ಪಾರ್ವತಮ್ಮ ರಾಜ್ ಕುಮಾರ್ ನಂತರ ಮೈಸೂರಿನ ಶಕ್ತಿಧಾಮ ನೋಡಿಕೊಳ್ಳುತ್ತಿರುವ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ಇದೀಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಾರಿ ಅವರು ಹೈಸ್ಕೂಲ್ (High School) ಶಾಲೆಯೊಂದನ್ನು ದತ್ತು ತಗೆದುಕೊಂಡಿದ್ದು, ಆ ಶಾಲೆಯ ಮಕ್ಕಳ ಕನಸಿಗೆ ರಂಗು ತುಂಬುವ ಕೆಲಸಕ್ಕೆ ಮುಂದಾಗಿದ್ದಾರೆ.
ವೇದ (Veda) ಸಿನಿಮಾದ ಪ್ರಚಾರದ ವೇಳೆ ಸಂಡೂರು (Sandur) ತಾಲ್ಲೂಕಿನ ಇಂಗಳಗಿ ಸಮೀಪದ ಅನ್ನಪೂರ್ಣೇಶ್ವರಿ ವಿದ್ಯಾಪೀಠವು ನಡೆಸುತ್ತಿದ್ದ ಉಚಿತ ವಸತಿಯುತ ಪ್ರೌಢಶಾಲೆಯ ವಿಚಾರವನ್ನು ಶಿವಣ್ಣ ದಂಪತಿಗೆ ತಿಳಿಸಲಾಗಿತ್ತು. ಜೋಗದ ದಿಗಂಬರ ರಾಜಭಾರತಿ ಸ್ವಾಮೀಜಿ 2012ರಲ್ಲಿ ಶುರು ಮಾಡಿದ್ದ ಈ ಶಾಲೆಯು ಅನುದಾನವಿಲ್ಲದೇ ಸೊರಗಿತ್ತು. ಈ ವಿಚಾರವು ತಿಳಿಯುತ್ತಿದ್ದಂತೆಯೇ ಶಾಲೆ ದತ್ತು ಪಡೆಯುವುದಾಗಿ ಗೀತಾ ಶಿವರಾಜ್ ಕುಮಾರ್ ಘೋಷಿಸಿದ್ದರು. ಇದನ್ನೂ ಓದಿ:ಮರಾಠಿ ಚಿತ್ರರಂಗಕ್ಕೆ ಕಾಲಿಟ್ಟ ’ಕಾಂತಾರ’ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್
ತಾವು ಮಾತು ಕೊಟ್ಟಂತೆ ನಿನ್ನೆ ಶಾಲೆಗೆ ಭೇಟಿ ನೀಡಿರುವ ಗೀತಾ ಶಿವರಾಜ್ ಕುಮಾರ್, ಮೂಲ ಸೌಕರ್ಯ ಸೇರಿದಂತೆ ಅಗತ್ಯವಿರುವ ಸೌಕರ್ಯವನ್ನು ನೀಡುವುದಾಗಿ ತಿಳಿಸಿದರು. ಕೂಡಲೇ ಟ್ರಸ್ಟ್ ರಚಿಸಿ, ಪದಾಧಿಕಾರಿಗಳ ನೇಮಕ ಮಾಡಿ ಶಾಲೆಯನ್ನು ಅಭಿವೃದ್ಧಿ ಮಾಡುವುದಾಗಿ ತಿಳಿಸಿದ್ದಾರೆ. ಈ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.
ಕಾಬೂಲ್: ಕಳೆದ ವರ್ಷ ಅಫ್ಘಾನಿಸ್ತಾನವನ್ನು (Afghanistan) ವಶಪಡಿಸಿಕೊಂಡ ತಾಲಿಬಾನ್ (Taliban) 1 ವರ್ಷಕ್ಕಿಂತಲೂ ಹೆಚ್ಚು ಕಾಲ ಹೆಣ್ಣುಮಕ್ಕಳಿಗೆ (Girls) ಪ್ರೌಢಶಾಲೆಗೆ (High School) ಹೋಗಲು ನಿರ್ಬಂಧಿಸಿದ್ದು, ಇದೀಗ ಈ ವಾರ ನಡೆಯಲಿರುವ ಪ್ರೌಢಶಾಲಾ ಪರೀಕ್ಷೆಯನ್ನು (Exam) ಬರೆಯಲು ಹೆಣ್ಣುಮಕ್ಕಳಿಗೂ ಅನುಮತಿ ನೀಡಿದೆ.
ಅಫ್ಘಾನಿಸ್ತಾನದ 34 ಪ್ರಾಂತ್ಯಗಳ ಪೈಕಿ 31 ಪ್ರಾಂತ್ಯಗಳಿಗೆ ತಾಲಿಬಾನ್ನ ನಿರ್ಧಾರ ಅನ್ವಯಿಸುತ್ತದೆ. ಪ್ರೌಢಶಾಲಾ ಪರೀಕ್ಷೆ ಬುಧವಾರದಿಂದ ಪ್ರಾರಂಭವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನು ವಿದ್ಯಾರ್ಥಿನಿಯರು ಕೂಡಾ ಬರೆಯಲು ಅನುಮತಿಸಲಾಗುವುದು ಎಂದು ಕಾಬೂಲ್ ಶಿಕ್ಷಣ ಇಲಾಖೆಯ ಮುಖ್ಯಸ್ಥ ಎಹ್ಸಾನುಲ್ಲಾ ಕಿತಾಬ್ ತಿಳಿಸಿದ್ದಾರೆ.
