Tag: health

  • ಹೆಸರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ- ಚಿಕಿತ್ಸೆ ಕೊಡಲು ವೈದ್ಯರೇ ಇಲ್ಲ

    ಹೆಸರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ- ಚಿಕಿತ್ಸೆ ಕೊಡಲು ವೈದ್ಯರೇ ಇಲ್ಲ

    ಯಾದಗಿರಿ: ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಯ ಆಗರ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿರುವ ಆಸ್ಪತ್ರೆ ಇದು ಹೆಸರಿಗೆ ಮಾತ್ರ ಸರ್ಕಾರಿ ಆಸ್ಪತ್ರೆಇಲ್ಲಿ ಚಿಕಿತ್ಸೆ ಕೊಡಲು ವೈದ್ಯರೇ ಇಲ್ಲವಾಗಿದೆ.

    ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳು ಹೈರಾಣಾಗುತ್ತಿದ್ದಾರೆ. ಇಲ್ಲಿಗೆ ವೈದ್ಯರು ಬರೋದು ಅಮಾವಾಸ್ಯೆ, ಹುಣ್ಣಿಮೆಗೊಮ್ಮೆಗಾಗಿದೆ. ಇಲ್ಲಿ ಕುಡಿಯಲು ನೀರು ಸಹ ಇಲ್ಲದ ಪರಿಸ್ಥಿತಿಯಿದೆ. ಸಿಬ್ಬಂದಿ ಬಳಕೆಗೆ ತಂದಿದ್ದ ಪೀಠೋಪಕರಣಗಳು ಆಸ್ಪತ್ರೆಯ ಮೂಲೆಗೆ ಬಿದ್ದಿವೆ. ನಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಯ ಆಗರವಾಗಿದ್ದರು ಆರೋಗ್ಯ ಇಲಾಖೆ ಮಾತ್ರ ಡೋಂಟ್ ಕೇರ್ ಎನ್ನುತ್ತಿದೆ. ಇದನ್ನೂ ಓದಿ:  ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್

    ಸರಿಯಾದ ಸಮಯಕ್ಕೆ ವೈದ್ಯರ ಬಾರದ ಹಿನ್ನೆಲೆ PHC( primary health care) ಕೇಂದ್ರ ಖಾಲಿ ಖಾಲಿಯಾಗಿ, ಆಸ್ಪತ್ರೆಯಲ್ಲಿ ನೋಡಲು ಸೀಗುವುದು ವೈದ್ಯರ ಚೇರ್ ಮಾತ್ರ. ಈ ಗ್ರಾಮದ ಜನ ವೈದ್ಯರನ್ನು ಕಂಡ್ರೆ ಅದೇ ಪುಣ್ಯ. ಈ PHC ಕೇಂದ್ರಕ್ಕೆ ಹತ್ತಾರು ಹಳ್ಳಿಗಳು ಒಳಪಡುತ್ತದೆ. ಬೇರೆ ಬೇರೆ ಊರುಗಳಿಂದ ಬಂದು ವೈದ್ಯರಿಗಾಗಿ ಕಾದು ಕಾದು ಸುಸ್ತಾಗಬೇಕು. ತುರ್ತು ಆರೋಗ್ಯ ಸೇವೆ ಎಂದು ನಂಬಿಕೊಂಡು ಬಂದರೆ ನರಕಯಾತನೆ ಕಟ್ಟಿಟ್ಟ ಬುತ್ತಿ. ರೋಗಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಇಲ್ಲ. ಹೆರಿಗೆಯಾದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಆಕೆಯ ಹಾರೈಕೆಗೆ ಯಾರೂ ಇಲ್ಲ. ಇದರಿಂದಾಗಿ ಸ್ಥಳೀಯರು ಬೇಸತ್ತು ಹೋಗಿದ್ದಾರೆ. ಇದನ್ನೂ ಓದಿ: ಆದಿವಾಸಿಗಳ ದುಸ್ಥಿತಿಗೆ ಕಾಂಗ್ರೆಸ್ ಕಾರಣ: ಮೋದಿ

     

  • ಚುಮು ಚುಮು ಚಳಿಯಲ್ಲಿ ಚರ್ಮದ ಆರೈಕೆಗೆ ಏನು ಮಾಡಬೇಕು ಗೊತ್ತಾ?

    ಚುಮು ಚುಮು ಚಳಿಯಲ್ಲಿ ಚರ್ಮದ ಆರೈಕೆಗೆ ಏನು ಮಾಡಬೇಕು ಗೊತ್ತಾ?

    ಳಿಗಾಲ ಆರಂಭವಾಗಿದ್ದು, ಜೀವನ ಶೈಲಿ ಬದಲಾವಣೆ ಆಗುತ್ತಾ ಹೋಗುತ್ತೆ. ಬೀರುವಿನಲ್ಲಿದ್ದ ಉಣ್ಣೆಯ ಬಟ್ಟೆಗಳು ಹೊರ ಬರುತ್ತವೆ. ಅಬ್ಬಾ ಎಷ್ಟು ಚಳಿ ಎಂದು ದಿನಕ್ಕೆ ಒಂದೆರೆಡು ಸಾರಿ ಹೆಚ್ಚು ಚಹಾ ಕುಡಿಯುವವರು ಕಾಣಸಿಗುತ್ತಾರೆ. ಚಳಿಗಾಲ ಆರಂಭವಾಗುತ್ತಲೇ ಎಲ್ಲ ವಯೋಮಾನದವರಲ್ಲಿ ಒಣ ತ್ವಚೆ (ಡ್ರೈ ಸ್ಕಿನ್) ಸಮಸ್ಯೆ ಆರಂಭವಾಗುತ್ತದೆ. ಇಷ್ಟು ಅಲ್ಲದೇ 3 ರಿಂದ 4 ತಿಂಗಳು ಪಾದಗಳು ಬಿರುಕು ಬಿಡಲು ಆರಂಭಿಸುತ್ತವೆ. ಈ ಸಮಸ್ಯೆಗಾಗಿ ಕೆಲವು ಟಿಪ್ಸ್​ ಈ ಕೆಳಗಿನಂತೆ ನೀಡಲಾಗಿದೆ.

    ತುಟಿ ಒಡೆಯುವುದು, ಪಾದಗಳು ಬಿರುಕು ಬಿಡುವುದು, ಕೂದಲು ಉದುರುವುದು ಸರ್ವಸಾಮಾನ್ಯವಾಗಿದೆ. ಹಲವರಿಗೆ ಚಳಿಗಾಗಲದಲ್ಲಿ ಈ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ನೀವು ಮಾರುಕಟ್ಟೆಯಲ್ಲಿ ಸಿಗುವ ಕ್ರೀಮ್ ಬಳಕೆ ಮಾಡಿರುತ್ತೀರ. ಆದರೆ ನೀವೆ ಮನೆಯಲ್ಲಿ ನಿಮ್ಮನ್ನು ನೀವು ಚಳಿಗಾಲದಲ್ಲಿ ಆರೈಕೆ ಮಾಡಿಕೊಳ್ಳಬಹುದಾಗಿದೆ. ಇದನ್ನೂ ಓದಿ:   ಪಂಜಾಬ್ ಚುನಾವಣೆಗೆ ಸೋನು ಸೂದ್ ಸೋದರಿ ಸ್ಪರ್ಧೆ – ಪಕ್ಷ ಇನ್ನೂ ಸಸ್ಪೆನ್ಸ್

    * ನೀರು, ಹೆಚ್ಚು ಹೆಚ್ಚು ಕುಡಿಯುವುದರಿಂದ ಚರ್ಮವನ್ನು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ. ಜ್ಯೂಸ್, ಬಿಸಿ ಸೂಪ್‍ಗಳನ್ನು ಆಗಾಗ ಕುಡಿಯುತ್ತಿರಬೇಕು.
    * ಪೌಷ್ಟಿಕಾಂಶಕ್ಕಾಗಿ ಪಾಲಕ, ಕ್ಯಾರೆಟ್ ಮತ್ತು ಬೀನ್ಸ್‌ನಂತಹ ಕ್ಯಾಲೋರಿಭರಿತ ತರಕಾರಿಗಳನ್ನು ಸೇವಿಸಿ. ಪಾಲಕ್ ನಂತಹ ಹಸಿರು ತರಕಾರಿಗಳಲ್ಲಿ ನೀರಿನಂಶ ಸಮೃದ್ಧವಾಗಿವೆ. ಆದ್ದರಿಂದ, ಹೆಚ್ಚು ಹಸಿರು ತರಕಾರಿಗಳನ್ನು ತಿನ್ನುವುದು ನಿಮಗೆ ಹೈಡ್ರೇಟೆಡ್ ಆಗಿರಲು ಸಹಾಯ ಮಾಡುತ್ತದೆ. ಇದನ್ನೂ ಓದಿ:   ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ

    * ಚಳಿಗಾದಲ್ಲಿ ಸ್ನಾನ ಮಾಡುವಾಗ ಸೋಪ್ ಬಳಸುವ ಬದಲಾಗಿ ಕಡಲೆ ಹಿಟ್ಟನ್ನು ಬಳಸಬಹುದಾಗಿದೆ.
    * ಅರಿಶಿಣ ಪುಡಿಯನ್ನು ಹಾಲಿನೊಂದಿಗೆ ಮಿಶ್ರಣ ಮಾಡಿ ಮುಖ ಮತ್ತು ಕೈ, ಕಾಲಗಳಿಗೆ ಹಚ್ಚಿ ತಣ್ಣಗಿನ ನೀರಿನಲ್ಲಿ ತೊಳೆಯುವುದರಿಂದ ಚರ್ಮದ ಆರೈಕೆ ಮಾಡಬಹುದಾಗಿದೆ.

    * ಹೆಚ್ಚಿನವರಲ್ಲಿ ಪಾದಗಳಲ್ಲಿ ಬಿರುಕು ಕಾಣಿಕೊಳ್ಳುತ್ತದೆ. ಹೀಗಾಗಿ ಅಂತಹವರು ರಾತ್ರಿ ಮಲಗುವಾಗ ಮತ್ತು ಹೊರಗೆ ಹೊಗುವ ವೇಳೆ ಸಾಕ್ಸ್ ಧರಿಸುವುದನ್ನು ರೂಢಿಮಾಡಿಕೊಳ್ಳುವುದು ಉತ್ತಮವಾಗಿದೆ.
    * ಎಣ್ಣೆ ಚರ್ಮವನ್ನು ಹೊಂದಿದವರು ರೋಸ್ ವಾಟರ್, ಕಡಲೆ ಹಿಟ್ಟನ್ನು ಮಿಶ್ರಣ ಮಾಡಿ ಹಚ್ಚುವುದರಿಂದ ಚರ್ಮ ಕಾಂತಿಯುಕ್ತವಾಗುತ್ತದೆ.

    * ತುಟಿ ಒಡೆಯುವುದು, ಒರಟಾಗುವಂತಿದ್ದರೆ ನೀವು ಬಾದಾಮಿ ಎಣ್ಣೆ, ಕೊಬ್ಬರಿ ಎಣ್ಣೆ, ಹಾಲಿನಕೆನೆಯನ್ನು ಹಚ್ಚಿ ಮಲಗುವ ಅಭ್ಯಾಸವನ್ನು ಚಳಿಗಾಲದಲ್ಲಿ ಮಾಡಿಕೊಳ್ಳಬೇಕು.
    * ಕೂದಲು ಉದುರುವ ಸಮಸ್ಯೆ ಚಳಿಗಾಗಲದಲ್ಲಿ ಕಾಣಿಸಿಕೊಳ್ಳುತ್ತದೆ ಹೀಗಾಗಿ ನೀವು ಕೊಬ್ಬರಿ ಎಣ್ಣೆ, ಹರಳೆಣ್ಣೆಯನ್ನು ತುಸು ಬಿಸಿಮಾಡಿಕೊಂಡು ಹಚ್ಚುವುದು ಒಳ್ಳೆಯದಾಗಿದೆ.

    * ಉಣ್ಣೆಯ ಬಟ್ಟೆಯನ್ನು ಧರಿಸುವುದು, ಕಿವಿಗೆ ಹತ್ತಿಯನ್ನು ಇಟ್ಟುಕೊಳ್ಳುವುದರಿಂದ ಚಳಿಯಿಂದ ದೇಹವನ್ನು ರಕ್ಷಣೆ ಮಾಡಿಕೊಳ್ಳಬಹುದಾಗಿದೆ.
    * ಸ್ವೆಟರ್, ಸ್ಕಾರ್ಪ್, ಸಾಕ್ಸ್ ಚಳಿಗಾಲದಲ್ಲಿ ಬಳಕೆ ಮಾಡುವುದು ಉತ್ತಮವಾಗಿದೆ.


    * ಚಳಿಗಾಲದಲ್ಲಿ ತೈಲ ಆಧಾರಿತ ಮಾಯಿಶ್ಚರೈಸ್‍ಗಳಾದ ಬಾದಾಮಿ ಎಣ್ಣೆ, ತೆಂಗಿನ ಎಣ್ಣೆ ಮತ್ತು ಆಲಿವ್ ಎಣ್ಣೆಯಂತಹ ನೈಸರ್ಗಿಕ ತೈಲಗಳು ನಿಮ್ಮ ಚರ್ಮವನ್ನು ತೇವಗೊಳಿಸಲು ಉತ್ತಮ ಮಾರ್ಗವಾಗಿದೆ.

  •  ವಾಯುಮಾಲಿನ್ಯಕ್ಕೆ ದಿಲ್ಲಿ ತಲ್ಲಣ

     ವಾಯುಮಾಲಿನ್ಯಕ್ಕೆ ದಿಲ್ಲಿ ತಲ್ಲಣ

    ನವದೆಹಲಿ: ಒಂದೆಡೆ ದೀಪಾವಳಿ ವೇಳೆ ಪಟಾಕಿ ಸಿಡಿತ, ಮತ್ತೊಂದೆಡೆ ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ (ಕೊಳೆ) ಸುಡುವಿಕೆಯಿಂದ ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯುಮಾಲಿನ್ಯ ಗಂಭೀರ ಸ್ಥಿತಿಗೆ ತಲುಪಿದೆ.

    ಕಳೆದ 5 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದೀಪಾವಳಿ ಹಬ್ಬದ ಬಳಿಕ ದೆಹಲಿ ವಾಯು ಗುಣಮಟ್ಟ ಸೂಚ್ಯಂಕ(ಎಕ್ಯೂಐ) ಅತಿ ಗಂಭೀರ ಎನ್ನಬಹುದಾದ 462ಕ್ಕೆ ನಿನ್ನೆ ಏರಿದೆ. ಇದರ ಬೆನ್ನಲ್ಲೇ ದಟ್ಟ ಧೂಳಿನ ಕಣಗಳನ್ನು ಚದುರಿಸುವ ಮತ್ತು ನಿಯಂತ್ರಿಸಲು ದೆಹಲಿ ಸರ್ಕಾರ ದೆಹಲಿ ಸರ್ಕಾರ 114 ನೀರಿನ ಟ್ಯಾಂಕರ್‍ಗಳ ಮುಖಾಂತರ ನಗರದ ರಸ್ತೆಗಳ ಮೇಲೆ ಚಿಮುಕಿಸುತ್ತಿದೆ. ಮತ್ತೊಂದೆಡೆ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ 92 ಕಟ್ಟಡಗಳ ನಿರ್ಮಾಣಕ್ಕೂ ತಡೆ ಒಡ್ಡಲಾಗಿದೆ. ಈ ನಡುವೆ ನಿನ್ನೆ ಗಾಳಿ ಬೀಸಿದ್ದು, ಇದರ ಪರಿಣಾಮ 449ಕ್ಕೆ ಎಕ್ಯುಐ ಸುಧಾರಿಸಿದೆ.

