Tag: health

  • ವಯಸ್ಸಾದ ಲಕ್ಷಣ ಕಾಣಬಾರದೇ, ಹಾಗಾದರೆ ತುಪ್ಪ ಸೇವಿಸಿ

    ವಯಸ್ಸಾದ ಲಕ್ಷಣ ಕಾಣಬಾರದೇ, ಹಾಗಾದರೆ ತುಪ್ಪ ಸೇವಿಸಿ

    ಸಿಹಿ ಇರಲಿ, ಖಾರ ಇರಲಿ ಅದಕ್ಕೆ ಸ್ವಲ್ಪ ತುಪ್ಪವನ್ನು (Ghee) ಹಾಕಿಕೊಂಡು ಆಸ್ವಾದಿಸಿದರೆ ರುಚಿಯೇ ಬೇರೆ ತರ ಇರುತ್ತೆ. ನಮ್ಮ ಹಿರಿಯರು ತಮ್ಮ ಆಹಾರ ಪದಾರ್ಥಗಳಲ್ಲಿ ತುಪ್ಪವನ್ನು ಸೇವಿಸುತ್ತಿದ್ದರು. ಈ ತುಪ್ಪವನ್ನು ಹಿತಮಿತವಾಗಿ ಪ್ರತಿನಿತ್ಯ ಸೇವಿಸುವುದರಿಂದ ನಮ್ಮ ಆರೋಗ್ಯದ (Health) ಸುಧಾರಣೆಗೆ ಅನೇಕ ಪ್ರಯೋಜನವಿದೆ.

    ಕಾಂತಿಯುತ ಚರ್ಮ: ತುಪ್ಪವು ಚರ್ಮವನ್ನು (Skin) ಕಾಂತಿಯುತವಾಗಿ ಮತ್ತು ಸುಂದರವಾಗಿಡುತ್ತದೆ. ತುಪ್ಪವು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ತುಪ್ಪವು ವಯಸ್ಸಾದ ಚಿಹ್ನೆಗಳನ್ನು ತಡೆಯುತ್ತದೆ. ಜೊತೆಗೆ ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ. ಇದು ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ತುಪ್ಪವು ಚರ್ಮ ಮತ್ತು ಕೂದಲಿಗೆ ಹೊಳಪನ್ನು ತರುತ್ತದೆ.

    ಮೆದುಳಿನ ಆರೋಗ್ಯ: ತುಪ್ಪದಲ್ಲಿ ಹೆಚ್ಚಿನ ಖನಿಜಗಳು ಹಾಗೂ ಸ್ಯಾಚುರೇಟೆಡ್ ಕೊಬ್ಬುಗಳು ಇರುತ್ತವೆ. ಇದರಿಂದಾಗಿ ತುಪ್ಪವನ್ನು ಸೇವಿಸುವುದರಿಂದ ಮೂಳೆಗಳು ಗಟ್ಟಿಮುಟ್ಟಾಗುತ್ತವೆ. ಜೊತೆಗೆ ನರಗಳ ಹಾಗೂ ಮೆದುಳಿನ ಆರೋಗ್ಯವನ್ನು ಕಾಪಾಡುತ್ತದೆ. ಇದರಿಂದಾಗಿ ತುಪ್ಪವನ್ನು ಪ್ರತಿನಿತ್ಯ ಹಿತ ಮಿತವಾಗಿ ಬಳಸುವುದು ಅತ್ಯವಶ್ಯವಾಗಿದೆ.

    ಜೀರ್ಣಕ್ರಿಯೆ: ತುಪ್ಪವು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ನೀವು ರೊಟ್ಟಿ, ಚಪಾತಿ ಅಥವಾ ಯಾವುದಾದರೂ ನಾರಿನ ಪದಾರ್ಥದ ಜೊತೆಗೆ ತಿನ್ನುವುದರಿಂದ ಅದನ್ನು ಸುಲಭವಾಗಿ ಜೀರ್ಣಕ್ರಿಯೆ ಮಾಡಲು ಸಹಕಾರಿಯಾಗಿದೆ. ಹಾಗೂ ಚಯಾಪಚಯವೂ ಸರಿಯಾದ ರೀತಿಯಲ್ಲಿ ಆಗುತ್ತದೆ. ಗ್ಯಾಸ್ ಆದವರು ತುಪ್ಪವನ್ನು ಸೇವಿಸಬೇಕು. ಇದು ಉತ್ತಮ ಜೀರ್ಣಕ್ರಿಯೆಗೆ ಸಂಬಂಧಿಸಿರುವುದರಿಂದ ಗ್ಯಾಸ್ ಬಹುಬೇಗ ಕಡಿಮೆ ಮಾಡಿ, ದೇಹದ ಆರೋಗ್ಯವನ್ನು ಕಾಪಾಡುತ್ತದೆ.

    ರೋಗಗಳ ವಿರುದ್ಧ ಹೋರಾಟ: ತುಪ್ಪದಲ್ಲಿ ಬಹಳಷ್ಟು ಬ್ಯುಟರಿಕ್ ಆಮ್ಲವಿರುತ್ತದೆ. ಇದು ರೋಗದ ವಿರುದ್ಧ ಹೋರಾಡುವ ಜೀವಸತ್ವಗಳನ್ನು ದೇಹದಲ್ಲಿ ಹೆಚ್ಚಿಸುತ್ತದೆ. ತುಪ್ಪವು ಪ್ರಮುಖ ಕೊಬ್ಬಿನಾಮ್ಲಗಳು ಮತ್ತು ಕೊಬ್ಬು ಕರಗುವ ಜೀವಸತ್ವಗಳ ಗಮನಾರ್ಹ ಮೂಲವಾಗಿದೆ. ಇದನ್ನೂ ಓದಿ: ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ

    ಜ್ಞಾಪಕ ಶಕ್ತಿ ಹೆಚ್ಚಿಸುತ್ತೆ: ತುಪ್ಪದಲ್ಲಿರುವ ವಸ್ತುಗಳು ಆಲೋಚನಾ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ಜೀವಕೋಶಗಳು ಮತ್ತು ಅಂಗಾಂಶಗಳನ್ನು ಹಾನಿಯಿಂದ ರಕ್ಷಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ಬೆಳಗ್ಗೆ ತುಪ್ಪವನ್ನು ತಿನ್ನುವುದು ಜೀವಕೋಶಗಳ ಪುನರುತ್ಪಾದನೆಯ ಪ್ರಕ್ರಿಯೆಯನ್ನು ಸುಧಾರಿಸುತ್ತದೆ. ಇದು ನಮ್ಮ ದೇಹದ ಗುಣಪಡಿಸುವ ಪ್ರಕ್ರಿಯೆಯನ್ನು ಹೆಚ್ಚಿಸುತ್ತದೆ. ಇದನ್ನೂ ಓದಿ: ಗೋಡಂಬಿ ತಿನ್ನಲು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕ್ಕೂ ಒಳ್ಳೆಯದು

    Live Tv
    [brid partner=56869869 player=32851 video=960834 autoplay=true]

  • ಪ್ರತಿದಿನ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳೋದು ನಮ್ಮ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ?

