Tag: health

  • ಸಿಎಂ ಕುಮಾರಸ್ವಾಮಿ ಆರೋಗ್ಯ ಹೇಗಿದೆ? ಪಬ್ಲಿಕ್ ಟಿವಿಗೆ ಹೆಲ್ತ್ ಕಾರ್ಡ್ ಲಭ್ಯ

    ಸಿಎಂ ಕುಮಾರಸ್ವಾಮಿ ಆರೋಗ್ಯ ಹೇಗಿದೆ? ಪಬ್ಲಿಕ್ ಟಿವಿಗೆ ಹೆಲ್ತ್ ಕಾರ್ಡ್ ಲಭ್ಯ

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲವು ಗಾಳಿ ಸುದ್ದಿಗಳು ಬೆಳಗ್ಗೆಯಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದುಂಟು. ಪದೇ ಪದೇ ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆಂಬ ಸಾಲುಗಳುಳ್ಳ ಸಂದೇಶಗಳು ಮೊಬೈಲಿನಿಂದ ಮೊಬೈಲಿಗೆ ಸಂಚರಿಸಿವೆ. ಹಾಗಾದ್ರೆ ನಿಜವಾಗಿಯೂ ಮುಖ್ಯಮಂತ್ರಿಗಳ ಆರೋಗ್ಯ ಹೇಗಿದೆ ಎಂಬುದರ ಬಗ್ಗೆ ನಾಡಿನ ಜನತೆ ಗೊಂದಲಕ್ಕೆ ಒಳಗಾಗಿದ್ದರು. ನಿಮ್ಮ ಪಬ್ಲಿಕ್ ಟಿವಿಗೆ ಸಿಎಂ ಹೆಲ್ತ್ ಕಾರ್ಡ್ ಲಭ್ಯವಾಗಿದೆ.

    ಒಂದು ವರ್ಷದ ಹಿಂದೆ ಸಿಎಂ ಆರೋಗ್ಯದಲ್ಲಿ ಏರುಪೇರಾಗಿದ್ದು ನಿಜ. ಈ ಸಂಬಂಧ ಸಿಎಂ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿರೋದು ನಿಜ. ಬ್ಲಡ್ ಪ್ರೆಷರ್, ಶುಗರ್ ಜೊತೆ ಹಾರ್ಟ್ ಪ್ರಾಬ್ಲಂ ಕೂಡ ಇತ್ತು. ಈ ಹಿನ್ನೆಲೆಯಲ್ಲಿ ಸಿಎಂ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆಯ ಬಳಿಕ ತಮ್ಮ ಜೀವನ ಶೈಲಿಯನ್ನು ಬದಲಿಸಿಕೊಂಡಿರುವ ಸಿಎಂ ಇಂದು ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ. ಹದೆಗೆಟ್ಟ ಆರೋಗ್ಯವನ್ನು ಸಿಎಂ ಸುಧಾರಿಸಿಕೊಂಡಿದ್ದಾರೆ.

    ಬದಲಾದ ಜೀವನ ಶೈಲಿ:
    ಶಸ್ತ್ರಚಿಕಿತ್ಸೆಗೂ ಮುನ್ನ ಕುಮಾರಸ್ವಾಮಿ ಅವರು ವಾರಕ್ಕೆ ಮೂರ್ನಾಲ್ಕು ಬಾರಿ ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಮಟನ್, ಚಿಕನ್ ಮತ್ತು ಫಿಶ್ ಇಷ್ಟಪಡುವ ಸಿಎಂ ವಾರದಲ್ಲಿ ಮೂರರಿಂದ ನಾಲ್ಕು ಬಾರಿ ಸೇವನೆ ಮಾಡುತ್ತಿದ್ದರು. ಈಗ ಎಲ್ಲವು ಬದಲಾಗಿದ್ದು, ಅಪರೂಪಕ್ಕೊಮ್ಮೆ ಮೀನು ಮತ್ತು ಚಿಕನ್ ಸೇವನೆ ಮಾಡುತ್ತಿದ್ದಾರೆ. ಅದನ್ನು ನಿಯಮಿತ ಪ್ರಮಾಣದಲ್ಲಿಯೇ ಒಂದೆರೆಡು ಪೀಸ್ ಅಂತಾ ವೈದ್ಯರ ಸಲಹೆ ಮೇರೆಗೆ ಸೇವನೆ ಮಾಡುತ್ತಾರೆ.

    ವೈದ್ಯರ ಸಲಹೆ ಮೇರೆಗೆ ಆಹಾರ ಶೈಲಿ ಬದಲಿಸಿಕೊಂಡ ಸಿಎಂ ಬಹುತೇಕ ಸಸ್ಯಹಾರಿಯಾಗಿ ಬದಲಾಗಿದ್ದಾರೆ. ಇಂದು ಬ್ರಡ್ ಪ್ರೆಶರ್ ಮತ್ತು ಶುಗರ್ ನಿಯಂತ್ರಣಕ್ಕೆ ಬಂದಿದ್ದು, ದಿನಕ್ಕೆ 15 ಗಂಟೆ ಕೆಲಸ ಮಾಡುವ ಸಾಮಥ್ರ್ಯವನ್ನು ಹೊಂದಿದ್ದಾರೆ. ಶುಗರ್ ಕಂಟ್ರೋಲ್ ಗಾಗಿ ಸಿಎಂ ಡಯಟ್ ಚಾರ್ಟ್ ಮತ್ತು ಕ್ರಮಬದ್ಧ ವ್ಯಾಯಾಮದಲ್ಲಿ ತೊಡಗಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಹಿಡಿತದಲ್ಲಿಟ್ಟುಕೊಂಡಿದ್ದಾರೆ.

    ಆಹಾರ ಶೈಲಿ:
    ಶುಗರ್ ಕಂಟ್ರೋಲ್ ಗಾಗಿ ಸಿಎಂ ಸೊಪ್ಪು, ಕಾಳು ಮತ್ತು ಜ್ಯೂಸ್ ಹೆಚ್ಚು ಸೇವನೆ ಮಾಡುತ್ತಾರೆ. ಬೆಳಗ್ಗೆ 3 ಇಡ್ಲಿ, ಮಧ್ಯಾಹ್ನ ಮುದ್ದೆಯನ್ನು ಆಹಾರದಲ್ಲಿ ಬಳಸುತ್ತಾರೆ. ಇನ್ನು ಹೊರಗಡೆ ಹೋದಾಗ ಸಿಎಂ ಬಹುತೇಕ ಮನೆಯಿಂದಲೇ ಊಟ ಕ್ಯಾರಿ ಮಾಡುತ್ತಾರೆ. ಬೆಳಗ್ಗೆ ತಿಂಡಿಯಾಗಿ 3 ಇಡ್ಲಿ, ಒಂದಿಷ್ಟು ಪ್ರೂಟ್ಸ್, ಮಧ್ಯಾಹ್ನ ಮುದ್ದೆ, ಸಂಜೆ ಸ್ವಲ್ವ ಮೊಸರನ್ನ. ಬಾಯಿ ಚಪಲಕ್ಕೂ ಕುರುಕಲು ತಿಂಡಿ ಮುಟ್ಟೋದೇ ಇಲ್ಲ.