    ನವೆಂಬರ್ 7ರ ಬಳಿಕವಷ್ಟೇ ದಿಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು ವಾಯುಮಾಲಿನ್ಯದಿಂದ ಮುಕ್ತಿ ಹೊಂದಿ ಸಾಮಾನ್ಯ ಸ್ಥಿತಿಗೆ ಮರಳುವ ಸಾಧ್ಯತೆಯಿದೆ ಎಂದು ಹವಾಮಾನಮುನ್ಸೂಚನೆ ಮತ್ತು ಸಂಶೋಧನಾ ಸಂಸ್ಥೆ(ಎಸ್‍ಎಎಫ್‍ಎಆರ್) ಹೇಳಿದೆ.

    ಪಕ್ಕದ ವಸ್ತೂಗಳು ಕಾಣದ ಪರಿಸ್ಥಿತಿ: ಪಂಜಾಬ್, ಹರಿಯಾಣ ಸೇರಿ ಇತರ ರಾಜ್ಯಗಳಲ್ಲಿ ಬೆಳೆ ತ್ಯಾಜ್ಯಕ್ಕೆ ಬೆಂಕಿ ಹಚ್ಚುವಿಕೆ ಕಡಿಮೆ ಆಗುತ್ತಿದೆ ಎಂದು ಮೂರು ದಿನ ಹಿಂದಷ್ಟೇ ವರದಿಯೊಂದು ಹೇಳಿತ್ತು. ಆದರೆ ಇದರ ಬೆನ್ನಲ್ಲೆ ಸರ್ಕಾರದ ಸೂಚನೆ, ಕೋರ್ಟ್ ಆದೇಶಗಳನ್ನೂ ಮೀರಿ ದಿಲ್ಲಿ ಜನರು ದೀಪಾವಳಿ ಪಟಾಕಿಗಳನ್ನು ಹಾರಿಸಿದ್ದಾರೆ. ಇದರ ಪರಿಣಾಮ ಶುಕ್ರವಾರ, ಶನಿವಾರ ದಿಲ್ಲಿಯಾದ್ಯಂತ ಭಾರೀ ಹೊಗೆಯ ವಾತಾವರಣ ಕಂಡುಬಂತು. ಜನರು ಮನೆಗಳಲ್ಲಿ ವಾಯುಶುದ್ಧಿ ಯಂತ್ರ ಗಳನ್ನು ಬಂಸುತ್ತಿರು ದೇಶ್ಯ ಸಾಮನ್ಯವಾಗಿತ್ತು. ಇದನ್ನೂ ಓದಿ: ‘ಅಪ್ಪು ಜೊತೆ ರಾಜ್ ಸಮಾಧಿ ನೋಡಲು ಬರ್ತಿದ್ದ ನಾವು ಈಗ ಅವರದ್ದೇ ಸಮಾಧಿ ನೋಡೋಕೆ ಬರುವಂಗಾಯ್ತು

    ರಸ್ತೆಗಳಲ್ಲಿ ಪಕ್ಕದಲ್ಲಿರುವ ವಾಹನಗಳು ಕಾಣದಷ್ಟು ವಾತಾವರಣ ಮಸುಕಾಗಿತ್ತು ಎಂದು ವಾಹನಸವಾರರು ಹೇಳಿದ್ದಾರೆ. ಈ ಮಂದ ಬೆಂಕಿನ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಮತ್ತೆ ಸಮ-ಬೆಸ ವ್ಯವಸ್ಥೆ ಜಾರಿಗೆ ತರಬೇಕು ಎಂದು ಹಲವರು ಹೇಳಿದ್ದಾರೆ. 2020ರಲ್ಲಿ ದೀಪಾವಳಿ ಮಾರನೇ ದಿನ ಎಕ್ಯೂಐ ಪ್ರಮಾಣ 435, 2029ರಲ್ಲಿ 368, 2018ರಲ್ಲಿ 390, 2017ರಲ್ಲಿ 403, 2016ರಲ್ಲಿ ಎಕ್ಯೂಐ 445ರಷ್ಟು ಇತ್ತು. ಈ ದಾಖಲೆಯನ್ನು ಶುಕ್ರವಾರದ ಎಕ್ಯುಐ 469ಕ್ಕೆ ಏರಿ ಅಳಿಸಿ ಹಾಕಿದೆ.

     

    ಆರೋಗ್ಯಕ್ಕೆ ಅಪಾಯಕಾರಿ: ಈ ಬಗ್ಗೆ ಪ್ರತಿಕ್ರಿಯಿಸಿದ ಹೃದಯ ತಜ್ಞರಾದ ಅರುಣ್ ಮೊಹಾಂತಿ ಅವರು, ಇಂಥವಾಯು ಗುಣಮಟ್ಟವು ಜನರ ಆರೋಗ್ಯದ ಮೇಲೆ ಭಾರೀ ದುಷ್ಟರಿಣಾಮ ಬೀರಲಿದೆ. ಈಗಾಗಲೇ ಎದೆನೋವು ಮತ್ತು ಹೃದಯಕ್ಕೆ ಸಂಬಧಿಸಿದ ಅನಾರೋಗ್ಯಕ್ಕೆ ಇದು ದೊಡ್ಡಗಂಡಾಂತರವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

    ಆಗಿರುವುದುದೇನು?
    * ಪಟಾಕಿ ಸಿಡಿತ, ಕೃಷಿ ತ್ಯಾಜ್ಯ ಸುಡುವಿಕೆಯಿಂದ ಮಾಲಿನ್ಯ ಹೆಚ್ಚಳ
    * ದೆಹಲಿ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆಯ ವಾತಾವರಣ
    * ಪಕ್ಕದಲ್ಲಿ ಹೋಗುವ ವಾಹನವೂ ಸ್ಪಷ್ಟವಾಗಿ ಕಾಣಿಸದಂಥ ಪರಿಸ್ಥಿತಿ
    * 114 ಟ್ಯಾಂಕರ್ ಮೂಲಕ ನೀರು ಸಿಂಪಡಿಸಿ ಮಾಲಿನ್ಯ ತಡೆಗೆ ಯತ್ನ
    * ಮಾಲಿನ್ಯ ತಗ್ಗಸಿಲು 92 ಕಟ್ಟಡ ನಿರ್ಮಾಣಕ್ಕೂ ದಿಲ್ಲಿ ಸರ್ಕಾರ ತಡೆ

  • ಅನ್ನದಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು ಗೊತ್ತಾ?

    ಅನ್ನದಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು ಗೊತ್ತಾ?

    ಟ ಮಾಡಿದ್ದೇವೆ ಎನ್ನುವ ತೃಪ್ತಿ ಹೊಟ್ಟೆ ಮತ್ತು ನಾಲಿಗೆಗೆ ಬರಬೇಕಾದರೆ ಅನ್ನ ಇರಲೇ ಬೇಕು. ಅನ್ನ ತಿನ್ನುವುದರಿಂದ ದಪ್ಪಗಾಗುತ್ತೇವೆ. ಅನ್ನ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹಲವರು ಹೇಳುವುದನ್ನು ಕೇಳಿರಬಹುದು. ಆದರೆ ಇದು ತಪ್ಪು ಕಲ್ಪನೆಯಾಗಿದೆ. ಅನ್ನದಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನವನ್ನು ಕೇಳಿದರೆ ಖಂಡಿತಾ ಆಶ್ಚರ್ಯವಾಗುವುದು ಹೌದು.

    * ಅಕ್ಕಿ ಪ್ರಿಬಯಾಟಿಕ್ (Prebiotic) ಆಗಿದೆ ಎಂದು ನ್ಯೂಟ್ರಿಷನ್ ತಜ್ಞರು ನಂಬುತ್ತಾರೆ. ಅನ್ನ ಸೇವನೆಯಿಂದ ಹೊಟ್ಟೆ ಬೇಗ ತುಂಬುತ್ತದೆ. ಇದರಿಂದ ಜೀರ್ಣಾಂಗ ವ್ಯವಸ್ಥೆಯು ಕೂಡ ಬಲವಾಗಿರುತ್ತದೆ.

    * ಅನ್ನವನ್ನು ಮೊಸರು, ಕರಿ, ದ್ವಿದಳ ಧಾನ್ಯಗಳು, ತುಪ್ಪ ಮತ್ತು ಮಾಂಸದೊಂದಿಗೆ ಸೇವಿಸಿದರೆ, ಅದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು  ನಿಯಂತ್ರಣದಲ್ಲಿರಿಸುತ್ತದೆ.

