Tag: Heroin

  • 1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ – ಸಮುದ್ರದಲ್ಲಿ ಚೇಸಿಂಗ್ ವೀಡಿಯೋ ನೋಡಿ

    1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ – ಸಮುದ್ರದಲ್ಲಿ ಚೇಸಿಂಗ್ ವೀಡಿಯೋ ನೋಡಿ

    ನವದೆಹಲಿ: ಲಕ್ಷದ್ವೀಪದಿಂದ ದೋಣಿ ಮೂಲಕ ತಮಿಳುನಾಡಿಗೆ ಮಾದಕವಸ್ತುಗಳನ್ನು ಸಾಗಿಸುತ್ತಿದ್ದವರನ್ನು ಲಕ್ಷದ್ವೀಪ ಕರಾವಳಿಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಮತ್ತು ಭಾರತೀಯ ಕರಾವಳಿ ಕಾವಲು ಪಡೆ ಚೇಸಿಂಗ್ ಮಾಡಿ ಬಂಧಿಸಿದ ರೋಚಕ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಸುಮಾರು 1 ನಿಮಿಷ 30 ಸೆಕೆಂಡ್ ಇರುವ ವೀಡಿಯೋದಲ್ಲಿ ಕಗ್ಗತ್ತಲಿನಲ್ಲಿ ಸಾಗುತ್ತಿದ್ದ ಬೆಂಬಿಡದೇ ಹಿಂಬಾಲಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಾರಕಕ್ಕೇರಿದ ಆಡಳಿತಮಂಡಳಿ, ಕಾರ್ಯನಿರ್ವಹಣಾಧಿಕಾರಿ ಜಟಾಪಟಿ

    ಅರಬ್ಬಿ ಸಮುದ್ರದಲ್ಲಿ ದೋಣಿ ಮೂಲಕ ತಮಿಳುನಾಡಿಗೆ ಮಾದಕವಸ್ತುಗಳನ್ನು ಸಾಗಿಸುತ್ತಿದ್ದವರನ್ನು ಲಕ್ಷದ್ವೀಪ ಕರಾವಳಿಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಮತ್ತು ಭಾರತೀಯ ಕರಾವಳಿ ಕಾವಲು ಪಡೆ ಶುಕ್ರವಾರ ದಾಳಿ ನಡೆಸಿತ್ತು. ಈ ವೇಳೆ ಆರೋಪಿಗಳನ್ನು ಬಂಧಿಸಿ ಅವರ ಬಳಿ ಇದ್ದ ಸುಮಾರು 1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.  ಇದನ್ನೂ ಓದಿ: ಜೂನ್ 21ರಂದು ಮೈಸೂರಿಗೆ ಬರಲಿದ್ದಾರೆ ಪ್ರಧಾನಿ ಮೋದಿ

    ‘ಲಿಟಲ್ ಜೀಸಸ್’ ಮತ್ತು ‘ಪ್ರಿನ್ಸ್’ ಎಂಬ ದೋಣಿಯಲ್ಲಿ ಡ್ರಗ್ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಸದ್ಯ ಈ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ ತಿಳಿಸಿದೆ.

  • ಟ್ರಾಲಿ ಬ್ಯಾಗ್‍ಗಳಲ್ಲಿ ಅಡಗಿಸಿಟ್ಟಿದ್ದ 434 ಕೋಟಿ ರೂ. ಮೌಲ್ಯದ ಹೆರಾಯಿನ್ ಪತ್ತೆ

    ಟ್ರಾಲಿ ಬ್ಯಾಗ್‍ಗಳಲ್ಲಿ ಅಡಗಿಸಿಟ್ಟಿದ್ದ 434 ಕೋಟಿ ರೂ. ಮೌಲ್ಯದ ಹೆರಾಯಿನ್ ಪತ್ತೆ

    ನವದೆಹಲಿ: ನಗರದ ವಿಮಾನನಿಲ್ದಾಣದಲ್ಲಿ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‍ಐ) 100ಕ್ಕೂ ಹೆಚ್ಚು ಟ್ರಾಲಿ ಬ್ಯಾಗ್‍ಗಳ ಲೋಹದ ರಾಡ್‍ಗಳಲ್ಲಿ ಬಚ್ಚಿಟ್ಟ 62 ಕೆಜಿಯ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ.

    ಭಾರತದಲ್ಲಿ ಕೊರಿಯರ್, ಕಾರ್ಗೋ ಅಥವಾ ಏರ್ ಪ್ಯಾಸೆಂಜರ್ ಮೋಡ್‍ಗಳ ಮೂಲಕ ಇಲ್ಲಿಯವರೆಗೆ ಹೆರಾಯಿನ್ ಅನ್ನು ವಶಪಡಿಸಿಕೊಂಡ ದೊಡ್ಡ ಪ್ರಕರಣಗಳಲ್ಲಿ ಇದೂ ಒಂದು ಎಂದು ಡಿಆರ್‍ಐ ಬಹಿರಂಗಪಡಿಸಿದೆ. ಇದನ್ನೂ ಓದಿ: ಉದ್ಯೋಗ ಸಿಗದಿದ್ದರಿಂದ ಮನನೊಂದು ಎಂಬಿಎ ಪದವೀಧರೆ ಆತ್ಮಹತ್ಯೆ

    ಕಪ್ಪು ಮತ್ತು ಬಿಳಿ ಎಂಬ ಹೆಸರಿನ ಕಾರ್ಯಾಚರಣೆಯ ಕೋಡ್‍ನಲ್ಲಿ, ಡಿಆರ್‍ಐ ಮೇ 10 ರಂದು ಉಗಾಂಡಾದ ಎಂಟೆಬ್ಬೆಯಿಂದ ಟ್ರಾಲಿ ಬ್ಯಾಗ್‍ಗಳನ್ನು ಆಮದು ಮಾಡಿದ ಸರಕು ಸಾಗಣೆಯಿಂದ 55 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ದುಬೈ ಮೂಲಕ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಕಾಂಪ್ಲೆಕ್ಸ್‌ಗೆ ರವಾನೆ ಬಂದಿತ್ತು.

