Tag: health

  • ಆರೋಗ್ಯಕ್ಕಾಗಿ ತಾಯಿ ಲೀಲಾವತಿ ಜೊತೆ ಸ್ಟೆಪ್ ಹಾಕಿದ ನಟ ವಿನೋದ್ ರಾಜ್

    ಆರೋಗ್ಯಕ್ಕಾಗಿ ತಾಯಿ ಲೀಲಾವತಿ ಜೊತೆ ಸ್ಟೆಪ್ ಹಾಕಿದ ನಟ ವಿನೋದ್ ರಾಜ್

    ನೇಕ ಮಕ್ಕಳು ದೊಡ್ಡವರಾದ ಮೇಲೆ ತಂದೆ ತಾಯಿಯನ್ನು ಮರೆತು ಬೇರೆ ಇದ್ದು ತಮ್ಮ ಜೀವನವನ್ನು ಕೊಳ್ಳುತ್ತಾರೆ.  ಆದರೆ ನಟ ವಿನೋದ್ ರಾಜ್ (Vinod Raj) ತಮ್ಮ ತಾಯಿ, ಹಿರಿಯ ನಟಿ ಎಂ.ಲೀಲಾವತಿಯವರ (Leelavathi) ಆರೋಗ್ಯವನ್ನು ಕಾಪಾಡುವ ಸಲುವಾಗಿ  ಬೆಳಗಿನ ವ್ಯಾಯಾಮಕ್ಕೆ (Exercise) ಹಾಡಿನ ಜೊತೆಯಲ್ಲಿ ಹೆಜ್ಜೆ  ಹಾಕಿಸಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಸಾಕಷ್ಟು ವರ್ಷಗಳಿಂದ ತಾಯಿ-ಮಗ ಜೀವನ ನಡೆಸುತಿದ್ದಾರೆ. ಈ ನಡುವೆ ಜನರಿಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಅವರು ನಿರ್ಮಿಸಿದ್ದಾರೆ. ಈಗ ಮತ್ತೊಂದು ಪಶು ಆಸ್ಪತ್ರೆ ನಿರ್ಮಾಣ ಕಾರ್ಯದಲ್ಲೂ ಬ್ಯುಸಿಯಾಗಿದ್ದಾರೆ.  ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ 30 ಸೆಕೆಂಡ್ ಲಿಪ್ ಲಾಕ್: ಕಣ್ಮುಚ್ಚಿಕೊಂಡ ಪೂಜಾ ಭಟ್

    ಸಮಾಜಮುಖಿ ಕೆಲಸಗಳುಮತ್ತು ಕೃಷಿ ಜೊತೆಗೆ ವಿನೋದ್ ರಾಜ್ ಅವರಿಗೆ ತಾಯಿಯ ಯೋಗಕ್ಷೇಮವೂ ಅಷ್ಟೇ ಮುಖ್ಯ. ಹೀಗಾಗಿ ಪ್ರತಿನಿತ್ಯ ಬೆಳಿಗ್ಗೆ ತಾಯಿಯ ಆಸೆಯಂತೆ ವಿನೋದ್ ರಾಜ್ ಅಮ್ಮನ ಆರೋಗ್ಯವನ್ನು (Health) ನೋಡಿಕೊಳ್ಳುತ್ತಿದ್ದಾರೆ. ಅವರೊಂದಿಗೆ ಪ್ರತಿದಿನವೂ ಬೇರೆ ಬೇರೆ ಹಾಡುಗಳಿಗೆ ಹೆಜ್ಜೆ (Dance) ಹಾಕುತ್ತಾರೆ.

     

    ಎಂದಿನಂತೆ ಇಂದೂ ಕೂಡ ತಾಯಿಯ ಜೊತೆ ಜೊತೆಯಲೇ ಹಾಡಿಗೆ ಹೆಜ್ಜೆ ಹಾಕಿಸಿ ವ್ಯಾಯಾಮ ಮಾಡಿದ್ದಾರೆ. ಇನ್ನೂ ಈ ಇಳಿ ವಯಸ್ಸಿನಲ್ಲಿ ಅಮ್ಮನ ಉತ್ಸಾಹವನ್ನು ನೋಡಿದ ಮಗ ವಿನೋದ್ ರಾಜ್  ಖುಷ್ ಹಾಗಿದ್ದಾರೆ. ಸದಾ ಕಾಲ ಅಮ್ಮ ಆರೋಗ್ಯವಂಥಳಾಗಿ ಇರಬೇಕು ಎಂದು ನಿತ್ಯ ಪ್ರಾರ್ಥನೆ ಮಾಡುತ್ತಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉತ್ತರ ಪ್ರದೇಶದಲ್ಲಿ ರಣ ಬಿಸಿಲಿಗೆ ನಲುಗಿದ ಸರ್ಕಾರ – ಇಂದು ಹೈವೋಲ್ಟೇಜ್‌ ಸಭೆ

    ಉತ್ತರ ಪ್ರದೇಶದಲ್ಲಿ ರಣ ಬಿಸಿಲಿಗೆ ನಲುಗಿದ ಸರ್ಕಾರ – ಇಂದು ಹೈವೋಲ್ಟೇಜ್‌ ಸಭೆ

    ಲಕ್ನೋ: ರಣ ಬಿಸಿಲಿನ ತಾಪದಿಂದ (High Temperature) ಬಳಲುತ್ತಿರುವ ಉತ್ತರ ಪ್ರದೇಶದಲ್ಲಿ (Uttar Pradesh) ಮಂಗಳವಾರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ (Mansukh Mandaviya) ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ರಾಜ್ಯವು ಶಾಖದ ಅಲೆಗೆ ನಲುಗುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