    130 ಕೆಜಿ ತೂಕವಿದ್ದರಷ್ಟೇ ಬ್ಯಾರಿಯಾಟ್ರಿಕ್ ಸರ್ಜರಿಗೆ ವೈದ್ಯರು ಸಲಹೆ ನೀಡುತ್ತಾರೆ. ಕುಮಾರಸ್ವಾಮಿ ಅವರ ಸದ್ಯದ ತೂಕ 95 ಕೆಜಿ. ಸಿಎಂ ಲೈಫ್ ಸ್ಟೈಲ್ ಬಹಳಷ್ಟು ಬದಲಾಗಿ ಹೋಗಿದ್ದರಿಂದ ಶುಗರ್, ರಕ್ತದೊತ್ತಡ ಎಲ್ಲವೂ ಕಂಟ್ರೋಲ್‍ಗೆ ಬಂದಿದೆ. ವರ್ಷದ ಕೊನೆಗೆ ಸಿಎಂ ವಿದೇಶಕ್ಕೆ ಹೋಗುವುದು ಸಾಮಾನ್ಯ. ಕಳೆದ ಎರಡ್ಮೂರು ವರ್ಷಗಳಿಂದ ಕುಮಾರಸ್ವಾಮಿ ವಿದೇಶಕ್ಕೆ ಹೋಗುತ್ತಿದ್ದಾರೆ. ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆಯುವ ಅಗತ್ಯ ಅವರಿಗಿಲ್ಲ. ಇತ್ತೀಚೆಗೆ ತಪಾಸಣೆಗೆ ಒಳಗಾದಾಗ ಎಲ್ಲವು ಕಂಟ್ರೋಲ್ ನಲ್ಲಿದೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕರು ಡಾ. ಮಂಜುನಾಥ್ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕೂಲ್ ಕೂಲ್ ಬೆಂಗ್ಳೂರಿನ ವಾತಾವರಣಕ್ಕೆ ಸಿಟಿ ಮಂದಿ ಫಿದಾ!

    ಕೂಲ್ ಕೂಲ್ ಬೆಂಗ್ಳೂರಿನ ವಾತಾವರಣಕ್ಕೆ ಸಿಟಿ ಮಂದಿ ಫಿದಾ!

    ಬೆಂಗಳೂರು: ಮನೆ ಹೊರಗೆ ಮೋಡ ಮುಸುಕಿದ ವಾತಾವರಣ. ಜೊತೆಗೆ ತುಂತುರು ಮಳೆಯ ಸಿಂಚನ. ಹಾಸಿಗೆ ಮೇಲಿಂದ ಎದ್ದು ಬರಲು ಆಗದೆ ಇರುವಷ್ಟು ಚಳಿ. ಬೆಂಗಳೂರು ನಗರದ ಮಂದಿಯನ್ನು ಈ ರೀತಿಯಲ್ಲಿ ಕಾಡುತ್ತಿರುವ ವಾತಾವರಣಕ್ಕೆ ಜನ ಫುಲ್ ಫಿದಾ ಆಗಿದ್ದಾರೆ. ಆದರೆ ಇದೇ ರೀತಿ ವಾತಾವರಣ ಮುಂದುವರಿದರೆ ಆರೋಗ್ಯದ ಮೇಲೆ ಪರಿಣಾಮವಾಗುವ ಸಾಧ್ಯತೆಯಿದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

    ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮವಾಗಿ ಉದ್ಯಾನ ನಗರಿಯಲ್ಲಿ ಮುಂಜಾನೆಯಿಂದ ತುಂತುರು ಮಳೆಯಾಗುತ್ತಿದೆ. ಬೆಳಗ್ಗೆ 10 ಗಂಟೆಯಾದರೂ ಮೋಡ ಮುಸುಕಿದ ವಾತಾವರಣದಿಂದ ಕೂಡಿದ್ದು, ತಣ್ಣನೆಯ ಗಾಳಿ, ಚಳಿಯ ಜೊತೆಗೆ ತುಂತುರು ಹನಿಗಳ ಸಿಂಚನವಾಗುತ್ತಿದೆ. ಇದು ಜನರಿಗೆ ನಾವು ಬೆಂಗಳೂರಿನಲ್ಲಿದ್ದೇವಾ ಅಥವಾ ಯಾವುದೋ ಮಲೆನಾಡಿನಲ್ಲಿದ್ದೇವಾ ಎನ್ನುವ ಅನುಭವವನ್ನು ಉಂಟು ಮಾಡಿದೆ.

    ಈ ರೀತಿಯ ವಾತಾವರಣ ಇರುವುದರಿಂದ ಆರೋಗ್ಯದ ಮೇಲೆ ಬಹುಬೇಗ ಪರಿಣಾಮ ಬಿರುವ ಸಾಧ್ಯತೆ ಬಗ್ಗೆ ವೈದ್ಯರು ಎಚ್ಚರಿಕೆ ನೀಡಿದ್ದು, ತುಂತುರು ಮಳೆ, ಶೀತಗಾಳಿಯಿಂದ ಪ್ರಮುಖವಾಗಿ ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಕುರಿತು ಸೂಚನೆ ನೀಡಿದ್ದಾರೆ. ಚಳಿಗಾಲದ ಮಳೆಯಲ್ಲಿ ನೆನೆಯುವುದರಿಂದ ನೆಗಡಿ, ಕೆಮ್ಮು, ಗಂಟಲು ನೋವು ಆರೋಗ್ಯದ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳುವ ಲಕ್ಷಣಗಳಿದ್ದು, ಮಕ್ಕಳು ಮತ್ತು ವೃದ್ಧರು ಅದಷ್ಟು ಬೆಚ್ಚಗಿನ ವಾತಾವರಣದಲ್ಲಿ ಇರುವಂತೆ ನೋಡಿಕೊಳ್ಳಿ ಎಂದಿದ್ದಾರೆ.

    ತುಂತುರು ಮಳೆಯ ಹವಾಮಾನ ಯುವ ಜನತೆಗೆ ಉಲ್ಲಾಸ ತಂದಿದೆ. ನಗರದಲ್ಲಿ ಇನ್ನು ಎರಡು ದಿನಗಳ ಕಾಲ ಹೀಗೆ ತುಂತುರು ಮಳೆ ಮತ್ತು ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲಸ ತೆರಳುವವರು ತುಂತುರು ಮಳೆಯಿಂದ ಸ್ವಲ್ಪ ಎಚ್ಚರ ವಹಿಸಿ ಕುಲ್ ಕುಲ್ ವಾತಾವರಣ ಎಂಜಾಯ್ ಮಾಡಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕುಂಬಳಕಾಯಿ ಸೇವನೆಯಿಂದ ಆರೋಗ್ಯಕ್ಕೆ ಆಗುವ ಲಾಭಗಳು

    ಕುಂಬಳಕಾಯಿ ಸೇವನೆಯಿಂದ ಆರೋಗ್ಯಕ್ಕೆ ಆಗುವ ಲಾಭಗಳು

    ಕುಂಬಳಕಾಯಿ ಸೇವನೆಯಿಂದ ಹಲವು ಲಾಭವಿದೆ. ಕುಂಬಳಕಾಯಿಯಲ್ಲಿರುವ ಪೌಷ್ಟಿಕ ಅಂಶ ಹೊಟ್ಟೆಗೆ ಸಂಬಂಧಿಸಿದ ರೋಗವನ್ನು ದೂರ ಮಾಡುವುದಲ್ಲದೇ ಹೃದಯ ಸಂಬಂಧಿತ ಕಾಯಿಲೆಯನ್ನೂ ದೂರ ಮಾಡುತ್ತದೆ. ಹೀಗಾಗಿ ಇಲ್ಲಿ ಕುಂಬಳಕಾಯಿ ಸೇವನೆಯಿಂದ ಆಗುವ ಲಾಭಗಳ ಮಾಹಿತಿಯನ್ನು ನೀಡಲಾಗಿದೆ.

