Tag: high court

  • ಗಡಿಪಾರು ಭೀತಿಯಿಂದ ಮತ್ತೆ ನಟ ಚೇತನ್ ಗೆ ರಿಲೀಫ್

    ಗಡಿಪಾರು ಭೀತಿಯಿಂದ ಮತ್ತೆ ನಟ ಚೇತನ್ ಗೆ ರಿಲೀಫ್

    ಸಿಐ ಮಾನ್ಯತೆ ರದ್ದು ಹಿನ್ನೆಲೆಯಲ್ಲಿ ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್‍ಗೆ (Chetan) ಹೈಕೋರ್ಟ್‍ನಿಂದ (High Court) ಈ ಹಿಂದೆ ಷರತ್ತುಬದ್ಧ ರಿಲೀಫ್ (Relief) ದೊರೆತಿತ್ತು. ಸಾಗರೋತ್ತರ ಭಾರತೀಯ ಪ್ರಜೆ ಕಾರ್ಡ್ ರದ್ದುಗೊಳಿಸಿದ್ದ ಆದೇಶದ ತಡೆಯಾಜ್ಞೆಯನ್ನು ಹೈಕೋರ್ಟ್ ಮತ್ತೆ ಶುಕ್ರವಾರ ವಿಸ್ತರಿಸಿದೆ. ಹಾಗಾಗಿ ಗಡಿಪಾರು ಭೀತಿಯಲ್ಲಿದ್ದ ಚೇತನ್ ಗೆ ಹೈಕೋರ್ಟ್ ನಿಂದ ಮತ್ತೆ ರಿಲೀಫ್ ಸಿಕ್ಕಂತಾಗಿದೆ.

    ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಚೇತನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ನ್ಯಾಯಪೀಠ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ವಿಸ್ತರಿಸಿದ್ದಲ್ಲದೇ, ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿದೆ.  ಇದನ್ನೂ ಓದಿ:‘ಘೋಸ್ಟ್’ ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ

    ಚೇತನ್‍ಗೆ 2018ರಲ್ಲಿ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದರೆ ಚೇತನ್ ಮೇಲೆ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ (Central Government) ನೋಟಿಸ್ ನೀಡಿ ಉತ್ತರ ಪಡೆದಿತ್ತು. ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಸಿಐ ಕಾರ್ಡ್ ರದ್ದುಪಡಿಸಿತ್ತು.

     

    ಆದರೆ ಚೇತನ್ ಪರ ವಕೀಲರು, ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿರುವುದು ಸರಿಯಲ್ಲವೆಂದು ವಾದಿಸಿದ್ದರು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ತಡೆ ನೀಡದಂತೆ ಕೇಂದ್ರ, ರಾಜ್ಯ ಸರ್ಕಾರದ ವಕೀಲರಾದ ಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದಿಸಿದ್ದರು.

  • ಅಶ್ವಥ್‌ ನಾರಾಯಣ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

    ಅಶ್ವಥ್‌ ನಾರಾಯಣ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

    ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು (Siddaramaiah) ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್‍ ನಾರಾಯಣ್‍ಗೆ (Ashwath Narayan) ಹೈಕೋರ್ಟ್ (High Court) ತಾತ್ಕಾಲಿಕ ರಿಲೀಫ್ ನೀಡಿದೆ.

    ಮೊನ್ನೆ ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್‍ಐಆರ್ (FIR) ರದ್ದತಿಗೆ ನಿರ್ದೇಶನ ನೀಡುವಂತೆ ಕೋರಿ ಅಶ್ವಥ್‍ನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಶ್ವಥ್‍ನಾರಾಯಣ್ ವಿರುದ್ಧದ ಎಫ್‍ಐಆರ್‌ಗೆ ಸಂಬಂಧಿಸಿದ ತನಿಖೆಗೆ ನಾಲ್ಕು ವಾರ ತಡೆ ನೀಡಿ ಆದೇಶ ನೀಡಿದೆ.

    ಅಶ್ವಥ್‍ನಾರಾಯಣ್ ವಿರುದ್ಧದ ತನಿಖೆಗೆ ನಾಲ್ಕು ವಾರ ತಡೆ ನೀಡಲಾಗಿದ್ದು, ಅಷ್ಟರೊಳಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: 10 ಕೆಜಿ ಉಚಿತ ಅಕ್ಕಿ – ಸರ್ಕಾರದ ಲೆಕ್ಕಾಚಾರ ಏನು?

    ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ ಹಾಜರಾಗಿ, ಮೊದಲೆರಡು ದೂರುಗಳನ್ನು ಎನ್‍ಸಿಆರ್ ಹಾಕಿ ಮುಕ್ತಾಯ ಮಾಡಿರುವುದಕ್ಕೆ ಪೊಲೀಸರು ಮಾಹಿತಿ ಕೊಡಬೇಕು. ಸರ್ಕಾರ ಬದಲಾದ ಮಾತ್ರಕ್ಕೆ ರಾತ್ರೋರಾತ್ರಿ ಏನು ಬದಲಾವಣೆ ಆಗಿದೆ. ಪೊಲೀಸರು ಈ ರೀತಿ ನಡೆದುಕೊಳ್ಳಲಾಗದು ಎಂದು ಆಕ್ಷೇಪಿಸಿದರು. ಈ ವಾದಕ್ಕೆ ರಾತ್ರೋರಾತ್ರಿ ಏನು ಬದಲಾಗಿದೆ ಎಂದು ನೀವು ಕೇಳುವಂತಿಲ್ಲ ಎಂದು ಲಘುಧಾಟಿಯಲ್ಲಿ ನ್ಯಾಯಪೀಠ ಹೇಳಿತು.