    ಹೌದು. ಉತ್ತರ ಪ್ರದೇಶ, ಬಿಹಾರ, ತಮಿಳುನಾಡು, ಮಧ್ಯಪ್ರದೇಶ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಬಿಸಿಲಿನ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಖದ ಅಲೆಗೆ ಸಾವು ನೋವುಗಳು ವರದಿಯಾಗಿವೆ.

    weather (1)

    UP ನಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ 54 ಮಂದಿ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ. ಹಠಾತ್ ಸಾವುಗಳು, ಜ್ವರ, ಉಸಿರಾಟದ ತೊಂದರೆ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳು ಭರ್ತಿಯಾಗುತ್ತಿವೆ. ಬಿಹಾರದಲ್ಲೂ 44 ಮಂದಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಉರಿಯುವ ಬಿಸಿಲಿಗೆ 54 ಮಂದಿ ಬಲಿ, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    ಈಗಾಗಲೇ ಕೆಲವು ರಾಜ್ಯಗಳು ಬಿಸಿಲಿನ ತಾಪಮಾನದಿಂದ ಮಕ್ಕಳನ್ನು ರಕ್ಷಿಸಲು ಉದ್ದೇಶದಿಂದ ಬೇಸಿಗೆ ರಜೆ ವಿಸ್ತರಣೆ ಮಾಡಿವೆ.

    ಭಾರತೀಯ ಹವಾಮಾನ ಇಲಾಖೆ ಏಪ್ರಿಲ್‌ನಿಂದ ಜೂನ್‌ವರೆಗೆ ಭಾರತದಲ್ಲಿ ತಾಪಮಾನ ಹೆಚ್ಚಾಗಿರಲಿದೆ ಎಂದು ಹೇಳಿತ್ತು. ಅದಂತೆಯೇ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ರಣಬಿಸಿಲು ಜನರನ್ನ ಸುಡುತ್ತಿದೆ. ಈ ಪ್ರದೇಶಗಳಿಗೆ ಹಮಾವಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಇದನ್ನೂ ಓದಿ: ಏರ್‌ಬಸ್‌ ಜೊತೆ ಬರೋಬ್ಬರಿ 500 ವಿಮಾನ ಖರೀದಿಗೆ ಡೀಲ್‌ – ವಿಶ್ವದಾಖಲೆ ಬರೆದ ಇಂಡಿಗೋ

    ಸದ್ಯ ಉತ್ತರ ಪ್ರದೇಶದಲ್ಲಿ ಅತಿಯಾದ ಬಿಸಿಲಿನ ತಾಪದಿಂದ ಬೇರೆ ಯಾವುದಾರೂ ರೋಗಗಳು ಕಾಣಿಸಿಕೊಂಡಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸಲು ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳ ತಂಡ ನೇಮಿಸಿದೆ. ಏಕೆಂದರೆ ಅತಿಯಾದ ಬಿಸಿಲಿನ ತಾಪಮಾನ ಹಾಗೂ ಶೀತ ವಾತಾವರಣ ಮಧುಮೇಹ, ರಕ್ತದೊತ್ತಡ ಹಾಗೂ ಉಸಿರಾಟ ಸಮಸ್ಯೆ ಹೊಂದಿರುವವರಿಗೆ ಇನ್ನಷ್ಟು ಅಪಾಯ ಉಂಟು ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ.

  • ಉತ್ತರ ಪ್ರದೇಶದಲ್ಲಿ ಉರಿಯುವ ಬಿಸಿಲಿಗೆ 54 ಮಂದಿ ಬಲಿ, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    ಉತ್ತರ ಪ್ರದೇಶದಲ್ಲಿ ಉರಿಯುವ ಬಿಸಿಲಿಗೆ 54 ಮಂದಿ ಬಲಿ, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    ಲಕ್ನೋ: ಒಂದೆಡೆ ಚಂಡಮಾರುತಕ್ಕೆ ಸಿಕ್ಕಿ ಜನ ನಲುಗುತ್ತಿದ್ದರೆ, ಮತ್ತೊಂದೆಡೆ ಬಿಸಿಲಿನ ತಾಪಮಾನಕ್ಕೆ (High Temperature) ಬಲಿಯಾಗುತ್ತಿದ್ದಾರೆ. ಕಳೆದ ಮೂರು ದಿನಗಳಲ್ಲಿ ಬಿಸಿಲಿನ ತಾಪಕ್ಕೆ ಉತ್ತರ ಪ್ರದೇಶದಲ್ಲಿ (Uttar Pradesh) 54 ಮಂದಿ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಹಾರದಲ್ಲಿ 44 ಮಂದಿ ಬಲಿಯಾಗಿದ್ದಾರೆ.

    ಸಾವಿಗೆ ಬೇರೆ ಬೇರೆ ಕಾರಣವಿದ್ದರೂ ಬಿಸಿಲಿನ ತಾಪಮಾನ ಏರಿಕೆ ಪ್ರಮುಖ ಕಾರಣವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ತೀವ್ರ ಶಾಖದಿಂದಾಗಿ ಆಸ್ಪತ್ರೆಗೆ (Hospital) ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ. ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಅಧಿಕ ತಾಪಮಾನ ದಾಖಲಾಗುತ್ತಿದೆ. ಇದನ್ನೂ ಓದಿ: ನಾಸಿಕ್‌ನ ಅಂಜನೇರಿ ಬೆಟ್ಟಕ್ಕೆ ರೋಪ್‌ವೇ ನಿರ್ಮಿಸುವ ಪ್ರಕ್ರಿಯೆ ಆರಂಭ

    ಏಕಾ ಏಕಿ ಮರಣ ಪ್ರಮಾಣ ಹೆಚ್ಚಾಗಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಸಾರ್ವಜನಿಕರಲ್ಲಿ ಜ್ವರ, ಉಸಿರಾಟ ಸಮಸ್ಯೆ ಹಾಗೂ ಇತರ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿದ್ದು, ‌ಆಸ್ಪತ್ರೆ‌ಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.