    1. ಹೊಟ್ಟೆಯನ್ನು ಆರೋಗ್ಯವಾಗಿ ಇರಿಸುತ್ತದೆ: ಕುಂಬಳಕಾಯಿ ನಮ್ಮ ಹೊಟ್ಟೆಗೆ ಲಾಭದಾಯಕ. ಅದರ ಸೇವನೆಯಿಂದ ನಮ್ಮ ಹೊಟ್ಟೆಯನ್ನು ಆರೋಗ್ಯವಾಗಿರಿಸಲು ಸಹಾಯ ಮಾಡುತ್ತದೆ. ಕುಂಬಳಕಾಯಿಯಲ್ಲಿ ಡೈಯಟ್ರಿ ಫೈಬರ್ ಇರುವುದರ ಕಾರಣ ಹೊಟ್ಟೆ ಸಂಬಂಧಿತ ಕಾಯಿಲೆಯನ್ನು ದೂರ ಮಾಡುತ್ತದೆ. ಅಲ್ಲದೇ ಇದು ನಮಗೆ ಆ್ಯಸಿಡಿಟಿ ಮತ್ತು ಹೊಟ್ಟೆ ಉರಿಯನ್ನು ದೂರ ಮಾಡುತ್ತೆ.

    2. ಡಯಾಬಿಟಿಸ್ ರೋಗಿಗಳಿಗೆ ಉತ್ತಮ: ಕುಂಬಳಕಾಯಿಯಲ್ಲಿ ವಿಟಮಿನ್ ಸಿ ಅಂಶವಿರುವ ಕಾರಣ ಇನ್ಸೂಲಿನ್‍ಗೆ ಸಮಾವಾಗಿರುತ್ತದೆ. ಅಲ್ಲದೇ ಜಾಸ್ತಿಯಾಗಿರುವ ಶುಗರ್ ಕಡಿಮೆ ಮಾಡುತ್ತದೆ. ಡಯಾಬಿಟಿಸ್ ರೋಗಿಗಳು ವಾರಕ್ಕೆ ಎರಡು ಬಾರಿ ಕುಂಬಳಕಾಯಿಯನ್ನು ಸೇವಿಸಬೇಕು.

    3. ಕ್ಯಾನ್ಸರ್ ತಡೆಗಟ್ಟುತ್ತದೆ: ಕುಂಬಳಕಾಯಿಯಲ್ಲಿ ಆ್ಯಂಟಿ- ಆಕ್ಸಿಡೆಂಟ್ ಅಂಶವಿರುತ್ತದೆ. ಇದು ದೇಹದಲ್ಲಿರುವ ಕ್ಯಾನ್ಸರ್ ಸ್ಲೇಸ್ ಹೆಚ್ಚುವುದನ್ನು ತಡೆಯುತ್ತದೆ. ಹಾಗಾಗಿ ನಿಮ್ಮ ಡಯಟ್ ಲಿಸ್ಟ್ ನಲ್ಲಿ ಕುಂಬಳಕಾಯಿ ಪಲ್ಯ, ಜ್ಯೂಸ್ ಅನ್ನು ಸೇರಿಸಿಕೊಳ್ಳಿ. ಇದರ ಸೇವನೆಯಿಂದ ಕ್ಯಾನ್ಸರ್ ಅಂತಹ ಗಂಭೀರ ರೋಗವನ್ನು ತಡೆಯುತ್ತದೆ.

    4. ಒತ್ತಡವನ್ನು ದೂರ ಮಾಡುತ್ತದೆ: ಕುಂಬಳಕಾಯಿ ಸೇವನೆಯಿಂದ ಒತ್ತಡ, ನಿದ್ರಾಹೀನತೆ, ಕೋಪ, ಖಿನ್ನತೆ ಸಮಸ್ಯೆಯನ್ನು ದೂರ ಮಾಡುತ್ತದೆ. ಇದರ ಹೊರತು ಕುಂಬಳಕಾಯಿ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ.

    5. ಹೃದಯವನ್ನು ಆರೋಗ್ಯವಾಗಿ ಇರಿಸುತ್ತದೆ: ಕುಂಬಳಕಾಯಿ ಸೇವಿಸಿದರೆ ಅದು ನಮ್ಮ ದೇಹದ ಕೋಲೆಸ್ಟ್ರಾಲ್ ಲೆವೆಲ್ ಮೆಂಟೇನ್ ಮಾಡಿ ಹೃದಯವನ್ನು ಆರೋಗ್ಯವಾಗಿರುತ್ತದೆ. ನಿಮಗೆ ಹೃದಯ ಸಂಬಂಧಿತ ಸಮಸ್ಯೆಯಿದರೆ, ಇದರ ಸೇವನೆಯಿಂದ ಆರೋಗ್ಯಕ್ಕೆ ಲಾಭವಾಗುತ್ತದೆ.

    6. ತೂಕ ಇಳಿಸಲು ಸಹಾಯ: ಕುಂಬಳಕಾಯಿಯಲ್ಲಿ ಕ್ಯಾಲೋರಿ ಕಡಿಮೆ ಹಾಗೂ ಫೈಬರ್ ಜಾಸ್ತಿಯಿರುತ್ತದೆ. ಹಾಗಾಗಿ ಇದನ್ನು ಸೇವಿಸುವುದರಿಂದ ಪದೇ ಪದೇ ಹೊಟ್ಟೆ ಹಸಿಯುವುದಿಲ್ಲ. ಇದು ನಿಮ್ಮ ಹೊಟ್ಟೆಯನ್ನು ತುಂಬಿರಿಸುತ್ತದೆ. ಹಾಗಾಗಿ ನೀವು ಅಧಿಕ ಆಹಾರ ಸೇವಿಸುವುದಿಲ್ಲ. ಇದರಿಂದಾಗಿ ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

    7. ಕಣ್ಣಿನ ದೃಷ್ಟಿಯನ್ನು ಹೆಚ್ಚಿಸುತ್ತದೆ: ಕುಂಬಳಕಾಯಿಯಲ್ಲಿ ವಿಟಮಿನ್ ಎ ಅಂಶವಿರುವುದರಿಂದ ನಿಮ್ಮ ಕಣ್ಣುಗಳಿಗೆ ಇದು ಒಳ್ಳೆಯದು. ದಿನ ಒಂದು ಕಪ್ ಕುಂಬಳಕಾಯಿ ಸೇವಿಸಿದರೆ, ಕೆಲವೇ ದಿನಗಳಲ್ಲಿ ಇದು ನಿಮ್ಮ ಕಣ್ಣಿನ ದೃಷ್ಟಿಯನ್ನು ಹೆಚ್ಚಿಸುತ್ತದೆ.

    ಸದ್ಯ ಕುಂಬಳಕಾಯಿ ಸೇವನೆಯಿಂದ ಮೇಲಿರುವ ಎಲ್ಲ ಸಮಸ್ಯೆಗಳು ದೂರವಾಗಿ ನಿಮ್ಮನ್ನು ಆರೋಗ್ಯವಾಗಿ ಇರಿಸಲು ಸಹಾಯ ಮಾಡುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನೆಂಟರ ಜೊತೆ ಸೇರಿ ಶೇಂಗಾ/ನೆಲಗಡಲೆ ಉಂಡೆ ಮಾಡಿ ಹಬ್ಬವನ್ನು ಸಂಭ್ರಮಿಸಿ

    ನೆಂಟರ ಜೊತೆ ಸೇರಿ ಶೇಂಗಾ/ನೆಲಗಡಲೆ ಉಂಡೆ ಮಾಡಿ ಹಬ್ಬವನ್ನು ಸಂಭ್ರಮಿಸಿ

    ಬೇರೆ ಬೇರೆ ರೀತಿಯ ಉಂಡೆಗಳನ್ನು ನೀವು ತಿಂದಿರಬಹುದು. ಆದರಲ್ಲೂ ಬಹಳಷ್ಟು ಜನರಿಗೆ ನೆಲಗಡಲೆ ಉಂಡೆ ಅಂದ್ರೆ ಬಹಳ ಅಚ್ಚುಮೆಚ್ಚು. ಹಲವು ಜನರ ಪ್ರಿಯವಾಗಿರುವ ನೆಲಗಡಲೆ ಉಂಡೆ ಮಾಡುವುದು ಸಹ ಅಷ್ಟೇನು ಕಷ್ಟದ ಕೆಲಸವಲ್ಲ. ಮನೆಯಲ್ಲೇ ಉಂಡೆ ಮಾಡಬಹುದು. ಹೇಗೂ ಮನೆಗೆ ನೆಂಟರು ಬಂದಿರುತ್ತಾರೆ. ಬಂದವರ ಜೊತೆ ಸೇರಿ ಉಂಡೆ ಮಾಡಿ ತಿಂದರೆ ಹಬ್ಬದ ಸಂಭ್ರಮವೇ ಬೇರೆ. ಹೀಗಾಗಿ ಇಲ್ಲಿ ನೆಲಗಡಲೆ ಉಂಡೆ ಮಾಡುವ ಸರಳ ವಿಧಾನವನ್ನು ವಿವರಿಸಲಾಗಿದೆ.

    ಬೇಕಾಗುವ ಸಾಮಾಗ್ರಿಗಳು
    1. ಕಡಲೆಬೀಜ – 1 ಕಪ್
    2. ತುರಿದ ಕೊಬ್ಬರಿ – 1/4 ಕಪ್
    3. ಬೆಲ್ಲ – 3/4 ಕಪ್
    4. ಎಳ್ಳು – 1/4 ಕಪ್
    5. ಏಲಕ್ಕಿ – ಚಿಟಿಕೆ

    ಮಾಡುವ ವಿಧಾನ:
    1. ದಪ್ಪ ತಳದ ಪ್ಯಾನ್ ಗೆ ಮಧ್ಯಮ ಉರಿಯಲ್ಲಿ ಕಡಲೆಬೀಜಗಳನ್ನ ಹುರಿದುಕೊಳ್ಳಿ.
    2. ಯಾವಾಗ ಕಡಲೆಬೀಜಗಳು ಕಂದು ಬಣ್ಣಕ್ಕೆ ತಿರುಗುತ್ತದೆಯೋ, ಆಗ ಅದಕ್ಕೆ ಎಳ್ಳನ್ನ ಸೇರಿಸಿ ಹುರಿದುಕೊಳ್ಳಿ
    3. ಎಳ್ಳು ಸ್ವಲ್ಪ ಕಂದು ಬಣ್ಣಕ್ಕೆ ತಿರುಗಿದ ಮೇಲೆ, ಸಣ್ಣ ಉರಿಯಲ್ಲಿ ಕೊಬ್ಬರಿ ತುರಿಯನ್ನ ಗರಿ ಗರಿಯಾಗುವವರೆಗೆ ಹುರಿದುಕೊಳ್ಳಿ. ನಂತರ ಸ್ಟವ್ ಆಫ್ ಮಾಡಿ.
    4. ಹುರಿದ ಕೊಬ್ಬರಿ, ಕಡಲೆಬೀಜ, ಎಳ್ಳು ಎಲ್ಲಾ ತಣ್ಣಗಾದ ಮೇಲೆ ಮಿಕ್ಸಿಯಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ.
    5. ಪುಡಿಯು ಆದಷ್ಟು ತರಿ ತರಿಯಾಗಿ ಮತ್ತು ದಪ್ಪವಾಗಿರಲಿ.
    6. ಅದಕ್ಕೆ ಬೆಲ್ಲವನ್ನ ಹಾಕಿ ಪುಡಿ ಮಾಡಿಕೊಳ್ಳಿ.
    7. ಸುಮಾರು 3-4 ಸುತ್ತು ಮಿಕ್ಸಿಯಲ್ಲಿ ಪುಡಿ ಮಾಡಿ. ಅದಕ್ಕಿಂತ ಹೆಚ್ಚು ಮಾಡದಿರಿ
    8. ಈ ಪುಡಿಯನ್ನ ಒಂದು ತಟ್ಟೆಗೆ ಹಾಕಿ, ಅದಕ್ಕೆ ಏಲಕ್ಕಿ ಪುಡಿಯನ್ನ ಮಿಶ್ರ ಮಾಡಿರಿ
    9. ಸಣ್ಣ ಸಣ್ಣ ಉಂಡೆಗಳನ್ನ ಮಾಡಿ, ಗಾಳಿ ಆಡದಂತ ಡಬ್ಬಿಗೆ ಆ ಉಂಡೆಗಳನ್ನ ಹಾಕಿ, ವಾರಗಟ್ಟಲೆ ಶೇಖರಿಸಿ ಇಡಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೀಪಾವಳಿಗೆ ರುಚಿ ರುಚಿಯಾದ ಕುಂಬಳಕಾಯಿ ಇಡ್ಲಿ ಮಾಡೋದು ಹೇಗೆ?

    ದೀಪಾವಳಿಗೆ ರುಚಿ ರುಚಿಯಾದ ಕುಂಬಳಕಾಯಿ ಇಡ್ಲಿ ಮಾಡೋದು ಹೇಗೆ?

    ಬ್ಬಗಳು ಬಂದರೆ ಸಾಕು ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗುತ್ತದೆ. ಅದರಲ್ಲೂ ಮಹಿಳೆಯರಂತೂ ತಿಂಡಿ-ತಿನಿಸುಗಳನ್ನು ಮಾಡುವುದರಲ್ಲಿ ಬ್ಯುಸಿಯಾಗುತ್ತಾರೆ. ಪ್ರತಿ ಹಬ್ಬದಲ್ಲೂ ಒಂದೇ ರೀತಿಯ ತಿಂಡಿಗಳನ್ನು ಬೇಜಾರಾಗಿರುತ್ತೆ. ಸಾಮಾನ್ಯವಾಗಿ ಅಕ್ಕಿ, ರವೆ ಮತ್ತು ರಾಗಿಯಲ್ಲಿ ಇಡ್ಲಿ ಮಾಡುತ್ತೀರಾ. ಆದರೆ ಹಬ್ಬ ಅಂದರೆ ಏನಾದರೂ ಸ್ಪೆಷನ್ ಆಗಿ ಮಾಡಬೇಕು ಅಲ್ಲವಾ.. ಅದಕ್ಕಾಗಿ ಈ ಬಾರಿ ಸಿಹಿಕುಂಬಳಕಾಯಿಯಲ್ಲಿ ಇಡ್ಲಿ ಮಾಡುವ ವಿಧಾನ ಇಲ್ಲಿದೆ..

    ಬೇಕಾಗಿರುವ ಸಾಮಾಗ್ರಿಗಳು
    1. ತುರಿದ ಕುಂಬಳಕಾಯಿ- 1 ಕಪ್
    2. ತುರಿದ ತೆಂಗಿನಕಾಯಿ – 1/2 ಕಪ್
    3. ಬೆಲ್ಲ (ರುಚಿಗೆ ತಕ್ಕಷ್ಟು) – 1/4 ಕಪ್
    4.. ಇಡ್ಲಿ ರವೆ ಅಥವಾ ಅಕ್ಕಿ ರವೆ – 1/2 ಕಪ್
    5. ಏಲಕ್ಕಿ – 1
    6. ಎಣ್ಣೆ -2-3 ಚಮಚ

