Tag: Hemavati Reservoir

  • ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

    ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

    ಮೈಸೂರು: ಕಾವೇರಿಕೊಳ್ಳದಲ್ಲಿ ಪೂರ್ವ ಮುಂಗಾರಿನ ಸಂತಸ ಸೃಷ್ಟಿಯಾಗಿದೆ, ಕೇವಲ ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ (Kabini Dam) ಭರ್ತಿಯಾಗುವ ಹಂತಕ್ಕೆ ಬಂದುನಿಂತಿದೆ.

    ಹೆಚ್.ಡಿ ಕೋಟೆ (HD Kote) ತಾಲೂಕು ಬೀಚನಹಳ್ಳಿಯಲ್ಲಿನ ಕಬಿನಿ ಜಲಾಶಯ ಕೇವಲ ಹತ್ತೇ ದಿನದಲ್ಲಿ ಭರ್ತಿಯ ಹಂತಕ್ಕೆ ಬಂದಿದೆ. ಮುಂಜಾಗೃತ ಕ್ರಮವಾಗಿ ಕಬಿನಿ ಜಲಾಶಯದಿಂದ 8 ಸಾವಿರ ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ನಾಲ್ಕು ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದನ್ನೂ ಓದಿ: ಹಾಸನದಲ್ಲಿ ಮುಂದುವರಿದ ಮಳೆ – ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವು

    ಇನ್ನೂ ಕೇರಳದ (Kerala) ವಯನಾಡಿನಲ್ಲಿ ಉತ್ತಮ ಮಳೆ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಬರುವ ಒಳ‌ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

    ಸದ್ಯ ಜಲಾಶಯಕ್ಕೆ 18,018 ಕ್ಯೂಸೆಕ್ ಒಳ ಹರಿವು ಇದೆ. ಒಟ್ಟು 2,284 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2,280 ಅಡಿ ನೀರು ಸಂಗ್ರಹವಾಗಿದೆ.

    ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವು:
    ಇನ್ನೂ ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಜೀವನದಿ ಹೇಮಾವತಿ ಜಲಾಶಯದ (Hemavati Reservoir) ಒಳಹರಿವಿನಲ್ಲಿ ಏರಿಕೆಯಾಗಿದೆ. ಸಕಲೇಶಪುರ, ಆಲೂರು ಭಾಗದಲ್ಲಿ ಮಳೆಯಾಗುತಿದ್ದು, ಬಹುತೇಕ ಕಡೆ ಮೋಡ ಕವಿದ ವಾತಾವರಣವಿದೆ. ಹಾಸನ, ಬೇಲೂರು, ಅರಕಲಗೂಡು ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಮಳೆ ಹಿನ್ನೆಲೆ ಹಾಸನ ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವಿದೆ.

    37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಹೇಮಾವತಿ ಜಲಾಶಯದಲ್ಲಿ ಸದ್ಯ 23.661 ಟಿಎಂಸಿ ನೀರು ಸಂಗ್ರಹವಾಗಿದೆ. ನದಿಯಿಂದ 3,875 ಕ್ಯೂಸೆಕ್ ಹೊರಹರಿವಿದೆ. ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2922.00 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2905.85 ಅಡಿಯಿದೆ. ಇದನ್ನೂ ಓದಿ: ಮಂಗಳೂರಲ್ಲಿ ವರುಣಾರ್ಭಟ; ಮಳೆಗೆ 6 ಮಂದಿ ಬಲಿ

  • ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

    ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

    ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಅಬ್ಬರ ತಗ್ಗಿದೆ. ಇದರ ಪರಿಣಾಮ ಇಂದು ಜಿಲ್ಲೆಯ ಜೀವನದಿ ಹೇಮಾವತಿ ನದಿಯ (Hemavati River) ಒಳಹರಿವು ಸಹ ಇಳಿಕೆಯಾಗಿದೆ.

    ಸಕಲೇಶಪುರ, ಆಲೂರು, ಬೇಲೂರು (Beluru) ಹಾಗೂ ಅರಕಲಗೂಡು ಭಾಗದಲ್ಲಿ ಮಳೆ ಬಿಟ್ಟು ಬಿಟ್ಟು ಬರುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಹೇಮಾವತಿ ಜಲಾಶಯದಲ್ಲಿ ಸದ್ಯ, 23.136 ಟಿಎಂಸಿ ನೀರು ಸಂಗ್ರಹವಾಗಿದೆ.

    ಇದೀಗ ಹೇಮಾವತಿ ಜಲಾಶಯಕ್ಕೆ 11,252 ಕ್ಯೂಸೆಕ್ ಒಳಹರಿವಿದ್ದು, ನದಿಯಿಂದ 3,575 ಕ್ಯೂಸೆಕ್ ಹೊರಹರಿವಿದೆ. ಈ ಹೇಮಾವತಿ ಜಲಾಶಯದ (Hemavati Reservoir) ಗರಿಷ್ಠ ಮಟ್ಟ 2,922.00 ಅಡಿಯಾಗಿದ್ದು, ಇಂದಿನ ನೀರಿನ ಮಟ್ಟ 2,905.10 ಅಡಿಗಳಷ್ಟಿದೆ.

  • ಪ್ರತಿದಿನ KRSಗೆ 1,300 ಕ್ಯೂಸೆಕ್ ನೀರು – ಹೇಮಾವತಿಯಲ್ಲೂ ನೀರಿನ ಮಟ್ಟ ಕುಸಿತ

    ಪ್ರತಿದಿನ KRSಗೆ 1,300 ಕ್ಯೂಸೆಕ್ ನೀರು – ಹೇಮಾವತಿಯಲ್ಲೂ ನೀರಿನ ಮಟ್ಟ ಕುಸಿತ

    ಹಾಸನ: ಜಿಲ್ಲೆಯ ಜೀವನದಿ ಹಾಗೂ ಕಾವೇರಿ ಕೊಳ್ಳದ ಪ್ರಮುಖ ಜಲಾಶಯವೂ ಆಗಿರುವ  ಹೇಮಾವತಿಯಲ್ಲಿ (Hemavati Reservoir) ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ರೈತರಿಗೆ ಹಾಗೂ ಹಾಸನ ನಗರವಾಸಿಗಳಿಗೆ ಆತಂಕ ಎದುರಾಗಿದೆ.

    ಇನ್ನೂ 18 ದಿನಗಳ ಕಾಲ KRSನಿಂದ ತಮಿಳುನಾಡಿಗೆ (TamilNadu) ನೀರು ಹರಿಸುವಂತೆ ಆದೇಶ ಬಂದ ಹಿನ್ನೆಲೆಯಲ್ಲಿ ಕೆಆರ್‌ಎಸ್‌ಗೆ ಹೇಮಾವತಿ ನದಿಯಿಂದ ಪ್ರತಿದಿನ 1,300 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಇದರಿಂದ ಹೇಮಾವತಿ ನದಿಯ ಒಡಲು ಬರಿದಾಗುತ್ತಿದೆ.

    ಕಳೆದ ಎರಡು ತಿಂಗಳ ಕಾಲ ನಾಲೆಗೆ ನೀರು ಹರಿಸಿದ್ದರಿಂದ ಲಕ್ಷಾಂತರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿದೆ. ಸದ್ಯ ನಾಲೆಯಲ್ಲಿ ನೀರು ನಿಲ್ಲಿಸಲಾಗಿದ್ದು, ಇನ್ನೂ ಮೂರ‍್ನಾಲ್ಕು ತಿಂಗಳ ಕಾಲ ಭತ್ತಕ್ಕೆ ನೀರಿನ ಅವಶ್ಯಕತೆ ಇದೆ. ಆದರೆ ಹೇಮಾವತಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇರುವುದರಿಂದ 2ನೇ ಹಂತದಲ್ಲಿ ನಾಲೆಗಳಿಗೆ ನೀರು ಬಿಡುವ ಸಾಧ್ಯತೆ ಕಡಿಮೆ ಇದೆ. ಇದನ್ನೂ ಓದಿ: ಪ್ಲಾಟ್‍ಫಾರ್ಮ್ ಮೇಲೆ ರೈಲು ಏರಿದ ಪ್ರಕರಣಕ್ಕೆ ಟ್ವಿಸ್ಟ್ – ಕುಡಿದ ಮತ್ತಿನಲ್ಲಿ ಸಹಾಯಕನ ಎಡವಟ್ಟು

    18 TMC ನೀರಿನಲ್ಲಿ 12 ಟಿಎಂಸಿ ನೀರನ್ನು ಬಳಸಬಹುದಾಗಿದೆ. ಹಾಸನ ನಗರಕ್ಕೆ (Hassan City) ಇನ್ನೂ 7-8 ತಿಂಗಳ ಕಾಲ ಕುಡಿಯುವ ನೀರು ಪೂರೈಕೆ ಮಾಡಬೇಕಾಗಿದ್ದು ಮಳೆ ಸಂಪೂರ್ಣ ಕ್ಷೀಣಿಸಿರುವುದರಿಂದ ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವ ಆತಂಕ ಉಂಟಾಗಿದೆ. ಇದನ್ನೂ ಓದಿ: Asian Games 2023: ಈಕ್ವೆಸ್ಟ್ರೀಯನ್‌ನಲ್ಲಿ ಭಾರತಕ್ಕೆ ಕಂಚು – ಇತಿಹಾಸ ನಿರ್ಮಿಸಿದ ಅನುಷ್‌

    ಸೆಪ್ಟೆಂಬರ್ 29 ರಂದು (ಶುಕ್ರವಾರ) ಕಾವೇರಿ ನೀರಿಗಾಗಿ ಕರ್ನಾಟಕ ಬಂದ್‌ಗೆ (Karnataka Bandh) ಕರೆ ಕೊಟ್ಟಿದ್ದು ಹಾಸನ ಜಿಲ್ಲೆಯಲ್ಲೂ ಬಂದ್ ಮಾಡಲು ಹಲವು ಸಂಘಟನೆಗಳು ನಿರ್ಧರಿಸಿವೆ. ಜೊತೆಗೆ ಹೇಮಾವತಿ ನದಿಯಿಂದ ಕೆಆರ್‌ಎಸ್‌ಗೆ ಹರಿಸಲಾಗುತ್ತಿರುವ ನೀರು ನಿಲ್ಲಿಸುವಂತೆಯೂ ಆಗ್ರಹಗಳು ಕೇಳಿಬಂದಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]