    ಜೂನ್‌ 15 ರಂದು ಉತ್ತರ ಪ್ರದೇಶದಲ್ಲಿ 23 ಮಂದಿ ಮೃತಪಟ್ಟಿದ್ದರು. ಜೂನ್‌ 16 ರಂದು 20 ಮಂದಿ‌ ಹಾಗೂ ಜೂನ್‌ 17 ರಂದು 11 ಮಂದಿ ಮೃತಪಟ್ಟಿದ್ದಾರೆ ಎಂದು ಬಲ್ಲಿಯಾ ಆಸ್ಪತ್ರೆ ವೈದ್ಯ ಎಸ್‌.ಕೆ ಯಾದವ್‌ ತಿಳಿಸಿದ್ದಾರೆ. ಇದೇ ಸಮಯದಲ್ಲಿ ಬಿಹಾರದಲ್ಲೂ ಬಿಸಿಲಿನ ತಾಪಕ್ಕೆ 44 ಮಂದಿ ಬಲಿಯಾಗಿರುವುದು ಕಂಡುಬಂದಿದೆ.ಇದನ್ನೂ ಓದಿ: ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯಗಳನ್ನು ಪಠ್ಯದಿಂದ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ

    ಸದ್ಯ ಉತ್ತರ ಪ್ರದೇಶದಲ್ಲಿ ಅತಿಯಾದ ಬಿಸಿಲಿನ ತಾಪದಿಂದ ಬೇರೆ ಯಾವುದಾರೂ ರೋಗಗಳು ಕಾಣಿಸಿಕೊಂಡಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸಲು ಆರೋಗ್ಯ ಇಲಾಖೆ ಹೆಚ್ಚುವರಿ ನಿರ್ದೇಶಕ ಡಾ.ಬಿ.ಪಿ ತಿವಾರಿ ನೇತೃತ್ವದ ತಂಡ ಸಿದ್ಧತೆ ಮಾಡಿಕೊಂಡಿದೆ. ಏಕೆಂದರೆ ಅತಿಯಾದ ಬಿಸಿಲಿನ ತಾಪಮಾನ ಹಾಗೂ ಶೀತ ವಾತಾವರಣ ಮಧುಮೇಹ, ರಕ್ತದೊತ್ತಡ ಹಾಗೂ ಉಸಿರಾಟ ಸಮಸ್ಯೆ ಹೊಂದಿರುವವರಿಗೆ ಇನ್ನಷ್ಟು ಅಪಾಯ ಉಂಟು ಮಾಡುವ ಸಾಧ್ಯತೆ ಇದೆ.

    ರೋಗಿಗಳನ್ನ ಹೆಗಲಮೇಲೆ ಹೊತ್ತು ಸಾಗಿಸ್ತಿದ್ದಾರೆ:
    ಸದ್ಯ ಉತ್ತರ ಪ್ರದೇಶದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿರುವುದರಿಂದ ರೋಗಿಗಳನ್ನು ಸಾಗಿಸಲು ಸ್ಟ್ರೆಚರ್‌ಗಳ ಕೊರತೆಯಾಗಿದೆ. ಕೆಲವು ಕಡೆ ಆಸ್ಪತ್ರೆ ಸಿಬ್ಬಂದಿಗಳೇ ರೋಗಿಗಳನ್ನ ತುರ್ತು ವಿಭಾಗಕ್ಕೆ ಹೆಗಲಮೇಲೆ ಹೊತ್ತುಕೊಂಡು ಬರುತ್ತಿದ್ದಾರೆ. ಏಕಕಾಲಕ್ಕೆ ರೋಗಿಗಳು ದಾಖಲಾಗುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದು ಆರೋಗ್ಯ ಇಲಾಖೆ ನಿರ್ದೇಶಕರು ಹೇಳಿದ್ದಾರೆ.

  • ಆಲಿಯಾ ಭಟ್ ತಾತನ ಆರೋಗ್ಯ ಸ್ಥಿತಿ ಗಂಭೀರ

    ಆಲಿಯಾ ಭಟ್ ತಾತನ ಆರೋಗ್ಯ ಸ್ಥಿತಿ ಗಂಭೀರ

    ಬಾಲಿವುಡ್ ನಟಿ ಆಲಿಯಾ ಭಟ್ (Alia Bhatt) ಅವರ ತಾತನ ಆರೋಗ್ಯ (Health) ಸ್ಥಿತಿ ಗಂಭೀರವಾಗಿದ್ದು, ವಿದೇಶ ಪ್ರಯಾಣದ ಸಿದ್ಧತೆಯಲ್ಲಿದ್ದ ಆಲಿಯಾ, ಪ್ರವಾಸವನ್ನು ರದ್ದು ಮಾಡಿಕೊಂಡಿದ್ದಾರೆ. ಇನ್ನೇನು ವಿಮಾನ ಏರ ಬೇಕಿದ್ದ ಆಲಿಯಾ ವಿಷಯ ತಿಳಿಯುತ್ತಿದ್ದಂತೆಯೇ ಏರ್ ಪೋರ್ಟ್ ನಿಂದ ಅವರು ವಾಪಸ್ಸಾಗಿದ್ದಾರೆ.

