Tag: hearing

  • ಸಮವಸ್ತ್ರ ಜಾರಿ ಸಿ.ಡಿ.ಸಿ ನಿರ್ಧಾರ ಅಂದ್ರು ಎಜಿ- ಸೋಮವಾರ ಹೈಕೋರ್ಟ್‍ಗೆ ಮಧ್ಯಂತರ ಅರ್ಜಿ

    ಸಮವಸ್ತ್ರ ಜಾರಿ ಸಿ.ಡಿ.ಸಿ ನಿರ್ಧಾರ ಅಂದ್ರು ಎಜಿ- ಸೋಮವಾರ ಹೈಕೋರ್ಟ್‍ಗೆ ಮಧ್ಯಂತರ ಅರ್ಜಿ

    ಬೆಂಗಳೂರು: ಹಿಜಬ್ ವಿವಾದ ಸಂಬಂಧ ಸತತ ಆರನೇ ದಿನ ಹೈಕೋರ್ಟ್‍ನ ಪೂರ್ಣಪೀಠದಲ್ಲಿ ವಿಚಾರಣೆ ನಡೆಯಿತು. ಇಂದು ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ ಅಡ್ವೋಕೇಟ್ ಜನೆರಲ್ ಪ್ರಭುಲಿಂಗ ನಾವಡಗಿ, ಹಿಜಬ್‍ಧಾರಣೆ ಮುಸ್ಲಿಮ್ ಸಮುದಾಯದಲ್ಲಿ ಕಡ್ಡಾಯ ಆಚರಣೆ ಅಲ್ಲ ಅಂದ್ರು.

    ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ನಿರ್ಬಂಧಿಸುವ ಮೂಲಕ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಕರ್ನಾಟಕ ಸರ್ಕಾರ ಉಲ್ಲಂಘಿಸಿಲ್ಲ ಎಂದರು. ಈ ಮೂಲಕ ಫೆಬ್ರವರಿ 5ರಂದು ಸರ್ಕಾರ ಹೊರಡಿಸಿದ್ದ ಕಡ್ಡಾಯ ಸಮವಸ್ತ್ರ ಆದೇಶವನ್ನು ಸಮರ್ಥಿಸಿಕೊಂಡರು. ಸಮಾನತೆ, ಸಮಗ್ರತೆ, ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ವಸ್ತ್ರಗಳನ್ನು ಸರ್ಕಾರ ಬ್ಯಾನ್ ಮಾಡಿರುವುದು ಸರಿಯಾಗಿಯೇ ಇದೆ ಎಂದು ವಾದ ಮಂಡಿಸಿದ್ರು. ಇದನ್ನೂ ಓದಿ: ಕಾಂಗ್ರೆಸ್ ರಾಜ್ಯದ ಮಕ್ಕಳಿಗೆ ದ್ರೋಹ ಮಾಡ್ತಿದೆ, ಇದು ರಾಜದ್ರೋಹ: ಬೊಮ್ಮಾಯಿ ಕಿಡಿ

    ಕಾಲೇಜಿನ ಅಭಿವೃದ್ಧಿ ಸಮಿತಿ ವಿಚಾರವಾಗಿಯೂ ತೀವ್ರ ವಾದ ನಡೀತು. ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಅಧಿಕಾರ ಪ್ರಶ್ನಿಸಿದ್ದ ರವಿವರ್ಮ ಕುಮಾರ್ ಪ್ರಶ್ನೆಗೆ ಅಡ್ವೋಕೇಟ್ ಜನರಲ್ ನಾವಡಗಿ ಉತ್ತರ ನೀಡಿದ್ರು. ಕಾಲೇಜು ಅಭಿವೃದ್ಧಿ ಸಮಿತಿಯನ್ನು ಸರ್ಕಾರದ ಆದೇಶದಂತೆ ರಚಿಸಲಾಗಿದೆ. ಶಿಕ್ಷಣ ಇಲಾಖೆ ಕಾಯ್ದೆ ಪ್ರಕಾರ ಸಮವಸ್ತ್ರ ಕಡ್ಡಾಯ ಮಾಡಲು ಸಿಡಿಸಿಗೆ ಅಧಿಕಾರವಿದೆ. ಆದರೆ ಹಿಜಬ್‍ಗೆ ಅವಕಾಶ ನೀಡುವುದು ಬಿಡುವುದು ಕಾಲೇಜುಗಳ ಸಿಡಿಸಿಗಳಿಗೆ ಬಿಟ್ಟ ವಿಚಾರ. ಸಿಡಿಸಿ ಹೇಳಿದ ಯೂನಿಫಾರಂ ಕಡ್ಡಾಯವಾಗಿ ಧರಿಸಿ ಎಂಬ ಅಂಶವಷ್ಟೇ ಸರ್ಕಾರದ ಆದೇಶದಲ್ಲಿದೆ. ಸರ್ಕಾರ ಧಾರ್ಮಿಕ ವಿಚಾರಗಳಲ್ಲಿ ಮಧ್ಯಪ್ರವೇಶ ಕೂಡ ಮಾಡಲ್ಲ ಎಂದು ವಾದ ಮಂಡಿಸಿದ್ರು.

