ನವದೆಹಲಿ: ನ್ಯಾಯಾಧೀಶರ ನಿವೃತ್ತಿ ವಯಸ್ಸಿಗೆ ತಿದ್ದುಪಡಿ(Raise Retirement Age) ತರುವಂತೆ ಭಾರತೀಯ ಬಾರ್ ಕೌನ್ಸಿಲ್(Bar Council) ಕೇಂದ್ರ ಸರ್ಕಾರಕ್ಕೆ(Central Government) ಒತ್ತಾಯಿಸಿದೆ.
ನಿನ್ನೆ ನಡೆದ ಸಭೆಯಲ್ಲಿ ಹೈಕೋರ್ಟ್(High Court) ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 62 ರಿಂದ 65 ವರ್ಷಕ್ಕೆ, ಸುಪ್ರೀಂ ಕೋರ್ಟ್ನ(Supreme Court )ನ್ಯಾಯಾಧೀಶರ ನಿವೃತ್ತಿಯ ವಯಸ್ಸು 67 ವರ್ಷಕ್ಕೆ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಈ ನಿರ್ಣಯದ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರಿಗೆ ಕಳುಹಿಸಿದ್ದು, ಕ್ರಮಕ್ಕಾಗಿ ಮನವಿ ಮಾಡಿದೆ ಎಂದು ಬಿಸಿಸಿಐ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಇದು ಸರ್ಕಾರಿ ಪ್ರಾಯೋಜಿತ ಕೊಲೆ – ವಿಮ್ಸ್ ದುರಂತಕ್ಕೆ ಸಿದ್ದು ಕಿಡಿ
ಇದರ ಜೊತೆಗೆ ಅನುಭವಿ ವಕೀಲರನ್ನು ವಿವಿಧ ಆಯೋಗಗಳು ಮತ್ತು ಇತರ ವೇದಿಕೆಗಳ ಅಧ್ಯಕ್ಷರನ್ನಾಗಿ ನೇಮಿಸಲು ಹಾಗೂ ಶಾಸನಗಳನ್ನು ತಿದ್ದುಪಡಿ ಮಾಡಲು ಪರಿಗಣಿಸಲು ಸಂಸತ್ತಿಗೆ ಪ್ರಸ್ತಾಪಿಸಲು ಜಂಟಿ ಸಭೆ ನಿರ್ಧರಿಸಿದೆ ಎಂದು ಬಾರ್ ಕೌನ್ಸಿಲ್ ತಿಳಿಸಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ:ವಿಶ್ವಾದ್ಯಂತ ಹಿಜಬ್ಗೆ(Hijab) ಮಾನ್ಯತೆ ಇದೆ, ಕರ್ನಾಟಕದಲ್ಲಿ(Karnataka) ಯಾಕಿಲ್ಲ? ಹಿಜಬ್ ನಿರ್ಬಂಧಿಸುವುದು ಎಷ್ಟು ಸರಿ ಎಂದು ಹಿಜಬ್ ಪರ ವಕೀಲರು ಪ್ರಶ್ನಿಸಿದ್ದಾರೆ.
ಶಾಲೆ ಮತ್ತು ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್(High Court) ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್(Supreme Court) ವಿಚಾರಣೆಗೆ ನಡೆಸುತ್ತಿದೆ. ಕಳೆದ ಐದು ದಿನಗಳಿಂದ ನ್ಯಾ. ಹೇಮಂತ್ ಗುಪ್ತಾ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ.
ಇಂದು ಮೂವರು ವಕೀಲರು ಹಿಜಬ್ ಪರವಾಗಿ ವಾದ ಮಂಡಿಸಿದ್ದಾರೆ. ಮೊದಲು ವಾದ ಆರಂಭಿಸಿದ ಹಿರಿಯ ವಕೀಲ ಆದಿತ್ಯ ಸೋಂಧಿ, ಪ್ರಕರಣ ಬಹಳ ಗಂಭೀರವಾಗಿದೆ. ಸಾಮಾಜಿಕ – ಆರ್ಥಿಕ ಮಾನದಂಡಗಳು ಮತ್ತು ವಿದ್ಯಾರ್ಥಿಗಳು ಹಿನ್ನೆಲೆಯನ್ನು ಇಲ್ಲಿ ಪರಿಗಣಿಸಬೇಕಾಗಿದೆ. ನಾನು ಓದುತ್ತಿದ್ದ ಕಾಲೇಜಿನಲ್ಲಿ ಹಿಜಬ್ ಧರಿಸದ ಮುಸ್ಲಿಂ ಸಹಪಾಠಿಗಳು ಇದ್ದರು. ಹಿಜಬ್ ಎನ್ನುವುದು ಒಂದು ಆಯ್ಕೆಯಾಗಿದ್ದು ಅದಕ್ಕೆ ಅನುಮತಿ ನೀಡಬೇಕಿದೆ. ಕೊಡವರಿಗೆ(Kodava) ಶಸ್ತ್ರಾಸ್ತ್ರಗಳನ್ನು(Arms) ಹೊಂದುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ಈ ತೀರ್ಪು ನೀಡಿದೆ. ಧಾರ್ಮಿಕ ಹೋರಾಟ ಅಥವಾ ಸಾಂಸ್ಕೃತಿಕ ಹಕ್ಕಿನ ನಡುವಿನ ಇರುವುದು ತೆಳುವಾದ ಗೆರೆ ಮಾತ್ರ. ಇವುಗಳನ್ನು ಪ್ರತ್ಯೇಕಿಸುವುದು ಕಷ್ಟ. ಸಾರ್ವಜನಿಕ ಸುವ್ಯವಸ್ಥೆಗಾಗಿ ಹಿಜಬ್ ನಿಷೇಧಿಸಿ ಸರ್ಕಾರ ಆದೇಶ ಮಾಡಿದೆ. ಶಾಲೆಗಳಿಗೆ ಸಮವಸ್ತ್ರ ನಿರ್ಧರಿಸುವ ಅಧಿಕಾರ ನೀಡಿದೆ. ಹಿಜಬ್ ನಿಂದ ಯಾವ ಸುವ್ಯವಸ್ಥೆ ಹಾಳಾಗುತ್ತದೆ? ಹುಡುಗಿಯರು ಹಿಜಬ್ ಧರಿಸುವುದು ಸಾಮಾನ್ಯ ಎಂದರು. ಇದನ್ನೂ ಓದಿ: 200 ಕೋಟಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಹಡಗು ಗುಜರಾತ್ನಲ್ಲಿ ವಶ
ಬಳಿಕ ವಾದ ಮಂಡಿಸಿದ ಹಿರಿಯ ವಕೀಲ ರಾಜೀವ್ ಧವನ್(Rajeev Dhavan), ಉಡುಗೆ ತೊಡುಗೆಯ ಹಕ್ಕು ವಾಕ್ ಸ್ವಾತಂತ್ರ್ಯದ ಭಾಗವಾಗಿದೆ. ಇದು ಸಾರ್ವಜನಿಕ ಆದೇಶಕ್ಕೆ ಮಾತ್ರ ಒಳಪಟ್ಟಿರುತ್ತದೆ. ಈಗಾಗಲೇ ಉಲ್ಲೇಖಿಸಿರುವ ಪುಟ್ಟಸ್ವಾಮಿ ಮತ್ತು ನಲ್ಸಾ ಪ್ರಕರಣಗಳ ಆದೇಶದಂತೆ ಖಾಸಗಿತನ ಹಕ್ಕಾಗಿದೆ. ಹಿಜಬ್ ಧರಿಸಿದ ವ್ಯಕ್ತಿಯನ್ನು ಧರ್ಮ ಮತ್ತು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡಲಾಗುವುದಿಲ್ಲ ಎಂದು ವಾದಿಸಿದರು.
ಈ ಪ್ರಕರಣವನ್ನು ಅದರ ಸರಿಯಾದ ದೃಷ್ಟಿಕೋನದಲ್ಲಿ ವಿಚಾರಣೆ ನಡೆಸಬೇಕು. ಇಂದು ಬಹುಸಂಖ್ಯಾತ ಸಮುದಾಯದಲ್ಲಿ ಇಸ್ಲಾಂ ಎಂದು ಬಂದಿದ್ದನ್ನು ಹೊಡೆದುರುಳಿಸುವ ಅತೃಪ್ತಿ ಬಹಳಷ್ಟಿದೆ. ನನ್ನ ಅರ್ಜಿದಾರರು ಕಾಲೇಜಿನಲ್ಲಿದ್ದು ಹಿಜಬ್ ಧರಿಸಿಯೇ ಕರಾಟೆ ಸ್ಪರ್ಧೆಯಲ್ಲಿ ಸಾಧನೆ ಮಾಡಿದ್ದಾಳೆ. ಪ್ರಪಂಚದಾದ್ಯಂತ ಹಿಜಬ್ ಅನ್ನು ಮಾನ್ಯವೆಂದು ಗುರುತಿಸಲಾಗಿದೆ. ಇದು ಲಿಂಗ ಮತ್ತು ಧಾರ್ಮಿಕ ಹಕ್ಕುಗಳನ್ನು ನಿರ್ಧರಿಸುವ ವಿಷಯವಾಗಿದೆ ಎಂದು ಕೋರ್ಟ್ಗೆ ತಿಳಿಸಿದರು.
ಕೇಂದ್ರಿಯ ವಿದ್ಯಾಲಯಗಳಲ್ಲಿ ಹಿಜಬ್ಗೆ ಅನುಮತಿ ಇದೆ. ಅದು ಕೇಂದ್ರಿಯ ವಿದ್ಯಾಲಯಕ್ಕೆ ಸಂಬಂಧಿಸಿದ ನಿರ್ಧಾರ ಎಂದು ಅವರು ಹೇಳುತ್ತಾರೆ. ಧರ್ಮ ಮತ್ತು ಅದರ ಆಚರಣೆಗಳನ್ನು ಅಗತ್ಯ ಭಾಗಗಳಲ್ಲ ಎಂದು ಹೇಳುವ ಅಧಿಕಾರ ಹೊರಗಿನವರಿಗಿಲ್ಲ. ಅಂತವುಗಳನ್ನು ನಿಷೇಧಿಸಲು ಜಾತ್ಯಾತೀತ ಸರ್ಕಾರ ಮುಕ್ತವಾಗಿಲ್ಲ. ಲಕ್ಷಾಂತರ ಮಹಿಳೆಯರು ಸ್ಕಾರ್ಫ್ ಧರಿಸುತ್ತಿದ್ದಾರೆ. ಸಾರ್ವಜನಿಕ ಸುವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಹೇಳಲು ಏನು ಸಮರ್ಥನೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸ್ಕೂಲ್ ಬಸ್ಸಿನೊಳಗೆ ಉಸಿರುಗಟ್ಟಿ ಬಾಲಕಿ ಸಾವು ಪ್ರಕರಣ- ಶಾಲೆ ಮುಚ್ಚಲು ಆದೇಶ
ಸಮವಸ್ತ್ರ ನಿಯಮ ರೂಪಿಸುವಾಗ ಬುರ್ಖಾಗೆ ಅವಕಾಶ ನೀಡುವುದಿಲ್ಲ ಎಂದು ಹೇಳಬಹುದು. ಹಿಜಬ್ ನಿರ್ಬಂಧಿಸುವುದು ಎಷ್ಟು ಸರಿ? ಸಮವಸ್ತ್ರ ಬಣ್ಣದೇ ಹಿಜಬ್ ಧರಿಸಲಾಗುತ್ತಿದೆ ಎಂದು ವಾದ ಮಂಡಿಸಿದರು.
ಕೊಡವರಿಗೆ ವಿಶೇಷ ವಿನಾಯಿತಿ ಯಾಕೆ?
ಕೊಡಗಿನ ಜನರ ವಿಶಿಷ್ಟ ಸಂಸ್ಕೃತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯಿತಿಯ ಅನುಮತಿಯಿದೆ. ಇಂಡಿಯನ್ ಆರ್ಮ್ಸ್ ಆಕ್ಟ್ ಸೆಕ್ಷನ್ ಮೂರರ ಪ್ರಕಾರ ಯಾರಿಗೂ ಇಲ್ಲದ ಅನುಮತಿ ಕೊಡವರಿಗೆ ಇದೆ. ಕೊಡಗಿನ ಜನರ ಹಬ್ಬ ಹರಿದಿನ. ಹುಟ್ಟು, ಸಾವು ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ. ಬಂದೂಕು ಕೊಡವರಿಗೆ ಕೇವಲ ಒಂದು ಅಯುಧವಲ್ಲ, ಇದು ಇಲ್ಲಿನ ಜನರ ಧಾರ್ಮಿಕ ಸಂಕೇತ ಕೊಡವರಲ್ಲಿ ಕೋವಿಗೆ ಪೂಜ್ಯಭಾವನೆಯಿದೆ, ಪವಿತ್ರ ಸ್ಥಾನವಿದೆ.
ಸಮರ ಸಮುದಾಯವಾಗಿರುವ ಕೊಡವ ಸಮುದಾಯವು ಸ್ವಾತಂತ್ರ್ಯ ಪೂರ್ವದಿಂದಲೂ ಜುಮ್ಮಾ ಹಿಡುವಳಿದಾರರು, ಅಂದಿನಿಂದ ಅವರು ಈ ವಿನಾಯಿತಿಯ ಲಾಭವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಈಗಲೂ ಅವರಿಗೆ ಅನಿರ್ದಿಷ್ಟ ಅವಧಿಗೆ ವಿನಾಯಿತಿ ನೀಡಲಾಗಿದೆ. ಈ ವಿನಾಯಿತಿ ಕೆಲವು ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಆದ್ದರಿಂದ, ಅಧಿಸೂಚನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯಲಾಗಿದೆ ಎಂದು ಈ ಹಿಂದೆ ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಿಇಟಿ ರ್ಯಾಂಕ್ ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಇಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಮ್ಮ ನಿವಾಸದಲ್ಲಿ ಕೆಇಎ ಅಧಿಕಾರಿಗಳು, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದರು. ಸಭೆಯಲ್ಲಿ ಏಕ ಸದಸ್ಯ ಪೀಠದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಯ್ತು. ಇದನ್ನೂ ಓದಿ: ಹೈಕೋರ್ಟ್ನಿಂದ ಸಿಇಟಿ ರ್ಯಾಂಕ್ ರದ್ದು- ಮೇಲ್ಮನವಿ ಸಲ್ಲಿಸುತ್ತಾ ಸರ್ಕಾರ?
ಸಭೆ ಬಳಿಕ ಮಾತನಾಡಿದ ಸಚಿವ ಅಶ್ವಥ್ ನಾರಾಯಣ, ಎಂದೂ ಆಗದ ರೀತಿ ಈ ಬಾರಿ ಸವಾಲು ನಾವು ನೋಡ್ತಿದ್ದೇವೆ. 25 ಸಾವಿರ ರಿಪೀಟರ್ಸ್ ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಹೊಸ ವಿದ್ಯಾರ್ಥಿಗಳಿಗೆ ಇದರಿಂದ ಅನ್ಯಾಯ ಆಗದಂತೆ ನಾವು ನಿರ್ಧಾರ ಮಾಡಿದ್ವಿ. ಆದರೆ ಹೈಕೋರ್ಟ್ ರ್ಯಾಂಕ್ ರದ್ದು ಮಾಡಿದೆ. ಹೈಕೋರ್ಟ್ ಆದೇಶದ ತೀರ್ಪಿನಿಂದ 1.5 ಲಕ್ಷ ಹೊಸ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಲಿದೆ. ಹೀಗಾಗಿ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನ ಮಾಡಲಾಗಿದೆ ಎಂದರು. ಇದನ್ನೂ ಓದಿ: ಸಮವಸ್ತ್ರ ನಿರ್ಧಾರ ಶಿಕ್ಷಣ ಹಕ್ಕು ಉಲ್ಲಂಘನೆಯಲ್ಲ – ಹಿಜಬ್ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಅಭಿಪ್ರಾಯ
ಸಮಸ್ಯೆ ಬಗೆಹರಿಸಲು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಇಂದು ಅಥವಾ ನಾಳೆ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಂಡು, ದ್ವಿ-ಸದಸ್ಯ ಪೀಠಕ್ಕೆ ಹೋಗುತ್ತೇವೆ. ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದ್ದೇವೆ. ಯಾರಿಗೂ ಅನ್ಯಾಯ ಆಗದಂತೆ ಕ್ರಮಕ್ಕೆ ಮುಂದಾಗುತ್ತೇವೆ. ಎಲ್ಲವು ಸಮಯದ ಒಳಗೆ ಮುಗಿಸುತ್ತೇವೆ. ವಿದ್ಯಾರ್ಥಿಗಳಿಗೆ ಒಳ್ಳೆಯದು ಮಾಡಲು ನಾವು ಸಿದ್ದರಿದ್ದೇವೆ. ರಿಪೀಟರ್ಸ್ ವಿದ್ಯಾರ್ಥಿಗಳ ಮೇಲೆ ನಮಗೇನು ಕೋಪ ಇಲ್ಲ. ಟೆಕ್ನಕಲ್ ವಿಷಯದಿಂದ ಹೊಸ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಲಿದೆ. ಎಲ್ಲರಿಗೂ ನ್ಯಾಯ ಕೊಡುವ ಕೆಲಸ ಮಾಡಲು ಕ್ರಮ ತಗೋತೀವಿ ಅಂತ ತಿಳಿಸಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಿಇಟಿ ರ್ಯಾಂಕ್ ರದ್ದು ಮಾಡಿದ ಹೈಕೋರ್ಟ್ ತೀರ್ಪಿನ ವಿಚಾರವಾಗಿ ಚರ್ಚೆ ನಡೆಸಲು ಸೋಮವಾರ ಮಹತ್ವದ ಸಭೆಯನ್ನು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕರೆದಿದ್ದಾರೆ.
ವಿಕಾಸಸೌಧದಲ್ಲಿ ನಾಳೆ ಸಭೆ ನಡೆಸಲಿದ್ದು, ಕೆಇಎ ಅಧಿಕಾರಿಗಳು, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಹೈಕೋರ್ಟ್ ಆದೇಶದ ಕುರಿತು ಚರ್ಚೆ ನಡೆಯಲಿದೆ.
ಹೈಕೋರ್ಟ್ ಆದೇಶದಂತೆ ಹೊಸ ಸಿಇಟಿ ರ್ಯಾಂಕ್ ಘೋಷಣೆ ಮಾಡಬೇಕಾ? ಅಥವಾ ಮೇಲ್ಮನವಿ ಹೋಗಬೇಕೇ ಎಂಬುದರ ಬಗ್ಗೆ ನಾಳೆಯ ಸಭೆಯಲ್ಲಿ ಚರ್ಚೆ ಆಗಲಿದೆ. ನಾಳೆಯ ಸಭೆಯಲ್ಲಿ ಕಾನೂನು ತಜ್ಞರ ಅಭಿಪ್ರಾಯವನ್ನು ಪಡೆಯಲು ತೀರ್ಮಾನ ಮಾಡಲಾಗಿದೆ.
ಏನಿದು ಪ್ರಕರಣ?
ಕೋವಿಡ್ ಕಾರಣದಿಂದ 2020– 21ನೇ ಸಾಲಿನಲ್ಲಿ ಪಿಯು ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲಾಗಿತ್ತು. ಉತ್ತೀರ್ಣಗೊಂಡ ವಿದ್ಯಾರ್ಥಿಗಳಲ್ಲಿ ಶೇ. 90ಕ್ಕೂ ಹೆಚ್ಚು ಅಂಕ ಪಡೆದ 24 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿಯ ಎಂಜಿನಿಯರಿಂಗ್ ಕೋರ್ಸ್ಗಳಿಗೆ ನಡೆದ ಸಿಇಟಿ ಬರೆದಿದ್ದರು. ಇದನ್ನೂ ಓದಿ: ಯೋಗಿಜೀ ಇನ್ನು ಮುಂದೆ ತಪ್ಪು ಮಾಡಲ್ಲ, ಪ್ಲೀಸ್ ಕ್ಷಮಿಸಿ ಬಿಡಿ: ಗೋಳಾಡಿದ ಆರೋಪಿ
ಈ ಬಾರಿ ಪಿಯು ಪರೀಕ್ಷೆ ಬರೆದಿದ್ದ 3 ಲಕ್ಷಕ್ಕೂ ಅಧಿಕ ಮಂದಿ ಸಿಇಟಿ ಪರೀಕ್ಷೆ ಬರೆದಿದ್ದರು. ಈ ಕಾರಣಕ್ಕೆ ಸರ್ಕಾರ ಪಿಯು ಅಂಕಗಳನ್ನು ಪರಿಗಣಿಸದೇ ಕೇವಲ ಸಿಇಟಿ ಪರೀಕ್ಷೆಯ ಅಂಕಗಳನ್ನು ಮಾತ್ರ ಪರಿಗಣಿಸಿ ರ್ಯಾಂಕ್ ನೀಡಿತ್ತು. ಒಂದು ವೇಳೆ ಪುನಾರವರ್ತಿತ ವಿದ್ಯಾರ್ಥಿಗಳ ಪಿಯು ಅಂಕಗಳನ್ನು ಪರಿಗಣಿಸಿದರೆ 3 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಲಿದೆ ಎಂದು ಸರ್ಕಾರ ವಾದಿಸಿತ್ತು.
ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಪುನಾರವರ್ತಿತ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಸಿಇಟಿ-2022ರ ಮೌಲ್ಯಮಾಪನವು ಪುನರಾವರ್ತಿತ ವಿದ್ಯಾರ್ಥಿಗಳಿಗೆ ತಾರತಮ್ಯ ಎಸಗಿದೆ. ಸರ್ಕಾರದಿಂದ ನಮಗೆ ಅನ್ಯಾಯವಾಗಿದೆ ಎಂದು ಚಿಕ್ಕಮಗಳೂರಿನ ಆರ್. ಈಶ್ವರ್ ಸೇರಿದಂತೆ 50 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಲಾಗದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) 2022 ಜುಲೈ 30ರಂದು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ, 2020-21ನೇ ಸಾಲಿನಲ್ಲಿ ದ್ವಿತೀಯ ಪಿಯು ತೇರ್ಗಡೆಯಾದ ವಿದ್ಯಾರ್ಥಿಗಳು ಗಳಿಸಿದ ಶೇ.50 ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದ ಶೇ.50ರಷ್ಟು ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ್ಯಾಂಕ್ ಪಟ್ಟಿ ಪ್ರಕಟಿಸಬೇಕು ಎಂದು ಕೆಇಎಗೆ ಸೂಚಿಸಿದೆ. ಅಷ್ಟೇ ಅಲ್ಲದೇ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ನಿಯಮಗಳು-2006ರ ಅನುಸಾರ ರಿ–ಡೂ ಮಾಡಬೇಕು ಎಂದು ಕೋರ್ಟ್ ಹೇಳಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: “ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಿ. ವಿವಾದ ಇತ್ಯರ್ಥಕ್ಕೆ ಮತ್ತೆ ಹೈಕೋರ್ಟ್ಗೆ ಹೋಗಿ” – ಇದು ಸುಪ್ರೀಂ ನೀಡಿದ ಆದೇಶದ ಸಾರ.
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿಸಬೇಕಾ ಬೇಡ್ವಾ ಅನ್ನೋ ವಿಚಾರಕ್ಕೆ ಸುಪ್ರೀಂಕೋರ್ಟ್ನಲ್ಲಿ ನಡೆದ ವಿಚಾರಣೆ ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು. ಕೊನೆಗೆ ಸುಪ್ರೀಂ ಕೋರ್ಟ್ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಿ ಎಂದು ಆದೇಶ ಪ್ರಕಟಿಸಿತು.
ಚಾಮರಾಜಪೇಟೆ ಮೈದಾನದ ಗಣೇಶೋತ್ಸವ ಆಚರಣೆ ಅನುಮತಿ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಹೈಕೋರ್ಟ್ ದ್ವಿಸದಸ್ಯ ಪೀಠ ನೀಡಿದ ಆದೇಶವನ್ನು ಪ್ರಶ್ನಿಸಿ ವಕ್ಫ್ ಬೋರ್ಡ್ ಸುಪ್ರೀಂ ಮೆಟ್ಟಿಲೇರಿತ್ತು.
ಮೊದಲು ಈ ಅರ್ಜಿಯ ವಿಚಾರಣೆ ನ್ಯಾ. ಹೇಮಂತ್ ಗುಪ್ತಾ ಮತ್ತು ನ್ಯಾ. ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ಮಧ್ಯಾಹ್ನ ಸುಮಾರು ಒಂದೂವರೆ ಗಂಟೆ ಕಾಲ ವಿಚಾರಣೆ ನಡೆಯಿತು. ಆದರೆ ಗಣೇಶೋತ್ಸವಕ್ಕೆ ಅನುಮತಿಸಬೇಕಾ ಬೇಡ್ವಾ ಎಂಬ ವಿಚಾರವಾಗಿ ನ್ಯಾಯಮೂರ್ತಿಗಳಲ್ಲೇ ಭಿನ್ನ ಅಭಿಪ್ರಾಯಗಳು ವ್ಯಕ್ತವಾದ ಕಾರಣ, ಪ್ರಕರಣ ವಿಚಾರಣೆಯನ್ನು ಮುಖ್ಯ ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆ ಮಾಡಿದರು. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆ- ತಂದೆಯ ವಿರುದ್ಧ ಪೊಲೀಸ್ ಮೆಟ್ಟಿಲೇರಿದ 7ರ ಬಾಲಕ
ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್, ಈ ಪ್ರಕರಣದ ವಿಚಾರಣೆಗೆ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ, ಎಎಸ್ ಓಖಾ ಮತ್ತು ಎಂಎಂ ಸುಂದರೇಶ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವನ್ನು ರಚಿಸಿ, ತುರ್ತು ವಿಚಾರಣೆಗೆ ಸೂಚಿಸಿದ್ರು.
ಕೋರ್ಟ್ ಕಲಾಪ ಮುಗಿಯುವ ಹೊತ್ತಲ್ಲಿ ಸಂಜೆ 4.30ಕ್ಕೆ ಈ ಪೀಠ ವಿಚಾರಣೆ ನಡೆಸಿತು. ವಕ್ಫ್ ಬೋರ್ಡ್ ಪರವಾಗಿ ಹಿರಿಯ ವಕೀಲ ಕಪಿಲ್ಸಿಬಲ್, ದುಷ್ಯಂತ್ ದವೆ ಪ್ರಬಲ ವಾದ ಮಂಡಿಸಿದರು. ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಮುಕುಲ್ ರೊಹ್ಟಗಿ ವಾದ ಮಂಡಿಸಿದರು. ಸಂಜೆ 6:20ಕ್ಕೆ ಸುಪ್ರೀಂಕೋರ್ಟ್ ಯಥಾ ಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿ ಆದೇಶ ನೀಡಿತು.
ವಕ್ಫ್ ಬೋರ್ಡ್ ವಾದ ಏನು?
ಚಾಮರಾಜಪೇಟೆಯ ಈದ್ಗಾ ಮೈದಾನ 200 ವರ್ಷಗಳಿಂದ ವಕ್ಪ್ ಆಸ್ತಿಯಾಗಿದೆ, ಇಲ್ಲಿ ವರ್ಷಕ್ಕೆ ಎರಡು ಬಾರಿ ಸಾಮೂಹಿಕವಾಗಿ ನಮಾಜು ಮಾಡಲಾಗುತ್ತದೆ. ಸರ್ಕಾರದ ಹಲವು ದಾಖಲೆಗಳ ಪ್ರಕಾರ ಇಲ್ಲೂ ಸ್ಮಶಾನವೂ ಇತ್ತು. ಇಲ್ಲಿ ಬೇರೆ ಧಾರ್ಮಿಕ ಆಚರಣೆಗಳನ್ನು ಮಾಡಲು ಸಾಧ್ಯವಿಲ್ಲ. ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಇತರೆ ಅಲ್ಪಸಂಖ್ಯಾತರ ಆಚರಣೆ ಮಾಡಲು ಸಾಧ್ಯವೇ? ಅದೇ ರೀತಿ ಈದ್ಗಾದಲ್ಲಿ ಗಣೇಶ ಚತುರ್ಥಿ ಸಾಧ್ಯವಿಲ್ಲ.
ರಾಜ್ಯ ಸರ್ಕಾರದ ವಾದ ಏನು?
ಈದ್ಗಾ ಮೈದಾನ ವಕ್ಪ್ ಬೋರ್ಡ್ ಆಸ್ತಿಯಲ್ಲ, ಇದು ರಾಜ್ಯ ಸರ್ಕಾರದ ಆಸ್ತಿ. ಕಂದಾಯ ಇಲಾಖೆ ದಾಖಲೆಗಳಲ್ಲಿ ಮಕ್ಕಳ ಆಟದ ಮೈದಾನ, ಸರ್ಕಾರಿ ಜಾಗ ಎಂದು ಉಲ್ಲೇಖವಾಗಿದೆ. ಸರ್ಕಾರದ ಆಸ್ತಿಯನ್ನು ಯಾರು ಮುಟ್ಟಲು ಸಾಧ್ಯವಿಲ್ಲ. ರಾಷ್ಟ್ರೀಯ ಹಬ್ಬಗಳನ್ನು ಆಚರಿಸಲು ಕೋರ್ಟ್ ಅವಕಾಶ ನೀಡಿದೆ ಎಂದರೇ ಅದು ಸರ್ಕಾರದ ಆಸ್ತಿ ಎಂದೇ ಅರ್ಥ. ಈ ಕಾರಣಕ್ಕೆ ಹೈಕೋರ್ಟ್ ಆದೇಶದಂತೆ ಎರಡು ದಿನದ ಮಟ್ಟಿಗೆ ಗಣೇಶ ಚತುರ್ಥಿಗೆ ಅವಕಾಶ ನೀಡಬೇಕು. ತಾತ್ಕಾಲಿಕ ವ್ಯವಸ್ಥೆಯಲ್ಲಿ ಹಬ್ಬ ಆಚರಿಸಲು ಅನುಮತಿ ನೀಡಬೇಕು.
ಸುಪ್ರೀಂ ಕೇಳಿದ ಪ್ರಶ್ನೆ ಏನು?
