Tag: high court

  • ಗೋಕರ್ಣ ದೇವಸ್ಥಾನ ಮತ್ತೆ ರಾಮಚಂದ್ರಾಪುರ ಮಠದ ಸುಪರ್ದಿಗೆ: ಸುಪ್ರೀಂ ಮಧ್ಯಂತರ ಆದೇಶ

    ಗೋಕರ್ಣ ದೇವಸ್ಥಾನ ಮತ್ತೆ ರಾಮಚಂದ್ರಾಪುರ ಮಠದ ಸುಪರ್ದಿಗೆ: ಸುಪ್ರೀಂ ಮಧ್ಯಂತರ ಆದೇಶ

    ನವದೆಹಲಿ: ಉತ್ತರ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನವನ್ನು ಮುಂದಿನ ಆದೇಶದವರೆಗೆ ರಾಮಚಂದ್ರಾಪುರ ಮಠದ ಸುಪರ್ದಿಗೆ ಒಪ್ಪಿಸುವಂತೆ ಸುಪ್ರೀಂಕೋರ್ಟ್ ದ್ವೀಸದಸ್ಯ ಪೀಠ ಬುಧವಾರ ಮಧ್ಯಂತರ ಆದೇಶ ಹೊರಡಿಸಿದೆ.

    ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸರ್ಕಾರದ ಸುಪರ್ದಿಗೆ ವಹಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ, ರಾಮಚಂದ್ರಾಪುರ ಮಠ ಅರ್ಜಿ ಸಲ್ಲಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾ.ಕುರಿಯನ್ ಜೋಸೆಫ್, ನ್ಯಾ.ಎ.ಎಂ.ಖನ್ವಿಲ್ಕರ್ ಪೀಠ ಈ ಮಧ್ಯಂತರ ಆದೇಶ ನೀಡಿದೆ. ಜೊತೆಗೆ ರಾಮಚಂದ್ರಾಪುರ ಮಠ ಸಲ್ಲಿಸಿದ್ದ ನ್ಯಾಯಂಗ ನಿಂದನೆ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥ ಪಡಿಸಿದೆ.

    ಸೆಪ್ಟೆಂಬರ್ 7ರಂದು ನಡೆದ ವಿಚಾರಣೆ ವೇಳೆ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಪೀಠ ನಿರಾಕರಿಸಿತ್ತು. ಸರ್ಕಾರ, ರಾಮಚಂದ್ರಾಪುರ ಮಠ ಹಾಗೂ ದೇವಸ್ಥಾನದ ಟ್ರಸ್ಟಿಗಳಿಗೆ ದೇವಸ್ಥಾನ ಪೂಜಾ ಕೈಂಕರ್ಯಗಳ ಮಾಹಿತಿ ನೀಡುವಂತೆ ಸೂಚನೆ ನೀಡಿತ್ತು. ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಸೆಪ್ಟೆಂಬರ್ 17 ರಿಂದ 18ರವರೆಗೆ ಜಿಲ್ಲಾಧಿಕಾರಿ ಮಠವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದರು. ಇದನ್ನು ಓದಿ: ಗೋಕರ್ಣ ದೇಗುಲದ ಆಡಳಿತ ನಡೆಸ್ತಿದ್ದ ರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್ ನಿಂದ ಬ್ರೇಕ್

    ಜಿಲ್ಲಾಧಿಕಾರಿ ನಡೆಯನ್ನು ಪ್ರಶ್ನಿಸಿದ್ದ ರಾಮಚಂದ್ರಾಪುರ ಮಠ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಇಂದು ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ್ದ ದ್ವಿಸದಸ್ಯ ನ್ಯಾಯಪೀಠವು, ದೇಗುಲವನ್ನು ರಾಮಚಂದ್ರಾಪುರ ಮಠದ ಸುಪರ್ದಿಗೆ ಒಪ್ಪಿಸುವ ಮೊದಲು ಇದ್ದ ಸ್ಥಿತಿ ಇರಲಿ, ನವೆಂಬರ್ ನಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗುವುದು. ಯಥಾಸ್ಥಿತಿ ಕಾಪಾಡುವಂತೆ ಆದೇಶ ನೀಡಿರುವುದರಿಂದ ನ್ಯಾಯಾಂಗ ನಿಂದನೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಮೂಲಕ ದೇವಸ್ಥಾನವನ್ನು ಸುಪರ್ದಿಗೆ ಪಡೆಯಲು ಸೆ.16ರಂದು ಜಿಲ್ಲಾಧಿಕಾರಿ ನೀಡಿದ ಆದೇಶವನ್ನು ನ್ಯಾಯಪೀಠ ರದ್ದುಪಡಿಸಿದೆ.

    ಏನಿದು ಪ್ರಕರಣ?
    2008ರ ಆಗಸ್ಟ್ 12ರಂದು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಗೋಕರ್ಣದ ಐತಿಹಾಸಿಕ ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠದ ಸುಪರ್ದಿಗೆ ನೀಡಿತ್ತು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬಾಲಚಂದರ್ ದೀಕ್ಷಿತ್ ಮತ್ತು ನರಹರಿ ಕೃಷ್ಣ ಹೆಗ್ಡೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕಳೆದ 10 ವರ್ಷಗಳಿಂದ ಗೋಕರ್ಣ ದೇಗುಲದ ಆಡಳಿತ ನಡೆಸುತ್ತಿದ್ದ ರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್ ಬ್ರೇಕ್ ಹಾಕಿ, ಸೆಪ್ಟೆಂಬರ್ 10ರಿಂದ ಉಸ್ತುವಾರಿ ಸಮಿತಿ ಅಸ್ಥಿತ್ವಕ್ಕೆ ಬರಬೇಕು ಎಂದು ಆದೇಶ ಹೊರಡಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ ಇವತ್ತು ಕಡೇ ದಿನ

    ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ ಇವತ್ತು ಕಡೇ ದಿನ

    ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚೋಕ್ಕೆ ಹೈಕೋರ್ಟ್ ನೀಡಿದ ಸಮಯ ಇಂದು ಮುಗಿಯುತ್ತದೆ. ಹೈ ಕೋರ್ಟ್ ಚಾಟಿಯಿಂದ ಎಚ್ಚೆತ್ತಿರುವ ಬಿಬಿಎಂಪಿ ರಾತ್ರಿ ಹಗಲು, ಎನ್ನದೆ ರಸ್ತೆ ಗುಂಡಿಗಳನ್ನು ಮುಚ್ಚಲು ಹರಸಾಹಸ ಪಡುತ್ತಿದೆ. ಮೂರು ದಿನದಿಂದ 24*7 ಕೆಲಸ ಮಾಡುತ್ತಿದ್ದರೂ ಬೆಂಗಳೂರು ಮಾತ್ರ ಗುಂಡಿ ಮುಕ್ತವಾಗೋ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ.

    ಸೋಮವಾರದೊಳಗೆ ಬೆಂಗಳೂರನ್ನು ಗುಂಡಿಮುಕ್ತ ನಗರವನ್ನಾಗಿ ಘೋಷಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ಆದೇಶಿಸಿದೆ. ಅದಕ್ಕಾಗಿ ಬಿಬಿಎಂಪಿ ಅಧಿಕಾರಿಗಳು ರಜೆ ದಿನಗಳಲ್ಲೂ ಪಾಥ್‍ವೋಲ್‍ಗಳನ್ನು ಹುಡುಕಿ ತಡಕಿ ಫಿಲ್ ಮಾಡುತ್ತಿದ್ದಾರೆ. ಹಾಗಿದ್ರೆ ಬೆಂಗಳೂರಿನ ಎಲ್ಲ ರಸ್ತೆಗಳು ಇಂದಿನಿಂದ ಗುಂಡಿಗಳು ಇಲ್ಲದೇ ನಳನಳಿಸುತ್ತಾ, ವಾಹನ ಸವಾರರ ಪರದಾಟಕ್ಕೆ ಬ್ರೇಕ್ ಬೀಳುತ್ತಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

     

    ಬೆಂಗಳೂರಿನಲ್ಲಿ ಆರಂಭವಾಗುವ ವರುಣ ಆರ್ಭಟಕ್ಕೆ ಗೊರಗುಂಟೆಪಾಳ್ಯ ಬಳಿ ಗುಂಡಿಗಳು ನೀರಿನಿಂದ ತುಂಬಿ ತುಳುಕ್ಕುತ್ತಿವೆ. ವೆಸ್ಟ್ ಆಫ್ ಕಾರ್ಡ್ ರೋಡ್, ಹೆಣ್ಣೂರು ಕ್ರಾಸ್ ರಸ್ತೆಯಲ್ಲಂತು ಇಡೀ ರಸ್ತೆಯೇ ಗುಂಡಿ ಮಯವಾಗಿದೆ. ಇವೆಲ್ಲವನ್ನು ಮುಚ್ಚುಸಿ ಕೋರ್ಟ್ ಗೆ ಉತ್ತರಿಸಬೇಕಿರೋ ಮೇಯರ್ ಮಾಧ್ಯಮಗಳ ಮುಂದೆ ಹಾರಿಕೆಯ ಉತ್ತರ ಕೊಟ್ಟು ಜಾರಿಕೊಂಡಿದ್ದಾರೆ.

    ಒಟ್ಟಿನಲ್ಲಿ ನಗರದಲ್ಲಿ ಲೆಕ್ಕವಿಲ್ಲದಷ್ಟು ಗುಂಡಿಗಳನ್ನು ಮುಚ್ಚಿಸೋಕೆ ಬಿಬಿಎಂಪಿ ತರಾತುರಿಯಲ್ಲಿ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಕೆಲಸ ಮೊದಲೇ ಮಾಡಿದ್ರೆ ಅಧಿಕಾರಿಗಳು ನಿದ್ದೆಗೆಟ್ಟು, ರಜಾ ದಿನಗಳಲ್ಲಿ ಪರದಾಡುವಂತ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ. ಇವುಗಳ ನಡುವೆ ಕೋರ್ಟ್ ಗೆ ಇಂದು ಯಾವ ರೀತಿ ಬಿಬಿಎಂಪಿ ಉತ್ತರಿಸುತ್ತೆ ಎಂಬುದನ್ನು ಕಾದು ನೋಡಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ನ್ಯಾಷನಲ್ ಹೆರಾಲ್ಡ್ ಕೇಸ್- ರಾಹುಲ್, ಸೋನಿಯಾ ಅರ್ಜಿ ವಜಾ

    ನ್ಯಾಷನಲ್ ಹೆರಾಲ್ಡ್ ಕೇಸ್- ರಾಹುಲ್, ಸೋನಿಯಾ ಅರ್ಜಿ ವಜಾ

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ನೀಡಿದ್ದ ನೋಟಿಸನ್ನು ಪ್ರಶ್ನಿಸಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.

    ದುರುದ್ದೇಶ ಪೂರ್ವಕವಾಗಿ ಆದಾಯ ತೆರಿಗೆ ಇಲಾಖೆ ಯಂಗ್ ಇಂಡಿಯನ್ ಸಂಸ್ಥೆಗೆ ಸಂಬಂಧಿಸಿದಂತೆ 2011-12 ಸಾಲಿನ ಆದಾಯ ತೆರಿಗೆ ಮರು ಮೌಲ್ಯಮಾಪನ ಸಂಬಂಧ ನೋಟಿಸ್ ಜಾರಿ ಮಾಡಿದೆ ಎಂದು ಆರೋಪಿಸಿ ಸೋನಿಯಾ, ರಾಹುಲ್ ಗಾಂಧಿ, ಆಸ್ಕರ್ ಫೆರ್ನಾಂಡಿಸ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.

    ಸೋಮವಾರ ನ್ಯಾ. ರವೀಂದ್ರ ಭಟ್, ನ್ಯಾ. ಎ.ಕೆ ಚಾವ್ಲಾ ನೇತೃತ್ವದ ದ್ವಿಸದಸ್ಯ ಪೀಠ, ಆದಾಯ ತೆರಿಗೆ ಇಲಾಖೆ ತೆರಿಗೆದಾರರ ಆದಾಯವನ್ನು ಮರು ಮೌಲ್ಯಮಾಪನ ಮಾಡಲು ಅಧಿಕಾರವಿದೆ. ಹೀಗಾಗಿ ಅರ್ಜಿದಾರರು ಆದಾಯ ತೆರಿಗೆ ಇಲಾಖೆಗೆ ಹೋಗಿ ಅಲ್ಲಿ ಈ ಪ್ರಕರಣದಲ್ಲಿ ತಮ್ಮ ವಿರುದ್ಧ ಬಂದಿರುವ ಆರೋಪಗಳಿಗೆ ಉತ್ತರಿಸಬಹುದು ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.

    ರಾಹುಲ್ ಗಾಂಧಿ 2010 ರಿಂದಲೇ ಯಂಗ್ ಇಂಡಿಯನ್ ನಿರ್ದೇಶಕರಾಗಿದ್ದರೂ 2011-12ರ ಆದಾಯ ಮೌಲ್ಯಮಾಪನ ವರ್ಷದಲ್ಲಿ ನಾನು ನಿರ್ದೇಶಕನಾಗಿಲ್ಲ ಎಂದು ಉಲ್ಲೇಖಿಸಿದ್ದರು. ಈ ಕಾರಣಕ್ಕಾಗಿ ಗಾಂಧಿ ಕುಟುಂಬಸ್ಥರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಐಟಿ ಸ್ಪಷ್ಟಪಡಿಸಿತ್ತು. ವಿಚಾರಣೆ ವೇಳೆ ರಾಹುಲ್ ಗಾಂಧಿ ಪರ ವಕೀಲರು, ನನ್ನ ಕಕ್ಷೀದಾರರು ಯಂಗ್ ಇಂಡಿಯನ್‍ದಿಂದ ಯಾವುದೇ ಹಣವನ್ನು ಪಡೆದಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ತೆರಿಗೆಯನ್ನು ಉಲ್ಲಂಘಿಸಿದ್ದಾರೆ ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ವಾದಿಸಿದ್ದರು. ಆಗಸ್ಟ್ 16 ರಂದು ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಸಪ್ಟೆಂಬರ್ 10 ರಂದು ತೀರ್ಪು ನೀಡುವುದಾಗಿ ಹೇಳಿತ್ತು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮಾಧ್ಯಮಗಳು ವರದಿ ಮಾಡದಂತೆ ತಡೆ ನೀಡಲು ರಾಹುಲ್ ಗಾಂಧಿ ಈ ಹಿಂದೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿದ್ದರು. ಆದರೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್ ವಾದವನ್ನು ತಿರಸ್ಕರಿಸಿತ್ತು.

    ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?
    2013ರಲ್ಲಿ ಜನವರಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಪಟಿಯಾಲಾ ಹೌಸ್ ಕೋರ್ಟ್‍ನಲ್ಲಿ ಅಂದಿನ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಅವರ ಕಂಪೆನಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸೇರಿದಂತೆ ಸೋನಿಯಾ ಗಾಂಧಿ ಸಂಬಂಧಿತ ವ್ಯಕ್ತಿಗಳ ವಿರುದ್ಧ ದೂರು ಸಲ್ಲಿಸಿದ್ದರು.

    ಸುಬ್ರಮಣಿಯನ್ ಸ್ವಾಮಿ ಆರೋಪವೇನು?
    ಅಸೋಸಿಯೇಟೆಡ್ ಜರ್ನಲ್ಸ್(ಎಜಿಎಲ್) ಸಂಸ್ಥೆಯನ್ನು ಜವಹಾರ್ ಲಾಲ್ ನೆಹರು ಅವರು 1937ರ ನವೆಂಬರ್ 20 ರಂದು ಸ್ಥಾಪಿಸಿದ್ದರು. 5 ಸಾವಿರ ಸ್ವಾತಂತ್ರ್ಯ ಹೋರಾಟಗಾರರ ಸಹಕಾರದಿಂದ ಈ ಸಾರ್ವಜನಿಕ ಕಂಪೆನಿ ಸ್ಥಾಪನೆಯಾಗಿತ್ತು. ಎಜೆಎಲ್ ಸಂಸ್ಥೆಯ ಸ್ಥಾಪನೆ ಬಳಿಕ ಅಂದಿನ ಪ್ರಧಾನಿ ನೆಹರೂ ಅವರು, ನವದೆಹಲಿ, ಲಕ್ನೋ, ಭೋಪಾಲ್, ಮುಂಬೈ, ಇಂದೋರ್ ನಗರದಲ್ಲಿ ಸರ್ಕಾರದ ವತಿಯಿಂದ ಜಮೀನು ಮಂಜೂರು ಮಾಡಿದ್ದರು. ಅಲ್ಲದೇ ಅವರ ಅವಧಿಯಲ್ಲಿ ಸಂಸ್ಥೆಗೆ ಅಪಾರ ಪ್ರಮಾಣದ ದೇಣಿಗೆ ಹರಿದುಬಂದಿತ್ತು. ಎಜೆ ಸಂಸ್ಥೆ ಅಂದು ಉರ್ದು ಆವೃತ್ತಿಯ ‘ಕ್ವಾಮಿ ಆವಾಜ್’ ಹಾಗೂ ಇಂಗ್ಲಿಷ್ ಆವೃತ್ತಿಯ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆಗಳನ್ನು ಪ್ರಕಟಿಸುತಿತ್ತು.

    ಎಜೆಎಲ್ ಸಂಸ್ಥೆಗೆ ಕಾಂಗ್ರೆಸ್ ಪಕ್ಷ ಸಂಗ್ರಹಿಸಿದ್ದ ನಿಧಿಯಿಂದ 90 ಕೋಟಿ ರೂ. ಹಣವನ್ನು ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗಿತ್ತು. 2011ರಲ್ಲಿ ಎಜೆಎಲ್ ಸಂಸ್ಥೆಯ ಅಧ್ಯಕ್ಷರಾಗಿದ್ದ ಮೋತಿ ಲಾಲ್ ವೋರಾ ತಮ್ಮ ಸಂಸ್ಥೆ ಸಾಲ ಮರುಪಾವತಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿ ಸಂಸ್ಥೆ ಹಾಗೂ ಅದರ ಆಸ್ತಿಗಳನ್ನು ರಾಹುಲ್ ಗಾಂಧಿ ಕುಟುಂಬ ಒಡೆತನದಲ್ಲಿದ್ದ ಯಂಗ್ ಇಂಡಿಯನ್ ಸಂಸ್ಥೆಗೆ ವರ್ಗಾಯಿಸಲು ಸಮ್ಮತಿಸಿದ್ದರು.

    ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಡೆತನದ ಜವಾಹರಲಾಲ್ ನೆಹರು ಅವರು ಸ್ಥಾಪಿಸಿದ್ದ `ಯಂಗ್ ಇಂಡಿಯನ್’ ಎಂಬ ಸಂಸ್ಥೆ ನಿಯಮ ಬಾಹಿರವಾಗಿ ಅಸೋಸಿಯೇಟೆಡ್ ಜರ್ನಲ್ಸ್ ಸಂಸ್ಥೆಯನ್ನು (ಎಜೆಎಲ್) ಖರೀದಿಸಿದೆ ಎಂದು ಸುಬ್ರಮಣಿಯನ್ ಸ್ವಾಮಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು. ಯಂಗ್ ಇಂಡಿಯನ್ ಸಂಸ್ಥೆಯನ್ನು ಎಜೆಎಲ್ ಕಂಪೆನಿ ಖರೀದಿಸುವ ಮೂಲಕ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹೆಚ್ಚಿನ ಲಾಭವನ್ನು ಪಡೆದುಕೊಂಡಿದ್ದಾರೆ ಎಂದು ಸ್ವಾಮಿ ಆರೋಪಿಸಿದ್ದರು.

    ಈ ಆರೋಪಕ್ಕೆ ಪೂರಕ ಅಂಶವನ್ನು ತಿಳಿಸಿದ್ದ ಸ್ವಾಮಿ, ಯಂಗ್ ಇಂಡಿಯನ್ ಸಂಸ್ಥೆಯಲ್ಲಿ ಸೋನಿಯಾ ಕುಟುಂಬ ಹೆಚ್ಚು ಶೇರು ಹೊಂದಿರುವುದನ್ನು ಬಹಿರಂಗ ಪಡಿಸಿದ್ದರು. ಅಲ್ಲದೇ ಎಜೆಎಲ್ ಸಂಸ್ಥೆ ದೆಹಲಿ ಹಾಗೂ ಉತ್ತರ ಪ್ರದೇಶದಲ್ಲಿ ಹೊಂದಿದ್ದ ಕೋಟಿ ಕೋಟಿ ಬೆಳೆಬಾಳುವ ಆಸ್ತಿಗಳೂ ಯಂಗ್ ಇಂಡಿಯನ್ ಸಂಸ್ಥೆಯ ಪಾಲಾಗಿದೆ ಎಂದು ದೂರಿದ್ದರು. ಸ್ವತಂತ್ರ್ಯ ಸೇನಾನಿಗಳ ದೇಣಿಗೆಯಿಂದ ಆರಂಭವಾದ ಎಜೆಎಲ್ ಸಂಸ್ಥೆಯನ್ನು ಸೋನಿಯಾ ಕುಟುಂಬದ ವಶಮಾಡಿಕೊಂಡಿತ್ತು. ಈ ಸಂಸ್ಥೆಯ ಸ್ವತ್ತುಗಳ ಮೌಲ್ಯ 5 ಸಾವಿರ ಕೋಟಿ ರೂ. ಕೂಡ ಅವರ ಕೈ ಸೇರಿತ್ತು. ಇವುಗಳನ್ನು ವಿವರವಾಗಿ ನೀಡಿದ್ದ ಸ್ವಾಮಿ, ಪಕ್ಷಕ್ಕೆ ಬಂದ ದೇಣಿಗೆಯ ಹಣವನ್ನು ಸಾಲ ನೀಡಿ ಭಾರೀ ಮೌಲ್ಯದ ಆಸ್ತಿ ಪಡೆದಿದ್ದಾರೆ. ಅಲ್ಲದೇ ಎಜೆಎಲ್ ಸಂಸ್ಥೆಯ ನ್ಯಾಷನಲ್ ಹೆರಾಲ್ಡ್‍ನ ಕಟ್ಟಡವನ್ನು ವಾಣಿಜ್ಯ ಬಳಕೆಗೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು.

    ನಿಯಮ ಏನು ಹೇಳುತ್ತೆ: 1961 ರ ಆದಾಯ ತೆರಿಗೆ ಕಾನೂನಿನ ನಿಯಮಗಳ ಅನ್ವಯ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಅವಕಾಶ ನೀಡಲಾಗಿದೆ. ಆದರೆ ದೇಣಿಗೆ ಪಡೆದ ಹಣವನ್ನು ವಾಣಿಜ್ಯ ಕಾರಣಕ್ಕಾಗಿ 3ನೇ ವ್ಯಕ್ತಿ ಅಥವಾ ಸಂಸ್ಥೆಗಳಿಗೆ ಸಾಲ ನೀಡಲು ಅನುಮತಿ ಇಲ್ಲ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿಯಾಗಿದ್ದ ಸೋನಿಯಾ ಕಾನೂನು ಉಲ್ಲಂಘಿಸಿ ಸಾಲ ನೀಡಿದ್ದರು ಎನ್ನುವ ಆರೋಪವಿದೆ.

    ಯಾರ ಪಾಲು ಎಷ್ಟು?
    ಐಟಿ ಪ್ರಕಾರ, ಈ ಕಂಪನಿಯಲ್ಲಿ ಸೋನಿಯಾ ಗಾಂಧಿ ಶೇ.83.3ರಷ್ಟು, ರಾಹುಲ್ ಗಾಂಧಿ ಶೇ.15.5ರಷ್ಟು ಹಾಗೂ ಉಳಿಕೆ 1.2ರಷ್ಟು ಷೇರನ್ನು ಆಸ್ಕರ್ ಫರ್ನಾಂಡೀಸ್ ಹೊಂದಿದ್ದಾರೆ.. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೊಂದಿಗೆ ಸುಮನ್ ದುಬೆ. ಮೋತಿ ಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸ್ಯಾಮ್ ಪಿತ್ರೋಡಾ ಮತ್ತು ಯಂಗ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಪ್ರಕರಣದ ಆರೋಪಿಗಳಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪೆರೋಲ್ ಅವಧಿ ವಿಸ್ತರಿಸಿ: ಲಾಲೂ ಅರ್ಜಿ ತಿರಸ್ಕೃತ

    ಪೆರೋಲ್ ಅವಧಿ ವಿಸ್ತರಿಸಿ: ಲಾಲೂ ಅರ್ಜಿ ತಿರಸ್ಕೃತ

    ಪಾಟ್ನಾ: ಆಗಸ್ಟ್ 30 ರವರೆಗೆ ಪೆರೋಲ್ ಅವಧಿಯನ್ನು ಮುಂದುವರಿಸುವಂತೆ ಆರ್‍ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಮನವಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

    ಲಾಲು ಪ್ರಸಾದ್ ಅವರಿಗೆ ಏಷಿಯನ್ ಹಾರ್ಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಂಚಿಯ ರಾಜೇಂದ್ರ ವೈದ್ಯಕೀಯ ಸಂಸ್ಥೆಯಲ್ಲಿ ಇರಿಸಿ ಚಿಕಿತ್ಸೆಯನ್ನು ಮುಂದುವರಿಸಲಾಗುವುದು ಎಂದು ಆರ್‍ಜೆಡಿ ಮುಖ್ಯ ವಕೀಲ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.

    ವೈದ್ಯಕೀಯ ಚಿಕಿತ್ಸೆ ಹಿನ್ನಲೆಯಲ್ಲಿ ಈ ಹಿಂದೆಯೂ ಆಗಸ್ಟ್ 10 ರಿಂದ ಆಗಸ್ಟ್ 20ರವರೆಗೆ ಪೆರೋಲ್ ವಿಸ್ತರಿಸಲಾಗಿತ್ತು. ಈಗ ಮತ್ತೆ 10 ದಿನ ಪೆರೋಲ್ ವಿಸ್ತರಿಸುವಂತೆ ಮನವಿ ಮಾಡಲಾಗಿತ್ತು.

    2013ರ ಮೇವು ಹಗರಣ ಪ್ರಕರಣ ಪ್ರಮುಖ ಆರೋಪಿಯಾಗಿದ್ದ ಲಾಲು ಪ್ರಸಾದ್ 2017ರಂದು ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಬಿಹಾರದ ಬಿರ್ಸಾ ಮುಂಡಾ ಜೈಲಿನಲ್ಲಿ ಇದ್ದಾಗ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿತ್ತು. ಹೀಗಾಗಿ ಅಲ್ಲಿಯೇ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಮನವಿ ಸಲ್ಲಿಸಿದ್ದರಿಂದ ಮುಂಬೈನಲ್ಲಿ ಏಷಿಯನ್ ಹಾರ್ಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಂಗ್ಳೂರಿನ ಹೈಕೋರ್ಟ್ ಬಳಿಯೇ ಕಿಕಿ ಡ್ಯಾನ್ಸ್ – ಯುವತಿಯ ಮೋಜು ಮಸ್ತಿ

    ಬೆಂಗ್ಳೂರಿನ ಹೈಕೋರ್ಟ್ ಬಳಿಯೇ ಕಿಕಿ ಡ್ಯಾನ್ಸ್ – ಯುವತಿಯ ಮೋಜು ಮಸ್ತಿ

    ಬೆಂಗಳೂರು: ದಿನದಿಂದಕ್ಕೆ ಹೆಚ್ಚಾಗುತ್ತಿದ್ದ ಅಪಾಯಕಾರಿ ಕಿಕಿ ಡ್ಯಾನ್ಸ್ ಚಾಲೆಂಜ್ ನನ್ನು ಪೊಲೀಸರು ತಡೆಯಲು ಮುಂದಾಗಿದ್ದಾರೆ. ಆದರೆ ಈ ಮಧ್ಯೆ ಯುವತಿಯೊಬ್ಬಳು ನಗರದ ಹೈಕೋರ್ಟ್ ಬಳಿಯೇ ಡ್ಯಾನ್ಸ್ ಮಾಡಿದ್ದಾಳೆ.

    ಹೈಕೋರ್ಟ್ ಹಿಂಭಾಗದಲ್ಲಿ ಯುವತಿ ಡ್ಯಾನ್ಸ್ ಮಾಡಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದೆ. ಭಾನುವಾರ ರಜೆ ಇದ್ದ ಕಾರಣ ಯುವತಿ ಸಂಜೆ ಕಬ್ಬನ್ ಪಾರ್ಕ್ ಬಳಿ ಇರುವ ಹೈಕೋರ್ಟ್ ಬಳಿ ಕಾರಿನಲ್ಲಿ ಹೋಗಿದ್ದಾಳೆ. ಬಳಿಕ ಯಾರು ಇಲ್ಲದ ವೇಳೆ ಕಾರಿನಿಂದ ಇಳಿದು ಡ್ಯಾನ್ಸ್ ಮಾಡುತ್ತಾ ಹೋಗಿದ್ದಾಳೆ. ಅಲ್ಲದೇ ಡ್ಯಾನ್ಸ್ ಮಾಡುತ್ತಲೇ ಯುವತಿ ಕಾರ್ ಹತ್ತಿದ್ದಾಳೆ. ಈ ಎಲ್ಲ ದೃಶ್ಯವನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.

    ಬೆಂಗಳೂರು ಪೊಲೀಸರು ಕಿಕಿ ಚಾಲೆಂಜ್ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದರು ಯುವಕ-ಯುವತಿಯರು ಕಿಕಿ ಚಾಲೆಂಜ್ ಮಾಡುತ್ತಿದ್ದಾರೆ. ಮೊದಲಿಗೆ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ಕಿಕಿ ಚಾಲೆಂಜ್ ಮಾಡಿದ್ದರು. ಬಳಿಕ ಆಕೆಯ ವಿರುದ್ಧ ಪೊಲೀಸ್ ಕಂಪ್ಲೆಂಟ್ ಕೂಡ ಆಗಿತ್ತು. ನಂತರ ಈ ಬಗ್ಗೆ ಗೊತ್ತಿರಲಿಲ್ಲ ಎಂದು ನಿವೇದಿತಾ ಗೌಡ ವಿಡಿಯೋವನ್ನು ಡಿಲೀಟ್ ಮಾಡಿದ್ದರು. ಇದಾದ ನಂತರ ನಟಿ ಪ್ರಣಿತಾ ಕೂಡ ಕಿಕಿ ಡ್ಯಾನ್ಸ್ ಮಾಡಿದ್ದರು.

    ನಟ-ನಟಿಯರು ಮಾತ್ರವಲ್ಲದೇ ಮಕ್ಕಳು ಕೂಡ ಈ ಡ್ಯಾನ್ಸ್ ಮಾಡುತ್ತಿದ್ದಾರೆ. ಕಾರ್ ಮಾತ್ರವಲ್ಲದೇ ಬೈಕ್, ಟ್ರೈನ್ ಮುಂದೆಯೂ ಡ್ಯಾನ್ಸ್ ಮಾಡಿದ್ದಾರೆ. ಅಷ್ಟರ ಮಟ್ಟಿಗೆ ಈ ಚಾಲೆಂಜ್ ಟ್ರೆಂಡಿಂಗ್ ನಲ್ಲಿದೆ. ಈಗ ಈ ಚಾಲೆಂಜ್ ಜೊತೆ ಮೋಮೋ ಚಾಲೆಂಜ್ ಗೇಮ್ ಕೂಡ ಬಂದಿದೆ.

    ಏನಿದು ಚಾಲೆಂಜ್ ?
    ಟ್ರಾಫಿಕ್ ಮಧ್ಯೆ ಚಲಿಸುವ ಕಾರಿನಿಂದ ಜಿಗಿದು ಹಾಲಿವುಡ್ ಗಾಯಕ ಡ್ರೇಕ್ ನ “ಇನ್ ಮೈ ಫೀಲಿಂಗ್ಸ್ ” ಹಾಡು ಹೇಳಿಕೊಂಡು ಕಾರಿನ ವೇಗಕ್ಕೆ ರಸ್ತೆಯಲ್ಲಿ ಡ್ಯಾನ್ಸ್ ಮಾಡಬೇಕು. ಮತ್ತೆ ಕಾರಿನೊಳಗೆ ಜಿಗಿದು ಕುಳಿತುಕೊಳ್ಳಬೇಕು. ಈ ಅಪಾಯಕಾರಿ ಚಾಲೆಂಜ್ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.

    ಮೋಮೋ ಚಾಲೆಂಜ್ ಆಟ
    ಮೊದಲು ಅಪರಿಚಿತ ನಂಬರಿನಿಂದ ಎಲ್ಲರಿಗೂ ಒಂದು ಸಂದೇಶವನ್ನು ಬರುತ್ತದೆ. ಬಳಿಕ ಆ ಚಾಲೆಂಜ್ ಒಪ್ಪಿಕೊಂಡರೆ ಹಾಯ್-ಹಲೋ ಎಂದು ಸಂದೇಶ ಕಳುಹಿಸಬೇಕಾಗುತ್ತದೆ. ನಂತರ ಒಂದು ಅಪರಿಚಿತ ನಂಬರ್ ಕೊಟ್ಟು ಮಾತನಾಡುವಂತೆ ಚಾಲೆಂಜ್ ನೀಡುತ್ತದೆ. ಬಳಕೆದಾರರಿಗೆ ಕೆಲವು ಕೆಲಸಗಳನ್ನು ಕೊಡಲಾಗುತ್ತದೆ. ಒಂದು ವೇಳೆ ಆ ಕೆಲಸವನ್ನು ಅವರು ಪೂರ್ಣ ಮಾಡದಿದ್ದರೆ, ಬಳಕೆದಾರಿಗೆ ಬೆದರಿಕೆ ಒಡ್ಡುತ್ತದೆ. ಕೊನೆಯದಾಗಿ ಬೆದರಿಕೆ ಮತ್ತು ಭಯದಿಂದ ಬಳಕೆದಾರರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದನೆ ನೀಡುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಕೇಂದ್ರ ಸಚಿವ ಸದಾನಂದ ಗೌಡರ ಪುತ್ರನಿಗೆ ಸಂಕಷ್ಟ!

    ಕೇಂದ್ರ ಸಚಿವ ಸದಾನಂದ ಗೌಡರ ಪುತ್ರನಿಗೆ ಸಂಕಷ್ಟ!

    ಬೆಂಗಳೂರು: ಕೇಂದ್ರ ಸಚಿವ ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಟಿ ಮೈತ್ರಿಯಾ ಗೌಡ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

    ನಟಿ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳಿದ್ದರೆ ಮತ್ತೆ ತನಿಖೆ ನಡೆಸುವಂತೆ ಸೂಚಿಸಿದೆ. ಈ ಹಿಂದೆ ನಟಿ ಮೈತ್ರಿಯಾ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಲಾಗಿದೆ ಎಂದು ಕಾರ್ತಿಕ್ ಗೌಡ ವಿರುದ್ಧ  ಆರೋಪಿಸಿದ್ದರು.

    ಏನಿದು ಪ್ರಕರಣ?:
    ಮೈತ್ರಿಯಾ ಗೌಡ ಅವರು ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಈ ವೇಳೆ ತನಿಖೆ ನಡೆಸಿ ದೋಷಾರೋಪಟ್ಟಿಯಲ್ಲಿ ಅತ್ಯಾಚಾರ ನಡೆದಿಲ್ಲ ಎಂದು ಪ್ರಕರಣದಲ್ಲಿ 376 ಸೆಕ್ಷನ್ ತೆಗೆಯಲಾಗಿತ್ತು. ದೋಷರೋಪ ಪಟ್ಟಿ ವಿರುದ್ಧ ಹೈಕೋರ್ಟ್ ನಲ್ಲೂ ಅರ್ಜಿ ಸಲ್ಲಿಸಿದ್ದ ನಟಿ ಮೈತ್ರಿಯಾ ಗೌಡ ಮುಖಭಂಗ ಅನುಭವಿಸಿ ಬಳಿಕ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದಲ್ಲಿ ಸಂತ್ರಸ್ತೆಯ ಪರ ಸಾಕ್ಷ್ಯಾಧಾರಗಳಿದ್ದರೆ ಮರು ತನಿಖೆ ನಡೆಸುವಂತೆ ಸೂಚಿಸಿದೆ. ನ್ಯಾಯಾಲಯದ ಸೂಚನೆಯಂತೆ ಕಾರ್ತಿಕ್ ಗೌಡ ವಿರುದ್ಧ ಜಿಲ್ಲಾ ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆ ನಡೆಯಲಿದೆ.

    ಮೈತ್ರಿಯಾ ಗೌಡ ಆರೋಪದ ಬೆನ್ನಲ್ಲೇ ಕಾರ್ತಿಕ್ ಗೌಡ ಅವರಿಗೆ ಮದುವೆಯ ಕಾರ್ಯವೂ ನಡೆದಿತ್ತು, ಈ ಮದುವೆ ರದ್ದುಪಡಿಸುವಂತೆ ನಟಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಕಾರ್ತಿಕ್ ಗೌಡ ಅವರೊಂದಿಗೆ ನನ್ನ ಮದುವೆಯಾಗಿದೆ. ಹಿಂದೂ ಧರ್ಮದ ಪ್ರಕಾರ ತಮ್ಮ ಮದುವೆ ನಡೆದಿದೆ ಎಂದು ತಿಳಿಸಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿ ಪ್ರಕರಣದ ಇತ್ಯರ್ಥ ಪಡಿಸುವಂತೆ ಸೂಚನೆ ನೀಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಗೋಕರ್ಣ ದೇಗುಲದ ಆಡಳಿತ ನಡೆಸ್ತಿದ್ದ ರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್ ನಿಂದ ಬ್ರೇಕ್

    ಗೋಕರ್ಣ ದೇಗುಲದ ಆಡಳಿತ ನಡೆಸ್ತಿದ್ದ ರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್ ನಿಂದ ಬ್ರೇಕ್

    ಬೆಂಗಳೂರು: ಕಳೆದ 10 ವರ್ಷಗಳಿಂದ ಗೋಕರ್ಣ ದೇಗುಲದ ಆಡಳಿತ ನಡೆಸುತ್ತಿದ್ದ ರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಸೆಪ್ಟೆಂಬರ್ 10ರಿಂದ ಉಸ್ತುವಾರಿ ಸಮಿತಿ ಅಸ್ಥಿತ್ವಕ್ಕೆ ಬರಬೇಕು ಅಂತಾ ಆದೇಶ ಹೊರಡಿಸಿದೆ.

    ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಅರವಿಂದ್ ಕುಮಾರ್ ಅವರ ಜಂಟಿ ಪೀಠವು, ಸರ್ಕಾರದ ದೇಗುಲ ಹಸ್ತಾಂತರದ ಆದೇಶವನ್ನು ರದ್ದು ಮಾಡಿದ್ದು, ದೇಗುಲದ ಸ್ಥಿರಾಸ್ಥಿ ಚರಾಸ್ಥಿ ಬ್ಯಾಂಕ್ ಅಕೌಂಟ್ ಸೇರಿದಂತೆ ಎಲ್ಲಾ ಆಸ್ತಿಯ ವಿವರವನ್ನು 2 ವಾರದೊಳಗೆ ಹೈಕೋರ್ಟ್ ಗೆ ಸಲ್ಲಿಸಬೇಕು ಎಂದು ನ್ಯಾಯಾಧೀಶರು ಉತ್ತರ ಕನ್ನಡದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    2008ರ ಆಗಸ್ಟ್ 12ರಂದು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಗೋಕರ್ಣದ ಐತಿಹಾಸಿಕ ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠದ ಸುಪರ್ದಿಗೆ ನೀಡಿತ್ತು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬಾಲಚಂದರ್ ದೀಕ್ಷಿತ್ ಮತ್ತು ನರಹರಿ ಕೃಷ್ಣ ಹೆಗ್ಡೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದನ್ನು ಓದಿ: ಗೋಕರ್ಣ ದೇವಸ್ಥಾನ ವಿವಾದ: ಪೂಜಾ ಕಾರ್ಯಕ್ಕಾಗಿ 2 ಗುಂಪಿನ ಅರ್ಚಕರ ನಡುವೆ ವಾಗ್ವಾದ

    ಮಹಾಬಲೇಶ್ವರ ದೇವಾಲಯವನ್ನು ಮುಜರಾಯಿ ಇಲಾಖೆಯ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಜಂಟಿ ಪೀಠವು ರದ್ದುಗೊಳಿಸಿದೆ. ಆದರೆ ಇತ್ತ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ರಾಮಚಂದ್ರಾಪುರ ಮಠದ ವಕೀಲರು ಕೋರಿಕೆ ವ್ಯಕ್ತಪಡಿಸಿದ್ದು, ಅದಕ್ಕೆ ಅರ್ಜಿದಾರರ ಪರ ವಕೀಲರಿಂದ ವಿರೋಧ ವ್ಯಕ್ತವಾಗಿದೆ.

    ಕಾರವಾರ ವರದಿ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಹಸ್ತಾಂತರ ಮಾಡಿದ ಹಿನ್ನಲೆಯಲ್ಲಿ ದೇವಸ್ಥಾನದ ಮುಂದೆ ಗೋಕರ್ಣ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಹಾಗೂ ಸ್ಥಳೀಯರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

    ಬಿ.ಎಸ್.ಯಡಿಯೂರಪ್ಪ ಸರ್ಕಾರ ಶಿವಮೊಗ್ಗ ಜಿಲ್ಲೆಯ ಹೊಸನಗರ ರಾಮಚಂದ್ರಾಪುರ ಮಠಕ್ಕೆ ದೇವಸ್ಥಾನದ ಆಡಳಿತನ್ನು ಹಸ್ತಾಂತರಿಸಿತ್ತು. ಮಠದಿಂದ ಮುಜರಾಯಿ ಇಲಾಖೆಗೆ ಪುನಃ ಹಸ್ತಾಂತರಿಸಲು ಆದೇಶ ಬಂದಿದ್ದು ಸಂತಸ ತಂದಿದೆ. ಮಠದವರು ಅಪೀಲ್ ಹೋಗುವುದಾಗಿ ಹೇಳುತ್ತಿದ್ದಾರೆ. ಅವರು ಮುಂದೆ ಅಪೀಲ್ ಹೋದಲ್ಲಿ ನಾವು ಕೂಡ ಹೋರಾಟ ಮಾಡುತ್ತೇವೆ ಎಂದು ಬಾಲಚಂದ್ರ ದೀಕ್ಷಿತ್ ಪಬ್ಲಿಕ್ ಟಿ.ವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

  • ಮರೀನಾ ಬೀಚ್‍ನಲ್ಲಿ ಕರುಣಾನಿಧಿ ಅಂತ್ಯಕ್ರಿಯೆ

    ಮರೀನಾ ಬೀಚ್‍ನಲ್ಲಿ ಕರುಣಾನಿಧಿ ಅಂತ್ಯಕ್ರಿಯೆ

    ಚೆನ್ನೈ: ಮಾಜಿ ಸಿಎಂ ಕರುಣಾನಿಧಿ ಅಂತ್ಯಕ್ರಿಯೆ ಸ್ಥಳಕ್ಕೆ ಸಂಬಂಧಿಸಿದಂತೆ ಮರೀನಾ ಬೀಚ್‍ನಲ್ಲಿಯೇ ಅಂತಿಮ ವಿಧಿ ವಿಧಾನಗಳನ್ನು ಸಲ್ಲಿಸಬಹುದು ಎಂದು ಮದ್ರಾಸ್ ಹೈಕೋಟ್ ತೀರ್ಪು ನೀಡಿದೆ.

    ಟ್ರಾಫಿಕ್ ರಾಮಸ್ವಾಮಿ ಸೇರಿದಂತೆ ಐವರು ಮರೀನಾ ಬೀಚ್‍ನಲ್ಲಿ ಅಂತ್ಯಕ್ರಿಯೆ ನಡೆಸಬಾರದು ಎಂದು ಕೋರ್ಟ್ ಗೆ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಆದ್ರೆ ಇಂದು ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಪರ ವಕೀಲರು ಮರೀನಾ ಬೀಚ್ ನಲ್ಲಿ ಅಂತ್ಯಕ್ರಿಯೆ ನಮ್ಮ ತಕರಾರು ಇಲ್ಲ ಎಂದು ವಾದ ಮಂಡಿಸಿದ್ದಾರೆ. ಕೂಡಲೇ ನ್ಯಾಯಾಧೀಶರು ಹಾಗಾದ್ರೆ ನಿಮ್ಮ ಪಿಐಎಲ್ ಅರ್ಜಿಯನ್ನು ಹಿಂಪಡೆದುಕೊಳ್ಳಬಹುದು ಅಲ್ವಾ ಎಂದು ಸೂಚಿಸಿದ್ದಾರೆ. ನ್ಯಾಯಾಧೀಶರ ಸಲಹೆಯಂತೆ ಟ್ರಾಫಿಕ್ ರಾಮಸ್ವಾಮಿ ತಮ್ಮ ಪಿಐಎಲ್ ಹಿಂಪಡೆಯಲು ನಿರ್ಧರಿಸಿದರು.

    ಮರೀನಾ ಬೀಚ್ ಗೆ ಸಂಬಂಧಿಸಿದ ಎಲ್ಲ ಪಿಐಎಲ್ ಅರ್ಜಿಗಳು ವಾಪಾಸ್ಸಾದ ಹಿನ್ನೆಲೆಯಲ್ಲಿ ಆಡಳಿತಾರೂಢ ಸರ್ಕಾರಕ್ಕೆ ಹಿನ್ನಡೆ ಆಗಿದೆ. ಕರುಣಾನಿಧಿ ಅವರ ಅಂತ್ಯಕ್ರಿಯೆಗೆ ಸಂಬಂಧಿಸಿದ ವಿವಾದಕ್ಕೆ ತೊಡಕಾಗಿದ್ದ ಎಲ್ಲ 5 ಅರ್ಜಿಗಳು ವಜಾಗೊಂಡಿವೆ.

    ಹಾಲಿ ಸಿಎಂ ಮತ್ತು ಮಾಜಿ ಸಿಎಂ ಇಬ್ಬರು ಒಂದೇ ಅಲ್ಲ. ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳು ಸಾವನ್ನಪ್ಪಿದಾಗ ಮರೀನಾ ಬೀಚ್‍ನಲ್ಲಿಯೇ ಸ್ಥಳ ನೀಡಲಾಗಿತ್ತು. ಹಾಗಾಗಿ ಕರುಣಾನಿಧಿ ಅವರಿಗೆ ಮರೀನಾ ಬೀಚ್‍ನಲ್ಲಿಯೇ ಸ್ಥಳಾವಕಾಶ ನೀಡಲು ಸಾಧ್ಯವಿಲ್ಲ. ಬೇಕಾದ್ರೆ ಗಾಂಧಿ ಮಂಟಪದ ಬಳಿ 2 ಎಕರೆ ಸ್ಥಳ ನೀಡಲು ಸಿದ್ಧವಾಗಿದೆ ಎಂದು ಆಡಳಿತಾರೂಢ ಸರ್ಕಾರ ಪರ ವಕೀಲರು ವಾದ ಮಂಡಿಸಿದ್ದರು.

    ಸಾವಿನಲ್ಲೂ ದ್ವೇಷದ ರಾಜಕಾರಣ ಬೇಡ. ಕೋಟಿ ಕೋಟಿ ತಮಿಳುಗರ ಭಾವನೆಗಳಿಗೆ ಧಕ್ಕೆ ತರೋದು ಬೇಡ. ಕರುಣಾನಿಧಿ ಅವರ ಅಂತ್ಯಕ್ರಿಯೆಯ ಮರೀನಾ ಬೀಚ್ ನಲ್ಲಿ ನಡೆಸುವ ಸರ್ಕಾರ ಗೌರವ ಸಲ್ಲಿಸಬೇಕು. ಗಾಂಧಿ ಮಂಟಪದ ಬಳಿ ಅಂತ್ಯಕ್ರಿಯೆ ನಮ್ಮ ಆಯ್ಕೆ ಅಲ್ಲ. ಕರುಣಾನಿಧಿ ಸಾವಿನ ಬಳಿಕ ಒಂದು ವಾರ ಶೋಕಾಚರಣೆ ಮಾಡುತ್ತಿದ್ದೀರಿ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದೀರಿ. ಹಾಗಾದ್ರೆ ಸ್ಥಳ ಕೊಡುತ್ತಿಲ್ಲ ಯಾಕೆ ಎಂದು ಡಿಎಂಕೆ ಪರ ವಕೀಲರು ಪ್ರತಿವಾದ ಮಂಡಿಸಿದ್ದಾರೆ.

    ಕರುಣಾನಿಧಿಯವರ ಅಂತ್ಯಕ್ರಿಯೆಯನ್ನು ಮರೀನಾ ಬೀಚ್‍ನಲ್ಲಿ ಮಾಡಬೇಕೆಂದು ಕಾರ್ಯಕರ್ತರು ಮನವಿ ಮಾಡಿಕೊಂಡಿದ್ದರು. ಆದರೆ ಆಡಳಿತರೂಢ ಸರ್ಕಾರ ಕಾರ್ಯಕರ್ತರ ಮನವಿಯನ್ನು ತಿರಸ್ಕರಿಸಿತ್ತು. ಚೆನ್ನೈ ಮರೀನಾ ಬೀಚ್ ಪ್ರದೇಶ ಸೂಕ್ಷ್ಮ ವಲಯದಲ್ಲಿದೆ. ಹೀಗಾಗಿ ಈ ಜಾಗದಲ್ಲಿ ರಾಜಕೀಯ ನಾಯಕರ ಅಂತ್ಯ ಸಂಸ್ಕಾರಕ್ಕೆ ಅನುಮತಿ ನೀಡಬಾರದು ಎಂದು ಕೋರ್ಟ್ ನಲ್ಲಿ ಎರಡು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದ ಅರ್ಜಿ ಇತ್ಯರ್ಥವಾಗದ ಕಾರಣ ತಮಿಳುನಾಡು ಸರ್ಕಾರ ಅನುಮತಿ ನೀಡಿಲ್ಲ. ಪ್ರಕರಣ ಕೋರ್ಟ್ ನಲ್ಲಿ ಇರುವ ಮರೀನಾ ಬೀಚ್ ಬದಲಾಗಿ ಗಿಂಡಿ ಪ್ರದೇಶದ ಗಾಂಧಿ ಮಂಟಪದ ಬಳಿ ಅಂತ್ಯಸಂಸ್ಕಾರಕ್ಕೆ ಸ್ಥಳವಕಾಶ ಮಾಡಿಕೊಡುವುದಾಗಿ ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ತಿಳಿಸಿದ್ದಾರೆ.

    ಸರ್ಕಾರ ಅನುಮತಿ ನೀಡದ ಕಾರಣ ಡಿಎಂಕೆ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಮರೀನಾ ಬೀಚ್ ನಲ್ಲೇ ಅಂತ್ಯಸಂಸ್ಕಾರ ನಡೆಸಬೇಕೆಂದು ಪಟ್ಟುಹಿಡಿದಿದ್ದರು. ಏನು ಮಾಡಬೇಕೆಂದು ತಿಳಿಯದ ತಮಿಳುನಾಡು ಸರ್ಕಾರ ಈಗ ಕೇಂದ್ರದ ಮೊರೆ ಹೋಗಿದೆ. ಈ ಮಧ್ಯೆ ಡಿಎಂಕೆ ಪಕ್ಷ ಮರೀನಾ ಬೀಚ್ ಬಳಿ ಇರುವ ಜಾಗದಲ್ಲಿ ಅಂತ್ಯಸಂಸ್ಕಾರ ನಡೆಸಲು ಅನುಮತಿ ನೀಡುವಂತೆ ಹೈಕೋರ್ಟ್ ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು.

    ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಕೋರ್ಟ್ ನಲ್ಲಿ ಸರ್ಕಾರದ ಪರ ವಾದವನ್ನು ಆಲಿಸಿತ್ತು. ಇಂದು ಬೆಳಗ್ಗೆ ಡಿಎಂಕೆ ಮತ್ತು ಪಿಐಎಲ್ ಅರ್ಜಿ ಸಲ್ಲಿಸಿದ ಪರ ವಕೀಲರು ಸಹ ವಾದವನ್ನು ಮಂಡಿಸಿದ್ದರು.

    ಮರೀನಾ ಬೀಚ್‍ನಲ್ಲಿಯೇ ಎಐಎಡಿಎಂಕೆ ಸಂಸ್ಥಾಪಕ ಎಂ.ಜಿ.ರಾಮಚಂದ್ರನ್, ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಮತ್ತು ಡಿಎಂಕೆ ಸ್ಥಾಪಕ ಅಣ್ಣಾದೊರೈ ಅವರನ್ನು ಅಂತ್ಯಸಂಸ್ಕಾರ ಮಾಡಲಾಗಿದ್ದು ಅವರ ಸ್ಮಾರಕವನ್ನು ನಿರ್ಮಿಸಲಾಗಿದೆ.

  • ಸಿಲಿಕಾನ್ ಸಿಟಿಯಲ್ಲಿ ಫ್ಲೆಕ್ಸ್ ಬ್ಯಾನರ್ ಗೆ ನಿರ್ಬಂಧ- ಮದುವೆ, ಸಭೆ ಸಮಾರಂಭಕ್ಕೂ ತಟ್ಟಿದ ಬಿಸಿ

    ಸಿಲಿಕಾನ್ ಸಿಟಿಯಲ್ಲಿ ಫ್ಲೆಕ್ಸ್ ಬ್ಯಾನರ್ ಗೆ ನಿರ್ಬಂಧ- ಮದುವೆ, ಸಭೆ ಸಮಾರಂಭಕ್ಕೂ ತಟ್ಟಿದ ಬಿಸಿ

    – ಶಾಂಪಿಂಗ್ ಮಾಲ್, ದೇವಸ್ಥಾನಕ್ಕೂ ನಿರ್ಬಂಧ

    ಬೆಂಗಳೂರು: ಫ್ಲೆಕ್ಸ್, ಬ್ಯಾನರ್, ಪೋಸ್ಟರ್ ನಿಷೇಧ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಮಾತ್ರವಲ್ಲ, ಕಾರ್ಯಕ್ರಮಗಳಲ್ಲೂ ಬಳಸದಂತೆ ಹೈಕೋರ್ಟ್ ಖಡಕ್ ಎಚ್ಚರಿಕೆಯನ್ನು ನೀಡಿದೆ.

    ಫ್ಲೆಕ್ಸ್ ನಿಷೇಧದ ಬಿಸಿ ಈಗ ಮದುವೆ, ಸಭೆ ಮತ್ತು ಸಮಾರಂಭಕ್ಕೂ ತಟ್ಟಿದೆ. ಯಾವುದೇ ಕಾರ್ಯಕ್ರಮಗಳಲ್ಲೂ, ದೇವಸ್ಥಾನ, ಹೋಟೆಲ್ ಮತ್ತು ಮಾಲ್‍ಗಳಲ್ಲೂ ಜಾಹೀರಾತು, ಫ್ಲೆಕ್ಸ್ ಗಳನ್ನು ಹಾಕುವಂತಿಲ್ಲ ಎಂದು ಸಾರ್ವಜನಿಕರಿಗೆ ಮತ್ತು ಸಂಘಟನೆಗಳಿಗೆ ಪಾಲಿಕೆ ಸೂಚಿಸಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪರಮೇಶ್ವರ್ ಗೆ ಶುಭಕೋರಿ ಬ್ಯಾನರ್- ಬೆಂಬಲಿಗರ ವಿರುದ್ಧ ಎಫ್‍ಐಆರ್

    ಫೆಕ್ಸ್ ನಿಷೇಧ ಕುರಿತಂತೆ ಬೆಂಗಳೂರು ನಗರದಲ್ಲಿ ಸಂಪೂರ್ಣವಾಗಿ ನಿಷೇಧ ಮಾಡಲಾಗಿದ್ದು, ಅದರಂತೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲು ಮಹಾಪೌರರು ಹಾಗೂ ಆಯುಕ್ತರು ಸೂಚಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಬೆಂಗ್ಳೂರಿನಲ್ಲಿ ಭಿತ್ತಿ ಪತ್ರ ಅಂಟಿಸಿದರೆ 1 ಲಕ್ಷ ದಂಡ!

    ಎಲ್ಲೆಲ್ಲಿ ಹಾಕಬಾರದು ಫ್ಲೆಕ್ಸ್!
    1) ಮದುವೆ ಕಾರ್ಯಕ್ರಮಗಳಲ್ಲಿ
    2) ಮದುವೆ ಸಭಾಂಗಣದ ಒಳಗೆ
    3) ಒಳಾಂಗಣ ಸಭೆಗಳ ಬ್ಯಾಕ್ ಡ್ರಾಪ್ ಗಳಲ್ಲಿ
    4) ನಗರದ ಮಾಲ್ ಗಳಲ್ಲಿ
    5) ದೇವಸ್ಥಾನ ಕಾರ್ಯಕ್ರಮ ಗಳಲ್ಲಿ
    6) ಬಸ್ ಶೆಲ್ಟರ್ ಗಳಲ್ಲಿ
    7) ಸ್ಕೈ ವಾಕ್ ಗಳಲ್ಲಿ
    8) ಯಾವುದೇ ಸಭೆಗಳಲ್ಲಿ/ ಖಾಸಗಿ ಹೋಟೆಲ್ ಸಭಾಂಗಣದಲ್ಲಿ
    9) ಶಾಪಿಂಗ್ ಮಾಲ್

    ಇನ್ನಿತ್ತರೆ ಯಾವುದೇ ಸ್ಥಳಗಳಲ್ಲಿ ಕಡ್ಡಾಯವಾಗಿ ನಿಷೇಧಿಸಿದೆ. ಅದರಂತೆ ಜಾಗೃತಿ ಮೂಡಿಸುವ ಹಾಗೂ ಶಿಸ್ತು ಕ್ರಮವಹಿಸುವ ಬಗ್ಗೆ ಮಹಾಪೌರರು ಹಾಗೂ ಆಯುಕ್ತರು ಸೂಚಿಸಿದ್ದಾರೆ.

    ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಗಳ ಹಾವಳಿ ಹೆಚ್ಚಾಗಿತ್ತು. ಇದರಿಂದ ಫ್ಲೆಕ್ಸ್, ಬ್ಯಾನರ್ ಮತ್ತು ಪೋಸ್ಟರ್ ಗಳನ್ನು ತಕ್ಷಣ ತೆರವು ಮಾಡುವಂತೆ ಹೈಕೋರ್ಟ್ ಸೂಚಿಸಿತ್ತು. ಅದರಂತೆ ಬಿಬಿಎಂಪಿ ಅವರು ತಕ್ಷಣ ನಗರದಲ್ಲಿದ್ದ ಎಲ್ಲ ಫ್ಲೆಕ್ಸ್ ಗಳನ್ನು ತೆರವು ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಇನ್ಮುಂದೆ ಬೆಂಗ್ಳೂರಿನಲ್ಲಿ ಭಿತ್ತಿ ಪತ್ರ ಅಂಟಿಸಿದರೆ 1 ಲಕ್ಷ ದಂಡ!

    ಇನ್ಮುಂದೆ ಬೆಂಗ್ಳೂರಿನಲ್ಲಿ ಭಿತ್ತಿ ಪತ್ರ ಅಂಟಿಸಿದರೆ 1 ಲಕ್ಷ ದಂಡ!

    ಬೆಂಗಳೂರು: ಇನ್ಮುಂದೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಿತ್ತಿ ಪತ್ರವನ್ನು ಅಂಟಿಸಿದರೆ 1 ಲಕ್ಷ ರೂ. ದಂಡ ಮತ್ತು ಕ್ರಿಮಿನಲ್ ಕೇಸ್ ಬೀಳಲಿದೆ.

    ರಾಜಧಾನಿ ಬೆಂಗಳೂರು ನಗರದಲ್ಲಿ ನೈರ್ಮಲ್ಯತೆ ಮತ್ತು ಸೌಂದರ್ಯದ ದೃಷ್ಟಿಯಿಂದ ಫ್ಲೆಕ್ಸ್, ಬ್ಯಾನರ್‍ಗಳ ಮೇಲೆ ಹೈಕೋರ್ಟ್ ಪ್ರಹಾರ ನಡೆಸಿದ ಬಳಿಕ ಬೆಂಗಳೂರು ಮಹಾನಗರ ಪಾಲಿಕೆ ಮತ್ತಷ್ಟು ಎಚ್ಚೆತ್ತುಕೊಂಡಿದೆ.

    2015ರಲ್ಲೇ ಫ್ಲೆಕ್ಸ್, ಬ್ಯಾನರ್‍ಗಳನ್ನ ಪರಿಸರ ಇಲಾಖೆ ಬ್ಯಾನ್ ಮಾಡಿದೆ. ಆದಾಗ್ಯೂ, ಅನಧಿಕೃತವಾಗಿ ಫ್ಲೆಕ್ಸ್, ಭಿತ್ತಿಚಿತ್ರಗಳನ್ನ ಹಾಕಲಾಗ್ತಿದೆ. ಹಾಗಾಗಿ, ಅಂಥವರ ಮೇಲೆ ಕ್ರಮ ಕಠಿಣ ಕ್ರಮ ಕೈಗೊಳ್ಳಲು ಪಾಲಿಕೆ ನಿರ್ಧರಿಸಿದೆ. ಇಂದು ನಡೆದ ಬಿಬಿಎಂಪಿಯಲ್ಲಿ ವಿಶೇಷ ಕೌನ್ಸಿಲ್ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

    ಯಾವೆಲ್ಲ ನಿರ್ಣಯ ಕೈಗೊಳ್ಳಲಾಗಿದೆ?
    ಮರ, ಗೋಡೆಗಳ ಮೇಲೆ ಭಿತ್ತಿಪತ್ರಗಳನ್ನು ಅಂಟಿಸುವಂತಿಲ್ಲ. ಭಿತ್ತಿ ಪತ್ರ ಅಂಟಿಸಿದ್ರೆ 1 ಲಕ್ಷವರೆಗೆ ದಂಡ, ಕ್ರಿಮಿನಲ್ ಕೇಸ್ ದಾಖಲು, ಭಿತ್ತಿಪತ್ರದ ಜೊತೆಗೆ ಎಲೆಕ್ಟ್ರಿಕ್ ಸೀರಿಯಲ್ ಸೆಟ್ ಇದ್ದರೂ ದಂಡ ಹಾಕಲಾಗುತ್ತದೆ.

    ಖಾಸಗಿ ಜಾಗದಲ್ಲಿನ ಹೋರ್ಡಿಂಗ್ಸ್‍ಗಳು ಕಾನೂನಿಗೆ ವಿರುದ್ಧವಾಗಿದ್ದು ಇವುಗಳನ್ನು ಹಾಕಿದವರೇ ಆದಷ್ಟು ಬೇಗ ತೆಗೆಸಬೇಕು. ಮುಂದಿನ 15 ದಿನಗಳಲ್ಲಿ ಹೋರ್ಡಿಂಗ್ಸ್, ಫ್ಲೆಕ್ಸ್ ತೆರವುಗೊಳಿಸದಿದ್ದರೆ ಕ್ರಿಮಿನಲ್ ಕೇಸ್ ದಾಖಲಿಸುವ ನಿರ್ಧಾರ ಕೈಗೊಳ್ಳಲಾಗಿದೆ.

    ಬೆಂಗಳೂರಿನಲ್ಲಿ ಇರುವ ಯಾವುದೇ ಹೋರ್ಡಿಂಗ್ಸ್ ಅಧಿಕೃತವಲ್ಲ. ಹೋರ್ಡಿಂಗ್ಸ್ ತೆಗೆಸದಿದ್ದರೆ 6 ತಿಂಗಳವರೆಗೆ ಜೈಲು ಅಷ್ಟೇ ಅಲ್ಲದೇ ಮುದ್ರಣಾಕಾರರು, ಪೋಸ್ಟರ್‍ನಲ್ಲಿ ಇರುವವರ ಮೇಲೆ ಕೇಸ್ ಹಾಕಲಾಗುತ್ತದೆ. ಆದರೆ ಬಸ್ ಶೆಲ್ಟರ್‍ನಲ್ಲಿ ಹಾಕಿರುವ ಹೋಲ್ಡಿಂಗ್ಸ್‍ಗೆ ಪಾಲಿಕೆಯಿಂದ ಅನುಮತಿ ಇದೆ.

    https://www.youtube.com/watch?v=3ptmTVS1Cbs

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews