Tag: Heeraben

  • ಏಷ್ಯಾ ಬುಕ್ ಆಫ್ ರೆಕಾರ್ಡ್ ಸೇರಿದ ಪಂಚರತ್ನ ಯಾತ್ರೆಯ 500 ಬಗೆಯ ಹಾರಗಳು

    ಏಷ್ಯಾ ಬುಕ್ ಆಫ್ ರೆಕಾರ್ಡ್ ಸೇರಿದ ಪಂಚರತ್ನ ಯಾತ್ರೆಯ 500 ಬಗೆಯ ಹಾರಗಳು

    – ಹೆಚ್‌ಡಿಕೆಗೆ ಕೊತ್ತಂಬರಿ, ಸೌತೆಕಾಯಿ, ಕಬ್ಬು ಮೋಸಂಬಿ ಸೇರಿ ಹಲವು ಬಗೆಯ ಹಾರ
    – ಅಭಿಮಾನಿಗಳ ಹಾರೈಕೆ, ಹೆಚ್‌ಡಿಕೆ ಕೃತಜ್ಞತೆ

    ತುಮಕೂರು: 2023ರ ವಿಧಾನಸಭಾ ಚುನಾವಣಾ (Assembly Election 2023) ಪ್ರಚಾರದ ಭಾಗವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ನಡೆಯುತ್ತಿರುವ `ಪಂಚರತ್ನ ಯಾತ್ರೆ’ಯಲ್ಲಿ (PanchaRatna Yatra) ವಿವಿಧ ಬಗೆಯ ಹಾರಗಳು ಗಮನ ಸೆಳೆದಿವೆ. ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಹಾಕಿರುವ ಸುಮಾರು 500 ಬಗೆಯ ವಿಭಿನ್ನ ಹಾರಗಳು ಗಿನ್ನಿಸ್ ದಾಖಲೆ ಮಾಡಿದ್ದು, ಏಷ್ಯಾ ಬುಕ್ ಆಫ್ ರೆಕಾರ್ಡ್‌ಗೆ (Asia Book Of Records) ಸೇರಿವೆ.

    ಕೊತ್ತಂಬರಿ, ಮೋಸಂಬಿ, ಕಬ್ಬು, ಸೌತೆಕಾಯಿ, ಸೇಬು, ದಾಳಿಂಬೆ ಸೇರಿದಂತೆ ಪಂಚರತ್ನ ಯಾತ್ರೆಯಲ್ಲಿ ಅಭಿಮಾನಿಗಳು 500ಕ್ಕೂ ಹೆಚ್ಚು ಬಗೆಯ ಹಾರಗಳನ್ನು ಹಾಕಿದ್ದು, ಗಿನ್ನಿಸ್ ದಾಖಲೆಯಾಗಿದೆ. ಇದು ಏಷ್ಯಾ (Asia Book Of Records) ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ (India Book Of Records) ಸೇರಿದೆ. ಇಡೀ ದೇಶದಲ್ಲಿ ಇಷ್ಟು ಬಗೆಯ ಹಾರಗಳನ್ನು ಹಾಕಿದ್ದು ಇದೇ ಮೊದಲಾಗಿದೆ. ಹಾಗಾಗಿ ಏಷ್ಯಾ ಬುಕ್ ಆಫ್ ರೆಕಾರ್ಡ್‌ನ ಪ್ರಮುಖರು ಹೆಚ್‌ಡಿಕೆಗೆ ಮೆಡಲ್ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದ್ದಾರೆ. ಇದನ್ನೂ ಓದಿ: ಪತ್ನಿ ದೀಪಿಕಾಗಾಗಿ 119 ಕೋಟಿ ಬೆಲೆ ಮನೆ ಖರೀದಿಸಿದ ರಣ್ವೀರ್ ಸಿಂಗ್

    ಲಿಂಗಾಯತ, ಒಕ್ಕಲಿಗರನ್ನ ಮಂಗ ಮಾಡಿದ್ದಾರೆ: ತುಮಕೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಿಎಂ, ಮೀಸಲಾತಿ (Reservation) ವಿಚಾರದಲ್ಲಿ ಬಿಜೆಪಿ (BJP) ವಿರುದ್ಧ ಕಿಡಿ ಕಾರಿದ್ದಾರೆ. ಮೀಸಲಾತಿ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡ ಇದೆ. ಕೆಲವು ಮಾರ್ಪಾಡು ಮಾಡಿಕೊಂಡಿದ್ದಾರೆ. ವೀರೇಶ್ವರ ಲಿಂಗಾಯತ ಹಾಗೂ ಒಕ್ಕಲಿಗರನ್ನು ಮಂಗ ಮಾಡಿದ್ದಾರೆ. 3ಎ ಹಾಗೂ 3ಬಿ ಪ್ರವರ್ಗವನ್ನ ಸೈಲೆಂಟ್ ಮಾಡಿದ್ದಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬಿಳಿ ಸೀರೆಯೊಂದಿಗೆ ಕರವಸ್ತ್ರ ಯಾವಾಗ್ಲೂ ಇರುತ್ತಿತ್ತು- ಹೀರಾಬೆನ್ ಕುತೂಹಲಕಾರಿ ಸಂಗತಿ

    ಇವರು ಮೀಸಲಾತಿ ಕೊಡುವಷ್ಟರಲ್ಲಿ ಸರ್ಕಾರವೇ ಇರಲ್ಲ. ಉತ್ತರಪ್ರದೇಶದಲ್ಲಿ ಈಗಾಗಲೇ ಹೈಕೋರ್ಟ್ ಮೀಸಲಾತಿ ತಿರಸ್ಕಾರ ಮಾಡಿದೆ. ಕರ್ನಾಟಕದಲ್ಲೂ ಅದೇ ಪರಿಸ್ಥಿತಿ ಬರಬಹುದು. ಬಿಜೆಪಿಯವರು ಚುನಾವಣೆಗಾಗಿ ಈ ರೀತಿ ಮಾಡುತಿದ್ದಾರೆ. ಪಂಚಮ ಸಾಲಿಗರು 2ಎ ಸೇರಿಸಿ ಎಂದು ಬೇಡಿಕೆಯಿಟ್ಟರೆ, 2ಡಿ ಮಾಡಿದ್ದಾರೆ. ಬಿಜೆಪಿ ಸರ್ಕಾರ ತೆಗೆದುಕೊಂಡ ಈ ತೀರ್ಮಾನ ಹಲವು ಜನಾಂಗವನ್ನು ಎತ್ತಿಕಟ್ಟುವಂತಾಗಿದೆ. ಮೀಸಲಾತಿ ಅನ್ನೋದು ಧ್ವನಿ ಇಲ್ಲದ ವರ್ಗಕ್ಕೆ ಅನುಕೂಲ ಆಗಬೇಕು, ಆದ್ರೆ ಸರ್ಕಾರ ತೆಗೆದುಕೊಂಡ ತೀರ್ಮಾನದಿಂದ ಜನತೆಗೆ ದ್ರೋಹ ಬಗೆದಂತಾಗಿದೆ ಎಂದು ಕಿಡಿಕಾರಿದ್ದಾರೆ.

    ಪ್ರಧಾನಿ ಮೋದಿ ತಾಯಿ ಅಗಲಿಕೆಗೆ ಹೆಚ್‌ಡಿಕೆ ಕಂಬನಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ನಿಧನಕ್ಕೆ ಹೆಚ್.ಡಿ ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ಮೋದಿ ಅವರ ಬಿಡುವಿಲ್ಲದ ದಿನಚರಿಯಲ್ಲಿ ತಾಯಿ ಬಗ್ಗೆ ತೋರಿದ ಅಕ್ಕರೆ ಮಾದರಿಯಾಗಿದೆ. ಅವರಿಗೆ ಆ ದುಃಖ ತಡೆಯುವ ಶಕ್ತಿ ಭಗವಂತ ನೀಡಲಿ. ಹೀರಾಬೇನ್ ಶತಾಯುಷಿಯಾಗಿ ಅಗಲಿದ್ದಾರೆ. ಮೋದಿ ಅವರು ದುಃಖದಿಂದ ಹೊರಗೆ ಬಂದು ದೇಶ ಸೇವೆಗೆ ಮರಳಲಿ ಎಂದು ಕೋರುತ್ತೇನೆ ಎಂದು ಭಾವುಕರಾದರು.

    Live Tv
    [brid partner=56869869 player=32851 video=960834 autoplay=true]

  • ಮತಗಟ್ಟೆಗೆ ತೆರಳಿ ವೋಟ್‌ ಮಾಡಿದ ಮೋದಿ ತಾಯಿ

    ಮತಗಟ್ಟೆಗೆ ತೆರಳಿ ವೋಟ್‌ ಮಾಡಿದ ಮೋದಿ ತಾಯಿ

    ಗಾಂಧೀನಗರ: ಗುಜರಾತ್‌ ವಿಧಾನಸಭಾ ಚುನಾವಣೆಯ (Gujarat Assembly Polls) 2ನೇ ಹಂತದ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ, ಶತಾಯುಷಿ ಹೀರಾಬೆನ್‌ (Heeraben) ಅವರು ಮತದಾನ ಮಾಡಿದರು.

    ಗಾಂಧೀನಗರ ಸಮೀಪದ ರೇಸನ್‌ ಗ್ರಾಮದ ಮತಗಟ್ಟೆಯಲ್ಲಿ ಮೋದಿ ತಾಯಿ ತಮ್ಮ ಹಕ್ಕು ಚಲಾಯಿಸಿದರು. ಜೂನ್‌ನಲ್ಲಿ 100ನೇ ವರ್ಷಕ್ಕೆ ಕಾಲಿಟ್ಟ ಪ್ರಧಾನಿ ಮೋದಿ ಅವರ ತಾಯಿ, ತಮ್ಮ ಕಿರಿಯ ಮಗ ಪಂಕಜ್ ಮೋದಿಯೊಂದಿಗೆ ಗಾಂಧಿನಗರ ನಗರದ ರೇಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಗುಜರಾತ್‌ ಚುನಾವಣೆ – ಸರತಿ ಸಾಲಲ್ಲಿ ನಿಂತು ಮತ ಚಲಾಯಿಸಿದ ಮೋದಿ

    ಪಂಕಜ್ ಮೋದಿ ಮತ್ತು ಕುಟುಂಬದ ಇತರೆ ಸದಸ್ಯರ ಸಹಾಯದಿಂದ ಮೋದಿ ತಾಯಿ ಗಾಲಿಕುರ್ಚಿಯಲ್ಲಿ ಮತಗಟ್ಟೆಗೆ ತಲುಪಿ ಮತದಾನ ಮಾಡಿದರು. ಮತದಾನಕ್ಕೂ ಮುನ್ನಾದಿನ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಭಾನುವಾರ ಸಂಜೆ ತಮ್ಮ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಪ್ರಧಾನಿ ಮೋದಿ ಅವರು ಸಹ ಇಂದು ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿರುವ ಮತಗಟ್ಟೆಗೆ ತೆರಳಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ.

    2ನೇ ಹಂತದಲ್ಲಿ 61 ರಾಜಕೀಯ ಪಕ್ಷಗಳ 883 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಎಎಪಿ ಎಲ್ಲ 91 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಕಾಂಗ್ರೆಸ್‌ 90 ಕ್ಷೇತ್ರದಲ್ಲಿ ಕಣದಲ್ಲಿದೆ. ಇದನ್ನೂ ಓದಿ: ಚುನಾವಣೆ ಗೆಲ್ಲಲು BJP ಹಣ, ಹೆಂಡದ ಹೊಳೆ ಹರಿಸುತ್ತಿದೆ- ಡಿಂಪಲ್ ಯಾದವ್ ಕಿಡಿ

    2017ರ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಈ ಕ್ಷೇತ್ರಗಳಲ್ಲಿ 51 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್‌ 39 ಹಾಗೂ ಇತರರು 3 ಸ್ಥಾನ ಪಡೆದುಕೊಂಡಿದ್ದರು. ಡಿಸೆಂಬರ್‌ 8ರಂದ ಮತ ಎಣಿಕೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿ ತಾಯಿ

    ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿ ತಾಯಿ

    ನವದೆಹಲಿ: ತಮ್ಮ ತಾಯಿ ಹೀರಾಬೆನ್ ಅವರು ಲಸಿಕೆ ಪಡೆದಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ಹಂಚಿಕೊಂಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ತಮ್ಮ ತಾಯಿ ಲಸಿಕೆ ಪಡೆದಿರುವ ವಿಚಾರವನ್ನು ಹಂಚಿಕೊಂಡು ಅರ್ಹರು ಕೊರೊನಾ ಲಸಿಕೆ ಪಡೆದು ಅಭಿಯಾನದಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.

    ಟ್ವೀಟ್‍ನಲ್ಲಿ ಬರೆದಿರುವ ಅವರು, ನನ್ನ ತಾಯಿ ಇಂದು ಕೊರೊನಾ ಮೊದಲ ಡೋಸ್ ಲಸಿಕೆ ಪಡೆದಿರುವ ವಿಚಾರವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ. ಅರ್ಹರು ಲಸಿಕೆ ಪಡೆಯುವಂತೆ ಸಹಾಯ ಮಾಡಿ, ಪ್ರೇರಣೆ ನೀಡಿ ಎಂದು ಈ ಮೂಲಕ ನಾನು ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.

    ಮಾರ್ಚ್ 1ರಿಂದ 3ನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು, ಹಿರಿಯ ನಾಗರಿಕರು ಹಾಗೂ ವಿವಿಧ ಖಾಯಿಲೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಇದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರು ಮೊದಲ ಡೋಸ್ ಲಸಿಕೆಯನ್ನು ಪಡೆದಿದ್ದಾರೆ.

    3ನೇ ಹಂತದ ಅಭಿಯಾನ ಆರಂಭವಾದ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಏಮ್ಸ್‍ಗೆ ತೆರಳಿ ಲಸಿಕೆ ಪಡೆದಿದ್ದಾರೆ. ಈ ಮೂಲಕ ಇತರರಿಗೆ ಪ್ರೇರಣೆ ನೀಡಿದ್ದಾರೆ. ದೇಸಿಯ ಕಂಪನಿ ಭಾರತ್ ಬಯೋಟೆಕ್ ತಯಾರಿಸಿದ ಕೋವ್ಯಾಕ್ಸಿನ್ ಲಸಿಕೆ ಪಡೆದು ಮಾದರಿಯಾಗಿದ್ದಾರೆ.

    ಜನವರಿ 16ರಂದು ಭಾರತದಲ್ಲಿ ಎರಡು ಲಸಿಕೆಗಳಿಗೆ ಅನುಮತಿ ನೀಡಲಾಗಿದ್ದು, ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗೆ ಅನುಮತಿ ಸಿಕ್ಕಿದೆ. ಕೋವಿಶೀಲ್ಡ್ ಲಸಿಕೆಯನ್ನು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಭಾರತದ ಸೇರಂ ಇನ್‍ಸ್ಟಿಟ್ಯೂಟ್‍ನಲ್ಲಿ ಲಸಿಕೆಯನ್ನು ಉತ್ಪಾದಿಸಲಾಗುತ್ತಿದೆ.