Tag: health

  • ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ಜಯದೇವ ಹೃದ್ರೋಗ ತಜ್ಞರಿಂದ ತಪಾಸಣೆ

    ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ಜಯದೇವ ಹೃದ್ರೋಗ ತಜ್ಞರಿಂದ ತಪಾಸಣೆ

    ತುಮಕೂರು: ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಮಂಜುನಾಥ್ ನೇತೃತ್ವದ ನುರಿತ ವೈದ್ಯರ ತಂಡ ಸಿದ್ದಗಂಗಾ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದೆ. ಒಟ್ಟು ಐದು ಜನ ತಜ್ಞರ ತಂಡ ಸುಮಾರು 1 ಗಂಟೆಗಳ ಕಾಲ ಶ್ರೀಗಳ ತಪಾಸಣೆ ನಡೆಸಿ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ತಿಳಿಸಿದೆ.

    ಶ್ರೀಗಳ ಆರೋಗ್ಯ ತಪಾಸಣೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಾ. ಮಂಜುನಾಥ್ ಅವರು, ಶ್ರೀಗಳ ರಕ್ತದೊತ್ತಡ, ಹೃದಯ ಬಡಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದು, ಶ್ವಾಸಕೋಶದ ಸೋಂಕು ಕೂಡಾ ಕಡಿಮೆಯಾಗಿದೆ. ಆದರೆ ಶ್ರೀಗಳಿಗೆ ನಿಶ್ಯಕ್ತಿ ಇದ್ದು, ಬೆನ್ನು ಬಾಗಿರುವುದರಿಂದ ಶ್ವಾಸ ಕೋಶದ ಮೇಲೆ ಪರಿಣಾಮ ಬೀರುತ್ತಿದೆ. ಪರಿಣಾಮ ಉಸಿರಾಟಕ್ಕೆ ತೊಂದರೆಯಾಗುತ್ತಿರುವ ಕಾರಣ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ. ಆದ್ರೂ ಶ್ರೀಗಳು ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದರು.

    ಶ್ರೀಗಳು ಕಣ್ಣು ಬಿಟ್ಟು ನೋಡುತ್ತಿದ್ದು, ಸಿದ್ದಗಂಗಾ ಆಸ್ಪತ್ರೆಯಲ್ಲಿ ವಿಶ್ವ ದರ್ಜೆಯ ಐಸಿಯು ವ್ಯವಸ್ಥೆ ಇದೆ. ಇದರಿಂದ ಬೇರೆ ಕಡೆ ಶಿಪ್ಟ್ ಮಾಡುವ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರದ ನಿರ್ದೇಶನದಂತೆ ನಾವು ಐದು ಜನ ವೈದ್ಯರು ಬಂದಿದ್ದೇವೆ. ಶ್ರೀಗಳ ದೇಹದಲ್ಲಿ ಪ್ರೊಟೀನ್ ಅಂಶ ಏರಿಕೆಯಾಗಿರುವುದರಿಂದ ಅವರ ಆರೋಗ್ಯ ಗುಣವಾಗುತ್ತೆ ಎಂಬ ಆಶಾಭಾವನೆ ಇದೆ ಎಂದರು.

    ಸಿದ್ದಗಂಗಾ ಶ್ರೀ ಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನ ಆಸ್ಪತ್ರೆಗೆ ಸುತ್ತೂರು ಶ್ರೀ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ- ವೈದ್ಯರಿಗೆ ಧನ್ಯವಾದ ಹೇಳಿ ಭಕ್ತರಲ್ಲಿ ಸಿಎಂ ಮನವಿ

    ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ- ವೈದ್ಯರಿಗೆ ಧನ್ಯವಾದ ಹೇಳಿ ಭಕ್ತರಲ್ಲಿ ಸಿಎಂ ಮನವಿ

    ತುಮಕೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಧನ್ಯವಾದ ಹೇಳಿದ್ದಾರೆ. ಅಲ್ಲದೇ ಇದೇ ವೇಳೆ ಮಠದ ಭಕ್ತರಲ್ಲಿ ಸಿಎಂ ಮನವಿಯನ್ನೂ ಮಾಡಿಕೊಂಡಿದ್ದಾರೆ.

    ಇಂದು ಮಠಕ್ಕೆ ಭೇಟಿ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಿದ್ದಗಂಗಾ ಶ್ರೀಗಳ ಆರೋಗ್ಯ ಅತ್ಯುತ್ತಮವಾಗಿದೆ. ಅವರ ಆರೋಗ್ಯವನ್ನ ವೈದ್ಯರು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ವೈದ್ಯರು ಉತ್ತಮ ರೀತಿಯಲ್ಲಿ ತಮ್ಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯರಿಗೆ ವಿಶೇಷವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಅಂತ ಹೇಳಿದ್ರು.

    ಶ್ರೀಗಳಿಗೆ ಚಿಕಿತ್ಸೆ ಕೊಡೋದು ವೈದ್ಯರಿಗೆ ಸವಾಲಿನ ವಿಷಯವಾಗಿದೆ. ಅಂತದ್ದರಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ಭಕ್ತರಿಗೆ ಆತಂಕ ಬೇಡ. ಸ್ವಾಮೀಜಿಗಳ ವಿಶ್ರಾಂತಿಗೆ ಅಡಚಣೆಯಾಗಬಾರದು ಅಂತ ಇದೇ ವೇಳೆ ಭಕ್ತರಲ್ಲಿ ಮನವಿ ಮಾಡಿಕೊಂಡರು.