    ಕೊನೆಗೆ ಸಿಜೆ ಅವಸ್ಥಿ ನೇತೃತ್ವದ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು. ಸೋಮವಾರ ಕೆಲ ಮಧ್ಯಂತರ ಅರ್ಜಿಗಳನ್ನು ಕೂಡ ಕೋರ್ಟ್ ವಿಚಾರಣೆಗೆ ಪರಿಗಣಿಸುವ ಸಂಭವ ಇದೆ. ಇನ್ನು ಕೋರ್ಟ್ ವಿಚಾರಣೆಯ ನೇರ ಪ್ರಸಾರ ನಿಲ್ಲಿಸುವಂತೆ ಮಾಡಿದ್ದ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಲಿಲ್ಲ. ಇದನ್ನೂ ಓದಿ: ಇನ್‍ಸ್ಟಾಗ್ರಾಮ್‍ನಲ್ಲಿ ಹಿಜಬ್ ತೆಗೆದು ರೀಲ್ಸ್ ಹಾಕ್ತಾರೆ, ಈಗ ತೆಗೆಯೋಕಾಗಲ್ವಾ..?- ವಿದ್ಯಾರ್ಥಿಗಳು

  • ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ 5 ಲಕ್ಷ ರೂ. ದಂಡ

    ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ 5 ಲಕ್ಷ ರೂ. ದಂಡ

    ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ.

    ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಖಂಡ್ರೆ ಗೈರಾದ ಹಿನ್ನೆಲೆ ಹೈಕೋರ್ಟ್ ದಂಡ ವಿಧಿಸಿ ಗೈರು ಹಾಜರಿಯನ್ನು ಮನ್ನಿಸಿದೆ. ಜೊತೆಗೆ ದಂಡದ ಹಣ 5 ಲಕ್ಷ ರೂಗಳನ್ನು ಸಿಎಂ ಕೋವಿಡ್-19 ನಿಧಿಗೆ ನೀಡುವಂತೆ ಸೂಚಿಸಿದೆ. ಈಶ್ವರ್ ಖಂಡ್ರೆ ಅವರ ವಿರುದ್ಧ ಡಿ.ಕೆ ಸಿದ್ರಾಮ ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

    ಸಿದ್ರಾಮ ಅವರು, ಈಶ್ವರ್ ಖಂಡ್ರೆ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆಸಿದ್ದಾರೆ. ಅವರು ತನ್ನ ಆಸ್ತಿ ವಿವರ ಬಹಿರಂಗಪಡಿಸಿಲ್ಲ ಎಂದು ಆರೋಪಿಸಿ ಶಾಸಕರಾಗಿ ಈಶ್ವರ್ ಖಂಡ್ರೆ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಮನವಿ ಮಾಡಿದ್ದರು. ಈ ವಿಚಾರಣೆಗೆ ಹಾಜಾರಗಲು ಹೈಕೋರ್ಟ್ ಈಶ್ವರ್ ಖಂಡ್ರೆಯವರಿಗೆ ನೋಟಿಸ್ ನೀಡಿತ್ತು. ಆದರೆ ನೋಟಿಸ್ ನೀಡಿದ್ದರೂ ಈಶ್ವರ್ ಖಂಡ್ರೆ ವಿಚಾರಣೆಗೆ ಗೈರಾದ ಕಾರಣ ದಂಡ ವಿಧಿಸಿದೆ.

    ಇದಕ್ಕೆ ಪ್ರತಿಕ್ರಿಯೇ ನೀಡಿರುವ ಈಶ್ವರ್ ಖಂಡ್ರೆ, ತಮ್ಮ ಪಿಎಗೆ ಮರೆವಿನ ರೋಗವಿದ್ದುದರಿಂದ ವಿಚಾರಣೆಯ ದಿನಾಂಕ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿ ಕೋರ್ಟಿಗೆ ಮತ್ತೆ ಅರ್ಜಿ ಹಾಕಿದ್ದಾರೆ. ಆದ್ದರಿಂದ ನ್ಯಾ. ಕೃಷ್ಣ ಎಸ್.ದೀಕ್ಷಿತ್‍ರವರಿದ್ದ ಏಕಸದಸ್ಯ ಪೀಠ, 5. ಲಕ್ಷ ದಂಡ ವಿಧಿಸಿ ಗೈರನ್ನು ಮನ್ನಿಸಿದೆ.

  • ಅಯೋಧ್ಯೆ ಕೇಸ್ – ವಿಚಾರಣೆಗೆ ಅ.18ರವರೆಗೆ ಗಡುವು ವಿಧಿಸಿದ ಸುಪ್ರೀಂ

    ಅಯೋಧ್ಯೆ ಕೇಸ್ – ವಿಚಾರಣೆಗೆ ಅ.18ರವರೆಗೆ ಗಡುವು ವಿಧಿಸಿದ ಸುಪ್ರೀಂ

    ನವದೆಹಲಿ: ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂಮಿ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್‍ನ ಪಂಚ ನ್ಯಾಯಾಧೀಶರ ಪೀಠವು ಅಕ್ಟೋಬರ್ 18ರಂದು ಕೊನೆಯ ವಿಚಾರಣೆ ಹಾಕಿಕೊಂಡಿದೆ.

    ಇಂದು ನಡೆದ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಈ ಕುರಿತು ಪ್ರಸ್ತಾಪಿಸಿದ್ದು, ಅಕ್ಟೋಬರ್ 18ರೊಳಗೆ ಇದನ್ನು ಮುಕ್ತಾಯಗೊಳಿಸಲು ಜಂಟಿ ಪ್ರಯತ್ನ ಮಾಡೋಣ ಎಂದು ತಿಳಿಸಿದ್ದಾರೆ.

    ಮಂಗಳವಾರ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಎರಡು ಕಡೆಯವರ ವಾದಗಳನ್ನು ಪೂರ್ಣಗೊಳಿಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಹಂಚಿಕೊಳ್ಳುವಂತೆ ನಿನ್ನೆಯೇ ಪೀಠ ತಿಳಿಸಿತ್ತು. ವಾದಗಳನ್ನು ಪೂರ್ಣಗೊಳಿಸಲು ತಾತ್ಕಾಲಿಕ ವೇಳಾಪಟ್ಟಿಯೊಂದಿಗೆ ಎಲ್ಲ ವಕೀಲರು ಒಟ್ಟಿಗೆ ಕುಳಿತುಕೊಳ್ಳುವಂತೆ ತಿಳಿಸಿದ್ದರಿಂದ ಇಂದು ಎಲ್ಲ ವಕೀಲರು ಸಿದ್ಧತೆ ಮಾಡಿಕೊಂಡು ಬಂದಿದ್ದರು. ಅಲ್ಲದೆ, ಈ ಗಡುವಿನಿಂದ ನ್ಯಾಯಾಧೀಶರು ತೀರ್ಪು ಬರೆಯಲು ಎಷ್ಟು ಸಮಯ ಬೇಕಾಗಬಹುದು ಎಂಬುದರ ಲೆಕ್ಕಾಚಾರ ಹಾಕಬಹುದು ಎಂದು ಪೀಠ ತಿಳಿಸಿತ್ತು.

    ನ್ಯಾಯಮೂರ್ತಿ ಗೊಗೊಯ್ ಅವರು ನವೆಂಬರ್ 17ರಂದು ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ನಿವೃತ್ತಿ ಆಗಲಿದ್ದಾರೆ. ಹೀಗಾಗಿ ಗೊಗೋಯ್ ಅವರು ಅ.18ರ ಗಡುವು ಹಾಕಿಕೊಂಡಿದ್ದಾರೆ.

    ಬುಧವಾರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪುನರಾರಂಭಿಸುತ್ತಿದ್ದಂತೆ ಎರಡೂ ಕಡೆಯ ವಕೀಲರು ಈ ವೇಳಾಪಟ್ಟಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ನ್ಯಾಯಪೀಠವು ಎರಡೂ ಕಡೆಯ ವಕೀಲರು ತಿಳಿಸಿದ ಸಮಯವನ್ನು ಗಮನಿಸಿದ ನಂತರ, ಅಕ್ಟೋಬರ್ 18ರಂದು ವಿಚಾರಣೆಗೆ ಕಡೆಯ ದಿನಾಂಕವನ್ನು ನಿಗದಿಪಡಿಸಿತು.

    ಅಗತ್ಯವಿದ್ದರೆ, ನಾವು ಇನ್ನೂ ಒಂದು ಗಂಟೆ ಹೆಚ್ಚು ಸಮಯ ಕೂರಲು ಸಿದ್ಧ, ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಇದೇ ವೇಳೆ ತಿಳಿಸಿದರು.