    ಆಲಿಯಾ ಭಟ್ ಅವರ ತಾತ ನರೇಂದ್ರ ರಜ್ದಾನ್ (Narendra Razdan) ಲಂಗ್ ಇನ್ ಫೆಕ್ಷನ್ ನಿಂದ ಬಳಲುತ್ತಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಂದುಕೊಂಡಂತೆ ಆಗಿದ್ದರೆ ಆಲಿಯಾ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಆದರೆ, ತಾತ ಆರೋಗ್ಯ ಹದಗೆಟ್ಟಿದ್ದರಿಂದ ಪ್ರಯಾಣವನ್ನು ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಮಗಳ ವಯಸ್ಸಿನ ಫಾತಿಮಾ ಜೊತೆ ಮತ್ತೆ ಮದುವೆಗೆ ಸಜ್ಜಾದ ಆಮೀರ್‌ ಖಾನ್

    ನರೇಂದ್ರ ಅವರ ಚಿಕಿತ್ಸೆಗಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಕ್ರಿಟಿಕಲ್ ಎಂದು ತಿಳಿದು ಬಂದಿದೆ. ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ತಿಳಿಸಿದ್ದಾರಂತೆ. ಹಾಗಾಗಿ ಸಹಜವಾಗಿಯೇ ಕುಟುಂಬ ಆತಂಕದಲ್ಲಿದೆ. ಆಲಿಯಾ ಅಭಿಮಾನಿಗಳು ಅವರ ತಾತನ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ.

  • ಮಾವಿನ ಹಣ್ಣನ್ನು ತಿನ್ನುವ ಮೊದಲು ನೀರಿನಲ್ಲಿ ನೆನೆಸಿಡಿ

    ಮಾವಿನ ಹಣ್ಣನ್ನು ತಿನ್ನುವ ಮೊದಲು ನೀರಿನಲ್ಲಿ ನೆನೆಸಿಡಿ

    ಮಾವಿನ ಹಣ್ಣು (Mango) ತಿನ್ನಲು ರುಚಿ ಮಾತ್ರವಲ್ಲ, ಆರೋಗ್ಯಕ್ಕೂ (Health) ಉತ್ತಮವಾಗಿದೆ. ಬೇಸಿಗೆಯಲ್ಲಿ ಸಿಗುವ ಮಾವಿನ ಹಣ್ಣು ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿದೆ. ಇದು ವಿಟಮಿನ್ ಎ, ಸಿ, ಫೈಬರ್, ಕಬ್ಬಿಣ, ಸೋಡಿಯಂ, ಕ್ಯಾಲ್ಸಿಯಂ, ಪೊಟ್ಯಾಸಿಯಮ್‍ಗಳ ಉತ್ತಮ ಮೂಲವಾಗಿದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇಷ್ಟಲ್ಲ ಉಪಯೋಗವಿರುವ ಮಾವಿನ ಹಣ್ಣನ್ನು ತಿನ್ನುವುದಕ್ಕೂ ಮೊದಲು ಕೆಲ ಸಮಯಗಳವರೆಗೆ ನೀರಿನಲ್ಲಿ (Water) ನೆನೆಸಿಡುವುದು ಅವಶ್ಯಕವಾಗಿದೆ.

    ರೋಗಗಳನ್ನು ತಡೆಯುತ್ತದೆ: ಮಾವಿನಹಣ್ಣನ್ನು ನೀರಿನಲ್ಲಿ ನೆನೆಸುವುದರಿಂದ ಕೀಟನಾಶಕಗಳು ಹಾಗೂ ರಾಸಾಯನಿಕಗಳು ದೂರವಾಗುತ್ತವೆ. ಜೊತೆಗೆ ಹಣ್ಣಿನ ಮೇಲಿನ ಧೂಳು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು. ಮಾವಿನಹಣ್ಣು ತಿನ್ನುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಜೀರ್ಣಕ್ರಿಯೆ ಮತ್ತು ಕರುಳಿನ ಆರೋಗ್ಯ ಸುಧಾರಿಸುತ್ತದೆ. ಅಷ್ಟೇ ಅಲ್ಲದೇ ಕಣ್ಣು, ಕೂದಲು ಮತ್ತು ಚರ್ಮಕ್ಕೆ ಸಹ ಪ್ರಯೋಜನಕಾರಿಯಾಗಿದೆ.

    ರಾಸಾಯನಿಕ ಅಂಶಕ್ಕೆ ಕಡಿವಾಣ: ಮಾವಿನ ಹಣ್ಣುಗಳನ್ನು ರಕ್ಷಿಸಲು ಅನೇಕ ರೀತಿಯ ಕೀಟನಾಶಕಗಳನ್ನು ಬಳಸಲಾಗುತ್ತದೆ. ಆದರೆ ಅವೇ ನಮಗೆ ಮಾರಕವಾಗುತ್ತವೆ. ಮಾವಿನ ಹಣ್ಣನ್ನು ಹಾಗೇ ತಿನ್ನುವುದರಿಂದ ರಾಸಾಯನಿಕಗಳು ನಮ್ಮ ದೇಹಕ್ಕೆ ಸೇರಿಕೊಳ್ಳುತ್ತವೆ. ಇದರಿಂದಾಗಿ ಚರ್ಮ ರೋಗ, ತಲೆ ನೋವು, ವಾಕರಿಕೆ ಸೇರಿದಂತೆ ಅನೇಕ ರೊಗಗಳು ಬರುವ ಸಾಧ್ಯತೆಯಿರುತ್ತದೆ. ಆದರೆ 15 ನಿಮಿಷಗಳ ಮಾವಿನ ಹಣ್ಣನ್ನು ನೆನೆಸುವುದರಿಂದ ರಾಸಾಯನಿಕ ಅಂಶಗಳು ಕಡಿಮೆಗೊಳ್ಳುತ್ತವೆ. ಇದನ್ನೂ ಓದಿ: ಥೈರಾಯ್ಡ್ ರೋಗಿಗಳು ಮಲಗುವ ಮುನ್ನ ಈ ಆಹಾರ ಸೇವಿಸಿ

    ಚರ್ಮದ ಸಮಸ್ಯೆ ನಿವಾರಣೆ: ಮಾವಿನ ಹಣ್ಣನ್ನು ತಿನ್ನುವ ಮೊದಲು ನೀರಿನಲ್ಲಿ ನೆನೆಸಿಡುವುದರಿಂದ ತ್ವಚೆಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಸದೇ ಮೊಡವೆಗಳು ಹಾಗೂ ಚರ್ಮದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅಷ್ಟೇ ಅಲ್ಲದೇ, ಮಲಬದ್ಧತೆ, ತಲೆನೋವು ಅಥವಾ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತವೆ. ಆದರೆ ಮಾವಿನ ಹಣ್ಣನ್ನು ನೀರಿನಲ್ಲಿ ಇರಿಸುವುದರಿಂದ ಇವೆಲ್ಲ ಸಮಸ್ಯೆಯಿಂದ ಪಾರಾಗಬಹುದು.