    ಪಂಜಾಬ್ ಮತ್ತು ಹರಿಯಾಣದಲ್ಲಿ ನಡೆದ ತ್ವರಿತ ಕಾರ್ಯಾಚರಣೆಯಲ್ಲಿ 7 ಕೆಜಿ ಹೆರಾಯಿನ್ ಮತ್ತು 50 ಲಕ್ಷ ರೂ. ವಶಪಡಿಸಿಕೊಂಡಿದೆ. ಮರೆಮಾಚಿಟ್ಟ 62 ಕೆಜಿ ಹೆರಾಯಿನ್‍ನ ಮೌಲ್ಯವು ಅಕ್ರಮ ಮಾರುಕಟ್ಟೆಯಲ್ಲಿ 434 ಕೋಟಿ ರೂ. ಎಂದು ಅಂದಾಜಿಸಲಾಗಿದೆ ಎಂದು ಡಿಆರ್‍ಐ ತಿಳಿಸಿದೆ.

    ಆಮದು ಮಾಡಲಾದ ರವಾನೆಯಲ್ಲಿ ಒಟ್ಟು 330 ಟ್ರಾಲಿ ಬ್ಯಾಗ್‍ಗಳಿದ್ದು, ಅದರಲ್ಲಿ ವಶಪಡಿಸಿಕೊಂಡ ಹೆರಾಯಿನ್ ಅನ್ನು 126 ಟ್ರಾಲಿ ಬ್ಯಾಗ್‍ಗಳ ಲೋಹದ ಟ್ಯೂಬ್‍ಗಳಲ್ಲಿ ಬಚ್ಚಿಡಲಾಗಿತ್ತು. ಬಚ್ಚಿಟ್ಟ ಹೆರಾಯಿನ್ ಅನ್ನು ಅಧಿಕಾರಿಗಳೂ ಪತ್ತೆ ಹಚ್ಚುವುದು ಅತ್ಯಂತ ಕಷ್ಟಕರವಾಗಿತ್ತು. ಇದನ್ನೂ ಓದಿ: ಎಮ್ಮೆಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಬಸ್ ಪಲ್ಟಿ

    ಡಿಆರ್‍ಐ ಅಧಿಕಾರಿಗಳು ರವಾನೆಯ ಆಮದುದಾರನನ್ನು ಬಂಧಿಸಿದ್ದಾರೆ. ಇತರ ಶಂಕಿತರನ್ನೂ ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ತನಿಖೆಗಳು ನಡೆಯುತ್ತಿವೆ. 2021 ರಲ್ಲಿ ಡಿಆರ್‍ಐ ದೇಶಾದ್ಯಂತ 3300 ಕೆಜಿಗಿಂತ ಹೆಚ್ಚು ವಶಪಡಿಸಿಕೊಂಡಿದೆ.

  • ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಗಡಿ ಭದ್ರತಾ ಪಡೆ – 10 ಕೆಜಿ ಹೆರಾಯಿನ್ ವಶ

    ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಗಡಿ ಭದ್ರತಾ ಪಡೆ – 10 ಕೆಜಿ ಹೆರಾಯಿನ್ ವಶ

    ಚಂಡೀಗಢ: ಪಾಕಿಸ್ತಾನದಿಂದ ಡ್ರೋನ್ ಮೂಲಕ ಹೆರಾಯಿನ್ ಹೊತ್ತು ಬರುತ್ತಿದ್ದ ಮತ್ತೊಂದು ಡ್ರೋನ್‍ನನ್ನು ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಸಿಬ್ಬಂದಿ ಪಂಜಾಬ್‍ನ ಅಮೃತಸರದ ಅಂತರಾಷ್ಟ್ರೀಯ ಗಡಿಯಲ್ಲಿ ಹೊಡೆದುರುಳಿಸಿದ್ದಾರೆ.

    ಡ್ರೋನ್ ಮೂಲಕ ಮಾದಕ ವಸ್ತುಗಳನ್ನು ಕಳ್ಳಸಾಗಣಿಕೆ ಮಾಡುತ್ತಿದ್ದ ಪಾಕಿಸ್ತಾನದ ಮತ್ತೊಂದು ಯತ್ನವನ್ನು ಗಡಿ ಭದ್ರತಾ ಪಡೆ ವಿಫಲಗೊಳಿಸಿದ್ದಾರೆ. ಪಾಕಿಸ್ತಾನದಿಂದ ಬರುತ್ತಿದ್ದ ಡ್ರೋನ್‍ನನ್ನು ಗಮನಿಸಿದ ಬಿಎಸ್‍ಎಫ್ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಇದರಿಂದ ಡ್ರೋನ್ ಕೆಳಗೆ ಬಿದ್ದಿದ್ದು, ಡ್ರೋನ್‍ನಲ್ಲಿ 10 ಕಿಲೋಗ್ರಾಂಗಳಷ್ಟು ಹೆರಾಯಿನ್ ಪತ್ತೆಯಾಗಿದೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ. ಇದನ್ನೂ ಓದಿ: ಮುಹೂರ್ತದ ವೇಳೆ ಕರೆಂಟ್ ಕಟ್ – ಅಕ್ಕನ ಗಂಡ ತಂಗಿಗೆ, ತಂಗಿ ಗಂಡ ಅಕ್ಕನಿಗೆ

    ಸೋಮವಾರ ರಾತ್ರಿ 11.15ರ ಸುಮಾರಿಗೆ ನಮ್ಮ ಸೈನಿಕರು ಗಡಿ ಬೇಲಿಯ ಮೇಲೆ ಡ್ರೋನ್ ಹಾರುತ್ತಿರುವ ಶಬ್ಧವನ್ನು ಕೇಳಿಸಿಕೊಂಡಿದ್ದಾರೆ. ನಂತರ ಡ್ರೋನ್ ಕಡೆಗೆ 9 ಗುಂಡುಗಳನ್ನು ಹಾರಿಸಿದ್ದಾರೆ. ಬಳಿಕ ಡ್ರೋನ್‍ನಲ್ಲಿದ್ದ ಸುಮಾರು 10 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದೇವೆ ಎಂದು ಅಮೃತಸರ ಬಿಎಸ್‍ಎಫ್ ಡಿಐಜಿ ಭೂಪೇಂದರ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಪ್ರಯಾಣಿಕರು ರಾತ್ರಿ ಮೊಬೈಲ್‍ನಲ್ಲಿ ಗಟ್ಟಿಯಾಗಿ ಮಾತನಾಡುವಂತಿಲ್ಲ: ಭಾರತೀಯ ರೈಲ್ವೆ

  • ಪ್ರಧಾನಿ ಮೋದಿ ತವರಿನಲ್ಲಿ 1,300 ಕೋಟಿ ಮೌಲ್ಯದ ಹೆರಾಯಿನ್ ವಶ

    ಪ್ರಧಾನಿ ಮೋದಿ ತವರಿನಲ್ಲಿ 1,300 ಕೋಟಿ ಮೌಲ್ಯದ ಹೆರಾಯಿನ್ ವಶ

    ಗಾಂಧಿನಗರ: ಗುಜರಾತಿನ ಕಚ್‌ ಜಿಲ್ಲೆಯ ಕಾಂಡ್ಲಾಪೋರ್ಟ್‌ನಲ್ಲಿ ಗುಜರಾತ್ ಭಯೋತ್ಪಾದನ ನಿಗ್ರಹದಳ (ATS) ಹಾಗೂ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 1,300 ಕೋಟಿ ರೂ. ಮೌಲ್ಯದ ಹೆರಾಯಿನ್ ಪತ್ತೆಯಾಗಿದೆ.

    ಒಟ್ಟು 260 ಕೆಜಿ ಹೆರಾಯಿನ್ ಇದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಬೆಲೆ 1,300 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ!

    DRUGS 2
    ಸಾಂದರ್ಭಿಕ ಚಿತ್ರ

    ಕಂಟೈನರ್‌ಗಳಲ್ಲಿ ಭಾರತಕ್ಕೆ ಡ್ರಗ್ಸ್ ಸಾಗಣೆಯಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಗುಜರಾತ್ ಭಯೋತ್ಪಾದನ ನಿಗ್ರಹ ದಳವು ಡಿಆರ್‌ಐನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಕಂಟೈನರ್‌ನಲ್ಲಿದ್ದ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

  • ಮಂಡ್ಯದಲ್ಲಿ ಹೆರಾಯಿನ್, ಅಫೀಮು ದಂಧೆ – ಆರೋಪಿಗಳು ಅರೆಸ್ಟ್

    ಮಂಡ್ಯದಲ್ಲಿ ಹೆರಾಯಿನ್, ಅಫೀಮು ದಂಧೆ – ಆರೋಪಿಗಳು ಅರೆಸ್ಟ್

    ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವಿದ್ಯಾರ್ಥಿಗಳನ್ನು ಡಾರ್ಗೆಟ್ ಮಾಡಿಕೊಂಡು ಹೆರಾಯಿನ್, ಅಫೀಮುಗಳನ್ನು ಮಾರಾಟ ಮಾಡುತ್ತಿದ್ದ ಬೆಂಗಳೂರು ಮೂಲದ ಇಬ್ಬರು ಮಾದಕವಸ್ತುಗಳ ದಂಧೆಕೋರರನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿನಲ್ಲಿ ಡ್ರಗ್ಸ್ ಪ್ರಕರಣ ಹೆಚ್ಚಾಗಿದ್ದು, ಬೆಂಗಳೂರು ಪೊಲೀಸರು ಫುಲ್ ಅಲರ್ಟ್ ಆಗಿರುವ ಹಿನ್ನೆಲೆ ಪಕ್ಕದ ಮಂಡ್ಯ ಜಿಲ್ಲೆಯತ್ತ ಮಾದಕವಸ್ತುಗಳ ದಂಧೆಕೋರರು ಮುಖ ಮಾಡಿದ್ದಾರೆ. ಇಲ್ಲಿ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಹೆರಾಯಿನ್, ಅಫೀಮುಗಳನ್ನು ಮಾರಾಟ ಮಾಡುತ್ತಿದ್ದು, ಇದರಿಂದ ಮಂಡ್ಯದ ಯುವ ಪೀಳಿಗೆ ಮಾದಕವಸ್ತುಗಳ ವ್ಯಸನಿಗಳಾಗುತ್ತಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ಎಸ್‍ಪಿ ಕಚೇರಿಗೆ ಹಾಗೂ ಪೊಲೀಸ್ ಠಾಣೆಗಳಿಗೆ ಪದೇ ಪದೇ ದೂರುಗಳು ಬರುತ್ತಿದ್ದವು. ಇದನ್ನೂ ಓದಿ: ಭಾರೀ ಮಳೆಯಿಂದಾಗಿ ಇಂದು ಅಯ್ಯಪ್ಪನ ದರ್ಶನವಿಲ್ಲ

    ಈ ಹಿನ್ನೆಲೆ ಮಂಡ್ಯ ಪೊಲೀಸರು ಹೆರಾಯಿನ್, ಅಫೀಮು ಮಾರಾಟ ಮಾಡುವವರನ್ನು ಬಂಧಿಸಲು ಬಲೆ ಬೀಸಿದ್ದರು. ಇತ್ತೀಚೆಗೆ ಮಂಡ್ಯದ ಚರ್ಚ್ ರಸ್ತೆ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಇದನ್ನು ಕಂಡ ಪೊಲೀಸರು ಆ ಇಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡಿದ್ದಾರೆ. ವಿಚಾರಣೆ ವೇಳೆ ಈ ಇಬ್ಬರು ಹೆರಾಯಿನ್ ಹಾಗೂ ಅಫೀಮು ಪೆಡ್ಲರ್‌ಗಳು ಎಂದು ತಿಳಿದಿದೆ.

    ಇನ್ನೂ ತೀವ್ರತರವಾದ ವಿಚಾರಣೆ ಮಾಡಿದಾಗ, ನಾವು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಹೆರಾಯಿನ್ ಹಾಗೂ ಅಫೀಮು ಅನ್ನು ಮಾರಾಟ ಮಾಡುತ್ತಿದ್ದೇವೆ ಎಂದು ಬಾಯಿ ಬಿಟ್ಟಿದ್ದಾರೆ. ಈ ಬಂಧಿತರಿಂದ 6 ಲಕ್ಷ ಮೌಲ್ಯದ ಹೆರಾಯಿನ್, 75 ಸಾವಿರ ಮೌಲ್ಯದ ಅಫೀಮುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಜಿಲ್ಲೆಯಲ್ಲಿ ಈ ಮಾದಕವಸ್ತುಗಳ ಮಾರಾಟಗಾರರು ಇನ್ನೂ ಇರಬಹುದಾದ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದು, ಅವರ ಸೆರೆಗೂ ಸಹ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಗೆಲ್ಲುವವರೆಗೂ ರಾಜ್ಯ ವಿಧಾನಸಭೆಗೆ ಕಾಲಿಡಲ್ಲ: ಎನ್.ಚಂದ್ರಬಾಬು ನಾಯ್ಡು ಪ್ರತಿಜ್ಞೆ

  • ತಡವಾಗಿ ಬಂದಿದ್ದಕ್ಕೆ ಕ್ಲಾಸ್ ತೆಗೆದುಕೊಳ್ಳುವ ಹುಡುಗಿ ಬೇಕು- ರಿಷಬ್ ಶೆಟ್ಟಿ

    ತಡವಾಗಿ ಬಂದಿದ್ದಕ್ಕೆ ಕ್ಲಾಸ್ ತೆಗೆದುಕೊಳ್ಳುವ ಹುಡುಗಿ ಬೇಕು- ರಿಷಬ್ ಶೆಟ್ಟಿ

    ಬೆಂಗಳೂರು: ಚಿತ್ರೀಕರಣಕ್ಕೆ ಸರ್ಕಾರದಿಂದ ಅವಕಾಶ ಸಿಗುತ್ತಿದ್ದಂತೆ ಹಲವು ಚಿತ್ರಗಳ ಕೆಲಸಗಳು ಗರಿಗೆದರಿದ್ದು, ಸ್ಯಾಂಡಲ್‍ವುಡ್ ನಟ, ನಟಿಯರು ತಮ್ಮ ಸಿನಿಮಾಗಳ ಕೆಲಸಗಳಲ್ಲಿ ಮತ್ತೆ ತೊಡಗಿಕೊಳ್ಳುತ್ತಿದ್ದಾರೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಹ ತಾವು ನಟಿಸುತ್ತಿರುವ ಮುಂದಿನ ಚಿತ್ರದ ಮುಹೂರ್ತ ಕಾರ್ಯಕ್ರಮವನ್ನು ಸಿಂಪಲ್ ಆಗಿ ಮಾಡಿ ಮುಗಿಸಿದ್ದು, ಇದರ ಬೆನ್ನಲ್ಲೇ ಇದೀಗ ವಿಶೇಷ ಆಹ್ವಾನವೊಂದನ್ನು ನೀಡಿದ್ದಾರೆ.

    ಹೌದು ಇತ್ತೀಚೆಗಷ್ಟೇ ರಿಷಬ್ ಶೆಟ್ಟಿ ತಾವು ನಟಿಸುತ್ತಿರುವ ಮುಂದಿನ ಚಿತ್ರ ‘ಹರಿಕಥೆ ಅಲ್ಲಾ ಗಿರಿಕಥೆ’ ಸಿನಿಮಾ ಮೂಹೂರ್ತ ಸಮಾರಂಭವನ್ನು ನೆರವೇರಿಸಿದ್ದಾರೆ. ಇದೀಗ ತಮಗೆ ಜೋಡಿಯಾಗಿ ನಟಿಸುವ ಹೀರೋಯಿನ್ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಈ ಕುರಿತು ಮನವಿ ಮಾಡಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ ‘ಹರಿಕಥೆ ಅಲ್ಲಾ ಗಿರಿಕಥೆ’ ಸಿನಿಮಾಗೆ ಹೀರೋಯಿನ್ ಬೇಕು. ಹೊಸ ಪ್ರತಿಭೆಗಳಿಗೆ ಒಂದೊಳ್ಳೆ ಛಾನ್ಸ್!!! ಎಂಬ ಸಾಲುಗಳನ್ನು ಬರೆದು ಪೋಸ್ಟರ್ ಹಾಕಿದ್ದಾರೆ. ಈ ಪೋಸ್ಟರ್ ಫೋಟೋದಲ್ಲಿ ಆಡಿಶನ್ ವಿಡಿಯೋ ಕಳುಹಿಸುವ ನಟಿಯರಿಗೆ ವಿಶೇಷ ಸೂಚನೆಯೊಂದನ್ನು ನೀಡಿದ್ದಾರೆ. ಈ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ.

    ತನ್ನ ತಂದೆಯನ್ನು ಮೀಟ್ ಮಾಡಲು ತಡವಾಗಿ ಬಂದ ಪ್ರೇಮಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಳ್ಳೊ ಪ್ರೇಯಸಿಯಂತೆ ಅಭಿನಯಿಸಿ, ಒಂದು ನಿಮಿಷದ ವಿಡಿಯೋ ಕಳುಹಿಸಿ ಎಂದು ಯುವ ಕಲಾವಿದರಲ್ಲಿ ಕೇಳಿಕೊಂಡಿದ್ದಾರೆ. ಜಾಲತಾಣಗಳಲ್ಲಿ ಈ ಪೋಸ್ಟರ್ ನೋಡಿದ ಅವರ ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದು, ನೋಟ್ ವಾಸ್ ಬೆಂಕಿ ಎಂದು ಒಬ್ಬರು ಕಮೆಂಟ್ ಮಾಡಿದರೆ, ಇನ್ನೂ ಕೆಲವರು ಬಾಲಿವುಡ್‍ನವರು ಇವರನ್ನು ನೋಡಿ ಕಲಿಯಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

    ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿ ಬರುತ್ತಿದ್ದು, ಗಿರಿಕೃಷ್ಣ ಬರೆದು ನಿರ್ದೇಶಿಸುತ್ತಿರುವ ಚೊಚ್ಚಲ ಚಿತ್ರ ಇದಾಗಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದಾರೆ. ರಿಷಬ್ ಶೆಟ್ಟಿ ಅವರ ಕಚೇರಿಯಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ರಿಷಬ್ ಕುಟುಂಬದವರು, ನಟ ರಕ್ಷಿತ್ ಶೆಟ್ಟಿ ಮತ್ತು ಸಂದೇಶ್ ನಾಗರಾಜ್ ಹಾಗೂ ಚಿತ್ರತಂಡ ಭಾಗವಹಿಸಿತ್ತು. ಜುಲೈನಲ್ಲಿ ಚಿತ್ರೀಕರಣ ಆರಂಭಿಸಲು ಚಿಂತ್ರತಂಡ ಸಿದ್ಧತೆ ನಡೆಸಿದೆ. ಶೂಟಿಂಗ್ ಜೊತೆಗೆ ಪಾತ್ರಕ್ಕೆ ಸೂಕ್ತವಾದ ನಾಯಕಿ ಆಯ್ಕೆ ಸಹ ನಡೆಯಲಿದೆ. ಉಳಿದಂತೆ ಬಾಕಿ ಪಾತ್ರಗಳಲ್ಲಿ ಕೆಲ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಈಗಾಗಲೇ ಅನೇಕರು ತಮ್ಮ ವಿಡಿಯೋಗಳನ್ನು ಕಳುಹಿಸುತ್ತಿದ್ದು, ಚಿತ್ರತಂಡ ಸಹ ಪರಿಶೀಲಿಸುತ್ತಿದೆ.

  • ನೀವು ಸೆಕ್ಸ್ ಫಿಲಂ ಹೀರೋ, ಹೀರೋಯಿನ್ ಜೊತೆ ಮಾತಾಡಿದ್ದಕ್ಕೆ ದಾಖಲೆ ಇದೆ: ಸಾರಾ ಮಹೇಶ್

    ನೀವು ಸೆಕ್ಸ್ ಫಿಲಂ ಹೀರೋ, ಹೀರೋಯಿನ್ ಜೊತೆ ಮಾತಾಡಿದ್ದಕ್ಕೆ ದಾಖಲೆ ಇದೆ: ಸಾರಾ ಮಹೇಶ್

    ಮೈಸೂರು: ಯಾವ ಹೀರೋಯಿನ್ ಜೊತೆ ಯಾವ ರೀತಿ ಮಾತನಾಡಿದ್ದೀರಿ ಅನ್ನೋ ದಾಖಲೆ ಇದೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಅವರು ಅನರ್ಹ ಶಾಸಕ ಹೆಚ್ ವಿಶ್ವನಾಥ್ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಶ್ವನಾಥ್ ಅತೃಪ್ತ ಪ್ರೇತಾತ್ಮ. ತಾನು ಮಾಡಿದ ತಪ್ಪನ್ನು ಬೇರೆಯವರ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ವೈಯಕ್ತಿಕವಾಗಿ ನನ್ನ ತೇಜೋವಧೆ ಮಾಡುತ್ತಿದ್ದಾರೆ. ವಿಶ್ವನಾಥ್ ಬಾಯಿ ಬಿಟ್ಟರೆ ಸುಳ್ಳು ಹೇಳುತ್ತಾರೆ. ಬನ್ನಿ ಚಾಮುಂಡಿ ಬೆಟ್ಟಕ್ಕೆ, ನಾನು ಯಾವುದೇ ಆಸೆ, ಆಮಿಷಗಳಿಗೂ ಬಲಿಯಾಗಿಲ್ಲ. ನನಗೆ ಮಂತ್ರಿ ಸ್ಥಾನ ಬೇಡ ಎಂದು ಚಾಮುಂಡಿ ದೇವಿ ಮುಂದೆ ಪ್ರಮಾಣ ಮಾಡಿ ಹೇಳಿ ಎಂದು ಸವಾಲ್ ಹಾಕಿದರು.

    ಯಾವ ಹೀರೋಯಿನ್ ಜೊತೆ ಹೇಗೆ ಮಾತಾಡಿದ್ದೀರಿ ಅನ್ನೋ ದಾಖಲೆ ಇದೆ. ನಿಮ್ಮಂಥ ಜೀವನ ನಾನು ಮಾಡಿದರೆ ಇಷ್ಟೊತ್ತಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ. ನೀವು ಸೆಕ್ಸ್ ಫಿಲಂ ಹೀರೋ. ನೀವು ಬ್ಲೂ ಬಾಯ್. ಯಾವ ಪುಣ್ಯಾತ್ಮ ನಿಮಗೆ ಹಳ್ಳಿ ಹಕ್ಕಿ ಎಂದು ಹೆಸರಿಟ್ಟನೋ. ಚಳಿಗಾಲದಲ್ಲಿ ಒಂದು ಗೂಡು, ಮಳೆಗಾಲದಲ್ಲಿ ಒಂದು ಗೂಡು, ಬೇಸಿಗೆ ಕಾಲದಲ್ಲಿ ಒಂದು ಗೂಡು ಹುಡುಕಿ ಕೊಳ್ಳುತ್ತೀರಾ ಎಂದು ಗುಡುಗಿದರು. ಇದನ್ನು ಓದಿ: ‘ಹೇ ಅಯೋಗ್ಯ’, ನನ್ನ ಬಗ್ಗೆ ಮಾತನಾಡೋ ಮುನ್ನ ಎಚ್ಚರಿಕೆ ಇರಲಿ: ಹೆಚ್. ವಿಶ್ವನಾಥ್

    25 ಲಕ್ಷ ದುಡ್ಡು ಪಡೆದಿದ್ದೇನೆ ಈ ವರ್ಗಾವಣೆ ಮಾಡಿ ಕೊಡಿ ಎಂದು ಅವತ್ತು ಕೇಳಿದರಲ್ಲ. ಅದನ್ನು ನಾನು ಮಾಡಿಸಿ ಕೊಡಲಿಲ್ಲ ಎಂದು ಹೀಗೆ ಮಾತನಾಡುತ್ತಿದ್ದೀರಾ? ನೀವು ವಕೀಲರಾಗಿದ್ದಾಗ ಒಬ್ಬ ವಿಧವೆ ನಿಮ್ಮ ಬಳಿ ನ್ಯಾಯ ಕೇಳೋಕೆ ಬಂದ ಅವರ ಕಥೆ ಏನಾಯ್ತು ಎಂದು ಹೇಳಬೇಕಾ? 1994 ರಲ್ಲಿ ಕೆಆರ್ ನಗರದ ಹಳ್ಳಿಗಳಿಗೆ ನೀವು ಹೋದಾಗ ಮನೆ ಬಾಗಿಲು ಯಾಕೆ ಹಾಕಿ ಕೊಳ್ಳುತ್ತಿದ್ದರು ಅನ್ನೋದು ಹೇಳಬೇಕಾ? ಎಂದು ವಿಶ್ವನಾಥ್ ಅವರನ್ನು ಪ್ರಶ್ನೆ ಮಾಡಿದರು.

    ನಾನು ನಿಮಗಿಂತ ಏಕವಚನದಲ್ಲಿ ಮಾತಾಡಬಲ್ಲೆ. ಆದರೆ ನಮ್ಮ ತಂದೆ ಸಂಸ್ಕಾರ ಕಲಿಸಿದ್ದಾರೆ ಅದಕ್ಕೆ ಮಾತಾಡಲ್ಲ. ಚಾಮುಂಡಿ ಬೆಟ್ಟದಲ್ಲಿ ಪ್ರಮಾಣ ಮಾಡಿ ಸಾಕು ನಾನು ರಾಜಕೀಯ ಜೀವನದಿಂದ ನಿವೃತ್ತಿ ಪಡೆಯುತ್ತೇನೆ. ನಾನಾ ಅಯೋಗ್ಯ ನೀವಾ ಅಂತಾ ತೀರ್ಮಾನವಾಗಲಿ. ಚಡ್ಡಿ ಒಗೆದರೆ ಪರವಾಗಿಲ್ಲ. ಆದರೆ ಕಂಡ ಕಂಡ ಕಡೆ ಅದನ್ನು ಬಿಚ್ಚಬಾರದು. ನಿಮ್ಮ ಯೋಗ್ಯತೆ ಮೈಸೂರು ಮತ್ತು ಮಡಿಕೇರಿ ಜನರಿಗೆ ಗೊತ್ತಿದೆ. ಕೊಚ್ಚೆ ಗುಂಡಿ ನೀವು, ನಿಮ್ಮ ಬಗ್ಗೆ ಮಾತನಾಡಿದರೆ ನಮ್ಮ ಬಾಯಿ ಹೊಲಸಾಗುತ್ತೆ. ನನ್ನ ವೈಯಕ್ತಿಕ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಕಿಡಿಕಾರಿದರು.

    ನಾನು ಜನರ ಮನೆಗೆ ಹೋದರೆ ನನ್ನ ಅಣ್ಣ ಬಂದ, ತಮ್ಮ ಬಂದ, ಮಗ ಬಂದಾ ಎಂದು ಮನೆಯೊಳಗೆ ಕರೆಯುತ್ತಾರೆ. ನೀವು ಹೋದರೆ ಜನ ಎಲ್ಲಿ ನಿಮ್ಮನ್ನು ಕೂರಿಸುತ್ತಾರೆ ಎಂದು ಗೊತ್ತಿದೆ. ಅನರ್ಹ ಆದ ಮೇಲೆ ಹೆಚ್ ವಿಶ್ವನಾಥ್ ಹೋಗಿ ಹುಚ್ಚು ವಿಶ್ವನಾಥ್ ಆಗಿದ್ದಾರೆ. ಅವರಿಗೆ ಮೊದಲು ಚಿಕಿತ್ಸೆ ಕೊಡಿಸಬೇಕು. 9 ದಿವಸದ ನವರಾತ್ರಿಯಲ್ಲಿ ಚಾಮುಂಡಿ ಬೆಟ್ಟಕ್ಕೆ ಬನ್ನಿ ಇಲ್ಲ ಯಾವುದೇ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡಿ ಎಂದು ಹೇಳಿದರು.

  • ಚೇಸ್ ಮಾಡಿ ಪಾಕ್ ಹಡಗನ್ನು ನಿಲ್ಲಿಸಿದ ಭಾರತ – 500 ಕೋಟಿ ಮೌಲ್ಯದ ಮಾದಕ ವಸ್ತು ವಶ

    ಚೇಸ್ ಮಾಡಿ ಪಾಕ್ ಹಡಗನ್ನು ನಿಲ್ಲಿಸಿದ ಭಾರತ – 500 ಕೋಟಿ ಮೌಲ್ಯದ ಮಾದಕ ವಸ್ತು ವಶ

    ನವದೆಹಲಿ: ಪಾಕಿಸ್ತಾನದ ಹಡಗಿನಲ್ಲಿ ಸಾಗಿಸುತ್ತಿದ್ದ 500 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಭಾರತದ ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದೆ.

    ಪಾಕಿಸ್ತಾನದ “ಅಲ್ ಮದಿನಾ” ಹೆಸರಿನ ಹಡಗು ಗುಜರಾತಿನ ಜಾಕೌ ಕರವಾಳಿಯ ಭಾಗದಲ್ಲಿ ಮಾದಕ ವಸ್ತುಗಳನ್ನು ರಫ್ತು ಮಾಡಲು ಬಂದು ನಿಂತಿದೆ ಎಂದು ಗುಪ್ತಚರ ಇಲಾಖೆ ಖಚಿತ ಮಾಹಿತಿ ನೀಡಿತ್ತು. ಈ ಮಾಹಿತಿಯ ಹಿನ್ನೆಲೆಯಲ್ಲಿ ಕೋಸ್ಟ್ ಗಾರ್ಡ್ ಸಿಬ್ಬಂದಿ ಈ ಹಡಗನ್ನು ಜಪ್ತಿ ಮಾಡಲು ಎರಡು ವೇಗದ ಬೋಟ್‍ನೊಂದಿಗೆ ಸಮುದ್ರಕ್ಕೆ ಇಳಿದಿದೆ.

    ಭಾರತದ ಬೋಟ್‍ಗಳನ್ನು ತಮ್ಮ ಕಡೆ ಬರುತ್ತಿರುವುದನ್ನು ಗಮನಿಸಿದ ಪಾಕ್ ಹಡಗು ವಾಪಸ್ ತಿರುಗಿಸಿ ಪಾಕ್ ಕರಾವಳಿಯತ್ತ ಮುನ್ನುಗ್ಗಿದೆ. ಈ ವೇಳೆ ಭಾರತದ ಬೋಟ್‍ಗಳು ಚೇಸ್ ಮಾಡಿ ಆ ಹಡಗನ್ನು ತಡೆದು ನಿಲ್ಲಿಸಿದೆ.

    ಈ ವೇಳೆ ಆ ಹಡಗಿನಲ್ಲಿದ್ದ ವ್ಯಕ್ತಿಗಳು ಕೆಲವು ಚೀಲಗಳನ್ನು ಸಮುದ್ರಕ್ಕೆ ಎಸೆದಿದ್ದಾರೆ. ಸಮುದ್ರಕ್ಕೆ ಎಸೆದಿದ್ದ 7 ಚೀಲಗಳನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

    ಹಡಗಿನಿಂದ ವಶಪಡಿಸಿಕೊಂಡ ವಸ್ತುಗಳನ್ನು ಪ್ರಾಥಮಿಕ ಪರೀಕ್ಷೆಗೆ ಒಳಪಡಿಸಿದಾಗ ಈ ಮಾದಕ ವಸ್ತುಗಳ ಸುಮಾರು 400 ರಿಂದ 500 ಕೋಟಿ ಬೆಲೆ ಬಾಳುತ್ತದೆ ಎಂದು ಅಂದಾಜಿಸಲಾಗಿದೆ. ಹಡಗಿನಲ್ಲಿದ್ದ ವ್ಯಕ್ತಿಗಳನ್ನು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

    ಮೂರು ತಿಂಗಳಲ್ಲಿ 2 ಬಾರಿ ಗುಜರಾತಿನ ಜಾಕೌ ಕರವಾಳಿಯಲ್ಲಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಮಾರ್ಚ್‍ನಲ್ಲಿ 100 ಕಿಲೋಗ್ರಾಮ್ ಹೆರಾಯಿನ್ ವಶಕ್ಕೆ ಪಡೆಯಲಾಗಿತ್ತು.

    2017ರ ಜುಲೈನಲ್ಲಿ ಪನಾಮ ಎಂಬ ಹಡಗಿನಿಂದ 3,500 ಕೋಟಿ ಬೆಲೆ ಬಾಳುವ 1,500 ಕಿಲೋಗ್ರಾಮ್ ಹೆರಾಯಿನ್ ವಶಕ್ಕೆ ಪಡೆಯಲಾಗಿತ್ತು. ಇದು ಗುಜರಾತ್ ಕರಾವಳಿ ಪ್ರದೇಶದಲ್ಲಿ ವಶಪಡಿಸಿಕೊಂಡ ದೊಡ್ಡ ಮೊತ್ತದ ಮಾದಕ ವಸ್ತು ಎಂಬುದಾಗಿ ವರದಿಯಾಗಿದೆ.

  • ‘ನೋ ಸ್ಮೋಕಿಂಗ್’ ಎನ್ನುತ್ತಲೇ ಸ್ಯಾಂಡಲ್ ವುಡ್‍ಗೆ ಕಾಲಿಟ್ಟ ವಿದ್ಯಾರ್ಥಿನಿ!

    ‘ನೋ ಸ್ಮೋಕಿಂಗ್’ ಎನ್ನುತ್ತಲೇ ಸ್ಯಾಂಡಲ್ ವುಡ್‍ಗೆ ಕಾಲಿಟ್ಟ ವಿದ್ಯಾರ್ಥಿನಿ!

    ಬೆಂಗಳೂರು: ಯಾವುದೇ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಲು ಹೋದಾಗ ನೋ ಸ್ಮೋಕಿಂಗ್ ಎಂಬ ಜಾಹೀರಾತು ಬರುತ್ತದೆ. ಆ ಜಾಹಿರಾತಿನಲ್ಲಿ ಕಾಣಿಸಿಕೊಂಡ ಆ ಪುಟ್ಟ ಪೋರಿ ಈಗ ಬೆಳೆದು ಸ್ಯಾಂಡಲ್ ವುಡ್‍ನಲ್ಲಿ ನಟಿ ಆಗಿ ಮಿಂಚಲು ಸಿದ್ಧರಾಗಿದ್ದಾರೆ.

    ಚಿತ್ರಮಂದಿರಗಳಲ್ಲಿ ಧೂಮಪಾನದ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಸಿಮ್ರಾನ್‍ಗೆ ಬಾಲಿವುಡ್‍ನಿಂದ ಸಾಕಷ್ಟು ಅವಕಾಶಗಳು ಬರುತ್ತಿದ್ದರೂ ಕನ್ನಡ ಸಿನಿಮಾದಲ್ಲೇ ನಟಿಸಲು ಮುಂದಾಗಿದ್ದಾರೆ.

