Tag: health

  • ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಅವಕಾಶ

    ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಅವಕಾಶ

    ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಏಕ ಸದಸ್ಯ ಪೀಠ ಅವಕಾಶ ನೀಡಿದೆ.

    ಅನಾರೋಗ್ಯ ಹಿನ್ನೆಲೆ ತಮಗೆ ಜಾಮೀನು ನೀಡಬೇಕೆಂದು ನಟಿ ಸಂಜನಾ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅರವರಿದ್ದ ಪೀಠ, ವೈದ್ಯಕೀಯ ತಪಾಸಣೆಗೆ ನಡೆಸಿ, ಡಿಸೆಂಬರ್ 10ರೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ನಗರದ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಸಂಜನಾ ಆರೋಗ್ಯ ತಪಾಸಣೆ ವೇಳೆ ಮಾಧ್ಯಮಗಳ ಚಿತ್ರೀಕರಣಕ್ಕೆ ಅವಕಾಶ ನೀಡದಂತೆ ನ್ಯಾಯಪೀಠ ಸಹ ಸೂಚಿಸಿದೆ.

    ಸೆಪ್ಟೆಂಬರ್ 8ರಂದು ಸಂಜನಾ ಗಲ್ರಾನಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಇತ್ತ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ವಿಚಾರಣೆಯನ್ನ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷವನ್ನು ಕೂಡ ನಟಿ ಜೈಲಿನಲ್ಲಿ ಬರಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ನಟಿ ಸಂಜನಾ ಹೆಸರಲ್ಲಿದೆ ಬರೋಬ್ಬರಿ 11 ಬ್ಯಾಂಕ್ ಅಕೌಂಟ್!

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 4ರಂದು ತುಪ್ಪದ ಬೆಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಮೆಸೇಜ್, ಫೋಟೋಸ್ ಡಿಲೀಟ್ – ಸಂಜನಾಳ ಖತರ್ನಾಕ್ ಐಡಿಯಾಗೆ ಪೊಲೀಸ್ರು ಸುಸ್ತು

  • ದೆಹಲಿಯಲ್ಲಿ ವಾಯು ಮಾಲಿನ್ಯ- ಚೆನ್ನೈ, ಗೋವಾಗೆ ಸೋನಿಯಾ ಶಿಫ್ಟ್?

    ದೆಹಲಿಯಲ್ಲಿ ವಾಯು ಮಾಲಿನ್ಯ- ಚೆನ್ನೈ, ಗೋವಾಗೆ ಸೋನಿಯಾ ಶಿಫ್ಟ್?

    – ಎದೆ ನೋವು ಹಿನ್ನೆಲೆ ವೈದ್ಯರ ಸಲಹೆ

    ನವದೆಹಲಿ: ದೀರ್ಘ ಕಾಲದ ಎದೆ ನೋವಿನಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರಿಗೆ ರಾಷ್ಟ್ರ ರಾಜಧಾನಿ ದೆಹಲಿಯ ಹವಾಮಾನ ಯೋಗ್ಯವಲ್ಲ. ವಾಯು ಮಾಲಿನ್ಯದಿಂದ ಹೆಚ್ಚು ತೊಂದರೆಯಾಗಲಿದೆ. ಹೀಗಾಗಿ ಅವರನ್ನು ಇತರೆ ನಗರಗಳಿಗೆ ಶಿಫ್ಟ್ ಮಾಡಿ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಚಳಿಗಾಲದ ಹಿನ್ನೆಲೆ ಇದು ಇನ್ನೂ ವಿಪರೀತವಾಗಲಿದೆ. ಹೀಗಾಗಿ ಅವರನ್ನು ಕೆಲ ದಿನಗಳ ಕಾಲ ಇತರೆ ನಗರಗಳಿಗೆ ಸ್ಥಳಾಂತರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆ ಸೋನಿಯಾ ಗಾಂಧಿ ಅವರನ್ನು ಗೋವಾ ಇಲ್ಲವೆ ಚೆನ್ನೈಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಪಕ್ಷದ ಮೂಲವನ್ನು ಆಧರಿಸಿ ಮಾಧ್ಯಮ ವರದಿ ಮಾಡಿದೆ.

    ಶುಕ್ರವಾರ ಸಂಜೆ ಹೊತ್ತಿಗೆ ಅವರನ್ನು ಶಿಫ್ಟ್ ಮಾಡಬಹುದು. ಅವರೊಂದಿಗೆ ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ವಾದ್ರಾ ಸೇರುವ ಸಾಧ್ಯತೆಯಿದೆ. ಆಗಸ್ಟ್ ನಲ್ಲಿ ಸೋನಿಯಾ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಹೆಚ್ಚು ಔಷಧಿ ತೆಗೆದುಕೊಳ್ಳುತ್ತಿದ್ದಾರೆ. ಅವರ ದೀರ್ಘ ಕಾಲದ ಎದೆ ನೋವಿನ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿಯ ವಾಯು ಮಾಲಿನ್ಯದಿಂದಾಗಿ ಎದೆ ನೋವು ಕಡಿಮೆಯಾಗಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ.

    ನವದೆಹಲಿ ವಾಯು ಮಾಲಿನ್ಯದಿಂದಾಗಿ ಅವರಿಗೆ ಅಸ್ತಮಾ ಹಾಗೂ ಎದೆ ನೋವು ಹೆಚ್ಚಾಗಿದೆ. ಹೀಗಾಗಿ ನಗರವನ್ನು ಬಿಟ್ಟು ಬೇರೆಡೆಗೆ ಅವರನ್ನು ಸ್ಥಳಾಂತರಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

    ಬಿಹಾರ ಚುನಾವಣೆಯ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ನಡೆಸಬೇಕು ಎಂದು ಪಕ್ಷದ ಮುಖಂಡರು ಒತ್ತಾಯಿಸುತ್ತಿರುವ ಸಂದರ್ಭದಲ್ಲೇ ಅವರು ನಗರವನ್ನು ಬಿಟ್ಟು ಹೋಗುತ್ತಿದ್ದಾರೆ. ಇನ್ನೂ ಹಲವರು ಸಭೆ ಕರೆಯುವಂತೆ ಸೋನಿಯಾ ಗಾಂಧಿ ಅವರಿಗೆ ಪತ್ರವನ್ನು ಸಹ ಬರೆದಿದ್ದಾರೆ.

    ಜುಲೈ 30ರಂದು ಸಂಜೆ ಸೋನಿಯಾ ಗಾಂಧಿ ಅವರು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಸೆಪ್ಟೆಂಬರ್ 12ರಂದು ರೂಟೀನ್ ಚೆಕಪ್‍ಗೆ ಕೆಲ ದಿನಗಳ ಕಾಲ ವಿದೇಶಕ್ಕೆ ತೆರಳಿದ್ದರು. ಈ ವೇಳೆ ರಾಹುಲ್ ಗಾಂಧಿ ಸಹ ಅವರೊಂದಿಗೆ ತೆರಳಿದ್ದರು. ಹೀಗಾಗಿ ಇಬ್ಬರೂ ಸಹ ಅಧಿವೇಶನದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.