    ದೇಹದ ಉಷ್ಣತೆ ನಿರ್ವಹಣೆ: ಸಾಮಾನ್ಯವಾಗಿ ಮಾವಿನಹಣ್ಣು ತಿಂದ ನಂತರ ದೇಹದ ಉಷ್ಣತೆ ತುಂಬಾ ಹೆಚ್ಚಾಗುತ್ತದೆ. ಅದೇ ರೀತಿ ಮಾವಿನ ಹಣ್ಣನ್ನು ನೀರಿನಲ್ಲಿ ನೆನಸುವುದರಿಂದ ದೇಹದಲ್ಲಿರುವ ಉಷ್ಣತೆಯನ್ನು ನಿರ್ವಹಣೆ ಮಾಡಬಹುದಾಗಿದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಕಬ್ಬಿನ ಹಾಲನ್ನು ಕುಡಿಯೋದ್ರಿಂದ ಅದ್ಭುತ ಪ್ರಯೋಜನ

  • ನಟ ಶರತ್ ಬಾಬು ಆರೋಗ್ಯ ಮತ್ತಷ್ಟು ಗಂಭೀರ: ಹಿರಿಯ ವೈದ್ಯರಿಂದ ಚಿಕಿತ್ಸೆ

    ನಟ ಶರತ್ ಬಾಬು ಆರೋಗ್ಯ ಮತ್ತಷ್ಟು ಗಂಭೀರ: ಹಿರಿಯ ವೈದ್ಯರಿಂದ ಚಿಕಿತ್ಸೆ

    ನ್ನಡದ ಅಮೃತವರ್ಷಿಣಿ (Amrutavarshini) ಸೇರಿದಂತೆ ದಕ್ಷಿಣದ ನಾನಾ ಭಾಷೆಗಳ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ ಶರತ್ ಬಾಬು (Sharat Babu) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ ಅವರ ಕಿಡ್ನಿ, ಲಿವರ್, ಲಂಗ್ಸ್ ಸೇರಿದಂತೆ ಮತ್ತಿತರ ಅಂಗಾಂಗ ತೊಂದರೆಯಿಂದ ಅವರು ಬಳಲುತ್ತಿದ್ದಾರಂತೆ. ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆಯಂತೆ.

    ಸದ್ಯ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯದ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರ್ ಅಂತ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಅವರನ್ನು ಹೈದರಾಬಾದ್ (Hyderabad) ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.  ಇದನ್ನೂ ಓದಿ:ಎಲೋನ್ ಮಸ್ಕ್ ಬಗ್ಗೆ ಸಿಟ್ಟಾದ ಬಿಗ್ ಬಿ: ಹಣ ಕಳೆದುಕೊಂಡ ಬಗ್ಗೆ ಅಮಿತಾಭ್ ಕಿಡಿಕಿಡಿ

    ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ಶಿಫ್ಟ್ ಮಾಡಿದ ನಂತರ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು, ಅಲ್ಲದೇ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಸಾಮಾನ್ಯ ವಾರ್ಡ್ ಗೆ ಸ್ಥಳಾಂತರ ಮಾಡುವ ಕುರಿತು ವೈದ್ಯರು ನಿರ್ಧಾರ ತಗೆದುಕೊಂಡಿದ್ದಾರೆ ಎನ್ನುವ ಮಾಹಿತಿಯೂ ಇತ್ತು. ಆದರೆ, ಮತ್ತೆ ದಿಢೀರ್ ಅಂತ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆಯಂತೆ.

    ನಾಲ್ಕು ದಶಕಗಳ ಕಾಲ ಚಿತ್ರೋದ್ಯಮದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿರುವ ಶರತ್ ಬಾಬು, ಹುಟ್ಟಿದ್ದು ಆಂಧ್ರಪ್ರದೇಶದಲ್ಲಿ. ಆದರೂ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ಅವರು ಅಮೃತವರ್ಷಿಣಿ ಶರತ್ ಬಾಬು ಎಂದೇ ಫೇಮಸ್ ಆಗಿದ್ದಾರೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಅವರದ್ದು

  • ಥೈರಾಯ್ಡ್ ರೋಗಿಗಳು ಮಲಗುವ ಮುನ್ನ ಈ ಆಹಾರ ಸೇವಿಸಿ

    ಥೈರಾಯ್ಡ್ ರೋಗಿಗಳು ಮಲಗುವ ಮುನ್ನ ಈ ಆಹಾರ ಸೇವಿಸಿ

    ತ್ತೀಚಿನ ದಿನಗಳಲ್ಲಿ ಯುವ ಜನರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಧುನಿಕ ಜೀವನಶೈಲಿ ಮತ್ತು ಕೆಲಸದ ಒತ್ತಡದಿಂದಾಗಿ ಅನೇಕರು ಥೈರಾಯ್ಡ್ (Thyroid) ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಆದರೆ ಆಹಾರ ಶೈಲಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡರೆ ಥೈರಾಯ್ಡ್ ಕಡಿಮೆ ಮಾಡಿಕೊಳ್ಳಬಹುದು. ರಾತ್ರಿ ಮಲಗುವ ವೇಳೆ ಈ ಆಹಾರಗಳನ್ನು ಸೇವಿಸುವುದರಿಂದ ಒಳ್ಳೆಯ ನಿದ್ದೆಯೂ ಬರುತ್ತದೆ ಜೊತೆಗೆ ಥೈರಾಯ್ಡ್ ಸಮಸ್ಯೆಯು ಸ್ವಲ್ಪ ಮಟ್ಟಿಗೆ ದೂರವಾಗುತ್ತದೆ.