    ಶ್ರೀಗಳು ಇಳಿ ವಯಸ್ಸಿನಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಪರಮಪೂಜ್ಯರು ಚೆನ್ನಾಗಿದ್ದಾರೆ. ಅವರ ವಿಶ್ರಾಂತಿಗೆ ತೊಂದರೆ ಕೊಡಬಾರದು ಅಂತಿದ್ದೆ. ಧಾರವಾಡದ 84 ನೇ ಸಾಹಿತ್ಯ ಸಮ್ಮೇಳನಕ್ಕೆ ಹೋಗುತ್ತಿದ್ದೇನೆ. ಮಾರ್ಗ ಮಧ್ಯೆ ಪರಮಪೂಜ್ಯರ ದರ್ಶನಕ್ಕೆ ಬಂದಿದ್ದೇನೆ. ಕಿರಿಯ ಶ್ರೀಗಳ ಬಳಿ ಬರಬಹುದಾ ಅಂತಾ ಕೇಳಿ ಬಂದಿದ್ದೇನೆ ಅಂದ್ರು.

    ಆಸ್ಪತ್ರೆಗೆ ದಾಖಲು:
    ಶ್ರೀಗಳು ಬೇಗ ಗುಣಮುಖರಾಗಲು ಉತ್ತಮ ಆರೈಕೆ ಅಗತ್ಯವಿದ್ದು, ಸೋಂಕು ಬೇಗ ವಾಸಿಯಾಗಬೇಕು ಎಂಬ ಉದ್ದೇಶದಿಂದ ಅವರನ್ನು ಗುರುವಾರ ರಾತ್ರಿ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    “ಮಠದಲ್ಲಿ ನಾವು ಎಷ್ಟೇ ಜಾಗೃತಿ ವಹಿಸಿದರೂ ಕೂಡ ಸೋಂಕು ತಗಲುವ ಸಾಧ್ಯತೆ ಇತ್ತು. ಅಲ್ಲದೇ ಚಿಕಿತ್ಸೆಗೆ ಬೇಕಾದ ಸೌಲಭ್ಯಗಳು ಕೂಡ ಆಸ್ಪತ್ರೆಯಲ್ಲಿ ಲಭ್ಯವಾಗುವ ಕಾರಣ ಈ ನಿರ್ಧಾರ ಕೈಗೊಳ್ಳಲಾಯಿತು. ಶ್ರೀ ಗಳಿಗೆ ಎಂದಿನಂತೆ ತಪಾಸಣೆ ಹಾಗೂ ಚಿಕಿತ್ಸೆ ಆಸ್ಪತ್ರೆಯಲ್ಲೇ ಮುಂದುವರಿಯುತ್ತದೆ. ಇಂದು ರೇಲಾ ಆಸ್ಪತ್ರೆಯಿಂದ ತಜ್ಞ ವೈದ್ಯರು ಕೂಡ ಆರೋಗ್ಯವನ್ನು ಚೆಕ್ ಮಾಡಿದ್ದಾರೆ. ಆದ್ದರಿಂದ ಯಾರು ಆತಂಕಕ್ಕೆ ಒಳಪಡುವ ಅಗತ್ಯವಿಲ್ಲ” ಅಂತ ನಿನ್ನೆ ಕಿರಿಯ ಶ್ರೀಗಳು ಹೇಳಿದ್ದರು.

    https://www.youtube.com/watch?v=pdPt-TVIzFE

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ವಿಐಪಿಗಳ ಭೇಟಿ ನಿಲ್ಲಿಸಬೇಕು: ವೈದ್ಯರ ಮನವಿ

    ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ವಿಐಪಿಗಳ ಭೇಟಿ ನಿಲ್ಲಿಸಬೇಕು: ವೈದ್ಯರ ಮನವಿ

    ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಆಗುತ್ತಿದ್ದು, ಆದರೆ ಪದೇ ಪದೇ ವಿಐಪಿಗಳು ಭೇಟಿ ನೀಡುವುದನ್ನು ನಿಲ್ಲಿಸಬೇಕು ಎಂದು ಬಿಜಿಎಸ್ ಆಸ್ಪತ್ರೆಯ ಡಾ.ರವೀಂದ್ರ ಮನವಿ ಮಾಡಿಕೊಂಡಿದ್ದಾರೆ.