    * ಅನ್ನ ಸೇವನೆ ಚೆನ್ನಾಗಿ ನಿದ್ರೆ ಮಾಡಲು ಸಹಾಯ ಮಾಡುತ್ತದೆ. ಯಾರಿಗಾದರೂ ಕೂದಲು ಉದುರುವಿಕೆಯ ದೂರು ಇದ್ದರೆ ಖಂಡಿತವಾಗಿಯೂ ಅನ್ನವನ್ನು ಸೇವಿಸಬೇಕು.

    * ಉತ್ತಮ ಹಾರ್ಮೋನ್ ಸಮತೋಲನದಲ್ಲಿ ಅನ್ನ ಪ್ರಮುಖ ಪಾತ್ರ ವಹಿಸುತ್ತದೆ. ಇದನ್ನೂ ಓದಿ:   ಮಕ್ಕಳ ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್

    ಅಕ್ಕಿ ತೊಳೆದ ನೀರಿನ ಪ್ರಯೋಜನ

    * ಅಕ್ಕಿಯ ನೀರಿನಲ್ಲಿ ನಾರಿನ ಅಂಶ ಹೆಚ್ಚಳವಾಗಿದೆ. ಇದು ಮಲಬದ್ಧತೆಯನ್ನು ತಡೆಯುತ್ತದೆ, ಇದರಿಂದಾಗಿ ಜೀಣಾರ್ಂಗ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.

     

    * ಅಕ್ಕಿಯ ನೀರು  ಕೂದಲಿನ ಸೌಂದರ್ಯ ಹೆಚ್ಚಿಸುವ ಉತ್ಕರ್ಷಣ ನಿರೋಧಕವಾಗಿದೆ.  ಇದನ್ನೂ ಓದಿ: 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ

    * ದೀರ್ಘಕಾಲದ ಆಯಾಸ ಅಥವಾ ಬಳಲಿಕೆಯಿಂದ ಬಳಲುತ್ತಿರುವವರಿಗೆ, ಬೇಯಿಸಿದ ಅನ್ನದಿಂದ ಪಡೆದ ಒಂದು ಲೋಟ ಅಕ್ಕಿ ನೀರು ನೀಡಿದರೆ ಸಾಕು ಅವರು ಆರಾಮಾಗಿ ಬಿಡುತ್ತಾರೆ.

  • ಫಟಾಫಟ್ ಅಂತಾ ಮಾಡಿ ರುಚಿಯಾದ ಸಿಗಡಿ ಮಸಾಲ 

    ಫಟಾಫಟ್ ಅಂತಾ ಮಾಡಿ ರುಚಿಯಾದ ಸಿಗಡಿ ಮಸಾಲ 

    ಸಿಗಡಿ ಮಸಾಲೆ ಚಿಕನ್ ಫ್ರೈಗಿಂತಲೂ ಹೆಚ್ಚು ಜನಪ್ರಿಯ ಖಾದ್ಯವಾಗಿದ್ದು ಎಲ್ಲೆ ಮನ ಗೆಲ್ಲುತ್ತದೆ. ಇದರ ರುಚಿ ಪ್ರತ್ಯೇಕವಾಗಿದ್ದು ಅನ್ನ ಚಪಾತಿ ರೋಟಿ ಹೀಗೆ ಪ್ರತಿಯೊಂದಕ್ಕೂ ಸೈಡ್‍ಡಿಶ್ ಆಗಿ ಮ್ಯಾಚ್ ಆಗುತ್ತದೆ. ಇದನ್ನು ಸುಲಭವಾಗಿ ತಯಾರಿಸಬಹುದು.

    sigdi masala

    ಬೇಕಾಗುವ ಸಾಮಗ್ರಿಗಳು:
    * ಸಿಗಡಿ
    * ಲಿಂಬೆ ರಸ – 3 ಚಮಚ
    * ರುಚಿಗೆ ತಕ್ಕಷ್ಟು ಉಪ್ಪು
    * ಬಿಳಿ ಕಾಳುಮೆಣಸು -1 ಚಮಚ
    * ಮೊಸರು – 2ಕಪ್
    * ಕೆಂಪು ಮೆಣಸು – 8
    * ದನಿಯಾ – 2ಚಮಚ
    * ಮೆಂತೆ ಬೀಜ – 1 ಚಮಚ
    * ಜೀರಿಗೆ – 1 ಚಮಚ
    * ಬೆಳ್ಳುಳ್ಳಿ-1
    * ಹುಣಸೆಹಣ್ಣು ನೀರು – ಸ್ವಲ್ಪ
    * ತುಪ್ಪ -2 ಚಮಚ
    * ಅಡುಗೆ ಎಣ್ಣೆ – 2 ಚಮಚ

    sigdi masala

    ಮಾಡುವ ವಿಧಾನ:
    * ಉಪ್ಪು, ಬಿಳಿ ಕಾಳುಮೆಣಸು, ಲಿಂಬೆ ರಸವನ್ನು ಸಿಗಡಿಗೆ ಲೇಪಿಸಬೇಕು
    * ಬಾಣಲೆಗೆ ನೆನೆದ ಸಿಗಡಿಯನ್ನು ಹಾಕಿ 3-4 ನಿಮಿಷಗಳಷ್ಟು ಕಾಲ ಸ್ವಲ್ಪ ಫ್ರೈ ಮಾಡಿಕೊಳ್ಳಬೇಕು
    * ಇದೇ ಸಮುದಲ್ಲಿ ಕೆಂಪು ಮೆಣಸು, ದನಿಯಾ, ಜೀರಿಗೆ, ಮೆಂತೆ ಬೀಜಗಳು, ಬೆಳ್ಳುಳ್ಳಿ ಮತ್ತು ಹುಣಸೆಹಣ್ಣು ಹಾಕಿ ರುಬ್ಬಿಕೊಳ್ಳಿ. ಇದನ್ನೂ ಓದಿ: ಮನೆಮಂದಿಗೆ ಇಷ್ಟವಾಗುವ ಫಿಶ್ ಫ್ರೈ ಮಾಡುವ ಸುಲಭ ವಿಧಾನ

    sigdi masala

    * ರುಬ್ಬಿದ ಮಸಾಲೆಯನ್ನು ಬಾಣಲೆಗೆ ಹಾಕಿ ಎಣ್ಣೆಯಲ್ಲಿ ಹಸಿ ಪರಿಮಳ ಹೋಗುವವರೆಗೆ ಬೇಯಿಸಿ.
    * ನೆನೆಸಿದ ಸಿಗಡಿ, ತುಪ್ಪ, ಅಗತ್ಯವಿದ್ದಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರ ಮಾಡಿಕೊಂಡು ಕಡಿಮೆ ಉರಿಯಲ್ಲಿ 10 ನಿಮಿಷಗಳ ಕಾಲ ಮುಚ್ಚಳ ಮುಚ್ಚಿ ಬೇಯಿಸಿದರೆ ರುಚಿಯಾದ ಸಿಗಡಿ ಮಸಾಲ ಅನ್ನದೊಂದಿಗೆ ಸವಿಯಲು ಸಿದ್ಧವಾಗುತ್ತದೆ. ಇದನ್ನೂ ಓದಿ: ಮಂಗಳೂರು ಸ್ಟೈಲ್ ಚಿಕನ್ ಸುಕ್ಕಾ ಮಾಡೋ ಸುಲಭ ವಿಧಾನ

  • ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣ

    ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣ

    – ನಟನಿಗೆ ಇಂಟರ್ನಲ್ ಬ್ಲೀಡಿಂಗ್

    ಬೆಂಗಳೂರು: ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ.