    ಪ್ರತಿದಿನ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳೋದು ನಮ್ಮ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ?

    ತ್ತಡದ ಜೀವನ ವಿಧಾನದಲ್ಲಿ ನಾವು ಹೆಚ್ಚಿನ ಸಮಯವನ್ನು ಮನೆಯೊಳಗೆ, ಕಚೇರಿ, ಕಂಪ್ಯೂಟರ್‌ ಮುಂದೆಯೇ ಕಳೆಯುತ್ತೇವೆ. ಹೊರಗಡೆ ಬರುವುದೇ ಅಪರೂಪ ಎನ್ನುವಂತಾಗಿದೆ. ಬೆಳಗ್ಗೆ ಬೇಗ ಎದ್ದು ಸೂರ್ಯೋದಯ ನೋಡುವುದು, ಸೂರ್ಯನ ಕಿರಣಗಳನ್ನು ಮೈಗೆ ತಾಗಿಸಿಕೊಳ್ಳುವ ಮಂದಿ ಈ ಆಧುನಿಕ ಕಾಲದಲ್ಲಿ ವಿರಳಾತಿ ವಿರಳ. ಬೆಳಗಿನ ಸೂರ್ಯನ ಕಿರಣಗಳು (Sunlight) ಮೈಗೆ ತಾಗುವುದರಿಂದ ಆರೋಗ್ಯಕ್ಕೆ ಒಳಿತು ಎಂಬುದು ಎಲ್ಲರಿಗೂ ತಿಳಿದಿದೆ. ಇದರಿಂದ ಅನೇಕ ಕಾಯಿಲೆಗಳನ್ನು ದೂರವಿಡಬಹುದು ಎಂಬುದು ನಿಮಗೆ ತಿಳಿದಿದೆಯೇ? ಯಾವ ಸಂದರ್ಭದಲ್ಲಿ, ಎಷ್ಟು ಹೊತ್ತು ಸೂರ್ಯನ ಕಿರಣಗಳು ನಿಮ್ಮ ಮೈ ಮೇಲೆ ಬಿದ್ದರೆ ಉತ್ತಮ ಎಂಬ ಬಗ್ಗೆ ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

    ಬೆಳಗ್ಗೆ 25 ರಿಂದ 30 ನಿಮಿಷಗಳ ಕಾಲ (ಸೂರ್ಯೋದಯದ ನಂತರ ಮತ್ತು ಬೆಳಗ್ಗೆ 8 ಗಂಟೆಗೆ ಮೊದಲು) ಮತ್ತು ಸಂಜೆ (ಸೂರ್ಯಾಸ್ತದ ಸಮಯದಲ್ಲಿ) ಸೂರ್ಯನ ಕಿರಣ ನಿಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ ಎಂದು ಆಯುರ್ವೇದ ತಜ್ಞ ಡಾ. ಡಿಕ್ಸಾ ಭಾವಸರ್ ತಿಳಿಸಿದ್ದಾರೆ. ಇದನ್ನೂ ಓದಿ: ಕೆಲವರ ಸಂಬಂಧ ಹೆಚ್ಚು ಕಾಲ ಉಳಿಯಲ್ಲ ಯಾಕೆ ಗೊತ್ತಾ? ಇಲ್ಲಿದೆ ಕಾರಣಗಳು..

    ವಿಟಮಿನ್‌ ಡಿ
    ನೈಸರ್ಗಿಕ ಬೆಳಕು ʻವಿಟಮಿನ್ ಡಿʼಯ (vitamin D) ಶ್ರೀಮಂತ ಮೂಲವಾಗಿದೆ ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ಅದಕ್ಕಿಂತ ಹೆಚ್ಚಿನದು ಸಿಗುತ್ತದೆ. ʻವಿಟಮಿನ್ ಡಿʼ ಪ್ರತಿರಕ್ಷಣಾ ಮತ್ತು ಶಕ್ತಿಯನ್ನು ಹೆಚ್ಚಿಸುವ ಹಾರ್ಮೋನ್ ಆಗಿದ್ದು, ಅದು ನಮ್ಮ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.

    ರಕ್ತದಲ್ಲಿನ ಗ್ಲೂಕೋಸ್‌ ನಿಯಂತ್ರಣ
    ಇದು ವಾಸೋಡಿಲೇಟರ್ ಆಗಿರುವ ನೈಟ್ರಿಕ್ ಆಕ್ಸೈಡ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ರಕ್ತದ ಹರಿವು, ಆಮ್ಲಜನಕೀಕರಣವನ್ನು ಸುಧಾರಿಸುತ್ತದೆ. ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಡಾ. ಭಾವಸರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹೃದಯಾಘಾತ – ಒಂದು ತಿಂಗಳ ಮುಂಚೆ ಈ 12 ರೋಗಲಕ್ಷಣಗಳು ಕಂಡುಬಂದ್ರೆ ಇರಲಿ ಎಚ್ಚರ!

    ಮಾನಸಿಕ ಆರೋಗ್ಯ
    ಪ್ರತಿದಿನ ಸೂರ್ಯನ ಬೆಳಕಿನಲ್ಲಿ ವ್ಯಾಯಾಮ ಮಾಡುವುದು ನಿಮಗೆ ಸಂತೋಷ ನೀಡುತ್ತದೆ. ನೈಸರ್ಗಿಕ ಬೆಳಕಿನಿಂದ ನ್ಯೂರೋಟ್ರಾನ್ಸ್ಮಿಟರ್‌ (ನರಕೋಶಗಳು) ದೇಹದಲ್ಲಿ ಸಿರೊಟೋನಿನ್‌ ಉತ್ಪಾದನೆಗೆ ಕಾರಣವಾಗುತ್ತದೆ. ಇದರಿಂದ ಆತಂಕ, ಖಿನ್ನತೆ ಕಡಿಮೆಯಾಗುತ್ತದೆ. ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಎಂದು ಭಾವಸರ್‌ ಹೇಳಿದ್ದಾರೆ.

    ಉತ್ತಮ ನಿದ್ರೆ
    ಸೂರ್ಯನ ಬೆಳಕಿನಲ್ಲಿ ನಾವು ಹೊತ್ತು ಕಳೆದಷ್ಟು ರಾತ್ರಿ ವೇಳೆ ಚೆನ್ನಾಗಿ ನಿದ್ರೆ ಮಾಡಬಹುದು. ನೈಸರ್ಗಿಕ ಸೂರ್ಯನ ಬೆಳಕು ನಮ್ಮ ನಿದ್ರೆಗೆ ತುಂಬಾ ಸಹಕಾರಿ. ಹೊರಾಂಗಣದಲ್ಲಿ ಇರುವುದು ನಮ್ಮ ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ. ಇದನ್ನೂ ಓದಿ: ಮಕ್ಕಳೊಂದಿಗೆ ಜಗಳವಾಡುವ ಮುನ್ನ ಪೋಷಕರು ಈ ಅಂಶಗಳನ್ನು ನೆನಪಿಡಿ..

    ಯಾವ್ಯಾವುದೋ ಹೊತ್ತಿನಲ್ಲಿ ಸೂರ್ಯನ ಬೆಳಕಿಗೆ ಮೈವೊಡ್ಡಿಕೊಳ್ಳುವುದು ಸರಿಯಲ್ಲ. ಇದು ಅಜಾಗರೂಕ ನಡೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಬೆಳಗ್ಗೆಯ ಎಳೆ ಬಿಸಿಲು ಮತ್ತು ಸಂಜೆ ಸೂರ್ಯಾಸ್ತದ ಬೆಳಕು ಆರೋಗ್ಯಕ್ಕೆ ಪೂರಕ ಎಂಬುದು ವೈದ್ಯರ ಅಭಿಪ್ರಾಯ.

    Live Tv
    [brid partner=56869869 player=32851 video=960834 autoplay=true]

  • ವೇದಿಕೆಯಲ್ಲಿಯೇ ಅನಾರೋಗ್ಯಕ್ಕೀಡಾದ ಸಚಿವ ನಿತಿನ್ ಗಡ್ಕರಿ

    ವೇದಿಕೆಯಲ್ಲಿಯೇ ಅನಾರೋಗ್ಯಕ್ಕೀಡಾದ ಸಚಿವ ನಿತಿನ್ ಗಡ್ಕರಿ

    ಕೋಲ್ಕತ್ತಾ: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಯವರು ವೇದಿಕೆಯಲ್ಲಿಯೇ ಅನಾರೋಗ್ಯಕ್ಕೊಳಗಾದ ಘಟನೆ ಉತ್ತರ ಬಂಗಾಳದಲ್ಲಿ ನಡೆದಿದೆ.

    ಶಿವಮಂದಿರದಿಂದ ಸೇವಕ್ ಕಂಟೋನ್ಮೆಂಟ್ ವರೆಗಿನ ರಸ್ತೆಯ ಶಂಕು ಸ್ಥಾಪನೆ ಮಾಡಲು ಕೇಂದ್ರ ಸಚಿವರು ಸಿಲಿಗುರಿಗೆ ಬಂದಿದ್ದರು. ಕಾರ್ಯಕ್ರಮವನ್ನು ಡಾರ್ಜಿಲಿಂಗ್ ಜಂಕ್ಷನ್ ಬಳಿ ದಗಾಪುರ್ ಮೈದಾನದಲ್ಲಿ ಆಯೋಜಿಸಲಾಗಿತ್ತು. ಹೀಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರು ವೇದಿಕೆ ಮೇಲೆ ಕುಳಿತಿದ್ದರು.

    ಆಗ ಏಕಾಏಕಿ ಅನಾರೋಗ್ಯ (Sick) ಕ್ಕೀಡಾದರು. ಕೂಡಲೇ ವೇದಿಕೆಯ ಹಿಂದಿನ ಗ್ರೀನ್ ರೂಮ್‍ಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸಿಲಿಗುರಿಯಿಂದ ಗ್ರೀನ್ ಕಾರಿಡಾರ್ ಮೂಲಕ ಓರ್ವ ವೈದರನ್ನು ಕರೆಸಿ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡ ಬಳಿಕ ಡಾರ್ಜಿಲಿಂಗ್ ಸಂಸದ ರಾಜು ಬಿಸ್ತಾ ಅವರು ಸಚಿವರನ್ನು ಮನೆಗೆ ಕರೆದುಕೊಂಡು ಹೋದರು.

    ಗಡ್ಕರಿ ರಕ್ತದಲ್ಲಿ ಸಕ್ಕರೆ ಪ್ರಮಾಣ ಇಳಿದಿದೆ. ಹೀಗಾಗಿ ವೈದ್ಯರ ಸೂಚನೆಯಂತೆ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಮನೆಯಲ್ಲಿಯೇ ಚಿಕಿತ್ಸೆ ನಡೆಯುತ್ತಿದ್ದು, ವೈದ್ಯರು ಕೂಡ ಅಲ್ಲಿಯೇ ಇದ್ದಾರೆ. ಇದನ್ನೂ ಓದಿ: ಮಾಜಿ ಸಂಸದನ ಮೇಲೆ ಅರ್ಚಕನ ವೇಷ ಧರಿಸಿದ್ದ ವ್ಯಕ್ತಿಯಿಂದ ಹಲ್ಲೆ

    Live Tv
    [brid partner=56869869 player=32851 video=960834 autoplay=true]

  • ಟಾಲಿವುಡ್ ಸ್ಟಾರ್ ಮಹೇಶ್ ಬಾಬು ತಂದೆಯ ಹೆಲ್ತ್ ಬುಲೆಟಿನ್: ಸ್ಥಿತಿ ಮತ್ತಷ್ಟು ಗಂಭೀರ

    ಟಾಲಿವುಡ್ ಸ್ಟಾರ್ ಮಹೇಶ್ ಬಾಬು ತಂದೆಯ ಹೆಲ್ತ್ ಬುಲೆಟಿನ್: ಸ್ಥಿತಿ ಮತ್ತಷ್ಟು ಗಂಭೀರ

    ಟಾಲಿವುಡ್ (Tollywood) ಸ್ಟಾರ್ ನಟ ಮಹೇಶ್ ಬಾಬು (Mahesh Babu) ಅವರ ತಂದೆ, ತೆಲುಗಿನ ಸೂಪರ್ ಸ್ಟಾರ್ ಆಗಿದ್ದ ಕೃಷ್ಣ ಅವರನ್ನು ನಿನ್ನೆ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯು ಹೆಲ್ತ್ ಬುಲೆಟಿನ್ (Health Bulletin) ಬಿಡುಗಡೆ ಮಾಡಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ. ಹಾಗಾಗಿಯೇ ಅವರನ್ನು ಐಸಿಯುಗೆ ಸ್ಥಳಾಂತರಿಸಿ, ಅಲ್ಲಿಯೇ ಚಿಕಿತ್ಸೆಯನ್ನು ಮುಂದುವರೆಸಿದ್ದಾರಂತೆ.