    ಮಾಧ್ಯಮಗಳಿಗೆ ಶ್ರೀ ಗಳ ಆರೊಗ್ಯದ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಅವರು, ಶ್ರೀಗಳ ಆರೋಗ್ಯ ದಿನದಿಂದ ದಿನಕ್ಕೆ ಹೆಚ್ಚು ಉತ್ತಮವಾಗುತ್ತಿದ್ದು, ನಿನ್ನೆಗಿಂತ ಇಂದು ಸುಧಾರಣೆ ಆಗಿದೆ. ಆದರೆ ಶ್ರೀಗಳ ದರ್ಶನ ಪಡೆಯಲು ವಿಐಪಿಗಳು ಪದೇ ಪದೇ ಮಠಕ್ಕೆ ಭೇಟಿ ನೀಡುವುದನ್ನು ನಿಲ್ಲಿಸಬೇಕು. ಆ ಮೂಲಕ ಶ್ರೀಗಳ ಚಿಕಿತ್ಸೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

    ಇದೇ ವೇಳೆ ಚೆನ್ನೈ ಮೂಲದ ಸೋಂಕು ತಜ್ಞ ಡಾ.ಸುಬ್ರಾ ಅವರು ಮಾತನಾಡಿ, ಶ್ರೀಗಳು ನಿಧಾನವಾಗಿ ಚೇತರಿಸಿಕೊಳ್ಳುತ್ತಿದು, ಅವರಿಗೆ ವಯಸ್ಸಾಗಿರುವುದರಿಂದ ಚೇತರಿಕೆ ನಿಧಾನವಾಗುತ್ತಿದೆ. ಶ್ವಾಸಕೋಶ ಸೋಂಕು ಕೂಡ ಕಡಿಮೆಯಾಗುತ್ತಿದ್ದು, ಆಹಾರ ಸ್ವೀಕರಿಸಿಸುವುದು ನಿಧಾನವಾಗಿ ಹೆಚ್ಚುತ್ತಿದೆ. ಮಠದಲ್ಲೇ ಚಿಕಿತ್ಸೆಗೆ ಬೇಕಾದ ಎಲ್ಲಾ ಸೌಲಭ್ಯ ಇರುವುದರಿಂದ ಅತ್ಯಂತ ಕಾಳಜಿಯಿಂದ ನೋಡಿಕೊಳ್ಳಲಾಗುತ್ತಿದೆ. ಜನರ ಪ್ರಾರ್ಥನೆ ಹಾಗೂ ಶ್ರೀಗಳ ವಿಲ್ ಪವರ್ ನಿಂದ ಬಹುಬೇಗ ಚೇತರಿಸಿಕೊಳ್ಳಲಿದ್ದಾರೆ. ಮಠದಲ್ಲೇ ಎಲ್ಲಾ ವೈದ್ಯಕೀಯ ವ್ಯವಸ್ಥೆ ಇರುವುದರಿಂದ, ಅವರನ್ನು ಬೇರೆ ಎಲ್ಲೂ ಶಿಫ್ಟ್ ಮಾಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟ ಪಡಿಸಿದರು.

    ಶ್ರೀಗಳನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ನೀಡುತ್ತಿಲ್ಲ, ಇದರಲ್ಲೇ ಅವರ ಆರೋಗ್ಯ ಪ್ರಗತಿಯ ಬಗ್ಗೆ ತಿಳಿಯುತ್ತದೆ. ಜನರ ಪ್ರಾರ್ಥನೆಯೇ ಅವರ ಚೇತರಿಕೆ ಪ್ರಮುಖ ಕಾರಣವೂ ಆಗಲಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಳಿಗಾಲದಲ್ಲಿ ಏನೆಲ್ಲ ಆರೋಗ್ಯ ಸಮಸ್ಯೆ ಕಾಡುತ್ತೆ, ಯಾವ ರೀತಿ ಕಾಪಾಡಿಕೊಳ್ಳಬೇಕು- ಇಲ್ಲಿದೆ ಟಿಪ್ಸ್

    ಚಳಿಗಾಲದಲ್ಲಿ ಏನೆಲ್ಲ ಆರೋಗ್ಯ ಸಮಸ್ಯೆ ಕಾಡುತ್ತೆ, ಯಾವ ರೀತಿ ಕಾಪಾಡಿಕೊಳ್ಳಬೇಕು- ಇಲ್ಲಿದೆ ಟಿಪ್ಸ್

    ಬೆಂಗಳೂರು: ಚಳಿಗಾಲ ಈಗ ಶುರುವಾಗಿದ್ದು, ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿಬೇಕು. ಬೆಂಗಳೂರಿನಲ್ಲಿ ಶೀತ ಗಾಳಿ ಹೆಚ್ಚಾಗಿದ್ದು ದಾಖಲೆಯ ಮಟ್ಟದಲ್ಲಿ ಚಳಿ ನಡುಗಿಸುತ್ತಿದೆ. ಚಳಿಗಾಲ ಶುರುವಾದಂತೆ ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳು ಕೂಡ ಕಾಡುತ್ತವೆ.