    ಕಳೆದ 6 ದಿನಗಳಿಂದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರದವರೆಗೂ ನಟನ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿತ್ತು. ಆದರೆ ಗುರುವಾರ ಡಯಾಲಿಸೀಸ್ ಮಾಡುವಾಗ ಹಾರ್ಟ್ ರೇಟ್ ಕಡಿಮೆಯಾಗಿದೆ. ಜೊತೆಗೆ ಇಂಟರ್ನಲ್ ಬ್ಲೀಡಿಂಗ್ ಕೂಡ ಆಗುತ್ತಿದೆ. ಹೀಗಾಗಿ ಮತ್ತೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿದೆ. ಮೊನ್ನೆವರೆಗೂ ಮಾತನಾಡುತ್ತಿದ್ದರು, ಆದರೆ ನಿನ್ನೆಯಿಂದ ಮತ್ತೆ ಆರೋಗ್ಯ ಕ್ಷೀಣಿಸಿದೆ. ಹೀಗಾಗಿ ಸ್ವಲ್ಪ ಚೇತರಿಸಿಕೊಂಡ ಬಳಿಕ ಡಯಾಲಿಸೀಸ್ ಮಾಡಲು ವೈದ್ಯರು ತಿಳಿಸಿದ್ದಾರೆ ಎಂದು ಸತ್ಯಜಿತ್ ಪುತ್ರ ಆಕಾಶ್ ಮಾಹಿತಿ ನೀಡಿದ್ದಾರೆ.

    ಕೆಲ ದಿನಗಳ ಹಿಂದೆ ಸತ್ಯಜಿತ್ ಅವರಿಗೆ ಜಾಂಡೀಸ್ ಆಗಿತ್ತು. ಈ ಬೆನ್ನಲ್ಲೇ ಹೃದಯಾಘಾತ ಕೂಡ ಸಂಭವಿಸಿತ್ತು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಎರಡು ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆ ಬಳಿಕ ಮತ್ತೆ ನಟನ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ಬೌರಿಂಗ್ ಭಾನುವಾರ ಆಸ್ಪತ್ರೆಗೆ ಮತ್ತೆ ದಾಖಲಿಸಲಾಗಿದೆ. ಇದನ್ನೂ ಓದಿ: ನನ್ನ ಹೆಸರಿನಲ್ಲಿ ದುಡ್ಡು ಕೇಳಿದರೆ ಕೊಡಬೇಡಿ: ಎಸ್. ನಾರಾಯಣ್

    ಈಗಾಗಲೇ ಗ್ಯಾಂಗ್ರಿನ್ ನಿಂದ ಎಡಗಾಲು ತೆಗೆಯಲಾಗಿದೆ. ಗ್ಯಾಂಗ್ರಿನ್ ಬಲಗಾಲಿಗೂ ಸ್ಪ್ರೆಡ್ ಆಗುತ್ತಿದ್ದು ತಕ್ಷಣ ಐಸಿಯುನಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿತ್ತು. ಬಿಪಿ ಮತ್ತು ಶುಗರ್ ಏರುಪೇರಾಗುತ್ತಿದ್ದು, ವಯಸ್ಸು 70 ದಾಟಿರುವ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಆದರೆ ವೈದ್ಯರು ಪ್ರಯತ್ನವನ್ನು ಮುಂದುವರಿಸಿದ್ದಾರೆ ಎಂದು ಪುತ್ರ ಆಕಾಶ್ ಈ ಹಿಂದೆ ತಿಳಿಸಿದ್ದರು. ಇದನ್ನೂ ಓದಿ: ರಸ್ತೆ ಗುಂಡಿ ಆಯ್ತು, ಈಗ ಪಾರ್ಕ್ ಹೊಂಡಕ್ಕೆ ಬಾಲಕ ಬಲಿ..!

  • ನವರಾತ್ರಿ ಉಪವಾಸ- ಈ ಆಹಾರಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

    ನವರಾತ್ರಿ ಉಪವಾಸ- ಈ ಆಹಾರಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

    ದೇಶದಲ್ಲಿ ಅತಿ ದೊಡ್ಡ ಹಬ್ಬವೆಂದು ಕರೆಯಲಾಗುವ ನವರಾತ್ರಿ ಈಗಾಗಲೇ ಪ್ರಾರಂಭವಾಗಿದೆ. ಭಾರತೀಯರು ಈ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಈ ಹಬ್ಬದ ವಿಶೇಷವೆಂದರೆ ಉಪವಾಸ ಇರುವುದು ಇಂತಹ ಸಮಯದಲ್ಲಿ ಯಾವೆಲ್ಲಾ ಆಹಾರವನ್ನು ಸೇವಿಸುವುದು ಸೂಕ್ತ ಎಂಬುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.

    ಶೇ.75ದಷ್ಟು ಹಸಿವೆಯಲ್ಲಿರಬೇಕು ಎಂಬುದು ಹಬ್ಬದ ಉಪವಾಸದ ನಿಯಮವಾಗಿದೆ. ಉಪವಾಸ ಕೈಗೊಳ್ಳುವಾಗ ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ಗೋಧಿ ಮತ್ತು ಅಕ್ಕಿ ಮೊದಲಾದ ಆಹಾರಗಳನ್ನು ಸೇವಿಸುವುದನ್ನು ದಸರಾ ಉಪವಾಸದಲ್ಲಿ ನಿಷೇಧಿಸಲಾಗಿದೆ. ಅಂತೆಯೇ ಹೊಟ್ಟೆ ತುಂಬಾ ತಿಂದು ಉಪವಾಸ ಮಾಡಬಾರದು, ಅದೇ ರೀತಿ ಹಸಿವೆಯ ನಿಶ್ಯಕ್ತಿಯಿಂದ ಕೂಡ ದೇವರನ್ನು ನೆನೆಯಬಾರದು.

    ಕೊರೊನಾ ವೈರಸ್ ಎಲ್ಲೆಡೆ ಇರುವುದರಿಂದ ಪ್ರತಿವರ್ಷದಂತೆ ಈ ಬಾರಿಯ ಹಬ್ಬ ಆಚರಿಸಲು ಆಗದೆ ಇರಬಹುದು ಆದರೆ ಹಬ್ಬದ ಆಚರಣೆ ಅನುಸಾರವಾಗಿ ಉಪವಾಸ ಇದ್ದೆ ಇರುತ್ತದೆ. ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಕೆಳಗೆ ಸೂಚಿಸಲಾದ ಆಹಾರಗಳ ಸೇವನೆ ಮಾಡಬಹುದಾಗಿದೆ.

    ಕುಂಬಳಕಾಯಿ: ಕುಂಬಳಕಾಯಿ ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ನವರಾತ್ರಿ ಉಪವಾಸದಲ್ಲಿ ಕುಂಬಳಕಾಯಿ ಬಳಕೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಉತ್ತಮವಾದ ಪೋಷಕಾಂಶವುಳ್ಳ ಗುಣವನ್ನು ಹೊಂದಿದೆ. ಬೀಟಾ ಕ್ಯಾರೋಟಿನ್ ಅಂಶ ಅಧಿಕ ಪ್ರಮಾಣದಲ್ಲಿ ಇರುವುದರಿಂದ ವಿಟಮಿನ್ ಎ ಪರಿವರ್ತಿಸುವ ಗುಣವನ್ನು ಹೊಂದಿದೆ. ವಿಟಮಿನ್ ಎ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಸೋಂಕು ತಗಲುವುದರಿಂದ ದೂರವಿರಲು ಸಹಾಯ ಮಾಡುತ್ತದೆ.

    ಎಳನೀರು: ರಿಬೋಫ್ಲಾವಿನ್, ಥಯಾಮಿನ್, ಪಿರಿಡಾಕ್ಸಿನ್, ನಿಯಾಸಿನ್ ಮತ್ತು ಫೋಲೇಟ್‍ಗಳಂತಹ ಪೋಷಕಾಂಶ ಮತ್ತು ಜೀವಸತ್ವವಗಳನ್ನು ಅಧಿಕ ಪ್ರಮಾಣದಲ್ಲಿ ಎಳನೀರು ಹೊಂದಿದೆ. ಎಳನೀರಿನಲ್ಲಿ ಆ್ಯಂಟಿವೈರಲ್ ಮತ್ತು ಬ್ಯಾಕ್ಟೀರಿಯಾವನ್ನು ವಿರೋಧಿಸುವ ಗುಣವನ್ನು ಹೊಂದಿದೆ. ಜ್ವರ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಪ್ರತಿನಿತ್ಯ ಒಮ್ಮೆಯಾದರೂ ಒಂದು ಎಳನೀರು ಸೇವನೆ ಮಾಡುವುದರಿಂದ ಉತ್ತಮ ಆರೋಗ್ಯವನ್ನು ನಮ್ಮದಾಗಿಸಿಕೊಳ್ಳ ಬಹುದಾಗಿದೆ.

    ಹುರಿದ ಕಮಲದ ಹೂವಿನ ಬೀಜ: ನವರಾತ್ರಿಯಲ್ಲಿ ವಿಶೇಷ ಆಹಾರಗಳ ಪಟ್ಟಿಯಲ್ಲಿ ಕಮಲದ ಹೂವಿನ ಬೀಜವು ಒಂದು. ಹಬ್ಬದ ದಿನದಂದು ಮಾಡುವ ಖೀರ್, ಸಬ್ಜಿ ಮಾಡಹುದು. ಹುರಿದ ಈ ಬೀಜಗಳನ್ನು ಸ್ವಲ್ಪ ಕಲ್ಲು ಉಪ್ಪು ಮತ್ತು ಮೆಣಸಿನಕಾಯಿಯೊಂದಿಗೆ ಸೇರಿಸಿದಾಗ ದೇಹದಲ್ಲಿ ಸೇರಿರುವ ವಿಷಕಾರಿ ಅಂಶವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಕೆಂಪು ರಕ್ತಕಣಗಳು ಹೆಚ್ಚಿಸುತ್ತದೆ. ಬಿಳಿ ರಕ್ತಕಣಗಳು ಮತ್ತು ಪ್ಲೇಟ್‍ಲೆಟ್‍ಗಳನ್ನು ಸಮಾನ ಪ್ರಮಾಣದಲ್ಲಿ ಇರುವಂತೆ ಮಾಡುತ್ತದೆ.

    ಬಾಳೆಹಣ್ಣಿನ ಬರ್ಫಿ: ಬಾಳೆಹಣ್ಣು ಬರಿದಾಗಿ ತಿನ್ನಲು ಮಾತ್ರವಲ್ಲ. ಅವುಗಳಿಂದ ರುಚಿಯಾದ ಬರ್ಫಿಯನ್ನು ತಯಾರಿಸಬಹುದಾಗಿದೆ. ಬಾಳೆಹಣ್ಣು, ಸಕ್ಕರೆ, ಹಾಲಿನಿಂದ ತಯಾರಿಸಿದ ಕ್ಯಾಚೆ ಕೆಲೆ ಕಿ ಬರ್ಫಿ ಸಾಕಷ್ಟು ಆರೋಗ್ಯಕರ ಮತ್ತು ಆರೋಗ್ಯಕರ ಅಂಶವನ್ನು ಹೊಂದಿದೆ. ವಿಟಮಿನ್ ಸಿ ಮತ್ತು ವಿಟಮಿನ್ ಬಿ ಪೋಷಕಾಂಶವನ್ನು ಹೊಂದಿದ್ದು ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಅವಶ್ಯ ಇರುವ ಖನಿಜ ಅಂಶಗಳನ್ನು ದೇಹಕ್ಕೆ ನೀಡುತ್ತದೆ.

    ಗೆಡ್ಡೆ ಗೆಣಸಿನ ಚಾಟ್: ನವರಾತ್ರಿ ಸಮಯದಲಿ ತಯಾರಿಸಿದ ಚಾಟ್‍ಗಳು ಹಬ್ಬಕ್ಕೆ ಬಲು ವಿಶೇಷ. ಗೆಣಸಿನಿಂದ ತಯಾರಿಸಿದ ಚಾಟ್ ನವರಾತ್ರಿ ಹಬ್ಬದ ವಿಶೇಷ ಖಾದ್ಯವಾಗಿದೆ. ನಿಂಬೆ, ಕಲ್ಲು, ಉಪ್ಪು ಮತ್ತು ಮಸಾಲೆಯೊಂದಿಗೆ ಸೇರಿಸಿ ಚಾಟ್ ತಯಾರಿಸಲಾಗುತ್ತದೆ. ವಿಟಮಿನ್ ಎ ಅಂಶವನ್ನು ದೇಹಕ್ಕೆ ಒದಗಿಸುತ್ತದೆ. ಕಡಿಮೆ ರಕ್ತ ಮಟ್ಟ ಇರುವವರಿಗೆ ಇದರ ಸೇವನೆಯಿಂದ ರಕ್ತಮಟ್ಟವನ್ನು ಸರಿದೂಗಿಸುವ ಅಂಶವನ್ನು ಹೊಂದಿದೆ. ರೋಗ ನಿರೋಧಕ ಅಂಶವನ್ನು ಅಧಿಕ ಪ್ರಮಾಣದಲ್ಲಿ ಹೊಂದಿದೆ.

    ಹುರುಳಿ ದೋಸೆ: ಹುರುಳಿ ಹಿಟ್ಟಿನಿಂದ ಮಾಡುವ ದೋಸೆಯು ಅತ್ಯಂತ ಪೋಷಕಾಂಶ ಹಾಗೂ ಶಕ್ತಿಯನ್ನು ನೀಡುತ್ತದೆ. ವ್ರತಾಚರಣೆಯಲ್ಲಿ ಇದನ್ನು ಸವಿದರೆ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದು. ಇದರಲ್ಲಿ ಸಮೃದ್ಧವಾದ ನಾರಿನಂಶವನ್ನು ಪಡೆದುಕೊಂಡಿದೆ.

    ಹಾಲಿನ ಉತ್ಪನ್ನ: ಹಾಲು, ಮೊಸರು, ಪನೀರ್, ಬೆಣ್ಣೆ, ತುಪ್ಪ, ಖೊಯಾ ಮತ್ತು ಮಂದಗೊಳಿಸಿದ ಹಾಲಿನಂತಹ ನೈಸರ್ಗಿಕ ಉತ್ಪನ್ನಗಳನ್ನು ಸೇವಿಸಬಹುದು. ಯಾವುದೇ ಮಂಗಳಕರ ಸಂದರ್ಭಕ್ಕೆ ಹಾಲಿನ ಉತ್ಪನ್ನಗಳನ್ನು ಪವಿತ್ರ ಎಂದು ಪರಿಗಣಿಸಲಾಗುತ್ತದೆ.

    ಒಣಫಲಗಳು: ಉಪವಾಸ ಸಮಯದಲ್ಲಿ ಒಣಫಲಗಳ ಸೇವನೆಯನ್ನು ಮಾಡಬಹುದಾಗಿದೆ. ಬಾದಾಮಿ, ಗೇರುಬೀಜ, ಕಡಲೆ ಕಾಳು, ಆಕ್ರೋಟ್, ಮೆಲನ್ ಕಾಳುಗಳು, ಪೈನ್ ನಟ್‍ಗಳು, ದ್ರಾಕ್ಷಿ, ಪಿಸ್ತಾವನ್ನು ಸೇವಿಸಬಹುದಾಗಿದೆ.

    ಹಣ್ಣುಗಳು ಮತ್ತು ತರಕಾರಿಗಳು: ಉಪವಾಸ ಸಮಯದಲ್ಲಿ ಹಸಿ ತರಕಾರಿಗಳು ಮತ್ತು ಹಣ್ಣುಗಳನ್ನು ಸೇವಿಸಬಹುದಾಗಿದೆ. ನವರಾತ್ರಿ ಸಮಯದಲ್ಲಿ ಸಾಮಾನ್ಯವಾಗಿ ಸೇವಿಸುವ ತರಕಾರಿಗಳು ಸೋರೆಕಾಯಿ, ಆಲೂಗೆಡ್ಡೆ, ಕುಂಬಳಕಾಯಿ, ಸಿಹಿ ಆಲೂಗೆಡ್ಡೆ, ಸೌತೆಕಾಯಿ, ಟೊಮೆಟೊ, ಕ್ಯಾರೆಟ್, ಆಪಲ್ಸ್, ದ್ರಾಕ್ಷಿಗಳು, ಪಪ್ಪಾಯ, ಪೇರಳೆ, ಪೀಚ್, ಬೆರ್ರಿ ಇತ್ಯಾದಿ ಯಾವುದೇ ಋತುಮಾನದಲ್ಲಿ ಸಿಗುವ ಹಣ್ಣುಗಳ ಸೇವನೆ ಮಾಡಬಹುದಾಗಿದೆ.