    ಕ್ಷಣ ಕ್ಷಣಕ್ಕೂ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಆಸ್ಪತ್ರೆ ತಿಳಿಸಿದ್ದು, ನುರಿತ ವೈದ್ಯರ ತಂಡ ಕೃಷ್ಣ ಅವರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ತೀರಾ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ಕುಟುಂಬದ ಸದಸ್ಯರಲ್ಲಿ ಆತಂಕ ಮನೆ ಮಾಡಿದೆ. ಇತ್ತೀಚೆಗಷ್ಟೇ ಕೃಷ್ಣ ಅವರು ಹೆಂಡತಿಯನ್ನು ಕಳೆದುಕೊಂಡಿದ್ದರು. ಆ ನೋವಲ್ಲೇ ಅವರು ದಿನಗಳನ್ನು ಕಳೆಯುತ್ತಿದ್ದರು. ಇದನ್ನೂ ಓದಿ:`ಬನಾರಸ್’ ಚಿತ್ರದ ಬೆನ್ನಲ್ಲೇ ಝೈದ್ ಖಾನ್‌ಗೆ ಬಂತು ಬಿಗ್ ಆಫರ್

    80 ವರ್ಷದ ಕೃಷ್ಣ (Krishna) ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಸದ್ಯ ಬಂದಿರುವ ಮಾಹಿತಿ ಪ್ರಕಾರ ಅವರನ್ನು ತೀವ್ರ ನಿಗಾಘಟದಲ್ಲಿ ಸ್ಥಳಾಂತರಿಸಿದ ಚಿಕಿತ್ಸೆ ಮುಂದುವರೆಸಿದ್ದಾರೆ. ವೆಂಟಿಲೇಟರ್ ಮೂಲಕವೇ ಅವರು ಉಸಿರಾಡುತ್ತಿದ್ದಾರೆ. ನಿನ್ನೆ ಹೃದಯಾಘಾತವಾಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು ಎಂದೂ ಹೇಳಲಾಗುತ್ತಿದೆ. ಕೃಷ್ಣ ಅವರನ್ನು 24 ಗಂಟೆ ಆಬ್ಸರ್ವೇಷನ್ ನಲ್ಲಿ ಇಡಲಾಗಿದ್ದು, ಅವರಿಗಾಗಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇಂಜೆಕ್ಷನ್ ತೆಗೆದುಕೊಳ್ಳಲು ದೇಹದ ಭಾಗಗಳು ಸ್ಪಂದಿಸುತ್ತಿಲ್ಲ – ಪುಟಿನ್ ಆರೋಗ್ಯ ಮತ್ತಷ್ಟು ಕ್ಷೀಣ

    ಮಾಸ್ಕೋ: ಉಕ್ರೇನ್ (Ukraine) ವಿರುದ್ಧ ಸಮರ ಸಾರಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರ ಆರೋಗ್ಯ (Health) ಮತ್ತಷ್ಟು ಕ್ಷೀಣಿಸುತ್ತಿದೆ. ದೇಹದ ಇತರ ಭಾಗಗಳು ಚುಚ್ಚುಮದ್ದು ತೆಗೆದುಕೊಳ್ಳಲು ಸ್ಪಂದಿಸದಂತಾಗಿದೆ ಎಂಬುದಾಗಿ ವೈದ್ಯರು (Doctors) ತಿಳಿಸಿದ್ದಾರೆ.

    ಪುಟಿನ್ ದೇಹದ ಮೇಲೆ ವಿಚಿತ್ರ ಗುರುತುಗಳು ಪತ್ತೆಯಾಗಿದ್ದು, ಈ ಕುರಿತ ಫೋಟೋಗಳು ಜಾಲತಾಣದಲ್ಲಿ (Social Media) ಹರಿದಾಡುತ್ತಿವೆ. ಇದು ಆರೋಗ್ಯ ಕ್ಷೀಣಿಸಿರುವ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಇದನ್ನೂ ಓದಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಗೆ ಯತ್ನ

    ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ನಿವೃತ್ತ ಬ್ರಿಟಿಷ್ ಸೇನಾಧಿಕಾರಿ ಮತ್ತು ಹೌಸ್ ಆಫ್ ಲಾರ್ಡ್ಸ್ ಸದಸ್ಯ ರಿಚರ್ಡ್ ಡಾನಾಟ್, ಪುಟಿನ್ ಅವರ ಚಿತ್ರಗಳು ಅವರು ಎಷ್ಟು ಆರೋಗ್ಯವಾಗಿದ್ದಾರೆ ಎಂಬುದನ್ನೂ ಸೂಚಿಸುತ್ತದೆ. ಅವರ ಕೈಗಳ ಮೇಲ್ಬಾಗದಲ್ಲಿ ಕಪ್ಪು ಬಣ್ಣದ ಗುರುತುಗಳು ಕಾಣುತ್ತಿವೆ. ಅಲ್ಲದೇ ಪುಟಿನ್ ದೇಹದ ಇತರ ಭಾಗಗಳು ಇಂಜೆಕ್ಷನ್ (Injection) ತೆಗೆದುಕೊಳ್ಳಲು ಸ್ಪಂದಿಸುತ್ತಿಲ್ಲ. ಪುಟಿನ್ ಆರೋಗ್ಯವಾಗಿದ್ದಾರೆ, ಆದರೂ ಅವರ ಬಗ್ಗೆ ಎಚ್ಚರ ವಹಿಸಬೇಕಾದ ಅಗತ್ಯವಿದೆ ಎಂದು ರಿಚರ್ಡ್ ಡಾನಾಟ್ ಅವರು ಹೇಳಿದ್ದಾರೆ.

    ಕ್ಯಾನ್ಸರ್ (Cancer) ಕಾಯಿಲೆಯಿಂದ ಬಳಲುತ್ತಿರುವ ರಷ್ಯಾ ಅಧ್ಯಕ್ಷ (Russia President) ಪುಟಿನ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ಹೆಚ್ಚೆಂದರೆ ಅವರಿನ್ನು 3 ವರ್ಷ ಬದುಕಬಹುದೆಂದು ವೈದ್ಯರು ಹೇಳಿರುವುದಾಗಿ ರಷ್ಯಾದ ಬೇಹುಗಾರಿಕಾ ಸಂಸ್ಥೆ ಎಫ್‌ಎಸ್‌ಬಿಯ ವರದಿ ಕೆಲ ದಿನಗಳ ಹಿಂದೆ ಹೇಳಿತ್ತು. ಇದನ್ನೂ ಓದಿ: ಭಾರತಕ್ಕೆ 5 ರನ್‍ಗಳ ರೋಚಕ ಗೆಲುವು – ಹರ್ಷ ತಂದ ಅರ್ಷದೀಪ್

    ಪುಟಿನ್ ಅವರ ಕಣ್ಣಿನ ದೃಷ್ಟಿ ಗಂಭೀರವಾಗಿ ಹದಗೆಟ್ಟಿದೆ. ಅವರ ಬೆರಳುಗಳೂ ನಿಯಂತ್ರಿಸಲಾಗದಷ್ಟು ಅಲುಗಾಡತೊಡಗಿವೆ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿದ್ದವು. ಬ್ರಿಟನ್ನಲ್ಲಿ ಪುಟಿನ್ ಹತ್ಯೆ ಮಾಡಲು ಸಂಚು ರೂಪಿಸಿರುವವರಿಗೆ ತಿಳಿಯದಂತೆ ಬಚ್ಚಿಡಲಾಗಿದೆ. ದುರ್ಬಲತೆಗೆ ಕಾರಣವಾಗುತ್ತದೆ ಎಂಬ ಭಯದಿಂದ ಗ್ಲಾಸ್ ಧರಿಸಲು ಪುಟಿನ್ ತಿರಸ್ಕರಿಸುತ್ತಿದ್ದಾರೆ ಎಂಬುದಾಗಿ ಗುಪ್ತಚರ ಇಲಾಖೆ ಮೂಲಗಳು ಮಾಧ್ಯಮಗಳಿಗೆ ತಿಳಿಸಿದ್ದವು.

    Live Tv
    [brid partner=56869869 player=32851 video=960834 autoplay=true]

  • ಸೆಣಬಿನ ಬೀಜದ ಎಣ್ಣೆ ಬಗ್ಗೆ ತಿಳಿದಿದ್ದೀರಾ? ಇದರಲ್ಲಿದೆ ತ್ವಚೆ ಸೌಂದರ್ಯದ ಗುಟ್ಟು

    ಸೆಣಬಿನ ಬೀಜದ ಎಣ್ಣೆ ಬಗ್ಗೆ ತಿಳಿದಿದ್ದೀರಾ? ಇದರಲ್ಲಿದೆ ತ್ವಚೆ ಸೌಂದರ್ಯದ ಗುಟ್ಟು

    ಸೌಂದರ್ಯ ಪ್ರಜ್ಞೆ ಯಾರಿಗೆ ಇಲ್ಲ ಹೇಳಿ? ತಾನು ಚೆನ್ನಾಗಿ ಕಾಣಬೇಕು ಅಂತಾ ಎಲ್ಲರೂ ಬಯಸುತ್ತಾರೆ. ಅದಕ್ಕಾಗಿ ಬ್ಯೂಟಿ ಪಾರ್ಲರ್‌ಗೆ ಹೋಗುವುದು, ಅದು ಇದು ಅಂತಾ ಏನೆಲ್ಲಾ ಮಾಡ್ತಾರೆ. ನೈಸರ್ಗಿಕ ವಿಧಾನಗಳ ಮೂಲಕ ಸೌಂದರ್ಯ ವೃದ್ಧಿಸಿಕೊಳ್ಳಲು ಬಯಸುವವರೇ ಹೆಚ್ಚು. ಅಂತಹವರಿಗೆ ಸೆಣಬಿನ ಬೀಜದ ಎಣ್ಣೆ ತುಂಬಾ ಪ್ರಯೋಜನಕಾರಿ. ತ್ವಚೆಗೆ ಸೆಣಬಿನ ಬೀಜದ ಎಣ್ಣೆಯಿಂದ (Hemp Seed Oil) ಉಪಯೋಗಗಳಿವೆ.

    ಚರ್ಮದ ಆರೈಕೆಗೆ ಸಹಕಾರಿ
    ಸೆಣಬಿನ ಬೀಜದ ಎಣ್ಣೆ ಹೇರಳವಾದ ಜೀವಸತ್ವಗಳು ಮತ್ತು ಕೊಬ್ಬಿನಾಮ್ಲಗಳನ್ನು ಹೊಂದಿರುತ್ತದೆ. ಆರೋಗ್ಯಕರ ಕೂದಲು ಮತ್ತು ಚರ್ಮಕ್ಕೆ (Skin) ಇದು ಅತ್ಯುತ್ತಮ ಆಯ್ಕೆ. ಸೆಣಬಿನ ಬೀಜಗಳು ಬಹುಅಪರ್ಯಾಪ್ತ ಒಮೆಗಾ-3 ಮತ್ತು ಒಮೆಗಾ-6 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದೆ. ಇದನ್ನೂ ಓದಿ: ಮುಖದಲ್ಲಿನ ಎಣ್ಣೆಯುಕ್ತ ಚರ್ಮವನ್ನು ಹೋಗಲಾಡಿಸಿ ಅಂದ ಹೆಚ್ಚಿಸಿಕೊಳ್ಳಿ

    ಚರ್ಮ ಆರೋಗ್ಯದಲ್ಲಿ ಇದರ ಪ್ರಯೋಜನವೇನು?
    ಸೆಣಬಿನ ಬೀಜದ ಎಣ್ಣೆಯು ಚರ್ಮವನ್ನು ತೇವಗೊಳಿಸುತ್ತದೆ. ಇದು ಚರ್ಮದ ರಂಧ್ರಗಳನ್ನು ಮುಚ್ಚುವುದಿಲ್ಲ. ತೇವಾಂಶ ಕಾಪಾಡುವುದರಿಂದ ಚರ್ಮದ ಶುಷ್ಕತೆಯ ವಿರುದ್ಧ ಹೋರಾಡುತ್ತೆ. ಚರ್ಮದ ತೇವಾಂಶವನ್ನು ದೀರ್ಘಗೊಳಿಸಿ ಶಕ್ತಗೊಳಿಸುತ್ತದೆ.

    ಮೊಡವೆ ನಿವಾರಿಸುತ್ತೆ
    ಸೆಣಬಿನ ಬೀಜದ ಎಣ್ಣೆಯು ಮೊಡವೆ (Acne), ಎಸ್ಜಿಮಾ ಮತ್ತು ಸೋರಿಯಾಸಿಸ್‌ನಂತಹ ಉರಿಯೂತದ ಸಮಸ್ಯೆಗಳ ವಿರುದ್ಧ ಪರಿಣಾಮಕಾರಿ ಹೋರಾಟ ಮಾಡುತ್ತದೆ. ಉರಿಯೂತವನ್ನು ಶಮನಗೊಳಿಸಿ ಚರ್ಮದ ಆರೋಗ್ಯಕ್ಕೆ ಜನಪ್ರಿಯ ನೈಸರ್ಗಿಕ ಪರ್ಯಾಯವಾಗಿದೆ. ಇದನ್ನೂ ಓದಿ: ಚರ್ಮದ ಆರೋಗ್ಯಕ್ಕಾಗಿ ಈ ಆಹಾರವನ್ನು ಸೇವಿಸಿ

    ಸುಕ್ಕುಗಟ್ಟಿದ ಚರ್ಮಕ್ಕೆ ರಾಮಬಾಣ
    ವಯಸ್ಸಾದ ಚಿಹ್ನೆಯ ಚರ್ಮ ಸುಕ್ಕುಗಟ್ಟುವಿಕೆ ವಿರುದ್ಧ ಹೋರಾಡಲು ಸೆಣಬಿನ ಎಣ್ಣೆಯು ತುಂಬಾ ಪ್ರಯೋಜನಕಾರಿ. ಇದು ಸುಕ್ಕುಗಳು ಮತ್ತು ಕಲೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಯೌವನ ಮತ್ತು ಕಾಂತಿಯುತ ಚರ್ಮಕ್ಕೆ ಸಹಕಾರಿಯಾಗಿದೆ.

    ಚರ್ಮದ ಎಣ್ಣೆಯ ಅಂಶ ನಿಯಂತ್ರಿಸುತ್ತೆ
    ಸೆಣಬಿನ ಬೀಜದ ಎಣ್ಣೆಯು ಚರ್ಮದ ಎಣ್ಣೆ ಅಂಶ ನಿಯಂತ್ರಿಸಲು ಪರಿಣಾಮಕಾರಿಯಾಗಿದೆ. ಇದರಿಂದ ಚರ್ಮವು ಕಾಂತಿಯುತವಾಗಿ ಕಾಣುತ್ತದೆ. ಗರ್ಭಿಣಿಯರಿಗೆ ಈ ಎಣ್ಣೆ ಉತ್ತಮ ಆಯ್ಕೆ.

    Live Tv
    [brid partner=56869869 player=32851 video=960834 autoplay=true]

  • JDS ಅಧಿಕಾರಕ್ಕೆ ಬಂದ್ರೆ ಉಚಿತ ಶಿಕ್ಷಣ, ಉದ್ಯೋಗ, ಕುಟುಂಬಕ್ಕೊಂದು ಮನೆ- HDK ಆಶ್ವಾಸನೆ

    JDS ಅಧಿಕಾರಕ್ಕೆ ಬಂದ್ರೆ ಉಚಿತ ಶಿಕ್ಷಣ, ಉದ್ಯೋಗ, ಕುಟುಂಬಕ್ಕೊಂದು ಮನೆ- HDK ಆಶ್ವಾಸನೆ

    ಬೆಂಗಳೂರು: ನವೆಂಬರ್ 1 ರಿಂದ ಪ್ರಾರಂಭವಾಗಲಿರುವ ಜೆಡಿಎಸ್ (JDS) ಪಂಚರತ್ನ ರಥಯಾತ್ರೆಗೆ (Pancharatna Yatra) ಇಂದು ಸಾಂಕೇತಿಕ ಚಾಲನೆ ನೀಡಲಾಯಿತು. ಗವಿಗಂಗಾಧರೇಶ್ವರ ಸನ್ನಿದಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy), ರಥಯಾತ್ರೆ ವಾಹನಕ್ಕೆ ಚಾಲನೆ ನೀಡಿದರು.

    ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್‌ಗೆ (JDS) ಒಂದು ಬಾರಿ ಪೂರ್ಣ ಬಹುಮತ ನೀಡಿ. ರಾಜ್ಯದ ಚಿತ್ರಣವನ್ನೇ ಬದಲಾಯಿಸುತ್ತೇವೆ ಅಂತ ಭರವಸೆ ನೀಡಿದರು. ಇದನ್ನೂ ಓದಿ: SC-ST ಮೀಸಲಾತಿ ಹೆಚ್ಚಳ ಚುನಾವಣೆ ಸ್ಟಂಟ್: ಕುಮಾರಸ್ವಾಮಿ

    ಜೆಡಿಎಸ್ ಅಧಿಕಾರಕ್ಕೆ ಬಂದರೆ ಉಚಿತ ಶಿಕ್ಷಣ (Education), ಉದ್ಯೋಗ (Employment), ಆರೋಗ್ಯ ಸೇವೆ (Health Services), ರೈತ ಚೈತನ್ಯ, ಪ್ರತಿ ಮನೆಗೊಂಡು ಮನೆ ಕೊಡುವ ಯೋಜನೆ ಜಾರಿ ಮಾಡೋದಾಗಿ ಕುಮಾರಸ್ವಾಮಿ ಭರವಸೆ ನೀಡಿದರು.

    ಬಿಜೆಪಿ-ಕಾಂಗ್ರೆಸ್ (BJP- Congress) ಪಾಪದ ಕೊಡ ತುಂಬಿದೆ. ಎರಡು ರಾಷ್ಟ್ರೀಯ ಪಕ್ಷಗಳು ಯಾವುದೇ ಯಾತ್ರೆ ಮಾಡಿದರೂ, ಸಂಕಲ್ಪ ಕಾರ್ಯಕ್ರಮ ಮಾಡಿದರೂ ಜನರು ನಂಬೋದಿಲ್ಲ ಅಂತಾ ಕಿಡಿಕಾರಿದರು. ಇದನ್ನೂ ಓದಿ: ತಲೆಯಲ್ಲಿ “ಗಂಧದಗುಡಿ” ಹೇರ್ ಸ್ಟೈಲ್ – ಪ್ರಚಾರಕ್ಕಿಳಿದ ಕಾಫಿನಾಡು ಚಂದು

    ಇನ್ನು ನವೆಂಬರ್ 1 ರಂದು ಮನೆ ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸುವ ಮೂಲಕ ಕನ್ನಡ ತಾಯಿಗೆ ನಮನ ಸಲ್ಲಿಸುವಂತೆ ಕರೆ ನೀಡಿದರು. ನವೆಂಬರ್ 1 ರಿಂದ ಕೋಲಾರದ ಮುಳಬಾಗಿಲಿನಿಂದ ಪಂಚರತ್ನ ರಥಯಾತ್ರೆ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ 36 ವಿಧಾನಸಭಾ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಲಿದೆ. ನವೆಂಬರ್ 1 ರಂದು 2023ರ ಚುನಾವಣೆಗೆ ಜೆಡಿಎಸ್ ನ 90-100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇನೆ ಅಂತ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

    Live Tv
    [brid partner=56869869 player=32851 video=960834 autoplay=true]

  • ದೀಪಾವಳಿ ಆಚರಣೆ ವೇಳೆ ನಿಮ್ಮ ಆರೋಗ್ಯದೆಡೆಯೂ ಗಮನ ಕೊಡಿ

    ದೀಪಾವಳಿ ಆಚರಣೆ ವೇಳೆ ನಿಮ್ಮ ಆರೋಗ್ಯದೆಡೆಯೂ ಗಮನ ಕೊಡಿ

    ಬ್ಬ (Festive) ಹರಿದಿನ ಬಂತಂದ್ರೆ ರುಚಿಕರವಾದ ಹಾಗೂ ಸ್ವಾದಿಷ್ಟವಾದ ತಿಂಡಿ ತಿನಿಸುಗಳು ಹೆಚ್ಚಿರುತ್ತೆ. ಅದರಲ್ಲೂ ಬೆಳಕಿನ ಹಬ್ಬ ದೀಪಾವಳಿಯಲ್ಲಂತೂ (Diwali) ಇನ್ನೂ ಅದ್ಧೂರಿತನವಿರುತ್ತೆ. ದೀಪ ಬೆಳಗಿಸುವ ಜೊತೆಗೆ ಸ್ವಾದಿಷ್ಟ ತಿನಿಸುಗಳು ಹೆಚ್ಚಿರುತ್ತೆ. ರಜಾ ಮಜಾವನ್ನು ಸವಿಯುತ್ತಾ ಯಾವುದೇ ಚಿಂತೆಯಿಲ್ಲದೇ ರುಚಿಕರ ಆಹಾರವನ್ನು ಅಥವಾ ಕರಿದ ತಿನಿಸುಗಳನ್ನು ಹೆಚ್ಚಾಗಿ ತಿನ್ನುವುದು ಜೊತೆಗೆ ಕೆಲವು ದಿನಚರಿಯಲ್ಲಾದ ಬದಲಾವಣೆಯಿಂದಾಗಿ ನಮ್ಮ ಆರೋಗ್ಯ (Health) ಹದಗೆಡುವ ಸಾಧ್ಯತೆಯಿರುತ್ತೆ. ಈ ರೀತಿ ಆಗದಿರಲು ಕೆಲವು ಮುನ್ನೆಚ್ಚರಿಕೆಯನ್ನು ಅನುಸರಿಸಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿ.

    ನಿದ್ರೆ ಸರಿಯಾಗಿ ಮಾಡಿ: ಆಹಾರ, ವ್ಯಾಯಾಮ, ನಿದ್ರೆ ಮನುಷ್ಯನ ಆಧಾರ ಸ್ತಂಭ ಎಂದರೆ ತಪ್ಪಾಗದು. ಆರೋಗ್ಯಸ್ಥ ಮನುಷ್ಯನಿಗೆ ನಿದ್ರೆ ಹಾಗೂ ಆಹಾರ ಸರಿಯಾದರೆ ಮಾತ್ರ ದಿನವನ್ನು ಫ್ರೆಶ್ ಆಗಿ ಕಳೆಯಬಹುದು. ಹೀಗಾಗಿ ದಿನಕ್ಕೆ 7-8 ತಾಸು ಸರಿಯಾಗಿ ನಿದ್ದೆ ಮಾಡಿ.

    ಸಮಯಕ್ಕೆ ಸರಿಯಾಗಿ ತಿನ್ನಿ: ಹಬ್ಬ ಹರಿದಿನವೊಂದೇ ಅಲ್ಲದೇ ಪ್ರತಿನಿತ್ಯ ನಿಮ್ಮ ಆರೋಗ್ಯವನ್ನು ಸರಿಯಾಗಿ ಇಟ್ಟುಕೊಳ್ಳಲು ಸಮಯಕ್ಕೆ ಸರಿಯಾಗಿ ತಿನ್ನಿರಿ. ದಿನಕ್ಕೆ 2 ಅಥವಾ ಮೂರು ಬಾರಿ ಆಹಾರವನ್ನು ಸೇವಿಸುವುದು ಅತ್ಯವಶ್ಯವಾಗಿರುತ್ತದೆ. ಒಂದು ವೇಳೆ ನಿಮಗೆ ಹಸಿವಾಗಿಲ್ಲವೆಂದರೂ, ಹಣ್ಣು/ ತರಕಾರಿ ರಸವನ್ನು ಸೇವಿಸಿ. ಇದರಿಂದಾಗಿ ನಿಮ್ಮ ಚಯಪಚಯವು ಸರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಇದನ್ನೂ ಓದಿ: ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ

    ಊಟಗಳ ನಡುವೆ 4-6 ಗಂಟೆಗಳ ಅಂತರವಿರಲಿ: ಬೆಳಗ್ಗೆ ಅಥವಾ ಮಧ್ಯಾಹ್ನ ಊಟ ಮಾಡಿದ ನಂತರ ಮಧ್ಯಾಹ್ನ ಅಥವಾ ರಾತ್ರಿಯ ಊಟ ಮಾಡಲು 4-5 ಗಂಟೆಗಳ ಅಂತರವನ್ನು ನೀಡುವುದು ಅತ್ಯವಶ್ಯವಾಗಿರುತ್ತದೆ. ಇದರಿಂದಾಗಿ ಜೀರ್ಣಕ್ರಿಯೆಗೆ ಸಹಾಯವಾಗುತ್ತದೆ. ಜೊತೆಗೆ ಆರೋಗ್ಯ ಹದಗೆಟ್ಟುವುದನ್ನು ಕಡಿಮೆ ಮಾಡುತ್ತದೆ.

    ಮಸಾಲೆ ಪದಾರ್ಥದಲ್ಲಿ ತಾಜಾ ಇರುವುದನ್ನು ಬಳಸಿ: ಅಡುಗೆಯನ್ನು ಮಾಡುವಾಗ ಸಾವಯವ ಅಥವಾ ತಾಜಾ ಅರಿಶಿನ ಪುಡಿ ಕಾಳು ಮೆಣಸು ಬಳಸಿ. ಅಷ್ಟೇ ಅಲ್ಲದೇ ಅಕ್ಕಿ ಗಂಜಿಯನ್ನು ಸೇವಿಸುವುದರಿಂದ ಹೊಟ್ಟೆ ಹೆಚ್ಚು ಭಾರವೆನಿಸುವುದಿಲ್ಲ. ಇದನ್ನೂ ಓದಿ: ಗೋಡಂಬಿ ತಿನ್ನಲು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕ್ಕೂ ಒಳ್ಳೆಯದು

    ಕುದಿಸಿ ಆರಿದ 1 ಗ್ಲಾಸ್ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯಿರಿ: ಹಬ್ಬದಲ್ಲಿ ಸಿಹಿ ತಿನಿಸು, ಖರೀದ ಆಹಾರವನ್ನು ತಿನ್ನುವುದು ಸಾಮಾನ್ಯ. ಊಟದಲ್ಲೂ ವಿವಿಧ ಬಗೆಯ ತಿಂಡಿಗಳು ಇರುತ್ತವೆ. ಇದೆಲ್ಲಾ ತಿಂದಾಗ ನಮಗೆ ಹೊಟ್ಟೆ ಭಾರವೆನಿಸುವುದು ಸಹಜ. ಅಂತಹ ಸಂದರ್ಭದಲ್ಲಿ ಸ್ವಲ್ಪ ಬಿಸಿ ಇರುವ ನೀರಿಗೆ ನಿಂಬೆ ರಸವನ್ನು ಹಾಕಿ ಕುಡಿಯುವುದರಿಂದ ಜೀರ್ಣ ಶಕ್ತಿ ಹೆಚ್ಚಳವಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ‘ಖುಷಿ’ ಸಿನಿಮಾದ ಶೂಟಿಂಗ್‌ಗೆ ಸಮಂತಾ ಗೈರು: ಅನಾರೋಗ್ಯದ ಬಗ್ಗೆ ಗುಸುಗುಸು

    ‘ಖುಷಿ’ ಸಿನಿಮಾದ ಶೂಟಿಂಗ್‌ಗೆ ಸಮಂತಾ ಗೈರು: ಅನಾರೋಗ್ಯದ ಬಗ್ಗೆ ಗುಸುಗುಸು

    ಮಂತಾ (Samantha) ಆರೋಗ್ಯದ (health) ಬಗ್ಗೆ ಹಲವು ತಿಂಗಳಿನಿಂದ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಅವುಗಳಿಗೆ ಪುಷ್ಠಿ ಕೊಡುವಂತೆ ಸಮಂತಾ ಕೂಡ ಯಾರ ಕಣ್ಣಿಗೂ ಕಾಣಿಸಿಕೊಳ್ಳದೇ, ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳದೇ, ಕೊನೆ ಪಕ್ಷ ಹರಡಿರುವ ಸುದ್ದಿಗೆ ಸ್ಪಷ್ಟನೆ ಕೊಡದೇ ಮತ್ತೆ ಮತ್ತೆ ಅಭಿಮಾನಿಗಳನ್ನು ಆತಂಕಕ್ಕೆ ದೂಡುತ್ತಿದ್ದಾರೆ.

    ಸಮಂತಾ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಅವರು ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ, ಖಾಯಿಲೆ ಕಾರಣದಿಂದಾಗಿ ಅವರು ಮನೆಯಿಂದ ಆಚೆ ಬರುತ್ತಿಲ್ಲ ಎನ್ನುವ ಸುದ್ದಿಯೂ ಇತ್ತು. ಈ ಕಾರಣದಿಂದಾಗಿಯೇ ಅವರು ನಟಿಸಿದ ಸಿನಿಮಾಗಳ ಬಿಡುಗಡೆ ದಿನಾಂಕ ಮುಂದೂಡಲಾಗಿದೆ ಎಂದೂ ಹೇಳಲಾಗಿತ್ತು. ಇಷ್ಟೆಲ್ಲ ಸುದ್ದಿಗಳು ಹರಡಿದರೂ, ಅವರು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಅಂದುಕೊಂಡಂತೆ ಆಗಿದ್ದರೆ, ವಿಜಯ್ ದೇವರಕೊಂಡ (Vijay Devarakonda) ನಾಯಕನಾಗಿ ನಟಿಸುತ್ತಿರುವ ಖುಷಿ (Khushi) ಸಿನಿಮಾದ ಚಿತ್ರೀಕರಣದಲ್ಲಿ ಸಮಂತಾ ತೊಡಗಿಕೊಳ್ಳಬೇಕಿತ್ತು. ಆದರೆ, ಅವರು ಚಿತ್ರೀಕರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಲಾಗಿತ್ತು. ಖುಷಿ ಸಿನಿಮಾಗೆ ಎರಡು ಹಂತದಲ್ಲಿ ಚಿತ್ರೀಕರಣ ನಡೆದಿದ್ದೂ, ಎರಡೂ ಹಂತದ ಶೂಟಿಂಗ್‌ನಲ್ಲಿ ಅವರು ಭಾಗಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ವಿಜಯ್ ದೇವರಕೊಂಡ ಡೇಟ್ ಸಮಸ್ಯೆ ಆಗುತ್ತಿದೆಯಂತೆ.

    ಖುಷಿ ಸಿನಿಮಾದ ಚಿತ್ರೀಕರಣದಲ್ಲಿ ಸಮಂತಾ ಭಾಗಿ ಆಗಿಲ್ಲ ಎನ್ನುವ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಮತ್ತೆ ಸಮಂತಾ ಅವರ ಆರೋಗ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಅನಾರೋಗ್ಯದ ಕಾರಣದಿಂದಾಗಿಯೇ ಅವರು ಶೂಟಿಂಗ್‌ಗೆ ಬಂದಿಲ್ಲ ಎಂದು ಹೇಳಲಾಗುತ್ತಿದೆ. ಸಮಂತಾ ಈ ಕುರಿತು ಏನೂ ಹೇಳದೇ ಇರುವ ಕಾರಣದಿಂದಾಗಿ ಅಭಿಮಾನಿಗಳಿಗೆ ಸಹಜವಾಗಿ ಆತಂಕ ಮೂಡಿದೆ.

    Live Tv
    [brid partner=56869869 player=32851 video=960834 autoplay=true]

  • ಹಿರಿಯ ನಟ ಲೋಹಿತಾಶ್ವ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ಹಿರಿಯ ನಟ ಲೋಹಿತಾಶ್ವ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ಬೆಂಗಳೂರು: ಸ್ಯಾಂಡಲ್‌ವುಡ್‌ನ (Sandalwood) ಹಿರಿಯ ನಟ ಲೋಹಿತಾಶ್ವ (Lohitashwa) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಲೋಹಿತಾಶ್ವ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ನಟ ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಖಳನಟನಾಗಿ ಜನಪ್ರಿಯರಾಗಿರುವ ಶರತ್‌ ಲೋಹಿತಾಶ್ವ ಅವರ ತಂದೆಯವರಾಗಿದ್ದಾರೆ. ಇದನ್ನೂ ಓದಿ: RSS ಪಥಸಂಚಲನದಲ್ಲಿ ಮುಸ್ಲಿಂ ಸಮುದಾಯದವರು ಭಾಗಿ- ಹೆಡ್ಗೆವಾರ್ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ನಮನ

    Live Tv
    [brid partner=56869869 player=32851 video=960834 autoplay=true]