Tag: Heart Surgery

  • ಮತ್ತೆ ಜನರ ಸೇವೆ ಮಾಡಲಿ ಎಂದು ಭಗವಂತ ಕಾಪಾಡಿದ್ದಾನೆ: ಹೆಚ್‍ಡಿಕೆ

    ಮತ್ತೆ ಜನರ ಸೇವೆ ಮಾಡಲಿ ಎಂದು ಭಗವಂತ ಕಾಪಾಡಿದ್ದಾನೆ: ಹೆಚ್‍ಡಿಕೆ

    ಬೆಂಗಳೂರು: ಮೂರನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದ್ದು, ಮತ್ತೆ ಜನರ ಸೇವೆ ಮಾಡಲಿ ಎಂದು ಭಗವಂತ ನನ್ನನ್ನು ಕಾಪಾಡಿದ್ದಾನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

    ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ (Apollo Hospital) ಹೃದಯ ಶಸ್ತ್ರಚಿಕಿತ್ಸೆ (Heart Surgery) ನಡೆದಿ ಇಂದು ಡಿಸ್ಚಾರ್ಜ್ ಆಗಿದ್ದ ಕುಮಾರಸ್ವಾಮಿ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್‍ಎಎಲ್‍ಗೆ ಬಂದಿಳಿದು ಜೆಪಿ ನಗರದ ನಿವಾಸಕ್ಕೆ ತೆರಳಿದ್ದಾರೆ. ಇದನ್ನೂ ಓದಿ: ಸೋನು ಶ್ರೀನಿವಾಸ ಗೌಡ ಯಾವುದೇ ಹಣದ ಸಹಾಯ ಮಾಡಿಲ್ಲ- ಪೊಲೀಸರಿಂದ ಸ್ಥಳ ಮಹಜರು

    ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಲೋಪವಾಗಿತ್ತು, ಈಗ ಮತ್ತೆ ಚಿಕಿತ್ಸೆ ಪಡೆದಿದ್ದೇನೆ ಎಂದಿದ್ದಾರೆ.

    ನಾಡಿನಾದ್ಯಂತ ಅಭಿಮಾನಿಗಳು, ಹಿತೈಷಿಗಳು ದೇವರಿಗೆ ಪ್ರಾರ್ಥನೆ ಮಾಡಿದ್ದಾರೆ. ಅವರ ಪ್ರಾರ್ಥನೆ ಫಲ ಕೊಟ್ಟಿದೆ. ಚಿಕಿತ್ಸೆ ಬಳಿಕ, ವೈದ್ಯರು ನನ್ನ ಬಳಿ ಚರ್ಚೆ ಮಾಡಿದರು. ವೈದ್ಯರು ಸಾಯಿಬಾಬಾನ ಭಕ್ತರಾಗಿದ್ದು, ಸಾಯಿಬಾಬಾನಿಗೆ ಪೂಜೆ ಸಲ್ಲಿಸಿ ಆಪರೇಷನ್ ನೆರವೇರಿಸಿದ್ದಾರೆ. ನಾನು ಆಪರೇಷನ್ ಮಾಡಿಲ್ಲ, ಸಾಯಿಬಾಬಾನೇ ಆಪರೇಷನ್ ಮಾಡಿದ್ದು ಎಂದು ವೈದ್ಯರು ಹೇಳಿದರು. ಮತ್ತೊರ್ವ ವೈದ್ಯ ಹಂಗೇರಿಯಾದವರು, ನನಗೆ ಮರುಜನ್ಮ ನೀಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.

    ಲೋಕಸಭಾ ಚುನಾವಣೆಗೆ ನನ್ನ ಕೈಲಾದ ರೀತಿ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ. ಎನ್‍ಡಿಎ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ನಡೆಸುತ್ತೇನೆ. ವೈದ್ಯರು ಮೂರ್ನಾಲ್ಕು ದಿನಗಳ ಕಾಲ ವಿಶ್ರಾಂತಿ ಮಾಡಲು ಹೇಳಿದ್ದಾರೆ. ಇನ್ನೆರೆಡು ದಿನಗಳಲ್ಲಿ ಮಂಡ್ಯ ಅಭ್ಯರ್ಥಿ ಯಾರೆಂಬುದು ಫೈನಲ್ ಆಗಲಿದೆ ಎಂದಿದ್ದಾರೆ.

    ಕೇಂದ್ರ ತೆರಿಗೆ ಹಣ ಕೊಡುತ್ತಿಲ್ಲ ಎಂದು ಸುಪ್ರೀಂ ಕೋರ್ಟ್‍ಗೆ ಹೋಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ದುಡ್ಡು, ನಮ್ ತೆರಿಗೆ ಅನ್ನೋದೆಲ್ಲ ಡ್ರಾಮಾ, ಇದೊಂದು ಸ್ಟಂಟ್. ಇದನ್ನು ಬಿಟ್ಟು ಸಿಎಂ ಕೆಲಸ ಮಾಡ್ಬೇಕು ಎಂದಿದ್ದಾರೆ.

    ಬಳಿಕ ಮನೆ ಬಳಿ ಸೇರಿದ್ದ ಜೆಡಿಎಸ್ ಕಾರ್ಯಕರ್ತರನ್ನ ಮಾತನಾಡಿಸಿ ಅವರು ವಿಶ್ರಾಂತಿಗೆ ತೆರಳಿದ್ದಾರೆ. ನೂರಾರು ಕಾರ್ಯಕರ್ತರು ಭೇಟಿ ನೀಡುವ ನಿರೀಕ್ಷೆ ಇದ್ದು, ಜೆಪಿನಗರದ ನಿವಾಸದ ಬಳಿ ಸ್ಪೀಕರ್ ಅಳವಡಿಕೆ ಮಾಡಲಾಗಿದೆ. ಸ್ಪೀಕರ್ ಮೂಲಕ ಮಂಡ್ಯ ಕಾರ್ಯಕರ್ತರು, ಮುಖಂಡರೊಂದಿಗೆ ಅವರು ಮಾತಾಡಲಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಬಂಧನ – ಅಪಾರ ಶಸ್ತ್ರಾಸ್ತ್ರ ವಶ

  • ಲಘು ಶಸ್ತ್ರಚಿಕಿತ್ಸೆ ಬಳಿಕ ವಿಶ್ರಾಂತಿ – ಆಸ್ಪತ್ರೆಗೆ ಬರಬೇಡಿ ಎಂದ ಬೊಮ್ಮಾಯಿ

    ಲಘು ಶಸ್ತ್ರಚಿಕಿತ್ಸೆ ಬಳಿಕ ವಿಶ್ರಾಂತಿ – ಆಸ್ಪತ್ರೆಗೆ ಬರಬೇಡಿ ಎಂದ ಬೊಮ್ಮಾಯಿ

    ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಗಾಗಿದ್ದಾರೆ. ಪ್ರಸ್ತುತ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ನನ್ನನ್ನು ವಿಚಾರಿಸಲು ಯಾರು ಕೂಡಾ ಆಸ್ಪತ್ರೆಗೆ ಬರಬೇಡಿ ಎಂದು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಅವರು, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೆ ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಆಸ್ಪತ್ರೆಗೆ ದಾಖಲು – ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಸಿಎಂ

    ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು ಎಂದು ಮಾಜಿ ಸಿಎಂ ಬರೆದಿದ್ದಾರೆ.

    ಮೊಣಕಾಲು ನೋವಿನಿಂದ ಬಳಲುತ್ತಿದ್ದ ಬಸವರಾಜ ಬೊಮ್ಮಾಯಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರನ್ನು ಹೃದಯ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇದನ್ನೂ ಓದಿ: ತುಂಬಾ ಸಂತೋಷದಿಂದ ನಾನು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ: ಹೆಚ್‍ಡಿಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೊಮ್ಮಾಯಿ ಆಸ್ಪತ್ರೆಗೆ ದಾಖಲು – ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಸಿಎಂ

    ಬೊಮ್ಮಾಯಿ ಆಸ್ಪತ್ರೆಗೆ ದಾಖಲು – ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಸಿಎಂ

    ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಮೊಣಕಾಲು ನೋವಿನಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರನ್ನು ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಪಡಿಸಲಾಗಿದೆ.

    ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಬೊಮ್ಮಾಯಿ ಶೀಘ್ರ ಚೇತರಿಕೆಯಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾರೈಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಯಡಿಯೂರಪ್ಪ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡಿಗೆ ಶಾಕ್‌ – ಅಫ್ಘಾನ್‌ ಗೆಲುವಿನ ಹಿಂದಿದೆ ಭಾರತದ ನೆರವು

    ಸದ್ಯ ಬೊಮ್ಮಾಯಿ ಆರೋಗ್ಯವಾಗಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಅವರನ್ನು ವೈದ್ಯರು ಬುಧವಾರ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ: ಷರತ್ತು ಪಾಲಿಸಿದ್ರೆ ಒತ್ತೆಯಾಳುಗಳ ಬಿಡುಗಡೆ – ಇಸ್ರೇಲ್‌ ಜೊತೆ ಸಂಧಾನಕ್ಕೆ ಮುಂದಾದ ಇರಾನ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗರ್ಭದಲ್ಲಿರುವ ಮಗು ಹೃದಯಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ – ಏಮ್ಸ್ ವೈದ್ಯರ ಸಾಧನೆ

    ಗರ್ಭದಲ್ಲಿರುವ ಮಗು ಹೃದಯಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ – ಏಮ್ಸ್ ವೈದ್ಯರ ಸಾಧನೆ

    ನವದೆಹಲಿ: ಗರ್ಭದಲ್ಲಿರುವ ಮಗುವಿನ ದ್ರಾಕ್ಷಿ ಗಾತ್ರದ ಹೃದಯಕ್ಕೆ ದೆಹಲಿಯ (Delhi) ಏಮ್ಸ್ (AIIMS) ವೈದ್ಯರು (Doctors) ಕವಾಟ ಹಿಗ್ಗುವಿಕೆಯ ಶಸ್ತ್ರಚಿಕಿತ್ಸೆ (Heart surgery) ನೀಡಿ ಯಶಸ್ವಿಯಾಗಿದ್ದಾರೆ.

    ಮೂರು ಬಾರಿ ಗರ್ಭಪಾತವಾಗಿದ್ದ 28 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಮಗುವಿನ ಹೃದಯದಲ್ಲಿ ಸಮಸ್ಯೆ ಇರುವುದು ಪತ್ತೆಯಾಗಿತ್ತು. ವೈದ್ಯರು ಚಿಕಿತ್ಸೆ ಮೂಲಕ ಮಗುವಿನ ಆರೋಗ್ಯ ಸುಧಾರಣೆ ಸಾಧ್ಯ ಎಂದು ತಿಳಿಸಿದ್ದಾರೆ. ನಂತರ ದಂಪತಿ ಚಿಕಿತ್ಸೆಗೆ ಒಪ್ಪಿದ್ದರು. ಇದನ್ನೂ ಓದಿ: ಸಾರ್ವಜನಿಕರಿಂದ ಕ್ಲಾಸ್‌ -ಶಂಕುಸ್ಥಾಪನೆ ಮಾಡದೇ ಕಾಗೇರಿ ವಾಪಸ್

    husband forced a woman to eat human bones to get pregnant

    ಶಸ್ತ್ರಚಿಕಿತ್ಸೆಯ ನಂತರ ತಾಯಿ ಹಾಗೂ ಗರ್ಭದಲ್ಲಿರುವ ಮಗು ಇಬ್ಬರೂ ಕ್ಷೇಮವಾಗಿದ್ದಾರೆ. ಇಬ್ಬರ ಆರೋಗ್ಯದ ಮೇಲೂ ವೈದ್ಯರ ತಂಡ ನಿಗವಹಿಸಿದೆ.

    ತಾಯಿಯ ಗರ್ಭದಲ್ಲಿರುವಾಗಲೇ (Womb) ಮಗುವಿನ ಹೃದಯ ಸಮಸ್ಯೆಗಳನ್ನು ಪತ್ತೆಹಚ್ಚಬಹುದು. ಗರ್ಭಾವಸ್ಥೆಯಲ್ಲಿ ಕಾಯಿಲೆಯ ತೀವ್ರತೆ ಕಡಿಮೆ ಇರುವುದರಿಂದ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಆರೋಗ್ಯವಂತ ಮಗು ಪಡೆಯಲು ಸಾಧ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಚಿಕಿತ್ಸೆಯನ್ನು ಅಲ್ಟ್ರಾ ಸೌಂಡ್ (Ultrasound) ಮೂಲಕವೇ ನಿರ್ವಹಿಸಬೇಕು. ನಿಗದಿತ ಸಮಯದಲ್ಲಿ ಜಾಗರೂಕತೆಯಿಂದ ಚಿಕಿತ್ಸೆ ಮಾಡಿ ಮುಗಿಸಬೇಕು. ಇಲ್ಲವಾದಲ್ಲಿ ಮಗುವಿನ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ವಕೀಲ, ಮಹಿಳೆ ಮಧ್ಯೆ ಬೀದಿ ಕಾಳಗ

  • ಸುನಿಲ್ ಗ್ರೋವರ್ ಆರೋಗ್ಯ ವಿಚಾರಿಸಲು ತನ್ನ ವೈದ್ಯ ತಂಡಕ್ಕೆ ಸೂಚಿಸಿದ ಸಲ್ಮಾನ್

    ಸುನಿಲ್ ಗ್ರೋವರ್ ಆರೋಗ್ಯ ವಿಚಾರಿಸಲು ತನ್ನ ವೈದ್ಯ ತಂಡಕ್ಕೆ ಸೂಚಿಸಿದ ಸಲ್ಮಾನ್

    ಮುಂಬೈ: ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್, ಖ್ಯಾತ ಹಾಸ್ಯನಟ ಸುನಿಲ್ ಗ್ರೋವರ್ ಆರೋಗ್ಯ ಸ್ಥಿತಿ ವಿಚಾರಿಸಿಕೊಳ್ಳಲು ತನ್ನ ವೈದ್ಯ ತಂಡಕ್ಕೆ ಸೂಚಿಸಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.

    ಸಲ್ಮಾನ್ ತಮ್ಮ ಆಪ್ತರ ಆರೋಗ್ಯ ವಿಚಾರಿಸಿಕೊಳ್ಳಲು ಯಾವಾಗಲು ಸಿದ್ಧರಿರುತ್ತಾರೆ. ತಮ್ಮ ಸುತ್ತಮುತ್ತಲಿನವರಿಗೆ ಏನಾದರೂ ತೊಂದರೆ ಎಂದರೆ ಅವರನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಈ ನಟ ವಹಿಸಿಕೊಳ್ಳುತ್ತಾರೆ. ಅದೇ ರೀತಿ ಸುನಿಲ್ ಗ್ರೋವರ್ ಅವರಿಗೆ ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆ ನಡೆದಿದ್ದು, ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಪರಿಣಾಮ ಸಲ್ಲು ತನ್ನ ವೈದ್ಯ ತಂಡಕ್ಕೆ ಸುನಿಲ್ ಆರೋಗ್ಯವನ್ನು ನೋಡಿಕೊಳ್ಳುವಂತೆ ಸೂಚಿಸಿದ್ದಾರೆ ಎಂದು ವರದಿ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ‘ಮರಳಿ ಬರುತ್ತಿದ್ದೇನೆ’ – 56ರ ಹರೆಯದಲ್ಲೂ ಜಿಮ್‍ನಲ್ಲಿ ಬೆವರಿಳಿಸುತ್ತಿದ್ದಾರೆ ಸಲ್ಲು

    ಸುನಿಲ್ ಗ್ರೋವರ್ ಅವರು ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಎಲ್ಲೆಡೆ ಸುದ್ದಿಯಲ್ಲಿದ್ದರು. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಏಷ್ಯನ್ ಹಾರ್ಟ್ ಇನ್‍ಸ್ಟಿಟ್ಯೂಟ್‍ಗೆ ದಾಖಲಿಸಲಾಗಿತ್ತು. ಪರೀಕ್ಷೆಗಳ ನಂತರ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬುದು ತಿಳಿದುಬಂದಿದೆ. ಅಲ್ಲದೆ ಅವರಿಗೆ ಕೋವಿಡ್-19 ಪಾಸಿಟಿವ್ ಸಹ ಬಂದಿತ್ತು. ಈ ಹಿನ್ನೆಲೆ ವೈದ್ಯರು ಸುನಿಲ್ ಅವರ ಆರೋಗ್ಯ ಸ್ಥಿತಿ ಹದಗಟ್ಟಿದ್ದು, ಹೃದಯ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಸೂಚಿಸಿದ್ದಾರೆ.

    heart blockage symptoms: kapil sharma show actor sunil grover undergoes surgery for heart blockage know what is it warning signs and symptoms - Sunil Grover heart surgery: 'गुत्थी' बनकर हंसाने वाले सुनील

    ವಿಷಯ ತಿಳಿದ ಸುನಿಲ್ ಆತ್ಮೀಯ ಸ್ನೇಹಿತ, ಸಲ್ಮಾನ್ ಖಾನ್ ತಮ್ಮ ವೈದ್ಯರ ತಂಡವನ್ನು ಅವರ ಆರೋಗ್ಯ ಪರೀಕ್ಷಿಸಲು ಕೇಳಿದ್ದಾರೆ. ಚಿಕಿತ್ಸೆ ನಂತರವೂ ಸಲ್ಲು ವೈದ್ಯಕೀಯ ಸಿಬ್ಬಂದಿ ತಂಡವು ಸುನಿಲ್ ಅವರನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪ್ರಸ್ತುತ ಸುನಿಲ್ ಅವರು ಆಸ್ಪತ್ರೆಯಿದ್ದ ಡಿಸ್ಚಾರ್ಜ್ ಆಗಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇಡಲು ಸಲ್ಲು ವೈದ್ಯರ ತಂಡಕ್ಕೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ತಂಗಿ ಆರೋಗ್ಯ ಸರಿಯಿಲ್ಲವೆಂದು ಕ್ಯಾಬ್ ದರೋಡೆ ಮಾಡಿದ ಸಹೋದರರು..!

    2019 ರಲ್ಲಿ ತೆರೆಕಂಡ ಬ್ಲಾಕ್ಬಸ್ಟರ್ ಹಿಟ್ ಸಿನಿಮಾ ‘ಭಾರತ್’ ನಲ್ಲಿ ಸಲ್ಲು ಮತ್ತು ಸುನೀಲ್ ಒಟ್ಟಿಗೆ ಕೆಲಸ ಮಾಡಿದ್ದರು. ಇತ್ತೀಚೆಗೆ ಸುನಿಲ್ ತಮ್ಮ ಮುಂಬರುವ ವೆಬ್ ಸರಣಿಯ ಚಿತ್ರೀಕರಣದ ವೇಳೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅನೇಕ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಿದ್ದರು.

  • ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾದ ಸುನಿಲ್ ಗ್ರೋವರ್

    ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾದ ಸುನಿಲ್ ಗ್ರೋವರ್

    ಮುಂಬೈ: ಹಿಂದಿಯ ‘ದಿ ಕಪಿಲ್ ಶರ್ಮಾ ಶೋ’ ಖ್ಯಾತಿಯ ಜನಪ್ರಿಯ ಹಾಸ್ಯ ನಟ ಸುನಿಲ್ ಗ್ರೋವರ್ ನಗರದ ಏಷ್ಯನ್ ಹಾರ್ಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

    ಜನಪ್ರಿಯ ಹಾಸ್ಯ ಪಾಪ್ ಸೆಲೆಬ್ರೆಟಿಯಾದ ಭಯಾನಿ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಸುನೀಲ್‍ರವರ ಹೆಲ್ತ್ ಅಪ್‍ಡೇಟ್ ಅನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ನಟ ಸುನಿಲ್ ನಗರದ ಏಷ್ಯನ್ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಸುರಕ್ಷಿತವಾಗಿದ್ದು, ಯಾವುದೇ ರೀತಿಯ ಭಯ ಪಡುವ ಅವಶ್ಯಕತೆಯಿಲ್ಲ ಅಂತ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ:  ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಕೋವಿಡ್ ಪಾಸಿಟಿವ್

     

    View this post on Instagram

     

    A post shared by Viral Bhayani (@viralbhayani)

    ಸುನೀಲ್ ಅವರು ಆದಷ್ಟೂ ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ಮುಂದೆ ಕಣ್ಣೀರಿಟ್ಟ ಶಕ್ತಿಧಾಮದ ಮಕ್ಕಳು

    ಸುನಿಲ್ ಗ್ರೋವರ್ ಹಲವಾರು ಸ್ಮರಣೀಯ ವೇದಿಕೆಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಕಪಿಲ್ ಶರ್ಮಾ ಶೋ ಕಾರ್ಯಕ್ರಮದಲ್ಲಿ ಅವರ ಗುತ್ತಿ, ಡಾ ಮಶೂರ್ ಗುಲಾಟಿ ಹೀಗೆ ಮುಂತಾದ ಪಾತ್ರವನ್ನು ನಿರ್ವಹಿಸಿದ್ದಾರೆ.

     

    View this post on Instagram

     

    A post shared by Sunil Grover (@whosunilgrover)

    ಅವರು ಇತ್ತೀಚೆಗೆ ಸಲ್ಮಾನ್ ಖಾನ್ ಅವರ ಭಾರತ್, ಪಟಾಖಾ, ಸೈಫ್ ಅಲಿ ಖಾನ್‍ರವರ ತಾಂಡವ್, ಸೂರ್ಯಕಾಂತಿ ಹೀಗೆ ಅನೇಕ ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸುನಿಲ್ ಗ್ರೋವರ್ ತಮ್ಮ ಅನಾರೋಗ್ಯದ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

  • ಮಂಗ್ಳೂರಿನ 40 ದಿನದ ಮಗುವಿನ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ

    ಮಂಗ್ಳೂರಿನ 40 ದಿನದ ಮಗುವಿನ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ

    ಬೆಂಗಳೂರು: ಮಂಗಳೂರಿನ 40 ದಿನದ ಮಗು ಸೈಫುಲ್ ಅಝ್ಮಾನ್‍ನ ಒಪೇನ್ ಹಾರ್ಟ್ ಸರ್ಜರಿ ಮಾಡುವಲ್ಲಿ ಜಯದೇವ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿದೆ.

    ಡಾ.ಜಯಂತ್ ಕುಮಾರ್ ಅವರ ತಂಡ ಯಶಸ್ವಿಯಾಗಿ ಮಗುವಿಗೆ ಶಸ್ತ್ರಚಿಕಿತ್ಸೆ ಮಾಡಿದೆ. ಡಾ.ಆನಂದ್, ಡಾ.ಜಯಂತ್ ಸೇರಿದಂತೆ ಒಟ್ಟು 12 ವೈದ್ಯರ ತಂಡ ಮಗುವಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಆದರೆ ಇನ್ನೂ 3-4 ದಿನ ಮಗುವಿಗೆ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: 7 ದಿನದ ಹಸುಗೂಸಿಗೆ ಹೃದಯ ಸಮಸ್ಯೆ – ಝೀರೋ ಟ್ರಾಫಿಕ್‍ನಲ್ಲಿ ಶಿವಮೊಗ್ಗದಿಂದ ಬೆಂಗ್ಳೂರಿಗೆ ರವಾನೆ

    ಮಗುವಿನ ಚಿಕಿತ್ಸೆಗೆ 2.5 ಲಕ್ಷ ರೂ. ಖರ್ಚಾಗಿದ್ದು, 1 ಲಕ್ಷ ರೂ. ಬಿಪಿಎಲ್ ಕಾರ್ಡಿನಿಂದ ಭರಿಸಲಾಗುವುದು. ಉಳಿದ ಹಣವನ್ನು ಜಯದೇವ ಆಸ್ಪತ್ರೆಯೇ ನೋಡಿಕೊಳ್ಳಲಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನೆಯ ನಿರ್ದೇಶಕ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

    ಗುರುವಾರ ಸೈಫುಲ್‍ನನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ಮೂಲಕ ರವಾನಿಸಲಾಗಿತ್ತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿತ್ತು. ಚಾಲಕ ಹನೀಫ್ ಅವರು ಮಂಗಳೂರಿನಿಂದ ಅಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ 4 ಗಂಟೆ 32 ನಿಮಿಷದಲ್ಲಿ ಬೆಂಗಳೂರಿಗೆ ತಲುಪಿಸಿದ್ದರು. ಇದನ್ನೂ ಓದಿ:ಕೇವಲ 4 ಗಂಟೆ 32 ನಿಮಿಷದಲ್ಲಿ 370 ಕಿ.ಮೀ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ

    ಮಾರ್ಗ ಹೀಗಿತ್ತು?
    ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ ಅಂಬುಲೆನ್ಸ್ ನಲ್ಲಿ ಹೃದಯ ಪಂಪಿಂಗ್ ವ್ಯವಸ್ಥೆ ಮಾಡಿಕೊಂಡು ಕರೆದೊಯ್ಯಲಾಗಿತ್ತು. ಮಂಗಳೂರಿನಿಂದ, ಬಿ.ಸಿ.ರೋಡ್, ಕಲ್ಲಡ್ಕ, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಶಿರಾಡಿ, ಸಕಲೇಶಪುರ, ಹಾಸನ, ನೆಲಮಂಗಲ ಮೂಲಕ ಮಂಗಳೂರು- ಬೆಂಗಳೂರು ಹೆದ್ದಾರಿಯಲ್ಲಿ ಆಂಬುಲೆನ್ಸ್ ಬಂದಿದ್ದು ಹೆದ್ದಾರಿ ಉದ್ದಕ್ಕೂ ಜನರು ಟ್ರಾಫಿಕ್ ಸಂಚಾರ ಸುಗಮಗೊಳಿಸಿದ್ದರು. ಅಲ್ಲದೆ, ಆಯಾ ಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಎಸ್ಕಾರ್ಟ್ ನೀಡಿದ್ದರು.

    ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಅಂಬುಲೆನ್ಸ್ ಚಾಲಕ ಹನೀಫ್, ಮಗುವಿಗೆ ಪುನರ್ ಜನ್ಮ ಸಿಗಬೇಕು ಎನ್ನುವ ಆಸೆ ನನಗೆ ಇತ್ತು. ಮಂಗಳೂರಿನಿಂದ ಬೆಂಗಳೂರನ್ನು 5 ಗಂಟೆಯಲ್ಲಿ ತಲುಪಬಹುದು ಎಂಬ ಆಲೋಚನೆ ಹೊಂದಿದ್ದೆ. ಅದರಂತೆ 4 ಗಂಟೆ 32 ನಿಮಿಷದಲ್ಲಿ ಬೆಂಗಳೂರನ್ನು ತಲುಪಿದೆ. ಆದರೆ ಯಶವಂತಪುರದಿಂದ ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಸಿಗಲಿಲ್ಲ. ಹೀಗಾಗಿ ಆಸ್ಪತ್ರೆಗೆ ತಲುಪಲು 15 ನಿಮಿಷ ಹೆಚ್ಚು ಸಮಯ ತೆಗೆದುಕೊಂಡೆ ಎಂದು ಹೇಳಿದ್ದರು.

    ಇದೇ ವೇಳೆ ಸಾರ್ವಜನಿಕರು ಚಾಲಕ ಹನೀಫ್ ಅವರಿಗೆ ಮೈಸೂರು ಪೇಟಾ ಹಾಕಿ ಸನ್ಮಾನಿಸಿದ್ದರು. ಹನೀಫ್ ಅವರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.

  • ವಿಶ್ವದ ಶ್ರೇಷ್ಠ ಹೃದಯ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾದ ಜಯದೇವ ಆಸ್ಪತ್ರೆ

    ವಿಶ್ವದ ಶ್ರೇಷ್ಠ ಹೃದಯ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾದ ಜಯದೇವ ಆಸ್ಪತ್ರೆ

    ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ವಿಶ್ವದ ಶ್ರೇಷ್ಠ ಹೃದಯ ಕೇಂದ್ರ ಎಂಬ ಗೌರವಕ್ಕೆ ಭಾಜನವಾಗಿದೆ. ಸಂಸ್ಥೆಯ ಸಾಧನೆಯನ್ನು ಗುರುತಿಸಿರುವ ಯುರೋಪಿನ ಹಾರ್ಟ್ ಜರ್ನಲ್ ತನ್ನ ಸಂಚಿಕೆಯಲ್ಲಿ ಕಾರ್ಡಿಯಾಕ್ ಸೆಂಟರ್ ಆಫ್ ಎಕ್ಸಲೆನ್ಸ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.

    ಸಂಸ್ಥೆಯಲ್ಲಿ ಜನರಿಗೆ ಕೈಗೆಟುಕುವ ವೆಚ್ಚದಲ್ಲಿ ಅತ್ಯಾಧುನಿಕ ಹೃದಯ ಆರೈಕೆ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಮಾತನಾಡಿದ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಈ ಗೌರವ ಸಿಕ್ಕಿರುವುದು ನಮ್ಮ ದೇಶಕ್ಕೆ ಒಂದು ಹೆಮ್ಮೆಯ ವಿಚಾರ ಎಂದಿದ್ದಾರೆ.

    ಈ ಮೂಲಕ ಇಡೀ ವಿಶ್ವಕ್ಕೆ ಗೊತ್ತಾಗುತ್ತೇ ಭಾರತ ದೇಶದಲ್ಲಿ ಅದರಲ್ಲೂ ಸರ್ಕಾರಿ ಸ್ವಾಮ್ಯದ ಹೃದ್ರೋಗ ಸಂಸ್ಥೆಯಲ್ಲಿ ವಿಶ್ವಗುಣಮಟ್ಟದ ಚಿಕಿತ್ಸೆ ಸಿಗುತ್ತೇ ಅನ್ನೋದು, ಇದು ರಾಜ್ಯ ಸರ್ಕಾರಕ್ಕೂ ಹೆಮ್ಮೆ ತರುವ ವಿಚಾರ. ಜಯದೇವ ಆಸ್ಪತ್ರೆಯಲ್ಲಿ ದಿನವೊಂದಕ್ಕೆ ಬೆಂಗಳೂರು, ಮೈಸೂರು, ಕಲಬುರಗಿ ಸೇರಿ ಸರಿಸುಮಾರು ಎರಡೂವರೆ ಸಾವಿರ ಹೊರಗೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತೆ. ಪ್ರತಿ ದಿನ 100 ರಿಂದ 120 ಆಯಜಿಯೋಗ್ರಾಮ್, ಆಯಜಿಯೋಗ್ರಫಿ, 15 ರಿಂದ 20 ಓಪನ್ ಹಾರ್ಟ್ ಸರ್ಜರಿ ಮಾಡಲಾಗುತ್ತಿದೆ. ಜಯದೇವ ಹೃದ್ರೋಗ ಸಂಸ್ಥೆಯೊಂದರಲ್ಲೇ 100 ಜನ ಕಾರ್ಡಿಯೋಲಜಿಸ್ಟ್‍ಗಳು ಇದ್ದಾರೆ ಎಂದು ಡಾ ಮಂಜುನಾಥ್ ತಿಳಿಸಿದ್ದಾರೆ.

    ನಮ್ಮ ಸಂಸ್ಥೆಯ ಸಿಬ್ಬಂದಿಗಳ ಪರಿಶ್ರಮ ಹಾಗೂ ದಾನಿಗಳ ನೆರವಿನಿಂದ ನಮ್ಮ ಸಂಸ್ಥೆ ಇವತ್ತು ಈ ಮಟ್ಟಕ್ಕೆ ಬೆಳೆದು ನಿಂತಿದೆ. ಈ ಗೌರವ ಅವರಿಗೆ ಸಲ್ಲಬೇಕು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಬಡರೋಗಿಗಳಿಗೆ ಜಯದೇವ ಸಂಸ್ಥೆ ಚಿಕಿತ್ಸೆ ನೀಡುತ್ತದೆ. ಆಸ್ಪತ್ರೆಯಲ್ಲಿನ ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸುವ ಕೆಲಸ ಪ್ರಗತಿಯಲ್ಲಿ ಇದೆ ಎಂದು ಹೇಳಿದ್ದಾರೆ.

  • ಭಾರತದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಲು ಪಾಕ್ ಮಗುವಿಗೆ ವೀಸಾ ಕೊಡಿಸಿದ ಗಂಭೀರ್

    ಭಾರತದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಲು ಪಾಕ್ ಮಗುವಿಗೆ ವೀಸಾ ಕೊಡಿಸಿದ ಗಂಭೀರ್

    ನವದೆಹಲಿ: ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್ ಭಾರತದಲ್ಲಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಲು ಪಾಕಿಸ್ತಾನ ಮಗುವಿಗೆ ವೀಸಾ ಕೊಡಿಸಿದ್ದಾರೆ.

    ಪಾಕಿಸ್ತಾನದ ಒಮೈಮಾ ಅಲಿ ಎಂಬ ಪುಟ್ಟ ಮಗುವಿಗೆ ಹೃದಯ ಸಂಬಂಧಿ ಕಾಯಿಲೆ ಇದ್ದು, ಪಾಕ್‍ನಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಲಾಗದ ಕಾರಣ ಅವರು ಭಾರತಕ್ಕೆ ಬರಬೇಕಿತ್ತು. ಆದರೆ ಈಗ ನಡೆಯುತ್ತಿರುವ ಕೆಲ ವಿದ್ಯಮಾನಗಳಿಂದ ಭಾರತ ಸರ್ಕಾರ ಮಗು ಮತ್ತು ಆಕೆ ಪೋಷಕರಿಗೆ ವೀಸಾ ನೀಡಿರಲಿಲ್ಲ.

    ಈ ವಿಚಾರ ಗಂಭೀರ್ ಅವರಿಗೆ ಗೊತ್ತಾಗಿದೆ. ಅದ್ದರಿಂದ ಅವರು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದು, ಮಗು ಒಮೈಮಾ ಅಲಿ ಮತ್ತು ಅವರ ಪೋಷಕರಿಗೆ ಶಸ್ತ್ರಚಿಕಿತ್ಸೆಗಾಗಿ ಭಾರತಕ್ಕೆ ಬರಲು ವೀಸಾ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಮನವಿಗೆ ಸ್ಪಂದಿಸಿದ ಸಚಿವ ಜೈಶಂಕರ್ ಅವರು ಮಗು ಮತ್ತು ಪೋಷಕರು ಬರಲು ವೀಸಾ ನೀಡುವಂತೆ ಭಾರತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಈ ವಿಚಾರವಾಗಿ ಜೈಶಂಕರ್ ಅವರು ಭಾರತಕ್ಕೆ ಪ್ರಯಾಣಿಸಲು ಬಾಲಕಿ ಮತ್ತು ಆಕೆಯ ಪೋಷಕರಿಗೆ ವೀಸಾ ನೀಡುವಂತೆ ಇಸ್ಲಾಮಾಬಾದ್‍ನಲ್ಲಿರುವ ಭಾರತೀಯ ಹೈಕಮಿಷನ್‍ಗೆ ಸೂಚಿಸಿದ್ದು, ಅವರಿಗೆ ಇಸ್ಲಾಮಾಬಾದ್‍ನಲ್ಲಿ ವೀಸಾ ನೀಡಲಾಗಿದೆ ಎಂದು ಜೈಶಂಕರ್ ಗಂಭೀರ್‍ಗೆ ಬರೆದಿರುವ ಪತ್ರವನ್ನು ಗಂಭೀರ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಾಕಿಕೊಂಡಿದ್ದಾರೆ.

    ಈ ಪತ್ರದ ಜೊತೆ ‘ಸೌಮ್ಯ ಹೃದಯವು ಇನ್ನೊಂದು ಕಡೆಯಿಂದ ನಮ್ಮನ್ನು ಸಂಪರ್ಕಿಸಿದಾಗ, ನಮ್ಮ ಹೃದಯವು ಎಲ್ಲಾ ಅಡೆತಡೆಗಳನ್ನು ಮತ್ತು ಗಡಿಗಳನ್ನು ಬದಿಗಿರಿಸುತ್ತದೆ. ಅವಳ ಸಣ್ಣ ಪಾದಗಳಿಂದ, ಅವಳು ನಮಗಾಗಿ ಸಿಹಿ ಗಾಳಿಯನ್ನು ಸಹ ತರುತ್ತಾಳೆ. ನನ್ನ ಮಗಳು ನನ್ನ ಮನೆಗೆ ಭೇಟಿ ನೀಡುತ್ತಿರುವಂತೆ ಅನಿಸುತ್ತಿದೆ’ ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

    ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಗಳು ಬಿಗಡಾಯಿಸಿದರೂ, ಭಾರತದಲ್ಲಿ ಪಾಕಿಸ್ತಾನದ ಜನರಿಗೆ ಮಾನವೀಯ ನೆಲೆಯಲ್ಲಿ ವೀಸಾ ನೀಡಲಾಗುತ್ತಿದೆ. ಭಾರತದಲ್ಲಿ ನಿರ್ಣಾಯಕ ವೈದ್ಯಕೀಯ ಸೌಲಭ್ಯಗಳನ್ನು ಪಡೆಯಲು ಈ ಹಿಂದೆಯಿಂದಲೂ ಭಾರತ ಪಾಕಿಸ್ತಾನದ ಪ್ರಜೆಗಳಿಗೆ ವೀಸಾ ನೀಡುತ್ತಾ ಬಂದಿದೆ.

  • ಅಮ್ಮ ನಾನು ಬದುಕಬೇಕು, ನಿಮ್ಮನ್ನೆಲ್ಲಾ ಸಾಕಬೇಕು ಎನ್ನುವ ಬಾಲಕಿ ಹೃದಯ ಶಸ್ತ್ರಚಿಕಿತ್ಸೆಗೆ ಬೇಕಿದೆ ನೆರವು

    ಅಮ್ಮ ನಾನು ಬದುಕಬೇಕು, ನಿಮ್ಮನ್ನೆಲ್ಲಾ ಸಾಕಬೇಕು ಎನ್ನುವ ಬಾಲಕಿ ಹೃದಯ ಶಸ್ತ್ರಚಿಕಿತ್ಸೆಗೆ ಬೇಕಿದೆ ನೆರವು

    ಬೆಂಗಳೂರು: ಮಗಳಿಗೆ ಇರುವ ಆರೋಗ್ಯ ಸಮಸ್ಯೆಯಿಂದಾಗಿ ತಾಯಿ ಕಣ್ಣೀರು ಹಾಕುತ್ತಲೇ ದೇವರಿಗೆ ಮೊರೆ ಹೋಗುತ್ತಿದ್ದಾರೆ. ಈ ಕುಟುಂಬವು ನಗರದ ಎಲೆಕ್ಟ್ರಾನಿಕ್ ಸಿಟಿಯ ಕೂಡ್ಲಗೇಟ್‍ನಲ್ಲಿ ವಾಸವಾಗಿದೆ.

    13 ವರ್ಷದ ಜ್ಯೋತಿ ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದಾಳೆ. ಜ್ಯೋತಿಗೆ ತಂದೆ ಇಲ್ಲ, ತಾಯಿ ಸೆಲ್ವಮ್ಮ ಮಾತ್ರ ಇರುವುದು. ಎಲ್ಲ ಮಕ್ಕಳಂತೆ ಶಾಲೆಗೆ ಹೋಗಿ, ಆಟ ಆಡಿ, ಪಾಠ ಕಲಿಯುವ ಆಸೆ. ಆದರೆ ಈಕೆಗೆ ಹುಟ್ಟಿನಿಂದಲೇ ಹೃದಯದಲ್ಲಿ ರಂಧ್ರವಿದೆ. ಹೀಗಾಗಿ ಉಸಿರಾಟದ ತೊಂದರೆಯಿದ್ದು ಓಡಾಡಲು, ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ.

    ಮನೆಯಲ್ಲಿ ಕಡುಬಡತನವಿದ್ದು, ತಾಯಿ ಸೆಲ್ವಮ್ಮ ಅವರಿವರ ಮನೆ ಕೆಲಸ ಮಾಡಿಕೊಂಡು ವಯಸ್ಸಾದ ತಂದೆ ತಾಯಿಯನ್ನು ಸಾಕುತ್ತಿದ್ದಾರೆ. ಜ್ಯೋತಿ ಹೃದಯದಲ್ಲಿ ರಂಧ್ರವಿರುವುದು ಗೊತ್ತಾಗಿನಿಂದ ನಿತ್ಯವೂ ಕಣ್ಣೀರಲ್ಲೆ ಕಾಲ ಕಳೆಯುತ್ತಿದ್ದಾರೆ.

    ಬಾಲಕಿ ಜ್ಯೋತಿಯ ಹೃದಯದಲ್ಲಿ ರಂಧ್ರವಿರುವುದಕ್ಕೆ ಚನ್ನೈ ಆಸ್ಪತ್ರೆಯಲ್ಲಿ ತೋರಿಸಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿದ ಮೇಲೂ ಮಗಳು ಉಳಿಯುತ್ತಾಳೆ ಅಂತಾ ಹೇಳಲಿಕ್ಕೆ ಆಗುವುದಿಲ್ಲ. ಅಲ್ಲದೆ ದುಬಾರಿ ವೆಚ್ಚವಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರಂತೆ. ಇದರಿಂದ ಭಯಗೊಂಡ ತಾಯಿ ಸೆಲ್ವಮ್ಮ ಅವರು ಸರಿಯಾದ ಚಿಕಿತ್ಸೆ ಕೊಡಿಸಲು ಹಣವಿಲ್ಲದೇ ಮರುಗುತ್ತಿದ್ದಾರೆ.

    “ಅಮ್ಮ ನಾನು ಬದುಕಬೇಕು. ಓದಬೇಕು. ಓದಿ ನಿಮ್ಮನ್ನೆಲ್ಲಾ ಸಾಕಬೇಕು” ಎಂದು ಬಾಲಕಿ ಜ್ಯೋತಿ ಕಣ್ಣೀರು ಹಾಕಿ ಹೇಳುವುದನ್ನು ಕಂಡು ತಾಯಿ ಜೀವನ ಮರುಗಿದೆ. ಆದಾಗಿ ನೊಂದ ತಾಯಿ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮ ನೋಡಿ ನನ್ನ ಮಗಳಿಗೆ ಚಿಕಿತ್ಸೆ ಕೊಡಿಸಿ ಅಂತಾ ಅಳಲು ತೊಡಿಕೊಳ್ಳುತ್ತಿದ್ದಾರೆ.

    https://www.youtube.com/watch?v=pkzEJsH8wgU