    ಉಪವಾಸ ಮಾಡುವುದರಿಂದ ದೈಹಿಕ, ಮಾನಸಿಕ ಮತ್ತು ಧಾರ್ಮಿಕ ಪ್ರಯೋಜನಗಳನ್ನು ಸಿಗುತ್ತದೆ. ನವರಾತ್ರಿಯ ಸಮಯದಲ್ಲಿ ಮಾಡುವ ಒಂಬತ್ತು ದಿನಗಳ ಕಾಲ ಉಪವಾಸ ದೇಹ, ಮನಸ್ಸು ಮತ್ತು ಆತ್ಮದ ಶುದ್ಧೀಕರಣಕ್ಕೆ ಕಾರಣವಾಗುತ್ತದೆ. ಹೆಚ್ಚಿನ ಧಾರ್ಮಿಕ ಮತ್ತು ಆರೋಗ್ಯಕ್ಕೆ ಪೂರಕವಾದ ಕಾರಣಗಳನ್ನು ಉಪವಾಸದೊಂದಿಗೆ ಥಳಕು ಹಾಕಿಕೊಂಡಿವೆ.

  • ಹಿರಿಯ ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ

    ಹಿರಿಯ ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ

    ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

    ಕೆಲ ದಿನಗಳ ಹಿಂದೆ ಸತ್ಯಜಿತ್ ಅವರಿಗೆ ಜಾಂಡೀಸ್ ಆಗಿತ್ತು. ಈ ಬೆನ್ನಲ್ಲೇ ಕಳೆದ ಶುಕ್ರವಾರ ಹೃದಯಾಘಾತ ಕೂಡ ಸಂಭವಿಸಿತ್ತು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು.

    ಎರಡು ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸದ್ಯ ನಟನ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ಬೌರಿಂಗ್ ಭಾನುವಾರ ಆಸ್ಪತ್ರೆಗೆ ಮತ್ತೆ ದಾಖಲಿಸಲಾಗಿದೆ. ಇದನ್ನೂ ಓದಿ: ಹುಟ್ಟಿದಾಗಲೇ ಮಗಳು ಸತ್ತೋಗಿದ್ರೆ ಚೆನ್ನಾಗಿತ್ತು ಅನ್ನಿಸುತ್ತಿದೆ: ಸತ್ಯಜಿತ್

    ಈಗಾಗಲೇ ಗ್ಯಾಂಗ್ರಿನ್ ನಿಂದ ಎಡಗಾಲು ತೆಗೆಯಲಾಗಿದೆ. ಗ್ಯಾಂಗ್ರಿನ್ ಬಲಗಾಲಿಗೂ ಸ್ಪ್ರೆಡ್ ಆಗುತ್ತಿದ್ದು ತಕ್ಷಣ ಐಸಿಯುನಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಬಿಪಿ ಮತ್ತು ಶುಗರ್ ಏರುಪೇರಾಗುತ್ತಿದ್ದು, ವಯಸ್ಸು 70 ದಾಟಿರುವ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಆದರೆ ವೈದ್ಯರು ಪ್ರಯತ್ನವನ್ನು ಮುಂದುವರಿಸಿದ್ದಾರೆ ಎಂದು ಪುತ್ರ ಆಕಾಶ್ ಜಿತ್ ಮಾಹಿತಿ ನಿಡಿದ್ದಾರೆ.

    ಇದೇ ವೇಳೆ ಕಳೆದ ಕೆಲ ವರ್ಷಗಳಿಂದ ಗ್ಯಾಂಗ್ರಿನ್ ನಿಂದ ಬಳಲುತ್ತಿರುವ ಕಾರಣ ಹಣದ ಸಮಸ್ಯೆ ಇರುವುದು ನಿಜ. ಆದರೆ ಜನರಿಂದ ಹಣ ಪಡೆಯುವುದು ಇಷ್ಟವಿಲ್ಲ. ಫಿಲ್ಮ್ ಚೇಂಬರ್, ಸರ್ಕಾರ ಅಥವಾ ಇನ್ಶೂರೆನ್ಸ್ ಕಡೆಯಿಂದ ಹಣ ಕೊಟ್ಟರೆ ಚಿಕಿತ್ಸೆಗೆ ಸಹಾಯವಾಗುತ್ತದೆ ಎಂದು ಆಕಾಶ್ ಅಳಲು ತೋಡಿಕೊಂಡಿದ್ದಾರೆ.

  • ಕೂದಲು ಉದುರುವ ಸಮಸ್ಯೆಗೆ ಕರಿಬೇವಿನ ಎಲೆಗಳಲ್ಲಿದೆ ಪರಿಹಾರ

    ಕೂದಲು ಉದುರುವ ಸಮಸ್ಯೆಗೆ ಕರಿಬೇವಿನ ಎಲೆಗಳಲ್ಲಿದೆ ಪರಿಹಾರ

    ಕೂದಲು ಉದುರುವಿಕೆಗೆ ಹಲವು ಕಾರಣಗಳಿವೆ. ಆದರೆ ನಾವು ಅಂಗಡಿಯಲ್ಲಿ ಸಿಗುವ ಎಲ್ಲಾ ಶಾಂಪೂ, ಹೇರ್ ಆಯಿಲ್‍ಗಳನ್ನು ಬಳಸಿರುತ್ತೇವೆ. ಆದರೆ ಕೆಲವು ಬಾರಿ ನಾವು ನಮ್ಮ ಮನೆಯಲ್ಲಿ ಇರುವ ಮನೆ ಮದ್ದುಗಳನ್ನು ಬಳಸುವುದರಿಂದ ಈ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಕೂದಲು ಉದುರುವ ಸಮಸ್ಯೆಗೆ ಪರಿಹಾರ ನಿಮ್ಮ ಮನೆಯ ಹಿತ್ತಲಿನಲ್ಲೇ ಇದೆ.

    ಕೂದಲು ಉದುರುವಿಕೆ ತಡೆಯಲು ಹಲವಾರು ಶಾಂಪೂ ಹಾಗೂ ಇತರ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಇದರ ಪ್ರಭಾವ ಮಾತ್ರ ತಾತ್ಕಾಲಿಕ. ಇದನ್ನು ನಾವು ದೀರ್ಘಕಾಲದ ತನಕ ಬಳಸಿದರೆ ಅದರಿಂದ ಬೇರೆ ರೀತಿಯ ಅಡ್ಡಪರಿಣಾಮಗಳು ಬರಬಹುದು. ಹೀಗಾಗಿ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ತುಂಬಾ ಒಳ್ಳೆಯದು.

    * ಒಂದು ಕಪ್ ತೆಂಗಿನ ಎಣ್ಣೆಯಲ್ಲಿ ಒಂದು ಹಿಡಿ ಕರಿಬೇವಿನ ಎಲೆಗಳನ್ನು ಕುದಿಸಿ. ನಂತರ ಇದನ್ನು ಫಿಲ್ಟರ್ ಮಾಡಿ, ಕೂದಲಿನ ಬೇರುಗಳಿಗೆ ವಾರಕ್ಕೆ ಎರಡು ಬಾರಿ ಮಸಾಜ್ ಮಾಡಿ. ನಂತರ ನಿಮ್ಮ ತಲೆಯನ್ನು ಶಾಂಪೂ ಬಳಸಿ ತೊಳೆಯಿರಿ. ವಾರಕ್ಕೆ ಎರಡು ಬಾರಿ ಇದನ್ನು ಮಾಡಿ.

    * ಕರಿಬೇವಿನ ಎಲೆಗಳು, ನೆಲ್ಲಿಕಾಯಿ ಮಿಕ್ಸಿಯಲ್ಲಿ ಪುಡಿ ಮಾಡಿ ನಿಮ್ಮ ಕೂದಲಿಗೆ ಹಚ್ಚಿ. ನಂತರ 1 ಗಂಟೆಯ ನಂತರ ತಲೆ ತೊಳೆಯಿರಿ.

    * ಕರಿಬೇವಿನ ಎಲೆಗಳನ್ನು ನುಣ್ಣಗೆ ರುಬ್ಬಿಕೊಳ್ಳಿ. ಇದನ್ನು ಒಂದು ಕಪ್ ಮೊಸರಿನೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿ. ನಂತರ ಒಂದು ಗಂಟೆ ನೆನೆಸಿ ಮತ್ತು ತೊಳೆಯಿರಿ. ಹೀಗೆ ಮಾಡುವುದರಿಂದ ಕೂದಲು ಉದುರುವುದನ್ನು ತಡೆಯುವುದಲ್ಲದೆ ತಲೆಹೊಟ್ಟು ಕೂಡ ತಡೆಯಬಹುದು.

    * ಎರಡು ಚಮಚ ಮೆಂತ್ಯೆ ಕಾಳುಗಳನ್ನು ತೆಗೆದುಕೊಂಡು ಅದನ್ನು ಹುಡಿ ಮಾಡಿಕೊಳ್ಳಿ. 10-15 ಕರಿಬೇವಿನ ಎಲೆಗಳನ್ನು ತೆಗೆದುಕೊಳ್ಳಿ. ಎರಡು ಚಮಚ ನೆಲ್ಲಿಕಾಯಿ ಹುಡಿ ಹಾಕಿ ಮಿಶ್ರಣ ಮಾಡಿ. ಈ ಎಲ್ಲವನ್ನು ಸರಿಯಾಗಿ ಮಿಶ್ರಣ ಮಾಡಿ ಮತ್ತು ಇದನ್ನು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ತಲೆಬುರುಡೆ ಮತ್ತು ಕೂದಲಿಗೆ ಪೇಸ್ಟ್ ಬಳಸಿಕೊಳ್ಳಿ. 30 ನಿಮಿಷ ಕಾಲ ಹಾಗೆ ಬಿಡಿ ಮತ್ತು ಇದರ ಬಳಿಕ ಕೂದಲು ತೊಳೆಯಿರಿ.

    * ಎರಡು ಕಪ್ ನೀರು ಬಳಸಿಕೊಳ್ಳಿ ಮತ್ತು 10-15 ಕರಿಬೇವಿನ ಎಲೆಗಳನ್ನು ಹಾಕಿ ಕುದಿಸಿ. ಸ್ವಲ್ಪ ಸಮಯ ಇದನ್ನು ಸರಿಯಾಗಿ ಕುದಿಸಿ. ಶಾಂಪೂ ಹಾಕಿಕೊಂಡು ಕೂದಲು ತೊಳೆದ ಬಳಿಕ ಈ ನೀರಿನಿಂದ ಮತ್ತೆ ಕೂದಲು ತೊಳೆಯಿರಿ.

  • ಖಾರವಾದ ಅಡುಗೆ ಇಷ್ಟ ಪಡುವವರಿಗಾಗಿ ಕ್ಯಾರೆಟ್ ಚಟ್ನಿ

    ಖಾರವಾದ ಅಡುಗೆ ಇಷ್ಟ ಪಡುವವರಿಗಾಗಿ ಕ್ಯಾರೆಟ್ ಚಟ್ನಿ

    ಕೊಬ್ಬರಿ, ಮಾವಿನಕಾಯಿ, ಬೆಳ್ಳುಳ್ಳಿ, ಟೊಮೆಟೊ ಚಟ್ನಿ ಎಲ್ಲರ ಮನೆಯಲ್ಲಿ ತಯಾರಿಸುತ್ತೇವೆ. ಆದರೆ ಇವತ್ತು ನಾವು ಖಾರ ಮತ್ತು ರುಚಿಯಾಗಿರುವ ಕ್ಯಾರೆಟ್ ಚಟ್ನಿ ಮಾಡುವುದರ ಕುರಿತು ತಿಳಿಯೋಣ. ಈ ಮಿಶ್ರಣವನ್ನು ಶುದ್ಧವಾದ ಗಾಜಿನ ಡಬ್ಬದಲ್ಲಿ ಹಾಕಿ ಮುಚ್ಚಳವನ್ನು ಗಟ್ಟಿಯಾಗಿ ಮುಚ್ಚಿ 2 ದಿನಗಳವರೆಗೆ ಹಾಗೇ ಇಡಬಹುದಾಗಿದೆ, ಹಾಗಾದ್ರೆ ಬನ್ನಿ ಈ ಚಟ್ನಿಯನ್ನು ಹೇಗೆ ಮಾಡುವುದುಯ ಎನ್ನುವುದನ್ನು ಇಲ್ಲಿ ಬೇಕಾಗುವ ಸಾಮಗ್ರಿಗಳ ಪಟ್ಟಿ ಜೊತೆಗೆ ವಿವರಿಸಲಾಗಿದೆ. ಇದನ್ನೂ ಓದಿ: ಪಡಿತರ ಅಕ್ಕಿ ಅಕ್ರಮವಾಗಿ ಗುಜರಾತ್‍ಗೆ ಸಾಗಣೆ- 8.10 ಲಕ್ಷದ ಅಕ್ಕಿ ವಶಕ್ಕೆ

    ಬೇಕಾಗುವ ಸಾಮಗ್ರಿಗಳು:
    * ಕ್ಯಾರೆಟ್ 3-4
    * ಕೆಂಪು ಮೆಣಸಿನ ಪುಡಿ- 2ಚಮಚ
    * ಕರಿಮೆಣಸಿನ ಪುಡಿ- 1 ಚಮಚ
    * ಶುಂಠಿ- ಸ್ವಲ್ಪ
    * ಬೆಳ್ಳುಳ್ಳಿ-2
    * ಬಾದಾಮಿ-2
    * ಗಸೆಗಸೆ- 2 ಚಮಚ
    * ಏಲಕ್ಕಿ-3
    * ವಿನಿಗರ್- 1 ಚಮಚ
    * ಚಮಚ ಸಕ್ಕರೆ- 1 ಚಮಚ

    Carrot Chutney

    ಮಾಡುವ ವಿಧಾನ:

    * ಚಿಕ್ಕ ತುಂಡಾಗಳಾಗಿ ಕ್ಯಾರೆಟ್‍ಗಳನ್ನು ಕತ್ತರಿಸಿ ಅದಕ್ಕೆ ಬೆಳ್ಳುಳ್ಳಿ ಮತ್ತು ಶುಂಠಿ, ಮೆಣಸಿನ ಪುಡಿ, ಕರಿಮೆಣಸಿನ ಪುಡಿ ಸೇರಿಸಬೇಕು.
    * ಈ ಮಿಶ್ರಣಕ್ಕೆ ಒಂದು ಕಪ್ ನೀರು ಹಾಕಿ ಕ್ಯಾರೆಟ್ ಬೆಂದು ಆ ಮಿಶ್ರಣದಲ್ಲಿ ನೀರು ಬತ್ತಿ ಗಟ್ಟಿ ಮಿಶ್ರಣವಾಗುವವರೆಗೆ ಬೇಯಿಸಬೇಕು.

    Carrot Chutney

    * ಈ ಮಿಶ್ರಣವನ್ನು ಸೌಟ್ ನಿಂದ ಕುಟ್ಟುತ್ತಾ ಪೇಸ್ಟ್ ರೀತಿ ಮಾಡಬೇಕು.
    * ಈಗ ಆ ಮಿಶ್ರಣಕ್ಕೆ ವಿನಿಗರ್, ಸಕ್ಕರೆ, ಉಪ್ಪು, ಗಸೆಗಸೆ, ಬಾದಾಮಿ, ಗೋಡಂಬಿ, ಏಲಕ್ಕಿ ಹಾಕಿ ಮಿಶ್ರಣ ಗಟ್ಟಿಯಾಗುವವರೆಗೆ ಬೇಯಿಸಿ. ಇದನ್ನೂ ಓದಿ: ಅನಧಿಕೃತ ರೆಸಾರ್ಟ್ ತೆರವುಗೊಳಿಸದಿದ್ದರೆ ನೀವೇ ಹೊಣೆ- 4 ಅಧಿಕಾರಿಗಳಿಗೆ ಕೊಪ್ಪಳ ಡಿಸಿ ನೋಟಿಸ್