ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಹಿರಿನ ನಟ ರಾಜೇಶ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
ಉಸಿರಾಟದ ತೊಂದರೆಯಿಂದ ಬಳಲ್ತಿದ್ದ ರಾಜೇಶ್ ಅವರ ಆರೋಗ್ಯ ಸ್ಥಿತಿ ಎರಡು ದಿನಗಳ ಹಿಂದೆ ಗಂಭೀರವಾಗಿತ್ತು. ಸದ್ಯ ವೈದ್ಯರು ಇಂದಿನ ಆರೊಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ರಾಜೇಶ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೆಣ್ಣುಮಕ್ಕಳ ಶಿಕ್ಷಣ, ರಕ್ಷಣೆ ಸರ್ಕಾರದ ಕರ್ತವ್ಯ: ಡಿಕೆ ಸುರೇಶ್
82 ವರ್ಷ ವಯಸ್ಸಿನ ರಾಜೇಶ್, ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಕಸ್ತೂರಿ ಬಾ ನಗರದ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಾಗಿ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತಿಚೆಗೆ ಪತ್ನಿಯನ್ನ ಕಳೆದುಕೊಂಡಿರುವ ರಾಜೇಶ್ ಅವರಿಗೆ 5 ಜನ ಮಕ್ಕಳಿದ್ದಾರೆ.
ಬೆಂಗಳೂರು: ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 82 ವರ್ಷ ವಯಸ್ಸಿನ ರಾಜೇಶ್, ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಕಸ್ತೂರಿ ಬಾ ನಗರದ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸದ್ಯ ವೆಂಟಿಲೇಟರ್ ನಲ್ಲಿ ಉಸಿರಾಡುತ್ತಿದ್ದಾರೆ. ಇತ್ತಿಚೆಗೆ ಪತ್ನಿಯನ್ನ ಕಳೆದುಕೊಂಡಿರುವ ರಾಜೇಶ್ ಅವರಿಗೆ 5 ಜನ ಮಕ್ಕಳಿದ್ದಾರೆ.
ರಾಜೇಶ್ ಆರೋಗ್ಯದ ಬಗ್ಗೆ ಆಸ್ಪತ್ರೆ ನಿರ್ದೇಶಕ ಡಾಕ್ಟರ್ ಗಂಗಾಧರ್ ಮಾತನಾಡಿ, ಫೆಬ್ರವರಿ 9 ಕ್ಕೆ ರಾಜೇಶ್ ಅವರು ದಾಖಲಾಗಿದ್ದಾರೆ. ಉಸಿರಾಟದ ಸಮಸ್ಯೆ ಅಂತ ಆಸ್ಪತ್ರೆಗೆ ಬಂದಿದ್ರು. ಚಿಕಿತ್ಸೆಗೆ ರಾಜೇಶ್ ಅವರು ಸ್ಪಂದಿಸ್ತಿದ್ದಾರೆ. ಸ್ವಲ್ಪ ಕಾಲಾವಕಾಶ ಬೇಕಾಗುತ್ತೆ. ಸಂಬಂಧಪಟ್ಟ ವೈದ್ಯರು ಕೂಡ ಬಂದು ಚಿಕಿತ್ಸೆ ಕೊಡ್ತಿದ್ದಾರೆ ಎಂದರು. ಇದನ್ನೂ ಓದಿ: ಹಿಜಬ್ ಧರಿಸಿ ನರ್ಸಿಂಗ್ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು – ಬ್ರೀಮ್ಸ್ ಮೆಡಿಕಲ್ ಕಾಲೇಜು ಅನುಮತಿ
ಅಡ್ಮಿಟ್ ಆಗಿ ನಾಲ್ಕೈದು ದಿನಗಳಾಗಿದೆ. ಇನ್ನೂ ಎರಡ್ಮೂರು ದಿನ ಚಿಕಿತ್ಸೆ ಕೊಡಬೇಕಾಗುತ್ತೆ. ಅವರ ಮಗಳು ಮತ್ತು ಮೊಮ್ಮಗ ರಾಜೇಶ್ ಅವರನ್ನ ನೋಡಿಕೊಳ್ತಿದ್ದಾರೆ. ಉಳಿದ ಕುಟುಂಬಸ್ಥರಿಗೆ ಫೋನ್ ಮೂಲಕ ಮಾಹಿತಿ ಕೊಡಲಾಗ್ತಿದೆ. ಚೇತರಿಸಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣ್ತಿದೆ ಎಂದು ಭರತ್ ವಿವರಿಸಿದ್ದಾರೆ.
ಆರೋಗ್ಯವೇ ಭಾಗ್ಯ ಎನ್ನುವ ಮಾತಿದೆ. ಆರೋಗ್ಯದಲ್ಲಿ ಏರಿಳಿತವಾಗುವುದು ಸರ್ವೆ ಸಾಮಾನ್ಯವಾಗಿದೆ. ನಾವು ಸೇವಿಸುವ ಆಹಾರ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ದೇಹ ತೂಕ ಹೆಚ್ಚಾಗುವುದರ ಜೊತೆಗೆ ಅನಾರೋಗ್ಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಯಾವ ಆಹಾರವನ್ನು ಸೇವಿಸಬೇಕು, ನಮ್ಮ ಆಹಾರ ಕ್ರಮ ಹೇಗಿದ್ದರೆ ಒಳ್ಳೆಯದು ಎನ್ನುವ ಗೊಂದಲಗಳಿರುತ್ತವೆ.
