ ಹತ್ಯೆ ಪ್ರಕರಣ – ನಾಗಮಂಗಲದ ಎರಡು ಸ್ಕ್ಯಾನಿಂಗ್ ಸೆಂಟರ್ ಸೀಜ್

    ಮಂಡ್ಯ: ಜಿಲ್ಲೆಯ ಆಲೆಮನೆಯಲ್ಲಿ (Alemane) ಭ್ರೂಣ ಪತ್ತೆ ಹಾಗೂ ಹತ್ಯೆ (Foeticide) ಪ್ರಕರಣ ಬೆಳಕಿಗೆ ಬಂದ ಬಳಿಕ ಜಿಲ್ಲೆಯ ಆರೋಗ್ಯ ಇಲಾಖೆ (Health Department) ಫುಲ್ ಅಲರ್ಟ್ ಆಗಿದೆ. ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಸೆಂಟರ್‌ಗಳ (Scanning Centre) ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿ ಲೋಪವಿರುವ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸೀಜ್ (Seize) ಮಾಡಲಾಗುತ್ತಿದೆ.

    ಮಂಗಳವಾರ ಸಂಜೆ ನಾಗಮಂಗಲದ (Nagamangala) 2 ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಸಿಬ್ಬಂದಿಗಳ ಕಳ್ಳಾಟ ಬೆಳಕಿಗೆ ಬಂದಿದೆ. ಇಲ್ಲಿನ ಸಿಸ್ಟಮ್‌ನಲ್ಲಿದ್ದ ಡೇಟಾ ಡಿಲೀಟ್ ಮಾಡಿ ಅಧಿಕಾರಿಗಳನ್ನು ಕಣ್ತಪ್ಪಿಸಲು ಮಾಲೀಕರು ಪ್ರಯತ್ನ ಪಟ್ಟಿದ್ದಾರೆ. ಅಧಿಕಾರಿಗಳ ಭೇಟಿ ವೇಳೆ ಸಮರ್ಪಕ ದಾಖಲೆ ನೀಡದ ಹಿನ್ನೆಲೆ ಅಧಿಕಾರಿಗಳು ಸಿಸ್ಟಮ್ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಸ್ಕ್ಯಾನಿಂಗ್ ಮಾಡಿದ್ದ ಇಮೇಜ್ ಹಾಗೂ ಡೇಟಾವನ್ನೇ ಸಿಬ್ಬಂದಿಗಳು ಡಿಲೀಟ್ ಮಾಡಿರುವುದು ಕಂಡುಬಂದಿದೆ. ಇದನ್ನೂ ಓದಿ: 5 ದಿನಗಳ ಹಿಂದೆ ಬೆಂಗ್ಳೂರಿನಲ್ಲಿ ಕೊರೊನಾದಿಂದ ವ್ಯಕ್ತಿ ಸಾವು: ದಿನೇಶ್ ಗುಂಡೂರಾವ್

    ಮಾಹಿತಿ ಡಿಲೀಟ್ ಮಾಡಿರುವ ಹಿನ್ನೆಲೆ ಇಲ್ಲಿನ 2 ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸೀಜ್ ಮಾಡಲಾಗಿದೆ. ಕಾವೇರಿ ಹಾಗೂ ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ 2 ವರ್ಷದ ಮಾಹಿತಿ ಹಾಗೂ ಕಾವೇರಿ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ 3 ತಿಂಗಳ ಮಾಹಿತಿ ಡಿಲೀಟ್ ಆಗಿದೆ. ನಾಗಮಂಗಲದ ಸರ್ಕಾರಿ ಆಸ್ಪತ್ರೆ ಸಮೀಪವೇ ಈ ಸ್ಕ್ಯಾನಿಂಗ್ ಸೆಂಟರ್‌ಗಳು ಇದ್ದು, ಉಪವಿಭಾಗಾಧಿಕಾರಿ ನಂದೀಶ್ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬೆಟ್ಟಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಿ ಸೀಜ್ ಮಾಡಲಾಗಿದೆ. ಇದನ್ನೂ ಓದಿ: NIAಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿಗೆ ಕಾಲೇಜಲ್ಲಿರುವಾಗ್ಲೇ ಇತ್ತು ISIS ಸಂಪರ್ಕ!

  • ಸಾರ್ವಜನಿಕರೇ ಬೀ ಕೇರ್‌ಫುಲ್ – ರಾಜ್ಯದಲ್ಲಿ ಇದ್ದಾರೆ ಬರೋಬ್ಬರಿ 1,436 ನಕಲಿ ವೈದ್ಯರು

    ಸಾರ್ವಜನಿಕರೇ ಬೀ ಕೇರ್‌ಫುಲ್ – ರಾಜ್ಯದಲ್ಲಿ ಇದ್ದಾರೆ ಬರೋಬ್ಬರಿ 1,436 ನಕಲಿ ವೈದ್ಯರು

    ಬೆಂಗಳೂರು: ಭ್ರೂಣ ಹತ್ಯೆ ಮಧ್ಯೆ ನಕಲಿ ವೈದ್ಯರ (Fake Doctors) ಹಾವಳಿ ಹೆಚ್ಚಾಗುತ್ತಿದೆ. ಸದನದಲ್ಲಿ ಕೂಡ ನಕಲಿ ವೈದ್ಯರ ವಿಚಾರವಾಗಿ ಆರೋಗ್ಯ ಇಲಾಖೆಯನ್ನು (Health Department) ಪ್ರಶ್ನಿಸುತ್ತಾ ಇದ್ದಾರೆ. ಸ್ಕ್ಯಾನಿಂಗ್ ಸೆಂಟರ್‌ಗಳ ಜೊತೆ ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ಬಲೆ ಬೀಸಿದೆ.

    ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಭ್ರೂಣ ಹತ್ಯೆ ಮತ್ತು ನಕಲಿ ವೈದ್ಯರ ವಿಷಯ ಚರ್ಚೆ ಆಗುತ್ತಿದೆ. ಭ್ರೂಣ ಹತ್ಯೆ ಮತ್ತು ನಕಲಿ ವೈದ್ಯರಿಗೆ ಕಡಿವಾಣ ಹಾಕಲ್ಲ ಎಂದು ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಹರಿಹಾಯುತ್ತಿದ್ದಾರೆ. ಹೀಗಾಗಿ ಎಚ್ಚೆತ್ತಿರುವ ಆರೋಗ್ಯ ಇಲಾಖೆ ಸ್ಕ್ಯಾನಿಂಗ್ ಸೆಂಟರ್ ಮತ್ತು ನಕಲಿ ವೈದ್ಯರ ಮೇಲೆ ದಾಳಿ ಮಾಡಿ ಡಿಸೆಂಬರ್ 32ರ ಒಳಗಡೆ ವರದಿ ಸಲ್ಲಿಸಲು ಸೂಚಿಸಿದೆ. ಈಗಾಗಲೇ ರಾಜ್ಯದಲ್ಲಿ ನಕಲಿ ವೈದ್ಯರ ಬಗ್ಗೆ ಆರೋಗ್ಯ ಇಲಾಖೆ ವರದಿ ಕಲೆ ಹಾಕಿದ್ದು, ರಾಜ್ಯದ 31 ಜಿಲ್ಲೆಗಳಲ್ಲೂ ಬರೋಬ್ಬರಿ 1,436 ನಕಲಿ ವೈದ್ಯರು ಇದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕದಿಂದ ಘಂಟೆ, ಪೂಜಾ ಸಾಮಾಗ್ರಿ ಸಮರ್ಪಣೆ

    ಇನ್ನೂ ಸಾರ್ವಜನಿಕರೇ ನಕಲಿ ವೈದ್ಯರನ್ನು ಪತ್ತೆ ಹಚ್ಚುವಲ್ಲಿ ಸಹಕಾರ ಕೊಡಬೇಕು ಎನ್ನುತ್ತಾರೆ. ಬೇರೆ ಬೇರೆ ರಾಜ್ಯಗಳಿಂದ ಬೈಕ್‌ಗಳಲ್ಲಿ ಬಂದು ಇಂಜೆಕ್ಷನ್ ಕೊಟ್ಟು ಹೋಗುತ್ತಾರೆ. ಈ ರೀತಿಯ ಜಾಲ ಇದ್ದು, ಅಂತಹ ನಕಲಿ ವೈದ್ಯರನ್ನು ಪಟ್ಟಿ ಮಾಡಿದ್ದಾರೆ. 31 ಜಿಲ್ಲೆಗಳಲ್ಲಿ ಒಟ್ಟು 1,436 ನಕಲಿ ವೈದ್ಯರಿದ್ದು, ಯಾವ ಜಿಲ್ಲೆಯಲ್ಲಿ ಹೆಚ್ಚು ನಕಲಿ ವೈದ್ಯರಿದ್ದಾರೆ ಎಂಬುದನ್ನು ಈ ಕೆಳಗೆ ತಿಳಿಸಲಾಗಿದೆ. ಇದನ್ನೂ ಓದಿ: ಸ್ಮಾರ್ಟ್‌ಕಾರ್ಡ್‌ಗೆ ಗ್ರಹಣ – ಸಾಫ್ಟ್‌ವೇರ್ ಅಪ್ಡೇಟ್ ನೆಪದಿಂದ ಜನ ಹೈರಾಣು

    ಯಾವ ಜಿಲ್ಲೆಯಲ್ಲಿ ಎಷ್ಟು ನಕಲಿ ವೈದ್ಯರು?
    ಬೀದರ್ – 423
    ಕೋಲಾರ – 179
    ಬೆಳಗಾವಿ – 170
    ಶಿವಮೊಗ್ಗ – 74
    ಬೆಂಗಳೂರು ನಗರ – 67
    ಧಾರವಾಡ – 70
    ಕಲಬುರಗಿ – 81
    ಮಂಡ್ಯ – 33
    ಮೈಸೂರು – 2
    ಕೊಪ್ಪಳ – 33
    ಚಾಮರಾಜನಗರ – 51
    ಚಿಕ್ಕಬಳ್ಳಾಪುರ – 45

