Tag: high court

  • ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ: ವಾದ, ಪ್ರತಿವಾದ ಹೀಗಿತ್ತು

    ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ: ವಾದ, ಪ್ರತಿವಾದ ಹೀಗಿತ್ತು

    ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹೈಕೋರ್ಟ್ ಗೆ ಸಲ್ಲಿಸಿರುವ ಜಾಮೀನು ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

    ಜಾಮೀನು ಅರ್ಜಿಯ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ಅವರು ನಲಪಾಡ್ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು. ಈ ವೇಳೆ ನ್ಯಾಯಮೂರ್ತಿಗಳ ಮುಂದೇ ವಿಶೇಷ ಅಂಶವನ್ನು ಪ್ರಸ್ತಾಪಿಸಿದ ಅವರು, ಜೀವ ಭಯವಿರುವುದು ಹಲ್ಲೆಗೊಳಗಾದ ವಿದ್ವತ್ ಅವರಿಗೆ ಅಲ್ಲ. ಬದಲಾಗಿ ವಿದ್ವತ್‍ಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಎಂದು ವಾದ ಮಾಡಿದರು.

    ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ನನ್ನ ನಲಪಾಡ್ ನನ್ನು ಸಿಕ್ಕಿಹಾಕಿಸುವ ಪ್ರಯತ್ನ ನಡೆದಿದೆ ಎಂದು ವಾದಿಸಿದರು. ಎರಡು ಕಡೆ ವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನ ಸೋಮವಾರಕ್ಕೆ ಮುಂದೂಡಿತು.

    ನಲಪಾಡ್ ಪರ ವಕೀಲ ಸಿ.ವಿ.ನಾಗೇಶ್ ವಾದ ಹೀಗಿತ್ತು:
    ವಿದ್ವತ್ ಆಸ್ಪತ್ರೆಯಲ್ಲಿದ್ದಾಗ ಪ್ರಜ್ಞೆ ತಪ್ಪಿರಲಿಲ್ಲ. ಐಸಿಯು ನಲ್ಲಿ ಚಿಕಿತ್ಸೆ ನೀಡುವ ವೇಳೆಯೂ ಆತ ಚೆನ್ನಾಗಿಯೇ ಮಾತನಾಡುತ್ತಿದ್ದ. ತನಿಖಾಧಿಕಾರಿಗಳಿಗೆ ವಿದ್ವತ್ ಪ್ರಜ್ಞೆ ತಪ್ಪಿದ್ದಾನೆ ಎನ್ನುವ ಸುಳ್ಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಬಾಟಲ್ ನಿಂದ ಹೊಡೆದಿದ್ದಾರೆ ಹೇಳಿದ್ದಾರೆ. ಆದರೆ ಇಲ್ಲಿ ಬಾಟಲ್ ಮಾರಕಾಸ್ತ್ರ ಅಲ್ಲ. ವಿದ್ವತ್ ಚೆನ್ನಾಗಿಯೇ ಇದ್ದರೂ, ತೀವ್ರವಾಗಿ ಹಲ್ಲೆಯಾಗಿದೆ ಎಂದು ಬಿಂಬಿಸಿಕೊಂಡಿದ್ದಾನೆ. ವಿದ್ವತ್ ಡಿಸ್ಚಾರ್ಜ್ ವರದಿಯಲ್ಲಿ ಯಾವುದೇ ರೊಟೀನ್ ಚಿಕಿತ್ಸೆ ನೀಡಿರುವ ಬಗ್ಗೆ ಉಲ್ಲೇಖಿಸಿಲ್ಲ. ಆತನನ್ನು ಸುಮ್ಮನೆ ಆಸ್ಪತ್ರೆಯಲ್ಲಿ ಇಟ್ಟುಕೊಂಡಿದ್ದರು. ವೈದ್ಯರು ಮನೆಗೆ ಹೋಗುವಂತೆ ಸೂಚನೆ ನೀಡಿದ್ದರೂ ವಿದ್ವತ್ ಮನೆಗೆ ಹೋಗಿಲ್ಲ. ಪದೆ ಪದೆ ತಲೆನೋವು, ಎದೆನೋವು ಎಂದು ನಾಟಕ ಮಾಡಿದ್ದಾರೆ. ನಲಪಾಡ್ ತಾನಾಗಿಯೇ ಬಂದು ಕಾನೂನಿಗೆ ತಲೆಬಾಗಿದ್ದಾನೆ. ಬೆದರಿಕೆ ಹಾಕುವ ಉದ್ದೇಶ ಇದ್ದಿದ್ದಾರೆ ನಲಪಾಡ್ ಶರಣಾಗತನಾಗುತ್ತಿರಲಿಲ್ಲ.

    ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ವಾದ ಹೀಗಿತ್ತು:
    ವೈದ್ಯಕೀಯ ದಾಖಲೆಗಳು ನಲಪಾಡ್ ಪರ ವಕೀಲರಿಗೆ ಸಿಕ್ಕಿದ್ದು ಹೇಗೆ? ಇದರಲ್ಲೆ ನಲಪಾಡ್ ಎಷ್ಟು ಪ್ರಭಾವಿ ಆಗಿದ್ದಾನೆ ಎನ್ನುವುದು ತಿಳಿಯುತ್ತದೆ. ವೈದ್ಯರು ನಮಗೆ ಸಹಕಾರ ನೀಡಿಲ್ಲ ಬದಲಾಗಿ ನಲಪಾಡ್ ಪರ ವಕೀಲರಿಗೆ ಸಹಕಾರ ನೀಡಿದ್ದಾರೆ. ವೈದ್ಯಕೀಯ ದಾಖಲೆ ಅರೋಪಿ ಪರ ವಕೀಲರಿಗೆ ಸಿಕ್ಕ ಬಗ್ಗೆ ತನಿಖೆ ಆಗಬೇಕು. ಮಲ್ಯ ಆಸ್ಪತ್ರೆಯ ವೈದ್ಯ ಆನಂದ್ ಮೇಲೆ ಸಾಕಷ್ಟು ಅನುಮಾನ ಇದೆ. ಇದೆ ಅನಂದ್ ಮೊದಲು ಸರ್ಜರಿ ಮಾಡಬೇಕು ಎಂದು ಹೇಳಿದರು. ಈಗ ಸರ್ಜರಿ ಅವಶ್ಯಕತೆ ಇಲ್ಲ ಎಂದು ವರದಿ ನೀಡಿದ್ದಾರೆ. ಇದು ಹೇಗೆ ಸಾಧ್ಯ. ಘಟನೆ ನಡೆದ ದಿನ ಕೊಟ್ಟ ಮೆಡಿಕಲ್ ರಿಪೋರ್ಟ್‍ನಲ್ಲಿ ಎಂಟು ಕಡೆ ಮೂಳೆ ಮುರಿದಿರುವುದಾಗಿ ಹೇಳಿದ್ದರು. ಆದರೆ ಇದೀಗ ಇದಕ್ಕೆ ವಿರುದ್ಧವಾಗಿ ವರದಿ ನೀಡಿದ್ದಾರೆ. ಇಲ್ಲಿ ವಿದ್ವತ್‍ಗೆ ಜೀವ ಬೆದರಿಕೆ ಬದಲು ವೈದ್ಯ ಆನಂದ್‍ಗೆ ಜೀವ ಬೆದರಿಕೆ ಇದೆ. ಹಾಗಾಗಿ ವೈದ್ಯ ಆನಂದ್ ಅವರು ವೈದ್ಯಕೀಯ ರಿಪೋರ್ಟ್ ತಿರುಚಿ ನೀಡಿದ್ದಾರೆ.

    ಘಟನೆ ನಡೆದು ಮಾರನೇ ದಿನವೇ ವಿದ್ವತ್ ವಿರುದ್ಧ ಕೌಂಟರ್ ಕೇಸ್ ದಾಖಲಾಗಿದೆ. ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುವವನ ವಿರುದ್ಧವೇ ಎಫ್‍ಐಆರ್ ದಾಖಲಿಸಲಾಗಿದೆ. ಈ ಬೆಳವಣಿಗೆ ಗಮನಿಸಿದರೆ ಸಮಾಜ ಎತ್ತ ಕಡೆ ಸಾಗುತ್ತಿದೆ ಎಂಬುದು ಗೊತ್ತಾಗಲಿದೆ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‍ಗೆ ಸಿಡಿ ನೀಡುತ್ತೇವೆ. ಅದನ್ನು ಒಮ್ಮೆ ನೋಡಿದರೆ ನಲಪಾಡ್ ಎಷ್ಟು ಕ್ರೂರ ಎಂಬುವುದು ತಿಳೀಯುತ್ತದೆ ಎಂದು ತಮ್ಮ ವಾದ ಮಂಡಿಸಿದರು.

    ಎರಡು ಕಡೆಯ ವಾದ ಪ್ರತಿವಾದ ಕೇಳಿದ ನ್ಯಾಯಾಮೂರ್ತಿಗಳು ಕೋರ್ಟ್‍ನ ಸಮಯ ಮುಗಿದಿದ್ದರಿಂದ ಪ್ರಕರಣವನ್ನ ಸೋಮವಾರಕ್ಕೆ ಮುಂದೂಡಿದರು. ಸೋಮವಾರ ವಿಶೇಷ ಅಭಿಯೋಜಕರು ಹಲ್ಲೆಯ ಸಿಸಿಟಿವಿ ದೃಶ್ಯಗಳನ್ನು ಕೋರ್ಟ್ ಗೆ ನೀಡಲಿದ್ದಾರೆ.

  • ಕರ್ನಾಟಕ ಹೈಕೋರ್ಟ್ ಗೆ ಜಡ್ಜ್ ನೇಮಿಸಿ: ಕಾನೂನು ಸಚಿವರಲ್ಲಿ ಡಿವಿಎಸ್ ಮನವಿ

    ಕರ್ನಾಟಕ ಹೈಕೋರ್ಟ್ ಗೆ ಜಡ್ಜ್ ನೇಮಿಸಿ: ಕಾನೂನು ಸಚಿವರಲ್ಲಿ ಡಿವಿಎಸ್ ಮನವಿ

    ನವದೆಹಲಿ: ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರದ ಮಾಜಿ ಕಾನೂನು ಸಚಿವ ಹಾಲಿ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದ ಗೌಡ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರಲ್ಲಿ ಮನವಿ ಮಾಡಿದ್ದಾರೆ.

    ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆಗಳನ್ನು ಭರ್ತಿಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಹಿರಿಯ ವಕೀಲರು ನಡೆಸುತ್ತಿರುವ ಸರಣಿ ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಇಂದು ಸದಾನಂದಗೌಡ ಮತ್ತು ರವಿಶಂಕರ್ ಪ್ರಸಾದ್ ಚರ್ಚಿಸಿದರು. ಸದಾನಂದಗೌಡರು ಈ ಕುರಿತು ವಿವರಗಳನ್ನು ಕಾನೂನು ಸಚಿವರಿಗೆ ನೀಡಿ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದರು.

    ಸತ್ಯಾಗ್ರಹಕ್ಕೆ ಸ್ಟೇಜ್ ಹಾಕಿರುವ ಅಡ್ವೋಕೇಟ್ಸ್ ಅಸೋಸಿಯೇಷನ್ ಆಫ್ ಬೆಂಗಳೂರು(ಎಎಬಿ) ಬೆಳಗ್ಗೆ 10:30 ರಿಂದ 5:30 ರ ವರೆಗೆ ಒಂದು ವಾರದ ಕಾಲ ಧರಣಿ ಮಾಡಲಿದ್ದು, ಪ್ರತಿಭಟನೆಗೆ ಸರ್ಕಾರ ಮಣಿಯದೆ ಹೋದರೆ ಇಡೀ ರಾಜ್ಯಾದ್ಯಂತ ಕೋರ್ಟ್ ಕಲಾಪ ಬಹಿಷ್ಕಾರ ಮಾಡುವುದಾಗಿ ಹಿರಿಯ ವಕೀಲರು ಎಚ್ಚರಿಕೆ ನೀಡಿದ್ದಾರೆ.

    ಬೇಡಿಕೆ ಏನು?
    ಹೈಕೋರ್ಟ್ ನ್ಯಾಯಾಧೀಶ ಹುದ್ದೆ ಖಾಲಿ ಇರುವುದರಿಂದ ಸುಮಾರು 3 ಲಕ್ಷ ಪ್ರಕರಣಗಳು ವಿಲೇವಾರಿಯಾಗದೇ ಉಳಿದಿದ್ದು, ವಕೀಲರಿಗೆ ಹಾಗೂ ಕಕ್ಷಿದಾರರಿಗೆ ನ್ಯಾಯದಾನ ವಿಳಂಬವಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಬೆಂಗಳೂರು ವಕೀಲರ ಸಂಘವು ರಾಷ್ಟ್ರಪತಿ, ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಕೇಂದ್ರ ಕಾನೂನು ಮಂತ್ರಿ ಮತ್ತು ಅಟಾರ್ನಿ ಜನರಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ.

    ಸುಪ್ರೀಂ ಕೋರ್ಟ್ ಕರ್ನಾಟಕದ ಹೈಕೋರ್ಟ್ ಗೆ 62 ನ್ಯಾಯಮೂರ್ತಿಗಳನ್ನು ಅನುಮೋದಿಸಿದೆ. ಪ್ರಸ್ತುತ 24 ನ್ಯಾಯಮೂರ್ತಿಗಳೂ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ 8 ನ್ಯಾಯಮೂರ್ತಿಗಳು ಧಾರವಾಡ ಮತ್ತು ಕಲಬುರುಗಿ ಸಂಚಾರಿ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಿನ್ಸಿಪಲ್ ಬೆಂಚ್‍ನಲ್ಲಿ 16 ನ್ಯಾಯಮೂರ್ತಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ 38 ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇದೆ.

    ನೆರೆಯ ರಾಜ್ಯದ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಗೆ ಹೋಲಿಸಿದರೆ ರಾಜ್ಯದ ಹೈಕೋರ್ಟ್ ನಲ್ಲಿ ಸುಮಾರು ಶೇ.60 ರಷ್ಟು ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಪ್ರಕರಣಗಳು ನಿಗದಿತ ಸಮಯಕ್ಕೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬರದೆ ಕಕ್ಷಿದಾರರಿಗೆ ತೊಂದರೆಯಾಗುತ್ತಿದೆ. ಅಲ್ಲದೇ ಅವರಿಗೆ ನ್ಯಾಯಾಂಗದ ಮೇಲೆ ನಂಬಿಕೆ ಕ್ರಮೇಣ ಕಡಿಮೆಯಾಗುತ್ತಿದೆ.

  • ಉಪವಾಸ ಸತ್ಯಾಗ್ರಹ ಆರಂಭಿಸಿದ ಹೈಕೋರ್ಟ್ ಹಿರಿಯ ವಕೀಲರು

    ಉಪವಾಸ ಸತ್ಯಾಗ್ರಹ ಆರಂಭಿಸಿದ ಹೈಕೋರ್ಟ್ ಹಿರಿಯ ವಕೀಲರು

    ಬೆಂಗಳೂರು: ಹೈಕೋರ್ಟ್ ನ್ಯಾಯಾಧೀಶರ ಶೀಘ್ರ ನೇಮಕಾತಿಗೆ ಆಗ್ರಹಿಸಿ ಹಿರಿಯ ವಕೀಲರು ಹೈಕೋರ್ಟ್ ಬಳಿಯ ಗೋಲ್ಡನ್ ಜ್ಯೂಬ್ಲಿ ಗೇಟ್ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

    ಮಾಜಿ ಅಡ್ವೊಕೇಟ್ ಜನರಲ್ ಬಿವಿ ಆಚಾರ್ಯ ಜೊತೆ ಹಿರಿಯ ವಕೀಲರಾದ ಸಜ್ಜನ್ ಪೂವಯ್ಯ, ನಂಜುಂಡ ರೆಡ್ಡಿ, ಬಿಎಲ್ ಜಗದೀಶ್ ಸೇರಿದಂತೆ ಹಲವು ಮಂದಿ ಭಾಗವಹಿಸಿ ಪ್ರತಿಭಟಿಸಿದ್ದರು.

    ಕೇಂದ್ರ ಸರ್ಕಾರ ಹೈಕೋರ್ಟ್‍ಗೆ ನ್ಯಾಯಮೂರ್ತಿಗಳ ಭರ್ತಿ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ. ಇದರಿಂದ ಕರ್ನಾಟಕದಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದರೂ ಭರ್ತಿ ಮಾಡಲು ಮೀನಮೇಷ ಎಣಿಸುತ್ತಿದೆ ಎಂದು ಹಿರಿಯ ವಕೀಲರು ಆರೋಪ ಮಾಡಿದರು. ಧರಣಿ ನಿರತ ಸ್ಥಳಕ್ಕೆ ಮಾಜಿ ಕಾನೂನು ಸಚಿವ, ಹಾಲಿ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಕೇಂದ್ರ ಸರ್ಕಾರದ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸೋ ನಿಟ್ಟಿನಲ್ಲಿ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

    ಸತ್ಯಾಗ್ರಹಕ್ಕೆ ಸ್ಟೇಜ್ ಹಾಕಿರುವ ಅಡ್ವೋಕೇಟ್ಸ್ ಅಸೋಸಿಯೇಷನ್ ಆಫ್ ಬೆಂಗಳೂರು(ಎಎಬಿ) ಬೆಳಗ್ಗೆ 10:30 ರಿಂದ 5:30 ರ ವರೆಗೆ ಒಂದು ವಾರದ ಕಾಲ ಧರಣಿ ಮಾಡಲಿದ್ದು, ಪ್ರತಿಭಟನೆಗೆ ಸರ್ಕಾರ ಮಣಿಯದೆ ಹೋದರೆ ಇಡೀ ರಾಜ್ಯಾದ್ಯಂತ ಕೋರ್ಟ್ ಕಲಾಪ ಬಹಿಷ್ಕಾರ ಮಾಡುವುದಾಗಿ ಹಿರಿಯ ವಕೀಲರು ಎಚ್ಚರಿಕೆ ನೀಡಿದ್ದಾರೆ.

    ಬೇಡಿಕೆ ಏನು? ಹೈಕೋರ್ಟ್ ನ್ಯಾಯಾಧೀಶ ಹುದ್ದೆ ಖಾಲಿ ಇರುವುದರಿಂದ ಸುಮಾರು 3 ಲಕ್ಷ ಪ್ರಕರಣಗಳು ವಿಲೇವಾರಿಯಾಗದೇ ಉಳಿದಿದ್ದು, ವಕೀಲರಿಗೆ ಹಾಗೂ ಕಕ್ಷಿದಾರರಿಗೆ ನ್ಯಾಯದಾನ ವಿಳಂಬವಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಬೆಂಗಳೂರು ವಕೀಲರ ಸಂಘವು ರಾಷ್ಟ್ರಪತಿ, ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಕೇಂದ್ರ ಕಾನೂನು ಮಂತ್ರಿ ಮತ್ತು ಅಟಾರ್ನಿ ಜನರಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ.

    ಸುಪ್ರೀಂ ಕೋರ್ಟ್ ಕರ್ನಾಟಕದ ಹೈಕೋರ್ಟ್ ಗೆ 62 ನ್ಯಾಯಮೂರ್ತಿಗಳನ್ನು ಅನುಮೋದಿಸಿದೆ. ಪ್ರಸ್ತುತ 24 ನ್ಯಾಯಮೂರ್ತಿಗಳೂ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ 8 ನ್ಯಾಯಮೂರ್ತಿಗಳು ಧಾರವಾಡ ಮತ್ತು ಕಲಬುರುಗಿ ಸಂಚಾರಿ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಿನ್ಸಿಪಲ್ ಬೆಂಚ್‍ನಲ್ಲಿ 16 ನ್ಯಾಯಮೂರ್ತಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ 38 ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇದೆ.

    ನೆರೆಯ ರಾಜ್ಯದ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಗೆ ಹೋಲಿಸಿದರೆ ರಾಜ್ಯದ ಹೈಕೋರ್ಟ್ ನಲ್ಲಿ ಸುಮಾರು ಶೇ.60 ರಷ್ಟು ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಪ್ರಕರಣಗಳು ನಿಗದಿತ ಸಮಯಕ್ಕೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬರದೆ ಕಕ್ಷಿದಾರರಿಗೆ ತೊಂದರೆಯಾಗುತ್ತಿದೆ. ಅಲ್ಲದೇ ಅವರಿಗೆ ನ್ಯಾಯಾಂಗದ ಮೇಲೆ ನಂಬಿಕೆ ಕ್ರಮೇಣ ಕಡಿಮೆಯಾಗುತ್ತಿದೆ.

    ಕಣ್ಣೀರಿಟ್ಟಿದ್ದ ಸಿಜೆ: 2016ರ ನರೇಂದ್ರ ಮೋದಿ ಅವರ ಸ್ವಾತಂತ್ರ್ಯ ಭಾಷಣದಲ್ಲಿ ನ್ಯಾಯಾಧೀಶರ ನೇಮಕಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರವನ್ನು ಪ್ರಸ್ತಾಪ ಮಾಡದಕ್ಕೆ ಅಂದಿನ ಮುಖ್ಯ ನ್ಯಾಯಾಧೀಶರಾಗಿದ್ದ ಟಿ.ಎಸ್.ಠಾಕೂರ್ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ನ್ಯಾಯಾಲಯಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸುವಲ್ಲಿ ಕೇಂದ್ರ ಸರ್ಕಾರದ ವಿಳಂಬ ನೀತಿಯಿಂದ ಬೇಸರಗೊಂಡು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೆದುರೇ ಟಿ.ಎಸ್.ಠಾಕೂರ್ ಗದ್ಗದಿತರಾಗಿ ಕಣ್ಣೀರಿಟ್ಟಿದ್ದರು.