    ಸುಪ್ರೀಂ ಕೋರ್ಟ್ ನೇಮಿಸಿದ್ದ ಮಧ್ಯಸ್ಥಿಕೆ ಸಮಿತಿಯು ಸೌಹಾರ್ದಯುತ ನಿರ್ಣಯಕ್ಕೆ ಬರಲು ಎರಡೂ ಪಕ್ಷಗಳ ಒಡುವೆ ಒಮ್ಮತ ಮೂಡಿಸುವಲ್ಲಿ ವಿಫಲವಾಗಿದೆ. ಹೀಗಾಗಿ ದಶಕಗಳಿಂದ ಬಾಕಿ ಉಳಿದಿರುವ ರಾಮಜನ್ಮ ಭೂಮಿ ಹಾಗೂ ಬಾಬರಿ ಮಸೀದಿ ಪ್ರಕರಣವನ್ನು ಶೀಘ್ರ ಇತ್ಯರ್ಥಪಡಿಸಲು ಪಂಚ ನ್ಯಾಯಾಧೀಶರ ಪೀಠ ಆಗಸ್ಟ್‍ನಿಂದ ಪ್ರತಿನಿತ್ಯ ವಿಚಾರಣೆ ನಡೆಸಲು ಪ್ರಾರಂಭಿಸಿದೆ.

  • ಶಬರಿಮಲೆ ಮಹಿಳಾ ಪ್ರವೇಶ ವಿವಾದ: ಮರುಪರಿಶೀಲನೆಗೆ ಸುಪ್ರೀಂ ಅಸ್ತು!

    ಶಬರಿಮಲೆ ಮಹಿಳಾ ಪ್ರವೇಶ ವಿವಾದ: ಮರುಪರಿಶೀಲನೆಗೆ ಸುಪ್ರೀಂ ಅಸ್ತು!

    ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

    ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕೊಟ್ಟಿದ್ದ ಆದೇಶವನ್ನು ಪ್ರಶ್ನಿಸಿ, ಒಟ್ಟು 49 ಮರು ಪರಿಶೀಲನಾ ಅರ್ಜಿಗಳು ಸವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆಯನ್ನು ಜನವರಿ 22 ರಿಂದ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ.

    ಈ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಹಾಗೂ ನ್ಯಾಯಮೂರ್ತಿಗಳಾದ ಎನ್. ನಾರಿಮನ್, ಎ.ಎಂ.ಖನ್ವೀರ್ ಕರ್, ಡಿ.ವೈ.ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರಾ ಅವರನ್ನು ಒಳಗೊಂಡ ಪಂಚ ಸದಸ್ಯ ಪೀಠ ವಿಚಾರಣೆ ನಡೆಸಲಿದೆ ಎಂದು ಹೇಳಿದೆ.

    ಈ ಮೊದಲು ಸುಪ್ರೀ ಕೋರ್ಟ್ ಹೇಳಿದ್ದೇನು?
    ಸೆಪ್ಟೆಂಬರ್ 28 ರಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠದಲ್ಲಿ 4:1 ರಂತೆ ಶಬರಿಮಲೆ ದೇಗುಲಕ್ಕೆ ಎಲ್ಲಾ ಮಹಿಳೆಯ ಪ್ರವೇಶಕ್ಕೆ ಅಸ್ತು ಎಂದು ತೀರ್ಪು ಪ್ರಕಟಿಸಿತ್ತು.

    ಸುಪ್ರೀಂ ತೀರ್ಪು ಪ್ರಕಟವಾಗುತ್ತಿದ್ದಂತೆ, ಶಬರಿಮಲೆ ದೇಗುಲ ಪ್ರವೇಶಕ್ಕೆ ಮಹಿಳೆಯರು ಮುಂದಾಗಿದ್ದರು. ಆದರೆ ಅಯ್ಯಪ್ಪ ಸ್ವಾಮಿ ಭಕ್ತರು ಮಹಿಳೆಯರಿಗೆ ಯಾವುದೇ ಕಾರಣಕ್ಕೂ ಮಣಿಕಂಠನ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯು ಉಗ್ರ ಸ್ವರೂಪ ಪಡೆದುಕೊಂಡು ಲಾಠಿ ಚಾರ್ಜ್ ಗಳು ಆಗಿದ್ದವು. ಇಷ್ಟಾದರೂ ಭಕ್ತರು ಮಾತ್ರ ಮಹಿಳೆಯ ಪ್ರವೇಶಕ್ಕೆ ಅವಕಾಶ ಮಾಡಿಕೊಡಲೇ ಇಲ್ಲ. ಅಲ್ಲದೇ ಇದನ್ನು ವಿರೋಧಿಸಿ ಪ್ರಭಾವಿ ನಾಯರ್ ಸಮಾಜ, ಹಿಂದೂಪರ ಸಂಘಟನೆಗಳು, ಬಿಜೆಪಿ ಹಾಗೂ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • #MeToo ಕೇಸ್ ಸೋಮವಾರಕ್ಕೆ ಮುಂದೂಡಿಕೆ- ಕೋರ್ಟ್ ಕಲಾಪದಲ್ಲಿ ಇಂದು ಏನಾಯ್ತು?

    #MeToo ಕೇಸ್ ಸೋಮವಾರಕ್ಕೆ ಮುಂದೂಡಿಕೆ- ಕೋರ್ಟ್ ಕಲಾಪದಲ್ಲಿ ಇಂದು ಏನಾಯ್ತು?

    ಬೆಂಗಳೂರು: ಶೃತಿ ಹರಿಹರನ್ ಮಾತಿಗೆ ಕಡಿವಾಣ ಹಾಕಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮೆಯೋ ಹಾಲ್‍ನ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.

    ಶೃತಿ ಹರಿಹರನ್ ಮಾತಿಗೆ ಬ್ರೇಕ್ ಹಾಕಬೇಕು, ಅವರು ಮೀಡಿಯಾಗಳ ಮುಂದೆ ಹೋಗಿ ಅರ್ಜುನ್ ಸರ್ಜಾ ವಿರುದ್ಧ ಮಾನ ಹಾನಿಕರ ಹೇಳಿಕೆ ನೀಡಬಾರದು ಅವರ ಹೇಳಿಕೆಗಳಿಗೆ ನಿರ್ಬಂಧ ಹಾಕುವಂತೆ ಅರ್ಜುನ್ ಸರ್ಜಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಮೇಯೋ ಹಾಲ್ ಕೋರ್ಟ್ ನಲ್ಲಿ ನಡೆಯಿತು.

    ಈ ಬಗ್ಗೆ ವಿಸ್ತೃತವಾದ ವಾದವನ್ನು ಸರ್ಜಾ ಅವರ ವಕೀಲ ಶ್ಯಾಮ್ ಸುಂದರ್ ಕೋರ್ಟ್ ಗಮನಕ್ಕೆ ತಂದಿದ್ದರು. ಆದರೆ ಶೃತಿ ಅವರ ವಾದವನ್ನು ಕೇಳದೇ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ತೀರ್ಮಾನಿಸಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

    ಶ್ಯಾಮ್ ಸುಂದರ್ ಮಾಧ್ಯಮಗಳಿಗೆ ಹೇಳಿದ್ದು ಹೀಗೆ:
    ನನ್ನ ಕಕ್ಷೀದಾರರ ವಿರುದ್ಧ ಮಾಡಲಾಗಿದ್ದ ತೇಜೋವಧೆಯ ಬಗ್ಗೆ ಮಾನ್ಯ ನ್ಯಾಯಾಲಕ್ಕೆ ವಿಸ್ತೃತ ವರದಿಯನ್ನು ಗುರುವಾರವೇ ಮಂಡಿಸಿದ್ದೇವು. ಇದರ ವಿಚಾರಣೆಯನ್ನು ನಡೆಸಿದ್ದ ಕೋರ್ಟ್ ಇಂದು ಪರಿಶೀಲನೆ ನಡೆಸಿ, ಆರ್ಡರ್ ಪಾಸ್ ಮಾಡಲು ಸಹ ಮುಂದಾಗಿತ್ತು. ಆದರೆ ಶೃತಿ ಹರಿಹರನ್ ಪರ ವಕೀಲೆ ಎಂದು ಹೇಳಿಕೊಂಡ ಬಂದ ಜೈನಾ ಕೊಠಾರಿಯವರು ನಾವು ಸಹ ಈ ವಿಚಾರಣೆಯಲ್ಲಿ ವಕಲತ್ತು ವಹಿಸುತ್ತೇವೆ ಎಂದು ಕೋರ್ಟ್ ಬಳಿ ಮನವಿ ಮಾಡಿಕೊಂಡರು.

    ಪ್ರಕರಣದ ಗಂಭೀರತೆಯನ್ನು ಅರಿತ ಅವರು ಏಕಾಏಕಿ ನೋಟಿಸ್ ಹಾಗೂ ಕೇವಿಯಟ್ ಸಲ್ಲಿಸದೇ, ನ್ಯಾಯಾಲಯ ತಮ್ಮ ಮನವಿಯನ್ನು ಕೇಳಿ ಎನ್ನುವ ಮೂಲಕ ನ್ಯಾಯಾಲಯದ ವಿಚಾರದಲ್ಲಿ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಅಲ್ಲದೇ ಅವರು ಶೃತಿ ಹರಿಹರನ್ ಅವರ ವಕೀಲೆ ಎನ್ನುವುದು ನಮಗೆ ತಿಳಿದಿಲ್ಲ. ಹೀಗಾಗಿ ಇದರ ತೀರ್ಪನ್ನು ಇಂದೇ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡೆವು.

    ಪ್ರಕರಣದ ತೀವ್ರತೆಯನ್ನು ಅರಿತು ಅವರಾಗಿಯೇ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಹೀಗಾಗಿ ಅವರ ವಾದವನ್ನು ಕೇಳೋಣ. ನೈಸರ್ಗಿಕ ನ್ಯಾಯಾಲಯ ನಿಯಮದ ಪ್ರಕಾರ ಅವರ ವಾದಕ್ಕೂ ಮನ್ನಣೆ ನೀಡಿ, ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿತು. ಶೃತಿ ಅವರ ವಕೀಲೆಗೆ ನಿಮ್ಮ ಬಳಿಯಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಿ, ನಿಮ್ಮ ವಾದವನ್ನು ಮಂಡಿಸಿ ಎಂದು ತಿಳಿಸಿತು.

    ಇಂತಹ ಪ್ರಕರಣಗಳಲ್ಲಿ 90 ದಿನಗಳ ಕಾಲಾವಕಾಶ ಸಹ ಇರುತ್ತದೆ. ಆದರೆ ಕೋರ್ಟ್ ಸೋಮವಾರವೇ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಶೃತಿ ಪರ ವಕೀಲೆಗೆ ಸೂಚಿಸಿದೆ. ಸದ್ಯ ಪ್ರಕರಣ ಕೋರ್ಟ್ ನಲ್ಲಿರುವುದರಿಂದ ಶೃತಿಯವರು ನನ್ನ ಕಕ್ಷೀದಾರರ ವಿರುದ್ಧ ಫೇಸ್ಬುಕ್ ಸೇರಿದಂತೆ ಇತರೆ ಯಾವುದೇ ಮೂಲಗಳಿಂದ ತೇಜೋವಧೆ ಕೆಲಸಕ್ಕೆ ಕೈಹಾಕುವಂತಿಲ್ಲ. ಒಂದು ವೇಳೆ ಅವರು ಈ ರೀತಿ ಮಾಡಿದರೇ, ನಾವು ನ್ಯಾಯಾಂಗ ನಿಂದನೆಯ ಪ್ರಕರಣವನ್ನು ಸಹ ದಾಖಲಿಸುತ್ತೇವೆ.

    ಸೋಮವಾರ ಶೃತಿಯವರು ನ್ಯಾಯಾಲಯಕ್ಕೆ ಕಡ್ಡಾಯವಾಗಿ ಲಿಖಿತ ರೂಪದಲ್ಲಿ ಹೇಳಿಕೆಯನ್ನು ನೀಡಬೇಕು. ಮೌಖಿಕ ಹೇಳಿಕೆಯನ್ನು ಮಾನ್ಯ ನ್ಯಾಯಾಲಯ ಒಪ್ಪುವುದಿಲ್ಲ. ಅವರು ತಮ್ಮ ವಕೀಲೆ ಮೂಲಕವೇ ಎಲ್ಲಾ ದಾಖಲೆಗಳನ್ನು ಸಲ್ಲಿಸಬೇಕು. ನಾವು ಹಾಕಿರುವ ದೂರುಗಳ ಪ್ರತಿಯನ್ನು ಶೃತಿ ಪರ ವಕೀಲೆಗೆ ಕೋರ್ಟ್ ನೀಡುವಂತೆ ಸೂಚಿಸಿದ್ದರಿಂದ ನಾವು ಪ್ರತಿಯನ್ನು ಅವರಿಗೆ ತಲುಪಿಸಿದ್ದೇವೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=k1hMmFKYasQ

  • ಅಪ್ಪನ ಕೋಟೆಯಲ್ಲಿ ಮೆರೆದವ ಕೊನೆಗೂ ಜೈಲುಪಾಲು: ಎರಡು ಕೋರ್ಟ್ ಕಲಾಪ ಹೀಗಿತ್ತು

    ಅಪ್ಪನ ಕೋಟೆಯಲ್ಲಿ ಮೆರೆದವ ಕೊನೆಗೂ ಜೈಲುಪಾಲು: ಎರಡು ಕೋರ್ಟ್ ಕಲಾಪ ಹೀಗಿತ್ತು

    ಬೆಂಗಳೂರು: ಫರ್ಜಿ ಕೆಫೆಯಲ್ಲಿ ಅಟ್ಟಹಾಸ ಮೆರೆದಿದ್ದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಕೊನೆಗೂ ಜೈಲು ಸೇರಿದ್ದಾನೆ. ಕಳೆದೆರಡು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ನಲಪಾಡ್ ಮತ್ತು ಆತನ 6 ಸಹಚರರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

    ನ್ಯಾಯಾಧೀಶ ಮಹೇಶ್ ಬಾಬು ಈ ಆದೇಶ ಹೊರಡಿಸುತ್ತಲೇ ಕಟಕಟೆಯಲ್ಲಿ ನಿಂತಿದ್ದ ನಲಪಾಡ್ ಗಳಗಳನೆ ಕಣ್ಣೀರಿಟ್ಟದ್ದಾನೆ. ಆದೇಶ ಹೊರಬಿದ್ದ ಕೂಡಲೇ ನಲಪಾಡ್ ಹಾಗೂ ಆತನ ಸಹಚರರನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ನ್ಯಾಯಾಲಯದ ಆದೇಶದಂತೆ ನಲಪಾಡ್ ಹಾಗೂ ಆತನ ಸ್ನೇಹಿತರು ಮಾರ್ಚ್ 7 ರವರೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಲಿದ್ದಾರೆ. ಇದನ್ನೂ ಓದಿ: ನನ್ನ ಸೋದರನಿಗೆ ನೋವಾದ್ರೆ, ನನಗೂ ನೋವಾಗುತ್ತೆ- ವಿದ್ವತ್‍ಗೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಗುರು ರಾಜ್‍ಕುಮಾರ್

    ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸಿಟಿ ಸಿವಿಲ್ ಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ. ಮಧ್ಯಂತರ ಅರ್ಜಿ ನಾಳೆ ವಿಚಾರಣೆಗೆ ಬರಲಿದೆ. ನಲಪಾಡ್ ಪ್ರಕರಣ ಸಂಬಂಧ ಶ್ಯಾಂ ಸುಂದರ್ ರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಿಸುವಂತೆ ವಿದ್ವತ್ ತಂದೆ ಲೋಕನಾಥ್ ರಾಜ್ಯ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಇಷ್ಟೆಲ್ಲಾ ಆದರೂ ಶಾಸಕ ಎನ್‍ಎ ಹ್ಯಾರೀಸ್ ಮಗನನ್ನು ನೋಡಲು ಭೇಟಿ ನೀಡಿಲ್ಲ. ಇದನ್ನೂ ಓದಿ: ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    8ನೇ ಎಸಿಎಂಎಂ ನ್ಯಾಯಾಯದಲ್ಲಿ ಕಲಾಪ ಹೀಗಿತ್ತು:
    ನಗರದ 8ನೇ ಎಸಿಎಂಎಂ ನ್ಯಾಯಾಲಯದ ನ್ಯಾ. ಮಹೇಶ್ ಬಾಬು ಅವರ ಸಮ್ಮುಖದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಸರ್ಕಾರದ ಪರ ವಕೀಲರು ಹಾಗೂ ಆರೋಪಿ ನಲಪಾಡ್ ಪರ ವಕೀಲರು ನ್ಯಾಯಮೂರ್ತಿಗಳ ಮುಂದೇ ತಮ್ಮ ವಾದ ಮಂಡಿಸಿದರು.

    ಕೋರ್ಟ್‍ನಲ್ಲಿದ್ದ ವಕೀಲರು – ಕೋರ್ಟ್ ಹಾಲ್‍ನಲ್ಲಿ ಬರೀ ಗೂಂಡಾಗಳೇ ತುಂಬಿದ್ದಾರೆ. ಪೊಲೀಸರಿಗೆ ಕೂಡಲೇ ಎಲ್ಲರನ್ನೂ ಹೊರಗೆ ಕಳುಹಿಸಲು ಸೂಚಿಸಿ ಎಂದರು. ವಕೀಲರ ಮನವಿಯಂತೆ ಕೋರ್ಟ್ ಹಾಲ್ ನಿಂದ ಆರೋಪಿಗಳನ್ನು ಹೊರತು ಪಡಿಸಿ ಎಲ್ಲರನ್ನೂ ಹೊರಗೆ ಕಳುಹಿಸಿದರು.

    ಸರ್ಕಾರಿ ಪರ ವಕೀಲರು – ಕೇಸ್ ಇನ್ನೂ ಪ್ರಾಥಮಿಕ ವಿಚಾರಣೆ ಹಂತದಲ್ಲಿದೆ. ಹಲ್ಲೆಗೊಳಗಾದ ವ್ಯಕ್ತಿಯ ಮೂಳೆಗಳು ಮುರಿದಿವೆ. ಇದು ಸಿಸಿಟಿವಿಯ ದೃಶ್ಯಾವಳಿಯಲ್ಲಿ ದಾಖಲಾಗಿದೆ. ಆರೋಪಿಗಳು ಆಸ್ಪತ್ರೆಗೂ ತೆರಳಿ ಹಲ್ಲೆಗೆ ಯತ್ನಿಸಿದ್ದಾರೆ. ಜಾಮೀನು ಮಂಜೂರು ಮಾಡಬೇಡಿ.

    ನ್ಯಾಯಾಧೀಶರು – ಇನ್ನೂ ಹೇಳುವುದು ಏನಾದರೂ ಇದೆಯಾ ?
    ಸರ್ಕಾರಿ ಪರ ವಕೀಲರು – ನಲಪಾಡ್ ಅಂಡ್ ಗ್ಯಾಂಗ್ ಸುಖಾಸುಮ್ಮನೆ ಹಲ್ಲೆ ಮಾಡಿಲ್ಲ. ವಿದ್ವತ್‍ರನ್ನು ಪ್ರಚೋದನೆ ಮಾಡಿ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆಗೂ ನುಗ್ಗಿ ಹಲ್ಲೆ ಮಾಡಿದ್ದಾರೆ. ಆರೋಪಿಗಳು ಕೂಡ ಕೊಲೆ ಮಾಡಲು ಹೋಗಿದ್ದಾಗಿ ಒಪ್ಪಿಕೊಂಡಿದ್ದಾರೆ.

