Tag: high court

  • ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ – ಅಲಹಾಬಾದ್ ಹೈಕೋರ್ಟ್

    ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ – ಅಲಹಾಬಾದ್ ಹೈಕೋರ್ಟ್

    ಅಲಹಾಬಾದ್: ಗೋವುಗಳು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

    ಗೋಹತ್ಯೆ ತಡೆ ಕಾಯ್ದೆಯ ಅಡಿ ಬಂಧನಕ್ಕೆ ಒಳಗಾಗಿದ್ದ ಜಾವೇದ್ ಎಂಬಾತನ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾ. ಶೇಖರ್ ಯಾದವ್ ಅವರಿದ್ದ ಏಕಸದಸ್ಯ ಪೀಠ, ಗೋವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕುಗಳ ಪೈಕಿ ಒಂದು ಎಂದು ಪರಿಗಣಿಸಬೇಕು. ಒಂದು ದೇಶದ ಸಂಸ್ಕೃತಿ ಮತ್ತು ನಂಬಿಕೆಗೆ ಧಕ್ಕೆ ಉಂಟಾದರೆ ದೇಶ ದುರ್ಬಲವಾಗುತ್ತದೆ ಎನ್ನುವುದು ನಮಗೆ ತಿಳಿದಿದೆ ಎಂದು ಅಭಿಪ್ರಾಯಪಟ್ಟಿದೆ.

    ಆದೇಶದಲ್ಲಿ ಏನಿದೆ?
    ಹಸುಗಳು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗ. ಪ್ರಾಚೀನ ಗ್ರಂಥಗಳಾದ ವೇದ ಮತ್ತು ಮಹಾಭಾರತಗಳಲ್ಲಿ ಭಾರತೀಯ ಸಂಸ್ಕೃತಿಯನ್ನು ವಿವರಿಸುವ ಪ್ರಮುಖ ಭಾಗವಾಗಿ ಗೋವನ್ನು ತೋರಿಸಲಾಗಿದೆ ಎಂದು 12 ಪುಟಗಳ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ : 157 ಘೋಲ್ ಮೀನು ಹಿಡಿದು ಒಂದೇ ದಿನದಲ್ಲಿ ಕೋಟ್ಯಧಿಪತಿಯಾದ ಮೀನುಗಾರ

    ಗೋಮಾಂಸ ತಿನ್ನುವವರಿಗೆ ಮಾತ್ರ ಮೂಲಭೂತ ಹಕ್ಕು ಅನ್ವಯಿಸುವುದಿಲ್ಲ. ಗೋವನ್ನು ಪೂಜಿಸುವವರು, ಆರ್ಥಿಕವಾಗಿ ಹಸುಗಳ ಮೇಲೆ ಅವಲಂಬಿತರಾಗಿರುವವರು ಸಹ ಅರ್ಥಪೂರ್ಣವಾದ ಜೀವನವನ್ನು ನಡೆಸುವರೂ ಹಕ್ಕನ್ನು ಹೊಂದಿದ್ದಾರೆ.

    ಗೋವುಗಳು ಕಲ್ಯಾಣವಾದಾಗ ಮಾತ್ರ ದೇಶವು ಸುರಕ್ಷಿತವಾಗಿರುತ್ತದೆ ಮತ್ತು ಆಗ ದೇಶವು ಏಳಿಗೆಯಾಗುತ್ತದೆ. ಜೀವಿಸುವ ಹಕ್ಕು, ಹತ್ಯೆಗೈಯುವ ಹಕ್ಕಿಗಿಂತಲೂ ದೊಡ್ಡದು. ಗೋಮಾಂಸ ಸೇವನೆಯನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ. ಗೋಶಾಲೆಗಳ ಹೆಸರಿನಲ್ಲಿ ಮೋಸ ಮಾಡುತ್ತಿರುವವರ ವಿರುದ್ಧ ಕಾನೂನು ಜಾರಿ ಮಾಡಬೇಕು. ಇದನ್ನೂ ಓದಿ : ಲೀಕ್ ಆಯ್ತು ಜೋ ಬೈಡನ್- ಅಶ್ರಫ್ ಘನಿ ಫೋನ್ ಸಂಭಾಷಣೆ

    ಜಾವೇದ್ (59) ಮಾಂಸಕ್ಕಾಗಿ ಹಸುವನ್ನು ಕದ್ದು ಹತ್ಯೆ ಮಾಡಿದ್ದ. ಇದು ಅರ್ಜಿದಾರರ ಮೊದಲ ಅಪರಾಧವಲ್ಲ. ಈ ಹಿಂದೆಯೂ ಈತ ಗೋಹತ್ಯೆಯನ್ನು ಎಸಗಿ ಸಮಾಜದ ಸಾಮರಸ್ಯವನ್ನು ಕದಡಿದ್ದ ಎಂದು ನ್ಯಾಯಮೂರ್ತಿ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

  • ಮತಾಂತರ ನಿಷೇಧ ಕಾಯ್ದೆ ಸೆಕ್ಷನ್‍ಗಳಿಗೆ ತಡೆ – ಸುಪ್ರೀಂ ಮೆಟ್ಟಿಲೇರಿದ ಗುಜರಾತ್ ಸರ್ಕಾರ

    ಮತಾಂತರ ನಿಷೇಧ ಕಾಯ್ದೆ ಸೆಕ್ಷನ್‍ಗಳಿಗೆ ತಡೆ – ಸುಪ್ರೀಂ ಮೆಟ್ಟಿಲೇರಿದ ಗುಜರಾತ್ ಸರ್ಕಾರ

    ಅಹಮದಾಬಾದ್: ಮತಾಂತರ ನಿಷೇಧ ಕಾಯ್ದೆಯ ಅಂತರ್ಧಮೀಯ ವಿವಾಹಗಳಿಗಿದ್ದ ಸೆಕ್ಷನ್‍ಗಳಿಗೆ ಗುಜರಾತ್ ಹೈಕೋರ್ಟ್ ತಡೆ ನೀಡಿದ್ದ ತೀರ್ಪಿನ ವಿರುದ್ಧ ಗುಜರಾತ್ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

    ಅಂತರ್ಧರ್ಮೀಯ ಒತ್ತಾಯದ ವಿವಾಹದ ಮೂಲಕ ನಡೆಯುವ ಮತಾಂತರವನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿ ಗುಜರಾತ್ ನ ಧಾರ್ಮಿಕ ಸ್ವಾತಂತ್ರ್ಯ (ತಿದ್ದುಪಡಿ) ಕಾಯ್ದೆ, 2021 ಜೂ.15 ರಂದು ಜಾರಿಗೆ ಬಂದಿತ್ತು. ಇದೀಗ ಕಾಯ್ದೆಯ ಕೆಲವು ಪ್ರಮುಖ ಸೆಕ್ಷನ್‍ಗಳಿಗೆ ಹೈಕೋರ್ಟ್ ತಡೆನೀಡಿದೆ. ಇದನ್ನೂ ಓದಿ: ಪ್ರಧಾನಿ ಮೋಧಿ ಭಾವಚಿತ್ರಕ್ಕೆ ಅಪಮಾನ – ದೂರು ದಾಖಲು

    ಸರ್ಕಾರದ ಈ ನಡೆಯ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಗುಜರಾತ್‍ನ ಡಿಸಿಎಂ ನಿತಿನ್ ಪಟೇಲ್, ಹೈಕೋರ್ಟ್ ತಡೆ ನೀಡಿರುವ ಸೆಕ್ಷನ್‍ಗಳು ಮತಾಂತರ ನಿಷೇಧ ಕಾಯ್ದೆಯ ಪ್ರಮುಖ ಅಂಶಗಳು. ಈ ಸೆಕ್ಷನ್ ಗಳನ್ನು ರದ್ದುಗೊಳಿಸಿದರೆ ಸರ್ಕಾರ ಜಾರಿಗೆ ತಂದಿರುವ ಕಾನೂನಿಗೆ ಯಾವುದೇ ಬೆಲೆ ಇಲ್ಲದಂತಾಗುತ್ತದೆ ಎಂದರು.

    ಗುಜರಾತ್ ಸರ್ಕಾರ ಲವ್ ಜಿಹಾದ್ ನ್ನು ತಡೆಗಟ್ಟಲು ಈ ಕಾಯ್ದೆಯನ್ನು ಜಾರಿಗೊಳಿಸುವುದರೊಂದಿಗೆ ರಾಜ್ಯದಲ್ಲಿ ಅಂತರ್ಧರ್ಮೀಯ ವಿವಾಹದ ಮೂಲಕ ಮತಾಂತರ ಮಾಡುವುದು ಅಪರಾಧ ಎಂದು ಕಾನೂನು ರೂಪಿಸಿ ಅಪರಾಧಗಳ ತಡೆಗೆ ಮುಂದಾಗಿತ್ತು. ಆದರೆ ಹೈಕೋರ್ಟ್ ಸೆಕ್ಷನ್‍ಗಳನ್ನು ತಡೆನೀಡಿರುವುದು ಪ್ರಶ್ನೆ ಎತ್ತುವಂತೆ ಮಾಡಿದೆ. ಹೈಕೋರ್ಟ್ ಹೇಳಿರುವಂತೆ “ಯಾವುದೇ ಒತ್ತಾಯ ಪೂರ್ವಕವಲ್ಲದೆ ಅಥವಾ ಮೋಸಗಳಿಲ್ಲದೇ ಅಂತರ್ಧರ್ಮೀಯ ವಿವಾಹ ನಡೆದರೆ ಅದನ್ನು ಮತಾಂತರಕ್ಕಾಗಿಯೇ ಮಾಡಲಾದ ವಿವಾಹ ಎನ್ನುವುದಕ್ಕೆ ಸಾಧ್ಯವಿಲ್ಲ ಆದ್ದರಿಂದ ಈ ಕಾಯ್ದೆಯ ಕಠಿಣ ಸೆಕ್ಷನ್ ಗಳಾದ 3,4,4ಎ ಮತ್ತು 4ಸಿ, 5, 6, 6ಚಿ ಗಳು ಕಾರ್ಯನಿರ್ವಹಿಸುವುದಕ್ಕೆ ತಡೆ ನೀಡಲಾಗುತ್ತಿದೆ” ಎಂದು ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಒಂದೇ ದಿನ 1 ಕೋಟಿ ಲಸಿಕೆ – ದಾಖಲೆ ಬರೆದ ಭಾರತ

    ಹೈಕೋರ್ಟ್‍ನ ಈ ನಡೆಯನ್ನು ಪ್ರಶ್ನಿಸಿ ಗುಜರಾತ್ ಸರ್ಕಾರ ಇದೀಗ ಸುಪ್ರೀಂಕೋರ್ಟ್‍ನಲ್ಲಿ ಮನವಿ ಸಲ್ಲಿಸಿ ಹೈಕೋರ್ಟ್ ನೀಡಿರುವ ತಡೆಯನ್ನು ತೆರವುಗೊಳಿಸುವ ಪ್ರಯತ್ನಕ್ಕೆ ಮುಂದಾಗಿದೆ.

  • ಹೈವೇಯಿಂದ 40 ಮೀ. ಒಳಗಡೆ ಕಟ್ಟಡ ನಿರ್ಮಿಸುವಂತಿಲ್ಲ – ಹೈಕೋರ್ಟ್

    ಹೈವೇಯಿಂದ 40 ಮೀ. ಒಳಗಡೆ ಕಟ್ಟಡ ನಿರ್ಮಿಸುವಂತಿಲ್ಲ – ಹೈಕೋರ್ಟ್

    ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ 40 ಮೀ.ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿ ಸರ್ಕಾರದ ಸುತ್ತೋಲೆಯನ್ನು ಎತ್ತಿ ಹಿಡಿದಿದೆ.

    ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಜಿಲ್ಲಾ ಹೆದ್ದಾರಿಯ 25 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಈ ಹಿಂದೆ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಕಟ್ಟಡ ರಹಿತ ವಲಯವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು 1999 ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಈ ಬಗ್ಗೆ ಆದೇಶಿಸಿತ್ತು. ಇದನ್ನೂ ಓದಿ: ಗಲಾಟೆ ಮಾಡಿ ತಲೆಗೆ ಕಲ್ಲಲ್ಲಿ ಹೊಡೆದು ಹುಡುಗಿಯನ್ನು ದೂರ ಕರೆದೊಯ್ದು ರೇಪ್ ಮಾಡಿದ್ರು: ಯುವಕ 

    ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಉಡುಪಿಯ ಕಾಪು ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಟ್ಟಡವನ್ನು ನಿರ್ಮಿಸಲಾಗಿತ್ತು. ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆಯ ವೇಳೆ ಹೈಕೋರ್ಟ್ ಈ ಆದೇಶವನ್ನು ಪ್ರಕಟಿಸಿದೆ.

    60 ದಿನಗಳಲ್ಲಿ ಅತಿಕ್ರಮಿತ ಕಟ್ಟಡವನ್ನು ತೆರವುಗೊಳಿಸಬೇಕೆಂದು 4 ಮಂದಿ ಪ್ರತಿವಾದಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದ ಬಗ್ಗೆಯೂ 15 ದಿನಗಳಲ್ಲಿ ಸತ್ಯ ಶೋಧನೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಸಲ್ಮಾನ್ ಖಾನ್ ತಡೆದ ಅಧಿಕಾರಿಗೆ ಇನಾಮು

  • ಬೇಂದ್ರೆ ಖಾಸಗಿ ಬಸ್ ಸಂಚಾರಕ್ಕಿಲ್ಲ ಬ್ರೇಕ್-ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

    ಬೇಂದ್ರೆ ಖಾಸಗಿ ಬಸ್ ಸಂಚಾರಕ್ಕಿಲ್ಲ ಬ್ರೇಕ್-ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

    ಧಾರವಾಡ/ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸಂಚರಿಸುತ್ತಿದ್ದ ಬೇಂದ್ರೆ ಬಸ್‍ಗೆ ಪರ್ಯಾಯ ಮಾರ್ಗ ಸೂಚಿಸಿದ್ದನ್ನು ಆಕ್ಷೇಪಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ತಾತ್ಕಾಲಿಕ ಆದೇಶ ನೀಡಿದ್ದು. ಇದರಿಂದಾಗಿ ಮಹಾನಗರ ಮಧ್ಯೆ ಬೇಂದ್ರೆ ಬಸ್‍ಗೆ ಸದ್ಯಕ್ಕೆ ಬ್ರೇಕ್ ಇಲ್ಲದಂತಾಗಿದ್ದು, ಯಥಾಪ್ರಕಾರ ಸಂಚರಿಸಬಹುದಾಗಿದೆ.

    2003ರಿಂದ ಹುಬ್ಬಳ್ಳಿ-ಧಾರವಾಡ ಮಧ್ಯೆ ಬೇಂದ್ರೆ ಬಸ್ ಸಂಚರಿಸುತ್ತಿದ್ದವು. ಇತ್ತೀಚಿಗೆ ಇಲ್ಲಿ ಆರಂಭವಾದ ಬಹು ನಿರೀಕ್ಷಿತ ಬಿಆರ್​ಟಿಎಸ್ ಗೆ ನಿರೀಕ್ಷಿತ ಆದಾಯ ಬರುತ್ತಿರಲಿಲ್ಲ. ಇದಕ್ಕೆ ಬೇಂದ್ರೆ ಬಸ್ ಸಂಚಾರವೇ ಕಾರಣವೆಂದು ಅದರ ಸೇವೆ ಸ್ಥಗಿತಗೊಳಿಸಬೇಕೆಂಬ ಬೇಡಿಕೆ ಬಿಆರ್​ಟಿಎಸ್ ಸಂಸ್ಥೆಯದಾಗಿತ್ತು. ಆದರೆ ಬೇಂದ್ರೆ ಸಾರಿಗೆ ಸಂಸ್ಥೆ ಪರ್ಯಾಯ ಮಾರ್ಗವಾದರೂ ಸೂಚಿಸಿ ಅಥವಾ ಇಲ್ಲೇ ಮುಂದುವರಿಯಲು ಅವಕಾಶ ಕಲ್ಪಿಸಿ ಎಂಬ ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕಳೆದ ತಿಂಗಳು ಇಲ್ಲಿ ಸಂಚರಿಸುತ್ತಿದ್ದ 41 ಬೇಂದ್ರೆ ಬಸ್‍ಗಳಿಗೆ ಪರ್ಯಾಯ ಮಾರ್ಗ ಸೂಚಿಸಿ ಆದೇಶಿಸಿತ್ತು.

    ಎಲ್ಲೆಲ್ಲಿ ಪರ್ಯಾಯ ಮಾರ್ಗ:
    ಬೆಳಗಾವಿ-ಅಥಣಿ-ವಿಜಯಪುರ-15, ಹುಬ್ಬಳ್ಳಿ-ಬಾಗಲಕೋಟ-ವಿಜಯಪುರ-15, ಹಾಗೂ ಹುಬ್ಬಳ್ಳಿ-ಗದಗ ನಡುವೆ 11 ಒಟ್ಟು 41 ವಾಹನಗಳಿಗೆ ಸಂಚರಿಸಲು ಅನುಮತಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನು ವಿರೋಧಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿತ್ತು. ಈಗ ಸೂಚಿಸಿರುವ ಪರ್ಯಾಯ ಮಾರ್ಗಗಳು ಆದಾಯ ಗಳಿಸುವ ಮಾರ್ಗಗಳಾಗಿವೆ. ಮೊದಲೇ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯೂ ಹಾನಿಯಲ್ಲಿದೆ. ಖಾಸಗಿ ವಾಹನಗಳಿಗೆ ಅನುಮತಿಸಿದರೆ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ ಎಂದು ತನ್ನ ವಾದ ಮಂಡಿಸಿತ್ತು.

    ಎರಡೂ ಕಡೆಯ ವಾದ- ಪ್ರತಿವಾದ ಆಲಿಸಿದ ಹೈಕೋರ್ಟ್ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮನವಿಯನ್ನು ಪುರಸ್ಕರಿಸಿದೆ. ಅಲ್ಲದೇ ಸದ್ಯಕ್ಕೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ಮಿಕನಂತೆ ಲಾರಿಯಿಂದ ಅಕ್ಕಿ ಚೀಲ ಇಳಿಸಿದ ಮಾಜಿ ಸಚಿವ ಸಂತೋಷ್ ಲಾಡ್

    ಇದರಿಂದಾಗಿ ಪರ್ಯಾಯ ಮಾರ್ಗಗಳಲ್ಲಿ ಬೇಂದ್ರೆ ಬಸ್‍ಗಳು ಸಂಚರಿಸುವುದಿಲ್ಲ. ಜೊತೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿರುವುದರಿಂದ ಹುಬ್ಬಳ್ಳಿ-ಧಾರವಾಡ ಮಧ್ಯೆ ಇನ್ನಷ್ಟು ದಿನ ಬೇಂದ್ರೆ ಬಸ್ ಸಂಚಾರ ಅಬಾಧಿತ ಎಂಬಂತಾಗಿದೆ.