ದೇಹದ ತೂಕ ಹೆಚ್ಚಾಗಿದ್ದರೆ ಅದಕ್ಕೆ ಖಂಡಿತವಾಗಿಯೂ ಬೊಜ್ಜು ಕಾರಣವಾಗುವುದು. ಬೊಜ್ಜು ಕರಗಿಸಲು ಹೆಚ್ಚಿನವರು ತುಂಬಾ ಶ್ರಮ ಪಡುತ್ತಾರೆ. ಅಂತಹವರು ಯಾವ ಆಹಾರ ಸೇವಿಸಬೇಕು ಎನ್ನುವ ಮಾಹಿತಿ ಈ ಕೆಳಗಿನಂತಿದೆ.
* ಹೊಟ್ಟೆಯ ಕೊಬ್ಬು ಹೆಚ್ಚಾಗಲು ಕಾರಣ ಪ್ರತಿದಿನ ಸೇವಿಸುವ ಸಿಹಿ ಪದಾರ್ಥಗಳಾಗಿವೆ. ಹೀಗಾಗಿ ಸಕ್ಕರೆ ಮಿಶ್ರಿತ ತಿನಿಸುಗಳಾದ ಬೇಕರಿ ತಿನಿಸುಗಳು, ಕೆಲವೊಂದು ಬಗೆಯೆ ಐಸ್ಕ್ರೀಮ್ಗಳು ಮತ್ತು ಸಿಹಿ ತಿಂಡಿಗಳಿಂದ ದೂರವಿರಿ.
* ಒಂದೆರಡು ಟೀ ಚಮಚ ಜೀರಿಗೆಯನ್ನು ನೀರಿನೊಂದಿಗೆ ಚೆನ್ನಾಗಿ ಕುದಿಸಿ, ಉಗುರು ಬೆಚ್ಚಗಿರುವಾಗಲೇ ಪ್ರತಿದಿನ ಒಂದೊಂದು ಲೋಟ ಕುಡಿಯುತ್ತಾ ಬಂದರೆ ಕಿಬ್ಬೊಟ್ಟೆ ಹಾಗೂ ಸೊಂಟದ ಸುತ್ತಲೂ ಶೇಖರಣೆ ಗೊಂಡ ಕೊಬ್ಬು ಸುಲಭವಾಗಿ ಕರಗಿಸುತ್ತದೆ.
* ಹಸಿ ಶುಂಠಿ ಜೀರ್ಣ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ದೇಹದ ಬಿಸಿಯನ್ನು ಏರಿಸುವ ಮೂಲಕ ದೇಹದಲ್ಲಿ ಸಂಗ್ರಹವಾಗಿದ್ದ ಕೊಬ್ಬು ಕರಗಲು ನೆರವಾಗುತ್ತದೆ. ಇದನ್ನೂ ಓದಿ: ಒಡೆದ ಹಿಮ್ಮಡಿಯ ಆರೈಕೆಗೆ ಏನು ಮಾಡಬೇಕು ಗೊತ್ತಾ?
* ಪ್ರತಿ ದಿನ ಎರಡು ಗ್ಲಾಸ್ ಹಾಲಿಲ್ಲದ ಗ್ರೀನ್ ಟೀ ಸೇವಿಸಿದರೆ, ದೇಹದ ತೂಕ ಕಡಿಮೆಯಾಗುವುದರ ಜೊತೆಗೆ ಕೊಬ್ಬನ್ನು ಕರಗಿಸಲೂ ಸಾಧ್ಯವಾಗುತ್ತದೆ.
* ಹೊಟ್ಟೆಯ ಬೊಜ್ಜು ಕರಗಿಸಲು ಇವುಗಳ ಬದಲಿಗೆ ರುಚಿಕರವಾದ ನೀರನ್ನು ಕುಡಿಯಿರಿ. ಇದಕ್ಕಾಗಿ ನೀವು ಒಂದು ಜಗ್ ನೀರಿನಲ್ಲಿ ಸ್ವಲ್ಪ ಸ್ಟ್ರಾಬೆರಿ, ತುಳಸಿ, ಹುಳಿ ಅಥವಾ ಲಿಂಬೆ ಹಾಕಿಕೊಂಡು ಇಡಬೇಕು. ಇದು ಕುಡಿಯಲು ತುಂಬಾ ರುಚಿಕರವಾಗಿರುವುದು ಮತ್ತು ಇದರಲ್ಲಿ ಕ್ಯಾಲರಿ ಕೂಡ ತುಂಬಾ ಕಡಿಮೆ ಇರುವುದು. ಇದರಿಂದ ನೀವು ಮತ್ತಷ್ಟು ನೀರು ಕುಡಿಯಲು ಪ್ರೇರಣೆ ಕೂಡ ಸಿಗುವುದು. ಇದನ್ನೂ ಓದಿ: ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು
ಬಹುತೇಕ ವಯಸ್ಕರು ಮತ್ತು ಮಕ್ಕಳಲ್ಲಿ ಈ ಒಡೆದ ಹಿಮ್ಮಡಿಯು ಸಾಕಷ್ಟು ಕಿರಿಕಿರಿಯನ್ನು ಉಂಟು ಮಾಡುತ್ತದೆ. ಹೀಗಾಗಿ ಒಡೆದ ಹಿಮ್ಮಡಿಗೆ ಮನೆಯಲ್ಲಿಯೇ ಹೇಗೆ ಚಿಕಿತ್ಸೆ ನೀಡಬೇಕು ಎಂಬುದನ್ನು ನಾವು ಕೆಲವು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.ಮನೆಯಲ್ಲಿಯೇ ನಿಮ್ಮ ಪಾದಗಳಿಗೆ ಆರೈಕೆ ಮಾಡಿಕೊಳ್ಳುವುದರಿಂದ ಅಂದವಾದ ಪಾದಗಳುನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ.
* ನಿಮ್ಮ ಪಾದಗಳನ್ನು ಉಗುರು ಬೆಚ್ಚಗಿನ ನೀರಿನಲ್ಲಿ 10 ನಿಮಿಷಗಳ ಕಾಲ ನೆನೆಸಿ. ಇದು ಚರ್ಮವನ್ನು ಮೃದುವಾಗಿಸುವ ಸುಲಭವಾದ ಮಾರ್ಗವಾಗಿದೆ. ಇದನ್ನೂ ಓದಿ: ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು
* ನಿಮ್ಮ ಒಡೆದ ಹಿಮ್ಮಡಿಗೆ ಪರೋಕ್ಷವಾದ ಕಾರಣ ಪಾದರಕ್ಷೆಗಳು ಕೂಡ ಹೌದು. ನಿಮ್ಮ ಪಾದಗಳಿಗೆ ಹೊಂದಾಣಿಕೆಯಲ್ಲದ ಪಾದರಕ್ಷೆಗಳನ್ನು ನೀವು ಬಳಸಿದಾಗ ಹಿಮ್ಮಡಿಗಳು ಒಡೆಯುತ್ತವೆ. ಇಂತಹ ಪಾದರಕ್ಷೆಗಳು ನಿಮಗೆ ಕಿರಿಕಿರಿ ಉಂಟು ಮಾಡುತ್ತದೆ. ಇದನ್ನೂ ಓದಿ: ಪಳ ಪಳ ಹೊಳೆಯುವ ಹಲ್ಲು ನಿಮ್ಮದಾಗ ಬೇಕಾ? ಹಾಗಿದ್ರೆ ಒಮ್ಮೆ ಟ್ರೈ ಮಾಡಿ
* ಮಾರುಕಟ್ಟೆಯಲ್ಲಿ ಸಾಕಷ್ಟು ಮಾಯಿಶ್ಚರೈಸರ್ ದೊರೆಯುತ್ತವೆ. ಅವುಗಳಲ್ಲಿ ಉತ್ತಮ ಗುಣಮಟ್ಟದ ಮಾಯಿಶ್ಚರೈಸರ್ ಅನ್ನು ಪ್ರತಿನಿತ್ಯ ಬಳಸಿ.
* ಪಾದಗಳನ್ನು ಆಗಾಗ ನೀರಿನಿಂದ ತೊಳೆಯುತ್ತಿರಬೇಕು. ಹೊರಗೆ ಓಡಾಡುವಾಗ ಸಾಕ್ಸ್ ಧರಿಸಿ ಹೋಗಬೇಕು.
ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಾಹಿತಿ ಕೊಟ್ಟಿದ್ದಾರೆ.
ಕಳೆದೊಂದು ತಿಂಗಳಿನಿಂದ ಮುಂಬೈನ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಥಿತಿ ಗಂಭೀರವಾಗಿದೆ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರ ಹೇಳಿಕೆಯ ಪ್ರಕಾರ, ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.
ಡಾ ಪ್ರತೀತ್ ಸಮ್ದಾನಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದ್ದು, ಅವರು ಗಂಭೀರರಾಗಿದ್ದಾರೆ. ಅವರನ್ನು ವೆಂಟಿಲೇಟರ್ನಲ್ಲಿರಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾವಹಿಸಿದೆ ಎಂದು ಹೇಳಿದ್ದಾರೆ.
ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಲತಾ ಮಂಗೇಶ್ಕರ್ಗೆ 92 ವರ್ಷವಾಗಿರುವುದರಿಂದ ಅವರ ಆರೋಗ್ಯದ ದೃಷ್ಟಿಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2019ರಲ್ಲಿ ಉಸಿರಾಟದ ತೊಂದರೆ ಅಥವಾ ಶ್ವಾಸಕೋಶದ ಸಮಸ್ಯೆಯಿಂದಾಗಿ ಲತಾ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚೇತರಿಸಿಕೊಂಡಿದ್ದರು. ಆದರೆ ಇದೀಗ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ:ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್ನಲ್ಲಿ ಕೇಂದ್ರ ಸ್ಪಷ್ಟನೆ
ಭಾರತೀಯ ಚಿತ್ರರಂಗ ಕಂಡ ಮಹಾನ್ ಪ್ರತಿಭಾವಂತ ಗಾಯಕಿ ಲತಾ ಮಂಗೇಶ್ಕರ್. ಲತಾ ಮಂಗೇಶ್ಕರ್ ಅವರು 2001ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೇ ಪದ್ಮಭೂಷಣ, ಪದ್ಮವಿಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಹಲವಾರು ರಾಷ್ಟ್ರ ಪ್ರಶಸ್ತಿಗಳು ಮತ್ತು ಚಲನಚಿತ್ರ ಪ್ರಶಸ್ತಿಗಳನ್ನು ತಮ್ಮ ಮೂಡಿಗೆರಿಸಿಕೊಂಡಿದ್ದಾರೆ.
ನಮ್ಮ ಅಡುಗೆ ಮನೆಯಲ್ಲಿರುವ ಎಷ್ಟೋ ಪದಾರ್ಥಗಳೇ ಔಷಧಿಯಾಗಿದೆ. ಇದನ್ನು ನಮ್ಮ ಹಿರಿಯರು ಉಪಯೋಗಿಸಿಕೊಂಡು ಗಟ್ಟಿ ಮುಟ್ಟಗಿರುತ್ತಿದ್ದರು. ಆಧುನಿಕ ಪ್ರಪಂಚದಲ್ಲಿ ಸರಿಯಾದ ಸಮಯಕ್ಕೆ ಊಟ, ತಿಂಡಿ, ನಿದ್ದೆ ಮಾಡದೆ ರೋಗ ರುಜಿನೆಗಳು ಹೆಚ್ಚಾಗುತ್ತಿವೆ. ಅದರಲ್ಲೂ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಾದ ಅಜೀರ್ಣ, ಗ್ಯಾಸ್, ಎಸಿಡಿಟಿಯಂತಹ ಸಮಸ್ಯೆಗಳು ಹೆಚ್ಚಾಗಿವೆ. ಇದಕ್ಕೆಲ್ಲಾ ನಾವು ಸುಲಭವಾಗಿ ಮನೆಯಲ್ಲಿ ಮದ್ದು ಮಾಡಿಕೊಂಡು ಬೇಗ ಹುಷಾರಾಗಬಹುದು. ಅದ್ಯಾವುದೆಂದು ನಾವು ತಿಳಿಯೋಣ.
ಶುಂಠಿ: ಇದು ಸಾಮಾನ್ಯವಾಗಿ ಅಡುಗೆ ಮನೆಯಲ್ಲಿ ಇರುವ ಪ್ರಸಿದ್ಧ ಮಸಾಲೆ ಪದಾರ್ಥಗಳಲ್ಲಿ ಒಂದಾಗಿದೆ. ಇದು ಆಯುರ್ವೇದ ಚಿಕಿತ್ಸೆಯಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳ ನಿವಾರಣೆಗೆ ಸೂಕ್ತ ಔಷಧ ಪದಾರ್ಥಗಳಲ್ಲಿ ಒಂದು. ನೀವು ಪ್ರತಿನಿತ್ಯ ಊಟ ಮಾಡುವಾಗ ಹಸಿ ಶುಂಠಿಗೆ ಉಪ್ಪು, ನಿಂಬೆ ರಸ ಸೇರಿಸಿ ತಿನ್ನುವುದರಿಂದ ನಿಮ್ಮ ಜೀರ್ಣಕ್ರಿಯೆಗೆ ಸಹಾಯವಾಗಿತ್ತದೆ. ಜೊತೆಗೆ ಶುಂಠಿ ಟೀ ಕುಡಿಯುವುದರಿಂದ ಶೀತ ಸೇರಿದಂತೆ ಅನೇಕ ರೋಗಗಳಿಂದ ಮುಕ್ತಿ ಪಡೆಯಲು ನೈಸರ್ಗಿಕ ಪರಿಹಾರವಾಗಿದೆ.
ದಾಲ್ಚಿನಿ: ದಾಲ್ಚಿನಿಯು ತಿನ್ನಲು ಸ್ವಲ್ಪ ಖಾರವಾಗಿದ್ದರೂ, ಇದು ದೇಹಕ್ಕೆ ಉತ್ತಮವಾಗಿದೆ. ಸಾಮಾನ್ಯವಾಗಿ ಇದು ನೆಗಡಿಗೆ ಉತ್ತಮ ಔಷಧಿಯಾಗಿದೆ. ಜೊತೆಗೆ ಗಂಟಲು ನೋವು, ಹೊಟ್ಟೆಗೆ ಸಂಬಂಧಿಸಿದ ರೋಗದಿಂದ ಬಳಲುತ್ತಿರುವವರಿಗೆ ಉತ್ತಮ ಮನೆಮದ್ದಾವಾಗಿದೆ.
ಜೀರಿಗೆ: ಹೊಟ್ಟೆ ನೋವಿಗೆ ಉತ್ತಮ ಮನೆ ಮದ್ದು ಎಂದಾಕ್ಷಣ ನೆನಪಾಗುವುದು ಜೀರಿಗೆ. ಇದು ಜೀರ್ಣಕ್ರಿಯೆಗೆ ಸಹಕಾರಿಯಾಗಿದ್ದು, ಹೊಟ್ಟೆ ಸಮಸ್ಯೆಯನ್ನು ನಿವಾರಿಸುವಲ್ಲಿ ಸಹಾಯವಾಗಿದೆ. ಜೊತೆಗೆ ಮಲಬದ್ಧತೆ ನಿವಾರಣೆಯಾಗುತ್ತದೆ.
ಕೊತ್ತಂಬರಿ ಸೊಪ್ಪು: ಆಸಿಡಿಟಿಯಿಂದ ಬಳಲುವವರಿಗೆ ಇದು ಉತ್ತಮ ಮನೆಮದ್ದಾಗಿದೆ. ಇದು ಹೊಟ್ಟೆ ಉಬ್ಬನ್ನು ನಿವಾರಿಸಲು ಉತ್ತಮ ಚಿಕಿತ್ಸೆಯಾಗಿದೆ. ಹೊಟ್ಟೆಯಲ್ಲಿನ ಹುಳುಗಳನ್ನು ಕೊಂದು ಹಸಿವನ್ನು ಹೆಚ್ಚಿಸುತ್ತದೆ.
ಇಂಗು: ಒಂದು ಚಿಟಿಕೆ ಇಂಗನ್ನು ತೆಗೆದರೆ ಸಾಕು ಇಡೀ ಮನೆಯನ್ನೇ ಆವರಿಸುವಷ್ಟು ಸುವಾಸನೆಯನ್ನು ಹೊಂದಿದೆ. ಇದು ದೇಹಕ್ಕೂ ಇದರ ಸುವಾಸನೆಯಷ್ಟೇ ಒಳ್ಳೆಯದಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಜೊತೆಗೆ ಹೊಟ್ಟೆನೋವು, ಉಬ್ಬುವಿಕೆ, ಗ್ಯಾಸ್ನಂತಹ ಹೊಟ್ಟೆ ಸಮಸ್ಯೆ ಮಾಯವಾಗಲು ರಾಮಾಬಾಣವಾಗಿದೆ.
ಅರಿಶಿನ: ಇದು ನಮ್ಮ ಅಡುಗೆ ಮನೆಯಲ್ಲಿ ಮೆಡಿಕಲ್ ಸ್ಟೋರ್ ಇದ್ದಂತೆ. ಎಲ್ಲಾ ರೋಗಗಳಿಗೂ ಉತ್ತಮ ಮನೆಮದ್ದಾಗಿದೆ. ಇದು ಆಯುರ್ವೇದ ಪರಿಹಾರಗಳಲ್ಲಿ ಅರಿಶಿನಕ್ಕೆ ಹೆಚ್ಚು ವೈಶಿಷ್ಟ್ಯವಿದೆ. ಚರ್ಮವನ್ನು ಸುಂದರಗೊಳಿಸಲು ಶೀತ, ಮಧುಮೇಹ, ಹೃದ್ರೋಗ ಮತ್ತು ಸ್ಥೂಲಕಾಯತೆಗೆ ಚಿಕಿತ್ಸೆ ನೀಡಲು ಅರಿಶಿನವನ್ನು ನೈಸರ್ಗಿಕ ಔಷಧಿಯಾಗಿ ಬಳಸಲಾಗುತ್ತದೆ. ಅರಿಶಿನ ಆಹಾರದ ರುಚಿ ಮತ್ತು ಬಣ್ಣವನ್ನು ಹೆಚ್ಚಿಸುತ್ತದೆ. ಇದು ಪಿತ್ತವನ್ನು ಕಡಿಮೆ ಮಾಡಲು ಒಳ್ಳೆಯದು. ಯಕೃತ್ತಿಗೆ ಸಂಬಂಧಿಸಿದ ಕಾಯಿಲೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಇದನ್ನೂ ಓದಿ: ಪಳ ಪಳ ಹೊಳೆಯುವ ಹಲ್ಲು ನಿಮ್ಮದಾಗ ಬೇಕಾ? ಹಾಗಿದ್ರೆ ಒಮ್ಮೆ ಟ್ರೈ ಮಾಡಿ
ಏಲಕ್ಕಿ: ಖಾರ ಅಥವಾ ಸಿಹಿ ತಿನಿಸುಗಳಿಗೆ ಸಾಮಾನ್ಯವಾಗಿ ಬಳಸುವ ತಿನಿಸೆಂದರೆ ಏಲಕ್ಕಿ. ಇದು ಬಾಯಿಯ ದುರ್ವಾಸನೆ ಮುಕ್ತಗೊಳಿಸಲು ಸಹಾಯವಾಗಿದೆ. ಚಹಾದಲ್ಲಿ ಇದನ್ನು ಸೇರಿಸುವುದರಿಂದ ರುಚಿಯನ್ನು ಹೆಚ್ಚಿಸುತ್ತದೆ. ಇದು ಜೀರ್ಣಕ್ರಿಯೆಗೂ ಸಹಕಾರಿಯಾಗಿದೆ. ಜೊತೆಗೆ ವಾತ ಹಾಗೂ ಕಫವನ್ನು ಕಡಿಮೆಗೊಳಿಸುತ್ತದೆ. ಇದನ್ನೂ ಓದಿ:ಚರ್ಮದ ಆರೋಗ್ಯಕ್ಕಾಗಿ ಈ ಆಹಾರವನ್ನು ಸೇವಿಸಿ
ನಾವು ಹೇಗೆ ದೋಸಾ, ಇಡ್ಲಿ ಮತ್ತು ವಡಾ ಮಾಡಿಕೊಂಡು ತಿನ್ನಲು ಇಷ್ಟ ಪಡುತ್ತೇವೆ. ಕೆಲವೊಮ್ಮೆ ನಮಗೆ ಉತ್ತರ ಭಾರತೀಯ ಶೈಲಿಯ ತಿಂಡಿಗಳು ಸಹ ಇಷ್ಟವಾಗುತ್ತದೆ. ಅದರಲ್ಲೂ ಪರೋಟಾ ಎಲ್ಲರ ನೆಚ್ಚಿನ ತಿಂಡಿಗಳಲ್ಲಿ ಒಂದು ಎಂದರೆ ತಪ್ಪಾಗಲಾರದು. ಪರೋಟಾಗಳಲ್ಲಿ ಸಹ ಹಲವಾರು ವಿಧಗಳಲ್ಲಿ ಮಾಡುತ್ತೇವೆ. ನಾವು ಇಂದು ರುಚಿಯಾದ ಮಸಾಲೆ ಪರೋಟಾವನ್ನು ಮಾಡುವ ವಿಧಾನ ತಿಳಿಸಿಕೊಡುತ್ತಿದ್ದೇವೆ.
ಬೇಕಾಗುವ ಸಾಮಗ್ರಿಗಳು:
* ಬೆಳ್ಳುಳ್ಳಿ ಪೇಸ್ಟ್ – 3 ಚಮಚ
* ಜೀರಿಗೆ ಪುಡಿ – 1 ಚಮಚ
* ಗರಮ್ ಮಸಾಲಾ -1 ಚಮಚ
* ಈರುಳ್ಳಿ-1
* ಕಾಳುಮೆಣಸು ಪುಡಿ- 1 ಚಮಚ
* ದನಿಯಾ ಪುಡಿ – 3 ಚಮಚ
* ರುಚಿಗೆ ತಕ್ಕಷ್ಟು ಉಪ್ಪು
* ಗೋಧಿ ಹಿಟ್ಟು- 1 ಕಪ್
* ಅರಿಶಿನ ಪುಡಿ- ಸ್ವಲ್ಪ
* ಅಡುಗೆ ಎಣ್ಣೆ- ಅರ್ಧ ಕಪ್
ಮಾಡುವ ವಿಧಾನ:
* ಒಂದು ಬಾಣಲೆಯನ್ನು ತೆಗೆದುಕೊಂಡು ಅಡುಗೆ ಎಣ್ಣೆ ಹಾಕಿ ಕಾಯಿಸಿ, ಈರುಳ್ಳಿ, ಬೆಳ್ಳುಳ್ಳಿ ಪೇಸ್ಟ್, ಜೀರಿಗೆ ಪುಡಿ, ಗರಮ್ ಮಸಾಲಾ, ಕಾಳುಮೆಣಸು ಪುಡಿ, ದನಿಯಾ ಪುಡಿ, ರುಚಿಗೆ ತಕ್ಕಷ್ಟು ಉಪ್ಪು ಅನ್ನು ಸೇರಿಸಿ ಒಗ್ಗರಣೆ ಸಿದ್ಧ ಮಾಡಿಕೊಳ್ಳಬೇಕು. ಇದನ್ನೂ ಓದಿ: ಸ್ಪೆಷಲ್ ಹೀರೆಕಾಯಿ ದೋಸೆ ಮಾರ್ನಿಂಗ್ ತಿಂಡಿಗೆ ಮಾಡಿ
* ನಂತರ ಒಂದು ಪಾತ್ರೆಯನ್ನು ತೆಗೆದುಕೊಂಡು ಗೋಧಿ ಹಿಟ್ಟನ್ನು ಹಾಕಿ ಸಾಕಷ್ಟು ನೀರು, ರುಚಿಗೆ ಬೇಕಾದಷ್ಟು ಉಪ್ಪು ಹಾಕಿ ಕಲಸಿ.
ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮ
ಕೋವಿಡ್ ಸಾಂಕ್ರಾಮಿಕವು ಎಲ್ಲಾ ವಯಸ್ಸಿನ ಜನರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಯನ್ನು ಹೆಚ್ಚಿಸಿದೆ. ಗುಣಮಟ್ಟದ ಮಾನಸಿಕ ಆರೋಗ್ಯ ಸಮಾಲೋಚನೆ ಮತ್ತು ಆರೈಕೆ ಸೇವೆಗಳನ್ನು ಒದಗಿಸುವ ಸಲುವಾಗಿ ʼರಾಷ್ಟ್ರೀಯ ಟೆಲಿ-ಮೆಂಟಲ್ ಹೆಲ್ತ್ ಕಾರ್ಯಕ್ರಮʼ ಘೋಷಿಸಲಾಗಿದೆ. ಇದು 23 ಟೆಲಿ-ಮೆಂಟಲ್ ಆರೋಗ್ಯ ಉತ್ಕೃಷ್ಟ ಕೇಂದ್ರಗಳ ಜಾಲವನ್ನು ಒಳಗೊಂಡಿರುತ್ತದೆ. ನಿಮ್ಹಾನ್ಸ್ ಇದಕ್ಕೆ ನೋಡಲ್ ಕೇಂದ್ರವಾಗಿದೆ. ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ-ಬೆಂಗಳೂರು (ಐಐಐಟಿಬಿ) ತಾಂತ್ರಿಕ ಬೆಂಬಲವನ್ನು ಒದಗಿಸುತ್ತದೆ. ಇದನ್ನೂ ಓದಿ: Budget 2022: ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್
ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಗಾಗಿ ಹೊಸ ಮುಕ್ತ ವೇದಿಕೆಯನ್ನು ಹೊರತರಲಾಗುವುದು. ಇದು ಆರೋಗ್ಯ ಪೂರೈಕೆದಾರರು ಮತ್ತು ಆರೋಗ್ಯ ಸೌಲಭ್ಯಗಳ ಡಿಜಿಟಲ್ ದಾಖಲಾತಿಗಳನ್ನು ಸಮಗ್ರವಾಗಿ ಒಳಗೊಂಡಿರುತ್ತದೆ.
ಬೆಳಗ್ಗಿನ ಉಪಹಾರಕ್ಕೆ ಏನು ಮಾಡುವುದು ಎಂದು ನೀವು ಯೋಚಿಸುತ್ತಿದ್ದಿರಾ? ಚಳಿ ಇರುವುದರಿಂದ ಬಿಸಿಯಾಗಿ ಟೀ, ಕಾಫಿ ಜೊತೆಗೆ ಬೆಳ್ಳುಳ್ಳಿ ರೈಸ್ ಮಾಡಿದರೆ ಸಖತ್ ರುಚಿಯಾಗಿರುತ್ತದೆ. ಬೆಳ್ಳುಳ್ಳಿ ರೈಸ್ ಮಾಡುವುದು ಎಷ್ಟು ಸುಲಭವೋ ಅಷ್ಟೇ ರುಚಿಯಾಗಿರುತ್ತದೆ.
ಬೇಕಾಗುವ ಸಾಮಗ್ರಿಗಳು:
* ಬೆಳ್ಳುಳ್ಳಿ- 4 ರಿಂದ 6
* ಸಾಸಿವೆ- 1 ಚಮಚ
* ಅಡುಗೆ ಎಣ್ಣೆ- ಅರ್ಧ ಕಪ್
* ರುಚಿಗೆ ತಕ್ಕಷ್ಟು ಉಪ್ಪು
* ಅನ್ನ- 2 ಕಪ್
* ಹಸಿ ಮೆಣಸು- 3
* ಉದ್ದಿನ ಬೆಳೆ- ಅರ್ಧ ಚಮಚ
* ಕಡಲೆ ಬೆಳೆ- ಅರ್ಧ ಚಮಚ
* ಕರಿಬೇವು- ಸ್ವಲ್ಪ
* ಕೊತ್ತಂಬರಿ ಸೊಪ್ಪು- ಸ್ವಲ್ಪ
* ಈರುಳ್ಳಿ- 1
ಮಾಡುವ ವಿಧಾನ:
* ಒಂದು ಬಾಣಲೆಯನ್ನು ತೆಗೆದುಕೊಂಡು ಅದಕ್ಕೆ ಅಡುಗೆ ಎಣ್ಣೆ ಹಾಕಿ ಕಾಯಿಸಿ, ಎಣ್ಣೆ ಕಾದ ನಂತರ ಅದರಲ್ಲಿ ಬೆಳ್ಳುಳ್ಳಿಯನ್ನು ಹಾಕಿ ಫ್ರೈ ಮಾಡಬೇಕು
* ನಂತರ ಸಾಸಿವೆ ಹಾಕಿ, ಕರಿಬೇವು, ತೊಗರಿ ಬೇಳೆ, ಕಡಲೆ ಬೇಳೆ, ಒಣ ಮೆಣಸು ಮುರಿದು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಿ. ಇದನ್ನೂ ಓದಿ: ಸ್ಪೆಷಲ್ ಹೀರೆಕಾಯಿ ದೋಸೆ ಮಾರ್ನಿಂಗ್ ತಿಂಡಿಗೆ ಮಾಡಿ
* ಈ ಮಸಾಲೆ ಚೆನ್ನಾಗಿ ಫ್ರೈ ಆದ ನಂತರ ಈರುಳ್ಳಿ, ಹಸಿಮೆಣಸು ಹಾಕಿ ಕಂದು ಬಣ್ಣಕ್ಕೆ ಬರುವವರೆಗೆ ಫ್ರೈ ಮಾಡಿಕೊಳ್ಳಬೇಕು. ಫ್ರೈ ಮಾಡಿದ ಬೆಳ್ಳುಳ್ಳಿ ಸೇರಿಸಿ, ರುಚಿಗೆ ತಕ್ಕ ಉಪ್ಪು ಸೇರಿಸಿ ಮಿಕ್ಸ್ ಮಾಡಿ, ಗ್ಯಾಸ್ ಆಫ್ ಮಾಡಿ. ಇದನ್ನೂ ಓದಿ: ಸರಳ, ರುಚಿಯಾದ ಬೆಳ್ಳುಳ್ಳಿ ಚಟ್ನಿ ಮಾಡಲು ಟ್ರೈ ಮಾಡಿ
* ಈಗ ಅನ್ನ ಹಾಕಿ, ಮಿಕ್ಸ್ ಮಾಡಿ ಸ್ವಲ್ಪ ನಿಂಬೆ ರಸ ಹಿಂಡಿ ಮತ್ತೊಮ್ಮೆ ಚೆನ್ನಾಗಿ ಕಲಸಿ. ಬೇಕಿದ್ದರೆ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಯಾದ ಬೆಳ್ಳುಳ್ಳಿ ರೈಸ್ ಸವಿಯಲು ಸಿದ್ಧವಾಗುತ್ತದೆ.