ವರದಿಗಳ ಪ್ರಕಾರ ಬುಧವಾರ ನಡೆಯಲಿರುವ ಪರೀಕ್ಷೆಗೆ ಡ್ರೆಸ್ ಕೋಡ್ ನೀಡಲಾಗಿದೆ. ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರು ಕಡ್ಡಾಯವಾಗಿ ಹಿಜಬ್ ಅಥವಾ ಸ್ಕಾರ್ಫ್ ಅನ್ನು ಧರಿಸಬೇಕು. ಪರೀಕ್ಷೆಯಲ್ಲಿ ಸೆಲ್ಫೋನ್ ಬಳಕೆ ನಿಷೇಧಿಸಲಾಗಿದೆ. ಬುಧವಾರ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿನಿಯರಿಗೆ ಚಳಿಗಾಲದ ರಜೆಯ ಬಳಿಕ ಮಾರ್ಚ್ ಮಧ್ಯದ ವೇಳೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ
ತಾಲಿಬಾನ್ ಕಳೆದ ವರ್ಷ ಆಗಸ್ಟ್ನಲ್ಲಿ ಅಫ್ಘಾನಿಸ್ತಾನವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಬಳಿಕ ಮಹಿಳೆಯರ ಹಕ್ಕುಗಳನ್ನು ಒಂದೊಂದಾಗಿಯೇ ಹಿಂತೆಗೆದುಕೊಂಡಿತು. ಪ್ರೈಮರಿ ಹಾಗೂ ಪ್ರೌಢಶಾಲೆಗೆ ಹೆಣ್ಣುಮಕ್ಕಳು ಹೋಗುವುದನ್ನು ನಿರ್ಬಂಧಿಸಲಾಯಿತು. ಹಲವು ಉದ್ಯೋಗಗಳಿಂದಲೂ ಮಹಿಳೆಯರನ್ನು ಹೊರಗಿಡಲಾಯಿತು. ಉದ್ಯಾನವನ, ಜಿಮ್ಗಳಲ್ಲೂ ಮಹಿಳೆಯರನ್ನು ನಿಷೇಧಿಸಲಾಯಿತು. ಮಾತ್ರವಲ್ಲದೇ ಮಹಿಳೆಯರು ಸಾರ್ವಜನಿಕ ಪ್ರದೇಶಗಳಲ್ಲಿ ಅಡಿಯಿಂದ ಮುಡಿಯವರೆಗೆ ಸಂಪೂರ್ಣವಾಗಿ ಬಟ್ಟೆ ಧರಿಸುವಂತೆ ಆದೇಶಿಸಿದೆ. ಇದನ್ನೂ ಓದಿ: ಕಲಾಪದ ವೇಳೆ ಫೇಸ್ಬುಕ್ ಲೈವ್ ಮಾಡಿದ ಶಾಸಕ ವಿಧಾನ ಸಭೆಯಿಂದ ಅಮಾನತು
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜ್ಯದಲ್ಲಿ ಹಿಜಬ್ ಸಂಘರ್ಷದ ನಡುವೆ ಹೈಕೋರ್ಟ್ನಿಂದ ಶಾಲೆಗಳನ್ನು ಆರಂಭಿಸಲು ಆದೇಶ ಬಂದ ಹಿನ್ನೆಲೆ ಸೋಮವಾರದಿಂದ ಹತ್ತನೇ ತರಗತಿ ವರೆಗೆ ಎಲ್ಲಾ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.
ಶಕ್ತಿ ಭವನದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಶಾಲೆಗಳ ಡ್ರೆಸ್ ಕೋಡ್ ವಿವಾದ ಶುರುವಾಗಿತ್ತು. ಬಳಿಕ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ನ್ಯಾಯಾಲಯ ನೀಡಿರುವ ಸೂಚನೆಯನ್ನು ಸರ್ಕಾರ ಗೌರವಿಸುತ್ತದೆ. ಮೊದಲ ಹಂತವಾಗಿ 10ನೇ ತರಗತಿ ವರೆಗೆ ಶಾಲೆಗಳನ್ನು ಸೋಮವಾರದಿಂದ ಆರಂಭಿಸುತ್ತಿದ್ದೇವೆ ಎಂದರು. ಇದನ್ನೂ ಓದಿ:ಹಿಜಬ್ ನಮ್ಮ ಕುಟುಂಬದ ವಿವಾದ ಪಾಕಿಸ್ತಾನ ತಲೆಹಾಕಬಾರದು: ಫಾತಿಮಾ ಹುಸೇನ್ ಆಕ್ರೋಶ
ಶಾಲಾ ಮಕ್ಕಳು ಸಂಯಮದಿಂದ ವರ್ತಿಸುತ್ತಿದ್ದಾರೆ ಅವರಿಗೆ ಪ್ರೀತಿಯ ಅಭಿನಂದನೆ ಸಲ್ಲಿಸುತ್ತೇನೆ. ಮೊದಲ ಹಂತದಲ್ಲಿ ಹತ್ತನೇ ತರಗತಿವರೆಗೆ ಆರಂಭದ ಬಳಿಕ ಎರಡನೇ ಹಂತದಲ್ಲಿ ಪಿಯುಸಿ ಮತ್ತು ಡಿಗ್ರಿ ಕಾಲೇಜ್ಗಳನ್ನು ಆರಂಭಿಸುತ್ತೇವೆ. ನಾಳೆ ಸಂಜೆ ಸಚಿವರ ಜೊತೆ ಸೇರಿ ವೀಡಿಯೋ ಕಾನ್ಫರೆನ್ಸ್ ಮಾಡುತ್ತೇನೆ ನಂತರ ಕಾಲೇಜುಗಳ ಆರಂಭದ ಬಗ್ಗೆ ಪ್ರಕಟಣೆ ಹೊರಡಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಶಿಕ್ಷಣ ಕೊಡಿ ಅಂದ್ರೆ ಮಂತ್ರಿ ಮಗನೇ ಕೇಸರಿ ಶಾಲು ಹಂಚಲು ಹೋಗಿದ್ದಾರೆ: ರೇವಣ್ಣ ಟೀಕೆ
ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಗೃಹ ಸಚಿವ ಆರಗ ಜ್ಞಾನೇಂದ್ರ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಅಡ್ವೋಕೆಟ್ ಜನರಲ್ ಪ್ರಬುಲಿಂಗ ನಾವಡಗಿ ಭಾಗವಹಿಸಿದ್ದರು.
– ಶಾಲೆಯ ನಿರ್ಮಾಣವನ್ನು ಉತ್ತಮ ಗುಣಮಟ್ಟದಲ್ಲಿ ಮಾಡಬೇಕು ಎಂದು ಸೂಚಿಸಿದ್ದೇನೆ
ವಿಜಯಪುರ: ಡಾ.ಸುಧಾಮೂರ್ತಿ ಮತ್ತು ಡಾ.ನಾರಾಯಣಮೂರ್ತಿರನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು ಎಂದು ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ಹೇಳಿದರು.
ಪದ್ಮಶ್ರೀ ಕಾಕಾ ಕಾರ್ ಖಾನಿಸ್ ಪ್ರೌಢಶಾಲೆ ನಿರ್ಮಾಣ ಕಾಮಗಾರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಶಂಕುಸ್ಥಾಪನೆ ಮಾಡಿದ್ದಾರೆ. ಅದಕ್ಕೂ ಮೊದಲು ಮಾಧ್ಯಮಗಳೊಂದಿದಗೆ ಮಾತನಾಡಿದ ಅವರು, ಈ ಶಾಲೆ ನಿರ್ಮಿಸುವ ಕಾರ್ಯ 6 ತಿಂಗಳಲ್ಲಿ ಮುಗಿಸಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲ ಚಟುವಟಿಕೆಗಳು ಪ್ರಾರಂಭ ಆಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
2020-21ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯ ಅಡಿಯಲ್ಲಿ 10 ಕೋಟಿ ರೂ. ಅನುದಾನ ಮಾಡಲಾಗಿತ್ತು. ಅದರಲ್ಲಿ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯ, ವಾಚನಾಲಯ, ದೈಹಿಕ ಶಿಕ್ಷಣ ವಿಭಾಗದ ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಕಾಲಾವಧಿಯಲ್ಲಿ ಪೂರ್ಣ ಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ:ಮದುವೆ ಮನೆಗೆ ಹೋಗಿ ಪ್ರಾಣಕ್ಕೆ ಆಪತ್ತು ತಂದುಕೊಂಡ 100ಕ್ಕೂ ಹೆಚ್ಚು ಜನರು
1933 ರಲ್ಲಿ ಗಾಂಧೀಜಿಯವರಿಂದ ಪ್ರೇರಣೆ ಪಡೆದು ಕಾಕಾ ಕಾರಖಾನೀಸ ಅವರು ಹರಿಜನ ಕನ್ಯಾ ಮಂದಿರ ಮತ್ತು ಹರಿಜನ ಗಂಡು ಮಕ್ಕಳ ಹಾಸ್ಟೆಲ್ ಪ್ರಾರಂಭ ಮಾಡಿ 236 ಮಕ್ಕಳನ್ನು ಓದಿಸಿ ಕರ್ನಾಟಕದ ಗಾಂಧಿ ಅನಿಸಿಕೊಂಡರು. ದೀನ ದಲಿತರ ಉದ್ಧಾರಕ್ಕಾಗಿ ಅವರ ಜೀವನವನ್ನೇ ಮುಡುಪಾಗಿಟ್ಟವರು ಎಂದು ನೆನೆಪಿಸಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಬಸನಗೌಡ ಪಾಟೀಲ ವಹಿಸಿದ್ದರು. ಈ ಕಟ್ಟಡವು 2020-21 ನೇ ಸಾಲಿನ 5054-ಎಸ್.ಸಿ.ಪಿ ಅಡಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ 10 ಕೋಟಿ ರೂ.ಗಳಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಇದನ್ನೂ ಓದಿ:ಹುಬ್ಬಳ್ಳಿಗೆ ಅಮಿತ್ ಶಾರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ
ಕಟ್ಟಡದಲ್ಲಿ ಏನಿದೆ?
ಕಟ್ಟಡದ ನೆಲಮಹಡಿ(1140,00 ಚಿ.ಮೀ), ಮೊದಲ ಮಹಡಿ (1180,00 ಚಿ.ಮೀ), ಎರಡನೇ ಮಹಡಿ (980,00 ಚ.ಮೀ) ಹಾಗೂ ಟೆರೆಸ್ ಮಹಡಿ (50.00 ಚ.ಮೀ) ಒಟ್ಟು 3350.00 ಚ.ಮೀ ವಿಸ್ತೀರ್ಣವನ್ನು ಹೊಂದಿದ್ದು, ಶಾಲೆಗೆ ಅವಶ್ಯವಿರುವ ಅನುಕೂಲತೆಗಳನ್ನು ಕಲ್ಪಿಸಲಾಗಿದೆ. ನೆಲ ಮಹಡಿಯು ಅಡ್ಮಿನಿಸ್ಟ್ರೇಟಿವ್ ಆಫೀಸ್, ರಿಸರ್ಚ್ ಸೆಂಟರ್, ಪ್ರಿನ್ಸಿಪಲ್ ಚೇಂಬರ್, ಕ್ಲಾಸ್ ರೂಮ್ಸ್-4, ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ, ಯೋಗಾ ಸೆಂಟರ್, ಲೇಡಿಸ್ ವೇಟಿಂಗ್ ರೂಮ್ ಗಳನ್ನು ಒಳಗೊಂಡಿರುತ್ತದೆ.
ಯಾವ ಸೌಲಭ್ಯವಿದೆ?
ಮೊದಲನೇ ಮಹಡಿಯ ಕಾನ್ಫರನ್ಸ್ ರೂಮ್, ಲೈಬ್ರರಿ, ಮ್ಯಾನೇಜಮೆಂಟ್ ರೂಮ್, ಸ್ಟಾಫ್ ರೂಮ್, ಕ್ಲಾಸ್ ರೂಮ್ಸ್-4, ಹೆಲ್ತ್ ಸೆಂಟರ್, ಸ್ಟೋರ್ ಮತ್ತು ರೆಕಾಡ್ರ್ಸ್, ಇಂಡೋರ್ ಸ್ಪೋಟ್ರ್ಸ ಫೆಸಿಲಿಟ, ಜೆಂಟ್ಸ್ ವೇಟಿಂಗ್ ರೂಮ್ ಗಳನ್ನು ಒಳಗೊಂಡಿರುತ್ತದೆ. ಎರಡನೇ ಮಹಡಿಯ ರೆಸೋನನ್ಸ್ ಸೆಂಟರ್, ಡಿಜಿಟಲ್ ಲೈಬ್ರರಿ, ಮ್ಯಾನೇಜಮೆಂಟ್ ರೂಮ್, ಕ್ಲಾಸ್ ರೂಮ್ಸ್-4, ಮಲ್ಟಿ ಪರಪಸ್ ಹಾಲ್ ಗಳನ್ನು ಒಳಗೊಂಡಿದ್ದು, ಮೂರನೇ ಮಹಡಿಯು ಸ್ಟೇರಕೇಸ್ ಹೆಡ್ ರೂಮ್ಸ್ ಗಳಿರುತ್ತದೆ. ಇದನ್ನೂ ಓದಿ:ಬೆಳಗಾವಿ ಮೂವರು ನಾಯಕರನ್ನ ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ
ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಶ್ರೀ ರಮೇಶ್ ಜಿಗಜಿಣಗಿ, ಜಿಲ್ಲಾಧಿಕಾರಿ ಪಿ, ಸುನೀಲ್ ಕುಮಾರ್, ಪೆÇಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್, ಮುಖಂಡರುಗಳಾದ ಗೋಪಾಲನಾಯಕ್, ಅಡಿವೆಪ್ಪ ಸಾಲಗಲ್, ಸಿದ್ದು ರಾಯಣ್ಣವರ, ರಮೇಶ್ ಆಸಂಗಿ, ಶಂಕರ್, ಭೀರಪ್ಪ ಅರ್ಧಾವೂರ, ಹಾಗೂ ಇತರೆ ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
– ಕಳೆದ ವರ್ಷದ ಕರಡಿನಲ್ಲಿ ಚೀನಿ ಭಾಷೆ ಇತ್ತು
– ಹೊಸ ಶಿಕ್ಷಣ ನೀತಿಯ ಕರಡಿನಲ್ಲಿ ಉಲ್ಲೇಖಿಸದ ಕೇಂದ್ರ
ನವದೆಹಲಿ: ದೇಶದಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ 2020(ಎನ್ಇಪಿ)ನ್ನು ಜಾರಿಗೆ ತಂದಿದ್ದು, ಇದರಲ್ಲಿ ಚೀನಿ ಭಾಷೆಯ ಕುರಿತು ಯಾವುದೇ ರೀತಿಯ ಉಲ್ಲೇಖವಿಲ್ಲ.
ಹೊಸ ಶಿಕ್ಷಣ ನೀತಿಯ ಕರಡು ಪ್ರತಿಯ ವಿದೇಶಿ ಭಾಷೆಗಳ ಪಟ್ಟಿಯಲ್ಲಿ ಚೀನಿ ಭಾಷೆಯ ಕುರಿತು ಯಾವುದೇ ಉಲ್ಲೇಖವಿಲ್ಲ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ವಿಶ್ವದ ಜ್ಞಾನ ತಿಳಿಯಲು, ಆಯ್ದ ದೇಶಗಳ ಭಾಷೆಗಳನ್ನು ಕಲಿಯಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಅವರ ಆಸಕ್ತಿಗೆ ತಕ್ಕಂತೆ ತಮಗೆ ಬೇಕಾದ ದೇಶದ ಭಾಷೆಯನ್ನು ಕಲಿಯಬಹುದಾಗಿದೆ.
ಕಳೆದ ವರ್ಷದ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಪ್ರತಿಯಲ್ಲಿ ಫ್ರೆಂಚ್, ಜರ್ಮನ್, ಸ್ಪ್ಯಾನಿಷ್, ಜಪಾನೀಸ್ ಜೊತೆ ಚೀನಿ ಭಾಷೆಯನ್ನೂ ಸೇರಿಸಲಾಗಿತ್ತು. ವಿದ್ಯಾರ್ಥಿಗಳು ತಮಗಿಷ್ಟದ ಭಾಷೆಯನ್ನು ಆಯ್ಕೆ ಮಾಡಿಕೊಂಡು ಕಲಿಯಬಹುದಾಗಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ರಮೇಶ್ ಪೊಖ್ರಿಯಾಲ್ ಬಿಡುಗಡೆ ಮಾಡಿರುವ ಎನ್ಇಪಿಯ ಅಂತಿಮ ಕರಡಿನಲ್ಲಿ ಕೊರಿಯನ್, ರಷ್ಯನ್, ಪೊರ್ಚುಗೀಸ್ ಹಾಗೂ ಥಾಯ್ ಭಾಷೆಗಳನ್ನು ಆಯ್ಕೆಗೆ ನೀಡಲಾಗಿದೆ. ಈ ಪಟ್ಟಿಯಿಂದ ಚೀನಿ ಭಾಷೆಯನ್ನು ತೆಗೆಯಲಾಗಿದೆ.
ಶಾಲೆಗಳು ಕಲಿಸಬಹುದಾದ ವಿದೇಶಿ ಭಾಷೆಗಳ ಉದಾಹರಣೆಗಳ ಪಟ್ಟಿಯಿಂದ ಚೀನಿ ಭಾಷೆಯನ್ನು ತೆಗೆಯಲಾಗಿದೆ. ಈ ಭಾಷೆಯನ್ನು ಶಾಲಾ ಮಟ್ಟದಲ್ಲಿ ಕಲಿಸಬಾರದೆ ಎಂಬುದರ ಕುರಿತು ಸ್ಪಷ್ಟವಾಗಿ ಹೇಳಲಾಗಿಲ್ಲ. ಚೀನಾದೊಂದಿಗಿನ ಗಡಿ ವಿವಾದ ಹಾಗೂ ಆ್ಯಪ್ಗಳ ನಿಷೇಧದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಗಲ್ವಾನ್ ವ್ಯಾಲಿಯಲ್ಲಿ ನಡೆದ ಘರ್ಷಣೆ ವೇಳೆ ಚೀನಾ ಸೈನಿಕರು ನಡೆಸಿದ ಗುಂಡಿನ ದಾಳಿಗೆ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ಇದಾದ ಬೆನ್ನಲ್ಲೇ ಸರ್ಕಾರ ಚೀನಾ ಜೊತೆ ಮಾತುಕತೆ ನಡೆಸಿದ್ದು, ಇದರ ನಡುವೆಯೇ ಚೀನಾ ಆ್ಯಪ್ಗಳನ್ನು ಭಾರತದಲ್ಲಿ ನಿಷೇಧಿಸಿದೆ. ಸಾರ್ವಭೌತ್ವ ಹಾಗೂ ಭದ್ರತೆಯ ದೃಷ್ಟಿಯಿಂದ ಆ್ಯಪ್ಗಳನ್ನು ನಿಷೇಧಿಸಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಮೊದಲು ಟಿಕ್ ಟಾಕ್ ಸೇರಿ 59 ಆ್ಯಪ್ಗಳನ್ನು ಬ್ಯಾನ್ ಮಾಡಲಾಗಿತ್ತು. ನಂತರ ಮತ್ತೆ ಈ ವಾರ 47 ಚೀನಾ ಆ್ಯಪ್ಗಳನ್ನು ಬ್ಯಾನ್ ಮಾಡಲಾಗಿದೆ.
ಕೋಲಾರ: ವಿದ್ಯಾರ್ಥಿಗಳಿಬ್ಬರು ಶಾಲೆಯಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರ ತಾಲೂಕಿನ ಭಟ್ರಹಳ್ಳಿಯ ಶಾಲೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಗಳು ಭಟ್ರಹಳ್ಳಿ ಸಮೀಪದ ಗ್ರಾಮದ 15 ಹಾಗೂ 16 ಬಾಲಕರು. ಈ ಇಬ್ಬರು ವಿದ್ಯಾರ್ಥಿಗಳು ಭಟ್ರಹಳ್ಳಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಎಂದಿನಂತೆ ಸೋಮವಾರ ಶಾಲೆಗೆ ಬಂದು ಪರೀಕ್ಷೆ ಬರೆದಿದ್ದಾರೆ. ಆದರೆ ಮಧ್ಯಾಹ್ನ ಊಟಕ್ಕೆ ಶಾಲೆಯಿಂದ ಹೊರಗೆ ಬಂದಿದ್ದ ಅವರು ತಂಪುಪಾನಿಯದಲ್ಲಿ ವಿಷ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ವಿಷ ಕುಡಿದು ಬಿದ್ದು ಒದ್ದಾಡುತ್ತಿದ್ದ ವಿದ್ಯಾರ್ಥಿಗಳನ್ನು ನೋಡಿದ ಕೆಲ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕ ಮಂಜುನಾಥ್ ಅವರಿಗೆ ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಮಂಜುನಾಥ್ ಅವರು ಕೆಲ ವಿದ್ಯಾರ್ಥಿಗಳ ಸಹಾಯದಿಂದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡ ವಿದ್ಯಾರ್ಥಿಗಳು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು, ಪೋಷಕರು ಹಾಗೂ ಶಿಕ್ಷಕರಲ್ಲಿ ಆತಂಕ ಮೂಡಿಸಿದೆ. ಆದರೆ ಆತ್ಮಹತ್ಯೆಗೆ ಯಾಕೆ ಯತ್ನಿಸಿದ್ದಾರೆ ಎನ್ನುವ ಬಗ್ಗೆ ಯಾವುದೇ ನಿಖರ ಕಾರಣ ತಿಳಿದು ಬಂದಿಲ್ಲ.
ವಿದ್ಯಾರ್ಥಿಗಳು ಈ ಹಿಂದೆಯೇ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಕೈಯನ್ನು ಸ್ವೆಟರ್ ನಿಂದ ಮುಚ್ಚಿಕೊಂಡಿದ್ದರು ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರೊಬ್ಬರು ತಿಳಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಪ್ರೀತಿಯ ವಿಚಾರದಲ್ಲಿ ಮನನೊಂದು ಹೀಗೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಅದರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ಸಂಬಂಧ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೊಪ್ಪಳ: ಯಲಬುರ್ಗಾ ತಾಲೂಕಿನ ಗುನ್ನಾಳ ಸರ್ಕಾರಿ ಪ್ರೌಢ ಶಾಲೆಯು ಹಸಿರನ್ನೇ ಉಸಿರಾಗಿಸಿ ಹೆಸರು ಮಾಡಿದ್ದು, ಇಲ್ಲಿನ ಶಿಕ್ಷಕರು, ವಿದ್ಯಾರ್ಥಿಗಳು ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಗುನ್ನಾಳ ಸರ್ಕಾರಿ ಪ್ರೌಢ ಶಾಲೆ ಆವರಣಕ್ಕೆ ಕಾಲಿಟ್ಟರೆ ಸಾಕು ಕೈ ಬಿಸಿ ಕರೆಯುವ ಪ್ರಕೃತಿ ಮಾತೆ, ಎಲ್ಲಿ ನೋಡಿದರಲ್ಲಿ ಹಚ್ಚ ಹಸಿರಿನ ತೋರಣ ಕಾಣುತ್ತದೆ. ಭವಿಷ್ಯದ ಮಕ್ಕಳಿಗೆ ನೆರಳಿನ ಆಸರೆ ನೀಡುವ ಮರ, ಗಿಡಗಳು ಹಕ್ಕಿ ಪಕ್ಷಿಗಳ ಕಲರವದ ಹಾರಾಟ ನೋಡಲು ಖುಷಿ ಸಿಗುತ್ತದೆ. ಬಿಸಿಲ ನಾಡಿನಲ್ಲೊಂದು ಹಸಿರಿನಿಂದ ಕಂಗೊಳಿಸುವ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಕಾಣ ಸಿಗುವ ಸುಂದರ ದೃಶ್ಯಾಗಳಿವು.
ಇಷ್ಟೆಲ್ಲಾ ವಾತವರಣವಿರುವ ಶಾಲೆಗೆ ಬರಲು ವಿದ್ಯಾರ್ಥಿಗಳಲ್ಲಿ ಆಸಕ್ತಿ ಹೆಚ್ಚಿದೆ. ಜೊತೆಗೆ ಕಲಿಕೆಯ ಹಂಬಲವೂ ಹೆಚ್ಚಾಗುತ್ತಿದೆ. ಶಾಲೆಯಲ್ಲಿನ ಪರಿಸರ ರಕ್ಷಣೆಗೆ ಮುಖ್ಯಶಿಕ್ಷಕ ವಿ.ಎಂ.ಕಂದಕೂರು ಹಾಗೂ ಸಹಶಿಕ್ಷಕರು ಹೆಚ್ಚಿನ ಮುತುವರ್ಜಿವಹಿಸಿದ್ದಾರೆ. ಉತ್ತಮ ಪರಿಸರವು ಮಕ್ಕಳ ಕಲಿಕಾಸಕ್ತಿಗೆ ಪೂರಕವಾಗಲಿದೆ ಎಂಬ ಮಂತ್ರದೊಂದಿಗೆ ಇಂತಹ ವನ ಮಾಡಲು ಮುಂದಾಗಿರುವುದು ಶ್ಲಾಘನೀಯವಾಗಿದೆ.
ಮಕ್ಕಳ ಕಲಿಕೆ ಉತ್ತಮ: ಈ ಶಾಲೆಯಲ್ಲಿ 202 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 8 ಜನ ಶಿಕ್ಷಕರಿದ್ದು, ವರ್ಷದಿಂದ ವರ್ಷಕ್ಕೆ ಹಾಜರಾತಿ ಹೆಚ್ಚುತ್ತಿದೆ. ಕಳೆದ 10 ವರ್ಷಗಳಿಂದ ನೂರಕ್ಕೆ ನೂರರಷ್ಟು ಫಲಿತಾಂಶ ಲಭಿಸಿದೆ.
ಮಕ್ಕಳ ಮನಸ್ಸು ಗೆದ್ದ ಶಾಲೆ: ಶಾಲಾ ಆರಂಭದ ಪೂರ್ವದಲ್ಲಿ ಹಾಗೂ ಶಾಲೆ ಬಿಟ್ಟ ನಂತರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶ್ರಮದಾನ ಮಾಡುತ್ತಾರೆ. ಅಂದಾಜು 3 ಎಕರೆ ವಿಸ್ತೀರ್ಣ ಹೊಂದಿದೆ. ಕಂಪ್ಯೂಟರ ಕಲಿಕೆಗೂ ಒತ್ತು ನೀಡುತ್ತಿರುವುದು ಎಲ್ಲರ ಮೆಚ್ಚುಗೆ ಗಳಿಸಿದೆ. ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶೌಚಾಲಯ, ಕುಡಿವ ನೀರು, ಫ್ಯಾನ್ ಸೇರಿದಂತೆ ಹೈಟೆಕ್ ಸೌಲಭ್ಯ ಈ ಶಾಲೆಯಲ್ಲಿ ಇರುವುದು ಮತ್ತೊಂದು ಗರಿಮೆಯಾಗಿದೆ.
ಹಸಿರು ಮಿತ್ರ ಶಾಲೆ ಪ್ರಶಸ್ತಿ: ಈಗಾಗಲೇ ಶಾಲೆ ಹಸಿರು ಮಿತ್ರ ಶಾಲೆ ಪ್ರಶಸ್ತಿ ಪಡೆದ, ಫಲಿತಾಂಶ, ಕ್ರೀಡೆಯಲ್ಲಿಯೂ ಮುಂದೆ ಇದೆ. ನವಿಲು, ಪಾರಿವಾಳಗಳು ಸಹ ಶಾಲೆಯಲ್ಲಿವೆ. ಶಾಲೆಯ ವಾತವರಣ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಾರ್ಯವೈಖರಿ ಶಾಲೆಯ ದಿನನಿತ್ಯದ ಚಟುವಟಿಕೆಗಳು ಹಸಿರು ಕ್ರಾಂತಿಯನ್ನೇ ಮಾಡಿವೆ.
ಕಣ್ಣ ಹಾಯಿಸಿದ್ದಷ್ಟು ಹಚ್ಚ ಹಸಿರು, ಸದ್ದಿಲ್ಲದೇ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಸಿರು ಕ್ರಾಂತಿ ಆರಂಭಿಸಿದ್ದಾರೆ. 100 ಕ್ಕೂ ಅಧಿಕ ಬಗೆಯ ಮರಗಳಿವೆ, ಅಶೋಕ, ಗುಲ್ ಮಹರ್, ಸಿಲ್ವರ್, ತೇಗ, ನೇರಳ, ಹೊಂಗೆ, ಹುಲಗಲಿ, ರಬ್ಬ ಸೇರಿದಂತೆ ಹೆಚ್ಚು ಬಗೆಯ ಮರಗಳಿವೆ. ಜೊತೆಗೆ ತರಕಾರಿ ಹೂ, ಹಣ್ಣು ಬೆಳೆಯಲಾಗುತ್ತಿದೆ. ವಿದ್ಯಾರ್ಥಿಗಳು ಬೆಳೆದ ತರಕಾರಿಯಿಂದಲೇ ಬಿಸಿಯೂಟದ ಸಾಂಬಾರು ತಯಾರಿಸಲಾಗುತ್ತಿದೆ. ವಿದ್ಯಾರ್ಥಿಗಳು ಹಾಗೂ ಎಲ್ಲಾ ಶಿಕ್ಷಕರು ಜೊತೆಗೂಡಿ ಪರಿಸರ ಕಾರ್ಯ ಮಾಡುತ್ತಾರೆ.
ಬೋರವೆಲ್ ಅವಶ್ಯಕತೆ: ಮಳೆಯಾದರೇ ಶಾಲೆಯಲ್ಲಿನ ನೀರು ಹೋಗಲು ಬಿಡುವುದಿಲ್ಲ ಅದಕ್ಕಾಗಿ ಗುಂಡಿಯನ್ನು ತೋಡಿದ್ದಾರೆ. ಆ ನೀರು ಅಲ್ಲಿ ಸಂಗ್ರಹವಾಗುತ್ತದೆ. ಅದನ್ನೇ ಸಸಿಗಳಿಗೆ ಹಾಕಲಾಗುತ್ತದೆ. ಶಾಲೆಯಲ್ಲಿರುವ ಬೋರವೆಲ್ ನೀರು ಕಡಿಮೆಯಾಗುತ್ತಿದೆ. ಇನ್ನೊಂದು ಬೋರವೆಲ್ ಅವಶ್ಯಕತೆ ಇದೆ ಎಂದು ಮುಖ್ಯಶಿಕ್ಷಕ ವಿ.ಎಂ.ಕಂದಕೂರು ತಿಳಿಸಿದ್ದಾರೆ.
ಗುನ್ನಾಳ ಶಾಲೆ ಮಾದರಿ: ಇಷ್ಟೆಲ್ಲಾ ವಿಶೇಷತೆಗಳಿಂದ ಕೂಡಿದ ಶಾಲೆಯಲ್ಲಿ ಸಾವಯವ ಗೊಬ್ಬರ ಸ್ವತಃ ತಯಾರು ಮಾಡಿ ಬಳಕೆ ಮಾಡಲಾಗುತ್ತಿದೆ. ಕಾಡು ಬೆಳಸಿ ನಾಡು ಉಳಸಿ ಎಂದು ಕೇವಲ ಬಾಯಿ ಮಾತಿನಲ್ಲೆ ಹೇಳುವರೇ ಹೆಚ್ಚು. ಇಂತಹರ ನಡುವೆ ಗುನ್ನಾಳ ಶಾಲೆಯಲ್ಲಿ ಮಕ್ಕಳ ಭವಿಷ್ಯವನ್ನು ರೂಪಿಸುವುದರ ಜೊತೆಗೆ ಹಸಿರು ಕ್ರಾಂತಿಯನ್ನೇ ಮಾಡಿ ಮಾದರಿಯಾಗಿದೆ.
ಹಾವೇರಿ: ಶಾಲೆಗೆ ತೆರಳುತ್ತಿದ್ದ ವೇಳೆ ಬೈಕ್ ಮೇಲಿಂದ ಬಿದ್ದು ಶಿಕ್ಷಕಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗಂಗಾಜಲ ತಾಂಡಾದ ಬಳಿ ನಡೆದಿದೆ.
ಈ ಘಟನೆ ಇಂದು ಬೆಳಗ್ಗೆ ನಡೆದಿದ್ದು, ಮೃತ ಶಿಕ್ಷಕಿಯನ್ನು ಲೀಲಾವತಿ ಕಟಿಗೇರ (33) ಎಂದು ಗುರುತಿಸಲಾಗಿದೆ. ಇವರು ಮೆಡ್ಲೇರಿ ಗ್ರಾಮದಲ್ಲಿರು ಬೀರೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಲೀಲಾವತಿ ಅವರು ತಮ್ಮ ಗಂಡ ಬಸವರಾಜು ಜೊತೆ ಬೈಕ್ ನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಶಾಲೆಗೆ ತಡವಾಗಿತ್ತು ಎಂದು ವೇಗವಾಗಿ ಹೋಗುತ್ತಿದ್ದಾಗ ಬೈಕ್ ರಸ್ತೆಯಲ್ಲಿದ್ದ ಉಬ್ಬನ್ನು ಜಂಪ್ ಮಾಡಿದೆ. ಈ ವೇಳೆ ಬ್ಯಾಲೆನ್ಸ್ ತಪ್ಪಿದ ಲೀಲಾವತಿಯವರು ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾದ ಕಾರಣ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಣೇಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ: ನೆಚ್ಚಿನ ಶಿಕ್ಷಕ ವರ್ಗಾವಣೆಯಾದ ಹಿನ್ನೆಲೆ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡಿರುವ ಘಟನೆ ಕೊಪ್ಪಳ ತಾಲೂಕಿನ ಹೀರೆಸಿಂಧೋಗಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಇಲ್ಲಿನ ಪ್ರೌಢ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕಾರದ ಸೋಮರೆಡ್ಡಿ ಹೆಚ್ಚುವರಿ ಶಿಕ್ಷಕ ಎಂಬ ಕಾರಣಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕ್ಲಾಸ್ ಬಹಿಷ್ಕಾರ ಮಾಡಿ ಮಕ್ಕಳು ಪ್ರತಿಭಟನೆ ಮಾಡಿದ್ದಾರೆ.
ಶಿಕ್ಷಕ ಸೋಮರೆಡ್ಡಿ ಅವರನ್ನು ಹೀರೆಸಿಂಧೋಗಿಯ ಸರ್ಕಾರಿ ಪ್ರೌಢಶಾಲೆಯಿಂದ ಕಾರಟಗಿ ತಾಲೂಕಿನ ನವಲಿ ಗ್ರಾಮಕ್ಕೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಶಾಲಾ ಮಕ್ಕಳು ನಮಗೆ ಸೋಮರೆಡ್ಡಿ ಶಿಕ್ಷಕರೇ ಬೇಕೆಂದು ಕ್ಲಾಸ್ ಬಹಿಷ್ಕರಿಸಿ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಆನೇಕಲ್: ಕಳೆದ ಮೂರು ದಿನಗಳ ಹಿಂದೆಯಷ್ಟೇ ವಾಲೆಂಟೆನ್ಸ್ ಡೇಗೆ ಗುಲಾಬಿ ನೀಡುವ ವಿಚಾರಕ್ಕಾಗಿ ಬಸ್ ನಿಲ್ದಾಣದಲ್ಲಿ ಕಿತ್ತಾಡಿಕೊಂಡ ಹುಡುಗಿರ ವಿಡಿಯೋ ಸಾಮಾಜಿಕ ಜಾಲತಾಲದಲ್ಲಿ ವೈರಲ್ ಆಗಿತ್ತು. ಆದೇ ಹುಡುಗಿಯರು ಇಂದು ಮತ್ತೆ ರಸ್ತೆಯಲ್ಲಿ ಕಿತ್ತಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ.
ಇಂದು ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಹುಡುಗಿಯರ ನಡುವೆ ಮತ್ತೆ ಜಗಳ ಆರಂಭವಾಗಿದ್ದು, ರಸ್ತೆ ಎಂದು ಕೂಡ ನೋಡದೇ ಕಿತ್ತಾಡಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹಾರಿದಾಡುತ್ತಿದೆ. ಶಾಲಾ ಸಮವಸ್ತ್ರದಲ್ಲಿ ಇರುವಾಗಲೇ ಹುಡುಗಿರ ಮಧ್ಯೆ ಜಗಳ ನಡೆದಿದೆ. ಶಾಲಾ ಸಮಯದಲ್ಲಿ ಇರುವಾಗಲೇ ಹುಡುಗಿಯ ನಡುವೇ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕೇಳಿಬಂದಿದೆ.
ಕಳೆದ ಮೂರು ದಿನಗಳ ಹಿಂದೆ ಆನೇಕಲ್ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರಿನಲ್ಲಿ ಘಟನೆ ನಡೆದಿತ್ತು. ಪ್ರಿಯಕರನಿಗೆ ಮತ್ತೋರ್ವ ಹುಡುಗಿ ಗುಲಾಬಿ ಹೂ ಕೊಟ್ಟಳೆಂದು ಹುಡುಗಿಯರು ಹೊಡೆದಾಡಿಕೊಂಡಿದ್ದರು. ಈ ವೇಳೆ ಸ್ಥಳೀಯರು ಜಗಳ ಬಿಡಿಸಿ ಹುಡುಗಿಯರಿಗೆ ಬುದ್ಧಿವಾದ ಹೇಳಿ ಹೇಳಿದ್ದರು. ಆದರೆ ಹಿರಿಯರ ಮಾತಿಗೆ ಬೆಲೆ ನೀಡಿದ ಹುಡುಗಿಯರು ಮತ್ತೆ ಗ್ಯಾಂಗ್ ಕಟ್ಟಿಕೊಂಡು ಜಗಳ ನಡೆಸಿದ್ದಾರೆ.