ವಿಚಾರಣೆ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಸುಪ್ರೀಂಕೋರ್ಟ್ ಹಿಂದೆ 200 ವರ್ಷ ಹಿಂದೆ ಗಣೇಶ ಚತುರ್ಥಿ ಅಲ್ಲದೇ ಬೇರೆ ಧಾರ್ಮಿಕ ಆಚರಣೆಗಳನ್ನು ಆಚರಿಸಲಾಗಿದ್ಯಾ ಎಂದು ಪ್ರಶ್ನೆ ಮಾಡಿತು. ಇದಕ್ಕೆ ʼಇಲ್ಲʼ ಎಂದು ಉತ್ತರ ಬಂದಾಗ, ಹಬ್ಬಕ್ಕೆ ತಯಾರಿ ಮಾಡಿಕೊಂಡಿದ್ಯಾ ಎಂದು ಮರು ಪ್ರಶ್ನೆ ಹಾಕಿತು. ಇದಕ್ಕೂ ʼಇಲ್ಲʼ ಎಂದು ಉತ್ತರ ಬಂತು. ಆಸ್ತಿಯ ಬಗ್ಗೆ ಗೊಂದಲಗಳಿದೆ. ಅಲ್ಲದೇ ಧಾರ್ಮಿಕ ಸೂಕ್ಷ್ಮ ವರ್ಷದ ವಿಚಾರವೂ ಆಗಿರುವ ಹಿನ್ನಲೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಕೋರ್ಟ್ ಆದೇಶ ನೀಡಿತು. ಅಲ್ಲದೇ ಆಸ್ತಿ ಮಾಲಿಕತ್ವದ ಬಗ್ಗೆ ಹೈಕೋರ್ಟ್ ನಲ್ಲಿ ನಿರ್ಣಯ ಮಾಡಿಕೊಳ್ಳಲು ಸೂಚನೆ ನೀಡಿತು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಗಣೇಶೋತ್ಸವಕ್ಕೆ ಅನುಮತಿ ನೀಡುವ ನಿರ್ಧಾರವನ್ನು ಆಯುಕ್ತರಿಗೆ ಹೈಕೋರ್ಟ್ ನೀಡಿದೆ.
ಹುಬ್ಬಳ್ಳಿ ಪಾಲಿಕೆ ಹಿಂದೂ ಸಂಘಟನೆಗಳ ಮನವಿಯನ್ನು ಪುರಸ್ಕರಿಸಿ 3 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿತ್ತು.
ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅಂಜುಮಾನ್ ಸಂಸ್ಥೆ ಅರ್ಜಿ ಸಲ್ಲಿಸಿತ್ತು. ನ್ಯಾ.ಅಶೋಕ್ ಕಿಣಗಿ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆದು ಅಂತಿಮವಾಗಿ ಪೀಠ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ನಿರ್ಧಾರವನ್ನು ಆಯುಕ್ತರಿಗೆ ನೀಡಿ ಆದೇಶ ಪ್ರಕಟಿಸಿತು.
ಈ ಸಂದರ್ಭದಲ್ಲಿ ಹೈಕೋರ್ಟ್, ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆದೇಶ ಪ್ರಕಟವಾದ ಬಳಿಕ ಅರ್ಜಿದಾರರು ಕೋರ್ಟ್ಗೆ ಬರಬಹುದು ಎಂದು ತಿಳಿಸಿತು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಬೆಂಗಳೂರಿನ ಚಾಮರಾಜಪೇಟೆಯ ಮೈದಾನದ ಗಣೇಶೋತ್ಸವ ಪ್ರಕರಣ ಸುಪ್ರೀಂ ಕೋರ್ಟ್ ಮುಖ್ಯ ತ್ರಿಸದಸ್ಯರ ಪೀಠಕ್ಕೆ ವರ್ಗಾವಣೆ
ಹೈಕೋರ್ಟ್ ದ್ವಿಸದಸ್ಯ ಪೀಠ ಗಣೇಶೋತ್ಸವ ಆಚರಣೆ ಅನುಮತಿ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಆದೇಶ ಪ್ರಕಟಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ವಕ್ಫ್ ಬೋರ್ಡ್ ಸುಪ್ರೀಂ ಮೊರೆ ಹೋಗಿತ್ತು. ಇಂದು ನ್ಯಾ. ಹೇಮಂತ್ ಗುಪ್ತಾ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ವಕ್ಫ್ ಬೋರ್ಡ್ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಸರ್ಕಾರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.
ಎರಡು ಕಡೆಯ ವಾದ ಆಲಿಸಿದ ಜಡ್ಜ್ಗಳ ಮಧ್ಯೆ ನಡುವೆ ಭಿನ್ನಾಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶ ನೀಡಲು ಕೋರ್ಟ್ ನಿರಾಕಣೆ ಮಾಡಿತು. ಈ ಹಿನ್ನೆಲೆಯಲ್ಲಿ ಈ ಪ್ರಕರಣ ಸುಪ್ರೀಂ ಕೋರ್ಟ್ ನ್ಯಾ.ಇಂದಿರಾ ಬ್ಯಾನರ್ಜಿ, ನ್ಯಾ. ಎಎಸ್ ಒಕಾ, ನ್ಯಾ. ಎಂಎಂ ಸುಂದರೇಶ್ ಅವರ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.
ವಕ್ಫ್ ಬೋರ್ಡ್ ವಾದ ಏನು?
ಸರ್ವೆ 40 ಜಾಗ ಸಾಕಷ್ಟು ವರ್ಷಗಳಿಂದ ಬಳಕೆಯಾಗುತ್ತಿದ್ದು, ವಕ್ಫ್ ತನ್ನ ಆಸ್ತಿ ಎಂದು ಘೋಷಣೆ ಮಾಡಿದೆ. ಈಗ ವಕ್ಫ್ ತಿರ್ಮಾನವನ್ನು ಪ್ರಶ್ನೆ ಮಾಡಲಾಗುತ್ತಿದೆ. 200 ಅಧಿಕ ವರ್ಷಗಳಿಂದ ಒಂದು ಸಮುದಾಯ ಬಳಕೆ ಮಾಡುತ್ತಿದೆ.
ಇಲ್ಲಿ ಬೇರೆ ಸಮುದಾಯದವರು ಹಬ್ಬ ಆಚರಿಸುವುದು ಸರಿಯಲ್ಲ. ಇದು ಸಮಸ್ಯೆಗೆ ಕಾರಣ ಆಗಬಹುದು. ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ ಆದೇಶದ ಬೆನ್ನಲ್ಲೇ ದ್ವಿಸದಸ್ಯ ಪೀಠ ಅದರ ವಿರುದ್ಧ ಆದೇಶ ನೀಡಿದೆ. ಆದರೆ ಈದ್ಗಾ ವಕ್ಪ್ ಆಸ್ತಿಯಾಗಿದ್ದು ಮುಸ್ಲಿಂ ಸಮುದಾಯ ಇದನ್ನು ಪ್ರಾರ್ಥನೆಗೆ ಬಳಸುತ್ತಿದೆ. ವರ್ಷಕ್ಕೆ ಎರಡು ಹಬ್ಬಗಳನ್ನು ಇಲ್ಲಿ ಆಚರಣೆ ಮಾಡಲಾಗುತ್ತಿದೆ. ಬಯಲು ಜಾಗ ಎನ್ನುವ ಕಾರಣಕ್ಕೆ ಬೇಕಾದ ಹಾಗೆ ಬಳಕೆ ಮಾಡಲು ಸಾಧ್ಯವಿಲ್ಲ. ವಕ್ಫ್ ಆಸ್ತಿ ಎನ್ನುವುದಕ್ಕೆ ಎಲ್ಲಾ ದಾಖಲೆಗಳು ಇದೆ.
ಕಂದಾಯ ಅಧಿಕಾರಿಗಳು ಈ ಆಸ್ತಿ ಬಗ್ಗೆ ನಿರ್ಧರಿಸಲು ಸಾಧ್ಯವಿಲ್ಲ. ವಕ್ಪ್ ಆಸ್ತಿ ಅಲ್ಲ ಎನ್ನುವುದಾದರೆ ಅದನ್ನು ಪ್ರಶ್ನೆ ಮಾಡಬಹುದು. ಆದರೆ ಯಾರು ಇದನ್ನು ಪ್ರಶ್ನೆ ಮಾಡಿಲ್ಲ. ಹೈಕೋರ್ಟ್ ನಲ್ಲಿ ಒಂದೇ ದಿನದ ಅಂತರದಲ್ಲಿ ಹೇಗೆ ಆದೇಶಗಳು ಬದಲಾದವು? ಕರ್ನಾಟಕದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗ ಏಕಾಏಕಿ ಈ ವಿಚಾರ ಮುನ್ನಲೆಗೆ ಬಂದಿದೆ.
ಸರ್ಕಾರದ ವಾದ ಏನು?
ಎರಡು ದಿನ ಸರ್ಕಾರ ಈ ಸ್ಥಳ ಬಳಕೆ ಮಾಡಲಿದೆ. ಬಳಿಕ ಆಟದ ಮೈದಾನವಾಗಿ ಮುಂದುವರೆಯಲಿದೆ. ಭದ್ರತೆ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ಗಣೇಶ ಚತುರ್ಥಿ ಆಚರಿಸಲು ಬಳಕೆ ಮಾಡಲಾಗುತ್ತದೆ.
ವಕ್ಪ್ ಆಸ್ತಿ ಎನ್ನಲು ತೃಪ್ತಿಕರ ದಾಖಲೆಗಳಿಲ್ಲ. ಇದಕ್ಕೆ ಯಾವುದೇ ಮಾಲೀಕರು ಇಲ್ಲ. ಇದೊಂದು ಖಾಲಿ ಮೈದಾನ. 1930ರಲ್ಲಿ ಈದ್ಗಾ ಎಂದು ದಾಖಲಿಸಲಾಗಿದೆ. ಆಸ್ತಿ ಬಗ್ಗೆ ಸಿವಿಲ್ ಕೋರ್ಟ್ ನಿರ್ಧರಿಸಬೇಕು. ವಕ್ಫ್ ಬೋರ್ಡ್ ಇಲ್ಲಿಯವರೆಗೂ ಸಿವಿಲ್ ನ್ಯಾಯಾಲಯಕ್ಕೆ ಹೋಗಿಲ್ಲ. ಸರ್ಕಾರ ಹಲವು ದಾಖಲೆಗಳಲ್ಲಿ ಸರ್ಕಾರಿ ಜಾಗ, ಇನ್ನು ಕೆಲವು ದಾಖಲೆಗಳಲ್ಲಿ ಆಟದ ಮೈದಾನ ಎಂದು ದಾಖಲೆಗಳಿವೆ.
ಸುಪ್ರೀಂ ಪ್ರಶ್ನೆ
ಹಳೆಯ ಸ್ಥಳಗಳನ್ನು ಏಕಾಏಕಿ ಬದಲಿಸಲು ಸಾಧ್ಯವಿಲ್ಲ. ಈ ಬಗ್ಗೆ ಸುಪ್ರೀಂಕೋರ್ಟ್ ಈ ಹಿಂದೆ ಆದೇಶ ನೀಡಿದೆ. ಈದ್ಗಾ ಆಗಿ ಇದು ಬಹಳಷ್ಟು ವರ್ಷಗಳಿಂದ ಬಳಕೆ ಮಾಡಲಾಗುತ್ತಿದೆ. ಮೆಹ್ತಾ ನಿಮಗೆ ಈ ಕಾನೂನು ಬಗ್ಗೆ ಗೊತ್ತಿದೆ ಅಲ್ವಾ? ತುಷಾರ್ ಮೆಹ್ತಾಗೆ ನ್ಯಾಯಾಧೀಶರ ಪ್ರಶ್ನೆ ಮಾಡಿದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ವಕ್ಫ್ ಬೋರ್ಡ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ತುರ್ತು ವಿಚಾರಣೆ ನಡೆಸಿ, ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಲಾಗಿದೆ.
ಇಂದು ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಪೀಠದ ಮುಂದೆ ಅರ್ಜಿ ಸಲ್ಲಿಸಿರುವ ಬಗ್ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಪ್ರಸ್ತಾಪಿಸಿದರು. ಈ ವೇಳೆ ನ್ಯಾಯಮೂರ್ತಿ ಯು.ಯು ಲಲಿತ್ ನಾಳೆ ಬದಲಿ ಪೀಠದಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರ ಬೆಂಗಾವಲಿನಲ್ಲಿ ಮಠಕ್ಕೆ ವಾಪಸ್ಸಾಗ್ತಿದ್ದೇನೆ: ಮುರುಘಾ ಶ್ರೀ
ನವದೆಹಲಿ: ಬಿಬಿಎಂಪಿ ವ್ಯಾಪ್ತಿಯ ವಾರ್ಡ್ಗಳ ಪುನರ್ ವಿಂಗಡನೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ಮಾಡುವ ಅಧಿಕಾರ ರಾಜ್ಯ ಹೈಕೋರ್ಟ್ಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಈ ಬಗ್ಗೆ ಕೆಲವು ಪಾಲಿಕೆ ಸದಸ್ಯರು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ನಜೀರ್ ಅಹ್ಮದ್ ನೇತೃತ್ವದ ದ್ವಿ ಸದಸ್ಯ ಪೀಠ, ವಾರ್ಡ್ಗಳ ಪುನರ್ ವಿಂಗಡನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ನೀಡುವ ಅಧಿಕಾರ ಹೊಂದಿದೆ. ವಿಚಾರಣೆ ಬಳಿಕ ಚುನಾವಣೆ ಬಗ್ಗೆಯೂ ಹೈಕೋರ್ಟ್ ನಿರ್ಧರಿಸಬಹುದು ಎಂದು ಮೌಖಿಕ ಆದೇಶ ನೀಡಿದೆ. ಇದನ್ನೂ ಓದಿ: ಆರಗ, VVIP ವ್ಯಕ್ತಿಗಳಿಗೆ ನಿವೇಶನ – ಬಿಡಿಎ ಆಯುಕ್ತರ ವರ್ಗಾವಣೆಗೆ ಸುಪ್ರೀಂ ಸೂಚನೆ
ಸದ್ಯ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿರುವ ಎಂ. ಶಿವರಾಜು ಮೂಲ ಪ್ರಕರಣವನ್ನು ಹಾಗೇ ಉಳಿಸಿಕೊಳ್ಳಲಿದ್ದು ಎಂಟು ವಾರಗಳ ಬಳಿಕ ಪಟ್ಟಿ ಮಾಡಲಿದ್ದು ಆಕ್ಷೇಪಣೆಗಳಿದ್ದಲ್ಲಿ ಅಂದು ಗಮನಕ್ಕೆ ತರಬಹುದು ಎಂದು ಕೋರ್ಟ್ ಹೇಳಿದೆ.
ವಾರ್ಡ್ ಪುನರ್ ವಿಂಗಡನೆ ಪ್ರಶ್ನಿಸಿ ಹಲವು ಪಾಲಿಕೆ ಸದಸ್ಯರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣ ಸುಪ್ರೀಂಕೋರ್ಟ್ನಲ್ಲಿದ್ದ ಕಾರಣ ವಿಚಾರಣೆ ನಡೆಸಲು ಸುಪ್ರೀಂ ಅನುಮತಿ ಬೇಕು ಎಂದು ಹೈಕೋರ್ಟ್ ಹೇಳಿತ್ತು. ಈ ಹಿನ್ನೆಲೆಯಲ್ಲಿ ಕೆಲವು ಅರ್ಜಿದಾರರು ಸುಪ್ರೀಂಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದಕ್ಕೂ ಮುನ್ನ ಸುಪ್ರೀಂಕೋರ್ಟ್ ಎಂಟು ವಾರಗಳಲ್ಲಿ, ಮತ್ತೊಮ್ಮೆ ಒಂದು ವಾರದಲ್ಲಿ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಭಾರೀ ವಿವಾದ ಎಬ್ಬಿಸಿದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಲು ರಾಜ್ಯ ಹೈಕೋರ್ಟ್ ನೀಡಿದ ಆದೇಶದ ಬೆನ್ನಲ್ಲೇ ಚಾಮರಾಜಪೇಟೆ ನಾಗರೀಕರ ಒಕ್ಕೂಟದ ಖಜಾಂಚಿ ಯಶವಂತ್ ಕಣ್ಣೀರಿಟ್ಟಿದ್ದಾರೆ.
ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜಕೀಯ ಷಡ್ಯಂತ್ರ ಮಾಡಲಾಗುತ್ತಿದೆ. ಸೆ.23ಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ. ಮುಂದಿನ ದಿನಗಳಲ್ಲಿ ನಮಗೆ ಜಯ ಸಿಗುತ್ತೆ ಅನ್ನೋ ಭರವಸೆಯಿದೆ. ಗಣೇಶೋತ್ಸವಕ್ಕೆ ಅವಕಾಶ ಸಿಗುತ್ತೆ ಅಂದುಕೊಂಡಿದ್ದೆವು. ನಾವು ಇದುವರೆಗೂ ಮುಸ್ಲಿಮರಿಗೆ ತೊಂದರೆ ಕೊಟ್ಟಿಲ್ಲ. ಆದರೆ ನಮ್ಮ ಗಣೇಶೋತ್ಸವಕ್ಕೆ ಯಾಕೆ ಇಷ್ಟೊಂದು ತೊಂದರೆ ಕೊಡುತ್ತಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕಿಲ್ಲ ಅವಕಾಶ – ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ
ಗಲಭೆ ಎಬ್ಬಿಸೋಕೆ ಅವರೇ ಹೀಗೆ ಮಾಡುತ್ತಿದ್ದಾರೆ. ಅವರು ಹಬ್ಬ ಮಾಡಿದಾಗ ನಾವು ಏನಾದ್ರೂ ತೊಂದರೆ ಮಾಡಿದ್ವಾ..? ನಮ್ಮ ಆಚರಣೆಗಳಿಗೆ ಯಾಕೆ ತೊಂದ್ರೆ ಕೊಡುತ್ತಿದ್ದಾರೆ. ದಾಖಲೆಗಳಿಲ್ಲದಿದ್ದರೂ ವಕ್ಫ್ ಬೋರ್ಡ್ ಮತ್ತೆ ಕೇಸ್ ಹಾಕಿದ್ದಾರೆ. ನಮಗೆ ಜಯ ಸಿಕ್ಕೇ ಸಿಗುತ್ತೆ. ಮೈದಾನ ವಿಚಾರವಾಗಿ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ ಎಂದು ಕಣ್ಣೀರಿಟ್ಟರು.
Live Tv
[brid partner=56869869 player=32851 video=960834 autoplay=true]