    4-5 ಗೋಡಂಬಿ ಸೇವಿಸಿ: ಗೋಡಂಬಿಯು (Cashews) ಖನಿಜ ಸೆಲೆನಿಯಮ್ ಹೊಂದಿರುತ್ತದೆ. ಇದು ಥೈರಾಯ್ಡ್  ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಜೊತೆಗೆ ಆಕ್ಸಿಡೇಟಿವ್ ಒತ್ತಡದಿಂದ ಥೈರಾಯ್ಡ್ ಅಂಗಾಂಶವನ್ನು ರಕ್ಷಿಸುತ್ತದೆ. ಇದರಿಂದಾಗಿ ಪ್ರತಿನಿತ್ಯ ನೆನೆಸಿದ 4-5 ಗೋಡಂಬಿಗಳನ್ನು ಸೇವಿಸಿ.

    ತೆಂಗಿನ ಕಾಯಿ: ಇದರಲ್ಲಿ ಹೆಚ್ಚಿನ ಮಟ್ಟದ ಕೊಬ್ಬಿನಾಮ್ಲಗಳನ್ನು ಹೊಂದಿದೆ. ತೆಂಗಿನ ಕಾಯಿಯು ಚಯಾಪಚಯ ಮತ್ತು ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಜೊತೆಗೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಸುಧಾರಿತ ಥೈರಾಯ್ಡ್ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ. ಇದರಿಂದಾಗಿ ಮಲಗುವ ಮುನ್ನ 4 – 5 ತೆಂಗಿನ ಚೂರುಗಳನ್ನು ತಿನ್ನುವುದರಿಂದ ಥೈರಾಯ್ಡ್‌ ನಿಯಂತ್ರಣಕ್ಕೆ ಬರುತ್ತದೆ.

    ಚೀಯಾ ಬೀಜಗಳು: 1 ಚಮಚದಷ್ಟು ನೆನಸಿದ ಚೀಯಾ ಬೀಜಗಳನ್ನು ಸೇವಿಸುವುದರಿಂದ ಥೈರಾಯ್ಡ್ ನಿಯಂತ್ರಣದಲ್ಲಿರುತ್ತದೆ. ಇದರಲ್ಲಿ ಒಮೆಗಾ – 3 ಕೊಬ್ಬಿನಾಮ್ಲಗಳು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದರಿಂದಾಗಿ ಥೈರಾಯ್ಡ್ ಗ್ರಂಥಿಯಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನೂ ಓದಿ: ಖಿನ್ನತೆಯಿಂದ ಬಳಲುತ್ತಿದ್ದೀರಾ ಹಾಗಾದ್ರೆ ಈ ಆಹಾರ ಸೇವಿಸಿ

    ಕುಂಬಳಕಾಯಿ ಬೀಜಗಳು: ಹುರಿದ ಕುಂಬಳ ಕಾಯಿ ಬೀಜಗಳು ಝಿಂಕ್‍ನ ಸಮೃದ್ಧ ಮೂಲವಾಗಿದೆ. ಇದು ಥೈರಾಯ್ಡ್ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಕುಂಬಳಕಾಯಿ ಬೀಜಗಳು ಟ್ರಿಪ್ಟೋಫಾನ್‍ನ ನೈಸರ್ಗಿಕ ಮೂಲವಾಗಿದೆ. ಇದರಲ್ಲಿ ನಿದ್ರೆಯನ್ನು ಉತ್ತೇಜಿಸುವ ಅಮೈನೋ ಆಮ್ಲವಿದೆ. ಸರಿಯಾಗಿ ನಿದ್ದೆ ಮಾಡುವುದರಿಂದ ಥೈರಾಯ್ಡ್ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಕಬ್ಬಿನ ಹಾಲನ್ನು ಕುಡಿಯೋದ್ರಿಂದ ಅದ್ಭುತ ಪ್ರಯೋಜನ

  • ಕ್ಷಣಮಾತ್ರದಲ್ಲೇ ಮೊಸರು ಬೋಂಡಾ ಮಾಡೋದು ಹೇಗೆ?

    ಕ್ಷಣಮಾತ್ರದಲ್ಲೇ ಮೊಸರು ಬೋಂಡಾ ಮಾಡೋದು ಹೇಗೆ?

    ಸಂಜೆ ವೇಳೆ ಕುಟುಂಬದವರ ಜೊತೆ ಟೀ, ಕಾಫಿ ಕುಡಿಯುತ್ತಿದ್ದ ಸಂದರ್ಭದಲ್ಲಿ ಜೊತೆ ಬಿಸಿಬಿಸಿಯಾಗಿ ಏನಾದರೂ ಸ್ನ್ಯಾಕ್ಸ್ ಇದ್ದರೆ ಚೆನ್ನಾಗಿರುತ್ತದೆ. ಬೋಂಡಾ ಮಾಡೋಣ ಅಂದರೆ ತಿಂದು ತಿಂದು ಬೇಸರವಾಗಿರುತ್ತದೆ. ಹೀಗಾಗಿ ನಿಮಗಾಗಿ ಸುಲಭವಾಗಿ ಮೊಸರು ಬೋಂಡಾ ಮಾಡುವ ವಿಧಾನವನ್ನು ಇಲ್ಲಿ ನೀಡಲಾಗಿದೆ.