    ಕಳೆದ ವರ್ಷ ಜನವರಿಯಲ್ಲಿ ಸಹ ಸೋನಿಯಾ ಗಾಂಧಿ ಅವರು ಕೆಲ ದಿನಗಳ ಕಾಲ ಗೋವಾದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರು ಸೈಕಲ್ ಓಡಿಸಿದ್ದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

  • ತುಟಿಯ ಚರ್ಮ ಒಣಗುತ್ತಿದೆಯೇ? ಇಲ್ಲಿದೆ ಪರಿಹಾರ

    ತುಟಿಯ ಚರ್ಮ ಒಣಗುತ್ತಿದೆಯೇ? ಇಲ್ಲಿದೆ ಪರಿಹಾರ

    ಚೆಂದದ ತುಟಿ ಆಕರ್ಷಣೆಯ ಕೇಂದ್ರ ಬಿಂದು. ಬಿರುಕಿಲ್ಲದ ಸುಂದರವಾದ ಹೊಳೆಯುವ ಮೃದುವಾದ ತುಟಿ ಬೇಕು ಎನ್ನುವುದು ಮಹಿಳೆಯರ ಆಸೆ. ಮಹಿಳೆಯರು ತುಟಿಗಳ ಕುರಿತಾಗಿ ಹೆಚ್ಚಿನ ಕಾಳಜಿಯನ್ನು ವಹಿಸುತ್ತಾರೆ. ಕೆಲವೊಮ್ಮೆ ಒಣಗಿದ ತುಟಿ, ತುಟಿಯ ಚರ್ಮ ಕಿತ್ತು ಬರುವ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ತುಟಿ ಒಣಗಲು ಮತ್ತು ಚರ್ಮ ಕಿತ್ತುಬರಲು ಕಾರಣ ಮತ್ತು ಪರಿಹಾರವೇನು ಇಲ್ಲಿದೆ ಮಾಹಿತಿ.

    ತುಟಿಗಳು ಒಣಗುವುದು ಚಳಿಗಾಲದಲ್ಲಿ ಮಾತ್ರ ಎನ್ನುವ ಭಾವನೆ ತಪ್ಪು. ಬೇಸಿಗೆ ಕಾಲದಲ್ಲಿಯೂ ತುಟಿ ಡ್ರೈ ಆಗುತ್ತೆ. ತುಟಿಯ ಚರ್ಮವು ದೇಹದ ಇತರರ ಭಾಗಗಳ ಚರ್ಮಕ್ಕಿಂತ ತೆಳ್ಳಗೆ ಮತ್ತು ಮೃದುವಾಗಿರುತ್ತದೆ. ಹಾಗಾಗಿ ತುಟಿಯ ಚರ್ಮದ ಕುರಿತಾಗಿ ವಿಶೇಷ ಕಾಳಜಿಯನ್ನು ವಹಿಸಬೇಕಾಗುತ್ತದೆ.

    ತುಟಿಗಳಲ್ಲಿ ಕಡಿಮೆ ಪ್ರಮಾದ ತೈಲ ಗ್ರಂಥಿಗಳಿರುತ್ತವೆ. ಶೀತ, ಶುಷ್ಕಗಾಳಿ, ತುಟಿಯುನ್ನು ಒಣಗುವಂತೆ ಮಾಡುತ್ತದೆ. ಇದರಿಂದ ತುಟಿಯ ಚರ್ಮ ಒಣಗಿ ಸಿಪ್ಪೆಯಂತಾಗಿ ಕಿತ್ತು ಬರುತ್ತದೆ. ಚಳಿಗಾಲದಲ್ಲಿ ಹೆಚ್ಚಾಗಿ ತುಟಿಗಳು ಬಿರುಕು ಬಿಡುವುದು, ಚಪ್ಪಟೆಯಂತಾಗುವುದು ಸಹಜವಾಗಿದೆ. ಚಳಿಗಾಲದಲ್ಲಿ ತುಟಿ ಒಣಗಿದಂತಾಗಿ ಚರ್ಮ ಕಿತ್ತು ಬರುವುದು ಮಹಿಳೆಯರಿಗರೆ ಕಿರಿಕಿರಿಯನ್ನು ಉಂಟುಮಾಡುತ್ತದೆ. ಹೊರಗೆ ಹೋಗುವಾಗ ಮಹಿಳಿಯರು ಟೈಟಾನಿಯಂ ಡೈ ಆಕ್ಸೈಡ್ ಮತ್ತು ಜೆನಿಕ್ ಆಕ್ಸೈಡ್ ಅಂಶವನ್ನು ಹೊಂದಿರುವ ಸನ್‍ಸ್ಕ್ರೀನ್ ಬಳಕೆಯನ್ನು ಮಾಡುತ್ತಾರೆ. ಆದರೂ ತುಟಿಯ ಚರ್ಮ ಒಣಗುತ್ತದೆ.

    ಒಣಗಿದ ತುಟಿಗೆ ಕಾರಣಗಳೇನು?
    * ನೀರಿನ ಕೊರತೆ : ದೇಹದಲ್ಲಿ ನೀರಿನ ಅಂಶ ಕಡಿಮೆಯಾದಾಗ ತುಟಿಗಳು ಶುಷ್ಕತೆಯಿಂದ ಒಡೆಯುತ್ತದೆ. ರಕ್ತದ ಕೊರತೆ ಉಂಟಾದರೆ ತುಟಿಯು ಬಣ್ಣವನ್ನು ಕಳೆದುಕೊಂಡು ಬಿಳುಚಾಗಿ ಕಾಣಿಸಿಕೊಳ್ಳುತ್ತದೆ. ತುಟಿ ಒಣಗುವುದರಿಂದ ಆರೋಗ್ಯದಲ್ಲಿನ ಏರುಪೇರುಗಳು ಕಾಣಿಸಿಕೊಳ್ಳುತ್ತದೆ. ನೀರಿನ ಪ್ರಮಾಣ ಕಡಿಮೆಯಾಗಿರುವುದನ್ನು ತುಟಿ ಒಣಗುವುದರಿಂದ ಗುರುತಿಸಬಹುದಾಗಿದೆ. ಆದಷ್ಟು ನೀರನ್ನು ಸೇವಿಸುವುದರ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ.

    * ಅತಿಯಾದ ಧೂಮಪಾನ: ತುಟಿಗಳು ಕಂದು ಬಣ್ಣಕ್ಕೆ ತಿರುಗಬಹುದು ಅಥವಾ ಗಾಢವಾದ ಬಣ್ಣಕ್ಕೆ ತಿರುಗಬಹುದು. ಧೂಮಪಾನ, ಯಕೃತ್ತಿನಂತಹ ಸಮಸ್ಯೆ ಉಂಟಾದರೆ ತುಟಿಗಳು ಗಾಢವಾದ ಬಣ್ಣಕ್ಕೆ ತಿರುಗುತ್ತವೆ. ಇದ್ದಕ್ಕಿದ್ದಂತೆ ತುಟಿಯ ಬಣ್ಣ ಗಾಢ ಅಥವಾ ಕಂದು ಬಣ್ಣಕ್ಕೆ ತಿರುಗಿದರೆ ವೈದ್ಯರಲ್ಲಿ ಪರೀಕ್ಷಿಸಿಕೊಳ್ಳುವುದು ಉತ್ತಮ.

    * ಸೌಂದರ್ಯ ವರ್ಧಕಗಳ ಬಳಕೆ: ತುಟಿಗೆ ಲೇಪಿಸುವ ಬಣ್ಣ, ಲಿಪ್ ಬಾಮ್, ಔಷಧಿ ಸೇರಿದಂತೆ ಇನ್ನಿತರ ಸೌಂದರ್ಯ ವರ್ಧಕ ಉತ್ಪನ್ನಗಳಿಂದಲೂ ಉಂಟಾಗಬಹುದು. ಇಂತಹ ಅಲರ್ಜಿ ಮಾರಣಾಂತಿಕ ಕಾಯಿಲೆಯೂ ಆಗುವ ಸಾಧ್ಯತೆಗಳಿರುತ್ತವೆ. ಟೂತ್ ಪೇಸ್ಟ್ ಅಲರ್ಜಿಯಿಂದಲೂ ಸಹ ತುಟಿಯಲ್ಲಿ ಅಲರ್ಜಿ ಉಂಟಾಗಬಹುದು. ಆದ್ದರಿಂದ ಬಹುಬೇಗ ವೈದ್ಯರ ಸಲಹೆ ಪಡೆದ ನಿಮ್ಮ ಚರ್ಮಕ್ಕೆ ಅನುಗುಣವಾದ ಕ್ರೀಮ್ ಬಳಸುವುದು ಉತ್ತಮ.

    * ಕಬ್ಬಿಣಾಂಶದ ಕೊರತೆ: ತುಟಿಯ ಸಂದುಗಳಲ್ಲಿ ಸೀಳುವಿಕೆ ಮುಖ್ಯ ಕಾರಣ ಕಬ್ಬಿಣಾಂಶದ ಕೊರತೆ. ಸೇವಿಸುವ ಆಹಾರದಲ್ಲಿ ಕಬ್ಬಿಣಾಂಶದ ಕೊರತೆ ಹೆಚ್ಚಾದಾಗ ಇಂತಹ ಸಮಸ್ಯೆಗಳು ಉಂಟಾಗುತ್ತದೆ.

    ತುಟಿಯ ಆರೈಕೆ ಹೀಗಿರಲಿ:
    * ಬೆಳಗ್ಗೆ ಹಲ್ಲು ಉಜ್ಜಿದ ಬಳಿಕ ತುಟಿಗಳನ್ನು ಬ್ರಶ್ ನಿಂದ ಮೃದುವಾಗಿ ಉಜ್ಜಬೇಕು.
    * ವಾರಕ್ಕೊಮ್ಮೆ ತುಟಿಗೆ ನೈಸರ್ಗಿಕವಾಗಿ ತಯಾರಿಸಿದ ಸ್ಕ್ರಬ್ ಲೇಪಿಸಿಕೊಳ್ಳಬೇಕು.
    * ತುಟಿಗೆ ನಿಮ್ಮ ಆರೋಗ್ಯಕ್ಕೆ ಅನುಗುಣವಾದ ಲಿಪ್ ಬಾಮ್ ಬಳಸಿ. (ವೈದ್ಯರ ಸಲಹೆ ಪಡೆದುಕೊಳ್ಳುವುದು ಉತ್ತಮ)
    * ವಿಟಮಿನ್ ಎ ಹೇರಳವಾಗಿರುವ ಕ್ಯಾರೆಟ್, ಟೊಮೆಟೋ, ಹಸಿತರಕಾರಿ ಆಹಾರ ಮತ್ತು ಪ್ರತಿನಿತ್ಯ ದೇಹಕ್ಕೆ ಅಗತ್ಯ ಇರುವಷ್ಟು ನೀರನ್ನು ಸೇವಿಸಬೇಕು.

    * ಜೇನುತುಪ್ಪ, ಹಾಲಿನಕೆನೆಗಳಂತಹ ನೈಸರ್ಗಿಕ ಉತ್ಪನ್ನಗಳನ್ನು ತುಟಿಗೆ ಹಚ್ಚಬಹುದು. ಅಲೋವೆರಾ ಜೆಲ್ ತುಟಿಗೆ ಹಚ್ಚವುದರಿಂದ ಒಣಗಿ ಬಿರುಕು ಬಿಟ್ಟ ತುಟಿಗಳು ಮೃದುವಾಗುತ್ತದೆ. ಸವತೆಕಾಯಿ ಪೇಸ್ಟ್‍ಮಾಡಿ ತುಟಿಗೆ ಹಚ್ಚುವುದರಿಂದ ಕಪ್ಪಾದ ತುಟಿಯ ಬಣ್ಣ ಬದಲಾಗುತ್ತದೆ. ಕಡಿಮೆ ಗುಣಮಟ್ಟದ ಸೌಂದರ್ಯವರ್ಧಕಗಳನ್ನು ತುಟಿಗೆ ಬಳಸಬೇಡಿ.

    * ಮಲಗುವ ಮುನ್ನ ತುಟಿಗೆ ರೋಸ್ ವಾಟರ್ ಹಚ್ಚಬೇಕು.

  • ಬೆಳಗಿನ ಈ ಆಹಾರ ಕ್ರಮವನ್ನು ರೂಢಿಸಿ ತೂಕವನ್ನು ಇಳಿಸಿ

    ಬೆಳಗಿನ ಈ ಆಹಾರ ಕ್ರಮವನ್ನು ರೂಢಿಸಿ ತೂಕವನ್ನು ಇಳಿಸಿ

    ದೈನಂದಿನ ಆಹಾರ ಕ್ರಮದಲ್ಲಿ ಸಣ್ಣ ಪುಟ್ಟ ಬದಲಾವಣೆ ಮಾಡಿಕೊಂಡರೆ ಯಾರೂ ಬೇಕಾದರೂ ದೇಹದ ತೂಕವನ್ನು ಇಳಿಸಿಕೊಳ್ಳಬಹುದು.

    ತೂಕ ಇಳಿಸಿಕೊಳ್ಳಲು ವ್ಯಾಯಾಮ, ಜಿಮ್ ಹೀಗೆ ಕಸರತ್ತಿನ ಮೊರೆ ಹೋಗುವವರೇ ಹೆಚ್ಚು. ಕೆಲವೊಮ್ಮೆ ಊಟವನ್ನು ಬಿಟ್ಟು ಬಿಡುತ್ತಾರೆ. ಆದರೆ ಇದೊಂದು ತಪ್ಪು ಕಲ್ಪನೆ. ದೇಹದ ತೂಕವನ್ನು ಇಳಿಸಲು ಊಟ ಬಿಡುವ ಬದಲು ಹಿತಮಿತವಾಗಿ ಸೇವಿಸುವುದು ಒಳ್ಳೆಯದು ಎನ್ನುತ್ತಾರೆ ಆರೋಗ್ಯ ತಜ್ಞರು.

    ತೂಕ ಇಳಿಸಿಕೊಳ್ಳಲು ಇಚ್ಛಿಸುವವರಿಗೆ ಬೆಳಗ್ಗಿನ ಉಪಹಾರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮುಂಜಾನೆಯಿಂದ ಬೆಳಗ್ಗಿನ ಆಹಾರವನ್ನು ಬಿಟ್ಟು ಬಿಡುವುದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಬೆಳಗ್ಗೆ ನೀವು ಸೇವಿಸುವ ಆಹಾರ ನಮ್ಮ ಆರೋಗ್ಯಕ್ಕೆ ಹೊಂದಿಕೊಳ್ಳುತ್ತದೆಯಾ ಎಂದು ತಿಳಿದು ಸೇವನೆ ಮಾಡಬೇಕು. ಕಡಿಮೆ ಕ್ಯಾಲರಿ ಇರುವಂತಹ ಆಹಾರ ಪದಾರ್ಥಗಳನ್ನು ಸೇವಿಸಬೇಕು.

    ಬೆಳಗ್ಗಿನ ಉಪಾಹಾರ: ರಕ್ತದೊತ್ತಡದ ಸಮಸ್ಯೆ ಇಲ್ಲದಿದ್ದರೆ ಬೆಳಗ್ಗಿನ ಉಪಾಹಾರದಲ್ಲಿ ನೆನೆಸಿದ ಬಾದಾಮಿ ಮತ್ತು 1 ಕಪ್ ಕಾಫಿಯೊಂದಿಗೆ ಆರಂಭಿಸಿ. ಅದರೊಂದಿಗೆ ಒಂದು ಪ್ಲೇಟ್ ಉಪ್ಪಿಟ್ಟು ಸೇವಿಸಿ. ಅಥವಾ 2 ಬೇಯಿಸಿದ ಮೊಟ್ಟೆಗಳೊಂದಿಗೆ ಟೋಸ್ಟ್ ತಿನ್ನಬಹುದು. ಬೆಳಗ್ಗಿನ ಉಪಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವನೆ ಮಾಡಬೇಕು.

    ನೀರು: ರಾತ್ರಿಯಲ್ಲಿ ಹಲವು ಗಂಟೆಗಳ ಕಾಲ ಮಲಗಿರುತ್ತೀರಿ. ಹೀಗಾಗಿ ದೇಹದಲ್ಲಿನ ನೀರು ಹೀರಲ್ಪಟ್ಟಿರುತ್ತದೆ. ಬೆಳಗ್ಗೆ ನೀರು ಕುಡಿಯುವುದರಿಂದ ರಾತ್ರಿಯ ನೀರಿನ ಕೊರತೆ ನಿವಾರಣೆಯಾಗುತ್ತದೆ. ಹಾಗಾಗಿ ಬೆಳಗ್ಗೆ ಖಾಲಿ ಹೊಟ್ಟೆಗೆ ನೀರು ಕುಡಿಯಬೇಕು. ಪ್ರತಿನಿತ್ಯ ಬೇರೆ ಆಹಾರ ದೇಹಕ್ಕೆ ಹೋಗುವ ಮೊದಲು 2 ಗ್ಲಾಸ್ ಉಗುರು ಬೆಚ್ಚಗಿನ ನೀರು ಕುಡಿಯುವ ಮೂಲಕವಾಗಿ ದಿನವನ್ನು ಆರಂಭಿಸಿ. ದೇಹದ ಹೆಚ್ಚುವರಿ ಕೊಬ್ಬನ್ನು ಸಹ ಸುಲಭವಾಗಿ ಕಡಿಮೆ ಮಾಡಬಹುದು.

    ನೀರನ್ನು ಹಾಗೆಯೇ ಕುಡಿಯಬಹುದು ಅಥವಾ ನಿಂಬೆ ರಸ, ಜೇನುತುಪ್ಪವನ್ನು ಸೇರಿಸಿ ಕುಡಿಯಬಹುದಾಗಿದೆ. ದೇಹದಲ್ಲಿರುವ ವಿಷಕಾರಿ ಅಂಶವನ್ನು ಹೊರಹಾಕಲು ನೀರು ಸಹಾಯ ಮಾಡುತ್ತದೆ. ಚರ್ಮದ ಸಮಸ್ಯೆ, ಜೀರ್ಣಾಂಗ ಶುದ್ಧೀಕರಣ, ಜೀರ್ಣಕ್ರಿಯೆ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆ ನೀರಿನ ಸೇವನೆಯಿಂದ ನಿವಾರಣೆಯಾಗುತ್ತದೆ.

    ಆಹಾರ ಸೇವನೆ: ತೂಕ ಇಳಿಸುವ ವಿಚಾರಕ್ಕೆ ಬಂದಾಗ ಬೆಳಗ್ಗೆ ಯಾವ ಆಹಾರವನ್ನು ಸೇವಿಸುತ್ತೇನೆ ಎಂಬುದು ಮುಖ್ಯವಾಗಿರುತ್ತದೆ. ಕಳೆದ ರಾತ್ರಿ ನೀವು ಸೇವಿಸಿದ ಆಹಾರದ ಶಕ್ತಿ ಖಾಲಿಯಾಗಿರುತ್ತದೆ. ಇದು ನಿಮ್ಮ ಜೀರ್ಣಕ್ರೀಯೆಯನ್ನು ನಿಧಾನಗೊಳಿಸುತ್ತದೆ ಮತ್ತು ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ದೇಹಕ್ಕೆ ಶಕ್ತಿ ತುಂಬಲು ಬೆಳಗ್ಗೆ ಅಲ್ಪ ಪ್ರಮಾಣದಲ್ಲಿ ಉಪಹಾರ ಸೇವನೆ ಮಾಡಬೇಕು.

    ಕ್ಯಾಲೊರಿ: ಡಯಟ್ ಅಂದ ತಕ್ಷಣ ಮೊದಲು ನಮ್ಮ ಮನಸ್ಸಿಗೆ ಬರುವುದು ಕ್ಯಾಲೊರಿ. ಜಾಸ್ತಿ ಕ್ಯಾಲೊರಿ ಇರುವ ಪದಾರ್ಥಗಳನ್ನು ತಿಂದ್ರೆ ದಪ್ಪಾ ಆಗುತ್ತೇವೆ ಎನ್ನುವ ಆತಂಕ ಇರುತ್ತದೆ. ಹೆಚ್ಚಿನ ಕೊಬ್ಬಿನಾಂಶ ಇರುವ ಮತ್ತು ಸಕ್ಕರೆ ಅಂಶ ಇರುವ ಆಹಾರವನ್ನು ಮಿತವಾಗಿ ಸೇವನೆ ಮಾಡಿ. ಶೇ 25-30 ರಷ್ಟು ಮಾತ್ರ ಕ್ಯಾಲೊರಿಯನ್ನು ಒಳಗೊಂಡಿರುವ ಆಹಾರದ ಸೇವನೆಯನ್ನು ಮಾಡುವುದು ಉತ್ತಮವಾಗಿದೆ. ತುಪ್ಪ, ಬಾಳೆಹಣ್ಣು, ಮೊಟ್ಟೆ, ಮೋಸರನ್ನು ಸ್ವಲ್ಪ ಪ್ರಮಾಣದಲ್ಲಿ ಸೇವಿಸಬೇಕು.

    ಪ್ರೋಟಿನ್: ಬೆಳಗ್ಗಿನ ಉಪಹಾರದಲ್ಲಿ ಪ್ರೋಟೀನ್ ಭರಿತ ಆಹಾರವನ್ನು ಸೇವನೆ ಮಾಡಬೇಕು. ಮೊಟ್ಟೆ, ಮೊಸರು, ಧಾನ್ಯ ಹೀಗೆ ಪ್ರೋಟೀನ್ ಅಂಶ ಹೊಂದಿರುವ ಬೀಜಗಳು ಬೆಳಗ್ಗಿನ ಉಪಹಾರದಲ್ಲಿರ ಬೇಕು. ತರಕಾರಿ ಅತೀ ಹೆಚ್ಚು ಪ್ರೋಟೀನ್ ಅಂಶ ಹೊಂದಿರುವುದರಿಂದ ಬೇಯಿಸಿ ಅಥವಾ ಹಸಿಯಾಗಿ ಬೆಳಗ್ಗೆ ಉಪಹಾರದಲ್ಲಿ ಸೇವಿಸಬಹುದಾಗಿದೆ.

    ಫೈಬರ್: ತರಕಾರಿ, ಹಣ್ಣು ಮತ್ತು ನಾರಿನಾಂಶ ಇರುವ ಪದಾರ್ಥಗಳ ಸೇವನೆಯಿಂದ ಕಡಿಮೆ ಕ್ಯಾಲೊರಿ ದೇಹದಲ್ಲಿ ಉಂಟಾಗುತ್ತದೆ. ಬೆಳಗ್ಗಿನ ಉಪಹಾರದಲ್ಲಿ ಕನಿಷ್ಟ 8 ಗ್ರಾಂ ಫೈಬರ್ ಇರುವ ಆಹಾರದ ಸೇವನೆ ಇಂದ ಕರುಳಿನಲ್ಲಿ ಕರಗಬಲ್ಲ ಆರೋಗ್ಯಕರ ಬ್ಯಾಕ್ಟೀರಿಯಾಗಳನ್ನು ಉತ್ಪತ್ತಿಮಾಡುತ್ತದೆ. ಹಸಿವನ್ನು ಕಡಿಮೆ ಮಾಡಿ ಜೀರ್ಣಕ್ರಿಯೆ ಉತ್ತಮವಾಗುವುದರ ಜೊತೆಗೆ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

    ಯೋಗಾಸನ: ದೇಹದ ತೂಕ ಇಳಿಸಲು ಹೊರಗೆ ವಾಕಿಂಗ್ ಹೋಗಲು, ಜಿಮ್ ಗೆ ಹೋಗಲು, ವ್ಯಾಯಾಮ ಮಾಡಲು ಸಮಯವಿಲ್ಲ ಎನ್ನುವವರು ಮನೆಯಲ್ಲೇ ಪ್ರತಿನಿತ್ಯ 20 ನಿಮಿಷ ಬೆಳಗ್ಗೆ ಯೋಗಾಸನ ಮಾಡುವುದರಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳಬಹುದು.

    ತೂಕ ಇಳಿಸಿಕೊಳ್ಳಲು ಪ್ರತಿಯೊಬ್ಬರು ಯೋಜನೆಯನ್ನು ರೂಪಿಸುತ್ತಾರೆ. ಆದರೆ ಅದನ್ನು ಫಾಲೋ ಮಾಡುವಷ್ಟು ಸಮಯ, ತಾಳ್ಮೆ ಇರುವುದಿಲ್ಲ. ನಾವು ರೂಢಿಸಿಕೊಂಡಿರುವ ಆಹಾರ ಕ್ರಮ ನಮ್ಮ ದೇಹದ ಆಕಾರವನ್ನು ಹದಗೆಡಿಸಿದೆ ಎಂದು ಹೇಳಿದರೆ ತಪ್ಪಾಗಲಾರದು. ಹಾಗಾಗಿ ಈ ಮೇಲಿನ ಆಹಾರ ಕ್ರಮವನ್ನು ಫಾಲೋಮಾಡಿ ಸದೃಢ ದೇಹವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ.

  • ಚೇತರಿಸಿಕೊಳ್ಳುತ್ತಿದ್ದೇನೆ- ಆಪರೇಷನ್ ಬಳಿಕ ಕಪಿಲ್ ದೇವ್ ಟ್ವೀಟ್

    ಚೇತರಿಸಿಕೊಳ್ಳುತ್ತಿದ್ದೇನೆ- ಆಪರೇಷನ್ ಬಳಿಕ ಕಪಿಲ್ ದೇವ್ ಟ್ವೀಟ್

    ನವದೆಹಲಿ: ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ತಾವು ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

    ಶುಕ್ರವಾರ ಮಧ್ಯಾಹ್ನ ಹೃದಯಾಘಾತದಿಂದ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವೈದ್ಯರು ತಕ್ಷಣವೇ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಿದ್ದರು. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದು, ಮುಂದಿನ ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಕಪಿಲ್ ದೇವ್ ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಸೇರಿದಂತೆ ಸಿನಿಮಾ ತಾರೆಯರು, ರಾಜಕೀಯ ನಾಯಕರು, ಕ್ರೀಡಾ ತಾರೆಯರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡು ಬೇಗ ಚೇತರಿಸಿಕೊಳ್ಳುವಂತೆ ಪ್ರಾರ್ಥನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ಆರೋಗ್ಯದ ಕುರಿತು ಸ್ಪಷ್ಟನೆ ನೀಡಿರುವ ಕಪಿಲ್ ದೇವ್ ಅವರು ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯ ನನ್ನ ಆರೋಗ್ಯ ಉತ್ತಮವಾಗಿದ್ದು, ನನ್ನ ಕ್ಷೇಮಕ್ಕಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ ಎಂದು ಕೃತಜ್ಞತೆ ತಿಳಿಸಿದ್ದಾರೆ.

    ಟೀಂ ಇಂಡಿಯಾ ಪರ 131 ಟೆಸ್ಟ್ ಪಂದ್ಯಗಳನ್ನು ಆಡಿರುವ ಕಪಿಲ್ ದೇವ್ ಅವರು, 5,248 ರನ್ ಗಳಿಸಿದ್ದು, 8 ಶತಕಗಳನ್ನು ಸಿಡಿಸಿದ್ದಾರೆ. 225 ಏಕದಿನ ಪಂದ್ಯಗಳಲ್ಲಿ 3,783 ರನ್ ಗಳಿಸಿದ್ದಾರೆ. ಅಲ್ಲದೇ ಟೆಸ್ಟ್ ನಲ್ಲಿ 434 ವಿಕೆಟ್, ಏಕದಿನ ಮಾದರಿ ಕ್ರಿಕೆಟ್‍ನಲ್ಲಿ 253 ವಿಕೆಟ್ ಪಡೆದುಕೊಂಡಿದ್ದಾರೆ. 1959 ಜನವರಿ 6 ರಂದು ಚತ್ತೀಸ್‍ಗಢದಲ್ಲಿ ಜನಿಸಿದ್ದ ಅವರು, 1978 ರ ಅಕ್ಟೋವರ್ ನಲ್ಲಿ ಪಾಕಿಸ್ತಾನ ವಿರುದ್ಧ ಟೆಸ್ಟ್ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದರು.

    ಕಪಿಲ್ ದೇವ್ ಅವರ ಬದುಕಿನ ಕಥೆ ಆಧಾರವಾಗಿ ಬಾಲಿವುಡ್‍ನಲ್ಲಿ ’83’ ಸಿನಿಮಾ ನಿರ್ಮಾಣವಾಗಿದ್ದು, ಚಿತ್ರದಲ್ಲಿ ಕಪಿಲ್ ದೇವ್ ಪಾತ್ರದಲ್ಲಿ ರಣ್‍ವೀರ್ ಸಿಂಗ್ ನಟಿಸಿದ್ದಾರೆ. ಅಲ್ಲದೇ ಕಪಿಲ್ ಅವರ ಪತ್ನಿ ರೋಮಿ ಭಾಟಿಯಾ ಆಗಿ ದೀಪಿಕಾ ಪಡುಕೋಣೆ ಅಭಿನಯಿಸಿದ್ದಾರೆ. ಕೊರೊನಾ, ಲಾಕ್‍ಡೌನ್ ಕಾರಣದ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆ ತಡವಾಗಿದೆ.

  • ಎಸ್‍ಪಿಗೆ ಧನ್ಯವಾದ ಸಲ್ಲಿಸಿ, ಲವ್ ಯೂ ಸರ್ ಅಂದ್ರು ಸಲ್ಮಾನ್ ಖಾನ್

    ಎಸ್‍ಪಿಗೆ ಧನ್ಯವಾದ ಸಲ್ಲಿಸಿ, ಲವ್ ಯೂ ಸರ್ ಅಂದ್ರು ಸಲ್ಮಾನ್ ಖಾನ್

    – ಶೀಘ್ರ ಗುಣಮುಖರಾಗುವಂತೆ ಹಾರೈಕೆ

    ನವದೆಹಲಿ: ಕಳೆದ 24 ಗಂಟೆಯಿಂದ ಗಾನಗಾರುಡಿಗ ಎಸ್‍ಪಿ ಬಾಲಸುಬ್ರಹ್ಮಣ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಶೀಘ್ರ ಗುಣಮುಖರಾಗುವಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾರೈಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ನಟ ಮೊದಲು ಎಸ್‍ಪಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

    ಟ್ವೀಟ್‍ನಲ್ಲೇನಿದೆ?
    ಬಾಲಸುಬ್ರಹ್ಮಣ್ಯಂ ಸರ್, ನಿಮ್ಮ ಆರೋಗ್ಯ ಬೇಗ ಸುಧಾರಿಸಲಿ ಎಂದು ನಾನು ಮನಸಾರೆ ಹಾರೈಸುತ್ತೇನೆ. ನೀವು ನನಗೋಸ್ಕರ ಹಾಡಿರುವ ಎಲ್ಲ ಹಾಡುಗಳು ನನಗೆ ತುಂಬಾ ಸ್ಪೆಷಲ್ ಆಗಿವೆ. ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್, ಲವ್ ಯೂ ಸರ್ ಎಂದು ಬರೆದುಕೊಂಡಿದ್ದಾರೆ.

