Tag: healthy

  • ದೇಹವನ್ನು ಹೈಡ್ರೇಟ್ ಮಾಡುವ ‘ತುಳಸಿ ಕಷಾಯ’ ಮಾಡಿ ಕುಡಿಯಿರಿ

    ದೇಹವನ್ನು ಹೈಡ್ರೇಟ್ ಮಾಡುವ ‘ತುಳಸಿ ಕಷಾಯ’ ಮಾಡಿ ಕುಡಿಯಿರಿ

    ತ್ತೀಚೆಗೆ ದಿಢೀರ್ ಎಂದು ಬದಲಾಗುತ್ತಿರುವ ವಾತಾವರಣದಿಂದ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಅದಕ್ಕೆ ನೀವು ಆರೋಗ್ಯ ಕೆಟ್ಟ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ಆರೋಗ್ಯ ಕೆಡದಂತೆ ನೋಡಿಕೊಳ್ಳುವುದು ತುಂಬಾ ಮುಖ್ಯ. ಅದಕ್ಕಾಗಿ ಇಂದು ನಿಮಗೆ ದೇಹವನ್ನು ಒಳಗಿನಿಂದ ಹೈಡ್ರೇಟ್ ಮಾಡುವ ಸೂಪರ್ ರೆಸಿಪಿಯನ್ನು ಹೇಳಿಕೊಡುತ್ತಿದ್ದೇವೆ. ಬೆಳಗ್ಗೆಯೇ ‘ತುಳಸಿ ಕಷಾಯ’ವನ್ನು ಮಾಡಿ ಕುಡಿದ್ರೆ ಇಡೀ ದಿನ ಎನರ್ಜಿಯಿಂದ ಇರಬಹುದು.

    ಬೇಕಾಗಿರುವ ಪದಾರ್ಥಗಳು:
    * ನೀರು – 2 ಕಪ್
    * ತುಳಸಿ – 5 ರಿಂದ 4 ಎಲೆ
    * ಕರಿಮೆಣಸಿನ ಪುಡಿ – 1/2 ಟೀಸ್ಪೂನ್
    * ಒಣ ಶುಂಠಿ ಪುಡಿ – 1/2 ಟೀಸ್ಪೂನ್
    * ಸಕ್ಕರೆ – 1 ಟೀಸ್ಪೂನ್

    ಮಾಡುವ ವಿಧಾನ:
    * ಮೊದಲು ಎಲ್ಲ ಪದಾರ್ಥಗಳನ್ನು ಸರಿಯಾಗಿ ತೆಗೆದುಕೊಳ್ಳಿ.
    * ಒಂದು ಪ್ಯಾನ್‍ಗೆ ನೀರು ಸೇರಿಸಿ, ತುಳಸಿ ಎಲೆಗಳನ್ನು ಹರಿದು ಹಾಕಿ ಕುದಿಸಿ.
    * ನೀರಿನ ಬಣ್ಣ ಬದಲಾದ ನಂತರ, ಕರಿಮೆಣಸಿನ ಪುಡಿ, ಶುಂಠಿ, ಸಕ್ಕರೆ ಸೇರಿಸಿ ಕೆಲವು ನಿಮಿಷ ಕುದಿಸಿ ಮತ್ತು ಗ್ಯಾಸ್ ಆಫ್ ಮಾಡಿ.
    * ತುಳಸಿ ಕಷಾಯವನ್ನು ಬಿಸಿಯಾಗಿರುವಾಗಲೇ ಸೇವಿಸಿ.

    – ಇದನ್ನು ದಿನಕ್ಕೆ 2 ರಿಂದ 3 ಬಾರಿ ಸೇವಿಸಿದರೆ ಕೆಮ್ಮು ಮತ್ತು ಶೀತದಿಂದ ಕಡಿಮೆಯಾಗುತ್ತೆ.

    Live Tv

  • ಅನ್ನದಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು ಗೊತ್ತಾ?

    ಅನ್ನದಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು ಗೊತ್ತಾ?

    ಟ ಮಾಡಿದ್ದೇವೆ ಎನ್ನುವ ತೃಪ್ತಿ ಹೊಟ್ಟೆ ಮತ್ತು ನಾಲಿಗೆಗೆ ಬರಬೇಕಾದರೆ ಅನ್ನ ಇರಲೇ ಬೇಕು. ಅನ್ನ ತಿನ್ನುವುದರಿಂದ ದಪ್ಪಗಾಗುತ್ತೇವೆ. ಅನ್ನ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹಲವರು ಹೇಳುವುದನ್ನು ಕೇಳಿರಬಹುದು. ಆದರೆ ಇದು ತಪ್ಪು ಕಲ್ಪನೆಯಾಗಿದೆ. ಅನ್ನದಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನವನ್ನು ಕೇಳಿದರೆ ಖಂಡಿತಾ ಆಶ್ಚರ್ಯವಾಗುವುದು ಹೌದು.

    * ಅಕ್ಕಿ ಪ್ರಿಬಯಾಟಿಕ್ (Prebiotic) ಆಗಿದೆ ಎಂದು ನ್ಯೂಟ್ರಿಷನ್ ತಜ್ಞರು ನಂಬುತ್ತಾರೆ. ಅನ್ನ ಸೇವನೆಯಿಂದ ಹೊಟ್ಟೆ ಬೇಗ ತುಂಬುತ್ತದೆ. ಇದರಿಂದ ಜೀರ್ಣಾಂಗ ವ್ಯವಸ್ಥೆಯು ಕೂಡ ಬಲವಾಗಿರುತ್ತದೆ.

    * ಅನ್ನವನ್ನು ಮೊಸರು, ಕರಿ, ದ್ವಿದಳ ಧಾನ್ಯಗಳು, ತುಪ್ಪ ಮತ್ತು ಮಾಂಸದೊಂದಿಗೆ ಸೇವಿಸಿದರೆ, ಅದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು  ನಿಯಂತ್ರಣದಲ್ಲಿರಿಸುತ್ತದೆ.

    * ಅನ್ನ ಸೇವನೆ ಚೆನ್ನಾಗಿ ನಿದ್ರೆ ಮಾಡಲು ಸಹಾಯ ಮಾಡುತ್ತದೆ. ಯಾರಿಗಾದರೂ ಕೂದಲು ಉದುರುವಿಕೆಯ ದೂರು ಇದ್ದರೆ ಖಂಡಿತವಾಗಿಯೂ ಅನ್ನವನ್ನು ಸೇವಿಸಬೇಕು.

    * ಉತ್ತಮ ಹಾರ್ಮೋನ್ ಸಮತೋಲನದಲ್ಲಿ ಅನ್ನ ಪ್ರಮುಖ ಪಾತ್ರ ವಹಿಸುತ್ತದೆ. ಇದನ್ನೂ ಓದಿ:   ಮಕ್ಕಳ ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್

    ಅಕ್ಕಿ ತೊಳೆದ ನೀರಿನ ಪ್ರಯೋಜನ

    * ಅಕ್ಕಿಯ ನೀರಿನಲ್ಲಿ ನಾರಿನ ಅಂಶ ಹೆಚ್ಚಳವಾಗಿದೆ. ಇದು ಮಲಬದ್ಧತೆಯನ್ನು ತಡೆಯುತ್ತದೆ, ಇದರಿಂದಾಗಿ ಜೀಣಾರ್ಂಗ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.

     

    * ಅಕ್ಕಿಯ ನೀರು  ಕೂದಲಿನ ಸೌಂದರ್ಯ ಹೆಚ್ಚಿಸುವ ಉತ್ಕರ್ಷಣ ನಿರೋಧಕವಾಗಿದೆ.  ಇದನ್ನೂ ಓದಿ: 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ

    * ದೀರ್ಘಕಾಲದ ಆಯಾಸ ಅಥವಾ ಬಳಲಿಕೆಯಿಂದ ಬಳಲುತ್ತಿರುವವರಿಗೆ, ಬೇಯಿಸಿದ ಅನ್ನದಿಂದ ಪಡೆದ ಒಂದು ಲೋಟ ಅಕ್ಕಿ ನೀರು ನೀಡಿದರೆ ಸಾಕು ಅವರು ಆರಾಮಾಗಿ ಬಿಡುತ್ತಾರೆ.

  • ಕೊರೊನಾ ಸೋಂಕಿತೆಗೆ ಆರೋಗ್ಯಯುತವಾಗಿ ಹೆರಿಗೆ ಮಾಡಿಸಿದ ವೈದ್ಯರು

    ಕೊರೊನಾ ಸೋಂಕಿತೆಗೆ ಆರೋಗ್ಯಯುತವಾಗಿ ಹೆರಿಗೆ ಮಾಡಿಸಿದ ವೈದ್ಯರು

    ಹಾವೇರಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ದಿನದಿಂದ ದಿನಕ್ಕೆ ರಣಕೇಕೆ ಹಾಕುತ್ತಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನಲ್ಲಿ 26 ವರ್ಷದ ಗರ್ಭಿಣಿಗೆ ಸೋಂಕು ದೃಢಪಟ್ಟಿತ್ತು. ಈ ಕೊರೊನಾ ಸೋಂಕಿತೆಗೆ ವೈದ್ಯರು ಆರೋಗ್ಯಯುತವಾಗಿ ಹೆರಿಗೆ ಮಾಡಿಸಿದ್ದಾರೆ.

    ಗರ್ಭಿಣಿ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಹರಿಗೆ ನೋವು ಕಾಣಿಸಿಕೊಂಡಿತ್ತು. ಕೊವೀಡ್ ಕೇರ್ ಸೆಂಟರ್‍ನಲ್ಲಿ ಕೆಲಸ ಮಾಡುವ ಬ್ಯಾಡಗಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಡಾಕ್ಟರ್ ನಾಗರಾಜ್ ನೇತೃತ್ವದಲ್ಲಿ ಮಾಲಾ, ವಾಣಿ, ಉಮಾ ಶುಶ್ರೂಷಕಿಯರ ಸಹಯೋಗದೊಂದಿಗೆ ನಾರ್ಮಲ್ ಡೆಲಿವರಿ ಮಾಡಿಸಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯದಿಂದ ಇದ್ದಾರೆ.

    ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು ಕೊವೀಡ್ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾರ್ಮಲ್ ಡೆಲಿವರಿ ಮಾಡಿಸಿದ್ದ ಬ್ಯಾಡಗಿ ತಾಲ್ಲೂಕು ಆಸ್ಪತ್ರೆಯ ವೈದ್ಯರಿಗೆ ಜಿಲ್ಲೆಯ ಜನರು ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ತಾಯಿ ಮತ್ತು ಮಗು ಕೊರೊನಾನಿಂದ ಗೆದ್ದು ಬೇಗ ಗುಣಮುಖರಾಗಲಿ ಎಂದು ಜನರು ಹಾರೈಸಿದ್ದಾರೆ.