Tag: health

  • ದಯವಿಟ್ಟು ಗಮನಿಸಿ, ಸಣ್ಣ ಮಕ್ಕಳ ಕೈಗೆ ಸಿಗುವಂತೆ ಇಯರ್ ಫೋನ್ ಇಡಬೇಡಿ

    ದಯವಿಟ್ಟು ಗಮನಿಸಿ, ಸಣ್ಣ ಮಕ್ಕಳ ಕೈಗೆ ಸಿಗುವಂತೆ ಇಯರ್ ಫೋನ್ ಇಡಬೇಡಿ

    ಹೈದರಾಬಾದ್: ಹನ್ನೊಂದು ತಿಂಗಳ ಹೆಣ್ಣು ಶಿಶು ಆಕಸ್ಮಿಕವಾಗಿ ಇಯರ್ ಫೋನ್ ನುಂಗಿ ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

    ಪೂರ್ವ ಗೋದಾವರಿ ಜಿಲ್ಲೆಯ ಪರ್ಸಲಾಪುದಿ ಗ್ರಾಮದಲ್ಲಿ ಈ ಘಟನೆ ನಡೆದೆ. ಶಸ್ತ್ರ ಚಿಕಿತ್ಸೆಯ ಮೂಲಕ ಇಯರ್ ಫೋನನ್ನು ದೇಹದಿಂದ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ.

    ಆಗಿದ್ದು ಏನು?
    ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಇಯರ್ ಫೋನ್ ನುಂಗಿದ ಬಳಿಕ ಮಗು ಒಂದೇ ಸಮನೆ ಅಳುತ್ತಿದ್ದಳು. ಏನು ಮಾಡಬೇಕೆಂದು ತೋಚದ ಹೆತ್ತವರು ಮಗಳನ್ನು ಅಮಲಾಪುರಂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಗಂಟಲಲ್ಲಿ ಸೆರಲ್ಯಾಕ್ ಸಿಲುಕಿ 3 ತಿಂಗಳ ಮಗು ಸಾವು

    ಪ್ರಾಥಮಿಕ ಪರೀಕ್ಷೆಯ ವೇಳೆ ವೈದ್ಯರು ದೇಹದ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ. ಆದರೂ ಮಗು ಆಳುತ್ತಿದ್ದ ಕಾರಣ ಎಕ್ಸ್-ರೇ ಮಾಡಿಸಿದ್ದಾರೆ. ಈ ವೇಳೆ ಮೊಬೈಲ್ ಇಯರ್ ಫೋನ್ ಇರುವುದು ಪತ್ತೆಯಾಗಿದೆ.

    ಕೂಡಲೇ ನಮ್ಮ ತಂಡ ಶಸ್ತ್ರಚಿಕಿತ್ಸೆ ನಡೆಸಿ ದೇಹದಿಂದ ಇಯರ್ ಫೋನ್ ಹೊರ ತೆಗೆದಿದ್ದೇವೆ. ಈಗ ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಶಸ್ತ್ರ ಚಿಕಿತ್ಸೆ ನಡೆಸಿದ ಅಮಲಾಪುರಂ ಆಸ್ಪತ್ರೆಯ ವೈದ್ಯ ಚಕ್ರವರ್ತಿ ತಿಳಿಸಿದ್ದಾರೆ. ಇದನ್ನೂ ಓದಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಪುಟ್ಟ ಕಂದಮ್ಮ ದುರ್ಮರಣ!

     

  • ನಾನ್ ಇಲ್ಲಿರಲ್ಲ..ನನ್ನ ಮಠಕ್ಕೆ ಕಳುಹಿಸಿ – ಆಸ್ಪತ್ರೆಯಲ್ಲಿ ಹಠ ಹಿಡಿದ ಸಿದ್ದಗಂಗಾ ಶ್ರೀ

    ನಾನ್ ಇಲ್ಲಿರಲ್ಲ..ನನ್ನ ಮಠಕ್ಕೆ ಕಳುಹಿಸಿ – ಆಸ್ಪತ್ರೆಯಲ್ಲಿ ಹಠ ಹಿಡಿದ ಸಿದ್ದಗಂಗಾ ಶ್ರೀ

    ಬೆಂಗಳೂರು: ಶತಾಯುಷಿ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಆಸ್ಪತ್ರೆಯಲ್ಲಿ ನಾನಿರಲ್ಲ.. ನನ್ನನ್ನು ಮಠಕ್ಕೆ ಕಳುಹಿಸಿ ಎಂದು ಶ್ರೀಗಳು ಹಠ ಮಾಡುತ್ತಿದ್ದಾರೆ.

    ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಶುಕ್ರವಾರ ನಗರದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಮುಂಜಾನೆ 6 ಗಂಟೆಗೆ ನುರಿತ ವೈದ್ಯರಿಂದ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ.

    ಇಂದು ಬೆಳಗ್ಗೆ 7.30ರ ಲಿಂಗ ಪೂಜೆ ಬಳಿಕ ಬಿಜಿಎಸ್ ವೈದ್ಯರ ತಂಡ ಸಿಟಿ ಸ್ಕ್ಯಾನ್ ಮಾಡಿದ್ದಾರೆ. ಸಿಟಿ ಸ್ಕ್ಯಾನ್ ಬಳಿಕ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡುಬಂದಲ್ಲಿ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದರು. ಆದರೆ ಶ್ರೀಗಳು ನಾನು ಆಸ್ಪತ್ರೆಯಲ್ಲಿ ಇರಲ್ಲ. ನನ್ನನ್ನ ಮಠಕ್ಕೆ ಕಳುಹಿಸಿ ಎಂದು ಹಠ ಮಾಡಿದ್ದಾರೆ. ಆದ್ದರಿಂದ ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಶ್ರೀಗಳನ್ನು ಡಿಸ್ಚಾರ್ಜ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

    ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ರವೀಂದ್ರ, ಶ್ರೀಗಳಿಗೆ ಎಲ್ಲಾ ತಪಾಸಣೆ ಮಾಡಿದ್ದೇವೆ. ನಾವು ಮುಂದಿನ ತಿರ್ಮಾನ ತೆಗೆದುಕೊಳ್ಳುತ್ತಿದ್ದು, ಡಿಸ್ಚಾರ್ಜ್ ಮಾಡಲು ನಿರ್ಧಾರ ಮಾಡಿದ್ದೇವೆ, ಆದರೆ ಮಠಕ್ಕೆ ಹೋದ ನಂತರ 10 ದಿನಗಳ ವಿಶ್ರಾಂತಿ ಪಡೆಯಬೇಕು. ಆದ್ದರಿಂದ ಅಲ್ಲಿಯೂ ಎಲ್ಲಾ ಸಿದ್ಧತೆ ಮಾಡಿದ್ದೇವೆ. ಈಗಾಗಲೇ ಬಂದವರಿಗೆ ದರ್ಶನ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ.

  • ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ಸಿಗಬಹುದು ಎಂಬ ಸುದ್ದಿಯನ್ನು ಹೇಳಿದ್ದೆವು. ಆದರೆ ಇದೀಗ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ.

    ಶ್ರೀಗಳಿಗೆ ಕಫ, ಜ್ವರ ಕಾಣಿಸಿಕೊಂಡು ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ರಾತ್ರಿ ಶಿವಪೂಜೆ ಮುಗಿದ ಬಳಿಕ ಸ್ವಾಮೀಜಿಯವರ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡುಬಂದಿದೆ. ತಕ್ಷಣ ನಸುಕಿನ ಜಾವ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಬರಲಾಗಿದ್ದು, ಸದ್ಯ ಶ್ರೀಗಳಿಗೆ ನುರಿತ ವೈದ್ಯರ ತಂಡವೊಂದು ಚಿಕಿತ್ಸೆ ನೀಡುತ್ತಿದೆ.

    ಭಾರತ ರತ್ನ ಪ್ರಶಸ್ತಿಗೆ ಮನವಿ:
    ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಭಾರತ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದರು.

    ಮನವಿಯಲ್ಲೇನಿದೆ?:
    ಶತಮಾನಗಳಷ್ಟು ಹಳೆಯದಾದ ತುಮಕೂರಿನ ಸಿದ್ದಗಂಗಾ ಮಠ ಕಳೆದ 600 ವರ್ಷಗಳಿಂದ ಶಿಕ್ಷಣ, ಅನ್ನ ದಾಸೋಹ ಮಾಡುತ್ತಾ ಬಂದಿದೆ. ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾಗಿರುವ ಶತಾಯುಷಿ, ಶಿಕ್ಷಣ, ಅನ್ನದಾಸೋಹದ ಪ್ರಮುಖ ರೂವಾರಿಯಾಗಿರೋ ಸಿದ್ದಗಂಗಾ ಶ್ರೀಗಳ ಕೊಡುಗೆ ಅನನ್ಯವಾಗಿದೆ. ಸ್ವಾಮೀಜಿಯವರು ಈಗ 110 ವರ್ಷಗಳನ್ನು ಪೂರೈಸಿದ್ದಾರೆ. ಎಲ್ಲ ಸಮುದಾಯದ ಕಡುಬಡವ ಮಕ್ಕಳಿಗೆ ಅನ್ನ ದಾಸೋಹ ಮಾಡುವ ಮೂಲಕ ಶಿಕ್ಷಣ ನೀಡಿ ಉತ್ತಮ ನಾಗರಿಕರನ್ನಾಗಿ ಮಾಡಿದ ಕೀರ್ತಿ ಸ್ವಾಮೀಜಿಗೆ ಸಲ್ಲುತ್ತದೆ. ಇದು ಅವರ ನಿಸ್ವಾರ್ಥ ಸೇವೆಗೆ ಹಿಡಿದ ಕೈಗನ್ನಡಿಯಾಗಿದೆ. ಇಂದಿಗೂ ಸಿದ್ದಗಂಗಾ ಮಠ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಸತಿ, ಶಿಕ್ಷಣ ಜೊತೆಗೆ ಉಚಿತ ಪ್ರಸಾದವನ್ನು ನೀಡುತ್ತಾ ಬಂದಿದೆ. ದೇಶದಲ್ಲೇ ಅತ್ಯುನ್ನತ ಶಿಕ್ಷಣ ಸಂಸ್ಥೆ ಎಂದು ಖ್ಯಾತಿಯಾಗಿದೆ. ಇದರ ರೂವಾರಿಯಾಗಿರುವ ಡಾ. ಶಿವಕುಮಾರ ಸ್ವಾಮೀಜಿ ಅವರ ಅನನ್ಯ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನಕ್ಕೆ ಶಿಫಾರಸು ಮಾಡಬೇಕೆಂದು ರಾಜ್ಯದ ಪರವಾಗಿ ನಾನು ವಿನಂತಿಸಿಕೊಳ್ಳುತ್ತಿದ್ದೆನೆ ಎಂದು ಪತ್ರದಲ್ಲಿ ಸಿಎಂ ಉಲ್ಲೇಖಿಸಿದ್ದರು.

  • ಗಂಟಲು ತೊಂದರೆ ಇದ್ರೂ ಭಾಷಣ ಮುಂದುವರೆಸಿದ ಬಿಎಸ್‍ವೈ

    ಗಂಟಲು ತೊಂದರೆ ಇದ್ರೂ ಭಾಷಣ ಮುಂದುವರೆಸಿದ ಬಿಎಸ್‍ವೈ

    ಮಂಡ್ಯ: ನಿರಂತರವಾಗಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಂಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಗಂಟಲು ಇಂದು ಕೈಕೊಟ್ಟಿದ್ದು ವೇದಿಕೆ ಮೇಲೆ ಮಾತನಾಡೋಕೆ ಹರಸಾಹಸ ಪಟ್ಟರು.

    ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಪರಿವರ್ತನಾ ಯಾತ್ರೆ ಸಂದರ್ಭದಲ್ಲಿ ವೇದಿಕೆ ಮೇಲೆ ಮಾತನಾಡಲು ಯಡಿಯೂರಪ್ಪ ಬಳಲಿದಂತೆ ಕಂಡು ಬಂದರು. ಭಾಷಣದ ಮಧ್ಯದಲ್ಲಿ  ನಿಲ್ಲಿಸಿ ಸ್ವಲ್ಪ ನೀರು ಕುಡಿದು ಪುನಃ ಭಾಷಣ ಆರಂಭಿಸಿದರು. ಸತತವಾಗಿ ಪರಿವರ್ತನಾ ಯಾತ್ರೆ 78 ಕಾಲಿಟ್ಟಿದೆ, 214 ನೇ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡಿದ್ದು, ಸುಮಾರು ಒಂದು ಕೋಟಿ 75 ಲಕ್ಷ ಜನರನ್ನು ನೇರವಾಗಿ ಮಾತನಾಡಿದ್ದೇನೆ ಎಂದರು.

    ಇದೇ ವೇಳೆ ಮಂಡ್ಯದಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸದೆ ಇರುವ ಬಗ್ಗೆ ನೋವು ಹೊರಹಾಕಿದರು. ಈ ಬಾರಿ ಪಕ್ಷಕ್ಕೆ ಯೋಗ್ಯ ಅಭ್ಯರ್ಥಿಗಳು ಸಿಕ್ಕಿದ್ದು, ಮಂಡ್ಯ ಜಿಲ್ಲೆಯಲ್ಲಿ ಕನಿಷ್ಟ ಮೂರು ಕ್ಷೇತ್ರದಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

    ಮಂಡ್ಯದಲ್ಲಿ ಕಮಲ ಅರಳಿಸುವ ತಂತ್ರ: ಜಿಲ್ಲೆಯಲ್ಲಿ ಕಮಲ ಅರಳಿಸಲು ರಣತಂತ್ರ ರೂಪಿಸುತ್ತಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಒಕ್ಕಲಿಗ ಮುಖಂಡರು ಮತ್ತು ಎಸ್‍ಎಂ.ಕೃಷ್ಣ ಅವರ ಬೆಂಬಲಿಗರನ್ನು ಬಿಜೆಪಿ ಪಕ್ಷಕ್ಕೆ ಕರೆತರಲು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಈ ಹಿನ್ನೆಲೆ ಪಾಂಡವಪುರದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸುವ ಮುನ್ನ ಬಿಎಸ್‍ವೈ, ಎಸ್.ಎಂ.ಕೃಷ್ಣ ಬೆಂಬಲಿಗ ಹಾಗೂ ಒಕ್ಕಲಿಗ ಮುಖಂಡರಾದ ಎಚ್.ಮಂಜುನಾಥ್‍ರ ಮನೆಗೆ ಭೇಟಿ ನೀಡಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದರು.

    ಎಸ್‍ಎಂ.ಕೃಷ್ಣ ಅವರ ನಿಷ್ಠಾವಂತ ಬೆಂಬಲಿಗರಾದ ಮಂಜುನಾಥ್ ಮೇಲುಕೋಟೆ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಎಸ್‍ಎಂ ಕೃಷ್ಣ ಅವರು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರ್ಪಡೆಯಾದ ನಂತರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಮಂಜುನಾಥ್ ರಾಜಕೀಯವಾಗಿ ಯಾವ ಪಕ್ಷಕ್ಕೂ ಸೇರದೆ ತಟಸ್ಥವಾಗಿದ್ದಾರೆ. ಶುಕ್ರವಾರ ಮದ್ದೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಎಸ್‍ಎಂ.ಕೃಷ್ಣ ತಮ್ಮ ಬೆಂಬಲಿಗರಿಗೆ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಒಕ್ಕಲಿಗ ಸಮುದಾಯ ಕೂಡ ಬಿಜೆಪಿ ಪರ ನಿಲ್ಲುವಂತೆ ಪರೋಕ್ಷವಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮಂಜುನಾಥ್ ಮನೆಗೆ ಭೇಟಿ ನೀಡಿದ ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಬರುವಂತೆ ಆಹ್ವಾನಿಸಿದರು. ಯಡಿಯೂರಪ್ಪ ಅವರ ಭೇಟಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಂಜುನಾಥ್ ಶೀಘ್ರದಲ್ಲೆ ಎಸ್‍ಎಂ.ಕೃಷ್ಣ ಅವರ ಜೊತೆ ಚರ್ಚಿಸಿ ತಮ್ಮ ಬೆಂಗಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ ಅಂತಾ ಹೇಳಲಾಗುತ್ತಿದೆ.

  • 2 ದಿನಗಳ ಹಿಂದೆ ಸಿನಿಮಾ ಡಬ್ಬಿಂಗ್ ಮಾಡಿದ್ರು, ಗುಣಮುಖರಾಗುತ್ತಿದ್ರು: ಕಾಶಿನಾಥ್ ಸಹೋದರಿ ಗಾಯತ್ರಿ

    2 ದಿನಗಳ ಹಿಂದೆ ಸಿನಿಮಾ ಡಬ್ಬಿಂಗ್ ಮಾಡಿದ್ರು, ಗುಣಮುಖರಾಗುತ್ತಿದ್ರು: ಕಾಶಿನಾಥ್ ಸಹೋದರಿ ಗಾಯತ್ರಿ

    ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಾಶಿನಾಥ್ ನಿಧನರಾಗಿದ್ದು, 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.

    ಎರಡು ದಿನಗಳ ಹಿಂದೆ ಸಿನಿಮಾದ ಡಬ್ಬಿಂಗ್ ಸಹ ಮಾಡಿದ್ದರು. ಉಸಿರಾಟದ ತೊಂದರೆಯಾಗಿ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ಸೇರಿಸಲಾಗಿತ್ತು, ಗುಣಮುಖರಾಗುತ್ತಿದ್ದರು. ಆದರೆ ಇಂದು ಬೆಳಗ್ಗೆ 7:15ಕ್ಕೆ ತೀವ್ರ ಉಸಿರಾಟದ ತೊಂದರೆಯಾಗಿ ಅಸುನೀಗಿದ್ದಾರೆ. ದುಬೈನಿಂದ ಕಾಶಿನಾಥ್ ಅವರ ಮಗಳು ಹೊರಟಿದ್ದಾರೆ, ಸಂಜೆ 4ಕ್ಕೆ ಬೆಂಗಳೂರಿಗೆ ಬರುತ್ತಾರೆ. ಬಂದ ನಂತರ ಬೆಂಗಳೂರಿನಲ್ಲೇ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಎಂದು ಕಾಶಿನಾಥ್ ಸಹೋದರಿ ಗಾಯತ್ರಿ ತಿಳಿಸಿದ್ದಾರೆ.

    ಎರಡು ವರ್ಷಗಳ ಹಿಂದೆ ಕಾಶಿನಾಥ್ ತಾಯಿ ಸಾವನ್ನಪ್ಪಿದ್ದರು. ತಾಯಿ ಸಾವು ಕಾಶಿನಾಥ್ ಅವರನ್ನ ಬಹುವಾಗಿ ಕಾಡಿತ್ತು. ತಾಯಿ ಜೊತೆ ತುಂಬಾ ಅಟಾಚ್‍ಮೆಂಟ್ ಇತ್ತು. ಅವರ ಸಾವಿನಿಂದ ಇವರು ಇನ್ನಷ್ಟು ಕುಗ್ಗಿದ್ದರು. ಆರೋಗ್ಯದ ಬಗ್ಗೆ ಯಾರಿಗೂ ಹೇಳಿಕೊಳ್ಳುತ್ತಿರಲಿಲ್ಲ ಎಂದು ಗಾಯತ್ರಿ ಹೇಳಿದ್ರು.

    ಇದನ್ನೂ ಓದಿ: ಈ ಸುದ್ದಿ ಸುಳ್ಳಾಗಲಿ ಎಂದು ಬಯಸುತ್ತೇನೆ- ಕಾಶಿನಾಥ್ ಅಗಲಿಕೆಯ ಸುದ್ದಿ ಕೇಳಿ ಬಿಕ್ಕಿ ಬಿಕ್ಕಿ ಅತ್ತ ನಟಿ ಅಭಿನಯ

    ಇದನ್ನೂ ಓದಿ: ಬಹುತೇಕ ಸ್ಟಾರ್‍ ಗಳಿಗೆ ಸೈಡ್ ಹೊಡೆದು ಗಾಬರಿ ಹುಟ್ಟಿಸಿದ ಸಾಧಕ, ಸಂಭಾವಿತ ಕಾಶಿನಾಥ್- ನಟ ಜಗ್ಗೇಶ್ ಸಂತಾಪ

     

  • ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು- ಜಯದೇವ ಹೃದ್ರೋಗ ಆಸ್ಪತ್ರೆಗೆ ಶಿಫ್ಟ್ ಮಾಡೋ ಸಾಧ್ಯತೆ

    ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು- ಜಯದೇವ ಹೃದ್ರೋಗ ಆಸ್ಪತ್ರೆಗೆ ಶಿಫ್ಟ್ ಮಾಡೋ ಸಾಧ್ಯತೆ

    ಬೆಂಗಳೂರು: ರವಿ ಬೆಳಗೆರೆ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಉಸಿರಾಟದ ತೊಂದರೆ ಮತ್ತು ತೀವ್ರ ಬೆನ್ನು ನೋವು ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.

    ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಮಂಗಳವಾರ ಜೈಲಾಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ವೈದ್ಯರು ರವಿ ಬೆಳಗೆರೆಯವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಅಗತ್ಯವಿಲ್ಲ. ರಕ್ತಪರೀಕ್ಷೆ ವರದಿ ಬಂದ ಬಳಿಕ ನೋಡೋಣ ಎಂದು ಹೇಳಿ ವಾಪಸ್ ಕಳುಹಿಸಿದ್ದರು.

    ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ರವಿ ಬೆಳಗೆರೆ ಪರಪ್ಪನ ಅಗ್ರಹಾರ ಸೇರಿದ್ದರು. ಆರೋಗ್ಯದಲ್ಲಿ ಮೊದಲೇ ಏರುಪೇರು ಆಗಿದ್ದರಿಂದ ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಇಂದು ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದರಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ರವಾನಿಸುವ ಸಾಧ್ಯತೆಯಿದೆ.

    ಅತ್ತ ಜಾಮೀನಿಗಾಗಿ ಚೇತನಾ ಬೆಳಗೆರೆ ಅರ್ಜಿಯನ್ನು ಸಲ್ಲಿಸಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚೇತನಾ ಬೆಳಗೆರೆ, ನಮ್ಮ ತಂದೆಯವರಿಗೆ ಮೊದಲೇ ಆರೋಗ್ಯ ಸರಿಯಿಲ್ಲ. ಇದರ ಮಧ್ಯೆ ಅವರನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದರು.

  • ಮಗನ ನಿರ್ಧಾರದಿಂದ ಖಿನ್ನತೆಗೆ ಜಾರಿದ್ದಾನೆ ಭೂಗತ ಪಾತಕಿ ದಾವೂದ್!

    ಮಗನ ನಿರ್ಧಾರದಿಂದ ಖಿನ್ನತೆಗೆ ಜಾರಿದ್ದಾನೆ ಭೂಗತ ಪಾತಕಿ ದಾವೂದ್!

    ಥಾಣೆ: ಭೂಗತ ಪಾತಕಿ, ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಕೌಟುಂಬಿಕ ಕಲಹಗಳಿಂದ ಖಿನ್ನತೆಗೆ ಒಳಗಾಗಿದ್ದಾನೆ ಎನ್ನುವ ಮಾಹಿತಿ ಈಗ ಲಭ್ಯವಾಗಿದೆ.

    ದಾವೂದ್ ಉತ್ತರಾಧಿಕಾರಿ ಎಂದೇ ಕರೆಸಿಕೊಂಡಿದ್ದ, ಆತನ ಮಗ ಮೋಯಿನ್ ನವಾಜ್ ಡಿ ಕಸ್ಕರ್ (31) ಮೌಲ್ವಿ ಯಾಗಲು ನಿರ್ಧಾರಿಸಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

    ಕಾನೂನು ಬಾಹಿರ ಕೃತ್ಯಗಳಿಂದ ಬೇಸತ್ತು ಹೋಗಿರುವ ಮೋಯಿನ್, ಕುಟುಂಬ ವ್ಯವಹಾರಗಳನ್ನು ಮುಂದುವರೆಸದೇ ಇರಲು ನಿರ್ಧರಿಸಿದ್ದು, ತಂದೆಯ ಕೃತ್ಯಗಳಿಂದ ಇಡೀ ಕುಟುಂಬಕ್ಕೆ ಕಳಂಕ ಉಂಟಾಗುತ್ತಿದೆ ಎಂದು ಆರೋಪಿಸಿದ್ದಾನೆ ಎನ್ನಲಾಗಿದೆ.

    ಅಪಾರ ಸಂಪತ್ತು, ತೋಳ್ಬಲ ಹೊಂದಿದ್ದರೂ, ದಾವೂದ್ ತನ್ನ ಕುಟುಂಬದ ಸಮಸ್ಯೆಗಳನ್ನು ನಿವಾರಿಸಲು ವಿಫಲನಾಗಿದ್ದಾನೆ. ದಾವೂದ್ ನ ಮೂರು ಮಕ್ಕಳಲ್ಲಿ ಮೋಯಿನ್ ಒಬ್ಬನೇ ಗಂಡು ಮಗನಾಗಿದ್ದು, ಧರ್ಮ ನಿಷ್ಠನಾಗಿರುವ ಮೋಯಿನ್ ಮೌಲ್ವಿ (ಧಾರ್ಮಿಕ ಶಿಕ್ಷಕ) ಯಾಗಲು ನಿರ್ಧರಿಸಿದ್ದಾನೆ ಎಂದು ಥಾಣೆ ಪೋಲಿಸ್ ಅಧಿಕಾರಿ ಪ್ರದೀಪ್ ಶರ್ಮಾ ಹೇಳಿದ್ದಾರೆ.

    ಕಳೆದ ಸೆಪ್ಟೆಂಬರ್‍ನಲ್ಲಿ ಥಾಣೆಯ ಎಇಸಿಗೆ ಸಿಕ್ಕಿಬಿದ್ದ ದಾವೂದ್ ಸಹೋದರ ಇಕ್ಬಾಲ್ ಇಬ್ರಾಹಿಂ ಕಸ್ಕರ್ ವಿಚಾರಣೆ ವೇಳೆ ಈ ವಿಷಯ ಬಹಿರಂಗಗೊಂಡಿದ್ದು, ಇನ್ನು ಕೆಲವು ಕೌಟುಂಬಿಕ ಭಿನ್ನತೆಗಳು ಹಾಗೂ ವಯೋಸಹಜ ಅನಾರೋಗ್ಯಗಿಂದ ದಾವೂದ್ ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆಂದು ವಿಚಾರಣೆ ವೇಳೆ ಮಾಹಿತಿ ನೀಡಿದ್ದ.

    ಇನ್ನು ಮೋಯಿನ್ ಖುರಾನ್ ನ 6,236 ಶ್ಲೋಕಗಳನ್ನು ಕಂಠಪಾಠ ಮಾಡಿದ್ದು, ಧಾರ್ಮಿಕ ಮುಖಂಡರಿಂದ ಅಪಾರ ಗೌರವ ಗಳಿಸಿದ್ದಾನೆ. ಅಲ್ಲದೇ ಈಗಾಗಲೇ ಶ್ರೀಮಂತ ಜೀವನ ತ್ಯಜಿಸಿರುವ ಮೋಯಿನ್ ಕರಾಚಿಯಲ್ಲಿ ನೀಡಲಾಗಿದ್ದ ಭವ್ಯ ಬಂಗಲೆ ಹಾಗೂ ಐಶಾರಾಮಿ ಸೌಕರ್ಯಗಳನ್ನು ತಿರಸ್ಕರಿಸಿ, ತನ್ನ ಕುಟುಂಬದೊಂದಿಗೆ ತಮ್ಮ ಮನೆಯ ಪಕ್ಕದ ಮಸೀದಿಯೊಂದರಲ್ಲಿ ಜೀವನ ನಡೆಸಲು ಮುಂದಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

    ಮೋಯಿನ್ ಪತ್ನಿ ಹಾಗೂ ಆತನ ಮೂರು ಮಕ್ಕಳು ಪ್ರಸ್ತುತ ಆತನೊಂದಿಗೆ ಮಸೀದಿ ನೀಡಿರುವ ಸಣ್ಣ ಕ್ವಾಟ್ರಸ್ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮೋಯಿನ್ 2011ರಲ್ಲಿ ಪಾಕಿಸ್ತಾನ ಮತ್ತು ಬ್ರಿಟನ್‍ನಲ್ಲಿ ವ್ಯವಹಾರ ಹೊಂದಿರುವ ಉದ್ಯಮಿ ಪುತ್ರಿಯನ್ನು ಮದುವೆಯಾಗಿದ್ದಾನೆ. ಅಲ್ಲದೇ ಮೋಯಿನ್ ಸಹೋದರಿ ಮಹ್ರುಕ್ 2006 ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಜಾವೇದ್ ಮಿಯಾಂದದ್ ಪುತ್ರನನ್ನು ಮದುವೆಯಾಗಿದ್ದಾಳೆ. ಮತ್ತೊಬ್ಬ ದಾವೂದ್ ಪುತ್ರಿ ಮಹ್ರೀನ್, ಅಮೆರಿಕದ ಮೂಲದ ಉದ್ಯಮಿಯನ್ನು ವರಿಸಿದ್ದಾಳೆ.

