Tag: health

  • ಗುಂಟೂರು ಮೆಣಸಿನಕಾಯಿ ಬಳಸಿ ಮಾಡುವ ಚಿಕನ್ ಗ್ರೇವಿ ಸಖತ್ ಟೇಸ್ಟ್

    ಗುಂಟೂರು ಮೆಣಸಿನಕಾಯಿ ಬಳಸಿ ಮಾಡುವ ಚಿಕನ್ ಗ್ರೇವಿ ಸಖತ್ ಟೇಸ್ಟ್

    ರುಚಿಯಾದ ಆಹಾರ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಆದ್ರೆ ಅನ್ನದೊಂದಿಗೆ ಚಿಕನ್ ಗ್ರೇವಿ ಇದ್ರೆ ಎಷ್ಟು ಚಂದ ಅಲ್ವಾ. ಗುಂಟೂರು ಮೆಣಸಿನಕಾಯಿ ಬಳಸಿ ಮಾಡುವ ರುಚಿಯಾದ ಚಿಕನ್ ಗ್ರೇವಿಯನ್ನು ನೀವೂ ಒಮ್ಮೆ ಟ್ರೈ ಮಾಡಿ ಸವಿಯಿರಿ.

    ಬೇಕಾಗುವ ಸಾಮಗ್ರಿಗಳು:
    * ಚಿಕನ್- 1 ಕೆ.ಜಿ
    * ಗುಂಟೂರು ಮೆಣಸಿನಕಾಯಿ-20
    * ಈರುಳ್ಳಿ- 2
    * ರುಚಿಗೆ ತಕ್ಕಷ್ಟು ಉಪ್ಪು
    * ಅಡುಗೆ ಎಣ್ಣೆ- ಅರ್ಧ ಕಪ್
    * ಕೊತ್ತಂಬರಿ ಸೊಪ್ಪು- ಸ್ವಲ್ಪ
    * ಸಾಸಿವೆ- ಅರ್ಧ ಚಮಚ
    * ಅರಿಸಿಣ- ಅರ್ಧ ಚಮಚ
    * ಬೆಳ್ಳುಳ್ಳಿ, ಶುಂಠಿ ಪೇಸ್ಟ್- 2 ಚಮಚ
    * ಲವಂಗ, ಚಕ್ಕೆ- ಸ್ವಲ್ಪ
    * ಕೊತ್ತಂಬರಿ- ಸ್ವಲ್ಪ
    * ಕರಿಬೇವು-ಸ್ವಲ್ಪ

    ಮಾಡುವ ವಿಧಾನ:
    * ಪಾತ್ರೆಗೆ ಸ್ವಲ್ಪ ಅಡುಗೆ ಎಣ್ಣೆ ಹಾಕಿ, ಈರುಳ್ಳಿ, ಕರಿಬೇವು, ಸಾಸಿವೆ, ಅರಿಸಿಣ, ಉಪ್ಪು ಹಾಕಿ ಹಾಕಿ ಫ್ರೈ ಮಾಡಿ ಚಿಕನ್ ಹಾಕಿ ಬೇಯಲು ಬಿಡಬೇಕು. ಇದನ್ನೂ ಓದಿ: ಸ್ಪೆಷಲ್ ಮಟನ್ ಬಿರಿಯಾನಿ ಮಾಡುವ ವಿಧಾನ ನಿಮಗಾಗಿ

    * ಗುಂಟೂರು ಮೆಣಸಿನಕಾಯಿ, ಕೊತ್ತಂಬರಿಯನ್ನು ರುಬ್ಬಿಕೊಳ್ಳಬೇಕು.

    * ನಂತರ ಮತ್ತೋಂದು ಬಾಣಲೆಗೆ ಅಡುಗೆ ಎಣ್ಣೆ, ಕರಿಬೇವು, ಸಾಸಿವೆ, ಕೊತ್ತಂಬರಿ, ಚಕ್ಕೆ, ಲವಂಗ, ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಎಲ್ಲವನ್ನು ಹಾಕಿ ಚೆನ್ನಾಗಿ ಬೆರೆಸಿಕೊಡಿ. ಇದನ್ನೂ ಓದಿ: ಖಾರವಾದ ಮಟನ್ ಖೀಮಾ ಮಾಡಿ ಟೇಸ್ಟ್ ನೋಡಿ

    * ನಂತರ ಈಗಾಗಲೇ ಬೇಯಿಸಿದ ಚಿಕನ್ ಹಾಗೂ ರುಬ್ಬಿದ ಮಿಶ್ರಣವನ್ನು ಹಾಕಿ, ಕುದಿಯಲು ಬಿಡಿ. ನಂತರ ತೆಂಗಿನಕಾಯಿ ತುರಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.

    * ಕೊನೆಯಲ್ಲಿ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಉದುರಿಸಿದರೆ, ಗುಂಟೂರು ಮೆಣಸಿನಕಾಯಿ ಬಳಸಿ ಮಾಡುವ ಚಿಕನ್ ಗ್ರೇವಿ ಸವಿಯಲು ಸಿದ್ಧವಾಗುತ್ತದೆ.

  • ಚರ್ಮದ ಆರೋಗ್ಯಕ್ಕಾಗಿ ಈ ಆಹಾರವನ್ನು ಸೇವಿಸಿ

    ಚರ್ಮದ ಆರೋಗ್ಯಕ್ಕಾಗಿ ಈ ಆಹಾರವನ್ನು ಸೇವಿಸಿ

    ಇಂದಿನ ಮಾಲಿನ್ಯ, ಆಹಾರ ಸೇವೆನೆಯಲ್ಲಿ ವ್ಯತ್ಯಾಸಗಳು ಉಂಟಾಗಿ ಚಿಕ್ಕ ವಯಸ್ಸಿನಲ್ಲೇ ಅನೇಕ ಮಂದಿಯ ಚರ್ಮವು ಸುಕ್ಕುಗಟ್ಟಿ ವಯಸ್ಸಾದ ರೀತಿಯಲ್ಲಿ ಕಾಣುತ್ತದೆ. ಅದನ್ನು ಹೋಗಲಾಡಿಸಲು ಪ್ರತಿನಿತ್ಯ ಒಂದಿಷ್ಟು ಆರೋಗ್ಯಕರ ಆಹಾರವನ್ನು ಸೇವಿಸಿ.

    * ಸೂರ್ಯನ ಶಾಖದ ತಡೆಗೆ ಟೋಮೆಟೋ ಸೇವಿಸಿ
    ಟೋಮೆಟೋಗಳನ್ನು ಸಲಾಡ್ ಮಾಡಿಕೊಂಡು ತಿನ್ನುವುದರಿಂದ ನಿಮ್ಮ ದೇಹವನ್ನು ಆರೋಗ್ಯಕರವಾಗಿಡಲು ಹೆಚ್ಚು ಸಹಕಾರಿಯಾಗಿದೆ. ಟೊಮೆಟೋದಲ್ಲಿ ಹೆಚ್ಚು ಪೋಷಕಾಂಶಗಳಿವೆ. ಇದರಿಂದ ನಿಮ್ಮ ಚರ್ಮ ಹಾನಿಗೊಳಾಗುವುದನ್ನು ತಪ್ಪಿಸಲು ಸಹಾಯ ಮಾಡುತ್ತದೆ. ಆಲಿವ್ ಎಣ್ಣೆಯಲ್ಲಿ ಬೇಯಿಸಿದ 2 ಟೋಮೆಟೋವನ್ನು ದಿನನಿತ್ಯ ಸೇವಿಸುವುದರಿಂದ ಸೂರ್ಯನ ಶಾಖದಿಂದ ನಿಮ್ಮ ಚರ್ಮವನ್ನು ರಕ್ಷಿಸಲು ಸಹಾಯ ಮಾಡುತ್ತದೆ.

    * ಮೀನು ಸೇವನೆಯಿಂದ ಚರ್ಮ, ಕೂದಲು, ಕಣ್ಣಿಗೆ ಹೆಚ್ಚು ಉಪಯುಕ್ತ
    ಮೀನುಗಳನ್ನು ಸೇವನೆಯಿಂದ ಕೂದಲು, ಚರ್ಮ ಮತ್ತು ಕಣ್ಣುಗಳ ಆರೋಗ್ಯ ಹೆಚ್ಚುತ್ತದೆ. ಇದು ಕೊಬ್ಬಿನಾಮ್ಲಗಳ ಸಮೃದ್ಧ ಮೂಲವಾಗಿದೆ. ಇದರಿಂದ ಚರ್ಮಕ್ಕೆ ಸಂಬಂಧಿಸಿದ ರೋಗಗಳನ್ನು ಹೋಗಲಾಡಿಸಲು ಇದು ಸಹಾಯಕವಾಗಿದೆ. ಪೊಷಕಾಂಶಭರಿತ ಮೀನಿನ ಸೇವನೆಯಿಂದ ಚರ್ಮದ ಹೊಳಪನ್ನು ಸುಧಾರಿಸಲು ಸಹಾಯ ಮಾಡುವ ಕಾಲಜನ್ ಮತ್ತು ಎಲಾಸ್ಟಿನ್ ರಚನೆಗೆ ಸಹಾಯಕವಾಗಿದೆ. ಇದನ್ನೂ ಓದಿ: ಚಳಿಗಾಲದಲ್ಲಿ ಈ ತರಕಾರಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

    * ಸುಕ್ಕುಗಟ್ಟಿದ ಚರ್ಮಕ್ಕೆ ಆಲಿವ್ ಎಣ್ಣೆ
    ಆಲಿವ್ ಎಣ್ಣೆಂಯಲ್ಲಿ ಕೊಬ್ಬಿನಾಮ್ಲಗಳ ಹೆಚ್ಚಿರುತ್ತವೆ. ಈ ಎಣ್ಣೆಯಲ್ಲಿ ಆಹಾರವನ್ನು ಬೇಯಿಸಿ ತಿನ್ನುವುದರಿಂದ ಸುಕ್ಕು ಕಟ್ಟಿದ ಚರ್ಮ ಸೇರಿದಂತೆ ವಯಸ್ಸಾದ ಲಕ್ಷಣವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಸೂರ್ಯ ಕಿರಣದಿಂದ ಉಂಟಾದ ಹಾನಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉತ್ಕರ್ಷಣ ನಿರೋಧಕಗಳು ಆಕ್ಸಿಡೇಟಿವ್ ಒತ್ತಡವನ್ನು ಬಿಡುಗಡೆ ಮಾಡಲು ಸಹಾಯ ಮಾಡುತ್ತದೆ. ಇದನ್ನೂ ಓದಿ: ಖರ್ಜೂರ ತಿಂದು ಆರೋಗ್ಯವಾಗಿರಿ – ಪ್ರತಿದಿನ ಒಂದೊಂದು ತಿಂದರೂ ನೀವು ಗಟ್ಟಿಯಾಗ್ತೀರಿ

    * ಮೇಧುಮೇಹಿಗಳಿಗೆ ಒಣ ದ್ರಾಕ್ಷಿ ಉತ್ತಮ ಮನೆಮದ್ದು
    ಪ್ರತಿನಿತ್ಯ ಒಣದ್ರಾಕ್ಷಿ ಸೇವಿಸುವುದರಿಂದ ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಉತ್ತಮ ಮಟ್ಟದಲ್ಲಿ ನಿರ್ವಹಣೆ ಮಾಡುತ್ತದೆ. ಜೊತೆಗೆ ಸದೃಢ ಮೂಳೆ ಆರೋಗ್ಯಕ್ಕೂ ಸಹಕಾರಿಯಾಗಿದೆ. ಪೊಟ್ಯಾಷಿಯಂ, ಬೋರಾನ್ ಮತ್ತು ವಿಟಮಿನ್ ಕೆಗಳು ಒಣ ದ್ರಾಕ್ಷಿಯಲ್ಲಿ ಸದೃಢವಾಗಿದೆ. ದಿನಕ್ಕೆ ಐದರಿಂದ ಆರು ಒಣದ್ರಾಕ್ಷಿಗಳನ್ನು ಸೇವಿಸುವುದರಿಂದ ನಿಮ್ಮ ಮೂಳೆಗಳನ್ನು ಬಲಪಡಿಸಬಹುದು.

