Tag: heatstroke

  • ಒಡಿಶಾದಲ್ಲಿ ಹೆಚ್ಚಿದ ತಾಪಮಾನ – 3 ದಿನದಲ್ಲಿ ಹೀಟ್‌ಸ್ಟ್ರೋಕ್‌ಗೆ 20 ಮಂದಿ ಸಾವು

    ಒಡಿಶಾದಲ್ಲಿ ಹೆಚ್ಚಿದ ತಾಪಮಾನ – 3 ದಿನದಲ್ಲಿ ಹೀಟ್‌ಸ್ಟ್ರೋಕ್‌ಗೆ 20 ಮಂದಿ ಸಾವು

    ಭುವನೇಶ್ವರ: ಒಡಿಶಾದಲ್ಲಿ (Odisha) ಬಿಸಿಲಿನ ತಾಪ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಿಂದ ಹೀಟ್‌ಸ್ಟ್ರೋಕ್‌ಗೆ (Heatstroke) 20 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಶುಕ್ರವಾರದಿಂದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 99 ಶಂಕಿತ ಸನ್‌ಸ್ಟ್ರೋಕ್‌ ಸಾವುಗಳು ವರದಿಯಾಗಿವೆ. ಮರಣೋತ್ತರ ಪರೀಕ್ಷೆ ಮತ್ತು ವಿಚಾರಣೆಯ ಬಳಿಕ 20 ಸನ್‌ಸ್ಟ್ರೋಕ್‌ ಸಾವುಗಳು ಎಂದು ದೃಢಪಡಿಸಲಾಗಿದೆ. ಉಳಿದವರು ಇತರ ಕಾರಣಗಳಿಂದ ಸಾವನ್ನಪ್ಪಿದ್ದು, ಪ್ರಕರಣಗಳ ತನಿಖೆ ನಡೆಯುತ್ತಿದೆ ಎಂದು ಅಧಿಕೃತ ವರದಿ ಹೇಳಿದೆ. ಇದನ್ನೂ ಓದಿ: ಸೆನ್ಸೆಕ್ಸ್, ನಿಫ್ಟಿ ಸಾರ್ವಕಾಲಿಕ ದಾಖಲೆ – Zerodha, CDSL ಸರ್ವರ್‌ ಡೌನ್‌, ಹೂಡಿಕೆದಾರರ ಆಕ್ರೋಶ

    ಇದಕ್ಕೂ ಮೊದಲು 42 ಶಂಕಿತ ಸನ್‌ಸ್ಟ್ರೋಕ್‌ ಸಾವುಗಳು ವರದಿಯಾಗಿದ್ದು, ಅವುಗಳಲ್ಲಿ ಆರು ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಆರು ಸಾವುಗಳು ಇತರ ಕಾರಣಗಳಿಂದ ಸಂಭವಿಸಿವೆ ಎನ್ನಲಾಗಿದೆ. ಬೋಲಂಗಿರ್, ಸಂಬಲ್‌ಪುರ್, ಝಾರ್ಸುಗುಡಾ, ಕಿಯೋಂಜರ್, ಸೋನೆಪುರ್, ಸುಂದರ್‌ಗಢ್ ಮತ್ತು ಬಾಲಸೋರ್ ಜಿಲ್ಲೆಗಳಲ್ಲಿ ಸಾವುಗಳು ಹೆಚ್ಚಾಗಿ ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಸಿಕ್ಕಿಬಿದ್ದ ಲಷ್ಕರ್‌ ಟಾಪ್‌ ಕಮಾಂಡರ್ಸ್‌

    ಮುಖ್ಯ ಕಾರ್ಯದರ್ಶಿ ಪ್ರದೀಪ್ ಕುಮಾರ್ ಜೆನಾ ಮತ್ತು ವಿಶೇಷ ಪರಿಹಾರ ಆಯುಕ್ತ ಸತ್ಯಬ್ರತ ಸಾಹು ಅವರು ಭಾನುವಾರ ಜಿಲ್ಲಾಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿ ಬಿಸಿಗಾಳಿಯ ಕುರಿತು ಸೂಚನೆಗಳನ್ನು ಜಾರಿಗೊಳಿಸಲು ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಗಾಳಿ, ಮಳೆ ರಭಸಕ್ಕೆ ಭಾರೀ ಗಾತ್ರದ ಮರ ನೆಲಸಮ – ಸ್ಯಾಂಟ್ರೋ ಕಾರು ಜಖಂ

    ಮೃತ ಕುಟುಂಬಕ್ಕೆ ಪರಿಹಾರ ಮಂಜೂರಾತಿಗಾಗಿ ಪ್ರತಿ ಸಾವಿನ ಮರಣೋತ್ತರ ಪರೀಕ್ಷೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲೆಗಳಿಗೆ ತಿಳಿಸಲಾಗಿದೆ. ಅಲ್ಲದೆ ಪ್ರತಿ ಸಾವಿಗೆ ನಿಖರವಾದ ಕಾರಣವನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಕಂದಾಯ ಅಧಿಕಾರಿ ಮತ್ತು ಸ್ಥಳೀಯ ವೈದ್ಯಾಧಿಕಾರಿ ಜಂಟಿ ವಿಚಾರಣೆ ನಡೆಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಯುವತಿಯನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ

  • ಕೂಲರ್‌, ಫ್ಯಾನ್‌ ಇಲ್ಲದ ಕೋಣೆಯಲ್ಲಿ ವಾಸ – ಹೀಟ್‌ಸ್ಟ್ರೋಕ್‌ನಿಂದ ವ್ಯಕ್ತಿ ಸಾವು

    ಕೂಲರ್‌, ಫ್ಯಾನ್‌ ಇಲ್ಲದ ಕೋಣೆಯಲ್ಲಿ ವಾಸ – ಹೀಟ್‌ಸ್ಟ್ರೋಕ್‌ನಿಂದ ವ್ಯಕ್ತಿ ಸಾವು

    ನವದೆಹಲಿ: ಬಿಹಾರ ಮೂಲದ (Bihar Man) ವ್ಯಕ್ತಿಯೊಬ್ಬರು ಹೀಟ್‌ಸ್ಟ್ರೋಕ್‌ನಿಂದ ದೆಹಲಿ ಆಸ್ಪತ್ರೆಯಲ್ಲಿ (Delhi Hospital) ಸಾವನ್ನಪ್ಪಿದ್ದಾರೆ. ಶಾಖಾಘಾತದಿಂದ ವ್ಯಕ್ತಿಯನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ವ್ಯಕ್ತಿ ಕೂಲರ್ ಅಥವಾ ಫ್ಯಾನ್ ಇಲ್ಲದ ಕೋಣೆಯಲ್ಲಿ ವಾಸಿಸುತ್ತಿದ್ದರು. ಅವರಿಗೆ ತೀವ್ರ ಜ್ವರವಿತ್ತು ಎಂದು ವೈದ್ಯರು ಹೇಳಿದ್ದರು. ದೇಹದ ಉಷ್ಣತೆಯು 107 ಡಿಗ್ರಿ ಸೆಲ್ಸಿಯಸ್ ಮಾರ್ಕ್ ಅನ್ನು ದಾಟಿತ್ತು. ಅದು ಸಾಮಾನ್ಯಕ್ಕಿಂತ ಸುಮಾರು 10 ಡಿಗ್ರಿ ಹೆಚ್ಚಾಗಿತ್ತು. ಬಿರು ಬೇಸಿಗೆಯಲ್ಲಿ ದೆಹಲಿಯಲ್ಲಿ ವರದಿಯಾದ ಹೀಟ್‌ಸ್ಟ್ರೋಕ್‌ ಸಾವು ಪ್ರಕರಣ ಇದು ಎನ್ನಲಾಗಿದೆ. ಇದನ್ನೂ ಓದಿ: ಎನ್‌ಡಿಎ ಅಧಿಕಾರಕ್ಕೆ ಬಂದ್ರೆ ಜೂನ್‌ 9 ರಂದು ಮೋದಿ ಪ್ರಮಾಣ ವಚನ!

    ಶಾಖದ ಅಲೆ ರಾಷ್ಟ್ರ ರಾಜಧಾನಿಯನ್ನು ಕಂಗೆಡಿಸಿದೆ. ಹೆಚ್ಚಿದ ತಾಪಮಾನ, ನೀರಿನ ಬಿಕ್ಕಟ್ಟಿನಿಂದ ಇಲ್ಲಿನ ಜನ ಸಂಕಷ್ಟಕ್ಕೀಡಾಗಿದ್ದಾರೆ. ನಗರದ ಹೊರವಲಯದಲ್ಲಿರುವ ಮುಂಗೇಶ್‌ಪುರ ಹವಾಮಾನ ಕೇಂದ್ರವು 52.9 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿದೆ.

    ದೆಹಲಿ ನಗರದಾದ್ಯಂತ ಸರಾಸರಿ 45-50% ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಎಂ. ಮಹಪಾತ್ರ ಹೇಳಿದ್ದಾರೆ. ರಾಜಧಾನಿಯ ಜನತೆ ಕಳೆದ ವಾರದಿಂದ ತೀವ್ರ ಶಾಖದ ಅಲೆಗೆ ತತ್ತರಿಸುತ್ತಿದ್ದಾರೆ. ತಾಪ ಹೆಚ್ಚಳದ ಜೊತೆಗೆ ದೆಹಲಿಯ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ – ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಆಪ್ತ ಸಹಾಯಕ ಬಂಧನ

    ದಿನನಿತ್ಯ ಟ್ಯಾಂಕರ್ ಬರುತ್ತಿದೆ. ಆದರೆ 3,000 ರಿಂದ 4000 ಜನರಿರುವ ನಮಗೆ ಅರ್ಧ ಟ್ಯಾಂಕರ್ ನೀರಷ್ಟೇ ಸಿಗುತ್ತಿದೆ. ಬಿಸಿಯೂಟ, ನೀರು ಬೇಕು. ಆದರೆ ನಮಗೆ ಸಾಕಾಗುತ್ತಿಲ್ಲ ಎಂದು ಸ್ಥಳೀಯ ನಿವಾಸಿ ವಿನಯ್ ಅಳಲು ತೋಡಿಕೊಂಡಿದ್ದಾರೆ.

  • ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ 3,622 ಏರಿಕೆ

    ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ 3,622 ಏರಿಕೆ

    ಜೈಪುರ್: ರಾಜಸ್ಥಾನದಲ್ಲಿ (Rajasthan) ಹೀಟ್ ಸ್ಟ್ರೋಕ್‍ನಿಂದ (Heatstroke) ಬಳಲುತ್ತಿರುವವರ ಸಂಖ್ಯೆ ಸೋಮವಾರ 2,809 ರಿಂದ 3,622ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ತೀವ್ರವಾದ ಶಾಖದ ಅಲೆಯ (Heatwave) ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿಯಾಗಿದೆ.

    ಸೋಮವಾರ (ಮೇ 27) ರಾಜ್ಯದ ಫಲೋಡಿಯಲ್ಲಿ 49.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಸಾಮಾನ್ಯಕ್ಕಿಂತ 6.3 ಡಿಗ್ರಿ ಹೆಚ್ಚಳವಾಗಿದೆ. ಜೈಪುರದಲ್ಲಿ (Jaipur) ಗರಿಷ್ಠ ತಾಪಮಾನ 46.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಭಾನುವಾರಕ್ಕಿಂತ 0.8 ಡಿಗ್ರಿ ಹೆಚ್ಚಾಗಿದೆ. ಕೋಟಾದಲ್ಲಿ ಗರಿಷ್ಠ ತಾಪಮಾನ 48.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯಕ್ಕಿಂತ 5 ಡಿಗ್ರಿ ಹೆಚ್ಚಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಸ್ತೆ ದಾಟುವಾಗ ಕಾರು ಡಿಕ್ಕಿ – ಅಮೆರಿಕದಲ್ಲಿ ತೆಲಂಗಾಣ ಮೂಲದ ಯುವತಿ ಸಾವು

    ರಾಜ್ಯದ ಬಹುತೇಕ ಎಲ್ಲಾ ನಗರಗಳು 45 ಡಿಗ್ರಿ ಸೆಲ್ಸಿಯಸ್‍ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸಿವೆ. ಅಜ್ಮೀರ್‍ನಲ್ಲಿ ಗರಿಷ್ಠ ತಾಪಮಾನ 46.3 ಡಿಗ್ರಿ ಸೆಲ್ಸಿಯಸ್, ಭಿಲ್ವಾರ್ (47.4), ಭರತ್‍ಪುರ (48.2), ಅಲ್ವಾರ್ (46.2), ಪಿಲಾನಿ (48.5), ಚಿತ್ತೋರ್‍ಗಢ (47), ಬಾರ್ಮರ್ (49.3), ಜೈಸಲ್ಮೇರ್ (48.7), ಜೋಧ್‍ಪುರ (47.4), ಬಿಕಾನೇರ್ (48.2), ಚುರು (48), ಶ್ರೀ ಗಂಗಾನಗರ (48.3), ಮತ್ತು ಧೋಲ್‍ಪುರದಲ್ಲಿ 48.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಅಲ್ಲದೇ ಇಂದು ಸಹ (ಮೇ 28 ರಂದು) ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಸ್ತುತ ನಡೆಯುತ್ತಿರುವ ತೀವ್ರತರವಾದ ಬಿಸಿಗಾಳಿ ಪರಿಸ್ಥಿತಿಯು ಮುಂದಿನ 2-3 ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಮೇ 29ರಿಂದ ತಾಪಮಾನ ಕಡಿಮೆಯಾಗಲು ಆರಂಭವಾಗಲಿದ್ದು, ಜೂನ್ ಮೊದಲ ವಾರದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯ ಸ್ಥಿತಿಯಲ್ಲಿರಲಿದೆ ಎಂದು ಜೈಪುರ್‌ನ ಹವಾಮಾನ ಇಲಾಖೆಯ (Meteorological Department) ನಿರ್ದೇಶಕ ಆರ್.ಎಸ್. ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – 7 ಅಧಿಕಾರಿಗಳು ಅಮಾನತು

  • ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಬಲಿ

    ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಬಲಿ

    ರಾಯಚೂರು: ಬಿಸಿಲಿನ ತಾಪಕ್ಕೆ (Heatstroke) ಬಿಎಂಟಿಸಿ ಬಸ್ ಕಂಡಕ್ಟರ್ (BMTC Conductor) ಒಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಸ್ಕಿ ಪಟ್ಟಣದಲ್ಲಿ ನಡೆದಿದೆ.

    ಹಸಮಕಲ್ ಮೂಲದ ಮಲ್ಲಯ್ಯ (45) ಬಿಸಿಲಿನ ತಾಪಕ್ಕೆ ಬಲಿಯಾದವರು ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ (Bengaluru) ಕಾರ್ಯನಿರ್ವಹಿಸುತ್ತಿದ್ದ ಅವರು, ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಮನೆಗೆ ಬೇಕಾದ ಕಿರಾಣಿ ಸಾಮಾಗ್ರಿಗಳನ್ನು ತರಲು ತೆರಳಿದ್ದಾಗ ಬಿಸಿಲಿನ ತಾಪಕ್ಕೆ ಅವರು ಕುಸಿದು ಬಿದ್ದಿದ್ದಾರೆ. ಸಾರ್ವಜನಿಕರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದ್ದಾರೆ. ದುರಾದೃಷ್ಟವಶಾತ್ ಅವರು ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿ – ದೂರು ನೀಡಿದ್ರೆ ಕೊಲೆ ಬೆದರಿಕೆ ಹಾಕಿದ್ದ ಯುವಕ

    ಜಿಲ್ಲೆಯ ಜಾಲಿಬೆಂಚಿ ಗ್ರಾಮದ ರೈತರೊಬ್ಬರು ಗುರುವಾರ ಬಿಸಿಲಿನ ತಾಪಕ್ಕೆ ಬಲಿಯಾಗಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಬಿಸಿಲಿನ ತಾಪಕ್ಕೆ ಬಲಿಯಾದವರ ಸಂಖ್ಯೆ ಎರಡಕ್ಕೇರಿದೆ.

    ರಾಯಚೂರಿನಲ್ಲಿ ಕಳೆದ 15 ವರ್ಷಗಳಲ್ಲೇ ಈ ಬಾರಿ ದಾಖಲೆಯ ಅತೀ ಹೆಚ್ಚು ತಾಪಮಾನ ದಾಖಲಾಗಿದೆ. ಕಳೆದ ಮೂರು ದಿನಗಳಿಂದ ರಾಯಚೂರಿನಲ್ಲಿ ಸರಾಸರಿ 46.7 ಡಿಗ್ರಿ ಸೆಲ್ಸಿಯಸ್ ಬಿಸಿಲಿನ ತಾಪಮಾನ ದಾಖಲಾಗಿದೆ. ಇದನ್ನೂ ಓದಿ: ಅಮಿತ್‌ ಶಾ ನಕಲಿ ವೀಡಿಯೋ ಪ್ರಕರಣ – ಕಾಂಗ್ರೆಸ್‌ ಕಾರ್ಯಕರ್ತ ಅರೆಸ್ಟ್‌

  • ಬಿಸಿಲಿನ ತಾಪಕ್ಕೆ ಹೊಲದ ಕೆಲಸಕ್ಕೆ ಹೋಗಿದ್ದ ರೈತ ಬಲಿ

    ಬಿಸಿಲಿನ ತಾಪಕ್ಕೆ ಹೊಲದ ಕೆಲಸಕ್ಕೆ ಹೋಗಿದ್ದ ರೈತ ಬಲಿ

    ರಾಯಚೂರು: ಬಿಸಿಲಿನ ತಾಪದಿಂದ  (Heatstroke) ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ತಾಲೂಕಿನ (Raichur) ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಹನುಮಂತು (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೊಲದಿಂದ ಬಣವೆ ಕೆಲಸ ಮುಗಿಸಿಕೊಂಡು ಮನೆಯ ಬಳಿ ಬಂದು ನೀರು ಕುಡಿಯುತ್ತಿದ್ದಂತೆ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಹಠಾತ್ ಸಾವಿನಿಂದ ಕಂಗಾಲಾದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ರಾಯಚೂರಿನಲ್ಲಿ 15 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು

    ರಾಯಚೂರಿನಲ್ಲಿ ಕಳೆದ 15 ವರ್ಷಗಳಲ್ಲೇ ಈ ಬಾರಿ ದಾಖಲೆಯ ಅತೀ ಹೆಚ್ಚು ತಾಪಮಾನ ದಾಖಲಾಗಿದೆ. ಕಳೆದ ಮೂರು ದಿನಗಳಿಂದ ರಾಯಚೂರಿನಲ್ಲಿ ಸರಾಸರಿ 46.7 ಡಿಗ್ರಿ ಸೆಲ್ಸಿಯಸ್ ಬಿಸಿಲಿನ ತಾಪಮಾನ ದಾಖಲಾಗಿದೆ. ಇದನ್ನೂ ಓದಿ: ನಾಲ್ಕು ಸ್ಥಾನ ಕಳೆದುಕೊಳ್ಳುವ ಮೂಲಕ ಜೆಡಿಎಸ್ ರಾಜ್ಯದಲ್ಲಿ ಮುಕ್ತವಾಗುತ್ತೆ: ವಿನಯ್‌ಕುಮಾರ್ ಸೊರಕೆ

     

  • ಬಿಸಿಲ ಧಗೆ ಡೇಂಜರ್ – ಕೂಲ್ ಆಗೋಕೆ ನೀವೀ ಸುದ್ದಿ ಓದ್ಲೇಬೇಕು!

    ಬಿಸಿಲ ಧಗೆ ಡೇಂಜರ್ – ಕೂಲ್ ಆಗೋಕೆ ನೀವೀ ಸುದ್ದಿ ಓದ್ಲೇಬೇಕು!

    – ಜನರಿಗೆ ಬಿಸಿಲಾಘಾತದ ಮುನ್ನೆಚ್ಚರಿಕೆ ನೀಡಿದ ರಾಜ್ಯ ಸರ್ಕಾರ

    – ಹೀಟ್ ಸ್ಟ್ರೋಕ್ ತಂದೀತು ಜೀವಕ್ಕೇ ಕುತ್ತು

    – ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸುತ್ತೋಲೆ

    ಪವಿತ್ರ ಕಡ್ತಲ

    ಬೆಂಗಳೂರು: ಭೀಕರ ಬಿಸಿಲಿನಿಂದ ಕಂಗೆಡುತ್ತಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ತೀವ್ರ ಬಿಸಿಲ ಧಗೆಯ ಮುನ್ನೆಚ್ಚರಿಕೆ ನೀಡಿದೆ. ಸುಡುಬಿಸಿಲಿನ ತಾಪದಿಂದ ಎದುರಾಗಬಹುದಾದ ಅಪಾಯಕಾರಿ ಪರಿಣಾಮಗಳ ಬಗ್ಗೆ ವಿವರಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ ಬೇಸಿಗೆ ತಾಪ ಹೆಚ್ಚುತ್ತಿರುವುದರಿಂದ ಬಯಲು ಸೀಮೆ ಹಾಗೂ ಕರಾವಳಿ ಪ್ರದೇಶದಲ್ಲಿ ಹೀಟ್ ಸ್ಟ್ರೋಕ್ ಹಾಗೂ ಚರ್ಮಕ್ಕೆ ಸಂಬಂಧಿಸಿದ ರೋಗಗಳು ಹೆಚ್ಚಾಗುತ್ತದೆ. ಹೀಗಾಗಿ ಆಯಾಯಾ ಜಿಲ್ಲೆಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಸರ್ಜನ್, ತಾಲೂಕು ಆಸ್ಪತ್ರೆಗಳಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದೆ.

    ಅಧಿಕಾರಿಗಳು ಏನ್ಮಾಡಬೇಕು?: ಕಡ್ಡಾಯವಾಗಿ ರಾಜ್ಯದಲ್ಲಿ ಕುಡಿಯುವ ನೀರಿನ ಮಾದರಿ ಪರೀಕ್ಷೆ ಹಾಗೂ ಕ್ಲೋರಿನೆಷನ್ ಮಾಡಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ಒಆರ್‍ಎಸ್, ಐವಿ ದ್ರವ, ಔಷಧಿಗಳ ದಾಸ್ತಾನು ಮಾಡಿಕೊಳ್ಳಬೇಕು. ಹೀಟ್ ಸ್ಟ್ರೋಕ್ ರೋಗಿಗಳಿಗೆ ಉತ್ತಮ ಚಿಕಿತ್ಸೆ ಹಾಗೂ ಅಗತ್ಯ ಚಿಕಿತ್ಸೆಗೆ ಅಡ್ಮಿಟ್ ಮಾಡಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

    ಹೀಟ್ ಸ್ಟ್ರೋಕ್ ಎಂದರೇನು?: ಮಳೆ ಬರುವಾಗ ಸಾಂಕ್ರಾಮಿಕ ರೋಗ ಬರುವಂತೆ ಭೀಕರ ತಾಪಮಾನದ ಸಂದರ್ಭದಲ್ಲಿ ಯೂ ಸಾಕಷ್ಟು ಕಾಯಿಲೆ ಬರುತ್ತದೆ. ಹೀಟ್ ಸ್ಟ್ರೋಕ್ ಎಂದರೆ ಶಾಖಾಘಾತ ಅಥವಾ ಬಿಸಿಲಾಘಾತ. ಇದರಿಂದ ಪ್ರಾಣ ಹಾನಿಯಾಗುವ ಸ್ಥಿತಿಯೂ ಇದೆ. ದೇಹವು ಅತಿಯಾದ ಉಷ್ಣತೆಗೆ ಒಡ್ಡಿಕೊಂಡಾಗ ಅದರ ಶಾಖ ನಿಯಂತ್ರಣ ವ್ಯವಸ್ಥೆ ವಿಫಲವಾಗುತ್ತದೆ. ಅತಿ ಹೆಚ್ಚಿನ ಚಟುವಟಿಕೆಯಿಂದ ದೇಹ ಅಥವಾ ಹೊರಗಿನ ಅತಿ ಹೆಚ್ಚಿದ ಉಷ್ಣತೆಯಿಂದ ದೇಹದ ಪ್ರಮುಖ ಅಂಗಗಳು ವಿಫಲವಾಗುತ್ತವೆ. ತುಂಬ ಉಷ್ಣತೆಯ ಪರಿಸರದಲ್ಲಿ ಕೆಲಸ ಮಾಡುವುದು, ಜತೆಗೆ ದ್ರವಾಹಾರ ಸೇವನೆಯ ಕೊರತೆಯು ಇದಕ್ಕೆ ಕಾರಣ. ಸೂರ್ಯನ ತಾಪಮಾನ ಎಫೆಕ್ಟ್ ನಿಂದಾಗಿ ಇಡೀ ದೇಹ ನಿರ್ಜಲೀಕರಣಗೊಳ್ಳುತ್ತದೆ. ಇದ್ರಿಂದ ಅತಿ ಸುಸ್ತು, ತಲೆ ನೋವು ವಾಕರಿಕೆ ಕಾಣಿಸುತ್ತದೆ. ಅಷ್ಟೇ ಅಲ್ಲದೆ ಕೆಲವೊಮ್ಮೆ ಕುಸಿದು ಬಿದ್ದು ಅಂಗಾಂಗಗಳು ನಿಷ್ಕ್ರಿಯಗೊಂಡು ಮಾತು ನಿಂತು ಹೋಗುತ್ತದೆ. ಈ ಸಮತದಲ್ಲಿ ತಡ ಮಾಡದೆ ಆಸ್ಪತ್ರೆಗೆ ಸೇರಿಸಿಕೊಳ್ಳಬೇಕು.

    ಲಕ್ಷಣಗಳೇನು?: ಬಿಸಿಲಿನ ತಾಪಮಾನಕ್ಕೆ ವಿಪರೀತ ತಲೆನೋವು, ತಲೆ ಸುತ್ತುವುದು, ಎಷ್ಟೇ ಶೆಖೆಯಿದ್ದರೂ ಬೆವರಿಳಿಯದೆ ಕಾಡುವ ಆಯಾಸ, ಮಾಂಸ ಖಂಡಗಳು ಶಕ್ತಿ ಕಳೆದುಕೊಳ್ಳುವುದು, ವಾಂತಿ ಕಾಣಿಸಿಕೊಳ್ಳುವುದು, ದೇಹದ ಉಷ್ಣತೆ ಮತ್ತು ಹೃದಯ ಬಡಿತ ಹೆಚ್ಚಾಗುವುದು, ದೀರ್ಘವಾದ ತೀವ್ರ ಉಸಿರಾಟ ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಭೇಟಿಯಾಗಬೇಕು. ಇಲ್ಲದಿದ್ದಲ್ಲಿ ಮೂರ್ಚೆ ಬೀಳುವುದು ಅಥವಾ ಪ್ರಜ್ಞೆ ತಪ್ಪಬಹುದು.

    ಬಿಸಿಲಾಘಾತ ನಿಮಗಾಗದಿರಲು ಹೀಗೆ ಮಾಡಿ.

    1. ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸಿ
    2. ಬಿಸಿಲಿನಲ್ಲಿ ಕೆಲಸ ಮಾಡುವಾಗ ಸದಾ ಕೈಗೆಟಕುವಂತೆ ಕುಡಿಯುವ ನೀರು ಜೊತೆಗಿರಲಿ
    3. ನಿಧಾನವಾಗಿ, ಧಾರಾಳವಾಗಿ ಉಪ್ಪು ಸಕ್ಕರೆ ಮಿಶ್ರಿತ ನೀರು, ಹಣ್ಣಿನ ರಸ, ಪಾನಕ ಕುಡಿಯಿರಿ. ಸಾಫ್ಟ್ ಡ್ರಿಂಕ್‍ಗಳನ್ನು ಯಾವುದೇ ಕಾರಣಕ್ಕೂ ಕುಡಿಯಬೇಡಿ. ಕಾಫಿ, ಟೀ ಸಾಧ್ಯವಾದಷ್ಟೂ ಕಡಿಮೆ ಕುಡಿಯಿರಿ.
    4. ಹತ್ತಿಯ ನುಣುಪಾದ ಬಟ್ಟೆ/ಟಿಶ್ಯೂ ಕರವಸ್ತ್ರದಿಂದ ಬೆವರು ಒರೆಸಿ
    5. ನೀರು ಮಜ್ಜಿಗೆ/ ಎಳನೀರು ಕುಡಿಯುವುದೂ ಆರೋಗ್ಯಕರ
    6. ಬೆಚ್ಚಗಿನ ಮಸಾಲೆ ರಹಿತ ಶುದ್ಧ ಆಹಾರ ಸೇವಿಸಿ
    7. ಗಾಳಿಯಾಡುವಂತಹ ಪಾದರಕ್ಷೆಗಳನ್ನೇ ಬಳಸಿ
    8. ನಿಮ್ಮ ಜೊತೆಗಿನ ಯಾವುದೇ ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ಅವರನ್ನು ನೆರಳಿಗೆ ಕೊಂಡೊಯ್ಯಿರಿ
    9. ಕೆಳಗೆ ಮಲಗಿಸಿ ಕಾಲುಗಳನ್ನು ಮೇಲಕ್ಕೆತ್ತಿ
    10. ಆ ವ್ಯಕ್ತಿಯ ಹಣೆ, ಕತ್ತು, ಪಾದ, ತೊಡೆಯ ಭಾಗವನ್ನು ಒದ್ದೆ ಬಟ್ಟೆಯಿಂದ ಒರೆಸಿ
    11. ನಿಧಾನವಾಗಿ ಸ್ವಲ್ಪ ಸಕ್ಕರೆ, ಉಪ್ಪು ಬೆರೆತ ನೀರನ್ನು ಕುಡಿಸಿ
    12. ಹತ್ತಿರದ ವೈದ್ಯರನ್ನು ಕರೆಸಿ ಅಥವಾ ಆಸ್ಪತ್ರೆಗೆ ಸೇರಿಸಿ

    ಬಿಸಿಲಾಘಾತವಾಗಿದ್ರೆ ಹೀಗೆ ಮಾಡಿ!: ಹೀಟ್ ಸ್ಟ್ರೋಕ್ ಗೆ ಒಳಗಾದವರ ಬಟ್ಟೆ, ಪಾದರಕ್ಷೆಗಳನ್ನು ಸಡಿಲಿಸಿ ತೆಗೆಯಿರಿ. ತಂಪಾದ ನೆರಳಿರುವ ಜಾಗಕ್ಕೆ ಸ್ಥಳಾಂತರಿಸಿ ಗಾಳಿ ಹಾಕಿ. ತಣ್ಣಗಿನ ನೀರನ್ನು ಆ ವ್ಯಕ್ತಿಯ ಮೇಲೆ ಸಿಂಪಡಣೆ ಮಾಡಿ. ಯಾವುದೇ ಔಷಧ ನೀಡಬೇಡಿ. ದೇಹವನ್ನು ಅತಿಯಾಗಿ ತಕ್ಷಣ ತಂಪು ಮಾಡಲೇಬೇಡಿ. ಪ್ರಜ್ಞೆ ಬಂದ ಮೇಲೆ ನಿಧಾನವಾಗಿ ಶುದ್ಧವಾದ ನೀರನ್ನು ಸ್ವಲ್ಪ ಸ್ವಲ್ಪವೇ ಕುಡಿಯಿರಿ. ಯಾವುದೇ ಕಾರಣಕ್ಕೂ ಆತುರ ಬೇಡವೇ ಬೇಡ.

    ಹೀಗಾದ್ರೆ ಮಾತ್ರ ಡಾಕ್ಟರ್ ನೋಡ್ಲೇಬೇಕು!: ಚರ್ಮ ಕೆಂಪಗಾದರೆ, ಬೆವರಿನ ಪ್ರಮಾಣ ಕಡಿಮೆಯಾದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ದೀರ್ಘವಾದ ತೀವ್ರವಾದ ಉಸಿರಾಟವಿದ್ದರೆ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆದುಕೊಳ್ಳಲೇಬೇಕು.

    ಇದನ್ನು ಮಾತ್ರ ಮಾಡಲೇಬೇಡಿ: ಬಿಗಿಯಾದ ಗಾಢ ಬಣ್ಣದ ಬಟ್ಟೆ ಧರಿಸಬೇಡಿ. ಕುಷನ್‍ಯುಕ್ತ ಕುರ್ಚಿಯಲ್ಲಿ ಕುಳಿತುಕೊಳ್ಳಬೇಡಿ. ಬಾಯಾರಿದಾಗ ಕಡ್ಡಾಯವಾಗಿ ನೀರನ್ನು ಕುಡಿಯಿರಿ. ಆದರೆ ಸೋಡಾ, ಸಾಫ್ಟ್ ಡ್ರಿಂಕ್ ಮಾತ್ರ ಬೇಡವೇ ಬೇಡ. ಬೆವರೊರೆಸಲು ಒರಟಾದ ಬಟ್ಟೆ ಉಪಯೋಗಿಸಬೇಡಿ. ಕಾಫಿ, ಟೀ ಅತಿ ಸಕ್ಕರೆ ಅಂಶವುಳ್ಳ ಪಾನೀಯ ಅತಿಯಾಗಿ ಸೇವಿಸಬೇಡಿ. ಬಿಸಿಲಿನ ವೇಳೆ ಮಸಾಲೆಯುಕ್ತ ಆಹಾರ ತಿನ್ನಬೇಡಿ. ಮಾಂಸಾಹಾರ ವರ್ಜಿಸಿ, ಮದ್ಯಪಾನವಂತೂ ಬೇಡವೇ ಬೇಡ. ಬಿಗಿಯಾದ, ಗಾಳಿಯಾದ ಚಪ್ಪಲಿ, ಶೂ ಧರಿಸಬೇಡಿ.

    ಹೀಗೂ ಆಗುವ ಸಾಧ್ಯತೆ ಇದೆ: ಬಿಸಿಲಾಘಾತವಾದಾಗ ಎಚ್ಚರ ತಪ್ಪುವುದು ವಯಸ್ಸಾದವರಲ್ಲಿನ ಮೊದಲ ಲಕ್ಷಣ. ಹೀಟ್ ಸ್ಟ್ರೋಕ್ ಹೆಚ್ಚಾದರೆ ಮುಂದೆ ಮಾನಸಿಕ ಗೊಂದಲ, ಹೈಪರ್ ವೆಂಟಿಲೇಷನ್, ಸ್ನಾಯು ಸೆಳೆತ, ಕೈ ಕಾಲುಗಳಲ್ಲಿ ನೋವಿನಿಂದ ಕೂಡಿದ ಹರಿತ, ಸೆಳೆತವಾಗಬಹುದು. ಪರಿಸ್ಥಿತಿ ವಿಪರೀತವಾದರೆ ಕೆಲವು ಬಾರಿ ಕೋಮಾಗೂ ಜಾರಬಹುದು.