    ಈ ಹಿಂದೆ ಪೊಲೀಸ್ ವಿಚಾರಣೆ ವೇಳೆ ಇಬ್ರಾಹಿಂ ಕಸ್ಕರ್, ದಾವೂದ್ ಆರೋಗ್ಯವಾಗಿದ್ದು, ಪಾಕಿಸ್ತಾನಿ ಏಜೆನ್ಸಿಗಳ ರಕ್ಷಣೆಯಲ್ಲಿ ಕರಾಚಿಯಲ್ಲಿ ವಾಸಿಸುತ್ತಿದ್ದಾನೆ ಎಂದು ಹೇಳಿಕೆ ನೀಡಿದ್ದ. ಆದರೆ ದಾವೂದ್ ಸಹೋದರರ ಪೈಕಿ ಕೆಲವರು ಮೃತಪಟ್ಟಿದ್ದು, ಮತ್ತೊಬ್ಬ ಸಹೋದರ ಅನೀಸ್ ಇಬ್ರಾಹಿಂ ಕಸ್ಕರ್ ಗೆ ವಯಸ್ಸಾಗಿದೆ. ಇನ್ನು ದಾವೂದ್ ತನ್ನ ವ್ಯವಹಾರಗಳನ್ನು ನೋಡಿಕೊಳ್ಳಲು ಹತ್ತಿರದ ಸಂಬಂಧಿಗಳ ಬಗ್ಗೆ ವಿಶ್ವಾಸ ಹೊಂದಿಲ್ಲ ಎಂದು ತಿಳಿದುಬಂದಿದೆ.

    ಇಬ್ರಾಹಿಂ ಕಸ್ಕರ್ ವಿಚಾರಣೆಯನ್ನು ಮುಂದುವರೆಸಿರುವ ಪೊಲೀಸರು, ಮುಂಬರುವ ದಿನಗಳಲ್ಲಿ ದಾವೂದ್ ಕುಟುಂಬ ಹಾಗೂ ಆತನ ಭವಿಷ್ಯದ ಚಟುವಟಿಕೆಗಳ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಸಂಗ್ರಹಿಸಲು ಮುಂದಾಗಿದ್ದಾರೆ.

  • ವಿಶ್ವದ ಮೊದಲ ಡಿಜಿಟಲ್ ಮಾತ್ರೆಯನ್ನು ನುಂಗಲಿದ್ದಾರೆ ಅಮೆರಿಕ ಜನತೆ!

    ವಿಶ್ವದ ಮೊದಲ ಡಿಜಿಟಲ್ ಮಾತ್ರೆಯನ್ನು ನುಂಗಲಿದ್ದಾರೆ ಅಮೆರಿಕ ಜನತೆ!

    ವಾಷಿಂಗ್ಟನ್: ಮಾನವನ ದೇಹವನ್ನು ಪ್ರವೇಶಿದ ನಂತರ ಮಾತ್ರೆಯೇ ಸ್ವತಃ ತನ್ನ ಮಾಹಿತಿಯನ್ನು ಒದಗಿಸುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಸರ್ಕಾರ ಅನುಮತಿಯನ್ನು ನೀಡಿದೆ. ಒಟುಕ್ಸಾ ಫಾರ್ಮಸುಟಿಕಲ್ಸ್ ಸಂಸ್ಥೆ ಸಿದ್ಧಪಡಿಸಿರುವ ಮಾತ್ರೆಗೆ ಅಮೆರಿಕದ ಆಹಾರ ಮತ್ತು ಔಷಧ ಇಲಾಖೆ ಅನುಮತಿ ನೀಡಿದೆ.

    ಏನಿದು ಡಿಜಿಟಲ್ ಮಾತ್ರೆ: ವೈದ್ಯರು ರೋಗಿಗಳಿಗೆ ನೀಡುವ ಎಲ್ಲಾ ಮಾತ್ರೆಗಳಂತೆ ಇದು ಸಹ ಸಾಮಾನ್ಯ ಮಾದರಿಯ ಮಾತ್ರೆಯಾಗಿದ್ದು, ಆದರೆ ಇದರಲ್ಲಿ ಸಿಲಿಕಾ, ಮ್ಯಾಗ್ನೇಷಿಯಂ, ತಾಮ್ರದಿಂದ ತಯಾರಿಸಿದ ಸಣ್ಣ ಚೀಪ್ ಅಳವಡಿಸಲಾಗಿರುತ್ತದೆ. ರೋಗಿ ಮಾತ್ರೆ ಸೇವಿಸಿದ ನಂತರ ಮಾತ್ರೆ ಸೇವಿಸಿದ ಸಮಯ, ಪ್ರಮಾಣ ಕುರಿತ ಎಲ್ಲಾ ಅಂಶಗಳ ಮಾಹಿತಿಯನ್ನು ನೀಡುತ್ತದೆ. ಅಲ್ಲದೇ ಮಾತ್ರೆ ಸೇವಿಸಿದ ನಂತರ ಚಿಪ್ ರೋಗಿಯ ಮಲದ ಮೂಲಕ ಹೊರ ಬರುತ್ತದೆ.