     
    ಎನ್‍ಸಿಆರ್ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿ ಎಫ್‍ಐಆರ್ ದಾಖಲಿಸಲಾಗದು ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ಮೇಲ್ನೋಟಕ್ಕೆ ಒಪ್ಪಲಾಗದು. ಇದನ್ನು ಮುಂದಿನ ಹಂತದಲ್ಲಿ ಪರಿಗಣಿಸಲಾಗುವುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

  • ಐಡಿ ಪ್ರೂಫ್ ಇಲ್ಲದೆ 2,000 ರೂ. ನೋಟು ವಿನಿಮಯ ವಿರುದ್ಧ ಮನವಿ- ದೆಹಲಿ ಹೈಕೋರ್ಟ್‌ನಿಂದ ಅರ್ಜಿ ವಜಾ

    ಐಡಿ ಪ್ರೂಫ್ ಇಲ್ಲದೆ 2,000 ರೂ. ನೋಟು ವಿನಿಮಯ ವಿರುದ್ಧ ಮನವಿ- ದೆಹಲಿ ಹೈಕೋರ್ಟ್‌ನಿಂದ ಅರ್ಜಿ ವಜಾ

    ನವದೆಹಲಿ: ರಿಕ್ವಿಸಿಷನ್ ಸ್ಲಿಪ್ (Requisition Slip) ಮತ್ತು ಐಡಿ ಪುರಾವೆಗಳಿಲ್ಲದೆ 2,000 ರೂ. ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಅಧಿಸೂಚನೆಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

    ರಿಕ್ವಿಸಿಷನ್ ಸ್ಲಿಪ್ ಮತ್ತು ಐಡಿ ಪುರಾವೆಯಿಲ್ಲದೇ ಮುಖ್ಯನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ (Satish Chandra Sharma) ಮತ್ತು ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ (Subramonium Prasad) ಅವರ ಪೀಠವು ಬಿಜೆಪಿ ನಾಯಕ, ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ (Ashwini Upadhyay) ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ಈ ಕುರಿತು ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ. ಇದನ್ನೂ ಓದಿ: ರಾಹುಲ್‌ಗಾಂಧಿ 3 ವರ್ಷ ಸಾಮಾನ್ಯ ಪಾಸ್‌ಪೋರ್ಟ್‌ ಬಳಸಲು ದೆಹಲಿ ಕೋರ್ಟ್‌ ಅನುಮತಿ

    ಯಾವುದೇ ರಿಕ್ವಿಸಿಷನ್ ಸ್ಲಿಪ್ ಮತ್ತು ಗುರುತಿನ ಪುರಾವೆಗಳನ್ನು ಪಡೆಯದೆಯೇ ಆರ್‌ಬಿಐ ನೋಟುಗಳ ವಿನಿಮಯಕ್ಕೆ ಅವಕಾಶ ನೀಡಿದೆ. ಇದು ಅನಿಯಂತ್ರಿತ ಎಂದು ಉಪಾಧ್ಯಾಯ ಅವರು ತಮ್ಮ ಮನವಿಯಲ್ಲಿ ತಿಳಿಸಿದ್ದರು. ಇದನ್ನೂ ಓದಿ: ಮಕ್ಕಳನ್ನು ಅಪಹರಿಸಿ ಅತ್ಯಾಚಾರಗೈದು ಹತ್ಯೆ- ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

    ಚಲಾವಣೆಯಲ್ಲಿರುವ 2,000 ರೂ. ನೋಟುಗಳ ಒಟ್ಟು ಮೌಲ್ಯ 6.73 ಲಕ್ಷ ಕೋಟಿಯಿಂದ 3.62 ಲಕ್ಷ ಕೋಟಿಗೆ ಇಳಿಕೆಯಾಗಿದೆ ಎಂದು ಆರ್‌ಬಿಐ ಒಪ್ಪಿಕೊಂಡಿದೆ. ದೊಡ್ಡ ಮೊತ್ತದ ಕರೆನ್ಸಿಗಳು ವ್ಯಕ್ತಿಯ ಲಾಕರ್ ತಲುಪಿದೆ. ಈ ದೊಡ್ಡ ಮೊತ್ತದ ಹಣವನ್ನು ಭಯೋತ್ಪಾದಕರು, ಪ್ರತ್ಯೇಕತಾವಾದಿಗಳು, ಮಾವೋವಾದಿಗಳು, ಡ್ರಗ್ ಸ್ಮಗ್ಲರ್‌ಗಳು, ಗಣಿ ಮಾಫಿಯಾಗಳು ಮತ್ತು ಭ್ರಷ್ಟರಿಂದ ಸಂಗ್ರಹಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಬಿಬಿಸಿ ಮೇಲೆ 10 ಸಾವಿರ ಕೋಟಿ ರೂ. ಮಾನನಷ್ಟ ಕೇಸ್ – ಹೈಕೋರ್ಟ್‍ನಿಂದ ಸಮನ್ಸ್ ಜಾರಿ

    ಮೇ 19ರಂದು 2,000 ರೂ. ನೋಟುಗಳನ್ನು ಹಿಂಪಡೆಯುವಂತೆ ಆರ್‌ಬಿಐ ಸೂಚನೆ ನೀಡಿತ್ತು. ನೋಟುಗಳನ್ನು ತಮ್ಮ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು ಅಥವಾ ಬ್ಯಾಂಕ್ ಶಾಖೆಗಳಲ್ಲಿ ಇತರ ಮುಖಬೆಲೆಯ ನೋಟುಗಳಿಗೆ ವಿನಿಮಯ ಮಾಡಿಕೊಳ್ಳಲು ಆರ್‌ಬಿಐ (RBI) ಜನರಿಗೆ ಸಲಹೆ ನೀಡಿದೆ. ಇದನ್ನೂ ಓದಿ: ಕೊಲೆ ಪಾತಕಿಗೆ ಜೀವಾವಧಿ ಶಿಕ್ಷೆ – 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯ

  • ಗೋ ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ – ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು

    ಗೋ ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ – ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು

    ರಾಮನಗರ: ಗೋಸಾಗಣೆ ಆರೋಪದಲ್ಲಿ ಇದ್ರೀಶ್ ಪಾಷಾ ಎಂಬುವರು ಅನುಮಾನಾಸ್ಪದ ರೀತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ (Puneeth Kerehalli) ಸೇರಿ ಐವರು ಆರೋಪಿಗಳಿಗೆ ಹೈಕೋರ್ಟ್ (High Court) ಷರತ್ತುಬದ್ಧ ಜಾಮೀನು (Bail) ಮಂಜೂರು ಮಾಡಿದೆ.

    ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಆರೋಪಿಗಳಾದ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಪವನ್ ಕುಮಾರ್ ಎ.ಎನ್.ಪಿ ಲಿಂಗಪ್ಪ ಎಂಬವರಿಗೆ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನದಿಂದ ವೈಎಸ್‌ವಿ ದತ್ತ ಸೋಲಿನ ಪ್ರಾಯಶ್ಚಿತ್ತ ಪಾದಯಾತ್ರೆ

    ವಿಚಾರಣೆ ವೇಳೆ ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ ಶ್ಯಾಮ್, ಮರಣೋತ್ತರ ಪರೀಕ್ಷೆಯಲ್ಲಿ ಇದ್ರೀಶ್ ಪಾಷಾ ಅವರ ದೇಹದಲ್ಲಿ ತರಚಿದ ಗಾಯಗಳ ಬಗ್ಗೆ ಮಾತ್ರ ಉಲ್ಲೇಖವಾಗಿದ್ದು, ಗಂಭೀರ ಗಾಯಗಳ ಬಗ್ಗೆ ಏನೂ ಮಾಹಿತಿ ಇಲ್ಲ. ಪ್ರಕರಣವು ಸಾತನೂರು (Sathanur) ಠಾಣೆಯ 100 ಮೀಟರ್ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಹೀಗಿದ್ದಾಗ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಗಲೇಬೇಕಿತ್ತು. ಈಗ ತನಿಖೆ ಪೂರ್ಣಗೊಂಡಿದ್ದು, ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ. ತನಿಖೆಯಲ್ಲಿ ಏನೇನು ವಶಪಡಿಸಿಕೊಳ್ಳಬೇಕು ಎಲ್ಲವೂ ಪೂರ್ಣಗೊಂಡಿದೆ. ಇನ್ನು ಆರೋಪ ಪಟ್ಟಿ ಸಲ್ಲಿಕೆಯಾಗಿ ವಿಚಾರಣೆ ನಡೆಯಬೇಕಿದೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಗ್ಯಾರಂಟಿ ಸಿಎಂ ಭಾಗ್ಯ ಕೊಡಿ – ಹೈಕಮಾಂಡ್‌ ಮುಂದೆ ಸಿದ್ದು, ಡಿಕೆಶಿ ವಾದ ಏನು?

    ಮಾರ್ಚ್ 31ರಂದು ಮಂಡ್ಯದಿಂದ (Mandya) ಬೆಂಗಳೂರಿನತ್ತ (Bengaluru) ಆಗಮಿಸುತ್ತಿದ್ದ ಜಾನುವಾರು ಸಾಗಣೆ ವಾಹನವೊಂದನ್ನು ಸಾತನೂರು ಪೊಲೀಸ್ ಠಾಣೆ ಸಮೀಪ ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರು ಅಡ್ಡಗಟ್ಟಿದ್ದರು. ಬಳಿಕ ವಾಹನದಲ್ಲಿ ಇದ್ದವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಏಪ್ರಿಲ್ 1ರಂದು ಬೆಳಗ್ಗೆ ಘಟನಾ ಸ್ಥಳದಿಂದ 100 ಮೀಟರ್ ದೂರದಲ್ಲಿ ಇದ್ರೀಶ್ ಪಾಷಾ ಅವರ ಶವ ಪತ್ತೆಯಾಗಿತ್ತು. ಪುನೀತ್ ಮತ್ತು ಸಹಚರರಿಂದ ಹಲ್ಲೆ ನಡೆದಿದೆ ಎಂದು ಪಾಷಾ ಅವರ ಸಹೋದರ ಯೂನುಸ್ ಪಾಷಾ ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಗಳ ವಿರುದ್ಧ ಸಾತನೂರು ಠಾಣೆಯಲ್ಲಿ ಐಪಿಸಿ ಸೆಕ್ಷನ್ 302, 324, 341, 504, 506 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಏಪ್ರಿಲ್ 5ರಂದು ರಾಮನಗರ (Ramanagara) ಪೊಲೀಸರು ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದರು. ಇದನ್ನೂ ಓದಿ: ನಾನು ತಪ್ಪು ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ – ಮಳವಳ್ಳಿ ಬಿಜೆಪಿ ಪರಾರ್ಜಿತ ಅಭ್ಯರ್ಥಿ

  • ಹಾರ್ಟ್‌ ಅಟ್ಯಾಕ್ ಆಗ್ಲಿ ಅಂತ ನನಗೆ ಇಂಜೆಕ್ಷನ್ ಕೊಟ್ಟಿದ್ರು: ಇಮ್ರಾನ್ ಖಾನ್

    ಹಾರ್ಟ್‌ ಅಟ್ಯಾಕ್ ಆಗ್ಲಿ ಅಂತ ನನಗೆ ಇಂಜೆಕ್ಷನ್ ಕೊಟ್ಟಿದ್ರು: ಇಮ್ರಾನ್ ಖಾನ್

    ಇಸ್ಲಾಮಾಬಾದ್: ನಿಧಾನವಾಗಿ ಹೃದಯಾಘಾತವನ್ನು ಉಂಟುಮಾಡಲು ತನಗೆ ಚುಚ್ಚು ಮದ್ದನ್ನು ನೀಡಲಾಯಿತು ಜೊತೆಗೆ ವಾಶ್ ರೂಂ ಅನ್ನು ಬಳಸಲು ಅನುಮತಿ ನೀಡಿರಲಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದರು.

    ಈ ಬಗ್ಗೆ ಇಮ್ರಾನ್ ಖಾನ್ ಅವರ ವಕೀಲರು ಮಾತನಾಡಿ, ಬಿಡುಗಡೆ ನಂತರ 1 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದೇವೆ. ಈ ವೇಳೆ ಇಮ್ರಾನ್ ಖಾನ್ ಎದೆ ನೋವಿನ ಬಗ್ಗೆ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

    ಇಮ್ರಾನ್ ಖಾನ್‍ಗೆ ಜೈಲಿನಲ್ಲಿ ಚಿತ್ರಹಿಂಸೆ ನೀಡಲಾಯಿತು. ಅಷ್ಟೇ ಅಲ್ಲದೇ ನಿಧಾನವಾಗಿ ಹೃದಯಾಘಾತವಾಗಲು ಊಟದಲ್ಲಿ ಇನ್ಸುಲಿನ್ ಅನ್ನು ನೀಡಲಾಗಿದೆ. ಇಮ್ರಾನ್ ಖಾನ್‍ನನ್ನು ಕೊಲ್ಲುವ ಯತ್ನ ನಡೆಯುತ್ತಿದೆ. ಅವರಿಗೆ ಮಲುಗಲು ಬಿಡುತ್ತಿಲ್ಲ. ಶೌಚಾಲಯ ಹಾಗೂ ಹಾಸಿಗೆ ಇಲ್ಲದ ಕೊಳಕು ಕೊಣೆಯಲ್ಲಿ ಇರಿಸಲಾಗಿತ್ತು. ಅವರಿಗೆ ತಿನ್ನಲು ಏನನ್ನು ನೀಡಿರಲಿಲ್ಲ ಎಂದು ಕಿಡಿಕಾರಿದರು.

    ಇಮ್ರಾನ್ ಖಾನ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಿದ್ದ ವೇಳೆ ಜೈಲಿನಲ್ಲಿ ಕೊಲ್ಲಲು ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದರು. ಅಷ್ಟೇ ಅಲ್ಲದೇ ಇಮ್ರಾನ್ ಖಾನ್ ಬಂಧನದ ಹಿನ್ನೆಲೆಯಲ್ಲಿ ದೇಶಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿದೆ. ಇದನ್ನೂ ಓದಿ: ಪಾಕ್‌ನಲ್ಲಿ ಹಿಂಸಾಚಾರಕ್ಕೆ ಆರ್‌ಎಸ್‌ಎಸ್, ಬಿಜೆಪಿಯೇ ಹೊಣೆ – ಶೆಹಬಾಜ್ ಷರೀಫ್ ಆಪ್ತ

     ಭ್ರಷ್ಟಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ (Former Prime Minister) ಇಮ್ರಾನ್ ಖಾನ್ (Imran Khan) (70) ಅವರ ಬಂಧನ ಕಾನೂನು ಬಾಹಿರವಾಗಿದೆ. ಅವರನ್ನೂ ತಕ್ಷಣ ಬಿಡುಗಡೆ ಮಾಡಬೇಕು ಎಂದು ಪಾಕ್‍ನ ಸುಪ್ರೀಂ ಕೋರ್ಟ್ (Pakistan Supreme Court) ಗುರುವಾರ ಆದೇಶಿಸಿತ್ತು. ಅಲ್ಲದೆ ಹೈಕೋರ್ಟ್‍ಗೆ (High Court) ಹಾಜರಾಗಲು ಬಂದಿದ್ದ ವೇಳೆ, ಕೋರ್ಟ್ ಆವರಣದಲ್ಲಿಯೇ ಅವರನ್ನು ಬಂಧಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಛೀಮಾರಿ ಹಾಕಿತ್ತು. ಇದನ್ನೂ ಓದಿ: ಇಮ್ರಾನ್‍ಖಾನ್‍ರನ್ನು ತಕ್ಷಣ ಬಿಡುಗಡೆಗೊಳಿಸಿ – ಪಾಕ್ ಸುಪ್ರೀಂ ಕೋರ್ಟ್

  • ಆದಿಪುರುಷ ಚಿತ್ರಕ್ಕೆ ಕಂಟಕ : ರಿಲೀಸ್ ಗೂ ಮುನ್ನ ದೂರು ದಾಖಲು

    ಆದಿಪುರುಷ ಚಿತ್ರಕ್ಕೆ ಕಂಟಕ : ರಿಲೀಸ್ ಗೂ ಮುನ್ನ ದೂರು ದಾಖಲು

    ಪ್ರಭಾಸ್ ಮತ್ತು ಕೃತಿ ಸನೂನ್ (Kriti Sanoon) ಕಾಂಬಿನೇಷನ್ ನ ‘ಆದಿಪುರುಷ’ (Adipurusha) ಸಿನಿಮಾ ಒಂದಿಲ್ಲೊಂದು ಕಾರಣದಿಂದಾಗಿ ವಿವಾದಕ್ಕೀಡಾಗುತ್ತಲೇ ಇದೆ. ಟ್ರೈಲರ್ ರಿಲೀಸ್ ಆದಾಗ ಹಾಗೂ ಪೋಸ್ಟರ್ ಬಿಡುಗಡೆ ಆದಾಗ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಚಿತ್ರದ ಮೇಲಿತ್ತು. ಸಿನಿಮಾದ ಪೋಸ್ಟರ್ ನಲ್ಲೂ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ ಸಿನಿಮಾ ರಿಲೀಸ್ ಗೆ ಸಿದ್ಧವಾಗಿದೆ. ಈ ಸಮಯದಲ್ಲಿ ಸಿನಿಮಾ ರಿಲೀಸ್ ಮಾಡದಂತೆ ದೂರು ದಾಖಲಾಗಿದೆ.

    ಸಂಜಯ್ ತಿವಾರಿ ಎನ್ನುವವರು ಬಾಂಬೆ (Mumbai) ಹೈಕೋರ್ಟ್ (High Court) ಮೆಟ್ಟಿಲು ಏರಿದ್ದು, ಈಗಾಗಲೇ ರಿಲೀಸ್ ಆದ ಪೋಸ್ಟರ್ ನಲ್ಲಿ ನಿರ್ಮಾಪಕರು ಮತ್ತು ಕಲಾವಿದರು ಗಂಭೀರ ತಪ್ಪುಗಳನ್ನು ಮಾಡಿದ್ಧಾರೆ. ಈ ತಪ್ಪುಗಳು ನಾಳೆ ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬಹುದು. ಅಲ್ಲದೇ, ಒಂದು ವರ್ಗದ ಜನರ ಧಾರ್ಮಿಕ ಭಾವನೆಗೂ ನೋವನ್ನುಂಟು ಮಾಡಬಹುದು. ಹಾಗಾಗಿ ಸಿನಿಮಾದಲ್ಲಿ ಅಂತಹ ತಪ್ಪುಗಳು ನುಸುಳದಂತೆ ನಿರ್ದೇಶನ ನೀಡಬೇಕು ಎಂದು ಅವರು ದೂರಿನಲ್ಲಿ (Complaint) ಉಲ್ಲೇಖಿಸಿದ್ದಾರೆ. ಇದನ್ನೂ ಓದಿ:The Kerala Story ಚಿತ್ರದ ಸಕ್ಸಸ್ ಬಳಿಕ ‘ರಣವಿಕ್ರಮ’ ನಟಿಗೆ ಬಿಗ್‌ ಆಫರ್

    ದೂರು ಒಂದು ಕಡೆಯಾದರೆ, ನಟ ಪ್ರಭಾಸ್‌ಗೆ (Prabhas) ದೇಶಾದ್ಯಂತ ಫ್ಯಾನ್ಸ್ ಇದ್ದಾರೆ. ನೆಚ್ಚಿನ ನಟನ ಸಿನಿಮಾಗಾಗಿ ಕಾದು ನೋಡುವ ಬಹುದೊಡ್ಡ ವರ್ಗವೇ ಇದೆ. `ಆದಿಪುರುಷ್’ (Adipurush) ಚಿತ್ರಕ್ಕಾಗಿ ಕಾಯ್ತಿರುವ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಈ ವರ್ಷವೇ ವಾರಿಸು, ತುನಿವು ಜೊತೆ `ಆದಿಪುರುಷ್’ ಚಿತ್ರ ತೆರೆಕಾಣಬೇಕಿತ್ತು. ಚಿತ್ರದ ಟೀಸರ್‌ಗೆ ಕಳಪೆ ಎಂದು ನೆಟ್ಟಿಗರಿಂದ ಉತ್ತರ ಬಂದ್ಮೇಲೆ ರಿಲೀಸ್ ಡೇಟ್ ಮುಂದಕ್ಕೆ ಹಾಕಲಾಗಿತ್ತು. ಈಗ ರಿಲೀಸ್‌ ಬಗ್ಗೆ ಹೊಸ ಅಪ್‌ಡೇಟ್‌ ಸಿಕ್ಕಿದೆ.

    `ಆದಿಪುರುಷ್’ ಸಿನಿಮಾದ ಟೀಸರ್‌ಗೆ ಕಳಪೆ ಗ್ರಾಫಿಕ್ಸ್ ವರ್ಕ್ ನೋಡಿ, ನೆಟ್ಟಿಗರಿಂದ ಚಿತ್ರತಂಡಕ್ಕೆ ಭಾರಿ ಟೀಕೆ ಎದುರಿಸಿತ್ತು. ಹಾಗಾಗಿ ಒಂದಿಷ್ಟು ಬದಲಾವಣೆಯೊಂದಿಗೆ ಬರುತ್ತೇವೆ ಎಂದು ತಿಳಿಸಿದ್ದರು. ಅದರಂತೆಯೇ ಈಗ ಜೂನ್‌ 16, 2023ರಲ್ಲಿ ಸಿನಿಮಾ ರಿಲೀಸ್‌ ಆಗಲಿದೆ ಎಂದು ನಿರ್ದೇಶಕ ಓಂ ರೌತ್‌ ತಿಳಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ಓಂ ರೌತ್ ಚಿತ್ರ ಜೂನ್ 16ರಂದೇ ಬಿಡುಗಡೆಯಾಗಲಿದೆ ಎಂಬುದನ್ನು ಖಚಿತಪಡಿಸಿದ್ದಾರೆ. ಜ.17ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಓಂ ರೌತ್ `ಆದಿಪುರುಷ್’ ರಿಲೀಸ್‌ಗೆ ಇನ್ನು ಕೆಲ ದಿನಗಳು ಬಾಕಿ ಇದೆ ಎಂದು ಪೋಸ್ಟರ್ ಹಂಚಿಕೊಳ್ಳುವ ಮೂಲಕ ಚಿತ್ರ ಜೂನ್ 16ಕ್ಕೆ ತೆರೆ ಕಾಣಲಿದೆ ಎಂಬುದನ್ನು ಖಚಿತಪಡಿಸಿದ್ದಾರೆ. 3ಡಿ ರೂಪದಲ್ಲಿ ಸಿನಿಮಾ ತೆರೆಗೆ ಬರಲಿದೆ. ಈ ಅಪ್‌ಡೇಟ್‌ ಕೇಳಿ ಫ್ಯಾನ್ಸ್‌ ಖುಷಿಪಟ್ಟಿದ್ದಾರೆ.

  • ಇಮ್ರಾನ್‍ಖಾನ್‍ರನ್ನು ತಕ್ಷಣ ಬಿಡುಗಡೆಗೊಳಿಸಿ – ಪಾಕ್ ಸುಪ್ರೀಂ ಕೋರ್ಟ್

    ಇಮ್ರಾನ್‍ಖಾನ್‍ರನ್ನು ತಕ್ಷಣ ಬಿಡುಗಡೆಗೊಳಿಸಿ – ಪಾಕ್ ಸುಪ್ರೀಂ ಕೋರ್ಟ್

    ಇಸ್ಲಾಮಾಬಾದ್: ಭ್ರಷ್ಟಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ (Former Prime Minister) ಇಮ್ರಾನ್ ಖಾನ್ (Imran Khan) (70) ಅವರ ಬಂಧನ ಕಾನೂನು ಬಾಹಿರವಾಗಿದೆ. ಅವರನ್ನೂ ತಕ್ಷಣ ಬಿಡುಗಡೆ ಮಾಡಬೇಕು ಎಂದು ಪಾಕ್‍ನ ಸುಪ್ರೀಂ ಕೋರ್ಟ್ (Pakistan Supreme Court) ಗುರುವಾರ ಆದೇಶಿಸಿದೆ.

    ಬಂಧನವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ (Chief Justice) ಉಮರ್ ಅತಾ ಬಂಡಿಯಾಲ್, ನ್ಯಾಯಮೂರ್ತಿ ಮುಹಮ್ಮದ್ ಅಲಿ ಮಜರ್ ಮತ್ತು ಅಥರ್ ಮಿನಲ್ಲಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಅಲ್ಲದೆ ಹೈಕೋರ್ಟ್‍ಗೆ (High Court) ಹಾಜರಾಗಲು ಬಂದಿದ್ದ ವೇಳೆ, ಕೋರ್ಟ್ ಆವರಣದಲ್ಲಿಯೇ ಅವರನ್ನು ಬಂಧಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಛೀಮಾರಿ ಹಾಕಿದೆ. ಇದನ್ನೂ ಓದಿ: ಇಮ್ರಾನ್ ಖಾನ್ ಅರೆಸ್ಟ್- ಪ್ರತಿಭಟನೆಯಲ್ಲಿ 8 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    ಇಮ್ರಾನ್ ಖಾನ್ ಅವರನ್ನು ಅಲ್ಲಿನ ಭ್ರಷ್ಟಚಾರ ನಿಗ್ರಹ ಸಂಸ್ಥೆ ಮೇ 9 ರಂದು ಬಂಧಿಸಿತ್ತು. ಅವರ ಬಂಧನವನ್ನು ವಿರೋಧಿಸಿ ಖಾನ್ ಬೆಂಬಲಿಗರು ದೇಶಾದ್ಯಂತ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ನಿಯಂತ್ರಿಸಲು ಪಾಕ್ ಪಂಜಾಬ್ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಿತ್ತು. ಅಲ್ಲದೆ ದೇಶದಲ್ಲಿ ಇಂಟರ್‍ನೆಟ್ ಸೇವೆ ಬಂದ್ ಮಾಡಿತ್ತು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಭುಗಿಲೆದ್ದ ಪ್ರತಿಭಟನೆ – ಸಾವಿರ ಮಂದಿ ಬಂಧನ

  • ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅರೆಸ್ಟ್‌

    ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅರೆಸ್ಟ್‌

    ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ (Imran Khan) ಅವರನ್ನು ಪ್ಯಾರಾ ಮಿಲಿಟರಿ ಪಡೆ ಬಂಧಿಸಿದೆ.

    ಇಂದು ಇಸ್ಲಾಮಾಬಾದ್‌ ಹೈಕೋರ್ಟ್‌ (Islamabad High Court) ಆವರಣದಲ್ಲೇ ಇಮ್ರಾನ್‌ ಖಾನ್‌ ಅವರನ್ನು ಬಂಧನ ಮಾಡಲಾಗಿದೆ. ಕೋರ್ಟ್‌ ಆವರಣದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು ಸೆಕ್ಷನ್‌ 144 ಜಾರಿಗೊಳಿಸಲಾಗಿದೆ.

    ಇಮ್ರಾನ್‌ ಖಾನ್‌ ಮೇಲೆ 143 ಎಫ್‌ಐಆರ್‌ ದಾಖಲಾಗಿದ್ದು ಈಗ ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಮ್ರಾನ್‌ ಖಾನ್‌ ಮತ್ತು ಅವರ ಪತ್ನಿ ಒಡೆತನದ ಅಲ್-ಖಾದಿರ್ ಟ್ರಸ್ಟ್‌ಗೆ ಬಹ್ರಿಯಾ ಟೌನ್ 530 ದಶಲಕ್ಷ ಪಾಕಿಸ್ತಾನ ರೂ. ಮೌಲ್ಯದ ಭೂಮಿಯನ್ನು ಮಂಜೂರು ಮಾಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

    ಮಾರ್ಚ್‌ ತಿಂಗಳಿನಲ್ಲಿ ಇಮ್ರಾನ್‌ ಖಾನ್‌ ಅವರನ್ನು ಬಂಧಿಸಲು ಪೊಲೀಸರು ಲಾಹೋರ್‌ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಪಿಟಿಐ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಇದನ್ನೂ ಓದಿ: ಉಗ್ರರ ಜೊತೆ ಸ್ಥಳೀಯರ ಶಾಮೀಲು – ಜಮ್ಮು ಕಾಶ್ಮೀರದಲ್ಲಿ 15 ಕಡೆ ಎನ್‍ಐಎ ಶೋಧ

    ಉಡುಗೊರೆಯಾಗಿ ಪಡೆದ ಕೋಟ್ಯಂತರ ರೂ. ಮೌಲ್ಯದ ನೆಕ್ಲೆಸ್‌ ಅನ್ನು ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ ಬದಲು ಆಭರಣ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿರುವ ಆರೋಪವನ್ನು ಇಮ್ರಾನ್‌ ಎದುರಿಸುತ್ತಿದ್ದಾರೆ.

    ಇಮ್ರಾನ್‌ ಖಾನ್‌ ಅವರ ಅಧಿಕಾರದ ಅವಧಿಯಲ್ಲಿ ದುಬಾರಿ ಮೌಲ್ಯದ ನೆಕ್ಲೆಸ್‌ ಉಡುಗೊರೆಯಾಗಿ ಬಂದಿತ್ತು. ಆದರೆ ಅವರು ಅದನ್ನು ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡದೇ ವ್ಯಾಪಾರಿಯೊಬ್ಬರಿಗೆ 18 ಕೋಟಿ ಪಾಕಿಸ್ತಾನ ರೂ.ಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್‌ಐಎ) ತನಿಖೆ ನಡೆಸಿತ್ತು.

    ಕಾನೂನಿನ ಪ್ರಕಾರ, ರಾಜ್ಯದ ಅಧಿಕಾರಿಗಳು ಗಣ್ಯರಿಂದ ಸ್ವೀಕರಿಸುವ ಉಡುಗೊರೆಗಳನ್ನು ತೋಶಾ-ಖಾನಾಗೆ ಸಲ್ಲಿಸಬೇಕಾಗುತ್ತದೆ. ಅವರು ಉಡುಗೊರೆಯನ್ನು ಸಲ್ಲಿಸಲು ವಿಫಲರಾದರೆ ಅಥವಾ ಉಡುಗೊರೆ ಮೌಲ್ಯದ ಅರ್ಧದಷ್ಟು ಮೊತ್ತವನ್ನು ಸಲ್ಲಿಸಿದರೆ ಅದು ಕಾನೂನುಬಾಹಿರ ಕೃತ್ಯ ಎಂದು ಪರಿಗಣಿಸಲಾಗುತ್ತದೆ.

    ವಿಪಕ್ಷಗಳ ಅವಿಶ್ವಾಸ ಮತದಿಂದಾಗಿ ಇಮ್ರಾನ್‌ ಖಾನ್‌ ಅವರು ಪಾಕಿಸ್ತಾನ ಪ್ರಧಾನ ಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಈಗ ಶೆಹಬಾಜ್‌ ಶರೀಫ್‌ ಅವರು ಪ್ರಧಾನಿ ಹುದ್ದೆ ಅಲಂಕರಿಸಿದ್ದಾರೆ. ಖಾನ್‌ ರಾಜೀನಾಮೆ ಬೆನ್ನಲ್ಲೇ ಅವರ ವಿರುದ್ಧ ಹಲವು ಆರೋಪಗಳು ವ್ಯಕ್ತವಾಗುತ್ತಿದ್ದು, ತನಿಖೆ ನಡೆಯುತ್ತಿದೆ.