    ಚಳಿಗಾಲದಲ್ಲಿ ದೇಹದ ಉಷ್ಣತೆ ಕಡಿಮೆಯಾಗಿ ರಕ್ತದ ಚಲನೆಯ ವೇಗವೂ ಕಡಿಮೆಯಾಗುತ್ತದೆ. ವಾತಾವರಣ ವೈಪರೀತ್ಯದಿಂದಾಗಿ ದೇಹದಲ್ಲಿ ಬ್ಯಾಕ್ಟೀರಿಯಾ ವೈರಸ್ ಬೆಳವಣಿಗೆಯಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಚಳಿಗಾಲದಲ್ಲಿ ಸೋಂಕುಗಳು ಬೇಗ ಹರಡುತ್ತೆ. ಚಳಿಗಾಲದಲ್ಲಿ ಏನೆಲ್ಲ ಆರೋಗ್ಯ ಸಮಸ್ಯೆ ಕಾಡುತ್ತೆ, ಯಾವೆಲ್ಲ ರೀತಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳಬೇಕು, ಏನ್ ಫುಡ್ ತಗೋಬೇಕು. ಹೆಲ್ತ್ ಟಿಪ್ಸ್ ಇಲ್ಲಿದೆ. ಇದನ್ನೂ ಓದಿ: ಚಳಿಗಾಲದಲ್ಲಿ ಮಗು ಆರೋಗ್ಯವಾಗಿರಲು ಹೀಗೆ ಮಾಡಿ

    ಚಳಿಗಾಲದ ಕಾಯಿಲೆಗಳು- ಆರೋಗ್ಯ ಜೋಪಾನ!
    * ಶೀತ, ಕೆಮ್ಮು, ಜ್ವರ ಸಾಮಾನ್ಯ.
    * ಚಳಿಗಾಲದಲ್ಲಿ ಜ್ವರ ಬಹುತೇಕ ನ್ಯೂಮೋನಿಯಾವಾಗಿ ಬದಲಾಗುತ್ತೆ. ಜ್ವರ ಬಂದಾಗ ಜೋಪಾನವಾಗಿರಿ.
    * ಶ್ವಾಸಕೋಶ ಸಂಬಂಧಿ ಕಾಯಿಲೆ ಹೆಚ್ಚಾಗುತ್ತೆ. ಉಸಿರಾಟದ ತೊಂದರೆ ಕಾಣಿಸುತ್ತೆ.
    * ಅಸ್ತಮಾ ರೋಗಿಗಳಿಗೆ ಇನ್ನು ತೊಂದರೆ ಹೆಚ್ಚು ಆಗುತ್ತದೆ.
    * ವಯಸ್ಸಾದವರಿಗೆ ಪಾದಗಳಲ್ಲಿ ನೋವು, ಮಂಡಿನೋವು ಚಳಿಗಾಲದಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ.
    * ಚರ್ಮಶುಷ್ಕವಾಗುತ್ತೆ ಹಾಗೂ ಚರ್ಮ ಸಂಬಂಧಿ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.
    * ಚಳಿಗಾಲದಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚು ಎನ್ನಲಾಗಿದೆ. ಹೀಗಾಗಿ ಹೃದಯ ಸಂಬಂಧಿ ಕಾಯಿಲೆಯುಳ್ಳವರು ಎಚ್ಚರ ವಹಿಸುವುದು ಅತೀ ಮುಖ್ಯ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ಕಡಿಮೆ ಇರುವುದರಿಂದ ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೋಟಿನ್ ಪ್ರಮಾಣ ಹೆಚ್ಚಾಗಿ ರಕ್ತ ಹೆಪ್ಪುಗಟ್ಟಬಹುದು. ಇದರಿಂದ ರಕ್ತ ಸಂಚಾರಕ್ಕೆ ತೊಂದರೆಯಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ದೊರೆಯದೇ ಹೃದಯಾಘಾತವಾಗುವ ಸಾಧ್ಯತೆ ಅಧಿಕ.
    * ಮಧುಮೇಹ ಇದ್ದವರಿಗೆ ಚಳಿಗಾಲದಲ್ಲಿ ಹೆಚ್ಚು ಆರೋಗ್ಯ ಸಮಸ್ಯೆ ಕಾಣಿಸುತ್ತೆ. ಇದನ್ನೂ ಓದಿ: ಚುಮು ಚುಮು ಚಳಿಗೆ ಡ್ರೈ ಸ್ಕಿನ್ ಸಮಸ್ಯೆನಾ? – ಚಳಿಗಾಲದಲ್ಲಿ ಚರ್ಮದ ಆರೈಕೆ ಹೀಗಿರಲಿ

    ಚಳಿಗಾಲದ ಹೆಲ್ತ್ ಟಿಪ್ಸ್:
    * ಸಾಧ್ಯವಾದಷ್ಟು ಬೆಚ್ಚಗಿರುವ ಬಟ್ಟೆಗಳನ್ನು ಬಳಸಿ.
    * ಜ್ವರ, ಶೀತ, ನೆಗಡಿ, ಕೆಮ್ಮು ಕಾಣಿಸಿಕೊಂಡಾಗ ನಿರ್ಲಕ್ಷ್ಯ ಮಾಡದೇ ವೈದ್ಯರನ್ನು ಭೇಟಿಯಾಗಿ
    * ಸೀಸನಲ್ ಫ್ರೂಟ್ಸ್ ತಿನ್ನಿ ಹೆಚ್ಚಾಗಿ ದಾಳಿಂಬೆ, ಕಿತ್ತಳೆ ಸೇವಿಸಿ. ಇದ್ರಿಂದ ರಕ್ತಕಣ ಹೆಚ್ವಾಗುತ್ತೆ
    * ಸಾಧ್ಯವಾಷ್ಟು ಬಿಸಿ ಬಿಸಿ ಇರುವ ಊಟ, ತಿಂಡಿಯನ್ನು ಮಾಡಿ. ಬಿಸಿ ಪಾನೀಯ, ಕಾಫಿ, ರಾಗಿ ಗಂಜಿ ತರಕಾರಿ ಸೂಪ್ ಕುಡಿಯಿರಿ.
    * ಚರ್ಮದ ಸಮಸ್ಯೆ ಹೆಚ್ಚಾಗಿ ಕಾಣಿಸೋದ್ರಿಂದ ಕೊಬ್ಬರಿ ಎಣ್ಣೆಯನ್ನು ಮೈ ಕೈಗೆ ಹಚ್ಚಿಕೊಳ್ಳಿ. ವೀಕೆಂಡ್ ನಲ್ಲಿ ಎಣ್ಣೆಸ್ನಾನ ಬೆಸ್ಟ್.
    * ಶುಂಠಿ, ಬೆಳ್ಳುಳ್ಳಿ, ಚಕ್ಕೆ ಲವಂಗ ಕರಿಮೆಣಸಿನ ಬಳಕೆ ಆಹಾರ ಪದಾರ್ಥದಲ್ಲಿ ಹೆಚ್ಚಿರಲಿ.
    * ಬಿಸಿ ನೀರನ್ನು ಸೇವಿಸಿ. ಎಣ್ಣೆ ಹೆಚ್ಚಾಗಿ ಹಾಕಿದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ. ಕರಿದ ತಿಂಡಿಗಳನ್ನು ಸೇವಿಸಬೇಡಿ.

    ಮಕ್ಕಳು ವೃದ್ಧರು ಹುಷಾರು: ಮಕ್ಕಳಿಗೆ ಹಾಗೂ ವೃದ್ಧರಿಗೆ ಚಳಿಗಾಲ ಬಂದರೆ ಆಹಾರ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತೆ. ಮಕ್ಕಳಿಗೆ ಬೆಚ್ಚಗಿನ ಬಟ್ಟೆ, ಕುಲಾವಿ ಹಾಕಿ. ವಯಸ್ಸಾದವರೂ ಕೂಡ ಆರೋಗ್ಯದ ಕಾಳಜಿ ಚಳಿಗಾಲದಲ್ಲಿ ಹೆಚ್ಚಾಗಿ ಮಾಡಬೇಕು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ

    ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ

    ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಾ. ಪರಮೇಶ್ ನೇತೃತ್ವದಲ್ಲಿ ಸಿದ್ದಗಂಗಾ ಮಠದಲ್ಲಿಯೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

    ಡಾ. ಪರಮೇಶ್ ನೇತೃತ್ವದಲ್ಲಿ ಸಿದ್ದಗಂಗಾ ಹಳೇ ಮಠದ ಶ್ರೀಗಳ ಕೊಠಡಿಯಲ್ಲಿಯೇ ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯ ಸಿದ್ದಗಂಗಾ ಮಠಕ್ಕೆ ಬಿಜಿಎಸ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ಅವರು ಆಗಮಿಸುವ ಸಾಧ್ಯತೆ ಇದೆ. ಶ್ರೀಗಳ ಆರೋಗ್ಯ ವಿಚಾರಿಸಲು ಮಧ್ಯಾಹ್ನದ ವೇಳೆ ಡಾ. ರವೀಂದ್ರ ಮಠಕ್ಕೆ ಬರಲಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

    ಮಂಗಳವಾರದಂದು ಶ್ರೀಗಳ ರಕ್ತ ಪರೀಕ್ಷೆಗಾಗಿ ರಕ್ತ ಮಾದರಿಯನ್ನು ವೈದ್ಯರು ಪಡೆದುಕೊಂಡು ಹೋಗಿದ್ದರು. ಇಂದು ಮಧ್ಯಾಹ್ನದ ಬಳಿಕ ಶ್ರೀಗಳ ಆರೋಗ್ಯ ಸಂಬಂಧ ಸಂಪೂರ್ಣ ಮಾಹಿತಿ ಸಿಗಲಿದೆ. ಸದ್ಯ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಇನ್ನಷ್ಟು ಚೇತರಿಕೆ ಕಂಡುಬರುತ್ತಿದೆ. ಭಕ್ತರು ಚಿಂತಿಸುವ ಅಗತ್ಯವಿಲ್ಲ ಎಂದು ಮಠದ ಸದಸ್ಯರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ: ಮಠದ ವೈದ್ಯ ಪರಮೇಶ್ ಸ್ಪಷ್ಟನೆ

    ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ: ಮಠದ ವೈದ್ಯ ಪರಮೇಶ್ ಸ್ಪಷ್ಟನೆ

    ತುಮಕೂರು: ಶ್ರೀ ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಭಕ್ತಾದಿಗಳು ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಮಠದ ವೈದ್ಯರಾದ ಡಾ. ಪರಮೇಶ್ ಹೇಳಿದ್ದಾರೆ.