  • ನನ್ನ ಹೆಂಡ್ತಿ  ಹೊಡಿತಾಳೆ, ಅವಳನ್ನ ಕಂಡ್ರೆ ಭಯ, ಡೈವೊರ್ಸ್ ಕೊಡಿ – ಹೈಕೋರ್ಟ್ ನಲ್ಲಿ ಕಣ್ಣೀರಿಟ್ಟ ಟೆಕ್ಕಿ ಪತಿ

    ನನ್ನ ಹೆಂಡ್ತಿ ಹೊಡಿತಾಳೆ, ಅವಳನ್ನ ಕಂಡ್ರೆ ಭಯ, ಡೈವೊರ್ಸ್ ಕೊಡಿ – ಹೈಕೋರ್ಟ್ ನಲ್ಲಿ ಕಣ್ಣೀರಿಟ್ಟ ಟೆಕ್ಕಿ ಪತಿ

    ಬೆಂಗಳೂರು: ನನ್ನ ಹೆಂಡತಿ ತುಂಬಾ ಜೋರು, ಅವಳ ಜೊತೆ ನನಗೆ ಬದುಕಲು ಆಗುತ್ತಿಲ್ಲ ಅಂತಾ ನ್ಯಾಯಮೂರ್ತಿಗಳ ಮುಂದೆ ಟೆಕ್ಕಿ ಪತಿ ಕಣ್ಣೀರು ಹಾಕಿದ್ದಾರೆ.

    ಕರ್ನಾಟಕ ಹೈಕೋರ್ಟ್ ಇಂತಹದೊಂದು ಅಪರೂಪದ ಪ್ರಕರಣಕ್ಕೆ ಸಾಕ್ಷಿಯಾಗಿದೆ. ಅಮೆರಿಕಾದಲ್ಲಿ ನೆಲೆಸಿರೋ ಬೆಂಗಳೂರಿನ ಟೆಕ್ಕಿಯೊಬ್ಬರು, ನನಗೆ ಹೆಂಡ್ತಿನಾ ಕಂಡ್ರೆ ಭಯ, ಅವಳು ನನಗೆ ಹೊಡೀತಾಳೆ, ಅವಳ ಮುಖ ನೋಡಿದ್ರೆನೆ ನನಗೆ ಭಯ ಆಗುತ್ತದೆ. ಹಾಗಾಗಿ ನನಗೆ ಡೈವೋರ್ಸ್ ಕೊಡಿ ಅಂತ ಜಡ್ಜ್ ಬಳಿ ಬೇಡಿಕೊಂಡಿದ್ದಾರೆ.

    ನ್ಯಾಯಾಧೀಶರು ಹೇಳಿದ್ದೇನು?: ಭಾವನೆಗಳು ಬೆರೆತಾಗ ಮಾತ್ರ ಗಂಡ ಹೆಂಡತಿ ಸಂಸಾರ ಮಾಡಲು ಸಾಧ್ಯವಾಗುತ್ತದೆ. ಗಂಡ ಅಮೆರಿಕಾದಲ್ಲಿ ಇದ್ದರೂ ಅಲ್ಲಿಂದಲೇ ಪ್ರೀತಿಯಿಂದ ಇರೋದನ್ನ ನೋಡಿದ್ದೇವೆ. ಆದ್ರೆ ಮಾನಸಿಕ ತೊಂದರೆಗಳು ಆಗುವುದು ಸಾಮಾನ್ಯ, ಎಲ್ಲಾ ಸಮಯದಲ್ಲೂ ಒಂದೇ ರೀತಿ ಇರಲು ಸಾಧ್ಯವಿಲ್ಲ.ಮಾನಸಿಕ ತಜ್ಞರಾದ ಶಾಹ ಎಂಬವರು ಬಳಿ ಕೌನ್ಸೆಲಿಂಗ್ ಮಾಡಿಸಿಕೊಳ್ಳಿ.ಪ್ರೀತಿ ಇಲ್ಲದವರ ಬಳಿ ಇರಲೂ ಯಾರಿಗೂ ಸಾಧ್ಯವಿಲ್ಲ. ಹಾಗೇನಾದ್ರು ಇದ್ರೆ ಅವರನ್ನು ನಾಯಿಯಂತೆ ನೋಡಿಕೊಳ್ಳುತ್ತಾರೆ. ಆರೋಪಗಳನ್ನು ಮಾಡುವುದನ್ನು ಬಿಡಬೇಕು, ಹಿಂದೆ ನಡೆದಿದ್ದನ್ನು ಮರೆಯಬೇಕು.. ಗಂಡನಿಗೆ ಇಚ್ಛೆ ಇಲ್ಲ ಅಂದ್ರೆ ನ್ಯಾಯಾಲಯ ಒತ್ತಾಯಪೂರ್ವಕವಾಗಿ ಒಂದೇ ಕಡೆ ಇರಿ ಎಂದು ಹೇಳಲು ಸಾಧ್ಯವಿಲ್ಲ. ಇದು ಒಂದು ದಿನದ ಜೀವನವಲ್ಲ, ಪ್ರೀತಿ ಇಲ್ಲದ ಮೇಲೆ ಭಾವನೆಗಳು ಬೆರೆಯದೇ ಸಂಸಾರ ನಡೆಸಲು ಸಾಧ್ಯವಿಲ್ಲ ಅಂತಾ ಹೇಳಿದ್ದಾರೆ.

    ಈ ರೀತಿಯಾಗಿ ಬುದ್ದಿವಾದ ಹೇಳಿದ ಜಡ್ಜ್, ಕೊನೆಗೆ ಮಧ್ಯಸ್ಥಿಕಾ ಕೇಂದ್ರಕ್ಕೆ ತೆರಳಿ ಸಮಸ್ಯೆ ಪರಿಹರಿಸಿಕೊಳ್ಳಿ. ಅಲ್ಲಿಯೂ ಪರಿಹಾರ ದೊರೆಯದೆ ಹೋದರೆ ಮತ್ತೆ ಬನ್ನಿ ಅಂತ ಹೇಳಿ ಪ್ರಕರಣವನ್ನ ಮುಂದೂಡಿದ್ದಾರೆ.

  • ಮಾಜಿ ಡಿಸಿಎಂ ಆರ್. ಅಶೋಕ್‍ಗೆ ಹೈಕೋರ್ಟ್‍ನಿಂದ ಬಿಗ್ ರಿಲೀಫ್

    ಮಾಜಿ ಡಿಸಿಎಂ ಆರ್. ಅಶೋಕ್‍ಗೆ ಹೈಕೋರ್ಟ್‍ನಿಂದ ಬಿಗ್ ರಿಲೀಫ್

    ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಅವರಿಗೆ ಹೈ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಖಲಿಸಿದ್ದ ಎಫ್‍ಐಆರ್ ಗೆ ತಡೆಯಾಜ್ಞೆ ನೀಡಿದೆ.

    ಎಫ್‍ಐಆರ್ ರದ್ದು ಕೋರಿ ಆರ್.ಅಶೋಕ್ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಆರ್.ಬಿ.ಬೂದಿಹಾಳ್ ಅವರಿದ್ದ ನ್ಯಾಯಪೀಠ ಎಫ್‍ಐಆರ್ ಗೆ ತಡೆ ನೀಡಿ ಆದೇಶ ಪ್ರಕಟಿಸಿದರು.

    ಅಶೋಕ್ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ, ಚುನಾವಣೆ ಹತ್ತಿರ ಬರುವ ಸಂದರ್ಭದಲ್ಲಿ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಸುಳ್ಳು ದೂರು ದಾಖಲಿಸಲಾಗಿದೆ. ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದ್ದು, ಒಂದೇ ಆರೋಪಗಳ ಮೇಲೆ ದೂರು ದಾಖಲಿಸಲಾಗಿದೆ ಎಂದು ವಾದಿಸಿದ್ದರು.

    ಎಸಿಬಿ ಪರ ವಕೀಲ ಎನ್. ಜಗದೀಶ್ ಅವರು, 3 ವರ್ಷದ ಮಕ್ಕಳಿಗೂ ವ್ಯವಸಾಯಗಾರರೆಂದು ಜಮೀನು ಹಂಚಿಕೆ ಮಾಡಲಾಗಿದೆ. ಅರ್ಜಿ ಸಲ್ಲಿಸದೇ ಇದ್ದರೂ ಅಕ್ರಮವಾಗಿ ಜಮೀನು ಹಂಚಿಕೆ ಮಾಡಲಾಗಿದೆ. ಅರ್ಜಿದಾರರು ತಪ್ಪು ಮಾಡದೇ ಇದ್ದರೆ ಎಫ್‍ಐಆರ್ ಗೆ ತಡೆ ಕೋರಿ ಅರ್ಜಿ ಸಲ್ಲಿಸುತ್ತಿರಲಿಲ್ಲ. ಒಂದು ವೇಳೆ ತಡೆ ನೀಡಿದರೆ ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಸಾಧ್ಯತೆಯಿದೆ ಎಂದು ಆಕ್ಷೇಪಣೆ ಸಲ್ಲಿಸಿದ್ದರು.

    ಏನಿದು ಪ್ರಕರಣ?
    ಬೆಂಗಳೂರು ದಕ್ಷಿಣ ತಾಲೂಕು ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮ ಸಮಿತಿ ಅಧ್ಯಕ್ಷರಾಗಿದ್ದ  ಆರ್.ಅಶೋಕ್ ಸೇರಿದಂತೆ ಹತ್ತು ಜನರ ವಿರುದ್ಧ ಎಸಿಬಿ ಎಫ್‍ಐಆರ್ ದಾಖಲಿಸಿತ್ತು. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಕಲಂ 13(1)(ಸಿ), 13(1)(ಡಿ) ಜತೆಗೆ 13(2) ಹಾಗೂ ಐಪಿಸಿ ಕಲಂ 420 ಹಾಗೂ 120 (ಬಿ) ಅನ್ವಯ ಎಫ್‍ಐಆರ್ ದಾಖಲಾಗಿದೆ.

    1998ರಿಂದ 2006ರ ಅವಧಿಯಲ್ಲಿಬೆಂಗಳೂರು ದಕ್ಷಿಣ ತಾಲೂಕಿನ ಭೂ ಸಕ್ರಮ ಸಮಿತಿ ಅಧ್ಯಕ್ಷ ಮತ್ತು ಉತ್ತರಹಳ್ಳಿ ಕ್ಷೇತ್ರದ ಅಂದಿನ ಶಾಸಕ ಆರ್.ಅಶೋಕ್ ಇತರೆ ಸರ್ಕಾರಿ ನೌಕರರು ಹಾಗೂ ಅಕ್ರಮ ಫಲಾನುಭವಿಗಳನ್ನು ಈ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಉಲ್ಲೇಖಿಸಲಾಗಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ತಾಲೂಕು ಹಿಂದಿನ ತಹಸೀಲ್ದಾರ್ ರಾಮಚಂದ್ರಯ್ಯ, ಹೆಮ್ಮಿಗೆಪುರ ವೃತ್ತದ ಹಿಂದಿನ ಕಂದಾಯ ನಿರೀಕ್ಷಕ ಗವಿಗೌಡ, ನೆಲಗುಳಿ ವೃತ್ತದ ಕಂದಾಯ ನಿರೀಕ್ಷಕ ಚೌಡರೆಡ್ಡಿ ಮತ್ತು ಅಗರ ಗ್ರಾಮದ ಗ್ರಾಮ ಲೆಕ್ಕಿಗ ಶಶಿಧರ್ ಅವರನ್ನು ಎಸಿಬಿ ಬಂಧಿಸಿತ್ತು. ಆರ್.ಅಶೋಕ್ ಎಫ್‍ಐಆರ್ ನಲ್ಲಿ ಮೊದಲನೇ ಆರೋಪಿಯಾಗಿದ್ದರೆ ಬಂಧಿತ ನಾಲ್ವರು ಕ್ರಮವಾಗಿ 2, 3, 4 ಮತ್ತು ಐದನೇ ಆರೋಪಿಗಳಾಗಿದ್ದಾರೆ.

     

  • ಬಂದ್ ನಿರ್ಬಂಧಿಸಿ, ವಾಟಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪಿಐಎಲ್ ಸಲ್ಲಿಕೆ

    ಬಂದ್ ನಿರ್ಬಂಧಿಸಿ, ವಾಟಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪಿಐಎಲ್ ಸಲ್ಲಿಕೆ

    ಬೆಂಗಳೂರು: ಮಹದಾಯಿಗಾಗಿ ಕರ್ನಾಟಕ ಬಂದ್ ಕರೆ ನೀಡಿದ ವಾಟಾಳ್ ನಾಗರಾಜ್ ವಿರುದ್ಧ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ.

    ರಾಜಾಜಿನಗರ ಶ್ರದ್ಧಾ ಪೋಷಕರ ಸಂಘ ಪಿಐಎಲ್ ಸಲ್ಲಿಸಿದ್ದು, ಮಹದಾಯಿಗಾಗಿ 10 ದಿನಗಳ ಅಂತರದಲ್ಲಿ 2 ದಿನ ಬಂದ್ ಕರೆ ನೀಡಲಾಗಿದೆ ಇದರಿಂದ ಜನರ ಮೂಲಭೂತ ಹಕ್ಕಿಗೆ ದಕ್ಕೆ ಉಂಟಾಗಲಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

    ಬಂದ್ ನಡೆಸುವುದು ಅಸಂವಿಧಾನಿಕ, ಕಾನೂನು ಬಾಹಿರ ಎಂದು ಘೋಷಿಸಬೇಕು. ಬಂದ್‍ನಿಂದ ಉಂಟಾಗಿರುವ ನಷ್ಟವನ್ನು ವಾಟಾಳ್ ನಾಗರಾಜ್ ಅವರು ಸರ್ಕಾರಕ್ಕೆ ಪಾವತಿಸುವಂತೆ ಆದೇಶಿಸಬೇಕು ಹಾಗೂ ಪದೇ ಪದೇ ಬಂದ್ ಕರೆ ನೀಡುತ್ತಿರುವ ವಾಟಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸಂಘ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದೆ.

  • ಚುನಾವಣಾ ಆಯೋಗದ ಶಿಫಾರಸಿಗೆ ರಾಷ್ಟ್ರಪತಿ ಅಂಕಿತ-ಶಾಸಕತ್ವ ಸ್ಥಾನ ಕಳೆದುಕೊಂಡ ಆಪ್ 20 ಶಾಸಕರು

    ಚುನಾವಣಾ ಆಯೋಗದ ಶಿಫಾರಸಿಗೆ ರಾಷ್ಟ್ರಪತಿ ಅಂಕಿತ-ಶಾಸಕತ್ವ ಸ್ಥಾನ ಕಳೆದುಕೊಂಡ ಆಪ್ 20 ಶಾಸಕರು

    ನವದೆಹಲಿ: ಚುನಾವಣಾ ಆಯೋಗ ದೆಹಲಿಯ ಆಮ್ ಆದ್ಮಿ ಸರ್ಕಾರದ 20 ಶಾಸಕರನ್ನು ಅನರ್ಹಗೊಳಿಸಲು ಶಿಫಾರಸ್ಸು ಮಾಡಿದ ಕಡತಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ.

    ಆಪ್ ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆ ಚುನಾವಣಾ ಆಯೋಗ ಶಾಸಕರನ್ನು ಅನರ್ಹಗೊಳಿಸಲು ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿತ್ತು. ಆದರೆ ಆಪ್ ಶಾಸಕರು ಸಂಸದೀಯ ಕಾರ್ಯದರ್ಶಿ ಹುದ್ದೆ ಹೊಂದಿದ್ದರೂ, ಯಾವುದೇ ರೀತಿಯ ಸಂಬಳ, ಸವಲತ್ತು ಪಡೆದಿಲ್ಲ ಎಂಬ ಕಾರಣ ನೀಡಿ ಚುನಾವಣೆ ಆಯೋಗದ ಶಿಫಾರಸನ್ನು ಪ್ರಶ್ನೆ ಮಾಡಿದ್ದರು. ಚುನಾವಣಾ ಆಯೋಗದ ಶಿಫಾರಸನ್ನು ಪ್ರಶ್ನಿಸಿ ಆಪ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

    ರಾಷ್ಟ್ರಪತಿಗಳ ಅಂಕಿತ ಕುರಿತು ಪ್ರತಿಕ್ರಿಯೆ ನೀಡಿದ ದೆಹಲಿ ಆಪ್ ಶಾಸಕ ಗೋಪಾಲ್ ರಾಯ್, ಶಾಸಕರ ಅನರ್ಹತೆಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದರು. ಅಲ್ಲದೇ ಈ ಕುರಿತು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಲು ಸಿದ್ಧ. ರಾಷ್ಟ್ರಪತಿಗಳ ನಿರ್ಧಾರ ಅಸಂವಿಧಾನಿಕವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಎಂದು ಆರೋಪಿಸಿದರು.

    ರಾಷ್ಟ್ರಪತಿಗಳ ಅಂಕಿತದಿಂದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರಿ ಮುಖಭಂಗವಾಗಿದ್ದು, ಶೀಘ್ರದಲ್ಲಿಯೇ ದೆಹಲಿಯ 20 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಆದರೆ ಪ್ರಸ್ತುತ 70 ಸ್ಥಾನಗಳನ್ನು ಹೊಂದಿರುವ ದೆಹಲಿ ವಿಧಾನಸಭೆಯಲ್ಲಿ ಆಪ್ ಪಕ್ಷ 66 ಸ್ಥಾನಗಳನ್ನು ಹೊಂದಿದೆ. ರಾಷ್ಟ್ರಪತಿಗಳ ಅಂಕಿತದ ನಂತರ 20 ಅನರ್ಹರಾದ ಕಾರಣ ಆಪ್ ಸ್ಥಾನಗಳ ಸಂಖ್ಯೆ 46ಕ್ಕೆ ಇಳಿಕೆಯಾಗಲಿದೆ. ಶಾಸಕರ ಸಂಖ್ಯೆ ಕಡಿಮೆಯಾದರೂ ಕೇಜ್ರಿವಾಲ್ ಆಡಳಿತದಲ್ಲಿ ಮುಂದುವರಿಯಲಿದ್ದಾರೆ. 35ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಇರುವ ಕಾರಣ ಸರ್ಕಾರಕ್ಕೆ ಯಾವುದೇ ಸಮಸ್ಯೆಯಿಲ್ಲ.

    ಏನಿದು ಪ್ರಕರಣ?
    2016ರ ನಂತರ ಕೇಜ್ರಿವಾಲ್ ಮುಂದಾಳತ್ವದ ಆಪ್ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿತ್ತು. ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೇಜ್ರಿವಾಲ್ 21 ಶಾಸಕರನ್ನು ವಿಧಾನಸಭಾ ಕಾರ್ಯದರ್ಶಿಗಳಾಗಿ ನೇಮಕ ಮಾಡಿದ್ದರು. ಈ ಕುರಿತು ಪ್ರಶಾಂತ್ ಪಟೇಲ್ ಎಂಬವರು ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದರು. ಈ ದೂರನ್ನು ರಾಷ್ಟ್ರಪತಿಗಳು ಚುನಾವಣಾ ಆಯೋಗಕ್ಕೆ ವರ್ಗಾವಣೆ ಮಾಡಿದ್ದರು.

    2016ರಲ್ಲಿ ಆಪ್ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ ಮಾಡಿತ್ತು. ಆಪ್ 21 ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿತ್ತು. ಈ ಬಗ್ಗೆ ದೂರು ಸ್ವೀಕರಿಸಿದ್ದ ಆಯೋಗ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಪಕ್ಷದಿಂದ ಸ್ಪಷ್ಟನೆ ಕೇಳಿತ್ತು. ಆದರೆ ತಮ್ಮ ವಿರುದ್ಧ ಪ್ರಕರಣವನ್ನು ಕೈ ಬಿಡುವಂತೆ ಆಪ್ ನ ಶಾಸಕರು ಆಯೋಗಕ್ಕೆ ಮನವಿ ಮಾಡಿದ್ದರಾದರೂ, ಆಯೋಗ ಅವರ ಅರ್ಜಿಯನ್ನು ತಿರಸ್ಕರಿಸಿತ್ತು.

     

  • ದೊಡ್ಮನೆ ಕುಡಿ ನಟನೆಯ ‘ಅನಂತು ವರ್ಸಸ್ ನುಸ್ರತ್’ ಚಿತ್ರತಂಡದ ವಿರುದ್ಧ ಹೈಕೋರ್ಟ್ ಗೆ ದೂರು

    ದೊಡ್ಮನೆ ಕುಡಿ ನಟನೆಯ ‘ಅನಂತು ವರ್ಸಸ್ ನುಸ್ರತ್’ ಚಿತ್ರತಂಡದ ವಿರುದ್ಧ ಹೈಕೋರ್ಟ್ ಗೆ ದೂರು

    ಬೆಂಗಳೂರು: ಸ್ಯಾಂಡಲ್‍ವುಡ್‍ನ ದೊಡ್ಮನೆಯ ವಿನಯ್‍ರಾಜ್‍ಕುಮಾರ್ ನಟಿಸುತ್ತಿರುವ ‘ಅನಂತು ವರ್ಸಸ್ ನುಸ್ರತ್’ ಚಿತ್ರತಂಡದ ವಿರುದ್ಧ ವಕೀಲ ಅಮೃತೇಶ್ ಹೈಕೋರ್ಟ್ ಗೆ ದೂರು ಸಲ್ಲಿಸಿದೆ.

    ಚಿತ್ರತಂಡ ಹೈಕೋರ್ಟ್ ಆವರಣದಲ್ಲಿ ನಾಯಕ ನಟ ವಿನಯ್‍ರಾಜ್‍ಕುಮಾರ್ ಅವರ ಫೋಟೋಶೂಟ್ ಮಾಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವಕೀಲರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದ್ರೆ ಪೊಲೀಸರು ಮಾತ್ರ ಇದೂವರೆಗೂ ಯಾವುದೇ ಕ್ರಮಕೈಗೊಳ್ಳದ ಕಾರಣ ವಕೀಲ ಅಮೃತೇಶ್ ಎಫ್‍ಐಆರ್ ದಾಖಲಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

    ಆಗಸ್ಟ್ 15ರಂದು ವಿನಯ್‍ರಾಜ್‍ಕುಮಾರ್ ಅವರ ಫೋಟೋಶೂಟ್ ಮಾಡಿಸಲಾಗಿತ್ತು. ಹೈಕೋರ್ಟ್ ಬಳಿಯಿರುವ ಗೃಂಥಾಲಯದ ಆವರಣದಲ್ಲಿ ಫೋಟೋಶೂಟ್ ನಡೆಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ವಕೀಲರ ಸಂಘದ ಅಧ್ಯಕ್ಷರಿಂದ ಅನುಮತಿ ಪತ್ರವನ್ನು ಪಡೆಯಲಾಗಿದೆ. ನನ್ನ ಬಳಿ ವಕೀಲರ ಸಂಘ ನೀಡಿರುವ ಅನುಮತಿ ಪತ್ರವಿದೆ. ಇನ್ನೂ ದೂರು ಸಲ್ಲಿಸಿರುವ ವಕೀಲ ಅಮೃತೇಶ್ ಯಾರೆಂಬುದು ನನಗೆ ಗೊತ್ತಿಲ್ಲ. ಇದುವರೆಗೂ ನಾನು ಅವರನ್ನು ಒಮ್ಮೆಯೂ ಭೇಟಿಯೂ ಆಗಿಲ್ಲ. ಇಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಬಳಿಕ ನನಗೆ ಈ ವಿಷಯ ಗೊತ್ತಾಗಿದೆ. ಅಂದು ನಡೆಸಿದ್ದ ಫೋಟೋಶೂಟ್ ನ್ನು ನಾವು ಆಗಸ್ಟ್ 22 ಮತ್ತು 23ರಂದು ಗಣೇಶ್ ಚತುರ್ಥಿ ಅಂಗವಾಗಿ ಪತ್ರಿಕೆಗಳಲ್ಲಿ ಪ್ರಕಟಿಸಲಾಗಿತ್ತು ಅಂತಾ ಚಿತ್ರದ ನಿರ್ದೇಶಕ ಸುಧೀರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಸುಧೀರ್ ನಿರ್ದೇಶನದಲ್ಲಿ ಅನಂತು ವರ್ಸಸ್ ನುಸ್ರತ್ ಸಿನಿಮಾ ಮೂಡಿ ಬರುತ್ತಿದೆ. ಚಿತ್ರದಲ್ಲಿ ರಾಘವೇಂದ್ರ ರಾಜ್‍ಕುಮಾರ್ ಸುಪುತ್ರ ವಿನಯ್ ರಾಜ್‍ಕುಮಾರ್ ವಕೀಲರ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವಿನಯ್‍ರಾಜ್‍ಕುಮಾರ್ ಗೆ ಜೊತೆಯಾಗಿ ಲತಾ ಹೆಗಡೆ ಬಣ್ಣ ಹಚ್ಚಿದ್ದಾರೆ. ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ಪರಿಚಿತರಾಗಿರುವ ನಟಿ ನಯನ ಕಾಣಿಸಿಕೊಂಡಿದ್ದಾರೆ. ನಯನಾ ಸಿನಿಮಾದಲ್ಲಿ ವಿನಯ್ ರಾಜ್‍ಕುಮಾರ್ ಸಹದ್ಯೋಗಿ ಶಾಂತಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ.

  • ‘ಸನ್ನಿ ನೈಟ್ಸ್’ಗಾಗಿ ಹೈ ಕೋರ್ಟ್ ಮೊರೆಹೋದ ಆಯೋಜಕರು

    ‘ಸನ್ನಿ ನೈಟ್ಸ್’ಗಾಗಿ ಹೈ ಕೋರ್ಟ್ ಮೊರೆಹೋದ ಆಯೋಜಕರು

    ಬೆಂಗಳೂರು: ಹೊಸ ವರ್ಷ ಆಚರಣೆಗೆ ಬೆಂಗಳೂರು ಮಹಾನಗರದಲ್ಲಿ ಟೈಮ್ ಕ್ರಿಯೇಷನ್ ಮಾದಕ ಬೆಡಗಿ ಸನ್ನಿ ಲಿಯೋನ್ ರನ್ನು ಕರೆತರಲು ಸಿದ್ಧತೆ ಮಾಡಿಕೊಂಡಿದ್ದು, ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕೆಂದು ಹೈ ಕೋರ್ಟ್ ಮೊರೆ ಹೋಗಿದೆ.

    ಸನ್ನಿ ನೈಟ್ಸ್ ಕಾರ್ಯಕ್ರಮಕ್ಕೆ ಒಂದು ಕಡೆ ಕರ್ನಾಟಕ ರಕ್ಷಣಾ ವೇದಿಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದರೆ, ಇನ್ನೊಂದು ಕಡೆ ರಾಜ್ಯ ಸರ್ಕಾರ ಸಹ ಸನ್ನಿ ನೈಟ್ಸ್ ಆಯೋಜನೆಗೆ ಯಾವುದೇ ಅನುಮತಿಯನ್ನು ನೀಡಿಲ್ಲ ಅಂತಾ ಸ್ಪಷ್ಟನೆಯನ್ನು ನೀಡಿದೆ.ಆದರೆ ಟೈಮ್ಸ್ ಕ್ರಿಯೇಷನ್ ಮಾತ್ರ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

    ಈಗ ನಗರದ ನಾಗವಾರದಲ್ಲಿರುವ ವೈಟ್ ಆರ್ಕಿಡ್ ಹೋಟೆಲ್ ನಲ್ಲಿ ಆಯೋಜನೆಗೊಂಡಿರುವ ಸನ್ನಿ ನೈಟ್ಸ್ ಗಾಗಿ ಟೈಮ್ ಕ್ರಿಯೇಷನ್ ಎಂಡಿ ಹರೀಶ್ ಎಂ.ಎಸ್. ಸೋಮವಾರ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕೆಂದು ಹೈ ಕೋರ್ಟ್ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಸನ್ನಿ ಸೀರೆ ಉಟ್ಟುಕೊಂಡು ಬಂದು ಕಾರ್ಯಕ್ರಮ ನಡೆಸಲಿ ಅಂತಾ ಕರವೇ ಯುವ ಸೇನೆ ಸವಾಲು

    ಕಾರ್ಯಕ್ರಮದ ಆಯೋಜನಕ್ಕೆ ಅನುಮತಿಯನ್ನು ನೀಡವುದರ ಜೊತೆಗೆ ಪೊಲೀಸ್ ಭದ್ರತೆಯನ್ನು ಒದಗಿಸುವ ಮೂಲಕ ನಡೆಯುವ ಅಹಿತಕರ ಘಟನೆಗಳನ್ನು ನಡೆಯುವುದನ್ನು ತಡೆಯಬೇಕು. ಈ ಸಂಬಂಧ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕೆಂದು ಮನವಿ ಮಾಡಿಕೊಂಂಡಿದ್ದರು. ಈಗಾಗಲೇ ಕಾರ್ಯಕ್ರಮದ ತಯಾರಿಗಳು ಮುಗಿಯುವ ಹಂತದಲ್ಲಿವೆ. ಕಾರ್ಯಕ್ರಮದಿಂದ ಹಿಂದೆ ಸರಿಯುವ ಹಂತದಲ್ಲಿ ನಾವುಗಳಿಲ್ಲ ಎಂದು ಹೈ ಕೋರ್ಟ್ ಗೆ ಮನವಿ ಮಾಡಿಕೊಂಡಿದ್ದಾರೆ.

    ಹೊಸ ವರ್ಷಾಚರಣೆಗಾಗಿ ನಗರದಲ್ಲಿ ಆಯೋಜನೆ ಮಾಡಲಾಗ್ತಿರೋ ‘ಸನ್ನಿ ನೈಟ್ಸ್’ಗೆ ಅನುಮತಿ ನೀಡದೇ ಇರೋದ್ರಿಂದ ಕಾರ್ಯಕ್ರಮ ಮಾಡುವ ಹಾಗಿಲ್ಲ. ಮನೋರಂಜನೆ ಕಾಯ್ದೆಯಡಿ ಪರ್ಮಿಷನ್ ಪಡೆಯುವುದು ಅಗತ್ಯ. ಈ ದೃಷ್ಟಿಯಿಂದ ಕಾರ್ಯಕ್ರಮ ನಡೆಯಲು ಅವಕಾಶ ನೀಡುವುದಿಲ್ಲ ಅಂತ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದರು.

    https://www.youtube.com/watch?v=hw9rGJ7u0KA

    https://www.youtube.com/watch?v=05Jkbnw4rXE

  • ಬುದ್ಧಿವಂತರಾದ ನಿಮಗೆ ಸಾಮಾನ್ಯ ಜ್ಞಾನ ಇಲ್ಲವೇ? ಹೈಕೋರ್ಟ್ ಖಾಸಗಿ ವೈದ್ಯರಿಗೆ ಚಾಟಿ ಬೀಸಿದ್ದು ಹೀಗೆ

    ಬುದ್ಧಿವಂತರಾದ ನಿಮಗೆ ಸಾಮಾನ್ಯ ಜ್ಞಾನ ಇಲ್ಲವೇ? ಹೈಕೋರ್ಟ್ ಖಾಸಗಿ ವೈದ್ಯರಿಗೆ ಚಾಟಿ ಬೀಸಿದ್ದು ಹೀಗೆ

    ಬೆಂಗಳೂರು: ಖಾಸಗಿ ಆಸ್ಪತ್ರೆಗಳ ವೈದ್ಯರು ತಕ್ಷಣವೇ ಮುಷ್ಕರವನ್ನು ಕೈಬಿಟ್ಟು ಸೇವೆಗೆ ಹಾಜರಾಗುವಂತೆ ಹೈಕೋರ್ಟ್ ಮಧ್ಯಂತರ ಆದೇಶ ಪ್ರಕಟಿಸಿದೆ.

    ವೈದ್ಯರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ವಕೀಲರಾದ ಎನ್.ಪಿ.ಅಮೃತೇಶ್, ಜಿ.ಆರ್.ಮೋಹನ್ ಹಾಗೂ ಆದಿನಾರಾಯಣ ಎಂಬುವರು ಸಲ್ಲಿಸಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಶುಕ್ರವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ. ರಮೇಶ್ ಹಾಗೂ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

    ಜನಸಾಮಾನ್ಯರು ಕೂಡ ಅನ್ಯಾಯ ಆದರೆ ಕೋರ್ಟ್‍ಗೆ ಬರುತ್ತಾರೆ. ಆದರೆ ಬುದ್ಧಿವಂತರಾದ ನಿಮಗೆ ಸಾಮಾನ್ಯ ಜ್ಞಾನ ಇಲ್ಲವೇ? ಒಂದು ವೇಳೆ ಅನ್ಯಾಯ ಆದರೆ ನ್ಯಾಯಾಲಯಕ್ಕೆ ಬನ್ನಿ. ಅದನ್ನು ಬಿಟ್ಟು ಆಸ್ಪತ್ರೆಗಳನ್ನು ಮುಚ್ಚಿ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ನ್ಯಾ. ಎಚ್.ಜಿ ರಮೇಶ್ ವೈದ್ಯರ ಪರ ವಕೀಲ ಬಸವರಾಜ್ ಅವರಿಗೆ ಪ್ರಶ್ನೆ ಮಾಡಿದರು.

    ಒಂದು ಬಾರಿ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ ಆದರೆ ಅದೇ ಅಂತಿಮ ಎಂದು ತಿಳಿದುಕೊಂಡಿದ್ದಾರಾ? ಎಲ್ಲರೂ ಅನ್ಯಾಯ ಆಗಿದೆ ಎಂದು ಖಂಡಿಸಿ ಬೀದಿಗಿಳಿದು ಪ್ರತಿಭಟನೆ ಮಾಡಲು ಶುರುಮಾಡಿದರೆ ಕೋರ್ಟ್ ಗಳು ಇರವುದು ಏನಕ್ಕೆ? ವಕೀಲರು ಯಾಕೆ ಬೇಕು ಎಂದು ಖಾರವಾಗಿಯೇ ಪ್ರಶ್ನಿಸಿದರು.

    ವೈದ್ಯರು ಸಮಾಜದ ಉನ್ನತ ವರ್ಗದಲ್ಲಿ ಇರುವವರು. ಇವರೇ ಈ ರೀತಿ ಮಾಡಿದರೆ ರಾಜ್ಯದಲ್ಲಿ ಆಗಿರುವ ಸಾವಿಗೆ ಹೊಣೆ ಯಾರು ಎಂದು ಪ್ರಶ್ನಿಸಿದ ನ್ಯಾಯಮೂರ್ತಿಗಳು ಗುರುವಾರ ನಮ್ಮ ಮನವಿಯನ್ನು ನೀವು ಪರಿಗಣಿಸಬಹುದು ಎಂದು ಭಾವಿದ್ದೆವು. ಆದರೆ ಈಗ ನಾವು ಆದೇಶ ಮಾಡುವ ಪರಿಸ್ಥಿತಿ ಬಂದಿದೆ ಎಂದು ಹೇಳಿ ಚಾಟಿ ಬೀಸಿದರು.

    ಮಸೂದೆ ಮಂಡನೆಯಾಗುವ ಮುನ್ನವೇ ಬೀದಿಗಿಳಿಯುವುದು ಎಷ್ಟು ಸರಿ? ಜನರ ಜೀವಗಳ ಜೊತೆ ಚೆಲ್ಲಾಟ ಆಡುತ್ತಿರುವ ನೀವು ನಾಗರಿಕರೆ? ನಿಮ್ಮ ಬಗ್ಗೆ ನಮಗೆ ಗೌರವ ಇದೆ ಅದನ್ನು ಉಳಿಸಿಕೊಳ್ಳಿ ಎಂದು ಎಚ್ಚರಿಕೆ ನೀಡಿದರು.

    ಈ ವೇಳೆ ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ? ಮುಷ್ಕರದ ಬಗ್ಗೆ ಅವರ ನಿಲುವೇನು? ನಿಮ್ಮ ಮುಖ್ಯಮಂತ್ರಿಗಳ ಬಳಿ ಈಗಲೇ ಫೋನ್ ಮಾಡಿ ಮಾತನಾಡಿ ಬನ್ನಿ ಎಂದು ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್ ಅವರಿಗೆ ಪೀಠ ಆದೇಶಿಸಿತು. ಫೋನ್ ಮಾಡಿದ ಬಳಿಕ ಕಲಾಪಕ್ಕೆ ಹಾಜರಾದ ಅಡ್ವೋಕೇಟ್ ಜನರಲ್ ನನ್ನ ಕರೆಯನ್ನು ಸ್ವೀಕರಿಸುತ್ತಿಲ್ಲ. ಮುಖ್ಯಮಂತ್ರಿಗಳು ಈಗ ಸಭೆಯಲ್ಲಿದ್ದಾರೆ ಎಂದು ತಿಳಿಸಿದರು.

    ಕೊನೆಗೆ ನ್ಯಾಯಮೂರ್ತಿಗಳು, ಮುಷ್ಕರ ಕೈಬಿಟ್ಟು ಸೇವೆಗೆ ಕೂಡಲೇ ವೈದ್ಯರು ಹಾಜರಾಗಬೇಕು. ಯಾವುದೇ ಸಮಸ್ಯೆಗಳಿದ್ದರೂ ನ್ಯಾಯಾಲಯದ ಮುಂದೆ ಬನ್ನಿ. ಒಂದು ವೇಳೆ ನಮ್ಮ ಆದೇಶವನ್ನು ಉಲ್ಲಂಘಿಸಿದ್ದೆ ಆದಲ್ಲಿ ಮುಂದೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಖಾಸಗಿ ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಿ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದರು.

    ಇದನ್ನೂ ಓದಿ: ಖಾಸಗಿ ವೈದ್ಯರ ಜೊತೆಗಿನ ಸಿಎಂ ಸಂಧಾನ ಸಭೆ ಯಶಸ್ವಿಯಾಗಿದ್ದು ಹೇಗೆ?