    ಉಪಯೋಗ ಏನು? ಮಾತ್ರೆ ರೋಗಿಯ ಹೊಟ್ಟೆ ಸೇರಿಸಿದ ನಂತರ ಯಾವ ಪ್ರಮಾಣದಲ್ಲಿ ಔಷಧಿಯನ್ನು ಬಳಸಲಾಗಿದೆ ಎಂಬ ಮಾಹಿತಿ ಸುಲಭವಾಗಿ ಲಭ್ಯವಾಗುತ್ತದೆ. ಈ ಮಾಹಿತಿ ಲಭಿಸಲು ಕನಿಷ್ಟ ಮಾತ್ರೆ ಸೇವಿಸಿದ ನಂತರ 30 ನಿಮಿಷಗಳಿಂದ ರಿಂದ 2 ಗಂಟೆಗಳ ಅವಧಿ ಬೇಕಾಗುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ.

    ಕಾರ್ಯನಿರ್ವಹಣೆ ಹೇಗೆ?
    ರೋಗಿಯು ಮಾತ್ರೆ ಸೇವಿಸಿದ ನಂತರ ಹೊಟ್ಟೆಯೊಳಗಿನ ಆಮ್ಲದೊಂದಿಗೆ ಸಮ್ಮಿಲಗೊಂಡು ಪ್ರತಿಕ್ರಿಯೆ ನೀಡುತ್ತದೆ. ಮಾತ್ರೆಯಲ್ಲಿ ಅಳವಡಿಸಲಾಗರುವ ಸಣ್ಣ ಗಾತ್ರದ ಚಿಪ್ ರೋಗಿಯ ಕೈಗೆ ಅಳವಡಿಸುವ ಯಂತ್ರಕ್ಕೆ ಮಾಹಿತಿ ರವಾನಿಸುತ್ತದೆ. ನಂತರ ಈ ಮಾಹಿತಿಯನ್ನು ರೋಗಿಯ ಮೊಬೈಲ್, ಡಾಕ್ಟರ್ ಅಥವಾ ಸಂಬಂಧಿಕರ ಮೊಬೈಲ್‍ಗೆ ರವಾನೆಯಾಗುತ್ತದೆ. ಇದರಿಂದ ರೋಗಿ ಔಷಧಿ ಸೇವಿಸಿದ್ದಾರ, ಇಲ್ಲವೇ ಎಂಬ ಮಾಹಿತಿ ಸುಲಭವಾಗಿ ಲಭ್ಯವಾಗುತ್ತದೆ.

    ಪ್ರಸ್ತುತ ಡಿಜಿಟಲ್ ಮಾತ್ರೆಗಳನ್ನು ಮಾನಸಿಕ ಸಮಸ್ಯೆ ಹಾಗೂ ಖಿನ್ನತೆಯಿಂದ ಬಳಲುತ್ತಿರುವ ರೋಗಿಗಳಿಗೆ ಬಳಸಲು ಅನುಮತಿ ನೀಡಲಾಗಿಲ್ಲ.

  • ಕಾರ್ ನಲ್ಲಿ ಮಗುವಿಗೆ ಹಾಲುಣಿಸುವಾಗಲೇ ಮಹಿಳೆಯೊಂದಿಗೆ ಅಮಾನವೀಯ ವರ್ತನೆ ತೋರಿದ ಟ್ರಾಫಿಕ್ ಪೊಲೀಸ್..!

    ಕಾರ್ ನಲ್ಲಿ ಮಗುವಿಗೆ ಹಾಲುಣಿಸುವಾಗಲೇ ಮಹಿಳೆಯೊಂದಿಗೆ ಅಮಾನವೀಯ ವರ್ತನೆ ತೋರಿದ ಟ್ರಾಫಿಕ್ ಪೊಲೀಸ್..!

    ಮುಂಬೈ: ಕಾರಲ್ಲಿ ಮಹಿಳೆ ತನ್ನ 7 ತಿಂಗಳ ಮಗುವಿಗೆ ಹಾಲುಣಿಸುವಾಗಲೇ ಟ್ರಾಫಿಕ್ ಪೊಲೀಸರು ಅಮಾನವೀಯವಾಗಿ ವರ್ತಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಈ ಘಟನೆ ಶುಕ್ರವಾರ ಮಲಾಡ್ ವೆಸ್ಟ್ ನಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ನಗರದ ಜ್ಯೋತಿ ಎಂಬವರು ಪೊಲೀಸರ ಹತ್ತಿರ ತನ್ನ ಆರೋಗ್ಯ ಸರಿಯಿಲ್ಲ ಎಂದು ಹೇಳಿ ಪ್ರಿಸ್ಕ್ರಿಪ್ಷನ್ ಲೆಟರ್ ತೋರಿಸಿದ್ರೂ ಅವರ ಮಾತನ್ನು ಕೇಳದೆ, ಕರುಣೆಯೂ ತೋರದೆ ಫೋನಿನಲ್ಲಿ ಮಾತನಾಡಿಕೊಂಡು ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

    `ನಾನು ನನ್ನ 7 ತಿಂಗಳ ಮಗುವಿಗೆ ಹಾಲುಣಿಸುತ್ತಿದ್ದೇನೆ ಎಂದು ಹೇಳಿದೆ. ಆ ವೇಳೆ ನನ್ನನ್ನು ಕಾರಿನಿಂದ ಇಳಿಯೋದಕ್ಕೂ ಅವಕಾಶ ನೀಡಿಲ್ಲ. ನನ್ನ ಕಾರು ನಿಲ್ಲಿಸಿದ್ದ ಜಾಗದಲ್ಲೇ ಇನ್ನೂ ಎರಡೂ ಕಾರಗಳು ನಿಂತಿದ್ದವು. ಆದರೆ ಪೊಲೀಸರು ನನ್ನ ಕಾರನ್ನು ಆಯ್ಕೆ ಮಾಡಿ ನಂತರ ಟೋಯಿಂಗ್ ಮಾಡಿ ಕಾರನ್ನು ಎಳೆದುಕೊಂಡೇ ಹೋದರು. ಅಲ್ಲಿ ಇದ್ದ ಜನರು ಮಗು ಹಾಗೂ ತಾಯಿಗೆ ತೊಂದರೆ ಆಗುತ್ತದೆ ಎಂದು ಸಾಕಷ್ಟು ಹೇಳಿದ್ರೂ ಅವರ ಮಾತನ್ನು ಕೇಳಲಿಲ್ಲ ಎಂದು ಜ್ಯೋತಿ ಹೇಳಿದ್ದಾರೆ.

    https://twitter.com/MuzzammilAap/status/929259260030185472

    ಘಟನೆ ಬಳಿಕ ಮುಂಬೈನ ಜಂಟಿ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಶೀಘ್ರದಲ್ಲೇ ವಿಚರಣೆ ನಡೆಸಲು ಉಪ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸುವಂತೆ ಆದೇಶಿಸಿದ್ದಾರೆ. ಅಲ್ಲದೇ ಘಟನೆಗೆ ಸಂಬಂಧಪಟ್ಟ ಎಲ್ಲ ದಾಖಲೆಗಳನ್ನು ಭಾನುವಾರ ಪರಿಶೀಲನೆ ನಡೆಸುವುದಾಗಿ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.

    ಶಶಾಂಕ್ ರಾಣೆ ಎಂಬ ಪೊಲೀಸ್ ಅಧಿಕಾರಿ ತನ್ನ ಹೆಸರಿನ ಬ್ಯಾಚ್ ಅನ್ನು ಕೂಡ ಹಾಕದೆ ಇದಿದ್ದು ಮುಂಬೈ ಪೊಲೀಸ್ ನಿಯಮವನ್ನು ಮುರಿದಿದ್ದಾರೆ.

  • ಪ್ರವಾಸಿಗರ ಬಳಿ ಕಿತ್ತುಕೊಂಡ ಕಾಫಿ ಕುಡಿದು 10 ಗಂಟೆ ಕಾಲ ಪ್ರಜ್ಞೆತಪ್ಪಿತು 6 ತಿಂಗಳ ಕೋತಿಮರಿ

    ಪ್ರವಾಸಿಗರ ಬಳಿ ಕಿತ್ತುಕೊಂಡ ಕಾಫಿ ಕುಡಿದು 10 ಗಂಟೆ ಕಾಲ ಪ್ರಜ್ಞೆತಪ್ಪಿತು 6 ತಿಂಗಳ ಕೋತಿಮರಿ

    ಬ್ಯಾಂಕಾಕ್: ಕೆಲವು ಜನರಿಗೆ ಬೆಳಗ್ಗೆ ಹೊತ್ತು ಕಾಫಿ ಕುಡಿಯದಿದ್ದರೆ ಅವರ ದಿನ ಶುರು ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಕೋತಿ ಮರಿಯೊಂದು ಕಾಫಿ ಕುಡಿದು 10 ಗಂಟೆಗಳ ಕಾಲ ಪ್ರಜ್ಷೆ ತಪ್ಪಿದ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ.

    ಲಾಂಗ್ ಟೇಲ್ ಮಕಾವ್ ಕೋತಿ ಮರಿಯೊಂದು ಪ್ರವಾಸಿಗರೊಬ್ಬರ ಗಾಡಿ ಮೇಲೆ ಎಗರಿ, ಗಾಡಿಯ ಹ್ಯಾಂಡಲ್‍ ಗೆ ನೇತುಹಾಕಿದ್ದ ಬ್ಯಾಗ್ ಕಸಿದುಕೊಂಡಿತ್ತು. ಅದರಲ್ಲಿದ್ದ ಐಸ್ ಕಾಫಿಯನ್ನು ಕುಡಿದಿತ್ತು. ದೇಹದಲ್ಲಿ ಕಾಫೀನ್ ಅಂಶ ಹೆಚ್ಚಾಗಿ ಕೆಲವೇ ನಿಮಿಷಗಳಲ್ಲಿ ಕೋತಿ ಕುಸಿದು ಬಿದ್ದಿದೆ.

    6 ತಿಂಗಳ ಕೋತಿ ಮರಿ ಸ್ವಲ್ಪ ಸಮಯದ ಹಿಂದೆ ಪ್ರವಾಸಿಗರು ಕಾಫಿ ಕುಡಿಯೋದನ್ನ ನೋಡಿ ಅವರಂತಯೇ ಕಾಫಿ ಕುಡಿಯಲು ಪ್ರಯತ್ನಿಸಿತ್ತು ಎಂದು ಇಲ್ಲಿನ ಫೇಸ್‍ಬುಕ್ ಗುಂಪೊಂದು ಪೋಸ್ಟ್ ಮಾಡಿದೆ.

    ಕೋತಿ ಮರಿಯನ್ನು ನೋಡುತ್ತಿದ್ದ ಜನರು ಅದು ಪ್ರಜ್ಞೆ ತಪ್ಪುತ್ತಿದ್ದಂತೆ ಪಶುವೈದ್ಯರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪಶುವೈದ್ಯರು ಕೋತಿಯನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದರು. ಇದಾದ 10 ಗಂಟೆಗಳ ನಂತರ ಕೋತಿಗೆ ಪ್ರಜ್ಞೆ ಬಂದಿದೆ.

    ಕೋತಿ ಮರಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಮೇಲೆ ಅದನ್ನು ಅದರ ಗುಂಪಿನ ಜೊತೆ ಬಿಡಲಾಗಿದೆ. ಮಕಾವ್ ಕೋತಿಮರಿಯ ಚೇತರಿಕೆ ಮತ್ತು ಅದರ ಕುಟುಂಬದೊಂದಿಗೆ ಮರಳಿ ಸೇರಿಸಿದ ಫೋಟೋಗಳನ್ನು ಫೇಸ್‍ ಬುಕ್ ಗುಂಪು ಹಂಚಿಕೊಂಡಿದೆ.