    ಶ್ರೀಗಳ ಆರೋಗ್ಯದ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವೈದ್ಯರು, ಪ್ರತಿದಿನ ಶ್ರೀಗಳ ರಕ್ತತಪಾಸಣೆ ಮಾಡುತ್ತಿದ್ದೇವೆ. ಎರಡು ದಿನಗಳ ಹಿಂದೆ ರಕ್ತದಲ್ಲಿ ಸೋಂಕು ಇದೆ ಎಂಬ ಅಂಶ ಪತ್ತೆಯಾಗಿತ್ತು. ಈ ಸಂಂಬಂಧ ನಾವು ಈಗಾಗಲೇ ಚಿಕಿತ್ಸೆ ನೀಡಿದ್ದೇವೆ. ಚಿಕಿತ್ಸೆಯಿಂದಾಗಿ ಸೋಂಕಿನ ಪರಿಣಾಮ ಕಡಿಮೆ ಆಗುತ್ತಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಚಿಕಿತ್ಸೆ ನೀಡಿದ್ರೆ ಸಂಪೂರ್ಣ ಸೋಂಕು ನಿವಾರಣೆ ಆಗಲಿದೆ. ಇಂದು ಬೆಳಗ್ಗೆ ಇಷ್ಟಲಿಂಗ ಪೂಜೆ ನರೆವೇರಿಸಿ ದ್ರವ ಆಹಾರ ಸೇವನೆ ಮಾಡಿದ್ದಾರೆ ಎಂದು ತಿಳಿಸಿದರು.

    ಚೆನ್ನೈನಲ್ಲಿ ಶಸ್ತ್ರಚಿಕಿತ್ಸೆಯ ಬಳಿಕ 4ರಿಂದ 5 ವಾರ ಐಸಿಯುನಲ್ಲಿಯೇ ವಿಶ್ರಾಂತಿ ಮಾಡಬೇಕೆಂದು ಡಾ.ರೇಲಾ ಸಲಹೆ ನೀಡಿದ್ದರು. ಆದ್ರೆ ಶ್ರೀಗಳು ಮಠಕ್ಕೆ ಹೋಗಬೇಕೆಂದು ಹಠ ಹಿಡಿದ್ದರಿಂದ ಕರೆತರಲಾಯ್ತು. ಹಳೆ ಮಠದ ಕೊಠಡಿಯನ್ನು ಐಸಿಯು ಮಾದರಿಯಲ್ಲಿ ಬದಲಾಯಿಸಲಾಗಿದೆ. ಶ್ರೀಗಳಿಗೆ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ. ಆ ರೀತಿಯ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಭಕ್ತಾದಿಗಳಲ್ಲಿ ವೈದ್ಯರು ಮನವಿ ಮಾಡಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ಊಹಾಪೋಹಗಳಿಗೆ ಕಿವಿಗೊಡಬೇಡಿ – ಬಿಜಿಎಸ್ ವೈದ್ಯರು

    ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ಊಹಾಪೋಹಗಳಿಗೆ ಕಿವಿಗೊಡಬೇಡಿ – ಬಿಜಿಎಸ್ ವೈದ್ಯರು

    ತುಮಕೂರು: ನಡೆದಾಡುವ ದೇವರಾದ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯವಾಗಿದ್ದಾರೆ. ಭಕ್ತಾದಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಬಿಜಿಎಸ್ ವೈದ್ಯರಾದ ಡಾ.ರವೀಂದ್ರ ಹಾಗೂ ಡಾ.ವೆಂಕಟರಮಣ ಹೇಳಿದ್ದಾರೆ.

    ಶ್ರೀಗಳ ಅನಾರೋಗ್ಯ ಹಿನ್ನೆಲೆಯಲ್ಲಿ ಬಿಜಿಎಸ್ ವೈದ್ಯ ರವೀಂದ್ರ ನೇತೃತ್ವದ ತಂಡವು ಸಿದ್ದಗಂಗಾ ಮಠಕ್ಕೆ ಆಗಮಿಸಿ, ಶ್ರೀಗಳ ಆರೋಗ್ಯ ತಪಾಸಣೆ ಮಾಡಿದರು. ಬಳಿಕ ಮಾತನಾಡಿದ ವೈದ್ಯರು, ಶ್ರೀಗಳ ದೇಹದಲ್ಲಿ ಪ್ರೋಟಿನ್ ಅಂಶ ಕಡಿಮೆ ಇರುವುದರಿಂದ ತೊಂದರೆಯಾಗಿತ್ತು. ಈಗ ಚೇರಿಸಿಕೊಂಡಿದ್ದಾರೆ ಎಂದು ತಿಳಿಸಿದರು.