  • ಹಿಂಸಾಚಾರ ಸಾವಿನ ಸಂಖ್ಯೆ 54ಕ್ಕೆ ಏರಿಕೆ – ಸಹಜ ಸ್ಥಿತಿಯತ್ತ ಮಣಿಪುರ

    ಹಿಂಸಾಚಾರ ಸಾವಿನ ಸಂಖ್ಯೆ 54ಕ್ಕೆ ಏರಿಕೆ – ಸಹಜ ಸ್ಥಿತಿಯತ್ತ ಮಣಿಪುರ

    ಇಂಪಾಲ: ಮಣಿಪುರದಲ್ಲಿ (Manipur) ಹಿಂಸಾಚಾರದ ಪರಿಣಾಮ ಸಾವಿನ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶನಿವಾರ ಅಂಗಡಿಗಳು ಹಾಗೂ ಮಾರುಕಟ್ಟೆಗಳು ತೆರೆಯಲ್ಪಟ್ಟಿದ್ದು ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ವಾಹನಗಳ ಸಂಚಾರ ಪ್ರಾರಂಭಗೊಂಡಿದೆ. ಆದರೂ ಹೆಚ್ಚಿನ ಸೇನಾ ಪಡೆಗಳು, ಪೊಲೀಸ್ ಪಡೆಗಳು ಭದ್ರತೆಯ ದೃಷ್ಠಿಯಿಂದ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

    54 ಮೃತರಲ್ಲಿ 16 ಶವಗಳನ್ನು ಚುರಾಚಂದ್‍ಪುರ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. 15 ಮೃತದೇಹಗಳನ್ನು ಇಂಪಾಲ (Imphal) ಪೂರ್ವ ಜಿಲ್ಲೆಯ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (Jawaharlal Nehru Institute of Medical Sciences) ಇರಿಸಲಾಗಿದೆ. ಇಂಪಾಲ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್‍ನಲ್ಲಿರುವ ರೀಜನಲ್ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ 23 ಮಂದಿ ಶವ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಚುರಾಚಂದ್‍ಪುರ, ಮೋರೆ, ಕಾಕ್ಚಿಂಗ್ ಮತ್ತು ಕಾಂಗ್‍ಪೊಕ್ಪಿ ಜಿಲ್ಲೆಗಳನ್ನು ಸೇನೆಯು ನಿಯಂತ್ರಣಕ್ಕೆ ತಂದಿದ್ದರಿಂದ ಒಟ್ಟು 13,000 ಜನರನ್ನು ರಕ್ಷಿಸಲಾಗಿದೆ. ಅವರನ್ನು ಸುರಕ್ಷಿತ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ. ಗುಂಡೇಟು ತಗುಲಿದ ಅನೇಕ ಜನರು ರಿಮ್ಸ್ ಮತ್ತು ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

    ಹಿಂಸಾಚಾರದ ನಡುವೆ, ಶುಕ್ರವಾರ ರಾತ್ರಿ ಚುರಾಚಂದ್‍ಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಎನ್‍ಕೌಂಟರ್‌ನಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಇಬ್ಬರು ಇಂಡಿಯಾ ರಿಸರ್ವ್ ಬೆಟಾಲಿಯನ್ ಜವಾನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇಂಪಾಲ ಕಣಿವೆಯಲ್ಲಿ ವಾಸಿಸುವ ಮೇಟಿ (Meitei community) ಮತ್ತು ಬೆಟ್ಟದ ಜಿಲ್ಲೆಗಳ ನಿವಾಸಿಗಳಾದ ನಾಗಾ ಮತ್ತು ಕುಕಿ ಬುಡಕಟ್ಟು ಜನಾಂಗದವರ ನಡುವೆ ಬುಧವಾರದಿಂದ ಘರ್ಷಣೆ ನಡೆಯುತ್ತಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆಯ ಹಾಗೂ ಅಸ್ಸಾಂ ರೈಫಲ್ಸ್‍ನ ಸುಮಾರು 10,000 ಸೈನಿಕರನ್ನು ನಿಯೋಜಿಸಲಾಗಿದೆ. 1,000 ಕೇಂದ್ರೀಯ ಅರೆಸೈನಿಕ ಸಿಬ್ಬಂದಿ ನಿಯೋಜಿಸಲಾಗಿದೆ. ಗಲಭೆಯನ್ನು ನಿಯಂತ್ರಿಸಲು ರೈಲುಗಳನ್ನು ರದ್ದುಗೊಳಿಸಲಾಗಿದೆ ರೈಲ್ವೆ (Railway) ಇಲಾಖೆ ತಿಳಿಸಿದೆ.

    ಮೇಟಿ ಸಮುದಾಯ ಎಸ್‍ಟಿ ಸ್ಥಾನಮಾನದ ಬೇಡಿಕೆಯ ಕುರಿತು ನಾಲ್ಕು ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ (High Court) ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ನಂತರ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಮೆರವಣಿಗೆಯನ್ನು ಆಯೋಜಿಸಿದ್ದರು. ಟೊಬರ್ಂಗ್‍ನಲ್ಲಿ ನಡೆದ ಮೆರವಣಿಗೆಯಲ್ಲಿ ಶಸ್ತ್ರಸಜ್ಜಿತ ಜನಸಮೂಹವು ಮೇಟಿ ಸಮುದಾಯದ ಜನರ ಮೇಲೆ ದಾಳಿ ಮಾಡಿದೆ. ಇದು ಕಣಿವೆ ಜಿಲ್ಲೆಗಳಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು. ಇದು ರಾಜ್ಯದಾದ್ಯಂತ ವ್ಯಾಪಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಉನ್ನತ ಅಧಿಕಾರಿಗಳೊಂದಿಗೆ ಮಣಿಪುರದ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಖರ್ಗೆ ಹತ್ಯೆಗೆ ಬಿಜೆಪಿ ಅಭ್ಯರ್ಥಿಯಿಂದ ಸಂಚು: ಕಾಂಗ್ರೆಸ್‌ ಆಡಿಯೋ ಬಾಂಬ್‌

  • ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ: ಸತ್ಯಕ್ಕೆ ಜಯ ಎಂದ ಸೂರಜ್ ಪಂಚೋಲಿ

    ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ: ಸತ್ಯಕ್ಕೆ ಜಯ ಎಂದ ಸೂರಜ್ ಪಂಚೋಲಿ

    ಬಾಲಿವುಡ್ ನಟಿ ಜಿಯಾ ಖಾನ್ (Jiah Khan) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ತೀರ್ಪು ಬಂದಿದ್ದು, ಈ ಪ್ರಕರಣದಿಂದ ಜಿಯಾ ಬಾಯ್ ಫ್ರೆಂಡ್ ಸೂರಜ್ ಪಂಚೋಲಿಗೆ (Suraj Pancholi) ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸೂರಜ್ ಪಂಚೋಲಿಯನ್ನು ನಿರ್ದೋಷಿ ಎಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಸೂರಜ್, ‘ಸತ್ಯಕ್ಕೆ ಜಯ’ ಎಂದಿದ್ದಾರೆ. ಆದರೆ, ಈ ತೀರ್ಪಿನ ವಿರುದ್ಧ ಮತ್ತೆ ಕೋರ್ಟ್ ಮೆಟ್ಟಿಲು ಏರುವುದಾಗಿ ಜಿಯಾ ಖಾನ್ ತಾಯಿ ರಬಿಯಾ ತಿಳಿಸಿದ್ದಾರೆ.

    ಏನಿದು ಜಿಯಾ ಖಾನ್ ಸಾವಿನ ಪ್ರಕರಣ?

    ಬಾಲಿವುಡ್ ನಟಿ ಜಿಯಾ ಖಾನ್ ಸಾವಿನ ಪ್ರಕರಣ ಬಾಲಿವುಡ್ ಸಿನಿಮಾ ರಂಗದಲ್ಲಿ ಭಾರೀ ಆಘಾತ ಮೂಡಿಸಿತ್ತು. ಚಿತ್ರರಂಗದಲ್ಲಿ ಆಗ ತಾನೆ ಮಿಂಚುತ್ತಿದ್ದ ಜಿಯಾ ಏಕಾಏಕಿ 2013ರ ಜೂನ್ 3ರಂದು ಮುಂಬೈನ ಜುಹೂ ಅಪಾರ್ಟ್‍ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಈ ಸಾವಿಗೆ ಅವರ ಬಾಯ್ ಫ್ರೆಂಡ್ ಸೂರಜ್ ಪಾಂಚೋಲಿ ಕಾರಣ ಎಂದು ಹೇಳಲಾಗಿತ್ತು.

    ಜಿಯಾ ಖಾನ್ ಬರೆದ ಡೆತ್ ನೋಟ್ ಆಧರಿಸಿ ಪ್ರಿಯಕರ ಸೂರಜ್ ಪಾಂಚೋಲಿ ಮೇಲೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು. ಆನಂತರ ಜುಲೈನಲ್ಲಿ ಸೂರಜ್ ಜಾಮೀನು ಪಡೆದರು. ಜಿಯಾ ಖಾನ್ ಅವರ ತಾಯಿ ರಬಿಯಾ ನಂತರ ವಿಶೇಷ ಮನವಿ ಸಲ್ಲಿಸಿದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ಜಿಯಾ ಖಾನ್ ತಾಯಿ ರಬಿಯಾ ತಮ್ಮ ವಿರುದ್ಧ ಮಾನಹಾನಿ ಮಾಡುವಂತಹ ಕೆಲಸಗಳಿಗೆ ಕೈ ಹಾಕಿದ್ದಾರೆ ಎಂದು ಸೂರಜ್ ಪಾಂಚೋಲಿ, ಜಿಯಾ ತಾಯಿಯ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸಿದ್ದರು. ರಬಿಯಾ ನೀಡಿದ ದೂರಿನ ಮೇಲೆ ಸಿಬಿಐ ಅಧಿಕಾರಿಗಳು ಸೂರಜ್ ಮನೆಯ ಮೇಲೆ ದಾಳಿ ಮಾಡಿದರು. ನಂತರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಮತ್ತೆ ಸಪ್ಲಿಮೆಂಟರಿ ಚಾರ್ಜ್ ಶೀಟ್ ದಾಖಲಿಸಿದ್ದರು.

    ತನ್ನ ಮಗಳಿಗೆ ನ್ಯಾಯ ಸಿಗಬೇಕು ಎಂದು ಹಲವಾರು ಪ್ರಯತ್ನಗಳನ್ನು ಮಾಡಿದ್ದರು ರುಬಿಯಾ. ವಿಶೇಷ ತನಿಖಾ ದಳ ರಚಿಸುವಂತೆ ಕೋರ್ಟಿಗೆ ಮೊರೆ ಹೋದರು. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದರು. ಕೇಸ್ ವಿಚಾರಣೆ ಬೇಗ ಮುಗಿಸುವಂತೆ ಮುಂಬೈ ಕೋರ್ಟಿಗೂ ಮನವಿ ಮಾಡಿಕೊಂಡಿದ್ದರು.

    ಸೂರಜ್ ಪಾಂಚೋಲಿ ಕೂಡ ಈ ಪ್ರಕರಣದಲ್ಲಿ ಅಷ್ಟೇ ಹೋರಾಟ ಮಾಡಿದ್ದರು. ಆ ಸಾವಿಗೂ ನನಗೂ ಸಂಬಂಧವಿಲ್ಲ ಎಂದು ವಾದಿಸುತ್ತಲೇ ಬಂದರು. ಸುದೀರ್ಘ ಹತ್ತು ವರ್ಷಗಳ ನಂತರ 2023 ಏಪ್ರಿಲ್ 20 ರಂದು ಅಂತಿವ ವಾದ- ಪ್ರತಿವಾದ ಆಲಿಸಿದ್ದ ವಿಶೇಷ ನ್ಯಾಯಮೂರ್ತಿಗಳಾದ ಎ.ಎಸ್. ಸಯ್ಯದ್ ಅವರು ತೀರ್ಪು ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟವಾಗಿದೆ. ಸೂರಜ್ ಪಾಂಚೋಲಿ ಪರವಾಗಿ ಮಾನ್ಯ ನ್ಯಾಯಾಲಯ ತೀರ್ಪು ನೀಡಿದೆ.