  • 500 ರೂಪಾಯಿಗೆ ಕೈ ಮಿಲಾಯಿಸಿದ ಆಶಾ ಕಾರ್ಯಕರ್ತೆಯರು

    500 ರೂಪಾಯಿಗೆ ಕೈ ಮಿಲಾಯಿಸಿದ ಆಶಾ ಕಾರ್ಯಕರ್ತೆಯರು

    ಪಾಟ್ನಾ: 500 ರೂಪಾಯಿ ವಿಚಾರವಾಗಿ ಇಬ್ಬರು ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದುಕೊಂಡಿರುವ ಘಟನೆ ಬಿಹಾರದ ಜಮುಯಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

    ಲಕ್ಷ್ಮಿಪುರ ಬ್ಲಾಕ್‍ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಮಗುವೊಂದು ಜನಸಿದೆ. ಈ ವೇಳೆ ಆಶಾ ಕಾರ್ಯಕರ್ತೆ ರಿಂತು ಕುಮಾರಿ ಮಗುವಿಗೆ ಚುಚ್ಚು ಮದ್ದು ನೀಡಲು ಮತ್ತೋರ್ವ ಆಶಾ ಕಾರ್ಯಕರ್ತೆ ರಂಜನಾ ಕುಮಾರಿ ಅವರನ್ನ ಸಂಪರ್ಕಿಸಿದ್ದಾಳೆ. ಈ ವೇಳೆ ಲಸಿಕೆ ನೀಡಲು ನರ್ಸ್ 500 ರೂಪಾಯಿ ಬೇಡಿಕೆ ಇಟ್ಟಿದ್ದಾರೆಂದು ಆಶಾ ಕಾರ್ಯಕರ್ತೆ ರಂಜನಾ ತಿಳಿಸಿದ್ದಾಳೆ. ಈ ವಿಚಾರವಾಗಿ ವಾಗ್ವಾದ ನಡೆದಿದ್ದು, ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಬಣ ರಾಜಕೀಯ ಬಲು ಜೋರು – ಕತ್ತಿ ಸಭೆಗೆ ಪ್ರತಿಯಾಗಿ ಜಾರಕಿಹೊಳಿ ಮೀಟಿಂಗ್

    ಇಬ್ಬರು ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಳ್ಳಲು ಶುರು ಮಾಡುತ್ತಿದ್ದಂತೆ ಆಸ್ಪತ್ರೆಯಲ್ಲಿರುವ ಒಬ್ಬರು ಅದರ ವೀಡಿಯೋ ಸೆರೆ ಹಿಡಿದಿದ್ದಾರೆ. ಘಟನೆಯ ವೀಡಿಯೋ ವೈದ್ಯಾಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಸಂಪುಟ ಸರ್ಜರಿಗೆ ಡೆಡ್‍ಲೈನ್ – ಮಾರ್ಚಲ್ಲ ಈಗ್ಲೇ ವಿಸ್ತರಿಸಿ ಅಂತ ಬಿಗಿಪಟ್ಟು

  • ಕೂದಲ ರಕ್ಷಣೆಗಾಗಿ ಮನೆಯಲ್ಲೇ ತಯಾರಿಸಿ ಮದ್ದು

    ಕೂದಲ ರಕ್ಷಣೆಗಾಗಿ ಮನೆಯಲ್ಲೇ ತಯಾರಿಸಿ ಮದ್ದು

    ಕೂದಲು ತುಂಬಾ ಉದ್ದವಾಗಿ ಇರಬೇಕು, ದಪ್ಪವಾಗಿ ಅಂತೆಲ್ಲ ಆಸೆ ಇರುತ್ತದೆ. ನಮ್ಮ ಸುಂದರ ಕೂದಲಿಗೆ ಮನೆಯಲ್ಲಿಯೇ ಕೆಲ ಎಣ್ಣೆಗಳನ್ನು ತಯಾರಿಸಬಹುದು. ಕೂದಲಿಗೆ ಎಣ್ಣೆ ಹಾಕುವುದು ಎಲ್ಲಾ ಸತ್ತ ಕೂದಲಿನ ಕೋಶಗಳನ್ನು ಪುನಶ್ಚೇತನಗೊಳಿಸಲು ಸಹಾಯ ಮಾಡುತ್ತದೆ. ಎಣ್ಣೆಯನ್ನು ಹಚ್ಚುವುದರಿಂದ ಕೂದಲನ್ನು ಬೇರುಗಳಿಂದ ತುದಿಯವರೆಗೆ ಬಲಪಡಿಸುತ್ತದೆ. ಆದ್ದರಿಂದ ಎಣ್ಣೆಗೆ ನೈಸರ್ಗಿಕ ಪದಾರ್ಥಗಳನ್ನು ಸೇರಿಸಿ ಕೂದಲ ಆರೋಗ್ಯವನ್ನು ಹೆಚ್ಚಿಸುವುದು ಹೇಗೆಂದು ನೋಡೋಣ.

    ಈರುಳ್ಳಿ ಎಣ್ಣೆ: ಈರುಳ್ಳಿ ಮತ್ತು ಕರಿಬೇವಿನ ಎಲೆಗಳನ್ನು ತೆಗೆದಿಟ್ಟುಕೊಳ್ಳಿ. ಈ ಎರಡನ್ನೂ ಚೆನ್ನಾಗಿ ಪೇಸ್ಟ್ ಮಾಡಿ. ಕಡಿಮೆ ಉರಿಯಲ್ಲಿ, ಕೊಬ್ಬರಿ ಎಣ್ಣೆಗೆ ಈ ಪೇಸ್ಟ್ ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ. 5-10 ನಿಮಿಷಗಳ ನಂತರ, ಉರಿ ಹೆಚ್ಚಿಸಿ. ಈ ಮಿಶ್ರಣವನ್ನು ಕುದಿಯಲು ಬಿಡಿ. ಈ ಮಿಶ್ರಣವನ್ನು ತಣ್ಣಗಾಗಲು ಪಕ್ಕಕ್ಕೆ ಇರಿಸಿ ಮತ್ತು ರಾತ್ರಿಯಿಡೀ ಬಿಡಿ. ಮರುದಿನ, ಎಣ್ಣೆಯನ್ನು ಸೋಸಿ, ಸೂಕ್ತವಾದ ಡಬ್ಬಿಯಲ್ಲಿ ಸಂಗ್ರಹಿ ನಿಮ್ಮ ಕೂದಲಿಗೆ ಹಚ್ಚುತ್ತಾ ಬನ್ನಿ. ಇದನ್ನೂ ಓದಿ: ಖರ್ಜೂರ ತಿಂದು ಆರೋಗ್ಯವಾಗಿರಿ – ಪ್ರತಿದಿನ ಒಂದೊಂದು ತಿಂದರೂ ನೀವು ಗಟ್ಟಿಯಾಗ್ತೀರಿ

    ದಾಸವಾಳ ಎಣ್ಣೆ: ದಾಸವಾಳ ಹೂವು ಮತ್ತು ಎಲೆಗಳನ್ನು ತೆಗೆದುಕೊಂಡು ರುಬ್ಬಿಕೊಳ್ಳಿ. ನಂತರ ಕೊಬ್ಬರಿ ಎಣ್ಣೆಯನ್ನು ತೆಗೆದುಕೊಂಡು ಚನ್ನಾಗಿ ಕಾಯಿಸಿ, ಎಣ್ಣೆ ಕಾದ ನಂತರ ರುಬ್ಬಿಕೊಂಡ ಮಿಶ್ರಣವನ್ನು ಹಾಕಿ ಮತ್ತೆ ಚನ್ನಾಗಿ ಕುದಿಸಿದರೆ ದಾಸವಾಳದ ಎಣ್ಣೆ ರೆಡಿ. ಇದನ್ನೂ ಓದಿ: ಚಳಿಗಾಲದಲ್ಲಿ ಈ ತರಕಾರಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

    ನೆಲ್ಲಿಕಾಯಿ ಎಣ್ಣೆ: ಒಣಗಿದ ನೆಲ್ಲಿಕಾಯಿ ತೆಗೆದುಕೊಂಡು ತೆಂಗಿನ ಎಣ್ಣೆಯಲ್ಲಿ ಹಾಕಿ ಕುದಿಸಿ, ನಂತರ ಸೋಸಿಕೊಳ್ಳಿ. ಈ ಎಣ್ಣೆಯನ್ನು ನಿಯಮಿತವಾಗಿ ಬಳಸುವುದು ಹೆಚ್ಚು ಪ್ರಯೋಜನಕಾರಿ. ಇದನ್ನೂ ಓದಿ: ತ್ವಚೆಯ ಅಂದಕ್ಕೆ ಮನೆಮದ್ದು – ಇಲ್ಲಿದೆ ಟಿಪ್ಸ್‌

    ಪುದೀನಾ ಎಣ್ಣೆ: ಕೆಲವು ಪುದೀನಾ ಎಲೆಗಳನ್ನು ಪುಡಿಮಾಡಿ. ಬಾದಾಮಿ ಎಣ್ಣೆಯೊಂದಿಗೆ ಪಾತ್ರೆಯಲ್ಲಿ ಪುಡಿಮಾಡಿದ ಎಲೆಗಳನ್ನು ಹಾಕಿ, ಎರಡು ಮೂರು ದಿನಗಳವರೆಗೆ ಸೂರ್ಯನ ಕೆಳಗೆ ಬಿಡಿ. ಎಣ್ಣೆಯನ್ನು ಸೋಸಿಕೊಳ್ಳಿ ಮತ್ತು ಬಳಸಿ.

  • ನಮ್ಮ ಆರೋಗ್ಯ ನಮ್ಮ ಕೈಯಲ್ಲಿ: ಡಾ.ಕೆ.ಸುಧಾಕರ್

    ನಮ್ಮ ಆರೋಗ್ಯ ನಮ್ಮ ಕೈಯಲ್ಲಿ: ಡಾ.ಕೆ.ಸುಧಾಕರ್

    -ಜನರ ಜೀವ ಹಾಗೂ ಜೀವನ ಎರಡೂ ಮುಖ್ಯ

    ಬೆಂಗಳೂರು:  ನಮ್ಮ ಆರೋಗ್ಯ ನಮ್ಮ ಕೈಯಲ್ಲಿ, ಜೀವ ಹಾಗೂ ಜೀವನ ಎರಡೂ ಮುಖ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೋವಿಡ್-19 3ನೇ ಅಲೆ 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ. ವೈಜ್ಞಾನಿಕವಾಗಿ ಪರಾಮರ್ಶೆ ಮಾಡಿ, ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ ಎಂದು ತಿಳಿಸಿದ್ದಾರೆ .

    ಜನರ ಜೀವ ಹಾಗೂ ಜೀವನ ಎರಡೂ ಮುಖ್ಯ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಈಗ ಜನರು ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ಅರಿತು ನಡೆಯಬೇಕು. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಒಂದು ವೇಳೆ ಮತ್ತೆ ಕೊರೊನಾ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುವುದು ಗಣನೀಯವಾಗಿ ಹೆಚ್ಚಾದರೆ ಸರ್ಕಾರ ಬೇರೆ ದಾರಿ ಇಲ್ಲದೆ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಲಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಗೋವಾ ಚುನಾವಣೆ- ಜಗದೀಶ್ ಶೆಟ್ಟರ್ ಪ್ರಚಾರ, ಮತಯಾಚನೆ

    ಮುಖ್ಯಮಂತ್ರಿಗಳ ಜೊತೆ ನಡೆದ 3 ಗಂಟೆಗಳ ಸುಧೀರ್ಘ ಸಭೆಯಲ್ಲಿ ರಚನಾತ್ಮಕ ಸಲಹೆಗಳನ್ನು ತೆಗೆದುಕೊಂಡು ವೈಜ್ಞಾನಿಕ ಆಧಾರದಲ್ಲಿ ಸರ್ಕಾರ ನಿರ್ಧಾರ ಮಾಡಿದೆ. ಜನರು ಅನಗತ್ಯವಾಗಿ ಗುಂಪು ಸೇರುವುದನ್ನು ಕಡಿಮೆ ಮಾಡಬೇಕು. ಒಳಾಂಗಣ ಹಾಗೂ ಹೊರಾಂಗಣ ಕಾರ್ಯಕ್ರಮಗಳನ್ನು ಮುಂದಕ್ಕೆ ಹಾಕುವುದು ಉತ್ತಮ ಎಂದು ಸಚಿವರು ಮನವಿ ಮಾಡಿದರು. ಇದನ್ನೂ ಓದಿ: ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ

    ರಾಜ್ಯದಲ್ಲಿ ICMR ಮಾರ್ಗಸೂಚಿಯಂತೆ ಕೊರೊನಾ ಲಕ್ಷಣ ಹೊಂದಿರುವವರಿಗೆ ಮಾತ್ರ ಟೆಸ್ಟ್ ಮಾಡಲಾಗುವುದು. ಜನರು ಎಚ್ಚರಿಕೆಯಿಂದ ಇದ್ದಷ್ಟು ಕೊರೊನಾ ವಿರುದ್ಧ ಹೋರಾಡಲು ಸಹಾಯವಾಗುತ್ತದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ತ್ವಚೆಯ ಅಂದಕ್ಕೆ ಮನೆಮದ್ದು – ಇಲ್ಲಿದೆ ಟಿಪ್ಸ್‌

    ತ್ವಚೆಯ ಅಂದಕ್ಕೆ ಮನೆಮದ್ದು – ಇಲ್ಲಿದೆ ಟಿಪ್ಸ್‌

    ಳಿಗಾಲ ಬಂತೆಂದರೆ ಸಾಕು ನಿಮ್ಮ ತ್ವಚೆಯ ಮೇಲೆ ಅನೇಕ ಹಾನಿ ಉಂಟಾಗಿ, ತ್ವಚೆ ಕೆಡುತ್ತದೆ. ಅಷ್ಟೇ ಅಲ್ಲದೇ ಚರ್ಮವೂ ಒಣ ಚರ್ಮವಾಗಿ ಬಿಡುತ್ತದೆ. ಇದನ್ನು ಹೋಗಲಾಡಿಸಲು ಸಾವಿರಾರು ರೂಪಾಯಿ ಖರ್ಚು ಮಾಡುತ್ತೇವೆ. ಅದರ ಬದಲು ಮನೆಯ ಅಡುಗೆ ಸಾಮನುಗಳನ್ನೇ ಬಳಸಿ ಸುಲಭವಾಗಿ ನಿಮ್ಮ ತ್ವಚೆಯನ್ನು ಕಾಪಾಡಿಕೊಳ್ಳುವ ಒಂದಿಷ್ಟು ಟಿಪ್ಸ್‌ಗಳು ಇಲ್ಲಿವೆ.

    ಕಾಫಿ ಪುಡಿ ಮಿಶ್ರಣ: ಒಂದು ಬೌಲ್‍ಗೆ ಸ್ವಲ್ಪ ಕಂದು ಸಕ್ಕರೆ ಮತ್ತು ಕಾಫಿ ಪೌಡರ್‍ನ್ನು ಹಾಕಿಕೊಳ್ಳಿ. ಅವೆರಡು ಸರಿ ಪ್ರಮಾಣದಲ್ಲಿ ಇರಲಿ. ಅದಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ ಮಿಕ್ಸ್ ಮಾಡಿ. ನಂತರ ನಿಮ್ಮ ತ್ವಚೆಗೆ ಕಾಫಿ ಪೌಡರ್ ಮಿಶ್ರಣವನ್ನು ಸ್ಕ್ರಬ್ ಮಾಡಿ. ಆಗ ನಿಮ್ಮ ಚರ್ಮದಲ್ಲಿ ಹೊಳಪನ್ನು ನೀವು ಗಮನಿಸಬಹುದು.

    ಸಕ್ಕರೆಯ ಮಿಶ್ರಣ: ಕಂದು ಸಕ್ಕರೆಯನ್ನು ಮಿಕ್ಸರ್‌ನಲ್ಲಿ ಚೆನ್ನಾಗಿ ರುಬ್ಬಿ, ಅದಕ್ಕೆ ಸ್ವಲ್ಪ ಆಲಿವ್ ಎಣ್ಣೆ, ರೋಸ್ ವಾಟರ್ ಮತ್ತು ಜೇನುತುಪ್ಪವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಆ ಮಿಶ್ರಣ ನೀರಾಗುವಂತೆ ಮಾಡಬೇಡಿ, ಸ್ವಲ್ಪ ಗಟ್ಟಿ ಇರಲಿ. ನಂತರ ನಿಮ್ಮ ಮೊಣಕೈ, ತುಟಿ, ಒಡೆದ ಹಿಮ್ಮಡಿಗೆ ಹಚ್ಚಿ. ಇದರಿಂದ ಚಳಿಯ ವಾತಾವರಣವಿದ್ದರೂ ನಿಮ್ಮ ತ್ವಚೆಯನ್ನು ಕಾಪಾಡಲು ಸಹಕಾರಿಯಾಗುತ್ತದೆ.

    ನಿಂಬೆ ಮಿಶ್ರಣ: ಒಂದು ಬಟ್ಟಲಿನಲ್ಲಿ ಸಕ್ಕರೆ, ಸ್ವಲ್ಪ ನಿಂಬೆ ರಸ, ಒಂದು ಚಮಚ ಜೇನುತುಪ್ಪ ಮತ್ತು ಸ್ವಲ್ಪ ರೋಸ್ ವಾಟರ್‍ನ್ನು ಸೇರಿಸಿ ಅದನ್ನು ಮಿಶ್ರಣ ಮಾಡಿ. ಅದನ್ನು ನಿಮ್ಮ ಒಣ ಚರ್ಮದ ಮೇಲೆ ಹಚ್ಚಿ. ಇದರಿಂದ ನಿಮ್ಮ ಒಣ ಚರ್ಮ ನಿವಾರಣೆಯಾಗುತ್ತದೆ.

