Tag: Hemmigepura

  • ಬೆಂಗಳೂರು ಹೊರವಲಯದ ಹೆಮ್ಮಿಗೆಪುರದಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಜಾಗ ಅಂತಿಮ

    ಬೆಂಗಳೂರು ಹೊರವಲಯದ ಹೆಮ್ಮಿಗೆಪುರದಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಜಾಗ ಅಂತಿಮ

    – ಆಕ್ಷೇಪಣೆಗಳಿದ್ದರೆ 7 ದಿನದಲ್ಲಿ ಸಲ್ಲಿಸುವಂತೆ ಬಿಬಿಎಂಪಿ ಮನವಿ

    ಬೆಂಗಳೂರು: ಬೆಂಗಳೂರಿನ (Bengaluru) ಅತಿ ಎತ್ತರದ ಸ್ಕೈಡೆಕ್ (Skydeck) ನಿರ್ಮಾಣಕ್ಕೆ ಬಿಬಿಎಂಪಿ (BBMP) ಜಾಗ ಫೈನಲ್ ಮಾಡಿದೆ. ಹೆಮ್ಮಿಗೆಪುರದಲ್ಲಿ (Hemmigepura) ಸ್ಕೈಡೆಕ್ ನಿರ್ಮಾಣಕ್ಕೆ ನಿರ್ಧರಿಸಿದ್ದು, ಈ ಜಾಗದಲ್ಲಿ ಗೋಪುರ ನಿರ್ಮಾಣಕ್ಕೆ ಆಕ್ಷೇಪಣೆ ಇದ್ದರೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ನವೆಂಬರ್ 8ರ ಒಳಗಡೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

    ರಾಜ್ಯ ಸರ್ಕಾರ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಬ್ರ‍್ಯಾಂಡ್ ಬೆಂಗಳೂರಿನಡಿ ಅತಿ ಎತ್ತರದ ಆಕಾಶ ಗೋಪುರ ನಿರ್ಮಾಣಕ್ಕೆ ಮುಂದಾಗಿದೆ. ಇದಕ್ಕೆ ಹೆಮ್ಮಿಗೆಪುರದಲ್ಲಿ ಜಾಗ ಕೂಡ ಫೈನಲ್ ಆಗಿದೆ. ಹೆಮ್ಮಿಗೆಪುರದಲ್ಲಿ ಸ್ಕೈಡೆಕ್ ನಿರ್ಮಾಣ ಮಾಡೋದಕ್ಕೆ ಆಕ್ಷೇಪಣೆ ಇದ್ದರೆ ನವೆಂಬರ್ 8ರ ಒಳಗಡೆ ಆಕ್ಷೇಪಣೆ ಸಲ್ಲಿಸಲು ಬಿಬಿಎಂಪಿ ಸಾರ್ವಜನಿಕರಿಗೆ ಮನವಿ ಮಾಡಿದೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ವಿದ್ಯುಕ್ತ ತೆರೆಗೆ ಕ್ಷಣಗಣನೆ – ಭಕ್ತ ಸಾಗರ, ದಾಖಲೆಯ ಆದಾಯ

    ಪ್ರವಾಸೋದ್ಯಮ ಉತ್ತೇಜನದ ಜೊತೆಗೆ ಬೆಂಗಳೂರು ನಗರವನ್ನು ವೀಕ್ಷಣೆ ಮಾಡುವ ಉದ್ದೇಶದಿಂದ ಆಕಾಶ ಗೋಪುರ ನಿರ್ಮಾಣ ಮಾಡಲು ಬಿಬಿಎಂಪಿ ತೀರ್ಮಾನಿಸಿತ್ತು. ಇದಕ್ಕಾಗಿ ಎನ್‌ಜಿಇಎಫ್, ಯಶವಂತಪುರ ಬಳಿಯ ಸಾಬೂನು ಕಾರ್ಖಾನೆ, ವೈಟ್‌ಫೀಲ್ಡ್, ಜಿಕೆವಿಕೆ, ರೇಸ್‌ಕೋರ್ಸ್, ಬೆಂಗಳೂರು ಅರಮನೆ ಆವರಣದ ಜಾಗಗಳನ್ನು ಗುರುತಿಸಲಾಗಿತ್ತು. ಆದರೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಹೆಚ್‌ಎಎಲ್ ವಿಮಾನ ನಿಲ್ದಾಣ ಸುರಕ್ಷತೆ ದೃಷ್ಟಿಯಿಂದ ಒಪ್ಪಿಗೆ ಕೊಡಲಿಲ್ಲ. ಇದರ ಜೊತೆಗೆ ಎನ್‌ಜಿಇಎಫ್, ಯಶವಂತಪುರ ಬಳಿಯ ಸಾಬೂನು ಕಾರ್ಖಾನೆ, ವೈಟ್‌ಫೀಲ್ಡ್, ಜಿಕೆವಿಕೆ, ರೇಸ್‌ಕೋರ್ಸ್, ಬೆಂಗಳೂರು ಅರಮನೆ ಆವರಣದ ಜಾಗಗಳನ್ನು ಬಳಕೆ ಮಾಡಿಕೊಳ್ಳಲು ನಿರ್ಬಂಧವಿದೆ. ಇದನ್ನೂ ಓದಿ: ಮಂಗಳೂರು| ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಸವಾರ ಸಾವು

    ಸಾರ್ವಜನಿಕರು ಆಕ್ಷೇಪಣೆ ಜೊತೆಗೆ ಬೆಂಗಳೂರಿನ ನೈಋತ್ಯ ಮತ್ತು ಪಶ್ವಿಮ ಭಾಗದಲ್ಲಿ ಜಾಗ ಇದ್ದರೆ ಸಲಹೆ ಕೂಡ ಕೊಡಿ ಅಂತಾ ಕೇಳಿದೆ. ಸ್ಕೈಡೆಕ್ ನಿರ್ಮಾಣಕ್ಕೆ ಆಕ್ಷೇಪಣೆ ಜೊತೆಗೆ ಸಲಹೆ ಏನು ಬರಲಿವೆ ಎಂದು ಕಾದು ನೋಡಬೇಕಿದೆ.‌ ಇದನ್ನೂ ಓದಿ: Uttar Pradesh| ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ- ಇಬ್ಬರು ಮಕ್ಕಳು ಸಾವು

  • ವೀಲಿಂಗ್ ಮಾಡ್ತಿದ್ದ ನಾಲ್ವರು ಯುವಕರಿಗೆ ಗ್ರಾಮಸ್ಥರಿಂದ ಗೂಸಾ

    ವೀಲಿಂಗ್ ಮಾಡ್ತಿದ್ದ ನಾಲ್ವರು ಯುವಕರಿಗೆ ಗ್ರಾಮಸ್ಥರಿಂದ ಗೂಸಾ

    ಬೆಂಗಳೂರು: ವೀಲಿಂಗ್ ಮಾಡುತ್ತಿದ್ದ ನಾಲ್ವರಿಗೆ ಗ್ರಾಮಸ್ಥರು ಗೂಸಾ ಕೊಟ್ಟ ಘಟನೆ ಕೆಂಗೇರಿಯ ಹೆಮ್ಮಿಗೆಪುರ ಗ್ರಾಮದಲ್ಲಿ ನಡೆದಿದೆ.

    ಕೆಎ 01 ಜೆಡಿ 4109 ಹಾಗೂ ಕೆಎ 05 ಕೆಪಿ 4474 ನಂಬರಿನ ಸ್ಕೂಟಿಗಳಲ್ಲಿ ಯುವಕರು ಇಂದು ಮಧ್ಯಾಹ್ನ ನೈಸ್ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದರು. ಇದನ್ನು ನೋಡಿದ ಹೆಮ್ಮಿಗೆಪುರದ ಗ್ರಾಮಸ್ಥರು ಯುವಕರನ್ನು ತಡೆದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಷ್ಟೇ ಅಲ್ಲದೆ ಮತ್ತೊಮ್ಮೆ ವೀಲಿಂಗ್ ಮಾಡದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    ಗ್ರಾಮಸ್ಥರಿಂದ ಗೂಸಾ ತಿಂದ ಯುವಕರ ಹೆಸರು ತಿಳಿದು ಬಂದಿಲ್ಲ. ಗ್ರಾಮಸ್ಥರು ಯುವಕರನ್ನು ಥಳಿಸಿದ್ದು ಅಷ್ಟೇ ಅಲ್ಲದೆ ಸ್ಕೂಟಿಗಳಿಗೆ ಕಲ್ಲು, ಕೋಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ.

    ಇತ್ತೀಚೆಗಷ್ಟೇ ಹೆಮ್ಮಿಗೆಪುರ ಗ್ರಾಮದ ಸಿದ್ದಪ್ಪ ಎಂಬವರಿಗೆ ಸ್ಕೂಟಿ ಮೂಲಕ ವೀಲಿಂಗ್ ಮಾಡುತ್ತಿದ್ದ ಯುವಕರ ಗುದ್ದಿದ್ದರು. ಪರಿಣಾಮ ಸಿದ್ದಪ್ಪ ಅವರ ಕಾಲು ಮುರಿದಿತ್ತು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ವೀಲಿಂಗ್ ಮಾಡುವ ಯುವಕರಿಗೆ ಪಾಠ ಕಲಿಸಲು ಕಾಯುತ್ತಿದ್ದರು. ಭಾನುವಾರ ಮಧ್ಯಾಹ್ನ ಕೈಗೆ ಸಿಕ್ಕ ನಾಲ್ಕು ಜನ ಯುವಕರಿ ಹಿಗ್ಗಾಮುಗ್ಗಾ ಥಳಿಸಿ ಬುದ್ಧಿ ಕಲಿಸಿದ್ದಾರೆ.