    90ರ ದಶಕದಲ್ಲಿ ಎಸ್‍ಪಿಬಿ ಅವರು ಸಲ್ಮಾನ್ ಖಾನ್ ಸಿನಿಮಾಗಳಿಗೆ ದನಿಯಾಗುತ್ತಿದ್ದರು. ತುಮ್ ಸೆ ಮಿಲ್ನೆ ಕಿ ತಮನ್ನಾ ಹೈ, ಕಭಿ ತು ಚಾಲಿಯಾ, ಲಗ್ತಾ ಹೈ, ಪೆಹ್ಲಾಪ್ಯಾರ್ ಹೈ, ದಿಲ್ ದಿವಾನಾ ಹೀಗೆ ಸಲ್ಮಾನ್ ಸಿನಿಮಾದ ಅನೇಕ ಹಾಡುಗಳನ್ನು ಎಸ್‍ಪಿಬಿ ಹಾಡಿದ್ದಾರೆ.

    ಕೊರೊನಾ ಹಿನ್ನೆಲೆಯಲ್ಲಿ ಆಗಸ್ಟ್ 5ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್‍ಪಿಬಿ ಆರೋಗ್ಯ ದಿಢೀರ್ ಗಂಭೀರವಾಗಿದೆ. 24 ಗಂಟೆಗಳಿಂದ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ನಿನ್ನೆ ಸಂಜೆ ಆಸ್ಪತ್ರೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿತ್ತು. ಎಸ್‍ಪಿಬಿ ಆರೋಗ್ಯ ಚಿಂತಾಜನಕವಾಗಿದೆ ಎಂಬ ಮಾಹಿತಿ ತಿಳಿದ ಕೂಡಲೇ ನಟ ಕಮಲ್ ಹಾಸನ್ ಆಸ್ಪತ್ರೆಗೆ ಭೇಟಿ ನೀಡಿದರು.

    ಕೆಲವು ದಿನಗಳ ಹಿಂದೆ ವಿಡಿಯೋ ಪೋಸ್ಸ್ ಮಾಡಿದ್ದ ಎಸ್‍ಪಿಬಿ ಪುತ್ರ ಚರಣ್, ಅಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್ ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು ಕುಳಿತುಕೊಳ್ಳುತ್ತಿದ್ದು, ವೈದ್ಯರ ಸಹಾಯದ ಮೇರೆಗೆ ಪ್ರತಿ ದಿನ 20 ನಿಮಿಷಗಳ ಕಾಲ ಕುಳಿತುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.

    ತಂದೆಯ ಆರೋಗ್ಯ ಸುಧಾರಣೆಯಾಗುತ್ತಿದೆ. ಅವರು ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಸ್ಪತ್ರೆಯಲ್ಲಿ ಆಚರಿಸಿದ್ದಾರೆ. ಈಗ ಆಸ್ಪತ್ರೆಯಲ್ಲೇ ಎಸ್‍ಪಿಬಿ ಟೆನ್ನಿಸ್ ಮತ್ತು ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾರೆ ಎಂದು ಚರಣ್ ತಿಳಿಸಿದ್ದರು.

  • ಎಸ್‍ಪಿಬಿ ಆರೋಗ್ಯ ಮತ್ತಷ್ಟು ಚಿಂತಾಜನಕ

    ಎಸ್‍ಪಿಬಿ ಆರೋಗ್ಯ ಮತ್ತಷ್ಟು ಚಿಂತಾಜನಕ

    ಚೆನ್ನೈ: ಹಿರಿಯ ಗಾಯಕ, ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಲೈಫ್ ಸಪೋರ್ಟ್ ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್‍ಪಿಬಿ ಅವರ ಚಿಕಿತ್ಸೆ ಮುಂದುವರಿದಿದೆ.

    ಎಂಜಿಎಂ ಆಸ್ಪತ್ರೆ ಎಸ್‍ಪಿಬಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಆಗಸ್ಟ್ 5ರಂದು ಎಸ್‍ಪಿಬಿ ದಾಖಲಾಗಿದ್ದರು. ಎಕ್ಮೋ ಮತ್ತು ಇನ್ನಿತರ ಲೈಫ್ ಸಪೋರ್ಟ್ ಮೇಲೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 24 ಗಂಟೆಯಿಂದ ಎಸ್‍ಪಿಬಿ ಆರೋಗ್ಯ ಕ್ಷೀಣಿಸುತ್ತಿದ್ದು, ಹೆಚ್ಚು ಲೈಫ್ ಸಪೋರ್ಟ್ ಸಾಧನಗಳನ್ನು ಬಳಕೆ ಮಾಡಲಾಗುತ್ತಿದೆ. ಎಂಜಿಎಂ ಆಸ್ಪತ್ರೆಯ ನುರಿತ ವೈದ್ಯರ ತಂಡ ಎಸ್‍ಪಿಬಿ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಹೇಳಿದೆ.

    ಕೆಲವು ದಿನಗಳ ಹಿಂದೆ ವಿಡಿಯೋ ಪೋಸ್ಸ್ ಮಾಡಿದ್ದ ಎಸ್‍ಪಿಬಿ ಪುತ್ರ ಚರಣ್, ಅಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್ ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು ಕುಳಿತುಕೊಳ್ಳುತ್ತಿದ್ದು, ವೈದ್ಯರ ಸಹಾಯದ ಮೇರೆಗೆ ಪ್ರತಿ ದಿನ 20 ನಿಮಿಷಗಳ ಕಾಲ ಕುಳಿತುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.

    ತಂದೆಯ ಆರೋಗ್ಯ ಸುಧಾರಣೆಯಾಗುತ್ತಿದೆ. ಅವರು ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಸ್ಪತ್ರೆಯಲ್ಲಿ ಆಚರಿಸಿದ್ದಾರೆ. ಈಗ ಆಸ್ಪತ್ರೆಯಲ್ಲೇ ಎಸ್‍ಪಿಬಿ ಟೆನ್ನಿಸ್ ಮತ್ತು ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾರೆ ಎಂದು ಚರಣ್ ತಿಳಿಸಿದ್ದರು.

    ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡಿವೆ. ಆಗಸ್ಟ್ 24ರಂದು ಎಸ್‍ಪಿಬಿ ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು.

  • ಕೊರೊನಾದಿಂದ ಬಳಲುತ್ತಿರುವ ಶಾಸಕ ನಾರಾಯಣರಾವ್ ಆರೋಗ್ಯ ಸ್ಥಿತಿ ಗಂಭೀರ

    ಕೊರೊನಾದಿಂದ ಬಳಲುತ್ತಿರುವ ಶಾಸಕ ನಾರಾಯಣರಾವ್ ಆರೋಗ್ಯ ಸ್ಥಿತಿ ಗಂಭೀರ

    -ಆಸ್ಪತ್ರೆ ಎದುರು ಅಭಿಮಾನಿಗಳ ದಂಡು

    ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭಿಸಿದೆ.

    ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ನಾರಾಯಣರಾವ್ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಸಿದ್ದರಾಮಯ್ಯ ಅವರ ಆಪ್ತರಾಗಿರುವ ಶಾಸಕರು ಕಳೆದ ಒಂದು ತಿಂಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.

    66 ವರ್ಷದ ನಾರಾಯಣರಾವ್ ಅವರಿಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆ ಇದೆ. ನೆಚ್ಚಿನ ಶಾಸಕ ಆರೋಗ್ಯ ಸ್ಥಿತಿ ಮಾಹಿತಿ ಪಡೆಯಲು ಆಸ್ಪತ್ರೆ ಎದುರು ಅಭಿಮಾನಿಗಳು ಆಗಮಿಸಿದ್ದು ಕಂಡು ಬಂದಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಬುಧವಾರ, ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕರವಾಗಿದೆ. ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯ ಡಾ. ಮಹೇಶ್ ಅವರೆಂದಿಗೆ ಮಾತನಾಡಿ ಅವರ ಆರೋಗ್ಯ ವಿಚಾರಿಸಿದ್ದೇನೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾರಾಯಣರಾವ್ ಅವರ ಸ್ಥಿತಿಯನ್ನು ವಿಡಿಯೋ ಕಾಲ್ ಮೂಲಕವೇ ಗಮನಿಸಿದ್ದೇನೆ. ಅವರಿಗೆ ಭಗವಂತ ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುತೇನೆ ಎಂದು ಹೇಳಿದ್ದರು.

    ಇತ್ತ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಸಿಯುರೆಳೆದಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವ ಹೊತ್ತಲ್ಲೇ ಸೋಂಕಿಗೆ ಕೇಂದ್ರ ಸಚಿವರೊಬ್ಬರು ಪ್ರಾಣಬಿಟ್ಟಿದ್ದು ಆತಂಕ ಹೆಚ್ಚಿಸಿದೆ. ಕೇಂದ್ರ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ ದೆಹಲಿಯಲ್ಲೇ ನಡೆಯಲಿದೆ. ಕೊರೊನಾ ಹಿನ್ನೆಲೆಯಲ್ಲಿ ಪಾರ್ಥಿವ ಶರೀರವನ್ನು ಬೆಳಗಾವಿಗೆ ಕೊಂಡೊಯುವುದು ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ. ಸಂಜೆ 4 ಗಂಟೆಗೆ ದೆಹಲಿಯ ಲೋದಿ ರಸ್ತೆಯಲ್ಲಿರುವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.

  • ಅರಿಶಿಣ, ಕೊಬ್ಬರಿ ಎಣ್ಣೆ, ಕಹಿಬೇವು, ಕಡಲೆಹಿಟ್ಟಿನಿಂದ ಮಳೆಗಾಲದಲ್ಲಿ ತ್ವಚೆಯ ರಕ್ಷಣೆ

    ಅರಿಶಿಣ, ಕೊಬ್ಬರಿ ಎಣ್ಣೆ, ಕಹಿಬೇವು, ಕಡಲೆಹಿಟ್ಟಿನಿಂದ ಮಳೆಗಾಲದಲ್ಲಿ ತ್ವಚೆಯ ರಕ್ಷಣೆ

    ನೇಕ ದಿನಗಳಿಂದ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಈ ನಡುವೆ ಮಳೆಯಲ್ಲಿ ಆರೋಗ್ಯ ರೀತಿಯ ತ್ವಚೆಯ ರಕ್ಷಣೆ ಮಾಡಿಕೊಳ್ಳಬೇಕು. ಮಳೆಗಾಲದಲ್ಲಿ ಶೀತ, ಉಸಿರಾಟದ ತೊಂದರೆ ಮತ್ತು ಚರ್ಮದ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಕಾಲಕ್ಕೆ ತಕ್ಕಂತೆ ನಮ್ಮ ತ್ವಚೆಯ ರಕ್ಷಣೆ ಮಾಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಇದನ್ನೂ ಓದಿ: ಪುರುಷರ ತ್ವಚೆಯ ರಕ್ಷಣೆಗಾಗಿ ನಾಲ್ಕು ಸರಳ ಹೆಲ್ತ್ ಟಿಪ್ಸ್

    ಸಾಮಾನ್ಯವಾಗಿ ಮಳೆಗಾಲದಲ್ಲಿ ವಾತಾವರಣದಲ್ಲಿ ಅಧಿಕ ತೇವಾಂಶವಿರುತ್ತದೆ. ಇದರಿಂದ ಚರ್ಮದಲ್ಲಿ ತುರಿಕೆ, ಅಲರ್ಜಿ, ಒಡಕು ಇಂತಹ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಈ ರೀತಿ ಸಮಸ್ಯೆಗಳಿಂದ ಚರ್ಮವನ್ನು ರಕ್ಷಿಸಿಕೊಳ್ಳಲು ಅನುಸರಿಸಬೇಕಾದರೆ ಕೆಲ ಉಪಯುಕ್ತ ಸಲಹೆಗಳು ನಿಮಗಾಗಿ ಇಲ್ಲಿವೆ.

    * ಮಳೆಗಾಲದಲ್ಲಿ ನಮ್ಮ ರೋಗ-ನಿರೋಧಕ ಶಕ್ತಿಯನ್ನು ನಾವು ಹೆಚ್ಚಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಏಕೆಂದರೆ ಸೋಂಕುಗಳ ಹಾವಳಿ ಈ ಸಮಯದಲ್ಲಿ ಹೆಚ್ಚಾಗಿರುವುದರಿಂದ ನಮ್ಮ ಆರೋಗ್ಯ ಬೇರೆ ಸಮಯಕ್ಕೆ ಹೋಲಿಸಿದರೆ ಮಳೆಗಾಲದಲ್ಲಿ ಹೆಚ್ಚು ಹದಗೆಡುತ್ತದೆ. ಹಾಗಾಗಿ ಬೆಳಗಿನ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ಸ್ವಲ್ಪ ಜೇನು ತುಪ್ಪವನ್ನು ಹಾಕಿ ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳಬೇಕು. ಇದು ದೇಹದಿಂದ ವಿಷಕಾರಿ ಅಂಶಗಳನ್ನು ಮತ್ತು ಸೋಂಕುಕಾರಕ ಕ್ರಿಮಿಗಳನ್ನು ಹೊರಹಾಕುವಲ್ಲಿ ತುಂಬಾ ಸಹಾಯಕ.

    * ಮಳೆಗಾಲದಲ ವಾತಾವರಣದಲ್ಲಿ ತೇವಾಂಶ ಅಧಿಕವಿರುವುದರಿಂದ ತ್ವಚೆಯಲ್ಲಿ ತುರಿಕೆ. ಅಲರ್ಜಿ ಮುಂತಾದ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಹೀಗಾಗಿ ಲೋಳೆಸರದಲ್ಲಿ ಏನಾದರೂ ತ್ವಚೆ ಅಲರ್ಜಿ ಆಗಿದ್ದರೆ ಅದನ್ನು ಗುಣಪಡಿಸುವ ಸಾಮರ್ಥ್ಯ ಇದೆ. ತಾಜಾ ಲೋಳೆಸರವನ್ನು ತ್ವಚೆ ಅಲರ್ಜಿಯಾಗಿರುವ ಜಾಗಕ್ಕೆ ಹಚ್ಚಿದರೆ ಅಲರ್ಜಿ ಕಡಿಮೆಯಾಗುವುದು. ಅಲ್ಲದೆ ಲೋಳೆಸರ ಹಚ್ಚುವುದರಿಂದ ತ್ವಚೆ ಕಾಂತಿ ಹೆಚ್ಚುವುದು.
    * ಕಹಿಬೇವಿನಲ್ಲಿ ಸೋಂಕು ನಿವಾರಕ ಗುಣವಿದೆ. ಹೀಗಾಗಿ ಮೊಡವೆ, ಕಪ್ಪು ಕಲೆ, ಮೈ ಮೇಲೆ ಗುಳ್ಳೆಗಳು ಇವುಗಳನ್ನು ಗುಣಪಡಿಸುವಲ್ಲಿ ಕಹಿಬೇವು ಸಹಕಾರಿ.

    * ಮೊಡವೆ, ಕಪ್ಪುಕಲೆ ಮುಂತಾದ ತೊಂದರೆಗೆ ಮುಖಕ್ಕೆ ಅರಿಶಿಣ ಹಚ್ಚಿದರೆ ಒಳ್ಳೆಯದು. ಅರಿಶಿಣವನ್ನು ಆಹಾರದಲ್ಲಿ ಬಳಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಮಳೆಗಾಲದ ಆಹಾರದಲ್ಲಿ ಅರಿಶಿಣ ಇರಬೇಕು.
    * ಬಿಸಿ ನೀರಿಗೆ ಒಂದು ಚಮಚ ಕೊಬ್ಬರಿ ಎಣ್ಣೆ ಹಾಕಿ ಸ್ನಾನ ಮಾಡುವುದು. ಇದರಿಂದ ಚರ್ಮದಲ್ಲಿನ ಡ್ರೈನೆಸ್ ಹೋಗುತ್ತದೆ.
    * ತ್ವಚೆ ಒಣಗಿದಂತೆ ಅಥವಾ ತುರಿಕೆಯಂತಹ ಸಮಸ್ಯೆ ಕಂಡುಬಂದರೆ ಕೊಬ್ಬರಿ ಎಣ್ಣೆಯನ್ನು ಮೈಗೆ ಹಚ್ಚಿ, ಅರ್ಧ ಗಂಟೆ ಬಿಟ್ಟು ಬಿಸಿ ನೀರಿನಿಂದ ಸ್ನಾನ ಮಾಡುವುದು.
    * ಸ್ನಾನದ ನೀರಿನಲ್ಲಿ ಗುಲಾಬಿ ಎಸಳುಗಳನ್ನು ಹಾಕಿ ಕೆಲ ಸಮಯದ ಬಳಿಕ ಆ ನೀರಿನಲ್ಲಿ ಸ್ನಾನ ಮಾಡಬೇಕು. ಇದರಿಂದ ಮಳೆಗಾಲದಲ್ಲಿ ತ್ವಚೆ ಕಾಂತಿಯುತವಾಗಿರುತ್ತದೆ.

    * ಮುಖದಲ್ಲಿ ತುರಿಕೆಯಂತಹ ಸಮಸ್ಯೆ ಇದ್ದರೆ ಒಂದು ಚಮಚ ಕೊಬ್ಬರಿ ಎಣ್ಣೆಗೆ ಸ್ವಲ್ಪ ಸಕ್ಕರೆ ಬೆರೆಸಿ ಹಚ್ಚಿ. ಎರಡು ನಿಮಷ ಸ್ಕ್ರಬ್ ಮಾಡಿ. ಬೆಚ್ಚಗಿನ ನೀರಿನಲ್ಲಿ ಮುಖ ತೊಳೆದುಕೊಳ್ಳಿ.
    * ಹೆಚ್ಚಾಗಿ ನೀರು ಕುಡಿಯುವುದು ಕೂಡ ತ್ವಚೆಯ ರಕ್ಷಣೆಗೆ ಉಪಯೋಗಕಾರಿ
    * ಮುಖದಲ್ಲಿ ಮೊಡವೆ, ಗುಳ್ಳೆಗಳಂತಹ ಸಮಸ್ಯೆಯಿದ್ದರೆ ಆಯಿಂಟ್‍ಮೆಂಟ್ ಬದಲಾಗಿ ಅರಿಶಿಣ ಹಚ್ಚುವುದು ಉತ್ತಮ.
    * ಮಳೆಗಾಲದಲ್ಲಿ ವಾರಕ್ಕೊಮ್ಮೆ ತಲೆ ಸ್ನಾನ ಮಾಡುವುದು ಉತ್ತಮ. ತೇವ ಇರುವಾಗಲೇ ಕೂದದಲನ್ನು ಬಾಚಬಾರದು. ಆದಷ್ಟೂ ಬಿಸಿಲಿನಲ್ಲಿ ಕೂದಲನ್ನು ಒಣಗಿಸಬೇಕು.

    * ಎಣ್ಣೆ ಚರ್ಮದವರು ಮುಣದ ಅಂದವನ್ನು ಕಾಪಾಡಿಕೊಳ್ಳಲು ಸೋಪು ಬಳಸುವುದುಕ್ಕಿಂತ ಕಡಲೆಹಿಟ್ಟಿನಿಂದ ಮುಖ ತೊಳೆಯುವುದು ಉತ್ತಮ.
    * ಪಪ್ಪಾಯ ಹಣ್ಣನ್ನು ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಎಣ್ಣೆ ಅಂಶ ಕಡಿಮೆಯಾಗುವಂತೆ ಮಾಡಬಹುದು.

  • ಪ್ರಧಾನಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಬಿಎಸ್‍ವೈ

    ಪ್ರಧಾನಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಬಿಎಸ್‍ವೈ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಈ ನಡುವೆ ನಿನ್ನೆ ಪ್ರಧಾನಿ ಮೋದಿಯವರನ್ನು ಸಂಸತ್‍ನಲ್ಲಿ ಭೇಟಿ ಮಾಡಿದ್ದ ಯಡಿಯೂರಪ್ಪ ಭಾವುಕರಾಗಿ ಕಣ್ಣಿರಿಟ್ಟಿದ್ದಾರೆ ಎಂಬ ಸುದ್ದಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸಿಎಂ ಭೇಟಿ ವೇಳೆ ಪ್ರಧಾನಿ ಮೋದಿಯವರು ಬಿಎಸ್‍ವೈ ಆರೋಗ್ಯದ ಬಗ್ಗೆ ಅತೀವ ಕಾಳಜಿ ತೋರಿದ್ದು, ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಆರೋಗ್ಯದ ಬಗ್ಗೆ ಜಾಗೃತಿ ವಹಿಸಲು ಸಲಹೆ ನೀಡಿದ್ದಾರೆ. ವಯಸ್ಸಾಗಿದೆ, ಆರೋಗ್ಯ ಸಮಸ್ಯೆಗಳ ಕಡೆ ಹೆಚ್ಚು ನಿಗಾವಹಿಸಿ. ಕೊರೊನಾ ಸಂಧರ್ಭದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಮೋದಿ ಹೇಳಿದ್ದಾರೆ. ಇದನ್ನು ಕಂಡು ಬಿಎಸ್‍ವೈ ಭಾವುಕರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಕೊರೊನಾದಿಂದ ಸಾವನ್ನಪ್ಪಿದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ವಿಚಾರ ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿರುವ ಮೋದಿ, ವಿಡಿಯೋ ಕಾನ್ಫರೆನ್ಸ್ ಮೂಲಕವೇ ಸಭೆ ನಡೆಸಲು ಸೂಚನೆ ನೀಡಿದ್ದಾರೆ. ಇವರ ಜೊತೆಗೆ ಹಲವು ಕೇಂದ್ರ ಸಚಿವರು ಕೂಡ ಫೋನ್ ಮೂಲಕವೇ ಬೇಡಿಕೆಗಳು ತಿಳಿಸಿ. ಪ್ರಯಾಣ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ. ಕೇಂದ್ರ ನಾಯಕರ ಕಾಳಜಿಯನ್ನು ಕಂಡು ಬಿಎಸ್‍ವೈಯವರು ಭಾವುಕರಾಗಿದ್ದಾರೆ ಎನ್ನಲಾಗಿದೆ.