    ಮಾಡುವ ವಿಧಾನ:
    *  ಮಿಕ್ಸಿ ಜಾರಿಗೆ ತೆಂಗಿನ ತುರಿ, ಏಲಕ್ಕಿ, ಮತ್ತು ಬೆಲ್ಲವನ್ನ ಹಾಕಿ ಪುಡಿ ಮಾಡಿಕೊಳ್ಳಿ.
    *  ಈ ಪುಡಿಯನ್ನ ಒಂದು ಅಗಲವಾದ ಬಟ್ಟಲಿಗೆ ಹಾಕಿಕೊಳ್ಳಿ.
    *  ಈಗ ಇದಕ್ಕೆ ತುರಿದ ಸಿಹಿಕುಂಬಳಕಾಯಿ, ಇಡ್ಲಿ ರವೆ,  ಸ್ವಲ್ಪ ನೀರನ್ನ ಹಾಕಿರಿ.
    *  ಈ ಮಿಶ್ರಣವನ್ನ ಮೃದುವಾಗಿ ಕಲಸಿಕೊಳ್ಳಿ. 5 ನಿಮಿಷ ಹಾಗೆಯೇ ಬಿಡಿ.
    *  ಇಡ್ಲಿ ಪಾತ್ರೆಗೆ ಎಣ್ಣೆ ಸವರಿ, ಇಡ್ಲಿ ಆಕಾರದಲ್ಲಿ ಈ ಮಿಶ್ರಣವನ್ನ ತುಂಬಿರಿ.
    *  12-13 ನಿಮಿಷಗಳವರೆಗೆ ಇದನ್ನ ಹಬೆಯಲ್ಲಿ ಬೇಯಿಸಿಕೊಳ್ಳಿ
    *  ಬಿಸಿ ಸಿಹಿಕುಂಬಳಕಾಯಿಯ ಇಡ್ಲಿಯನ್ನ ತುಪ್ಪ ಅಥವಾ ಜೇನುತುಪ್ಪ ಜೊತೆ ಸವಿಯಿರಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೌತೆಕಾಯಿ ತಿನ್ನುವುದರಿಂದ ಆರೋಗ್ಯದ ಮೇಲೆ ಆಗೋ ಪರಿಣಾಮದ ಬಗ್ಗೆ ಓದಿ

    ಸೌತೆಕಾಯಿ ತಿನ್ನುವುದರಿಂದ ಆರೋಗ್ಯದ ಮೇಲೆ ಆಗೋ ಪರಿಣಾಮದ ಬಗ್ಗೆ ಓದಿ

    ಸೌತೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ಹಲವರು ತಿಳಿದುಕೊಂಡಿರುತ್ತಾರೆ. ಕೆಲವರು ತಮ್ಮ ಡಯಟ್‍ಗೆಂದು ಸೌತೆಕಾಯಿ ತಿನ್ನುತ್ತಾರೆ. ಸೌತೆಕಾಯಿ ತಿನ್ನುವುದರಿಂದ ಒಳ್ಳೆಯದಾಗುತ್ತದೆ. ಸೌತೆಕಾಯಿ ಒಳ್ಳೆಯದು ಅಂತಾ ಹೆಚ್ಚಾಗಿ ಸೇವನೆ ಮಾಡಿದ್ರೆ ಅದು ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

    ಕೆಲವು ಜನರು ಡಯಟ್ ಎಂದು ದಿನಕ್ಕೆ 8 ರಿಂದ 10 ಸೌತೆಕಾಯಿ ತಿನ್ನುತ್ತಾರೆ. ಸೌತೆಕಾಯಿ ತಿನ್ನುವುದರಿಂದ ನಮ್ಮ ದೇಹಕ್ಕೆ ಒಳ್ಳೆಯದಾಗುತ್ತೆ. ಆದರೆ ಅವಶ್ಯಕ್ಕಿಂತ ಹೆಚ್ಚು ಸೌತೆಕಾಯಿ ತಿಂದರೆ ಅಮೃತವೂ ವಿಷವಾಗುತ್ತದೆ ಎನ್ನುವ ಗಾದೆ ಮಾತಿನಂತೆ ಸೌತೆಕಾಯಿ ಕೂಡ ವಿಷ ಆಗುತ್ತದೆ.

    ರಾತ್ರಿ ಸಮಯದಲ್ಲಿ ಎಂದಿಗೂ ಸೌತೆಕಾಯಿ ತಿನ್ನಬೇಡಿ. ಬೆಳಗ್ಗೆ ಹೊತ್ತು ಸೌತೆಕಾಯಿ ತಿಂದರೆ ನಿಮ್ಮ ದೇಹಕ್ಕೆ ಅಧಿಕ ಲಾಭವಾಗುತ್ತದೆ. ಮಧ್ಯಾಹ್ನ ತಿಂದರೆ ಸಾಮಾನ್ಯವಾಗಿ ಒಳ್ಳೆಯದಾಗುತ್ತದೆ. ಆದರೆ ರಾತ್ರಿ ಸೌತೆಕಾಯಿ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗುತ್ತದೆ.

    ಸೌತೆಕಾಯಿಯಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಕುಕುರ್ಬಿಟೈನ್ ಎಂಬ ವಿಷಕಾರಿ ಅಂಶವಿರುತ್ತದೆ. ನೀವು ಅವಶ್ಯಕ್ಕಿಂತ ಹೆಚ್ಚು ಸೌತೆಕಾಯಿ ತಿಂದರೆ ನಿಮ್ಮೆ ದೇಹದಲ್ಲಿ ಟಾಕ್ಸಿಕ್ ಅಂಶ ಸೇರುತ್ತದೆ. ಇದರಿಂದ ನಿಮ್ಮ ಲಿವರ್, ಪ್ಯಾಂಕ್ರಿಯಾಟಿಕ್ ಮತ್ತು ಮೂತ್ರಪಿಂಡ ಊತವಾಗುತ್ತದೆ. ಹಾಗಾಗಿ ಸೌತೆಕಾಯಿಯನ್ನು ಮಿತಿಯಲ್ಲಿ ತಿಂದರೆ ಉತ್ತಮ.

    ಸೌತೆಕಾಯಿ ತಣ್ಣಗಿನ ಪದಾರ್ಥ. ನಿಮಗೆ ಕಫ, ಶೀತ, ನೆಗಡಿ ಅಥವಾ ಉಸಿರಾಟದ ಸಮಸ್ಯೆ ಇದ್ದರೆ ಸೌತೆಕಾಯಿ ತಿನ್ನಬೇಡಿ. ಸೌತೆಕಾಯಿಯನ್ನು ಮಿತವಾಗಿ ಸೇವನೆ ಮಾಡಿದ್ದಲ್ಲಿ ನಿಮ್ಮ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಂದದ ಕಣ್ಣಿಗೆ ಮನೆಯಲ್ಲಿಯೇ ಆರೈಕೆ ಮಾಡಿ

    ಚಂದದ ಕಣ್ಣಿಗೆ ಮನೆಯಲ್ಲಿಯೇ ಆರೈಕೆ ಮಾಡಿ

    ಸಾಮಾನ್ಯವಾಗಿ ಎಲ್ಲರಿಗೂ ಕಣ್ಣಿನ ಸುತ್ತ ಕಪ್ಪು ಕಲೆಗಳು ಕಾಣಿಸಿಕೊಳ್ಳುತ್ತವೆ. ಅದು ಹೆಚ್ಚಾಗಿ ವಯಸ್ಕರಲ್ಲಿ ಕಾಣಿಸಿಕೊಳ್ಳುತ್ತದೆ. ಸರಿಯಾಗಿ ನಿದ್ದೆ ಮಾಡದೇ, ಕಣ್ಣಿಗೆ ಸರಿಯಾಗಿ ಆರೈಕೆ ಮಾಡದೇ ಇರುವುದರಿಂದ ಕಣ್ಣಿನ ಸುತ್ತ ಕಪ್ಪು ಕಲೆಯಾಗುತ್ತದೆ. ಅದರಲ್ಲೂ ಕಂಪ್ಯೂಟರ್ ಮುಂದೆ ಹೆಚ್ಚಾಗಿ ಕುಳಿತು ಕೆಲಸ ಮಾಡುವುದರಿಂದ ಕಣ್ಣಿನ ಸುತ್ತ ಡಾರ್ಕ್ ಸರ್ಕಲ್ ಬರುತ್ತದೆ. ಆದ್ದರಿಂದ ಇದನ್ನು ತಡೆಯಲು ಮನೆಯಲ್ಲಿಯೇ ಮದ್ದು ಮಾಡಬಹುದು.