    ಬರೀ 1,436 ನಕಲಿ ವೈದ್ಯರು ಅಷ್ಟೇ ಇಲ್ಲ ಇನ್ನೂ ಹೆಚ್ಚಿದ್ದಾರೆ. ಕೆಲವೊಂದಿಷ್ಟು ಜನ ತಪ್ಪಿಸಿಕೊಂಡಿದ್ದಾರೆ. ಕೂಡಲೇ ಅವರನ್ನ ಪತ್ತೆ ಮಾಡುವಂತಹ ಕೆಲಸ ಮಾಡುತ್ತಿದ್ದು, ಡಿಸೆಂಬರ್ 31ರ ಒಳಗೆ ಇನ್ನಷ್ಟು ನಕಲಿ ವೈದ್ಯರು ಬೆಳಕಿಗೆ ಬರುತ್ತಾರ ಎಂದು ಕಾದುನೋಡಬೇಕಿದೆ. ಇದನ್ನೂ ಓದಿ: ಸರ್ಕಾರಿ ಅಂಗನವಾಡಿಗಳ ಕರೆಂಟ್ ಬಿಲ್ ಕಟ್ಟಲು ದುಡ್ಡಿಲ್ಲ – ಫ್ಯೂಸ್ ಕಿತ್ತ ಬೆಸ್ಕಾಂ

  • ನಕಲಿ ವೈದ್ಯರಿಗೆ ಶಾಕ್ ನೀಡಿದ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು

    ನಕಲಿ ವೈದ್ಯರಿಗೆ ಶಾಕ್ ನೀಡಿದ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು

    ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ನಕಲಿ ವೈದ್ಯರ (Fake Doctor) ಹಾವಳಿ ಹಿನ್ನೆಲೆಯಲ್ಲಿ ಇಂದು (ಬುಧವಾರ) ಕಮಲನಗರ ತಾಲೂಕಿನ ಒಟ್ಟು 6 ನಕಲಿ ಕ್ಲಿನಿಕ್‌ಗಳ (Clinic) ಮೇಲೆ ದಿಢೀರ್ ದಾಳಿ (Raid) ಮಾಡಿ ವೈದ್ಯಾಧಿಕಾರಿಗಳು ನಕಲಿ ವೈದ್ಯರಿಗೆ ಶಾಕ್ ನೀಡಿದ್ದಾರೆ.

    ನಕಲಿ ಕ್ಲಿನಿಕ್‌ಗಳಾದ ಡಾ. ಬಿಹಾರಿ ಕ್ಲಿನಿಕ್, ಲಕ್ಷ್ಮೀ ಕ್ಲಿನಿಕ್ ಸೇರಿದಂತೆ ಒಟ್ಟು 6 ಕ್ಲಿನಿಕ್‌ಗಳ ಮೇಲೆ ತಾಲೂಕಿನ ಆರೋಗ್ಯಾಧಿಕಾರಿ ಡಾ. ಗಾಯತ್ರಿ ವಿಜಯಕುಮಾರ್ ಮತ್ತು ತಂಡದಿಂದ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಡಾಲಿ ‘ಲಿಡ್ಕರ್’ಗೆ ರಾಯಭಾರಿ: ಸಿಎಂ ಅಧಿಕೃತ ಘೋಷಣೆ

    ದಾಳಿ ಮಾಡಿ ನಕಲಿ ವೈದ್ಯರ ಮೇಲೆ ಪ್ರಕರಣ ದಾಖಲಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳು ಲಕ್ಷಾಂತರ ಮೌಲ್ಯದ ಔಷಧಿಗಳನ್ನು ಜಪ್ತಿ ಮಾಡಿದ್ದಾರೆ. ಜೊತೆಗೆ ಯಾವುದೇ ಪರವಾನಿಗೆ ಇಲ್ಲದ ಕಮಲನಗರ ಗ್ರಾಮೀಣ ಭಾಗದ 2 ಕ್ಲಿನಿಕ್ ಹಾಗೂ ಪಟ್ಟಣದಲ್ಲಿ 4 ನಕಲಿ ಕ್ಲಿನಿಕ್‌ಗಳಿಗೆ ಬೀಗ ಹಾಕಲಾಗಿದೆ.

    ಸಾರ್ವಜನಿಕರು ನಕಲಿ ವೈದ್ಯರ ಹತ್ತಿರ ಚಿಕಿತ್ಸೆ ಪಡೆಯದೆ ನೊಂದಾಯಿತ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು ಎಂದು ಟಿಎಚ್‌ಒ ಮನವಿ ಮಾಡಿದ್ದಾರೆ. ಇದನ್ನೂ ಓದಿ: ‘ಮಿಚಾಂಗ್’‌ ಎಫೆಕ್ಟ್‌; 5,060 ಕೋಟಿ ಪರಿಹಾರ ನೀಡಿ – ಪ್ರಧಾನಿಗೆ ತ.ನಾಡು ಸಿಎಂ ಪತ್ರ

  • ಬೆಂಗ್ಳೂರಿನಲ್ಲೂ ಆತಂಕ ಹುಟ್ಟಿಸಿದ ಚೀನಾದ ಹೊಸ ವೈರಸ್ – BBMP ಫುಲ್ ಅಲರ್ಟ್!

    ಬೆಂಗ್ಳೂರಿನಲ್ಲೂ ಆತಂಕ ಹುಟ್ಟಿಸಿದ ಚೀನಾದ ಹೊಸ ವೈರಸ್ – BBMP ಫುಲ್ ಅಲರ್ಟ್!

    – ಪಾಲಿಕೆಯಿಂದ ಚಿಕ್ಕ ಮಕ್ಕಳಿಗೆ ನ್ಯುಮೋನಿಯಾ ಲಸಿಕೆ ವಿತರಣೆ
    – ಆಸ್ಪತ್ರೆಗಳ ಮೇಲೆ ಹದ್ದಿನ ಕಣ್ಣಿಡಲು ಸೂಚನೆ

    ಬೆಂಗಳೂರು: ಚೀನಾದಲ್ಲಿ ಹೊಸ ನ್ಯುಮೋನಿಯಾ ಮಾದರಿಯ ವೈರಸ್ ಪತ್ತೆಯಾಗಿದ್ದು, ವಿಶ್ವವನ್ನೇ ಆತಂಕಕ್ಕೆ ದೂಡಿದೆ. ಕೇಂದ್ರ ಸರ್ಕಾರ ಕೂಡ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಸ್ಪತ್ರೆಗಳ ಸೌಲಭ್ಯ ಪರಿಶೀಲಿಸುವಂತೆ ಸೂಚನೆ ನೀಡಿದೆ. ಈ ಮಧ್ಯೆ ಬಿಬಿಎಂಪಿ ಕೂಡ ಕಟ್ಟೆಚ್ಚರ ವಹಿಸಲು ಮುಂದಾಗಿದ್ದು, ಖಾಸಗಿ ಆಸ್ಪತ್ರೆಗಳಿಂದಲೂ ಮಾಹಿತಿ ನೀಡುವಂತೆ ಕೇಳಿದೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್‌ ವಾರ್ನಿಂಗ್‌

    ಕೊರೊನಾ ಬಳಿಕ ಚೀನಾದಲ್ಲಿ ನ್ಯುಮೋನಿಯಾ ಮಾದರಿ ಜ್ವರ ಕಾಣಿಸಿಕೊಳ್ತಿದೆ. ಅದು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಚೀನಾದಿಂದ ವರದಿ ತರಿಸಿಕೊಂಡಿದೆ. ಇದರಿಂದ ಆತಂಕ ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ ಬಿಬಿಎಂಪಿ ಕೂಡ ಕಟ್ಟೆಚ್ಚರ ವಹಿಸಲು ಮುಂದಾಗಿದೆ. ಈಗಾಗಲೇ ಕೋವಿಡ್ ಸಾಂಕ್ರಾಮಿಕ ಕಾಲವನ್ನ ಎದುರಿಸಿರುವ ಬಿಬಿಎಂಪಿ ನ್ಯುಮೋನಿಯಾ ಮಾದರಿಯ ವೈರಸ್ ಬಗ್ಗೆ ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಆಸ್ಪತ್ರೆಗಳು ಮತ್ತು ನಗರ ಪ್ರಾಥಮಿಕ ಚಿಕಿತ್ಸಾ ಕೇಂಗಳಲ್ಲಿ ನಿಗಾ ವಹಿಸುವಂತೆ ನಿಗಾವಹಿಸುವಂತೆ ಸೂಚನೆ ನೀಡಿದೆ.

    ಸದ್ಯ ಚಳಿಗಾಲ ಆಗಿರುವುದರಿಂದ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗ್ತಿದೆ. ಅದ್ರಲ್ಲೂ ನ್ಯುಮೋನಿಯಾ ಖಾಯಿಲೆಯಿಂದ ಬಳಲುವ ಮಕ್ಕಳ ವರದಿ ಕೇಳುತ್ತಿದೆ. ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆಯೇ ರೇಪ್ ಮಾಡಲು ಪ್ರೇಮಿಗೆ ಅವಕಾಶ ಕೊಟ್ಟ ಮಹಿಳೆಗೆ 40 ವರ್ಷ ಜೈಲು ಶಿಕ್ಷೆ

    ಆಸ್ಪತ್ರೆಗೆ ಬಿಬಿಎಂಪಿ ಸೂಚನೆ ಏನು?
    * ನ್ಯುಮೋನಿಯಾ ಅಂತ ದಾಖಲಾದ ಮಕ್ಕಳ ವರದಿ ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ
    * ಖಾಸಗಿ ಆಸ್ಪತ್ರೆಯವರು ನ್ಯುಮೋನಿಯಾ ಕಾಯಿಲೆ ಅಂತ ದಾಖಲಾಗುವ ಮಕ್ಕಳ ವರದಿ ನೀಡಬೇಕು
    * 3 ತಿಂಗಳು, 9 ತಿಂಗಳು, ಒಂದೂವರೆ ವರ್ಷ ಮಗುವಿಗೆ ನ್ಯುಮೋನಿಯಾ ಲಸಿಕೆ ಹಾಕಲು ಸೂಚನೆ
    * ಪ್ರತಿ ಮಗುವಿಗೂ ನ್ಯುಮೋನಿಯಾ ಲಸಿಕೆಯನ್ನ ಕಡ್ಡಾಯವಾಗಿ ಹಾಕಿಸಬೇಕು
    * ಕೆಸಿ ಜನರಲ್, ಬೌರಿಂಗ್, ಯಲಹಂಕ ಜನರಲ್ ಆಸ್ಪತ್ರೆ ಮೇಲೆ ನಿಗಾ ಇಡಲು ಆರೋಗ್ಯಾಧಿಕಾರಿಗಳಿಗೆ ಸೂಚನೆ
    * ಮಕ್ಕಳ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸೂಚನೆ.

  • ಧೂಳು ಹಿಡಿದ ಲಾರಿಯಲ್ಲಿ ಬೆಲೆ ಬಾಳುವ ಔಷಧಿಗಳ ಸಂಗ್ರಹ

    ಧೂಳು ಹಿಡಿದ ಲಾರಿಯಲ್ಲಿ ಬೆಲೆ ಬಾಳುವ ಔಷಧಿಗಳ ಸಂಗ್ರಹ

    – ಆವರಣದಲ್ಲಿ ಸಿಗುತ್ತಿವೆ ಅವಧಿ ಮುಗಿಯದ ಔಷಧಿಗಳು
    – ಆರೋಗ್ಯ ಇಲಾಖೆಯ ಮಹಾ ನಿರ್ಲಕ್ಷ್ಯ ಅನಾವರಣ

    ಬೆಂಗಳೂರು: ಜನರ ಜೀವ ಉಳಿಸಬೇಕಾದ ಔಷಧಗಳಿಗೆ (Medicine) ಈಗ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರದ ಔಷಧ ಉಗ್ರಾಣದ ಹೊರ ಭಾಗದಲ್ಲಿಯೇ ಸಿರಿಂಜ್, ಮೆಡಿಸಿನ್‌ಗಳನ್ನು ಸಂಗ್ರಹಿಸಿ ಆರೋಗ್ಯ ಇಲಾಖೆಯ (Health Department) ವೈದ್ಯಕೀಯ ಸರಬರಾಜು ನಿಗಮದ (Medical Supply Corporation) ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ.

    ಬೆಂಗಳೂರು (Bengaluru) ಸೇರಿ, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೆ ಔಷಧಿ ಪೂರೈಕೆ ಮಾಡುವ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿರ್ಲಕ್ಷ್ಯ ಇದೀಗ ಬಯಲಾಗಿದೆ. ಬಸವೇಶ್ವರ ನಗರ (Basaveshwar Nagar), ಸಿದ್ಧಯ್ಯ ಪುರಾಣಿಕ ರಸ್ತೆಯಲ್ಲಿರುವ ಸರ್ಕಾರಿ ಔಷಧಿ ಮಳಿಗೆಯ ಆವರಣದ ಹೊರ ಭಾಗದಲ್ಲಿ ಬೆಲೆ ಬಾಳುವ ಔಷಧಿಗಳನ್ನು ಧೂಳು ಹಿಡಿದ ಲಾರಿಯಲ್ಲಿ (Lorry) ಸಂಗ್ರಹಿಸಿಟ್ಟಿದ್ದಾರೆ. ಬಿಸಿಲಿನಲ್ಲಿ, ಧೂಳಿನಲ್ಲಿ ಔಷಧಗಳನ್ನು ಇಡಲಾಗಿದೆ. ಮಳೆ ಬಂದರೆ ದುಬಾರಿ ಔಷಧಿಗಳು ಎಲ್ಲವೂ ನೀರು ಪಾಲಾಗುತ್ತದೆ. ಆ ಔಷಧಿಗಳನ್ನು ಗೋದಾಮಿನಲ್ಲಿ ಇಡಬೇಕೆಂಬ ಕನಿಷ್ಟ ಸಾಮಾನ್ಯ ಜ್ಞಾನವನ್ನೂ ಇಲ್ಲಿನ ಅಧಿಕಾರಿಗಳು ಪಾಲಿಸಿಲ್ಲ. ಇದನ್ನೂ ಓದಿ: ಕಲ್ಲಿದ್ದಲು ಕಳ್ಳತನ ಕೇಸ್‌ – ಇದ್ದ ಮೂವರಲ್ಲಿ ಕಳ್ಳ ಯಾರು? ವೈಟಿಪಿಎಸ್ ಅಧಿಕಾರಿಗಳು ಹೇಳೋದು ಏನು?

    2023-24ರ ಸಾಲಿನಲ್ಲಿ ವಿವಿಧ ಆಸ್ಪತ್ರೆಗಳಿಗೆ ಔಷಧಗಳಿಗೆ ಹೆಚ್ಚು ಬೇಡಿಕೆ ಬಂದಿತ್ತು. 732 ಡ್ರಗ್ಸ್‌ಗಳ ಪೈಕಿ, 409 ಎಸೆನ್ಶಿಯಲ್ ಡ್ರಗ್ಸ್ ಕೂಡ ಆಸ್ಪತ್ರೆಗಳಿಗೆ ಸರಿಯಾದ ಸಮಯಕ್ಕೆ ಪೂರೈಕೆ ಆಗುತ್ತಿಲ್ಲ. ಆಸ್ಪತ್ರೆಯ ಆವರಣದ ಹೊರಗೆ ಯಾವುದೇ ಸುರಕ್ಷತೆ, ಭದ್ರತೆ ಇಲ್ಲದ ಲಾರಿಯಲ್ಲಿ ನೂರಾರು ಸಿರಿಂಜ್ ಬಾಕ್ಸ್‌ಗಳನ್ನು ಹಲವು ದಿನಗಳಿಂದ ಸಂಗ್ರಹಿಸಿಟ್ಟಿದ್ದಾರೆ. ನವೆಂಬರ್ 19ರಂದು ಇದೇ ಜಾಗಕ್ಕೆ ಹೋದಾಗಲೂ ಇದೇ ಲಾರಿಯಲ್ಲಿರುವ ಔಷಧಿಗಳನ್ನು ಹೀಗೇ ಖಾಲಿ ಬಿಟ್ಟಿದ್ದರು. ಇದನ್ನೂ ಓದಿ: ಇನ್ಮುಂದೆ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ – ICC ಹೇಳಿದ್ದೇನು?

    ಔಷಧ ಮಳಿಗೆಯ ಆವರಣದಲ್ಲಿಯೇ ಅವಧಿ ಮುಗಿಯದೇ ಇರುವ ಔಷಧಿಗಳನ್ನು ಎಸೆಯಲಾಗಿದೆ. ಔಷಧಿ ಸಂಗ್ರಹ ಮಳಿಗೆಯ ವ್ಯಾಪ್ತಿ ದೊಡ್ಡದಾಗಿದ್ದು, ಇಲ್ಲಿ ರಾತ್ರಿ ಸಮಯದಲ್ಲಿ ಕೇವಲ ಒಬ್ಬರೇ ಸೆಕ್ಯೂರಿಟಿ ಗಾರ್ಡ್ ಇರುತ್ತಾರೆ. ಯಾರು, ಹೇಗೆ, ಎಲ್ಲಿ ಬೇಕಾದರೂ ಮೆಡಿಸಿನ್‌ಗಳನ್ನು ದೋಚಬಹುದು. ಅಷ್ಟರಮಟ್ಟಿಗೆ ಭದ್ರತೆ ಇಲ್ಲದಂತಾಗಿದೆ. ಅದೇನೆ ಆಗಲಿ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ತುರ್ತು ಗಮನಹರಿಸಬೇಕಿದೆ. ಇದನ್ನೂ ಓದಿ: ಜಮೀರ್ ಒಬ್ಬ ರಾಷ್ಟ್ರದ್ರೋಹಿ, ಸಚಿವ ಸಂಪುಟದಿಂದ ವಜಾ ಮಾಡಿ – ಈಶ್ವರಪ್ಪ ಆಗ್ರಹ

  • ಝಿಕಾ ವೈರಸ್‌ ಪತ್ತೆ ಕೇಸ್‌ – 56 ಮಂದಿಯ ವರದಿ ನೆಗೆಟಿವ್‌

    ಝಿಕಾ ವೈರಸ್‌ ಪತ್ತೆ ಕೇಸ್‌ – 56 ಮಂದಿಯ ವರದಿ ನೆಗೆಟಿವ್‌

    ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಝಿಕಾ ವೈರಸ್ (Zika Virus) ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ತ ಪರೀಕ್ಷೆಗೆ ಒಳಪಡಿಸಲಾಗಿದ್ದ 56 ಮಂದಿಯ ವರದಿಯೂ ನೆಗಟಿವ್ ಬಂದಿದೆ. ಇದರಿಂದ ಆರೋಗ್ಯ ಇಲಾಖೆ (Health Department) ನಿಟ್ಟುಸಿರು ಬಿಟ್ಟಿದೆ.

    ಅಕ್ಟೋಬರ್‌ 10 ರಂದು ತಲಕಾಯಲಬೆಟ್ಟ ಗ್ರಾಮದಲ್ಲಿ ಪರೀಕ್ಷೆಗೆ ಸೊಳ್ಳೆಯೊಂದರಲ್ಲಿ ಝಿಕಾ ವೈರಸ್‌ ಪತ್ತೆಯಾಗಿತ್ತು. ತಕ್ಷಣವೇ ಎಚ್ಚೆತ್ತುಕೊಂಡಿದ್ದ ಆರೋಗ್ಯ ಇಲಾಖೆ ತಲಕಾಯಲಬೆಟ್ಟ ಗ್ರಾಮದ 5 ಕಿಮೀ ವ್ಯಾಪ್ತಿಯಲ್ಲಿರುವ 5 ಗ್ರಾಮಗಳಲ್ಲಿ 43 ಮಂದಿ ಗರ್ಭಿಣಿಯರು, 13 ಮಂದಿ ಜ್ವರಪೀಡಿತರ ರಕ್ತ ಮಾದರಿಯನ್ನ ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಿತ್ತು. ಇದನ್ನೂ ಓದಿ: ಅಭಿಮಾನಿಗೆ ಕಪಾಳಮೋಕ್ಷ: ಕ್ಷಮೆ ಕೇಳಿದ ನಟ ನಾನಾ ಪಾಟೇಕರ್

    ಬೆಂಗಳೂರಿನ ನ್ಯಾಷನಲ್ ವೈರಾಲಜಿ ಸಂಸ್ಥೆಗೆ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. 56 ಮಂದಿಯ ವರದಿಯೂ ಈಗ ಆರೋಗ್ಯ ಇಲಾಖೆಗೆ ಲಭ್ಯವಾಗಿದ್ದು, ವರದಿ ನೆಗೆಟಿವ್‌ ಬಂದಿದೆ. ಇದರಿಂದ ಆರೋಗ್ಯ ಇಲಾಖೆಗೆ ಇದ್ದ ಆತಂಕ ದೂರವಾಗಿದೆ. ಇದನ್ನೂ ಓದಿ: ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಬೀರಿದೆ – BJP ವ್ಯವಸ್ಥೆ ಹದಗೆಟ್ಟಿದೆ: ಜಗದೀಶ್ ಶೆಟ್ಟರ್

    ಇನ್ನೂ 10 ಮಂದಿ ಜ್ವರಪೀಡಿತರ ರಕ್ತ ಮಾದರಿಯನ್ನ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬರಬೇಕಿದೆ. ಈ ಬಗ್ಗೆ ಮಾತನಾಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕುಮಾರ್, ಜನ ವೈರಸ್ ಇಲ್ಲ ಅಂತ ಉದಾಸೀನ ಮಾಡೋದು ಬೇಡ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

    ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳನ್ನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿಯೂ ವೈರಸ್‌ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಕುಟುಂಬದ ಆಸ್ತಿ ತನಿಖೆ ಮಾಡಿಸಲಿ: ಚೆಲುವರಾಯಸ್ವಾಮಿಗೆ ಕುಮಾರಸ್ವಾಮಿ ಸವಾಲ್

  • ಝಿಕಾ ಆತಂಕ; ಚಿಕ್ಕಬಳ್ಳಾಪುರದ 5 ಗ್ರಾಮಗಳಲ್ಲಿ ಅಲರ್ಟ್‌ – 31 ಮಂದಿ ಗರ್ಭಿಣಿಯರಿಗೆ ರಕ್ತ ಪರೀಕ್ಷೆ

    ಝಿಕಾ ಆತಂಕ; ಚಿಕ್ಕಬಳ್ಳಾಪುರದ 5 ಗ್ರಾಮಗಳಲ್ಲಿ ಅಲರ್ಟ್‌ – 31 ಮಂದಿ ಗರ್ಭಿಣಿಯರಿಗೆ ರಕ್ತ ಪರೀಕ್ಷೆ

    ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿನ ಸೊಳ್ಳೆಗಳ ಪರೀಕ್ಷೆ ವೇಳೆ ಮಾರಕ ಝಿಕಾ ವೈರಸ್ (Zika Virus) ಪತ್ತೆಯಾಗಿದ್ದು, ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್‌ (Health Department) ಆಗಿದೆ.

    ಆರಂಭಿಕ ಹಂತದಲ್ಲೇ ಮಾರಕ ವೈರಸ್‌ಗೆ ಕಡಿವಾಣ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆ ತಲಕಾಯಲಬೆಟ್ಟ ಗ್ರಾಮದ 5 ಕಿಮೀ ವ್ಯಾಪ್ತಿಯಲ್ಲಿರುವ 5 ಗ್ರಾಮಗಳಲ್ಲಿ 31 ಗರ್ಭಿಣಿಯರ (Pregnant Women) ರಕ್ತ ಮಾದರಿಗಳನ್ನು ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಿದೆ. ಇನ್ನೂ ಜೊತೆಯಲ್ಲಿ 4 ಮಂದಿ ಜ್ವರಪೀಡಿತರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ ಅಂತ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕುಮಾರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳ ನಂತ್ರ ಚಿಕ್ಕಬಳ್ಳಾಪುರದಲ್ಲಿ ಮಾರಕ ಝಿಕಾ ವೈರಸ್‌ ಪತ್ತೆ – ಸ್ಥಳೀಯರಲ್ಲಿ ಭೀತಿ

    ಮಾದರಿ ಪರೀಕ್ಷೆಗಳ ವರದಿ ಬರಲು 15 ದಿನಗಳಾಗಲಿದ್ದು, ವರದಿ ಬಂದ ನಂತರ ಝಿಕಾ ವೈರಸ್‌ ಇದೆಯೋ ಇಲ್ಲವೋ ಎಂಬುದು ಖಚಿತವಾಗಲಿದೆ. ಅಲ್ಲಿಯವರೆಗೂ ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಉತ್ತಮ ಪೋಷಕಾಂಶಯುಕ್ತ ಆಹಾರ ಸೇವನೆಗೆ ಸೂಚನೆ ನೀಡಲಾಗಿದೆ. ಸೊಳ್ಳೆ ಪರದೆ ಬಳಸಿಕೊಂಡು ಮಲಗಲು ಸೂಚಿಸಲಾಗಿದೆ. ಸೊಳ್ಳೆ ಕಡಿತದಿಂದ ಸ್ವಯಂ ರಕ್ಷಣೆ ಮಾಡಿಕೊಂಡು ಝಿಕಾ ವೈರಸ್ ಆತಂಕದಿಂದ ದೂರ ಇರಲು ಸಲಹೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ಅಧ್ಯಯನ ಮಾಡುವ ಬದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ: ಪರಮೇಶ್ವರ್

    ಝಿಕಾ ವೈರಸ್ ರೋಗ ಲಕ್ಷಣಗಳು: ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿದ್ದ ಝಿಕಾ ವೈರಸ್ ಇದೀಗ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ವೈರಸ್‌ ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು ಲಕ್ಷಣಗಳನ್ನು ಹೊಂದಿದೆ. ಇದನ್ನೂ ಓದಿ: ಕೇಂದ್ರದ ಬಿಜೆಪಿ ನಾಯಕರು ರಾಜ್ಯಕ್ಕೆ ಬರುತ್ತಿದ್ದದ್ದು ಕಲೆಕ್ಷನ್ ಮಾಡೋದಕ್ಕಾ – ಪರಮೇಶ್ವರ್ ಪ್ರಶ್ನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇರಳ ನಂತ್ರ ಚಿಕ್ಕಬಳ್ಳಾಪುರದಲ್ಲಿ ಮಾರಕ ಝಿಕಾ ವೈರಸ್‌ ಪತ್ತೆ – ಸ್ಥಳೀಯರಲ್ಲಿ ಭೀತಿ

    ಕೇರಳ ನಂತ್ರ ಚಿಕ್ಕಬಳ್ಳಾಪುರದಲ್ಲಿ ಮಾರಕ ಝಿಕಾ ವೈರಸ್‌ ಪತ್ತೆ – ಸ್ಥಳೀಯರಲ್ಲಿ ಭೀತಿ

    ಚಿಕ್ಕಬಳ್ಳಾಪುರ: ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಝಿಕಾ ವೈರಸ್‌ (Zika Virus) ಇದೀಗ ಚಿಕ್ಕಬಳ್ಳಾಪುರದಲ್ಲಿ (Chikkaballapur) ಪತ್ತೆಯಾಗಿದೆ. ಆರೋಗ್ಯ ಇಲಾಖೆ ಹೈಅಲರ್ಟ್‌ ಆಗಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳನ್ನ ಪರೀಕ್ಷೆಗೆ ಒಳಪಡಿಸಿದಾಗ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ. ಇದನ್ನೂ ಓದಿ: ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ- ಶುಕ್ರವಾರದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ

    ಹೀಗಾಗಿ ತಲಕಾಯಲಬೆಟ್ಟ ಗ್ರಾಮ ಸೇರಿದಂತೆ ಸುತ್ತಮುತ್ತಲ 5 ಕಿಮೀ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ (Health  Department) ಸರ್ವೆ ಕಾರ್ಯ ರ‍್ಯಾಂಡಮ್‌ ಚೆಕಪ್‌ ಮಾಡಲಾಗುತ್ತಿದೆ. ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ವಡ್ಡಹಳ್ಳಿ, ಬಚ್ಚಹಳ್ಳಿ ಗ್ರಾಮದ 880 ಮನೆಗಳಲ್ಲಿ ಸರಿಸುಮಾರು 4,800 ಜನರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ. ಇದನ್ನೂ ಓದಿ: ನಿಗಮ-ಮಂಡಳಿ ನೇಮಕ ವಿಚಾರದಲ್ಲಿ ಸಿದ್ದು- ಡಿಕೆಶಿ ಟಾಕ್‌ವಾರ್‌- ಹೈಕಮಾಂಡ್‌ ಸಭೆಯ ಇನ್‌ಸೈಡ್‌ ಸ್ಟೋರಿ ಇಲ್ಲಿದೆ

    ಈಗಾಗಲೇ 30 ಮಂದಿ ಗರ್ಭಿಣಿಯರು ಹಾಗೂ ಜ್ವರದಿಂದ ಬಳಲುತ್ತಿರುವ 3 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದೆ. ಇನ್ನೂ ಮುಂಜಾಗ್ರತಾ ಕ್ರಮವಾಗಿ ಜ್ವರದಿಂದ ಬಳಲುತ್ತಿರುವವರ ಮೇಲೆ ನಿಗಾವಹಿಸಲಾಗಿದೆಯಾದರೂ ಝಿಕಾ ವೈರಸ್ ಸೋಂಕು ಹುಟ್ಟುವ ಮಕ್ಕಳ ಅಂಗವೈಕಲ್ಯಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗರ್ಭಿಣಿಯರ ಮೇಲೂ ನಿಗಾ ವಹಿಸಲಾಗಿದೆ.

    ಇದುವರೆಗೂ ಮನುಷ್ಯರಲ್ಲಿ ಝಿಕಾ ವೈರಸ್ ಪತ್ತೆಯಾಗಿಲ್ಲ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕುಮಾರ್ ಪಬ್ಲಿಕ್ ಟಿವಿಗೆ ಝಿಕಾ ವೈರಸ್ ಪತ್ತೆಯಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಹಣ ಕಳ್ಳತನ ಪ್ರಕರಣ – ಸಂಘದ ಸಿಬ್ಬಂದಿ ಸೇರಿ 10 ಕಳ್ಳರು ಅಂದರ್

    ಝಿಕಾ ವೈರಸ್ ರೋಗ ಲಕ್ಷಣಗಳು: ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]