  • ಜಾರಕಿಹೊಳಿ ಸಿಡಿ ಕೇಸ್‍ಗೆ ಟ್ವಿಸ್ಟ್ – ಹೈಕೋರ್ಟ್ ಅಸಮಾಧಾನ

    ಜಾರಕಿಹೊಳಿ ಸಿಡಿ ಕೇಸ್‍ಗೆ ಟ್ವಿಸ್ಟ್ – ಹೈಕೋರ್ಟ್ ಅಸಮಾಧಾನ

    ಬೆಂಗಳೂರು: ಸಿಡಿ ಕೇಸ್ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎಸ್‍ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ಅವರ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

    ರಮೇಶ್ ಜಾರಕಿಹೊಳಿ ಪ್ರಕರಣ ಇತ್ಯರ್ಥ ಆಗುವ ಲಕ್ಷಣಗಳೇ ಕಾಣುತ್ತಿಲ್ಲ. ತನಿಖೆ ಮುಗಿದು ಕೋರ್ಟ್ ಸುಪರ್ದಿಯಲ್ಲಿ ಅಂತಿಮ ವರದಿ ಇದ್ದರೂ ಅದನ್ನು ಕೆಳಹಂತದ ನ್ಯಾಯಾಲಯ ಸಲ್ಲಿಸುವುದಾಗಲಿ, ಜಾರಕಿಹೊಳಿಗೆ ಮುಕ್ತಿ ಕೊಡಿಸುವುದಾಗಲಿ ಆಗುತ್ತಿಲ್ಲ.

    ಇಂದು ರಮೇಶ್ ಜಾರಕಿಹೊಳಿ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎಸ್ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ಅವರ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು. ಎಸ್‍ಐಟಿ ಮುಖ್ಯಸ್ಥರು ಮೂರು ತಿಂಗಳು ರಜೆ ಪಡೆದುಕೊಂಡಿದ್ದರು. ಆ ಸಂದರ್ಭದಲ್ಲಿ ಇಡೀ ಪ್ರಕರಣದ ತನಿಖೆ ನಡೆದಿದೆ. ಈ ಬಗ್ಗೆ ಹೈಕೋರ್ಟ್‍ಗೆ ಕೂಡ ಅಂತಿಮ ವರದಿ ಸಲ್ಲಿಕೆ ಮಾಡಿದ್ದಾರೆ. ಆದರೆ ಎಸ್‍ಐಟಿ ಮುಖ್ಯಸ್ಥರ ಗಮನದಲ್ಲಿ ಇಲ್ಲದೇ ತನಿಖೆ ಮುಕ್ತಾಯ ಆಗಿದೆ. ಹಾಗಾದರೆ ಎಸ್‍ಐಟಿ ಮುಖ್ಯಸ್ಥರನ್ನು ನೇಮಕ ಮಾಡೋದು ಯಾಕೆ ಎಂದು ಕೋರ್ಟ್ ಪ್ರಶ್ನೆ ಮಾಡಿದೆ.  ಇದನ್ನೂ ಓದಿ: ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿದ್ದೇನೆ, ನನಗೂ ಒಳ್ಳೆಯ ಕಾಲ ಬರಲಿದೆ: ರಮೇಶ್ ಜಾರಕಿಹೊಳಿ

    ರಜೆ ಮುಗಿಸಿಕೊಂಡು ವಾಪಸ್ ಬಂದಿರುವ ಸೌಮೆಂದು ಮುಖರ್ಜಿ ಎಸ್‍ಐಟಿ ಅಧಿಕಾರಗಳ ಜೊತೆ ಕೇಸ್ ಬಗ್ಗೆ ರಿವ್ಯೂ ಮೀಟಿಂಗ್ ಕೂಡ ಮಾಡಿಲ್ಲ. ರಿವ್ಯೂ ಮೀಟಿಂಗ್ ಮಾಡದೆ ಇದ್ದರೆ ವರದಿಯ ಬಗ್ಗೆ ಅನುಮತಿ ಇದ್ಯಾ, ಇಲ್ಲವೇ ಎಂಬ ನಿಲುವು ತಿಳಿಸುವಂತೆ 20 ನಿಮಿಷಗಳ ಕಾಲ ಹೈಕೋರ್ಟ್ ಅವಕಾಶ ನೀಡಿತ್ತು.

    ಈ ನಡುವೆ ಹೈಕೋರ್ಟ್‍ಗೆ ಸೌಮೆಂದು ಮುಖರ್ಜಿ ಯಾವ ನಿಲುವನ್ನು ಸ್ಪಷ್ಟಪಡಿಸಲಿಲ್ಲ. ಹಾಗಾಗಿ, ಮುಂದಿನ ವಿಚಾರಣೆಯಲ್ಲಿ ಪ್ರಮಾಣಪತ್ರ ನೀಡುವಂತೆ ಎಸ್‍ಐಟಿ ಮುಖ್ಯಸ್ಥರಿಗೆ ಹೈಕೋರ್ಟ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಸೆ.2ಕ್ಕೆ ಮುಂದೂಡಿದೆ.

  • ಜೈಲಿನಿಂದ ಹೊರಬರಲು ವಿನಯ್ ಕುಲಕರ್ಣಿಗೆ ಬೇಕಿದೆ ಇನ್ನೊಂದು ಜಾಮೀನು

    ಜೈಲಿನಿಂದ ಹೊರಬರಲು ವಿನಯ್ ಕುಲಕರ್ಣಿಗೆ ಬೇಕಿದೆ ಇನ್ನೊಂದು ಜಾಮೀನು

    ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನಿನ್ನೆಯಷ್ಟೇ ಸುಪ್ರೀಂ ಕೋರ್ಟ್‍ನಲ್ಲಿ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕರೂ ಅವರಿಗೆ ಜೈಲಿನಿಂದ ಬಿಡುಗಡೆ ಭಾಗ್ಯವಿಲ್ಲ. ಇನ್ನೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಅವರು ಜೈಲಿನಿಂದ ಬಿಡುಗಡೆ ಹೊಂದಬಹುದೆಂದು ವಿನಯ್ ಪರ ವಕೀಲರಾದ ಆನಂದ ಕೊಳ್ಳಿ ತಿಳಿಸಿದ್ದಾರೆ.

    ಈ ವಿಚಾರವಾಗಿ ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆನಂದ ಕೊಳ್ಳಿ, ಇನ್ನೊಂದು ಪ್ರಕರಣದಲ್ಲಿ ಜಾಮೀನು ಆಗಬೇಕಿದೆ. ಈಗಾಗಲೇ ಆ ಪ್ರಕರಣದ ಜಾಮೀನು ಅರ್ಜಿ ಸಲ್ಲಿಸಲಿದ್ದೇವೆ. ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಾಗಿಟ್ಟುಕೊಂಡು ಈ ಅರ್ಜಿ ಸಲ್ಲಿಸುತ್ತೇವೆ. ವಿನಯ್ ಕುಲಕರ್ಣಿ ಬೆಂಗಳೂರಿನಲ್ಲೇ ಇರುವಂತೆ ಕೋರ್ಟ್ ಆದೇಶ ಮಾಡಿದೆ. ಬೆಂಗಳೂರು ಬಿಟ್ಟು ಎಲ್ಲಿಯೂ ಹೋಗುವಂತಿಲ್ಲ, ಧಾರವಾಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಇದೆ ಎಂದರು.

    ವಿನಯ್ ಕುಲಕರ್ಣಿ ಧಾರವಾಡಕ್ಕೆ ಬರಬೇಕೆಂದರೆ ಸುಪ್ರೀಂ ಕೋರ್ಟ್‍ನ ಅನುಮತಿ ಪಡೆಯಬೇಕು. ಅವಶ್ಯಕ ಕಾರಣ ಒದಗಿಸಿ ಅನುಮತಿ ಪಡೆಯಬಹುದಾಗಿದೆ. ಸುಪ್ರೀಂ ಕೋರ್ಟ್‍ನಲ್ಲಿ ಜಾಮೀನಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿತ್ತು, ಕಾನೂನು ಪ್ರಕಾರ ಸಿಬಿಐ ನಡೆ ತಪ್ಪು ಎಂದು ನಾವು ವಾದಿಸಿದ್ದೇವು. ನಮ್ಮ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿತು, ಹೈಕೋರ್ಟ್‍ನಲ್ಲಿನ ವಿಚಾರಣೆ ಎರಡು ತಿಂಗಳಲ್ಲಿ ಮುಗಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂನಿಂದ ಜಾಮೀನು

    ಈ ಪ್ರಕರಣ ಸಿಬಿಐಗೆ ವಹಿಸಿದ್ದು ಕಾನೂನು ಪ್ರಕಾರ ಸರಿಯೇ ಎನ್ನುವ ವಿಚಾರವಾಗಿ ಅವರು ಮಾತನಾಡಿ, ಅದು ಬೆಂಗಳೂರು ಹೈಕೋರ್ಟ್‍ನ ವಿಚಾರಣೆಯಲ್ಲಿ ನಿರ್ಧಾರ ಆಗಲಿದೆ, ರಾಜ್ಯ ಸರ್ಕಾರ ಮೂರು ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ, ಅದರಲ್ಲಿ ಒಂದು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು, ಆಗ ಯೋಗೇಶ್ ಗೌಡ ಅವರ ಅಣ್ಣ ಹೈಕೋರ್ಟ್ ಮೊರೆ ಹೋಗಿದ್ದರು, ಹೈಕೋರ್ಟ್ ಅವರ ಅರ್ಜಿಯನ್ನೂ ತಿರಸ್ಕರಿಸಿತ್ತು, ಆದರೂ ಸರ್ಕಾರ ಮತ್ತೆ ಸಿಬಿಐ ನೀಡಿತ್ತು. ಇದನ್ನೇ ಚಾಲೆಂಜ್ ಮಾಡಿ ಜಾಮೀನು ಪಡೆಯಲಾಗಿದೆ ಎಂದು ತಿಳಿಸಿದರು.

  • ಭ್ರಷ್ಟಾಚಾರ ಆರೋಪ – ಬಿಎಸ್‍ವೈ, ವಿಜಯೇಂದ್ರಗೆ ಸಮನ್ಸ್ ಜಾರಿ

    ಭ್ರಷ್ಟಾಚಾರ ಆರೋಪ – ಬಿಎಸ್‍ವೈ, ವಿಜಯೇಂದ್ರಗೆ ಸಮನ್ಸ್ ಜಾರಿ

    ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಮತ್ತು ಕುಟುಂಬದವರು, ಆಪ್ತರಿಗೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ಹ್ಯಾಂಡ್ ಸಮನ್ಸ್ ಜಾರಿಗೊಳಿಸಿದೆ.

    ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 17 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: ಫೋನ್‍ನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆ – ವರ್ಷ ಆಗುವುದರೊಳಗೆ ಯುವತಿ ಆತ್ಮಹತ್ಯೆ!

    ಆರೋಪ ಏನು?
    ಕೋಲ್ಕತ್ತಾ ಮೂಲದ ಶೆಲ್ ಕಂಪನಿಯಲ್ಲಿ ಹೂಡಿಕೆಗೆ ಪ್ರತಿಯಾಗಿ 12.5 ಕೋಟಿ ಹಣ, ಮತ್ತೊಮ್ಮೆ 5.5 ಕೋಟಿ ಪಡೆದು ಭ್ರಷ್ಟಾಚಾರ ಎಸಗಿದ್ದಾರೆ. ಬಿಎಸ್‍ವೈ, ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ್ ಮರಡಿ , ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಮ್, ಸಚಿವ ಎಸ್ ಟಿ ಸೋಮಶೇಖರ್, ಅಂದಿನ ಬಿಡಿಎ ಆಯುಕ್ತ ಡಾ ಜಿಸಿ ಪ್ರಕಾಶ್, ಕೆ ರವಿ, ಮತ್ತು ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಅಬ್ರಹಾಂ ದೂರು ನೀಡಿದ್ದರು.

  • ಬಿಎಸ್‍ವೈ, ವಿಜಯೇಂದ್ರಗೆ ಹೈಕೋರ್ಟ್ ನೋಟಿಸ್

    ಬಿಎಸ್‍ವೈ, ವಿಜಯೇಂದ್ರಗೆ ಹೈಕೋರ್ಟ್ ನೋಟಿಸ್

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ 7 ಜನರಿಗೆ ನೋಟಿಸ್ ನೀಡಿದೆ. ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ನಡೆಸಿತು.

    ವಿಚಾರಣೆ ಕೈಗೆತ್ತಿಕೊಂಡ ಏಕಸದಸ್ಯ ಪೀಠ ಕೆಲವೊಂದು ಮಾಹಿತಿಗಳನ್ನು ಆಲಿಸಿದ ಬಳಿಕ ಬಿಎಸ್ ಯಡಿಯೂರಪ್ಪ ಸೇರಿ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ ನೀಡಿತು. ಬಿಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರುಪಾಕ್ಷಪ್ಪ ಯಮಕನಮರಡಿಗೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಸಿಎಂ, ವಿಜಯೇಂದ್ರ, 7 ಮಂದಿ ಆಪ್ತರ ವಿರುದ್ಧ ದೂರು

    ಇಂದು ವಾದ ಮಂಡಿಸುವಾಗ ಯಡಿಯೂರಪ್ಪ ಅವರು ಈಗ ಸಿಎಂ ಸ್ಥಾನದಲ್ಲಿ ಇಲ್ಲ. ಹೀಗಾಗಿ ಪೂರ್ವಾನುಮತಿ ಅಗತ್ಯವಿಲ್ಲವೆಂದು ಟಿ.ಜೆ. ಅಬ್ರಹಾಂ ಪರ ವಕೀಲರು ವಾದ ಮಂಡಿಸಿದ್ದರು. ಪೂರ್ವಾನುಮತಿ ಕುರಿತಾಗಿ ವಾದ ಆಲಿಸಬೇಕಾದ ಅಗತ್ಯ ಹಿನ್ನೆಲೆಯಲ್ಲಿ ಈಗ ನೋಟಿಸ್ ಜಾರಿ ಮಾಡಿದೆ.

  • ಕಾರವಾರ ಬಂದರು ವಿಸ್ತರಣೆ- ಹೈಕೋರ್ಟ್ ಮಹತ್ವದ ತೀರ್ಪು

    ಕಾರವಾರ ಬಂದರು ವಿಸ್ತರಣೆ- ಹೈಕೋರ್ಟ್ ಮಹತ್ವದ ತೀರ್ಪು

    ಕಾರವಾರ: ಇಲ್ಲಿನ ವಾಣಿಜ್ಯ ಬಂದರು ವಿಸ್ತರಣೆಗೆ ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿ, ಮಹತ್ವದ ಆದೇಶ ಪ್ರಕಟಿಸಿದೆ.

    ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಒಕಾ ಅವರಿದ್ದ ದ್ವಿ ಸದಸ್ಯ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ. ವಿಚಾರಣೆ ನಡೆಸಿದ ಪೀಠ, ಮೀನುಗಾರರ ಅರ್ಜಿ ತಿರಸ್ಕರಿಸಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸಬಹುದು ಎಂದು ಕರ್ನಾಟಕ ರಾಜ್ಯ ಮೆರಿಟೈಮ್ ಬೋರ್ಡ್ ಗೆ ಸೂಚಿಸಿದೆ.

    ಸಾಗರ ಮಾಲಾ ಯೋಜನೆಯಲ್ಲಿ 274 ಕೋಟಿ ವೆಚ್ಚದಲ್ಲಿ ಬೈತಖೋಲ್ ವಾಣಿಜ್ಯ ಬಂದರಿನ 250 ಮೀಟರ್ ಜಟ್ಟಿ ಹಾಗೂ 880 ಮೀಟರ್ ಅಲೆ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು 2019ರಲ್ಲಿ ಪ್ರಾರಂಭಿಸಲಾಗಿತ್ತು. ಅದನ್ನು ವಿರೋಧಿಸಿ ಬೈತಖೋಲ್ ಮೀನುಗಾರರ ಸಂಘಟನೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. 2020 ರಲ್ಲಿ ಹೈಕೋರ್ಟ್ ಕಾಮಗಾರಿಗೆ ತಡೆ ನೀಡಿತ್ತು.

  • ರಮೇಶ್ ಜಾರಕಿಹೊಳಿ ಕೇಸ್ : ಹೈಕೋರ್ಟ್‍ಗೆ ಫೈನಲ್ ರಿಪೋರ್ಟ್  ಸಲ್ಲಿಕೆ

    ರಮೇಶ್ ಜಾರಕಿಹೊಳಿ ಕೇಸ್ : ಹೈಕೋರ್ಟ್‍ಗೆ ಫೈನಲ್ ರಿಪೋರ್ಟ್  ಸಲ್ಲಿಕೆ

    ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ(ಎಸ್‍ಐಟಿ) ತನ್ನ ಅಂತಿಮ ತನಿಖಾ ವರದಿಯನ್ನು ಹೈಕೋರ್ಟ್‍ಗೆ ಸಲ್ಲಿಕೆ ಮಾಡಿದೆ.

    ಈಗಾಗಲೇ ಮೂರು ತಿಂಗಳಿನಿಂದ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸುತ್ತಿದ್ದ ಮುಖ್ಯ ನ್ಯಾಯಮೂರ್ತಿಗಳು ಫೈನಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಸೂಚನೆ ನೀಡಿದ್ದರು.

    ನ್ಯಾಯಾಲಯಕ್ಕೆ ಕೇವಲ ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣ ಮಾತ್ರ ಅಲ್ಲದೇ ಸದಾಶಿವನಗರ ಬ್ಲಾಕ್ ಮೇಲ್ ಕೇಸ್ ಗೆ ಸಂಬಂಧಪಟ್ಟಂತೆ ಅಂತಿಮ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ : ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮುಗಿದ ಅಧ್ಯಾಯ: ರಮೇಶ್ ಜಾರಕಿಹೊಳಿ

    ಕುತೂಹಲ ಅಂದರೆ ಮಂಗಳವಾರ ಅರ್ಜಿ ಮತ್ತೆ ಹೈಕೋರ್ಟ್ ಅಲ್ಲಿ ವಿಚಾರಣೆಗೆ ಬರಲಿದ್ದು, ನಿರ್ಣಾಯಕ ಹಂತದ ವಿಚಾರಣೆ ಇದಾಗಲಿದೆ. ಫೈನಲ್ ರಿಪೋರ್ಟ್ ಆಲಿಸುವ ನ್ಯಾಯಾಲಯ ಯಾವ ಆದೇಶ ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.