    ಬೇಕಾಗುವ ಸಾಮಗ್ರಿಗಳು:
    1. ಮೈದಾ ಹಿಟ್ಟು – 1/2 ಕೆಜಿ
    2. ಗಟ್ಟಿ ಮೊಸರು – 1/4 ಲೀಟರ್
    3. ಈರುಳ್ಳಿ – 2
    4. ಹಸಿಮೆಣಸಿನಕಾಯಿ – 4-5
    5. ಜೀರಿಗೆ -1 ಚಮಚ
    6. ಉಪ್ಪು – ರುಚಿಗೆ ತಕ್ಕಷ್ಟು
    7. ತುರಿದ ತೆಂಗಿನ ಕಾಯಿ – ಸ್ವಲ್ಪ
    8. ಎಣ್ಣೆ – ಕರಿಯಲು
    9. ಅಕ್ಕಿ ಹಿಟ್ಟು – 1 ಚಮಚ

    ಮಾಡುವ ವಿಧಾನ
    * ಒಂದು ಬಟ್ಟಲಿಗೆ ಮೈದಾ ಹಿಟ್ಟನ್ನು ಜರಡಿ ಹಿಡಿದು ಹಾಕಿಕೊಳ್ಳಿ.
    * ಅದಕ್ಕೆ ಅಕ್ಕಿ ಹಿಟ್ಟು, ಸಣ್ಣಗೆ ಹಚ್ಚಿದ ಈರುಳ್ಳಿ, ಹಸಿ ಮೆಣಸಿನಕಾಯಿ, ಜೀರಿಗೆ, ತೆಂಗಿನ ಕಾಯಿ, ಉಪ್ಪು ಹಾಕಿ ಕಲಸಿ.
    * ನಂತರ ಗಟ್ಟಿ ಮೊಸರು ಹಾಕಿ ಬೋಂಡಾ ಹದಕ್ಕೆ ಕಲಸಿ. (ಹಿಟ್ಟು ಕಲಸಲು ನೀರು ಬಳಸಬಾರದು).
    * ಕಾದ ಎಣ್ಣೆಗೆ ಬೋಂಡಾ ರೀತಿ ಉಂಡೆಗಳನ್ನು ಹಾಕಿ ಗೋಲ್ಡನ್ ಬ್ರೌನ್ ಆಗೋ ತನಕ ಕರಿಯಿರಿ.
    * ಸಂಜೆಯ ಟೀ, ಕಾಫಿ ಜೊತೆಗೆ ಮೊಸರು ಬೋಂಡಾ ಸವಿಯಿರಿ.

  • ಆರೋಗ್ಯ ಸಮಸ್ಯೆ: ಆಸ್ಪತ್ರೆಗೆ ದಾಖಲಾದ ನಟಿ ಮಾಳವಿಕಾ ಅವಿನಾಶ್

    ಆರೋಗ್ಯ ಸಮಸ್ಯೆ: ಆಸ್ಪತ್ರೆಗೆ ದಾಖಲಾದ ನಟಿ ಮಾಳವಿಕಾ ಅವಿನಾಶ್

    ಟಿ ಹಾಗೂ ರಾಜಕಾರಣಿ ಮಾಳವಿಕಾ ಅವಿನಾಶ್ (Malavika Avinash) ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆ (Hospital) ಬೆಡ್ ಮೇಲೆ ಮಲಗಿಕೊಂಡಿರುವ ಫೋಟೋವನ್ನು ಹಂಚಿಕೊಂಡಿರುವ ಅವರು ತಮಗಾದ ಆರೋಗ್ಯ ಸಮಸ್ಯೆಯನ್ನೂ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಅಲ್ಲದೇ, ಈ ರೀತಿ ಸಮಸ್ಯೆಯಾದಾಗ ನೆಗ್ಲೆಟ್ ಮಾಡಬೇಡಿ ಎಂದು ಸಲಹೆಯನ್ನೂ ಅವರು ನೀಡಿದ್ದಾರೆ.

    ಮಾಳವಿಕಾ ಮೈಗ್ರೇನ್ (Migraine) ಸಮಸ್ಯೆಯಿಂದ ಬಳಲುತ್ತಿದ್ದಾರಂತೆ. ಹಾಗಾಗಿ ಇದನ್ನು ಯಾರೂ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಅವರು ಹೇಳಿದ್ದಾರೆ. ಕೇವಲ ತಲೆನೋವು ಅಂದುಕೊಂಡು ತಾತ್ಸಾರ ಮಾಡಿದರೆ, ನನ್ನ ರೀತಿಯಲ್ಲೇ ನೀವು ಆಸ್ಪತ್ರೆಯಲ್ಲಿ ಮಲಗಬೇಕಾಗುತ್ತದೆ ಎಂದು ಸಣ್ಣ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

    ಮೈಗ್ರೇನ್ ಸಮಸ್ಯೆಯನ್ನು ಹೇಳಿಕೊಂಡು ಆಸ್ಪತ್ರೆಯ ಬೆಡ್ ನಿಂದ ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮಾಳವಿಕಾ, ಚೇತರಿಸಿಕೊಳ್ಳುತ್ತಿರುವ ಕುರಿತು ಹಂಚಿಕೊಂಡಿದ್ದಾರೆ. ಮಾಳವಿಕಾ ಹಾಕಿರುವ ಫೋಟೋ ಅವರದ್ದಾ ಅನ್ನುವ ಅನುಮಾನ ಮೂಡಿಸುವಷ್ಟು ಮುಖ ಬದಲಾಗಿದೆ. ಇದನ್ನೂ ಓದಿ: ಮದುವೆ ಆಗುವ ಬಗ್ಗೆ ಸೀಕ್ರೆಟ್‌ ಬಿಚ್ಚಿಟ್ಟ ಶರ್ಮಿಳಾ ಮಾಂಡ್ರೆ

    ಮಾಳವಿಕಾ ಬೇಗ ಚೇತರಿಸಿಕೊಂಡು ಮನೆಗೆ ಬರಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಾಕಷ್ಟು ಧಾರಾವಾಹಿ ಸಿನಿಮಾ ಮಾಡಿರುವ ಇವರು, ಇತ್ತೀಚಿನ ದಿನಗಳಲ್ಲಿ ಬಿಜೆಪಿ ಪಕ್ಷದ ಜೊತೆ ಗುರುತಿಸಿಕೊಂಡಿದ್ದಾರೆ.

  • ದೃಷ್ಟಿ ಮಂಜಾಗ್ತಿದೆ, ಕೈ-ಕಾಲು ಸ್ವಾಧೀನ ಕಳೆದುಕೊಳ್ತಿದೆ – ಪುಟಿನ್‌ ಆರೋಗ್ಯದಲ್ಲಿ ಬಿಗ್‌ ಅಪ್ಡೇಟ್ಸ್‌

    ಮಾಸ್ಕೋ: ಕಳೆದ ವರ್ಷದಿಂದ ಉಕ್ರೇನ್‌ ವಿರುದ್ಧ ಯುದ್ಧ (Russia Ukraine War) ಸಾರಿದಾಗಿನಿಂದಲೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಆರೋಗ್ಯ ವಿಚಾರ ನಿರಂತರ ಚರ್ಚೆಯಲ್ಲಿದೆ. ಇದಕ್ಕೆ ಸಂಬಂಧಿಸಿದಂತೆ ಮತ್ತೊಂದು ವರದಿ ಬಿಡುಗಡೆಯಾಗಿದ್ದು, ಪುಟಿನ್‌ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಹೇಳಲಾಗಿದೆ.

    ಪುಟಿನ್‌ಗೆ ಅತಿಯಾದ ತಲೆನೋವು, ದೃಷ್ಟಿ ಮಂಜಾಗುವುದು ಹಾಗೂ ನಾಲಿಗೆಯಲ್ಲಿ ಮರಗಟ್ಟುವಿಕೆ ಉಂಟಾಗುತ್ತಿದೆ ಎಂದು ವೈದ್ಯರು (Doctors) ಹೇಳಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಕಣ್ಣು ಮಂಕಾಗ್ತಿದೆ, ಬೆರಳು ಅಲುಗಾಡ್ತಿದೆ – ಪುಟಿನ್ ಬದುಕಿರೋದು ಇನ್ನೂ ಮೂರೇ ವರ್ಷ!

    ಪುಟಿನ್‌ ಈಗಾಗಲೇ ಬಲಗೈ ಮತ್ತು ಬಲಗಾಲಿನ ಭಾಗಶಃ ಸ್ವಾಧೀನ ಕಳೆದುಕೊಳ್ಳುತ್ತಿದ್ದಾರೆ, ಅವರಿಗೆ ತುರ್ತು ವೈದ್ಯಕೀಯ ಆರೈಕೆ ಅಗತ್ಯವಿದೆ ಎಂದು ಹೇಳಿದ್ದಾರೆ. ಆದ್ರೆ ಕ್ರೆಮ್ಲಿನ್‌ ಮತ್ತು ರಷ್ಯಾದ ಆರೋಗ್ಯ ಸಚಿವರು ಪುಟಿನ್‌ ಆರೋಗ್ಯವಾಗಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಉದ್ಯಾನವನ, ರೆಸ್ಟೊರೆಂಟ್‌ಗಳಿಗೆ ಕುಟುಂಬ, ಮಹಿಳೆಯರೊಂದಿಗೆ ಹೋಗೋದು ಬ್ಯಾನ್

    ಈ ಹಿಂದೆಯೇ ವೈದ್ಯರು ಕೌನ್ಸಿಲಿಂಗ್‌ ಮಾಡಿ‌, ಔಷಧಿ ತೆಗೆದುಕೊಂಡು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದರು. ಆದರೆ ಪುಟಿನ್‌ ವಿಶ್ರಾಂತಿ ಪಡೆಯಲು ನಿರಾಕರಿಸಿ, ಉಕ್ರೇನ್‌ ವಿರುದ್ಧ ಯುದ್ಧದ ಬೆಳವಣಿಗೆಯಲ್ಲಿ ತೊಡಗಿಕೊಂಡರು. ಅವರು ಕೊಂಚ ಸುಧಾರಿಸಿಕೊಳ್ಳುತ್ತಿದ್ದಂತೆಯೇ ವೈದ್ಯರ ಆರೈಕೆ ಬಗ್ಗೆ ನಿರ್ಲಕ್ಷ್ಯ ತೋರಿದರು ಎಂದು‌ ತಿಳಿಸಿದ್ದಾರೆ.

    ಪುಟಿನ್‌ ಕ್ಯಾನ್ಸರ್‌ ಮತ್ತು ಪಾರ್ಕಿನ್ಸನ್‌ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ರಷ್ಯಾದ ಬೇಹುಗಾರಿಕಾ ಸಂಸ್ಥೆ ಎಫ್‌ಎಸ್‌ಬಿ ಕಳೆದ ವರ್ಷವೇ ಹೇಳಿತ್ತು. ಅಲ್ಲದೇ ಹೆಚ್ಚೆಂದರೆ ಪುಟಿನ್‌ ಇನ್ನು 3 ವರ್ಷಗಳ ಕಾಲ ಬದುಕಬಹುದು ಎಂದು ತಿಳಿಸಿತ್ತು.