    ಶಿವಕುಮಾರ ಸ್ವಾಮೀಜಿಗಳು ಆಸ್ಪತ್ರೆಗೆ ದಾಖಲಿಸುವ ಅಗತ್ಯವಿಲ್ಲ. ಮಠದಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳ ಶ್ವಾಸಕೋಶದಲ್ಲಿ ತುಂಬಿಕೊಂಡಿರುವ ನೀರನ್ನು 150 ರಿಂದ 200 ಎಂಎಲ್ ನಂತೆ ಎರಡು ದಿನಕ್ಕೊಮ್ಮೆ ತೆಗೆಯಲಾಗುತ್ತಿದೆ. ಶಿವಕುಮಾರ ಸ್ವಾಮೀಜಿಗಳ ನಾಡಿ ಮಿಡಿತ (ಪಲ್ಸ್ ರೇಟ್) ಕೂಡ 75 ಇರುವುದರಿಂದ ಆತಂಕ ದೂರವಾಗಿದೆ ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಹಾಗೂ ಎಸ್‍ಪಿ ದಿವ್ಯಾ ಗೋಪಿನಾಥ್ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ಶ್ರೀಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾತನಾಡಿದ ಡಾ.ರಾಕೇಶ್ ಕುಮಾರ್, ಶಿವಕುಕುಮಾರ ಸ್ವಾಮೀಜಿಗಳು ಕ್ಷೇಮವಾಗಿದ್ದಾರೆ. ಭಕ್ತಾದಿಗಳು ಊಹಾಪೋಹಗಳಿಗೆ ಕಿವಿಗೊಡಬಾರದು. ಶ್ವಾಸಕೋಶದಲ್ಲಿ ಕಫ ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ- ಆಪ್ತ ವೈದ್ಯ ಡಾ.ಪರಮೇಶ್ ಸ್ಪಷ್ಟನೆ

    ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ- ಆಪ್ತ ವೈದ್ಯ ಡಾ.ಪರಮೇಶ್ ಸ್ಪಷ್ಟನೆ

    ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲವೆಂದು ಶ್ರೀಗಳ ಆಪ್ತ ವೈದ್ಯ ಡಾ. ಪರಮೇಶ್ ಸ್ಪಷ್ಟಪಡಿಸಿದ್ದಾರೆ.

    ಇಂದು ಬೆಳಗ್ಗೆ ಶ್ರೀಗಳ ಆರೋಗ್ಯ ತಪಾಸಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಶ್ರೀಗಳ ಆರೋಗ್ಯದಲ್ಲಿ ಕಫ ಕಾಣಿಸಿಕೊಂಡಿತ್ತು. ಬಿಜಿಎಸ್ ವೈದ್ಯರು ಅದನ್ನು ಕ್ಲಿಯರ್ ಮಾಡಿದ್ದರು. ಜೊತೆಗೆ ಪಲ್ಸ್ ರೇಟ್ ಕೂಡ ಕಡಿಮೆ ಆಗಿತ್ತು. ಚಿಕಿತ್ಸೆ ನೀಡಿದ ಬಳಿಕ ನಿನ್ನೆ ಸಂಜೆಯಿಂದಲೇ ಶ್ರೀಗಳು ಚೇತರಿಸಿಕೊಂಡಿದ್ದಾರೆಂದು ತಿಳಿಸಿದ್ದಾರೆ.

    ಶ್ರೀಗಳು ಬೆಳಗ್ಗೆ 8 ಗಂಟೆಗೆ ವಿಶ್ರಾಂತಿಯಿಂದ ಎದ್ದು, ನಿತ್ಯ ಕರ್ಮಗಳನ್ನು ಮುಗಿಸಿದ್ದಾರೆ. ಬಳಿಕ ಇಷ್ಟಲಿಂಗ ಪೂಜೆ ನೆರವೇರಿಸಿ, ಪ್ರಸಾದ ಸೇವೆನೆ ಕೂಡ ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿದ ಗಾಯವು ವಾಸಿಯಾಗುತ್ತಿದೆ. ಈ ಬಗ್ಗೆ ಭಕ್ತರು ಆತಂಕ ಪಡುವ ಅಗತ್ಯವಿಲ್ಲವೆಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ? ಹೆಚ್ಚಿನ ಅಧಿಕಾರ ಕೋಡೋಣ ಅಂದ್ರು ಎಚ್‍ಡಿಕೆ

    ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ? ಹೆಚ್ಚಿನ ಅಧಿಕಾರ ಕೋಡೋಣ ಅಂದ್ರು ಎಚ್‍ಡಿಕೆ

    ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು, ಆರೋಗ್ಯ ಸರಿಯಿಲ್ಲದ ಕಾರಣ ಅಧ್ಯಕ್ಷ ಸ್ಥಾನದಿಂದ ರಿಲೀವ್ ಮಾಡುವಂತೆ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾಗಿ ಎನ್ನಲಾಗಿದೆ.

    ಈ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ಆರೋಗ್ಯ ಸರಿ ಇಲ್ಲದ ಕಾರಣ ಹೀಗೆ ಹೇಳಿರಬಹುದೇ ಹೊರತು ಅಧಿಕಾರಕ್ಕಾಗಿ ಅಲ್ಲ. ಅಧಿಕಾರಕ್ಕೆ ಅವರ ಬೇಡಿಕೆ ಇದ್ದಲ್ಲಿ ಹೆಚ್ಚಿನ ಅಧಿಕಾರ ನೀಡೋಣ ಅಂದಿದ್ದಾರೆ.