    ಕಾಂತಿಯುತ ಚರ್ಮಕ್ಕೆ ಮೈದಾ: ನಿಮ್ಮ ತ್ವಚೆಯನ್ನು ಎಲ್ಲಾ ಕಾಲದಲ್ಲೂ ಕಾಂತಿಯುತವಾಗಿ ಇಟ್ಟುಕೊಳ್ಳಲು ಕಡಲೆ ಹಿಟ್ಟು ಅತ್ಯುತ್ತಮ ಮಾರ್ಗ. ಹಾಲಿನ ಕೆನೆ, ಅರಿಶಿನ ಹಾಗೂ ಜೇನುತುಪ್ಪಕ್ಕೆ ಸ್ವಲ್ಪ ಕಡಲೆ ಹಿಟ್ಟನ್ನು ಸೇರಿಸಿ ನಿಮ್ಮ ತ್ವಚೆಗೆ ಹಚ್ಚಿ. ಇದರಿಂದ ನಿಮ್ಮ ತ್ವಚೆ ಮೃದುವಾಗುತ್ತದೆ. ಇದನ್ನೂ ಓದಿ: ಖರ್ಜೂರ ತಿಂದು ಆರೋಗ್ಯವಾಗಿರಿ – ಪ್ರತಿದಿನ ಒಂದೊಂದು ತಿಂದರೂ ನೀವು ಗಟ್ಟಿಯಾಗ್ತೀರಿ

    ಗ್ರೀನ್ ಟೀ ಮತ್ತು ಲ್ಯಾವೆಂಡರ್: ಸಕ್ಕರೆ ಮಿಶ್ರಣದಲ್ಲಿ ಗ್ರೀನ್ ಟೀ ಮತ್ತು ಲ್ಯಾವೆಂಡರ್‌ನ್ನು ಸೇರಿಸಿ. ನಂತರ ಅದಕ್ಕೆ ಆಲಿವ್ ಅಥವಾ ತೆಂಗಿನ ಎಣ್ಣೆಯನ್ನು ಸೇರಿಸುವ ಮೂಲಕ ಸ್ಕ್ರಬ್ ಮಾಡಿ. ಚರ್ಮದ ಒಡೆದ ಭಾಗಕ್ಕೆ ಹಚ್ಚಿ. ಇದನ್ನೂ ಓದಿ: ಚಳಿಗಾಲದಲ್ಲಿ ಈ ತರಕಾರಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

  • ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ

    ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ

    ನವದೆಹಲಿ: ಕೋವಿನ್ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆ ಆಗಲ್ಲ ಎಂದು  ಕೇಂದ್ರ ಆರೋಗ್ಯ ಸಚಿವಾಲಯ(Union Ministry of Health and Family Welfare) ಸ್ಪಷ್ಟನೆ ನೀಡಿದೆ.

    ಕೋವಿನ್ ಬಳಕೆದಾರರ ಹೆಸರು, ಫೋನ್ ನಂಬರ್, ಕೊರೊನಾ ಪರೀಕ್ಷಾ ಫಲಿತಾಂಶ ಮತ್ತಿತರ ಮಾಹಿತಿ ಮಾರಾಟಕ್ಕೆ ಇಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೋವಿನ್ ಬಳಕೆದಾರರ ಯಾವ ಮಾಹಿತಿಯು ಸೋರಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ.

    20,000ಕ್ಕೂ ಅಧಿಕ ಭಾರತೀಯರ ಕೊರೊನಾ ಸಂಬಂಧಿತ ಖಾಸಗಿ ಮಾಹಿತಿ ಆನ್ ಲೈನ್‌ನಲ್ಲಿ ಸೋರಿಕೆಯಾಗಿದ್ದು, ಕೆಲ ಜಾಲತಾಣಗಳಲ್ಲಿ ಈ ದಾಖಲೆಗಳ ಹೆಸರು, ಫೋನ್ ನಂಬರ್, ಕೊರೊನಾ ಪರೀಕ್ಷಾ ಫಲಿತಾಂಶ ಮತ್ತಿತರ ಮಾಹಿತಿ ಮಾರಾಟಕ್ಕೆ ಇಡಲಾಗಿದೆ ಎಂದು ದೂರಲಾಗಿತ್ತು.

    ಭಾರತೀಯರ ಖಾಸಗಿ ಮಾಹಿತಿ ಸೋರಿಕೆ ಕುರಿತಾದ ವರದಿಗಳು ಸುಳ್ಳು ಎಂದಿರುವ ಆರೋಗ್ಯ ಸಚಿವಾಲಯ ಕೋವಿನ್ ಪೋರ್ಟಲ್‍ನಲ್ಲಿ ಭಾರತೀಯರ ವಿಳಾಸ ಮತ್ತು ಕೊರೊನಾ ಪರೀಕ್ಷಾ ಫಲಿತಾಂಶ ಮಾಹಿತಿ ಸಂಗ್ರಹಿಸುವುದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: 2022ರ ಟಿ20 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ – ಭಾರತಕ್ಕೆ ಮೊದಲ ಎದುರಾಳಿ ಪಾಕ್

    ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಮತ್ತು ಜಾಗೃತಿ ಮೂಡಿಸುವ ಮತ್ತು ಅದರ ಲಸಿಕೆ ಕಾರ್ಯಕ್ರಮದಲ್ಲಿ ಸರ್ಕಾರವು ಡಿಜಿಟಲ್ ತಂತ್ರಜ್ಞಾನಗಳ ಮೇಲೆ ಹೆಚ್ಚು ಅವಲಂಬಿತವಾಗಿದೆ. ಕೋವಿಡ್-19 ಸಂಬಂಧಿತ ಸೇವೆಗಳು ಮತ್ತು ಮಾಹಿತಿಗಾಗಿ ಆರೋಗ್ಯ ಸೇತು ಅಪ್ಲಿಕೇಶನ್ ಬಳಸಲು ಸರ್ಕಾರಿ ಇಲಾಖೆಗಳಲ್ಲಿ ಜನರನ್ನು ಕಡ್ಡಾಯಗೊಳಿಸುತ್ತವೆ ಎಂದು ತಿಳಿಸಿದ್ದಾರೆ.

  • ಆರೋಗ್ಯಕರವಾದ ಸೌತೆಕಾಯಿ ಇಡ್ಲಿ ಮಾಡುವ ಸರಳ ವಿಧಾನ ನಿಮಗಾಗಿ

    ಆರೋಗ್ಯಕರವಾದ ಸೌತೆಕಾಯಿ ಇಡ್ಲಿ ಮಾಡುವ ಸರಳ ವಿಧಾನ ನಿಮಗಾಗಿ

    ಬೆಳಗ್ಗೆಯ ಉಪಾಹಾರಕ್ಕೆ ಆರೋಗ್ಯಕರವೆಂದೇ ಪರಿಗಣಿಸಿರುವ ಇಡ್ಲಿಯನ್ನು ವಿಭಿನ್ನವಾಗಿ ಮಾಡುವುದು ಉಂಟು. ತಟ್ಟೆ ಇಡ್ಲಿ, ರವೆ ಇಡ್ಲಿ, ಸಾಮಾನ್ಯವಾಗಿ ಇಡ್ಲಿ ಅಥವಾ ರವೆ ಇಡ್ಲಿಯನ್ನು ಮಾಡುತ್ತೇವೆ. ಈ ಎರಡು ರುಚಿಯನ್ನು ಹೊರತು ಪಡಿಸಿ ಹೊಸ ರುಚಿ ಬೇಕೆನ್ನುವವರು ಸೌತೆಕಾಯಿ ಇಡ್ಲಿ ಸಹ ಟ್ರೈ ಮಾಡಬಹುದು.

    ಬೇಕಾಗುವ ಸಾಮಗ್ರಿಗಳು:
    * ಅಕ್ಕಿ -2 ಕಪ್
    * ಸೌತೆಕಾಯಿ – 1 ಕಪ್
    * ಅವಲಕ್ಕಿ- ಅರ್ಧ ಕಪ್
    * ತೆಂಗಿನಕಾಯಿ- ಅರ್ಧ ಕಪ್
    * ರವೆ ಅರ್ಧ ಕಪ್
    * ಮೊಸರು -ಅರ್ಧ ಕಪ್

    ಮಾಡುವ ವಿಧಾನ:

    * ಒಂದು ಬಾಣಲೆಯನ್ನು ತೆಗೆದುಕೊಂಡು ಅದಕ್ಕೆ ಅಕ್ಕಿ ಹಾಕಿ ಹುರಿದುಕೊಂಡು ನಂತರ ಅದನ್ನ ಆರಿಸಿ ನೀರು ಹಾಕಿ ನೆನೆಸಿಡಿ.
    * ಸೌತೆಕಾಯಿಯನ್ನು ಸಿಪ್ಪೆ ತೆಗೆದುಕೊಂಡು ತುರಿದುಕೊಂಡು ಹಾಕಿ. ಇದನ್ನೂ ಓದಿ:  ನೀವೂ ಮಾಡಿ ಗರಿಗರಿಯಾದ ಚಿಕನ್ ಪಕೋಡಾ

    * ಅಕ್ಕಿ, ಅವಲಕ್ಕಿ, ತೆಂಗಿನಕಾಯಿ ತುರಿ, ಉಪ್ಪು ಸೇರಿಸಿ ಹಿಟ್ಟು ಇಡ್ಲಿ ಹದಕ್ಕೆ ರುಬ್ಬಿಕೊಳ್ಳಬೇಕು.
    * ಒಂದು ಬಾಣಲೆಯನ್ನು ತೆಗೆದುಕೊಂಡು ತುಪ್ಪ ಹಾಕಿ ರವೆಯನ್ನು ಹುರಿದುಕೊಂಡು, ಆರಿಸಿಕೊಳ್ಳಿ.

    * ನಂತರ ತಯಾರಿಸಿಕೊಂಡ ಮಿಶ್ರಣಕ್ಕೆ ತುಪ್ಪದಲ್ಲಿ ಹುರಿದ ರವೆ ಮತ್ತು ಮೊಸರು, ಸೌತೆಕಾಯಿ ಸೇರಿಸಿ ಚನ್ನಾಗಿ ಮಿಶ್ರಣ ಮಾಡಿ. ಇದನ್ನೂ ಓದಿ: ಚಳಿಗೆ ಬಿಸಿ ಬಿಸಿಯಾದ ಇಡ್ಲಿ ಮಂಚೂರಿ ಸಖತ್ ಟೇಸ್ಟ್
    * ನಂತರ ಇಡ್ಲಿ ಪಾತ್ರೆಗೆ ಹಾಕಿ ಬೇಯಿಸಿದರೆ ರುಚಿ ರುಚಿಯಾದ ಸೌತೆಕಾಯಿ ದೋಸೆ ರೆಡಿ.

  • ಲತಾ ಮಂಗೇಶ್ಕರ್‌ಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಕೆ

    ಲತಾ ಮಂಗೇಶ್ಕರ್‌ಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಕೆ

    ಮುಂಬೈ: ಖ್ಯಾತಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ.

    ಜನವರಿ 8 ರಂದು ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗಾಯಕಿಯನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅಲ್ಲಿ ಅವರು ಐಸಿಯುನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    CORONA-VIRUS.

    ಗಾಯಕಿಯ ವಕ್ತಾರೆ ಅನುಷಾ ಶ್ರೀನಿವಾಸನ್ ಐಯ್ಯರ್ ಅವರು ಲತಾ ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ಅವರು, ಲತಾ ದೀದಿ ಸದ್ಯ ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ. ಪ್ರತಿ ಸಮದನಿ ಹಾಗೂ ಅವರ ತಂಡ ಚಿಕಿತ್ಸೆ ನೀಡುತ್ತಿದೆ. ಲತಾ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ ಎಂದು ಬರೆದುಕೊಂಡಿದ್ದಾರೆ.

    ಎರಡು ದಿನಗಳ ಹಿಂದೆ ಲತಾ ಅವರ ಆರೋಗ್ಯದ ಬಗ್ಗೆ ಊಹಾಪೋಗಳು ಹರಿದಾಡಿತ್ತು. ದಿನದಿಂದ ದಿನಕ್ಕೆ ಗಾಯಕಿ ಆರೋಗ್ಯ ಕ್ಷೀಣಿಸುತ್ತಿದೆ ಎಂಬುದಾಗಿ ಹಬ್ಬಿತ್ತು. ಇದರಿಂದ ಸಿಟ್ಟಿಗೆದ್ದ ವಕ್ತಾರೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಸದ್ಯ ಲತಾ ಅವರ ಆರೋಗ್ಯ ಸುಧಾರಿಸುತ್ತಿದೆ ಎಂಬುದಾಗಿ ಸ್ಪಷ್ಟನೆ ನೀಡಿದ್ದರು. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ

    ಇಂತಹ ಊಹಾಪೋಹಗಳಿಂದ ಲತಾ ಅವರ ಕುಟುಂಬಕ್ಕೆ ನೋವಾಗಿದೆ. ಲತಾ ದೀದಿ ಆರೋಗ್ಯ ಸುಧಾರಿಸುತ್ತಿದೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಪಂದಿಸುತ್ತಿದ್ದಾರೆ. ದಯಮಾಡಿ ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ. ಅಲ್ಲದೇ ವೈರಲ್ ಕೂಡ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದರು.

  • ಚಳಿಗಾಲದಲ್ಲಿ ಈ ತರಕಾರಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

    ಚಳಿಗಾಲದಲ್ಲಿ ಈ ತರಕಾರಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

    ಳಿಗಾಲದಲ್ಲಿ ಸೇವಿಸಬೇಕಾದ ಆಹಾರಕ್ಕೆ ಬಹಳಷ್ಟು ವ್ಯತ್ಯಾಸಗಳಿರುತ್ತವೆ. ವೈಜ್ಞಾನಿಕ ಕಾರಣಗಳನ್ನು ಅರಿತರೆ ಮಾತ್ರವೇ ಅವುಗಳ ಹಿಂದಿರುವ ಪ್ರಯೋಜನ ಪಡೆಯಲು ಸಾಧ್ಯವಾಗುತ್ತದೆ.

    * ಟೊಮೆಟೋ: ಹಲವಾರು ಪೋಷಕಾಂಶ ಗಳಿಂದ ಕೂಡಿದ್ದು, ಇದರಲ್ಲಿ ಶೇ.90ರಷ್ಟು ನೀರಿನಾಂಶವಿದೆ. ಇದು ದೇಹಕ್ಕೆ ಪೋಷಣೆ ನೀಡಲು ತುಂಬಾ ಸಹಕಾರಿ ಮತ್ತು ತೂಕ ಇಳಿಸಲು ಸಹಕಾರಿ ಆಗುತ್ತದೆ. ಇದನ್ನೂ ಓದಿ: ಖರ್ಜೂರ ತಿಂದು ಆರೋಗ್ಯವಾಗಿರಿ – ಪ್ರತಿದಿನ ಒಂದೊಂದು ತಿಂದರೂ ನೀವು ಗಟ್ಟಿಯಾಗ್ತೀರಿ

    * ಹೂಕೋಸು : ಇದರಲ್ಲಿ ಸಕ್ಕರೆಯಂಶ ಇರುವುದಿಲ್ಲ. ಹೀಗಾಗಿ, ಮಧುಮೇಹಿಗಳಿಗೆ ಉತ್ತಮವಾಗಿದೆ. ವಿಟಮನ್‌ ಸಿ, ನಾರಿನಂಶ, ಪೊಟ್ಯಾಶಿಯಂ  ಅಂಶವೂ ಚೆನ್ನಾಗಿರುತ್ತದೆ.

    * ಪಾಲಕ್ ಸೊಪ್ಪು: ಈ ಸೊಪ್ಪಿನಲ್ಲಿ ಅಧಿಕ ಪ್ರಮಾಣದ ಕರ್ಬೋಹೈಡ್ರೇಟ್ ಹೊಂದಿದ್ದರು ಇದರಲ್ಲಿ ಇರುವ ನಾರಿನಂಶವು ದೇಹಕ್ಕೆ ಅಗತ್ಯವಾದ ಪೋಷಣೆಯನ್ನು ನೀಡುತ್ತದೆ. ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ , ಕಬ್ಬಿಣಾಂಶ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಮೆಗ್ನಿಸಿಯಮ್ ಅಂತಹ ಜೀವಸತ್ವಗಳು ಮತ್ತು ಖನಿಜಗಳು ಅಧಿಕವಾಗಿರುತ್ತವೆ.  ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಕಾರಿಯಾಗಿದೆ.  ಇದನ್ನೂ ಓದಿ: ಮೆಂತೆ ಸೊಪ್ಪಿನ ಸೇವನೆಯಿಂದ ಸಿಗಲಿದೆ ಆರೋಗ್ಯಕರ ಅಂಶ

    * ಎಲೆ ಕೋಸು: ಮಧುಮೇಹಕ್ಕೆ ಇದು ಒಳ್ಳೆಯ ಮದ್ದೂ ಹೌದು. ಎಲೆಕೋಸು ಅಮೂಲ್ಯವಾದ ಖನಿಜಗಳನ್ನು ಹೊಂದಿರುತ್ತದೆ ಮತ್ತು ಚರ್ಮಕ್ಕೆ ತುಂಬಾ ಪೋಷಣೆಯನ್ನು ನೀಡುತ್ತದೆ.  ಇದು ವಿಟಮಿನ್ ಹೊಂದಿದೆ ಹೀಗಾಗಿ  ಚರ್ಮಕ್ಕೆ ಒಳ್ಳೆಯದು.

    * ಕ್ಯಾರೆಟ್: ಹಸಿ ಕ್ಯಾರೆಟ್ ಸೇವನೆ ಒಳ್ಳೆಯದು. ದೇಹಕ್ಕೆ ಹಲವು ವಿಟಾಮಿನ್‍ಗಳು ಸಿಕ್ಕಂತಾಗುತ್ತದೆ. ವಿಟಾಮಿನ್ ಎ ಇದರಲ್ಲಿ ಹೇರಳವಾಗಿರುವುದಲ್ಲದೆ, ಕ್ಯಾಲ್ಷಿಯಂ ಸಹ ಇದರಲ್ಲಿ ಹೇರಳವಾಗಿರುತ್ತವೆ.  ಕೊಬ್ಬಿನಂಶವನ್ನು ಕಡಿಮೆಗೊಳಿಸುವಲ್ಲಿ  ಕ್ಯಾರೆಟ್‍ ಸಹಾಯಕಾರಿಯಾಗುತ್ತದೆ. ಇದನ್ನೂ ಓದಿ:  ಚಳಿಗಾಲದಲ್ಲಿ ನೀವು ಸೇವಿಸುವ ಆಹಾರದಲ್ಲಿ ಈ ಅಂಶಗಳು ಇರಲಿ