Tag: high court

  • ಭಾರತ ಹಿಂದೂ ರಾಷ್ಟ್ರವಲ್ಲ, ಮುಸ್ಲಿಂ ರಿಪಬ್ಲಿಕ್ ಕೂಡಾ ಅಲ್ಲ ಜಾತ್ಯಾತೀತ ರಾಷ್ಟ್ರ – ಹಿಜಬ್ ಬಿಡಲು ಸಾಧ್ಯವಿಲ್ಲ

    ಭಾರತ ಹಿಂದೂ ರಾಷ್ಟ್ರವಲ್ಲ, ಮುಸ್ಲಿಂ ರಿಪಬ್ಲಿಕ್ ಕೂಡಾ ಅಲ್ಲ ಜಾತ್ಯಾತೀತ ರಾಷ್ಟ್ರ – ಹಿಜಬ್ ಬಿಡಲು ಸಾಧ್ಯವಿಲ್ಲ

    ಬೆಂಗಳೂರು: ಭಾರತ ಹಿಂದೂ ರಾಷ್ಟ್ರವಲ್ಲ, ಮುಸ್ಲಿಂ ರಿಪಬ್ಲಿಕ್ ಕೂಡಾ ಅಲ್ಲ. ಇದು ಜಾತ್ಯಾತೀತ ರಾಷ್ಟ್ರ ಇದು ನಮ್ಮ ಜೀವನ ಮರಣದ ಪ್ರಶ್ನೆ. ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಪ್ರಶ್ನೆ ಹಾಗಾಗಿ ಹಿಜಬ್ ಬಿಡಲು ಸಾಧ್ಯವಿಲ್ಲ ಎಂದು ಅರ್ಜಿದಾರರ ಪರ ವಕೀಲ ಎ,ಎಂ.ಧರ್ ವಾದ ಮಂಡಿಸಿದ್ದಾರೆ.

    ಹಿಜಬ್ ವಿವಾದ ಸಂಬಂಧ ಇವತ್ತು 10ನೇ ದಿನ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ಜೆಎಮ್ ಖಾಜಿ ನೇತೃತ್ವದ ಹೈಕೋರ್ಟ್ ಪೂರ್ಣಪೀಠದಲ್ಲಿ ವಿಚಾರಣೆ ನಡಿಯಿತು. ಇದನ್ನೂ ಓದಿ: ಕೇಸರಿ ಶಾಲು, ಹಿಜಬ್ ತೆಗೆಸಿದಂತೆ ಟರ್ಬನ್ ತೆಗೆಸಿ – ರಾಜಧಾನಿಯಲ್ಲಿ ಟರ್ಬನ್ ಸಂಘರ್ಷ

    ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎ.ಎಂ.ಧರ್, ಕುರಾನ್‍ನಲ್ಲಿ ಇರುವಂತೆ ಹಿಜಬ್ ಅತ್ಯಂತ ಪವಿತ್ರ ಮತ್ತು ಕಡ್ಡಾಯ. ಕ್ರೈಸ್ತ ಧರ್ಮದಲ್ಲೂ ಕೂಡ ತಲೆಯ ಮೇಲೆ ಬಟ್ಟೆ ಹಾಕಿಕೊಳ್ಳುವ ಕ್ರಮವಿದೆ. ಕುರಾನ್‍ನಲ್ಲಿ ತಿಳಿಸಿರುವಂತೆ ಮಹಿಳೆಯರು ತಲೆ ಕೂದಲು ಮತ್ತು ಎದೆ ಭಾಗವನ್ನು ಮುಚ್ಚುಕೊಳ್ಳುವುದು ಅನಿವಾರ್ಯ ಹಾಗಾಗಿ ನಾವು ಇದೀಗ ಬರೀ ಹಿಜಬ್‍ಗೆ ಅವಕಾಶ ಕೇಳುತ್ತಿದ್ದೇವೆ ಬುರ್ಖಾ ಧರಿಸಲು ಅಲ್ಲ. ಈ ಬಗ್ಗೆ ಕೋರ್ಟ್ ಸೂಕ್ಷ್ಮವಾಗಿ ಪರಿಗಣಿಸಿ ತೀಪು ಕೋಡಬೇಕಾಗಿ ಕೇಳಿಕೊಂಡರು.

    ಬಳಿಕ ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲೆ ಕೀರ್ತಿ ಸಿಂಗ್ ಹಿಜಬ್ ಧರಿಸುವುದು ಮೂಲಭೂತ ಹಕ್ಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಬಾರದು ಎಂದು ವಾದ ಮಂಡಿಸಿದರು. ಬಳಿಕ ದೇವದತ್ ಕಾಮತ್ ವಾದ ಮಂಡಿಸಿ ಹಿಜಬ್ ಇಸ್ಲಾಂನಲ್ಲಿ ಅತ್ಯಗತ್ಯ, ಹೀಗಾಗಿ ವಿದ್ಯಾರ್ಥಿನಿಯರಿಗೆ ಅವಕಾಶ ಮಾಡಿಕೊಡಬೇಕು. ಅವರ ಶೈಕ್ಷಣಿಕ ಹಕ್ಕನ್ನು ರಕ್ಷಿಸಬೇಕಾಗಿದೆ ಎಂದರು. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ; ಗಗನಕ್ಕೇರಿದ ತೈಲ, ಚಿನ್ನದ ಬೆಲೆ – ಭಾರತದ ಶೇರು ಮಾರುಕಟ್ಟೆಯಲ್ಲಿ ತಲ್ಲಣ

    ಹೈಕೋರ್ಟ್ ಸೂಚನೆ ಮೇರೆಗೆ ಮುಚ್ಚಿದ ಲಕೋಟೆಯಲ್ಲಿ ಸಿಎಫ್‍ಐ ಕುರಿತ ವರದಿಯನ್ನು ಅಡ್ವೋಕೇಟ್ ಜನೆರಲ್ ಕೋರ್ಟ್‍ಗೆ ಸಲ್ಲಿಸಿದ್ದಾರೆ. ಮೊನ್ನೆಯ ವಿಚಾರಣೆ ವೇಳೆ ಹಿಜಬ್ ವಿವಾದಕ್ಕೆ ಸಿಎಫ್‍ಐ ಕಾರಣ ಎಂದು ಸರ್ಕಾರ ದೂಷಿಸಿತ್ತು. ಹೀಗಾಗಿ ಸಿಎಫ್‍ಐ ಚಟುವಟಿಕೆಗಳ ಬಗ್ಗೆ ಗುಪ್ತಚರ ಮಾಹಿತಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನ್ಯಾಯಪೀಠ ಸೂಚಿಸಿತ್ತು. ಶುಕ್ರವಾರ ವಿಚಾರಣೆ ಪೂರ್ಣಗೊಳಿಸುವುದಾಗಿ ನ್ಯಾಯಪೀಠ ತಿಳಿಸಿದ್ದು, ಉಳಿದ ಅರ್ಜಿಗಳ ವಿಚಾರಣೆಯನ್ನು ನಾಳೆ ನಡೆಸುವುದಾಗಿ ತಿಳಿಸಿದೆ.

  • ಸಾರ್ವಜನಿಕ ಸ್ಥಳದಲ್ಲಿ ನಾವು ಹಿಜಬ್ ತೆಗೆಯೋದಿಲ್ಲ ಹೇಳಿಕೆ ಸುಳ್ಳು – ಆಧಾರ್ ಕಾರ್ಡ್‍ನಲ್ಲಿ ಹಿಜಬ್ ಧರಿಸಿಲ್ಲ

    ಸಾರ್ವಜನಿಕ ಸ್ಥಳದಲ್ಲಿ ನಾವು ಹಿಜಬ್ ತೆಗೆಯೋದಿಲ್ಲ ಹೇಳಿಕೆ ಸುಳ್ಳು – ಆಧಾರ್ ಕಾರ್ಡ್‍ನಲ್ಲಿ ಹಿಜಬ್ ಧರಿಸಿಲ್ಲ

    ಬೆಂಗಳೂರು: ಹಿಜಬ್ ವಿವಾದಕ್ಕೆ ಸಿಎಫ್‍ಐ ಸಂಘಟನೆಯೇ ಕಾರಣ ಅಂತ ಕಾಲೇಜ್ ಶಿಕ್ಷಕರ ಪರ ವಾದ ಮಾಡುತ್ತಿರುವ ವಕೀಲ ನಾಗಾನಂದ್ ವಾದಿಸಿದ್ದಾರೆ.

    ಹೈಕೋರ್ಟ್‍ನಲ್ಲಿ 9ನೇ ದಿನದ ಹಿಜಬ್ ವಿವಾದ ವಿಚಾರಣೆ ನಡೆಯಿತು. ಸಾರ್ವಜನಿಕ ಸ್ಥಳದಲ್ಲಿ ನಾವು ಹಿಜಜ್ ತೆಗೆಯೋದಿಲ್ಲ ಅನ್ನೋ ವಿದ್ಯಾರ್ಥಿನಿಯರ ಹೇಳಿಕೆಯೇ ಸುಳ್ಳು. ಆಧಾರ್ ಕಾರ್ಡ್‍ನಲ್ಲಿ ಅವರು ಹಿಜಬ್ ಹಾಕಿಲ್ಲ ಅಂತ ವಕೀಲರು ತೋರಿಸಿದರು. 2014ರಿಂದ ಸಮವಸ್ತ್ರ ಹಾಕಿಕೊಂಡು ಬರುತ್ತಿದ್ದಾರೆ. 2021ರ ಡಿ.30 ರಂದು ಸಿಎಫ್‍ಐನವರು ಹಿಜಬ್‍ಗೆ ಅವಕಾಶ ಕೊಡಿ ಅಂತ ಆಡಳಿತ ಮಂಡಳಿಗೆ ಕೇಳಿಕೊಂಡರು. ಇದನ್ನು ಆಡಳಿತ ಮಂಡಳಿ ತಿರಸ್ಕರಿಸಿತು. ಅಂದಿನಿಂದ ವಿದ್ಯಾರ್ಥಿನಿಯರು ಕಟುವಾಗಿ ನಡೆದುಕೊಳ್ಳುತ್ತಿದ್ದಾರೆ. ಸಿಎಫ್‍ಐ ವಿದ್ಯಾರ್ಥಿ ಸಂಘಟನೆ ಆದರೂ ಅಧಿಕೃತ ಮಾನ್ಯತೆ ಪಡೆದಿಲ್ಲ. ಬರೀ ಗದ್ದಲವನ್ನೇ ಸೃಷ್ಟಿಸ್ತಿದೆ ಎಂದು ನಾಗಾನಂದ್ ವಾದಿಸಿದರು. ಇದನ್ನೂ ಓದಿ: ಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆ ಮುಂದೂಡಿ – ಹಿಜಬ್ ಹೋರಾಟಗಾರ್ತಿಯರು

    ಇದ್ದಕ್ಕಿದ್ದಂತೇ ಇದು ಹೇಗೆ ಸೃಷ್ಟಿಯಾಯಿತು ಅಂತ ಅಚ್ಚರಿ ಸೂಚಿಸಿದ ಸಿಜೆ ಅವಸ್ತಿ, ಸಿಎಫ್‍ಐ ಬಗ್ಗೆ ಮಾಹಿತಿ ಕೊಡುವಂತೆ ಎಜಿಗೆ ಸೂಚಿಸಿದರು. ಮುಚ್ಚಿದ ಲಕೋಟೆಯಲ್ಲಿ ಮಾಹಿತಿ ಕೊಡೋದಾಗಿ ಎಜಿ ನಾವದಗಿ ತಿಳಿಸಿದರು. ಇದಕ್ಕೆ ಅರ್ಜಿದಾರರ ವಕೀಲ ತಾಹೀರ್ ಮಧ್ಯಪ್ರವೇಶಿಸಿ, ಘಟನೆಗೆ ಕೇಸರಿ ಶಾಲು ಹಂಚಿದ ವರದಿಗಳೂ ಇವೆ. ಅದರ ಬಗ್ಗೆಯೂ ಕೇಳಬೇಕು ಅಂದ್ರು. ಪರಿಶೀಲಿಸುವುದಾಗಿ ಸಿಜೆ ಹೇಳಿದರು. ಇದನ್ನೂ ಓದಿ: ಹಿಜಬ್ ಹೋರಾಟಗಾರ್ತಿ ಅಣ್ಣನ ಮೇಲೆ ಹಲ್ಲೆ

    ಕಾಲೇಜು ಆಡಳಿತ ಪರವಾಗಿ ಸಜ್ಜನ್ ಪೂವಯ್ಯ ವಾದ ಮಂಡಿಸಿ, 2014ರಲ್ಲಿ ಸಿಡಿಸಿಗೆ ಅಧಿಕಾರ ನೀಡಲಾಗಿದೆ. 5 ಮಕ್ಕಳಿಗೆ ಮಾತ್ರ ಸಮಸ್ಯೆ ಆಗಿದೆ. ಉಡುಪಿ ಜಿಲ್ಲೆಯಲ್ಲಿ 12 ಸರ್ಕಾರಿ ಶಾಲೆಗಳಿದ್ದು ಅಲ್ಲಿ ಹಿಜಬ್‍ಗೆ ಅವಕಾಶ ನೀಡಲಾಗಿದೆ. ಈ ನಿರ್ಧಾರವನ್ನು ಆಯಾ ಶಾಲಾ ಆಡಳಿತ ಮಂಡಳಿಗಳೇ ನಿರ್ಧಾರ ಮಾಡಿವೆ ಎಂದರು. ವಾದ ಆಲಿಸಿದ ಹೈಕೋರ್ಟ್ ಪೂರ್ಣ ಪೀಠ ನಾಳೆ ಮಧ್ಯಾಹ್ನಕ್ಕೆ ಮುಂದೂಡಿತು. ಅಲ್ಲದೆ, ಹಿಜಬ್ ಕುರಿತ ಅಂತಿಮ ಆದೇಶದವರೆಗೆ `ಎಲ್ಲೆಲ್ಲಿ ಸಮವಸ್ತ್ರ ಪಾಲನೆ ಕಡ್ಡಾಯ ಇದೆಯೋ ಅಲ್ಲಿ ಸಮವಸ್ತ್ರ’ವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಕಡ್ಡಾಯವಿಲ್ಲದ ಕಡೆ ಯಾವುದೇ ತೊಂದರೆ ಇಲ್ಲ ಅಂತ ಸಿಜೆ ರಿತುರಾಜ್ ಅವಸ್ತಿ ನೇತೃತ್ವದ ತ್ರಿಸದಸ್ಯ ಪೀಠ ಮತ್ತೊಮ್ಮೆ ಸ್ಪಷ್ಟಪಡಿಸಿತು.

  • ಕಡ್ಡಾಯ ಮಾಡಬಾರದು, ಹಿಜಬ್ ಧರಿಸುವುದು ಮಹಿಳೆಯರ ಆಯ್ಕೆಗೆ ಬಿಡಬೇಕು: ಸರ್ಕಾರ

    ಕಡ್ಡಾಯ ಮಾಡಬಾರದು, ಹಿಜಬ್ ಧರಿಸುವುದು ಮಹಿಳೆಯರ ಆಯ್ಕೆಗೆ ಬಿಡಬೇಕು: ಸರ್ಕಾರ

    ಬೆಂಗಳೂರು: ಹೈಕೋರ್ಟ್ ಪೂರ್ಣ ಪೀಠದಲ್ಲಿ 8ನೇ ದಿನವೂ ಹಿಜಬ್ ಅರ್ಜಿ ವಿಚಾರಣೆ ಸಂಬಂಧ ಕಾವೇರಿದ ವಾದ ನಡಿಯಿತು. ಇಂದು ಸರ್ಕಾರದ ಪರ ವಕೀಲರು ತಮ್ಮ ವಾದವನ್ನು ಮುಕ್ತಾಯಗೊಳಿಸಿದರು.

    ರಾಜ್ಯದಲ್ಲಿ ಎಲ್ಲಿಯೂ ಹಿಜಬ್‍ಗೆ ನಿರ್ಬಂಧವಿಲ್ಲ. ಆದ್ರೆ, ಅದು ಕಡ್ಡಾಯವಾಗಬಾರದು. ಅದನ್ನು ಸಂಬಂಧಿಸಿದ ಮಹಿಳೆಯರ ಆಯ್ಕೆಗೆ ಬಿಡಬೇಕು ಎಂದು ಸರ್ಕಾರದ ಪರ ಅಡ್ವೊಕೇಟ್ ಜನರಲ್ ನಾವದಗಿ ವಾದ ಮಂಡಿಸಿದ್ರು. ನಾವದಗಿಯವರು, ಕುರಾನ್ ಪತ್ರಿಯನ್ನು ನ್ಯಾಯಮೂರ್ತಿಗಳಿಗೆ ನೀಡಿ, ಮಹಿಳೆಯರು ತಮ್ಮ ಸೌಂದರ್ಯ ಅನ್ನು ತೋರಿಸಬಾರದು. ತಮ್ಮ ಬಳಿ ಇರುವ ದಪ್ಪಟ್ಟದಲ್ಲೇ ತನ್ನ ಸೌಂದರ್ಯ ಮುಚ್ಚಬೇಕು. ಸುರಾ 33 ವಚನ 55ರಲ್ಲಿ ಅಲ್ಲಿ ಈ ರೀತಿ ಉಲ್ಲೇಖ ಇದೆ ಎಂದು ಎಜಿ ಹೇಳಿದರು. ಇದನ್ನೂ ಓದಿ: ಹಿಜಬ್ ವಿವಾದ: ಕೊಡಗಿನ ವಿವಿಧ ಪದವಿ ಕಾಲೇಜಿನ 94 ವಿದ್ಯಾರ್ಥಿನಿಯರು ಗೈರು

    ಫ್ರಾನ್ಸ್‍ನಲ್ಲಿ ಹಿಜಬ್ ಸಂಪೂರ್ಣ ನಿಷೇಧವಾಗಿದೆ. ಹಿಜಬ್ ಇಲ್ಲದಯೇ ಇಸ್ಲಾಂ ಉಳಿಯಬಹುದು. ಮಸೀದಿಯಲ್ಲಿ ನಮಾಜ್ ಮಾಡುವುದು ಮೂಲಭೂತ ಹಕ್ಕಲ್ಲ. ಬಾಬ್ರಿ ಮಸೀದಿ ಕೇಸ್‍ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಧರ್ಮದ ಮೂಲಭೂತ ಆಚರಣೆಗಷ್ಟೇ ಧಾರ್ಮಿಕ ಹಕ್ಕಿನಲ್ಲಿ ರಕ್ಷಣೆ ಇದೆ. ನಮಾಜ್‍ಗೆ ಮಸೀದಿ ಅವಿಭಾಜ್ಯ ಅಲ್ಲ. ನಮಾಜ್ ಅನ್ನು ಎಲ್ಲಿ ಬೇಕಾದ್ರೂ ಸಲ್ಲಿಸಬಹುದು. ನಮ್ಮ ದೇಶದಲ್ಲಿ ಹಿಜಬ್ ಧರಿಸೋದು ಪ್ರಮುಖ ಅಲ್ಲ. ಶಿಸ್ತು ಅನ್ನುವ ಜಾಗದಲ್ಲಿ ಕೆಲವೊಂದು ತಡೆ ನೀಡಲಾಗಿದೆ ಎಂದು ವಾದಿಸಿದರು. ಇದನ್ನೂ ಓದಿ: ಹಿಜಬ್ ಹೋರಾಟಗಾರ್ತಿ ಅಣ್ಣನ ಮೇಲೆ ಹಲ್ಲೆ

    ಹಿಜಬ್ ಧರಿಸೋದು ಕೂಡ ಮಹಿಳೆಯರ ಆಯ್ಕೆ ಆಗಿರಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ಇದೆಲ್ಲ ಬರಬೇಕು. ಕೋರ್ಟ್ ಮೆಟ್ಟಿಲೇರಿದವರು ಶಿಕ್ಷಣ ಕಾಯ್ದೆಯನ್ನು ಪ್ರಶ್ನೆ ಮಾಡಿಲ್ಲ. ಶಿಕ್ಷಣ ಕಾಯ್ದೆ ಹೇಳೋದು ಸಮವಸ್ತ್ರವನ್ನು ಧರಿಸಬೇಕೆಂದು. ಜಾತ್ಯಾತೀತ ಮನೋಭಾವ ಬೆಳೆಸಬೇಕು ಎಂಬುದು ಸಮವಸ್ತ್ರದ ಉದ್ದೇಶ ಎಂದು ವಾದ ಮಂಡಿಸಿದರು.

    ಮಹಿಳೆಯರು ಇಚ್ಚಿಸುವ ಬಟ್ಟೆಗಳನ್ನು ತೊಡುವ ಅಧಿಕಾರ ಇದೆ. ಆದ್ರೆ, ಅದನ್ನು ಬಿಟ್ಟು ಒತ್ತಾಯಪೂರ್ವಕವಾಗಿ ಹೇರಬಾರದು. ಹಿಜಬ್‍ಗೆ ಎಲ್ಲೂ ಕೂಡ ನಿಷೇಧ ಹೇರಿಲ್ಲ. ಆದರೆ ಹಿಜಬ್ ಕಡ್ಡಾಯವಾಗಲು ಸಾಧ್ಯವಿಲ್ಲ. ಹಿಜಬ್ ಧರಿಸಲು ಆಯಾಯ ಮಹಿಳೆಯ ಆಯ್ಕೆಗೆ ಬಿಡಬೇಕು. ಅಲ್ಪಸಂಖ್ಯಾತ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಲ್ಲ. ಮಹಿಳೆಯ ಘನತೆ, ಗೌರವಗಳ ಬಗ್ಗೆ ನಾವು ಯೋಚನೆ ಮಾಡಬೇಕು ಎಂದರು.

    ಸದ್ಯ ಸರ್ಕಾರದ ಪರವೂ ವಾದ ಮುಗಿದ್ದು, ಈ ವಾರದೊಳಗೆ ಹಿಜಬ್ ವಿವಾದಕ್ಕೆ ಇತ್ಯರ್ಥ ಹಾಡಲು ನ್ಯಾಯಪೀಠ ಬಯಸಿದೆ.

  • ಹಿಜಬ್‌ ವಿವಾದ – ಶೀರೂರು ಮಠ, ಶಬರಿ ಮಲೆ, ತ್ರಿವಳಿ ತಲಾಖ್‌ ಪ್ರಕರಣ ಪ್ರಸ್ತಾಪಿಸಿ ಎಜಿ ವಾದ

    ಹಿಜಬ್‌ ವಿವಾದ – ಶೀರೂರು ಮಠ, ಶಬರಿ ಮಲೆ, ತ್ರಿವಳಿ ತಲಾಖ್‌ ಪ್ರಕರಣ ಪ್ರಸ್ತಾಪಿಸಿ ಎಜಿ ವಾದ

    ಬೆಂಗಳೂರು: ಶೀರೂರು ಮಠ, ಶಬರಿ ಮಲೆ, ತ್ರಿವಳಿ ತಲಾಕ್‌ ಪ್ರಕರಣವನ್ನು ಪ್ರಸ್ತಾಪಿಸಿ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದಾರೆ.

    ಹಿಜಬ್ ವಿವಾದ ಸಂಬಂಧ ಏಳನೇ ದಿನದ ವಿಚಾರಣೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ,ನ್ಯಾ.ಕೃಷ್ಣ ದೀಕ್ಷಿತ್‌, ನ್ಯಾ. ಖಾಜಿ ಜೈಬುನ್ನೀಸಾ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು.

    ಇವತ್ತು ಕೂಡ ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್ ವಾದ ಮಂಡನೆ ಮಾಡಿದರು. ಶಿಕ್ಷಣ ಸಂಸ್ಥೆಗಳು ಹಿಜಬ್‍ಗೆ ಅನುಮತಿ ನೀಡಿದರೆ ನಿಮ್ಮ ಅಭ್ಯಂತರವಿಲ್ಲವೇ? ಹಿಜಬ್ ಬಗ್ಗೆ ಸರ್ಕಾರದ ನಿಲುವೇನು ಎಂದು ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಪೂರ್ಣ ಪೀಠ ಪ್ರಶ್ನಿಸಿತು.

    ಇದಕ್ಕೆ ಉತ್ತರಿಸಿದ ಎಜಿ ನಾವದಗಿ, ಸರ್ಕಾರ ಹಿಜಬ್‍ಗೆ ನಿರ್ಬಂಧ ಹೇರಿಲ್ಲ. ಈ ವಿಚಾರದಲ್ಲಿ ಮೂಗು ತೂರಿಸಿಲ್ಲ. ಕಾಲೇಜಿನಲ್ಲಿ ಸಮಾನತೆ ಸ್ಥಾಪಿಸುವುದು ಕರ್ನಾಟಕ ಶಿಕ್ಷಣ ಕಾಯ್ದೆಯ ಪ್ರಮುಖ ಧ್ಯೇಯವಾಗಿದೆ. ಇಲ್ಲಿ ನಾವು ನಿರ್ಬಂಧಿಸಿಯೇ ಇಲ್ಲ, ಅದು ಕಾಲೇಜು ಅಭಿವೃದ್ಧಿ ಸಮಿತಿ(ಸಿಡಿಸಿ) ನಿರ್ಧಾರಕ್ಕೆ ಬಿಟ್ಟಿದ್ದೇವೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ನ್ಯಾಯಪೀಠ, ಸಿಡಿಸಿಗಳು ಶಾಸನಬದ್ಧ ಮಂಡಳಿಗಳಿಲ್ಲ. ಸಿಡಿಸಿ ಸಮವಸ್ತ್ರ ನಿರ್ಧರಿಸುತ್ತದೆ ಎಂದು ನೀವು ಹೇಳುತ್ತಿದ್ದೀರಿ. ಅವರು ಏನು ಮಾಡಿದ್ದಾರೆ ಎಂಬುದನ್ನು ನಾವು ಪರಿಶೀಲಿಸಬೇಕೇ? ಸಿಡಿಸಿಗಳು ಶಾಸನಬದ್ಧ ಸಂಸ್ಥೆಗಳಲ್ಲವಾದ್ದರಿಂದ ನ್ಯಾಯಾಲಯದ ಆದೇಶದಿಂದ ಅವುಗಳನ್ನು ನಿಯಂತ್ರಿಸಬಹುದೇ ಎಂದು ಪ್ರಶ್ನಿಸಿತು.  ಇದನ್ನೂ ಓದಿ: ಹಿಜಬ್ ವಿವಾದದ ನಡುವೆ ಮೈಸೂರು ಪ್ಯಾಲೇಸ್‍ನಲ್ಲಿ ನಮಾಜ್

    ಧಾರ್ಮಿಕ ಸಂಕೇತಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ಬಳಕೆ ಮಾಡಬಾರದು ಎಂಬುದು ಸರ್ಕಾರದ ನಿಲುವು. ಆದರೆ ಯಾವುದನ್ನು ಧಾರ್ಮಿಕ ಸಂಕೇತ ಎಂದು ಪರಿಗಣಿಸಬೇಕು. ಯಾವುದನ್ನು ಪರಿಗಣಿಸಬಾರದು ಎಂಬುದನ್ನು ಶಿಕ್ಷಣ ಸಂಸ್ಥೆಗಳಿಗೆ ಬಿಡಲಾಗಿದೆ ಎಂದು ನಾವದಗಿ ಉತ್ತರಿಸಿದರು.

    ನಮ್ಮ ಪ್ರಕಾರ ಹಿಜಬ್ ಮುಸ್ಲಿಮ್ ಧರ್ಮದ ಮೂಲಭೂತ ಆಚರಣೆ ಅಲ್ಲ. ಸಮವಸ್ತ್ರಕ್ಕೆ ಧಾರ್ಮಿಕತೆಯನ್ನು ಬೆರೆಸುವುದು ಸರಿಯಲ್ಲ ಎಂದು ನಾವದಗಿ ಮತ್ತೊಮ್ಮೆ ಅಭಿಪ್ರಾಯಪಟ್ಟರು. ಧಾರ್ಮಿಕ ಕಟ್ಟುಪಾಡುಗಳನ್ನು ಪಾಲಿಸದಿದ್ದರೆ ಇಡೀ ಧರ್ಮವೇ ನಾಶವಾಗುತ್ತಾ? ಸಂಪೂರ್ಣ ವಿವಾದವೇ ಹಿಜಬ್ ಕುರಿತಾಗಿ ಉದ್ಭವಿಸಿದೆ. ಹಿಜಬ್ ಅತ್ಯಗತ್ಯ ಧಾರ್ಮಿಕ ಆಚರಣೆಯೇ ಎಂಬುದನ್ನು ನಿರ್ಧರಿಸಬೇಕು. . ಹೀಗಾಗಿ ಹೈಕೋರ್ಟ್ ಈ ಬಗ್ಗೆ ತೀರ್ಮಾನ ನೀಡುವ ಅಗತ್ಯವಿದೆ ಎಂದು ಎಜಿ ನಾವದಗಿ ವಾದಿಸಿದರು. ಇದನ್ನೂ ಓದಿ: UAEನಿಂದ ಗೋಲ್ಡನ್ ವೀಸಾ ಪಡೆದ ಪ್ರಣಿತಾ!

    ಧಾರ್ಮಿಕ ಆಚರಣೆ, ಆತ್ಮಸಾಕ್ಷಿಯ ಆಚರಣೆಯಾಗುವುದೇ ಎಂದು ಸರ್ಕಾರಕ್ಕೆ ಪೂರ್ಣ ಪೀಠ ಪ್ರಶ್ನೆ ಮಾಡಿತು. ಇದೇ ಸಂದರ್ಭದಲ್ಲಿ ಸಾರಸ್ವತ ಬ್ರಾಹ್ಮಣರ ಪೂಜೆ ಹಕ್ಕಿಗೆ ಸಂಬಂಧಿಸಿ ವೆಂಕಟ ಸ್ವಾಮಿ ಪ್ರಕರಣವನ್ನು, ಶೀರೂರು ಮಠ ಪ್ರಕರಣವನ್ನು, ಶಬರಿ ಮಲೆ ಪ್ರಕರಣವನ್ನು ಅಡ್ವೋಕೇಟ್ ಜನರಲ್ ಪ್ರಸ್ತಾಪಿಸಿ ಈ ಹಿಂದೆ ನ್ಯಾಯಾಲಯಗಳು ಧಾರ್ಮಿಕ ಹಕ್ಕು ವಿಚಾರಕ್ಕೆ ಸಂಬಂಧಿಸಿದಂತೆ ನೀಡಿದ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು.

    ಶಬರಿಮಲೆ ತೀರ್ಪಿನಲ್ಲಿ ನ್ಯಾ. ಡಿ ವೈ ಚಂದ್ರಚೂಡ್‌ ಅವರು ಇಂಥ ಪ್ರಕರಣಗಳಲ್ಲಿ ನ್ಯಾಯಾಲಯಗಳಿಗೆ ಪ್ರಮುಖ ಸ್ಥಾನವಿದೆ ಎಂದು ತೀರ್ಪು ನೀಡಿದ ವಿಚಾರವನ್ನು ಪ್ರಸ್ತಾಪಿಸಿದರು. ಭಗವದ್ಗೀತೆ, ಬೈಬಲ್‌, ಕುರಾನ್‌ನಲ್ಲಿ ಬಹಳಷ್ಟು ವಿಚಾರಗಳಿವೆ. ಆದರೆ, ಅವುಗಳನ್ನು ಶೈಕ್ಷಣಿಕ ಸಂಸ್ಥೆಗಳಿಂದ ಹೊರಗಿಡಬೇಕು ಎಂದು ಹೇಳಲಾಗಿದೆ.ಈ ಕಾರಣಕ್ಕೆ ಸಂವಿಧಾನ ರಚನಕಾರರು ಪ್ರಜ್ಞಾಪೂರ್ವಕವಾಗಿ ಅವುಗಳನ್ನು ಹೊರಗಿಟ್ಟಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತಂದರು.

    ಜಾವೇದ್‌ ಪ್ರಕರಣವನ್ನು ಪ್ರಸ್ತಾಪಿಸಿದ ಎಜಿ, ಇಸ್ಲಾಮ್‌ನಲ್ಲಿ ಬಹು ಪತ್ನಿತ್ವಕ್ಕೆ ರಕ್ಷಣೆ ಇದ್ದು, ಅದಕ್ಕೆ ವಿರುದ್ಧವಾದ ಕಾನೂನು ನಿಲ್ಲುವುದಿಲ್ಲ ಎಂದು ವಾದಿಸಲಾಗಿತ್ತು. ಆದರೆ ಈ ವಾದವನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿತ್ತು. ಶಾಹೀರಾ ಬಾನು ಪ್ರಕರಣವನ್ನು ಉಲ್ಲೇಖಿಸಿ ತ್ರಿವಳಿ ತಲಾಖ್‌ ಹೇಳುವುದನ್ನು ಕೋರ್ಟ್‌ ವಜಾ ಮಾಡಿತ್ತು ಎಂದು ವಾದಿಸಿದರು. ಅಂತಿಮವಾಗಿ ವಿಚಾರಣೆಯನ್ನು ಕೋರ್ಟ್‌ ಮಂಗಳವಾರ ಮಧ್ಯಾಹ್ನ 2:30ಕ್ಕೆಮುಂದೂಡಿತು.

  • ನ್ಯಾಯಾಲಯ ಆದೇಶಕ್ಕೆ ಧಾರ್ಮಿಕ ಮುಖಂಡರಿಂದ ಬೆಂಬಲ: ರಾಯಚೂರಿನಲ್ಲಿ ಗಲಾಟೆ ಇಲ್ಲ

    ನ್ಯಾಯಾಲಯ ಆದೇಶಕ್ಕೆ ಧಾರ್ಮಿಕ ಮುಖಂಡರಿಂದ ಬೆಂಬಲ: ರಾಯಚೂರಿನಲ್ಲಿ ಗಲಾಟೆ ಇಲ್ಲ

    ರಾಯಚೂರು: ರಾಜ್ಯದಲ್ಲಿ ಹಿಜಬ್-ಕೇಸರಿ ಶಾಲು ವಿವಾದ ಹಿನ್ನೆಲೆ ರಾಯಚೂರಿನಲ್ಲಿ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆಯಿಂದ ಪ್ರತಿಭಟನೆಗಳು ನಿಂತಿವೆ. ಮುಸ್ಲಿಂ ಸಮುದಾಯದ ಮುಖಂಡರು, ಮೌಲಾನಾಗಳ ಜೊತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ತುರ್ತು ಸಭೆ ನಡೆಸಿ ನ್ಯಾಯಾಲಯದ ಮಧ್ಯಂತರ ಆದೇಶದ ಬಗ್ಗೆ ಮನವರಿಕೆ ಮಾಡಿದ್ದಾರೆ.

    ಕಳೆದ ಮೂರ್ನಾಲ್ಕು ದಿನಗಳಿಂದ ಹಿಜಬ್ ವಿಚಾರ ಜೋರಾಗಿ ಪ್ರತಿಭಟನೆಗಳು ನಡೆಯುತ್ತಿದೆ. ಆದರೆ ಈ ಕುರಿತು ಅಂತಿಮ ಆದೇಶ ಬರೋವರೆಗೂ ಕಾಯುವಂತೆ ಧರ್ಮಗುರುಗಳು, ಮುಖಂಡರ ಮೂಲಕ ಸಮುದಾಯದವರಿಗೆ ತಿಳಿ ಹೇಳಲು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಸೂಚನೆ ಹಿನ್ನೆಲೆ ಹಿಜಬ್ ಎಲ್ಲಿಯೂ ಪ್ರತಿಭಟನೆ ನಡೆಸದಿರಲು ತೀರ್ಮಾನ ಮಾಡಿದ್ದಾರೆ.  ಇದನ್ನೂ ಓದಿ: ಉಗ್ರ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ – IPS ಅಧಿಕಾರಿ ಅರೆಸ್ಟ್

    ರಾಯಚೂರು ಜಿಲ್ಲೆಯಲ್ಲಿ ಯಾವುದೇ ಸಂಘರ್ಷ ಇಲ್ಲ. ಜಿಲ್ಲೆಯಾದ್ಯಂತ ಶಾಂತವಾಗಿದೆ. ಎಲ್ಲ ಧಾರ್ಮಿಕ ಮುಖಂಡರು ಕೋರ್ಟ್ ಆದೇಶಕ್ಕೆ ಸಹಕಾರ ಮಾಡಿದ್ದಾರೆ ಎಂದು ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಹೇಳಿದ್ದಾರೆ. ಎಲ್ಲ ಮಕ್ಕಳು ಶಾಲಾ-ಕಾಲೇಜಿಗೆ ಹೋಗುತ್ತಿದ್ದಾರೆ. ಕೆಲವರು ಸಂಘರ್ಷದ ಲಾಭಗಳಿಸಲು ಹೋಗಿ ವಿಫಲವಾಗಿದ್ದಾರೆ. ಕಾಲೇಜುಗಳ ಬಳಿ ಸಮಾಜ ವಿರೋಧಿ ಚಟುವಟಿಕೆ ನಡೆಸಿದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಎಚ್ಚರಿಕೆ ಕೊಟ್ಟಿದ್ದಾರೆ.

  • ಸಮವಸ್ತ್ರ ಜಾರಿ ಸಿ.ಡಿ.ಸಿ ನಿರ್ಧಾರ ಅಂದ್ರು ಎಜಿ- ಸೋಮವಾರ ಹೈಕೋರ್ಟ್‍ಗೆ ಮಧ್ಯಂತರ ಅರ್ಜಿ

    ಸಮವಸ್ತ್ರ ಜಾರಿ ಸಿ.ಡಿ.ಸಿ ನಿರ್ಧಾರ ಅಂದ್ರು ಎಜಿ- ಸೋಮವಾರ ಹೈಕೋರ್ಟ್‍ಗೆ ಮಧ್ಯಂತರ ಅರ್ಜಿ

    ಬೆಂಗಳೂರು: ಹಿಜಬ್ ವಿವಾದ ಸಂಬಂಧ ಸತತ ಆರನೇ ದಿನ ಹೈಕೋರ್ಟ್‍ನ ಪೂರ್ಣಪೀಠದಲ್ಲಿ ವಿಚಾರಣೆ ನಡೆಯಿತು. ಇಂದು ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ ಅಡ್ವೋಕೇಟ್ ಜನೆರಲ್ ಪ್ರಭುಲಿಂಗ ನಾವಡಗಿ, ಹಿಜಬ್‍ಧಾರಣೆ ಮುಸ್ಲಿಮ್ ಸಮುದಾಯದಲ್ಲಿ ಕಡ್ಡಾಯ ಆಚರಣೆ ಅಲ್ಲ ಅಂದ್ರು.

    ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ನಿರ್ಬಂಧಿಸುವ ಮೂಲಕ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಕರ್ನಾಟಕ ಸರ್ಕಾರ ಉಲ್ಲಂಘಿಸಿಲ್ಲ ಎಂದರು. ಈ ಮೂಲಕ ಫೆಬ್ರವರಿ 5ರಂದು ಸರ್ಕಾರ ಹೊರಡಿಸಿದ್ದ ಕಡ್ಡಾಯ ಸಮವಸ್ತ್ರ ಆದೇಶವನ್ನು ಸಮರ್ಥಿಸಿಕೊಂಡರು. ಸಮಾನತೆ, ಸಮಗ್ರತೆ, ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ವಸ್ತ್ರಗಳನ್ನು ಸರ್ಕಾರ ಬ್ಯಾನ್ ಮಾಡಿರುವುದು ಸರಿಯಾಗಿಯೇ ಇದೆ ಎಂದು ವಾದ ಮಂಡಿಸಿದ್ರು. ಇದನ್ನೂ ಓದಿ: ಕಾಂಗ್ರೆಸ್ ರಾಜ್ಯದ ಮಕ್ಕಳಿಗೆ ದ್ರೋಹ ಮಾಡ್ತಿದೆ, ಇದು ರಾಜದ್ರೋಹ: ಬೊಮ್ಮಾಯಿ ಕಿಡಿ

    ಕಾಲೇಜಿನ ಅಭಿವೃದ್ಧಿ ಸಮಿತಿ ವಿಚಾರವಾಗಿಯೂ ತೀವ್ರ ವಾದ ನಡೀತು. ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಅಧಿಕಾರ ಪ್ರಶ್ನಿಸಿದ್ದ ರವಿವರ್ಮ ಕುಮಾರ್ ಪ್ರಶ್ನೆಗೆ ಅಡ್ವೋಕೇಟ್ ಜನರಲ್ ನಾವಡಗಿ ಉತ್ತರ ನೀಡಿದ್ರು. ಕಾಲೇಜು ಅಭಿವೃದ್ಧಿ ಸಮಿತಿಯನ್ನು ಸರ್ಕಾರದ ಆದೇಶದಂತೆ ರಚಿಸಲಾಗಿದೆ. ಶಿಕ್ಷಣ ಇಲಾಖೆ ಕಾಯ್ದೆ ಪ್ರಕಾರ ಸಮವಸ್ತ್ರ ಕಡ್ಡಾಯ ಮಾಡಲು ಸಿಡಿಸಿಗೆ ಅಧಿಕಾರವಿದೆ. ಆದರೆ ಹಿಜಬ್‍ಗೆ ಅವಕಾಶ ನೀಡುವುದು ಬಿಡುವುದು ಕಾಲೇಜುಗಳ ಸಿಡಿಸಿಗಳಿಗೆ ಬಿಟ್ಟ ವಿಚಾರ. ಸಿಡಿಸಿ ಹೇಳಿದ ಯೂನಿಫಾರಂ ಕಡ್ಡಾಯವಾಗಿ ಧರಿಸಿ ಎಂಬ ಅಂಶವಷ್ಟೇ ಸರ್ಕಾರದ ಆದೇಶದಲ್ಲಿದೆ. ಸರ್ಕಾರ ಧಾರ್ಮಿಕ ವಿಚಾರಗಳಲ್ಲಿ ಮಧ್ಯಪ್ರವೇಶ ಕೂಡ ಮಾಡಲ್ಲ ಎಂದು ವಾದ ಮಂಡಿಸಿದ್ರು.

    ಕೊನೆಗೆ ಸಿಜೆ ಅವಸ್ಥಿ ನೇತೃತ್ವದ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು. ಸೋಮವಾರ ಕೆಲ ಮಧ್ಯಂತರ ಅರ್ಜಿಗಳನ್ನು ಕೂಡ ಕೋರ್ಟ್ ವಿಚಾರಣೆಗೆ ಪರಿಗಣಿಸುವ ಸಂಭವ ಇದೆ. ಇನ್ನು ಕೋರ್ಟ್ ವಿಚಾರಣೆಯ ನೇರ ಪ್ರಸಾರ ನಿಲ್ಲಿಸುವಂತೆ ಮಾಡಿದ್ದ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಲಿಲ್ಲ. ಇದನ್ನೂ ಓದಿ: ಇನ್‍ಸ್ಟಾಗ್ರಾಮ್‍ನಲ್ಲಿ ಹಿಜಬ್ ತೆಗೆದು ರೀಲ್ಸ್ ಹಾಕ್ತಾರೆ, ಈಗ ತೆಗೆಯೋಕಾಗಲ್ವಾ..?- ವಿದ್ಯಾರ್ಥಿಗಳು

  • ಕೋರ್ಟ್‌ ಹೊರಗಡೆ ಹಿಜಬ್‌ ವಿವಾದ ಇತ್ಯರ್ಥಕ್ಕೆ ಅನುಮತಿ ಕೋರಿ ಅರ್ಜಿ

    ಕೋರ್ಟ್‌ ಹೊರಗಡೆ ಹಿಜಬ್‌ ವಿವಾದ ಇತ್ಯರ್ಥಕ್ಕೆ ಅನುಮತಿ ಕೋರಿ ಅರ್ಜಿ

    ಬೆಂಗಳೂರು: ಹಿಜಬ್‌ ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿ ಇದ್ದು ವಿದ್ಯಾರ್ಥಿಗಳ ಪರವಾಗಿ ವಕೀಲರು ವಾದ ಮಂಡಿಸಿದ್ದಾರೆ. ಈ ಮಧ್ಯೆ ನ್ಯಾಯಾಲಯದ ಹೊರಗಡೆ ಈ ಪ್ರಕರಣವನ್ನು ಇತ್ಯರ್ಥ ಮಾಡಲು ಅನುಮತಿ ನೀಡುವಂತೆ ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.

    ಗುರುವಾರ ಮಧ್ಯಾಹ್ನ ಮುಖ್ಯ ನ್ಯಾ. ರಿತು ರಾಜ್ ಅವಸ್ತಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾ. ಜೆಎಂ ಖಾಜಿ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಅರ್ಜಿ ಸರಿಯಾಗಿ ಸಲ್ಲಿಕೆಯಾಗಿಲ್ಲ. ಮಾಹಿತಿಗಳು ಅಸಮರ್ಪಕವಾಗಿರುವ ಹಿನ್ನೆಲೆಯಲ್ಲಿ ವಕೀಲ ಅಬ್ದುಲ್‌ ಮುಜೀದ್‌ ಮತ್ತು ಮೊಹಮ್ಮದ್‌ ಆರೀಫ್‌ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

    ವಿಚಾರಣೆಯ ಕೊನೆಯಲ್ಲಿ ವಕೀಲರಾದ ಸುಭಾಷ್ ಝಾ ಮಧ್ಯಪ್ರವೇಶ ಅರ್ಜಿ (ಇಂಟರ್‌ವಿನ್‌ ಅಪ್ಲಿಕೇಷನ್‌) ಸಲ್ಲಿಸಿ ಪ್ರಕರಣವನ್ನು ಹೊರಗಡೆ ಇತ್ಯರ್ಥ ಮಾಡಲು ಅನುಮತಿ ನೀಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ಪಾಕಿಸ್ತಾನಕ್ಕೆ ಹೋಗುವ ಬದಲು ಭಾರತವನ್ನು ಅಜ್ಜಂದಿರು ಆಯ್ಕೆ ಮಾಡಿದ್ದು ಯಾಕೆ: ಹಿಜಬ್‌ ವಿವಾದಕ್ಕೆ ಸ್ವಾಮಿ ಪ್ರಶ್ನೆ

    ಹಿಜಬ್ ಸಮವಸ್ತ್ರ ವಿವಾದ ಕೋರ್ಟ್ ಬಗೆಹರಿಸುವುದು ಬೇಡ. ಕೋರ್ಟ್ ಹೊರಗೆ ಇತ್ಯರ್ಥಕ್ಕೆ ಅನುಮತಿ ನೀಡಬೇಕು. ಸಾಮಾಜಿಕವಾದ ಸಮಸ್ಯೆಯಾಗಿರುವ ಕಾರಣ ಕೋರ್ಟ್ ಹೊರಗೆ ಇತ್ಯರ್ಥ ಮಾಡಬಹುದು ಎಂದು ಮನವಿ ಮಾಡಿಕೊಂಡರು.

    ಈ ವೇಳೆ ಎಲ್ಲ ಕಕ್ಷಿದಾರರು ಒಪ್ಪಿದರೆ ಈ ಅರ್ಜಿಯನ್ನು ಮಾನ್ಯ ಮಾಡುವುದಾಗಿ ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು. ಈ ಪ್ರಕರಣದಲ್ಲಿ ಸಾಂವಿಧಾನಿಕ ಪ್ರಶ್ನೆಗಳು ಎದ್ದಿರುವ ಕಾರಣ ಉತ್ತರ ಕಂಡುಕೊಳ್ಳಬೇಕಿದೆ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ರಾಜಿ ಸಂಧಾನ ಮಾಡಲಾಗದು ಎಂದು ಹೇಳಿದರು. ಇದನ್ನೂ ಓದಿ: ಹಿಜಬ್ ವಿವಾದ: ಬುರ್ಕಾನೇ ಮುಖ್ಯ, ಸಿಂಧೂರ ತೆಗೆಸಿ ಎಂದ ವಿದ್ಯಾರ್ಥಿನಿಯರು!

    ಮೊದಲು ನಿಮ್ಮ ಅರ್ಜಿಯನ್ನು ಎಲ್ಲಾ ಕಕ್ಷಿದಾರರಿಗೆ ತಲುಪಿಸಿ. ಅವರು ಸಂಧಾನಕ್ಕೆ ಒಪ್ಪಿದರೆ ಮಾತ್ರ ನ್ಯಾಯಾಲಯ ನಿಮ್ಮ ಅರ್ಜಿಯನ್ನು ಪರಿಗಣಿಸಲಿದೆ ಎಂದು ತಿಳಿಸಿತು.

    ಸೋಮವಾರದಿಂದ ಗುರುವಾರದವರೆಗೆ ಹಿಜಬ್‌ ಪರವಾಗಿ ವಾದ ಮಂಡನೆಯಾಗಿದ್ದರೆ ಶುಕ್ರವಾರ ಸರ್ಕಾರದ ಪರವಾಗಿ ಅಡ್ವೋಕೆಟ್‌ ಜನರಲ್‌ ಪ್ರಭುಲಿಂಗ ನಾವದಗಿ ವಾದ ಮಂಡಿಸಲಿದ್ದಾರೆ.

  • ಶಿಕ್ಷಣ ಕಾಯ್ದೆ ಪ್ರಕಾರ 5 ವರ್ಷಗಳ ಕಾಲ ಸಮವಸ್ತ್ರ ಬದಲಿಸಲು ಆಗಲ್ಲ: ರವಿವರ್ಮ ಕುಮಾರ್

    ಶಿಕ್ಷಣ ಕಾಯ್ದೆ ಪ್ರಕಾರ 5 ವರ್ಷಗಳ ಕಾಲ ಸಮವಸ್ತ್ರ ಬದಲಿಸಲು ಆಗಲ್ಲ: ರವಿವರ್ಮ ಕುಮಾರ್

    ಬೆಂಗಳೂರು: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೂರ್ಣ ಪೀಠದಲ್ಲಿ 4ನೇ ದಿನವೂ ಹಿಜಬ್ ಅರ್ಜಿ ವಿಚಾರವನ್ನ ಕಾವೇರಿದ ವಾದ ನಡೀತು.

    ಅರ್ಜಿದಾರರ ಪರ ವಕೀಲರಾದ ರವಿವರ್ಮ ಕುಮಾರ್ ವಾದ ಮಂಡನೆ ಮಾಡಿದ್ರು. ಶಿಕ್ಷಣ ಕಾಯ್ದೆ ಪ್ರಕಾರ 5 ವರ್ಷಗಳ ಕಾಲ ಸಮವಸ್ತ್ರ ಬದಲಿಸಲು ಆಗಲ್ಲ. ಬದಲು ಮಾಡಿದ್ರೂ 1 ವರ್ಷ ಮುಂಚಿತವಾಗಿ ಪೋಷಕರಿಗೆ ಮಾಹಿತಿ ನೀಡಬೇಕು. ಸರ್ಕಾರ ಯೂನಿಫಾರಂ ನಿರ್ಧರಿಸುವ ಅಧಿಕಾರವನ್ನು ಕಾಲೇಜು ಸಮಿತಿಗೆ ನೀಡಿದೆ. ಆ ಅಧಿಕಾರ ಕಾಲೇಜು ಸಮಿತಿಗೆ ಇಲ್ಲ.

    ಸಮಿತಿಯನ್ನು ಸರ್ಕಾರದ ಅಧೀನ ಎಂದು ಪರಿಗಣಿಸುವುದಾದರೆ, ಶಾಸಕ ಕೂಡ ಸರ್ಕಾರದ ಅಧೀನ ಆಗ್ತಾರೆ. ಶಾಸಕರು ರಾಜಕೀಯ ಪಕ್ಷವೊಂದನ್ನು ಪ್ರತಿನಿಧಿಸುತ್ತಾರೆ. ಶಾಸಕರ ಅಧ್ಯಕ್ಷತೆಯ ಸಮಿತಿಗೆ ಆಡಳಿತಾತ್ಮಕ ಅಧಿಕಾರ ನೀಡುವುದು ತಪ್ಪು. ಕಾಲೇಜು ಸಮಿತಿಗೆ ಅಧಿಕಾರ ನೀಡಿರುವ ಆದೇಶವನ್ನ ವಜಾ ಮಾಡಿ ಅಂತ ಕೇಳಿಕೊಂಡರು. ಇದನ್ನೂ ಓದಿ: ಈಶ್ವರಪ್ಪ vs ಡಿಕೆಶಿ ವಾಕ್ಸಮರ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸದನದ ಕದನ

    ಶಾಲೆಗಳಲ್ಲಿ ದುಪ್ಪಟ್ಟ ನಿಷೇಧಿಸಲಾಗಿಲ್ಲ. ಬಳೆ, ಬಿಂದಿ, ಶಿಲುಬೆ, ಟರ್ಬನ್‍ಗಿಲ್ಲದ ನಿರ್ಬಂಧ ಹಿಜಬ್‍ಗೆ ಮಾತ್ರ ಯಾಕೆ..? ಧಾರ್ಮಿಕ ಕಾರಣಕ್ಕಾಗಿ ತಾರತಮ್ಯ ಮಾಡುವಂತಿಲ್ಲ. ಹಾಗಾಗಿ ಮಧ್ಯಂತರ ಆದೇಶ ತೆರವಿಗೆ ರವಿವರ್ಮಕುಮಾರ್ ಮನವಿ ಮಾಡಿದ್ರು. ಇದಕ್ಕೆ ಆಕ್ಷೇಪಣೆ ಸಲ್ಲಿಕೆಗೆ ಅಡ್ವೋಕೇಟ್ ಜನರಲ್‍ಗೆ ಸೂಚನೆ ನೀಡಿ, ವಿಚಾರಣೆಯನ್ನು ನಾಳೆ ಮಧ್ಯಾಹ್ನಕ್ಕೆ ತ್ರಿಸದಸ್ಯ ಪೀಠ ಮುಂದೂಡಿತು.  ಇದನ್ನೂ ಓದಿ: ಹಿಜಬ್ ಗಲಾಟೆ ಹುಬ್ಬಳ್ಳಿ ಕಾಲೇಜುಗಳಿಗೆ ರಜೆ ಘೋಷಣೆ- ಕಾಲೇಜು ಸುತ್ತಲೂ 144 ಸೆಕ್ಷನ್ ಜಾರಿ

  • ಹಿಜಬ್ ವಿವಾದ – ಇಂದು ಹೈಕೋರ್ಟ್‌ನಲ್ಲಿ ಏನಾಯ್ತು..?

    ಹಿಜಬ್ ವಿವಾದ – ಇಂದು ಹೈಕೋರ್ಟ್‌ನಲ್ಲಿ ಏನಾಯ್ತು..?

    ಬೆಂಗಳೂರು: ಹಿಜಬ್ ವಿವಾದದ ಬಗ್ಗೆ ಹೈಕೋರ್ಟ್‍ನ ಪೂರ್ಣ ಪೀಠದಲ್ಲಿ ಮೂರನೇ ದಿನವೂ ವಿಚಾರಣೆ ನಡೀತು. ಹೈಕೋರ್ಟ್‍ನ ಮಧ್ಯಂತರ ಆದೇಶದಿಂದ ಮೂಲಭೂತ ಹಕ್ಕು ಅಮಾನತು ಆಗಿದೆ. ಹೀಗಾಗಿ ಮಧ್ಯಂತರ ಆದೇಶ ಬದಲಿಸಿ, ಸಮವಸ್ತ್ರದ ಜೊತೆಗೆ ಹಿಜಬ್‍ಗೂ ಅವಕಾಶ ಕೊಡಬೇಕು ಅಂತ ಅರ್ಜಿದಾರರ ಪರ ವಕೀಲ ದೇವದತ್ತ ಕಾಮತ್ ವಾದ ಮುಗಿಸಿದ್ರು. ಇದನ್ನೂ ಓದಿ: ಎಷ್ಟು ದಿನ ಇರ್ತೀನೋ ಗೊತ್ತಿಲ್ಲ, ಮಾತಾಡೋಕೆ ಅವಕಾಶ ಕೊಡಿ: ಪರಿಷತ್‍ನಲ್ಲಿ ಸಿ.ಎಂ. ಇಬ್ರಾಹಿಂ ಅಳಲು!

    ಇದಕ್ಕೂ ಮುನ್ನ ಸಾರ್ವಜನಿಕ ಸುವ್ಯವಸ್ಥೆ ಎಂಬ ಸರ್ಕಾರದ ಬಗ್ಗೆ ವಾದ ಮುಂದುವರಿಸಿದ ಅರ್ಜಿದಾರ ಪರ ವಕೀಲರು, ಸಾರ್ವಜನಿಕ ಸುವ್ಯವಸ್ಥೆ ಭಾಷಾಂತರ ಕುರಿತ ಸರ್ಕಾರದ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ರು. ‘ಸಾರ್ವಜನಿಕ ಸುವ್ಯವಸ್ಥೆ’ ಎಂಬ ಪದದ ಬಗ್ಗೆ ಸರ್ಕಾರದ ಭಾಷಾಂತರಕ್ಕೆ ಆಕ್ಷೇಪಿಸಿದರು. ಇದನ್ನೂ ಓದಿ: ಹಿಜಬ್ ತೆಗೆಯಿರಿ ಅನ್ನೋದಕ್ಕೆ ಹೆತ್ತವರಿಗೆ ರೈಟ್ಸ್ ಇಲ್ಲ, ಅವನ್ಯಾವನು ಹೇಳೋಕೆ: ಶಿಕ್ಷಕರ ವಿರುದ್ಧ ವಿದ್ಯಾರ್ಥಿನಿಯರು ರೆಬೆಲ್

    ಸಂವಿಧಾನದಲ್ಲಿ ಹೇಳಿದ ಅರ್ಥ ಬಿಟ್ಟು ಬೇರೆ ಅರ್ಥ ಹೇಳಲಾಗದು. ಸಾರ್ವಜನಿಕ ಸುವ್ಯವಸ್ಥೆ ಕಾರಣ ಕೊಟ್ಟು, ಹಕ್ಕುಗಳನ್ನು ನಿರ್ಬಂಧಿಸುವಂತಿಲ್ಲ ಅಂತ ಸುಪ್ರೀಂಕೋರ್ಟ್ ತೀರ್ಪು ಹೇಳಿದೆ. ಮೂಗುತಿ ವಿಚಾರದಲ್ಲಿ ದಕ್ಷಿಣ ಆಫ್ರಿಕಾದ ಶಾಲೆ ಹಾಕಿದ್ದ ನಿರ್ಬಂಧವನ್ನು ಕೋರ್ಟ್ ವಜಾ ಮಾಡಿತ್ತು ಎಂದು ತಿಳಿಸಿದ್ರು. ಹಿಜಬ್ ಧರಿಸುವುದರಿಂದ ಗಲಾಟೆ ಆಗುತ್ತದೆ ಎಂದು ಸರ್ಕಾರ ಹೇಳುವುದಾದರೆ, ಅದು ಒಪ್ಪತಕ್ಕ ವಾದ ಅಲ್ಲ. ನಮ್ಮ ದೇಶದ್ದು ಸಕಾರಾತ್ಮಕ ಜಾತ್ಯಾತೀತತೆ. ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಧಾರ್ಮಿಕ ಹಕ್ಕು ನಿರ್ಬಂಧಕ್ಕೆ ಸರ್ಕಾರಕ್ಕೆ ಅಧಿಕಾರ ಇಲ್ಲ ಅಂತ ಕಾಮತ್ ವಾದಿಸಿದ್ರು.

    ಮತ್ತೊಂದು ಅರ್ಜಿಯಲ್ಲಿ ವಾದ ಮಂಡಿಸಿದ ರವಿವರ್ಮ ಕುಮಾರ್, ಸರ್ಕಾರ ಸಮಸವ್ತ್ರದ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಉನ್ನತ ಮಟ್ಟದ ಸಮಿತಿ ರಚಿಸಿದೆ. ಸರ್ಕಾರ ಹಿಜಬ್ ಮೇಲೆ ನಿರ್ಬಂಧ ಹೇರಿಲ್ಲ. ಯೂನಿಫಾರಂ ಅನ್ನು ಕಾಲೇಜು ಸಮಿತಿ ನಿರ್ಧರಿಸಲಿದೆ ಅಂತಷ್ಟೇ ಹೇಳಲಾಗಿದೆ ಅಂದ್ರು. ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿಗಳ ಪೂರ್ಣ ಪೀಠ ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿತು.

  • ಅಕ್ರಮ ಆಸ್ತಿಗಳಿಕೆ ಆರೋಪ – ವಿಚಾರಣೆ ನಡೆಸಲು ಹೈಕೋರ್ಟ್‍ಗೆ ಸುಪ್ರೀಂ ಸೂಚನೆ

    ಅಕ್ರಮ ಆಸ್ತಿಗಳಿಕೆ ಆರೋಪ – ವಿಚಾರಣೆ ನಡೆಸಲು ಹೈಕೋರ್ಟ್‍ಗೆ ಸುಪ್ರೀಂ ಸೂಚನೆ

    ನವದೆಹಲಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇಲಿರುವ ಅಕ್ರಮ ಆಸ್ತಿಗಳಿಕೆ ಆರೋಪದ ಬಗ್ಗೆ ವಿಚಾರಣೆ ನಡೆಸುವಂತೆ ರಾಜ್ಯ ಹೈಕೋರ್ಟ್‍ಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಂಜಯ್ ಕಿಶನ್ ಕೌಲ್ ಹಾಗೂ ನ್ಯಾ.ಸುಂದರೇಶ್ ಪೀಠ ಈ ಸೂಚನೆ ನೀಡಿದೆ.

    ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಕೀಲ ದೇವರಾಜೇಗೌಡ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಪ್ರಜ್ವಲ್ ರೇವಣ್ಣ ಅಕ್ರಮ ಆಸ್ತಿಗಳಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸದೇ ತಾಂತ್ರಿಕ ಕಾರಣ ನೀಡಿ ಹೈಕೋರ್ಟ್ ಅರ್ಜಿ ವಜಾ ಮಾಡಿದ್ದು, ಸುಪ್ರೀಂಕೋರ್ಟ್ ವಿಚಾರಣೆ ನಡೆಸುವಂತೆ ಮನವಿ ಮಾಡಿದರು.

    SUPREME COURT

    ವಾದ ಆಲಿಸಿದ ಪೀಠ, ಅರ್ಜಿಯೂ ವಿಚಾರಣೆಗೆ ಅರ್ಹವಾಗಿದೆ ಹೀಗಾಗಿ ಈ ಹಿಂದೆ ನೀಡಿದ ಆದೇಶ ರದ್ದು ಮಾಡಿ ಪ್ರಕರಣ ವಿಚಾರಣೆ ನಡೆಸಬೇಕು ಎಂದು ಪ್ರಕರಣವನ್ನು ಹೈಕೋರ್ಟ್‍ಗೆ ವರ್ಗಾಯಿಸಿತು. ಇದನ್ನೂ ಓದಿ: ಜಮೀರ್ ಅತ್ಯಂತ ಚಿಲ್ಲರೆ, ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ : ಪ್ರಹ್ಲಾದ್ ಜೋಶಿ

    ಪ್ರಜ್ವಲ್ ರೇವಣ್ಣ ತಮ್ಮ ಹದಿನೈದನೇ ವಯಸ್ಸಿನಲ್ಲೆ 23 ಕೋಟಿ ಆಸ್ತಿ ಮಾಡಿದ್ದಾರೆ. ಆದಾಯ ತೆರಿಗೆ ಇಲಾಖೆ ಸಲ್ಲಿಸಿದ ಮಾಹಿತಿಯಲ್ಲಿ ಈ ಅಂಶಗಳಲ್ಲಿಲ್ಲ, ಚುನಾವಣಾ ಆಯೋಗಕ್ಕೂ ಆಸ್ತಿಯ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಬೇನಾಮಿ ಆಸ್ತಿ ಮತ್ತು ಗೋಮಾಳ ಕಬಳಿಕೆ ಮಾಡಿದ್ದಾರೆ. ಈ ಬಗ್ಗೆ ಐಟಿಯಿಂದ ತನಿಖೆ ನಡೆಯಬೇಕು ಮತ್ತು ಅಕ್ರಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅರ್ಜಿದಾರ ದೇವರಾಜೇಗೌಡ ಮನವಿ ಮಾಡಿದ್ದರು.

    ಪ್ರಕರಣ ವಿಚಾರಣೆ ನಡೆಸಿದ್ದ ಹೈಕೋರ್ಟ್ 2019 ರಲ್ಲಿ ಈ ಚುನಾವಣಾ ಅರ್ಜಿಯನ್ನು ಸರಿಯಾದ ರೀತಿಯಲ್ಲಿ ಸಲ್ಲಿಸಿಲ್ಲ, ಇದರಲ್ಲಿ ತಾಂತ್ರಿಕ ದೋಷಗಳಿವೆ ಎಂದು ಅರ್ಜಿ ವಜಾ ಮಾಡಿತ್ತು. ಇದನ್ನು ಪ್ರಶ್ನೆ ಮಾಡಿ ಸುಪ್ರೀಂಕೋರ್ಟ್ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ಪಾಕಿಸ್ತಾನ, ಚೀನಾ ಏಜೆಂಟ್‌ ಆಗಿದ್ದಾರೆ ತೆಲಂಗಾಣ ಸಿಎಂ: ಬಿಜೆಪಿ