    ‘ಕಾಜಲ್’ ಸಿನಿಮಾದ ನಿರ್ದೇಶಕ ಸುಮಂತ್ ಕ್ರಾಂತಿ ಅವರು ಸಿಮ್ರಾನ್ ಅವರನ್ನು ಕರೆತಂದಿದ್ದಾರೆ. ಈ ಹಿಂದೆ ಸುಮಂತ್ ಕ್ರಾಂತಿ ‘ನಾನಿ’ ಸಿನಿಮಾ ಹಾಗೂ ಈಗ ವಸಿಷ್ಠ ಸಿಂಹ ನಟಿಸುತ್ತಿರುವ ‘ಕಾಲಚಕ್ರ’ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.

    ಗಣಪ ಹಾಗೂ ಕರಿಯ-2 ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ಸಂತೋಷ್ ‘ಕಾಜಲ್’ ಚಿತ್ರಕ್ಕೂ ನಾಯಕರಾಗಿ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರಕ್ಕೆ ಆನೇಕಲ್ ಬಾಲರಾಜ್ ಬಂಡವಾಳ ಹೂಡಿದ್ದಾರೆ.

    ಸಿಮ್ರಾನ್ ಅವರ ತಂದೆ ಮುಂಬೈನ ಖಾಸಗಿ ಹೋಟಲ್ ನ ಮ್ಯಾನೇಜರ್ ಆಗಿದ್ದಾರೆ. ಬಾಲ್ಯದಿಂದಲೇ ಸಿಮ್ರಾನ್ ಜಾಹೀರಾತಿನಲ್ಲಿ ಹೆಚ್ಚು ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರದ ಸ್ಮೋಕಿಂಗ್ ಕಿಲ್ಸ್ ಜಾಹೀರಾತಿನಿಂದ ದೇಶ್ಯಾದ್ಯಂತ ಜನಪ್ರಿಯರಾಗಿದ್ದರು. ಸದ್ಯ ಸಿಮ್ರಾನ್ ಈಗ ಹತ್ತನೇ ತರಗತಿ ಓದುತ್ತಿದ್ದಾರೆ.

     

    ಸಿಮ್ರಾನ್ ಈಗ ಮಾಡೆಲಿಂಗ್ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದು, ಬಾಲಿವುಡ್‍ನಿಂದಲ್ಲೂ ಸಾಕಷ್ಟು ಸಿನಿಮಾ ಅವಕಾಶಗಳು ಹುಡುಕಿಕೊಂಡು ಬಂದಿದ್ದವು. ಆದರೆ ಕಥೆ ಇಷ್ಟವಾಗದ ಕಾರಣ ಸಿಮ್ರಾನ್ ಆ ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ. ಸಿಮ್ರಾನ್ ಈ ಹಿಂದೆ ಬಾಲನಟಿಯಾಗಿ ಸಿನಿಮಾಗಳಲ್ಲಿ ನಟಿಸಿದ್ದು, ಆದರೆ ಈಗ ‘ಕಾಜಲ್’ ಸಿನಿಮಾ ಮೂಲಕ ನಟಿಯಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ನೀಡಿದ್ದಾರೆ.

    ‘ಕಾಜಲ್’ ಚಿತ್ರದ ಫಸ್ಟ್ ಲುಕ್ ಇದೇ ತಿಂಗಳು 31 ಚಿತ್ರದ ನಾಯಕ ಸಂತೋಷ್ ಹುಟ್ಟುಹಬ್ಬದಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ.

  • 63 ವಸಂತಕ್ಕೆ ಕಾಲಿಟ್ಟ ರೇಖಾ- ಇಲ್ಲಿವೆ ಅವರ ಅಪರೂಪದ ಫೋಟೋಗಳು

    63 ವಸಂತಕ್ಕೆ ಕಾಲಿಟ್ಟ ರೇಖಾ- ಇಲ್ಲಿವೆ ಅವರ ಅಪರೂಪದ ಫೋಟೋಗಳು

    ಮುಂಬೈ: ಬಾಲಿವುಡ್‍ನ ಹಿಂದಿನ ಕಾಲದಿಂದಲ್ಲೂ ಈಗಿನ ಕಾಲದವರೆಗೂ ರೇಖಾ ಬಾಲಿವುಡ್‍ನ ದೀವಾ ಆಗಿ ರಾರಾಜಿಸುತ್ತಿದ್ದಾರೆ. ಮಂಗಳವಾರ (ಇಂದು) ಅವರು ತಮ್ಮ 63ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

    ಈಗಿನ ಕಾಲದ ನಟಿಯರಿಗೆ ನಾನೇನೂ ಕಮ್ಮಿಯಿಲ್ಲ ಎಂದು ರೇಖಾ ತಮ್ಮ ಆಕರ್ಷಕ ಕಣ್ಣುಗಳಿಂದ ಹಾಗೂ ತಮ್ಮ ಸೌಂದರ್ಯದಿಂದ ಯುವ ನಟಿಯರಿಗೆ ಸೆಡ್ಡು ಹೊಡೆದಿದ್ದಾರೆ. ರೇಖಾ ಅವರು ನಟಿಸಿದ ಉಮಾರಾವ್ ಜಾನ್ ಮತ್ತು ಕುಬ್‍ಸೂರತ್ ಚಿತ್ರದಲ್ಲಿ ಅತ್ಯುತ್ತಮವಾಗಿ ನಟಿಸಿದ್ದಾರೆ.

    ರೇಖಾ ಅವರು ತಮ್ಮ ಸಿನಿಮಾಗಳಲ್ಲಿ ಯಾವ ರೀತಿಯಲ್ಲಿ ಕಾಣಿಸಿಕೊಂಡು ಜನರ ಮನಸ್ಸು ಗೆದಿದ್ದಾರೆ ಎಂಬುದನ್ನು ಈ ಫೋಟೋಗಳಲ್ಲಿ ನೀವು ನೋಡಿ.