Tag: Health Fair

  • ಚಿಕ್ಕಬಳ್ಳಾಪುರದಲ್ಲಿ ನಡೆದ ಆರೋಗ್ಯ ಮೇಳ ಜಾಗತಿಕ ದಾಖಲೆ ಬರೆದಿದೆ: ಅರುಣ್ ಸಿಂಗ್ ಶ್ಲಾಘನೆ

    ಚಿಕ್ಕಬಳ್ಳಾಪುರದಲ್ಲಿ ನಡೆದ ಆರೋಗ್ಯ ಮೇಳ ಜಾಗತಿಕ ದಾಖಲೆ ಬರೆದಿದೆ: ಅರುಣ್ ಸಿಂಗ್ ಶ್ಲಾಘನೆ

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಡೆದ ಎರಡು ದಿನಗಳ ಆರೋಗ್ಯ ಮೇಳ ಜಾಗತಿಕ ದಾಖಲೆ ಬರೆದಿದೆ. ಪ್ರಧಾನ ಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರ ಮೆಚ್ಚಿ ಶ್ಲಾಘಿಸುವಂತ ಮೇಳ ಇದಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕಾರ್ಯಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ  ಅರುಣ್ ಸಿಂಗ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಡಾ.ಕೆ.ಸುಧಾಕರ್ ಫೌಂಡೇಶನ್ ಸಹಯೋಗದಲ್ಲಿ ಆರೋಗ್ಯ ಮೇಳ ಹಮ್ಮಿಕೊಳ್ಳಲಾಗಿತ್ತು. ಚಿಕ್ಕಬಳ್ಳಾಪುರ ನಗರದ ಹೊರವಲಯದ ಎಸ್‍ಜೆಸಿಐಟಿ ಕಾಲೇಜ್ ಆವರಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಆರೋಗ್ಯ ಮೇಳದ ಎರಡನೇ ದಿನವಾದ ಇಂದು ಅರುಣ್ ಸಿಂಗ್ ಭೇಟಿ ನೀಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ದಲಿತ ಸಿಎಂ ಆಗ್ತಾರೆ ಅಂತ ಕನಸು ಕಾಣೋನು ಹುಚ್ಚ: ಎ.ನಾರಾಯಣಸ್ವಾಮಿ

    ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅರುಣ್‍ಸಿಂಗ್, ಒಂದೇ ಸೂರಿನಡಿ ತಪಾಸಣೆ, ಚಿಕಿತ್ಸೆ, ಔಷಧ ವಿತರಣೆ ಮತ್ತು ಶಸ್ತ್ರಚಿಕಿತ್ಸೆಯಂತಹ ಸಕಲ ವೈದ್ಯಕೀಯ ಸೌಲಭ್ಯಗಳನ್ನು ಲಕ್ಷಾಂತರ ಜನರಿಗೆ ಕಲ್ಪಿಸಲಾಗಿದೆ. ಉಚಿತವಾಗಿ ಊಟ ಮತ್ತು ಸಾರಿಗೆ ಮತ್ತಿತರ ಸೌಲಭ್ಯಗಳೊಂದಿಗೆ ಆರೋಗ್ಯ ಮೇಳ ನಡೆಸುವುದು ಸುಲಭದ ಕೆಲಸವಲ್ಲ. ಇಂತಹ ಬೃಹತ್ ಮೇಳ ಈ ಹಿಂದೆ ನಡೆದಿರಲು ಸಾಧ್ಯವಿಲ್ಲ. ಯೋಜಿತವಾಗಿ ದೂರದೃಷ್ಟಿಯಿಂದ ಬಡವರು ಮತ್ತು ಮಧ್ಯಮ ವರ್ಗದ ಮುಖ್ಯವಾಗಿ ಗ್ರಾಮೀಣ ಜನರಿಗೆ ವಿವಿಧ ವೈದ್ಯಕೀಯ ಸೇವೆ ಸೌಲಭ್ಯಗಳನ್ನು ಉಚಿತವಾಗಿ ತಲುಪಿಸಲು ಆಯೋಜಿಸಿರುವ ಈ ಆರೋಗ್ಯ ಮೇಳ ದೇಶಕ್ಕೆ ಮಾದರಿಯಾಗಿದೆ. ಕೇಂದ್ರ ಸರ್ಕಾರದ ಮಹತ್ವದ ಆಯುಷ್ಮಾನ್ ಭಾರತ್ ಕಾರ್ಡ್‍ಗಳ ನೋಂದಣಿಯೂ ಬಹುದೊಡ್ಡ ಪ್ರಮಾಣದಲ್ಲಿ ಆಗುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಹಿಂಭಾಗದಲ್ಲಿ ಹಿಂದೂ ದೇವಾಲಯ ಇರಬಹುದು: ಶ್ರೀಶೈಲ ಶ್ರೀ

    ಡಾ.ಕೆ.ಸುಧಾಕರ್ ಮಾತನಾಡಿ. ಚಿಕ್ಕಬಳ್ಳಾಪುರದಲ್ಲಿ ಪ್ರಾಯೋಗಿಕವಾಗಿ ಆಯೋಜಿಸಿರುವ ಎರಡು ದಿನಗಳ ಬೃಹತ್ ಆರೋಗ್ಯ ಮೇಳ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿ ಜಾಗತಿಕ ಮಟ್ಟದ ದಾಖಲೆಯನ್ನು ಬರೆದಿದೆ. ಈ ಪ್ರಯೋಗವನ್ನು ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ನಡೆಸಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

  • ಆರೋಗ್ಯಮೇಳದಲ್ಲಿ ಭಾಗವಹಿಸಿ ಆರೋಗ್ಯಕರ ಜೀವನ ನಿಮ್ಮದಾಗಿಸಿಕೊಳ್ಳಿ: ಸುಧಾಕರ್

    ಆರೋಗ್ಯಮೇಳದಲ್ಲಿ ಭಾಗವಹಿಸಿ ಆರೋಗ್ಯಕರ ಜೀವನ ನಿಮ್ಮದಾಗಿಸಿಕೊಳ್ಳಿ: ಸುಧಾಕರ್

    ಚಿಕ್ಕಬಳ್ಳಾಪುರ: ಮೇ 14 ಮತ್ತು 15 ರಂದು ಚಿಕ್ಕಬಳ್ಳಾಪುರ ನಗರದ ಶ್ರೀ ಆದಿಚುಂಚನಗಿರಿ ಮಠದ ಎಸ್‍ಜೆಸಿಐಟಿ ಕಾಲೇಜಿನಲ್ಲಿ ನಡೆಯಲಿರುವ ಉಚಿತ ಬೃಹತ್ ಆರೋಗ್ಯ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರಿಗೂ ಉಚಿತ ಆರೋಗ್ಯ ಚಿಕಿತ್ಸೆ ಮತ್ತು ಔಷಧೋಪಾಚಾರ ಸೇವೆ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

    ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರ ಮಟ್ಟದ ಉಚಿತ ಬೃಹತ್ ಆರೋಗ್ಯ ಮೇಳ ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳು ಮತ್ತು ಸಲಹೆಗಳನ್ನು ನೀಡಿ ಮಾತನಾಡಿದರು. ಇದನ್ನೂ ಓದಿ:  ಆತಂಕದಿಂದ ಲಗೇಜ್ ತೆಗೆದುಕೊಂಡು ಎಲ್ಲಿಗೆ ಓಡಿದರು ಆಲಿಯಾ ಭಟ್ 

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 3.5 ಲಕ್ಷ ಜನಸಂಖ್ಯೆ ಇದ್ದು, ಈ ಪೈಕಿ 1.5 ಲಕ್ಷ ಜನರನ್ನು ಮೇಳಕ್ಕೆ ನೋಂದಾಯಿಸಬೇಕು. ಅವರೆಲ್ಲರಿಗೂ ಆರೋಗ್ಯ ತಪಾಸಣೆ ಮಾಡಿಸಿ ಅಗತ್ಯವಿದ್ದಲ್ಲಿ ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆ ಸೇರಿದಂತೆ ಸಕಲ ಆರೋಗ್ಯ ಸೇವೆಯನ್ನು ಉಚಿತವಾಗಿ ಒದಗಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಇತರ ಕ್ಷೇತ್ರಗಳಿಂದ ಯಾವುದೇ ವ್ಯಕ್ತಿ ಆರೋಗ್ಯ ಸೇವೆ, ಶಸ್ತ್ರಚಿಕಿತ್ಸೆ ಬಯಸಿ ಆರೋಗ್ಯ ಮೇಳಕ್ಕೆ ಆಗಮಿಸಿದರೆ, ಭೌತಿಕ ನೋಂದಣಿ ಮಾಡಿ ಅವರೆಲ್ಲರಿಗೂ ಆರೋಗ್ಯ ಸೇವೆಗಳನ್ನು ಉಚಿತವಾಗಿ ಒದಗಿಸಬೇಕು. ಯಾವುದೇ ಕಾರಣಕ್ಕೂ ಆರೋಗ್ಯ ಸೇವೆಯನ್ನು ಯಾರಿಗೂ ನಿರಾಕರಿಸುವಂತಿಲ್ಲ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

    ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಸಂಸ್ಥೆಗಳು ಸೇರಿದಂತೆ 100ಕ್ಕೂ ಹೆಚ್ಚು ಸಂಸ್ಥೆಗಳಿಂದ ಸುಮಾರು 1,500ಕ್ಕೂ ಹೆಚ್ಚು ವೈದ್ಯರು, 1,000ಕ್ಕೂ ಹೆಚ್ಚು ಪ್ರಯೋಗಾಲಯ ತಾಂತ್ರಿಕ ತಜ್ಞರು, ಆರೋಗ್ಯ ಸೇವೆ ನೀಡಲು ಮೇಳದಲ್ಲಿ ಅಂದು ಭಾಗವಹಿಸುತ್ತಿದ್ದಾರೆ. ಎಲ್ಲರು ಮೇಳದಲ್ಲಿ ಭಾಗವಹಿಸಿ ಆರೋಗ್ಯಕರ ಜೀವನ ನಿಮ್ಮದಾಗಿಸಿಕೊಳ್ಳುವಂತೆ ಸಚಿವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಶಿವಸೇನೆಗೆ ಹಿಂದುತ್ವವನ್ನು ಕಲಿಸುವ ಅಗತ್ಯವಿಲ್ಲ: ಸಂಜಯ್ ರಾವತ್

    ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಉಪವಿಭಾಗಾಧಿಕಾರಿ ಡಾ.ಸಂತೋಷ್ ಕುಮಾರ್ ಹಾಗೂ ಜಿಲ್ಲೆಯ ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.