    ಸರ್ಕಾರಿ ಪರ ವಕೀಲರು – ವಿದ್ವತ್ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ನಮಗೆ ಆಕ್ಷೇಪಣೆ ಸಲ್ಲಿಸಲು ನಾಳೆಯವರೆಗೂ ಅವಕಾಶ ನೀಡಿ.

    ನ್ಯಾಯಾಧಿಶರು – ಓಕೆ.. ಆಕ್ಷೇಪಣೆ ಸಲ್ಲಸಲು ನಿಮಗೆ ನಾಳೆಯವರೆಗೆ ಕಾಲಾವಕಾಶ ನೀಡುತ್ತಿದ್ದೇವೆ.
    ನ್ಯಾಯಾಧೀಶರು – ನಲಪಾಡ್ ಮತ್ತು ಇತರೆ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗುತ್ತಿದೆ. ಇದನ್ನೂ ಓದಿ: ಶಾಂತಿನಗರದ ಪ್ರಿನ್ಸ್ ರೌಡಿ ನಲಪಾಡ್ ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!

    ಸಿಟಿ ಸಿವಿಲ್ ಕೋರ್ಟ್ ಕಲಾಪ ಹೀಗಿತ್ತು:
    ನಲಪಾಡ್ ಪರ ವಕೀಲರು ಸಲ್ಲಿಸಿದ್ದ ಜಾಮಿನು ಅರ್ಜಿ ವಿಚಾರಣೆ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆಯಿತು. ಈ ವೇಳೆ ನ್ಯಾಯಾಲಯದಲ್ಲಿ ವಿದ್ವತ್ ತಂದೆ ಸಹ ಹಾಜರಿದ್ದರು.

    ಉದ್ಯಮಿ ಅಲಂಪಾಶಾ ಪರ ವಕೀಲ – ಆಡಳಿತಾರೂಢ ಪಕ್ಷದ ಶಾಸಕರ ಪುತ್ರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಸರ್ಕಾರ ಪರ ಇದ್ದಾರೆ. ವಾದ ಮಂಡಿಸುತ್ತಿರುವ ವಕೀಲರು ಸರ್ಕಾರ ಪರ ಇದ್ದಾರೆ. ಹೀಗಾಗಿ ಜನಸಾಮಾನ್ಯರ ಪರವಾಗಿ ನಮ್ಮ ವಾದ ಮಂಡಿಸಲು ಅವಕಾಶ ನೀಡಿ.

    ನ್ಯಾಯಾಧೀಶರು – ಜಾಮೀನು ಅರ್ಜಿಯಲ್ಲಿ ಸೆಕ್ಷನ್ 307 ಉಲ್ಲೇಖವಿಲ್ಲ. ಅರ್ಜಿ ತಿದ್ದುಪಡಿ ಮಾಡಿ.
    ನಲಪಾಡ್ ಪರ ವಕೀಲ– ಅರ್ಜಿ ತಿದ್ದುಪಡಿ ಮಾಡಿ 307 ಸೆಕ್ಷನ್ ಸೇರಿಸಿ ನಂತರ ತಿದ್ದುಪಡಿ ಪತ್ರ ಸಲ್ಲಿಸಿದರು.

    ವಿದ್ವತ್ ತಂದೆ – ನಲಪಾಡ್ ಜಾಮೀನು ಅರ್ಜಿ ವೇಳೆ ನನ್ನ ವಾದವನ್ನು ಸಹ ಪರಿಗಣಿಸಿ ಎಂದು ಕೋರ್ಟ್‍ಗೆ ಅರ್ಜಿ ಸಲ್ಲಿಸಿದರು.
    ನ್ಯಾಯಾಧೀಶರು – ಅಲಂಪಾಶಾ, ವಿದ್ವತ್ ತಂದೆಯ ಅರ್ಜಿಯನ್ನು ವಿಚಾರಣೆ ವೇಳೆ ಪರಿಗಣಿಸಬೇಕೋ, ಅಥವಾ ಬೇಡವೋ ಎಂಬ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಶುಕ್ರವಾರ ಜಾಮೀನು ಅರ್ಜಿ ಕೈಗೆತ್ತಿಕೊಳ್ಳಲಾಗುವುದು. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    https://www.youtube.com/watch?v=p8o_3v5-ZYs

    https://www.youtube.com/watch?v=XE5CFfnOvx0

    https://www.youtube.com/watch?v=RtMFKdQtfME