    ಕೇಂದ್ರ ಸಚಿವರ ಭೇಟಿ ಬಳಿಕ ಮಾತನಾಡಿದ ಸಿಎಂ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಆಗಲು ನಾನು ಸಮಯ ಕೇಳಿಲ್ಲ. ರಾಜ್ಯದ ಕೆಲಸಗಳ ಬಗ್ಗೆ ಕೇಂದ್ರ ಚರ್ಚಿಸಲು ಬಂದಿದ್ದೆ. ಇದೇ ವೇಳೆ ಸಮ್ಮಿಶ್ರ ಸರ್ಕಾರ ಖಾತೆ ಹಂಚಿಕೆ ತಡವಾಗುತ್ತಿರುವ ಬಗ್ಗೆ ಕಾಂಗ್ರೆಸ್ ಮುಖಂಡರಿಗೆ ಕೇಳಿ. ಜೆಡಿಎಸ್ ಪಾಲಿನ ಎರಡು ಸ್ಥಾನಗಳನ್ನು ಸೂಕ್ತ ಸಮಯದಲ್ಲಿ ಭರ್ತಿ ಮಾಡುತ್ತೇವೆ. ಆದರೆ ಲೋಕಸಭೆ ಸ್ಥಾನಗಳ ಹಂಚಿಕೆ ಬಗ್ಗೆ ಇನ್ನು ಯಾವುದೇ ಮಾತುಕತೆ ನಡೆದಿಲ್ಲ. ಈ ಕುರಿತು ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಇತ್ತ ರಾಜ್ಯ ಕಾಂಗ್ರೆಸ್‍ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ದೂರಗಳ ಪಟ್ಟಿ ಹೊತ್ತು ದೆಹಲಿಗೆ ತೆರಳಿದ್ದ ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗದೆ ವಾಪಾಸ್ ಆಗಿದ್ದು, ಬಿಕ್ಕಟ್ಟಿನ ವೇಳೆ ರಾಹುಲ್ ಭೇಟಿ ಸರಿಯಲ್ಲ ಎಂದು ಹಿಂದಿರುಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಮೂರು ರಾಜ್ಯಗಳ ಸಂಪುಟ ರಚನೆ ಹಾಗೂ ಸಂಸತ್ ಅಧಿವೇಶನದಲ್ಲಿ ಕಾರ್ಯದಲ್ಲಿ ನಿರತರಾಗಿರುವ ರಾಹುಲ್ ಗಾಂಧಿ ಕೂಡ ಕುಮಾರಸ್ವಾಮಿ ಭೇಟಿಯನ್ನ ನಿರ್ಲಕ್ಷ್ಯ ಮಾಡಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಮಠದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದ ಶತಾಯುಷಿ

    ಮಠದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದ ಶತಾಯುಷಿ

    ತುಮಕೂರು: ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದ ಸಿದ್ದಗಂಗಾ ಶ್ರೀಗಳು ಇಂದು ವಿಶ್ರಾಂತಿಯಿಂದ ಎದ್ದು ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.

    ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಕಳೆದ 13 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಗಂಗಾ ಶ್ರೀಗಳು ಗುಣಮುಖರಾಗಿ ಬುಧವಾರ ಶ್ರೀಮಠಕ್ಕೆ ವಾಪಸ್ಸಾಗಿದ್ದರು. ಇಂದು ಮುಂಜಾನೆಯೇ ವಿಶ್ರಾಂತಿಯಿಂದ ಇದ್ದ ಶ್ರೀಗಳು ಸ್ನಾನ ಮುಗಿಸಿ ಬಳಿಕ ಇಷ್ಟಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಎಂದಿನಂತೆ ಶ್ರೀಗಳು ಇಡ್ಲಿ, ಹಣ್ಣು ಹಂಪಲನ್ನು ಸೇವಿಸಿದ್ದು, ಸಿದ್ದಗಂಗಾ ಆಸ್ಪತ್ರೆ ವೈದ್ಯರು ಶ್ರಿಗಳ ಆರೋಗ್ಯದ ಮೇಲೆ ನಿಗಾವಹಿಸುತ್ತಿದ್ದಾರೆ.

    ಆಸ್ಪತ್ರೆಯಲ್ಲಿಯೇ ಶ್ರೀಗಳಿಗೆ ಇನ್ನೂ ಕೆಲದಿನಗಳ ವಿಶ್ರಾಂತಿ ಅವಶ್ಯಕತೆ ಇದ್ದರೂ ಶ್ರಿಗಳು ಮಠ ಹಾಗೂ ವಿದ್ಯಾರ್ಥಿಗಳನ್ನು ನೋಡುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ತುರ್ತಾಗಿ ಶ್ರೀಮಠಕ್ಕೆ ಕರೆದುಕೊಂಡು ಬರಲಾಗಿತ್ತು. ಸಿದ್ದಗಂಗಾ ಶ್ರೀಗಳನ್ನು ಕರೆದುಕೊಂಡು ಬರಲು ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರಿಂದ ಯಾವುದೇ ತೊಂದರೆ ಇಲ್ಲದೇ ಶ್ರೀಗಳು ಶ್ರೀಮಠಕ್ಕೆ ಬಂದು ತಲುಪಿದ್ದರು.

    ಸ್ವಾಮೀಜಿಗೆ ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅವರು ಮೊದಲಿನ ತರ ಊಟ, ಪೂಜೆ ಮಾಡುತ್ತಿದ್ದಾರೆ. ಎಂದಿನಂತೆ ತಮ್ಮ ನಿತ್ಯದ ಕೆಲಸಗಳನ್ನು ಹಾಗೂ ಪೂಜೆಗಳನ್ನು ಮುಗಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv