Tag: high court

  • MUDA Scam| ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ: ಬೈರತಿ ಸುರೇಶ್

    MUDA Scam| ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ: ಬೈರತಿ ಸುರೇಶ್

    ಬೆಂಗಳೂರು: ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನನ್ನದಾಗಲಿ, ಮುಖ್ಯಮಂತ್ರಿಗಳ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ (Byrathi Suresh) ಹೇಳಿದರು.

    ಜಾರಿ ನಿರ್ದೇಶನಾಲಯದ (ED) ನೋಟಿಸ್‌ಗೆ ಹೈಕೋರ್ಟ್‌ (High Court) ಮಧ್ಯಂತರ ತಡೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆ ರೀತಿ ಪಾತ್ರ ಇಲ್ಲ ಎಂದು ಒಪ್ಪಿಕೊಂಡು ಕೋರ್ಟ್‌ ತಡೆ ನೀಡಿದೆ. ವಿಚಾರಣೆ ಈಗ ಮುಂದಕ್ಕೆ ಹೋಗಿದ್ದು ಫೆ.10 ರ ನಂತರ ನೋಡೋಣ ಎಂದರು.

     

    ನಾನು ಮತ್ತು ಕಾಂಗ್ರೆಸ್ ಪಕ್ಷ ನ್ಯಾಯಾಂಗ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇವೆ. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ. ಯಾಕೆ ನೋಟಿಸ್ ನೀಡಿದ್ದಾರೆ ಎಂಬುದಕ್ಕೆ ಇಡಿ ಮತ್ತು ಸಿಬಿಐ ಅವರನ್ನೇ ಕೇಳಬೇಕು ಎಂದು ಹೇಳಿದರು. ಇದನ್ನೂ ಓದಿ: Kolar| ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಾ ಸರ್ಕಾರಿ ಬಸ್ ಚಾಲನೆ – ವೀಡಿಯೋ ವೈರಲ್

    ನನಗೆ ನೋಟಿಸ್ ಬಂದಾಗ ಆಶ್ಚರ್ಯ ಆಯ್ತು. ಹಗರಣ ನಡೆದಾಗ ನಾನು ಮಂತ್ರಿ ಆಗಿರಲಿಲ್ಲ. ಸೈಟನ್ನು ಪಡೆದಿಲ್ಲ, ಕೊಟ್ಟಿಲ್ಲ. ಸೈಟ್ ಹಂಚಿಕೆ ಗೊಂದಲ ಆದ ಮೇಲೆ ಸೈಟ್ ವಾಪಸ್ ಕೂಡ ಕೊಟ್ಟಿದ್ದಾರೆ. ಇದೆಲ್ಲ ನ್ಯಾಯಮೂರ್ತಿಗಳಿಗೆ ಮನದಟ್ಟಾಗಿದೆ ಹಾಗಾಗಿ ಸ್ಟೇ ಕೊಟ್ಟಿದ್ದಾರೆ. ನನಗೆ ಕೊಟ್ಟಿರುವುದು ಒಂದೇ ನೋಟಿಸ್, ಸಿಎಂ ಪತ್ನಿಗೆ ಎರಡನೇ ನೋಟಿಸ್ ಕೊಟ್ಟಿದ್ದಾರಾ ಎಂದು ನನಗೆ ಗೊತ್ತಿಲ್ಲ ಎಂದರು.

     

  • ಸೈಫ್‌ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ವಶಕ್ಕೆ?

    ಸೈಫ್‌ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ವಶಕ್ಕೆ?

    ಭೋಪಾಲ್‌: ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಅವರ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ.

    ಈ ಆಸ್ತಿಗಳ ಮೇಲೆ  2015 ರಲ್ಲಿ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ಮಧ್ಯಪ್ರದೇಶ ಹೈಕೋರ್ಟ್‌ (Madhya Pradesh High Court) ತೆಗೆದುಹಾಕಿದೆ.  ಇದರಿಂದಾಗಿ 1968ರ ಶತ್ರು ಆಸ್ತಿ ಕಾಯ್ದೆಯ ಅಡಿಯಲ್ಲಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ದಾರಿ ಮಾಡಿಕೊಟ್ಟಿದೆ.

    ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌  ಡಿ. 13 ರಂದು, 2017ರ ತಿದ್ದುಪಡಿ ಮಾಡಿದ ಶತ್ರು ಆಸ್ತಿ ಕಾಯ್ದೆ (Enemy Property Act) ಅಡಿ ಶಾಸನಬದ್ಧ ಪರಿಹಾರವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ದಿನಗಳ ಪ್ರಾತಿನಿಧ್ಯ ಸಲ್ಲಿಸಬೇಕೆಂದು ಪಟೌಡಿ ಕುಟುಂಬಕ್ಕೆ ಸೂಚಿಸಿತ್ತು. ಇಂದಿನಿಂದ ಈ ಆದೇಶಕ್ಕೆ ಸಂಬಂಧಿಸಿಂತೆ 30 ದಿನಗಳ ಒಳಗಡೆ ಮೇಲ್ಮನವಿ ಸಲ್ಲಿಸದೇ ಇದ್ದರೆ ಕೋರ್ಟ್‌ ಆದೇಶ ಪ್ರಕಟಿಸುವುದಿಲ್ಲ. ಒಂದು ವೇಳೆ ಸಲ್ಲಸದೇ ಇದ್ದರೆ ಕೋರ್ಟ್‌ ತತನ್ನದೇ ಆದ ಆರ್ಹತೆಯ ಆಧಾರದ ಮೇಲೆ ಮೇಲ್ಮನವಿಯನ್ನು ಪರಿಗಣಿಸುತ್ತದೆ ಎಂದು ಹೇಳಿತ್ತು. ಇಲ್ಲಿಯವರೆಗೆ  ಪಟೌಡಿ ಕುಟುಂಬಸ್ಥರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರಾ ಇಲ್ಲವೋ ತಿಳಿದು ಬಂದಿಲ್ಲ.  ಇದನ್ನೂ ಓದಿ: ಸುದೀಪ್ ಇಲ್ಲದೇ ಬಿಗ್ ಬಾಸ್ ಊಹಿಸಿಕೊಳ್ಳೋಕೆ ಸಾಧ್ಯವಿಲ್ಲ: ಧನರಾಜ್ ಆಚಾರ್

    ಭೋಪಾಲ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ಅವರು ಈ ವಿಷಯದ ಬಗ್ಗೆ ಹೈಕೋರ್ಟ್ ಆದೇಶ ಸ್ಪಷ್ಟವಾದ ನಂತರವೇ ಯಾವುದೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಏನಿದು ಪ್ರಕರಣ?
    ಮುಂಬೈ ಮೂಲದ ಎನಿಮಿ ಪ್ರಾಪರ್ಟಿ ಕಸ್ಟೋಡಿಯನ್ ಕಚೇರಿ ಭೋಪಾಲ್‌ನ ನವಾಬನನ್ನು ಸರ್ಕಾರಿ ಆಸ್ತಿ ಎಂದು ಘೋಷಿಸಿದ ನಂತರ ಮಧ್ಯಪ್ರದೇಶ ಹೈಕೋರ್ಟ್ 2015 ರಲ್ಲಿ ಪ್ರಕರಣದ ವಿಚಾರಣೆಯನ್ನು ಪ್ರಾರಂಭಿಸಿತ್ತು.

    ಭೋಪಾಲ್‌ನ ಮಾಜಿ ನವಾಬರಿಗೆ ಸೇರಿದ್ದ, ನಟ, ಈಗಿನ ನವಾಬ ಸೈಫ್‌ ಅಲಿ ಖಾನ್‌ ಅವರಿಗೆ ಸೇರಿದ ಆಸ್ತಿಯನ್ನೂ 2015ರಲ್ಲಿ ‘ಶತ್ರುವಿನ ಸೊತ್ತು’ಗಳ ಪಟ್ಟಿಗೆ ಸೇರಿಸಲಾಗಿದೆ. ಸರ್ಕಾರ ಈ ಧೋರಣೆಯನ್ನು ಪ್ರಶ್ನಿಸಿ ಸೈಫ್‌ ಅಲಿ ಖಾನ್‌ ಅವರು 2015ರಲ್ಲಿ ಕೋರ್ಟ್‌ ಮೆಟ್ಟಿಲೇರಿದ್ದರು. ಇಲ್ಲಿಯವರೆಗೆ ಆಸ್ತಿ ವಶಪಡಿಸಲು ಕೋರ್ಟ್‌ ತಡೆಯಾಜ್ಞೆ ನೀಡಿತ್ತು.

    ಪಟ್ಟಿಗೆ ಸೇರ್ಪಡೆಯಾಗಿದ್ದು ಯಾಕೆ?
    ಭಾರತ ಸ್ವಾತಂತ್ರ್ಯ ಪಡೆಯುವಾಗ 1947 ರಲ್ಲಿ ಭೋಪಾಲ್ ರಾಜಪ್ರಭುತ್ವದ ರಾಜ್ಯವಾಗಿತ್ತು ಮತ್ತು ನವಾಬ್ ಹಮೀದುಲ್ಲಾ ಖಾನ್ ಅದರ ಕೊನೆಯ ನವಾಬ್ ಆಗಿದ್ದರು. ನವಾಬ್ ಹಮೀದುಲ್ಲಾ ಖಾನ್ ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದರು ಅವರಲ್ಲಿ ಅಬಿದಾ ಸುಲ್ತಾನ್ 1950 ರಲ್ಲಿ ಪಾಕಿಸ್ತಾನಕ್ಕೆ (Pakistan) ವಲಸೆ ಹೋಗಿದ್ದರು.

    1960ರ ದಶಕದವರೆಗೂ ಬದುಕಿದ್ದ ಹಮೀದುಲ್ಲಾ ಅವರು ತಮ್ಮ ಇನ್ನೊಬ್ಬ ಪುತ್ರಿ, ಮನ್ಸೂರ್‌ ಅಲಿ ಖಾನ್‌ ಪಟೌಡಿ ಅವರ ತಾಯಿ ಸಜೀದಾ ಸುಲ್ತಾನಾ ಅವರನ್ನು ತಮ್ಮ ಆಸ್ತಿಯ ಉತ್ತರಾಧಿಕಾರಿ ಎಂದು ಘೋಷಿಸಿದ್ದರು. ಸಾಜಿದಾ ಸುಲ್ತಾನ್ ಭಾರತದಲ್ಲಿಯೇ ಇದ್ದು ಇಫ್ತಿಕರ್ ಅಲಿ ಖಾನ್ ಪಟೌಡಿ( ಸೈಫ್‌ ಅಲಿಖಾನ್‌ ಅವರ ಅಜ್ಜ,  ಮನ್ಸೂರ್‌ ಅಲಿಖಾನ್‌ ಅವರ ತಂದೆ)  ಅವರನ್ನು ವಿವಾಹವಾದರು. ನ್ಯಾಯಾಲಯವು ಸಾಜಿದಾ ಸುಲ್ತಾನ್ ಅವರನ್ನು ಕಾನೂನುಬದ್ಧ ಉತ್ತರಾಧಿಕಾರಿಯಾಗಿ ಗುರುತಿಸಿತ್ತು ಮತ್ತು ಸೈಫ್ ಅಲಿ ಖಾನ್ ಆಸ್ತಿಯಲ್ಲಿ ಪಾಲನ್ನು ಪಡೆದರು.

     

    2016ರಲ್ಲಿ ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಹೊಸ ಕಾಯ್ದೆಯಲ್ಲಿ ಭಾರತೀಯ ಪ್ರಜೆಗೆ ಅನ್ವಯವಾಗುವುದಿಲ್ಲ ಎಂಬ ಸಾಲುಗಳನ್ನು ತೆಗೆದುಹಾಕಲಾಗಿದೆ. ಅಷ್ಟೇ ಅಲ್ಲದೇ ಕಾಯ್ದೆಯನ್ನು ಪೂರ್ವಾನ್ವಯವಾಗುವಂತೆ ಜಾರಿ ಮಾಡಲಾಗಿದೆ. ಆದ್ದರಿಂದ ಹಿಂದೆ ಇಂಥ ಆಸ್ತಿಗಳು ಮಾರಾಟವಾಗಿದ್ದರೆ ಆ ಎಲ್ಲಾ ವ್ಯವಹಾರಗಳು ರದ್ದಾಗುತ್ತವೆ. ಕಾಯ್ದೆಯ ತಿದ್ದುಪಡಿಯ ಬಳಿಕ ಸರ್ಕಾರವು ಪಟೌಡಿ ಹಸ್ತಾಂತರವನ್ನೂ ರದ್ದುಪಡಿಸಿ, ಅವರ ಆಸ್ತಿಯನ್ನು ‘ಶತ್ರುವಿನ ಸೊತ್ತು’ ಎಂದು ಹೇಳಿತ್ತು. ಈ ಪ್ರಕರಣದಲ್ಲಿ ಅಬಿದಾ ಸುಲ್ತಾನ್ ಅವರು ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರಿಂದ ಸರ್ಕಾರ ಪಟೌಡಿ ಆಸ್ತಿ ʼಶತ್ರು ಆಸ್ತಿʼ ಎಂದು ದೃಢೀಕರಿಸಲು ಸಾಧ್ಯವಾಯಿತು.

    ಈ ಪ್ರಕರಣದಲ್ಲಿ ಕಕ್ಷಿದಾರರಾಗಿ ಸೈಫ್ ಅಲಿ ಖಾನ್, ಅವರ ತಾಯಿ ಶರ್ಮಿಳಾ ಟ್ಯಾಗೋರ್, ಸಹೋದರಿಯರಾದ ಸೋಹಾ ಅಲಿ ಖಾನ್ ಮತ್ತು ಸಬಾ ಅಲಿ ಖಾನ್ ಮತ್ತು ಮನ್ಸೂರ್ ಅಲಿ ಖಾನ್ ಪಟೌಡಿ ಅವರ ಸಹೋದರಿ ಸಬಿಹಾ ಸುಲ್ತಾನ್, ಮತ್ತು ಕೇಂದ್ರ ಸರ್ಕಾರ ಇತರರು ಇದ್ದಾರೆ.

    ಸೈಫ್ ಅಲಿ ಖಾನ್ ತಮ್ಮ ಬಾಲ್ಯವನ್ನು ಕಳೆದ ಫ್ಲ್ಯಾಗ್ ಸ್ಟಾಫ್ ಹೌಸ್, ನೂರ್-ಉಸ್-ಸಬಾ ಅರಮನೆ, ದಾರ್-ಉಸ್-ಸಲಾಮ್, ಹಬೀಬಿಯ ಬಂಗಲೆ, ಅಹಮದಾಬಾದ್ ಅರಮನೆ, ಕೊಹೆಫಿಜಾ ಆಸ್ತಿ ಪರಿಶೀಲನೆಯಲ್ಲಿರುವ ಪ್ರಮುಖ ಆಸ್ತಿಗಳಾಗಿವೆ.

    ಪಾಕಿಸ್ತಾನದಲ್ಲೂ ಭಾರತೀಯ ಪ್ರಜೆಗಳಿಗೆ ಸೇರಿದ್ದ ಆಸ್ತಿ ಇತ್ತು. ಅಲ್ಲಿನ ಸರ್ಕಾರವು ಈಗಾಗಲೇ ಅವುಗಳನ್ನು ವಿಲೇವಾರಿ ಮಾಡಿ ಸರ್ಕಾರ ವಶಕ್ಕೆ ಪಡೆದಿದೆ.

     

  • ರಾಜಕಾರಣಿಗಳು ಭಾಗಿ, ತನಿಖೆ ಸರಿಯಾಗಿ ನಡೆಯುತ್ತಿಲ್ಲ, ಸಿಬಿಐಗೆ ಮುಡಾ ಕೇಸ್‌ ನೀಡಿ – ಜ.27ಕ್ಕೆ ಮುಂದಿನ ವಿಚಾರಣೆ

    ರಾಜಕಾರಣಿಗಳು ಭಾಗಿ, ತನಿಖೆ ಸರಿಯಾಗಿ ನಡೆಯುತ್ತಿಲ್ಲ, ಸಿಬಿಐಗೆ ಮುಡಾ ಕೇಸ್‌ ನೀಡಿ – ಜ.27ಕ್ಕೆ ಮುಂದಿನ ವಿಚಾರಣೆ

    – ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಅರ್ಜಿ
    – ಲೋಕಾಯುಕ್ತ ತನಿಖೆಗೆ ತಡೆ ನೀಡದ ಹೈಕೋರ್ಟ್‌

    ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ (MUDA Scam) ತನಿಖೆಯನ್ನು ಸಿಬಿಐಗೆ (CBI) ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ (High Court)  ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ.

    ಲೋಕಾಯುಕ್ತ ತನಿಖೆಯಿಂದ (Lokayukta Enquiry) ಸತ್ಯಾಂಶ ಪ್ರಕಟವಾಗುವುದಿಲ್ಲ. ಹೀಗಾಗಿ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಹೈಕೋರ್ಟ್‌ನಲ್ಲಿ ದೂರು ಸಲ್ಲಿಸಿದ್ದರು.

    ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಲೋಕಾಯುಕ್ತ ಪೊಲೀಸರಲ್ಲಿ ತನಿಖಾ ವರದಿ ಎಲ್ಲಿ ಎಂದು ಕೇಳಿದರು. ಇದಕ್ಕೆ ಲೋಕಾ ಪರ ವಕೀಲರು ತನಿಖಾ ವರದಿ ಪೂರ್ಣಗೊಂಡಿಲ್ಲ ಎಂದು ಹೇಳಿದರು. ಈ ವೇಳೆ ನಾಗಪ್ರಸನ್ನ ಅವರು ಜ.26ರ ಸಂಜೆಯ ಒಳಗಡೆ ಎಷ್ಟು ತನಿಖೆ ನಡೆದಿದೆಯೋ ಅಷ್ಟು ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂದು ಸೂಚಿಸಿ ವಿಚಾರಣೆಯನ್ನು ಜ.27ಕ್ಕೆ ಮುಂದೂಡಿದರು. ಅಷ್ಟೇ ಅಲ್ಲದೇ ಲೋಕಾಯುಕ್ತ ತನಿಖೆಗೆ ತಡೆ ನೀಡುವುದಿಲ್ಲ. ತನಿಖೆ ಮುಂದುವರಿಯಲಿ ಎಂದು ಸೂಚಿಸಿದರು.

    ಇಂದು ವಿಚಾರಣೆಗೆ ಸ್ನೇಹಮಯಿ ಕೃಷ್ಣ ಪರ ಮಣಿಂದರ್ ಸಿಂಗ್, ಸಿದ್ದರಾಮಯ್ಯ ಪರ ರವಿಕುಮಾರ ವರ್ಮಾ ಕುಮಾರ್‌, ವಿಡಿಯೋ ಕಾನ್ಫರೆನ್ಸ್‌ ಮೂಲಕ ಅಭಿಷೇಕ್‌ ಮನು ಸಿಂಘ್ವಿ, ಕಪಿಲ್‌ ಸಿಬಲ್‌ ಹಾಜರಾಗಿದ್ದರು. ಮುಡಾ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ಇಂದು ಕೋರ್ಟ್‌ ಹಾಲ್‌ ವಕೀಲರಿಂದ ಕಿಕ್ಕಿರಿದು ತುಂಬಿತ್ತು.

     ಮಣಿದರ್‌ ಸಿಂಗ್‌ ವಾದ ಏನಿತ್ತು?
    ರಾಜಕಾರಣಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಪೊಲೀಸರು ತನಿಖೆಯನ್ನು ಪಾರದರ್ಶಕವಾಗಿ ಮಾಡಲು ಸಾಧ್ಯವಿಲ್ಲ. ಲೋಕಾಯುಕ್ತದ ತನಿಖೆ ಮೇಲೆ ಸ್ಪಷ್ಟ ನಂಬಿಕೆ ಇಲ್ಲ. ಈಗಾಗಲೇ ಪರಿವರ್ತನೆ ಆಗಿದ್ದ ಭೂಮಿಯನ್ನು ಮತ್ತೆ ಕೃಷಿ ಭೂಮಿ ಮಾಡಿದ್ದಾರೆ. ಕೃಷಿ ಭೂಮಿಯನ್ನು ವಾಪಸ್‌ ಮುಡಾ ತೆಗೆದುಕೊಂಡಿದೆ.

    ವಿಜಯನಗರದ ಡೆವಲಪ್ಮೆಂಟ್ ಏರಿಯಾದಲ್ಲಿ 14 ಸೈಟ್‌ಗಳನ್ನು ಸಿಎಂ ಪತ್ನಿ ಪಾರ್ವತಿ ಅವರಿಗೆ ನೀಡಲಾಗಿದೆ. ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಸಂಪೂರ್ಣ ಅಪರಾಧ ಬೆಳಕಿಗೆ ಬಂದಿದೆ. ಪಾರ್ವತಿಯವರು ಈ ಪ್ರಕರಣ ತನಿಖೆ ಆರಂಭವಾಗುತ್ತಿದ್ದಂತೆ ಸೈಟ್‌ಗಳನ್ನು ಮರಳಿಸಿದ್ದಾರೆ. ಡಿವೈಎಸ್‌ಪಿ ಫೈಲ್‌ಗಳನ್ನು ಎತ್ತಿಕೊಂಡಿದ್ದಾರೆ. ಐಎಎಸ್ ಅಧಿಕಾರಿ ಮುಡಾಗೆ ಹೋಗಿ ದಾಖಲೆ ಎತ್ತಿಕೊಂದು ಹೋಗುರುವ ಬಗ್ಗೆಯೂ ತನಿಖೆ ಮಾಡಿಲ್ಲ ಎಂದು ವಾದಿಸಿದರು.

     

  • ರೇಪ್‌ ಕೇಸ್‌| ತಾಂತ್ರಿಕ ಸಾಕ್ಷ್ಯ ಕೊಡಿ: ಹೈಕೋರ್ಟ್‌ಗೆ ಪ್ರಜ್ವಲ್‌ ಅರ್ಜಿ ಸಲ್ಲಿಕೆ

    ರೇಪ್‌ ಕೇಸ್‌| ತಾಂತ್ರಿಕ ಸಾಕ್ಷ್ಯ ಕೊಡಿ: ಹೈಕೋರ್ಟ್‌ಗೆ ಪ್ರಜ್ವಲ್‌ ಅರ್ಜಿ ಸಲ್ಲಿಕೆ

    ಬೆಂಗಳೂರು: ತನ್ನ ವಿರುದ್ಧ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ (Rape Case) ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿರುವ ತಾಂತ್ರಿಕ ಸಾಕ್ಷ್ಯವನ್ನು (Technical Evidence) ನೀಡುವಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

    ಅತ್ಯಾಚಾರ ನಡೆದಿರುವುದು ದೃಢ, ವಿಡಿಯೋಗಳು ಅಸಲಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ (FSL) ವರದಿ ನೀಡಿದೆ. ಆದರೆ ಈ ವಿಡಿಯೋಗಳ ಮೇಲೆ ಅನುಮಾನವಿದೆ. ಹೀಗಾಗಿ ಪೊಲೀಸರು ಸಾಕ್ಷ್ಯ ಎಂದು ಪರಿಗಣಿಸಿರುವ ಆ ತಾಂತ್ರಿಕ ಸಾಕ್ಷ್ಯಗಳನ್ನು ಕೆಳ ನ್ಯಾಯಾಲಯದ ಮೂಲಕ ನೀಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೋರ್ಟ್‌ನಲ್ಲಿ ಪವಿತ್ರಾ ಭಾವುಕ – ಬೆನ್ನುತಟ್ಟಿ ಸಂತೈಸಿದ ದರ್ಶನ್‌

    ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ ಎಸ್‌ಐಟಿಗೆ ನೋಟಿಸ್‌ ಜಾರಿ ಮಾಡಿ ಉತ್ತರ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.  ಇದನ್ನೂ ಓದಿ: ಮೈಸೂರಿಗೆ ದರ್ಶನ್‌, ದೆಹಲಿಗೆ ಪವಿತ್ರಾ – ಕೋರ್ಟ್‌ನಿಂದ ಅನುಮತಿ

    ಪ್ರಜ್ವಲ್‌ ರೇವಣ್ಣ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯವು ದೋಷಾರೋಪ ನಿಗದಿಗೆ ಮುನ್ನ ವಾದ-ಪ್ರತಿವಾದವನ್ನು ಆಲಿಸಬಹುದು. ಆದರೆ ಆರೋಪ ನಿಗದಿ ಮಾಡಬಾರದು ಎಂದು ಹೈಕೋರ್ಟ್‌ ಆದೇಶಿಸಿದೆ. ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ದಿನಾಂಕ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್ ಆದೇಶದಿಂದ ಪ್ರಜ್ವಲ್‌ಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

     

  • ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

    ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

    ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಹೈಕೋರ್ಟ್‌ (High Court) ತಾತ್ಕಾಲಿಕ ರಿಲೀಫ್‌ ನೀಡಿದೆ.

    ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ.

    ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ದಿನಾಂಕ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್‌ ಸಿಕ್ಕಿದೆ. ಇದನ್ನೂ ಓದಿ: ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ – ಡಿವೋರ್ಸ್‌ ವದಂತಿ ಬೆನ್ನಲ್ಲೇ ಮೌನ ಮುರಿದ ಧನಶ್ರೀ

    ಮುಂದಿನ ಆದೇಶದವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.

     

  • ಸತ್ಯಮೇವ ಜಯತೆ: ಕೋರ್ಟ್‌ ಆದೇಶದ ಬೆನ್ನಲ್ಲೇ ಸಿ.ಟಿ.ರವಿ ಫಸ್ಟ್‌ ರಿಯಾಕ್ಷನ್‌

    ಸತ್ಯಮೇವ ಜಯತೆ: ಕೋರ್ಟ್‌ ಆದೇಶದ ಬೆನ್ನಲ್ಲೇ ಸಿ.ಟಿ.ರವಿ ಫಸ್ಟ್‌ ರಿಯಾಕ್ಷನ್‌

    – ನಿನ್ನೆ ರಾತ್ರಿಯಿಡೀ ನನ್ನ ಮೇಲೆ ದೌರ್ಜನ್ಯ ಎಸಗಿದ್ರು ಎಂದು ಆರೋಪ

    ಬೆಂಗಳೂರು: ಸತ್ಯಮೇವ ಜಯತೆ.. ಸತ್ಯಕ್ಕೆ ಜಯ ಸಿಕ್ಕಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಸಂತಸ ವ್ಯಕ್ತಪಡಿಸಿದ್ದಾರೆ.

    ಹೈಕೋರ್ಟ್‌ನಿಂದ ಬಿಡುಗಡೆಗೆ ಆದೇಶ ಹೊರಡಿಸಿದ ಬೆನ್ನಲ್ಲೇ ‘ಪಬ್ಲಿಕ್‌ ಟಿವಿ’ ಜೊತೆ ಮಾತನಾಡಿದ ಅವರು, ನಾವೇನು ಮಾತನಾಡಿದ್ವಿ ಮತ್ತು ಅವರೇನು ಮಾತನಾಡಿದ್ರು ಎನ್ನುವುದಕ್ಕೆ ಕಸ್ಟೋಡಿಯನ್‌ ನಮ್ಮ ಪರಿಷತ್‌ನ ಸಭಾಪತಿಗಳು. ಸಭಾಪತಿಗಳೇ ರೂಲಿಂಗ್‌ ಕೊಟ್ಟರು. ಅದಾದ ಬಳಿಕವೂ ಅವರು ಸದನದಲ್ಲಿ ಯಾವ ರೀತಿ ನಡೆದುಕೊಂಡರು ಎಂಬುದನ್ನು ನೋಡಿದ್ದೀರಿ. ಹಲ್ಲೆಗೆ ಪ್ರಯತ್ನಿಸಿದರು. ನಿನ್ನೆ ರಾತ್ರಿಯಿಡೀ ನಮ್ಮ ಮೇಲೆ ದೌರ್ಜನ್ಯ ಎಸಗಿದರು ಎಂದು ಬೇಸರ ವ್ಯಕ್ತಪಡಿಸಿದರು.

    ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆಂದು ಸಿ.ಟಿ.ರವಿ ಅವರನ್ನು ಗುರುವಾರ ಬಂಧಿಸಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್‌, ಆರೋಪಿಗೆ ಜಾಮೀನು ನೀಡಿದೆ. ತಕ್ಷಣವೇ ಅವರನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

    ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್‌ ಆದೇಶ ಹೊರಡಿಸಿದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

  • ಸಿ.ಟಿ.ರವಿಗೆ ಬಿಗ್‌ ರಿಲೀಫ್‌ – ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ

    ಸಿ.ಟಿ.ರವಿಗೆ ಬಿಗ್‌ ರಿಲೀಫ್‌ – ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ

    ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ತಕ್ಷಣವೇ ಸಿ.ಟಿ.ರವಿ (C.T.Ravi) ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ನೇತೃತ್ವದ ಪೀಠವು ಆರೋಪಿಯನ್ನು ತಕ್ಷಣವೇ ಬಿಡುಗಡೆ ಮಾಡಿ. ಸಿ.ಟಿ.ರವಿ ಈಗ ಎಲ್ಲಿದ್ದಾರೋ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಮಧ್ಯಂತರ ಆದೇಶ ನೀಡಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸಬೇಕು ಎಂದು ಸಿ.ಟಿ.ರವಿಗೆ ಷರತ್ತನ್ನು ಕೋರ್ಟ್‌ ವಿಧಿಸಿದೆ. ಇದನ್ನೂ ಓದಿ: ಸಿ.ಟಿ ರವಿ ಕೊಲೆಗಡುಕ ಅಂತ ಹೇಳಿರೋ ಲಕ್ಷ್ಮಿ ಹೆಬ್ಬಾಳ್ಕರ್, ಬೆಂಬಲಿಗರನ್ನು ಬಂಧಿಸಬೇಕು – ಜನಾರ್ದನ ರೆಡ್ಡಿ

    ಸಿ.ಟಿ.ರವಿ ಪರ ವಕೀಲ ಅಶೋಕ್ ಹಾರನಹಳ್ಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಪರ ವಕೀಲ ಶ್ಯಾಮ್‌ಸುಂದರ್ ವಾದ ಮಂಡಿಸಿದರು.

    ಆರೋಪಿ ಇನ್ನೂ ಪೊಲೀಸ್ ಕಸ್ಟಡಿಯಲ್ಲಿ ಇದ್ದಾರೆ. ಜಾಮೀನು ಅರ್ಜಿ ವಿಚಾರಣೆ ಮಾಡಲು ಸಾಧ್ಯವಿಲ್ಲ. ಇವತ್ತು ಬೆಳಗಾವಿ ಕೋರ್ಟ್ಗೆ ಹಾಜರುಪಡಿಸಿದರು. ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯದ ವ್ಯಾಪ್ತಿಯಲ್ಲಿ ಪ್ರಕರಣ ಇದೆ ಅಂತ ಬೆಂಗಳೂರಿಗೆ ಕಳಿಸಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಪರ ವಕೀಲ ಶ್ಯಾಮ್‌ಸುಂದರ್ ವಾದಿಸಿದರು.

    ಸಿ.ಟಿ.ರವಿ ಪರ ವಕೀಲ ಅಶೋಕ್ ವಾದ ಮಂಡಿಸಿ, 4 ಪುಟಗಳ ದೂರಿನ ಪ್ರತಿ ಇದೆ. ಆಕ್ಷೇಪಣಾ ಪದ ಬಳಕೆ ಮಾಡಿದ್ದಾರೆ ಅಂತ ಆಪ್ತ ಸಹಾಯಕ ಮೂಲಕ ದೂರು ನೀಡಿದ್ದಾರೆ. ದೂರಿನಲ್ಲಿ ದೂರುದಾರರ ಸಹಿ ಇಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ಸಹಿ ಇಲ್ಲ ಎಂದು ದೂರಿನ ಪ್ರತಿ ಓದಿದರು. ಇದನ್ನೂ ಓದಿ: ಸಿ.ಟಿ ರವಿ ಕೇಸ್‌ ಬೆಂಗಳೂರಿಗೆ ಶಿಫ್ಟ್‌ – ಬೆಳಗಾವಿ ಕೋರ್ಟ್‌ ಆದೇಶ

    ದಸ್ತಗಿರಿ ಮಾಡದೇ ಇದ್ದಲ್ಲಿ ಎಂಬುದನ್ನು ದೂರಿನಲ್ಲಿ ದೂರುದಾರರೇ ಬರೆದಿದ್ದಾರೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಾರೆ ಅಂತ ಹೇಳಿದ್ದಾರೆ. ಸಾಕ್ಷಿಗಳು ಎಲ್ಲಾ ಆಡಳಿತ ಪಕ್ಷದವರೇ ಆಗಿದ್ದಾರೆ. ಅವರ ಮೇಲೆ ಪ್ರಭಾವ ಬೀರುತ್ತಾರೆ ಎನ್ನಲಾಗಿದೆ. ನೋಟಿಸ್ ನೀಡುವ ವಿಚಾರದಲ್ಲಿ ಸಹಿ ಮಾಡಿಲ್ಲ ಅರೆಸ್ಟ್ ಮಾಡಿದ್ದಾರೆ. 19ನೇ ತಾರೀಖು ನೋಟಿಸ್ ನೀಡಿದ್ದಾರೆ. 19ನೇ ತಾರೀಖು ವಿಚಾರಣೆ ನೋಟಿಸ್ ನೀಡಿದ್ದಾರೆ. ತಕ್ಷಣವೇ ಅರೆಸ್ಟ್ ಮಾಡಿದ್ದಾರೆ. ಖಾನಾಪುರದ ಬಳಿ ಅರೆಸ್ಟ್ ಮಾಡಲಾಗಿದೆ ಅಂತ ಉಲ್ಲೇಖ ಮಾಡಿದ್ದಾರೆ. ಸುವರ್ಣಸೌಧದಲ್ಲಿ ಅರೆಸ್ಟ್ ಮಾಡಿದ್ದಾರೆ. ಖಾನಾಪುರ ಅಂತ ಅರೆಸ್ಟ್ ಮೊಮೋದಲ್ಲಿ ಇದೆ. ಅರೆಸ್ಟ್ ಮೆಮೋದಲ್ಲಿ ಆರೋಪಿತ ನ್ಯಾಯಾಲಯಕ್ಕೆ ಹಾಜರಾಗೋದಿಲ್ಲ ಪರಾರಿ ಆಗುತ್ತಾರೆ ಅಂತ ಪೊಲೀಸರು ಬರೆದಿದ್ದಾರೆ. ಒಂದೇ ದಿನಕ್ಕೆ ಎಲ್ಲಾ ವಿಚಾರದ ಅಂತಿಮ ತೀರ್ಮಾನಕ್ಕೆ ಪೊಲೀಸರು ಬಂದಿದ್ದಾರೆ. ದೂರುದಾರರ ಸಹಿ ಇಲ್ಲದೇ ಇದ್ದಾಗ ಕೋರ್ಟ್ ಆದೇಶಗಳು ಏನು ಹೇಳುತ್ತವೆ ಎನ್ನೋದರ ಬಗ್ಗೆ ವಕೀಲ ಅಶೋಕ್ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಬಹುದು ಎಂದು ಧನಂಜಯ್ ಪೀಠದ ಆದೇಶ ಉಲ್ಲೇಖಿಸಿ ವಾದಿಸಿದರು.

    ಸದನದಲ್ಲಿ ಏನನ್ನಾದರೂ ಮಾತಾಡಲು ಅವಕಾಶ ಇದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಜನಪ್ರತಿನಿಧಿಗಳಿಗೆ ಇರುವ ಅಧಿಕಾರದ ಬಗ್ಗೆ ಕೋರ್ಟ್ ಗಮನಕ್ಕೆ ತಂದರು. ಜಸ್ಟೀಸ್ ಚಂದ್ರಚೂಡ್ ನೀಡಿದ ಆದೇಶ ಓದಿದ ಸಿ.ಟಿ.ರವಿ ಪರ ವಕೀಲರು, ಹೀಗೆ ಮಾಡಿದ್ರೆ ಪ್ರತಿಯೊಬ್ಬರು ದೂರು ನೀಡ್ತಾರೆ. ಪ್ರತಿಯೊಬ್ಬರೂ ಕೂಡ ಮಾನನಷ್ಟ ಮೊಕದ್ದಮೆ ಹಾಕ್ತಾರೆ. ಎಲ್ಲರೂ ಕೂಡ ಇದನ್ನೇ ಮಾಡಿದ್ರೆ ಎಷ್ಟು ಕೇಸ್ ದಾಖಲು ಮಾಡಬಹುದು. ಲಂಚದ ವಿಚಾರ ಬಿಟ್ಟು ಎಲ್ಲ ವಿಚಾರದ ಬಗ್ಗೆ ಮಾತನಾಡಬಹುದಾಗಿದೆ ಎಂದು ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿ ತಮ್ಮ ವಾದ ಮುಕ್ತಾಯ ಮಾಡಿದರು. ಇದನ್ನೂ ಓದಿ: ಸಿ.ಟಿ ರವಿ ಅಶ್ಲೀಲ ಪದ ಬಳಸಿದ್ದರೆ ಅದನ್ನ ನಾನೂ ಸಮರ್ಥಿಸಲ್ಲ – ಹೆಚ್‌ಡಿಕೆ

    ಲಕ್ಷ್ಮಿ ಹೆಬ್ಬಾಳ್ಕರ್ ಪರ ವಕೀಲ ಶ್ಯಾಮ್‌ಸುಂದರ್ ವಾದಿಸಿ, ಮಹಿಳೆಗೆ ಪ್ರಾಸ್ಟಿಟ್ಯೂಟ್ ಅಂತ 10 ಬಾರಿ ಕೂಗಿದ್ದಾರೆ. ಒಬ್ಬ ಮಹಿಳೆಗೆ ಒಮ್ಮೆ ಅಲ್ಲ 10 ಬಾರಿ ಕೂಗಿದ್ದಾರೆ. ಅದು ಸದನದಲ್ಲಿ ಕೂಗಿರೋದು ಶೋಭೆ ತರುವಂತದ್ದಲ್ಲ. ಆರೋಪಿ ಹಾಜರುಪಡಿಸದೇ ಜಾಮೀನು ಪಡೆಯಲು ಸಾಧ್ಯವಿಲ್ಲ. ತನಿಖಾಧಿಕಾರಿ ಕೋರ್ಟ್ಗೆ ಎಫ್‌ಐಆರ್ ವರ್ಗಾವಣೆ ಕಳಿಸಿದ್ದಾರೆ. ಬೆಳಗಾವಿಯ ಹಾಜರುಪಡಿಸಿದಾಗ ಬೆಂಗಳೂರಿಗೆ ಹೇಳಿದ್ದಾರೆ. ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರುಪಡಿಸಬೇಕು. ಬೆಳಗಾವಿಯ ಕೋರ್ಟ್ ಮುಂದೆ ಹಾಜರುಪಡಿಸಿದಾಗ ಜಾಮೀನು ಅರ್ಜಿ ಸಲ್ಲಿಸಲಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಕೂಡ ಜಾಮೀನು ಅರ್ಜಿ ಪೆಂಡಿಂಗ್ ಇದೆ. ಹೀಗಿರುವಾಗ ಸೆಷನ್ಸ್ ಕೋರ್ಟ್ಗೆ ಹೇಗೆ ಅರ್ಜಿ ಸಲ್ಲಿಸಿದ್ದಾರೆ. ಒಂದೇ ಸಮಯದಲ್ಲಿ ಎರಡು ಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಎಲ್ಲಿದೆ ಎಂದು ವಾದಿಸಿದರು.

    ಯಾವುದೇ ಮಹಿಳೆಗೆ ಅವಮಾನ ಮಾಡುವುದನ್ನ ಯಾವ ಕಾನೂನು ಕೂಡ ಸಹಿಸುವುದಿಲ್ಲ. ಮಹಿಳೆಯರ ಬಗ್ಗೆ ಅವಹೇಳನ ಮಾಡುವುದನ್ನ ಸಂವಿಧಾನದ ಯಾವ ಕಾನೂನು ಸಹಿಸುವುದಿಲ್ಲ ಎಂದು ಶ್ಯಾಮ್‌ಸುಂದರ್ ತಮ್ಮ ವಾದ ಮುಗಿಸಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್, ಆರೋಪಿ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ಹೊರಡಿಸಿದೆ.

  • ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಗೌಡ ರಿಲೀಸ್

    ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಗೌಡ ರಿಲೀಸ್

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲು ಸೇರಿದ್ದ ಪವಿತ್ರಾ ಗೌಡ (Pavithra Gowda) ಇಂದು ಪರಪ್ಪನ ಅಗ್ರಹಾರದಿಂದ (Parappana Agrahara) ಬಿಡುಗಡೆಯಾಗಲಿದ್ದಾರೆ.

    6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ (High Court) ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಭಾವಿ ಪತ್ನಿ ಜೊತೆ ಆಗಮಿಸಿ ಸಿಎಂಗೆ ಮೊದಲ ಮದುವೆ ಆಮಂತ್ರಣ ನೀಡಿದ ಡಾಲಿ

    ಇಂದು ಬೆಳಗ್ಗೆ ಬಿಡುಗಡೆಯ ಎಲ್ಲಾ ಪ್ರಕ್ರಿಯೆಗಳು ಮುಗಿಯಲಿದೆ. ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆಯಾದರೆ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್‌ ಆಗಲಿದ್ದಾರೆ. ಇಂದು ಮಧ್ಯಾಹ್ನ ಹೊತ್ತಿಗೆ ಎಲ್ಲಾ ಆರೋಪಿಗಳು ಜೈಲಿನಿಂದ ಹೊರಬರಲಿದ್ದಾರೆ.

    ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದೆ.

    ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್‌ ತಕ್ಷಣವೇ ಇವರನ್ನು ಯಾಕೆ ಬಂದಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ. ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿತ್ತು.

     

  • ದರ್ಶನ್‌ಗೆ ಜಾಮೀನು ಸಿಕ್ಕಿದ್ದು ಹೇಗೆ? ಕೋರ್ಟ್‌ ಆದೇಶದಲ್ಲಿ ಏನಿದೆ?

    ದರ್ಶನ್‌ಗೆ ಜಾಮೀನು ಸಿಕ್ಕಿದ್ದು ಹೇಗೆ? ಕೋರ್ಟ್‌ ಆದೇಶದಲ್ಲಿ ಏನಿದೆ?

    ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ್ (Darshan), ಪವಿತ್ರಾಗೌಡ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ (High Court) ಜಾಮೀನು ಮಂಜೂರು ಮಾಡಿದೆ.

    ಸುದೀರ್ಘ ವಾದ ಪ್ರತಿವಾದ ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ, ಇಂದು ಆದೇಶ ಪ್ರಕಟಿಸಿ ಜಾಮೀನು ಮಂಜೂರು ಮಾಡಿತು. ಏಳು ಆರೋಪಿಗಳಿಗೆ, ಕೋರ್ಟ್ ಅನುಮತಿ ಇಲ್ಲದೇ ಆರೋಪಿಗಳು ಬೆಂಗಳೂರು (Bengaluru) ಬಿಟ್ಟು ಹೋಗುವಂತಿಲ್ಲ ಎಂಬ ಷರತ್ತನ್ನು ವಿಧಿಸಿತು.

    ಕಳೆದ ಆರು ವಾರಗಳಿಂದ ನಟ ದರ್ಶನ್ ಮೆಡಿಕಲ್ ಬೇಲ್ ಮೇಲೆ ಹೊರಗಿದ್ದಾರೆ. ಹೀಗಾಗಿ ನಟಿ ಪವಿತ್ರಾಗೌಡ ಸೇರಿ ಉಳಿದ ಆರು ಮಂದಿ ಬಿಡುಗಡೆಗೆ ಪ್ರಕ್ರಿಯೆಗಳು ಶುರುವಾಗಿವೆ. ಸೋಮವಾರ ಇವರು ಜೈಲಿಂದ ಬಿಡುಗಡೆಯಾಗುವ ಸಂಭವ ಇದೆ. ಪವಿತ್ರಾ ಗೌಡಗೆ (Pavithra Gowda) ಬೇಲ್ ಸಿಗುತ್ತಲೇ ನ್ಯಾಯಾಲಯದಲ್ಲಿ ಹಾಜರಿದ್ದ ಅವರ ತಾಯಿ ಆನಂದಭಾಷ್ಪ ಸುರಿಸಿದರು.

     

    ನಟ ದರ್ಶನ್ ಸರ್ಜರಿ ಮಾಡಿಸಿಕೊಳ್ತಾರಾ? ಮಾಡಿಸಿಕೊಳ್ಳಲ್ವಾ ಎನ್ನುವ ಕುತೂಹಲ ಮುಂದುವರೆದಿದೆ. ಅಂದ ಹಾಗೇ, ಪ್ರಕರಣದ ಒಟ್ಟು 17 ಅರೋಪಿಗಳ ಪೈಕಿ ಈ ಮೊದಲೇ ಐವರಿಗೆ ಜಾಮೀನು ಸಿಕ್ಕಿತ್ತು. ಈಗ ಏಳು ಮಂದಿಗೆ ಬೇಲ್ ಸಿಕ್ಕಿದೆ. ಉಳಿದ ಐವರು ಆರೋಪಿಗಳಿಗೆ ಮಾತ್ರ ಜಾಮೀನು ಸಿಕ್ಕಿಲ್ಲ. ಈ ಮಧ್ಯೆ ದರ್ಶನ್ ಸೇರಿ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಲು ಚಿಂತನೆ ನಡೆಸಿದ್ದಾರೆ ಇದನ್ನೂ ಓದಿ: ದರ್ಶನ್‌ಗೆ ಬೇಲ್ ಸಿಕ್ಕಿರೋದು ತುಂಬಾ ಖುಷಿಯಿದೆ: ನಿರ್ದೇಶಕ ತರುಣ್ ಸುಧೀರ್

     

    ಇಂದು ಯಾರಿಗೆಲ್ಲಾ ಬೇಲ್?
    * ನಟ ದರ್ಶನ್ – ಎ2 – ಈಗಾಗಲೇ ಹೊರಗಿದ್ದಾರೆ
    * ಪವಿತ್ರಾಗೌಡ – ಎ1 – ಬೆಂಗಳೂರು ಜೈಲು
    * ನಾಗರಾಜ್ – ಎ11 – ಕಲಬುರಗಿ ಜೈಲು
    * ಲಕ್ಷ್ಮಣ್‌  – ಎ12 – ಶಿವಮೊಗ್ಗ ಜೈಲು
    * ಅನು ಕುಮಾರ್ – ಎ7 – ಬೆಂಗಳೂರು ಜೈಲು
    * ಜಗದೀಶ್ – ಎ6 – ಶಿವಮೊಗ್ಗ ಜೈಲು
    * ಪ್ರದೋಷ್ ರಾವ್ – ಎ 14 – ಬೆಂಗಳೂರು ಜೈಲು

    ಜಾಮೀನು ಸಿಕ್ಕಿದ್ದು ಹೇಗೆ?
    ಜಾಮೀನು ಮೊದಲ ನಿಯಮ. ಆರೋಪಿಗಳಿಗೆ ಯಾವುದೇ ಅಪರಾಧಿಕ ಹಿನ್ನೆಲೆ ಇಲ್ಲ. ಆರೋಪಿಗಳು 6 ತಿಂಗಳಿನಿಂದ ಜೈಲಿನಲ್ಲಿ ಇದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಬಂಧನ ಮಾಡುವಾಗ ನಿಯಮಗಳ ಪಾಲನೆ ಆಗಿಲ್ಲ. ಬಂಧನ ವೇಳೆ ಆರೋಪಿಗೆ ಬಂಧನದ ಕಾರಣ ನೀಡಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ಆದೇಶವಿದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಗ್ರೌಂಡ್ಸ್ ಆಫ್ ಅರೆಸ್ಟ್ ಪಾಲಿಸಿಲ್ಲ. ಆರೋಪಿಗಳ ನಿರ್ದಿಷ್ಟ ಪಾತ್ರದ ಬಗ್ಗೆ ಸ್ಪಷ್ಟ ಉಲ್ಲೇಖವಿಲ್ಲ. ಪ್ರತ್ಯಕ್ಷದರ್ಶಿಗಳ ಹೇಳಿಕೆಯಲ್ಲೂ ವ್ಯತ್ಯಾಸ ಕಂಡು ಬಂದಿದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತು.

     

  • ಶಾರುಖ್‌ ಕೇಸ್‌ ಪ್ರಸ್ತಾಪ – ಬಂಧನವಾಗಿದ್ದ ಪುಷ್ಪರಾಜನಿಗೆ ಕೆಲ ಗಂಟೆಯಲ್ಲಿ ಜಾಮೀನು ಸಿಕ್ಕಿದ್ದು ಹೇಗೆ?

    ಶಾರುಖ್‌ ಕೇಸ್‌ ಪ್ರಸ್ತಾಪ – ಬಂಧನವಾಗಿದ್ದ ಪುಷ್ಪರಾಜನಿಗೆ ಕೆಲ ಗಂಟೆಯಲ್ಲಿ ಜಾಮೀನು ಸಿಕ್ಕಿದ್ದು ಹೇಗೆ?

    ಹೈದರಾಬಾದ್‌:   ತೆಲಂಗಾಣ ಹೈಕೋರ್ಟ್‌ನಲ್ಲಿ ನಡೆದಅಲ್ಲು ಅರ್ಜುನ್‌ ಜಾಮೀನು ಅರ್ಜಿಯ ವಿಚಾರಣೆ ವೇಳೆ ನಟನ ಪರ ವಕೀಲರು ಶಾರುಖ್‌ ಖಾನ್‌ (Shah Rukh Khan) ಅವರ ರಾಯೀಸ್‌ ಪ್ರಕರಣವನ್ನು ಉಲ್ಲೇಖಿಸಿದ್ದರು.

    ಜಾಮೀನು ಅರ್ಜಿ ವಿಚಾರಣೆ ವೇಳೆ, ಪೊಲೀಸ್‌ ಆಯುಕ್ತರಿಂದ ಅನುಮತಿ ಪಡೆಯುವಂತೆ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಥಿಯೇಟರ್ ಆಡಳಿತಕ್ಕೆ ಸಲಹೆ ನೀಡಿದ್ದರು. ಅಷ್ಟೇ ಅಲ್ಲದೇ ವಿಶೇಷ ಪ್ರದರ್ಶನಕ್ಕೆ ಹಾಜರಾಗದಂತೆ ನಟನಿಗೆ ತಿಳಿಸುವಂತೆ ಎಸ್‌ಎಚ್‌ಒ ಥಿಯೇಟರ್‌ಗೆ ತಿಳಿಸಿದ್ದರು ಎಂದು ಸರ್ಕಾರಿ ವಕೀಲರು ವಾದಿಸಿದರು.

    ಇದಕ್ಕೆ ಅಲ್ಲು ಅರ್ಜುನ್ ಪರ ವಕೀಲರು, ಪೊಲೀಸರು ನೀಡಿದ ಸೂಚನೆಗಳು ಅಸ್ಪಷ್ಟವಾಗಿದೆ. ನಟನ ಉಪಸ್ಥಿತಿಯು ಸಾವಿಗೆ ಕಾರಣವಾಗುತ್ತದೆ ಎಂದು ಪೊಲೀಸರು ಸೂಚಿಸಿರಲಿಲ್ಲ. ನಟರು ತಮ್ಮ ಸಿನಿಮಾದ ಮೊದಲ ಪ್ರದರ್ಶನಗಳಿಗೆ ಹಾಜರಾಗುವುದು ಸಾಮಾನ್ಯ ಸಂಗತಿ ಎಂದು ಕೋರ್ಟ್‌ ಗಮನಕ್ಕೆ ತಂದರು.  ಇದನ್ನೂ ಓದಿ: ರೇವಂತ್ ರೆಡ್ಡಿ ಹೆಸರು ಹೇಳದ್ದಕ್ಕೆ ಬಂಧನ – ಸಿಎಂ ವಿರುದ್ಧ ಸಿಡಿದ ಅಲ್ಲು ಅಭಿಮಾನಿಗಳು

    ಸಂತ್ರಸ್ತರು ಕೆಳಗಿನ ಪ್ರದೇಶದಲ್ಲಿ ಸಿಲುಕಿದ್ದಾಗ ಕಾಲ್ತುಳಿತ ಸಂಭವಿಸಿದೆ ಎಂಬ ಆರೋಪವಿದೆ. ಕಾಲ್ತುಳಿತ ಸಂಭವಿಸಿದ ಸಮಯದಲ್ಲಿ ಅಲ್ಲು ಅರ್ಜುನ್‌ ಮೊದಲ ಮಹಡಿಯಲ್ಲಿ ಸಿನಿಮಾ ವೀಕ್ಷಿಸುತ್ತಿದ್ದರು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ವಕೀಲರು 2017ರಲ್ಲಿ ಬಿಡುಗಡೆಯಾದ ಶಾರುಖ್ ನಟನೆಯ ರಾಯಿಸ್‌ ಚಿತ್ರದ ಪ್ರಚಾರ ವೇಳೆ ನಡೆದ ಕಾಲ್ತುಳಿತ ಪ್ರಕರಣವನ್ನು ಉಲ್ಲೇಖಿಸಿ, ಗುಜರಾತ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಶಾರುಖ್ ಖಾನ್‌ ಅವರಿಗೆ ರಿಲೀಫ್‌ ನೀಡಿತ್ತು. ಸಂತ್ರಸ್ತನ ದುಡುಕಿನ ನಿರ್ಧಾರದಿಂದ ಈ ಘಟನೆ ಸಂಭವಿಸಿದೆ. ಈ ಘಟನೆಗೂ ಶಾರುಖ್‌ ಖಾನ್‌ ನೇರವಾದ ಸಂಬಂಧ ಏನು ಎಂದು ಪ್ರಶ್ನಿಸಿ ಅರ್ಜಿಯನ್ನು ವಜಾಗೊಳಿಸಿತ್ತು ಎಂದು ಹೇಳಿ ಈ ಪ್ರಕರಣದ ತೀರ್ಪನ್ನು ಓದಿದರು. ಇದನ್ನೂ ಓದಿ:1 ತಿಂಗಳ ಹಿಂದೆಯಷ್ಟೇ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ನಿಂದ ರಿಲೀಫ್‌ ಪಡೆದಿದ್ದ ಅಲ್ಲು ಅರ್ಜುನ್‌

    ತೆಲಂಗಾಣ ಹೈಕೋರ್ಟ್ ಆದೇಶ ಏನು?
    ಈ ಕೇಸಲ್ಲಿ ಹಾಕಿದ ಬಿಎನ್‌ಎಸ್ ಕಾಯ್ದೆ 105, 118(1)(3)) ಸೆಕ್ಷನ್‌ಗಳು ಅಲ್ಲು ಅರ್ಜುನ್‌ಗೆ ಅನ್ವಯ ಆಗುವುದಿಲ್ಲ. ನಟನಾದ ಮಾತ್ರಕ್ಕೆ ಸಾಮಾನ್ಯ ಪೌರರಿಗೆ ಅನ್ವಯವಾಗುವ ರಿಯಾಯ್ತಿಗಳನ್ನು ನಿರಾಕರಿಸಲು ಸಾಧ್ಯವಿಲ್ಲ. ನಟ ಎಂಬ ಕಾರಣಕ್ಕೆ ಈ ಸೆಕ್ಷನ್‌ಗಳನ್ನು ಅನ್ವಯಿಸೋದು ಎಷ್ಟು ಸರಿ? ರೇವತಿ ಕುಟುಂಬದ ಬಗ್ಗೆ ಸಹಾನುಭೂತಿ ಇದೆ. ಹಾಗೆಂದ ಮಾತ್ರಕ್ಕೆ ಆರೋಪವನ್ನು ಒಬ್ಬರ ಮೇಲೆ ಹಾಕಲು ಬರುವುದಿಲ್ಲ. ನಟ ಅಲ್ಲು ಅರ್ಜುನ್‌ಗೆ ಕೂಡ ಜೀವಿಸುವ ಹಕ್ಕು ಇದೆ.

    ಏನಿದು ರಾಯಿಸ್‌ ಕಲ್ತುಳಿತ ಪ್ರಕರಣ?
    ಜನವರಿ 2017 ರಲ್ಲಿ ಶಾರುಖ್‌ ಮತ್ತು ಚಿತ್ರ ತಂಡ Raees ಪ್ರಚಾರದ ಭಾಗವಾಗಿ ಮುಂಬೈನಿಂದ ದೆಹಲಿಗೆ ರೈಲಿನಲ್ಲಿ ಪ್ರಯಾಣಿಸಿತ್ತು. ವಡೋದರಾ ರೈಲು ನಿಲ್ದಾಣದಲ್ಲಿ ನಟನನ್ನು ನೋಡಲು 15,000 ಕ್ಕೂ ಹೆಚ್ಚು ಅಭಿಮಾನಿಗಳು  ಸೇರಿದ್ದರು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವು ಮಂದಿ ಗಾಯಗೊಂಡಿದ್ದರೆ ಒಬ್ಬರು ಸಾವನ್ನಪ್ಪಿದ್ದರು.

    ಈ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌, ಈ ಪ್ರಕರಣದಲ್ಲಿ ಶಾರುಖ್‌ ಖಾನ್‌ ಮಾಡಿದ ತಪ್ಪು ಏನು? ಅವರು ಸೆಲೆಬ್ರಿಟಿ ಎಂಬ ಕಾರಣಕ್ಕೆ ಅವರಿಗೆ ಯಾವುದೇ ಹಕ್ಕುಗಳಿಲ್ಲ ಎಂದು ಅರ್ಥವಲ್ಲ. ಯಾರಾದರೂ ರೈಲಿನಲ್ಲಿ ಪ್ರಯಾಣಿಸಿದರೆ ಅವರಿಗೆ ವೈಯಕ್ತಿಕ ಗ್ಯಾರಂಟಿ ಇರುವುದಿಲ್ಲ. ದೇಶದ ಪ್ರತಿಯೊಬ್ಬ ಪ್ರಜೆಯಂತೆ ಸೆಲೆಬ್ರಿಟಿಗೂ ಸಮಾನ ಹಕ್ಕುಗಳಿವೆ. ಶಾರುಖ್‌ ಪ್ರಸಿದ್ಧ ವ್ಯಕ್ತಿಯಾಗಿದ್ದಾರೆ ಎಂಬ ಕಾರಣಕ್ಕೆ ಎಲ್ಲರನ್ನೂ ನಿಯಂತ್ರಿಸಬಹುದು ಎಂದಲ್ಲ ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತ್ತು.

    ಏನಿದು ಅಲ್ಲು ಅರ್ಜುನ್‌ ಕೇಸ್‌?
    ಡಿ. 4 ರಂದು ಪುಷ್ಪ 2 (Pushpa 2) ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒರ್ವ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇತರರ ವಿರುದ್ಧ ದೂರು ದಾಖಲಾಗಿತ್ತು.

    ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚಿಕ್ಕಡಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಈ ಕಾರಣಕ್ಕೆ ಇಂದು ಪೊಲೀಸರು ಅಲ್ಲು ಅರ್ಜುನ್‌ ಅವರನ್ನು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನಾಂಪಲ್ಲಿ ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಜಾಮೀನು ಮಂಜೂರು ಮಾಡುವಂತೆ ಕೋರಿ ಅಲ್ಲು ಅರ್ಜುನ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿದ್ದರು.