    ಕಣ್ಣಿನ ಅಂದಕ್ಕೆ ಮನೆಮದ್ದು:
    * ಪ್ರತಿದಿನ ಕಡಿಮೆ ಎಂದರೆ 7 ಗಂಟೆ ನಿದ್ದೆ ಮಾಡಬೇಕು.
    * ಸೌತೆಕಾಯಿಯ ರಸವನ್ನು ಪ್ರತಿದಿನ ಕಣ್ಣಿನ ಸುತ್ತ ಹಚ್ಚಿ ಮತ್ತು 15 ನಿಮಿಷದ ನಂತರ ನೀರಿನಿಂದ ತೊಳೆಯಿರಿ.
    * ಪ್ರತಿ ದಿನದ ಒತ್ತಡ ಮತ್ತು ಆತಂಕಗಳನ್ನು ಕಡಿಮೆ ಮಾಡಿಕೊಳ್ಳುವುದು ಕೂಡ ಕಪ್ಪು ವೃತ್ತ ತಡೆಯಲು ಉತ್ತಮ ವಿಧಾನವಾಗಿದೆ.

    * ತಣ್ಣಗಿನ ಟೀ ಬ್ಯಾಗ್ ಅನ್ನು ಕಣ್ಣಿನ ಕೆಳಭಾಗದಲ್ಲಿ ಇಡುವುದರಿಂದ ಕೂಡ ಕಣ್ಣಿನ ಕಪ್ಪು ಕಲೆಗಳು ಮಾಯವಾಗುತ್ತವೆ.
    * ದಿನಕ್ಕೆ 10 ಲೋಟ ನೀರು ಕುಡಿಯಬೇಕು. ನೀರಿನಾಂಶ ಹೆಚ್ಚಾದಷ್ಟು ಕಣ್ಣಿನ ಸುತ್ತ ಇರೋ ಕಲೆಗಳನ್ನು ಹೋಗಲಾಡಿಸಬಹುದು.

    * ನಿಂಬೆ ಹಣ್ಣು ಮತ್ತು ಸೌತೆ ಕಾಯಿಯನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ ಅದರ ರಸವನ್ನು ಪ್ರತಿದಿನ ಹಚ್ಚಿ. 15 ನಿಮಿಷದ ನಂತರ ನೀರಿನಲ್ಲಿ ತೊಳೆದುಕೊಂಡರೆ ಕಪ್ಪು ವೃತ್ತ ಕಡಿಮೆಯಾಗುತ್ತದೆ.
    * ಕೆಲಸ, ಕಾಲೇಜು ಮುಗಿಸಿ ಮನೆಗೆ ಹೋದಾಗ ಬೆಚ್ಚಗಿನ ಅಥವಾ ತಣ್ಣನೆ ನೀರಿನಿಂದ ಕಣ್ಣನ್ನು ತೊಳೆಯಿರಿ. ಇದರಿಂದ ರಕ್ತ ಸಂಚಲನ ಸುಗಮವಾಗಿಸುವುದರ ಮೂಲಕ ಕಪ್ಪು ವೃತ್ತ ಹೋಗುತ್ತದೆ.

    * ಪುದೀನಾ ಎಲೆಗಳನ್ನು ಜಜ್ಜಿ ಅದನ್ನು ಕಣ್ಣಿನ ಕೆಳಭಾಗಕ್ಕೆ ಹಚ್ಚಿ. 10 ರಿಂದ 15 ನಿಮಿಷ ಬಿಟ್ಟು ತೊಳೆಯಿರಿ. ಈ ರೀತಿ ಮಾಡಿದರೆ ಕಪ್ಪು ಕಲೆಗಳು ಕಡಿಮೆಯಾಗುತ್ತವೆ.
    * ಆಲೂಗಡ್ಡೆ ಮತ್ತು ಸೌತೆಕಾಯಿ ಮಿಶ್ರಣದ ರಸವನ್ನು ಬಳಿದರೆ ಕಣ್ಣಿನ ಸುತ್ತಲು ಇರುವ ಕಪ್ಪು ಕಲೆಯನ್ನು ಹೋಗಲಾಡಿಸಬಹುದು.

    * ಕಿತ್ತಳೆ ರಸವನ್ನು ಗ್ಲಿಸರಿನ್ ಜೊತೆ ಬೆರೆಸಿ ವಾರದಲ್ಲಿ 3 ಬಾರಿ ಕಣ್ಣಿನ ಸುತ್ತ ಹಚ್ಚಿ. ಬಳಿಕ 20 ನಿಮಿಷದ ನಂತರ ತೊಳೆಯಿರಿ. ಇದರಿಂದ ಕಣ್ಣಿನ ಸುತ್ತಲು ಇರುವ ಕಪ್ಪು ಕಲೆಗಳನ್ನು ಹೋಗಲಾಡಿಸಿ.


    * ಮಲಗುವ ಮೊದಲು ಬಾದಾಮಿ ಮತ್ತು ಹಾಲನ್ನು ಮಿಶ್ರ ಮಾಡಿ ಅದನ್ನು ಕಣ್ಣಿನ ಸುತ್ತಲು ಹಚ್ಚಿ. ಮಾರನೆಯ ದಿನ ಬೆಳಗ್ಗೆ ತಣ್ಣನೆಯ ನೀರಿನಿಂದ ತೊಳೆಯಿರಿ.

    * ತಾಜಾ ಹಣ್ಣು, ಮೊಸರು, ಬೇಳೆಕಾಳುಗಳು, ಕೆನೆ ತೆಗೆದ ಹಾಲು, ಸೊಪ್ಪುಗಳು ಮತ್ತು ಬೀನ್ಸ್ ಇವುಗಳನ್ನು ಹೆಚ್ಚಾಗಿ ತಿನ್ನಬೇಕು. ಅದರಲ್ಲೂ ಪೈನಾಪಲ್ ಹಣ್ಣಿನ ಜ್ಯೂಸ್ ತುಂಬಾ ಒಳ್ಳೆಯದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಿವಣ್ಣ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

    ಶಿವಣ್ಣ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ.

    ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಶಿವಣ್ಣ ಗುಣಮುಖರಾಗಿದ್ದರು. ಬ್ಯಾಕ್ ಟೂ ಬ್ಯಾಕ್ ಸಿನಿಮಾ ಶೂಟಿಂಗ್‍ನಲ್ಲಿ ತೊಡಗಿಸಿಕೊಂಡಿದ್ದರಿಂದ ಶಿವರಾಜ್‍ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಭಾನುವಾರ ಮಧ್ಯರಾತ್ರಿಯೇ ಕುಟುಂಬಸ್ಥರು ಶಿವರಾಜ್‍ಕುಮಾರ್ ಮಲ್ಯ ಆಸ್ಪತ್ರೆಗೆ ದಾಖಲಿಸಿದ್ದರು.

    ಶಿವರಾಜ್ ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ತಮ್ಮ ಪತ್ನಿ ಜೊತೆ ಬಂದು ಸಹೋದರನ ಆರೋಗ್ಯದ ಬಗ್ಗೆ ವಿಚಾರಿಸಿದ್ದರು. ಅಲ್ಲದೇ ನಟ ವಿನಯ್ ರಾಜ್ ಕುಮಾರ್ ತಮ್ಮ ದೊಡ್ಡಪ್ಪನ ಆರೋಗ್ಯವನ್ನು ವಿಚಾರಿಸಿದ್ದರು. ನಿರ್ದೇಶಕ ಪ್ರೇಮ್ ಹಾಗೂ ಶಿವಣ್ಣ ಪುತ್ರಿ ನಿವೇದಿತಾ ಆಸ್ಪತ್ರೆಗೆ ಭೇಟಿ ನೀಡಿದ್ದರು.

    ಶಿವರಾಜ್‍ಕುಮಾರ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್ ರಾಜ್‍ಕುಮಾರ್, ಶಿವಣ್ಣನಿಗೆ ಏನು ಆಗಿಲ್ಲ. ಸ್ವಲ್ಪ ಜ್ವರ ಹೆಚ್ಚಾಗಿರೋದ್ರಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈಗ ಜ್ವರ ಕಡಿಮೆಯಾಗಿದೆ. ಡಿಸ್ಚಾರ್ಜ್ ಬಗ್ಗೆ ಇನ್ನು ಆಸ್ಪತ್ರೆಯಲ್ಲಿ ಏನೂ ಹೇಳಿಲ್ಲ. ಸಂಜೆಯೊಳಗೆ ಡಿಸ್ಚಾರ್ಜ್ ಆಗೋ ಸಾಧ್ಯತೆಯಿದೆ ಎಂದು ತಿಳಿಸಿದ್ದರು.

    ಶಿವಣ್ಣ ಅವರಿಗೆ ಏನೂ ಆಗಿಲ್ಲ. ಅವರಿಗೆ ವೈರಲ್ ಜ್ವರ ಬಂದಿದ್ದು, ಡ್ರಿಪ್ಸ್ ನೀಡುತ್ತಿದ್ದಾರೆ. ಮನೆಯಲ್ಲಿ ಡ್ರಿಪ್ಸ್ ಹಾಕಲು ಆಗದಿರುವ ಕಾರಣ ಅವರು ಆಸ್ಪತ್ರೆಗೆ ಬರುವ ಅನಿವಾರ್ಯ ಬಂತು. ಶಿವಣ್ಣ ಕ್ಷೇಮವಾಗಿದ್ದಾರೆ ಎಂದು ನಿರ್ದೇಶಕ ಪ್ರೇಮ್ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಿವಣ್ಣ ಆರೋಗ್ಯ ವಿಚಾರಿಸಿದ ಪುನೀತ್ ದಂಪತಿ, ಪುತ್ರಿ ನಿವೇದಿತ, ನಿರ್ದೇಶಕ ಪ್ರೇಮ್

    ಶಿವಣ್ಣ ಆರೋಗ್ಯ ವಿಚಾರಿಸಿದ ಪುನೀತ್ ದಂಪತಿ, ಪುತ್ರಿ ನಿವೇದಿತ, ನಿರ್ದೇಶಕ ಪ್ರೇಮ್

    ಬೆಂಗಳೂರು: ಜ್ವರದಿಂದ ಬಳಲುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆರೋಗ್ಯವನ್ನು ವಿಚಾರಿಸಲು ಪುತ್ರಿ ನಿವೇದಿತ, ಪುನೀತ್ ರಾಜ್‍ಕುಮಾರ್ ಹಾಗೂ ಅವರ ಪತ್ನಿ ಅಶ್ವಿನಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

    ಶಿವರಾಜ್‍ಕುಮಾರ್ ಗೆ ಆರೋಗ್ಯದ ಬಗ್ಗೆ ವಿಚಾರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್ ರಾಜ್‍ಕುಮಾರ್, ಶಿವಣ್ಣನಿಗೆ ಏನು ಆಗಿಲ್ಲ. ಸ್ವಲ್ಪ ಜ್ವರ ಹೆಚ್ಚಾಗಿರೋದ್ರಿಂದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈಗ ಜ್ವರ ಕಡಿಮೆಯಾಗಿದೆ. ಡಿಸ್ಚಾರ್ಜ್ ಬಗ್ಗೆ ಇನ್ನು ಆಸ್ಪತ್ರೆಯಲ್ಲಿ ಏನೂ ಹೇಳಿಲ್ಲ. ಸಂಜೆಯೊಳಗೆ ಡಿಸ್ಚಾರ್ಜ್ ಆಗೋ ಸಾಧ್ಯತೆಯಿದೆ ಎಂದು ತಿಳಿಸಿದರು.

    ಶಿವಣ್ಣ ಅವರಿಗೆ ಏನೂ ಆಗಿಲ್ಲ. ಅವರಿಗೆ ವೈರಲ್ ಜ್ವರ ಬಂದಿದ್ದು, ಡ್ರಿಪ್ಸ್ ನೀಡುತ್ತಿದ್ದಾರೆ. ಮನೆಯಲ್ಲಿ ಡ್ರಿಪ್ಸ್ ಹಾಕಲು ಆಗದಿರುವ ಕಾರಣ ಅವರು ಆಸ್ಪತ್ರೆಗೆ ಬರುವ ಅನಿವಾರ್ಯ ಬಂತು. ಶಿವಣ್ಣ ಕ್ಷೇಮವಾಗಿದ್ದಾರೆ. ಅವರು ಇಂದು ಸಂಜೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ನಿರ್ದೇಶಕ ಪ್ರೇಮ್ ಹೇಳಿದರು.

    ಚಿಕ್ಕಪ್ಪನ ಆರೋಗ್ಯವನ್ನು ವಿಚಾರಿಸಿ ಪ್ರತಿಕ್ರಿಯಿಸಿದ ವಿನಯ್‍ರಾಜ್, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಶಿವಣ್ಣನ ಜೊತೆ ಕುಟುಂಬದವರು ಇದ್ದಾರೆ ಎಂದರು.

    ಭಾನುವಾರ ಸಂಜೆ ಸಿಎಂ ಕುಮಾರಸ್ವಾಮಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಶಿವರಾಜ್‍ಕುಮಾರ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಅಭ್ಯರ್ಥಿ ಮಧು ಬಂಗಾರಪ್ಪ ಪರ ಚುನಾವಣೆ ಪ್ರಚಾರದಲ್ಲಿ ದಂಪತಿ ಸಮೇತ ಭಾಗಿಯಾಗುತ್ತೇವೆ ಅಂತಾ ಭರವಸೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೊಸರಿನಲ್ಲಿ ಅಡಗಿದೆ ನಿಮ್ಮ ಅಂದ!

    ಮೊಸರಿನಲ್ಲಿ ಅಡಗಿದೆ ನಿಮ್ಮ ಅಂದ!

    ಪ್ರತಿಯೊಬ್ಬರಿಗೂ ತಮ್ಮ ತ್ವಚೆಯನ್ನು ಸದಾ ಕಾಪಾಡಿಕೊಳ್ಳಬೇಕು ಅಂದುಕೊಳ್ಳುತ್ತಾರೆ. ಕೆಲವರು ವೈದ್ಯರ ಸಲಹೆಯನ್ನು ತೆಗೆದುಕೊಳ್ಳುತ್ತಾರೆ. ಕೆಲವರು ತಮಗೆ ಗೊತ್ತಿರುವ ಟಿಪ್ಸ್ ಬಳಸಿ ತ್ವಚೆಯನ್ನು ಕಾಪಾಡಿಕೊಳ್ಳುತ್ತಾರೆ. ಪ್ರತಿಯೊಬ್ಬರ ತ್ವಚೆಯೂ ವಾತಾವರಣಕ್ಕೆ ತಕ್ಕಂತೆ ಬದಲಾಗುತ್ತಿರುತ್ತದೆ. ಆಗಾಗ ನಾವು ಕೂಡ ನಮ್ಮ ತ್ವಚೆಗೆ ಆರೈಕೆ ಮಾಡಿಕೊಳ್ಳಬೇಕು.

    ಮೊಸರು ತ್ವಚೆಗೆ ಒಳ್ಳೆಯ ಔಷಧಿಯಾಗಿದೆ. ಪ್ರತಿಯೊಬ್ಬರ ಮನೆಯಲ್ಲೂ ಮೊಸರು ಇರುತ್ತದೆ. ಮೊಸರಿಯಲ್ಲಿರುವ ಅಂಶದಿಂದ ನಮ್ಮ ಆರೋಗ್ಯ ಮತ್ತು ತ್ವಚೆಯನ್ನು ಕಾಪಾಡಿಕೊಳ್ಳಬಹುದು. ಮೊಸರಿನಲ್ಲಿರುವ ಲ್ಯಾಕ್ಟಿಕ್ ಆಸಿಡ್ ತ್ವಚೆಯ ಕೋಶಗಳಿಗೆ ಹೊಸ ಚೈತನ್ಯವನ್ನು ನೀಡುತ್ತದೆ. ಇದರಲ್ಲಿರುವ ಹೆಚ್ಚಿನ ಪ್ರೊಟೀನ್, ವಿಟಮಿನ್ ಮತ್ತು ಮಿನರಲ್‍ಗಳು ನಿಮ್ಮ ತ್ವಚೆಯನ್ನು ತಾಜಾ ಆಗಿರಿಸುವ ಅಂಶ ಅದರಲ್ಲಿದೆ.

     

    ಸುಂದರ ಮೊಗಕ್ಕೆ ಮೊಸರೆ ಮದ್ದು:
    * ಎರಡು ಚಮಚ ಮೊಸರಿಗೆ ಚಿಟಿಕೆ ಸಕ್ಕರೆ ಹಾಕಿ ಮಿಕ್ಸ್ ಮಾಡಿ. ಬಳಿಕ ಅದನ್ನ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. 15 ನಿಮಿಷ ನಂತರ ಬೆಚ್ಚಗಿನ ನೀರಿನಲ್ಲಿ ಮುಖ ತೊಳೆಯಿರಿ. ಈ ರೀತಿ ವಾರಕ್ಕೆ 2-3 ಬಾರಿ ಮಾಡಿದರೆ ಮುಖದಲ್ಲಿನ ಧೂಳು ಮತ್ತು ಕೊಳೆ ನಿವಾರಣೆಯಾಗುತ್ತದೆ.

    * ಒಂದು ಚಮಚ ಮೊಸರನ್ನು ಮುಖಕ್ಕೆ ಹಚ್ಚಿ, ಮಸಾಜ್ ಮಾಡಿಕೊಳ್ಳಿ ಬಳಿಕ ಅರ್ಧ ಗಂಟೆ ನಂತರ ಮುಖವನ್ನು ತೊಳೆದರೆ ಕಪ್ಪುಕಲೆ ಮಾಯವಾಗಿ ಮುಖ ಸುಂದರವಾಗಿ ಕಾಣುತ್ತದೆ.

    * ಎರಡು ಚಮಚ ಮೊಸರಿಗೆ ಒಂದು ಚಮಚ ಜೇನುತುಪ್ಪ ಸೇರಿಸಿ, ಮುಖಕ್ಕೆ ಹಚ್ಚಿ. ಬಳಿಕ ಅರ್ಧ ಗಂಟೆ ಬಿಟ್ಟು ತೊಳೆಯಿರಿ. ಇದರಿಂದ ಒಣಚರ್ಮ ನಿವಾರಣೆಯಾಗುತ್ತದೆ.

    * ಮೊಸರು ಅರ್ಧ ಕಪ್, 3 ಚಮಚ ತುರಿದ ಸೌತೆಕಾಯಿಯನ್ನು ಡಾರ್ಕ್ ಸರ್ಕಲ್ ಹಾಗೂ ಟ್ಯಾನ್ ಇರುವ ಜಾಗಕ್ಕೆ ಹಚ್ಚಿಕೊಳ್ಳಬೇಕು. 15 ನಿಮಿಷದ ನಂತರ ತಣ್ಣಗಿರುವ ನೀರಿನಿಂದ ತೊಳೆಯಬೇಕು. ಈ ರೀತಿ ವಾರಕ್ಕೆ 2 ಬಾರಿ ಮಾಡುವುದರಿಂದ ಟ್ಯಾನ್ ಮತ್ತು ಚರ್ಮದ ಕಪ್ಪು ಕಡಿಮೆಯಾಗುತ್ತದೆ.

    * ಒಂದು ಚಮಚ ಕಡಲೆ ಹಿಟ್ಟಿಗೆ 2 ಚಮಚ ಮೊಸರನ್ನು ಹಾಕಿ ಮಿಕ್ಸ್ ಮಾಡಿಕೊಳ್ಳಬೇಕು. ಬಳಿಕ ಮುಖಕ್ಕೆ ಹಚ್ಚಿಕೊಂಡು 15 ನಿಮಿಷಗಳ ನಂತರ ಮುಖವನ್ನು ತೊಳೆದುಕೊಳ್ಳಬೇಕು. ಇದು ಜಿಡ್ಡಿನ ಮತ್ತ ಸೂಕ್ಷ್ಮ ತ್ವಚೆಗೆ ಸೂಕ್ತವಾಗಿದೆ. ಜೊತೆಗೆ ತಾಜಾ ಕಾಂತಿಯನ್ನು ನೀಡುತ್ತದೆ.

    * ಮೊಸರು ಕೂದಲಿನ ನೈಸರ್ಗಿಕ ಪೋಷಣೆ ನೀಡುತ್ತದೆ. ಆದ್ದರಿಂದ ಮೊಸರನ್ನು ಕೂದಲಿನ ಬುಡಕ್ಕೆ ಮಸಾಜ್ ಮಾಡುವುದರಿಂದ ಕೂದಲಿನ ಹೊಳಪು ಹೆಚ್ಚುತ್ತದೆ.

    * 2 ಚಮಚ ಮೊಸರಿಗೆ 1 ಚಮಚ ಅರಶಿಣವನ್ನು ಹಾಕಿ ಮಿಶ್ರಣ ಮಾಡಿಕೊಳ್ಳಿ, ಬಳಿಕ ನಿಮ್ಮ ಮುಖವನ್ನು ಸ್ವಚ್ಛವಾಗಿ ತೊಳೆದುಕೊಂಡು ಈ ಮಿಶ್ರಣವನ್ನು ಹಚ್ಚಿಕೊಳ್ಳಿ. 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳಿ.

    * ಮೆಹಂದಿ ಪುಡಿಗೆ ಮೊಸರು ಮಿಕ್ಸ್ ಮಾಡಿ ತಲೆಗೆ ಹಚ್ಚಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ.

    * ಬೇಯಿಸಿದ ಆಲೂಗಡ್ಡೆ, 2 ಚಮಚ ಮೊಸರು ಮತ್ತು ಸ್ವಲ್ಪ ಜೇನು ತುಪ್ಪ ಸೇರಿಸಿ ಮಿಕ್ಸ್ ಮಾಡಿ, ನಿಮ್ಮ ಮುಖವನ್ನು ತೊಳೆದುಕೊಂಡ ನಂತರ ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿಕೊಳ್ಳಿ. ನಂತರ 20 ನಿಮಿಷಗಳ ತರುವಾಯ ತಣ್ಣೀರಿನಿಂದ ಮುಖವನ್ನು ತೊಳೆದುಕೊಳ್ಳಿ.

    * ನಿಂಬೆ ಸಿಪ್ಪೆ, ಕಿತ್ತಳೆ ಸಿಪ್ಪೆ ಒಣಗಿಸಿ, ಪುಡಿಮಾಡಿ ಮೊಸರಿನಲ್ಲಿ ಕಲಸಿ, ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ಮುಖ ತೊಳೆಯಿರಿ. ಇದರಿಂದ ಮುಖದ ಮೇಲಿನ ಕಲೆ ಕಡಿಮೆಯಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv