Tag: health

  • ಜನರಲ್ ಚೆಕಪ್ ಗಾಗಿ ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಗಳು ಆಸ್ಪತ್ರೆಗೆ ದಾಖಲು

    ಜನರಲ್ ಚೆಕಪ್ ಗಾಗಿ ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಗಳು ಆಸ್ಪತ್ರೆಗೆ ದಾಖಲು

    ಬೆಂಗಳೂರು: ಪಿತ್ತಕೋಶಕ್ಕೆ ಸ್ಟಂಟ್ ಅಳವಡಿಸಿ ಆರು ತಿಂಗಳು ಕಳೆದ ಹಿನ್ನೆಲೆಯಲ್ಲಿ ಶತಾಯುಷಿ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು, ಜನರಲ್ ಚೆಕ್ ಅಪ್ ಗಾಗಿ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದಾರೆ.

    ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ಮುಂಜಾನೆ ಆಗಮಿಸಿದ ಶ್ರೀಗಳು, ಕಾರಿನಿಂದ ಇಳಿದು ವ್ಹೀಲ್ ಚೇರ್ ನಂತಹ ಸೌಲಭ್ಯ ನಿರಾಕರಿಸಿ ನಡೆದುಕೊಂಡೇ ಆಸ್ಪತ್ರೆ ಒಳಗೆ ಹೋದರು. ಜನವರಿ 27 ರಂದು ಬಿಜಿಎಸ್‍ಗೆ ದಾಖಲಾಗಿದ್ದ ಶ್ರೀಗಳಿಗೆ ಮೂರು ಸ್ಟಂಟ್ ಅಳವಡಿಸಲಾಗಿತ್ತು. ಅದಕ್ಕೂ ಮುನ್ನ 5 ಸ್ಟಂಟ್ ಸೇರಿ ಒಟ್ಟು 8 ಸ್ಟಂಟ್ ಅಳವಡಿಸಲಾಗಿದೆ.

    ಇದೀಗ ಸ್ಟಂಟ್ ಅಳವಡಿಸಿದ ಆರು ತಿಂಗಳಾದ ಕಾರಣ ಜನರಲ್ ಚೆಕ್ ಅಪ್ ಗಾಗಿ ಶ್ರೀಗಳು ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿದ್ದು, ಡಾ. ರವೀಂದ್ರ ನೇತೃತ್ವದಲ್ಲಿ ವೈದ್ಯಕೀಯ ತಪಾಸಣೆ ನಡೆಸುತ್ತಿದ್ದಾರೆ. ಸಿದ್ದಗಂಗಾ ಮಠದ ಹಿರಿಯ ಶ್ರೀಗಳ ಜೊತೆ ಕಿರಿಯ ಶ್ರೀಗಳು ಕೂಡ ಆಸ್ಪತ್ರೆಗೆ ಆಗಮಿಸಿದ್ದು, ಮಠದಿಂದಲ್ಲೇ ಶ್ರೀಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ.

    ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ತಪಾಸಣೆ ಪ್ರಾರಂಭವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕರೆದುಕೊಂಡು ಬಂದಿದ್ದೇವೆ ಅಂತ ಸಿದ್ದಗಂಗಾ ಮಠದ ಕಿರಿಯ ಶ್ರೀ ಗಳು ಹೇಳಿದ್ದಾರೆ. ಸ್ವಲ್ಪ ಆರೋಗ್ಯದಲ್ಲಿ ಏರುಪೇರು ಇತ್ತು. ಅದಕ್ಕಾಗಿ ಅವರನ್ನು ಕರೆದುಕೊಂಡು ಬಂದಿದ್ದೇವೆ. ಅವರು ಟೆಸ್ಟ್ ಗೂ ಒಪ್ಪಿಲ್ಲ. ಈಗ ಟೆಸ್ಟ್ ಗಳು ನಡೀತಾ ಇದೆ. ಒಟ್ಟು ಐದರಿಂದ ಆರು ವೈದ್ಯರುಗಳ ಟೀಮ್ ಅವರನ್ನು ನೋಡಿಕೊಳ್ಳುತ್ತಿದ್ದೇವೆ. ಸ್ಟಂಟ್ ಶಾಶ್ವತ ಅಲ್ಲ ಆರೇಳು ತಿಂಗಳು ಅಷ್ಟೆ ಬರೋದು. ಸ್ಟಂಟ್ ವ್ಯತ್ಯಾಸ ಕಂಡು ಬಂದಿರೋದ್ರಿಂದ ಅಲ್ಟ್ರಾಸೌಂಡ್ ಕೂಡ ಮಾಡಲಾಗುತ್ತೆ. ಈಗಾಗಲೇ ರಕ್ತ ಪರೀಕ್ಷೆ ಇಸಿಜಿಗಳನ್ನು ಮಾಡಲಾಗುತ್ತಿದೆ. ರಿಪೋರ್ಟ್ ಬಂದ ಮೇಲೆ ಆಸ್ಪತ್ರೆಗೆ ದಾಖಲಾಗುವ ಬಗ್ಗೆ ಹಾಗೂ ಮುಂದಿನ ಟ್ರೀಟ್ ಮೆಂಟ್ ಬಗ್ಗೆ ಚಿಂತನೆ ನಡೆಸಲಿದ್ದೇವೆ ಅಂರ ವೈದ್ಯ ಡಾ. ರವೀಂದ್ರ ಸ್ಪಷ್ಟಪಡಿಸಿದ್ದಾರೆ.

  • ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಚಿಕನ್ ಗುನ್ಯಾ, ಡೆಂಗ್ಯೂ ಪ್ರಕರಣಗಳು

    ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಚಿಕನ್ ಗುನ್ಯಾ, ಡೆಂಗ್ಯೂ ಪ್ರಕರಣಗಳು

    ಬೆಂಗಳೂರು: ಮುಂಗಾರಿನ ಅಬ್ಬರದ ಮಧ್ಯೆ ರಾಜ್ಯದಲ್ಲಿ ಚಿಕನ್‍ಗುನ್ಯಾ, ಡೆಂಗ್ಯೂ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚಾಗುತ್ತಿವೆ.

    ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರು ಸಿಟಿಯಲ್ಲಿ ಒಟ್ಟು 313 ಡೆಂಗ್ಯೂ ಕೇಸ್ ಹಾಗೂ 782 ಚಿಕನ್ ಗುನ್ಯಾ ಕೇಸ್ ಪತ್ತೆಯಾಗಿವೆ. ದಕ್ಷಿಣಕನ್ನಡದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯಾದ್ಯಂತ ಒಟ್ಟು 1,141 ಕೇಸ್ ಗಳು ಪತ್ತೆಯಾಗಿವೆ. ಹಾವೇರಿ ಹಾಗೂ ಚಿತ್ರದುರ್ಗದಲ್ಲಿ ಹೆಚ್ಚು ಚಿಕನ್ ಗುನ್ಯಾ ಕೇಸ್ ಗಳು ಪತ್ತೆಯಾಗಿವೆ.

    ನಾಗರಿಕರಿಗೆ ಸಾಂಕ್ರಾಮಿಕ ಕಾಯಿಲೆಯ ಬಗ್ಗೆ ಎಚ್ಚರವಾಗಿರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದ್ದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೂ ಸೂಕ್ತ ಚಿಕಿತ್ಸೆ ಹಾಗೂ ಎಚ್ಚರ ವಹಿಸುವಂತೆ ಸುತ್ತೋಲೆ ಹೊರಡಿಸಿದೆ.

    ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಲ್ಯಾಬ್ ಟೆಸ್ಟ್ ಗೆ ಹೆಚ್ಚುವರಿ ಶುಲ್ಕ ಸಂಗ್ರಹ ಮಾಡದಂತೆ ಖಾಸಗಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಲಾಗಿದ್ದು ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನು ಕಳಿಸುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

  • ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯದಲ್ಲಿ ಚೇತರಿಕೆ

    ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯದಲ್ಲಿ ಚೇತರಿಕೆ

    ನವದೆಹಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

    ಏಮ್ಸ್ ನಿರ್ದೇಶಕರಾದ ಡಾಕ್ಟರ್ ರಂದೀಪ್ ಗುಲೆರಿಯಾ ಮಾರ್ಗದರ್ಶನದಲ್ಲಿ ನುರಿತ ವೈದ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

    ಏಮ್ಸ್ ಆಸ್ಪತ್ರೆ ಮಂಗಳವಾರ ಬಿಡುಗಡೆ ಮಾಡಿದ ಮೆಡಿಕಲ್ ಬುಲೆಟಿನ್ ನಲ್ಲಿ, ವಾಜಪೇಯಿಯವರು ಮೂತ್ರನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಶೀಘ್ರವೇ ಗುಣಮುಖರಾಗಲಿದ್ದಾರೆ. ಸೋಂಕು ಗುಣಮುಕ್ತವಾಗುವವರೆಗೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಯಲಿದೆ ಎಂದು ತಿಳಿಸಿದೆ.

    ಸೋಮವಾರದಿಂದಲೂ ಹಲವು ಹಿರಿಯ ಮುಖಂಡರು ಆಸ್ಪತ್ರೆಗೆ ಬಂದು ವಾಜಪೇಯಿಯವರ ಆರೋಗ್ಯ ವಿಚಾರಿಸುತ್ತಿದ್ದಾರೆ. ವಿಷಯ ತಿಳಿದ ಪ್ರಧಾನಿ ನರೇಂದ್ರ ಮೋದಿಯವರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬದ ಜೊತೆ ಮಾತುಕತೆ ನಡೆಸಿದ್ದಾರೆ.

    ಆಸ್ಪತ್ರೆಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್‍ನ ರಾಹುಲ್ ಗಾಂಧಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅಲ್ಲದೇ ಆರೋಗ್ಯ ಸಚಿವರಾದ ಜೆಪಿ ನಡ್ಡಾ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

    ಆಸ್ಪತ್ರೆಗೆ ಭೇಟಿ ನೀಡಿದ ನರೇಂದ್ರ ಮೋದಿಯವರು ಸುಮಾರು 50 ನಿಮಿಷಗಳ ಕಾಲ ವಾಜಪೇಯಿಯವರ ಕುಟುಂಬದ ಜೊತೆ ಮಾತುಕತೆ ನಡೆಸಿದ್ದಾರೆ. ವೈದ್ಯರ ಬಳಿ ಚಿಕಿತ್ಸೆಯ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ಪ್ರಧಾನಿ ಸಚಿವಾಲಯದ ಸಿಬ್ಬಂದಿ ಟ್ವೀಟ್ ಮಾಡಿದ್ದಾರೆ.

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿವರು 1998 ಮತ್ತು 2004ರಲ್ಲಿ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ತಮ್ಮ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕ ಜೀವನದಿಂದ ಹಿಂದೆ ಸರಿದು ಕೆಲ ವಷಗಳಿಂದ ತಮ್ಮ ಮನೆಯಲ್ಲಿ ಜೀವನ ಕಳೆಯುತ್ತಿದ್ದಾರೆ. ಕಳೆದ ಡಿಸೆಂಬರ್ 25ರಂದು ವಾಜಪೇಯಿ 93ನೇ ಹುಟ್ಟುಹಬ್ಬವನ್ನು ಆಚರಿಸಿದ್ದರು.

  • ರಾಜ್ಯದ ಮಾವು ಬೆಳೆಗಾರರಿಗೆ ತಟ್ಟಿದ ನಿಪಾ ವೈರಸ್ ಬಿಸಿ

    ರಾಜ್ಯದ ಮಾವು ಬೆಳೆಗಾರರಿಗೆ ತಟ್ಟಿದ ನಿಪಾ ವೈರಸ್ ಬಿಸಿ

    ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಪಾ ಕಾಣಿಸಿಕೊಂಡಿದ್ರಿಂದ ರಾಜ್ಯದ ಮಾವಿಗೆ ಬೆಳೆಗಾರರಿಗೆ ಬಿಸಿ ತಟ್ಟಿದೆ.

    ಆಸ್ಟ್ರೇಲಿಯಾ, ಅಮೆರಿಕ, ಸ್ವಿಜರ್‍ಲ್ಯಾಂಡ್‍ಗೆ ರಾಜ್ಯದಿಂದಲೇ ಟನ್ ಗಟ್ಟಲೇ ಮಾವು ರಫ್ತಾಗುತ್ತಿತ್ತು. ಕೇರಳದಲ್ಲಿ ನಿಪಾ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಿಂದ ರಫ್ತಾಗುವ ಮಾವಿಗೆ ಬೆಳೆಗಾರರು ಪ್ರಮಾಣ ಪತ್ರ ಸೇರಿದಂತೆ ನಾನಾ ಸರ್ಟಿಫಿಕೇಟ್ ಗಳನ್ನು ಪಡೆಯುವ ಸ್ಥತಿ ನಿರ್ಮಾಣವಾಗಿದೆ. ಒಂದೆಡೆ ಹೆಚ್ಚಾಗಿರುವ ಮಳೆ ಹಾಗೂ ನಿಪಾ ವೈರಸ್ ಮಾವು ಬೆಳೆಗಾರರಿಗೆ ಬಿಸಿ ಮುಟ್ಟಿಸಿದೆ.

    ಮುಂಗಾರಿನಲ್ಲಿ ಸಾಂಕ್ರಾಮಿಕ ರೋಗ ಕೂಡ ಹೆಚ್ಚುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದ ಬೆನ್ನಲ್ಲೇ ನಿಫಾ ಬಗ್ಗೆ ಮತ್ತೆ ಸಂಶೋಧನೆ ಮಾಡುವಂತೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಸೂಚಿಸಿದ್ದಾರೆ.

  • ವಿಶ್ವದ ಅತಿ ವೇಗದ ಸೂಪರ್ ಕಂಪ್ಯೂಟರ್ ಅಮೆರಿಕದಲ್ಲಿ ಅಭಿವೃದ್ಧಿ: ಸ್ಪೀಡ್ ಎಷ್ಟಿದೆ? ಕೂಲ್ ಮಾಡಲು 1 ನಿಮಿಷಕ್ಕೆ ಎಷ್ಟು ನೀರು ಬೇಕು?

    ವಿಶ್ವದ ಅತಿ ವೇಗದ ಸೂಪರ್ ಕಂಪ್ಯೂಟರ್ ಅಮೆರಿಕದಲ್ಲಿ ಅಭಿವೃದ್ಧಿ: ಸ್ಪೀಡ್ ಎಷ್ಟಿದೆ? ಕೂಲ್ ಮಾಡಲು 1 ನಿಮಿಷಕ್ಕೆ ಎಷ್ಟು ನೀರು ಬೇಕು?

    ನವದೆಹಲಿ: ಅಮೆರಿಕ ಇಂಧನ ಇಲಾಖೆಯ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ವಿಶ್ವದಲ್ಲೇ ಅತಿ ವೇಗದ ಸೂಪರ್ ಕಂಪ್ಯೂಟರ್ `ಸಮಿತ್’ ಅನ್ನು ಅಭಿವೃದ್ಧಿಪಡಿಸಿದೆ.

    ವಿಜ್ಞಾನದಲ್ಲಿನ ಆವಿಷ್ಕಾರಗಳಿಗೆ ಅಭೂತಪೂರ್ವ ಸಾಮಥ್ರ್ಯ ಇರುವ ಸೂಪರ್ ಕಂಪ್ಯೂಟರ್ ಗಳ ಅವಶ್ಯಕತೆ ಇದೆ. ಹಾಗಾಗಿ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ಸಮಿತ್ ಅನ್ನು ಬಿಡುಗಡೆ ಮಾಡಿದೆ. ಈ ಹಿಂದಿನ ಟೈಟಾನ್ ಸೂಪರ್ ಕಂಪ್ಯೂಟರ್ ಗಿಂತ 8 ಪಟ್ಟು ವೇಗವಾಗಿ ಸಮಿತ್ ಕೆಲಸ ನಿರ್ವಹಿಸುತ್ತದೆ.

    ಸಮಿತ್ ನ ಕಾರ್ಯನಿರ್ವಹಣಾ ಸಾಮರ್ಥ್ಯ 200 ಪೆಟಾ ಫ್ಲಾಪ್ಸ್ ಆಗಿದ್ದು 5 ವರ್ಷ ಹಿಂದಿನ ಚೈನಾದ 93 ಪೆಟಾ ಫ್ಲಾಪ್ಸ್ ಸಾಮಥ್ರ್ಯದ ತೈಹುಲೈಟ್ ಸೂಪರ್ ಕಂಪ್ಯೂಟರ್ ಅನ್ನು ಹಿಂದಿಕ್ಕಿದೆ. ವಿಜ್ಞಾನಿಗಳು ಸಮಿತ್ ಅನ್ನು ತಮ್ಮ ಜಿನೋಮ್ ಗಳ ಅಧ್ಯಯನದಲ್ಲಿ ಬಳಸಿದ್ದಾರೆ. ಹಿಂದಿನ ಸೂಪರ್ ಕಂಪ್ಯೂಟರ್ ಗಳಿಗಿಂತ ಕ್ಷಣಮಾತ್ರದಲ್ಲಿ ಲಕ್ಷಾಂತರ ಜಿನೋಮ್ ಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

    ಆರೋಗ್ಯ, ಕೃತಕ ಬುದ್ಧಿಮತ್ತೆ, ಶಕ್ತಿ, ಹವಾಮಾನ, ಭೌತಶಾಸ್ತ್ರ ಹಾಗೂ ಇತರ ಸಂಶೋಧನ ಕ್ಷೇತ್ರಗಳಲ್ಲಿ ಬೇಕಾಗಿದ್ದ ನಂಬಲು ಅಸಾಧ್ಯವಾದ ಸೂಪರ್ ಕಂಪ್ಯೂಟರ್ ಸಮಿತ್ ಆಗಿದೆ. ಈ ಸಂಶೋಧನೆಗಳಿಂದ ಬ್ರಹ್ಮಾಂಡವನ್ನು ಇನ್ನೂ ಸರಿಯಾಗಿ ಅರ್ಥೈಸಬಹುದಾಗಿದ್ದು ಅಮೆರಿಕಾದ ಆರ್ಥಿಕ ವ್ಯವಸ್ಥೆಯನ್ನು ಇನ್ನೂ ಸ್ಪರ್ಧಾತ್ಮಕವಾಗಿಸುವುದರ ಜೊತೆಗೆ ಉತ್ತಮ ಭವಿಷ್ಯಕ್ಕೆ ಸಹಾಯವಾಗಲಿದೆ.

    4,608 ಸರ್ವರ್ ಗಳನ್ನು ಹೊಂದಿರುವ ಸಮಿತ್ 2 ಟೆನ್ನಿಸ್ ಕೋರ್ಟ್‍ಗಳ ಜಾಗವನ್ನು ತೆಗೆದುಕೊಳ್ಳಲಿದೆ. 9 ಸಾವಿರ 22-ಕೋರ್ ಐಬಿಎಂ ಪವರ್ 9 ಪ್ರೊಸೆಸರ್ ಗಳನ್ನು ಒಳಗೊಂಡಿದ್ದೂ 27 ಸಾವಿರಕ್ಕೂ ಹೆಚ್ಚು ಎನ್ವಿಡಿಯಾ ಟೆಸ್ಲಾ ವಿ100 ಗ್ರಾಫಿಕ್ ಪ್ರೊಸೆಸರ್ ಗಳನ್ನು ಹೊಂದಿದೆ. ಇಡೀ ವ್ಯವಸ್ಥೆಯನ್ನು ತಂಪಾಗಿಡಲು ಒಂದು ನಿಮಿಷಕ್ಕೆ 15 ಸಾವಿರ ಲೀಟರ್ ನಷ್ಟು ನೀರು ಬೇಕಾಗುತ್ತದೆ. 8100 ಮನೆಗಳು ಬಳಸುವಷ್ಟು ವಿದ್ಯುತ್ ಅನ್ನು ಸಮಿತ್ ಬಳಸುತ್ತದೆ.

    ಅಮೆರಿಕಾ, ಚೈನಾ ದೇಶಗಳಲ್ಲದೆ ಯುರೋಪ್, ಜಪಾನ್ ಹಾಗೂ ಇತರ ದೇಶಗಳ ನಡುವೆ ವೇಗದ ಸೂಪರ್ ಕಂಪ್ಯೂಟರ್ ತಯಾರು ಮಾಡಲು ಸ್ಪರ್ಧೆ ಏರ್ಪಟ್ಟಿದೆ. ಆರೋಗ್ಯ, ಪರಿಸರ ಕ್ಷೇತ್ರಗಳಲ್ಲದೆ ವಿಮಾನ ವಿನ್ಯಾಸ, ಪರಮಾಣು ಶಸ್ತ್ರಾಸ್ತ್ರಗಳ ತಯಾರಿಕೆಯಲ್ಲೂ ಸೂಪರ್ ಕಂಪ್ಯೂಟರ್ ಗಳನ್ನು ಬಳಸಲಾಗುತ್ತದೆ.

    ಕಂಪ್ಯೂಟರ್ ಸಾಮಥ್ರ್ಯ ಮತ್ತು ಫ್ಲಾಪ್ಸ್
    ಫ್ಲಾಪ್ಸ್ (FLOPS) ಎಂದರೆ ಕಂಪ್ಯೂಟರ್ ನ ಸಾಮರ್ಥ್ಯ ಅಳೆಯಲು ಬಳಸುವ ಮಾನದಂಡ. ಫ್ಲೋಟಿಂಗ್ ಪಾಯಿಂಟ್ ಆಪರೇಷನ್ಸ್ ಪರ್ ಸೆಕೆಂಡ್ (Floating Point Operations per Second) ಎಂಬುದು ಇದರ ವಿಸ್ತೃತ ರೂಪ. ಅಂದರೆ, ಒಂದು ಸೆಕೆಂಡ್ ಅವಧಿಯಲ್ಲಿ ಲೆಕ್ಕ ಮಾಡುವ ಕಂಪ್ಯೂಟರ್ ನ ಸಾಮರ್ಥ್ಯ. ಕಂಪ್ಯೂಟರ್ ನ ಕಾರ್ಯನಿರ್ವಹಣಾ ಸಾಮರ್ಥ್ಯ ಒಂದು ಪೆಟಾ ಫ್ಲಾಪ್ಸ್ ಇದ್ದರೆ ಆ ಕಂಪ್ಯೂಟರ್ ಒಂದು ಸೆಕೆಂಡ್‍ನಲ್ಲಿ ಸಾವಿರ ಲಕ್ಷಕೋಟಿಗಳಷ್ಟು ಲೆಕ್ಕಾಚಾರ ಮಾಡುವ ಸಾಮರ್ಥ್ಯ ಹೊಂದಿದೆ ಎಂದರ್ಥ.

  • ನಿಪಾ ವೈರಸ್ ಸುಳ್ಳು ಸುದ್ದಿ ಹರಡಿದ 7 ಮಂದಿ ಅರೆಸ್ಟ್

    ನಿಪಾ ವೈರಸ್ ಸುಳ್ಳು ಸುದ್ದಿ ಹರಡಿದ 7 ಮಂದಿ ಅರೆಸ್ಟ್

    ತಿರುವನಂತಪುರಂ: ಕೆಲವು ಸ್ಥಳಗಳಲ್ಲಿ ನಿಪಾ ವೈರಸ್ ಪತ್ತೆಯಾಗಿದೆ, ಅದು ಕೋಳಿ ಮಾಂಸದಿಂದ ಹರಡುತ್ತಿದೆ ಎಂಬ ಸುಳ್ಳು ಸುದ್ದಿ ಹರಡುತ್ತಿದ್ದ ಏಳು ಜನರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

    ನಿಪಾ ವೈರಸ್ ಕುರಿತು ವಾಟ್ಸಪ್ ಮೂಲಕ ಸುಳ್ಳು ಸುದ್ದಿಯನ್ನು ಧ್ವನಿ ಸಂದೇಶಗಳನ್ನು ರಚಿಸಿ ರವಾನಿಸುತ್ತಿದ್ದರು.

    ಈ ಕುರಿತಂತೆ ಕೊಝಿಕ್ಕೋಡು ಜಿಲ್ಲಾ ವ್ಯಾಪ್ತಿಯ ಮೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಸುಳ್ಳು ಸುದ್ದಿಯನ್ನು ಹರಡುತ್ತಿದ್ದ ವೈಷ್ಣವ್, ನಿಮೇಶ್, ಬಿವಿಜ್, ದಿಲ್ಜಿತ್, ವಿಷ್ಣುದಾಸ್ ಎಂಬುವರನ್ನು ಬಂಧಿಸಲಾಗಿದೆ. ಅಲ್ಲದೇ ಈ ಧ್ವನಿ ಸಂದೇಶ ರಚಿಸಿದ ಕಿಡಿಗೇಡಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ನಿಪಾ ವೈರಸ್ ಕೋಳಿ ಮಾಂಸದಲ್ಲಿ ಪತ್ತೆಯಾದ ಕುರಿತು ಆರೋಗ್ಯ ಇಲಾಖೆಯ ವಿರುದ್ಧ ಸುಳ್ಳು ಸುದ್ದಿಯನ್ನೂ ಹಬ್ಬಿಸಲಾಗಿತ್ತು. ಹಾಗಾಗಿ ಯಾರೂ ಕೋಳಿ ಮಾಂಸವನ್ನು ಬಳಸಬಾರದೆಂದು ಕಿಡಿಗೇಡಿಗಳು ಹರಿಬಿಟ್ಟಿದ್ದರು. ಈ ಕುರಿತಂತೆಯೂ ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ:ಕೋಳಿಯಿಂದ ನಿಪಾ ವೈರಸ್ ಹರಡಲ್ಲ: ಉಡುಪಿ ವೈದ್ಯ

    ಇದಕ್ಕೆ ಪ್ರತಿಕ್ರಿಯಿಸಿದ ಫರೂಕ್ ಪೊಲೀಸ್ ಠಾಣಾಧಿಕಾರಿ ಸುಳ್ಳು ಸುದ್ದಿಯನ್ನು ಹರಡುತ್ತಿದ್ದ ಐವರನ್ನು ಈಗಾಗಲೇ ಬಧಿಸಿದ್ದೇವೆ. ಅಲ್ಲದೇ ನಲ್ಲಾಲಂನಲ್ಲೂ ಇಬ್ಬರ ಬಂಧನವಾಗಿದೆ. ಫಿರೋಕ್ ಆಸ್ಪತ್ರೆಯ ಕಿರಿಯ ವೈದ್ಯಾಧಿಕಾರಿಗಳು ಈ ಕುರಿತಂತೆ ದೂರನ್ನೂ ಕೂಡಾ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.

  • ಟೆಲಿಕಾಂ ಕ್ಷೇತ್ರಕ್ಕೆ ಎಂಟ್ರಿಕೊಟ್ಟ ಬಾಬಾ ರಾಮ್‍ದೇವ್

    ಟೆಲಿಕಾಂ ಕ್ಷೇತ್ರಕ್ಕೆ ಎಂಟ್ರಿಕೊಟ್ಟ ಬಾಬಾ ರಾಮ್‍ದೇವ್

    ನವದೆಹಲಿ: ಪತಂಜಲಿ ಸಂಸ್ಥಾಪಕ ಯೋಗ ಗುರು ಬಾಬಾ ರಾಮ್‍ದೇವ್ ಸ್ವದೇಶಿ ಸಮೃದ್ಧಿ ಸಿಮ್ ಕಾರ್ಡ್ ಗಳನ್ನು ಬಿಎಸ್‍ಎನ್‍ಎಲ್ ಸಹಯೋಗದಲ್ಲಿ ಬಿಡುಗಡೆ ಮಾಡಿದ್ದಾರೆ. ವೇಗವಾಗಿ ಬಿಕರಿಯಾಗುವ ಗ್ರಾಹಕ ಉತ್ಪನ್ನ(ಎಫ್‍ಎಂಸಿಜಿ) ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಪತಂಜಲಿ ಬ್ರಾಂಡ್ ಈ ಮೂಲಕ ಅಧಿಕೃತವಾಗಿ ಟೆಲಿಕಾಂ ಕ್ಷೇತ್ರಕ್ಕೆ ಎಂಟ್ರಿಯಾಗಿದೆ.

    ಮೊದಲಿಗೆ ಪತಂಜಲಿ ಸಿಬ್ಬಂದಿ ಹಾಗೂ ಕಾರ್ಮಿಕ ವರ್ಗದವರು ಸಿಮ್ ಕಾರ್ಡ್‍ನ ಉಪಯೋಗವನ್ನು ಪಡೆಯಲಿದ್ದಾರೆ. ನಂತರ ಗ್ರಾಹಕರು ಸಿಮ್ ಕಾರ್ಡ್ ಹೊಂದಿದ್ದಲ್ಲಿ ಪತಂಜಲಿ ಉತ್ಪನ್ನಗಳ ಮೇಲೆ ಶೇ.10ರ ವಿನಾಯಿತಿಯನ್ನು ಪಡೆಯಲಿದ್ದಾರೆ.

    144 ರೂ. ಗಳಿಗೆ ರೀಚಾರ್ಜ್ ಮಾಡಿಸಿದರೆ ದೇಶಾದ್ಯಂತ ಅನ್ ಲಿಮಿಟೆಡ್ ಕರೆಗಳನ್ನು ಮಾಡಬಹುದಾಗಿದೆ. ಜೊತೆಗೆ 2ಜಿಬಿ ಡೇಟಾ, 100 ಎಸ್‍ಎಂಎಸ್‍ಗಳು ಉಚಿತವಾಗಿ ದೊರೆಯಲಿದೆ. ಇಷ್ಟೇ ಅಲ್ಲದೇ ಗ್ರಾಹಕರಿಗೆ ಆರೋಗ್ಯ, ಅಪಘಾತ, ಜೀವ ವಿಮೆಗಳು ಇರಲಿವೆ ಎಂದು ಕಂಪೆನಿ ತಿಳಿಸಿದೆ.

    ಇದೇ ಸಂದರ್ಭದಲ್ಲಿ ಮಾತನಾಡಿದ ರಾಮ್‍ದೇವ್, ಬಿಎಸ್‍ಎನ್‍ಎಲ್ ಸ್ವದೇಶಿ ಕಂಪೆನಿಯಾಗಿರುವ ಕಾರಣ ದೇಶದ ಒಳಿತಿಗಾಗಿ ಕೈ ಜೋಡಿಸಿದ್ದೇವೆ. ಗ್ರಾಹಕರಿಗೆ ಮೆಡಿಕಲ್ ಹಾಗೂ ಜೀವ ವಿಮೆ ಕೂಡ ದೊರೆಯಲಿದ್ದು 2.5 ಲಕ್ಷ ರೂ. ಮತ್ತು 5 ಲಕ್ಷ ರೂ. ವರೆಗಿನ ಮಿತಿ ಇರಲಿದೆ ಎಂದು ತಿಳಿಸಿದರು.

    ಬಿಎಸ್‍ಎನ್‍ಎಲ್ ಜನರಲ್ ಮ್ಯಾನೇಜರ್ ಸುನಿಲ್ ಗಾರ್ಗ್ ಪತಂಜಲಿ ಜೊತೆಗಿನ ಸಹಯೋಗಕ್ಕೆ ಹರ್ಷವನ್ನು ವ್ಯಕ್ತಪಡಿಸಿದರು. ಪತಂಜಲಿ ಕಾರ್ಮಿಕರು ಗುರುತಿನ ಚೀಟಿ ತೋರಿಸಿ ಸಿಮ್ ಆಕ್ಟಿವೇಟ್ ಮಾಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

  • ಬಾವಲಿ ಜ್ವರಕ್ಕೆ ಕರ್ನಾಟಕದಲ್ಲೂ ಹೈಅಲರ್ಟ್ – ಈ ಮಾಹಿತಿ ನಿಮಗೆ ಗೊತ್ತಿರಲಿ..!

    ಬಾವಲಿ ಜ್ವರಕ್ಕೆ ಕರ್ನಾಟಕದಲ್ಲೂ ಹೈಅಲರ್ಟ್ – ಈ ಮಾಹಿತಿ ನಿಮಗೆ ಗೊತ್ತಿರಲಿ..!

    ಬೆಂಗಳೂರು: ಕರ್ನಾಟಕದ ಪಕ್ಕದ ರಾಜ್ಯ ಕೇರಳದಲ್ಲಿ ಬಾವಲಿಗಳ ಮೂಲಕ ನಿಪಾ ವೈರಸ್ ಜ್ವರಕ್ಕೆ 16 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ರಾಜ್ಯದಲ್ಲಿ ಫುಲ್ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲೂ ನಿಫಾ ಭಯ ಕಾಡತೊಡಗಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಜ್ಯದಾದ್ಯಂತ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗೆ ಸುತ್ತೋಲೆ ರವಾನೆಯಾಗಿದೆ. ಜ್ವರ, ವಾಂತಿ, ಸುಸ್ತು ಇಂತಹ ಲಕ್ಷಣ ಕಾಣಿಸಿಕೊಂಡ ರೋಗಿಗಳ ರಕ್ತ ಪರೀಕ್ಷೆಯ ಬಗ್ಗೆ ವಿಶೇಷ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಮೂಲಗಳು ಪಬ್ಲಿಕ್ ಟಿವಿಗೆ ಖಚಿತಪಡಿಸಿವೆ.

    ನಿಪಾ ವೈರಸ್ ಎಂದರೇನು?
    1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಪಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಪಾ ವೈರಸ್ ಎಂದು ಕರೆಯುತ್ತಾರೆ. ನಿಪಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಪಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

    ವೈರಸ್ ಹೇಗೆ ಹರಡುತ್ತದೆ?
    ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನೋದ್ರಿಂದ ಹರಡುತ್ತೆ.
    ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತೆ.
    ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.

    ನಿಪಾ ವೈರಸ್ ಲಕ್ಷಣಗಳೇನು?
    – ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
    – ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
    – ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
    – ಬಳಿಕ ಪ್ರಜ್ಞಾಹೀನರಾಗುತ್ತಾರೆ
    – ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
    – ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

    ಇನ್ನು ಕೇರಳದ ನಿಪಾ ವೈರಸ್ ಭೀತಿಯಿಂದ ಅಕ್ಕ ಪಕ್ಕದ ರಾಜ್ಯಗಳು ಎಚ್ಚರಿಕೆಯಿಂದ ಇರಬೇಕಾಗಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಸೂಚನೆಯಂತೆ ಇಂದು ಬೆಳಗ್ಗೆಯೇ ಕೇಂದ್ರ ಸರ್ಕಾರದ ವೈದ್ಯಕೀಯ ತಂಡವೊಂದು ಕೇರಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಕೇರಳದ ಆರೋಗ್ಯ ಸಚಿವರ ಜೊತೆ ಸಮಾಲೋಚನೆಯನ್ನು ನಡೆಸಿದೆ. ಸದ್ಯ ಕೇರಳದ ಕೋಯಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಬಾವಲಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಕೇರಳದ ಎಲ್ಲಾ ಜಿಲ್ಲಾಸ್ಪತ್ರೆಗಳಿಗೂ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಇವರ ರಕ್ತದ ಮಾದರಿಯನ್ನು ಮಣಿಪಾಲದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದರ ವರದಿ ಇನ್ನಷ್ಟೇ ಬರಬೇಕಿದ್ದು, ಇಂದು ರಾತ್ರಿಯೊಳಗೆ ವರದಿ ಅಧಿಕಾರಿಗಳ ಕೈಸೇರುವ ಸಾಧ್ಯತೆಯಿದೆ.

  • ‘ಬಾವಲಿ ಜ್ವರ’ಕ್ಕೆ ಕೇರಳದಲ್ಲಿ 10 ಸಾವು – ರೋಗ ಲಕ್ಷಣ ಏನು, ತಡೆಗಟ್ಟೋದು ಹೇಗೆ?

    ‘ಬಾವಲಿ ಜ್ವರ’ಕ್ಕೆ ಕೇರಳದಲ್ಲಿ 10 ಸಾವು – ರೋಗ ಲಕ್ಷಣ ಏನು, ತಡೆಗಟ್ಟೋದು ಹೇಗೆ?

    ಪೇರಾಂಬ್ರ: ಬಾವಲಿಗಳ ಮೂಲಕ ಹರಡುವ ನಿಪಾ ವೈರಸ್ ಜ್ವರಕ್ಕೆ ಕೇರಳದಲ್ಲಿ ಇದುವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ. ಪುಣೆಯಲ್ಲಿರುವ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ ಮೂವರ ಸಾವಿಗೆ ನಿಪಾ ವೈರಸ್ ಕಾರಣ ಎನ್ನುವುದನ್ನು ದೃಢಪಡಿಸಿದೆ. ಕೇರಳದ ಕೋಝಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಈ ರೋಗ ವ್ಯಾಪಕವಾಗಿ ಹರಡಿದೆ ಎನ್ನಲಾಗಿದೆ.

    ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಜೊತೆಗೆ ಎಲ್ಲಾ ವಿವರಗಳನ್ನು ಆರೋಗ್ಯ ಇಲಾಖೆಗೆ ಪ್ರತಿ ನಿತ್ಯ ಆರೋಗ್ಯ ಇಲಾಖೆಗೆ ನೀಡುವಂತೆ ಸೂಚನೆ ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಸೂಚನೆಯಂತೆ ಇಂದು ಬೆಳಗ್ಗೆಯೇ ಕೇಂದ್ರ ಸರ್ಕಾರದ ವೈದ್ಯಕೀಯ ತಂಡವೊಂದು ಕೇರಳಕ್ಕೆ ಆಗಮಿಸಿದೆ.

    ನಿಪಾ ವೈರಸ್ ಎಂದರೇನು?
    1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಪ್ಪಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಪಾ ವೈರಸ್ ಎಂದು ಕರೆಯುತ್ತಾರೆ. ನಿಪಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಪಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

    ವೈರಸ್ ಹೇಗೆ ಹರಡುತ್ತದೆ?
    ಬಾವಲಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ
    ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ
    ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. (ಬಾವಲಿಗಳು ಕಚ್ಚಿದ ಹಣ್ಣನ್ನು ತಿನ್ನುವುದರಿಂದ ಹರಡುತ್ತದೆ)
    ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ
    ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ

    ನಿಪಾ ವೈರಸ್ ಲಕ್ಷಣಗಳೇನು?
    – ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
    – ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
    – ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
    – ಬಳಿಕ ಪ್ರಜ್ಞಾಹೀನರಾಗುತ್ತಾರೆ
    – ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
    – ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

    ಎಚ್ಚರಿಕೆಯಿಂದಿರಿ..!
    – ಪ್ರಾಣಿ ಪಕ್ಷಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸಬೇಡಿ
    – ಒಂದು ವೇಳೆ ನೀವು ರೋಗಿಯ ಜೊತೆಗಿದ್ದರೆ ಶುಚಿತ್ವಕ್ಕೆ ಹೆಚ್ಚು ಗಮನ ಕೊಡಿ
    – ರೋಗಿಯ ಚಿಕಿತ್ಸೆ ವೇಳೆ ಮುಖಕ್ಕೆ ಮಾಸ್ಕ್, ಕೈಗವಚ ಧರಿಸಿ
    – ಬಾವಲಿಗಳ ಸಂಖ್ಯೆ ಹೆಚ್ಚಿರುವ ಕಡೆ ಸಂಗ್ರಹಿಸುವ ಶೇಂದಿ, ಪಾನೀಯಗಳನ್ನು ಸೇವಿಸಬೇಡಿ

    ಚಿಕಿತ್ಸೆ ನೀಡಿದ ನರ್ಸ್ ಸಾವು: ನಿಪಾ ವೈರಸ್ ಹರಡಿ ಆಸ್ಪತ್ರೆ ಸೇರಿದವರಿಗೆ ಚಿಕಿತ್ಸೆ ನೀಡುತ್ತಿದ್ದ ನರ್ಸ್ ಬಾವಲಿ ಜ್ವರದಿಂದ ಸಾವನ್ನಪ್ಪಿದ್ದಾರೆ. ಪೇರಾಂಬ್ರ ತಾಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಲೀನಾ ಮೃತಪಟ್ಟವರು. ಈ ರೋಗ ಬೇರೆಯವರಿಗೂ ಹರಡುವ ಸಾಧ್ಯತೆ ಇದೆ ಎಂದು ಸಂಬಂಧಿಕರಿಗೆ ಈಕೆಯ ಮೃತದೇಹ ಬಿಟ್ಟು ಕೊಡದೆ ಕೇರಳ ಸರ್ಕಾರವೇ ಈಕೆಯ ಅಂತ್ಯಸಂಸ್ಕಾರ ನಡೆಸಿದೆ.

    ಘಟನೆ ಹಿನ್ನೆಲೆಯಲ್ಲಿ ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಇಂದು ಕೋಯಿಕ್ಕೋಡ್ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ್ದಾರೆ. ರೋಗ ನಿಯಂತ್ರಣಕ್ಕೆ ಎಲ್ಲಾ ವಿಧದ ಕ್ರಮಕೈಗೊಂಡಿದ್ದೇವೆ. ಈಗ ಚಿಕಿತ್ಸೆಯಲ್ಲಿರುವ 8 ಮಂದಿಯಲ್ಲಿ ವೈರಸ್ ಇರುವುದು ಖಚಿತಪಟ್ಟಿದೆ ಎಂದು ಹೇಳಿದ್ದಾರೆ. ಅಗತ್ಯ ನಿರ್ವಹಣೆಗಾಗಿ ಮೆಡಿಕಲ್ ಕಾಲೇಜಿಗೆ 20 ಲಕ್ಷ ರೂಪಾಯಿಯನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

    ಬಾವಲಿಗಳಿದ್ದ ಬಾವಿಯ ನೀರು ಸೇವನೆ ಹಾಗೂ ಬಾವಲಿಗಳು ಕಚ್ಚಿದ ಮಾವಿನ ಹಣ್ಣು ತಿಂದಿದ್ದರಿಂದ ಈ ರೋಗ ಹರಡಿದೆ ಎನ್ನುವುದು ಸದ್ಯಕ್ಕೆ ಖಚಿತವಾಗಿದೆ. ಬಾವಿಯ ನೀರಿನಲ್ಲಿ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬಾವಿಯನ್ನು ಮುಚ್ಚಿದ್ದೇವೆ ಎಂದು ಶೈಲಜಾ ಸ್ಪಷ್ಟನೆ ನೀಡಿದ್ದಾರೆ. ರೋಗಿಗಳ ಜೊತೆ ಸಂಪರ್ಕದಲ್ಲಿದ್ದ ಎಲ್ಲರ ಆರೋಗ್ಯ ತಪಾಸಣೆ ಮಾಡಲು ಸೂಚನೆ ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.

  • ಪ್ರಚಾರದ ವೇಳೆ ಸಚಿವ ಹೆಚ್ ಆಂಜನೇಯ ಅಸ್ವಸ್ಥ-ಆಸ್ಪತ್ರೆಗೆ ದಾಖಲು

    ಪ್ರಚಾರದ ವೇಳೆ ಸಚಿವ ಹೆಚ್ ಆಂಜನೇಯ ಅಸ್ವಸ್ಥ-ಆಸ್ಪತ್ರೆಗೆ ದಾಖಲು

    ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್. ಆಂಜನೇಯ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದೆ.

    ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿರಂತರ ಪ್ರಚಾರದಲ್ಲಿ ತೊಡಗಿರುವ ಸಚಿವ ಆಂಜನೇಯ ಅವರು ತೀವ್ರ ಬಿಸಿಲಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದ್ರು ಇಂದು ಚಿತ್ರದುರ್ಗದಲ್ಲಿ ಪ್ರಚಾರ ಕಾರ್ಯ ನಡೆಸಲು ಆಗಮಿಸಿದ್ದ ಅವರು ಸುಸ್ತಾಗಿ ಕುಸಿದು ಬಿದಿದ್ದಾರೆ.

    ಆಂಜನೇಯ ಅವರಿಗೆ ತಕ್ಷಣ ಸ್ಥಳದಲ್ಲಿದ್ದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಬಳಿಕ ಪಕ್ಷದ ಕಾರ್ಯಕರ್ತರು ಅವರನ್ನು ದಾವಣಗೆರೆಯ ಎಸ್‍ಎಸ್ ನಾರಾಯಣ ಹೃದಯಾಲಯಕ್ಕೆ ದಾಖಲಿಸಿದ್ದಾರೆ.

    ಸದ್ಯ ಆಂಜನೇಯ ಅವರಿಗೆ ಚಿಕಿತ್ಸೆ ಮುಂದುವರೆದಿದೆ. 24 ಗಂಟೆಗಳ ಕಾಲ ವೈದ್ಯರ ನಿಗಾದಲ್ಲಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಚಿವರ ಆರೋಗ್ಯ ಹದಗೆಟ್ಟ ಕಾರಣ ಆಂಜನೇಯ ಅವರ ಕುಟುಂಬ ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಆತಂಕ ಉಂಟಾಗಿದೆ.