ನಕ್ಕಾಗ ಹಲ್ಲು ಎಲ್ಲರಿಗೂ ಕಾಣುತ್ತದೆ. ಹೆಚ್ಚನವರಿಗೆ ಹಳದಿ ಹಲ್ಲಿನ ಸಮಸ್ಯೆ ಕಾಡುತ್ತಿರುತ್ತದೆ. ಬಾಯಿ ತೆರೆದು ನಕ್ಕು ಮುಜುಗರಕ್ಕೆ ಒಳಗಾಗುವ ಎಷ್ಟೋ ಸಂದರ್ಭ ಎದುರಾಗಿರಬಹುದು. ಇಂತಹ ಹಳದಿ ಹಲ್ಲಿನ ಸಮಸ್ಯೆಯಿಂದ ಬಳಲುತ್ತಿರುವವರು ಕೆಲವು ಮನೆ ಮದ್ದುಗಳನ್ನು ಟ್ರೈ ಮಾಡಿದರೆ ಪಳ ಪಳ ಹೊಳೆಯುವ ಹಲ್ಲನ್ನು ಪಡೆದುಕೊಳ್ಳಬಹುದಾಗಿದೆ.
* 1 ಟೀ ಸ್ಪೂನ್ ಅಡುಗೆ ಸೋಡಾ, ಸ್ಪೂನ್ ನಿಂಬೆ ರಸವನ್ನು ಮಿಶ್ರಣ ಮಾಡಿ ಪೇಸ್ಟ್ ತರಹ ಮಾಡಿಕೊಂಡು ಹಲ್ಲುಜ್ಜಿ ಬೆಚ್ಚಗಿನ ನೀರಿನಿಂದ ನಿಮ್ಮ ಬಾಯಿಯನ್ನು ತೊಳೆಯಿರಿ. ಹೀಗೆ ವಾರದಲ್ಲಿ ಎರಡು ಬಾರಿ ಮಾಡಬೇಕು.
* ಬಾಳೆಹಣ್ಣಿನ ಸಿಪ್ಪೆಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಒಂದು ತುಂಡು ತೆಗೆದುಕೊಂಡು ಅದರ ಒಳಭಾಗದಿಂದ ನಿಮ್ಮ ಹಲ್ಲುಗಳ ಮೇಲೆ ಉಜ್ಜಿ. ನಂತರ ಬೆಚ್ಚಗಿನ ನೀರಿನಿಂದ ತೊಳೆಯಿರಿ. ಪ್ರತಿನಿತ್ಯ ಹೀಗೆ ಮಾಡುತ್ತಾ ಬರುವುದರಿಂದ ಹೊಳೆಯುವ ಹಲ್ಲು ನಿಮ್ಮದಾಗುತ್ತದೆ.
* ಹಲ್ಲುಜ್ಜುವ ಬ್ರಷ್ ಅನ್ನು ಒದ್ದೆ ಮಾಡಿ ಇದ್ದಿಲಿನ ಪುಡಿಯಲ್ಲಿ ಅದ್ದಿ. ಎರಡು ನಿಮಿಷಗಳ ಕಾಲ ವೃತ್ತಾಕಾರವಾಗಿ ಬ್ರಷ್ ಮಾಡಿ. ಬಾಯಿಯನ್ನು ನೀರಿನಿಂದ ಚೆನ್ನಾಗಿ ತೊಳೆಯಿರಿ. ಇದನ್ನೂ ಓದಿ:ಚರ್ಮದ ಆರೋಗ್ಯಕ್ಕಾಗಿ ಈ ಆಹಾರವನ್ನು ಸೇವಿಸಿ
* 4-5 ಬೇವಿನ ಎಲೆಗಳನ್ನು 1 ಕಪ್ ನೀರಿನಲ್ಲಿ ಕೆಲವು ನಿಮಿಷ ಕುದಿಸಿ. ನೀರು ಹೆಚ್ಚು ಬಿಸಿಯಾಗಲು ಬಿಡಬೇಡಿ. ಈ ದ್ರಾವಣವನ್ನು ತಣ್ಣಗಾಗಲು ಬಿಡಿ. ಹಲ್ಲುಜ್ಜುವ ಮೊದಲು ಅಥವಾ ನಂತರ ಈ ನೀರಿನಿಂದ ಬಾಯಿ ಮುಕ್ಕಳಿಸಿ. ಇದನ್ನೂ ಓದಿ:ಚಳಿಗಾಲದಲ್ಲಿ ಈ ತರಕಾರಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ
* ಹಲ್ಲುಜ್ಜುವ ಬ್ರಷ್ಗೆ 1/8 ಟೀಸ್ಪೂನ್ ಅರಿಶಿನ ಪುಡಿಯನ್ನು ಸಿಂಪಡಿಸಿ, ಬ್ರಷ್ ಮಾಡಿ. ನಂತರ ನಿಮ್ಮ ಬಾಯಿಯನ್ನು ಚೆನ್ನಾಗಿ ತೊಳೆದು ಮತ್ತೆ ಮಾಮೂಲಿ ಟೂತ್ಪೆಸ್ಟ್ನೊಂದಿಗೆ ಬ್ರಷ್ ಮಾಡಿ. ಹೀಗೆ ಪ್ರತಿನಿತ್ಯ ಬ್ರಷ್ ಮಾಡುವುದರಿಂದ ನಿಮ್ಮ ಹಲ್ಲು ಹಾಲಿನ ಬಣ್ಣಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ.